Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​ - Vistara News

ಪ್ರಮುಖ ಸುದ್ದಿ

Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

Paris Olympics 2024 : 2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಬಾರ್ಬಡೋಸ್​​ನಲ್ಲಿ ನಡೆದ ಐಸಿಸಿ ಟ್ರೋಫಿ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್​ಗಳ ರೋಚಕ ಗೆಲುವು ಸಾಧಿಸುವ ಮೂಲಕ ಮೆನ್ ಇನ್ ಬ್ಲೂ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ಕೊನೆಗೊಳಿಸಿತು. 17 ವರ್ಷಗಳ ನಂತರ ಎರಡನೇ ಟಿ 20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿತು.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್ : ಭಾರತದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕ್ರಿಕೆಟ್​​ ಕೆಲಸದಿಂದ ವಿಮುಖರಾಗಿದ್ದು. ಅವರು ಪ್ಯಾರಿಸ್ ಒಲಿಂಪಿಕ್ಸ್ 2024ರ (Paris Olympics 2024) ವೀಕ್ಷಣೆಗೆ ಪ್ಯಾರಿಸ್​​ಗೆ ತೆರಳಿದ್ದಾರೆ. ಅಲ್ಲಿ ಅವರು ಭಾರತದ ಪುರುಷರ ಡಬಲ್ಸ್ ಜೋಡಿ ರೋಹನ್ ಬೋಪಣ್ಣ ಮತ್ತು ಎನ್ ಶ್ರೀರಾಮ್ ಬಾಲಾಜಿ ಅವರ ಪಂದ್ಯವನ್ನು ವೀಕ್ಷಿಸಿದ್ದಾರೆ. ವಿಶೇಷವೆಂದರೆ ಬಾಲಾಜಿ ಮತ್ತು ಬೋಪಣ್ಣ ಅವರು ರೋಲ್ಯಾಂಡ್-ಗ್ಯಾರೋಸ್ – ಕೋರ್ಟ್ 14 ರಲ್ಲಿ ಫ್ರೆಂಚ್ ಜೋಡಿ ಗೇಲ್ ಮೊನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವಾಸೆಲಿನ್ ವಿರುದ್ಧ ಸೆಣಸಿದ್ದಾರೆ. ಈ ಪಂದ್ಯವನ್ನು ಅವರು ವೀಕ್ಷಿಸಿದ್ದಾರೆ.

ದ್ರಾವಿಡ್ ಪ್ಯಾರಿಸ್​​ನಲ್ಲಿರುವ ಇಂಡಿಯಾ ಹೌಸ್​ಗೆ ಭೇಟಿ ನೀಡಿದ್ದಾರೆ. ಇದು ಭಾರತೀಯ ಅಭಿಮಾನಿಗಳು ಮತ್ತು ಕ್ರೀಡಾಪಟುಗಳಿಗೆ ಫ್ರೆಂಚ್ ರಾಜಧಾನಿಯಲ್ಲಿ ತವರು ದೇಶದ ಅನುಭವ ಪಡೆಯಲು ಒಂದು ತಾಣವಾಗಿದೆ. ತಮ್ಮ ಭೇಟಿಯ ಸಮಯದಲ್ಲಿ, ಮಾಜಿ ಕ್ರಿಕೆಟಿಗ ಕೇಂದ್ರದ ವೈಭವಕ್ಕೆ ಸಾಕ್ಷಿಯಾದರು. ವಿದೇಶಿಯರಿಗೆ ರಾಷ್ಟ್ರದ ವೈವಿಧ್ಯಮಯ ಸಂಸ್ಕೃತಿಯ ಒಂದು ನೋಟವನ್ನು ಇಲ್ಲಿ ನೀಡಲಾಗುತ್ತಿದೆ.

2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಬಾರ್ಬಡೋಸ್​​ನಲ್ಲಿ ನಡೆದ ಐಸಿಸಿ ಟ್ರೋಫಿ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್​ಗಳ ರೋಚಕ ಗೆಲುವು ಸಾಧಿಸುವ ಮೂಲಕ ಮೆನ್ ಇನ್ ಬ್ಲೂ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ಕೊನೆಗೊಳಿಸಿತು. 17 ವರ್ಷಗಳ ನಂತರ ಎರಡನೇ ಟಿ 20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿತು.

ಇದನ್ನೂ ಓದಿ: IND vs SL T20 : ಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಜಯ, ಸರಣಿ ಕೈವಶ

ದ್ರಾವಿಡ್ ಅವರ ನಾಯಕತ್ವದಲ್ಲಿ 2007 ರ ಏಕದಿನ ವಿಶ್ವಕಪ್​​ನ ಮೊದಲ ಹಂತದಲ್ಲಿಯೇ ಭಾರತವು ಟೂರ್ನಿಯಿಂದ ಹೊರಕ್ಕೆ ಹೋಗಿತ್ತು. ಆ ಬೇಸರವನ್ನು 51 ವರ್ಷದ ಧೋನಿ ಅಂತಿಮವಾಗಿ ಐಸಿಸಿ ಟ್ರೋಫಿಯನ್ನು ಗೆಲ್ಲುವ ಮೂಲಕ ಕಳೆದುಕೊಂಡಿದ್ದರು.

