BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌ - Vistara News

ಕರ್ನಾಟಕ

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

BJP-JDS Padayatra: ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ (BJP-JDS Padayatra) ನಾವು ಅನುಮತಿ ಕೊಡುವುದಿಲ್ಲ, ಬೇಕಿದ್ದರೆ ಪ್ರತಿಭಟನೆ ಮಾಡಿಕೊಳ್ಳಲಿ. ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಕ್ಷದ ವತಿಯಿಂದ ರಾಜಕೀಯ ಮಾಡುತ್ತೇವೆ. ಆದರೆ ಸರ್ಕಾರ ಉಪಯೋಗಿಸಿ ರಾಜಕೀಯ ಮಾಡಲ್ಲ. ಅವರು ರಾಜಕೀಯ ಮಾಡುತ್ತಿದ್ದಾರೆ, ನಾವೂ ರಾಜಕೀಯ ಮಾಡಬೇಕಾಗುತ್ತದೆ. ಮುಡಾ ಹಗರಣ ತನಿಖೆಗೆ ಆಯೋಗ ರಚನೆ ಮಾಡಿದ್ದೇವೆ. ವರದಿಯಲ್ಲಿ ತಪ್ಪು ಅಂತ ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ. ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಮಾತ್ರ ಅನುಮತಿ ಕೊಡುವುದಿಲ್ಲ, ಆದರೂ ಪಾದಯಾತ್ರೆ ಮಾಡಲು ಮುಂದಾದರೆ ತಡೆಯಲು ಹೋಗಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ಕೌಂಟರ್ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ, ಆ ಬಗ್ಗೆ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಣನೀತಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ | OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!ಇದನ್ನೂ ಓದಿ |

ರಾಜ್ಯದಲ್ಲಿ ಭಯದ ವಾತವರಣದ ಕಾರಣ ಬಂಡವಾಳ ಬರುತ್ತಿಲ್ಲ ಎಂಬ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅನೇಕ ಕಾರಣಗಳಿಂದ ಕಂಪನಿಗಳು, ಆಯ್ಕೆಗಳನ್ನು ಇಟ್ಟುಕೊಂಡೇ ಬರುತ್ತವೆ. ಚೆನ್ನೈ, ಕರ್ನಾಟಕ, ಮಹಾರಾಷ್ಟ್ರ ಅಂತ ಆಯ್ಕೆ ಇರುತ್ತವೆ. ಅವರಿಗೆ ಎಲ್ಲಿ ಹೆಚ್ಚು ಸೌಲಭ್ಯಗಳು ಸಿಗುತ್ತವೋ ಅದರ ಪ್ರಕಾರ ತೀರ್ಮಾನ ಮಾಡುತ್ತಾರೆ. ಇಲ್ಲಿಯವರೆಗೆ ಯಾರು ಬಂದು ಹೊರಗೆ ಹೋಗುತ್ತೇವೆ ಎಂದು ಹೇಳಿಲ್ಲ. ಸುಮ್ಮನೆ ಇಲ್ಲಸಲ್ಲದ ಆಪಾದನೆ ಮಾಡುವುದು ಸರಿಯಲ್ಲ ಎಂದರು.

