Anurag Thakur: ಇಂಡಿಯಾ ಕೂಟದ ಕೊಳಕು ರಾಜಕಾರಣ ತೆರೆದಿಟ್ಟ ಅನುರಾಗ್ ಠಾಕೂರ್; ಈ ವಿಡಿಯೊ ತಪ್ಪದೇ ನೋಡಿ ಎಂದ ಮೋದಿ! - Vistara News

ದೇಶ

Anurag Thakur: ಇಂಡಿಯಾ ಕೂಟದ ಕೊಳಕು ರಾಜಕಾರಣ ತೆರೆದಿಟ್ಟ ಅನುರಾಗ್ ಠಾಕೂರ್; ಈ ವಿಡಿಯೊ ತಪ್ಪದೇ ನೋಡಿ ಎಂದ ಮೋದಿ!

Anurag Thakur:ಸಂಸತ್‌ನಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದ್ದರು.

VISTARANEWS.COM


on

anurag thakur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಾತಿಗಣತಿ ವಿಚಾರವಾಗಿ ನಿನ್ನೆ ಸಂಸತ್‌ನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಮತ್ತು ಸಮಾವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌(Akhilesh Yadav)ಗೆ ಸಖತ್‌ ಟಾಂಗ್‌ ಕೊಟ್ಟ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌(Anurag Thakur)ಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮೆಚ್ಚು ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಿನ್ನೆ ನಡೆದ ವಾಕ್ಸಮರದ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಎಲ್ಲರೂ ಕೇಳಿ ಎಂದು ಮನವಿ ಮಾಡಿದ್ದಾರೆ.

ಸಂಸತ್‌ನಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದರು. ಇದೀಗ ಈ ವಿಡಿಯೋವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದು, ನನ್ನ ಸಂಪುಟ ಸಹೋದ್ಯೋಗಿಯ ಭಾಷಣವನ್ನು ಕೇಳಲೇಬೇಕು. ನೈಜಾಂಶ ಮತ್ತು ಹಾಸ್ಯಭರಿತವಾದ ಅವರ ಮಾತುಗಳು ಇಂಡಿ ಒಕ್ಕೂಟದ ಕೊಳಕು ರಾಜಕೀಯವನ್ನು ಬಯಲಿಗೆಳೆದಿದೆ ಎಂದಿದ್ದಾರೆ.

“ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದರು. ಇದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದರು. “ಬೇರೆಯವರ ಜಾತಿಯನ್ನು ಕೇಳುವುದು ಎಷ್ಟು ಸರಿ” ಎಂದು ತಿರುಗೇಟು ನೀಡಿದರು.

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿದರು. “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ, ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ, ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದರು.

ಸಂಸತ್‌ನಲ್ಲಿ ಸೋಮವಾರ (ಜುಲೈ 29) ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ:Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Preeti Sudan: UPSC ನೂತನ ಅಧ್ಯಕ್ಷರಾಗಿ ಪ್ರೀತಿ ಸೂದನ್‌ ನೇಮಕ

Preeti Sudan:ಪ್ರೀತಿ ಆಂಧ್ರಪ್ರದೇಶ ಕೇಡರ್ ನ ಐಎಎಸ್ ಅಧಿಕಾರಿ. ಅವರು ಆಹಾರ ಸಂಸ್ಕರಣೆ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಕ್ಷಣಾ ಸಚಿವಾಲಯದಲ್ಲಿಯೂ ಕೆಲಸ ಮಾಡಿದ್ದಾರೆ.

VISTARANEWS.COM


on

preeti sudan
Koo

ನವದೆಹಲಿ: ಮನೋಜ್‌ ಸೋನಿಯವರ ರಾಜೀನಾಮೆಯಿಂದ ತೆರವಾಗಿದ್ದ ಕೇಂದ್ರ ಲೋಕ ಸೇವಾ ಆಯೋಗ (UPSC) ಅಧ್ಯಕ್ಷ ಸ್ಥಾನಕ್ಕೆ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್(Preeti Sudan) ನೇಮಕಗೊಂಡಿದ್ದಾರೆ. ಪ್ರೀತಿ ಅವರು ಆಗಸ್ಟ್ 1ರಿಂದ ಯುಪಿಎಸ್‌ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ತಿಂಗಳ ಆರಂಭದಲ್ಲಿ ಮನೋಜ್ ಸೋನಿ ವೈಯಕ್ತಿಕ ಕಾರಣ ನೀಡಿ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಈ ಸ್ಥಾನವನ್ನು 1983ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪ್ರೀತಿ ಸೂದನ್ ತುಂಬಲಿದ್ದಾರೆ.

