Wayanad Landslide: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ: ಸಿಎಂ ಸಿದ್ದರಾಮಯ್ಯ - Vistara News

ಕರ್ನಾಟಕ

Wayanad Landslide: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ: ಸಿಎಂ ಸಿದ್ದರಾಮಯ್ಯ

Wayanad Landslide: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (Wayanad Landslide) ದುರಂತದಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Wayanad Landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೇವರನಾಡು ಕೇರಳ (Kerala) ಮತ್ತೊಮ್ಮೆ ಭಾರಿ ಮಳೆಯ ಹೊಡೆತಕ್ಕೆ ಸಿಲುಕಿ ನಲುಗಿದೆ. ಅದರಲ್ಲಿಯೂ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (Wayanad Landslide) ದುರಂತದಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ (Meppadi) ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ. ಇದೀಗ ಎಲ್ಲಿ ನೋಡಿದರೂ ಮಣ್ಣಿನ ರಾಶಿಯೇ ಕಂಡು ಬಂದಿದ್ದು, ರಸ್ತೆ, ಸೇತುವೆ, ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜತೆ ನಾವು ನಿಲ್ಲಲಿದ್ದೇವೆ ಎಂದು ಹೇಳಿದ್ದಾರೆ.

ವಯನಾಡು ಭೂಕುಸಿತ; ಈವರೆಗೆ 250 ಜನರ ರಕ್ಷಣೆ

ವಯನಾಡಿನಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಸಿಬ್ಬಂದಿ, ಸರ್ಕಾರಿ ಸಂಸ್ಥೆ ಸಿಬ್ಬಂದಿ ಸೇರಿದಂತೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು 43 ಭಾರತೀಯ ಸೇನಾ ಸಿಬ್ಬಂದಿಯ ತಂಡವನ್ನು ಸಹ ಸಜ್ಜುಗೊಳಿಸಲಾಗಿದೆ. ಇದೇ ವೇಳೆ ಸೇತುವೆ ಕುಸಿದಿರುವುದು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಈವರೆಗೆ ಗುಡ್ಡಗಾಡು ಪ್ರದೇಶಗಳಿಂದ 250 ಜನರನ್ನು ರಕ್ಷಿಸಲಾಗಿದೆ.

ಇದನ್ನೂ ಓದಿ | Kodi Mutt Swamiji: ಕೆಟ್ಟದ್ದೇ ಜಾಸ್ತಿ, ಪ್ರಕೃತಿ ವಿಕೋಪಗಳು ಮುಂದುವರಿಯುತ್ತವೆ: ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಮಂಗಳವಾರ ಮುಂಜಾನೆ 2ರಿಂದ4 ಗಂಟೆಯ ನಡುವೆ ಸಂಭವಿಸಿದ ಭೂಕುಸಿತದಿಂದ ಮುಂಡಕೈ ಮತ್ತು ಚೂರಲ್‌ಮಾಲಾ ಪ್ರದೇಶದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕುಸಿದ ಸೇತುವೆ, ಕೊಚ್ಚಿ ಹೋದ ರಸ್ತೆ ಮುಂಡಕೈಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಚೂರಲ್‌ಮಾಲಾದಲ್ಲಿ ಒಟ್ಟು 250 ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜು ರಜೆ

Karnataka Weather Forecast : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮಲೆನಾಡಿನ ಚಿಕ್ಕಮಗಳೂರು, ಕೊಡುಗು ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಗಿನಿಂದಲೂ ಮೋಡ ಕವಿದ ವಾತಾವರಣ ಇತ್ತು. ಸಂಜೆ ಆಗುತ್ತಿದ್ದಂತೆ ಹಲವೆಡೆ (Rain News) ಮಳೆಯಾಗಿದೆ. ಆನಂದ್‌ ರಾವ್‌ ಸರ್ಕಲ್‌, ಶಿವಾಜಿನಗರ, ವಿಧಾನಸೌಧ, ಮೆಜೆಸ್ಟಿಕ್‌ ಸುತ್ತಮುತ್ತ ಮಳೆಯಾಗಿದೆ. ಇನ್ನೂ ಮಲೆನಾಡಿನ ಚಿಕ್ಕಮಗಳೂರಿನಲ್ಲಿ ಧಾರಾಕಾರ (Karnataka Weather Forecast) ಮ‌ಳೆ‌ಯಾಗುತ್ತಿದೆ. ಜು.31ರಂದು ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ‌‌ ಘೋಷಣೆ ಮಾಡಲಾಗಿದೆ.

