Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ? - Vistara News

ಕ್ರಿಕೆಟ್

Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ?

ಕ್ರಿಕೆಟ್ ಆಡುವುದರ ಹೊರತಾಗಿ ವಿಶ್ವದ ಶ್ರೀಮಂತ ಕ್ರಿಕೆಟಿಗರು ಕೆಲವು ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಮತ್ತು ಹೆಚ್ಚುವರಿ ಆದಾಯವನ್ನೂ ಗಳಿಸುತ್ತಾರೆ. ಅದು ಅವರ ನಿವ್ವಳ ಮೌಲ್ಯವನ್ನು ಹೆಚ್ಚಿಸುತ್ತದೆ. ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ (Richest Cricketers) ಭಾರತದ ಮೂವರು ಕ್ರಿಕೆಟಿಗರೂ ಸೇರಿದ್ದಾರೆ. ವಿಶ್ವದ ಐವರು ಶ್ರೀಮಂತ ಕ್ರಿಕೆಟಿಗರ ಸಂಪತ್ತಿನ ಮಾಹಿತಿ ಇಲ್ಲಿದೆ.

VISTARANEWS.COM


on

Richest Cricketers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ (most popular sports) ಒಂದಾಗಿರುವ ಕ್ರಿಕೆಟ್ (cricket) ತನ್ನ ಅಪಾರ ಅಭಿಮಾನಿಗಳ ಕಾರಣದಿಂದಾಗಿ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಆದಾಯ ಗಳಿಸುವ ಕ್ಷೇತ್ರವಾಗಿ ಬೆಳೆದಿದೆ. ಇದರಲ್ಲಿ ಕೆಲವು ಆಟಗಾರರು (Richest Cricketers) ಸಾಕಷ್ಟು ಹೆಸರು ಮಾತ್ರವಲ್ಲ ಸಂಪತ್ತನ್ನು ಗಳಿಸಿದ್ದಾರೆ. ಪ್ರಪಂಚದಾದ್ಯಂತದ ಅಭಿಮಾನಿಗಳಲ್ಲಿ ಅಪಾರ ಜನಪ್ರಿಯತೆಯನ್ನು ಹೊಂದಿರುವ ಹಲವಾರು ಕ್ರಿಕೆಟಿಗರಲ್ಲಿ ಕೆಲವರು ಮಾತ್ರ ವಿಶ್ವದ ಶ್ರೀಮಂತ ಕ್ರಿಕೆಟಿಗರಿಗಾಗಿ (Cricketers) ಗುರುತಿಸಿಕೊಂಡಿದ್ದಾರೆ.

ಕ್ರಿಕೆಟ್ ಆಡುವುದರ ಹೊರತಾಗಿ ವಿಶ್ವದ ಶ್ರೀಮಂತ ಕ್ರಿಕೆಟಿಗರು ಕೆಲವು ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಮತ್ತು ಹೆಚ್ಚುವರಿ ಆದಾಯವನ್ನೂ ಗಳಿಸುತ್ತಾರೆ. ಅದು ಅವರ ನಿವ್ವಳ ಮೌಲ್ಯವನ್ನು ಹೆಚ್ಚಿಸುತ್ತದೆ. ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಭಾರತದ ಮೂವರು ಕ್ರಿಕೆಟಿಗರೂ ಸೇರಿದ್ದಾರೆ.

ಕೆಲವು ಕ್ರಿಕೆಟ್ ಆಟಗಾರರು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ದೊಡ್ಡ ಹೆಸರು, ಆದಾಯ ಗಳಿಸಿದ್ದರೆ ಇನ್ನು ಕೆಲವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್), ಬಿಗ್ ಬ್ಯಾಷ್ ಲೀಗ್ (ಬಿಬಿಎಲ್), ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಮತ್ತು ಮತ್ತೆ ಅನೇಕರು ಕ್ರಿಕೆಟ್ ಲೀಗ್‌ಗಳಲ್ಲಿ ದುಬಾರಿ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದರಲ್ಲಿ ವಿಶ್ವದ ಅಗ್ರ ಐದು ಶ್ರೀಮಂತ ಕ್ರಿಕೆಟಿಗರಾಗಿ ಗುರುತಿಸಿಕೊಂಡಿದ್ದಾರೆ. ಅವರು ಯಾರು, ಅವರ ಸಂಪತ್ತು ಎಷ್ಟಿದೆ ಗೊತ್ತೇ?

ವಿಶ್ವದ ಶ್ರೀಮಂತ ಕ್ರಿಕೆಟಿಗರ ಪಟ್ಟಿಯಲ್ಲಿ ಭಾರತದ ಮೂವರು ಕ್ರಿಕೆಟಿಗರು ಮೊದಲನೇ ಸ್ಥಾನದಲ್ಲಿದ್ದಾರೆ. ಅದರಲ್ಲೂ ಕ್ರಿಕೆಟ್ ದೇವರು ಸಚ್ಚಿನ್ ತೆಂಡೂಲ್ಕರ್ ವಿಶ್ವದ ಅತಿ ಹೆಚ್ಚು ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ.

Richest Cricketers
Richest Cricketers


1. ಸಚಿನ್ ತೆಂಡೂಲ್ಕರ್

ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ವಿಶ್ವದ ಸಾರ್ವಕಾಲಿಕ ಶ್ರೀಮಂತ ಕ್ರಿಕೆಟಿಗ. ಭಾರತೀಯ ಶ್ರೇಷ್ಠ ಕ್ರಿಕೆಟಿಗರಾಗಿರುವ ಇವರು ಸುಮಾರು 172 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಇವರ ಸಂಪತ್ತಿನ ಮೌಲ್ಯ ಸುಮಾರು 1,440 ಕೋಟಿ ರೂ.

