Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ - Vistara News

ಪ್ರಮುಖ ಸುದ್ದಿ

Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Wayanad Landslide: ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ (Wayanad Landslide) ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದ್ದು, ಇದಕ್ಕಾಗಿ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್‌ಡಿಆರ್‌ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ.ಗಳು ಹಾಗೂ 70 ಮಂದಿ ವಿವಿಧ ರ‍್ಯಾಂಕ್‌ನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡೀಪುರ ಚೆಕ್ ಪೋಸ್ಟ್‌ನಲ್ಲಿ ಈ ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.

ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್‌ಗಳನ್ನು ಎಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ | Wayanad Landslide: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ: ಸಿಎಂ ಸಿದ್ದರಾಮಯ್ಯ

ಕನ್ನಡಿಗರ ರಕ್ಷಣೆಗೆ ಪ್ರಯತ್ನ

ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Rashid Khan : ಬೌಲರ್ ಡಾಟ್ ಬಾಲ್ ಸೇರಿದಂತೆ 20 ಎಸೆತಗಳಲ್ಲಿ ಕೇವಲ 24 ರನ್​ಗಳನ್ನು ಬಿಟ್ಟುಕೊಟ್ಟರು. ಅದೇ ರೀತಿ ಅವರು 9 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 15 ರನ್ ಸಿಡಿಸಿ ಔಟಾದರು. ಮ್ಯಾಂಚೆಸ್ಟರ್​ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ರಾಕೆಟ್ಸ್ ತಂಡ 145 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ರಾಕೆಟ್ಸ್ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು.

VISTARANEWS.COM


on

Rashid Khan
Koo

ಬೆಂಗಳೂರು: ಪುರುಷರ ಹಂಡ್ರೆಡ್ ಕ್ರಿಕೆಟ್​ ಟೂರ್ನಿಯಲ್ಲಿ ಟ್ರೆಂಟ್ ರಾಕೆಟ್ಸ್ ಮತ್ತು ಮ್ಯಾಂಚೆಸ್ಟರ್ ಒರಿಜಿನಲ್ಸ್ ನಡುವಿನ ಪಂದ್ಯದ ಸಮಯದಲ್ಲಿ ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ದಾಖಲೆ ಮಾಡಿದ್ದಾರೆ, ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೋ ನಂತರ ಕ್ರಿಕೆಟ್​​ನಲ್ಲಿ 600 ವಿಕೆಟ್ ಪಡೆದ ಮೊದಲ ಸ್ಪಿನ್ನರ್​​ ಮತ್ತು ಒಟ್ಟಾರೆ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರಶೀದ್ ಖಾನ್ ಪಾತ್ರರಾಗಿದ್ದಾರೆ.

ರಶೀದ್ ಖಾನ್ ಇತ್ತೀಚಿನ ವರ್ಷಗಳಲ್ಲಿ ವಿವಿಧ ಜಾಗತಿಕ ಲೀಗ್​​ಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ (ಎಂಎಸ್​​ಸಿ) 2024 ಋತುವಿನಲ್ಲಿ ಎಂಐ ನ್ಯೂಯಾರ್ಕ್ ಪರ ಆಡಿದ ನಂತರ ಅಫ್ಘಾನಿಸ್ತಾನದ ನಾಯಕ ಟ್ರೆಂಟ್ ರಾಕೆಟ್ಸ್​​ ಸೇರಿ್ದರು. ಈ ವರ್ಷದ ಪುರುಷರ ಹಂಡ್ರೆಡ್​​ನಲ್ಲಿ ತಮ್ಮ ಮೊದಲ ಪ್ರದರ್ಶನದಲ್ಲಿ ಅವರು ಎರಡು ವಿಕೆಟ್​ಗಳನ್ನು ಪಡೆದಿದ್ದಾರೆ.

ಬೌಲರ್ ಡಾಟ್ ಬಾಲ್ ಸೇರಿದಂತೆ 20 ಎಸೆತಗಳಲ್ಲಿ ಕೇವಲ 24 ರನ್​ಗಳನ್ನು ಬಿಟ್ಟುಕೊಟ್ಟರು. ಅದೇ ರೀತಿ ಅವರು 9 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 15 ರನ್ ಸಿಡಿಸಿ ಔಟಾದರು. ಮ್ಯಾಂಚೆಸ್ಟರ್​ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ರಾಕೆಟ್ಸ್ ತಂಡ 145 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ರಾಕೆಟ್ಸ್ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು.