ಮುಖ್ಯವಾಗಿ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ‌ರಜೆ‌ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇನ್ನೂ ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ.

ಇತ್ತ ಕೊಡಗಿನಲ್ಲೂ ಭಾರಿ ಗಾಳಿ-ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ಒಂದು ದಿನ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿ, ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.

ಧಾರಾಕಾರ ಮಳೆಗೆ ಐತಿಹಾಸಿಕ ರಾಮ ಮಂಟಪ ಮುಳುಗಡೆ

ಶಿವಮೊಗ್ಗದಲ್ಲೂ ಎಡಬಿಡದೆ ವ್ಯಾಪಕ ಮಳೆಯಾಗುತ್ತಿದ್ದು, ಐತಿಹಾಸಿಕ ರಾಮ ಮಂಟಪ ಮುಳುಗಡೆಯಾಗಿದೆ. ತೀರ್ಥಹಳ್ಳಿಯ ತುಂಗಾ ನದಿಯಲ್ಲಿರುವ ರಾಮ ಮಂಟಪ ಮುಳುಗಡೆಯಾಗಿದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇನ್ನೂ ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕ್ಷಣಗಣನೆ ಶುರುವಾಗಿದೆ. ನದಿ ಪಾತ್ರದ ಜನರಿಗೆ ಜಲಾಶಯದ ಅಧಿಕಾರಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸುತ್ತಿದ್ದಾರೆ. ಲಿಂಗನಮಕ್ಕಿ ಮಲೆನಾಡಿನ ಅತಿದೊಡ್ಡ ಜಲಾಶಯವಾಗಿದೆ. ನದಿಪಾತ್ರದ ಜನರಿಗೆ ಕಟ್ಟೇಚ್ಚರ ಘೋಷಣೆ ಮಾಡಲಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನದಿಪಾತ್ರದ ಹಳ್ಳಿಗಳಿಗೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

ನಾಳೆಗೂ ಮಳೆ ಅಬ್ಬರ

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳ ಪ್ರತ್ಯೇಕ ಕಡೆ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬೆಳಗಾವಿ ಮತ್ತು ಮೈಸೂರಿನಲ್ಲೂ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಾಣಿಜ್ಯ

Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

Tata Motors: ಟಾಟಾ ಮೋಟಾರ್ಸ್ ಸಂಸ್ಥೆಯು ಪುಣೆ, ಲಕ್ನೋ, ಜಮ್‌ಶೆಡ್‌ಪುರ, ಧಾರವಾಡ, ಸನಂದ್ ಮತ್ತು ಪಂತ್ ನಗರ ಸೇರಿದಂತೆ ಭಾರತದಾದ್ಯಂತ ಇರುವ ತಮ್ಮ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ತಂತ್ರಜ್ಞರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ‘ವಿದ್ಯಾಧನ’ ಮತ್ತು ‘ಉತ್ಕರ್ಷ’ ಎಂಬ ಎರಡು ವಿಶೇಷ ಧನಸಹಾಯ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿರುವುದಾಗಿ ಇಂದು ಘೋಷಿಸಿದೆ. ಈ ಮೂಲಕ ಕಂಪನಿಯು ಮಹತ್ವಾಕಾಂಕ್ಷೆ ಮತ್ತು ಅದನ್ನು ಸಾಧಿಸುವ ಪ್ರಕ್ರಿಯೆ ಮಧ್ಯೆ ಇರುವ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Tata Motors launched two programs Vidyadhana and Utkarsha to facilitate higher education of technician children
Koo

