Fraud Case: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ! - Vistara News

Latest

Fraud Case: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ!

Fraud Case: ಮದುವೆಯಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲವಾದರೂ ತನ್ನ ಪತ್ನಿಗೆ ಗರ್ಭಧರಿಸಲು ಸಾಧ್ಯವಾಗದಿದ್ದಾಗ ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದ 34 ವರ್ಷದ ವ್ಯಕ್ತಿ, ಇದಕ್ಕೆ ಕಾರಣ ಪತ್ತೆ ಹಚ್ಚಿದ್ದಾನೆ. ಇದೀಗ ಆತ ಪತ್ನಿಯ ಕುಟುಂಬದವರ ವಿರುದ್ಧ ವಂಚನೆ (Fraud Case) ದಾಖಲಿಸಿದ್ದಾನೆ.

VISTARANEWS.COM


on

Fraud Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಅಹ್ಮದಾಬಾದ್: ಕೆಲವೊಮ್ಮೆ ದಂಪತಿಗಳಿಗೆ ಮದುವೆಯಾಗಿ ಹಲವು ವರ್ಷಗಳೇ ಕಳೆದರೂ ಮಕ್ಕಳಾಗುವುದಿಲ್ಲ. ಇದಕ್ಕೆ ವಯಸ್ಸು, ಹಾರ್ಮೋನ್ ಸಮಸ್ಯೆ, ಅಥವಾ ಸಂತಾನೋತ್ಪತ್ತಿ ಅಂಗಗಳಲ್ಲಿನ ಸಮಸ್ಯೆ ಕಾರಣವಾಗಿರುತ್ತದೆ. ಹಾಗಾಗಿ ತಮಗೆ ಮಕ್ಕಳಾಗಬೇಕೆಂದು ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಾರೆ. ಇದೀಗ ಮದುವೆಯಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲವಾದರೂ ತನ್ನ ಪತ್ನಿಗೆ ಗರ್ಭಧರಿಸಲು ಸಾಧ್ಯವಾಗದಿದ್ದಾಗ ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದ 34 ವರ್ಷದ ವ್ಯಕ್ತಿ, ಇದಕ್ಕೆ ಕಾರಣ ಪತ್ತೆ ಹಚ್ಚಿದ್ದಾನೆ. ಇದೀಗ ಆತ ಪತ್ನಿಯ ಕುಟುಂಬದವರ ವಿರುದ್ಧ ವಂಚನೆ (Fraud Case) ದಾಖಲಿಸಿದ್ದಾನೆ.

ಈ ಘಟನೆ ಅಹಮದಾಬಾದ್‍ನಲ್ಲಿ ನಡೆದಿದ್ದು, ಸೋನೋಗ್ರಫಿ ಮಾಡಿದ ವೈದ್ಯರು, ಆ ದಂಪತಿ ನೈಸರ್ಗಿಕವಾಗಿ ಗರ್ಭಧರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆಕೆಯ ವಯಸ್ಸು 40 ದಾಟಿದ್ದರಿಂದ ಮಕ್ಕಳಾಗುವ ಸಾಧ್ಯತೆ ಇಲ್ಲ ಎಂದಿದ್ದಾರೆ. ಈ ವಿಚಾರ ತಿಳಿದು ಕೋಪಗೊಂಡ ವ್ಯಕ್ತಿ ವೆಜಲ್ಪುರ ಪೊಲೀಸರನ್ನು ಸಂಪರ್ಕಿಸಿ ತನ್ನ ಪತ್ನಿ, ಆಕೆಯ ತಂದೆ ಮತ್ತು ಸಂಬಂಧಿಕರು ಸೇರಿದಂತೆ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ನಂಬಿಕೆ ದ್ರೋಹ, ಫೋರ್ಜರಿ, ವಂಚನೆ, ಕ್ರಿಮಿನಲ್ ಪಿತೂರಿ ಮತ್ತು ಬೆದರಿಕೆಗೆ ಸಂಬಂಧಿಸಿದ ಐಪಿಸಿಯ ಅನೇಕ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಮದುವೆ ನಿಶ್ಚಯವಾಗುವ ಮೊದಲು ಆಕೆಯ ಬಯೋಡೇಟಾದಲ್ಲಿ ಆಕೆಯ ಜನ್ಮ ದಿನಾಂಕವನ್ನು ಮೇ 18, 1991 ಎಂದು ತೋರಿಸಲಾಗಿತ್ತು. ಇದರಿಂದಾಗಿ ಅವಳು ತನಗಿಂತ 18 ತಿಂಗಳು ಚಿಕ್ಕವಳಾಗಿದ್ದಾಳೆ ಎಂದು ತಿಳಿದ ವ್ಯಕ್ತಿ ಆಕೆಯ ಕುಟುಂಬವನ್ನು ಭೇಟಿಯಾದ ನಂತರ ಜೂನ್ 19, 2023ರಂದು ಮದುವೆಯಾಗಿದ್ದರು. ಮದುವೆಯ ದಿನದಂದು, ಅವರು ಅವಳ ಶಾಲಾ ಪ್ರಮಾಣಪತ್ರ ಮತ್ತು ಪಾಸ್‍ಪೋರ್ಟ್‌ ಪ್ರತಿಗಳನ್ನು ಸಲ್ಲಿಸಿದ್ದರು. ಮದುವೆ ರಿಜಿಸ್ಟರ್‌ನಲ್ಲಿ ಆಕೆಯ ಜನ್ಮ ದಿನಾಂಕವನ್ನು ಮೇ 18, 1991ಎಂದು ನಮೂದಿಸಿದ್ದರು. ಆದರೆ ಅವಳು ಗರ್ಭಧರಿಸಲು ಸಾಧ್ಯವಾಗದಿದ್ದಾಗ ವ್ಯಕ್ತಿಯ ತಾಯಿ ಮತ್ತು ಸಹೋದರಿ ತಪಾಸಣೆಗಾಗಿ ಜುಹಾಪುರದ ವೈದ್ಯರ ಬಳಿಗೆ ಕರೆದೊಯ್ದರು. ನಂತರ, ಸೆಪ್ಟೆಂಬರ್ 2023ರಲ್ಲಿ ಅವರು ಪಾಲ್ಡಿಯ ಸ್ತ್ರೀರೋಗತಜ್ಞರನ್ನು ಸಂಪರ್ಕಿಸಿದರು.

