Thyroid Health Formulas: ನಿಮ್ಮ ಥೈರಾಯ್ಡ್‌ ನಿಮ್ಮ ಕೈಯಲ್ಲಿ! ಥೈರಾಯ್ಡ್‌ ಆರೋಗ್ಯಕ್ಕೆ ಇಲ್ಲಿವೆ ಆರು ಸೂತ್ರಗಳು - Vistara News

ಆರೋಗ್ಯ

Thyroid Health Formulas: ನಿಮ್ಮ ಥೈರಾಯ್ಡ್‌ ನಿಮ್ಮ ಕೈಯಲ್ಲಿ! ಥೈರಾಯ್ಡ್‌ ಆರೋಗ್ಯಕ್ಕೆ ಇಲ್ಲಿವೆ ಆರು ಸೂತ್ರಗಳು

Thyroid Health Formulas: ಚಿಟ್ಟೆಯ ಆಕಾರದಲ್ಲಿರುವ ಥೈರಾಯ್ಡ್‌ ಗ್ರಂಥಿ ನಮ್ಮ ದೇಹದಲ್ಲಿ ಹಲವು ಕೆಲಸಗಳನ್ನು ನಿರ್ವಹಿಸುತ್ತದೆ. ಮುಖ್ಯವಾಗಿ ನಮ್ಮ ಒಳ್ಳೆಯ ನಿದ್ದೆಗೆ, ತೂಕ ಸಮತೋಲನದಲ್ಲಿ ಇಟ್ಟುಕೊಳ್ಳಲು, ಖಿನ್ನತೆ ಹಾಗೂ ಉದ್ವೇಗದಂತಹ ಮಾನಸಿಕ ಸಮಸ್ಯೆಗಳು ಬರದಂತೆ ಇರಲು ಥೈರಾಯ್ಡ್‌ ಪಾತ್ರವೂ ದೊಡ್ಡದು. ನಮ್ಮ ರಕ್ತದ ಪರೀಕ್ಷೆ ನಡೆಸಿ ಥೈರಾಯ್ಡ್‌ ಸಮಸ್ಯೆಯಿದೆಯೇ ಎಂದು ನೋಡಿದಾಗ ಅದಕ್ಕೆ ಸಂಬಂಧಿಸಿದ ಔಷಧವನ್ನು ನೀಡಲಾಗುತ್ತದೆ. ಆದರೆ ನಮ್ಮ ಆಹಾರ ಕ್ರಮ, ಸೇವಿಸಬೇಕಾದ ಆಹಾರದ ಬಗ್ಗೆ ಅಷ್ಟಾಗಿ ಯಾರೂ ಗಮನ ಹರಿಸುವುದಿಲ್ಲ. ಥೈರಾಯ್ಡ್‌ಗ್ರಂಥಿಯ ಆರೋಗ್ಯಕ್ಕೆ ನಾವು ತೆಗೆದುಕೊಳ್ಳುವ ಆಹಾರವೂ ಅಷ್ಟೇ ಮುಖ್ಯ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Thyroid problem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಥೈರಾಯ್ಡ್‌ ನಮ್ಮ ದೇಹದ ಅತ್ಯಂತ ಮುಖ್ಯವಾದ ಹಾಗೂ ಅಷ್ಟೇ ನಿರ್ಲಕ್ಷ್ಯಕ್ಕೆ ಒಳಗಾದ ಗ್ರಂಥಿಗಳಲ್ಲಿ ಒಂದು. ಚಿಟ್ಟೆಯ ಆಕಾರದಲ್ಲಿರುವ ಥೈರಾಯ್ಡ್‌ ಗ್ರಂಥಿ ನಮ್ಮ ದೇಹದಲ್ಲಿ ಹಲವು ಕೆಲಸಗಳನ್ನು ನಿರ್ವಹಿಸುತ್ತದೆ. ಮುಖ್ಯವಾಗಿ ನಮ್ಮ ಒಳ್ಳೆಯ ನಿದ್ದೆಗೆ, ತೂಕ ಸಮತೋಲನದಲ್ಲಿ ಇಟ್ಟುಕೊಳ್ಳಲು, ಖಿನ್ನತೆ ಹಾಗೂ ಉದ್ವೇಗದಂತಹ ಮಾನಸಿಕ ಸಮಸ್ಯೆಗಳು ಬರದಂತೆ ಇರಲು ಥೈರಾಯ್ಡ್‌ ಪಾತ್ರವೂ ದೊಡ್ಡದು. ನಮ್ಮ ರಕ್ತದ ಪರೀಕ್ಷೆ ನಡೆಸಿ ಥೈರಾಯ್ಡ್‌ ಸಮಸ್ಯೆಯಿದೆಯೇ ಎಂದು ನೋಡಲಾಗಿ ಅದಕ್ಕೆ ಸಂಬಂಧಿಸಿದ ಔಷಧವನ್ನು ನೀಡಲಾಗುತ್ತದೆ. ಆದರೆ, ನಮ್ಮ ಆಹಾರ ಕ್ರಮ, ಸೇವಿಸಬೇಕಾದ ಆಹಾರದ ಬಗ್ಗೆ ಅಷ್ಟಾಗಿ ಯಾರೂ ಗಮನ ಹರಿಸುವುದಿಲ್ಲ. ಥೈರಾಯ್ಡ್‌ಗ್ರಂಥಿಯ ಆರೋಗ್ಯಕ್ಕೆ ನಾವು ತೆಗೆದುಕೊಳ್ಳುವ ಆಹಾರವೂ ಅಷ್ಟೇ ಮುಖ್ಯ. ಥೈರಾಯ್ಡ್‌ ಗ್ರಂಥಿಯ ಆರೋಗ್ಯಕ್ಕೆ ಪೂರಕವಾದ ಪೋಷಕಾಂಶಗಳು ಸುಲಭವಾಗಿ ನಾವು ಸೇವಿಸುವ ಆಹಾರಗಳಲ್ಲಿ ದೊರೆಯುತ್ತದೆ. ಆದರೆ, ಅವುಗಳನ್ನು ಸೇವಿಸಬೇಕಾದ್ದು ನಮ್ಮ ಕರ್ತವ್ಯ ಅಷ್ಟೇ. ಬನ್ನಿ, ನಮ್ಮ ಥೈರಾಯ್ಡ್‌ ಆರೋಗ್ಯವಾಗಿರಬೇಕೆಂದರೆ ನಾವು (Thyroid Health Formulas) ಗಮನಿಸಬೇಕಾದ ಅಂಶಗಳೇನು ನೋಡೋಣ.

ಅಯೋಡಿನ್‌ ನಿರ್ಲಕ್ಷಿಸಬೇಡಿ

ಥೈರಾಯ್ಡ್‌ ಹಾರ್ಮೋನ್‌ ಥೈರಾಕ್ಸಿನ್‌ ಉತ್ಪಾದನೆಗೆ ಅಯೋಡಿನ್‌ ಬೇಕೇ ಬೇಕು. ಆದರೆ, ಈ ಅಯೋಡಿನ್‌ ಕಡಿಮೆಯೂ ಆಗಬಾರದು. ಹೆಚ್ಚೂ ಆಗಬಾರದು. ಹೆಚ್ಚಾದರೆ, ಗಾಯಟೆರ್‌ ಎಂಬ ಸಮಸ್ಯೆ ಬಂದೀತು. ಅಯೋಡಿನ್‌ ಕಡಿಮೆಯಾಗದಂತೆ ಅಯೋಡಿನ್‌ ಹೆಚಿರುವ ಆಹಾರಗಳಾದ ಸೀವೀಡ್‌ಗಳು, ಅಯೋಡೈಸ್ಡ್‌ ಉಪ್ಪು, ಮೀನು ಮತ್ತಿತರ ಸೀಫುಡ್‌ ಸೇವಿಸಬಹುದು. ಸೀವೀಡ್‌ಗಳ ಸೇವನೆಯಿಂದ ಹಲವು ಬಗೆಯ ಖನಿಜಾಂಶಗಳನ್ನು ನಾವು ಪಡೆಯಬಹುದು. ಕೆಲ್ಪ್‌, ನೊರಿ, ಕೊಂಬು ಮತ್ತಿತರ ಸೀವೀಡ್‌ಗಳು ಥೈರಾಯ್ಡ್‌ಗೆ ಬಹಳ ಒಳ್ಳೆಯದು. ಇವುಗಳು ರೈಬೋಫ್ಲೇವಿನ್‌ ಎಂಬ ಬಿ ವಿಟಮಿನ್‌ ಬಗೆಯನ್ನೂ ಹೊಂದಿದ್ದು, ಇವು ಖಿನ್ನತೆ ಹಾಗೂ ಉದ್ವೇಗದ ಸಮಸ್ಯೆಗಳಿಗೂ ಬಹಳ ಸಹಕಾರಿ.

