Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ - Vistara News

ಪ್ರಮುಖ ಸುದ್ದಿ

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಆಗಸ್ಟ್ 12ರಿಂದ ಕೆಪಿಎಸ್‌ಸಿ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಬಿ.ವಿ.ಎಸ್‌ಸಿ, ಬಿ.ವಿ.ಎಸ್‌ಸಿ & ಎಎಚ್‌ ಪದವೀಧರರು ಅರ್ಹರಾಗಿದ್ದು, ವಯೋಮಿತಿ, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

veterinary officer recruitment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್-ಎ ದರ್ಜೆಯ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ (veterinary officer recruitment) ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 12ರಿಂದ ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಬೇಕಾದ ಅರ್ಹತೆಗಳು, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು: ಪಶು ವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 342 (ಉಳಿಕೆ ಮೂಲ ವೃಂದ) + 58 (ಬ್ಯಾಕ್‌ಲಾಗ್‌)
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್‌ 12
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆ.12

ವಿದ್ಯಾರ್ಹತೆ

ಪಶು ವೈದ್ಯಕೀಯ ವಿಜ್ಞಾನ (BVSc), ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ (B.V.Sc. & AH) ಪದವೀಧರರು ಅರ್ಜಿ ಸಲ್ಲಿಸಬಹುದು. (ಕೆವಿಸಿ/ಐವಿಸಿಯಲ್ಲಿ ನೋಂದಣಿಯಾಗಿರಬೇಕು)

ವಯೋಮಿತಿ

ಅರ್ಜಿ ಸಲ್ಲಿ..ಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ – 18 ವರ್ಷಗಳ ವಯೋಮಾನದವರಾಗಿರಬೇಕು ಹಾಗೂ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅರ್ಹತೆ: 35 ವರ್ಷ
ಒಬಿಸಿ (2ಎ, 2ಬಿ, 3ಎ, 3ಬಿ): 38 ವರ್ಷ
ಎಸ್‌ಸಿ, ಎಸ್‌ಟಿ, ಪ್ರವರ್ಗ-1: 40 ವರ್ಷ

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600 ರೂ.
ಒಬಿಸಿ (2ಎ, 2ಬಿ, 3ಎ, 3ಬಿ): 300 ರೂ.
ಮಾಜಿ ಸೈನಿಕರಿಗೆ : 50 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನರು: ಶುಲ್ಕ ಪಾವತಿಯಿಂದ ವಿನಾಯಿತಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಆಯ್ಕೆ ವಿಧಾನ

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:
ಈ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮ ಉಪ ನಿಯಮ-7 ರಲ್ಲಿ ನಿರ್ದಿಷ್ಟ ಪಡಿಸಲಾದಂತೆ, ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ.. ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು ಎಸ್.ಎಸ್.ಎಲ್.ಸಿ. ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು.

ವಿಶೇಷ ಸೂಚನೆ: ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರನ್ವಯ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 29-11-2022ರಂದು ಮತ್ತು ಆ ನಂತರದಲ್ಲಿ ನಡೆಸಿರುವ ಕನ್ನಡ ಭಾಷಾ ಪರೀಕ್ಷೆಗಳಿಗೆ ಹಾಜರಾಗಿ ಉರ್ತೀರ್ಣರಾಗಿದ್ದಲ್ಲಿ ಅದರ ಫಲಿತಾಂಶವನ್ನು ಈ ಅಧಿಸೂಚನೆಯಲ್ಲಿನ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೂ ಪರಿಗಣಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ ಲೈನ್ ಅರ್ಜಿಯಲ್ಲಿನ ನಿಗದಿತ ಅಂಕಣದಲ್ಲಿ ಕನ್ನಡ ಭಾಷಾ ಪರೀಕ್ಷೆ ಕುರಿತಂತೆ ಕೇಳಿರುವ ಮಾಹಿತಿಯನ್ನು ತಪ್ಪದೇ ನಮೂದಿಸಬೇಕು.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಸ್ಪರ್ಧಾತ್ಮಕ ಪರೀಕ್ಷಾ ವಿಧಾನ

ಈ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತು ನಿಮ್ಮ ಬಹು ಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರತಿಯೊಂದು ಪ್ರಶ್ನೆಯು ಋಣಾತ್ಮಕ (Negative) ಅಂಕದ ಸ್ವರೂಪದ್ದಾಗಿದ್ದು, ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
Paper 1- ಸಾಮಾನ್ಯ ಪತ್ರಿಕೆ(General Paper): 300 ಅಂಕ
Paper 2- ನಿರ್ದಿಷ್ಟ ಪತ್ರಿಕೆ(Specific Paper): 300 ಅಂಕ