ಭಾರತದ ಪ್ರಮುಖ ಆಟೋಮೊಬೈಲ್ ತಯಾರಕ ಟಾಟಾ ಮೋಟಾರ್ಸ್ ಸಂಸ್ಥೆಯು (Tata Motors) ಪುಣೆ, ಲಕ್ನೋ, ಜಮ್‌ಶೆಡ್‌ಪುರ, ಧಾರವಾಡ, ಸನಂದ್ ಮತ್ತು ಪಂತ್ ನಗರ ಸೇರಿದಂತೆ ಭಾರತದಾದ್ಯಂತ ಇರುವ ತಮ್ಮ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ತಂತ್ರಜ್ಞರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ‘ವಿದ್ಯಾಧನ’ ಮತ್ತು ‘ಉತ್ಕರ್ಷ’ ಎಂಬ ಎರಡು ವಿಶೇಷ ಧನಸಹಾಯ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿರುವುದಾಗಿ ಇಂದು ಘೋಷಿಸಿದೆ. ಈ ಮೂಲಕ ಕಂಪನಿಯು ಮಹತ್ವಾಕಾಂಕ್ಷೆ ಮತ್ತು ಅದನ್ನು ಸಾಧಿಸುವ ಪ್ರಕ್ರಿಯೆ ಮಧ್ಯೆ ಇರುವ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಿದೆ.

ʼವಿದ್ಯಾಧನʼ ಕಾರ್ಯಕ್ರಮದ ಅಡಿಯಲ್ಲಿ 10ನೇ ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ರಿಯಾಯಿತಿ ದರದಲ್ಲಿ ಶಿಕ್ಷಣ ಸಾಲಗಳನ್ನು ಒದಗಿಸಲಾಗುತ್ತದೆ. ‘ಉತ್ಕರ್ಷ’ ಕಾರ್ಯಕ್ರಮದಲ್ಲಿ ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳಿಗೆ ಹೆಚ್ಚುವರಿ ವಾರ್ಷಿಕ ವಿದ್ಯಾರ್ಥಿವೇತನ ಪ್ರಯೋಜನ ನೀಡಲಾಗುತ್ತದೆ.

ವಿದ್ಯಾಧನ ಮತ್ತು ಉತ್ಕರ್ಷ ಕಾರ್ಯಕ್ರಮ ಆರಂಭವನ್ನು ಘೋಷಿಸಿದ ಟಾಟಾ ಮೋಟಾರ್ಸ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ (ಸಿಎಚ್‌ಆರ್‌ಓ) ಸೀತಾರಾಮ್ ಕಂಡಿ ಮಾತನಾಡಿ, “ಪ್ರಗತಿ ಮತ್ತು ಅಭಿವೃದ್ಧಿ ಸಾಧಿಸಲು ಗುಣಮಟ್ಟದ ಶಿಕ್ಷಣ ಬಹಳ ಮುಖ್ಯ. ಈ ಕಾರ್ಯಕ್ರಮಗಳು ಸುಲಭವಾಗಿ ಉನ್ನತ ಶಿಕ್ಷಣ ಪಡೆಯುವಂತೆ ಮಾಡುತ್ತದೆ ಮತ್ತು ನಮ್ಮ ಮುಂದಿನ ಪೀಳಿಗೆಯ ಭವಿಷ್ಯದ ಹಾದಿಯನ್ನು ಉತ್ತಮಗೊಳಿಸುತ್ತದೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಆ.3ರಂದು ‘ಬೌದ್ಧ ಸಾಹಿತ್ಯ-ಹಲವು ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣ

ನಮ್ಮ ಸಂಸ್ಥೆಯಲ್ಲಿ ಕಷ್ಟಪಟ್ಟು ದುಡಿಯುವ ತಂತ್ರಜ್ಞರ ಮಕ್ಕಳು ತಮ್ಮ ಸ್ವಂತ ಕನಸುಗಳನ್ನು ಮತ್ತು ಅವರ ಹೆತ್ತವರ ಕನಸುಗಳನ್ನು ಈ ಕಾರ್ಯಕ್ರಮಗಳ ಮುಖಾಂತರ ಈಡೇರಿಸಲಿದ್ದಾರೆ. ಇನ್ನು ನಮ್ಮ ತಂತ್ರಜ್ಞರ ಮಕ್ಕಳು 10 ಮತ್ತು 12 ನೇ ತರಗತಿ ನಂತರ ತಮ್ಮ ಆಯ್ಕೆಯ ಯಾವುದೇ ವಿಷಯದಲ್ಲಿ ಅಧ್ಯಯನ ಮಾಡಲು ಮುಂದಾಗಬಹುದು. ಪೋಷಕರು ಅದಕ್ಕೆ ಅಗತ್ಯವಿರುವ ಹಣಕಾಸಿನ ಬಗ್ಗೆ ಇನ್ನು ಮುಂದೆ ಚಿಂತಿಸಬೇಕಾದ ಅಗತ್ಯ ಇರುವುದಿಲ್ಲ. ಸೂಕ್ತ ರೀತಿಯ ಕ್ವಾಲಿಫಿಕೇಷನ್ ಮತ್ತು ಕೌಶಲ್ಯಗಳನ್ನು ಹೊಂದುವುದರ ಮೂಲಕ ಯಶಸ್ವಿಯಾಗಿ ವೃತ್ತಿ ರೂಪಿಸಲು ಮತ್ತು ಜೀವನವನ್ನು ನಿರ್ಮಿಸಲು ಅವರಿಗೆ ಈ ಕಾರ್ಯಕ್ರಮಗಳು ಉತ್ತಮ ಅವಕಾಶವಾಗಿದೆ” ಎಂದು ತಿಳಿಸಿದರು.

ವಿದ್ಯಾಧನ

‘ವಿದ್ಯಾಧನ’ ಎಂಬುದು ಶಿಕ್ಷಣ ಸಾಲ ಕಾರ್ಯಕ್ರಮವಾಗಿದ್ದು, ಅದು ಮುಂದಿನ ಪೀಳಿಗೆಗೆ ಉನ್ನತ ಶಿಕ್ಷಣ ಪಡೆದು ತಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಅರಿತುಕೊಳ್ಳಲು ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಅರ್ಹ ತಂತ್ರಜ್ಞರು ದೇಶೀಯ ಶಿಕ್ಷಣದ ಶುಲ್ಕದ 95% ವರೆಗೆ ಅಥವಾ ಅಂತಾರಾಷ್ಟ್ರೀಯ ಶಿಕ್ಷಣ ಶುಲ್ಕದ 85% ವರೆಗೆ ಕಟ್ಟುವ ಸಲುವಾಗಿ 7.5 ಲಕ್ಷ ರೂ.ವರೆಗೆ ಸಾಲವನ್ನು ಪಡೆಯಬಹುದು. ಈ ಶಿಕ್ಷಣ ಸಾಲಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಿಂದ ಒದಗಿಸಲಾಗುತ್ತದೆ ಮತ್ತು ಟಾಟಾ ಮೋಟಾರ್ಸ್ ಎಸ್‌ಬಿಐ ವಿಧಿಸುತ್ತಿರುವ ಬಡ್ಡಿದರದ ಮೇಲೆ ರಿಯಾಯಿತಿಗಳನ್ನು ನೀಡುತ್ತದೆ. ಹುಡುಗರಿಗೆ 50% ಕಡಿಮೆ ಬಡ್ಡಿದರ ಮತ್ತು ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳು 70% ಬಡ್ಡಿ ರಿಯಾಯಿತಿ ಪಡೆಯಲು ಅರ್ಹರಾಗಿರುತ್ತಾರೆ. ಈ ಪ್ರಯೋಜನ ಪಡೆಯಲು ವಿದ್ಯಾರ್ಥಿಯು ಕನಿಷ್ಠ 2 ವರ್ಷಗಳ ಅವಧಿಯುಳ್ಳ ಫುಲ್ ಟೈಮ್ ಪದವಿ ಕೋರ್ಸಿಗೆ ಅಥವಾ ಸ್ನಾತಕೋತ್ತರ ಕೋರ್ಸ್‌ಗೆ ದಾಖಲಾಗಿರಬೇಕು ಮತ್ತು ಆ ಸಂಸ್ಥೆಗಳು ಭಾರತ ಅಥವಾ ವಿದೇಶದಲ್ಲಿರುವ ಮಾನ್ಯತೆ ಪಡೆದ ಎಐಸಿಟಿಇ- ಸಮಾನ ಸಂಸ್ಥೆಗಳು ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಜತೆ ಸಂಯೋಜಿತಗೊಂಡಿರಬೇಕು.