ಪ್ಯಾರಿಸ್ ನಲ್ಲಿ ಖಾತೆ ತೆರೆದ ಮನು ಭಾಕರ್

ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್​​ನಲ್ಲಿ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತ ತನ್ನ ಖಾತೆಯನ್ನು ತೆರೆದಿದೆ. ಶೂಟಿಂಗ್ ಪದಕಕ್ಕಾಗಿ 12 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿದ 22 ವರ್ಷದ ಮನು , ಕ್ರೀಡೆಯಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ರಮಿತಾ ಜಿಂದಾಲ್ ಮತ್ತು ಅರ್ಜುನ್ ಬಬುಟಾ ಕ್ರಮವಾಗಿ ಮಹಿಳಾ ಮತ್ತು ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್​ನಲ್ಲಿ ಕಾಣಿಸಿಕೊಂಡರೂ ಕ್ರಮವಾಗಿ 7 ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಆಗಸ್ಟ್ 12ರಿಂದ ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಬಿ.ವಿ.ಎಸ್‌ಸಿ, ಬಿ.ವಿ.ಎಸ್‌ಸಿ & ಎಎಚ್‌ ಪದವೀಧರರು ಅರ್ಹರಾಗಿದ್ದು, ವಯೋಮಿತಿ, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

veterinary officer recruitment
Koo

ಬೆಂಗಳೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್-ಎ ದರ್ಜೆಯ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ (veterinary officer recruitment) ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 12ರಿಂದ ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಬೇಕಾದ ಅರ್ಹತೆಗಳು, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು: ಪಶು ವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 342 (ಉಳಿಕೆ ಮೂಲ ವೃಂದ) + 58 (ಬ್ಯಾಕ್‌ಲಾಗ್‌)
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್‌ 12
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆ.12

ವಿದ್ಯಾರ್ಹತೆ

ಪಶು ವೈದ್ಯಕೀಯ ವಿಜ್ಞಾನ (BVSc), ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ (B.V.Sc. & AH) ಪದವೀಧರರು ಅರ್ಜಿ ಸಲ್ಲಿಸಬಹುದು. (ಕೆವಿಸಿ/ಐವಿಸಿಯಲ್ಲಿ ನೋಂದಣಿಯಾಗಿರಬೇಕು)

ವಯೋಮಿತಿ

ಅರ್ಜಿ ಸಲ್ಲಿ..ಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ – 18 ವರ್ಷಗಳ ವಯೋಮಾನದವರಾಗಿರಬೇಕು ಹಾಗೂ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅರ್ಹತೆ: 35 ವರ್ಷ
ಒಬಿಸಿ (2ಎ, 2ಬಿ, 3ಎ, 3ಬಿ): 38 ವರ್ಷ
ಎಸ್‌ಸಿ, ಎಸ್‌ಟಿ, ಪ್ರವರ್ಗ-1: 40 ವರ್ಷ

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600 ರೂ.
ಒಬಿಸಿ (2ಎ, 2ಬಿ, 3ಎ, 3ಬಿ): 300 ರೂ.
ಮಾಜಿ ಸೈನಿಕರಿಗೆ : 50 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನರು: ಶುಲ್ಕ ಪಾವತಿಯಿಂದ ವಿನಾಯಿತಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಆಯ್ಕೆ ವಿಧಾನ

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:
ಈ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮ ಉಪ ನಿಯಮ-7 ರಲ್ಲಿ ನಿರ್ದಿಷ್ಟ ಪಡಿಸಲಾದಂತೆ, ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ.. ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು ಎಸ್.ಎಸ್.ಎಲ್.ಸಿ. ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು.

ವಿಶೇಷ ಸೂಚನೆ: ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರನ್ವಯ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 29-11-2022ರಂದು ಮತ್ತು ಆ ನಂತರದಲ್ಲಿ ನಡೆಸಿರುವ ಕನ್ನಡ ಭಾಷಾ ಪರೀಕ್ಷೆಗಳಿಗೆ ಹಾಜರಾಗಿ ಉರ್ತೀರ್ಣರಾಗಿದ್ದಲ್ಲಿ ಅದರ ಫಲಿತಾಂಶವನ್ನು ಈ ಅಧಿಸೂಚನೆಯಲ್ಲಿನ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೂ ಪರಿಗಣಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ ಲೈನ್ ಅರ್ಜಿಯಲ್ಲಿನ ನಿಗದಿತ ಅಂಕಣದಲ್ಲಿ ಕನ್ನಡ ಭಾಷಾ ಪರೀಕ್ಷೆ ಕುರಿತಂತೆ ಕೇಳಿರುವ ಮಾಹಿತಿಯನ್ನು ತಪ್ಪದೇ ನಮೂದಿಸಬೇಕು.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಸ್ಪರ್ಧಾತ್ಮಕ ಪರೀಕ್ಷಾ ವಿಧಾನ

ಈ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತು ನಿಮ್ಮ ಬಹು ಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರತಿಯೊಂದು ಪ್ರಶ್ನೆಯು ಋಣಾತ್ಮಕ (Negative) ಅಂಕದ ಸ್ವರೂಪದ್ದಾಗಿದ್ದು, ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
Paper 1- ಸಾಮಾನ್ಯ ಪತ್ರಿಕೆ(General Paper): 300 ಅಂಕ
Paper 2- ನಿರ್ದಿಷ್ಟ ಪತ್ರಿಕೆ(Specific Paper): 300 ಅಂಕ



    Continue Reading

    ಪ್ರಮುಖ ಸುದ್ದಿ

    Paris Olympics 2024 : ಮತ್ತೊಂದು ಗೆಲವು ಕಂಡ ಷಟ್ಲರ್ ಲಕ್ಷ್ಯ ಸೇನ್​

    parisl Olympics 2024: ಲಕ್ಷ್ಯ ಸೇನ್ ಪಂದ್ಯದ ಮೊದಲ ಗೇಮ್ ನಲ್ಲಿ ಮುಂದುವರಿಯಲು ಸ್ವಲ್ಪ ಸಮಯ ತೆಗೆದುಕೊಂಡರು. ಜೂಲಿಯನ್ ಕರಾಗ್ಗಿ ಅವರ ಅದ್ಭುತ ಸ್ಟ್ರೋಕ್ ಪ್ಲೇಯಿಂದಾಗಿ ಮೊದಲ ಗೇಮ್ ನ ಬಹುಪಾಲು ಹಿನ್ನಡೆ ಅನುಭವಿಸಿದ ನಂತರ, ಲಕ್ಷ್ಯ ಸರಿಯಾದ ಸಮಯದಲ್ಲಿ ತಮ್ಮ ಆಟದ ವೇಗವನ್ನು ಹೆಚ್ಚಿಸಿದರು.