ಇದನ್ನೂ ಓದಿ: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

ವೈದ್ಯರ ಪ್ರಕಾರ, ಸೋನೋಗ್ರಫಿ ವರದಿಯಲ್ಲಿ ಅವರ ಹೆಂಡತಿಗೆ 40ರಿಂದ 42 ವರ್ಷ ವಯಸ್ಸಾಗಿರುವುದಾಗಿ ತಿಳಿಸಲಾಗಿದೆ. ಹಾಗಾಗಿ ಅವಳು ಸ್ವಾಭಾವಿಕವಾಗಿ ಗರ್ಭ ಧರಿಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಆತ ಆಕೆಯ ಮನೆಯವರನ್ನು ಭೇಟಿ ಮಾಡಿ ವಿಚಾರಿಸಿದಾಗ ಆಕೆಯ ಸಹೋದರರು ಅಧಿಕೃತ ದಾಖಲೆಗಳಲ್ಲಿ ಆಕೆಯ ಜನ್ಮ ದಿನಾಂಕವನ್ನು ತಿರುಚಿದ್ದು ಕಂಡು ಬಂತು. ಅದನ್ನು ಮೇ 18, 1985ರಿಂದ ಮೇ 18, 1991ಕ್ಕೆ ಬದಲಾಯಿಸಲಾಗಿತ್ತು ಎಂಬುದು ತಿಳಿದು ಬಂತು. ಹಾಗಾಗಿ ಆತ ಆಕೆಯ ಕುಟುಂಬದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral News: ʼಎಣ್ಣೆ ಹೊಡೆಯಿರಿ, ಇಂಗ್ಲಿಷ್‌ ಕಲಿಯಿರಿʼ ಎಂದು ಬೋರ್ಡ್‌ ಹಾಕಿದ್ದ ಮದ್ಯದಂಗಡಿ ಮಾಲೀಕನಿಗೆ ದಂಡ!

Viral News: ಮದ್ಯದ ಅಂಗಡಿಯ ಮಾಲೀಕನೊಬ್ಬ ಗ್ರಾಹಕರನ್ನು ಆಕರ್ಷಿಸಲು ಜಾಹೀರಾತನ್ನು ನೀಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಇದೀಗ ಮದ್ಯದಂಗಡಿ ಮಾಲೀಕನಿಗೆ ಸಂಕಷ್ಟವನ್ನುಂಟುಮಾಡಿದೆ. ಮದ್ಯದಂಗಡಿಯ ಮಾಲೀಕ ಇಂಗ್ಲಿಷ್ ಮಾತನಾಡಲು ಕಲಿಯಿರಿ ಎಂಬ ಸಂದೇಶವನ್ನು ಬರೆದಿರುವ ಬ್ಯಾನರ್ ಹಾಕಿ ಆ ಸಂದೇಶದ ಕೆಳಗೆ ಬಾಣವೊಂದನ್ನು ಬಿಡಿಸಿದ್ದು, ಅದು ಮದ್ಯದಂಗಡಿಯನ್ನು ತೋರಿಸುತ್ತಿತ್ತು. ಈ ಬ್ಯಾನರ್‌ನ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral News
Koo


ಕುಡಿದ ಮತ್ತಿನಲ್ಲಿ ಜನರು ಏನೇನೋ ಮಾತನಾಡುತ್ತಾರೆ. ಅವರು ಏನು ಹೇಳುತ್ತಿದ್ದಾರೆ ಎಂದು ಯಾರಿಗೂ ಅರ್ಥವಾಗುವುದಿಲ್ಲ! ಕುಡುಕರು ಮಾತನಾಡುವ ಶೈಲಿ ಯಾವ ರೀತಿ ಇರುತ್ತದೆ ಎಂದರೆ ಕೆಲವು ಜನರಿಗೆ ಅರ್ಥವಾಗದೆ ಇರುವ ಇಂಗ್ಲೀಷ್ ಭಾಷೆ ಮಾತನಾಡಿದ ಹಾಗೆಯೇ ಅನಿಸುತ್ತದೆ. ಇದನ್ನೇ ಬಂಡವಾಳವಾಗಿಟ್ಟುಕೊಂಡು ಮದ್ಯದ ಅಂಗಡಿಯೊಂದು ಗ್ರಾಹಕರನ್ನು ಆಕರ್ಷಿಸಲು ಜಾಹೀರಾತನ್ನು ನೀಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral News) ಆಗಿ ಇದೀಗ ಮದ್ಯದಂಗಡಿ ಮಾಲೀಕನಿಗೆ ಸಂಕಷ್ಟವನ್ನುಂಟುಮಾಡಿದೆ.

ಕುಡಿದ ಮತ್ತಿನಲ್ಲಿ ಜನರು ತೊದಲು ಮಾತನಾಡುವುದನ್ನೇ ಇಂಗ್ಲಿಷ್‍ನಲ್ಲಿ ಮಾತನಾಡುವ ಶೈಲಿಯಂದು ಹೇಳಿ ಜಾಹೀರಾತನ್ನು ಹಾಕಿದ್ದಕ್ಕಾಗಿ ಮಧ್ಯಪ್ರದೇಶದ ಮದ್ಯದಂಗಡಿ ಮಾಲೀಕರಿಗೆ 10,000 ರೂ.ಗಳ ದಂಡ ವಿಧಿಸಲಾಗಿದೆ. ಬುರ್ಹಾನ್ಪುರ ಜಿಲ್ಲೆಯ ನಚನ್‍ಖೇಡಾದಲ್ಲಿರುವ ಮದ್ಯದಂಗಡಿಯ ಬಳಿ ಮಾಲೀಕ ” ಇಂಗ್ಲಿಷ್ ಬೋಲ್ನಾ ಸೀಖೇʼʼ (ಇಂಗ್ಲಿಷ್ ಮಾತನಾಡಲು ಕಲಿಯಿರಿ) ಎಂಬ ಸಂದೇಶವನ್ನು ಬರೆದಿರುವ ಬ್ಯಾನರ್ ಹಾಕಿದ್ದ. ಈ ಸಂದೇಶದ ಕೆಳಗೆ ಬಾಣವೊಂದನ್ನು ಬಿಡಿಸಿದ್ದು, ಅದು ಮದ್ಯದಂಗಡಿಯನ್ನು ತೋರಿಸುತ್ತಿತ್ತು. ಈ ಬ್ಯಾನರ್ ನ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಜಿಲ್ಲಾಡಳಿತದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಬುರ್ಹಾಂಪುರ ಜಿಲ್ಲಾಧಿಕಾರಿ ಶನಿವಾರ ಮದ್ಯದಂಗಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಅಬಕಾರಿ ಇಲಾಖೆ ಮದ್ಯದಂಗಡಿ ಮಾಲೀಕನಿಗೆ ನೋಟಿಸ್ ನೀಡಿದೆ.