ಇನ್ನು ಪ್ರೀತಿ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದು ಬಳಿಕ ಪ್ರೀತಿ ಸೂದನ್ ಅವರನ್ನು ಯುಪಿಎಸ್‌ಸಿ ಅಧ್ಯಕ್ಷೆಯಾಗಿ ನೇಮಿಸಲಾಗುತ್ತಿದೆ ಎಂದು ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ದ್ವಿವೇದಿ ಅವರು ಯುಪಿಎಸ್‌ಸಿ ಕಾರ್ಯದರ್ಶಿ ಶಶಿರಂಜನ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಪ್ರೀತಿ ಆಂಧ್ರಪ್ರದೇಶ ಕೇಡರ್ ನ ಐಎಎಸ್ ಅಧಿಕಾರಿ. ಅವರು ಆಹಾರ ಸಂಸ್ಕರಣೆ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಕ್ಷಣಾ ಸಚಿವಾಲಯದಲ್ಲಿಯೂ ಕೆಲಸ ಮಾಡಿದ್ದಾರೆ.

ಮನೋಜ್ ಸೋನಿ ಅವರ ಅಧಿಕಾರಾವಧಿಯು 2029ರಲ್ಲಿ ಕೊನೆಗೊಳ್ಳಲಿದ್ದು ಸುಮಾರು ಐದು ವರ್ಷಗಳಿಗೂ ಮುನ್ನ ರಾಜೀನಾಮೆ ನೀಡಿದ್ದಾರೆ. ತರಬೇತಿ ನಿರತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ತಾನು ಆಯ್ಕೆಯಾಗಲು ನಕಲಿ ಪ್ರಮಾಣಪತ್ರಗಳನ್ನು ಬಳಸಿದ್ದಾರೆ ಎಂಬ ಆರೋಪದ ನಡುವೆ ಮನೋಜ್ ಸೋನಿ ರಾಜೀನಾಮೆ ನಿಡಿದ್ದಾರೆ. ಮನೋಜ್ ಕುಮಾರ್ ದ್ವಿವೇದಿ ಅವರ ಪತ್ರದಲ್ಲಿ ಉಲ್ಲೇಖಿಸಿರುವಂತೆ ಸೋನಿ ಜುಲೈ 4ರಂದು ರಾಜೀನಾಮೆ ನೀಡಿದ್ದು ಜುಲೈ 31ರಿಂದ ಜಾರಿಗೆ ಬರುವಂತೆ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ನೀಟ್‌ ಯುಜಿ (NEET UG 2024) ಪರೀಕ್ಷೆಯ ಅಕ್ರಮ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿರುವ ಬೆನ್ನಲ್ಲೇ, ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರು ನಕಲಿ ದಾಖಲೆ ಸೃಷ್ಟಿಸಿ, ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕೂಡ ಅಷ್ಟೇ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಮನೋಜ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಮನೋಜ್‌ ಸೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರೂ ಆಗಿದ್ದಾರೆ. ಮೋದಿ ಅವರು ಗುಜರಾತ್‌ ಸಿಎಂ ಆಗಿದ್ದಾಗ ವಡೋದರಾದಲ್ಲಿರುವ ಎಂಎಸ್‌ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಮನೋಜ್‌ ಸೋನಿ ಅವರನ್ನು ನೇಮಿಸಲಾಗಿತ್ತು. ಆಗ ಮನೋಜ್‌ ಸೋನಿ ಅವರಿಗೆ 40 ವರ್ಷ ವಯಸ್ಸು. ಆ ಮೂಲಕ ಅವರು ದೇಶದ ಅತಿ ಕಿರಿಯ ವಯಸ್ಸಿನ ಕುಲಪತಿ ಎಂಬ ಖ್ಯಾತಿಗೂ ಭಾಜನರಾಗಿದ್ದರು. ಕಳೆದ ತಿಂಗಳೇ ಮನೋಜ್‌ ಸೋನಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿವೆ. ಅವರು ಅಂಗವೈಕಲ್ಯ ಪ್ರಮಾಣಪತ್ರ ವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ. ಯಪಿಎಸ್‌ಸಿಯು ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ಆದರೆ, ಯುಪಿಎಸ್‌ಸಿ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರ ಹಿನ್ನೆಲೆಯಲ್ಲಿಯೇ ಮನೋಜ್‌ ಸೋನಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

