Hassan Landslide: ಗುಡ್ಡ ಕುಸಿದು ಕತ್ತರಿಸಿಹೋದ ರಸ್ತೆ; 10 ಗ್ರಾಮಗಳ ಸಂಪರ್ಕ ಕಟ್;‌ ಎತ್ತಿನಹೊಳೆ ಕಾಮಗಾರಿಯೇ ಕಾರಣ - Vistara News

ಪ್ರಮುಖ ಸುದ್ದಿ

Hassan Landslide: ಗುಡ್ಡ ಕುಸಿದು ಕತ್ತರಿಸಿಹೋದ ರಸ್ತೆ; 10 ಗ್ರಾಮಗಳ ಸಂಪರ್ಕ ಕಟ್;‌ ಎತ್ತಿನಹೊಳೆ ಕಾಮಗಾರಿಯೇ ಕಾರಣ

Hassan Landslide: 200 ಮೀಟರ್‌ಗೂ ಹೆಚ್ಚು ದೂರ ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕ ಕಟ್ ಆಗಿದೆ. ಈ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಆರೋಪಿಸಲಾಗಿದೆ.

VISTARANEWS.COM


on

hassan landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹಾಸನ (Hassan news) ಜಿಲ್ಲೆಯಲ್ಲಿ ಮಳೆ ಹಾವಳಿ (karanataka Rain News) ಮುಂದುವರಿದಿದೆ. ಸಕಲೇಶಪುರ (Sakaleshpur) ಬಳಿ ಗುಡ್ಡ ಕುಸಿತದಿಂದ (Landslide) ಸುಮಾರು 200 ಅಡಿಗಳಷ್ಟು ದೂರದ ರಸ್ತೆಯೇ ಕತ್ತರಿಸಿಹೋಗಿ, ಮಂಗಮಾಯವಾಗಿದೆ. ಭಾರಿ ಭೂಕುಸಿತ ಉಂಟಾಗಿರುವ ಕಾರಣ ರಸ್ತೆ ಸರ್ವನಾಶವಾಗಿದ್ದು, ಇದರಿಂದ ಸಂಪರ್ಕಿತರಾಗಿದ್ದ ಸುಮಾರು 10 ಗ್ರಾಮಗಳ ಜನತೆ ಸಂಪರ್ಕ (communication cut) ಕಳೆದುಕೊಂಡಿದ್ದಾರೆ. ಈ ರಸ್ತೆಯ ಸಮೀಪದಲ್ಲಿ ಎತ್ತಿನಹೊಳೆ (Ettinahole project) ಪೈಪ್‌ಲೈನ್‌ ಹಾದುಹೋಗಿದ್ದು, ಅವೈಜ್ಞಾನಿಕವಾಗಿರುವ ಇದರ ಕಾಮಗಾರಿಯೇ ಈ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

hassan landslide
hassan landslide

ಹಾಸನದಲ್ಲಿ ಮುಂದುವರೆದ ಮಳೆಯ ಅಬ್ಬರದ ಪರಿಣಾಮ ಉಂಟಾಗುತ್ತಿರುವ ಭೂಕುಸಿತಗಳ ಸಾಲಿಗೆ ಸಕಲೇಶಪುರದ ಬಳಿಯ ಈ ಬೃಹತ್ ಪ್ರಮಾಣದ ಭೂ ಕುಸಿತ ಸೇರಿದೆ. ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ ನಡೆದಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತವಾಗಿದೆ. 200 ಮೀಟರ್‌ಗೂ ಹೆಚ್ಚು ದೂರ ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕ ಕಟ್ ಆಗಿದೆ. ಈ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಆರೋಪಿಸಲಾಗಿದೆ.