    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಪ್ರಮುಖ ಸುದ್ದಿ

    NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

    NEET-UG : ಅಭ್ಯರ್ಥಿಗಳು ಇತ್ತೀಚಿನ ಸುದ್ದಿ ಮತ್ತು ವಿವರಣೆ ಮತ್ತು ಸೂಚನೆಗಳಿಗಾಗಿ ಎಂಸಿಸಿ ವೆಬ್​ಸೈಟ್​ಗೆ ಭೇಟಿ ನೀಡಲು ಸೂಚಿಸಲಾಗಿದೆ. ದೇಶಾದ್ಯಂತ ಸುಮಾರು 710 ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 1.10 ಲಕ್ಷ ಎಂಬಿಬಿಎಸ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ನಡೆಯಲಿದೆ. ಅಲ್ಲದೆ, ಆಯುಷ್ ಮತ್ತು ನರ್ಸಿಂಗ್ ಸೀಟುಗಳಲ್ಲದೆ 21,000 ಬಿಡಿಎಸ್ ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಶ್ರೀನಿವಾಸ್ ಹೇಳಿದರು.

    VISTARANEWS.COM


    on

    NEET-UG
    Koo

    ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET-UG) 2024 ರ ಕೌನ್ಸೆಲಿಂಗ್ ಆಗಸ್ಟ್ 14 ರಿಂದ ಪ್ರಾರಂಭವಾಗಲಿದೆ ಎಂದು ಎಂಸಿಸಿ ಸೋಮವಾರ ಹೊರಡಿಸಿದ ನೋಟಿಸ್​ನಲ್ಲಿ ತಿಳಿಸಿದೆ. ಆದಾಗ್ಯೂ ಕೌನ್ಸೆಲಿಂಗ್ ಪ್ರಕ್ರಿಯೆಗೆ ನೋಂದಣಿ ಆಗಸ್ಟ್ ಮೊದಲ ವಾರದಿಂದ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್ಎಂಸಿ) ಕಾರ್ಯದರ್ಶಿ ಡಾ.ಬಿ.ಶ್ರೀನಿವಾಸ್ ತಿಳಿಸಿದ್ದಾರೆ.

    ಅಭ್ಯರ್ಥಿಗಳು ಇತ್ತೀಚಿನ ಸುದ್ದಿ ಮತ್ತು ವಿವರಣೆ ಮತ್ತು ಸೂಚನೆಗಳಿಗಾಗಿ ಎಂಸಿಸಿ ವೆಬ್​ಸೈಟ್​ಗೆ ಭೇಟಿ ನೀಡಲು ಸೂಚಿಸಲಾಗಿದೆ. ದೇಶಾದ್ಯಂತ ಸುಮಾರು 710 ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 1.10 ಲಕ್ಷ ಎಂಬಿಬಿಎಸ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ನಡೆಯಲಿದೆ. ಅಲ್ಲದೆ, ಆಯುಷ್ ಮತ್ತು ನರ್ಸಿಂಗ್ ಸೀಟುಗಳಲ್ಲದೆ 21,000 ಬಿಡಿಎಸ್ ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಶ್ರೀನಿವಾಸ್ ಹೇಳಿದರು.

    ಅಖಿಲ ಭಾರತ ಕೋಟಾದ ಶೇ.15ರಷ್ಟು ಸೀಟುಗಳು ಮತ್ತು ಎಲ್ಲ ಏಮ್ಸ್, ಜಿಪ್ಮರ್ ಪುದುಚೆರಿ, ಎಲ್ಲ ಕೇಂದ್ರೀಯ ವಿವಿ ಸೀಟುಗಳು ಮತ್ತು ಶೇ.100ರಷ್ಟು ಡೀಮ್ಡ್ ವಿವಿ ಸೀಟುಗಳಿಗೆ ಎಂಸಿಸಿ ಕೌನ್ಸೆಲಿಂಗ್ ನಡೆಸಲಿದೆ.