    VISTARANEWS.COM


    on

    Parisl Olympics 2024
    Koo

    ಪ್ಯಾರಿಸ್ : ಒಲಿಂಪಿಕ್ಸ್ 2024 ರ ಎರಡನೇ ಗ್ರೂಪ್​ ಹಂತದ ಪಂದ್ಯದಲ್ಲಿ ಭಾರತದ ಲಕ್ಷ್ ಸೇನ್ ಗೆಲುವು ಸಾಧಿಸಿದ್ದಾರೆ. ಬೆಲ್ಜಿಯಂನ ಜೂಲಿಯನ್ ಕರಾಗಿ ಅವರನ್ನು 21-19, 21-14 ನೇರ ಗೇಮ್​ಗಳಿಂದ ಸೋಲಿಸಿದ 22 ವರ್ಷದ ಆಟಗಾರ ತಮ್ಮ ಅಭಿಯಾನವನ್ನು ಮುಂದುವರಿಸಿದರು. ಲಾ ಚಾಪೆಲ್ ಅರೆನಾ ಅಂಗಣದಲ್ಲಿ ನಡೆದ ಪಂದ್ಯದಲ್ಲಿ ಲಕ್ಷ್ಯ ಸೇನ್ ವಿಶ್ವದ ವಿಶ್ವದ 52 ಶ್ರೇಯಾಂಕದ ಆಟಗಾರನನ್ನು ಸೋಲಿಸಿದರು.

    ಸಾಮಾನ್ಯವಾಗಿ ತನ್ನ ಕೌಶಲ್ಯ ಮತ್ತು ಅನಿರೀಕ್ಷಿತ ಸ್ಟ್ರೋಕ್ ಪ್ಲೇಗೆ ಹೆಸರುವಾಸಿಯಾದ ಲಕ್ಷ್ಯಗೆ ಇದು ತುಂಬಾ ವಿಭಿನ್ನ ರೀತಿಯ ಆಟವಾಗಿತ್ತು. ಸೋಮವಾರ ಲಕ್ಷ್ಯ ತನ್ನ ಮೇಲೆ ಒತ್ತಡ ಹೆಚ್ಚಾದಾಗಲೆಲ್ಲಾ ಹಿಂದಿನಿಂದ ಮುಂದೆ ಸರಿಯುವ ಮೂಲಕ ಪ್ರಬಲ ಪೈಪೋಟಿ ನೀಡಿದರು. ರಕ್ಷಣಾತ್ಮಕ ಹೊಡೆತಗಳಲ್ಲಿ ಅದ್ಭುತ ಯಶಸ್ಸು ಕಂಡ ಅವರು ಪೂರ್ಣ ಅಂಕಗಳನ್ನು ಗಳಿಸಿದರು. ಕಳೆದ 12-15 ತಿಂಗಳುಗಳಿಂದ ಪುರುಷರ ಸಿಂಗಲ್ಸ್​​ನಲ್ಲಿ ಅಗ್ರ 10 ರ್ಯಾಂಕಿಂಗ್​​ನಲ್ಲಿ ಸ್ಥಾನ ಪಡೆದಿರುವ ವಿಶ್ವದ 19 ನೇ ಶ್ರೇಯಾಂಕಿತ ಆಟಗಾರ ಬೆಲ್ಜಿಯಂ ಆಟಗಾರನನ್ನು ಸೋಲಿಸುವಲ್ಲಿ ತಮ್ಮ ಅಸಾಧಾರಣ ವ್ಯಾಪ್ತಿ ತೋರಿಸಿದರು.

    ಲಕ್ಷ್ಯ ಸೇನ್ ಪಂದ್ಯದ ಮೊದಲ ಗೇಮ್ ನಲ್ಲಿ ಮುಂದುವರಿಯಲು ಸ್ವಲ್ಪ ಸಮಯ ತೆಗೆದುಕೊಂಡರು. ಜೂಲಿಯನ್ ಕರಾಗ್ಗಿ ಅವರ ಅದ್ಭುತ ಸ್ಟ್ರೋಕ್ ಪ್ಲೇಯಿಂದಾಗಿ ಮೊದಲ ಗೇಮ್ ನ ಬಹುಪಾಲು ಹಿನ್ನಡೆ ಅನುಭವಿಸಿದರು. ಲಕ್ಷ್ಯ ಸರಿಯಾದ ಸಮಯದಲ್ಲಿ ತಮ್ಮ ಹೋರಾಟ ಹೆಚ್ಚಿಸಿದರು. ಮೊದಲ ಗೇಮ್ ನ 18ನೇ ಪಾಯಿಂಟ್ ವರೆಗೆ ಹಿನ್ನಡೆ ಅನುಭವಿಸಿದ ಅವರು ಎದುರಾಳಿಯನ್ನು ಮಣಿಸಿದರು. ಅವರು ತಮ್ಮ ಸಂಯಮವನ್ನು ಕಾಪಾಡಿಕೊಂಡು ಮೊದಲ ಗೇಮ್ ಅನ್ನು 21-19 ರಿಂದ ಗೆದ್ದರು.

    ಇದನ್ನೂ ಓದಿ: Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

    ಲಕ್ಷ್ಯ ಎರಡನೇ ಗೇಮ್ ನಲ್ಲಿ ವೇಗದ ರ್ಯಾಲಿಗಳ ಆಟ ನಡೆಯಿತು. ಈ ವೇಳೆ ಡಿಫೆನ್ಸ್ ನಲ್ಲಿ ತಮ್ಮ ದೃಢತೆಯನ್ನು ಕಾಯ್ದುಕೊಂಡರು. ದ್ವಿತೀಯಾರ್ಧದ ಮೊದಲಾರ್ಧದಲ್ಲಿ 22ರ ಹರೆಯದ ಆಟಗಾರ್ತಿ 11-4ರ ಮುನ್ನಡೆ ಸಾಧಿಸಿದ್ದರು. ಆಟದ ದ್ವಿತೀಯಾರ್ಧದಲ್ಲಿ ಅದನ್ನು ಸ್ವಲ್ಪ ಸಡಿಲಗೊಂಡಿದ್ದರು. ಬಲವಂತದ ತಪ್ಪುಗಳನ್ನು ಮಾಡಿದರು. ಕರಾಗಿಗೆ 8 ಅಂಕಗಳನ್ನು ಮರಳಿ ಪಡೆಯಲು ಅವಕಾಶ ನೀಡಿದದ ನಂತರ, ಲಕ್ಷ್ಯ ಮತ್ತೊಮ್ಮೆ ತಮ್ಮ ಆಟದ ವೇಗ ಹೆಚ್ಚಿಸಿ 21-12 ರಿಂದ ಮುಗಿಸಿದರು.