hassan landslide
hassan landslide

ಮುಂದುವರಿದ ಹಳಿ ತೆರವು

ಶಿರಾಡಿ ಘಾಡಿಯಲ್ಲಿ ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡವನ್ನು ತೆರವು ಮಾಡುವ ಕಾರ್ಯಾಚರಣೆ ನಾಲ್ಕನೇ ದಿನವೂ ಮುಂದುವರಿದಿದೆ. ಭಾರಿ ಮಳೆಯ ನಡುವೆಯೂ ಕಾರ್ಯಾಚರಣೆ ನಡೆಯುತ್ತಿದ್ದು, 420ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಹದಿನೈದು ದಿನಗಳ ಕಾಲ ಸಕಲೇಶಪುರ-ಸುಬ್ರಹ್ಮಣ್ಯ ನಡುವೆ ರೈಲು ಮಾರ್ಗ ಬಂದ್ ಆಗಿದೆ. ಕಾರ್ಯಾಚರಣೆಗೆ ಸತತ ಮಳೆ ಅಡ್ಡಿಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿತ್ತು. ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಕಾರ್ಯಾಚರಣೆ ಮೇಲ್ವಿಚಾರಣೆ ನಡೆಸಿದ್ದಾರೆ.

ಕೊಡಗಿನಲ್ಲಿ ಬಿರುಸುಗೊಂಡ ಮಳೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಬಿರುಸು ಪಡೆದುಕೊಂಡಿದ್ದು, ಬ್ರಹ್ಮಗಿರಿ ತಪ್ಪಲಿನಲ್ಲಿ ನಿನ್ನೆಯಿಂದ ಧಾರಾಕಾರ‌ ಮಳೆಯಾಗುತ್ತಿದೆ. ಕಾವೇರಿ, ಕನ್ನಿಕೆ, ಸುಜೋತಿ ನದಿಗಳು ಉಕ್ಕಿ ಹರಿಯುತ್ತಿವೆ. ಭಾಗಮಂಡಲದ ತ್ರಿವೇಣಿ ಸಂಗಮ‌ ಮತ್ತೆ ಸಂಪೂರ್ಣ ಭರ್ತಿಯಾಗಿದ್ದು, 2ನೇ ಬಾರಿಗೆ ಭಗಂಡೇಶ್ವರ ದೇಗುಲದ ಮೆಟ್ಟಿಲವರೆಗೆ ನೀರು ಬಂದಿದೆ. ಮಡಿಕೇರಿ – ತಲಕಾವೇರಿ ಭಾಗಮಂಡಲ ನಾಪೋಕ್ಲು ರಸ್ತೆ ಮೇಲೆ ನೀರು ನಿಂತಿದೆ. ಭಾಗಮಂಡಲದ ಮೇಲ್ಸೇತುವೆ ಮೇಲೆ‌ ವಾಹನಗಳ ಓಡಾಟ ನಡೆದಿದೆ.

ಹಾರಿಹೋದ ಮನೆಗಳ ಸೂರುಗಳು

ಕಾರವಾರ: ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿಗೆ 20ಕ್ಕೂ ಅಧಿಕ ಮನೆಗಳ ಮೇಲ್ಛಾವಣಿ ಹಾರಿಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡ ಸೀಬರ್ಡ್ ಕಾಲೋನಿಯಲ್ಲಿ ನಡೆದಿದೆ. ಸುಧಾ ಹರಿಕಾಂತ, ನಿರ್ಮಲಾ ದುರ್ಗೇಕರ್, ಶೋಭಾ ದುರ್ಗೇಕರ್ ಸೇರಿ 20ಕ್ಕೂ ಅಧಿಕ ನಿವಾಸಿಗಳ ಮೇಲ್ಛಾವಣಿಗೆ ಹಾನಿಯಾಗಿದೆ. ತಡರಾತ್ರಿ ಬೀಸಿದ ಭಾರೀ ಗಾಳಿಗೆ ತಗಡಿನ ಶೀಟ್‌ಗಳಿದ್ದ ಮೇಲ್ಛಾವಣಿ ಹಾರಹೋಗಿವೆ. ಕೆಲವರ ಹೆಂಚಿನ ಮನೆಗಳಿಗೂ ಹಾನಿಯಾಗಿದ್ದು, ಹೆಂಚಿನ ತುಂಡು ತಲೆಗೆ ಬಿದ್ದು ಮನೆಯವರು ಗಾಯಗೊಂಡರು.