ಬಜೆಟ್‌ನಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ 15 ಸಾವಿರ ಕೋಟಿ ಕೊಟ್ಟಿದ್ದಾರೆ. ಕೊಡಬೇಡಿ ಎನ್ನಲ್ಲ, ಆದರೆ ಎಲ್ಲರಿಗೂ ಸರಿ ಸಮಾನವಾಗಿ ಕೊಡಬೇಕು. ನಮ್ಮ ಪಾಲನ್ನು ನಮಗೆ ಕೊಡಿ ಅಂತ ದೆಹಲಿ, ಸುಪ್ರೀಂ ಕೋರ್ಟ್‌ವರೆಗೆ ತಲುಪಿದ್ದೇವೆ. ಕೊಟ್ಟಿದ್ದೀವಿ, ಕೊಟ್ಟಿದ್ದೀವಿ ಎನ್ನುತ್ತಾರೆ. ಏನು ಕೊಟ್ಟಿದ್ದೀವಿ ಅಂತ ಹೇಳಬೇಕಲ್ಲವೇ? ಭದ್ರಾ ಯೋಜನೆಗೆ ಹಣಕೊಡಬೇಕಿತ್ತು, ಕೊಟ್ಟಿಲ್ಲ. ಈ ರೀತಿ ಮಲತಾಯಿ ದೋರಣೆ ತೋರಿಸಿ, ಬೆಂಗಳೂರಿಗೆ ಬಂದು ಎಲ್ಲಾ ಕೊಟ್ಟಿದ್ದೀವಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಬೆಂಗಳೂರು ದೇಶದ ಪ್ರತಿಷ್ಠಿತ ನಗರ, ಇದನ್ನ ಪ್ರಪಂಚಕ್ಕೆ ತೋರಿಸಬೇಕಲ್ವಾ? ನೀತಿ ಆಯೋಗಕ್ಕೆ ಮಮತಾ ಹೋಗಿ ವಾಕ್ ಔಟ್ ಮಾಡಿ ಬಂದಿದ್ದಾರೆ. ನಾವು ಹೋಗಿ ವಾಕ್ ಔಟ್ ಮಾಡಬೇಕಿತ್ತಾ? ರಾಜ್ಯ-ಕೇಂದ್ರದ ನಡುವಿನ ಸಂಬಂಧ ಚೆನ್ನಾಗಿರಬೇಕು. ಅದಕ್ಕೆ ರಾಜ್ಯವನ್ನು ಚೆನ್ನಾಗಿ ನಡೆಸಿಕೊಳ್ಳಬೇಕಲ್ವಾ ಎಂದರು.

ಬೆಂಗಳೂರಿನಲ್ಲಿ ನಾಯಿ ಮಾಂಸ ದಂಧೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಆಗಿದೆ. ಇದಾದ ಮೇಲೆ ಆರೋಗ್ಯ ಇಲಾಖೆಯವರು, ಪೊಲೀಸರು ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ವರದಿಯಲ್ಲಿ ಮೇಕೆ ಮಾಂಸ ಎಂದು ಬಂದಿದೆ. ಸುಳ್ಳು ಆರೋಪ ಮಾಡಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡದ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಕ್ರಮ ಆಗಿದೆ. ಹೊರ ರಾಜ್ಯದಿಂದ ಮಾಂಸ ತಂದು ಮಾರೋದು ಹೊಸದಲ್ಲ, ಜನರಿಗೆ ಗೊಂದಲ ಬೇಡ, ಬಂದಿದ್ದು ಮೇಕೆ ಮಾಂಸ ಎಂದು ಸ್ಪಷ್ಟನೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

Elephant attack: ಮೂವರನ್ನು ಬಲಿ ಪಡೆದಿದ್ದ ಮಕ್ನಾ ಆನೆಯೂ (Elephant combing) ಕೂನೆಗೂ ಸೆರೆಯಾಗಿದೆ. ಭೀಮ, ಮಹೇಂದ್ರರ ಆರ್ಭಟಕ್ಕೆ ಮಕ್ನಾ ಆನೆ ಮಂಡಿಯೂರಿದೆ. ಇತ್ತ ಕೊಡಗಿನಲ್ಲಿ ಮಕ್ನಾ ಆನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ.

VISTARANEWS.COM


on

By

Elephant combing Makna elephant captured near Bannerghatta
Koo

ಬೆಂಗಳೂರು ಗ್ರಾಮಾಂತರ: ಕೊನೆಗೂ ಪುಂಡ ಮಕ್ನಾ ಆನೆ (Elephant attack) ಸೆರೆಯಾಗಿದೆ. ಮಕ್ನಾ ಅಡ್ಡೆಗೆ ನುಗ್ಗಿದ ಭೀಮ, ಮಹೇಂದ್ರ ತಟ್ಟಗುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ (Elephant combing) ಸೆರೆಹಿಡಿದಿದ್ದಾರೆ.

ಡ್ರೋನ್ ಮೂಲಕ ಮಕ್ನಾ ಲೋಕೇಷನ್ ಟ್ರಾಕ್ ಮಾಡಿ ಬಳಿಕ ಮಾವುತರು, ಕಾವಾಡಿಗಳು ಸುತ್ತುವರಿದರು. ಮಾವುತರು ಮತ್ತು ಕಾವಾಡಿಗಳ ಮಾಹಿತಿ ಆಧರಿಸಿ ವೈದ್ಯರ ತಂಡ ಅಖಾಡಕ್ಕೆ ಇಳಿದರು. ತಗ್ಗು ಪ್ರದೇಶದಲ್ಲಿದ್ದ ಮಕ್ನಾ ಚಲನವಲನ ಆಧರಿಸಿ ಶಾರ್ಟ್ ಶೂಟರ್ ರಂಜನ್ ಶೂಟ್‌ ಮಾಡಿದ್ದಾರೆ.