    ಲಕ್ಷ್ಯ ಮುಂದಿನ ಪಂದ್ಯದಲ್ಲಿ ಇಂಡೊನೆಷ್ಯಾದ ಜೊನಾಟಥನ್​ ಕ್ರಿಸ್ಟಿ ವಿರುದ್ಧ ಆಡಲಿದ್ದಾರೆ. ಅವರು ಪ್ರಬಲ ಆಟಗಾರನಾಗಿದ್ದು ವಿಶ್ವದ 11ನೇ ರ್ಯಾಂಕ್ ಹೊಂದಿದ್ದಾರೆ.

    Continue Reading

    Latest

    Shravan 2024: ಶ್ರಾವಣ ಮಾಸದಲ್ಲಿ ಯಾವ ಹಬ್ಬ, ಯಾವ ದಿನ? ಈ ತಿಂಗಳ ಮಹತ್ವ ಏನು?

    Shravan 2024: ಶ್ರಾವಣ ಮಾಸ ಬಂದಾಗ…ಆನಂದ ತಂದಾಗ….ಹೌದು, ಶ್ರಾವಣ ಈ ಹೆಸರು ಕೇಳುತ್ತಲೆ ಖುಷಿಯಾಗುತ್ತದೆ. ಆಷಾಢದ ಆಲಸ್ಯ ಕಳೆದು ಹೊಸ ಹುರುಪು ತುಂಬುತ್ತದೆ ಈ ಶ್ರಾವಣ. ಹಬ್ಬಹರಿದಿನಗಳು ಸಾಲು ಸಾಲಾಗಿ ಶುರುವಾಗುತ್ತದೆ. ಮನಸ್ಸು ಕೂಡ ಗರಿಗೆದರುತ್ತದೆ. ಹೆಂಗಳೆಯರಿಗೆ ಈ ಮಾಸವೆಂದರೆ ತುಸು ಪ್ರೀತಿ. ವ್ರತ, ಪೂಜೆ, ಉಪಾವಾಸ ಎಂದೆಲ್ಲಾ ಬ್ಯುಸಿಯಾಗಿಬಿಡುತ್ತಾರೆ.ಅಂದಹಾಗೇ, ಈ ಶ್ರಾವಣ ಮಾಸವನ್ನು ಹೇಗೆಲ್ಲಾ ಆಚರಿಸಲಾಗುತ್ತದೆ, ಇದರ ವಿಶೇಷತೆ ಏನು ಎಂಬುದರ ಕುರಿತ ಮಾಹಿತಿ ಇಲ್ಲಿದೆ ನೋಡಿ.

    VISTARANEWS.COM


    on

    Shravan 2024
    Koo


    ಹಿಂದೂ ಕ್ಯಾಲೆಂಡರ್‌ನ ಪ್ರಕಾರ ಶ್ರಾವಣ ಮಾಸವು ಮಾಸಗಳಲ್ಲಿ (shravan 2024) ಐದನೇಯದಾಗಿದೆ. ಶ್ರವಣ ನಕ್ಷತ್ರ ದಿನದಂದು ಈ ಮಾಸ ಆರಂಭವಾಗುವುದರಿಂದ ಇದನ್ನು ಶ್ರಾವಣ ಮಾಸ (Shravan Masa) ಎಂದು ಕರೆಯುತ್ತಾರೆ. ಈ ಮಾಸ ಹಿಂದೂಗಳಿಗೆ ಬಹಳ ಪವಿತ್ರವಾದ ಹಾಗೂ ವಿಶೇಷವಾದ ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಜನರು ಹೆಚ್ಚಾಗಿ ಶಿವನ ಆರಾಧನೆ ಮಾಡುತ್ತಾರೆ. ಜೊತೆಗೆ ಲಕ್ಷ್ಮಿ,, ಗೌರಿಯ ಪೂಜೆ ಮಾಡಲಾಗುತ್ತದೆ. ಹಾಗೇ ಈ ಮಾಸದಲ್ಲಿ ಹಲವು ಹಬ್ಬ ಹರಿದಿನಗಳನ್ನು, ವ್ರತ ಉಪವಾಸಗಳನ್ನು ಜನರು ಆಚರಿಸುತ್ತಾರೆ. ಹಾಗಾಗಿ ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಅಲ್ಲದೇ ಶ್ರಾವಣ ಮಾಸ ಮಹಿಳೆಯರಿಗೆ ಬಹಳ ಪ್ರಿಯವಾದ ಮಾಸ. ಯಾಕೆಂದರೆ ಮಹಿಳೆಯರಿಗೆ ದೇವರ ಪೂಜೆ ಮಾಡಲು ಇದು ಬಹಳ ಶ್ರೇಷ್ಠವಾದ ಮಾಸವಾಗಿದೆ. ಮತ್ತು ಈ ಮಾಸದಲ್ಲಿ ಮಾಡಿದ ಪೂಜೆಗಳಿಗೆ ಬಹಳ ಬೇಗ ಫಲ ದೊರೆಯುತ್ತದೆಯಂತೆ.

    Shravan Masa
    Shravan Masa

    ಶ್ರಾವಣ ಮಾಸ ಶುರು ಯಾವಾಗ?

    ಆಷಾಢ ಮಾಸ ಮುಗಿದ ನಂತರ ಅಂದರೆ ಭೀಮನ ಅಮಾವಾಸ್ಯೆ ನಂತರ ಶ್ರಾವಣ ಮಾಸ ಪ್ರಾರಂಭವಾಗುತ್ತದೆ. ಅಂದರೆ ಹಿಂದೂ ಕ್ಯಾಲೆಂಡರ್‌ನಲ್ಲಿ 2024ರಲ್ಲಿ ಶ್ರಾವಣ ಮಾಸ ಆಗಸ್ಟ್ 5ರ ಸೋಮವಾರದಂದು ಪ್ರಾರಂಭವಾಗಿ ಸೆಪ್ಟೆಂಬರ್ 3, 2024 ಮಂಗಳವಾರದ ಅಮಾವಾಸ್ಯೆಯ ತಿಥಿಯಂದು ಕೊನೆಗೊಳ್ಳುತ್ತದೆ. ಮರುದಿನ ಭಾದ್ರಪದ ಮಾಸ ಆರಂಭವಾಗುತ್ತದೆ.