Continue Reading

ದೇಶ

Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

Pralhad Joshi: ಸೂರ್ಯ ಘರ್ ದೀರ್ಘಾವಧಿಯಲ್ಲಿ ಒಂದು ಉಚಿತ ವಿದ್ಯುತ್ ಯೋಜನೆಯಾಗಿದ್ದು, ಈಗಾಗಲೇ 1.3 ಕೋಟಿ ನೋಂದಣಿ ಮಾಡಲಾಗಿದೆ. ಫೆ.29ರಂದು ಆರಂಭಿಸಿದ ಸೂರ್ಯ ಘರ್ ಯೋಜನೆ ಅನುಷ್ಠಾನ ಕಳೆದೊಂದು ತಿಂಗಳಿಂದ ಚುರುಕಾಗಿದೆ. ಇದು ಬಡವರಿಗೆ ಮತ್ತು ಮಾಧ್ಯಮ ವರ್ಗಕ್ಕೆ ಅತ್ಯುಪಯುಕ್ತ ಯೋಜನೆಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Surya Ghar Long Term Free Power scheme 1 3 crore registration says Minister Pralhad Joshi
Koo

ನವದೆಹಲಿ: ಸೂರ್ಯ ಘರ್ ದೀರ್ಘಾವಧಿಯ ಉಚಿತ ವಿದ್ಯುತ್ ಯೋಜನೆಯಾಗಿದ್ದು, ಈಗಾಗಲೇ 1.3 ಕೋಟಿ ಜನರು ನೋಂದಣಿ ಮಾಡಿಸಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದರು.

ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ವಿವರಿಸಿದ ಸಚಿವರು, ಫೆ.29ರಂದು ಆರಂಭಿಸಿದ ಸೂರ್ಯ ಘರ್ ಯೋಜನೆ ಅನುಷ್ಠಾನ ಕಳೆದೊಂದು ತಿಂಗಳಿಂದ ಚುರುಕಾಗಿದೆ. ಇದು ಬಡವರಿಗೆ ಮತ್ತು ಮಾಧ್ಯಮ ವರ್ಗಕ್ಕೆ ಅತ್ಯುಪಯುಕ್ತ ಯೋಜನೆಯಾಗಿದೆ ಎಂದರು.

ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ತ್ವರಿತವಾಗಿ ಜಾರಿಗೆ ತರಲು ಡಿಸ್ಕಾಮ್‌ಗಳಿಗೆ ನಿರ್ದೇಶಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Health Tips: ಉಪಾಹಾರದಲ್ಲಿ ಇವುಗಳು ಬೇಡವೇ ಬೇಡ ಎನ್ನುತ್ತಾರೆ ಮಾಧುರಿ ದೀಕ್ಷಿತ್ ಪತಿ ಡಾ. ಶ್ರೀರಾಮ್ ನೆನೆ

ಈ ಯೋಜನೆಯಡಿ 3 KW ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ 78,000 ರೂ. ಸಬ್ಸಿಡಿ ನೀಡುತ್ತಿದೆ. ಜತೆಗೆ ಬ್ಯಾಂಕ್ ಸಾಲ ಸೌಲಭ್ಯವೂ ಇರುತ್ತದೆ ಎಂದು ಹೇಳಿದರು. ಸಾಮಾನ್ಯವಾಗಿ 3 KW ಘಟಕ 300 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುತ್ತದೆ. ಸೂರ್ಯ ಘರ್‌ ಘಟಕಕ್ಕೆ ಮೇಲ್ಛಾವಣಿ ಸ್ಥಾಪನೆಗೆ 1.5 ಲಕ್ಷ ರೂ. ವೆಚ್ಚವಾಗಲಿದೆ. 78,000 ರೂ. ಸಬ್ಸಿಡಿ ಲಭ್ಯವಿದ್ದು, ಉಳಿದ ಬಂಡವಾಳಕ್ಕೆ ಫಲಾನುಭವಿಗಳು ಬ್ಯಾಂಕ್ ಸಾಲ ಪಡೆಯಬಹುದು. 300 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸಿದಲ್ಲಿ, ಹೆಚ್ಚುವರಿ ವಿದ್ಯುತ್ ಅನ್ನು ಡಿಸ್ಕಾಮ್‌ಗಳಿಗೆ ಮಾರಾಟ ಮಾಡಿ ಹಣ ಪಡೆದುಕೊಳ್ಳಲು ಅವಕಾಶವಿದೆ ಎಂದು ವಿವರಿಸಿದರು.