ಇದಕ್ಕೆ ಉತ್ತರಿಸಿದ ಅಂಗಡಿ ಮಾಲೀಕ, ತನ್ನ ಅಂಗಡಿಯಿಂದ 40-5೦ ಅಡಿ ದೂರದಲ್ಲಿರುವ ಇನ್ನೊಬ್ಬ ವ್ಯಕ್ತಿಯ ಖಾಸಗಿ ಜಮೀನಿನಲ್ಲಿ ಬ್ಯಾನರ್ ಹಾಕಲಾಗಿದೆ. ಹಾಗಾಗಿ ಇದು ಬೇರೆ ಯಾರೋ ಪಿತೂರಿ ಮಾಡಿ ಹೀಗೆ ಮಾಡಿದ್ದಾರೆ ಎಂದು ಸಮರ್ಥನೆ ನೀಡಿದ್ದಾನೆ. ಆದರೆ ಅಧಿಕಾರಿಗಳು ಆತ ಮದ್ಯದ ಪರವಾನಗಿಯ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ 10,000 ರೂ.ಗಳ ದಂಡ ವಿಧಿಸಿದರು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ!

ಈ ಬ್ಯಾನರ್ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಯುವಕರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ, ಅವರು “ಇಂಗ್ಲಿಷ್ ಕಲಿಯಿರಿ” ಎಂಬ ಸಂದೇಶದಿಂದ ಪ್ರಭಾವಿತರಾಗಬಹುದು ಮತ್ತು ಮದ್ಯದಂಗಡಿಗೆ ಪ್ರವೇಶಿಸಿ ಮದ್ಯಪಾನ ಮಾಡಬಹುದು ಎಂದು ಕಿಡಿಕಾರಿದ್ದಾರೆ. ಅಲ್ಲದೇ ಇದು ಸ್ಪೋಕನ್ ಇಂಗ್ಲಿಷ್ ಕೋಚಿಂಗ್ ಸೆಂಟರ್‌ನ ಜಾಹೀರಾತಿನಂತೆ ಕಾಣುವುದರಿಂದ ಇದು ಜನರನ್ನು ದಾರಿತಪ್ಪಿಸುವ ಸಂಚು ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ಪೋಟೊ ನೆಟ್ಟಿಗರಲ್ಲಿ ನಗುವನ್ನುಂಟುಮಾಡಿದೆ ಎನ್ನಲಾಗಿದೆ.

Continue Reading

Latest

Business Ideas: 20 ದೇಶಗಳಿಗೆ ಮಣ್ಣಿನ ಪಾತ್ರೆಗಳ ರಫ್ತು; ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದೆ ಈ ಕುಟುಂಬ!

Business Ideas ಹಿಂದೆಲ್ಲ ಮಣ್ಣಿನ ಪಾತ್ರೆಗಳು ಮನೆ ತುಂಬಾ ಇರುತ್ತಿದ್ದವು. ಆದರೆ ಈಗ ಆ ಜಾಗವನ್ನು ಪ್ಲಾಸ್ಟಿಕ್, ಅಲ್ಯುಮಿನಿಯಂ ಆವರಿಸಿಕೊಂಡಿವೆ.ಆದರೆ ಇವು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಅರಿವು ಇತ್ತೀಚೆಗೆ ಆಗುತ್ತಿದೆ. ಮರಳಿ ಮಣ್ಣಿಗೆ ಅನ್ನುವಂತೆ ಈಗ ನಿಧಾನಕ್ಕೆ ಕೆಲವರು ಮಣ್ಣಿನ ಪಾತ್ರೆಗಳತ್ತ ಒಲವು ತೋರಿಸುತ್ತಿದ್ದಾರೆ. ರಾಜಸ್ಥಾನದ ಕುಟುಂಬವೊಂದು ಮಣ್ಣಿನ ಮಡಿಕೆ ತಯಾರಿಸುವ ಕಂಪನಿಯೊಂದನ್ನು ಶುರು ಮಾಡಿದ್ದು, ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದೆ! ಈ ಕುರಿತ ವರದಿ ಇಲ್ಲಿದೆ.

VISTARANEWS.COM


on

Business Ideas
Koo


ಮಣ್ಣಿನ ಮಡಿಕೆ(Business Ideas)ಗಳನ್ನು ಬಹಳ ಹಿಂದಿನ ಕಾಲದಲ್ಲಿ ಬಳಸುತ್ತಿದ್ದರು. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಇಂದಿನ ಕಾಲದಲ್ಲಿ ಮಣ್ಣಿನ ಮಡಿಕೆಗಳ ಬದಲು ಸ್ಟೀಲ್, ಅಲ್ಯೂಮಿನಿಯಂ, ಕಬ್ಬಿಣ, ನಾನ್‌ಸ್ಟಿಕ್ ಮುಂತಾದ ಪಾತ್ರೆಗಳನ್ನು ಬಳಸುತ್ತಾರೆ. ಇದರಿಂದ ಅನೇಕ ಕುಂಬಾರರು ಮತ್ತು ಕುಶಲಕರ್ಮಿಗಳಿಗೆ ಜೀವನ ಸಾಗಿಸಲು ಬಹಳ ಕಷ್ಟಕರವಾಗಿದೆ. ಆದರೆ ರಾಜಸ್ಥಾನದ ಹೃದಯಭಾಗದಲ್ಲಿರುವ ಕುಟುಂಬವೊಂದು ಮಣ್ಣಿನ ಮಡಿಕೆ ತಯಾರಿಸುವ ಕಂಪನಿಯೊಂದನ್ನು ಶುರು ಮಾಡಿದ್ದು, ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದ್ದಾರಂತೆ!