ಇದನ್ನೂ ಓದಿ: Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

ಉತ್ಕರ್ಷ ವಿದ್ಯಾರ್ಥಿವೇತನ

‘ಉತ್ಕರ್ಷʼ ಕಾರ್ಯಕ್ರಮವು 10ನೇ ಅಥವಾ 12ನೇ ತರಗತಿಯನ್ನು ಪೂರ್ಣಗೊಳಿಸಿದ ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಪ್ರತೀ ವರ್ಷ ರೂ.25,000/- ವಿದ್ಯಾರ್ಥಿವೇತನ ಒದಗಿಸುವ ಕಾರ್ಯಕ್ರಮವಾಗಿದೆ. ಇದಕ್ಕೆ ಅರ್ಹತೆ ಪಡೆಯಲು ಅರ್ಜಿದಾರರು ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು ಮತ್ತು ಭಾರತ ಅಥವಾ ವಿದೇಶದಲ್ಲಿರುವ ಮಾನ್ಯತೆ ಪಡೆದ ಎಐಸಿಟಿಇ- ಸಮಾನ ಸಂಸ್ಥೆಗಳು ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ದಾಖಲಾತಿ ಪಡೆದುಕೊಂಡಿರಬೇಕು.

Continue Reading

ಕರ್ನಾಟಕ

Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

Wayanad Landslide: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ (Wayanad Landslide) ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಅಪಾಯದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ನೂರಾರು ಗ್ರಾಮಗಳಿಗೆ ನುಗ್ಗಿದೆ, ಅಪಾರ ಬೆಳೆ ನಾಶವಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಜನರ ಜತೆಯಲ್ಲಿರಬೇಕು ಎಂದು ಸಚಿವರು ಹೇಳಿದ್ದಾರೆ.

ಸರ್ಕಾರ, ಸಚಿವರು, ಶಾಸಕರು, ಅಧಿಕಾರಿಗಳಿಗೆ ನನ್ನ ಕಳಕಳಿಯ ಸಲಹೆ ಇಷ್ಟೇ. ಇಂಥ ದುರಿತ ಪರಿಸ್ಥಿತಿಯಲ್ಲಿ ಇಡೀ ಆಡಳಿತ ವ್ಯವಸ್ಥೆ ಜನರ ಹತ್ತಿರದಲ್ಲಿರಬೇಕು. ರೈತರೊಂದಿಗೆ ನೇರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿರಬೇಕು. ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯವನ್ನು ನಿರ್ಲಕ್ಷಿಸಬಾರದು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Kodi Mutt Swamiji: ಕೆಟ್ಟದ್ದೇ ಜಾಸ್ತಿ, ಪ್ರಕೃತಿ ವಿಕೋಪಗಳು ಮುಂದುವರಿಯುತ್ತವೆ: ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೂಡಲೇ ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಸಚಿವರು ಕೋರಿದ್ದಾರೆ.

ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಬೆಂಗಳೂರು: ಕೇರಳದ (Kerala Landslide) ವೈನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತ (Wayanad Landslide) ಹಾಗೂ ಜೀವಹಾನಿಯ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು, ದುರಂತ ಸಾವುಗಳಿಗಾಗಿ ಶೋಕ ವ್ಯಕ್ತಪಡಿಸಿದ್ದಾರೆ.

ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ (Wayanad Landslide) ಅನೇಕರು ದಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಸಿಎಂ ಜತೆ ಮಾತನಾಡಿ ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಕೇಂದ್ರ ಸಚಿವರು ಟ್ವೀಟ್‌ ಮಾಡಿದ್ದಾರೆ.

Continue Reading

ಬೆಂಗಳೂರು

Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

Namma Metro : ಬನಶಂಕರಿಯಿಂದ ತಲಘಟ್ಟಪುರ ಮೆಟ್ರೋ ಓಡಾಟ ಸ್ಥಗಿತಗೊಂಡಿದೆ. ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಾಗಸಂದ್ರದಿಂದ ಆರ್‌ವಿ ರಸ್ತೆ ವರೆಗೆ ಮಾತ್ರ ಮೆಟ್ರೋ ಸಂಚಾರಿಸುತ್ತಿದೆ.