Richest Cricketers
Richest Cricketers


2. ಎಂ.ಎಸ್. ಧೋನಿ

ಭಾರತದ ಮಾಜಿ ನಾಯಕ ಎಂ.ಎಸ್. ಧೋನಿ ವಿಶ್ವದ ಎರಡನೇ ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ. ಹಲವು ದೊಡ್ಡ ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಗಳಿಸಿದ್ದಾರೆ. ವಿಕೆಟ್‌ಕೀಪರ್-ಬ್ಯಾಟರ್ ಆಗಿ ಸುಮಾರು 127 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದು, ಇವರ ಸಂಪತ್ತಿನ ಮೌಲ್ಯ 1,063 ಕೋಟಿ ರೂ.

Richest Cricketers
Richest Cricketers


3. ವಿರಾಟ್ ಕೊಹ್ಲಿ

ಸಕ್ರಿಯ ಆಟಗಾರರ ಪೈಕಿ ಶ್ರೀಮಂತ ಕ್ರಿಕೆಟಿಗ, ಸ್ಟಾರ್ ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕ್ರಿಕೆಟ್ ಆಡುವುದರ ಹೊರತಾಗಿ ಕೊಹ್ಲಿ ಹಲವು ಬ್ರ್ಯಾಂಡ್‌ಗಳಲ್ಲಿ ಹೆಸರನ್ನು ಮಾಡಿದ್ದಾರೆ. ಸುಮಾರು 122 ಮಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿರುವ ಇವರ ಸಂಪತ್ತಿನ ಮೌಲ್ಯ 1,021 ಕೋಟಿ ರೂ.

Richest Cricketers
Richest Cricketers


4. ರಿಕಿ ಪಾಂಟಿಂಗ್

ರಿಕಿ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಇವರು ಆಸ್ಟ್ರೇಲಿಯಾ ತಂಡಕ್ಕೆ ಎರಡು ಒಡಿಐ ವಿಶ್ವಕಪ್ ಪ್ರಶಸ್ತಿಗಳು ಮತ್ತು ಎರಡು ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆಲ್ಲುವಲ್ಲಿ ಕಾರಣರಾದರು. ಸುಮಾರು 100 ಮಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ವಿಶ್ವದ ನಾಲ್ಕನೇ ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ. ಇವರ ಸಂಪತ್ತಿನ ಮೌಲ್ಯ ಸುಮಾರು 837 ಕೋಟಿ ರೂ.

ಇದನ್ನೂ ಓದಿ: Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

Richest Cricketers
Richest Cricketers


5. ಜಾಕ್ವೆಸ್ ಕಾಲಿಸ್

ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ, ವಿಶ್ವದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಜಾಕ್ವೆಸ್ ಕಾಲಿಸ್ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ಇವರು ಸುಮಾರು 586 ಕೋಟಿ ಮೊತ್ತದ ಸಂಪತ್ತನ್ನು ಹೊಂದಿದ್ದು, ಸುಮಾರು 70 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs SL : ಭಾರತ ವಿರುದ್ಧದ ಏಕ ದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಹೊಸ ನಾಯಕನ ಘೋಷಣೆ

IND vs SL: ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಪ್ರಭಾವಶಾಲಿ ಆರಂಭ ನೀಡಿದ್ದ 24 ವರ್ಷದ ನಿಶಾನ್ ಮಧುಶಂಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಡಿರುವ 8 ಟೆಸ್ಟ್ ಪಂದ್ಯಗಳಲ್ಲಿ 42.07ರ ಸರಾಸರಿಯಲ್ಲಿ ರನ್​ ಬಾರಿಸಿದ್ದಾರೆ.ರ ಬ್ರಾಂಕೈಟಿಸ್ ಮತ್ತು ಉಸಿರಾಟದ ಸೋಂಕಿನಿಂದಾಗಿ ಟಿ 20 ಐ ಸರಣಿಯಿಂದ ಹೊರಗುಳಿದಿದ್ದ ದುಷ್ಮಂತ ಚಮೀರಾ ಅವರು ಪ್ರವಾಸದ ಏಕದಿನ ಹಂತದಿಂದಲೂ ಹೊರಗುಳಿಯಲಿದ್ದಾರೆ.

VISTARANEWS.COM


on

IND vs SL
Koo

ಬೆಂಗಳೂರು ಪ್ರವಾಸಿ ಭಾರತ ವಿರುದ್ಧದ ಮೂರು ಪಂದ್ಯಗಳ ಏಕ ದಿನ ಸರಣಿಗೆ (IND vs SL) 16 ಸದಸ್ಯರ ಶ್ರೀಲಂಕಾ ತಂಡ ಮಂಗಳವಾರ ಪ್ರಕಟಗೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಆಗಸ್ಟ್ 2 ರಿಂದ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಟಿ 20 ಐ ಸರಣಿಯನ್ನು ಕಳೆದುಕೊಂಡ ನಂತರ ಶ್ರೀಲಂಕಾ ಏಕದಿನ ಪಂದ್ಯಗಳಲ್ಲಿ ಪುನರಾಗಮನ ಮಾಡುವ ಗುರಿ ಹೊಂದಿದೆ. ಏತನ್ಮಧ್ಯೆ, ಚರಿತ್ ಅಸಲಂಕಾ ತಂಡವನ್ನು ಮುನ್ನಡೆಸಲಿದ್ದಾರೆ.

ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಪ್ರಭಾವಶಾಲಿ ಆರಂಭ ನೀಡಿದ್ದ 24 ವರ್ಷದ ನಿಶಾನ್ ಮಧುಶಂಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಡಿರುವ 8 ಟೆಸ್ಟ್ ಪಂದ್ಯಗಳಲ್ಲಿ 42.07ರ ಸರಾಸರಿಯಲ್ಲಿ ರನ್​ ಬಾರಿಸಿದ್ದಾರೆ.ರ ಬ್ರಾಂಕೈಟಿಸ್ ಮತ್ತು ಉಸಿರಾಟದ ಸೋಂಕಿನಿಂದಾಗಿ ಟಿ 20 ಐ ಸರಣಿಯಿಂದ ಹೊರಗುಳಿದಿದ್ದ ದುಷ್ಮಂತ ಚಮೀರಾ ಅವರು ಪ್ರವಾಸದ ಏಕದಿನ ಹಂತದಿಂದಲೂ ಹೊರಗುಳಿಯಲಿದ್ದಾರೆ.

ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಮುಂಚಿತವಾಗಿ ಆಡಲು ಸಜ್ಜಾಗಿರುವ ಆರು ಏಕದಿನ ಪಂದ್ಯಗಳಲ್ಲಿ ಮೂರು ಪಂದ್ಯಗಳ ಈ ಸರಣಿಯು ಭಾರತಕ್ಕೆ ಪ್ರಮುಖ ಮಹತ್ವದ್ದಾಗಿದೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ಈ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದು 2023 ರ ವಿಶ್ವಕಪ್ ಫೈನಲ್ ನಂತರ ಏಕದಿನ ಪಂದ್ಯಗಳಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದೆ. ಈ ಸರಣಿಯು ಶ್ರೇಯಸ್ ಅಯ್ಯರ್ ತಮ್ಮ ಕೇಂದ್ರ ಒಪ್ಪಂದವನ್ನು ಕಳೆದುಕೊಂಡ ನಂತರ ಭಾರತೀಯ ತಂಡಕ್ಕೆ ಮರಳಿದ್ದಾರೆ.

ಇದನ್ನೂ ಓದಿ: Neeraj Chopra : ನಮಸ್ಕಾರ ಪ್ಯಾರಿಸ್​​; ಒಲಿಂಪಿಕ್ಸ್​ ಕ್ರೀಡಾಗ್ರಾಮ ತಲುಪಿದ ಚಿನ್ನದ ಹುಡುಗ ನೀರಜ್ ಚೋಪ್ರಾ

ರಿಯಾನ್ ಪರಾಗ್ ತಮ್ಮ ಮೊದಲ ಏಕದಿನ ಕರೆಯನ್ನು ಗಳಿಸಿದರೆ, ಶಿವಂ ದುಬೆ ಐದು ವರ್ಷಗಳ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ.

ಶ್ರೀಲಂಕಾ ತಂಡ: ಚರಿತ್ ಅಸಲಂಕಾ (ನಾಯಕ), ಪಥುಮ್ ನಿಸ್ಸಾಂಕಾ, ಅವಿಷ್ಕಾ ಫರ್ನಾಂಡೊ, ಕುಸಲ್ ಮೆಂಡಿಸ್, ಸದೀರಾ ಸಮರವಿಕ್ರಮ, ಕಮಿಂಡು ಮೆಂಡಿಸ್, ಜನಿತ್ ಲಿಯಾನಗೆ, ನಿಶಾನ್ ಮಧುಷ್ಕಾ, ವನಿಂದು ಹಸರಂಗ, ದುನಿತ್ ವೆಲ್ಲಗೆ, ಚಮಿಕಾ ಕರುಣರತ್ನೆ, ಮಹೇಶ್ ತೀಕ್ಷಾನ, ಅಕಿಲಾ ಧನಂಜಯ, ದಿಲ್ಶಾನ್ ಮಧುಶಂಕಾ, ಮಥೀಶಾ ಪತಿರಾನಾ, ಅಸಿತಾ ಫರ್ನಾಂಡೊ.

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Continue Reading

ಕ್ರಿಕೆಟ್

IPL 2025: ಬಿಸಿಸಿಐ ಈ ನಿಯಮ ಜಾರಿಗೆ ತಂದರೆ ಧೋನಿ ಮುಂದಿನ ಐಪಿಎಲ್​ ಆಡುವುದು ಅನುಮಾನ!

IPL 2025: ಕ್ರಿಕ್‌ಬಜ್‌ ವರದಿಯ ಪ್ರಕಾರ, ಬಿಸಿಸಿಐ ಐಪಿಎಲ್ ಫ್ರಾಂಚೈಸಿಗಳಿಗೆ ಗರಿಷ್ಠ 4 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ಮಾತ್ರ ನೀಡಲಿದೆ ಎನ್ನಲಾಗಿದೆ. ಹೀಗಾದಲ್ಲಿ ಧೋನಿಗೆ ಚೆನ್ನೈ(CSK) ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ.

VISTARANEWS.COM


on

IPL 2025
Koo

ಮುಂಬಯಿ: ಟೀಮ್ ಇಂಡಿಯಾದ ಮಾಜಿ ಆಟಗಾರ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇದೀಗ ಮುಂದಿನ ಐಪಿಎಲ್​ಗಾಗಿ ನಡೆಯುವ ಮೆಗಾ ಹರಾಜಿಗೆ ಬಿಸಿಸಿಐ(BCCI) ಈ ನಿಯಯ ಜಾರಿಗೆ ತಂದರೆ ಧೋನಿ ಅವರು 18ನೇ ಆವೃತ್ತಿ ಐಪಿಎಲ್(IPL 2025)​ ಆಡುವುದು ಅನುಮಾನ ಎನ್ನಲಾಗಿದೆ.