    ಶ್ರಾವಣ ಮಾಸದ ವಿಶೇಷತೆ ಏನು?

    ಶ್ರಾವಣ ಮಾಸದಲ್ಲಿ ಬರುವ ಎಲ್ಲಾ ದಿನಗಳು ಬಹಳ ಶುಭವೇ ಆಗಿರುತ್ತದೆ. ಈ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸದಲ್ಲಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳಿಗೆ ಶ್ರೇಷ್ಠವಾಗಿದೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ. ಜೊತೆಗೆ ಈ ಮಾಸದಲ್ಲಿ ಹಬ್ಬಗಳು ಸಾಲುಸಾಲಾಗಿ ಬರುತ್ತವೆ.

    Shravan Masa
    Shravan Masa

    ಶ್ರಾವಣದಲ್ಲಿ ಶಿವನ ಆರಾಧನೆ

    ಇನ್ನು ಶ್ರಾವಣ ಮಾಸದಲ್ಲಿ ಶಿವನ ಆರಾಧನೆಗೆ ಹೆಚ್ಚು ಪ್ರಾಮುಖ್ಯತೆ ಇರುವುದರಿಂದ ಶ್ರಾವಣ ಮಾಸದ ಪ್ರತಿ ಸೋಮವಾರವನ್ನು ಶ್ರಾವಣ ಸೋಮವಾರ ಎಂದೇ ಕರೆಯುತ್ತಾರೆ. ಈ ಮಾಸದಲ್ಲಿ ಶಿವನಿಗೆ ವಿವಿಧ ರೀತಿಯ ಅಭಿಷೇಕಗಳನ್ನು ಮಾಡಲಾಗುತ್ತದೆ. ಯಾಕೆಂದರೆ ಸಮುದ್ರ ಮಂಥನ ನಡೆದಿದ್ದು ಶ್ರಾವಣ ಮಾಸದಲ್ಲಿ. ಆಗ ಈ ಸಮಯದಲ್ಲಿ ಹೊರಗೆ ಬಂದ ಹಾಲಾಹಲವನ್ನು ಶಿವನು ಕುಡಿಯುತ್ತಾನೆ ಎಂಬುದು ಎಲ್ಲರಿಗೂ ತಿಳಿದಿದೆ. ಈ ಹಾಲಾಹಲದ ತಾಪವನ್ನು ಶಿವನಿಗೆ ಸಹಿಸಲು ಸಾಧ್ಯವಾಗದ ಕಾರಣ ದೇಹವನ್ನು ತಂಪಾಗಿಸಲು ಚಂದ್ರನನ್ನು ಹಾಗೂ ಗಂಗೆಯನ್ನು ಶಿರದಲ್ಲಿ ಧರಿಸುತ್ತಾನೆ. ಹಾಗಾಗಿ ಶ್ರಾವಣ ಮಾಸದಲ್ಲಿ ಶಿವನನ್ನು ತಂಪಾಗಿಲು ಅಭಿಷೇಕ ಮಾಡಲಾಗುತ್ತದೆ. ಇದರಿಂದ ಶಿವನ ಕೃಪೆ ದೊರೆಯುತ್ತದೆ ಎಂಬ ನಂಬಿಕೆ ಇದೆ.

