Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು! - Vistara News

ಆರೋಗ್ಯ

Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

Natural Mosquito Repellents: ಸೊಳ್ಳೆಗಳಿಂದಾಗಿ ಬರುವ ರೋಗಗಳು ಒಂದಾ ಎರಡಾ? ಮಲೇರಿಯಾದಿಂದ ಹಿಡಿದು ಡೆಂಗ್ಯೂವರೆಗೆ ಸೊಳ್ಳೆಗಳ ಕಾಣಿಕೆ ಬಹಳಷ್ಟಿವೆ. ಸಣ್ಣ ಜೀವಿಗಳೆಂದು ನಿರ್ಲಕ್ಷ್ಯ ಮಾಡಲಾಗದ ಮಾಡಬಾರದ ಇವನ್ನು ಮಟ್ಟ ಹಾಕಲು ಮನುಷ್ಯ ನೂರಾರು ವಿಧಾನಗಳನ್ನು ಕಂಡು ಹಿಡಿದಿದ್ದರೂ, ಬಹಳ ಸಾರಿ ಇದರಿಂದ ಅಡ್ಡ ಪರಿಣಾಮಗಳೂ ಆಗುವುದುಂಟು. ಪ್ರಕೃತಿಯೇ ನಮಗೆ ವರದಂತೆ ಸಾಕಷ್ಟು ಉಪಾಯಗಳನ್ನು ಕೊಟ್ಟಿರುವಾಗ, ನೈಸರ್ಗಿಕ ವಿಧಾನಗಳನ್ನು ನಾವು ಯಾಕೆ ಮರೆಯಬೇಕು?

VISTARANEWS.COM


on

Mosquito Repellents
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೊಳ್ಳೆ ಎಂಬ ಪುಟಾಣಿ ಜೀವಿ ನಮ್ಮ ಬದುಕನ್ನು ಕೆಲವೊಮ್ಮೆ ಅಲ್ಲೋಲಕಲ್ಲೋಲ ಮಾಡುವುದಂತೂ ನಿಜ. ಮಳೆಗಾಲ ಬಂದ ತಕ್ಷಣ ಅದೆಲ್ಲಿಂದಲೋ ಉದ್ಭವಗೊಂಡು ಮನೆಯೊಳಗೆ ನುಸುಳಿಕೊಂಡು ನಮ್ಮ ಜೀವ ಹಿಂಡಿ ಬಿಡುತ್ತವೆ. ಸೊಳ್ಳೆಗಳಿಂದಾಗಿ ಬರುವ ರೋಗಗಳು ಒಂದಾ ಎರಡಾ? ಮಲೇರಿಯಾದಿಂದ ಹಿಡಿದು ಡೆಂಗ್ಯೂವರೆಗೆ ಸೊಳ್ಳೆಗಳ ಕಾಣಿಕೆ ಬಹಳಷ್ಟಿವೆ. ಸಣ್ಣ ಜೀವಿಗಳೆಂದು ನಿರ್ಲಕ್ಷ್ಯ ಮಾಡಲಾಗದ ಮಾಡಬಾರದ ಇವನ್ನು ಮಟ್ಟ ಹಾಕಲು ಮನುಷ್ಯ ನೂರಾರು ವಿಧಾನಗಳನ್ನು ಕಂಡು ಹಿಡಿದಿದ್ದರೂ, ಬಹಳ ಸಾರಿ ಇದರಿಂದ ಅಡ್ಡ ಪರಿಣಾಮಗಳೂ ಆಗುವುದುಂಟು. ಪ್ರಕೃತಿಯೇ ನಮಗೆ ವರದಂತೆ ಸಾಕಷ್ಟು ಉಪಾಯಗಳನ್ನು ಕೊಟ್ಟಿರುವಾಗ, ನೈಸರ್ಗಿಕ ವಿಧಾನಗಳನ್ನು ನಾವು ಯಾಕೆ ಮರೆಯಬೇಕು ಹೇಳಿ! ಬನ್ನಿ, ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ಸುರಕ್ಷಿತವಾದ Natural (Mosquito Repellents) ಉಪಾಯಗಳು.

Weight Loss with Lemongrass

ಲೆಮೆನ್‌ಗ್ರಾಸ್‌(ಮಜ್ಜಿಗೆಹುಲ್ಲು)

ನಿಂಬೆ ಘಮದ ಹುಲ್ಲೊಂದನ್ನು ನೀವು ನಿಮ್ಮ ಮನೆಗಳಲ್ಲಿ ಬೆಳೆಸಿರಬಹುದು. ಅಂಗಳದ ಮೂಲೆಯಲ್ಲೆಲ್ಲೋ ಬೆಳೆಸಿದ ಈ ಹುಲ್ಲಿನ ನಿಜವಾದ ಲಾಭವನ್ನು ನೀವು ಬಳಸಿಕೊಂಡಿದ್ದೀರಾ? ಇಲ್ಲವೆಂದಾದರೆ, ಬಳಸಿ. ಸೊಳ್ಳೆಗಳ ಕಾಲಕ್ಕೆ ಮಾರುಕಟ್ಟೆಯ ರಾಸಾಯನಿಕಯುಕ್ತ ಸೊಳ್ಳೆ ಬತ್ತಿಗಳ ಮೊರೆ ಯಾಕೆ ಹೋಗುವಿರಿ? ನಿಮ್ಮ ಮನೆಯಂಗಳದ ಈ ಲೆಮೆನ್‌ ಗ್ರಾಸ್‌ನ ಎಲೆಯನ್ನು ಸ್ವಲ್ಪ ಕೈಯಲ್ಲಿ ಕಿವುಚಿಕೊಂಡು ಅದನ್ನು ಮೈಮೇಲೆ ಸವರಿ. ಅಥವಾ ಇದರ ಎಣ್ಣೆಯನ್ನು ಮಾಡಿ ಅಥವಾ ಕೊಂಡುಕೊಂಡು ಮೈಮೇಲೆ ಹಚ್ಚಿ. ಯಾವ ಸೊಳ್ಳೆಯೂ ನಿಮ್ಮ ಹತ್ತಿರ ಏಳೆಂಟು ಗಂಟೆಗಳ ಕಾಲ ಸುಳಿಯದು.

Vinegar

ವಿನೆಗರ್‌

ಮೂರು ಕಪ್‌ ನೀರಿಗೆ ಒಂದು ಕಪ್‌ ವಿನೆಗರ್‌ ಅನ್ನು ಸೇರಿಸಿ ಒಂದು ಸ್ಪ್ರೇ ಮಾಡುವ ಬಾಟಲಿಯಲ್ಲಿ ಹಾಕಿಡಿ. ಮನೆಯಲ್ಲಿ ಬೇಕಾದ ಜಾಗದಲ್ಲಿ ಸ್ಪ್ರೇ ಮಾಡಬಹುದು. ಅಥವಾ ನಿಮ್ಮ ಮೈಮೇಲೂ ಸ್ಪ್ರೇ ಮಾಡಬಹುದು.