ಪ್ರೊಟೀನ್‌ ಹೆಚ್ಚು ಸೇವಿಸಿ

ಥೈರಾಯ್ಡ್‌ ಹಾರ್ಮೋನನ್ನು ದೇಹದ ಎಲ್ಲ ಅಂಗಾಂಶಗಳಿಗೆ ಸಾಗಿಸುವ ಕೆಲಸ ಮಾಡುವುದು ಪ್ರೊಟೀನ್‌. ಹೀಗಾಗಿ ಥೈರಾಯ್ಡ್‌ನ ಆರೋಗ್ಯದಲ್ಲಿ ಪ್ರೊಟೀನ್‌ನ ಪಾತ್ರ ಮಹತ್ವದ್ದು. ಮೊಟ್ಟೆ, ಬೀಜಗಳು, ಮೀನು, ಪನೀರ್‌, ಟೋಫು, ಬೇಳೆಕಾಳುಗಳು ಇತ್ಯಾದಿಗಳನ್ನು ಸೇವಿಸುವ ಮೂಲಕ ಪ್ರೊಟೀನ್‌ ದೇಹಕ್ಕೆ ಸದಾ ಲಭ್ಯವಾಗುವಂತೆ ನೋಡಿಕೊಳ್ಳಿ.

ಇವುಗಳಿಂದ ದೂರವಿರಿ

ನಿಮಗೆ ಥೈರಾಯ್ಡ್‌ ಸಮಸ್ಯೆ ಇದ್ದರೆ ಗಾಯೆಟ್ರೋಜೆನ್‌ಗಳಿಂದ ದೂರವಿರಿ. ಅಂದರೆ ಗಾಯೆಟ್ರೋಜೆನ್‌ ಎಂಬ ರಾಸಾಯಿಕಗಳು ಅಯೋಡಿನ್‌ ಹೀರುವಿಕೆಗೆ ಅಡ್ಡಗಾಲು ಹಾಕುತ್ತವೆ. ಇದು ಬ್ರೊಕೋಲಿ, ಕ್ಯಾಬೇಜ್‌, ಹೂಕೋಸು, ಟರ್ನಿಪ್‌, ನೆಲಗಡಲೆ, ಮೂಲಂಗಿ, ಸೋಯಾಬೀನ್‌, ಬಸಳೆಯಂತಹುಗಳಲ್ಲಿ ಇವೆ. ಇವುಗಳನ್ನು ಆದಷ್ಟೂ ಹಸಿಯಾಘಿ ತಿನ್ನದಿರಿ. ಬೇಯಿಸಿ ತಿನ್ನಲಡ್ಡಿಯಿಲ್ಲ. ಯಾಕೆಂದರೆ ಬೇಯಿಸಿದಾಗ ಇವುಗಳ ಗಾಯೆಟ್ರೋಜೆನ್‌ ಕ್ರಿಯಾಶೀಲತೆ ಕಳೆದುಕೊಳ್ಳುತ್ತದೆ.

Sour Curd

ಮೊಸರು, ಮಜ್ಜಿಗೆ ಸೇವಿಸಿ

ನಿಮ್ಮ ಜೀರ್ಣಾಂಗವ್ಯೂಹದ ಆರೋಗ್ಯ ಹೆಚ್ಚು ನೋಡಿಕೊಳ್ಳಿ. ಮುಖ್ಯವಾಗಿ ಪ್ರೊಬಯಾಟಿಕ್‌ಗಳನ್ನು ಸೇವಿಸಿ. ಮೊಸರು, ಮಜ್ಜಿಗೆ ಸೇವಿಸಿ. ಬೆಳ್ಳುಳ್ಳಿಯನ್ನೂ ಹೆಚ್ಚು ಸೇವಿಸಿ.

ಕೊಬ್ಬು ಮರೆಯಬೇಡಿ

ಕೊಬ್ಬುಯುಕ್ತ ಆಹಾರ ಸೇವಿಸಿ. ಹಾರ್ಮೋನಿನ ಸಮತೋಲನಕ್ಕೆ ಒಳ್ಳೆಯ ಕೊಬ್ಬು ಬೇಕೇಬೇಕು. ಆದರೆ ಹೆಚ್ಚಾಗಬಾರದು ಅಷ್ಟೇ. ದೇಸೀ ತುಪ್ಪ, ಚೀಸ್‌, ಬೆಣ್ಣೆ, ತೆಂಗಿನೆಣ್ಣೆ, ಹಾಲು, ಫ್ಲ್ಯಾಕ್‌ಸೀಡ್‌, ಸಿಯಾ ಸೀಡ್‌ ಇತ್ಯಾದಿಗಳನ್ನು ಸೇವಿಸಿ.

ಇದನ್ನೂ ಓದಿ: Vitamin D Deficiency: ನೀವು ಸಂತೋಷವಾಗಿಲ್ಲವೇ? ವಿಟಮಿನ್‌ ಡಿ ಕೊರತೆಯೂ ಇದಕ್ಕೆ ಕಾರಣವಿರಬಹುದು!

ಸಕ್ಕರೆ ಸೇವನೆಯ ಬಗ್ಗೆ ನಿಗಾ ಇಡಿ

ಥೈರಾಯ್ಡ್‌ಗೂ ಸಕ್ಕರೆಗೂ ಅಷ್ಟಾಗಿ ಆಗಿಬರದು. ಇನ್ಸುಲಿನ್‌ ಮಟ್ಟದಲ್ಲಿ ವ್ಯತ್ಯಾಸವಾದರೆ ಥೈರಾಯ್ಡ್‌ ಗ್ರಂಥಿ ಆರೋಗ್ಯವಾಗಿರದು. ಇವಲ್ಲದೆ, ನಿತ್ಯವೂ ವ್ಯಾಯಾಮ, ನಡಿಗೆ, ಚುರುಕಾಗಿರುವುದು ಅತ್ಯಂತ ಮುಖ್ಯ. ಒಳ್ಳೆಯ ಆಹಾರ ಸೇವನೆ ಅತ್ಯಗತ್ಯ. ಸಂಸ್ಕರಿಸಿದ ಆಹಾರಗಳನ್ನು ದೂರವಿಡಿ. ಎಲ್ಲ ಪೋಷಕಾಂಶಗಳೂ ದೇಹಕ್ಕೆ ಲಭಿಸುವಂತೆ ಆಹಾರಕ್ರಮ ರೂಪಿಸಿ. ಆಗ ನಿಮ್ಮ ಥೈರಾಯ್ಡ್‌ ಗ್ರಂಥಿ ಆರೋಗ್ಯವಾಗಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Snake Bite: ಮಳೆಗಾಲದಲ್ಲಿ ಹಾವುಗಳ ಕಾಟ ಹೆಚ್ಚು; ಕಚ್ಚಿದರೆ ಈ ಕ್ರಮ ಅನುಸರಿಸಿ ಅಪಾಯದಿಂದ ಪಾರಾಗಿ!