    ಪರೀಕ್ಷೆಯ ನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಗಳು ಸೇರಿದಂತೆ ಹಲವಾರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಲೇವಾರಿ ಮಾಡಿದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಶುಕ್ರವಾರ ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಿತ್ತು

    Continue Reading

    ಪ್ರಮುಖ ಸುದ್ದಿ

    Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

    Asia Cup cricket : ಈ ಟೂರ್ನಿಯ 2026 ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​ಗೆ ಪೂರ್ವಭಾವಿಯಾಗಿ ನಡೆಯಲಿದೆ. ಸಾಂಪ್ರದಾಯಿಕವಾಗಿ ಏಷ್ಯಾ ಕಪ್ ಐಸಿಸಿ ಪಂದ್ಯಾವಳಿಯ ಪೂರ್ವಸಿದ್ಧತಾ ಟೂರ್ನಿಯಾಗಿ ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮುಂಬರುವ ವಿಶ್ವಕಪ್​ಗೆ ಮೊದಲು ಆಡಲಾಗುತ್ತದೆ. 2023 ರಲ್ಲಿ, ಏಷ್ಯಾ ಕಪ್ ಅನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯೋಜಿಸಿತು.

    VISTARANEWS.COM


    on

    Asia Cup cricket
    Koo

    ನವದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತನ್ನ ಆಹ್ವಾನದಲ್ಲಿ ಘೋಷಿಸಿದಂತೆ 2025ರ ಆವೃತ್ತಿಯ ಏಷ್ಯಾ ಕಪ್ ಭಾರತದಲ್ಲಿ (Asia Cup Cricket) ನಡೆಯಲಿದೆ. ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಮುಂಬರುವ ಆವೃತ್ತಿಯಲ್ಲಿ ಟಿ 20 ಸ್ವರೂಪದಲ್ಲಿ ನಡೆಯಲಿದ್ದು ಭಾರತದ ಅಭಿಮಾನಿಗಳಿಗೆ ಖುಷಿಯ ವಿಚಾರವಾಗಿದೆ.

    ಈ ಟೂರ್ನಿಯ 2026 ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​ಗೆ ಪೂರ್ವಭಾವಿಯಾಗಿ ನಡೆಯಲಿದೆ. ಸಾಂಪ್ರದಾಯಿಕವಾಗಿ ಏಷ್ಯಾ ಕಪ್ ಐಸಿಸಿ ಪಂದ್ಯಾವಳಿಯ ಪೂರ್ವಸಿದ್ಧತಾ ಟೂರ್ನಿಯಾಗಿ ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮುಂಬರುವ ವಿಶ್ವಕಪ್​ಗೆ ಮೊದಲು ಆಡಲಾಗುತ್ತದೆ. 2023 ರಲ್ಲಿ, ಏಷ್ಯಾ ಕಪ್ ಅನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯೋಜಿಸಿತು. ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ನಿರಾಕರಿಸಿದ ಕಾರಣ ‘ಹೈಬ್ರಿಡ್ ಮಾದರಿಯಲ್ಲಿ’ ನಡೆಸಲಾಯಿತು. ಇದರ ಪರಿಣಾಮವಾಗಿ, ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದವು.

    2027ರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದ್ದು, ಬಾಂಗ್ಲಾದೇಶದಲ್ಲಿ ಆತಿಥ್ಯ ವಹಿಸಲಿದೆ. ಅದೇ ವರ್ಷ ದಕ್ಷಿಣ ಆಫ್ರಿಕಾದಲ್ಲಿ ಯೋಜಿಸಲಾದ 50 ಓವರ್ ಗಳ ವಿಶ್ವಕಪ್ ಗೆ ಪೂರ್ವಭಾವಿಯಾಗಿ ನಡೆಯಲಿದೆ.

    2025ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ಏಷ್ಯಾಕಪ್ ಹಾಗೂ 2027ರಲ್ಲಿ ಬಾಂಗ್ಲಾದೇಶದಲ್ಲಿ ನಡೆಯಲಿರುವ 50 ಓವರ್ಗಳ ಏಷ್ಯಾಕಪ್​ನಲ್ಲಿ ತಲಾ 13 ಪಂದ್ಯಗಳು ನಡೆಯಲಿವೆ.

    ‘ಪುರುಷರ ಏಷ್ಯಾ ಕಪ್ ಪಂದ್ಯಾವಳಿ’ ಎಂದರೆ ನಿಯೋಜಿತ ಸದಸ್ಯರನ್ನು ಒಳಗೊಂಡ ಎಸಿಸಿ ಆಯೋಜಿಸುವ ಮತ್ತು ನಿರ್ವಹಿಸುವ ದ್ವೈವಾರ್ಷಿಕ ಹಿರಿಯ ಪುರುಷರ ಕ್ರಿಕೆಟ್ ಪಂದ್ಯಾವಳಿಯಾಗಿದೆ. ಅಫ್ಘಾನಿಸ್ತಾನ, ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶದ ತಂಡಗಳು ಮತ್ತು ಅರ್ಹತಾ ಸ್ಪರ್ಧೆಗಳ ಮೂಲಕ ಆಯ್ಕೆಯಾದ ಎಸಿಸಿಯ ಟೆಸ್ಟ್ ಅಲ್ಲದ ಸದಸ್ಯ ತಂಡವೊಂದು ಭಾಗವಹಿಸುತ್ತದೆ ಎಂದು ಎಸಿಸಿ ತನ್ನ ಐಇಒಐ ಹೇಳಿಕೆಯಲ್ಲಿ ತಿಳಿಸಿದೆ.