Clay Utensils
Clay Utensils

ಈ ಕುಟುಂಬದವರು ಮಣ್ಣಿನ ಪಾತ್ರೆಗಳು ಮತ್ತು ಕಿಚನ್‍ವೇರ್‌ಗಳನ್ನು ತಯಾರಿಸುವಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಮಧ್ಯವರ್ತಿಗಳ ಸಮಸ್ಯೆಯನ್ನು ನಿವಾರಿಸಲು ಅವರ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರೊಂದಿಗೆ ತಲುಪಿಸುವ ಮೂಲಕ ಕುಂಬಾರರು ಮತ್ತು ಕುಶಲಕರ್ಮಿಗಳ ಜೀವನೋಪಾಯವನ್ನು ಪುನರುಜ್ಜೀವನಗೊಳಿಸುವುದು ಈ ಕುಟುಂಬದ ಉದ್ದೇಶವಾಗಿದೆ. ನೂರಕ್ಕೂ ಹೆಚ್ಚು ಕುಶಲಕರ್ಮಿಗಳೊಂದಿಗೆ ಪಾಲುದಾರರಾಗುವ ಮೂಲಕ, ಈ ಕುಟುಂಬದವರ ಕಂಪನಿಯು ವರ್ಷಪೂರ್ತಿ ಉದ್ಯೋಗಾವಕಾಶಗಳನ್ನು ಒದಗಿಸಿದೆ. ಇತ್ತೀಚೆಗೆ, ಶಾರ್ಕ್ ಟ್ಯಾಂಕ್ ಸೀಸನ್ 2ರಲ್ಲಿ ಈ ಕಂಪನಿ ಬ್ರಾಂಡ್ ಹೂಡಿಕೆದಾರನ್ನು ಆಕರ್ಷಿಸಿತ್ತು. ಹಾಗಾಗಿ ಅವರು ಈ ಕಂಪೆನಿಯ ಜೊತೆಗೆ 50 ಲಕ್ಷ ರೂ.ಗಳ ಒಪ್ಪಂದವನ್ನು ಪಡೆದುಕೊಂಡಿತು ಎನ್ನಲಾಗಿದೆ.

ಈ ಕಂಪನಿಯ ವ್ಯವಸ್ಥಾಪಕ ದತ್ತಾತ್ರೇಯ ಅವರು ಈ ಬಗ್ಗೆ ಮಾತನಾಡಿ ಮಾಹಿತಿ ನೀಡಿದ್ದಾರೆ. ಅವರು ತಿಳಿಸಿದಂತೆ ಅವರಿಗೆ ಉದ್ಯಮಿಯಾಗುವ ಯೋಜನೆ ಇರಲಿಲ್ಲ. ಅವರ ಕುಟುಂಬದಲ್ಲಿ ಯಾರೂ ಉದ್ಯಮಿಯಾಗಲು ಬಯಸಿರಲಿಲ್ಲ. ಆದರೆ ಈಗ ಕಾರ್ಪೊರೇಟ್ ಜಗತ್ತಿನಲ್ಲಿ ಸಂತೋಷದಿಂದ ಕೆಲಸ ಮಾಡುತ್ತಿರುವುದಾಗಿ ಅವರು ಸಂತೋಷದಿಂದ ಹೇಳಿಕೊಂಡಿದ್ದಾರೆ.

ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಅವರಿಗೆ ಈ ಉದ್ಯಮ ಮಾಡುವ ಯೋಚನೆ ಬಂದಿದೆ. ಹಲವಾರು ಕುಂಬಾರರು ತಮ್ಮ ಕರಕುಶಲ ವಸ್ತುಗಳನ್ನು ಪ್ರವಾಸಿಗರಿಗೆ ಮಾರಾಟ ಮಾಡುತ್ತಿರುವುದನ್ನು ದತ್ತಾತ್ರೆಯ ಅವರು ನೋಡಿದ್ದಾರೆ. ಲಾಕ್‍ಡೌನ್‍ನಿಂದಾಗಿ, ಅವರು ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವುದನ್ನು ಕಂಡು ದತ್ತಾತ್ರೆಯ ಅವರ ಕುಟುಂಬದವರು ಸೇರಿ ಅವರಿಗೆ ಸಹಾಯ ಮಾಡಿದ್ದಾರೆ. ಆ ಮೂಲಕ ಅವರು 2020ರಲ್ಲಿ ಈ ವ್ಯವಹಾರವನ್ನು ನೊಂದಾಯಿಸಿಕೊಂಡು ದೇಶದ ಹಲವಡೆ ಮಣ್ಣಿನ ಪಾತ್ರೆಗಳನ್ನು ಮಾರಾಟ ಮಾಡಲು ಶುರು ಮಾಡಿದ್ದಾರೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಅಲ್ಲದೇ 2023ರಲ್ಲಿ ಅವರು ತಮ್ಮ ಕೆಲಸವನ್ನು ತೊರೆದು ವ್ಯವಹಾರಕ್ಕೆ ಸಂಪೂರ್ಣವಾಗಿ ತೊಡಗಿಕೊಳ್ಳಲು ನಿರ್ಧರಿಸಿದರು. ಆದರೆ ಈ ವ್ಯವಹಾರ ಮಾಡಲು ಹಲವು ಸಮಸ್ಯೆಗಳನ್ನು ಅವರು ಎದುರಿಸಿದ್ದಾರೆ. ನಂತರ ಉತ್ಪನ್ನಗಳನ್ನು ಪಟ್ಟಿ ಮಾಡುವುದರಿಂದ ಮಾರ್ಕೆಟಿಂಗ್‍ವರೆಗೆ ಎಲ್ಲವನ್ನೂ ಕಲಿಯಲು ಅವರು ಯೂಟ್ಯೂಬ್‌ನಲ್ಲಿ ಮಾಹಿತಿ ಕಲೆ ಹಾಕಿದ್ದಾರೆ.