    ಶ್ರಾವಣ ಮಾಸದಲ್ಲಿ ಆಚರಿಸುವ ಹಬ್ಬಗಳು

    • ಈ ಮಾಸದಲ್ಲಿ ನಾಗರ ಪಂಚಮಿ, ವರಮಹಾಲಕ್ಷ್ಮಿ ವ್ರತ, ಮಂಗಳ ಗೌರಿ ವ್ರತ, ರಕ್ಷಾಬಂಧನ, ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಮುಂತಾದ ಹಬ್ಬಗಳನ್ನು ಆಚರಿಸಲಾಗುತ್ತದೆ.
    Shravan Masa
    Shravan Masa
    • ಮಂಗಳಗೌರಿ ವ್ರತ : ಶ್ರಾವಣ ಮಾಸದ ಮೊದಲಿಗೆ ಮಂಗಳವಾರ ಬರುವುದರಿಂದ ಮಂಗಳ ಗೌರಿಯ ವ್ರತ ಮಾಡುತ್ತಾರೆ. ಇದನ್ನು ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ಮಾಡಿದರೆ ಅವರ ವೈವಾಹಿಕ ಜೀವನ ಉತ್ತಮವಾಗಿರುತ್ತದೆಯಂತೆ. ಹಾಗಾಗಿ ಶ್ರಾವಣ ಮಾಸದಲ್ಲಿ ಬರುವ ಎಲ್ಲಾ ಮಂಗಳವಾರದಂದು ಮಂಗಳಗೌರಿ ವ್ರತ ಆಚರಿಸಿದರೆ ಒಳ್ಳೆಯದು.
    Shravan Masa
    Shravan Masa
    • ನಾಗರ ಪಂಚಮಿ: ಶ್ರಾವಣ ಮಾಸದ ಪ್ರಾರಂಭವಾದ 5ನೇ ದಿನಕ್ಕೆ ಅಂದರೆ ಆಗಸ್ಟ್ 9ರಂದು ನಾಗರ ಪಂಚಮಿ ಹಬ್ಬ ಬರಲಿದೆ. ಈ ದಿನ ಜನರು ತಾವು ನಂಬಿದಂತಹ ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ.
    Shravan Masa
    Shravan Masa
    • ವರಮಹಾಲಕ್ಷ್ಮಿ ವ್ರತ : ಶ್ರಾವಣ ಅಮಾವಾಸ್ಯೆಯ 2ನೇ ಶುಕ್ರವಾರದಂದು ಅಂದರೆ ಆಗಸ್ಟ್ 16ರಂದು ಆಚರಿಸಲಾಗುತ್ತದೆ. ಈ ದಿನ ಮಹಿಳೆಯರು ಲಕ್ಷ್ಮಿದೇವಿಯನ್ನು ಕಳಸದ ಮೇಲೆ ಪ್ರತಿಷ್ಠಾಪನೆ ಮಾಡಿ ಜರಿ ಸೀರೆ ಉಡಿಸಿ, ಧನ, ಚಿನ್ನದ ಆಭರಣಗಳಿಂದ ದೇವಿಯನ್ನು ಅಲಂಕರಿಸಿ ಪೂಜೆ ಮಾಡಿ ವರವನ್ನು ಬೇಡಿಕೊಳ್ಳುತ್ತಾರೆ.
    Shravan Masa
    Shravan Masa
    • ಸಂಪತ್ ಗೌರಿ ವ್ರತ : ಇದನ್ನು ಶ್ರಾವಣ ಮಾಸದಲ್ಲಿ ಬರುವ ಪ್ರತಿ ಶುಕ್ರವಾರದಂದು ಆಚರಿಸಲಾಗುತ್ತದೆ. ಈ ದಿನ ಸಂಪತ್ತಿನ ದೇವತೆ ಲಕ್ಷ್ಮಿದೇವಿಯನ್ನು ಪೂಜಿಸಲಾಗುತ್ತದೆ.
    Shravan Masa
    Shravan Masa
    • ಶ್ರಾವಣ ಶನಿವಾರ: ಈ ದಿನ ಲಕ್ಷ್ಮಿ ಮತ್ತು ವೆಂಕಟೇಶ್ವರನನ್ನು ಆರಾಧಿಸುತ್ತಾರೆ. ಹಾಗೇ ಕೆಲವರು ಶ್ರಾವಣ ಶನಿವಾರದಂದು ಉಪವಾಸ ವ್ರತವನ್ನು ಆಚರಿಸುತ್ತಾರೆ. ಹಾಗೇ ಈ ದಿನ ಆಂಜನೇಯ ಸ್ವಾಮಿಯ ಪೂಜೆ ಹಾಗೂ ಶನಿ ಶಾಂತಿ ಪೂಜೆಗೆ ಬಹಳ ಉತ್ತಮ ಎನ್ನಲಾಗಿದೆ.
    Shravan Masa
    Shravan Masa
    • ರಕ್ಷಾ ಬಂಧನ : ಶ್ರಾವಣ ಮಾಸದ ಹುಣ್ಣಿಮೆಯಂದು ರಕ್ಷಾಬಂಧನವನ್ನು ಆಚರಿಸುತ್ತಾರೆ. ಇದನ್ನು ನೂಲು ಹುಣ್ಣಿಮೆಯಂದು ಕರೆಯುತ್ತಾರೆ. ಈ ದಿನ ಸಹೋದರಿಯರು ತಮ್ಮ ಸಹೋದರನ ಕೈಗೆ ರಕ್ಷಾ ಬಂಧನವನ್ನು ಕಟ್ಟಿ ಒಳಿತಾಗಲಿ ಎಂದು ಹಾರೈಸುತ್ತಾರೆ. ಮತ್ತು ಉಪನಯನವಾದವರು ಈ ದಿನ ಉಪಕರ್ಮವನ್ನು ಆಚರಿಸಬೇಕು. ಅಂದರೆ ಜನೀವಾರವನ್ನು ಬದಲಾಯಿಸಿ ಹೊಸ ಜನೀವಾರವನ್ನು ಧರಿಸಬೇಕು. ಈ ವರ್ಷ ಆಗಸ್ಟ್ 19ರಂದು ರಕ್ಷಾ ಬಂಧನವನ್ನು ಆಚರಿಸುತ್ತಾರೆ.
    Shravan Masa
    Shravan Masa
    • ಶ್ರೀಕೃಷ್ಣ ಜನ್ಮಾಷ್ಟಮಿ: ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಮಹಾವಿಷ್ಣು ಕಂಸನ ಸಂಹಾರಕ್ಕಾಗಿ ಶ್ರೀಕೃಷ್ಣನ ಅವತಾರದಲ್ಲಿ ಜನ್ಮ ತಾಳುತ್ತಾನೆ. ಹಾಗಾಗಿ ಈ ವರ್ಷ ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ.

    ಇದನ್ನೂ ಓದಿ: ಇದರ ಮಹತ್ವ ತಿಳಿದರೆ ನೀವು ಇನ್ನೆಂದೂ ಕರಿ ಬೇವಿನ ಎಲೆಯನ್ನು ಪಕ್ಕಕ್ಕೆ ಎತ್ತಿಡುವುದಿಲ್ಲ!

    ಈ ಎಲ್ಲಾ ಶುಭ ದಿನಗಳು ಮತ್ತು ಹಬ್ಬಗಳಿಂದ ಶ್ರಾವಣ ಮಾಸ ತುಂಬಾ ವಿಶೇಷವಾದ ಮಾಸವಾಗಿದೆ. ಈ ಮಾಸದಲ್ಲಿ ಎಲ್ಲರೂ ಶ್ರದ್ಧೆ, ಭಕ್ತಿಯಿಂದ ದೇವರ ಆರಾಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರೆ ತಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಳ್ಳಬಹುದು. ಹಾಗಾಗಿ ಈ ಶ್ರಾವಣ ಮಾಸವನ್ನು ಎಲ್ಲರೂ ಸಂತೋಷದಿಂದ ಬರಮಾಡಿಕೊಳ್ಳಿ.

    Continue Reading

    ಕ್ರೀಡೆ

    Paris Olympics 2024 : ಭಾರತಕ್ಕೆ ಶೂಟಿಂಗ್​ನಲ್ಲಿ ಕಂಚಿನ ಪದಕ ಜಸ್ಟ್​ ಮಿಸ್​!