Lavender oil
Coffee powder

ಲ್ಯಾವೆಂಡರ್‌ ಎಣ್ಣೆ

ಸೊಳ್ಳೆಗಳಿಗೆ ಪರಿಮಳ/ವಾಸನೆ ಎಂದರೆ ಆಗದು. ಹಾಗಾಗಿ ಅವುಗಳನ್ನು ದೂರ ಓಡಿಸಲು ಲ್ಯಾವೆಂಡರ್‌ ಎಣ್ಣೆ ಸೂಕ್ತ. ಲ್ಯಾವೆಂಡರ್‌ ಎಣ್ಣೆಯನ್ನು ನಿಮ್ಮ ಮೈಮೇಲೆ ಹಚ್ಚುವ ಮೂಲಕ ಅಥವಾ ಸ್ಪ್ರೇ ಮಾಡುವ ಮೂಲಕ ಸೊಳ್ಳೆಯಿಂದ ಮುಕ್ತಿ ಪಡೆಯುವಿರಿ.

Tulsi Plant

ತುಳಸಿ

ಮೇಲೆ ಹೇಳಿರುವುದೆಲ್ಲವುಗಳು ಸಿಗುತ್ತಿಲ್ಲವಾದರೆ ತುಳಸಿಯನ್ನು ಬಳಸಿ. ತುಳಸಿ ಎಲ್ಲರಿಗೂ ಸುಲಭವಾಗಿ ಲಭ್ಯವಿರುವ ಸಸ್ಯ. ತುಳಸಿಯ ಎಣ್ಣೆಯನ್ನು ಮೈಮೇಲೆ ಹಚ್ಚುವುದರಿಂದ ಸೊಳ್ಳೆ ನಿಮ್ಮ ಹತ್ತಿರ ಸುಳಿಯದು. ಎಣ್ಣೆ ಮಾಡಲಾಗದಿದ್ದರೆ, ತುಳಸಿ ಎಲೆಯನ್ನು ಕಿವುಚಿಕೊಂಡು ಚರ್ಮದ ಮೇಲೆ ಹಚ್ಚಿಕೊಳ್ಳಿ.

Coffee powder

ಕರ್ಪೂರ

ಕರ್ಪೂರವಂತೂ ಎಲ್ಲರ ಮನೆಗಳಲ್ಲಿ ದೇವರ ಕೋನೆಯಲ್ಲಿ ಇದ್ದೇ ಇರುತ್ತದೆ. ಸ್ವಲ್ಪ ನೀರಿನಲ್ಲಿ ಕರ್ಪೂರವನ್ನು ಕರಗಿಸಿಕೊಂಡು ಅದನ್ನು ನಿಮ್ಮ ಮನೆಯೊಳಗೆ ಹಾಗೂ ಸೊಳ್ಳೆ ಬರುವ ಜಾಗಗಳಿಗೆ ಸ್ಪ್ರೇ ಮಾಡಿ. ಜೊತೆಗೆ ಮನೆಯ ಕಿಟಕಿ ಬಾಗಿಲುಗಳನ್ನೆಲ್ಲ ಮುಚ್ಚಿ, ೨೦ ನಿಮಿಷಗಳ ಕಾಲ ಕರ್ಪೂರವನ್ನು ಮನೆಯೊಳಗೆ ಹೊತ್ತಿಸಿಟ್ಟು ನೀವು ಹೊರಗಿರಿ. ಸೊಳ್ಳೆಗಳೆಲ್ಲ ಓಡುತ್ತವೆ.

Coconut oil and bitter neem oil

ತೆಂಗಿನೆಣ್ಣೆ ಹಾಗೂ ಕಹಿ ಬೇವಿನೆಣ್ಣೆ

ಈ ಎರಡೂ ಎಣ್ನೆಗಳನ್ನು ಮಿಕ್ಸ್‌ ಮಾಡಿ ನೀರನ್ನೂ ಸ್ವಲ್ಪ ಸೇರಿಸಿ, ನಿಮ್ಮ ಮೈಮೇಲೆ ಸಿಂಪಡಿಸಿಕೊಳ್ಳಬಹುದು. ಸುಮಾರು ನಾಲ್ಕೈದು ಗಂಟಗಳ ಕಾಲ ಸೊಳ್ಲೆಗಳಿಂದ ನಿಮಗೆ ರಕ್ಷಣೆ ದೊರೆಯುತ್ತದೆ.

Coffee powder

ಕಾಫಿ

ಕಾಫಿ ಪುಡಿಯನ್ನು ಒಂದು ಟ್ರೇಯಲ್ಲಿಟ್ಟು ಬೆಂಕಿ ಕೊಡಿ. ಇದನ್ನು ಉರಿಸುವುದರಿಂದ ಸೊಳ್ಳೆಗಳು ಓಡಿಹೋಗುತ್ತವೆ.

ಇದನ್ನೂ ಓದಿ: Ways to Prevent Gray Hair: 30 ದಾಟುವ ಮೊದಲೇ ಕೂದಲು ಬೆಳ್ಳಗಾಗುತ್ತಿದೆಯೇ? ಇದಕ್ಕಿದೆ ಸರಳ ಪರಿಹಾರ

ಚೆಕ್ಕೆ ಎಣ್ಣೆ

ಚೆಕ್ಕೆಯನ್ನು ಕೇವಲ ಪಲಾವಿಗೆ ಮಾತ್ರ ಬಳಸುತ್ತೀರಾ? ಇದನ್ನು ಸೊಳ್ಳೆಯ ವಿರುದ್ಧವೂ ಬಳಸಿ ನೋಡಿ. ಚೆಕ್ಕೆಯ ಎಣ್ಣೆಯಲ್ಲಿ ಸೊಳ್ಳೆಯ ಮೊಟ್ಟೆಗಳೆಲ್ಲ ಸಾಯುತ್ತವಂತೆ. ದೊಡ್ಡ ಸೊಳ್ಳೆಗಳು ಚೆಕ್ಕೆ ಎಣ್ಣೆಗೆ ಹೆದರಿ ಓಡುತ್ತವಂತೆ. ಮೈಮೇಲೆ ಸ್ವಲ್ಪ ಹಚ್ಚಿಕೊಂಡರೂ ಸಾಕು, ಸೊಳ್ಳೆ ನಿಮ್ಮನ್ನು ಮೂಸುವ ಧೈರ್ಯವನ್ನೂ ಮಾಡಲಾರದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Dengue Fever: ಡೆಂಗ್ಯೂ ಜ್ವರ ಕಡಿಮೆ ಆದ ಮೇಲೆ ಎಚ್ಚರ ತಪ್ಪಿದರೆ ಪ್ರಾಣಾಪಾಯ!

