DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ - Vistara News

ಕರ್ನಾಟಕ

DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

DK Shivakumar: ಕೆಆರ್‌ಎಸ್ ಅಣೆಕಟ್ಟೆಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಅಲ್ಲಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು ನಂಬಿದ್ದೇವೆ ಎಂದು ತಿಳಿಸಿದ್ದಾರೆ.

VISTARANEWS.COM


on

DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ. ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದ್ದು, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಕೆಆರ್‌ಎಸ್ ಅಣೆಕಟ್ಟೆಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ” ಎಂದು ಹೇಳಿದರು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಸಂಕಷ್ಟ ಕಾಲದಲ್ಲಿ ಅವರ ಪಾಲಿನ 177 ಟಿಎಂಸಿ ನೀರನ್ನು ಅವರಿಗೆ ಹರಿಸಬಹುದು. ಸುಮಾರು 400 ಮೆ.ವ್ಯಾ ವಿದ್ಯುತ್ ತಯಾರಿಸಬಹುದು. ಈ ಅಣೆಕಟ್ಟು ಕಟ್ಟಲು ನ್ಯಾಯಾಲಯ ಅನುವು ಮಾಡಿಕೊಡುತ್ತದೆ ಎಂದು ನಂಬಿದ್ದೇವೆ. ತಮಿಳುನಾಡಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು ನಂಬಿದ್ದೇವೆ ಎಂದರು.

ಇದನ್ನೂ ಓದಿ | BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

2018- 19ರಲ್ಲಿ 404 ಟಿಎಂಸಿ, 2019-20ರಲ್ಲಿ 275, 2020-21ರಲ್ಲಿ 211, 2021-22ರಲ್ಲಿ 281, 2022- 23ರಲ್ಲಿ 667 ಹಾಗೂ 2023-24ರಲ್ಲಿ 87 ಟಿಎಂಸಿ ನೀರು ತಮಿಳುನಾಡಿಗೆ ಹರಿದಿದೆ. ಈ ವರ್ಷ 84 ಟಿಎಂಸಿ ನೀರು ಹರಿದಿದ್ದು, ಇದೇ ರೀತಿ ಮಳೆ ಬರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಬೇಕು ಎಂದು ಹೇಳಿದರು.

ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ

ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಮತ್ತು ತಮಿಳುನಾಡಿನವರು ಈ ನದಿಯ ಮೂಲಕ ಅನ್ನ ಬೆಳೆಯುತ್ತಿದ್ದೇವೆ. ಎಲ್ಲರ ಪಾಲಿನ ಜೀವನದಿ ಕಾವೇರಿಗೆ 92 ವರ್ಷ ಕಳೆದರೂ ನಮನ ಸಲ್ಲಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿಯಲ್ಲಿ ಈ ವರ್ಷ ಉತ್ತಮ ಮಳೆಯಾಗಲಿ ಎಂದು ಬೇಡಿಕೊಂಡಿದ್ದೆವು. ನಮ್ಮ ಬದುಕು ಉಳಿಸು ಎಂದು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೆವು, ಮನುಷ್ಯ ಪ್ರಯತ್ನಕ್ಕೆ ಸೋಲಾಗಬಹುದು ಆದರೆ ಪ್ರಾರ್ಥನೆಗೆ ಎಂದೂ ಸೋಲಾಗುವುದಿಲ್ಲ ಎನ್ನುವುದಕ್ಕೆ ಕಾವೇರಿ ತಾಯಿ ತುಂಬಿ ಹರಿಯುತ್ತಿರುವುದೇ ಸಾಕ್ಷಿ. ಸ್ವರ್ಣಗೌರಿ ಹಬ್ಬದ ದಿನ ಮನೆಯ ಹೆಣ್ಣುಮಕ್ಕಳಿಗೆ ಬಾಗಿನ ಅರ್ಪಿಸಿದಂತೆ ಶುಭಗಳಿಗೆಯ ಅಭಿಜಿನ್ ಲಗ್ನದಲ್ಲಿ ಕಾವೇರಿ ತಾಯಿಗೆ ಬಾಗಿನ ಅರ್ಪಿಸಲಾಗಿದೆ ಎಂದರು.

ಮೇಲಿರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಇದೆ ಎಂದು ಗೊತ್ತಿರುವುದಿಲ್ಲ?

ತಮಿಳುನಾಡಿಗೆ ನಾನು ಅಥವಾ ಸಿದ್ದರಾಮಯ್ಯ ಅವರು ನೀರು ಬಿಟ್ಟಿಲ್ಲ. ತಾಯಿ ಕೃಪೆಯಿಂದ ಹೆಚ್ಚು ಮಳೆ ಬಂದಿದೆ ಆದ ಕಾರಣ ನೀರು ಅವರಿಗೆ ಹೋಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಗಳಾದ ನಂತರ ಮಳೆ ಬರಲಿಲ್ಲ, ನೀರು ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅವರಿಗೆಲ್ಲ ಈಗ ತಕ್ಕ ಉತ್ತರ ಸಿಕ್ಕಿದೆ. ಮೇಲೆ ಇರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಅಧಿಕಾರದಲ್ಲಿ ಇದೆ ಎನ್ನುವುದು ಗೊತ್ತಿರುವುದಿಲ್ಲ ಎಂದು ಹೇಳಿದರು.