Elephant combing Makna elephant captured near Bannerghatta
Elephant combing Makna elephant captured near Bannerghatta

ಸಮೀಪದ ದಿಬ್ಬದ ಮೇಲೆ ನಿಂತು ಡಾಟ್ ಆಗುತ್ತಿದ್ದಂತೆ ಆಕ್ರೋಶಗೊಂಡ ಮಕ್ನಾ ಆನೆ ಸುಮಾರು ಒಂದು ಕಿ.ಮೀ ದೂರ ಸಾಗಿ ನಿತ್ರಾಣಗೊಂಡಿದೆ. ನಿತ್ರಾಣಗೊಂಡಿರುವುದನ್ನು ವೈದ್ಯರು ಖಚಿತ ಪಡಿಸುತ್ತಿದ್ದಂತೆ ಭೀಮ ಮತ್ತು ‌ಮಹೇಂದ್ರ ಸಾಕಾನೆ ಫೀಲ್ಡಿಗಿಳಿದಿದೆ.

ಭೀಮ ಹಾಗೂ ಮಹೇಂದ್ರ ಎದುರಿಗೆ ಬಾಲ ಬಿಚ್ಚದ ಮಕ್ನಾ ಆನೆಯನ್ನು ದಪ್ಪದಾಗಿರುವ ಹಗ್ಗದಿಂದ ಕಟ್ಟಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸೀಗೆ ಕಟ್ಟೆಯ ಆನೆ ಬಿಡಾರಕ್ಕೆ ರವಾನಿಸಿದ್ದಾರೆ.

ಸೆರೆಗೂ ಮುನ್ನ ಪುಂಡ ಮಕ್ನಾ ಕಾಡಾನೆಯ ಆರ್ಭಟ ಜೋರಾಗಿತ್ತು. ಈ ಹಿಂದೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಹಾವಳಿ ಎಬ್ಬಿಸಿದ್ದ ಮಕ್ನಾ ಆನೆ, ಅರಣ್ಯ ಸಿಬ್ಬಂದಿಯ ವಾಹನದ ಮೇಲೆ ಅಟ್ಯಾಕ್ ಮಾಡಿತ್ತು. ವಾಹನವನ್ನು ಹಿಂಬಾಲಿಸಿ ಅಟ್ಟಾಡಿಸಿತ್ತು. ಬನ್ನೇರುಘಟ್ಟ ಕಾಡಂಚಿನ ಭಾಗದಲ್ಲಿ ದಾಂಧಲೆ ಎಬ್ಬಿಸಿತ್ತು. ಮೂರು ಮಂದಿಯನ್ನು ತುಳಿದು ಕೊಂದು ಹಾಕಿತ್ತು.

ಇದನ್ನೂ ಓದಿ:Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಕಾಫಿ ತೋಟದಲ್ಲಿ ಮಕ್ನಾ ಕಾಡಾನೆ ಸಾವು

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಬಾಡಗ ಬಾಣಂಗಾಲದ ಹುಂಡಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಮಕ್ನಾ ಆನೆ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನೂ ಆಹಾರ ಅರಸಿ‌‌ ಕಾಡಿನಿಂದ ನಾಡಿಗೆ ಕಾಡಾನೆ ಹಿಂಡು ಲಗ್ಗೆ ಇಟ್ಟಿವೆ. ಹುಂಡಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿದ್ದು, ಹಗಲು ಹೊತ್ತಿನಲ್ಲೂ ಕಾಣಿಸಿಕೊಳ್ಳುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

KRS Dam: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬೆಳಗ್ಗೆ ಬಾಗಿನ ಸಲ್ಲಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದರು. ಇದಾದ ಬಳಿಕ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿರುವುದು ಕಂಡುಬಂದಿದೆ.