ಇದನ್ನೂ ಓದಿ: Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

SSC Recruitment 2024: ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17. ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆ ಇದಾಗಿದ್ದು, ಆಯ್ಕೆಯಾದವರನ್ನು ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಕಚೇರಿಗಳಿಗೆ ನೇಮಕ ಮಾಡಿಕೊಳ್ಳಲಿದೆ.

VISTARANEWS.COM


on

SSC Recruitment 2024
Koo

ನವದೆಹಲಿ: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಖಾಲಿ ಇರುವ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆ ಇದಾಗಿದ್ದು, ಆಯ್ಕೆಯಾದವರನ್ನು ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಕಚೇರಿಗಳಿಗೆ ನೇಮಕ ಮಾಡಿಕೊಳ್ಳಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಸಿ ಸ್ಟೆನೋಗ್ರಾಫರ್‌ ಗ್ರೂಪ್‌ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-30 ವರ್ಷದೊಳಗಿರಬೇಕು ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-27 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಆನ್‌ಲೈನ್‌ ಮೂಲಕ 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ, ಮಹಿಳಾ, ಮಾಜಿ ಸೈನಿಕ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್ ಆಧಾರಿತ ಆನ್‌ಲೈನ್‌ ಪರೀಕ್ಷೆ ಜತೆಗೆ ಸ್ಟೆನೋಗ್ರಾಫಿ ಸ್ಕಿಲ್‌ ಟೆಸ್ಟ್‌ ಇರುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಮೂಲ ದಾಖಲೆಗಳ ಪರಿಶೀಲಿಸಲಾಗುತ್ತದೆ. ಕೊನೆಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 30,000 ರೂ. – 39, 995 ರೂ. ಮಾಸಿಕ ವೇತನ ದೊರೆಯಲಿದೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login)
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

Actor Darshan: ದರ್ಶನ್‌ ಸೆಲ್‌ಗೆ ಹೊಸ ಸಿಬ್ಬಂದಿಗಳ ನೇಮಕ ಮಾಡಲಾಗಿದೆ. ಹೊರಗಿನವರು ಯಾರಾದರೂ ಭೇಟಿಗೆ ಬಂದರೆ ಜೊತೆಗೆ ಜೈಲಿನ ಸಿಬ್ಬಂದಿ ಇರುತ್ತಾರೆ. ಇಬ್ಬರು ಸಿಬ್ಬಂದಿಯ ಭದ್ರತೆಯಲ್ಲಿ ದರ್ಶನ್‌ ಕರೆತರಲಾಗುತ್ತದೆ. ಹೊರಗಿನಿಂದ ಬಂದವರ ಭೇಟಿ ಬಳಿಕ ಮತ್ತೆ ಭದ್ರತೆಯಲ್ಲೇ ವಾಪಸ್ಸಾಗುತ್ತಾನೆ.‌

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿರುವ ನಟ ದರ್ಶನ್ (Actor Darshan) ಸೆಲ್‌ಗೆ ಜೈಲಾಧಿಕಾರಿಗಳು ಭದ್ರತೆ ಹೆಚ್ಚಿಸಿದ್ದಾರೆ. ದರ್ಶನ್ ಕೊಠಡಿಗೆ ಹೊಸದಾಗಿ ಏಳು ಜನ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಹಳೆಯ ಸಿಬ್ಬಂದಿಯನ್ನು ಬದಲಾಯಿಸಲಾಗಿದೆ.

