Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ - Vistara News

ಪ್ರಮುಖ ಸುದ್ದಿ

Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

ಭೂಕುಸಿತದಿಂದ ತತ್ತರಿಸಿರುವ (Wayanad landslide, Kerala Landslide) ವೈನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಬಂಡಿಪುರ ಚೆಕ್‌ಪೋಸ್ಟ್‌ನಲ್ಲಿ (Bandipura Checkpost) ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

wayanad landslide bandipur checkpost
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇರಳ: ಕರ್ನಾಟಕದಿಂದ ಕೇರಳವನ್ನು (Karnataka- Kerala) ಸಂಪರ್ಕಿಸುವ ಮೈಸೂರು- ಸುಲ್ತಾನ್ ಬತ್ತೇರಿ- ವೈನಾಡು ರಸ್ತೆ ಸಂಪರ್ಕವನ್ನು (Road Cut) ಕಡಿತಗೊಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ತಂಡಗಳು ಭೂಕುಸಿತದಿಂದ ತತ್ತರಿಸಿರುವ (Wayanad landslide, Kerala Landslide) ವೈನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಬಂಡಿಪುರ ಚೆಕ್‌ಪೋಸ್ಟ್‌ನಲ್ಲಿ (Bandipura Checkpost) ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಬಹುತೇಕ ಬಸ್ಸುಗಳು ಸಂಚಾರ ರದ್ದುಪಡಿಸಿವೆ.

ಗುಂಡ್ಲುಪೇಟೆ ಮಾರ್ಗವಾಗಿ ಸಾಗುವ ಬೆಂಗಳೂರು-ವೈನಾಡ್ ರಾಷ್ಟ್ರೀಯ ಹೆದ್ದಾರಿ 766 ರ ಮಾರ್ಗದಲ್ಲಿ ಸಂಚಾರ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಿಸಲಾಗಿದ್ದು, ಪರ್ಯಾಯವಾಗಿ ಗುಂಡ್ಲುಪೇಟೆ-ಬಂಡೀಪುರ-ಗುಡಲೂರ ಮಾರ್ಗದಲ್ಲಿ ತೆರಳಲು ಸೂಚಿಸಲಾಗಿದೆ.

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದ್ದು, ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಈ ಕುರಿತು ಸೂಕ್ತ ಬೆಂಬಲ ನೀಡಿದ್ದಾರೆ.

ಬಸ್‌ ಸಂಚಾರ ಸ್ಥಗಿತ

ಬೆಂಗಳೂರಿನಿಂದ ಕೇರಳಕ್ಕೆ ಸಂಚಾರ ಮಾಡುವ ಬಹುತೇಕ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ. ಕರ್ನಾಟಕ ಸಾರಿಗೆ, ಕೇರಳ ಸಾರಿಗೆ ಇಲಾಖೆಗೆ ಸೇರಿದ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಕಣ್ಣೂರು, ನಿಲಾಂಬೂರು, ಕೋಝಿಕ್ಕೋಡ್, ವಡಗಾರ, ತಲಚೇರಿ ಸೇರಿದಂತೆ ಕೆಲ ಭಾಗಗಳಿಗೆ ಮಾತ್ರ ಬೇರೆ ಬೇರೆ ಮಾರ್ಗಗಳ ಮೂಲಕ ಸಂಚಾರ ನಡೆಯುತ್ತಿದೆ.

ಕೇರಳದಿಂದಲೂ ಇಂದು ಬೆಂಗಳೂರಿಗೆ ಬಸ್‌ಗಳು ಬಂದಿಲ್ಲ. ಬೆಂಗಳೂರಿನಿಂದ ಕೇರಳಕ್ಕೆ ನಿತ್ಯ ಕೇರಳ ಸಾರಿಗೆ ಇಲಾಖೆಯ 15ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಆಗುತ್ತಿತ್ತು. ಇಂದು ಕೇವಲ ಮೂರು ಬಸ್‌ಗಳು ಮಾತ್ರ ಸಂಚರಿಸಿವೆ. ಪ್ರತಿ ನಿತ್ಯ ರಾತ್ರಿ 8 ಗಂಟೆ ಬಳಿಕ ರಾಜ್ಯ ಸಾರಿಗೆಯಿಂದ 10ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಇರುತ್ತಿದ್ದು, ಇಂದು ಒಂದು ಬಸ್ ಮಾತ್ರ ಕೇರಳಕ್ಕೆ ಪ್ರಯಾಣ ಬೆಳೆಸಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ರಾಜ್ಯಗಳ ಬಸ್ ಸಂಚಾರ ಸ್ಥಗಿತಗೊಂಡಿದೆ.