Dengue Fever: ರಾಜ್ಯದಲ್ಲಿ ಬಿಟ್ಟೂ ಬಿಡದಂತೆ ಕಾಡುತ್ತಿರುವ ಡೆಂಗ್ಯೂ ತನ್ನ ರೌದ್ರತೆಯನ್ನು ಹೆಚ್ಚಿಸುತ್ತಲೇ ಹೋಗುತ್ತಿದೆ. ಡೆಂಗ್ಯೂ ಬಂದು, ವಾಸಿಯಾದ ಬಳಿಕವೇ ಆ ವ್ಯಕ್ತಿಯನ್ನು ಇನ್ನಷ್ಟು ನಲುಗಿಸುತ್ತಿದೆ. ಡೆಂಗ್ಯು ವಾಸಿಯಾದ ಬಳಿಕ ದೇಹದಲ್ಲಿ ಬಿಳಿರಕ್ತ ಕಣ (ಪ್ಲೇಟ್‌ಲೆಟ್ಸ್‌)ಗಳನ್ನು ಕಾಪಾಡಿಕೊಳ್ಳುವುದು ಹಾಗೂ ಡೆಂಗ್ಯೂ ಚಿಕಿತ್ಸೆಯ ಬಗ್ಗೆ ಆರೋಗ್ಯ ಪರಿಣತರು ಇಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Dengue Fever
Koo

-ಡಾ ವಿಕಾಸ್ ನಾಯಕ್, ಸಲಹೆಗಾರ, ನ್ಯೂರೋಸರ್ಜರಿ, ಫೋರ್ಟಿಸ್ ಆಸ್ಪತ್ರೆ, ರಾಜಾಜಿ ನಗರ, ಬೆಂಗಳೂರು
ಎಲ್ಲರಿಗೂ ತಿಳಿದಿರುವಂತೆ ಡೆಂಗ್ಯೂ ಸೊಳ್ಳೆಯಿಂದ ಹರಡುವ ಸೋಂಕು. ಜ್ವರ, ತಲೆನೋವು ಮತ್ತು ದೇಹದ ನೋವುಗಳಂತಹ ಸೌಮ್ಯ ಲಕ್ಷಣಗಳಿಂದ ಉಂಟಾಗುವ ಡೆಂಗ್ಯೂ (Dengue Fever) ಪ್ರಾರಂಭದಲ್ಲಿ ಸಾಮಾನ್ಯ ಜ್ವರದಂತೆಯೇ ಭಾಸವಾಗುತ್ತದೆ. ಸಾಮಾನ್ಯವಾಗಿ ಜ್ವರ ಪ್ರಾರಂಭವಾದ 3-7 ದಿನಗಳ ನಂತರ ಕಾಣಿಸಿಕೊಳ್ಳುತ್ತವೆ ಜ್ವರವೆಂದು ನಿರ್ಲಕ್ಷಿಸಿ ಕೇವಲ ಜ್ವರ, ಮೈ-ಕೈ ನೋವಿನ ಮಾತ್ರೆ ತೆಗೆದುಕೊಂಡು ಸುಮ್ಮನಾದರೆ ಸಾಲದು. ನಾಲ್ಕೈದು ದಿನವಾದರೂ ದೇಹದಲ್ಲಿ ನಿಶ್ಶಕ್ತಿ, ನಿರಂತರ ವಾಂತಿ, ತೀವ್ರವಾದ ಹೊಟ್ಟೆ ನೋವು, ಉಸಿರಾಟದ ತೊಂದರೆ, ಒಸಡುಗಳಲ್ಲಿ ರಕ್ತಸ್ರಾವ, ಮೂಗಿನ ರಕ್ತಸ್ರಾವ ಅಥವಾ ವಾಂತಿ ಅಥವಾ ಮಲದಲ್ಲಿನ ರಕ್ತದ ರೋಗಲಕ್ಷಣಗಳಿದ್ದರೆ ತಕ್ಷಣ ವೈದ್ಯಕೀಯ ಆರೈಕೆಯನ್ನು ಪಡೆಯಿರಿ.

man have a fever

ಪ್ಲೇಟ್‌ಲೆಟ್ಸ್‌ಗಳ ಬಗ್ಗೆ ಅರಿವಿರಲಿ

ಸಾಕಷ್ಟು ಜನರಿಗೆ ಅದರಲ್ಲೂ ಗ್ರಾಮೀಣ ಭಾಗದ ಜನರಿಗೆ ಬಿಳಿ ರಕ್ತಕಣಗಳ ಬಗ್ಗೆ ಅಷ್ಟಾಗಿ ಅರಿವಿರುವುದಿಲ್ಲ. ಆದರೆ, ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಅಭಿವೃದ್ಧಿ ಪಡಿಸುವಲ್ಲಿ ಬಿಳಿರಕ್ತ ಕಣಗಳ ಪಾತ್ರ ದೊಡ್ಡದು. ಇದರ ಪ್ರಮಾಣ ಕುಸಿದರೆ ಜೀವವೇ ಹೋಗಬಹುದು. ಡೆಂಗ್ಯೂ ಬಂದ ವಾಸಿಯಾದ ಬಳಿಕ ಬಿಳಿರಕ್ತಕಣಗಳು, ಸಣ್ಣ ರಕ್ತ ಕಣ್ಣಗಳು ಕುಸಿತದ ಜೊತೆಗೆ ರಕ್ತವು ಹೆಪ್ಪುಗಟ್ಟುವ ಸಾಧ್ಯತೆ ಇರುತ್ತದೆ. ಹೀಗಾಗಿ ಕೂಡಲೇ ದೇಹದಲ್ಲಿ ಪ್ಲೇಟ್‌ಲೇಟ್ಸ್‌ಗಳನ್ನು ಹೆಚ್ಚಿಸುವ ಚಿಕಿತ್ಸೆ ಪಡೆಯುವುದು ಅತಿ ಅವಶ್ಯಕ.

ಆಂತರಿಕ ರಕ್ತಸ್ರಾವವೂ ಆಗಬಹುದು

ಕೇವಲ ಪ್ಲೇಟ್‌ಲೇಟ್ಸ್‌ಗಳು ಕಡಿಮೆಯಾಗುವುದಷ್ಟೇ ಅಲ್ಲದೆ, ದೇಹದ ಒಳಗಡೆ ರಕ್ತಸ್ರಾವವಾಗುವ ಸಾಧ್ಯತೆಯೂ ಹೆಚ್ಚು. ಹೊಟ್ಟೆ, ಕರುಳು, ಯಕೃತ್‌, ಮೆದುಳು ಸೇರಿದಂತ ವಿವಿಧ ಅಂಗಗಳಲ್ಲಿ ಈ ಆಂತರಿಕ ರಕ್ತಸ್ತ್ರಾವವಾಗಬಹುದು. ಆಂತರಿಕ ರಕ್ತಸ್ರಾವದ ಲಕ್ಷಣಗಳು ಪ್ರಾರಂಭದಲ್ಲಿ ಸೂಕ್ಷ್ಮವಾಗಿದ್ದರೂ, ನಂತರದಲ್ಲಿ ವೇಗವಾಗಿ ಪ್ರಗತಿ ಹೊಂದಬಹುದು. ನಿರಂತರ ವಾಂತಿ, ಕಪ್ಪು ಮಲ, ಮೂತ್ರದಲ್ಲಿ ರಕ್ತ, ತೀವ್ರವಾದ ಹೊಟ್ಟೆ ನೋವು ಇದು ಆಂತರಿಕ ರಕ್ತಸ್ತ್ರಾವದ ಲಕ್ಷಣಗಳು.

doctor and patient

ಚಿಕಿತ್ಸೆ ಏನು?