ಇದನ್ನೂ ಓದಿ: Paris Olympics 2024: ಪರ್‌ಫೆಕ್ಟ್‌ ಕ್ಲಿಕ್‌ ಎಂದರೆ ಇದು; ಭಾರಿ ಸದ್ದು ಮಾಡುತ್ತಿದೆ ಒಲಿಂಪಿಕ್ಸ್‌ನ ಈ ವೈರಲ್‌ ಫೋಟೊ

ಸಾಮಾನ್ಯ 5 ಜನರಿರುವ ಮಧ್ಯಮ ವರ್ಗದವರ ಮನೆಗಳಿಗೆ 300 ಯೂನಿಟ್ ವಿದ್ಯುತ್ ಸಾಕಷ್ಟಾಗುತ್ತದೆ ಎಂದು ಅಭಿಪ್ರಾಯ ಮಂಡಿಸಿದ ಸಚಿವರು, ಡಿಸ್ಕಾಮ್‌ಗಳು ನವೀಕರಿಸಬಹುದಾದ ಇಂಧನವನ್ನು ಖರೀದಿಸುವ ಬಾಧ್ಯತೆ ಹೊಂದಿದ್ದು, ಇದಕ್ಕಾಗಿ ಕುಟುಂಬಗಳಿಗೆ ಮರುಪಾವತಿ ಮಾಡಲಾಗುತ್ತದೆ ಮತ್ತು ದೀರ್ಘಾವಧಿಯಲ್ಲಿ ಅದು ಮಧ್ಯಮವರ್ಗಕ್ಕೆ ಉಚಿತವಾಗುತ್ತದೆ ಎಂದು ತಿಳಿಸಿದರು.

Continue Reading

ದೇಶ

Nitin Gadkari: “ಜೀವ ಮತ್ತು ಆರೋಗ್ಯ ವಿಮೆಗಳ ಪ್ರೀಮಿಯಂ ಮೇಲಿನ GST ತೆಗೆದುಹಾಕಿ”; ಹಣಕಾಸು ಸಚಿವಾಲಯಕ್ಕೆ ಗಡ್ಕರಿ ಪತ್ರ

Nitin Gadkari: ಜೀವ ಮತ್ತು ವೈದ್ಯಕೀಯ ವಿಮಾ ಪ್ರೀಮಿಯಂ ಮೇಲಿನ ಜಿಎಸ್‌ಟಿಯನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡುತ್ತಿದ್ದೇನೆ. ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಲು ನಿಮ್ಮನ್ನು ವಿನಂತಿಸಲಾಗಿದೆ, ಏಕೆಂದರೆ ಇದು ಹಿರಿಯ ನಾಗರಿಕರಿಗೆ ತೊಡಕಾಗಿದೆ ಎಂದು ನಿತಿನ್ ಗಡ್ಕರಿ ಪತ್ರದಲ್ಲಿ ಬರೆದಿದ್ದಾರೆ.