ಸಂಜೆಯಿಂದ ಗುಂಡ್ಲುಪೇಟೆ- ಕೇರಳ ರಸ್ತೆ ಸಂಪರ್ಕ ಕೂಡ ಕಡಿತಗೊಂಡ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರಕ್ಕೆ ತಡೆಯಾಗಿದೆ. ಕೇರಳದ ಮುತ್ತುಂಗ ಚೆಕ್​ಪೋಸ್ಟ್​ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಜಲಾವೃತವಾಗಿ ಬಸ್ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗ್ಗೆಯಿಂದ ವಯನಾಡು ಭಾಗಕ್ಕೆ ಬೆಂಗಳೂರಿನಿಂದ 21ಕ್ಕೂ ಹೆಚ್ಚು ಬಸ್‌ಗಳು ಸಂಚಾರ ಮಾಡಬೇಕಿತ್ತು. ಆದರೆ ಮಳೆ ಹಾಗೂ ಗುಡ್ಡ ಕುಸಿತದ ಪರಿಣಾಮ 15ಕ್ಕೂ ಹೆಚ್ಚು ಬಸ್‌ಗಳು ಸ್ಥಗಿತಗೊಂಡಿವೆ. ಬಹುತೇಕ ಪ್ರಯಾಣಿಕರು ಸ್ವಯಂಪ್ರೇರಿತವಾಗಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಉಳಿದಂತೆ ಕೆಲ ಪ್ರಯಾಣಿಕರನ್ನು ಕ್ಲಬ್ ಮಾಡಿ ಮೂರ್ನಾಲ್ಕು ಬಸ್‌ಗಳಲ್ಲಿ ಬೇರೆ ಬೇರೆ ಮಾರ್ಗವಾಗಿ ಕಳಿಸಲು ಅನುವು ಮಾಡಿಕೊಡಲಾಗಿದೆ.

ಭೂಕುಸಿತದ ತ್ಯಾಜ್ಯ ವಿಲೇವಾರಿ

ವಯನಾಡಿನಲ್ಲಿ ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಕೈಗೊಳ್ಳುತ್ತಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಸಹಾಯವಾಣಿ

ಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

HD Kumaraswamy: ಬಿಜೆಪಿ ಪಾದಯಾತ್ರೆಗೆ ನಾವು ಬೆಂಬಲ ಕೊಡಲ್ಲ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ: ಎಚ್‌ಡಿಕೆ ಕಿಡಿ; ಮೈತ್ರಿಕೂಟದಲ್ಲಿ ಅಪಸ್ವರ

HD Kumaraswamy: ಪ್ರೀತಂ ಗೌಡ (Preetham Gowda) ಯಾರು? ಪೆನ್ ಡ್ರೈವ್ ಹಂಚಿಕೆಗೆ ಯಾರು ಕಾರಣ? ದೇವೇಗೌಡರ (HD Deve Gowda) ಕುಟುಂಬಕ್ಕೆ ವಿಷ ಇಟ್ಟವನು ಅವನು. ಅಂಥವರ ಜೊತೆಗೆ ವೇದಿಕೆ ಮೇಲೆ ಕೂರಿಸ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹೆಚ್‌ಡಿಕೆ ಕಿಡಿ ಕಾರಿದ್ದಾರೆ.

VISTARANEWS.COM


on

hd kumaraswamy in bjp jds meet
ಮೈತ್ರಿ ಪಕ್ಷ ಸಮನ್ವಯ ಸಭೆಯಲ್ಲಿ ಎಚ್‌ಡಿ ಕುಮಾರಸ್ವಾಮಿ
Koo

ಬೆಂಗಳೂರು: ಬಿಜೆಪಿ- ಜೆಡಿಎಸ್‌ (BJP- JDS) ಮೈತ್ರಿಪಕ್ಷಗಳಲ್ಲಿ ಪಾದಯಾತ್ರೆ (Padayatra) ವಿಚಾರದಲ್ಲಿ ಅಪಸ್ವರ ಕೇಳಿಸಿದೆ. ಬಿಜೆಪಿ ಪಾದಯಾತ್ರೆಗೆ (Bangalore to Mysore) ನಾವು ಬೆಂಬಲ ಕೊಡುವುದಿಲ್ಲ. ನಮ್ಮನ್ನು ಅವರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಜೆಡಿಎಸ್‌ ನಾಯಕ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ಆಗಸ್ಟ್‌ 3ರಿಂದ ಪಾದಯಾತ್ರೆ ಹಮ್ಮಿಕೊಂಡಿದೆ. ಆದರೆ ಇದರಲ್ಲಿ ಭಾಗವಹಿಸದಿರಲು ಜೆಡಿಎಸ್‌ ನಿರ್ಧರಿಸಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜೆ‌.ಟಿ ದೇವಗೌಡರ (GT Devegowda) ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಕೇರಳದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಜನರು ಗುಡ್ಡ ಕುಸಿತದಲ್ಲಿ (Wayanad landslide) ಕಣ್ಮರೆಯಾಗಿದ್ದಾರೆ. ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್, ಎಲ್ಲೋ ಅಲರ್ಟ್ ಘೋಷಿಸಿದೆ. ಹಲವು ಜಿಲ್ಲೆಗಳಲ್ಲಿ ಜಲಾವೃತಗೊಂಡು ಸಂಕಷ್ಟ ಎದುರಿಸುತ್ತಿದ್ದಾರೆ. ಮಂಡ್ಯ ಭಾಗದಲ್ಲಿ ಭತ್ತದ ಸಸಿ ನೆಡುವ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ನಮ್ಮ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದಾರೆ.