VISTARANEWS.COM


on

KRS Dam
Koo

ಮಂಡ್ಯ: ಸಿಎಂ, ಡಿಸಿಎಂ ಭಾಗವಹಿಸಿದ್ದ ಕೆಆರ್‌ಎಸ್‌ಗೆ (KRS Dam) ಬಾಗಿನ ಸಲ್ಲಿಸುವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಸಂಪ್ರದಾಯ ಮುರಿದು ಬಾಗಿನ ದಿವಸ ಬಾಡೂಟ ಆಯೋಜನೆ ಮಾಡಲಾಗಿದೆ. ಸಿಎಂ, ಸಚಿವರು ಹೊರಟ ಬಳಿಕ ಇಲಾಖೆ ಅಧಿಕಾರಿಗಳ ಭರ್ಜರಿ ಬಾಡೂಟ ಸೇವಿಸಿದ್ದಾರೆ. ಕೆಆರ್‌ಎಸ್‌ನ ಖಾಸಗಿ ಹೋಟೆಲ್‌ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿತ್ತು.

ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿವಸ ಬಾಡೂಟ ಆಯೋಜಿಸಿದ್ದ ಉದಾಹರಣೆ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯ ಮುರಿದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಮೈಸೂರು: ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದಿಂದ 20 ಸಾವಿರ ಜನ ಬೆಂಗಳೂರಿಗೆ ವಲಸೆ ಬಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ತಿಳಿದಿಲ್ಲ. ವಿಚಾರ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ

ವಾಲ್ಮೀಕಿ ಮತ್ತು ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿಯವರೂ ತನಿಖೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.

ಇದನ್ನೂ ಓದಿ | CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ

ಮುಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ಕೋವಿಡ್ 19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು, ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ? ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

Continue Reading

ಕರ್ನಾಟಕ

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

‌Actor Darshan: ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಇದರಿಂದ ಸದ್ಯಕ್ಕೆ ನಟ ದರ್ಶನ್‌ಗೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ.

VISTARANEWS.COM


on

‌Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ.

ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಮನೆಯೂಟ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಅನುಮತಿ ಪಡೆಯಲು ಹೈಕೋರ್ಟ್‌ ಸೂಚಿಸಿತ್ತು. ಹೀಗಾಗಿ ಜುಲೈ 25ರಂದು ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ, ಇದೀಗ ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳ ಆಧಾರದ ಮೇಲೆ ಇತ್ತೀಚೆಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿ ವಜಾಮಾಡಿತ್ತು.

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂದರ್ಭದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು. ಆದರೆ, ಮನೆಯೂಟಕ್ಕೆ ಕೋರ್ಟ್‌ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ದರ್ಶನ್‌ ಪರ ವಕೀಲರು ಮುಂದಾಗಿದ್ದಾರೆ.

ದರ್ಶನ್‌ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Actor Darshan Jail And Gave vijayalakshmi Prasada To Husband
Actor Darshan Jail And Gave vijayalakshmi Prasada To Husband

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.

ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್​ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್​ನಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್​ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ.

Continue Reading

ಕೃಷಿ

Areca Nut Illegal Import: ಭಾರತದೊಳಗೆ 3 ತಿಂಗಳಲ್ಲಿ 3009 ಟನ್‌ ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು!

Areca Nut Illegal Import: ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ ರಾಜ್ಯ ಸಚಿವ ಜಿತಿನ್‌ ಪ್ರಸಾದ್ ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ. ಕೇವಲ ಮೂರು ತಿಂಗಳಲ್ಲಿ 84 ವಿದೇಶಿ ಅಡಿಕೆ ಅಕ್ರಮ ಆಮದು ಪ್ರಕರಣಗಳನ್ನು ಪತ್ತೆ ಆಗಿವೆ ಅಂದರೆ, ಸರಾಸರಿ, ಪ್ರತೀ ಒಂದು ದಿನ ಒಂದು ಅಕ್ರಮ ವಿದೇಶ ಅಡಿಕೆ ಕಳ್ಳಸಾಗಣಿಕೆ ಆಗುತ್ತಿದೆ ಎಂದಾಯ್ತು! ಇದು ಅಡಿಕೆ ಬೆಳೆಗಾರರ ಪಾಲಿಗೆ ಆತಂಕಕಾರಿಯಾಗಿದೆ.

VISTARANEWS.COM


on

By

Areca Nut Illegal Import
Koo

ಅರವಿಂದ ಸಿಗದಾಳ್, ಮೇಲುಕೊಪ್ಪ
ಪ್ರಸಕ್ತ ಹಣಕಾಸು ವರ್ಷದ (Areca Nut Illegal Import) ಜೂನ್‌ ಅಂತ್ಯದವರೆಗೆ ಒಟ್ಟು 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್‌ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ‍ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ ರಾಜ್ಯ ಸಚಿವ ಜಿತಿನ್‌ ಪ್ರಸಾದ್ ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.