VISTARANEWS.COM


on

Nitin Gadkari
Koo

ನವದೆಹಲಿ: ಜೀವ ವಿಮೆ ಮತ್ತು ಆರೋಗ್ಯ ವಿಮೆಗಳ ಪ್ರೀಮಿಯಂ ಮೇಲಿನ 18% ಸರಕು ಮತ್ತು ಸೇವಾ ತೆರಿಗೆ(GST)ಯನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ(Nitin Gadkari) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitharaman) ಅವರಿಗೆ ಪತ್ರ ಬರೆದಿದ್ದಾರೆ. ಜಿಎಸ್‌ಟಿಯು ಜೀವನದ ಅನಿಶ್ಚಿತತೆಗಳಿಗೆ ತೆರಿಗೆ ವಿಧಿಸುತ್ತದೆ. ಜೀವ ಮತ್ತು ವೈದ್ಯಕೀಯ ವಿಮಾ ಕಂತುಗಳ ಮೇಲೆ ಶೇ. 18 ರಷ್ಟು GST ವಿಧಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜೀವ ಮತ್ತು ವೈದ್ಯಕೀಯ ವಿಮಾ ಪ್ರೀಮಿಯಂ ಮೇಲಿನ ಜಿಎಸ್‌ಟಿಯನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡುತ್ತಿದ್ದೇನೆ. ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಲು ನಿಮ್ಮನ್ನು ವಿನಂತಿಸಲಾಗಿದೆ, ಏಕೆಂದರೆ ಇದು ಹಿರಿಯ ನಾಗರಿಕರಿಗೆ ತೊಡಕಾಗಿದೆ ಎಂದು ನಿತಿನ್ ಗಡ್ಕರಿ ಪತ್ರದಲ್ಲಿ ಬರೆದಿದ್ದಾರೆ. ಜೀವ ವಿಮೆ ಮತ್ತು ಆರೋಗ್ಯ ವಿಮೆಗಳ ಮೇಲಿನ ಜಿಎಸ್ಟಿ ತೆಗೆದು ಹಾಕುವಂತೆ ಅನೇಕರು ಮನವಿ ಮಾಡಿದ್ದಾರೆ. ಜಿಎಸ್‌ಟಿಯಿಂದಾಗಿ ಈ ವಲಯಗಳ ಅಭಿವೃದ್ಧಿ ಕುಂಠಿತವಾಗಿದೆ ಎಂಬುದನ್ನು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಜೀವ ವಿಮಾ ಪ್ರೀಮಿಯಂ ಮೇಲೆ GST ವಿಧಿಸುವುದರಿಂದ ಜೀವನದ ಅನಿಶ್ಚಿತತೆಗಳ ಮೇಲೆ ತೆರಿಗೆ ವಿಧಿಸುತ್ತದೆ. ಕುಟುಂಬಕ್ಕೆ ಸ್ವಲ್ಪ ರಕ್ಷಣೆ ನೀಡಲು ಜೀವನದ ಅನಿಶ್ಚಿತತೆಯ ಅಪಾಯವನ್ನು ಆವರಿಸುವ ವ್ಯಕ್ತಿಯು ಈ ಅಪಾಯದ ವಿರುದ್ಧ ರಕ್ಷಣೆಯನ್ನು ಖರೀದಿಸಲು ಪ್ರೀಮಿಯಂಗೆ ತೆರಿಗೆಯನ್ನು ವಿಧಿಸಬಾರದು ಎಂದು ಒಕ್ಕೂಟವು ಭಾವಿಸುತ್ತದೆ. ಅಲ್ಲದೇ ತೆರಿಗೆ ವಿಧಿಸುವುದರಿಂದ ವಿಮಾ ಕಂಪನಿಗಳ ಬಲವರ್ಧನೆ ಅಡ್ಡಿ ಆಗುತ್ತಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಇತೀಚೆಗಷ್ಟೇ ಈ ಹಣಕಾಸು ವರ್ಷದ ಜಿಎಸ್‌ಟಿ ಸಂಗ್ರಹದ ವರದಿ ಬಹಿರಂಗವಾಗಿತ್ತು. 2024-25ನೇ ಹಣಕಾಸು ವರ್ಷದ ಜೂನ್​​ನಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು (GST Collection) 1.74 ಲಕ್ಷ ಕೋಟಿ ರೂಪಾಯಿ ಆಗಿದ್ದು ಶೇಕಡಾ 8 ರಷ್ಟು ಏರಿಕೆಯಾಗಿತ್ತು. ಆದಾಗ್ಯೂ, ಮಾಸಿಕ ಜಿಎಸ್ಟಿ ಸಂಗ್ರಹದ ದತ್ತಾಂಶದ ಅಧಿಕೃತ ಬಿಡುಗಡೆಯನ್ನು ಸರ್ಕಾರ ನಿಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಹಣಕಾಸು ವರ್ಷದ ಮೂರು ತಿಂಗಳಲ್ಲಿ (ಏಪ್ರಿಲ್-ಜೂನ್) ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ​) ಸಂಗ್ರಹವು 5.57 ಲಕ್ಷ ಕೋಟಿ ರೂ.ಗಳಷ್ಟಿದೆ ಎಂದು ಮೂಲಗಳು ತಿಳಿಸಿವೆ.