ನಂತರ ಅವರು ರಾಜಸ್ಥಾನ ಮತ್ತು ಅದರಾಚೆ ಇರುವ 120ಕ್ಕೂ ಹೆಚ್ಚು ಕುಶಲಕರ್ಮಿಗಳೊಂದಿಗೆ ಸಹಯೋಗ ಮಾಡಿಕೊಂಡು ಈ ವ್ಯವಹಾರ ಮುಂದುವರಿಸಿದ್ದಾರೆ, ಮತ್ತು ಈ ಕುಶಲಕರ್ಮಿಗಳು ನುರಿತ ಕುಶಲಕರ್ಮಿಗಳಾಗಿದ್ದು, ಅವರಲ್ಲಿ ಅನೇಕರು ರಾಷ್ಟ್ರಪತಿ ಪ್ರಶಸ್ತಿಗಳು ಅಥವಾ ಯುನೆಸ್ಕೋ ಪ್ರಶಂಸೆಗಳಿಂದ ಗೌರವ ಪಡೆದುಕೊಂಡವರಾಗಿದ್ದರು. ಅಲ್ಲದೇ ಕುಶಲಕರ್ಮಿಗಳಲ್ಲಿ ಮುಖ್ಯವಾಗಿ ಮಹಿಳೆಯರು, ಉತ್ಪಾದನೆಯ ಪ್ರತಿಯೊಂದು ಅಂಶದಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ.

ಈ ಕಂಪನಿಯು ಬಟ್ಟಲುಗಳು, ವೈನ್ ಗ್ಲಾಸ್ , ಕುಕ್ಕರ್‌ಗಳು, ಅಡುಗೆ ಮಡಕೆಗಳು, ಸಾಸ್ ಪ್ಯಾನ್‌ಗಳು, ತವಾ (ಫ್ರೈಯಿಂಗ್ ಪ್ಯಾನ್), ಕಡಾಯಿ (ವೋಕ್), ಮಣ್ಣಿನ ಹಂಡಿ (ಅಡುಗೆ ಬೇಸಿನ್), ಚಹಾ ಲೈಟ್ ಹೋಲ್ಡರ್‌ಗಳು, ವಿಗ್ರಹಗಳು ಮತ್ತು ಹೆಚ್ಚಿನವುಗಳನ್ನು ಜೇಡಿಮಣ್ಣನ್ನು ಬಳಸಿ ತಯಾರಿಸುತ್ತಾರೆ. ಹಾಗೆಯೇ ಕುಶಲಕರ್ಮಿಗಳಿಗೆ ಬೇಡಿಕೆಯ ಆಧಾರದ ಮೇಲೆ ವಸ್ತುಗಳನ್ನು ತಯಾರಿಸಲು ಆದೇಶಿಸಲಾಗುತ್ತದೆ. ನಂತರು ಅವರು ಉತ್ಪನ್ನಗಳನ್ನು ಸಂಗ್ರಹಿಸಿ ಅದರ ಗುಣಮಟ್ಟದ ತಪಾಸಣೆ ಮಾಡಿ ನಂತರ ಅವುಗಳನ್ನು ಪ್ಯಾಕ್ ಮಾಡಿ ಗ್ರಾಹಕರಿಗೆ ಕಳುಹಿಸುತ್ತಾರೆ ಎಂಬುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ!

ಅಷ್ಟೇ ಅಲ್ಲದೇ ಕುಂಬಾರರಿಗೆ ಉತ್ತಮ ಆದಾಯ ನೀಡುವುದಲ್ಲದೇ ಯುವ ಪೀಳಿಗೆಯನ್ನು ಕೂಡ ಈ ಕುಟುಂಬ ವ್ಯವಹಾರದಲ್ಲಿ ಸಹಕರಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಅವರು ಪ್ರಸ್ತುತ 65ಕ್ಕೂ ಹೆಚ್ಚು ರೀತಿಯ ಅಡುಗೆ ಪಾತ್ರೆಗಳನ್ನು ಮಾರಾಟ ಮಾಡುತ್ತಾರೆ ಎಂದು ದತ್ತಾತ್ರೇಯ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ಉತ್ಪನ್ನವು ಸಾಂಪ್ರದಾಯಿಕ ಕಲಾತ್ಮಕತೆ ಮತ್ತು ಆಧುನಿಕ ಸಂವೇದನೆಗಳ ಮಿಶ್ರಣವನ್ನು ಪ್ರತಿಬಿಂಬಿಸುತ್ತದೆ, ಮತ್ತು ಆರೋಗ್ಯದ ಬಗ್ಗೆ ಕಾಳಜಿ ಇರುವವರಿಗೆ ಇದನ್ನು ಮಾರಾಟ ಮಾಡುತ್ತೇವೆ. ಯಾಕೆಂದರೆ ಸಾಂಕ್ರಾಮಿಕ ರೋಗವು ರಾಷ್ಟ್ರವನ್ನು ದಾಳಿ ಮಾಡಿದ ನಂತರ, ಜನರು ಆರೋಗ್ಯಕರ ಜೀವನಶೈಲಿಯತ್ತ ಬದಲಾವಣೆ ಮಾಡಿಕೊಳ್ಳುತ್ತಿರುವುದನ್ನು ಅವರು ಗಮನಿಸಿರುವುದಾಗಿ ತಿಳಿಸಿದ್ದಾರೆ. ಅವರ ಕಂಪೆನಿಯಿಂದ ಈ ವಸ್ತುಗಳನ್ನು ಪ್ರಸ್ತುತ 20 ದೇಶಗಳಿಗೆ ರಫ್ತು ಮಾಡುತ್ತಿದ್ದಾರೆ ಮತ್ತು ಭಾರತದ ದೆಹಲಿ, ಹೈದರಾಬಾದ್ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಮನೆಯೊಳಗೆ ವಿಚಿತ್ರ ವಾಸನೆ, ಇಡೀ ಕುಟುಂಬ ಅಸ್ವಸ್ಥ; ರಹಸ್ಯ ಕೆಮೆರಾದಲ್ಲಿತ್ತು ಶಾಕಿಂಗ್‌ ದೃಶ್ಯ!