ಮಳೆ ಇದೇ ರೀತಿ ಉತ್ತಮವಾಗಿ ಬಂದರೆ ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ಈ ವರ್ಷ ನೀಡಬಹುದು. ಕಳೆದ ವರ್ಷ 223 ತಾಲೂಕುಗಳಲ್ಲಿ ಬರ ಬಂದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಟೀಕೆ ಮಾಡಿದರು. ಆದರೂ ನಾವು ಜನಪರವಾಗಿ ಕೆಲಸ ಮಾಡಿದೆವು. ಏಕೆಂದರೆ ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಯಾರನ್ನೂ ನಾನು ಟೀಕೆ ಮಾಡುವುದಿಲ್ಲ. ನಮ್ಮ ಕೆಲಸ ಗಳು ಅವರಿಗೆ ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತವೆ ಎಂದು ಹೇಳಿದರು.

82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ

ಭಾರತದ ಏಳು ಪವಿತ್ರ ನದಿಗಳಲ್ಲಿ ಕಾವೇರಿಯೂ ಒಂದು. ಜನರ ಕುಡಿಯುವ ನೀರು, ವ್ಯವಸಾಯ, ಕೈಗಾರಿಕೆಗಳಿಗೆ ಕಾವೇರಿ ಜೀವ ನೀಡುತ್ತಿದ್ದಾಳೆ. ಈ ವರ್ಷ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. ಸುಮಾರು 62 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶಕ್ಕೆ ಹೊಸ ರೂಪ ನೀಡಲು ನಮ್ಮ ಸರ್ಕಾರ ಮುಂದಾಗಿದೆ. ಕಳೆದ ವರ್ಷ ಎಲ್ಲಾ ಕಾಲುವೆಗಳನ್ನು ಸ್ವಚ್ಚಗೊಳಿಸಲಾಗಿದೆ. ಕಾಲುವೆಯ ಕೊನೆ ಭಾಗದ ರೈತರಿಗೂ ನೀರು ತಲುಪಬೇಕು ಎಂದು 1964-65ರ ಕಾನೂನಿಗೆ ತಿದ್ದುಪಡಿ ತಂದು ಈ ಬಾರಿಯ ವಿಧಾನಸಭೆಯಲ್ಲಿ ಮಂಡನೆ ಮಾಡಿ ಹೊಸ ಕಾನೂನು ತಂದಿದ್ದೇವೆ. ರೈತರ ಬದುಕು ಹಸನಾಗಬೇಕು ಎಂದು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು ಎನ್ನುವ ಕನಸನ್ನು ಸಚಿವ ಚೆಲುವರಾಯಸ್ವಾಮಿ ಅವರು ಹೊಂದಿದ್ದಾರೆ. ಇದು ಮಂಡ್ಯ ಜಿಲ್ಲೆಯ ರೈತರ ಬದುಕಿಗೆ ದೊಡ್ಡ ಮಾರ್ಗದರ್ಶನ ಸಿಗಲಿದೆ. ರೈತನಿಗೆ ಬಡ್ತಿ, ಸಂಬಳ, ನಿವೃತ್ತಿ ಎಂಬುದಿಲ್ಲ. ಆದ ಕಾರಣಕ್ಕೆ ರೈತರನ್ನು ನಾವು ಉಳಿಸಬೇಕಿದೆ ಎಂದರು.

ಸಂಕಷ್ಟದ ವರ್ಷಗಳಲ್ಲಿ ಮೇಕೆದಾಟು ಅಣೆಕಟ್ಟು ಪರಿಹಾರ ಎಂದು ನಾವು ಪಾದಯಾತ್ರೆ ಮಾಡಿದ್ದೆವು. ನಮ್ಮ ಎದುರು ಪಕ್ಷದವರು ಕೋವಿಡ್ ಕಾರಣ ಹೇಳಿ ಪಾದಯಾತ್ರೆಗೆ ತಡೆ ಹಾಕಿದರು. ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಪಾದಯಾತ್ರೆಗೆ ಸೇರುವ ವೇಳೆ ರಾಮನಗರದಲ್ಲಿ ಪಾದಯಾತ್ರೆ ನಿಲ್ಲುವಂತೆ ಮಾಡಲಾಯಿತು. ಯಾರೇ ಏನೇ ತಡೆ ಹಾಕಿದರೂ ಪಾದಯಾತ್ರೆ ಸಂಪೂರ್ಣ ಮಾಡುತ್ತೇವೆ ಎಂದು ಬೆಂಗಳೂರಿನ ತನಕ ಹೆಜ್ಜೆ ಹಾಕಿದೆವು. ಕಾವೇರಿ ತೀರದ ಎಲ್ಲಾ ಪ್ರದೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಜನ ಸೇವೆಗೆ ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಜನರ ಋಣ ತೀರಿಸುತ್ತೇವೆ. ನಮ್ಮ ಮೇಲೆ ವಿಶ್ವಾಸವಿರಲಿ ಎಂದು ತಿಳಿಸಿದರು.