ಜೂನ್​​ನ ಸಂಗ್ರಹವು ಮೇ 2024 ರಲ್ಲಿ ಸಂಗ್ರಹಿಸಿದ 1.73 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗಿದೆ. ಇದು ಜೂನ್ 2023 ರಲ್ಲಿ ಸಂಗ್ರಹಿಸಿದ 1.61 ಲಕ್ಷ ಕೋಟಿ ರೂ.ಗಿಂತ ಶೇಕಡಾ 8 ರಷ್ಟು ಹೆಚ್ಚಾಗಿದೆ. ಕೇಂದ್ರ ಜಿಎಸ್ಟಿ (ಸಿಜಿಎಸ್​ಟಿ) ಗೆ 39,586 ಕೋಟಿ ರೂ., ರಾಜ್ಯ ಜಿಎಸ್ಟಿ (ಎಸ್ಜಿಎಸ್ಟಿ) ಗೆ 33,548 ಕೋಟಿ ರೂ. ಜಿಎಸ್ಟಿ ಸಂಗ್ರಹವು ಏಪ್ರಿಲ್​​ನಲ್ಲಿ ದಾಖಲೆಯ ಗರಿಷ್ಠ 2.10 ಲಕ್ಷ ಕೋಟಿ ರೂ.ಗೆ ತಲುಪಿತ್ತು.

ತೆರಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಹೇಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ. ತೆರಿಗೆ ಪಾಲುದಾರ ಸೌರಭ್ ಅಗರ್ವಾಲ್ ಮಾತನಾಡಿ, ಈ ದೃಢ ಕಾರ್ಯಕ್ಷಮತೆಯು ಉತ್ಸಾಹಭರಿತ ಆರ್ಥಿಕತೆಯನ್ನು ಪ್ರತಿಬಿಂಬಿಸುತ್ತದೆ. ಸಮಯೋಚಿತ ಲೆಕ್ಕಪರಿಶೋಧನೆ, ಪರಿಶೀಲನಾ ಕ್ರಮಗಳು ಮತ್ತು ಇಲಾಖೆಯ ಪರಿಣಾಮಕಾರಿ ಜಾರಿ ಇವೆಲ್ಲವೂ ಈ ಜಿಎಸ್​ಟಿ ಸಂಗ್ರಹ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Narayana Murthy: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ: ನಾರಾಯಣಮೂರ್ತಿ ಹೊಸ ವಾದ!

Continue Reading

ಆರೋಗ್ಯ

Health Tips: ಉಪಾಹಾರದಲ್ಲಿ ಇವುಗಳು ಬೇಡವೇ ಬೇಡ ಎನ್ನುತ್ತಾರೆ ಮಾಧುರಿ ದೀಕ್ಷಿತ್ ಪತಿ ಡಾ. ಶ್ರೀರಾಮ್ ನೆನೆ

ಕಾರ್ಡಿಯೊಥೊರಾಸಿಕ್ ಸರ್ಜನ್ ಆಗಿರುವ ಡಾ. ನೆನೆ ಈಗ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಆರೋಗ್ಯಕರ ಜೀವನಕ್ಕಾಗಿ (Health Tips) ನಾವು ತಪ್ಪಿಸಬೇಕಾದ ಉಪಹಾರದ ಮಾಹಿತಿ ನೀಡಿದ್ದಾರೆ. ಇದರಲ್ಲಿ ಬಿಳಿ ಬ್ರೆಡ್, ಸಕ್ಕರೆಯ ಧಾನ್ಯಗಳು, ಹಣ್ಣಿನ ರಸ, ಸಂಸ್ಕರಿಸಿದ ಮಾಂಸ, ಸಿಹಿಯಾದ ಮೊಸರು ಈ ಆಯ್ಕೆಗಳನ್ನು ತಪ್ಪಿಸಬೇಕು ಎಂದು ಹೇಳಿದ್ದು, ಇದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