Snake Bite: ಹಾವುಗಳ ಕಡಿತದಿಂದ ಸಾಕಷ್ಟು ಜನ ಜೀವ ಕಳೆದುಕೊಂಡಿದ್ದಾರೆ. ಇನ್ನು ಮಳೆಗಾಲದಲ್ಲಿ ಹೆಚ್ಚಾಗಿ ವಿಷಕಾರಿ ಹಾವುಗಳು ಬಿಲದಿಂದ ಹೊರ ಬರುವ ಸಾಧ್ಯತೆ ಹೆಚ್ಚು. ಈ ವಿಷಕಾರಿ ಹಾವುಗಳ ಕಡಿತದಿಂದ ಸಾವು ಸಂಭವಿಸಬಹುದು. ಆದರೆ ಸಕಾಲಿಕವಾಗಿ ಇದಕ್ಕೆ ಸೂಕ್ತ ಕ್ರಮ ಕೈಗೊಂಡರೆ ಜೀವವನ್ನು ಉಳಿಸಬಹುದು. ವಿಷಕಾರಿ ಹಾವು ಕಚ್ಚಿದಾಗ ಏನು ಮಾಡಬೇಕು ಎಂಬುದರ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Snake Bite
Koo


ಮಳೆಗಾಲದಲ್ಲಿ, ವಿಷಕಾರಿ ಹಾವುಗಳು ತಾವು ಅವಿತುಕೊಂಡಿದ್ದ ಸ್ಥಳಗಳಿಂದ ಹೊರಬರುವುದು ಹೆಚ್ಚು. ಇದರಿಂದ ಅವು ರಸ್ತೆ, ದಾರಿಗಳಲ್ಲಿ ಎಲ್ಲೆಂದರಲ್ಲಿ ಓಡಾಡುತ್ತಿರುತ್ತವೆ. ಕೆಲವೊಮ್ಮೆ ಮನೆಯೊಳಗೂ ಪ್ರವೇಶಿಸುತ್ತವೆ. ಹಾಗಾಗಿ ಅವುಗಳು ಕಚ್ಚುವ ಅಪಾಯವೂ ಮಳೆಗಾಲದಲ್ಲಿ ಹೆಚ್ಚಾಗಿರುತ್ತದೆ. ಎಲ್ಲ ಹಾವುಗಳು ವಿಷಕಾರಿಯಲ್ಲ. ಆದರೆ ಕೆಲವು ಪ್ರಕಾರದ ಹಾವು ಕಚ್ಚಿದರೆ ಸಾವು ಸಂಭವಿಸಬಹುದು. ಆದರೆ ಅದಕ್ಕೆ ತ್ವರಿತವಾಗಿ ಚಿಕಿತ್ಸೆ ನೀಡುವುದರಿಂದ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದರಿಂದ ಜೀವವನ್ನು ಉಳಿಸಬಹುದು. ವಿಷಕಾರಿ ಹಾವು ಕಚ್ಚಿದ (Snake Bite) ತಕ್ಷಣ ಏನು ಮಾಡಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಹಾವು ಕಚ್ಚಿದೆ ಎಂಬುದನ್ನು ತಿಳಿಯುವ ಲಕ್ಷಣಗಳೇನು?

ಹಾವು ಕಚ್ಚಿದೆ ಎಂಬುದನ್ನು ತ್ವರಿತವಾಗಿ ಪತ್ತೆ ಹಚ್ಚಿದರೆ ಅದಕ್ಕೆ ತಕ್ಷಣ ಕ್ರಮ ಕೈಗೊಳ್ಳಬಹುದು. ಹಾಗಾಗಿ ಹಾವು ಕಚ್ಚಿದ ಸುತ್ತಲಿನ ಸ್ಥಳದಲ್ಲಿ ಆಗಾಗ ನೋವು ಕಾಣಿಸುತ್ತದೆ ಮತ್ತು ಊದಿಕೊಂಡಿರುತ್ತದೆ. ಹಾಗೇ ಹಾವು ಕಡಿತಕ್ಕೊಳಗಾದ ವ್ಯಕ್ತಿಯಲ್ಲಿ ಸ್ನಾಯು ಬಿಗಿತ ಮತ್ತು ಅನಿಯಂತ್ರಿತ ನಡುಕ ಉಂಟಾಗುತ್ತದೆ. ಕಚ್ಚಿದ ನಂತರ ವಾಕರಿಕೆ ಮತ್ತು ವಾಂತಿ ಸಮಸ್ಯೆ ಕಂಡುಬರಬಹುದು. ಅಲ್ಲದೇ ಹಾವು ಕಚ್ಚಿದ ಸ್ಥಳದಲ್ಲಿ ಚರ್ಮದ ಬಣ್ಣ ಬದಲಾವಣೆಯಾಗುತ್ತದೆ. ಚರ್ಮದ ಬಣ್ಣ ಹೆಚ್ಚಾಗಿ ನೀಲಿ ಅಥವಾ ಹಸಿರಾಗುತ್ತದೆ. ಇದು ವಿಷದ ಹರಡುವಿಕೆಯನ್ನು ಸೂಚಿಸುತ್ತದೆ. ಆಗ ರಕ್ತದೊತ್ತಡದಲ್ಲಿ ಕುಸಿತ ಮತ್ತು ತಲೆತಿರುಗುವಿಕೆ ಅಥವಾ ಮೂರ್ಛೆ ಹೋಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಅಷ್ಟೇ ಅಲ್ಲದೇ ವ್ಯಕ್ತಿ ಅತಿಯಾದ ಬೆವರುವುದು ಮತ್ತು ನಿಶ್ಯಕ್ತಿತನ ಕಾಣಿಸಿಕೊಳ್ಳಬಹುದು.

ಹಾವು ಕಚ್ಚಿದ ತಕ್ಷಣ ಈ ರೀತಿ ಪ್ರಥಮ ಚಿಕಿತ್ಸೆ ಮಾಡಿ:

ಹಾವು ಕಚ್ಚಿದಾಗ ಹೆದರದೆ ಶಾಂತವಾಗಿರಬೇಕು. ಯಾಕೆಂದರೆ ಆತಂಕ ಹೆಚ್ಚಾದೆ ರಕ್ತ ಸಂಚಾರ ವೇಗವಾಗಿ ವಿಷ ದೇಹಕ್ಕೆ ಬೇಗ ಹರಡುತ್ತದೆ. ಹಾಗಾಗಿ ಹಾವು ಕಡಿತಕ್ಕೊಳಗಾದ ವ್ಯಕ್ತಿಗೆ ಸಾಧ್ಯವಾದಷ್ಟು ಶಾಂತವಾಗಿರಲು ಹೇಳಿ. ರಕ್ತ ಸಂಚಾರದ ಮೂಲಕ ವಿಷ ದೇಹಕ್ಕೆ ಹರಡುವುದನ್ನು ತಡೆಯಲು ಹಾವು ಕಚ್ಚಿದ ಭಾಗದಿಂದ ರಕ್ತ ಮೇಲಕ್ಕೆ ಹೋಗದಂತೆ ದಾರದಿಂದ ಬಿಗಿಯಾಗಿ ಕಟ್ಟಿ. ಹಾವು ಕಚ್ಚಿದ ಪ್ರದೇಶವನ್ನು ಶುದ್ಧ ನೀರಿನಿಂದ ನಿಧಾನವಾಗಿ ಸ್ವಚ್ಛಗೊಳಿಸಿ. ಆದರೆ ಕಠಿಣ ರಾಸಾಯನಿಕಗಳು ಅಥವಾ ಸೋಂಕು ನಿವಾರಕಗಳನ್ನು ಬಳಸಬೇಡಿ.