600 ವಿಕೆಟ್ ಪೂರೈಸಿದ ರಶೀದ್ ಖಾನ್

ಟಿ20 ಕ್ರಿಕೆಟ್​​ನಲ್ಲಿ 600 ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರಶೀದ್ ಖಾನ್ ಪಾತ್ರರಾಗಿದ್ದಾರೆ. ಅವರು ಈ ಮೈಲಿಗಲ್ಲನ್ನು ಸಾಧಿಸಿದ ಅತ್ಯಂತ ಕಿರಿಯ ಮತ್ತು ವೇಗದ ಕ್ರಿಕೆಟಿಗ. ಅವರು ಕೇವಲ 438 ಇನ್ನಿಂಗ್ಸ್ ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು. ಅವರು 18.25 ಸರಾಸರಿ ಮತ್ತು 6.47 ಎಕಾನಮಿ ರೇಟ್​ನಲ್ಲ 600 ವಿಕೆಟ್​ಗಳನ್ನು ಪಡೆದಿದ್ದಾರೆ. 2015 ರಲ್ಲಿ ಟಿ20 ಐ ಗೆ ಪಾದಾರ್ಪಣೆ ಮಾಡಿದಾಗಿನಿಂದ ಅವರು ಸುಮಾರು 20 ತಂಡಗಳಿಗಾಗಿ ಆಡಿದ್ದಾರೆ.

ಡ್ವೇನ್ ಬ್ರಾವೋ 543 ಟಿ20 ಇನ್ನಿಂಗ್ಸ್​​ನಲ್ಲಿ 630 ವಿಕೆಟ್​ಗಳೊಂದಿಗೆ ಬೌಲಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸುನಿಲ್ ನರೈನ್ 519 ಪಂದ್ಯಗಳಲ್ಲಿ 6.12 ಎಕಾನಮಿ ರೇಟ್​ನಲ್ಲಿ 557 ವಿಕೆಟ್ ಉರುಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಅನುಭವಿ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ 405 ಪಂದ್ಯಗಳಲ್ಲಿ 502 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 444 ಪಂದ್ಯಗಳಲ್ಲಿ 492 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading

ದೇಶ

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

Anurag Thakur: ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂಬುದಾಗಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರು ಸಂಸತ್‌ನಲ್ಲಿ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ರಾಹುಲ್‌ ಗಾಂಧಿ ಹಾಗೂ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದ್ದಾರೆ.

VISTARANEWS.COM


on

Anurag Thakur
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ದೇಶಾದ್ಯಂತ ಜಾತಿಗಣತಿ ಮಾಡಬೇಕು ಎಂದು ಆಗ್ರಹಿಸುತ್ತಲೇ ಇದ್ದಾರೆ. ಹಾಗೆಯೇ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡುತ್ತದೆ ಎಂದು ಕೂಡ ಹೇಳುತ್ತಾರೆ. ಇನ್ನು, ಸೋಮವಾರ (ಜುಲೈ 29) ಸಂಸತ್‌ನಲ್ಲಿ ಜಾತಿಗಣತಿ (Caste Census) ಕುರಿತು ರಾಹುಲ್‌ ಗಾಂಧಿ ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ನಾವು ಜಾತಿಗಣತಿ ಮಂಡಿಸುತ್ತೇವೆ ಎಂದಿದ್ದರು. ಇದಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ (Anurag Thakur) ತಿರುಗೇಟು ನೀಡಿದ್ದು, “ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂಬುದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಸತ್‌ನಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದರು. ಇದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದರು. “ಬೇರೆಯವರ ಜಾತಿಯನ್ನು ಕೇಳುವುದು ಎಷ್ಟು ಸರಿ” ಎಂದು ತಿರುಗೇಟು ನೀಡಿದರು.

ರಾಹುಲ್‌ ಗಾಂಧಿ ಪ್ರತ್ಯುತ್ತರ

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿದರು. “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ, ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ, ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದರು.

ಸಂಸತ್‌ನಲ್ಲಿ ಸೋಮವಾರ (ಜುಲೈ 29) ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ: Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Continue Reading

ಪ್ರಮುಖ ಸುದ್ದಿ

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

ICC T20 ranking : ಇಂಗ್ಲೆಂಡ್​​ನ ಸೋಫಿ ಎಕ್ಲೆಸ್ಟೋನ್ (772) ಮತ್ತು ಸಾರಾ ಗ್ಲೆನ್ (760) ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದಾರೆ. ದೀಪ್ತಿ ಶರ್ಮಾ (755) ಮೂರನೇ ಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಸಾದಿಯಾ ಇಕ್ಬಾಲ್ (743) ನಾಲ್ಕನೇ ಸ್ಥಾನದಲ್ಲಿದ್ದಾರೆ. ಏಷ್ಯಾಕಪ್ನಲ್ಲಿ 6 ವಿಕೆಟ್ ಪಡೆದ ರಾಧಾ ಯಾದವ್ 5ನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಏಳು ಸ್ಥಾನಗಳನ್ನು ಏರಿದ ನಂತರ ಅವರು 13 ನೇ ಸ್ಥಾನ ಪಡೆದುಕೊಂಡಿದ್ದಾರೆ.