ಈ ಹಿಂದೆ ಸಿದ್ದಾರೂಢ ಎಂಬ ಕೈದಿ ಹೊರ ಬಂದ ಬಳಿಕ ಒಂದಷ್ಟು ಜೈಲು ವಿಚಾರಗಳನ್ನು ಹಂಚಿಕೊಂಡಿದ್ದ. ತಾನು ದರ್ಶನ್‌ ಭೇಟಿ ಮಾಡಿದ್ದೆ ಎಂದು ಹೇಳಿಕೊಂಡಿದ್ದ. ಹೀಗಾಗಿ ಇಂಥ ಘಟನೆ ಮರುಕಳಿಸದಂತೆ ದರ್ಶನ್ ಕೊಠಡಿಯ ಹೊರ ಭಾಗದಲ್ಲಿ ಸಿಬ್ಬಂದಿ ಭದ್ರತೆಗೆ ನಿಯೋಜನೆಗೊಳಿಸಲಾಗಿದೆ. ಇದೀಗ ಬೇರೆ ಯಾವ ಕೈದಿಯೂ ಭೇಟಿ ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ.

ದರ್ಶನ್‌ ಸೆಲ್‌ಗೆ ಹೊಸ ಸಿಬ್ಬಂದಿಗಳ ನೇಮಕ ಮಾಡಲಾಗಿದೆ. ಹೊರಗಿನವರು ಯಾರಾದರೂ ಭೇಟಿಗೆ ಬಂದರೆ ಜೊತೆಗೆ ಜೈಲಿನ ಸಿಬ್ಬಂದಿ ಇರುತ್ತಾರೆ. ಇಬ್ಬರು ಸಿಬ್ಬಂದಿಯ ಭದ್ರತೆಯಲ್ಲಿ ದರ್ಶನ್‌ ಕರೆತರಲಾಗುತ್ತದೆ. ಹೊರಗಿನಿಂದ ಬಂದವರ ಭೇಟಿ ಬಳಿಕ ಮತ್ತೆ ಭದ್ರತೆಯಲ್ಲೇ ವಾಪಸ್ಸಾಗುತ್ತಾನೆ.‌

ಈ ನಡುವೆ. ಮನೆಯೂಟಕ್ಕಾಗಿ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನೂ ವಾಪಸ್‌ ಪಡೆಯಲಾಗಿದೆ. ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ. ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಚಾರ್ಜ್‌ಶೀಟ್‌ ಸಲ್ಲಿಕೆಗೆ ಸಿದ್ಧತೆ

ರೇಣುಕಾಸ್ವಾಮಿ ಕೊಲೆ ಸಂಬಂಧ ನಟ ದರ್ಶನ್ ಹಾಗೂ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಹುತೇಕ ಆಗಸ್ಟ್‌ನಲ್ಲಿ ಚಾರ್ಜ್‌ಶೀಟ್ ಮಾಡಲು ಮುಂದಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಕ್ರೋಢೀಕರಣದಲ್ಲಿ ಪೊಲೀಸರು ತೊಡಗಿದ್ದಾರೆ. ಆರೋಪಿಗಳ ಹೇಳಿಕೆಗಳು, ಸಾಕ್ಷಿಗಳ ಹೇಳಿಕೆಗಳು, 164 ಹೇಳಿಕೆ ಪ್ರತಿಗಳು, ಮಹಜರು ಕಾಪಿಗಳು, ಸಿಡಿಆರ್ ರಿಪೋರ್ಟ್, ಆರ್‌ಟಿಓ ರಿಪೋರ್ಟ್‌ಗಳು, ಮೆಡಿಕಲ್ ರಿಪೋರ್ಟ್ಸ್ ಸೇರಿದಂತೆ ಹಲವು ದಾಖಲೆಗಳು ಅಡಕವಾಗಬೇಕಿವೆ.