    Paris Olympics 2024 :

    VISTARANEWS.COM


    on

    Paris Olympics 2024
    Koo

    ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ 2024ರಲ್ಲಿ (Paris Olympics 2024) ಸೋಮವಾರ ನಡೆದ ಪುರುಷರ 10 ಮೀಟರ್ ಏರ್ ರೈಫಲ್​ ಸ್ಪರ್ಧೆಯಲ್ಲಿ ಅರ್ಜುನ್ ಬಬುಟಾ 208.4 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಭಾರತಕ್ಕೆ ಕಂಚಿನ ಪದಕ ಜಸ್ಟ್ ಮಿಸ್ ಆಗಿದೆ. ಅವರಿಗಿಂತ ಮುಂದಿರುವ ಕ್ರೊಯೇಷಿಯಾದ ಮಿರಾನ್ ಮಾರಿಸಿಕ್ ಒಟ್ಟು 230 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದರು. ಚೀನಾದ ಶೆಂಗ್ ಲಿಹಾವೊ 252.2 ಅಂಕಗಳೊಂದಿಗೆ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದರೆ, ಸ್ವೀಡನ್ನ ವಿಕ್ಟರ್ ಲಿಂಡ್ಗ್ರೆನ್ 251.4 ಅಂಕಗಳೊಂದಿಗೆ ಬೆಳ್ಳಿ ಗೆದ್ದರು.

    ಬಬುಟಾ ಆರಂಭಿಕ ಶಾಟ್​ಗಳಲ್ಲಿ ಅಗ್ರ ಮೂರಲ್ಲಿ ಸ್ಥಾನ ಪಡೆದಿದ್ದರು. ಆದರೆ ಅಂತಿಮ ಶಾಟ್​ನಲ್ಲಿ 9.5 ಅಂಕಗಳನ್ನು ಗಳಿಸಿದ ಕಾರಣ ಮೂರನೇ ಸ್ಥಾನ ಉಳಿಸಿಕೊಳ್ಳುವುದಕ್ಕೆ ವಿಫಲಗೊಂಡರು. ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್​​ನಲ್ಲಿ ರಮಿತಾ ಜಿಂದಾಲ್ ಏಳನೇ ಸ್ಥಾನ ಪಡೆದ ನಂತರ ಅವರು ಪದಕವನ್ನು ಕಳೆದುಕೊಂಡ ಎರಡನೇ ಭಾರತೀಯ ಶೂಟರ್ ಆಗಿದ್ದಾರೆ. 60 ಶಾಟ್​ಗಳ ಅರ್ಹತಾ ಸರಣಿಯಲ್ಲಿ, ಬಾಬುಟಾ 630.1 ಅಂಕಗಳನ್ನು ಗಳಿಸುವ ಏಳನೇ ಸ್ಥಾನ ಪಡೆದಿದ್ದರು. ಈ ಮೂಲಕ ಕ್ರೀಡಾಕೂಟದಲ್ಲಿ ಶೂಟಿಂಗ್ ಈವೆಂಟ್ ಫೈನಲ್​​ಗೆ ಅರ್ಹತೆ ಪಡೆದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

    ಅರ್ಜುನ್ ಖೇಲೋ ಇಂಡಿಯಾ ವಿದ್ಯಾರ್ಥಿವೇತನದ ಕ್ರೀಡಾಪಟು ಮತ್ತು ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್ ನಿಂದ ಬೆಳೆದು ಬಂದವರು. ಅವರು ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ಸಣ್ಣ ಹಳ್ಳಿಯಾದ ಪಂಜಾಬ್​​ನ ಜಲಾಲಾಬಾದ್ ಪ್ರದೇಶದ ಮಧ್ಯಮ ವರ್ಗದ ಕುಟುಂಬದವರು. ಚಂಡೀಗಢಕ್ಕೆ ತೆರಳುವ ಮೊದಲು ಅರ್ಜುನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮ್ಮ ಊರಿನಲ್ಲಿ ಪೂರ್ಣಗೊಳಿಸಿದ್ದರು. ಅವರ ತಂದೆ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಂತರ ಅವರು ಚಂಡೀಗಢದ ಡಿಎವಿ ಕಾಲೇಜಿನಲ್ಲಿ ಬಿಎ ಆನರ್ಸ್ ಪದವಿ ಪಡೆದುಕೊಂಡಿದ್ದಾರೆ.

    ಅರ್ಜುನ್ ಅವರ ಶೂಟಿಂಗ್ ಆಸಕ್ತಿ ಈ ಕ್ರೀಡೆಯ ಯಾವುದೇ ಪೂರ್ವ ಜ್ಞಾನವಿಲ್ಲದೆ ಪ್ರಾರಂಭಗೊಂಡಿತ್ತು. ಅವರು ಮತ್ತು ಅವರ ತಂದೆ ನೀರಜ್ ಬಬುಟಾ ಅವರು ಚಂಡೀಗಢದಲ್ಲಿ ಭಾರತೀಯ ಒಲಿಂಪಿಕ್ ಶೂಟರ್ ಅಭಿನವ್ ಬಿಂದ್ರಾ ಅವರಿಂದ ಸಲಹೆ ಪಡೆದುಕೊಂಡಿದ್ದರು. 2013 ರಲ್ಲಿ, ಬಿಂದ್ರಾ ಅರ್ಜುನ್ ಅವರನ್ನು ತಮ್ಮ ತರಬೇತುದಾರ ಕರ್ನಲ್ ಜೆ.ಎಸ್.ಧಿಲ್ಲಾನ್ ಅವರಿಗೆ ಪರಿಚಯಿಸಿದ್ದರು. ಅವರು ಅರ್ಜುನ್ ಗೆ ರೈಫಲ್ ಶೂಟಿಂಗ್ ತೆಗೆದುಕೊಳ್ಳಲು ಶಿಫಾರಸು ಮಾಡಿದ್ದರು. ಕೋಚ್ ಧಿಲ್ಲಾನ್ ಅವರ ಸಲಹೆಯನ್ನು ಅನುಸರಿಸಿ ಅರ್ಜುನ್ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ತರಬೇತಿ ಪ್ರಾರಂಭಿಸಿದ್ದರು.