ಸರಾಸರಿ ಪ್ರತೀ ದಿನ ಒಂದು ಅಕ್ರಮ ಪ್ರಕರಣ!

ಮೂರು ತಿಂಗಳಲ್ಲಿ 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಆಗಿವೆ ಅಂದರೆ, ಸರಾಸರಿ, ಪ್ರತೀ ಒಂದು ದಿನ ಒಂದು ಅಕ್ರಮ ವಿದೇಶ ಅಡಿಕೆ ಕಳ್ಳಸಾಗಣಿಕೆ ಆಗುತ್ತಿದೆ ಎಂದಾಯ್ತು! ಇದು ಬಯಲಿಗೆ ಬಂದು, ವಶಪಡಿಸಿಕೊಂಡ ಅಕ್ರಮ ಪ್ರಕರಣಗಳು. ಬಯಲಿಗೆ ಬಾರದೆ ಡೀಲ್ ಆದ ಪ್ರಕರಣಗಳು ಎಷ್ಟಿರಬಹುದು? ಡ್ರೈ ಫ್ರೂಟ್ ಹೆಸರಲ್ಲಿ, ಇನ್ಯಾವುದೋ ಕಡಿಮೆ ಬೆಲೆಯ ವಸ್ತುವಿನ ಹೆಸರಲ್ಲಿ ಬಂದ ಅಕ್ರಮ ವಿದೇಶಿ ಅಡಿಕೆ ಪ್ರಕರಣಗಳು ಎಷ್ಟಿರಬಹುದು? ಈಶಾನ್ಯ ರಾಜ್ಯಗಳ ಚೆಕ್‌ಪೋಸ್ಟ್‌ಗಳಲ್ಲಿ, ನಮ್ಮಲ್ಲಿ ಅಕ್ರಮ ಮರಳು ಸಾಗಾಣಿಕೆ ರೀತಿಯಲ್ಲಿ ಆದಂತೆ, ದೇಶದ ಒಳಗೆ ಬಂದು ಉದುರುತ್ತಿರುವ ಅಕ್ರಮ ವಿದೇಶಿ ಅಡಿಕೆ ಪ್ರಕರಣಗಳು ಎಷ್ಟಿರಬಹುದು? ಅವುಗಳ ಒಟ್ಟು ತೂಕ ಎಷ್ಟು ಲಕ್ಷ ಟನ್ ಇರಬಹುದು? ಅವುಗಳ ಮೌಲ್ಯದ ಕತೆ ಏನು?

ಈಗ ಬಹಿರಂಗಗೊಂಡ 84 ಪ್ರಕರಣಗಳಲ್ಲಿನ ಒಟ್ಟು ಅಡಿಕೆ 3009 ಟನ್‌ಗಳು

ಅಂದರೆ, 30,09,000 ಕೆ.ಜಿ! ಸರಾಸರಿ ಪ್ರತೀ ಕೆಜಿ ಅಡಿಕೆಗೆ ₹ 400 ಎಂದು ಪರಿಗಣಿಸಿದರೆ, ₹ 120 ಕೋಟಿ ಮೌಲ್ಯದ ಅಕ್ರಮ ವಿದೇಶಿ ಅಡಿಕೆ ಭಾರತಕ್ಕೆ ಸಾಗಾಣಿಕೆ ಆಗಿದೆ. ಇದು ಲೆಕ್ಕ ಸಿಕ್ಕಿದ ಅಕ್ರಮ ಅಡಿಕೆ! ಲೆಕ್ಕ ಸಿಗದೇ ಇರುವ ಅಕ್ರಮ ಅಡಿಕೆಯ ಮೌಲ್ಯ ಎಷ್ಟಿರಬಹುದು? ಖಂಡಿತವಾಗಿ ಅದು ಭಯಾನಕವಾದ ಮೊತ್ತವೇ ಆಗಿರುತ್ತದೆ. ಇಷ್ಟಕ್ಕೂ ಇದು ಮೂರು ತಿಂಗಳ ವ್ಯವಹಾರದ್ದು! ವರ್ಷ ಪೂರ್ತಿಗೆ ಎಷ್ಟಾಗಬಹುದು?