ಪಾದಯಾತ್ರೆ ಮಾಡಬೇಕು ಎಂದು ಬಿಜೆಪಿ ನಾಯಕರು ಈ ಮುಂಚೆ ನಿರ್ಧಾರ ಮಾಡಿದ್ದರು. ಮಾಹಿತಿಗಾಗಿ ನಮಗೆ ಹೇಳಿದ್ದಾರೆ ಅಷ್ಟೇ. ಬಿಜೆಪಿ ನಿಲುವಿನಲ್ಲಿ ತಿರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಸೂಕ್ತವಾದ ಸಂದರ್ಭವಲ್ಲ ಅಂತ ನಾವು ಹಿಂದೆ ಸರಿದಿದ್ದೇವೆ. ಈಗ ಪಾದಯಾತ್ರೆ ಮಾಡಿದರೆ ಜನರ ಟೀಕೆ ವ್ಯಕ್ತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ. ಅಲ್ಲಿನ ಜನರ ಸಮಸ್ಯೆ ಏನು, ಅದು ಮುಖ್ಯ. ಪಾದಯಾತ್ರೆಯಿಂದ ಲಾಭ ಏನು? ಕಾನೂನು ಹೋರಾಟ ಮುಖ್ಯ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ ಎಂದು ಎಚ್‌ಡಿಕೆ ನುಡಿದರು.

ನಾವು ನೈತಿಕ ಬೆಂಬಲವೂ ಕೊಡಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು? ಬೆಂಗಳೂರು ಮೈಸೂರು ವರೆಗೂ ನಮ್ಮ ಶಕ್ತಿ ಇದೆ. ನಮ್ಮನ್ನು ಪರಿಗಣಿಸದಿದ್ದರೆ ಹೇಗೆ? ನನ್ನ ಮನಸ್ಸಿಗೆ ನೋವಾಗಿದೆ, ಯಾಕೆ ಬೆಂಬಲ ಕೊಡಬೇಕು? ಪ್ರೀತಂ ಗೌಡ (Preetham Gowda) ಯಾರು? ಪೆನ್ ಡ್ರೈವ್ ಹಂಚಿಕೆಗೆ ಯಾರು ಕಾರಣ? ದೇವೇಗೌಡರ (HD Deve Gowda) ಕುಟುಂಬಕ್ಕೆ ವಿಷ ಇಟ್ಟವನು ಅವನು. ಅಂಥವರ ಜೊತೆಗೆ ವೇದಿಕೆ ಮೇಲೆ ಕೂರಿಸ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಹೆಚ್‌ಡಿಕೆ ಕಿಡಿ ಕಾರಿದ್ದಾರೆ.

ಜೆಡಿಎಸ್‌ ಅಸಮ್ಮತಿ ನಡುವೆಯೂ ತಯಾರಿ

ಬೆಂಗಳೂರು- ಮೈಸೂರು ಪಾದಯಾತ್ರೆಗೆ ಜೆಡಿಎಸ್ ಅಸಮ್ಮತಿ ನಡುವೆಯೂ ಬಿಜೆಪಿ ಪಾದಯಾತ್ರೆಗೆ ತಯಾರಿ ಮಾಡಿಕೊಂಡಿದೆ. ಯುವಮೋರ್ಚಾ ಮೊದಲ ದಿನದ ಪಾದಯಾತ್ರೆ ಉಸ್ತುವಾರಿ ವಹಿಸಿದೆ. ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಹಾಗೂ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಪಾದಯಾತ್ರೆಗೆ ಸಕಲ ತಯಾರಿ ರೂಪುರೇಷೆ ಮಾಡಲಾಗಿದೆ.

ಈ ನಡುವೆ ರಾಜ್ಯಾಧ್ಯಕ್ಷ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ವಿರೋಧದ ಹಿನ್ನೆಲೆಯಲ್ಲಿ, ಹೈಕಮಾಂಡ್ ಒಪ್ಪಿಗೆ ಪಡೆದು ಪಾದಯಾತ್ರೆ ಆರಂಭ ಮಾಡುವ ಸಾಧ್ಯತೆ ಇದೆ.

ಇದನೂ ಓದಿ: HD kumaraswamy : ಆಸ್ಪತ್ರೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸ್ಚಾರ್ಜ್

Continue Reading

Latest

Viral Video: 3 ತಿಂಗಳಿಂದ ಕಾಣೆಯಾಗಿದ್ದ ಬಾಲಕಿ ಗುಹೆಯಲ್ಲಿ ಡಿಢೀರ್‌ ಪ್ರತ್ಯಕ್ಷ; ಹಾವಿನಂತೆ ವರ್ತನೆ ಕಂಡು ಜನ ಶಾಕ್‌-ವಿಡಿಯೋ ಇದೆ

Viral Video ಜಾರ್ಖಂಡ್‌ನಲ್ಲಿ ಮೂರು ತಿಂಗಳಿನಿಂದ ಕಾಣೆಯಾದ ಬಾಲಕಿಯೊಬ್ಬಳು ಗುಹೆಯೊಂದರಲ್ಲಿ ಪತ್ತೆಯಾಗಿದ್ದು, ಹಾವಿನಂತೆ ತೆವಳುತ್ತಾ, ನಾಲಗೆ ಹೊರಗೆ ಚಾಚುತ್ತಾ ಇರುವ ವಿಡಿಯೊವೊಂದು ವೈರಲ್ ಆಗಿದೆ. ಗುಹೆಯಲ್ಲಿ ಕಂಡುಬರುವ ಈ ಹುಡುಗಿಯ ಈ ರೂಪವನ್ನು ನೋಡಲು ಗ್ರಾಮಸ್ಥರ ಗುಂಪು ಅಲ್ಲಿ ನೆರೆದಿದ್ದು, ಅವಳನ್ನು ಹುಡುಕುತ್ತಿದ್ದ ಆಕೆಯ ಕುಟುಂಬ ಸದಸ್ಯರು ಪೂಜೆ ಮಾಡಿ ಅಂತಿಮವಾಗಿ ಅವಳನ್ನು ಮನೆಗೆ ಕರೆತಂದರು ಎನ್ನಲಾಗಿದೆ.