ಹೌದು, ಡಿಸೆಂಬರ್​ನಲ್ಲಿ ನಡೆಯಲಿದೆ ಎನ್ನಲಾಗಿರುವ ಆಟಗಾರರ ಮೆಗಾ ಹರಾಜಿನ ಭಾಗವಾಗಿ ನಾಳೆ(ಜುಲೈ 31, ಬುಧವಾರ) ಮುಂಬೈಯಲ್ಲಿ ಬಿಸಿಸಿಐ ಮತ್ತು ಐಪಿಎಲ್ ಮಂಡಳಿ ಎಲ್ಲ 10 ಫ್ರಾಂಚೈಸಿಗಳ ಜತೆ ಸಭೆ ನಡೆಸಲಿದೆ. ಈ ಸಭೆಯಲ್ಲಿ ಒಂದು ಫ್ರಾಂಚೈಸಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು ಹೀಗೆ ಹಲವು ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಕ್ರಿಕ್‌ಬಜ್‌ ವರದಿಯ ಪ್ರಕಾರ, ಬಿಸಿಸಿಐ ಐಪಿಎಲ್ ಫ್ರಾಂಚೈಸಿಗಳಿಗೆ ಗರಿಷ್ಠ 4 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ಮಾತ್ರ ನೀಡಲಿದೆ ಎನ್ನಲಾಗಿದೆ. ಹೀಗಾದಲ್ಲಿ ಧೋನಿಗೆ ಚೆನ್ನೈ(CSK) ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ. ಸಿಎಸ್‌ಕೆ ನಾಯಕ ಋತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶ್ರೀಲಂಕಾದ ವೇಗಿ ಮತಿಶಾ ಪತಿರಾಣ ಮತ್ತು ಶಿವಂ ದುಬೆ ಅವರನ್ನು ಉಳಿಸಿಕೊಳ್ಳುವ ಯೋಚನೆಯಲ್ಲಿದೆ ಎನ್ನಲಾಗಿದೆ. ಒಂದೊಮ್ಮೆ 4ಕ್ಕಿಂತ ಅಧಿಕ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಿದರೆ ಧೋನಿ ಚೆನ್ನೈ ತಂಡದ ಪರ ಇನ್ನೊಂದು ಐಪಿಎಲ್​ ಆಡಲಿದ್ದಾರೆ ಎಂದು ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ.

ಇದನ್ನೂ ಓದಿ IPL 2025: ಆರ್​ಸಿಬಿ ಇನ್​ಸ್ಟಾಗ್ರಾಮ್​ ಖಾತೆ ಅನ್​ಫಾಲೋ ಮಾಡಿದ ಮ್ಯಾಕ್ಸ್​ವೆಲ್; ಕಾರಣವೇನು?

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

Dinesh Mongia : ಭಾರತ ತಂಡದ ಮಾಜಿ ಆಟಗಾರ ದಿನೇಶ್ ಮೋಂಗಿಯಾ ಗೋವಾ ಕ್ರಿಕೆಟ್​ ತಂಡದಲ್ಲಿ ಹೊಸ ಜವಾಬ್ದಾರಿ

Dinesh Mongia : ದಿನೇಶ್ ಮೊಂಗಿಯಾ ಭಾರತ ಪರ 57 ಏಕದಿನ ಮತ್ತು ಒಂದು ಟಿ 20 ಪಂದ್ಯವನ್ನು ಆಡಿದ್ದಾರೆ. ಮೊಂಗಿಯಾ ಏಕದಿನ ಪಂದ್ಯಗಳಲ್ಲಿ 1,230 ರನ್ ಮತ್ತು ಟಿ 20ಐನಲ್ಲಿ 38 ರನ್ ಗಳಿಸಿದ್ದಾರೆ. ಅವರು 2002ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಶ್ರೀಲಂಕಾದೊಂದಿಗೆ ಕಪ್​ ಹಂಚಿಕೊಂಡ ಭಾರತ ತಂಡದ ಭಾಗವಾಗಿದ್ದರು. ಭಾರತದ ಮಾಜಿ ಬ್ಯಾಟರ್​​ 2003 ರ ಏಕದಿನ ವಿಶ್ವಕಪ್​​ನಲ್ಲಿ ರನ್ನರ್ಸ್ ಅಪ್ ಸ್ಥಾನ ಪಡೆದ ತಂಡದ ಸದಸ್ಯರಾಗಿದ್ದರು.