ಹಲವಾರು ದಾಖಲೆಗಳು ಇನ್ನೂ ಪೊಲೀಸರ ಕೈ ಸೇರಬೇಕಿವೆ. ಸಿಸಿಟಿವಿ ಫೂಟೇಜ್ ರಿಪೋರ್ಟ್, ಬಟ್ಟೆಗಳ ರಿಪೋರ್ಟ್, ಸ್ಥಳದಲ್ಲಿ ಸಂಗ್ರಹಿಸಿದ ಸ್ಯಾಂಪಲ್‌ಗಳ ರಿಪೋರ್ಟ್, ಮರಣೋತ್ತರ ಪರೀಕ್ಷೆಯಲ್ಲಿ ಸಂಗ್ರಹಿಸಿದ ಸ್ಯಾಂಪಲ್ ರಿಪೋರ್ಟ್ಸ್, ಮೊಬೈಲ್ ರಿಟ್ರೀವ್ ರಿಪೋರ್ಟ್, ಎಫ್ಎಸ್ಎಲ್‌ಗೆ ರವಾನಿಸಿದ ಸ್ಯಾಂಪಲ್ ರಿಪೋರ್ಟ್ಸ್‌ಗೆ ಪೊಲೀಸರು ಕಾದಿದ್ದಾರೆ. ವರದಿಗಳು ಬಂದ ನಂತರ ಪರಿಶೀಲನೆ ನಡೆಸಿ ಚಾರ್ಜ್‌ಶೀಟ್ ತಯಾರಿಸಲಿದ್ದಾರೆ.

ರಿಪೋರ್ಟ್‌ಗಳನ್ನು ಆದಷ್ಟು ಬೇಗ ನೀಡುವಂತೆ ಎಫ್ಎಸ್ಎಲ್ ಹಾಗೂ ಸಿಐಡಿ ಟೆಕ್ನಿಕಲ್ ಸೆಲ್‌ಗೆ ಪೊಲೀಸರು ಮನವಿ ಮಾಡಿದ್ದಾರೆ. ಇನ್ನೂ ಕೆಲವು ವರದಿಗಳು ಹೈದರಾಬಾದ್ ಎಫ್ಎಸ್ಎಲ್‌ನಿಂದ ಬರಬೇಕಿದೆ. ಸುಮಾರು 66ಕ್ಕೂ ಹೆಚ್ಚು ಸ್ಯಾಂಪಲ್‌ಗಳನ್ನು ಎಫ್ಎಸ್ಎಲ್‌ಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಹಲವಾರು ಪ್ರತ್ಯಕ್ಷ ಪರೋಕ್ಷ ಸಾಕ್ಷಿಗಳ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಈಗಾಗಲೇ ಪ್ರಕರಣ ದಾಖಲಾಗಿ ಒಂದೂವರೆ ತಿಂಗಳಿಗೂ ಅಧಿಕ ಕಾಲವಾಗಿದೆ. ಸೆಪ್ಟೆಂಬರ್ 8ರೊಳಗೆ ಚಾರ್ಜ್‌ಶೀಟ್ ಮಾಡಬೇಕು. ಆದ್ದರಿಂದ ಕೊನೆ ದಿನದವರೆಗೂ ಕಾಯದೆ ಆದಷ್ಟು ಬೇಗ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಆಗಸ್ಟ್ ಮಧ್ಯ ವಾರದಲ್ಲಿ ಸಲ್ಲಿಸಬಹುದು.

ಪಶ್ಚಿಮ ವಿಭಾಗ ಪೊಲೀಸರು ಎಸಿಪಿ ಚಂದನ್, ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ನಾಗೇಶ್ ಹಾಗೂ ತಂಡದಿಂದ ಚಾರ್ಜ್‌ಶೀಟ್‌ ತಯಾರಿ ನಡೆದಿದ್ದು, ಹಲವು ಸಿಬ್ಬಂದಿ ನಿಯೋಜಿಸಲಾಗಿದೆ. 20ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿ ಬಳಸಿಕೊಂಡು, ಪ್ರತಿ ಠಾಣೆಯ ಇನ್‌ಸ್ಪೆಪೆಕ್ಟರ್ ಹಾಗು ಪಿಎಸ್ಐಗಳಿಗೆ ಒಂದೊಂದು ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ: ‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

Continue Reading

ಪ್ರಮುಖ ಸುದ್ದಿ

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Liquor Price Karnataka: ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆ (Beer Price) ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ (Liquor Price Karnataka) ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್‌ ಇಳಿಯವಂತಾಗಿದೆ.

ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ. ಬಿಯರ್ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಇತರ ದುಬಾರಿ ಹಾಟ್‌ ಮದ್ಯಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಮದ್ಯಪ್ರಿಯರು ಬಿಯರ್‌ಗೆ ತೃಪ್ತಿಪಟ್ಟುಕೊಳ್ಳೋಣ ಎಂದು ಭಾವಿಸಿದರೆ ಈಗ ಅದೂ ಸಾಧ್ಯವಿಲ್ಲದಾಗಿದೆ.

ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಿಯರ್ ದರ ಸುಮಾರು 60 ರೂಪಾಯಿಯಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರಕಾರ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಅದರಿಂದ ದರ ಏರಿಕೆಯಾಗಿತ್ತು. ಆ ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು.

ನಂತರ ಮತ್ತೆ ಸರ್ಕಾರದಿಂದ ಬಿಯರ್ ಮೇಲಿನ ಸುಂಕ‌ ಹೆಚ್ಚಳ ಮಾಡಿದ್ದ ಕಾರಣ ಕಳೆದ ಫೆಬ್ರವರಿಯಲ್ಲಿ ಬಿಯರ್ ದರ ಏರಿದೆ. ಇದೀಗ ಮತ್ತೆ ಬಿಯರ್ ದರ ಏರಿಕೆಗೆ ಕಂಪನಿಗಳು ತೀರ್ಮಾನಿಸಿವೆ. ಹೀಗಾಗಿ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 60 ರೂ. ವರೆಗೆ ಹೆಚ್ಚಳವಾದಂತಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಖಜಾನೆ ತುಂಬಿಸಿಕೊಳ್ಳಲು ಅಬಕಾರಿ ಸುಂಕವನ್ನು ಅನಿಯಮಿತವಾಗಿ ಹೆಚ್ಚಿಸುವ ದಾರಿಯನ್ನು ಸರಕಾರ ಹಿಡಿದಿದೆ ಎಂದು ಲಿಕ್ಕರ್‌ಪ್ರಿಯರು ಆರೋಪಿಸಿದ್ದಾರೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ರಾಜಕೀಯ

Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ

Parliament Session: ಸಂಸತ್‌ನಲ್ಲಿ ಈ ಬಾರಿ ಪ್ರತಿಪಕ್ಷಗಳ ಬಲ ಹೆಚ್ಚಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿವೆ. ಸಂಸತ್‌ನ ಬಜೆಟ್‌ ಅಧಿವೇಶನ ಕಾವೇರಿದ ಚರ್ಚೆಗೆ ಸಾಕ್ಷಿಯಾಗುತ್ತಿದ್ದು ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ನಡೆಯುವ ನಿರೀಕ್ಷೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣ ಉಭಯ ಸದನಗಳಲ್ಲಿ ಇಂದು ಕೂಡ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ಹೀಗಾಗಿ ಕುತೂಹಲ ಕೆರಳಿಸಿರುವ ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ವೀಕ್ಷಿಸಿ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನ (Parliament Session) ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಭಾರಿ ಚರ್ಚೆಗೆ ಸಾಕ್ಷಿಯಾಗುತ್ತಿದೆ. ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ನಡೆಯುವ ನಿರೀಕ್ಷೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣ ಉಭಯ ಸದನಗಳಲ್ಲಿ ಇಂದು ಕೂಡ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.

ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಕಲಾಪಗಳು ಪುನರಾರಂಭಗೊಳ್ಳಲಿದ್ದು, ಉಭಯ ಸದನಗಳು 2024-25ರ ಬಜೆಟ್ ಮೇಲಿನ ಚರ್ಚೆಗಳನ್ನು ಮುಂದುವರಿಸಲಿವೆ. ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಆದೇಶವನ್ನು ತೆಗೆದುಹಾಕುವಂತೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇದಕ್ಕೆ ಉತ್ತರಿಸಿದ್ದ ಸ್ಪೀಕರ್‌ ಅವರು ಸಂಸತ್ತಿನ ಕಾರ್ಯವಿಧಾನದ ನಿಯಮಗಳ ಬಗ್ಗೆ ರಾಹುಲ್‌ ಗಾಂಧಿಗೆ ನೆನಪಿಸಿದ್ದರು. ಅಂತಹ ವಿಷಯಗಳನ್ನು ಸದನದಲ್ಲಿ ಚರ್ಚಿಸುವ ಬದಲು ಖಾಸಗಿಯಾಗಿ ಚರ್ಚಿಸಬೇಕೆಂದು ಸಲಹೆ ನೀಡಿದ್ದರು. ಬಳಿಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ’ಬ್ರಿಯಾನ್, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮತ್ತು ಶಿವಸೇನೆ-ಯುಬಿಟಿ ಸಂಸದೆ ಪ್ರಿಯಾಂಕಾ ಚತುರ್ವೇದಿ ಮತ್ತಿತತ ಪ್ರತಿಪಕ್ಷದ ನಾಯಕರೊಂದಿಗೆ ಮಾಧ್ಯಮ ಸಿಬ್ಬಂದಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ನಂತರ ಓಂ ಬಿರ್ಲಾ ಅವರು ಪತ್ರಕರ್ತರ ಗುಂಪನ್ನು ಭೇಟಿಯಾಗಿ, ಅವರ ಕುಂದುಕೊರತೆಗಳನ್ನು ಪರಿಹರಿಸಲಾಗುವುದು ಮತ್ತು ಅವರ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ಲೋಕಸಭೆಯಲ್ಲಿ ಅಬ್ಬರಿಸಿದ ರಾಹುಲ್‌ ಗಾಂಧಿ

ಇನ್ನು ಸೋಮವಾರ ಬಜೆಟ್‌ ಮೇಲಿನ ಚರ್ಚೆ ವೇಳೆ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದರು. “ಮಹಾಭಾರತದ ಚಕ್ರವ್ಯೂಹದಂತೆ  ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಹೇಳಿದ್ದರು.

“ಚಕ್ರವ್ಯೂಹದಲ್ಲಿ ತುಂಬ ಜನ ಇರುತ್ತಾರೆ. ಆದರೆ, ಚಕ್ರವ್ಯೂಹದ ಮಧ್ಯದಲ್ಲಿ 6 ಜನ ಇರುತ್ತಾರೆ ಹಾಗೂ ಅವರು ಇಡೀ ಚಕ್ರವ್ಯೂಹವನ್ನು ನಿಯಂತ್ರಿಸುತ್ತಾರೆ. ಆಧುನಿಕ ಕಾಲದ ಚಕ್ರವ್ಯೂಹವನ್ನು ಕೂಡ ಆರು ಜನ ನಿಯಂತ್ರಿಸುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್‌, ಅಜಿತ್‌ ದೋವಲ್‌, ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿಯೇ ಈಗ ಕಮಲದ ಆಕಾರದ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಅಗ್ನಿಪಥ್‌ ಯೋಜನೆಗೆ ವಿರೋಧ