VISTARANEWS.COM


on

Viral Video
Koo


ಜಾರ್ಖಂಡ್ : ಕೆಲವರು ದೇವರು ಮೈಮೇಲೆ ಬಂದಂತೆ ವರ್ತಿಸುವುದನ್ನು ನಾವು ಹಲವು ಬಾರಿ ನೋಡಿರುತ್ತೇವೆ. ಅಂತವರಿಗೆ ದೇವರ ಅನುಗ್ರಹವಿದೆ. ಹಾಗಾಗಿ ದೇವರು ಅವರ ಮೇಲೆ ಆಹ್ವಾನವಾಗಿ ನಂಬಿದ ಭಕ್ತರಿಗೆ ಮಾರ್ಗದರ್ಶನ ನೀಡುತ್ತಾನೆ ಎಂಬ ನಂಬಿಕೆ ಬಹಳ ಹಿಂದಿನ ಕಾಲದಿಂದಲೂ ಇದೆ. ಇದನ್ನು ನಾವು ಇಂದಿನ ಕಾಲದಲ್ಲಿಯೂ ಕೆಲವು ಕಡೆ ನೋಡಬಹುದು. ಹೆಚ್ಚಾಗಿ ದೇವಸ್ಥಾನದ ಜಾತ್ರೆಯ ಸಮಯದಲ್ಲಿ ಕೆಲವರು ದೇವರು ಮೈಮೇಲೆ ಬರುವಂತೆ ವರ್ತಿಸುವ ದೃಶ್ಯವನ್ನು ನೊಡಬಹುದು. ಅದೇರೀತಿ ಜಾರ್ಖಂಡ್‍ನಲ್ಲಿ ಕೂಡ ಇಂತಹದೊಂದು ಘಟನೆ ನಡೆದಿದೆ. ಕಾಣೆಯಾದ ಬಾಲಕಿಯೊಬ್ಬಳು ಗುಹೆಯೊಂದರಲ್ಲಿ ಪತ್ತೆಯಾಗಿದ್ದು, ಆದರೆ ಅವಳು ಹಾವಿನಂತೆ ವರ್ತಿಸಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ವಿಡಿಯೊದಲ್ಲಿರುವ ಹುಡುಗಿ ಗುಹೆಯ ನೆಲದ ಮೇಲೆ ಹಾವಿನಂತೆ ತೆವಳುತ್ತಾ ತನ್ನ ನಾಲಿಗೆಯನ್ನು ಹಾವಿನಂತೆ ಹೊರಗೆ ಚಾಚುತ್ತಿದ್ದಾಳೆ. ಗುಹೆಯಲ್ಲಿ ಕಂಡುಬರುವ ಈ ಹುಡುಗಿಯ ಈ ರೂಪವನ್ನು ನೋಡಲು ಗ್ರಾಮಸ್ಥರ ಗುಂಪು ಅಲ್ಲಿ ನೆರೆದಿದ್ದು, ಮನೆಯವರು ಆಕೆಗೆ ಪೂಜೆ ಮಾಡಿದ್ದಾರೆ. ಕಳೆದ ಮೂರು ತಿಂಗಳಿನಿಂದ ಬಾಲಕಿ ಕಾಣೆಯಾಗಿದ್ದಳು. ಆದರೆ ಇತ್ತೀಚೆಗೆ ಆಕೆ ರಾಣಿದಿಹ್ ಗುಪ್ತಾ ಧಾಮ್ ಗುಹೆಯಲ್ಲಿ ಪತ್ತೆಯಾಗಿದ್ದಾಳೆ. ಆದರೆ ಅವಳು ಹಾವಿನಂತೆ ವರ್ತಿಸುತ್ತಿದ್ದಾಳೆ ಎನ್ನಲಾಗಿದೆ. ಆಕೆ ಹಾವಿನಂತೆ ವರ್ತಿಸುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಇದನ್ನು ಕಂಡು ಜನರು ಆಶ್ಚರ್ಯ ಚಕಿತರಾಗಿದ್ದಾರೆ. ಈ ಘಟನೆ ದೊಡ್ಡ ಜನಸಮೂಹವನ್ನು ಸೆಳೆದಿದ್ದು, ಆಕೆಯ ಅಸಾಮಾನ್ಯ ನಡವಳಿಕೆಯನ್ನು ನೋಡಲು ಅನೇಕ ಜನರು ಆ ಗುಹೆಯ ಬಳಿ ಜಮಾಯಿಸಿದ್ದಾರೆ. ಅವಳನ್ನು ಹುಡುಕುತ್ತಿದ್ದ ಆಕೆಯ ಕುಟುಂಬ ಸದಸ್ಯರು ಪೂಜೆ ಮಾಡಿ ಅಂತಿಮವಾಗಿ ಅವಳನ್ನು ಮನೆಗೆ ಕರೆತಂದರು ಎನ್ನಲಾಗಿದೆ.