VISTARANEWS.COM


on

Dinesh Mongia
Koo

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ ತಮ್ಮ ಕೋಚಿಂಗ್ ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅವರು ಗೋವಾ ಕ್ರಿಕೆಟ್ ಅಸೋಸಿಯೇಷನ್​​ನ ಹಿರಿಯ ಪುರುಷರ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ಜೆ.ಪಿ.ಯಾದವ್ ಅವರು 23 ವರ್ಷದೊಳಗಿನವರ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ದಿನೇಶ್ ಮೊಂಗಿಯಾ ಭಾರತ ಪರ 57 ಏಕದಿನ ಮತ್ತು ಒಂದು ಟಿ 20 ಪಂದ್ಯವನ್ನು ಆಡಿದ್ದಾರೆ. ಮೊಂಗಿಯಾ ಏಕದಿನ ಪಂದ್ಯಗಳಲ್ಲಿ 1,230 ರನ್ ಮತ್ತು ಟಿ 20ಐನಲ್ಲಿ 38 ರನ್ ಗಳಿಸಿದ್ದಾರೆ. ಅವರು 2002ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಶ್ರೀಲಂಕಾದೊಂದಿಗೆ ಕಪ್​ ಹಂಚಿಕೊಂಡ ಭಾರತ ತಂಡದ ಭಾಗವಾಗಿದ್ದರು. ಭಾರತದ ಮಾಜಿ ಬ್ಯಾಟರ್​​ 2003 ರ ಏಕದಿನ ವಿಶ್ವಕಪ್​​ನಲ್ಲಿ ರನ್ನರ್ಸ್ ಅಪ್ ಸ್ಥಾನ ಪಡೆದ ತಂಡದ ಸದಸ್ಯರಾಗಿದ್ದರು.

47 ವರ್ಷದ ಮಾಜಿ ಕ್ರಿಕೆಟಿಗ ಮೇ 2007 ರಲ್ಲಿ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಕೊನೆಯ ಬಾರಿಗೆ ಭಾರತಕ್ಕಾಗಿ ಆಡಿದ್ದರು. ಮಾಜಿ ಎಡಗೈ ಬ್ಯಾಟ್ಸ್ಮನ್ ಪ್ರಥಮ ದರ್ಜೆ ಕ್ರಿಕೆಟ್​​ನಲ್ಲಿ 50 ರ ಸರಾಸರಿಯಲ್ಲಿ 8,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ, ಗರಿಷ್ಠ ಸ್ಕೋರ್ 308. ಕಳೆದ ಋತುವಿನಲ್ಲಿ ಒಡಿಶಾ ತಂಡದ ಮುಖ್ಯ ಕೋಚ್ ಆಗಿದ್ದ ಅವರು ಕೋಚಿಂಗ್ ವಿಭಾಗದಲ್ಲೂ ಅನುಭವ ಹೊಂದಿದ್ದಾರೆ.

ಜೆಪಿ ಯಾದವ್​ ನೇಮಕ

ಸ್ವಪ್ನಿಲ್ ಅಸ್ನೋಡ್ಕರ್ ಅವರ ಸ್ಥಾನಕ್ಕೆ ಜೆಪಿ ಯಾದವ್ ಅವರು ಗೋವಾ ಅಂಡರ್-23 ತಂಡದ ಕೋಚ್ ಆಗಿ ನೇಮಕಗೊಂಡಿದ್ದಾರೆ. ರೈಲ್ವೇಸ್ ತಂಡ ತರಬೇತುದಾರರಾಗಿದ್ದ ಅವರು ರಾಜ್ಯದ ಉದಯೋನ್ಮುಖ ಪ್ರತಿಭೆಗಳಿಗೆ ಅಮೂಲ್ಯ ಮಾರ್ಗದರ್ಶನ ನೀಡುವ ನಿರೀಕ್ಷೆಯಿದೆ.

ರೋಹನ್ ಕದಮ್ ಮುಂದಿನ ಋತುವಿನಲ್ಲಿ ಗೋವಾ ಸೇರ್ಪಡೆ

ಗೋವಾ ಕ್ರಿಕೆಟ್ ಅಸೋಸಿಯೇಷನ್ (ಜಿಸಿಎ) ಅರ್ಜುನ್ ತೆಂಡೂಲ್ಕರ್, ಕೆವಿ ಸಿದ್ಧಾರ್ಥ್ ಮತ್ತು ರೋಹನ್ ಕದಮ್ ಅವರನ್ನು ವೃತ್ತಿಪರ ಆಟಗಾರರಾಗಿ ಉಳಿಸಿಕೊಳ್ಳಲಿದೆ. ಅರ್ಜುನ್​ ತೆಂಡೂಲ್ಕರ್ ಮತ್ತು ಸಿದ್ಧಾರ್ಥ್ ಹಿಂದಿನ ಋತುವಿನಲ್ಲಿ ಗೋವಾ ತಂಡದ ಭಾಗವಾಗಿದ್ದರು. ಇದೀಗ ರೋಹನ್ ಕರ್ನಾಟಕದಿಂದ ಗೋವಾಕ್ಕೆ ಸ್ಥಳಾಂತರಗೊಂಡಿದ್ದಾರೆ. ರಾಹುಲ್ ತ್ರಿಪಾಠಿ ಮಹಾರಾಷ್ಟ್ರಕ್ಕೆ ಮರಳಿದ್ದಾರೆ.

ರೋಹನ್ ಕದಮ್ ಕಳೆದ ಋತುವಿನಲ್ಲಿ ಗೋವಾಕ್ಕೆ ಸೇರಲು ಕರ್ನಾಟಕದಿಂದ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದರು. ಆದಾಗ್ಯೂ, ರಾಹುಲ್ ತ್ರಿಪಾಠಿ ಸಹಿ ಹಾಕಿದ ಕಾರಣ ರೋಹನ್ ಕಳೆದ ಋತುವಿನಲ್ಲಿ ಅವಕಾಶ ತಪ್ಪಿಸಿಕೊಂಡರು. ಕಳೆದ ಋತುವಿನಲ್ಲಿ ರಣಜಿ ಟ್ರೋಫಿಯಲ್ಲಿ 467 ರನ್ ಗಳಿಸಿದ್ದ ಕೆ.ವಿ.ಸಿದ್ಧಾರ್ಥ್ ಮುಂಬರುವ ಋತುವಿನಲ್ಲಿ ತಮ್ಮ ಬಲವಾದ ಪ್ರದರ್ಶನವನ್ನು ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.