VISTARANEWS.COM


on

By

Health Tips
Koo

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ (Bollywood actress Madhuri Dixit) ಅವರ ಪತಿ ಡಾ. ಶ್ರೀರಾಮ್ ನೆನೆ (Dr Shriram Nene) ಅವರು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ನಿಯಮಿತವಾಗಿ ಆರೋಗ್ಯ ಸಂಬಂಧಿತ (health tips) ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಹೃದಯಾಘಾತದ (heart attack case) ಅಪಾಯವು ಏಕೆ ಹೆಚ್ಚು ಎಂಬುದನ್ನು ಹಂಚಿಕೊಂಡಿದ್ದು, ಇದಕ್ಕಾಗಿ ಆರೋಗ್ಯಕರ ಉಪಹಾರ ಹೇಗಿರಬೇಕು ಎಂದು ಹೇಳಿದ್ದಾರೆ.

ಕಾರ್ಡಿಯೊಥೊರಾಸಿಕ್ ಸರ್ಜನ್ ಆಗಿರುವ ಡಾ. ನೆನೆ ಈಗ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಆರೋಗ್ಯಕರ ಜೀವನಕ್ಕಾಗಿ ನಾವು ತಪ್ಪಿಸಬೇಕಾದ ಉಪಹಾರದ ಮಾಹಿತಿ ನೀಡಿದ್ದಾರೆ. ಇದರಲ್ಲಿ ಬಿಳಿ ಬ್ರೆಡ್, ಸಕ್ಕರೆಯ ಧಾನ್ಯಗಳು, ಹಣ್ಣಿನ ರಸ, ಸಂಸ್ಕರಿಸಿದ ಮಾಂಸ, ಸಿಹಿಯಾದ ಮೊಸರು ಈ ಆಯ್ಕೆಗಳನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಬಿಳಿ ಬ್ರೆಡ್

ಬಿಳಿ ಬ್ರೆಡ್ ಅನ್ನು ಕಡಿಮೆ ಗುಣಮಟ್ಟದ ಕಾರ್ಬೋಹೈಡ್ರೇಟ್‌ಗಳೊಂದಿಗೆ ಸಂಸ್ಕರಿಸಲಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಕಾರಣವಾಗಬಹುದು. ಬಿಳಿ ಬ್ರೆಡ್ ಅನ್ನು ಅತಿಯಾಗಿ ಸೇವಿಸುವುದರಿಂದ ಬೊಜ್ಜು, ಹೃದ್ರೋಗ ಮತ್ತು ಮಧುಮೇಹ ಉಂಟಾಗುತ್ತದೆ.

ಸಕ್ಕರೆ ಧಾನ್ಯಗಳು

ಸಕ್ಕರೆ ಸಿರಿಧಾನ್ಯಗಳು ಸರಳವಾದ ಕಾರ್ಬೋಹೈಡ್ರೇಟ್ ಆಹಾರ ಪದಾರ್ಥಗಳಾಗಿವೆ. ಇದು ಹೆಚ್ಚಿನ ಹಸಿವು ಮತ್ತು ಶುಗರ್ ಮಟ್ಟ ಹೆಚ್ಚಿಸಲು ಕಾರಣವಾಗಬಹುದು. ಇದು ಟೈಪ್ 2 ಮಧುಮೇಹ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.

ಹಣ್ಣಿನ ರಸ

ಹಣ್ಣುಗಳನ್ನು ಜ್ಯೂಸ್ ಮಾಡುವುದರಿಂದ ಅವುಗಳಲ್ಲಿರುವ ಅಗತ್ಯ ಪೋಷಕಾಂಶಗಳ ನಷ್ಟಕ್ಕೆ ಕಾರಣವಾಗುತ್ತದೆ. ಜ್ಯೂಸ್ ಮಾಡುವುದು ಹೆಚ್ಚಿನ ಸಕ್ಕರೆಗಳನ್ನು ಬಿಡುಗಡೆ ಮಾಡುತ್ತದೆ. ಹಣ್ಣಿನ ರಸವು ಬೊಜ್ಜು ಮತ್ತು ತೂಕ ಹೆಚ್ಚಾಗಲು ಕಾರಣವಾಗಬಹುದು.