ಹಾವು ಕಚ್ಚಿದ ಗಾಯವನ್ನು ಕತ್ತರಿಸಬೇಡಿ ಅಥವಾ ವಿಷವನ್ನು ಹೀರಲು ಪ್ರಯತ್ನಿಸಬೇಡಿ. ಗಾಯಕ್ಕೆ ಐಸ್ ಹಚ್ಚಬೇಡಿ. ಯಾಕೆಂದರೆ ಐಸ್ ಅಂಗಾಂಶದ ಹಾನಿಯನ್ನು ಇನ್ನಷ್ಟು ಹದಗೆಡಿಸುತ್ತದೆ.

ವೈದ್ಯರ ಬಳಿ ಕರೆದುಕೊಂಡು ಹೋಗುವ ಮೊದಲು ಈ ಮನೆಮದ್ದು ಮಾಡಬಹುದು

ಹಾವು ಕಚ್ಚಿದ ವ್ಯಕ್ತಿಗೆ ತುಪ್ಪವನ್ನು ನೀಡುವುದರಿಂದ ವಾಂತಿಯನ್ನು ಪ್ರಚೋದಿಸಬಹುದು. ಇದು ಹೊಟ್ಟೆಯಿಂದ ಸ್ವಲ್ಪ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಲಭ್ಯವಿದ್ದರೆ ಕಚ್ಚಿದ ಪ್ರದೇಶಕ್ಕೆ ಕಾಂಟೋಲಾ (ಸ್ಥಳೀಯ ಗಿಡಮೂಲಿಕೆ) ಪೇಸ್ಟ್ ಅನ್ನು ಹಚ್ಚಿ. ಇದು ವಿಷದ ಪರಿಣಾಮಗಳನ್ನು ಕಡಿಮೆ ಮಾಡಲು ಮತ್ತು ಸೋಂಕನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಪೇಸ್ಟ್ ಮತ್ತು ಜೇನುತುಪ್ಪದ ಮಿಶ್ರಣವನ್ನು ಹಾವು ಕಚ್ಚಿದ ಪ್ರದೇಶಕ್ಕೆ ಹಚ್ಚಬಹುದು.
ಸಾಧ್ಯವಾದಷ್ಟು ಬೇಗ ಹತ್ತಿರದ ಆಸ್ಪತ್ರೆ ಅಥವಾ ವೈದ್ಯರ ಬಳಿ ಕರೆದುಕೊಂಡು ಹೋಗಿ ವೈದ್ಯಕೀಯ ಚಿಕಿತ್ಸೆ ಕೊಡಿಸಿ. ಮನೆಯಲ್ಲೇ ಗಾಯಕ್ಕೆ ಚಿಕಿತ್ಸೆ ನೀಡಲು ಪ್ರಯತ್ನಿಸಬೇಡಿ. ಕಚ್ಚಿದ ಪ್ರದೇಶದಲ್ಲಿ ರಕ್ತಸ್ರಾವವಾಗುತ್ತಿದ್ದರೆ ರಕ್ತಸ್ರಾವವನ್ನು ನಿಲ್ಲಿಸಲು ಪ್ರಯತ್ನಿಸಬೇಡಿ. ಇದು ಸ್ವಲ್ಪ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

ಹಾವು ಕಡಿತದ ಅಪಾಯ ತಡೆಗಟ್ಟಲು ಈ ಕ್ರಮ ಪಾಲಿಸಿ

ಮಳೆಗಾಲದಲ್ಲಿ ಹಾವು ಹೆಚ್ಚು ಕಾಣಿಸಿಕೊಳ್ಳುವ ಪ್ರದೇಶಗಳಲ್ಲಿ ನಡೆಯುವಾಗ ಜಾಗರೂಕರಾಗಿರಿ. ಇಂತಹ ಪ್ರದೇಶಗಳಲ್ಲಿ ನಡೆಯುವಾಗ ಬೂಟುಗಳು ಮತ್ತು ಉದ್ದನೆಯ ಪ್ಯಾಂಟ್‌ಗಳನ್ನು ಬಳಸಿ. ಮನೆಗಳು ಮತ್ತು ತೋಟಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಮನೆಯ ಸುತ್ತಲೂ ಹಾವು ಅಡಗಿರುವ ಪೊದೆಗಳನ್ನು ತೆಗೆದುಹಾಕಿ.

Continue Reading

Latest

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

Custard Apple Benefits: ಸೀತಾಫಲ ಉಷ್ಣವಲಯದ ಹಣ್ಣು. ರುಚಿಗೆ ಮಾತ್ರವಲ್ಲ, ಇದನ್ನು ತಿಂದರೆ ಹಲವು ಆರೋಗ್ಯ ಪ್ರಯೋಜನಗಳೂ ಇವೆ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಸೀತಾಫಲ ತಿನ್ನುವುದರಿಂದ ಏನೆಲ್ಲ ಆರೋಗ್ಯ (Custard Apple Benefits) ಪ್ರಯೋಜನಗಳಿವೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Custard Apple Benefits
Koo

ಸೀತಾಫಲ ಉಷ್ಣವಲಯದ ಹಣ್ಣು. ಇದು ಬಹಳ ಸಿಹಿಯಾಗಿ ಪರಿಮಳಯುಕ್ತವಾಗಿರುತ್ತದೆ. ರುಚಿಗೆ ಮಾತ್ರವಲ್ಲ, ಇದನ್ನು ತಿಂದರೆ ಹಲವು ಆರೋಗ್ಯ ಪ್ರಯೋಜನಗಳೂ ಇವೆ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಹಾಗಾದರೆ ಸೀತಾಫಲ ತಿನ್ನುವುದರಿಂದ ಏನೆಲ್ಲ ಆರೋಗ್ಯ (Custard Apple Benefits) ಪ್ರಯೋಜನವಿದೆ ಎಂಬುದು ಗೊತ್ತಿರಲಿ.

custard apple fruit Custard Apple Benefits

1. ವಿಟಮಿನ್ ಸಿ ಸಮೃದ್ಧ

ಸೀತಾಫಲದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಪ್ರತಿರಕ್ಷಣಾ ಕಾರ್ಯ, ಚರ್ಮದ ಆರೋಗ್ಯವನ್ನು ಉತ್ತಮವಾಗಿಡುತ್ತದೆ ಮತ್ತು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಅಗತ್ಯ ಖನಿಜಗಳನ್ನು ಹೊಂದಿರುವುದರಿಂದ  ಇದು ಹೃದಯದ ಆರೋಗ್ಯ, ಸ್ನಾಯುಗಳ ಕಾರ್ಯ ಮತ್ತು ಮೂಳೆಗಳನ್ನು ಬಲಪಡಿಸುತ್ತದೆ.

Image Of Custard Apple Benefits

2. ಹೆಚ್ಚಿನ ಫೈಬರ್ ಅಂಶ

ಸೀತಾಫಲದಲ್ಲಿ ಹೆಚ್ಚಿನ ಫೈಬರ್ ಅಂಶವಿದ್ದು, ಇದನ್ನು  ನಿಯಮಿತವಾಗಿ ಸೇವಿಸಿದರೆ  ಕರುಳಿನ ಚಲನೆ ಉತ್ತಮವಾಗಿರುತ್ತದೆ. ಇದು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಇದು ನೈಸರ್ಗಿಕ ಜೀರ್ಣಕಾರಿ ಕಿಣ್ವಗಳನ್ನು ಸಹ ಹೊಂದಿರುತ್ತದೆ, ಅದು ಪ್ರೋಟೀನ್ ಗಳು ಮತ್ತು ಇತರ ಪೋಷಕಾಂಶಗಳ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

Antioxidants in it keep immunity strong Benefits Of Mandakki

3. ರೋಗ ನಿರೋಧಕ ಶಕ್ತಿ

ಸೀತಾಫಲ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಮತ್ತು ಸೋಂಕುಗಳು ಮತ್ತು ಕಾಯಿಲೆಗಳಿಂದ ರಕ್ಷಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಉತ್ಕರ್ಷಣ ನಿರೋಧಕಗಳನ್ನು ಸಹ ಹೊಂದಿರುತ್ತದೆ. ಅದು ಜೀವಕೋಶಗಳನ್ನು ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತದಿಂದ ರಕ್ಷಿಸುತ್ತದೆ.