ಬೃಂದಾವನಕ್ಕೆ ಹೊಸ ರೂಪ; ಕಾವೇರಿ ಆರತಿ ಪ್ರಾರಂಭ

ಕೆಆರ್‌ಎಸ್‌ ಅಣೆಕಟ್ಟೆ ಬಳಿ ಬೃಂದಾವನ ಗಾರ್ಡನ್‌ ಅನ್ನು ಮೈಸೂರು ಮಹಾರಾಜರು ಅದ್ಭುತವಾಗಿ ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ. ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು. ಈಗಾಗಲೇ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾವೇರಿ ಜಲಾನಯದ ಪ್ರದೇಶದ ಶಾಸಕರ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಸೇರಿಸಿ ಸಮಿತಿ ರಚಿಸಲಾಗಿದೆ ಎಂದರು.

ರೈತರ ಜಮೀನನ್ನು ಒತ್ತಾಯವಾಗಿ ವಶಪಡಿಸಿಕೊಳ್ಳಲ್ಲ

ರೈತರು ಬೃಂದಾವನಕ್ಕೆ ಹೊಸ ರೂಪ ನೀಡುವ ಮೊದಲು ನಮ್ಮ ಜೊತೆ ಚರ್ಚೆ ನಡೆಸಿ ಎಂದು ಹೇಳಿದ್ದಾರೆ. ಯಾವುದೇ ಮುಚ್ಚುಮರೆಯಿಲ್ಲದೇ ಇದರ ಅಭಿವೃದ್ಧಿ ಮಾಡಲಾಗುವುದು ಹಾಗೂ ಅವರ ಜತೆ ಚರ್ಚೆ ನಡೆಸಲಾಗುವುದು. ಯಾರ ಜಮೀನು ವಶಪಡಿಸಿಕೊಳ್ಳುವುದಿಲ್ಲ. ಸರ್ಕಾರದ ಜಮೀನಿನಲ್ಲೇ ಅಭಿವೃದ್ಧಿ ಮಾಡಲಾಗುವುದು. ಇಷ್ಟವಿದ್ದವರು ಜಮೀನು ನೀಡಬಹುದು, ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಣೆಕಟ್ಟಿನ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗುವುದು. ಸ್ಥಳೀಯ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ನೀರಾವರಿಗೆ ಸಂಬಂಧಿಸಿದಂತೆ ಅನೇಕ ಮನವಿಗಳನ್ನು ಸಲ್ಲಿಸಿದ್ದಾರೆ. ಅವರ ಮನವಿಗಳನ್ನು ಶೀಘ್ರ ಪರಿಗಣಿಸಲಾಗುವುದು ಎಂದು ಹೇಳಿದರು.

ಪ್ರತಿವರ್ಷ ಐದು ಮಂದಿಗೆ ಪ್ರಶಸ್ತಿ

ಕಬಿನಿ, ಕೆಆರ್‌ಎಸ್, ಹೇಮಾವತಿ ವಿಭಾಗದಲ್ಲಿ ಮೂರು ಜನ ರೈತರು ಹಾಗೂ ಒಬ್ಬ ಪ್ರಗತಿಪರ ರೈತ ಮತ್ತು ಕಿರಿಯ ಎಂಜಿನಿಯರ್ ಅವರಿಗೆ ಕಾವೇರಿ ನೀರಾವರಿ ನಿಗಮದಿಂದ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.

ಬಾಗಿನ ಅರ್ಪಣೆಗೂ ಮುಂಚಿತವಾಗಿ ಕೆಆರ್ ಎಸ್ ಅಣೆಕಟ್ಟಿನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅತಿಥಿಗೃಹದ ಬಳಿ ಉತ್ತರಿಸಿದ ಡಿಸಿಎಂ ಅವರು, ಪ್ರಸ್ತುತ ಮಳೆ ಕಡಿಮೆಯಾಗಿದೆ. ಕಾವೇರಿ ನದಿ ತೀರದ ಪ್ರದೇಶಗಳ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತಮಿಳುನಾಡಿದ ಸಿಎಂ ಅವರ ರಾಜ್ಯಗಳ ಕೆರೆಗಳನ್ನು ತುಂಬಿಸಲು ಸೂಚನೆ ನೀಡಿದ್ದಾರೆ. ನಾವು ನಮ್ಮ ರಾಜ್ಯದ ಕೆರೆಗಳನ್ನು ತುಂಬಿಸುತ್ತಿದ್ದೇವೆ. ನಮ್ಮ ರೈತರನ್ನು ನಾವು ಕಾಪಾಡುತ್ತೇವೆ. ತಮಿಳುನಾಡಿಗೆ ಹಾಗೂ ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲಿ. ಹೆಚ್ಚು ಕಾವೇರಿ ನೀರನ್ನು ಬಳಸಿಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಬೇಕಾಗಿದೆ ಎಂದರು.