    2005ರಲ್ಲಿ, ಅವರು ರಾಷ್ಟ್ರೀಯ ಶೂಟಿಂಗ್ ತಂಡಕ್ಕೆ ಸೇರಿದ್ದರು. ರಾಷ್ಟ್ರೀಯ ತರಬೇತುದಾರ ದೀಪಾಲಿ ದೇಶಪಾಂಡೆ ಅವರ ಅಡಿಯಲ್ಲಿ ತರಬೇತಿ ಪಡೆದಿದ್ದರು. ತರಬೇತಿಗಾಗಿ ಅವರು ದಿನಕ್ಕೆ ೧೦ ಗಂಟೆ ಮೀಸಲಿಡುತ್ತಿದ್ದರು. 2016ರಲ್ಲಿ, ಅವರು ಜೂನಿಯರ್ ರಾಷ್ಟ್ರೀಯ ರೈಫಲ್ ಶೂಟಿಂಗ್ ತಂಡಕ್ಕೆ ಆಯ್ಕೆಯಾಗಿದ್ದರು. ಇದು ಅಂತರರಾಷ್ಟ್ರೀಯ ಪಂದ್ಯಾವಳಿಗಳಿಗೆ ವೇದಿಕೆಯನ್ನು ಒದಗಿಸಿತು.

    ಇದನ್ನೂ ಓದಿ: Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

    2016 ರಲ್ಲಿ ಜೆಕ್ ಗಣರಾಜ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅರ್ಜುನ್ ಅರ್ಹತಾ ಸುತ್ತಿನಲ್ಲಿ 632.4 ಅಂಕಗಳನ್ನು ಗಳಿಸಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಸ್ಕೋರ್ ಅನ್ನು ಸಾಧಿಸಿದ್ದರು. ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿದರು ಮತ್ತು ನಿಯಮಿತವಾಗಿ 620 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದರು. 2018 ರಲ್ಲಿ ಬೆನ್ನು ನೋವು ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೂ, ಅರ್ಜುನ್ ದೇಶೀಯ ಸರ್ಕೀಟ್​ನಲ್ಲಿ ಸ್ಪರ್ಧಿಸುವುದನ್ನು ಮುಂದುವರಿಸಿದ್ದರು. ಅದೇ ರೀತಿ ಖೇಲೋ ಇಂಡಿಯಾ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗೆದ್ದರು. 2022 ರಲ್ಲಿ ಬಲವಾದ ಪುನರಾಗಮನ ಮಾಡಿ ವಿಶ್ವ ಪಂದ್ಯಾವಳಿಗಳಲ್ಲಿ ಸತತ ಪದಕಗಳನ್ನು ಗೆದ್ದಿದ್ದರು.

    Continue Reading
    Advertisement
    veterinary officer recruitment
    ಪ್ರಮುಖ ಸುದ್ದಿ3 mins ago

    Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ

    Parisl Olympics 2024
    ಪ್ರಮುಖ ಸುದ್ದಿ15 mins ago

    Paris Olympics 2024 : ಮತ್ತೊಂದು ಗೆಲವು ಕಂಡ ಷಟ್ಲರ್ ಲಕ್ಷ್ಯ ಸೇನ್​

    Bollywood Divorce Case
    Latest21 mins ago

    Bollywood Divorce Case: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

    Rahul Gandhi
    ದೇಶ27 mins ago

    Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

    Star Shirt Saree Fashion
    ಫ್ಯಾಷನ್33 mins ago

    Star Shirt Saree Fashion: ಏನಿದು ಶರ್ಟ್‌ ಸೀರೆ? ಹೊಸ ಟ್ರೆಂಡ್‌ ಬಗ್ಗೆ ನಟಿ ತಾರಾ ಏನಂತಾರೆ?

    Shravan 2024
    Latest37 mins ago

    Shravan 2024: ಶ್ರಾವಣ ಮಾಸದಲ್ಲಿ ಯಾವ ಹಬ್ಬ, ಯಾವ ದಿನ? ಈ ತಿಂಗಳ ಮಹತ್ವ ಏನು?

    Fraud Case
    Latest58 mins ago

    Fraud Case: 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಚಿನ್ನಾಭರಣ ಎಗರಿಸಿದ್ದ ವಂಚಕ ಪೊಲೀಸ್‌ ಬಲೆಗೆ ಬಿದ್ದಿದ್ದು ಹೇಗೆ?

    Paris Olympics 2024
    ಕ್ರೀಡೆ2 hours ago

    Paris Olympics 2024 : ಭಾರತಕ್ಕೆ ಶೂಟಿಂಗ್​ನಲ್ಲಿ ಕಂಚಿನ ಪದಕ ಜಸ್ಟ್​ ಮಿಸ್​!

    Rajendra Nagara tragedy
    ದೇಶ2 hours ago

    Rajendra Nagar Tragedy: ನೆಲಮಾಳಿಗೆ ಗೇಟ್‌ಗೆ SUV ಕಾರು ಡಿಕ್ಕಿ ಹೊಡೆದಿದ್ದ ಚಾಲಕ ಅರೆಸ್ಟ್‌- ವಿಡಿಯೋ ವೈರಲ್‌

    Mosquito Repellents
    ಆರೋಗ್ಯ2 hours ago

    Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka Rain
    ಮಳೆ3 hours ago

    Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

    Elephant combing Makna elephant captured near Bannerghatta
    ಬೆಂಗಳೂರು ಗ್ರಾಮಾಂತರ4 hours ago

    Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

    karnataka rain
    ಮಳೆ7 hours ago

    Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

    Tungabhadra Dam
    ಕೊಪ್ಪಳ1 day ago

    Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

    Elephant attack
    ಮಳೆ1 day ago

    Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

    karnataka Rain
    ಮಳೆ1 day ago

    Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

    karnataka Rain
    ಮಳೆ1 day ago

    Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

    Karnataka weather Forecast
    ಮಳೆ2 days ago

    Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

    ramanagara news
    ರಾಮನಗರ2 days ago

    Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

    karnataka rain
    ಮಳೆ2 days ago

    Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

    ಟ್ರೆಂಡಿಂಗ್‌