Heart Health Fish Benefits

4. ಹೃದಯದ ಆರೋಗ್ಯ ಸುಧಾರಣೆ

ಸೀತಾಫಲ  ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ಇದು ಸೋಡಿಯಂನ ಪರಿಣಾಮಗಳನ್ನು ಪ್ರತಿರೋಧಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಹೃದಯರಕ್ತನಾಳಗಳು  ಆರೋಗ್ಯವಾಗಿರುತ್ತವೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಹೃದಯದ ಆರೋಗ್ಯಕ್ಕೆ ಪ್ರಯೀಜನಕಾರಿಯಾಗಿದೆ.

Weight Loss Slim Body Healthy Lifestyle Concept Benefits Of Saffron

5. ತೂಕ ನಿರ್ವಹಣೆಯಲ್ಲಿ ಸಹಾಯ

ಸೀತಾಫಲ ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ. ಇತರ ಹಣ್ಣುಗಳಿಗೆ ಹೋಲಿಸಿದರೆ ಸೀತಾಫಲ ಕಡಿಮೆ ಕ್ಯಾಲೊರಿಗಳನ್ನು ಹೊಂದಿರುತ್ತದೆ, ಇದು ತಮ್ಮ ತೂಕವನ್ನು ನಿಯಂತ್ರಿಸುವವರಿಗೆ ಉತ್ತಮ ಆಯ್ಕೆಯಾಗಿದೆ. ಇದರಲ್ಲಿರುವ ಫೈಬರ್ ಅಂಶವು ನಿಮ್ಮ ಹೊಟ್ಟೆ ಹೆಚ್ಚು ಸಮಯದವರೆಗೆ ತುಂಬಿರುವಂತೆ ಮಾಡುತ್ತದೆ, ಇದರಿಂದ ನೀವು ಅತಿಯಾಗಿ ತಿನ್ನುವ ಅಭ್ಯಾಸ ಕಡಿಮೆಯಾಗುತ್ತದೆ.

Rich in vitamin C it can boost immunity Custard Apple Benefits

6. ಚರ್ಮದ ಆರೋಗ್ಯ ಸುಧಾರಣೆ

ಇದು ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ, ಇದು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಮತ್ತು ಫ್ರೀ ರಾಡಿಕಲ್ಸ್ ಗಳಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸುತ್ತದೆ, ಇದರಿಂದ ನಿಮ್ಮ ಚರ್ಮ ಆರೋಗ್ಯಕರ, ಹೆಚ್ಚು ತಾರುಣ್ಯದಿಂದ ಕೂಡಿರುತ್ತದೆ. ಈ ಹಣ್ಣಿನಲ್ಲಿರುವ ಹೆಚ್ಚಿನ ನೀರಿನ ಅಂಶವು ಚರ್ಮವನ್ನು ಹೈಡ್ರೇಟ್ ಆಗಿಡಲು ಸಹಾಯ ಮಾಡುತ್ತದೆ.

Knee bone mass Bone erosion and deterioration Pumpkin Benefits

7. ಮೂಳೆ ಬಲಪಡಿಸುತ್ತದೆ

ಸೀತಾಫಲ ಮೂಳೆಯ ಆರೋಗ್ಯವನ್ನು ಕಾಪಾಡುತ್ತದೆ. ಮೂಳೆಗಳನ್ನು ಬಲಪಡಿಸಲು ಮತ್ತು ಆಸ್ಟಿಯೊಪೊರೋಸಿಸ್ ನಂತಹ ಸಮಸ್ಯೆಗಳನ್ನು ತಡೆಗಟ್ಟಲು ಇದು ಅತ್ಯಗತ್ಯ. ಇದು ಮೂಳೆ ಖನಿಜೀಕರಣ ಮತ್ತು ಒಟ್ಟಾರೆ ಮೂಳೆಯ ಆರೋಗ್ಯವನ್ನು ಕಾಪಾಡುತ್ತದೆ.

Image Of Custard Apple Benefits

8. ದೇಹಕ್ಕೆ ಶಕ್ತಿ

ಸೀತಾಫಲ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿರುವ ನೈಸರ್ಗಿಕ ಸಕ್ಕರೆಗಳು ಮತ್ತು ಕಾರ್ಬೋಹೈಡ್ರೇಟ್‍ಗಳು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತವೆ, ಇದು ಶಕ್ತಿಯ ಮಟ್ಟವನ್ನು ಮರು ಉತ್ಪಾದನೆ ಮಾಡಲು ಸಹಕಾರಿಯಾಗುವ ಹಣ್ಣಾಗಿದೆ.

Cancer Prevention Guava Benefits

9. ಕ್ಯಾನ್ಸರ್‌ಗೆ ತಡೆ

ಇದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಗಟ್ಟುವ ಅನ್ನೋನೇಸಿಯಸ್ ಅಸಿಟೋಜೆನಿನ್‌ಗಳಂತಹ ಸಂಯುಕ್ತಗಳನ್ನು ಒಳಗೊಂಡಿದೆ. ಆದರೆ ಈ ಬಗ್ಗೆ ಇನ್ನೂ ಹೆಚ್ಚಿನ ಮಟ್ಟದ ಸಂಶೋಧನೆ ನಡೆಯುವುದು ಅಗತ್ಯ ಎನ್ನಲಾಗಿದೆ.

Stress Reduction Tea Benefits

10. ಮಾನಸಿಕ ಆರೋಗ್ಯಕ್ಕೆ ಉತ್ತಮ

ಈ ಹಣ್ಣು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಬಿ 6 ನಂತಹ ಬಿ ಜೀವಸತ್ವಗಳಿವೆ, ಇದು ಮೆದುಳಿನ ಕಾರ್ಯವನ್ನು ಉತ್ತಮವಾಗಿಸುತ್ತದೆ ಮತ್ತು ಮನಸ್ಥಿತಿಯನ್ನು ನಿರ್ವಹಿಸಲು ಮತ್ತು ಖಿನ್ನತೆ ಮತ್ತು ಆತಂಕದ ರೋಗಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಮಾರುಕಟ್ಟೆಯಲ್ಲಿ ಅಥವಾ ನಿಮ್ಮ ಮನೆಯಲ್ಲಿ ಬೆಳೆದ ಸೀತಾಫಲ ಹಣ್ಣುಗಳನ್ನು ಪ್ರತಿದಿನ ಸೇವಿಸಿ. ಇದರಿಂದ ನಿಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ. ಆದರೆ ಅತಿಯಾಗಿ ಸೇವಿಸಿಬೇಡಿ.

ಇದನ್ನೂ ಓದಿ: Side Effects Of Dry Fruits: ಆರೋಗ್ಯಕ್ಕೆ ಒಳ್ಳೆಯದೆಂದು ಒಣಬೀಜಗಳನ್ನು ಅತಿಯಾಗಿ ತಿನ್ನುತ್ತೀರಾ? ಎಚ್ಚರ!

Continue Reading

ಉತ್ತರ ಕನ್ನಡ

Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ

Uttara Kannada News: ಕೆಪಿಎಂಇ ಕಾಯ್ದೆಯಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ಯಲ್ಲಾಪುರ ತಾಲೂಕಿನ ಕಿರವತ್ತಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಗ ಹಾಕಿದೆ.