VISTARANEWS.COM


on

By

namma Metro
Koo

ಬೆಂಗಳೂರು: ಮಂಗಳವಾರ ಸಂಜೆ 5:33ರಿಂದ ಮೆಟ್ರೋ ಓಡಾಟದಲ್ಲಿ (Namma Metro) ವ್ಯತ್ಯಯ ಉಂಟಾಗಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ದೋಷ ಉಂಟಾಗಿದೆ. ಈ ಕಾರಣಕ್ಕೆ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲುಗಳು ನಾಗಸಂದ್ರ ಮತ್ತು ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣದ ನಡುವೆ ಮಾತ್ರ ಓಡುತ್ತಿವೆ.

Namma Metro
Namma Metro

ಬನಶಂಕರಿ, ಜಯಪ್ರಕಾಶ್‌ ನಗರ, ಯಲಚೇನಹಳ್ಳಿ ಹಾಗೂ ಕೋಣನಕುಂಟೆ ಕ್ರಾಸ್‌, ದೊಡ್ಡಕಲ್ಲಸಂದ್ರ, ವಜ್ರಹಳ್ಳಿ, ತಲಘಟ್ಟಪುರ, ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದ ರೈಲುಗಳು ಓಡಾಟ ಸ್ಥಗಿತವಾಗಿದೆ. ಈ ಕುರಿತು ನಮ್ಮ ಮೆಟ್ರೋ ಅಧಿಕೃತ ಖಾತೆಯಲ್ಲಿ ತಿಳಿಸಿದೆ. ಇನ್ನೂ ಉಂಟಾದ ಅನಾನುಕೂಲತೆಗಾಗಿ ವಿಷಾದಿಸಿದೆ.

https://x.com/OfficialBMRCL/status/1818262455451373824

ದಿಢೀರ್‌ ರೈಲು ಓಡಾಟ ಸ್ಥಗಿತಗೊಂಡ ಕಾರಣದಿಂದಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಅತಿ ಶೀಘ್ರದಲ್ಲೇ ವಿದ್ಯುತ್ ಸಮಸ್ಯೆಯನ್ನ ಬಗೆಹರಿಸೋದಾಗಿ ಬಿಎಂಆರ್‌ಸಿಎಲ್‌ ತಿಳಿಸಿದೆ.

Continue Reading
Advertisement
Aryan Khan
ಸಿನಿಮಾ4 mins ago

Aryan Khan: ದಿಲ್ಲಿಯ ಸಣ್ಣ ಮನೆಯಲ್ಲಿದ್ದ ಶಾರುಖ್‌ ದಂಪತಿ; ಅಲ್ಲಿನ ಬಂಗಲೆಯನ್ನು 37 ಕೋಟಿ ರೂ.ಗೆ ಖರೀದಿಸಿದ ಪುತ್ರ!

IND vs SL
ಪ್ರಮುಖ ಸುದ್ದಿ7 mins ago

IND vs SL : ಭಾರತ ವಿರುದ್ಧದ ಏಕ ದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಹೊಸ ನಾಯಕನ ಘೋಷಣೆ

ಪ್ರಮುಖ ಸುದ್ದಿ11 mins ago

Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Star Saree Styling Tips
ಫ್ಯಾಷನ್12 mins ago

Star Saree Styling Tips: ಎಂಬ್ರಾಯ್ಡರಿ ಸೀರೆಯಲ್ಲಿ ನಟಿ ರಶ್ಮಿಕಾ ಮಂದಣ್ಣರಂತೆ ಕಾಣಿಸಬೇಕೇ? ಈ 5 ಟಿಪ್ಸ್ ಫಾಲೋ ಮಾಡಿ

karnataka Weather Forecast
ಮಳೆ14 mins ago

Karnataka Weather : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜು ರಜೆ

Love Jihad
ದೇಶ26 mins ago

Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Tata Motors launched two programs Vidyadhana and Utkarsha to facilitate higher education of technician children
ವಾಣಿಜ್ಯ27 mins ago

Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ಕರ್ನಾಟಕ35 mins ago

Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

Custard Apple Benefits
Latest1 hour ago

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

namma Metro
ಬೆಂಗಳೂರು1 hour ago

Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