    ಕಳೆದ ವರ್ಷ ಏಷ್ಯಾಕಪ್ ಟಿ20 ಟ್ರೋಫಿ ಗೆದ್ದ ಬಳಿಕ ಭಾರತ ಹಾಲಿ ಚಾಂಪಿಯನ್ ಎನಿಸಿಕೊಂಡಿದೆ. ಕೊಲಂಬೊದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವನ್ನು ವಿರುದ್ಧ 10 ವಿಕೆಟ್​ಗಳ ಗೆಲವು ದಾಖಲಿಸಲಾಗಿತ್ತು. 7-1-21-6 ಅಂಕಗಳ ನಂತರ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಷ್ಯಾಕಪ್ ಇತಿಹಾಸದಲ್ಲಿ ಭಾರತ ಅತ್ಯಂತ ಯಶಸ್ವಿ ತಂಡವಾಗಿದ್ದು, ಎಂಟು ಬಾರಿ ಪ್ರಶಸ್ತಿ ಗೆದ್ದಿದೆ.

    Continue Reading

    ಕ್ರೀಡೆ

    Rohan Bopanna : ಅಂತಾರಾಷ್ಟ್ರೀಯ ಟೆನಿಸ್​ಗೆ ವಿದಾಯ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

    Rohan Bopanna : ನಿವೃತ್ತಿಯ ಮೂಲಕ ಬೋಪಣ್ಣ ಅವರು ಜಪಾನ್​ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. 2016ರ ರಿಯೋ ಒಲಿಂಪಿಕ್ಸ್​ನಲ್ಲಿ ಸಾನಿಯಾ ಮಿರ್ಜಾ ಜೊತೆಗೂಡಿ ಮಿಶ್ರ ಡಬಲ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದು ಪದಕ ಗೆಲ್ಲಲು ವಿಫಲರಾಗಿದ್ದರು. ಆದಾಗ್ಯೂ ಅವರ ಸಾಧನೆ ಭಾರತೀಯರ ಹೆಮ್ಮೆಗೆ ಕಾರಣವಾಗಿತ್ತು. 2024ರಲ್ಲಿ, ಅವರಿಗೆ ಮತ್ತೊಂದು ಅವಕಾಶ ಇದ್ದರೂ ಫ್ರೆಂಚ್ ಎದುರಾಳಿಗಳ ವಿರುದ್ದ ಸೆಣಸಾಡುವಲ್ಲಿ ವೈಫಲ್ಯ ಕಂಡರು.

    VISTARANEWS.COM


    on

    Rohan Bopanna
    Koo

    ಬೆಂಗಳೂರು: 2024ರ ಪ್ಯಾರಿಸ್ ಒಲಿಂಪಿಕ್ಸ್​ನ ಟೆನಿಸ್​ ಸ್ಪರ್ಧೆಯಲ್ಲಿ ಸೋತು ನಿರ್ಗಮಿಸಿದ ಹೆಮ್ಮೆಯ ಕನ್ನಡಿಗ ರೋಹನ್ ಬೋಪಣ್ಣ (Rohan Bopanna) ಭಾರತೀಯ ಟೆನಿಸ್​ಗೆ ನಿವೃತ್ತಿ ಘೋಷಿಸಿದ್ದಾರೆ. ಜುಲೈ 28ರ ಭಾನುವಾರ ನಡೆದ ಡಬಲ್ಸ್ ವಿಭಾಗದ ಆರಂಭಿಕ ಸುತ್ತಿನಲ್ಲಿ ಫ್ರೆಂಚ್ ಜೋಡಿ ಗೇಲ್ ಮೊನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್-ವಾಸೆಲಿನ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದರು. ಒಂದು ಗಂಟೆ 16 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಬೋಪಣ್ಣ ಮತ್ತು ಎನ್. ಶ್ರೀರಾಮ್ ಬಾಲಾಜಿ ಜೋಡಿ 5-7, 2-6 ಅಂತರದಲ್ಲಿ ಸೋಲನುಭವಿಸಿತು. ಇದಾಗ ಬಳಿಕ ಅವರು ನಿವೃತ್ತಿ ಪ್ರಕಟಿಸಿದ್ದಾರೆ.