VISTARANEWS.COM


on

3 private hospitals in Yallapur have been locked for not following the necessary rules under the KPME Act
Koo

ಯಲ್ಲಾಪುರ: ಕೆಪಿಎಂಇ ಕಾಯ್ದೆಯಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ತಾಲೂಕಿನ (Uttara Kannada News) ಕಿರವತ್ತಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಗ ಜಡಿದಿದ್ದಾರೆ.

ಈ ಆಸ್ಪತ್ರೆಗಳ ಮೇಲೆ ಹಠಾತ್‌ ದಾಳಿ ನಡೆಸಿದ ತಾಲೂಕು ವೈದ್ಯಾಧಿಕಾರಿಗಳ ತಂಡ ಅನೇಕ ನ್ಯೂನತೆಗಳನ್ನು ಪತ್ತೆಹಚ್ಚಿದೆ. ಬೀಗ ಹಾಕಲಾದ ಆಸ್ಪತ್ರೆಗಳಲ್ಲಿ ಬಯೋ ಮೆಡಿಕಲ್ ವೇಸ್ಟ್‌ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಲಾಗುತ್ತಿಲ್ಲ. ಸೂಜಿ, ಸಿರಿಂಜ್‌, ಕಾಟನ್‌, ಸಲಾಯಿನ್‌ ಬಾಟಲ್‌, ಖಾಲಿ ಆಂಪಲ್‌ಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೆ, ಕಸದ ವಾಹನದಲ್ಲಿ ಕಳಿಸಲಾಗುತ್ತಿದೆ.

ಇದನ್ನೂ ಓದಿ: The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

ತಾಂತ್ರಿಕ ಪರಿಣಿತಿ ಹಾಗೂ ನಿಗದಿತ ವಿದ್ಯಾರ್ಹತೆ ಇಲ್ಲದ ಸಿಬ್ಬಂದಿಗಳನ್ನು ಔಷಧ ವಿತರಣೆಗೆ, ರಕ್ತದೊತ್ತಡ, ಡಯಾಬಿಟಿಸ್‌ ಪರೀಕ್ಷೆಗೆ ನೇಮಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿತ್ತು. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿದೆ. ಒಂದು ಖಾಸಗಿ ಆಸ್ಪತ್ರೆಯು ಕೆಪಿಎಂಇ ಅಡಿಯಲ್ಲಿ ನೋಂದಣಿ ಆಗಿರುವುದಿಲ್ಲ. ಇದಲ್ಲದೇ ಸ್ವಂತ ಮನೆಯ ರೂಮ್‌ ಒಂದರಲ್ಲಿ ಒಬ್ಬರು ಯಾವುದೇ ವೈದ್ಯಕೀಯ ವಿದ್ಯಾರ್ಹತೆ ಹೊಂದದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು.

ಈ ಎಲ್ಲಾ ಕಾರಣಗಳಿಂದಾಗಿ ಗುರುಪ್ರಸಾದ ಪಾಲಿ ಕ್ಲಿನಿಕ್‌, ಕೀರ್ತಿ ಕ್ಲಿನಿಕ್‌ ಹಾಗೂ ನೇಮಿಣಿ ಗಲ್ಲಿಯ ಮನೆಯೊಂದರಲ್ಲಿ ನಡೆಸಲಾಗುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡೆಯಲಾಗಿದ್ದು, ಒಂದು ವಾರದೊಳಗೆ ಎಲ್ಲ ವ್ಯವಸ್ಥೆ ಸರಿಪಡಿಸಿಕೊಂಡು ಕೆಪಿಎಂಇ ಕಾಯ್ದೆಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ನರೇಂದ್ರ ಪವಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ, ಯು. ಜೋಸೆಫ್‌, ಪೊಲೀಸ್‌ ಹವಾಲ್ದಾರ ರಾಘವೇಂದ್ರ ನಾಯ್ಕ ಇದ್ದರು.

Continue Reading

ಅಂಕಣ

ರಾಜಮಾರ್ಗ ಅಂಕಣ: ಈ 20 ಅಂಶಗಳನ್ನು ಸರಿಯಾಗಿ ಪಾಲಿಸಿದರೆ ಗೋಲ್ಡನ್ ಮೆಮೊರಿ ನಿಮ್ಮದು!

ರಾಜಮಾರ್ಗ ಅಂಕಣ: ಗೋಲ್ಡನ್ ಮೆಮೊರಿ (Golden Memory) ನಿಮ್ಮದಾಗಿದ್ದರೆ ಅದು ನಿಮ್ಮ ಯಶಸ್ಸಿನ ಮೊದಲ ಮೆಟ್ಟಿಲು ಆಗಬಲ್ಲದು. ಈ ಗೋಲ್ಡನ್ ಮೆಮೊರಿಯನ್ನು ನಿಮ್ಮದಾಗಿಸಲು ಈ 20 ಅಂಶಗಳನ್ನು ಸರಿಯಾಗಿ ಪಾಲಿಸಿ.

VISTARANEWS.COM


on

golden memory ರಾಜಮಾರ್ಗ ಅಂಕಣ
Koo

ಮೆಮೊರಿ ಒಂದು ಮಿರಾಕಲ್

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ನೆನಪು (Memory) ಒಂದು ವಿಸ್ಮಯಕಾರಿ ಆದ ವಿದ್ಯಮಾನ. ಒಳ್ಳೆಯ ಮೆಮೊರಿ ಪವರ್ (memory Power) ಇದ್ದವರು ಜಗತ್ತನ್ನು ಗೆಲ್ಲಬಹುದು. ಪರೀಕ್ಷೆಗಳಲ್ಲಿ ಟಾಪರ್ (Exam Topper) ಆಗಲು, ಉದ್ಯೋಗವನ್ನು ಚೆನ್ನಾಗಿ ಮಾಡಲು, ವ್ಯಕ್ತಿಗಳನ್ನು ಸರಿಯಾಗಿ ಗುರುತಿಸಲು, ಹಣಕಾಸಿನ ವ್ಯವಹಾರ ಚಂದವಾಗಿ ಮಾಡಲು, ಸಂಬಂಧಗಳನ್ನು ಸರಿಯಾಗಿ ನಿಭಾಯಿಸಲು, ಒಳ್ಳೆಯ ಲೇಖಕರಾಗಲು, ಉತ್ತಮ ಭಾಷಣಕಾರರಾಗಲು ಎಲ್ಲದಕ್ಕೂ ಮೆಮೊರಿ ಬೇಕು. ಗೋಲ್ಡನ್ ಮೆಮೊರಿ (Golden Memory) ನಿಮ್ಮದಾಗಿದ್ದರೆ ಅದು ನಿಮ್ಮ ಯಶಸ್ಸಿನ ಮೊದಲ ಮೆಟ್ಟಿಲು ಆಗಬಲ್ಲದು. ಈ ಗೋಲ್ಡನ್ ಮೆಮೊರಿಯನ್ನು ನಿಮ್ಮದಾಗಿಸಲು ಈ 20 ಅಂಶಗಳನ್ನು ಸರಿಯಾಗಿ ಪಾಲಿಸಿ.

1) ಅರ್ಥ ಮಾಡಿಕೊಂಡು ಕಲಿಯಿರಿ. ಬಾಯಿಪಾಠವು ಲಾಂಗ್ ರೇಂಜಿನಲ್ಲಿ ಸೋಲುತ್ತದೆ.