ಇದನ್ನೂ ಓದಿ | BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

ಬಿಜೆಪಿ- ಜೆಡಿಎಸ್ ಪಾದಯಾತ್ರೆ ವಿಚಾರವಾಗಿ ಕೇಳಿದಾಗ, ಮೊದಲು ಭೂತಾಯಿ ಮತ್ತು ವರುಣದೇವನಿಗೆ ಪೂಜೆ ಸಲ್ಲಿಸೋಣ. ಆನಂತರ ರಾಜಕಾರಣ ಮಾತನಾಡೋಣ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ಸತತ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಭೇಟಿ ನೀಡಿ, ಸಂತ್ರಸ್ತರ ಕಣ್ಣೀರು ಒರೆಸಿದರು. ಜನರ ಸಮಸ್ಯೆಗಳನ್ನು ಅಲಿಸುವುದರ ಜತೆಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡುವ ಮೂಲಕ ಸ್ಪಂದಿಸಿದರು.

VISTARANEWS.COM


on

Minister Lakshmi Hebbalkar reviewed the flood situation and provided individual financial assistance to the victims
Koo

ಬೆಳಗಾವಿ: ಸತತ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಸೋಮವಾರ ಭೇಟಿ ನೀಡಿ, ಸಂತ್ರಸ್ತರ ಕಣ್ಣೀರು ಒರೆಸಿದರು. ಜನರ ಸಮಸ್ಯೆಗಳನ್ನು ಅಲಿಸುವುದರ ಜತೆಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡುವ ಮೂಲಕ ಸ್ಪಂದಿಸಿದರು.

ಖಾನಾಪುರ ತಾಲೂಕಿನ ಮಲಪ್ರಭಾ ಸೇತುವೆಯ ವೀಕ್ಷಣೆ ಮಾಡಿದ ಸಚಿವರು, ನದಿಗೆ ನೀರಿನ ಒಳಹರಿವಿನ ಪ್ರಮಾಣ ಮತ್ತು ಸದ್ಯದ ಪರಿಸ್ಥಿತಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮುಖ್ಯ ರಸ್ತೆಯಲ್ಲಿರುವ ಸೇತುವೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ತುರ್ತಾಗಿ ಎರಡೂ ಕಡೆಯ ಗ್ರಿಲ್‌ಗಳ ದುರಸ್ತಿಗೆ ಸೂಚಿಸಿದ ಸಚಿವರು, ಜತೆಗೆ ತಾಲೂಕಿನಲ್ಲಿ ಬೆಳೆ ನಷ್ಟ, ಮನೆ ಹಾನಿ ಸೇರಿದಂತೆ ಇನ್ನಿತರ ಸಂಗತಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮೃತ ಮಹಿಳೆ ಕುಟುಂಬಕ್ಕೆ ನೆರವು

ಮೂಲಸೌಕರ್ಯ ಕೊರತೆಯ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಅಮಗಾಂವ್ ಗ್ರಾಮದ ಅನಾರೋಗ್ಯ ಪೀಡಿತ ಮಹಿಳೆಯನ್ನು ಗ್ರಾಮಸ್ಥರು ಹೊತ್ತು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗದೆ ಈಚೆಗೆ ಮೃತಪಟ್ಟಿದ್ದರು. ಮಹಿಳೆ ಹರ್ಷದಾ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಚಿವರು ವೈಯಕ್ತಿಕ ಪರಿಹಾರ ನೀಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವರು, ಇನ್ಮುಂದೆ ಇಂಥ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