    ನಿವೃತ್ತಿಯ ಮೂಲಕ ಬೋಪಣ್ಣ ಅವರು ಜಪಾನ್​ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. 2016ರ ರಿಯೋ ಒಲಿಂಪಿಕ್ಸ್​ನಲ್ಲಿ ಸಾನಿಯಾ ಮಿರ್ಜಾ ಜೊತೆಗೂಡಿ ಮಿಶ್ರ ಡಬಲ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದು ಪದಕ ಗೆಲ್ಲಲು ವಿಫಲರಾಗಿದ್ದರು. ಆದಾಗ್ಯೂ ಅವರ ಸಾಧನೆ ಭಾರತೀಯರ ಹೆಮ್ಮೆಗೆ ಕಾರಣವಾಗಿತ್ತು. 2024ರಲ್ಲಿ, ಅವರಿಗೆ ಮತ್ತೊಂದು ಅವಕಾಶ ಇದ್ದರೂ ಫ್ರೆಂಚ್ ಎದುರಾಳಿಗಳ ವಿರುದ್ದ ಸೆಣಸಾಡುವಲ್ಲಿ ವೈಫಲ್ಯ ಕಂಡರು.

    ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

    ಬೋಪಣ್ಣ ತಮ್ಮ 22 ನೇ ವಯಸ್ಸಿನಲ್ಲಿ ಭಾರತಕ್ಕಾಗಿ ಪಾದಾರ್ಪಣೆ ಮಾಡಿದ್ದರು. ವಿದಾಯ ಘೋಷಿಸಿರು ಅವರು ದೀರ್ಘ ಕಾಲ ರಾಷ್ಟ್ರೀಯ ಜೆರ್ಸಿ ಧರಿಸಲು ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

    ‘ನನಗೆ ತುಂಬಾ ಹೆಮ್ಮೆ ಇದೆ’
    “ಇದು ಖಂಡಿತವಾಗಿಯೂ ದೇಶಕ್ಕಾಗಿ ನನ್ನ ಕೊನೆಯ ಸ್ಪರ್ಧೆಯಾಗಿದೆ. ನಾನು ಎಲ್ಲಿದ್ದೇನೆ ಎಂಬುದನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇನೆ .ಈಗ, ನಾನು ಟೆನಿಸ್ ಸರ್ಕೀಟ್​ನಿಂದ ನಿರ್ಗಮಿಸಲಿದ್ದೇನೆ ಎಂದು ಬೋಪಣ್ಣ ಹೇಳಿದ್ದಾರೆ.

    ನನಗೆ ಸಿಕ್ಕಿರುವ ಅವಕಾಶ ದೊಡ್ಡ ಬೋನಸ್ ಆಗಿದೆ. ನಾನು ಎರಡು ದಶಕಗಳ ಕಾಲ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. 2002ರಿಂದ ಅಂತಾರಾಷ್ಟ್ರೀಯ ಟೆನಿಸ್​ಗೆ ಪದಾರ್ಪಣೆ ಮಾಡಿ, 22 ವರ್ಷಗಳ ನಂತರವೂ ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ. ಅದರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ” ಎಂದು ಅವರು ಹೇಳಿದ್ದಾರೆ.

    2010ರಲ್ಲಿ ಬ್ರೆಜಿಲ್ ವಿರುದ್ಧದ ಡೇವಿಸ್ ಕಪ್ ಪಂದ್ಯದಲ್ಲಿ ರಿಕಾರ್ಡೊ ಮೆಲ್ಲೊ ವಿರುದ್ಧ ಗೆಲುವು ಸಾಧಿಸಿದ್ದು ಭಾರತಕ್ಕಾಗಿ ಆಡುವಾಗ ತನ್ನ ಅತ್ಯುತ್ತಮ ಕ್ಷಣ ಎಂದು ಬೋಪಣ್ಣ ಹೇಳಿದ್ದಾರೆ. “ಇದು ಖಂಡಿತವಾಗಿಯೂ ಡೇವಿಸ್ ಕಪ್ ಇತಿಹಾಸದಲ್ಲಿ ಒಂದಾಗಿದೆ. ಇದು ನನ್ನ ಅತ್ಯುತ್ತಮ ಕ್ಷಣ, ಅದು ಚೆನ್ನೈನಲ್ಲಿ ಮತ್ತು ನಂತರ ಬೆಂಗಳೂರಿನಲ್ಲಿ ಸರ್ಬಿಯಾ ವಿರುದ್ಧ ಐದು ಸೆಟ್ ಗಳ ಡಬಲ್ಸ್ ಗೆದ್ದಿದ್ದರಲ್ಲಿ ಖುಷಿಯಿದೆ ಎಂದು ಹೇಳಿದ್ದಾರೆ.