ತ್ರಿಪುರಾ ತಂಡವನ್ನು ಪ್ರತಿನಿಧಿಸಲಿರುವ ಮನ್ದೀಪ್ ಸಿಂಗ್

ಕಳೆದ ಋತುವಿನಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಪಂಜಾಬ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ಮನ್ದೀಪ್ ಸಿಂಗ್ ಮುಂದಿನ ಋತುವಿನಲ್ಲಿ ತ್ರಿಪುರಾ ತಂಡವನ್ನು ಸೇರಿಕೊಳ್ಳಲಿದ್ದಾರೆ. ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ (ಪಿಸಿಎ) ಅಧ್ಯಕ್ಷ ಅಮರ್ಜೀತ್ ಸಿಂಗ್ ಮೆಹ್ತಾ ಅವರು ಮನ್ದೀಪ್ ಅವರ ಕ್ರಮವನ್ನು ಗಮನಾರ್ಹ ನಷ್ಟ ಎಂದು ಹೇಳಿದ್ದಾರೆ.

ಇದನ್ನೂ ಓದಿ: Hardik Pandya : ನನ್ನ ಅಪರಾಧದಲ್ಲಿ ನೀನು ಪಾಲುದಾರ; ಪುತ್ರನಿಗೆ ಈ ರೀತಿ ಬರ್ತ್​​ಡೇ ವಿಶ್ ಮಾಡಿದ ಪಾಂಡ್ಯ

“ನಾವು ಎನ್ಒಸಿಗಾಗಿ ಅವರ ಅರ್ಜಿಯನ್ನು ಸ್ವೀಕರಿಸಿದ್ದೇವೆ. ಇದು ಖಂಡಿತವಾಗಿಯೂ ಪಂಜಾಬ್ ಕ್ರಿಕೆಟ್​ಗೆ ದೊಡ್ಡ ನಷ್ಟ. ಆದರೆ ಒಬ್ಬ ಆಟಗಾರನು ಉತ್ತಮ ಭವಿಷ್ಯಕ್ಕಾಗಿ ಬೇರೆಡೆಗೆ ಹೋಗಲು ಬಯಸಿದರೆ, ನಾವು ಏಕೆ ನಿಲ್ಲಿಸಬೇಕು? ಪಿಸಿಎ ಅಧ್ಯಕ್ಷ ಅಮರ್ಜೀತ್ ಸಿಂಗ್ ಮೆಹ್ತಾ ಹೇಳಿದ್ದಾರೆ.

ಜೀವನ್ಜೋತ್ ಸಿಂಗ್ ಅವರು ಪಂಜಾಬ್​​ ಜತೆಗಿನ ದೀರ್ಘಾವಧಿಯ ನಂಟು ಕಡಿದುಕೊಂಡು ಉತ್ತರಾಖಂಡಕ್ಕೆ ತೆರಳಿದ್ದಾರೆ. ಮನ್ದೀಪ್ ಸಿಂಗ್ ಪಂಜಾಬ್ ತಂಡದ ದೀರ್ಘಕಾಲದ ನಾಯಕರಾಗಿದ್ದರು ಮತ್ತು ಅವರು 14 ವರ್ಷಗಳ ಗಮನಾರ್ಹ ವೃತ್ತಿಜೀವನವನ್ನು ಹೊಂದಿದ್ದಾರೆ. ಮನ್ದೀಪ್ 99 ಪ್ರಥಮ ದರ್ಜೆ ಮತ್ತು 131 ಲಿಸ್ಟ್-ಎ ಪಂದ್ಯಗಳನ್ನು ಆಡಿದ್ದಾರೆ.

ವೃದ್ಧಿಮಾನ್ ಸಹಾ ಮತ್ತು ಸುದೀಪ್ ಚಟರ್ಜಿ ಮತ್ತೆ ಬಂಗಾಳಕ್ಕೆ ಮರಳಿದ ನಂತರ ತ್ರಿಪುರಾ ಕ್ರಿಕೆಟ್ ಅಸೋಸಿಯೇಷನ್ ಜೀವನ್ಜೋತ್ ಸಿಂಗ್ ಮತ್ತು ಮನ್ದೀಪ್ ಸಿಂಗ್ ಅವರ ಜತೆ ಒಪ್ಪಂದ ಮಾಡಿಕೊಂಡಿದೆ.

Continue Reading

ಕ್ರೀಡೆ

Hardik Pandya : ನನ್ನ ಅಪರಾಧದಲ್ಲಿ ನೀನು ಪಾಲುದಾರ; ಪುತ್ರನಿಗೆ ಈ ರೀತಿ ಬರ್ತ್​​ಡೇ ವಿಶ್ ಮಾಡಿದ ಪಾಂಡ್ಯ

Hardik Pandya : ಸ್ಟಾರ್ ಆಲ್ರೌಂಡರ್ ತನ್ನ ಮಗನೊಂದಿಗೆ ಉತ್ತಮ ಬಂಧವನ್ನು ಹಂಚಿಕೊಳ್ಳುತ್ತಿರುತ್ತಾರೆ. ಆಗಾಗ್ಗೆ ಪುತ್ರನ ಜತೆಗಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಆದಾಗ್ಯೂ, ರೂಪದರ್ಶಿ ಮತ್ತು ನಟಿ ನತಾಶಾ ಸ್ಟಾಂಕೋವಿಕ್ ಜತೆ ವಿಚ್ಛೇದನ ಪಡೆದ ನಂತರ ಹಾರ್ದಿಕ್ ಈಗ ತಮ್ಮ ಮಗನೊಂದಿಗೆ ವಾಸಿಸುತ್ತಿಲ್ಲ.