VISTARANEWS.COM


on

ICC T20 ranking
Koo

ಬೆಂಗಳೂರು: ಮಂಗಳವಾರ ಬಿಡುಗಡೆಯಾದ ಐಸಿಸಿ ಟಿ 20 ಐ ಶ್ರೇಯಾಂಕದ (ICC T20 ranking) ಪ್ರಕಾರ ವೇಗಿ ರೇಣುಕಾ ಸಿಂಗ್ ಠಾಕೂರ್ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ವೇಳೆ ಭಾರತದ ಬ್ಯಾಟರ್ಸ್ಮೃ ತಿ ಮಂದಾನ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಮಹಿಳಾ ಟಿ 20 ಏಷ್ಯಾ ಕಪ್ ಫೈನಲ್​​ನಲ್ಲಿ ಶ್ರೀಲಂಕಾ ವಿರುದ್ಧ ನಿರ್ಣಾಯಕ 60 ರನ್ ಗಳಿಸಿದ ನಂತರ ಭಾರತದ ಉಪನಾಯಕಿ ಮತ್ತು ಆರಂಭಿಕ ಆಟಗಾರ್ತಿ ಮಂದಾನ 743 ರೇಟಿಂಗ್ ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಈ ಟೂರ್ನಿಯಲ್ಲಿ ಏಳು ವಿಕೆಟ್ ಪಡೆದ ಬೌಲರ್ ರೇಣುಕಾ ಈಗ 722 ರೇಟಿಂಗ್ ಅಂಕಗಳೊಂದಿಗೆ ಬೌಲರ್​ಗಳ ಪೈಕಿ ಐದನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್​​ನ ಸೋಫಿ ಎಕ್ಲೆಸ್ಟೋನ್ (772) ಮತ್ತು ಸಾರಾ ಗ್ಲೆನ್ (760) ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದಾರೆ. ದೀಪ್ತಿ ಶರ್ಮಾ (755) ಮೂರನೇ ಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಸಾದಿಯಾ ಇಕ್ಬಾಲ್ (743) ನಾಲ್ಕನೇ ಸ್ಥಾನದಲ್ಲಿದ್ದಾರೆ. ಏಷ್ಯಾಕಪ್ನಲ್ಲಿ 6 ವಿಕೆಟ್ ಪಡೆದ ರಾಧಾ ಯಾದವ್ 5ನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಏಳು ಸ್ಥಾನಗಳನ್ನು ಏರಿದ ನಂತರ ಅವರು 13 ನೇ ಸ್ಥಾನ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾದ ಬೆತ್ ಮೂನಿ (769) ಮತ್ತು ತಹ್ಲಿಯಾ ಮೆಕ್​ಗ್ರಾತ್​ (762) ಅಗ್ರ ಎರಡು ವೆಸ್ಟ್ ಇಂಡೀಸ್​​ನ ಹೇಲಿ ಮ್ಯಾಥ್ಯೂಸ್ (746) ಮೂರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ಟ್ ಆರನೇ ಸ್ಥಾನದಲ್ಲಿದ್ದಾರೆ.

ಏಷ್ಯಾಕಪ್ ಫೈನಲ್​​ನಲ್ಲಿ ಭಾರತ ವಿರುದ್ಧ 61 ರನ್ ಗಳಿಸಿದ ಶ್ರೀಲಂಕಾದ ನಾಯಕಿ ಚಾಮರಿ ಅಟ್ಟಪಟ್ಟು ಮೂರು ಸ್ಥಾನ ಮೇಲಕ್ಕೇರಿ 705 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ನಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

“ಸ್ಪೂರ್ತಿದಾಯಕ ಆಟಗಾರ್ತಿ ಚಾಮರಿ ಅವರು ಏಷ್ಯಾ ಕಪ್​ನಲ್ಲಿ 100 ರ ಸರಾಸರಿಯಲ್ಲಿ 304 ರನ್​ಗಳನ್ನು ಒಳಗೊಂಡ ಪಂದ್ಯಾವಳಿಯ ವೀರೋಚಿತ ಪ್ರದರ್ಶನ ನೀಡಿದ್ದರು. ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಅನ್ನು ಹೊಂದುವ ಮೂಲಕ ಅದೇ ಪಟ್ಟಿಯಲ್ಲಿ ಮೂರು ಸ್ಥಾನ ಮೇಲಕ್ಕೇರಿ ಆರನೇ ಸ್ಥಾನಕ್ಕೆ ತಲುಪಿದ್ದಾರೆ.