ಡೆಂಗ್ಯುಗೆ ಇಂಥದ್ದೇ ನಿಖರ ಚಿಕಿತ್ಸೆಗಳಿಲ್ಲ. ಹೆಚ್ಚು ಜ್ವರವಿದ್ದರೆ, ಅದರ ನಿಯಂತ್ರಣಕ್ಕೆ ವೈದ್ಯರು ಔಷಧಿ ನೀಡಲಿದ್ದಾರೆ. ಒಂದು ವೇಳೆ ಪ್ಲೇಟ್‌ಲೆಟ್ಸ್‌ಗಳ ಕುಸಿತ ಕಂಡು ಬಂದರೆ ಕೂಡಲೇ ಅವರಿಗೆ ಆಸ್ಪತ್ರೆಯಲ್ಲಿ ತುರ್ತು ಮೇಲ್ವಿಚಾರಣೆಯ ಅಗತ್ಯವಿರುತ್ತದೆ. ಪ್ಲೇಟ್‌ಲೇಟ್‌ಗಳ ಸಂಖ್ಯೆ ಕುಸಿಯುತ್ತಲೇ ಇದ್ದರೆ, ವೈದ್ಯರು ಪ್ಲೇಟ್‌ಲೇಟ್‌ಗಳನ್ನು ದೇಹಕ್ಕೆ ಡ್ರಿಪ್ಸ್‌ ಮೂಲಕ ಹಾಕಲಾಗುತ್ತದೆ.

ಇದನ್ನೂ ಓದಿ: Nonstick Pans: ನಾನ್‌ಸ್ಟಿಕ್‌ ಪಾತ್ರೆಗಳ ತಪ್ಪು ಬಳಕೆಯಿಂದಲೂ ಜ್ವರ ಬಾಧಿಸುತ್ತದೆ!

ನಿಯಂತ್ರಣ ಹೇಗೆ?

ಮೊದಲಿಗೆ ನಿಮ್ಮ ಸುತ್ತಲಿನ ಪ್ರದೇಶವನ್ನು ಸೊಳ್ಳೆ ಮುಕ್ತಗೊಳಿಸಿಕೊಳ್ಳಿ. ಎಲ್ಲಿಯೂ ನೀರು ನಿಲ್ಲದಂತೆ ನಿಗಾ ವಹಿಸಿ. ದೇಹವನ್ನು ಸಂಪೂರ್ಣ ಮುಚ್ಚುವ ಉಡುಪು ಧರಿಸಿ, ಬೆಳಗ್ಗೆ ಹಾಗೂ ಸಂಜೆ ಸಂದರ್ಭದಲ್ಲಿ ಪಾರ್ಕ್‌ಗಳಲ್ಲಿ ವಾಕ್‌ಗೆ ಹೋಗುವುದನ್ನು ನಿಯಂತ್ರಿಸಿ, ಬೇರೆ ಸಂದರ್ಭದಲ್ಲಿ ವಾಕ್‌ಗೆ ತೆರಳುವುದು ಉತ್ತಮ.

Continue Reading

ಆರೋಗ್ಯ

Curry Leaves: ಇದರ ಮಹತ್ವ ತಿಳಿದರೆ ನೀವು ಇನ್ನೆಂದೂ ಕರಿ ಬೇವಿನ ಎಲೆಯನ್ನು ಪಕ್ಕಕ್ಕೆ ಎತ್ತಿಡುವುದಿಲ್ಲ!

Curry Leaves: ಕರಿಬೇವನ್ನು ಒಗ್ಗರಣೆಗೆ ಬಳಸಿ ಬಿಸಾಡುತ್ತೇವೆ. ಆದರೆ ಈ ಕರಿಬೇವಿನಲ್ಲಿರುವ ಅಂಶಗಳು ನಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಸಹಾಯ ಮಾಡುವಲ್ಲಿ ತುಂಬಾ ಸಹಾಯಕಾರಿಯಾಗಿದೆ. ಇದರಲ್ಲಿ ವಿಟಮಿನ್ ಎ, ಬಿ, ಸಿ, ಕ್ಯಾಲ್ಸಿಯಂ, ರಂಜಕ ಮತ್ತು ಕಬ್ಬಿಣದಿಂದ ಸಮೃದ್ಧವಾಗಿದ್ದು, ಇದನ್ನು ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.ಇನ್ಮುಂದೆ ಊಟದಲ್ಲಿ ತಟ್ಟೆಯಲ್ಲಿ ಸಿಕ್ಕ ಕರಿಬೇವನ್ನು ಬಿಸಾಡುವ ಮೊದಲು ಯೋಚಿಸಿ.

VISTARANEWS.COM


on

Curry Leaves
Koo


ಕರಿಬೇವಿನ ಎಲೆಗಳನ್ನು ಅಡುಗೆಯಲ್ಲಿ ಹೆಚ್ಚು ಬಳಸುತ್ತಾರೆ. ಕಾರಣ, ಇದು ಅಡುಗೆಯ ಪರಿಮಳವನ್ನು ಹೆಚ್ಚಿಸುತ್ತದೆ. ಅಷ್ಟು ಮಾತ್ರವಲ್ಲದೆ ಇದು ಪೋಷಕಾಂಶಗಳ ನಿಧಿಯಾಗಿದೆ. ಇದರಲ್ಲಿ ವಿಟಮಿನ್ ಎ, ಬಿ, ಸಿ, ಕ್ಯಾಲ್ಸಿಯಂ, ರಂಜಕ ಮತ್ತು ಕಬ್ಬಿಣದಿಂದ ಸಮೃದ್ಧವಾಗಿದ್ದು, ಇದನ್ನು ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಕರಿಬೇವಿನ ಎಲೆಗಳನ್ನು ಅಡುಗೆಯಲ್ಲಿ ಬಳಸುವ ಮೂಲದ ಇಲ್ಲವಾದರೆ ಹಸಿಯಾಗಿ ಜಗಿಯುವುದು ಅಥವಾ ಅವುಗಳ ರಸವನ್ನು ಕುಡಿಯುವುದರಿಂದ ಕೂಡ ನಮ್ಮ ಆರೋಗ್ಯವನ್ನು(Curry Leaves) ವೃದ್ಧಿಸಿಕೊಳ್ಳಬಹುದು.

Curry Leaves
Curry Leaves

ಕೂದಲಿನ ಬೆಳವಣಿಗೆಗೆ ಸಹಾಯಕಾರಿ

ಕರಿಬೇವಿನ ಎಲೆಗಳನ್ನು ಜಗಿಯುವುದು ಅಥವಾ ಅವುಗಳ ರಸವನ್ನು ಕುಡಿಯುವುದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ.

Curry Leaves
Curry Leaves

ಚರ್ಮಕ್ಕೆ ವರದಾನ

ಕರಿಬೇವಿನ ಎಲೆಗಳು ಚರ್ಮಕ್ಕೆ ವರದಾನವಾಗಿದ್ದು, ಇದು ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ, ಮೊಡವೆಗಳು, ಸೂಕ್ಷ್ಮ ರೇಖೆಗಳು ಮತ್ತು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ.

Curry Leaves
Curry Leaves

ತೂಕ ಕಡಿಮೆ ಮಾಡುವಲ್ಲಿ ಸಹಾಯಕ

ಬೆಳಗ್ಗೆ ಕರಿಬೇವಿನ ಎಲೆಗಳು ಅಥವಾ ಅವುಗಳ ರಸವನ್ನು ಸೇವಿಸುವುದರಿಂದ ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಿಂದ ದೇಹ ನಿರ್ವಿಷಗೊಳ್ಳುತ್ತದೆ ಮತ್ತು ಇದು ತೂಕವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.