    ಈ ಪ್ರಯಾಣದಲ್ಲಿ ಅನೇಕ ತ್ಯಾಗಗಳನ್ನು ಮಾಡಿದ ನನ್ನ ಪತ್ನಿಗೆ (ಸುಪ್ರಿಯಾ) ನಾನು ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

    Continue Reading

    ಪ್ರಮುಖ ಸುದ್ದಿ

    Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

    Paris Olympics 2024: 1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

    VISTARANEWS.COM


    on

    Paris Olympics 2024
    Koo

    ಬೆಂಗಳೂರು: ಪ್ರೇಮಿಗಳ ನಗರಿ ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​​ನ 4ನೇ ದಿನವಾದ ಜುಲೈ 30ರಂದು (Paris Olympics 2024) ಭಾರತದ ಶೂಟರ್ ಮನು ಭಾಕರ್ ಇತಿಹಾಸ ನಿರ್ಮಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಕ್ರೀಡಾಕೂಟದಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಪದಕ (ಕಂಚು) ಗೆದ್ದ ಭಾಕರ್, 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಮತ್ತೊಂದು ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿದ್ದಾರೆ. ಸ್ವಾತಂತ್ರ್ಯದ ನಂತರ ಒಲಿಂಪಿಕ್ ಕ್ರೀಡಾಕೂಟದ ಒಂದೇ ಆವೃತ್ತಿಯಲ್ಲಿ ಯಾವುದೇ ಭಾರತೀಯ ಕ್ರೀಡಾಪಟು ಎರಡು ಪದಕಗಳನ್ನು ಗೆದ್ದಿಲ್ಲ. ಹೀಗಾಗಿ ಮನು ಗೆದ್ದರೆ ದೊಡ್ಡ ಸಾಧನೆಯಾಗಲಿದೆ.

    1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

    ಭಾಕರ್ ಮತ್ತು ಸರಬ್ಜೋತ್ ಭಾರತದ ಪದಕಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ, ಬಿಲ್ಲುಗಾರ ಧೀರಜ್ ಬೊಮ್ಮದೇವರ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಜನ್ ಕೌರ್ ಮತ್ತು ಅಂಕಿತಾ ಭಕತ್ ಮಹಿಳೆಯರ ವೈಯಕ್ತಿಕ ಎಲಿಮಿನೇಷನ್ ಸುತ್ತುಗಳಲ್ಲಿ ಸ್ಪರ್ಧಿಸಲಿದ್ದಾರೆ.

    ಪುರುಷರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ 2 ನೇ ದಿನದಂದು ಟ್ರ್ಯಾಪ್ ಶೂಟರ್ ಪೃಥ್ವಿರಾಜ್ ತೊಂಡೈಮನ್ ಪುಟಿದೇಳಲು ಪ್ರಯತ್ನಿಸಿದರೆ, ರಾಜೇಶ್ವರಿ ಕುಮಾರಿ ಮತ್ತು ಶ್ರೇಯಸಿ ಸಿಂಗ್ ಮಹಿಳೆಯರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ ಮೊದಲ ದಿನದಂದು ಅಭಿಯಾನಪ್ರಾರಂಭಿಸಲಿದ್ದಾರೆ.

    ಬಾಕ್ಸರ್​ಗಳು ಕಣಕ್ಕೆ

    ಭಾರತದ ಆರು ಭಾರತೀಯ ಬಾಕ್ಸರ್ ಗಳಲ್ಲಿ ಮೂವರು ನಾಳೆ ಕಣಕ್ಕಿಳಿಯಲಿದ್ದಾರೆ. ಪುರುಷರ 51 ಕೆಜಿ ವಿಭಾಗದಲ್ಲಿ ಅಮಿತ್ ಪಂಗಲ್, ಮಹಿಳೆಯರ 57 ಕೆಜಿ ವಿಭಾಗದಲ್ಲಿ ಜಾಸ್ಮಿನ್ ಲಂಬೋರಿಯಾ ಮತ್ತು ಮಹಿಳೆಯರ 54 ಕೆಜಿ ವಿಭಾಗದಲ್ಲಿ ಪ್ರೀತಿ ಪವಾರ್ ಸ್ಪರ್ಧಿಸಲಿದ್ದಾರೆ.

    ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡೋನೇಷ್ಯಾ ವಿರುದ್ಧದ ಅಂತಿಮ ಗ್ರೂಪ್ ಪಂದ್ಯದಲ್ಲಿ ತಮ್ಮ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ಗುರಿ ಹೊಂದಿದ್ದಾರೆ. ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಆಸ್ಟ್ರೇಲಿಯಾ ವಿರುದ್ಧ ಸತತ ಎರಡು ಸೋಲುಗಳ ಬಳಿಕ ಮತ್ತೊಂದ ಪಂದ್ಯ ಆಡಲಿದ್ದಾರೆ.

    ಇದನ್ನೂ ಓದಿ: Paris Olympics 2024 : ಪುರುಷರ ಆರ್ಚರಿ ತಂಡಕ್ಕೆ ಆಘಾತ, ಕ್ವಾರ್ಟರ್​ಫೈನಲ್​ನಲ್ಲಿ ಸೋಲು

    ಶೂಟಿಂಗ್, ಬಾಕ್ಸಿಂಗ್ ಮತ್ತು ಬ್ಯಾಡ್ಮಿಂಟನ್ ಜೊತೆಗೆ, ಪುರುಷರ ಸಿಂಗಲ್ಸ್ ಸ್ಕಲ್ಸ್​ನಲ್ಲಿ ಬಲರಾಜ್ ಪನ್ವಾರ್ ಮತ್ತು ಈಕ್ವೆಸ್ಟ್ರಿಯನ್​ ವೈಯಕ್ತಿಕ ಡ್ರೆಸ್ಸಿಂಗ್ ಅರ್ಹತಾ ಸ್ಪರ್ಧೆಯಲ್ಲಿ ಅನುಷ್ ಅಗರ್ವಾಲ್ಲಾ ಸ್ಪರ್ಧಿಸಲಿದ್ದಾರೆ.

    ಭಾರತದ ಪಂದ್ಯಗಳ ವಿವರ ಇಲ್ಲಿದೆ

    • ಶೂಟಿಂಗ್​​: ಪುರುಷರ​​ ಟ್ರ್ಯಾಪ್ ಅರ್ಹತಾ ಸುತ್ತಿನ 2ನೇ ದಿನ; ಪೃಥ್ವಿರಾಜ್ ತೊಡೈಮನ್, ಮಧ್ಯಾಹ್ನ 12.30ಕ್ಕೆ
    • ಶೂಟಿಂಗ್​: ಟ್ರ್ಯಾಪ್ ಮಹಿಳಾ ಅರ್ಹತಾ ಸುತ್ತಿನ ಮೊದಲ ದಿನ, ಶ್ರೇಯಸಿ ಸಿಂಗ್/ ರಾಜೇಶ್ವರಿ ಕುಮಾರಿ, ಮಧ್ಯಾಹ್ನ 12.30ಕ್ಕೆ
    • ಶೂಟಿಂಗ್: 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ, ಕಂಚಿನ ಪದಕ ಪಂದ್ಯ, ಮನು ಭಾಕರ್-ಸರಬ್ಜೋತ್ ಸಿಂಗ್, ಮಧ್ಯಾಹ್ನ 1 ಗಂಟೆಗೆ
    • ಟೇಬಲ್ ಟೆನಿಸ್- ಮಹಿಳೆಯರ ಸಿಂಗಲ್ಸ್, ಶ್ರೀಜಾ ಅಕುಲಾ
    • ರೋಯಿಂಗ್- ಪುರುಷರ ಸಿಂಗಲ್ಸ್ ಸ್ಕಲ್ ಕ್ವಾರ್ಟರ್ ಫೈನಲ್ 4, ಬಲರಾಜ್ ಪನ್ವಾರ್ , ಮಧ್ಯಾಹ್ನ 1.40ರಿಂದ
    • ಈಕ್ವೆಸ್ಟ್ರಿಯನ್ ವೈಯಕ್ತಿಕ ಡ್ರೆಸೇಜ್​- ಅನುಷ್ ಅಗರ್ವಾಲಾ, ಮಧ್ಯಾಹ್ನ 2.30 ರಿಂದ
    • ಹಾಕಿ: ಪುರುಷರ ಪೂಲ್ ಬಿ ಪಂದ್ಯ: ಐರ್ಲೆಂಡ್ ವಿರುದ್ಧ , ಸಂಜೆ 4.45ಕ್ಕೆ
    • ಆರ್ಚರಿ: ಮಹಿಳೆಯರ ವೈಯಕ್ತಿಕ 32ನೇ ಸುತ್ತು, ಅಂಕಿತಾ ಭಕತ್, ಸಂಜೆ 5.14ಕ್ಕೆ
    • ಆರ್ಚರಿ: ಮಹಿಳಾ ವೈಯಕ್ತಿಕ 32ನೇ ಸುತ್ತು, ಭಜನ್ ಕೌರ್, ಸಂಜೆ 5.27ಕ್ಕೆ
    • ಬ್ಯಾಡ್ಮಿಂಟನ್: ಪುರುಷರ ಡಬಲ್ಸ್ ಗ್ರೂಪ್ ಸಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ, ಸಂಜೆ 5.30
    • ಬ್ಯಾಡ್ಮಿಂಟನ್: ಮಹಿಳಾ ಡಬಲ್ಸ್ ಗ್ರೂಪ್ ಸಿ: ತನಿಶಾ ಕ್ರಾಸ್ಟೊ/ಅಶ್ವಿನಿ ಪೊನ್ನಪ್ಪ, ಸಂಜೆ 6.20ಕ್ಕೆ
    • ಬಾಕ್ಸಿಂಗ್: ಪುರುಷರ 51 ಕೆ.ಜಿ ವಿಭಾಗ : ಅಮಿತ್ ಪಂಗಲ್, ಸಂಜೆ 7.16ಕ್ಕೆ
    • ಬಾಕ್ಸಿಂಗ್: ಪುರುಷರ 57 ಕೆ.ಜಿ ವಿಭಾಗ ಜೈಸ್ಮಿನ್ ಲಂಬೋರಿಯಾ, ರಾತ್ರಿ 9.08ರಿಂದ
    • ಆರ್ಚರಿ: ಪುರುಷರ ವೈಯಕ್ತಿಕ ಸುತ್ತಿನಲ್ಲಿ 32 ಧೀರಜ್ ಬೊಮ್ಮದೇವರ, 10.46ರಿಂದ
    • ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ ವಿಭಾಗ, ಪ್ರೀತಿ, 01.06 ಗಂಟೆಗೆ