ಏಷ್ಯಾಕಪ್ ಮುಕ್ತಾಯದ ನಂತರ, ಪಾಕಿಸ್ತಾನದ ಮುನೀಬಾ ಅಲಿ ಟಿ 20 ಐ ಬ್ಯಾಟರ್​ಗಳ ಪಟ್ಟಿಯಲ್ಲಿ ಆರು ಸ್ಥಾನ ಮೇಲಕ್ಕೇರಿ 35 ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶದ ನಾಯಕ ನಿಗರ್ ಸುಲ್ತಾನಾ ಮೂರು ಸ್ಥಾನ ಮೇಲಕ್ಕೇರಿ 14 ನೇ ಸ್ಥಾನದಲ್ಲಿದ್ದಾರೆ. ಫೈನಲ್​​ನಲ್ಲಿ ಅಜೇಯ 69 ರನ್ ಗಳಿಸಿದ ಶ್ರೀಲಂಕಾದ ಹರ್ಷಿತಾ ಸಮರವಿಕ್ರಮ ಗರಿಷ್ಠ ಸ್ಕೋರ್ ಗಳಿಸಿದ ನಂತರ 20 ನೇ ಸ್ಥಾನ ತಲುಪಿದ್ದಾರೆ.

Continue Reading

ಪ್ರಮುಖ ಸುದ್ದಿ

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Asian Cricket Council : 2021 ರಲ್ಲಿ ಎಹ್ಸಾನ್ ಮಣಿ ನಿರ್ಗಮಿಸಿದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದವರು ತಮ್ಮ ಪೂರ್ಣ ಅವಧಿಯನ್ನು ಪೂರ್ಣಗೊಳಿಸಲು ಹೆಣಗಾಡುತ್ತಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಕೇವಲ 15 ತಿಂಗಳು ಸೇವೆ ಸಲ್ಲಿಸಿದರೆ, ನಜಾಮ್ ಸೇಥಿ ಮತ್ತು ಝಕಾ ಅಶ್ರಫ್ ತಲಾ ಒಂದು ವರ್ಷಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿದರು. ಮೊಹ್ಸಿನ್ ನಖ್ವಿ ಕೂಡ ಈ ಸ್ಥಾನವನ್ನು ಹೊಂದಿದ್ದಾರೆ

VISTARANEWS.COM


on

Asian Cricket Council
Koo

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್​​ನ (Asian Cricket Council) ಹೊಸ ಪಾತ್ರವನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಪಾಕಿಸ್ತಾನದ ಮಾಧ್ಯಮಗಳ ಇತ್ತೀಚಿನ ಸುದ್ದಿ ವರದಿಗಳ ಪ್ರಕಾರ, ಪ್ರಸ್ತುತ ಅಧ್ಯಕ್ಷ ಜಯ್ ಶಾ ಹೊಂದಿರುವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಮೊಹ್ಸಿನ್ ನಖ್ವಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್​​ನ ಮುಂದಿನ ಅಧ್ಯಕ್ಷರಾಗುವ ಸಾಧ್ಯತೆಯಿದೆ.

ಈ ವರ್ಷದ ಆರಂಭದಲ್ಲಿ ಮೊಹ್ಸಿನ್ ನಖ್ವಿ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನಖ್ವಿ ಅವರನ್ನು ಪಿಸಿಬಿ ಮುಖ್ಯಸ್ಥರಾಗಿ ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅವರ ಅಧಿಕಾರಾವಧಿಯಲ್ಲಿ, ಪಾಕಿಸ್ತಾನ ಕ್ರಿಕೆಟ್ ತಂಡವು ಜೂನ್​​ನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್ 2024ರಿಂದ ಗುಂಪು ಹಂತದ ನಿರ್ಗಮನದೊಂದಿಗೆ ಮುಖಭಂಗ ಅನುಭವಿಸಿತು.