ಮಗುವಿನೊಂದಿಗೆ ಗಂಡ, ಹೆಂಡತಿ ರಜೆ ಮುಗಿಸಿ ಮನೆಗೆ ಬಂದ ಮೇಲೆ ಅಸಾಮಾನ್ಯ ತೊಂದರೆಗಳನ್ನು ಎದುರಿಸಿದರು. ಎಲ್ಲರೂ ಅನಾರೋಗ್ಯಕ್ಕೆ ಒಳಗಾದರು. ಎಲ್ಲರ ತಲೆ ಕೂದಲು ಉದುರತೊಡಗಿತು. ಮನೆಯೊಳಗೆ ವಿಚಿತ್ರ ವಾಸನೆಯಿಂದ ಅವರು ಗಾಬರಿಗೊಂಡರು. ಇದಕ್ಕೆ ಕಾರಣ ಏನಿರಬಹುದು ಎಂದು ಹುಡುಕಲು ಹೊರಟವರು ಸಿಸಿಟಿವಿ ದೃಶ್ಯಗಳನ್ನು (cctv footage) ನೋಡಿ ದಂಗಾದರು.

VISTARANEWS.COM


on

By

Viral News
Koo

ರಜೆ ಮುಗಿಸಿ ಮನೆಗೆ ಹಿಂತಿರುಗಿದ ಕುಟುಂಬವೊಂದು ಅನಾರೋಗ್ಯಕ್ಕೆ ಈಡಾಗಿದ್ದು ಕೂದಲು ಉದುರುವ ವಿಚಿತ್ರ ಸಮಸ್ಯೆಯನ್ನು (Hair Loss problem) ಎದುರಿಸುತ್ತಿತ್ತು. ಗಂಡ, ಹೆಂಡತಿ ಮತ್ತು ಚಿಕ್ಕ ಮಗುವಿನ ಕೂದಲು ಕೂಡ ಉದುರಲಾರಂಭಿಸಿತ್ತು. ಇದಕ್ಕೆ ಕಾರಣ ಏನಿರಬಹುದು ಎಂದು ಹುಡುಕಲು ಹೊರಟವರು ಸಿಸಿಟಿವಿ ದೃಶ್ಯಗಳನ್ನು (cctv footage) ನೋಡಿ ದಂಗಾದರು. ಈ ಸುದ್ದಿ ಇದೀಗ ವೈರಲ್ (Viral News) ಆಗಿದೆ.

ಮಗುವಿನೊಂದಿಗೆ ಗಂಡ, ಹೆಂಡತಿ ರಜೆ ಮುಗಿಸಿ ಮನೆಗೆ ಬಂದ ಮೇಲೆ ವಿಚಿತ್ರ ತೊಂದರೆಗಳನ್ನು ಎದುರಿಸಿದರು. ಎಲ್ಲರೂ ಅನಾರೋಗ್ಯಕ್ಕೆ ಒಳಗಾದರು. ಇಷ್ಟು ಮಾತ್ರವಲ್ಲ ಮನೆಯೊಳಗೆ ವಿಚಿತ್ರ ವಾಸನೆಯಿಂದ ಅವರು ಗಾಬರಿಗೊಂಡರು. ಇದರೊಂದಿಗೆ ಮನೆಯವರೆಲ್ಲರ ಕೂದಲು ಉದುರುವಿಕೆ ಪ್ರಾರಂಭವಾಯಿತು. ಮನೆಯನ್ನು ಸಂಪೂರ್ಣ ಹುಡುಕಾಡಿದರೂ ಅವರಿಗೆ ಏನೂ ಸಿಗಲಿಲ್ಲ. ಅಂತಿಮವಾಗಿ ಬಾಗಿಲಿನ ಬಳಿ ಹಿಡನ್ ಕೆಮೆರಾವನ್ನು ಅಳವಡಿಸಿದರು. ಬಳಿಕ ಅದರಲ್ಲಿ ಅವರಿಗೆ ನೆರೆಯ ನಿವಾಸಿಗಳ ಅನುಮಾನಾಸ್ಪದ ಚಟುವಟಿಕೆ ಕಂಡು ಬಂತು.

Viral News
Viral News


ಅಮೆರಿಕದ ಫ್ಲೋರಿಡಾದ ಉಮರ್ ಮತ್ತು ಸಮೀರಾ ದಂಪತಿ ಮಗುವಿನೊಂದಿಗೆ ರಜೆಯಿಂದ ಹಿಂದಿರುಗಿದಾಗ ಈ ಸಸ್ಯೆ ಪ್ರಾರಂಭವಾಗಿತ್ತು. ಎಲ್ಲಿ, ಏನು ತಪ್ಪಾಗಿದೆ ಎಂದು ಅವರು ಹುಡುಕಲು ಪ್ರಾರಂಭಿಸಿದಾಗ ಭಿನ್ನವಾದ ವಿಚಿತ್ರ ಎನಿಸುವ ವಾಸನೆಯನ್ನು ಪತ್ತೆಹಚ್ಚಿದರು. ಈ ವಾಸನೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದರು.

ಗುಪ್ತ ಕೆಮೆರಾವನ್ನು ಅಳವಡಿಸಿ ವಾಸನೆಯನ್ನು ತೊಡೆದುಹಾಕಲು ಪ್ರಯತ್ನಿಸತೊಡಗಿದ ದಂಪತಿ ಮನೆಯ ಪ್ರತಿಯೊಂದು ಕಿಟಕಿಗಳನ್ನೂ ತೆರೆದರು. ಈ ಸಮಯದಲ್ಲಿ ಅವರ ಚಿಕ್ಕ ಮಗಳ ಆರೋಗ್ಯವು ಕ್ಷೀಣಿಸಿತು. ಅವಳು ನಿರಂತರವಾಗಿ ಅಳಲು ಶುರು ಮಾಡಿದಳು. ತಿನ್ನಲು ನಿರಾಕರಿಸಿದಳು.

ಉಮರ್ ಮತ್ತು ಸಮೀರಾ ಅವರಿಗೂ ತಲೆನೋವು ಕಾಣಿಸಿಕೊಂಡಿತು. ಮಗಳ ತಲೆಯಿಂದ ಗಮನಾರ್ಹ ಪ್ರಮಾಣದ ಕೂದಲನ್ನು ಕಳೆದುಕೊಂಡಿರುವುದನ್ನು ಉಮರ್ ಗಮನಿಸಿದರು. ಬಳಿಕ ಉಮರ್ ಅವರ ಕೂದಲು ಉದುರುವಿಕೆ ಪ್ರಾರಂಭವಾಯಿತು. ಮೂವರೂ ಹಾಸಿಗೆಯಲ್ಲೇ ಕಳೆಯುವಷ್ಟರ ಮಟ್ಟಿಗೆ ಅವರ ಪರಿಸ್ಥಿತಿ ಹದಗೆಟ್ಟಿತು. ಹೀಗಾಗಿ ಅವರು ವೈದ್ಯಕೀಯ ಸಹಾಯವನ್ನು ಕೋರಿದರು ಮತ್ತು ಮನೆ ಮಾಲೀಕರಿಗೆ ಮಾಹಿತಿ ನೀಡಿದರು. ಆದರೆ ಯಾವುದೇ ಪರಿಹಾರ ಸಿಗಲಿಲ್ಲ.