2) ಯಾಕೆ ಓದಬೇಕು? ಎನ್ನುವುದು ಮೂಲಭೂತವಾದ ಪ್ರಶ್ನೆ. ಅದು ಕಲಿಕೆಯ ಉದ್ದೇಶ (PURPOSE). ಅದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಉದಾಹರಣೆಗೆ ನಾನು ಜ್ಞಾನಕ್ಕಾಗಿ ಓದುತ್ತೇನೆ. ಇನ್ನೂ ಕೆಲವರು ಖುಷಿಗಾಗಿ ಓದುತ್ತಾರೆ. ಮತ್ತೂ ಕೆಲವರು ಓದಿದ ಅಂಶಗಳನ್ನು ಬೇರೆಯವರಿಗೆ ಹಂಚಲು ಓದುತ್ತಾರೆ. ವಿದ್ಯಾರ್ಥಿಗಳು ಉತ್ತಮ ಮಾರ್ಕ್ ಪಡೆಯಲು ಓದುತ್ತಾರೆ ಇತ್ಯಾದಿ.

3) ಕಲಿಯಬೇಕಾದ ವಿಷಯಗಳನ್ನು ವ್ಯವಸ್ಥಿತವಾಗಿ ಜೋಡಿಸಿ. ಅಂದರೆ ಸುಲಭವಾದ ವಿಷಯಗಳನ್ನು ಮೊದಲು ಕಲಿಯುವುದು, ಕಷ್ಟವಾದ ವಿಷಯಗಳನ್ನು ನಂತರ ಕಲಿಯುವುದು ಇತ್ಯಾದಿ.

4) ಶಬ್ದಗಳು ಬೇಗನೇ ಮರೆತು ಹೋಗುತ್ತವೆ. ಆದರೆ ಚಿತ್ರಗಳು ಹೆಚ್ಚು ಕಾಲ ನೆನಪಿನಲ್ಲಿ ಉಳಿಯುತ್ತವೆ. ದೀರ್ಘಕಾಲದ ಮೆಮೊರಿಗೆ ಚಿತ್ರಗಳ ನೆರವು ಪಡೆಯಿರಿ.

5) ನಾನು ನೆನಪು ಇಡಬಲ್ಲೆ ಎಂಬ ಆತ್ಮವಿಶ್ವಾಸವು ನಿಮ್ಮನ್ನು ಗೆಲ್ಲಿಸುತ್ತದೆ. ಆತ್ಮವಿಶ್ವಾಸವು ನಿಮ್ಮ ಅಷ್ಟೂ ಧನಾತ್ಮಕ ಯೋಚನೆಗಳ (POSSITIVE THINKING) ಉತ್ಪನ್ನ ಆಗಿರುತ್ತದೆ.

6) ಬಹುಮಾಧ್ಯಮ ಕಲಿಕೆಯು ನಿಮ್ಮ ಮೆಮೊರಿ ಪವರನ್ನು ಹೆಚ್ಚು ಮಾಡುತ್ತದೆ. ಅಂದರೆ ಬಣ್ಣದ ಚಿತ್ರಗಳ ಮೂಲಕ ಕಲಿಕೆ, ವಿಡಿಯೋಗಳ ಮೂಲಕ ಕಲಿಕೆ, ಮ್ಯೂಸಿಕ್ ಬಳಸಿಕೊಂಡು ಕಲಿಕೆ, ಆಡಿಯೋ ಬಳಸಿಕೊಂಡು ಕಲಿಕೆ ಇತ್ಯಾದಿ.

7) ಒತ್ತಡ ಇಲ್ಲದೆ ಕಲಿಯುವುದು ತುಂಬಾ ಮುಖ್ಯ. ಈ ಒತ್ತಡವು ನಿಮ್ಮ ಕಲಿಯುವ ಸಾಮರ್ಥ್ಯವನ್ನು ಮತ್ತು ಮೆಮೊರಿ ಪವರನ್ನು ಇಂಚಿಂಚು ಸಾಯಿಸುತ್ತದೆ.

8) ಭಾವನಾತ್ಮಕ ಕಲಿಕೆ ನಿಮ್ಮ ಮೆಮೊರಿ ಪವರನ್ನು ಹಲವು ಪಟ್ಟು ವೃದ್ಧಿಸುತ್ತದೆ. ಅಂದರೆ ನಾವು ಕಲಿಯುವ ವಿಷಯವನ್ನು ಪ್ರೀತಿ ಮಾಡುತ್ತಾ ಕಲಿಯುವುದು ಎಂದರ್ಥ. ಅದು ಹೇಗೆ ಎಂದು ಯೋಚಿಸಿ.

9) ಸಣ್ಣ ತರಗತಿಗಳಲ್ಲಿ ಗಟ್ಟಿಯಾಗಿ ಓದುವುದು (Loud Reading) ಹೆಚ್ಚು ಅನುಕೂಲಕರ. ಆದರೆ ಪ್ರೌಢಶಾಲೆಯ ಹಂತಕ್ಕೆ ಬಂದಾಗ ಮೌನ ಓದು (Silent Reading) ನಿಮಗೆ ಹೆಚ್ಚು ಫಲಿತಾಂಶ ನೀಡುತ್ತದೆ.

10) ಪ್ಯಾಸಿವ್ ರೀಡಿಂಗ್ (PASSIVE READING) ಮಾಡುವುದಕ್ಕಿಂತ ಕ್ರಿಯೇಟಿವ್ ರೀಡಿಂಗ್ ಹೆಚ್ಚು ಮೆಮೊರಿಯನ್ನು ಖಾತ್ರಿ ಪಡಿಸುತ್ತದೆ. ಅಂದರೆ ಹೊಸ ಹೊಸ ರೀತಿಯಿಂದ ಕಲಿಯಲು ತೊಡಗುವುದು.

11) ಹೆಚ್ಚು ಏಕಾಗ್ರತೆಯಿಂದ ಓದುವುದು ತುಂಬಾ ಮುಖ್ಯ. ಪ್ರಶಾಂತವಾದ ಮನಸ್ಸು ಹೆಚ್ಚು ಮೆಮೊರಿಯನ್ನು ಉತ್ತೇಜನ ಮಾಡುತ್ತದೆ.

reading hobby
golden memory

13) ನಮ್ಮ ಮೆದುಳಿನಲ್ಲಿ ಮೆಮೊರಿಯನ್ನು ಉತ್ತೇಜನ ಮಾಡುವ SEROTONIN ಎಂಬ ಹಾರ್ಮೋನ್ ಉತ್ಪತ್ತಿ ಆಗ್ತಾ ಇರುತ್ತದೆ. ಮೆದುಳಿಗೆ ಸರಿಯಾದ ವಿಶ್ರಾಂತಿ ಕೊಟ್ಟಾಗ, ದಿನಕ್ಕೆ ಕನಿಷ್ಟ 6-8 ಘಂಟೆ ನಿದ್ರೆ ಮಾಡಿದಾಗ, ಮೆದುಳಿಗೆ ಹೆಚ್ಚು ಖುಷಿ ಕೊಡುವ ಚಟುವಟಿಕೆಗಳನ್ನು ಕೊಟ್ಟಾಗ, ಉತ್ತಮ ಹವ್ಯಾಸಗಳನ್ನು ರೂಡಿ ಮಾಡಿದಾಗ ಆ ಹಾರ್ಮೋನ್ ಮಿರಾಕಲಸ್ ಮೆಮೊರಿ ಕ್ರಿಯೇಟ್ ಮಾಡುತ್ತದೆ.

14) ಮುಖ್ಯಾಂಶಗಳನ್ನು ಬರೆಯುವ ಅಭ್ಯಾಸವು ತುಂಬಾ ಒಳ್ಳೆಯದು. ಚೆಂದವಾಗಿ ಬರೆಯುವುದರಿಂದ ನಿಮ್ಮ ಬಲ ಮೆದುಳು (ರೈಟ್ ಬ್ರೈನ್) ಹೆಚ್ಚು ಚುರುಕು ಆಗುತ್ತದೆ ಎನ್ನುತ್ತಾರೆ ವಿಜ್ಞಾನಿಗಳು. ಹಾಗೆಯೇ ಪ್ರತೀ ದಿನವೂ ದಿನಚರಿ (ಡೈರಿ) ಬರೆಯುವುದು ಕೂಡ ನಿಮ್ಮ ಮೆಮೊರಿಗೆ ಪೂರಕ.