2021 ರಲ್ಲಿ ಎಹ್ಸಾನ್ ಮಣಿ ನಿರ್ಗಮಿಸಿದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದವರು ತಮ್ಮ ಪೂರ್ಣ ಅವಧಿಯನ್ನು ಪೂರ್ಣಗೊಳಿಸಲು ಹೆಣಗಾಡುತ್ತಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಕೇವಲ 15 ತಿಂಗಳು ಸೇವೆ ಸಲ್ಲಿಸಿದರೆ, ನಜಾಮ್ ಸೇಥಿ ಮತ್ತು ಝಕಾ ಅಶ್ರಫ್ ತಲಾ ಒಂದು ವರ್ಷಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿದರು. ಮೊಹ್ಸಿನ್ ನಖ್ವಿ ಕೂಡ ಈ ಸ್ಥಾನವನ್ನು ಹೊಂದಿದ್ದಾರೆ

ಜಯ್ ಶಾ ಉತ್ತರಾಧಿಕಾರಿ ಮೊಹ್ಸಿನ್ ನಖ್ವಿ

ಪಾಕಿಸ್ತಾನದ ಇತ್ತೀಚಿನ ವರದಿಗಳ ಪ್ರಕಾರ, ಮೊಹ್ಸಿನ್ ನಖ್ವಿ 2025 ರ ಜನವರಿಯಲ್ಲಿ ಎಸಿಸಿ ಅಧ್ಯಕ್ಷರಾಗಿ ತಮ್ಮ ಎರಡು ವರ್ಷಗಳ ಅವಧಿ ಪ್ರಾರಂಭಿಸಲಿದ್ದಾರೆ. ಪ್ರಾದೇಶಿಕ ಕ್ರಿಕೆಟ್ ಆಡಳಿತದಲ್ಲಿ ಪಾಕಿಸ್ತಾನದ ಪ್ರಭಾವ ಹೆಚ್ಚಿಸುವ ಗುರಿಯನ್ನು ಪಾಕಿಸ್ತಾನ ಕ್ರಿಕೆಟ್ ತಂಡ ಹೊಂದಿದೆ.

ಇದನ್ನೂ ಓದಿ: Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಸಭೆಯಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತನ್ನ ಹೊಸ ಅಧ್ಯಕ್ಷರಾಗಿ ಮೊಹ್ಸಿನ್ ನಖ್ವಿ ಅವರನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ. ಎಸಿಸಿ ಅಧ್ಯಕ್ಷರನ್ನು ಅದರ ಸದಸ್ಯ ರಾಷ್ಟ್ರಗಳ ನಡುವೆ ರೊಟೇಶನ್ ವ್ಯವಸ್ಥೆಯ ಮೂಲಕ ನೇಮಕ ಮಾಡಲಾಗುತ್ತದೆ. ಪ್ರಸ್ತುತ ಭಾರತೀಯ ಮಂಡಳಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಜಯ್ ಶಾ ಅವರ ಅಧಿಕಾರಾವಧಿ ಜನವರಿಯಲ್ಲಿ ಒಂದು ವರ್ಷ ವಿಸ್ತರಿಸಲಾಗಿತ್ತು. ಅಮಿತ್ ಶಾ ಅವರ ಅಧಿಕಾರಾವಧಿ 2025 ರ ಜನವರಿಯಲ್ಲಿ ಕೊನೆಗೊಂಡ ನಂತರ ಮೊಹ್ಸಿನ್ ನಖ್ವಿ ಎಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಜ್ಮುಲ್ ಹಸನ್ ಅವರು 2021ರ ಜನವರಿವರೆಗೆ ಎಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ 2022 ರ ಟಿ 20 ಏಷ್ಯಾ ಕಪ್ ಮತ್ತು 2023 ರ ಏಕದಿನ ಏಷ್ಯಾ ಕಪ್ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಯಶಸ್ವಿಯಾಗಿ ಆಯೋಜಿಸಿದೆ

Continue Reading
Advertisement
Rashid Khan
ಪ್ರಮುಖ ಸುದ್ದಿ8 mins ago

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Anurag Thakur
ದೇಶ46 mins ago

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

ICC T20 ranking
ಪ್ರಮುಖ ಸುದ್ದಿ58 mins ago

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

Asian Cricket Council
ಪ್ರಮುಖ ಸುದ್ದಿ1 hour ago

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Viral video
ವೈರಲ್ ನ್ಯೂಸ್2 hours ago

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

Ranbir Kapoor
ಸಿನಿಮಾ2 hours ago

Ranbir Kapoor: ಮುದ್ದಿನ ಮಡದಿ ಅಲಿಯಾ ಕುರಿತ ಸೀಕ್ರೆಟ್ ಮಾಹಿತಿ ಹಂಚಿಕೊಂಡ ರಣಬೀರ್!

Minister Ramalinga Reddy drives for state level inter school Olympics sports in Bengaluru
ಬೆಂಗಳೂರು2 hours ago

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Decision to release water from Malaprabha Reservoir says minister Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Wayanad Landslide
EXPLAINER2 hours ago

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ11 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