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಇದೇ ರೀತಿ ಅಕ್ರಮವಾಗಿ ವಿದೇಶಿ ಅಡಿಕೆ ಭಾರತಕ್ಕೆ ಬರುತ್ತಿರುವ ಅಂಕಿ ಅಂಶಗಳು ಕೇಂದ್ರ ಸರಕಾರ ನಿರ್ಮಿಸಿರುವ ವ್ಯವಸ್ಥೆಯ ಒಳಗಿನ ಬಿಗಿ ಹಿಡಿತವನ್ನು ಅನುಮಾನಿಸುವಂತಿವೆ.
2020–21ರಲ್ಲಿ 278 ಪ್ರಕರಣಗಳನ್ನು ಪತ್ತೆ ಹಚ್ಚಿ 3,449 ಟನ್ ವಶಪಡಿಸಿಕೊಂಡಿದ್ದರೆ, 2021–22ರಲ್ಲಿ 260 ಪ್ರಕರಣಗಳಲ್ಲಿ 3,388 ಟನ್‌ ವಶಪಡಿಸಿಕೊಳ್ಳಲಾಗಿದೆ. 2022–23ರಲ್ಲಿ 454 ಪ್ರಕರಣಗಳಲ್ಲಿ 3,400 ಟನ್ ಅಕ್ರಮ ವಿದೇಶಿ ಅಡಿಕೆ ದೇಶದ ಒಳಗೆ ಬಂದಿದೆ. 2023–24ರಲ್ಲಿ 643 ಪ್ರಕರಣಗಳಲ್ಲಿ 12,881 ಟನ್‌ ಅಡಿಕೆ ವಶಪಡಿಸಿಕೊಂಡಿತ್ತು ಎಂದು ಕೇಂದ್ರ ಸಚಿವ ಜಿತಿನ್‌ ಪ್ರಸಾದ್ ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇಷ್ಟೊಂದು ಅಕ್ರಮ ವಿದೇಶಿ ಅಡಿಕೆ ದೇಶದ ಒಳಗೆ ರಾಜಾರೋಷವಾಗಿ ಪ್ರತೀ ವರ್ಷವೂ ನುಗ್ಗಿ ಬರುತ್ತಿದೆ ಎಂದಾದರೆ, ದೇಶದ ಆರ್ಥಿಕ ಮತ್ತು ಭದ್ರತೆಯ ವಿಷಯದಲ್ಲೂ ಸಂಶಯ ಮತ್ತು ಭಯ ಹುಟ್ಟಿಸುತ್ತಿದೆ. ಅಡಿಕೆಯೇ ಅಕ್ರಮವಾಗಿ ಈ ಪರಿ ಬರುತ್ತಿರುವಾಗ, ಬೇರೆ ವಸ್ತುಗಳೂ ಕೂಡ ಹೀಗೇ ಬರುತ್ತಿರಬಹುದಲ್ಲವೆ? ಅವುಗಳ ಕತೆ ಏನು?
ಈ ಬಾರಿ ಕಾಫಿ, ಮೆಣಸು, ಕೋಕೊ ಬೆಲೆಗಳು ಏರಿದಂತೆ, ದೇಶೀಯ ಅಡಿಕೆಗೂ ಕ್ವಿಂಟಾಲ್‌ಗೆ ‘ಅಬ್ ಕಿ ಬಾರ್ 60,000 ಪಾರ್’ ಎಂದು ನಿರೀಕ್ಷಿಸಿದ್ದ ಅಡಿಕೆಗೆ, ಈಗ ವಿದೇಶಿ ಅಕ್ರಮ ಆಮದಿನಿಂದಾಗಿ ಅಡಿಕೆ ದರ ಇಳಿ ಮುಖವಾಗಿದೆ.

ಇದನ್ನೂ ಓದಿ: Train services: ಎಡಕುಮೇರಿಯಲ್ಲಿ ಭೂಕುಸಿತ; ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು

ಸಂಸದರ ಮೌನವೇಕೆ?