ರಾಣಿದಿಹ್ ಗುಪ್ತ ಧಾಮ್ ಗುಹೆಯಲ್ಲಿ ಬಹಳ ಹಿಂದಿನ ಕಾಲದಲ್ಲಿ ಭಗವಾನ್ ಶಿವನನ್ನು ಸ್ಥಾಪನೆ ಮಾಡಲಾಗಿತ್ತು. ಶಿವನ ಪೂಜೆ ಮಾಡಲು ದೂರದ ಸ್ಥಳಗಳಿಂದ ಭಕ್ತರ ಗುಂಪು ಇಲ್ಲಿಗೆ ಬಂದು ಸೇರುತ್ತಿದ್ದರು. ಪ್ರತಿ ವರ್ಷದಂತೆ, ಈ ಬಾರಿಯೂ ಜನರು ಇಲ್ಲಿಗೆ ಭೇಟಿ ನೀಡಲು ಬಂದಿದ್ದರು, ನಂತರ ಸೋಮವಾರ, ಈ ಹುಡುಗಿಯನ್ನು ಗುಹೆಯ ಮುಖ್ಯ ದ್ವಾರದಲ್ಲಿ ಸರ್ಪದ ರೂಪದಲ್ಲಿ ನೋಡಿದ ಕೂಡಲೇ ಇದು ಗ್ರಾಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಬಾಲಕಿಯ ಕುಟುಂಬದ ಪ್ರಕಾರ, ಕಳೆದ ಮೂರು ತಿಂಗಳಿನಿಂದ ಅವಳು ಮನೆಯಿಂದ ಕಾಣೆಯಾಗಿದ್ದಳು.

ಇದನ್ನೂ ಓದಿ: ಮಲಗಿದ್ದ ಮಹಿಳೆಯ ತಲೆಕೂದಲಿನಲ್ಲಿ ಹರಿದಾಡಿದ ಹಾವು!

ಕುಟುಂಬವು ಅವಳನ್ನು ಹುಡುಕಲು ಸಾಕಷ್ಟು ಪ್ರಯತ್ನಿಸಿತು. ಆದರೆ ಅವಳು ಸಿಗಲಿಲ್ಲ. ಅಲ್ಲಿಯ ತನಕ ಆಕೆ ಎಲ್ಲಿದ್ದಳು, ಏನು ಮಾಡುತ್ತಿದ್ದಳು ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಕುಟುಂಬವು ಹುಡುಗಿಯನ್ನು ಈ ರೂಪದಲ್ಲಿ ಕಂಡುಕೊಂಡಾಗ, ಅವರು ಮೊದಲು ಅವಳನ್ನು ಪೂಜಿಸಿದರು ಮತ್ತು ಹಾಡುಗಳೊಂದಿಗೆ ಮನೆಗೆ ಕರೆದುಕೊಂಡು ಹೋಗಿದ್ದಾರೆ.

Continue Reading

Latest

Charminar Clock: 135 ವರ್ಷ ಇತಿಹಾಸ ಇರೋ ಚಾರ್‌ಮಿನಾರ್ ಗಡಿಯಾರ ಸೌಂದರ್ಯಕ್ಕೆ ಪಾರಿವಾಳಗಳಿಂದ ಧಕ್ಕೆ

Charminar Clock: ಐತಿಹಾಸಿಕ ಸ್ಥಳವಾದ ಹೈದರಾಬಾದ್ ಚಾರ್ ಮಿನಾರ್‌ನ ಪೂರ್ವ ಭಾಗದಲ್ಲಿರುವ 135 ವರ್ಷ ಹಳೆಯ ಗಡಿಯಾರ ಭಾಗಶಃ ಹಾನಿಯಾಗಿರುವುದು ಕಂಡುಬಂದಿದೆ. ಬಿಳಿ ಬಣ್ಣದ ಪದರವನ್ನು ಹೊಂದಿರುವ ಗಡಿಯಾರದಲ್ಲಿ ಕಪ್ಪು ರಂಧ್ರಗಳು ಬಿದ್ದಿರುವುದು ಎದ್ದು ಕಾಣುತ್ತಿದೆ. ಅದರಲ್ಲೂ 25 ನಿಮಿಷಗಳ ಗುರುತಿಸುವಲ್ಲಿ ರಂಧ್ರ ಇರುವುದನ್ನು ಗಮನಿಸಲಾಗಿದೆ. ಪಾರಿವಾಳಗಳು ಗಡಿಯಾರದಲ್ಲಿ ಯಾವಾಗಲೂ ಬೀಡುಬಿಟ್ಟಿರುತ್ತವೆ. ಹಾಗಾಗಿ ಪಾರಿವಾಳಗಳು ಗಡಿಯಾರವನ್ನು ಹಾನಿಗೊಳಿಸಿವೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆಯ (ಎಎಸ್ಐ) ಸಿಬ್ಬಂದಿ ಹೇಳಿದ್ದಾರೆ.

VISTARANEWS.COM


on

Charminar Clock
Koo


ಹೈದರಾಬಾದ್: ಐತಿಹಾಸಿಕ ಸ್ಥಳವಾದ ಹೈದರಾಬಾದ್ ಚಾರ್ ಮಿನಾರ್‌ನ ಪೂರ್ವ ಭಾಗದಲ್ಲಿರುವ 135 ವರ್ಷ ಹಳೆಯ ಗಡಿಯಾರ ಭಾಗಶಃ ಹಾನಿಯಾಗಿರುವುದು ಕಂಡುಬಂದಿದೆ. ಸೋಮವಾರ ಸ್ಮಾರಕಕ್ಕೆ ಭೇಟಿ ನೀಡಿದ ಸಂದರ್ಶಕರೊಬ್ಬರು ಗಡಿಯಾರ ಹಾನಿಯಾಗಿದೆ ಎಂದು ತಿಳಿಸಿದ್ದಾರೆ. ಗಡಿಯಾರದ ಹಾನಿಗೊಳಗಾದ ಭಾಗದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ (Charminar Clock)ಆಗಿದೆ.