VISTARANEWS.COM


on

Hardik Pandya
Koo

ಬೆಂಗಳೂರು: ಆಲ್​ರೌಂಡರ್​​ ಹಾರ್ದಿಕ್ ಪಾಂಡ್ಯ (Hardik Pandya) ತಮ್ಮ ಪುತ್ರ ಅಗಸ್ತ್ಯ ಪಾಂಡ್ಯನ 4 ನೇ ಹುಟ್ಟುಹಬ್ಬದಂದು ಹುಟ್ಟುಹಬ್ಬದ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಹಾರ್ದಿಕ್ ಮತ್ತು ನತಾಶಾ ಸ್ಟಾಂಕೋವಿಕ್ ಅವರ ಮಗ ಜುಲೈ 30, 2020 ರಂದು ಜನಿಸಿದ್ದಾನೆ. ಅಂದಿನಿಂದ, ಅವರ ಜೀವನದ ಬೆಳಕಾಗಿದ್ದಾನೆ. ಹಾರ್ದಿಕ್ ವಿಶೇಷ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಅಗಸ್ತ್ಯ ತನ್ನ ತಂದೆ ಮಾಡುವುದನ್ನೇ ನಕಲು ಮಾಡುತ್ತಿರುವುದನ್ನು ಕಾಣಬಹುದು. ತಂದೆ-ಮಗ ಇಬ್ಬರೂ ಒಟ್ಟಿಗೆ ‘ಜೆಂಗಾ’ ಎಂಬ ಆಟವನ್ನು ಆಡುತ್ತಿದ್ದರು. ಅಗಸ್ತ್ಯನಿಂದ ಸುತ್ತುವರಿದಿದ್ದಾಗ ಹಾರ್ದಿಕ್ ನಗುತ್ತಿದ್ದರು. ಶೀರ್ಷಿಕೆಯಲ್ಲಿ, ಹಾರ್ದಿಕ್ ಅಗಸ್ತ್ಯ ನನ್ನು “ತನ್ನ ಅಪರಾಧದಲ್ಲಿ ಪಾಲುದಾರ” ಎಂದು ಕರೆದಿದ್ದಾರೆ.

“ನೀನು ಪ್ರತಿದಿನ ನನ್ನ ಮನದಲ್ಲಿ ಇರುತ್ತೀಯಾ. ನನ್ನ ಅಪರಾಧದಲ್ಲಿ ಪಾಲುದಾರನಾಗಿರುವ ನಿನಗೆ ಪ್ರೀತಿಯ ಆಗುಗೆ (ಅಗಸ್ತ್ಯ) ಜನ್ಮದಿನದ ಶುಭಾಶಯಗಳು. ಪದಗಳನ್ನು ಮೀರಿ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಹಾರ್ದಿಕ್ ಪೋಸ್ಟ್​​ಗೆ ಶೀರ್ಷಿಕೆ ನೀಡಿದ್ದಾರೆ. ಸ್ಟಾರ್ ಆಲ್ರೌಂಡರ್ ತನ್ನ ಮಗನೊಂದಿಗೆ ಉತ್ತಮ ಬಂಧವನ್ನು ಹಂಚಿಕೊಳ್ಳುತ್ತಿರುತ್ತಾರೆ. ಆಗಾಗ್ಗೆ ಪುತ್ರನ ಜತೆಗಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಆದಾಗ್ಯೂ, ರೂಪದರ್ಶಿ ಮತ್ತು ನಟಿ ನತಾಶಾ ಸ್ಟಾಂಕೋವಿಕ್ ಜತೆ ವಿಚ್ಛೇದನ ಪಡೆದ ನಂತರ ಹಾರ್ದಿಕ್ ಈಗ ತಮ್ಮ ಮಗನೊಂದಿಗೆ ವಾಸಿಸುತ್ತಿಲ್ಲ.

ಹಾರ್ದಿಕ್-ನತಾಶಾ ವಿಚ್ಛೇದನ

ಹಾರ್ದಿಕ್ ಪಾಂಡ್ಯ ನಾಲ್ಕು ವರ್ಷಗಳ ಸಂಬಂಧದ ನಂತರ ಪತ್ನಿ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ಬೇರ್ಪಡುವುದಾಗಿ ಘೋಷಿಸಿದ್ದರು. ಹಲವು ತಿಂಗಳುಗಳ ಊಹಾಪೋಹಗಳ ನಂತರ ಹಾರ್ದಿಕ್ ಜುಲೈ 18 ರ ಗುರುವಾರ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿದರು. ನತಾಶಾ ಸ್ಟಾಂಕೋವಿಕ್ ದೇಶದಿಂದ ಹೊರಹೋಗಲು ನಿರ್ಧರಿಸಿದ್ದು, ಮಗ ಅಗಸ್ತ್ಯನೊಂದಿಗೆ ಸೆರ್ಬಿಯಾದಲ್ಲಿರುವ ತಮ್ಮ ಮನೆಗೆ ಮರಳಿದ್ದಾರೆ. ಅವರು ಇತ್ತೀಚೆಗೆ ಮಗ ಅಗಸ್ತ್ಯ ಅವರೊಂದಿಗೆ ತಮ್ಮ ದಿನದ ಚಿತ್ರಗಳನ್ನು ಹಂಚಿಕೊಂಡಿದ್ದರು. ಹಾರ್ದಿಕ್ ಆ ಪೋಸ್ಟ್​ಗೆ ಕಾಮೆಂಟ್​​ ನೀಡಿದ್ದಾರೆ. ಅವರು ಪೋಸ್ಟ್​ಗೆ ಕೆಂಪು ಹೃದಯ ಮತ್ತು ದುಷ್ಟ ಕಣ್ಣಿನ ಎಮೋಜಿಗಳನ್ನು ಹಾಕಿದ್ದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಈಜುಪಟುವಿಗೆ ಕೊರೊನಾ ಸೋಂಕು!