ನಂತರ, ರುಮೇವಾಡಿ ಸೇತುವೆಯನ್ನು ಸಹ ಸಚಿವರು ಪರಿಶೀಲಿಸಿದರು. ಅಲ್ಲಿಂದ ಚಿಕ್ಕಹಟ್ಟಿಹೊಳಿ ಹಾಗೂ ಹಿರೆಹಟ್ಟಿಹೊಳಿ ಗ್ರಾಮಕ್ಕೆ ತೆರಳಿ ಗ್ರಾಮದಲ್ಲಿ ಮನೆಗಳು ಬಿದ್ದಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮನೆ ಸಂಪೂರ್ಣವಾಗಿ ಬಿದ್ದು ಹಾನಿಯಾದರೂ ಅಧಿಕಾರಿಗಳು ಭಾಗಶಃ ಬಿದ್ದಿದೆ ಎಂದು ವರದಿ ನೀಡಿರುವ ಕುರಿತು ಎಂಜಿನಿಯರ್ ತರಾಟೆಗೆ ತೆಗೆದುಕೊಂಡ ಸಚಿವರು, ಅಧಿಕಾರಿಗಳು ಮಾಡುವ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಬಿದ್ದಿರುವ ಮನೆಯಲ್ಲಿ ನೀವು ಉಳಿದುಕೊಳ್ಳಲು ಸಾಧ್ಯವೇ? ಸರ್ಕಾರ ಪರಿಹಾರ ಕೊಡಲು ಸಿದ್ಧವಿರುವಾಗ ನೀವು ಈ ರೀತಿ ವರದಿ ಕೊಡಟ್ಟಿದ್ದೇಕೆ? ಇಂತಹ ಮನೆಯಲ್ಲಿ ನೀವು ಉಳಿದುಕೊಳ್ಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಕೆಲವು ಅಧಿಕಾರಿಗಳು ಕಟುಕರ ರೀತಿ ಕೆಲಸ ಮಾಡುತ್ತಿದ್ದಾರೆ. ಹೃದಯವಂತಿಕೆಯಿಂದ ಕೆಲಸ ಮಾಡಬೇಕು. ಇಲ್ಲಿನ ಪರಿಸ್ಥಿತಿ ನೋಡಿದರೆ ಕರುಳು ಹಿಂಡಿದಂತಾಗುತ್ತದೆ. ತಪ್ಪು ಮಾಡುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತೇನೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಚಿಕ್ಕಹಟ್ಟಿಹೊಳಿ ಮಲಪ್ರಭಾ ಸೇತುವೆ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ, ಅಗತ್ಯ ತಡೆಗೊಡೆ ಹಾಗೂ ಸೇತುವೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಪ್ರವಾಹ ಪರಿಹಾರ ಕೊಡಲು ಅಗತ್ಯ ಹಣವಿದೆ. ಯಾವುದೇ ಸಮಸ್ಯೆ ಇಲ್ಲ. ಸೂಕ್ತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮನೆ ಕಳೆದುಕೊಂಡ ಹಲವು ಸಂತ್ರಸ್ತರಿಗೆ ಸಚಿವರು ತಮ್ಮ ವೈಯಕ್ತಿಕ ನಿಧಿಯಿಂದ ಆರ್ಥಿಕ ಸಹಾಯ ನೀಡಿದರು. ಸರ್ಕಾರದಿಂದ ಸಾಧ್ಯವಾದಷ್ಟು ಹೆಚ್ಚು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

ಖಾನಾಪುರ ತಾಲೂಕಿನ ಜನರು, ಸಚಿವರು ಹೋದಲ್ಲೆಲ್ಲ ಅತ್ಯಂತ ಪ್ರೀತಿಯಿಂದ ಬಂದು ಮಾತನಾಡಿಸುತ್ತಿದ್ದರು. ತಮ್ಮ ಬೇಡಿಕೆಗಳ ಅಹವಾಲು ಆಲಿಸುತ್ತಿದ್ದರು. ಹತ್ತಾರು ವರ್ಷಗಳಿಂದ ಈಡೇರದ ಬೇಡಿಕೆಗಳ ಕುರಿತು ಗಮನ ಸೆಳೆಯುತ್ತಿದ್ದರು. ಎಲ್ಲದಕ್ಕೂ ಕಿವಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಮಾಧಾನದಿಂದ ಸ್ಪಂದಿಸಿದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಇದ್ದರು.

ಮಾನವೀಯತೆಯಿಂದ ಸಂತ್ರಸ್ತರಿಗೆ ಸ್ಪಂದಿಸಿ

ನಂತರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಧಿಕಾರಿಗಳು ಮಾನವೀಯತೆಯಿಂದ ಸಂತ್ರಸ್ತರಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಇದಾದ ನಂತರ, ಬೆಂಡಿಗೇರಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಪ್ರವಾಹದಿಂದ ಮನೆಗಳಿಗೆ ಹಾನಿಯಾಗಿರುವ ಕುರಿತು ಮಾಹಿತಿ ಪಡೆದರು. ಸಭೆಯ ಬಳಿಕ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳನ್ನು ವೀಕ್ಷಿಸಿ, ಮನೆ ಕಳೆದುಕೊಂಡ ಸಂತ್ರಸ್ತರಿಗೆ ಧೈರ್ಯ ತುಂಬಿ, ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿಯ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

ಬಳಿಕ, ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆಗಳನ್ನು ಕಳೆದುಕೊಂಡಿರುವ ಹಿರೇ ಬಾಗೇವಾಡಿ ಗ್ರಾಮದ ಪಾರ್ವತಿ ಯಮ್ಮಿನಕಟ್ಟಿ, ಚಂಬಣ್ಣ ತಲ್ಲೂರ್, ಕಾಶವ್ವ ಪಡಗಲ್ ಹಾಗೂ ಸುಶೀಲಾ ನಾವಲಗಿ ಮತ್ತಿತರರ ಮನೆ ಬಿದ್ದ ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಸಂತ್ರಸ್ತರಿಗೆ ಧೈರ್ಯ ತುಂಬಿ, ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ನೀಡಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Pralhad Joshi: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi statement on tomato price
Koo

ನವದೆಹಲಿ: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

ದೆಹಲಿಯ ಕೃಷಿ ಭವನದಲ್ಲಿ ಇಂದು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳಿಗೆ ಚಾಲನೆ ನೀಡಿ ಬೆಲೆ ಸ್ಥಿರತೆ ಕುರಿತು ತಿಳಿಸಿದರು.