ರಕ್ತಹೀನತೆ ನಿವಾರಣೆ

ಕರಿಬೇವಿನಲ್ಲಿ ಕಬ್ಬಿಣದ ಸತ್ವಗಳು ಸಮೃದ್ಧವಾಗಿದೆ. ಕರಿಬೇವಿನ ಎಲೆಗಳು ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗಾಗಿ ರಕ್ತಹೀನತೆ ಮತ್ತು ಅದಕ್ಕೆ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುತ್ತದೆ.

Curry Leaves
Curry Leaves

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ

ಕರಿಬೇವಿನ ಎಲೆಯ ರಸವು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ, ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಕಡಿಮೆ ರಕ್ತದಲ್ಲಿ ಸಕ್ಕರೆಯಂಶ ಕಡಿಮೆ ಇರುವ ವ್ಯಕ್ತಿಗಳು ಕರಿಬೇವಿನ ಎಲೆಯ ರಸವನ್ನು ಸೇವಿಸುವುದನ್ನು ತಪ್ಪಿಸಬೇಕು.

Curry Leaves
Curry Leaves

ಒತ್ತಡ, ಆತಂಕ ನಿವಾರಣೆ

ಇದಲ್ಲದೇ ಕರಿಬೇವನ್ನು ಸೇವಿಸುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ವಾಕರಿಕೆಯನ್ನು ನಿವಾರಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಕಣ್ಣಿನ ಆರೋಗ್ಯವನ್ನು ಉತ್ತಮವಾಗಿಸುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಹಾಗಾಗಿ ಪ್ರತಿದಿನ ಬೆಳಗ್ಗೆ 5-6 ತಾಜಾ ಕರಿಬೇವಿನ ಎಲೆಗಳನ್ನು ಜಗಿಯಿರಿ. ಅಥವಾ ಕರಿಬೇವಿನ ಎಲೆಯ ರಸ 1 ಚಮಚದಷ್ಟು ನೀರಿನೊಂದಿಗೆ ಬೆರೆಸಿ ಕುಡಿಯಿರಿ. ನಿಮ್ಮ ಊಟಕ್ಕೆ ಕರಿಬೇವಿನ ಎಲೆಗಳನ್ನು ಸೇರಿಸಿ.

ಇದನ್ನೂ ಓದಿ: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

ಆದರೆ ನೀವು ನಿಮ್ಮ ಆಹಾರದಲ್ಲಿ ಕರಿಬೇವನ್ನು ಬಳಸುವ ಮುನ್ನ ವೈದ್ಯರ ಸಲಹೆ ಪಡೆಯಿರಿ. ಯಾಕೆಂದರೆ ಕೆಲವೊಂದು ಆರೋಗ್ಯಕರ ವಸ್ತುಗಳು ದೇಹಕ್ಕೆ ಅನುಕೂಲಕರವಾಗಿದ್ದರೂ ಕೆಲವೊಮ್ಮೆ ಅಡ್ಡಪರಿಣಾಮಗಳನ್ನುಂಟುಮಾಡುವ ಸಂಭವವಿದೆ. ಹಾಗಾಗಿ ವೈದ್ಯರ ಸಲಹೆಯಂತೆ ಸೇವಿಸಿ.

Continue Reading

ಆರೋಗ್ಯ

Health Tips: ಗ್ಯಾಸ್ಟ್ರಿಕ್‌, ಅಜೀರ್ಣ ಸಮಸ್ಯೆಗೆ ನಿಮ್ಮ ಮನೆಯಲ್ಲೇ ಇದೆ ಪರಿಣಾಮಕಾರಿ ಮದ್ದು!

ದೇಹವು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗದಿದ್ದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಫೈಬರ್ ಭರಿತ ಆಹಾರಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದಲ್ಲದೆ ಕೆಲವು ಸಾಮಾನ್ಯ ಅಡುಗೆ ಪದಾರ್ಥಗಳಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ (Health Tips) ಮುಕ್ತಿ ಪಡೆಯಬಹುದು. ನಮ್ಮನ್ನು ಹೆಚ್ಚಾಗಿ ಕಾಡುವ ಹಲವು ಸಮಸ್ಯೆಗಳಿಗೆ ಇರುವ ಮನೆಮದ್ದಿನ ಮಾಹಿತಿ ಇಲ್ಲಿದೆ.

VISTARANEWS.COM


on

By

Health Tips
Koo

ಎದೆಯುರಿ (heartburn), ಅಜೀರ್ಣ (indigestion) ಮತ್ತು ಗ್ಯಾಸ್ಟ್ರಿಕ್ (gastric) ಮೊದಲಾದ ಆರೋಗ್ಯ (Health Tips) ಸಮಸ್ಯೆಗಳು ನಾವು ಸಾಮಾನ್ಯ ಎಂದುಕೊಂಡಿರುತ್ತೇವೆ. ಆದರೆ ಇದನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಬಹುದು. ಜೀರ್ಣಕಾರಿ ಸಮಸ್ಯೆಗಳು (Digestive issues) ಅನೇಕ ಜನರಿಗೆ ಸಾಮಾನ್ಯ ಸಮಸ್ಯೆಗಳಾಗಿವೆ. ದುರ್ಬಲ ಜೀರ್ಣಾಂಗ ವ್ಯವಸ್ಥೆಯಿಂದಾಗಿ ಇದು ಉಂಟಾಗುತ್ತದೆ. ಇದರಿಂದ ಹೊಟ್ಟೆ ಉಬ್ಬುವುದು, ಹೊಟ್ಟೆ ಭಾರ ಮತ್ತು ಊಟದ ಅನಂತರ ಎದೆಯುರಿ ಮೊದಲಾದವುಗಳು ಕಾಣಿಸಿಕೊಳ್ಳುತ್ತವೆ.

ದೇಹವು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಮತ್ತು ಹೀರಿಕೊಳ್ಳಲು ಸಾಧ್ಯವಾಗದಿದ್ದರೆ ಪೋಷಕಾಂಶಗಳ ಕೊರತೆಗೆ ಕಾರಣವಾಗುವುದರಿಂದ ಈ ಸಮಸ್ಯೆಗಳನ್ನು ಪರಿಹರಿಸುವುದು ಮುಖ್ಯವಾಗಿದೆ. ಫೈಬರ್ ಭರಿತ ಆಹಾರಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಲ್ಲದೆ ಹೆಚ್ಚುವರಿಯಾಗಿ ಕೆಲವು ಸಾಮಾನ್ಯ ಅಡುಗೆ ಪದಾರ್ಥಗಳಿಂದ ಈ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಜೀರ್ಣಕಾರಿ ಅಸ್ವಸ್ಥತೆಯನ್ನು ನಿವಾರಿಸಲು ಸಹಾಯ ಮಾಡುವ ನಾಲ್ಕು ಪರಿಹಾರಗಳು ಇಲ್ಲಿವೆ.