    Continue Reading
    Advertisement
    NEET-UG
    ಪ್ರಮುಖ ಸುದ್ದಿ33 mins ago

    NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

    ವೈರಲ್ ನ್ಯೂಸ್52 mins ago

    Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

    Paris Olympics 2024
    ಕ್ರೀಡೆ59 mins ago

    Paris Olympics 2024 : ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಈಜುಪಟುವಿಗೆ ಕೊರೊನಾ ಸೋಂಕು!

    Asia Cup cricket
    ಪ್ರಮುಖ ಸುದ್ದಿ1 hour ago

    Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

    Viral video
    ವೈರಲ್ ನ್ಯೂಸ್2 hours ago

    Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

    Rohan Bopanna
    ಕ್ರೀಡೆ2 hours ago

    Rohan Bopanna : ಅಂತಾರಾಷ್ಟ್ರೀಯ ಟೆನಿಸ್​ಗೆ ವಿದಾಯ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

    CM Siddaramaiah demands to Pm for drop the Nirmala Sitharaman from the cabinet
    ಕರ್ನಾಟಕ2 hours ago

    CM Siddaramaiah: ಬಜೆಟ್ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್; ಸಂಪುಟದಿಂದ ಕೈಬಿಡಲು ಸಿಎಂ ಒತ್ತಾಯ

    Parliament session
    ದೇಶ2 hours ago

    Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

    Minister Lakshmi Hebbalkar reviewed the flood situation and provided individual financial assistance to the victims
    ಕರ್ನಾಟಕ2 hours ago

    Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    Union Minister Pralhad Joshi statement on tomato price
    ಕರ್ನಾಟಕ2 hours ago

    Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka Rain
    ಮಳೆ7 hours ago

    Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

    Elephant combing Makna elephant captured near Bannerghatta
    ಬೆಂಗಳೂರು ಗ್ರಾಮಾಂತರ8 hours ago

    Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

    karnataka rain
    ಮಳೆ11 hours ago

    Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

    Tungabhadra Dam
    ಕೊಪ್ಪಳ1 day ago

    Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

    Elephant attack
    ಮಳೆ1 day ago

    Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

    karnataka Rain
    ಮಳೆ1 day ago

    Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

    karnataka Rain
    ಮಳೆ2 days ago

    Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

    Karnataka weather Forecast
    ಮಳೆ2 days ago

    Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

    ramanagara news
    ರಾಮನಗರ2 days ago

    Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

    karnataka rain
    ಮಳೆ2 days ago

    Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

    ಟ್ರೆಂಡಿಂಗ್‌