ಇಷ್ಟೆಲ್ಲ ಅಕ್ರಮಗಳು ನೆಡೆಯುತ್ತಿದ್ದರೂ ಬಹಿರಂಗವಾಗಿ ಸುದ್ದಿಯಾಗುತ್ತಿದ್ದರೂ, ಅಡಿಕೆ ಬೆಳೆಯುವ ಜಿಲ್ಲೆಗಳ (ಎಲ್ಲಾ ರಾಜ್ಯಗಳ) ಸಂಸದರು ಯಾಕೆ ಗಟ್ಟಿ ಧ್ವನಿ ಎತ್ತುತ್ತಿಲ್ಲ? ಅಕ್ರಮ ಅಡಿಕೆ ಆಮದಿಗೆ ಮೌನ ಸಮ್ಮತಿಯ ಬೆಂಬಲ ಕೊಡುತ್ತಿದ್ದಾರಾ? ಅಕ್ರಮವನ್ನು ತಡೆಯಲು ಸಂಸದರಿಗೆ ಸಾಧ್ಯವಾಗುತ್ತಿಲ್ಲವಾ? ಅಥವಾ ಪರೋಕ್ಷವಾಗಿ ಅಕ್ರಮ ಅಡಿಕೆ ಆಮದಿನಲ್ಲಿ ಕೆಲವು ಸಂಸದರು ಫಲಾನುಭವಿಗಳಾಗಿದ್ದಾರಾ? ಹಾಗಾಗಿಯೇ ಅಕ್ರಮ ಅಡಿಕೆ ಸಾಗಾಣಿಕೆಯಲ್ಲಿ ಮೌನವಾಗಿದ್ದಾರಾ? ವರ್ಷದಲ್ಲಿ ಒಂದೋ ಎರಡೋ ಪ್ರಕರಣಗಳಾದರೆ ಅದು ಅಷ್ಟು ಗಂಭೀರವಲ್ಲದ್ದಿರಬಹುದು.

ಇದು ಕಳೆದ ಮೂರು ತಿಂಗಳಲ್ಲಿ ಬಯಲಿಗೆ ಬಂದ ಪ್ರಕರಣಗಳೇ 84 ಅಂದರೆ? ಯಾವ ಸಂಸದರಿಗೂ ಇದು ಸೀರಿಯಸ್ ವಿಷಯ ಅಂತ ಅನಿಸುತ್ತಿಲ್ಲವಾ? ವಿರೋಧ ಪಕ್ಷಗಳ ಸಂಸದರಿಗೂ ಇದು ಮಹತ್ವದ ವಿಚಾರ ಅಂತ ಅನಿಸುತ್ತಿಲ್ಲವಾ? ಸೂಕ್ತ ಕಡಿವಾಣದ ಚಿಂತನೆಗೆ ಯಾರೂ ಮುಂದಾಗುತ್ತಿಲ್ಲವಾ? ಆಡಳಿತ ಮತ್ತು ವಿರೋಧ ಪಕ್ಷಗಳ ಸಂಸದರು, ದೇಶದ ಬಹುದೊಡ್ಡ ಹಗರಣದಂತೆ ಕಂಡು ಬರುವ ಈ ವಿದೇಶಿ ಅಕ್ರಮ ಅಡಿಕೆ ಆಮದನ್ನು ನಿಯಂತ್ರಣ ಮಾಡಲು ಸಮರೋಪಾದಿಯಲ್ಲಿ ಮುನ್ನುಗ್ಗಬೇಕಲ್ವಾ? ಯಾಕೆ ಮೌನ? ಕಳೆದ ವಾರ ಇದೇ ರೀತಿ ಅಕ್ರಮ ವಿದೇಶಿ ಅಡಿಕೆ ಒಳ ಬಂದ ಪ್ರಕರಣವನ್ನು ತನಿಖೆಗಾಗಿ ಸಿಬಿಐ(CBI) ಗೆ ವಹಿಸಿದ ಸುದ್ದಿ ಪ್ರಕಟವಾಗಿತ್ತು.