Health Tips
Health Tips


ಸೋಂಪು ಕಾಳು

ಸೋಂಪು ಕಾಳುಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಾಂಪ್ರದಾಯಿಕ ಪರಿಹಾರವಾಗಿದೆ. ಊಟದ ಅನಂತರ ಉಬ್ಬುವುದು ಮತ್ತು ಅಸ್ವಸ್ಥತೆಯನ್ನು ನಿವಾರಿಸಲು ಅವುಗಳನ್ನು ಶತಮಾನಗಳಿಂದ ಬಳಸಲಾಗುತ್ತದೆ. ಊಟದ ಅನಂತರ ಸೋಂಪು ಕಾಳುಗಳನ್ನು ಅಗಿಯುವುದು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

ಬಳಸುವುದು ಹೇಗೆ ?

ಊಟದ ಅನಂತರ ಒಂದು ಟೀಚಮಚ ಸೋಂಪು ಕಾಳನ್ನು ಜಗಿದು ತಿನ್ನಿ. ಅಥವಾ ಒಂದು ಲೋಟ ನೀರಿನಲ್ಲಿ ಒಂದು ಟೀಚಮಚ ಸೋಂಪು ಕಾಳುಗಳನ್ನು ಕುದಿಸಿ, ಸೋಸಿಕೊಂಡು ಬೆಚ್ಚಗೆ ಕುಡಿಯಬಹುದು.

Health Tips
Health Tips


ಅಜ್ವೈನ್

ಅಜ್ವೈನ್ ಬೀಜಗಳು ಜೀರ್ಣಕ್ರಿಯೆಯನ್ನು ಸುಧಾರಿಸುವ ಗುಣ ಹೊಂದಿದೆ. ಆಮ್ಲೀಯತೆ, ಉಬ್ಬುವುದು ಮತ್ತು ಹೊಟ್ಟೆ ನೋವಿಗೆ ಇದು ಪರಿಹಾರವನ್ನು ನೀಡಬಹುದು. ಅಜ್ವೈನ್ ಗ್ಯಾಸ್ಟ್ರಿಕ್ ಜ್ಯೂಸ್ ಸ್ರವಿಸುವಿಕೆಯಲ್ಲಿ ಸಹಾಯ ಮಾಡುತ್ತದೆ, ಹೀಗಾಗಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಬಳಸುವುದು ಹೇಗೆ?

ಅಜ್ವೈನ್ ನ ಕೆಲವು ಬೀಜಗಳನ್ನು ಊಟದ ಅನಂತರ ಜಗಿಯಬಹುದು ಅಥವಾ ಒಂದು ಟೀ ಚಮಚ ಅಜ್ವೈನ್ ಬೀಜಗಳನ್ನು ಒಂದು ಕಪ್ ನೀರಿನಲ್ಲಿ ಕುದಿಸಿ ಮತ್ತು ಅದನ್ನು ಕುಡಿಯಬಹುದು.

Health Tips
Health Tips


ಏಲಕ್ಕಿ

ಏಲಕ್ಕಿಯನ್ನು ಸಾಮಾನ್ಯವಾಗಿ ಖಾರ ಮತ್ತು ಸಿಹಿ ತಿನಿಸುಗಳಲ್ಲಿ ಬಳಸಲಾಗುತ್ತದೆ. ಇದು ನೈಸರ್ಗಿಕ ಮೌತ್ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಏಲಕ್ಕಿಯು ಗ್ಯಾಸ್ ಮತ್ತು ಅಜೀರ್ಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯುಬ್ಬರಕ್ಕೆ ಪರಿಹಾರವನ್ನು ನೀಡುತ್ತದೆ.

ಬಳಸುವುದು ಹೇಗೆ?

ಊಟದ ಅನಂತರ ಏಲಕ್ಕಿಯನ್ನು ಅಗಿಯಿರಿ. ಇದು ರುಚಿಯನ್ನು ಹೆಚ್ಚಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Health Tips
Health Tips


ಇಂಗು

ಇಂಗು ಕಟುವಾದ ಪರಿಮಳ ಮತ್ತು ಜೀರ್ಣಕ್ರಿಯೆಗೆ ಪ್ರಯೋಜನಕಾರಿಯಾಗಿದೆ. ಇದು ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇಂಗು ಜೀರ್ಣಕಾರಿ ಕಿಣ್ವಗಳ ಬಿಡುಗಡೆಯನ್ನು ಉತ್ತೇಜಿಸುತ್ತದೆ ಮತ್ತು ಜೀರ್ಣಕಾರಿ ಪ್ರಕ್ರಿಯೆಯನ್ನು ಸುಧಾರಿಸುತ್ತದೆ.

ಬಳಸುವುದು ಹೇಗೆ?

ಒಂದು ಚಿಟಿಕೆ ಇಂಗನ್ನು ಬೆಚ್ಚಗಿನ ನೀರಿನಲ್ಲಿ ಕರಗಿಸಿ ಮತ್ತು ಊಟದ ಅನಂತರ ಕುಡಿಯಿರಿ ಅಥವಾ ಉತ್ತಮ ಜೀರ್ಣಕ್ರಿಯೆಗಾಗಿ ಇದನ್ನು ಒಗ್ಗರಣೆಯಲ್ಲಿ ಸೇರಿಸಬಹುದು.

ಇದನ್ನೂ ಓದಿ: Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

ಉತ್ತಮ ಜೀರ್ಣಕ್ರಿಯೆಗೆ ಸಲಹೆಗಳು

ಜೀರ್ಣಕ್ರಿಯೆಗೆ ಸಹಾಯ ಮಾಡಲು ದಿನವಿಡೀ ಸಾಕಷ್ಟು ನೀರು ಕುಡಿಯಿರಿ.

ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿರಲು ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಸರಿಯಾಗಿ ಜಗಿದು ತಿನ್ನಿ.
ಜೀರ್ಣಾಂಗ ವ್ಯವಸ್ಥೆಯನ್ನು ಓವರ್‌ಲೋಡ್ ಮಾಡಬೇಡಿ. ಚಿಕ್ಕ ಪ್ರಮಾಣದಲ್ಲಿ ಆಗಾಗ್ಗೆ ಸೇವಿಸಿ.

ದೈಹಿಕ ಚಟುವಟಿಕೆಯು ಜೀರ್ಣಕಾರಿ ಪ್ರಕ್ರಿಯೆಯನ್ನು ಉತ್ತೇಜಿಸಲು ಮತ್ತು ಉಬ್ಬುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Continue Reading

ಆರೋಗ್ಯ

Monsoon Healthy Cooking Tips: ಮಳೆಗಾಲದಲ್ಲಿ ಸೊಪ್ಪಿನ ಅಡುಗೆ ಮಾಡುವ ಮುನ್ನ ಈ ಎಚ್ಚರಿಕೆಗಳನ್ನು ವಹಿಸಿ

Monsoon Healthy Cooking Tips: ಎಲ್ಲೆಲ್ಲೂ ವೈರಲ್‌ ಜ್ವರಗಳು, ಇನ್‌ಫೆಕ್ಷನ್‌ ಸಮಸ್ಯೆಗಳು, ಮಳೆಗಾಲದಲ್ಲಿ ಕಾಡುವ ಶೀತ, ನೆಗಡಿ, ಕೆಮ್ಮು, ಕಫಗಳೂ ಹೆಚ್ಚಾಗಿವೆ. ಮಳೆಗಾಲದ ಸಂಭ್ರಮದ ಜೊತೆ ಈ ಎಲ್ಲ ಸಮಸ್ಯೆಗಳೂ ನಮ್ಮನ್ನು ಒಮ್ಮೆಯಾದರೂ ಕಾಡದೆ ಹೋಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರವೂ ಮುಖ್ಯವಾಗುತ್ತದೆ. ಮಳೆಗಾಲದಲ್ಲಿ ಕೆಲವು ಆಹಾರಗಳನ್ನು ನಾವು ಕಡಿಮೆ ಮಾಡಬಹುದು. ಅವುಗಳಲ್ಲಿ ಮುಖ್ಯವಾದುದು ಹಸಿರು ಸೊಪ್ಪು.