ಇದರ ಜತೆಗೆ ರಾಹುಲ್‌ ಗಾಂಧಿ ಅಗ್ನಿಪಥ್‌ ಯೋಜನೆ ಬಗ್ಗೆಯೂ ಪ್ರಸ್ತಾವಿಸಿ ವಿರೋಧ ವ್ಯಕ್ತಪಡಿಸಿದ್ದರು. ʼʼಸೇನೆಯ ಸೈನಿಕರನ್ನು ಅಗ್ನಿವೀರ್ ಹೆಸರಿನ ಚಕ್ರವ್ಯೂಹದಲ್ಲಿ ಸಿಲುಕಿಸಲಾಯ್ತು. ಈ ಬಜೆಟ್‌ನಲ್ಲಿ ಅಗ್ನಿವೀರರ ಪಿಂಚಣಿಗಾಗಿ ಒಂದು ರೂಪಾಯಿಯನ್ನು ತೆಗೆದಿರಿಸಿಲ್ಲ. ನಿಮ್ಮನ್ನು ದೇಶಭಕ್ತರೆಂದು ಕರೆದುಕೊಳ್ಳುವ ನೀವು ಅಗ್ನಿವೀರರ ಪಿಂಚಣಿಗಾಗಿ ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಚಕ್ರವ್ಯೂಹದಿಂದ ಹೊರಬರಲು ರೈತರು ಎಂಎಸ್‌ಪಿ ಲೀಗಲ್ ಗ್ಯಾರಂಟಿಯನ್ನು ಕೇಳಿದ್ದರು. ಆದ್ರೆ ನೀವು ರೈತರ ಜತೆ ಮಾತನಾಡಲು ಸಿದ್ಧವಿಲ್ಲʼʼ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರು, ʼʼಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆʼʼ ಎಂದು ಹೇಳಿದ್ದರು. ಜತೆಗೆ ಯೋಜನೆ ಬಗ್ಗೆ ಚರ್ಚೆಗೆ ಸಿದ್ದ ಎಂದು ಸವಾಲು ಸ್ವೀಕರಿಸಿದ್ದರು. ಹೀಗಾಗಿ ಇಂದು ಕೂಡ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

Continue Reading
Advertisement
Bharachukki falls
ಚಾಮರಾಜನಗರ4 mins ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

Nawab Malik
ದೇಶ5 mins ago

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

SSC Recruitment 2024
ಉದ್ಯೋಗ24 mins ago

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

Paris Olympics 2024
ಕ್ರೀಡೆ25 mins ago

Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

brutal murder dawood
ಕ್ರೈಂ34 mins ago

Brutal Murder: ಮುಂಬಯಿ ಯುವತಿಯನ್ನು ಬರ್ಬರವಾಗಿ ಕೊಂದ ಪಾತಕಿ ದಾವೂದ್ ಯಾದಗಿರಿಯಲ್ಲಿ ಆರೆಸ್ಟ್‌

Road Accident
ತುಮಕೂರು55 mins ago

Road Accident : ತುಮಕೂರಿನಲ್ಲಿ ಕಾರು-ಬೈಕ್‌ ಅಪಘಾತ; ಮಗಳು, ಮೊಮ್ಮಗಳ ಕಣ್ಣೇದುರೇ ಪ್ರಾಣಬಿಟ್ಟ ತಂದೆ

physical abuse
ದೇಶ55 mins ago

Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Kerala Cyclist Reaches Paris
ಕ್ರೀಡೆ1 hour ago

Kerala Cyclist Reaches Paris: ನೀರಜ್​ ಚೋಪ್ರಾಗೆ ಬೆಂಬಲ ಸೂಚಿಸಲು ಬರೋಬ್ಬರಿ 22 ಸಾವಿರ ಕಿ.ಮೀ ಸೈಕಲ್​ ತುಳಿದು ಪ್ಯಾರಿಸ್​ ತಲುಪಿದ ಕೇರಳದ ಅಭಿಮಾನಿ

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಗೆ ಗೋಲ್ಡನ್‌ ಟೈಮ್‌; ಮತ್ತೆ ಇಳಿಮುಖವಾದ ಚಿನ್ನದ ದರ

murder case
ತುಮಕೂರು2 hours ago

Murder Case : ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bharachukki falls
ಚಾಮರಾಜನಗರ4 mins ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ19 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ20 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ23 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

ಟ್ರೆಂಡಿಂಗ್‌