ದೆಹಲಿ, ಎನ್‌ಸಿಆರ್‌ನ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಏರಿಳಿತ ಕಾಣುತ್ತಿದ್ದು, ಸ್ಥಿರತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

ಟೊಮೆಟೋಗೆ ಚಿಲ್ಲರೆ ಬೆಲೆ ಪ್ರತಿ ಕಿಜಿಗೆ 60 ರೂ. ನಿಗದಿಪಡಿಸಲಾಗಿದೆ. ಅಲ್ಲದೇ, ಪ್ರಮುಖ 18 ಸ್ಥಳಗಳಲ್ಲಿ ಮಾರಾಟ ಮಾಡಲಾಗುವುದು. ಗ್ರಾಹಕರ ಅನುಕೂಲ ಮತ್ತು ಬೇಡಿಕೆಗೆ ಅನುಗುಣವಾಗಿ ಮಾರಾಟ ಸ್ಥಳಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಸಚಿವ ಜೋಶಿ ತಿಳಿಸಿದರು.

ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳು ದೆಹಲಿ- ಎನ್‌ಸಿಆರ್ ಪ್ರದೇಶಗಳಲ್ಲಿ ಲಭ್ಯವಿರುತ್ತವೆ ಎಂದರು.

ದೆಹಲಿ, ಕೋಲಾರ ಮತ್ತು ರಾಜಸ್ಥಾನದ ಮಾರುಕಟ್ಟೆಗಳಿಂದ ಟೊಮೆಟೊ ಖರೀದಿಸಿ, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿ ಕೆಜಿಗೆ 60 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

ಈ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸಚಿವ ಬಿ.ಎಲ್.ವರ್ಮಾ ಉಪಸ್ಥಿತರಿದ್ದರು.

Continue Reading

ಕರ್ನಾಟಕ

HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

HD Devegowda: ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ. ನಾನೂ ಮೈತ್ರಿ ಸರ್ಕಾರವನ್ನು ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಉತ್ತಮವಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

VISTARANEWS.COM


on

HD Devegowda
Koo

ನವ ದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್‌ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾನು ಹೃದಯಪೂರ್ವಕವಾಗಿ ಬಜೆಟ್ ಬೆಂಬಲಿಸುತ್ತೇನೆ. ಮುಂದಿನ ಬಜೆಟ್ ಬಗ್ಗೆ ಮಾತಮಾಡುತ್ತೀನೋ, ಇಲ್ಲವೊ ಗೊತ್ತಿಲ್ಲ. ಹೀಗಾಗಿ ಬೆಂಗಳೂರು ನಗರ ಕುಡಿಯುವ ನೀರು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ರಾಜ್ಯಸಭೆ ಕಲಾಪದಲ್ಲಿ ಮಾತನಾಡಿರುವ ಅವರು, ನಾನು 1991 ರಲ್ಲಿ ಸಂಸತ್‌ಗೆ ಬಂದೆ, ಈಗ ನನಗೆ 92 ವರ್ಷ. ಮುಂದಿನ ಬಜೆಟ್ ಬಗ್ಗೆ ಮಾತಮಾಡುತ್ತೀನೋ, ಇಲ್ಲವೊ ಗೊತ್ತಿಲ್ಲ. ನಾನು ಎನ್‌ಡಿಎ ಭಾಗವಾಗಿದ್ದೇನೆ, ಅದಕ್ಕಾಗಿ ಜೆ.ಪಿ ನಡ್ಡಾ ಅವರಿಗೆ ಧನ್ಯವಾದಗಳು ಎಂದು ಹೇಳಿದರು.

ನಾನು ಕೃಷಿ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಬದ್ಧತೆ ಇರುವ ವ್ಯಕ್ತಿಯನ್ನು ಕೃಷಿಗೆ ಸಚಿವರನ್ನಾಗಿ ಮಾಡಿದ್ದಾರೆ. ಉತ್ತಮ‌ ಅನುಭವ ಇರುವ ತಂಡವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮೋದಿ ಹತ್ತು ವರ್ಷ ಸಿಎಂ ಆಗಿದ್ದಾಗ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಬೇರೆ ರಾಜ್ಯಗಳಲ್ಲಿ ಹೋಲಿಸಿದರೆ ಗುಜರಾತ್ ಅತ್ಯುತ್ತಮ ಮಾದರಿ ರಾಜ್ಯವಾಗಿದೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ. ನಾನೂ ಮೈತ್ರಿ ಸರ್ಕಾರವನ್ನು ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಉತ್ತಮವಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ. ಕರ್ನಾಟಕದಲ್ಲಿ ಎರಡು ಸೀಟು ಮಾತ್ರ ನಮ್ಮ ಶಕ್ತಿ. ಆದಾಗ್ಯೂ ಒಂದು ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ ಎಂದು ಹೇಳಿದರು.