VISTARANEWS.COM


on

Monsoon Healthy Cooking Tips
Koo

ಮಳೆಗಾಲ (Monsoon) ಜೋರಾಗಿದೆ. ಹಾಗಾಗಿ ವೈರಸ್‌, ಬ್ಯಾಕ್ಟೀರಿಯಾಗಳ ಸದ್ದೂ ಜೋರಾಗಿದೆ. ಎಲ್ಲೆಲ್ಲೂ ವೈರಲ್‌ ಜ್ವರಗಳು, ಇನ್‌ಫೆಕ್ಷನ್‌ ಸಮಸ್ಯೆಗಳು, ಮಳೆಗಾಲದಲ್ಲಿ ಕಾಡುವ ಶೀತ, ನೆಗಡಿ, ಕೆಮ್ಮು, ಕಫಗಳೂ ಹೆಚ್ಚಾಗಿವೆ. ಮಳೆಗಾಲದ ಸಂಭ್ರಮದ ಜೊತೆ ಈ ಎಲ್ಲ ಸಮಸ್ಯೆಗಳೂ ನಮ್ಮನ್ನು ಒಮ್ಮೆಯಾದರೂ ಕಾಡದೆ ಹೋಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರವೂ ಮುಖ್ಯವಾಗುತ್ತದೆ. ಮಳೆಗಾಲದಲ್ಲಿ ಕೆಲವು ಆಹಾರಗಳನ್ನು ನಾವು ಕಡಿಮೆ ಮಾಡಬಹುದು. ಅವುಗಳಲ್ಲಿ ಮುಖ್ಯವಾದುದು ಹಸಿರು ಸೊಪ್ಪು. ಸೊಪ್ಪಿನ ಅಡುಗೆ ಮಾಡುವ ಮುನ್ನ ಮಳೆಗಾಲದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಹಾಗಂತ ಮಳೆಗಾಲದಲ್ಲಿ ಇವನ್ನು ತಿನ್ನಲೇಬಾರದು ಎಂದಲ್ಲ. ಎಚ್ಚರಿಕೆ ಖಂಡಿತ ಬೇಕು. ಮಳೆಗಾಲದಲ್ಲಿ ಸೊಪ್ಪಿನ ಮೇಲೆ ಸಾಕಷ್ಟು ಬ್ಯಾಕ್ಟೀರಿಯಾ, ವೈರಸ್‌ ದಾಳಿಯಾಗಿರುತ್ತದೆ. ಹುಳು ಹುಪ್ಪಟೆಗಳೂ ಸಾಮಾನ್ಯ. ಆದ್ದರಿಂದ ಇವುಗಳು ನಮ್ಮ ದೇಹಕ್ಕೆ ಪ್ರವೇಶಿಸುವ ಮಾರ್ಗ ಸುಲಭವಾಗಿ ಬಿಡುತ್ತದೆ. ನಾವು ಅವುಗಳನ್ನು ಸರಿಯಾಗಿ ತೊಳೆದು ಬಳಸದಿದ್ದರೆ ಹೊಟ್ಟೆ ಕೆಡುವ ಸಮಸ್ಯೆ, ಬೇದಿ, ವಾಂತಿ ಇತ್ಯಾದಿಗಳೂ ಬರಬಹುದು. ಹಾಗಾಗಿ, ಮಳೆಗಾಲದಲ್ಲಿ ಸೊಪ್ಪು ಸದೆಗಳನ್ನು ಅಡುಗೆ ಮಾಡುವ ಮುನ್ನ ಸಾಕಷ್ಟು ಎಚ್ಚರಿಕೆ ವಹಿಸಿ ಎನ್ನುತ್ತಾರೆ ತಜ್ಞರು. ಬನ್ನಿ, ಸೊಪ್ಪು ಸೇವಿಸುವ ಮುನ್ನ ಯಾವ ಎಚ್ಚರಿಕೆಗಳು (Monsoon Healthy Cooking Tips) ಮುಖ್ಯ ಎಂಬುದನ್ನು ನೋಡೋಣ. ಮಳೆಗಾಲದಲ್ಲಿ, ಸಹಜವಾಗಿ ಕೆಲವು ಸೊಪ್ಪುಗಳು ತರಕಾರಿ ಮಾರುಕಟ್ಟೆಯಲ್ಲಿ ಕಾಣೆಯಾಗುತ್ತದೆ. ಬಹಳ ಸೂಕ್ಷ್ಮವಾಗಿರುವ ಪಾಲಕ್‌ನಂತಹ ಸೊಪ್ಪುಗಳು ಮಳೆಗಾಲದಲ್ಲಿ ಮಳೆಯ ಹೊಡೆತಕ್ಕೆ ಸಿಕ್ಕಿ ಹರಿದು ಛಿದ್ರವಾಗುವುದರಿಂದ ಮಾರುಕಟ್ಟೆಗೆ ಬರುವುದೇ ಇಲ್ಲ. ಮೆಂತ್ಯ ಸೊಪ್ಪೂ ಕೂಡಾ ಅಷ್ಟೇ, ಮಳೆಗಾಲದಲ್ಲಿ ಮಾರುಕಟ್ಟೆಯಲ್ಲಿರುವುದಿಲ್ಲ. ಕೆಲವು ಸೊಪ್ಪುಗಳು ಮಳೆಗಾಲಕ್ಕೆ ಸರಿಯಾಗಿ ಮಾರುಕಟ್ಟೆಯನ್ನು ಪ್ರವೇಶಿಸುತ್ತದೆ. ಆದರೆ, ಮಳೆಗಾಲವಾದ್ದರಿಂದ ಸೊಪ್ಪು ಹರದಿರುವುದು, ಬೇರುಗಳೆಲ್ಲ ಕೆಸರಾಗಿರುವುದು, ಹುಳು ಹುಪ್ಪಟೆಗಳು ಎಲೆಯನ್ನು ಕಚ್ಚಿ ಹರಿದಿರುವುದು, ಎಲೆಯ ಅಡುಭಾಗದಲ್ಲಿ ಹುಳಗಳು ಹರಿದುಹೋಗಿರುವ ಗುರುತು ಇವೆಲ್ಲವೂ ಸಾಮಾನ್ಯವಾಗಿರುತ್ತದೆ. ಹಾಗಾಗಿಯೇ ಸೊಪ್ಪಿನ ಅಡುಗೆ ಮಾಡುವಾಗ ಎಚ್ಚರಿಕೆ ಬಹಳ ಅಗತ್ಯ.