ಸಂಸ್ಕರಿಸಿದ ಮಾಂಸ

ಬೆಳಗಿನ ಉಪಾಹಾರಕ್ಕಾಗಿ ಸಂಸ್ಕರಿಸಿದ ಮಾಂಸವನ್ನು ತಿನ್ನುವುದು ಹೊಟ್ಟೆ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕೂಡ ಸಂಸ್ಕರಿಸಿದ ಮಾಂಸವನ್ನು ಸೇವಿಸುವ ಕೆಲವು ಅಡ್ಡಪರಿಣಾಮಗಳಾಗಿವೆ.

ಇದನ್ನೂ ಓದಿ: Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

ಸಿಹಿಯಾದ ಮೊಸರು

ಮೊಸರಿನಲ್ಲಿರುವ ನೈಸರ್ಗಿಕ ಸಕ್ಕರೆ ಆರೋಗ್ಯಕರವಾಗಿದ್ದರೂ ಸುವಾಸನೆಯ ಮೊಸರು ಅಧಿಕ ಸಕ್ಕರೆಯನ್ನು ಹೊಂದಿರುತ್ತದೆ. ಇದು ತೂಕ ಹೆಚ್ಚಾಗುವುದು, ಟೈಪ್ 2 ಮಧುಮೇಹ ಮತ್ತು ಕೆಲವು ರೀತಿಯ ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುತ್ತದೆ.

Continue Reading
Advertisement
Paris Olympics
ಕ್ರೀಡೆ2 mins ago

Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

wayanad landslide
ಕರ್ನಾಟಕ8 mins ago

Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Property Tax
ಬೆಂಗಳೂರು13 mins ago

Property Tax: ಬೆಂಗಳೂರು ಆಸ್ತಿ ತೆರಿಗೆ; ಒನ್‌ ಟೈಮ್‌ ಸೆಟ್ಲ್‌ಮೆಂಟ್‌ ಪ್ರಯೋಜನ ಪಡೆಯಲು ಇಂದೇ ಲಾಸ್ಟ್‌ ಡೇಟ್‌

preeti sudan
ದೇಶ17 mins ago

Preeti Sudan: UPSC ನೂತನ ಅಧ್ಯಕ್ಷರಾಗಿ ಪ್ರೀತಿ ಸೂದನ್‌ ನೇಮಕ

Surya Ghar Long Term Free Power scheme 1 3 crore registration says Minister Pralhad Joshi
ದೇಶ17 mins ago

Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

Actor Darshan
ಪ್ರಮುಖ ಸುದ್ದಿ46 mins ago

Actor Darshan: ನಟ ದರ್ಶನ್‌ಗೆ ಆ. 20ರವರೆಗೆ ಜೈಲೂಟವೇ ಫಿಕ್ಸ್‌; ವಿಚಾರಣೆ ಮುಂದೂಡಿದ ಹೈಕೋರ್ಟ್

Nitin Gadkari
ದೇಶ50 mins ago

Nitin Gadkari: “ಜೀವ ಮತ್ತು ಆರೋಗ್ಯ ವಿಮೆಗಳ ಪ್ರೀಮಿಯಂ ಮೇಲಿನ GST ತೆಗೆದುಹಾಕಿ”; ಹಣಕಾಸು ಸಚಿವಾಲಯಕ್ಕೆ ಗಡ್ಕರಿ ಪತ್ರ

dog meat controversy food department commissioner
ಪ್ರಮುಖ ಸುದ್ದಿ56 mins ago

Dog Meat Controversy: ಅಬ್ದುಲ್‌ ರಜಾಕ್‌ ತಂದಿರೋದು ಕುರಿ ಮಾಂಸ, ‌ಖಚಿತಪಡಿಸಿದ ಲ್ಯಾಬ್‌ ವರದಿ: ಆಹಾರ ಇಲಾಖೆ ಆಯುಕ್ತ

Bribe Case
Latest59 mins ago

Bribe Case: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

Triple Talaq
Latest1 hour ago

Triple Talaq: ವರದಕ್ಷಿಣೆ ತರಲು ನಿರಾಕರಿಸಿದ ಪತ್ನಿಗೆ ವಾಟ್ಸಾಪ್‍ನಲ್ಲೇ ತ್ರಿವಳಿ ತಲಾಖ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ21 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