ಬಿಳಿ ಬಣ್ಣದ ಪದರವನ್ನು ಹೊಂದಿರುವ ಗಡಿಯಾರದಲ್ಲಿ ಕಪ್ಪು ರಂಧ್ರಗಳು ಬಿದ್ದಿರುವುದು ಎದ್ದು ಕಾಣುತ್ತಿದೆ. ಅದರಲ್ಲೂ 25 ನಿಮಿಷಗಳ ಗುರುತಿಸುವಲ್ಲಿ ರಂಧ್ರ ಇರುವುದನ್ನು ಗಮನಿಸಲಾಗಿದೆ. ಪಾರಿವಾಳಗಳು ಗಡಿಯಾರದಲ್ಲಿ ಯಾವಾಗಲೂ ಬೀಡುಬಿಟ್ಟಿರುತ್ತವೆ. ಹಾಗಾಗಿ ಪಾರಿವಾಳಗಳು ಗಡಿಯಾರವನ್ನು ಹಾನಿಗೊಳಿಸಿವೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆಯ (ಎಎಸ್ಐ) ಸಿಬ್ಬಂದಿ ಹೇಳಿದ್ದಾರೆ. ಅಲ್ಲದೇ ಗಡಿಯಾರವನ್ನು ಸ್ಥಾಪಿಸಿದ ವಾಹಿದ್ ವಾಚ್ ಕಂಪನಿಯ ಕುಟುಂಬ ಸದಸ್ಯರೊಂದಿಗೆ ಹಾನಿಯ ಬಗ್ಗೆ ತಿಳಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಚಾರ್‌ ಮಿನಾರ್ ಹೈದರಾಬಾದ್‍ನಲ್ಲಿರುವ ಅತ್ಯಂತ ಪ್ರಸಿದ್ಧ ಸ್ಮಾರಕಗಳಲ್ಲಿ ಒಂದಾಗಿದೆ. ರಾಜಧಾನಿಯನ್ನು ಗೋಲ್ಕೊಂಡದಿಂದ ಹೈದರಾಬಾದ್‍ಗೆ ಸ್ಥಳಾಂತರಿಸಿದ ನಂತರ, ಕುತುಬ್ ಶಾಹಿ ರಾಜವಂಶದ ಐದನೇ ರಾಜನು ಇದನ್ನು 1591 ರಲ್ಲಿ ನಿರ್ಮಿಸಿದನು. ಅದಕ್ಕೆ ನಾಲ್ಕು ಮಿನಾರ್‌ಗಳಿರುವ ಕಾರಣ , ಇದನ್ನು “ಚಾರ್ ಮಿನಾರ್” ಎಂದು ಹೆಸರಿಸಲಾಯಿತು. ತನ್ನ ನಗರವನ್ನು ಹಾಳುಗೆಡವುತ್ತಿದ್ದ ಪ್ಲೇಗ್ ರೋಗದ ಅಂತ್ಯಕ್ಕಾಗಿ ರಾಜನು ತನ್ನ ದೇವರನ್ನು ಪ್ರಾರ್ಥಿಸಿದ ಮತ್ತು ತಾನು ಪ್ರಾರ್ಥಿಸುತ್ತಿದ್ದ ಅದೇ ಸ್ಥಳದಲ್ಲಿಯೇ ಮಸ್ಜಿದ್ (ಇಸ್ಲಾಮಿನ ಮಸೀದಿ) ಒಂದನ್ನು ನಿರ್ಮಿಸುವುದಾಗಿ ಅವನು ಹರಸಿಕೊಂಡ ಎಂದು ಹೇಳಲಾಗುತ್ತದೆ. ಹಾಗಾಗಿ ಆ ಸ್ಥಳದಲ್ಲಿ 1591ರಲ್ಲಿ ಚಾರ್ ಮಿನಾರ್‌ಗೆ ಅಡಿಪಾಯವನ್ನು ಹಾಕಿದ್ದಾನೆ.

ಈ ಕಟ್ಟಡ ರಚನೆಯು ಗ್ರಾನೈಟ್, ಸುಣ್ಣ, ಗಾರೆಯಿಂದ ಮಾಡಲ್ಪಟ್ಟಿದೆ, ಮತ್ತು ಕೆಲವೊಬ್ಬರು ಹೇಳುವ ಪ್ರಕಾರ, ಪುಡಿಮಾಡಲ್ಪಟ್ಟ ಅಮೃತಶಿಲೆಯನ್ನೂ ಇದಕ್ಕೆ ಬಳಸಲಾಗಿದೆ ಎನ್ನಲಾಗಿದೆ. ಆಗ್ರಾದಲ್ಲಿನ ತಾಜ್‍ಮಹಲ್ ಮತ್ತು ಪ್ಯಾರಿಗಳಲ್ಲಿ ಐಫೆಲ್ ಟವರ್ ಗೆ ಸಮಾನವಾದ ಪ್ರಾಮುಖ್ಯತೆ ಚಾರ್ ಮಿನಾರ್ ಗೆ ಇದೆ ಎಂದು ಹೇಳಬಹುದು. ಭಾರತದ ಟಾಪ್ 10 ಐತಿಹಾಸಿಕ ಸ್ಥಳಗಳಲ್ಲಿ ಚಾರ್ಮಿನಾರ್ ಕೂಡ ಸೇರಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