ಇದು ವೈಜ್ಞಾನಿಕ ಬಜೆಟ್ ಆಗಿದ್ದು, ಮಹಿಳೆಯರು, ಬಡವರು, ಯುವಕರು, ರೈತರ ಪರವಾದ ಬಜೆಟ್ ಅನ್ನು ಕೇಂದ್ರ ಮಂಡಿಸಿದೆ. ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಒತ್ತು ನೀಡಿದೆ, ಹಂಚಿಕೆ ಸರಪಳಿ ಬಲಿಷ್ಠಗೊಳಿಸಲು ಕ್ರಮ ತೆಗೆದುಕೊಂಡಿದೆ. ಯುವಕರಿಗೆ ಇಂರ್ಟರ್ನ್‌ಶಿಪ್‌ನಲ್ಲಿ ಮೊದಲ ತಿಂಗಳ ಸಂಬಳ ನೀಡಲಾಗುತ್ತಿದೆ. ಉದ್ಯೋಗ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಿದೆ. ಯುವಕರನ್ನು ಕೌಶಲ್ಯಯುತರಾಗಿ ಮಾಡಲು ಹಣ ವ್ಯಯ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ | DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ನಾನು ಯಾರನ್ನು ಟೀಕಿಸಲು ಹೋಗುವುದಿಲ್ಲ, ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಬೆಂಗಳೂರು ಬೆಳೆಯುತ್ತಿರುವ ನಗರ, ಅದಕ್ಕೆ ಕುಡಿಯುವ ನೀರು ಬೇಕು. ಇತ್ತೀಚೆಗೆ ಒಂದು ಟಿಎಂಸಿ ನೀರು ಹರಿಸಲು ಹೇಳಲಾಗಿತ್ತು. ಈಗ ಮಳೆಯಿಂದ ಎಲ್ಲವೂ ಸುಗಮವಾಗಿದೆ, ಸಹಾಯವಾಗಿದೆ. ಮಳೆ ಬಾರದಿದ್ದರೇ ಪರಿಸ್ಥಿತಿ ಏನು ಹೇಳಿ? ನೀರಿನ ಸಮಸ್ಯೆ ಹಿನ್ನೆಲೆ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಜನರು ಎನ್‌ಡಿಎ ಮೈತ್ರಿಕೂಟ ಬೆಂಬಲಿಸಿದ್ದಾರೆ. ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಇದೇ ಆಧಾರ. ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಒಪ್ಪಿಕೊಂಡಿದೆ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಆಗಸ್ಟ್ 12ರಿಂದ ಕೆಪಿಎಸ್‌ಸಿ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಬಿ.ವಿ.ಎಸ್‌ಸಿ, ಬಿ.ವಿ.ಎಸ್‌ಸಿ & ಎಎಚ್‌ ಪದವೀಧರರು ಅರ್ಹರಾಗಿದ್ದು, ವಯೋಮಿತಿ, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

veterinary officer recruitment
Koo

ಬೆಂಗಳೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್-ಎ ದರ್ಜೆಯ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ (veterinary officer recruitment) ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 12ರಿಂದ ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಬೇಕಾದ ಅರ್ಹತೆಗಳು, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು: ಪಶು ವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 342 (ಉಳಿಕೆ ಮೂಲ ವೃಂದ) + 58 (ಬ್ಯಾಕ್‌ಲಾಗ್‌)
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್‌ 12
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆ.12

ವಿದ್ಯಾರ್ಹತೆ

ಪಶು ವೈದ್ಯಕೀಯ ವಿಜ್ಞಾನ (BVSc), ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ (B.V.Sc. & AH) ಪದವೀಧರರು ಅರ್ಜಿ ಸಲ್ಲಿಸಬಹುದು. (ಕೆವಿಸಿ/ಐವಿಸಿಯಲ್ಲಿ ನೋಂದಣಿಯಾಗಿರಬೇಕು)

ವಯೋಮಿತಿ

ಅರ್ಜಿ ಸಲ್ಲಿ..ಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ – 18 ವರ್ಷಗಳ ವಯೋಮಾನದವರಾಗಿರಬೇಕು ಹಾಗೂ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅರ್ಹತೆ: 35 ವರ್ಷ
ಒಬಿಸಿ (2ಎ, 2ಬಿ, 3ಎ, 3ಬಿ): 38 ವರ್ಷ
ಎಸ್‌ಸಿ, ಎಸ್‌ಟಿ, ಪ್ರವರ್ಗ-1: 40 ವರ್ಷ

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600 ರೂ.
ಒಬಿಸಿ (2ಎ, 2ಬಿ, 3ಎ, 3ಬಿ): 300 ರೂ.
ಮಾಜಿ ಸೈನಿಕರಿಗೆ : 50 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನರು: ಶುಲ್ಕ ಪಾವತಿಯಿಂದ ವಿನಾಯಿತಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಆಯ್ಕೆ ವಿಧಾನ

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:
ಈ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮ ಉಪ ನಿಯಮ-7 ರಲ್ಲಿ ನಿರ್ದಿಷ್ಟ ಪಡಿಸಲಾದಂತೆ, ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ.. ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು ಎಸ್.ಎಸ್.ಎಲ್.ಸಿ. ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು.