Healthy Cooking Tips

ಸೊಪ್ಪಿನ ಅಡುಗೆ ಮಳೆಗಾಲದಲ್ಲಿ ಮಾಡುವ ಮೊದಲು ಸೊಪ್ಪನ್ನು ಮೊದಲು ಬಿಡಿಸಿ. ನೀರಲ್ಲಿ ಹಾಕಿಟ್ಟು ತೊಳೆಯಿರಿ. ಹುಳ ಹುಪ್ಪಟೆಗಳಿರುವ ಎಲೆಗಳನ್ನು ಬಳಸದಿರಿ. ಸರಿಯಾಗಿರುವ, ಆರೋಗ್ಯವಾಗಿ ಕಾಣುವ ಎಲೆಗಳನ್ನು ಆರಿಸಿಕೊಂಡು ಪ್ರತ್ಯೇಕವಾಗಿಟ್ಟು, ಉಳಿದವನ್ನು ಎಸೆಯಿರಿ. ಪ್ರತಿಯೊಂದು ಎಲೆಯನ್ನೂ ಸೂಕ್ಷ್ಮವಾಗಿ ಗಮನಿಸಿ. ಸರಿಯಾಗಿರುವ ಎಲೆಯನ್ನು ಮಾತ್ರ ಚೆನ್ನಾಗಿ ಎರಡೆರಡು ಬಾರಿ ತೊಳೆದುಕೊಂಡು ಅದರ ಕಾಂಡಗಳನ್ನು ಕತ್ತರಿಸಿ ಎಸೆಯಿರಿ.

ಹರಿಯುವ ನೀರಿಗೆ ಹಿಡಿದು ತೊಳೆಯಿರಿ. ಮಾರುಕಟ್ಟೆಯಿಂದ ತಂದ ಕೃತಕ ತೊಳೆಯುವ ಲಿಕ್ವಿಡ್‌ಗಳಲ್ಲಿ ಹಾಕಿಟ್ಟು ತೊಳೆಯುವುದರಿಂದ ಎಲೆ ಮತ್ತಷ್ಟು ಹಾಳಾಗಬಹುದು. ಅದಕ್ಕಾಗಿ, ನಳ್ಳಿಯ ಅಡಿಯಲ್ಲಿ ಹಿಡಿದು ಹರಿಯುವ ನೀರಿನಲ್ಲಿ ತೊಳೆಯಿರಿ.

Hand Washing Leafy Greens

ತೊಳೆದ ಎಲೆಗಳನ್ನು ಆರಲು ಬಿಡುವುದು ಬಹಳ ಮುಖ್ಯ. ಒಣ ಟವೆಲ್‌ ಮೇಲೆ ತೊಳೆದ ಎಲೆಗಳನ್ನು ಹರವಿಟ್ಟು ಮೃದುವಾಗಿ ಒರೆಸಬಹುದು. ಅಥವಾ ಹಾಗೆಯೇ ಸ್ವಲ್ಪ ಹೊತ್ತು ಬಿಟ್ಟು ಹೆಚ್ಚಿನ ನೀರಿನಂಶ ಆರಲು ಬಿಡಬಹುದು.

ಎಲೆಗಳನ್ನು ತೊಳೆದುಕೊಂಡ ಮೇಳೆ ಒಂದೆರಡು ನಿಮಿಷಗಳ ಕಾಲ ಐಸ್‌ ನೀರಿನಲ್ಲಿ ಹಾಕಿಟ್ಟುಕೊಂಡು ನಂತರ ತೆಗೆಯಬಹುದು. ಹೀಗೆ ಮಾಡುವುದರಿಂದ ಎಲೆಯ ತಾಜಾತನ ಹಾಗೆಯೇ ಉಳಿದುಕೊಳ್ಳುತ್ತದೆ.

ಇದನ್ನೂ ಓದಿ: Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

ಹಸಿ ಎಲೆಗಳಿಂದ ಮಾಡುವ ಅಡುಗೆಯನ್ನು ಮಳೆಗಾಲದಲ್ಲಿ ಮಾಡಬೇಡಿ. ಬಾಣಲೆಯಲ್ಲಿ ಎಲೆಯನ್ನು ಬಾಡಿಸಿಕೊಂಡು, ಬಿಸಿ ಮಾಡುವ ಮೂಲಕ ಮಾಡುವ ಅಡುಗೆಯನ್ನೇ ಮಾಡಿ. ಮಳೆಗಾಲದಲ್ಲಿ ಹಸಿ ಸೊಪ್ಪು ತರಕಾರಿಗಳನ್ನು ಹಾಗೆಯೇ ಹಸಿಯಾಗಿ ಬಳಸಬೇಡಿ.

Continue Reading
Advertisement
Parliament session
ದೇಶ5 mins ago

Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

Minister Lakshmi Hebbalkar reviewed the flood situation and provided individual financial assistance to the victims
ಕರ್ನಾಟಕ16 mins ago

Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Union Minister Pralhad Joshi statement on tomato price
ಕರ್ನಾಟಕ19 mins ago

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Paris Olympics 2024
ಪ್ರಮುಖ ಸುದ್ದಿ22 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

Arvind Kejriwal
ದೇಶ37 mins ago

Arvind Kejriwal: ದಿನೇ ದಿನೆ ಕೇಜ್ರಿವಾಲ್‌ ಆರೋಗ್ಯ ಕ್ಷೀಣ; ಪ್ರತಿಪಕ್ಷಗಳಿಂದ ನಾಳೆ ಭಾರೀ ಪ್ರತಿಭಟನಾ ರ್‍ಯಾಲಿ

Paris Olympics 2024
ಪ್ರಮುಖ ಸುದ್ದಿ47 mins ago

Paris Olympics 2024 : ಪುರುಷರ ಆರ್ಚರಿ ತಂಡಕ್ಕೆ ಆಘಾತ, ಕ್ವಾರ್ಟರ್​ಫೈನಲ್​ನಲ್ಲಿ ಸೋಲು

HP OmniBook X,
ತಂತ್ರಜ್ಞಾನ1 hour ago

HP OmniBook X : ಕೃತಕ ಬುದ್ಧಿಮತ್ತೆ ಹೊಂದಿರುವ ಎರಡು ಲ್ಯಾಪ್​ಟಾಪ್​​ಗಳನ್ನು ಬಿಡುಗಡೆ ಮಾಡಿದ ಎಚ್​ಪಿ

Russia Ukraine War
ದೇಶ2 hours ago

Russia-Ukraine War: ಕೆಲಸ ಕೊಡಿಸ್ತೇವೆ ಅಂತಾ ಸೇನೆಗೆ ತಳ್ಳಿದ್ರು..ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಭಾರತೀಯ ಯುವಕ ಸಾವು

HD Devegowda
ಕರ್ನಾಟಕ2 hours ago

HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

Dengue Fever
ಆರೋಗ್ಯ2 hours ago

Dengue Fever: ಡೆಂಗ್ಯೂ ಜ್ವರ ಕಡಿಮೆ ಆದ ಮೇಲೆ ಎಚ್ಚರ ತಪ್ಪಿದರೆ ಪ್ರಾಣಾಪಾಯ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ9 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