Viral News
Viral News


ಬಳಿಕ ಬಾಗಿಲ ಬಳಿ ಅಳವಡಿಸಿದ್ದ ಕೆಮೆರಾವನ್ನು ಪರೀಕ್ಷಿಸಿದಾಗ ನೆರೆಹೊರೆಯವರಾದ 36 ವರ್ಷದ ಚೀನೀ ಪ್ರಜೆ ಲಿ ಬಾಗಿಲಿನ ಮೂಲಕ ದ್ರವ ಪದಾರ್ಥವನ್ನು ಎಸೆಯುತ್ತಿರುವುದನ್ನು ಕಂಡು ಬಂತು.


ಈ ವಸ್ತುವು ಮೆಥಡೋನ್, ಹೈಡ್ರೊಕೊಡೋನ್ ಮತ್ತು ಮತ್ತೊಂದು ಗುರುತಿಸಲಾಗದ ವಿಷಕಾರಿ ಅಂಶವನ್ನು ಒಳಗೊಂಡಿತ್ತು. ಉಮರ್ ಮನೆಯಿಂದ ಬರುವ ಶಬ್ದಗಳ ಕಿರಿಕಿರಿಯಿಂದಾಗಿ ಅವರನ್ನು ಅಲ್ಲಿಂದ ಓಡಿಸಲು ಹೀಗೆ ಮಾಡಿರುವುದಾಗಿ ಲೀ ಹೇಳಿದ್ದಾನೆ.

Viral News
Viral News


ಇದನ್ನೂ ಓದಿ: Viral Video: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

ಬಳಿಕ ಲಿಯನ್ನು ಅಮೆರಿಕದಿಂದ ಚೀನಾಕ್ಕೆ ಗಡೀಪಾರು ಮಾಡಲಾಯಿತು. ಲಿ ಅಮೆರಿಕಕ್ಕೆ ಹಿಂತಿರುಗಿದರೆ ಕಾನೂನು ಕ್ರಮದ ಎಚ್ಚರಿಕೆಯನ್ನು ನ್ಯಾಯಾಲಯ ನೀಡಿದೆ.

Continue Reading

ಆರೋಗ್ಯ

Curry Leaves: ಇದರ ಮಹತ್ವ ತಿಳಿದರೆ ನೀವು ಇನ್ನೆಂದೂ ಕರಿ ಬೇವಿನ ಎಲೆಯನ್ನು ಪಕ್ಕಕ್ಕೆ ಎತ್ತಿಡುವುದಿಲ್ಲ!

Curry Leaves: ಕರಿಬೇವನ್ನು ಒಗ್ಗರಣೆಗೆ ಬಳಸಿ ಬಿಸಾಡುತ್ತೇವೆ. ಆದರೆ ಈ ಕರಿಬೇವಿನಲ್ಲಿರುವ ಅಂಶಗಳು ನಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಸಹಾಯ ಮಾಡುವಲ್ಲಿ ತುಂಬಾ ಸಹಾಯಕಾರಿಯಾಗಿದೆ. ಇದರಲ್ಲಿ ವಿಟಮಿನ್ ಎ, ಬಿ, ಸಿ, ಕ್ಯಾಲ್ಸಿಯಂ, ರಂಜಕ ಮತ್ತು ಕಬ್ಬಿಣದಿಂದ ಸಮೃದ್ಧವಾಗಿದ್ದು, ಇದನ್ನು ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.ಇನ್ಮುಂದೆ ಊಟದಲ್ಲಿ ತಟ್ಟೆಯಲ್ಲಿ ಸಿಕ್ಕ ಕರಿಬೇವನ್ನು ಬಿಸಾಡುವ ಮೊದಲು ಯೋಚಿಸಿ.

VISTARANEWS.COM


on

Curry Leaves
Koo


ಕರಿಬೇವಿನ ಎಲೆಗಳನ್ನು ಅಡುಗೆಯಲ್ಲಿ ಹೆಚ್ಚು ಬಳಸುತ್ತಾರೆ. ಕಾರಣ, ಇದು ಅಡುಗೆಯ ಪರಿಮಳವನ್ನು ಹೆಚ್ಚಿಸುತ್ತದೆ. ಅಷ್ಟು ಮಾತ್ರವಲ್ಲದೆ ಇದು ಪೋಷಕಾಂಶಗಳ ನಿಧಿಯಾಗಿದೆ. ಇದರಲ್ಲಿ ವಿಟಮಿನ್ ಎ, ಬಿ, ಸಿ, ಕ್ಯಾಲ್ಸಿಯಂ, ರಂಜಕ ಮತ್ತು ಕಬ್ಬಿಣದಿಂದ ಸಮೃದ್ಧವಾಗಿದ್ದು, ಇದನ್ನು ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಕರಿಬೇವಿನ ಎಲೆಗಳನ್ನು ಅಡುಗೆಯಲ್ಲಿ ಬಳಸುವ ಮೂಲದ ಇಲ್ಲವಾದರೆ ಹಸಿಯಾಗಿ ಜಗಿಯುವುದು ಅಥವಾ ಅವುಗಳ ರಸವನ್ನು ಕುಡಿಯುವುದರಿಂದ ಕೂಡ ನಮ್ಮ ಆರೋಗ್ಯವನ್ನು(Curry Leaves) ವೃದ್ಧಿಸಿಕೊಳ್ಳಬಹುದು.

Curry Leaves
Curry Leaves

ಕೂದಲಿನ ಬೆಳವಣಿಗೆಗೆ ಸಹಾಯಕಾರಿ

ಕರಿಬೇವಿನ ಎಲೆಗಳನ್ನು ಜಗಿಯುವುದು ಅಥವಾ ಅವುಗಳ ರಸವನ್ನು ಕುಡಿಯುವುದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ.