ವಿಶೇಷ ಸೂಚನೆ: ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರನ್ವಯ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 29-11-2022ರಂದು ಮತ್ತು ಆ ನಂತರದಲ್ಲಿ ನಡೆಸಿರುವ ಕನ್ನಡ ಭಾಷಾ ಪರೀಕ್ಷೆಗಳಿಗೆ ಹಾಜರಾಗಿ ಉರ್ತೀರ್ಣರಾಗಿದ್ದಲ್ಲಿ ಅದರ ಫಲಿತಾಂಶವನ್ನು ಈ ಅಧಿಸೂಚನೆಯಲ್ಲಿನ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೂ ಪರಿಗಣಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ ಲೈನ್ ಅರ್ಜಿಯಲ್ಲಿನ ನಿಗದಿತ ಅಂಕಣದಲ್ಲಿ ಕನ್ನಡ ಭಾಷಾ ಪರೀಕ್ಷೆ ಕುರಿತಂತೆ ಕೇಳಿರುವ ಮಾಹಿತಿಯನ್ನು ತಪ್ಪದೇ ನಮೂದಿಸಬೇಕು.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಸ್ಪರ್ಧಾತ್ಮಕ ಪರೀಕ್ಷಾ ವಿಧಾನ

ಈ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತು ನಿಮ್ಮ ಬಹು ಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರತಿಯೊಂದು ಪ್ರಶ್ನೆಯು ಋಣಾತ್ಮಕ (Negative) ಅಂಕದ ಸ್ವರೂಪದ್ದಾಗಿದ್ದು, ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
Paper 1- ಸಾಮಾನ್ಯ ಪತ್ರಿಕೆ(General Paper): 300 ಅಂಕ
Paper 2- ನಿರ್ದಿಷ್ಟ ಪತ್ರಿಕೆ(Specific Paper): 300 ಅಂಕ



    Continue Reading
    Advertisement
    Parliament session
    ದೇಶ11 mins ago

    Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

    Minister Lakshmi Hebbalkar reviewed the flood situation and provided individual financial assistance to the victims
    ಕರ್ನಾಟಕ22 mins ago

    Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    Union Minister Pralhad Joshi statement on tomato price
    ಕರ್ನಾಟಕ25 mins ago

    Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

    Paris Olympics 2024
    ಪ್ರಮುಖ ಸುದ್ದಿ28 mins ago

    Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

    Arvind Kejriwal
    ದೇಶ43 mins ago

    Arvind Kejriwal: ದಿನೇ ದಿನೆ ಕೇಜ್ರಿವಾಲ್‌ ಆರೋಗ್ಯ ಕ್ಷೀಣ; ಪ್ರತಿಪಕ್ಷಗಳಿಂದ ನಾಳೆ ಭಾರೀ ಪ್ರತಿಭಟನಾ ರ್‍ಯಾಲಿ

    Paris Olympics 2024
    ಪ್ರಮುಖ ಸುದ್ದಿ53 mins ago

    Paris Olympics 2024 : ಪುರುಷರ ಆರ್ಚರಿ ತಂಡಕ್ಕೆ ಆಘಾತ, ಕ್ವಾರ್ಟರ್​ಫೈನಲ್​ನಲ್ಲಿ ಸೋಲು

    HP OmniBook X,
    ತಂತ್ರಜ್ಞಾನ1 hour ago

    HP OmniBook X : ಕೃತಕ ಬುದ್ಧಿಮತ್ತೆ ಹೊಂದಿರುವ ಎರಡು ಲ್ಯಾಪ್​ಟಾಪ್​​ಗಳನ್ನು ಬಿಡುಗಡೆ ಮಾಡಿದ ಎಚ್​ಪಿ

    Russia Ukraine War
    ದೇಶ2 hours ago

    Russia-Ukraine War: ಕೆಲಸ ಕೊಡಿಸ್ತೇವೆ ಅಂತಾ ಸೇನೆಗೆ ತಳ್ಳಿದ್ರು..ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಭಾರತೀಯ ಯುವಕ ಸಾವು

    HD Devegowda
    ಕರ್ನಾಟಕ2 hours ago

    HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

    Dengue Fever
    ಆರೋಗ್ಯ2 hours ago

    Dengue Fever: ಡೆಂಗ್ಯೂ ಜ್ವರ ಕಡಿಮೆ ಆದ ಮೇಲೆ ಎಚ್ಚರ ತಪ್ಪಿದರೆ ಪ್ರಾಣಾಪಾಯ!

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka Rain
    ಮಳೆ5 hours ago

    Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

    Elephant combing Makna elephant captured near Bannerghatta
    ಬೆಂಗಳೂರು ಗ್ರಾಮಾಂತರ6 hours ago

    Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

    karnataka rain
    ಮಳೆ9 hours ago

    Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

    Tungabhadra Dam
    ಕೊಪ್ಪಳ1 day ago

    Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

    Elephant attack
    ಮಳೆ1 day ago

    Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

    karnataka Rain
    ಮಳೆ1 day ago

    Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

    karnataka Rain
    ಮಳೆ1 day ago

    Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

    Karnataka weather Forecast
    ಮಳೆ2 days ago

    Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

    ramanagara news
    ರಾಮನಗರ2 days ago

    Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

    karnataka rain
    ಮಳೆ2 days ago

    Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

    ಟ್ರೆಂಡಿಂಗ್‌