ಪ್ರಸ್ತುತ, ಎಎಸ್ಐ ಈ ಐತಿಹಾಸಿಕ ಸ್ಮಾರಕವನ್ನು ನೋಡಿಕೊಳ್ಳುತ್ತಿದೆ. 2014 ರಲ್ಲಿ ತೆಲಂಗಾಣ ರಾಜ್ಯ ರಚನೆಯಾದ ನಂತರ, ಸರ್ಕಾರವು ವಾರಂಗಲ್‌ನ ಕಾಕತೀಯ ಕಲಾ ತೋರಣಂ ಜೊತೆಗೆ ಈ ಸ್ಮಾರಕವನ್ನು ರಾಜ್ಯದ ಅಧಿಕೃತ ಲಾಂಛನದಲ್ಲಿ ಸೇರಿಸಿತು.

Continue Reading

ರಾಜಕೀಯ

Parliament Session: ಇಂದೂ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸುತ್ತ ಜಾತಿ ವಿವಾದ? ಅಧಿವೇಶನದ Live ಇಲ್ಲಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ವಾದಕ್ಕೆ ಕಾರಣವಾಗುತ್ತಿದೆ. ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿವಿಧ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಕೇಂದ್ರ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ರಾಹುಲ್ ಗಾಂಧಿ ಅವರ ಜಾತಿಯ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಇಂದು ಪ್ರತಿಪಕ್ಷಗಳು ಧ್ವನಿ ಎತ್ತುವ ಸಾಧ್ಯತೆ ಇದೆ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ (Parliament Session) ನಡೆಯುತ್ತಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ವಾದಕ್ಕೆ ಕಾರಣವಾಗುತ್ತಿದೆ. ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿವಿಧ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಈ ಮಧ್ಯೆ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ರಾಹುಲ್ ಗಾಂಧಿ ಅವರ ಜಾತಿಯ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಇಂದು ಪ್ರತಿಪಕ್ಷಗಳು ಧ್ವನಿ ಎತ್ತುವ ಸಾಧ್ಯತೆ ಇದೆ.

ಏನಿದು ವಿವಾದ?

ಸಂಸತ್‌ನಲ್ಲಿ ಜಾತಿಗಣತಿ (Caste Census) ಕುರಿತು ರಾಹುಲ್‌ ಗಾಂಧಿ ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ನಾವು ಜಾತಿಗಣತಿ ಮಂಡಿಸುತ್ತೇವೆ ಎಂದಿದ್ದರು.  ಇದಕ್ಕೆ ಅನುರಾಗ್‌ ಠಾಕೂರ್‌ ತಿರುಗೇಟು ನೀಡಿ, “ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿ ಗಣತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದರು. ಇದು ಪ್ರತಿಪಕ್ಷ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿ, “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದು ವಾಗ್ದಾಳಿ ನಡೆಸಿದ್ದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದು ಹೇಳಿದ್ದರು. ಹೀಗಾಗಿ ಈ ವಿಚಾರವಾಗಿ ಸಂತತ್ತಿನಲ್ಲಿ ಇಂದೂ ಕೋಲಾಹಲ ಉಂಟಾಗುವ ಸಾಧ್ಯತೆ ಇದೆ.

18ನೇ ಲೋಕಸಭೆ ತನ್ನ ಮೊದಲ ಬಜೆಟ್ ಅಧಿವೇಶನವನ್ನು ಜುಲೈ 22ರಂದು ಪ್ರಾರಂಭಿಸಿದೆ. ಆಗಸ್ಟ್ 12ರವರೆಗೆ 16 ಅಧಿವೇಶನಗಳನ್ನು ನಿಗದಿಪಡಿಸಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು ಈ ಅವಧಿಯ ಎನ್‌ಡಿಎ ಸರ್ಕಾರದ ಮೊದಲ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಬಜೆಟ್ ಬಗ್ಗೆ ಪ್ರತಿಪಕ್ಷ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿಯೇತರ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದೆ. ಬಜೆಟ್‌ನಲ್ಲಿ ಕೇವಲ ಬಿಹಾರ ಮತ್ತು ಆಂಧ್ರ ಪ್ರದೇಶವನ್ನು ಮಾತ್ರ ಉಲ್ಲೇಖಿಸಲಾಗಿದೆ ಕಾಂಗ್ರೆಸ್‌ ಹೇಳಿದೆ.

ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂಗಳವಾರ ರಾಜ್ಯಸಭೆಯಲ್ಲಿ ಬಜೆಟ್ ವಿರುದ್ಧ ಕಿಡಿಕಾರಿದ್ದರು. ಇದಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಮಂಡಿಸಲಾದ ಯಾವುದೇ ಬಜೆಟ್​ನಲ್ಲಿ ಎಲ್ಲ ರಾಜ್ಯಗಳ ಹೆಸರು ಎತ್ತಲಾಗಿದ್ದರೆ ತೋರಿಸಿ ಎಂದು ಸವಾಲು ಹಾಕಿದ್ದಾರೆ.