15) ಯೋಗಾಸನ, ಪ್ರಾಣಾಯಾಮ , ಧ್ಯಾನ, ಪೌಷ್ಟಿಕ ಆಹಾರದ ಸೇವನೆ, ಮೌನವಾದ ವಾಕಿಂಗ್ ನಿಮ್ಮ ಮೆಮೊರಿ ಪವರನ್ನು ಹೆಚ್ಚು ಮಾಡುವ ಚಟುವಟಿಕೆಗಳು. ಮೆದುಳಿಗೆ ಹೆಚ್ಚು ರಕ್ತ ಸರಬರಾಜು ಆಗುವ ಆಸನಗಳನ್ನು ಒಳ್ಳೆಯ ಗುರುಗಳ ಮೂಲಕ ಕಲಿಯಲು ಪ್ರಯತ್ನಿಸಿ.

16) ಓದಲು ಆರಂಭಿಸುವ ಮೊದಲು 10-15 ನಿಮಿಷ ಕ್ಲಾಸಿಕಲ್ ಸಂಗೀತ ಅಥವಾ INSTRUMENTAL MUSIC (ಸಿತಾರ್, ವೀಣೆ, ವಯಲಿನ್ ಇತ್ಯಾದಿ) ಕೇಳುವುದರಿಂದ ನಿಮ್ಮ ಓದುವ ಸಾಮರ್ಥ್ಯವು ಹೆಚ್ಚಾಗುತ್ತದೆ ಮತ್ತು ಮೆಮೊರಿ ಪವರ್ ಕೂಡ ಹೆಚ್ಚುತ್ತದೆ.

golden memory
golden memory

17) ನೀವು ಓದಿದ್ದನ್ನು ಇನ್ನೊಬ್ಬರಿಗೆ ವಿವರಿಸುವಾಗ ಅದು ನಿಮ್ಮ ಮೆಮೊರಿ ಪವರನ್ನು ಉತ್ತೇಜನ ಮಾಡುತ್ತದೆ. ಆದ್ದರಿಂದ ಗ್ರೂಪ್ ಸ್ಟಡಿಯು ಮೆಮೊರಿ ಜಾಸ್ತಿ ಮಾಡಲು ಅತ್ಯುತ್ತಮ ವಿಧಾನ ಎಂದು ಮಾನ್ಯತೆ ಪಡೆದಿದೆ.

18) ಮೆಮೊರಿ ಹೆಚ್ಚು ಮಾಡಲು ಪುನರ್ ಮನನ (Recalling) ಅತ್ಯುತ್ತಮ ವಿಧಾನ. ರಾತ್ರಿ ಮಲಗುವ ಮೊದಲು ಒಂದು ಹತ್ತು ನಿಮಿಷ ಬಿಡುವು ಮಾಡಿಕೊಂಡು ಇಂದು ನಾನು ಯಾವುದನ್ನು ಯಾವ ಅನುಕ್ರಮದಲ್ಲಿ ಕಲಿತೆ? ಯಾರನ್ನು ಇಂದು ಭೇಟಿ ಮಾಡಿದೆ? ಯಾವ ಹೊಸ ಅನುಭವ ಪಡೆದುಕೊಂಡೆ? ಇತ್ಯಾದಿ ರಿಕಾಲ್ ಮಾಡುತ್ತಾ ಹೋದಾಗ ನಿಮ್ಮ ಮೆಮೊರಿ ನೂರು ಪಟ್ಟು ವೃದ್ಧಿ ಆಗುತ್ತದೆ. ಹಾಗೆಯೇ ಪ್ರತೀ ಒಂದು ಘಂಟೆಯ ಓದಿನ ನಂತರ 5-10 ನಿಮಿಷ ರಿಕಾಲ್ ಮಾಡುತ್ತಾ ಹೋದರೆ ಮೆಮೊರಿ ಗೆಲ್ಲುತ್ತದೆ.

19) ನಿಮ್ಮ ಮೆದುಳಿನಲ್ಲಿ ಜಂಕ್ (ತಂಗಳು) ಸಂಗತಿಗಳು ಹೆಚ್ಚು ಪ್ರವೇಶ ಮಾಡದ ಹಾಗೆ ಪ್ಲಾನ್ ಮಾಡಿಕೊಳ್ಳಿ. ಉದಾಹರಣೆಗೆ ಅನಗತ್ಯವಾದ ಇಸವಿಗಳು, ಉದ್ದುದ್ದವಾದ ಮೊಬೈಲ್ ನಂಬರು ಅನಗತ್ಯವಾದ ಕ್ರಿಕೆಟ್ ದಾಖಲೆಗಳು, ನೋವು ಕೊಡುವ ಸಂಗತಿಗಳು ಇತ್ಯಾದಿ.

20) ಮೆಮೊರಿ ಹೇಗೆ ಸಹಜವೋ ಮರೆಯುವುದು (Forgetting) ಕೂಡಾ ಅಷ್ಟೇ ಸಹಜ! ಯಾವ ಮೆಮೊರಿ ನಿಮಗೆ ಮುಂದೆ ಅಗತ್ಯ ಬೀಳುವುದಿಲ್ಲವೋ ಅವುಗಳನ್ನು ನಿಮ್ಮ ಮೆದುಳು ಚಂದವಾಗಿ ಒರೆಸುತ್ತಾ (Erasing) ಮುಂದೆ ಹೋಗುತ್ತದೆ. ಆದ್ದರಿಂದ ಏನಾದರೂ ಸಣ್ಣ ಪುಟ್ಟ ಮರೆವು ಉಂಟಾದರೆ ಆತಂಕ ಮಾಡದೇ ಮುಂದೆ ಹೋಗುವುದೇ ಒಳ್ಳೇದು.

ಅದ್ಭುತವಾದ ಗೋಲ್ಡನ್ ಮೆಮೊರಿ ನಿಮ್ಮದಾಗಲಿ ಎಂಬುದು ನಮ್ಮ ಹಾರೈಕೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಮುಕೇಶ್ ಅಂದರೆ ಹಾಂಟಿಂಗ್ ಮೆಲಡಿ, ನೋವಿನಲ್ಲಿ ಅದ್ದಿ ತೆಗೆದ ದನಿ!

Continue Reading
Advertisement
IND vs SL
ಪ್ರಮುಖ ಸುದ್ದಿ2 hours ago

IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

CM Siddaramaiah
ಕರ್ನಾಟಕ2 hours ago

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

Rashid Khan
ಪ್ರಮುಖ ಸುದ್ದಿ2 hours ago

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Anurag Thakur
ದೇಶ2 hours ago

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

ICC T20 ranking
ಪ್ರಮುಖ ಸುದ್ದಿ3 hours ago

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

Asian Cricket Council
ಪ್ರಮುಖ ಸುದ್ದಿ3 hours ago

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Viral video
ವೈರಲ್ ನ್ಯೂಸ್3 hours ago

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

Ranbir Kapoor
ಸಿನಿಮಾ3 hours ago

Ranbir Kapoor: ಮುದ್ದಿನ ಮಡದಿ ಅಲಿಯಾ ಕುರಿತ ಸೀಕ್ರೆಟ್ ಮಾಹಿತಿ ಹಂಚಿಕೊಂಡ ರಣಬೀರ್!

Minister Ramalinga Reddy drives for state level inter school Olympics sports in Bengaluru
ಬೆಂಗಳೂರು3 hours ago

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Decision to release water from Malaprabha Reservoir says minister Lakshmi Hebbalkar
ಕರ್ನಾಟಕ3 hours ago

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ12 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ13 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