ಲಂಕಾದಲ್ಲಿದ್ದಾರೆ ಪಾಂಡ್ಯ

ಹಾರ್ದಿಕ್ ಪ್ರಸ್ತುತ ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ 20 ಐ ಸರಣಿಗಾಗಿ ಶ್ರೀಲಂಕಾದಲ್ಲಿದ್ದಾರೆ. ರೋಹಿತ್ ಶರ್ಮಾ ಭಾರತ ತಂಡದ ಚುಟುಕು ಮಾದರಿಗೆ ನಿವೃತ್ತಿ ಘೋಷಿಸಿದ ನಂತರ ಅವರ ಮತ್ತು ಸೂರ್ಯಕುಮಾರ್ ನಡುವೆ ಟಿ 20 ಐ ನಾಯಕತ್ವದ ರೇಸ್ ಇತ್ತು. ಆದಾಗ್ಯೂ, ಸೂರ್ಯಕುಮಾರ್ ಹಾರ್ದಿಕ್ ಅವರನ್ನು ಹಿಂದಿಕ್ಕಿ ಟಿ 20 ಐ ನಾಯಕರಾದರು. ಟಿ 20 ವಿಶ್ವಕಪ್ ವಿಜೇತ ತಂಡದ ಉಪನಾಯಕರಾಗಿದ್ದ ಹಾರ್ದಿಕ್ ಅವರ ಸ್ಥಾನಕ್ಕೆ ಶುಭ್ಮನ್ ಗಿಲ್ ಅವರನ್ನು ನೇಮಿಸಲಾಗಿದೆ. ಹಾರ್ದಿಕ್ ಲಂಕಾ ವಿರುದ್ಧದ ಎರಡನೇ ಪಂದ್ಯದಲ್ಲಿ ಕೇವಲ ಎರಡು ವಿಕೆಟ್ ಜತೆಗೆ ಒಂಬತ್ತು ಎಸೆತಗಳಲ್ಲಿ 22 ರನ್ ಗಳಿಸುವ ಮೂಲಕ ತಮ್ಮ ಆಲ್ರೌಂಡ್ ಪರಾಕ್ರಮವನ್ನು ಪ್ರದರ್ಶಿಸಿದರು. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಹಾರ್ದಿಕ್ ಏಕದಿನ ಸರಣಿಯಲ್ಲಿ ಭಾಗವಹಿಸುತ್ತಿಲ್ಲ.

Continue Reading
Advertisement
Paris Olympics 2024
ಪ್ರಮುಖ ಸುದ್ದಿ12 mins ago

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Wayanad Landslide
EXPLAINER13 mins ago

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Union Minister Pralhad Joshi reaction about rahul gandhi statement
ದೇಶ21 mins ago

Pralhad Joshi: ಕಾಂಗ್ರೆಸ್‌ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ; ಪ್ರಲ್ಹಾದ್ ಜೋಶಿ

Raayan Movie
ಸಿನಿಮಾ25 mins ago

Raayan Movie: ಸೂಪರ್‌ ಹಿಟ್‌ ಚಿತ್ರಗಳನ್ನು ನಕಲಿಸಿ ಮಾರುವ ಕುಖ್ಯಾತ ಪೈರಸಿ ಗ್ಯಾಂಗ್‌ ರೂವಾರಿ ಬಂಧನ

Thyroid problem
ಆರೋಗ್ಯ39 mins ago

Thyroid Health Formulas: ನಿಮ್ಮ ಥೈರಾಯ್ಡ್‌ ನಿಮ್ಮ ಕೈಯಲ್ಲಿ! ಥೈರಾಯ್ಡ್‌ ಆರೋಗ್ಯಕ್ಕೆ ಇಲ್ಲಿವೆ ಆರು ಸೂತ್ರಗಳು

Physical abuse
ಕರ್ನಾಟಕ39 mins ago

Physical abuse: ಮಹಿಳೆ ಮೇಲೆ ಅತ್ಯಾಚಾರ; ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿ ಬಂಧನ

ಬೆಂಗಳೂರು58 mins ago

Sadhaka Ratna Award: ತೇಜೋಮಯಿ ಗದ್ದಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ

Wayanad Landslide
ಕರ್ನಾಟಕ1 hour ago

Wayanad Landslide: ಕೇರಳ ಭೂ ಕುಸಿತ; ಕನ್ನಡಿಗರಿಗೆ ನೆರವು ನೀಡಲು ಸಹಾಯವಾಣಿ

Monsoon Jacket Fashion
ಫ್ಯಾಷನ್1 hour ago

Monsoon Jacket Fashion: ಸ್ಟೈಲಿಶ್‌ ಜಾಕೆಟ್ ಸ್ಟೈಲಿಂಗ್‌ಗೆ ನಟ ದರ್ಶ್ ಚಂದ್ರಪ್ಪ ಸಿಂಪಲ್‌ ರೂಲ್ಸ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಜುಲೈ 31ರಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಇಂತಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ9 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