ಸಾಮಾಜಿಕ ವಲಯಕ್ಕೆ ಕಡಿಮೆ ಹಣ ಕೊಡಲಾಗಿದೆ ಎನ್ನುವ ಆರೋಪವನ್ನೂ ತಳ್ಳಿ ಹಾಕಿದ ಅವರು ಕೃಷಿ, ಶಿಕ್ಷಣ ಮತ್ತು ಉದ್ಯೋಗ ಸೇರಿದಂತೆ ವಿವಿಧ ಸಾಮಾಜಿಕ ವಲಯಗಳಿಗೆ ಫಂಡಿಂಗ್ ಅನ್ನು ಈ ಬಜೆಟ್​ನಲ್ಲಿ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಇಂದು ಉಭಯ ಸದನಗಳಲ್ಲಿಯೂ ಕಾವೇರಿದ ಚರ್ಚೆ ನಡೆಯುವ ಎಲ್ಲ ಸಾಧ್ಯತೆಯೂ ದಟ್ಟವಾಗಿದೆ.

ಇದನ್ನೂ ಓದಿ: Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

Continue Reading
Advertisement
Wayanad Landslide
ದೇಶ9 mins ago

Wayanad Landslide: ಮಣ್ಣಿನ ರಾಶಿಯಂತಾದ ಮುಂಡಕೈ; 400 ಮನೆಗಳ ಪೈಕಿ ಉಳಿದಿದ್ದು 30 ಮಾತ್ರ!

Emmanuel Macron
ವಿದೇಶ12 mins ago

Emmanuel Macron: ಕ್ರೀಡಾ ಸಚಿವೆಗೆ ಎಲ್ಲರೆದುರೇ ಚುಂಬಿಸಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌-ವಿಡಿಯೋ ಇದೆ

Asim Riaz Drops Cryptic Post After Fight With Rohit Shetty
ಬಾಲಿವುಡ್26 mins ago

Asim Riaz: ಸ್ಪರ್ಧಿಯನ್ನು ಹೊರಗೆ ಹಾಕಿದ ʻಖತ್ರೋನ್ ಕೆ ಖಿಲಾಡಿʼ ಶೋ; ಪೋಸ್ಟ್‌ ಮೂಲಕ ಪರೋಕ್ಷವಾಗಿ ತಿರುಗೇಟು ಕೊಟ್ಟ ಅಸಿಮ್ ರಿಯಾಜ್!

hd kumaraswamy in bjp jds meet
ಪ್ರಮುಖ ಸುದ್ದಿ45 mins ago

HD Kumaraswamy: ಬಿಜೆಪಿ ಪಾದಯಾತ್ರೆಗೆ ನಾವು ಬೆಂಬಲ ಕೊಡಲ್ಲ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ: ಎಚ್‌ಡಿಕೆ ಕಿಡಿ; ಮೈತ್ರಿಕೂಟದಲ್ಲಿ ಅಪಸ್ವರ

Sruthi Hariharan female friendship nangeallava shashwati chandrashekar
ಸ್ಯಾಂಡಲ್ ವುಡ್1 hour ago

Sruthi Hariharan: ʻನೀ ನಂಗೆ ಅಲ್ಲವಾʼ? ಎಂದು ಸ್ನೇಹಿತೆಯ ಜತೆ ಪೋಸ್‌ ಕೊಟ್ಟ ಮೂಗುತಿ ಸುಂದರಿ ಶ್ರುತಿ ಹರಿಹರನ್!

wayanad landslide mandya family
ಮಂಡ್ಯ1 hour ago

Wayanad Landslide: ಮಂಡ್ಯದ 9 ಜನರ ಕುಟುಂಬ ಭೂಕುಸಿತದಲ್ಲಿ ಸಂಪೂರ್ಣ ಕಣ್ಮರೆ

Wayanad Landslide
ದೇಶ1 hour ago

Wayanad Landslide: ಎಲ್ಲೆಂದರಲ್ಲಿ ಹೆಣಗಳ ರಾಶಿ; ಕೊಚ್ಚಿ ಹೋದ ಬದುಕು: ಸ್ಮಶಾನದಂತಾದ ಭೂಲೋಕದ ಸ್ವರ್ಗ ವಯನಾಡು

Vanitha Vijaykumar Set To Tie The Knot Again
ಟಾಲಿವುಡ್1 hour ago

Vanitha Vijaykumar: 43 ವರ್ಷದ ನಟಿ ವನಿತಾ ವಿಜಯಕುಮಾರ್ 4ನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು?

Viral Video
Latest2 hours ago

Viral Video: 3 ತಿಂಗಳಿಂದ ಕಾಣೆಯಾಗಿದ್ದ ಬಾಲಕಿ ಗುಹೆಯಲ್ಲಿ ಡಿಢೀರ್‌ ಪ್ರತ್ಯಕ್ಷ; ಹಾವಿನಂತೆ ವರ್ತನೆ ಕಂಡು ಜನ ಶಾಕ್‌-ವಿಡಿಯೋ ಇದೆ

Charminar Clock
Latest2 hours ago

Charminar Clock: 135 ವರ್ಷ ಇತಿಹಾಸ ಇರೋ ಚಾರ್‌ಮಿನಾರ್ ಗಡಿಯಾರ ಸೌಂದರ್ಯಕ್ಕೆ ಪಾರಿವಾಳಗಳಿಂದ ಧಕ್ಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ19 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