Curry Leaves
Curry Leaves

ಚರ್ಮಕ್ಕೆ ವರದಾನ

ಕರಿಬೇವಿನ ಎಲೆಗಳು ಚರ್ಮಕ್ಕೆ ವರದಾನವಾಗಿದ್ದು, ಇದು ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ, ಮೊಡವೆಗಳು, ಸೂಕ್ಷ್ಮ ರೇಖೆಗಳು ಮತ್ತು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ.

Curry Leaves
Curry Leaves

ತೂಕ ಕಡಿಮೆ ಮಾಡುವಲ್ಲಿ ಸಹಾಯಕ

ಬೆಳಗ್ಗೆ ಕರಿಬೇವಿನ ಎಲೆಗಳು ಅಥವಾ ಅವುಗಳ ರಸವನ್ನು ಸೇವಿಸುವುದರಿಂದ ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಿಂದ ದೇಹ ನಿರ್ವಿಷಗೊಳ್ಳುತ್ತದೆ ಮತ್ತು ಇದು ತೂಕವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.

ರಕ್ತಹೀನತೆ ನಿವಾರಣೆ

ಕರಿಬೇವಿನಲ್ಲಿ ಕಬ್ಬಿಣದ ಸತ್ವಗಳು ಸಮೃದ್ಧವಾಗಿದೆ. ಕರಿಬೇವಿನ ಎಲೆಗಳು ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗಾಗಿ ರಕ್ತಹೀನತೆ ಮತ್ತು ಅದಕ್ಕೆ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುತ್ತದೆ.

Curry Leaves
Curry Leaves

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ

ಕರಿಬೇವಿನ ಎಲೆಯ ರಸವು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ, ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಕಡಿಮೆ ರಕ್ತದಲ್ಲಿ ಸಕ್ಕರೆಯಂಶ ಕಡಿಮೆ ಇರುವ ವ್ಯಕ್ತಿಗಳು ಕರಿಬೇವಿನ ಎಲೆಯ ರಸವನ್ನು ಸೇವಿಸುವುದನ್ನು ತಪ್ಪಿಸಬೇಕು.

Curry Leaves
Curry Leaves

ಒತ್ತಡ, ಆತಂಕ ನಿವಾರಣೆ

ಇದಲ್ಲದೇ ಕರಿಬೇವನ್ನು ಸೇವಿಸುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ವಾಕರಿಕೆಯನ್ನು ನಿವಾರಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಕಣ್ಣಿನ ಆರೋಗ್ಯವನ್ನು ಉತ್ತಮವಾಗಿಸುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಹಾಗಾಗಿ ಪ್ರತಿದಿನ ಬೆಳಗ್ಗೆ 5-6 ತಾಜಾ ಕರಿಬೇವಿನ ಎಲೆಗಳನ್ನು ಜಗಿಯಿರಿ. ಅಥವಾ ಕರಿಬೇವಿನ ಎಲೆಯ ರಸ 1 ಚಮಚದಷ್ಟು ನೀರಿನೊಂದಿಗೆ ಬೆರೆಸಿ ಕುಡಿಯಿರಿ. ನಿಮ್ಮ ಊಟಕ್ಕೆ ಕರಿಬೇವಿನ ಎಲೆಗಳನ್ನು ಸೇರಿಸಿ.

ಇದನ್ನೂ ಓದಿ: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

ಆದರೆ ನೀವು ನಿಮ್ಮ ಆಹಾರದಲ್ಲಿ ಕರಿಬೇವನ್ನು ಬಳಸುವ ಮುನ್ನ ವೈದ್ಯರ ಸಲಹೆ ಪಡೆಯಿರಿ. ಯಾಕೆಂದರೆ ಕೆಲವೊಂದು ಆರೋಗ್ಯಕರ ವಸ್ತುಗಳು ದೇಹಕ್ಕೆ ಅನುಕೂಲಕರವಾಗಿದ್ದರೂ ಕೆಲವೊಮ್ಮೆ ಅಡ್ಡಪರಿಣಾಮಗಳನ್ನುಂಟುಮಾಡುವ ಸಂಭವವಿದೆ. ಹಾಗಾಗಿ ವೈದ್ಯರ ಸಲಹೆಯಂತೆ ಸೇವಿಸಿ.

Continue Reading
Advertisement
Viral News
ದೇಶ4 mins ago

Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Kannada New Movie Audio rights of Niveditha Shivarajkumar produced movie sold for huge amount
ಸ್ಯಾಂಡಲ್ ವುಡ್7 mins ago

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ9 mins ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

KRS Dam
ಪ್ರಮುಖ ಸುದ್ದಿ9 mins ago

KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

Rajya Sabha
ರಾಜಕೀಯ29 mins ago

Rajya Sabha: ಸತ್ನಾಮ್‌ ಸಿಂಗ್‌ ಸಂಧು ಬಿಜೆಪಿ ಸೇರ್ಪಡೆ; ರಾಜ್ಯಸಭೆಯಲ್ಲಿ ಕೇಸರಿ ಪಕ್ಷದ ಬಲ 87ಕ್ಕೆ ಏರಿಕೆ

Paris Olympics 2024
ಪ್ರಮುಖ ಸುದ್ದಿ32 mins ago

Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

‌Actor Darshan
ಕರ್ನಾಟಕ38 mins ago

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

Arjun Sarja Vidaamuyarchi Heats Up Character Poster
ಕಾಲಿವುಡ್48 mins ago

Arjun Sarja: ಸ್ಟೈಲಿಶ್ ಅವತಾರದಲ್ಲಿ ಅರ್ಜುನ್ ಸರ್ಜಾ: ‘ವಿಡಮುಯಾರ್ಚಿ’ಲುಕ್‌ ಔಟ್‌!

Rahul Gandhi
ದೇಶ51 mins ago

Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Areca Nut Illegal Import
ಕೃಷಿ54 mins ago

Areca Nut Illegal Import: ಭಾರತದೊಳಗೆ 3 ತಿಂಗಳಲ್ಲಿ 3009 ಟನ್‌ ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ9 mins ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ23 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಟ್ರೆಂಡಿಂಗ್‌