ಈಗ ಎಲ್ಲಾ 84 ಪ್ರಕರಣಗಳನ್ನೂ, ಮತ್ತು ಬಹಿರಂಗವಾಗದ, ವಶಪಡಿಸಿಕೊಳ್ಳದ ಅಕ್ರಮ ಅಡಿಕೆ ಸಾಗಾಣಿಕೆಗಳ ಪ್ರಕರಣಗಳನ್ನು ಸಿಬಿಐ(CBI) ತನಿಖೆಗೆ ವಹಿಸಬೇಕೆಂದು ಕೇಂದ್ರ ಸಂಸದರೆಲ್ಲ ಕೇಂದ್ರ ಸರಕಾರವನ್ನು ಗಂಭೀರವಾಗಿ ಒತ್ತಾಯಿಸುತ್ತಿಲ್ಲ ಏಕೆ? ಅಕ್ರಮ ವಿದೇಶಿ ಅಡಿಕೆಯ ಸಾಗಾಣಿಕೆಯ ಒಂದೇ ಒಂದು ಪ್ರಕರಣವೂ ಮುಂದೆ ನಡೆಯದಂತೆ ದೇಶದ ಎಲ್ಲಾ ಮಾರ್ಗಗಳನ್ನು (ಭೂ, ಜಲ, ವಾಯು) ಬಿಗಿಗೊಳಿಸಬೇಕಾದ ಅನಿವಾರ್ಯತೆ ಇಲ್ಲವಾ?
ದೇಶದೊಳಕ್ಕೆ ಬರುತ್ತಿರುವ ಅಕ್ರಮ ವಿದೇಶಿ ಅಡಿಕೆ ಸಮಸ್ಯೆ ಕೇವಲ ದೇಶೀಯ ಅಡಿಕೆ ಬೆಲೆಯ ಮೇಲೆ ಮಾತ್ರ ಪರಿಣಾಮ ಬೀರುವುದಲ್ಲ. ಸಮಸ್ಯೆಯ ಗಂಭೀರತೆ ನೋಡಿದರೆ, ಇದು ಸಮಗ್ರ ದೇಶದ ಅರ್ಥ ವ್ಯವಸ್ಥೆ ಮತ್ತು ಭದ್ರತಾವ್ಯವಸ್ಥೆಯ ಮೇಲೆ ದೊಡ್ಡ ಪರಿಣಾಮ ಬೀರಬಹುದಾದ ಪ್ರಕರಣಗಳಾಗಿ ಕಾಣುತ್ತಿವೆ.
ದಯವಿಟ್ಟು ರಾಜ್ಯದ ಎಲ್ಲ ಸಂಸದರು, ಶಾಸಕರು, ಸಚಿವರು ಈ ಅಕ್ರಮ ವಿದೇಶಿ ಅಡಿಕೆ ಸಾಗಾಣಿಕೆ ಬಗ್ಗೆ ಪರಿಣಾಮಕಾರಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮುಂದಾಗಲಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannada New Movie Audio rights of Niveditha Shivarajkumar produced movie sold for huge amount
ಸ್ಯಾಂಡಲ್ ವುಡ್18 seconds ago

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾದ ಆಡಿಯೊ ಹಕ್ಕು

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 mins ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

KRS Dam
ಪ್ರಮುಖ ಸುದ್ದಿ2 mins ago

KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

Rajya Sabha
ರಾಜಕೀಯ22 mins ago

Rajya Sabha: ಸತ್ನಾಮ್‌ ಸಿಂಗ್‌ ಸಂಧು ಬಿಜೆಪಿ ಸೇರ್ಪಡೆ; ರಾಜ್ಯಸಭೆಯಲ್ಲಿ ಕೇಸರಿ ಪಕ್ಷದ ಬಲ 87ಕ್ಕೆ ಏರಿಕೆ

Paris Olympics 2024
ಪ್ರಮುಖ ಸುದ್ದಿ25 mins ago

Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

‌Actor Darshan
ಕರ್ನಾಟಕ31 mins ago

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

Arjun Sarja Vidaamuyarchi Heats Up Character Poster
ಕಾಲಿವುಡ್42 mins ago

Arjun Sarja: ಸ್ಟೈಲಿಶ್ ಅವತಾರದಲ್ಲಿ ಅರ್ಜುನ್ ಸರ್ಜಾ: ‘ವಿಡಮುಯಾರ್ಚಿ’ಲುಕ್‌ ಔಟ್‌!

Rahul Gandhi
ದೇಶ44 mins ago

Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Areca Nut Illegal Import
ಕೃಷಿ47 mins ago

Areca Nut Illegal Import: ಭಾರತದೊಳಗೆ 3 ತಿಂಗಳಲ್ಲಿ 3009 ಟನ್‌ ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು!

ಕರ್ನಾಟಕ48 mins ago

Kannada New Movie: ಹಿರಿಯನಟ ಅಭಿಜಿತ್ ಅಭಿನಯದ ‘ಅಡವಿಕಟ್ಟೆ’ ಈ ವಾರ ತೆರೆಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 mins ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ23 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಟ್ರೆಂಡಿಂಗ್‌