Bribe Case: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ! - Vistara News

Latest

Bribe Case: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

Bribe Case: ನೀರಾವರಿ ಉದ್ದೇಶಗಳಿಗಾಗಿ ಜೀವನ್ ಧಾರಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಮೌಲ್ಯಮಾಪನಕ್ಕಾಗಿ 1,000 ರೂ.ಗಳನ್ನು ಲಂಚವಾಗಿ ಸ್ವೀಕರಿಸಿದ್ದಕ್ಕಾಗಿ ಸಬ್‌ ಎಂಜಿನಿಯರ್‌ಗೆ ಸ್ಥಳೀಯ ನ್ಯಾಯಾಲಯ 1 ಸಾವಿರ ರೂ. ದಂಡ ವಿಧಿಸಿತ್ತು. ಇದೀಗ ಸಬ್ ಎಂಜಿನಿಯರ್‌ಗೆ ತಪ್ಪಾಗಿ ಶಿಕ್ಷೆ ವಿಧಿಸಲಾಗಿದೆ ಎಂದು ಛತ್ತೀಸ್‌ಗಢ ಹೈಕೋರ್ಟ್ 25 ವರ್ಷಗಳ ಬಳಿಕ ಖುಲಾಸೆಗೊಳಿಸಿದೆ.

VISTARANEWS.COM


on

Bribe Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ನ್ಯಾಯಾಲಗಳಲ್ಲಿ ಎಷ್ಟೋ ಕೇಸ್‌ಗಳು ವಿಚಾರಣೆಯಾಗದೆ ಹಾಗೇ ಉಳಿದಿವೆ. ಹಾಗಾಗಿ ಪ್ರಕರಣ ದಾಖಲಿಸಿದವರು, ಆರೋಪಿಗಳು ಆಗಾಗ ಕೋರ್ಟ್‍ಗೆ ಹೋಗಿ ಬರುತ್ತಿರುತ್ತಾರೆ. ಅಂತಹದೊಂದು ಹಳೆಯ ಕೇಸ್ ಈಗ ವಿಚಾರಣೆಯಾಗಿದೆ, 25 ವರ್ಷಗಳ ಹಳೆಯ ಕೇಸ್ ಅನ್ನು ಕೈಗೆತ್ತಿಕೊಂಡ ಛತ್ತೀಸ್‍ಗಢ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ನೀಡಿ ಆರೋಪಿಯನ್ನು ಕೇಸಿನಿಂದ ಖುಲಾಸೆಗೊಳಿಸಿದೆ. ಮನೇಂದ್ರಗಢದಲ್ಲಿ ನೀರಾವರಿ ಉದ್ದೇಶಗಳಿಗಾಗಿ ಜೀವನ್ ಧಾರಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಮೌಲ್ಯಮಾಪನಕ್ಕಾಗಿ 1,000 ರೂ.ಗಳನ್ನು ಲಂಚ (Bribe Case)ವಾಗಿ ಸ್ವೀಕರಿಸಿದ್ದಕ್ಕಾಗಿ ತಪ್ಪಾಗಿ ಶಿಕ್ಷೆಗೊಳಗಾದ ಸಬ್ ಎಂಜಿನಿಯರ್ ಒಬ್ಬರನ್ನು ಛತ್ತೀಸ್‍ಗಢ ಹೈಕೋರ್ಟ್ 25 ವರ್ಷಗಳ ಹಳೆಯ ಪ್ರಕರಣದಿಂದ ಖುಲಾಸೆಗೊಳಿಸಿದೆ ಎಂಬುದಾಗಿ ತಿಳಿದುಬಂದಿದೆ.

ಮನೇಂದ್ರಗಢದಲ್ಲಿ ನೀರಾವರಿ ಉದ್ದೇಶಗಳಿಗಾಗಿ ಜೀವನ್ ಧಾರಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳಿಗೆ ಮೂರನೇ ಮತ್ತು ಅಂತಿಮ ಕಂತನ್ನು ಬಿಡುಗಡೆ ಮಾಡಲು ಅಧಿಕಾರಿ 1,000 ರೂ.ಗಳ ಲಂಚದ ಮೊತ್ತವನ್ನು ಕೇಳುತ್ತಿದ್ದಾರೆ ಎಂದು ಆರೋಪಿಸಿ ಪ್ರೇಮ್ ಮಿಶ್ರಾ ಎಂಬವರು ಬಿಲಾಸ್ಪುರದ ಲೋಕಾಯುಕ್ತ ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ಇದರಿಂದ ಸಹಾಯಕ ಎಂಜಿನಿಯರ್ ಆಗಿರುವ ಆರ್.ಪಿ.ಕಶ್ಯಪ್ ಪೊಲೀಸರ ದಾಳಿಯಲ್ಲಿ ಸಿಕ್ಕಿಬಿದ್ದಿದ್ದರು. ಜನಪದ್ ಪಂಚಾಯತ್ ಮನೇಂದ್ರಗಢ ಸಬ್ ಎಂಜಿನಿಯರ್ ಆಗಿ ನೇಮಕಗೊಂಡಿದ್ದ ಕಶ್ಯಪ್ ಅವರ ನಿವಾಸದಲ್ಲಿ ಮಿಶ್ರಾ ಅವರು ಕರೆನ್ಸಿ ನೋಟುಗಳನ್ನು ನೀಡಿದ ನಂತರ, ಪೊಲೀಸರ ತಂಡ ಬಲೆ ಬೀಸಿ ಹಣವನ್ನು ವಶಪಡಿಸಿಕೊಂಡು ಕಶ್ಯಪ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನಂತರ ಅಂಬಿಕಾಪುರದ ವಿಚಾರಣಾ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಅವರನ್ನು ದೋಷಿ ಎಂದು ಘೋಷಿಸಿತು ಮತ್ತು ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3,000 ರೂ. ದಂಡ ವಿಧಿಸಿತು. ಇದಾದ ನಂತರ ಜಾಮೀನಿನ ಮೇಲೆ ಹೊರಗಿರುವ ಕಶ್ಯಪ್ ಈ ಪ್ರಕರಣದ ಬಗ್ಗೆ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿದ್ದರು.

ಇದನ್ನೂ ಓದಿ:  115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

ಇಲ್ಲಿ ವಿಚಾರಣೆ ನಡೆಸಿ ಮನೇಂದ್ರಗಢದ ಅದೇ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್, ಸಿಮೆಂಟ್ ಅಂಗಡಿಯ ಮಾಲೀಕ ಅಲ್ಲಾವುದ್ದೀನ್, ಟ್ರ್ಯಾಕ್ಟರ್-ಟ್ರಾಲಿ ಮಾಲೀಕ ಧನಿರಾಮ್ ಅವರ ಹೇಳಿಕೆಗಳನ್ನು ವಿಚಾರಣೆಯ ಸಮಯದಲ್ಲಿ ಗಣನೆಗೆ ತೆಗೆದುಕೊಂಡ ಹೈಕೋರ್ಟ್ ನ್ಯಾಯಮೂರ್ತಿ ಸಂಜಯ್ ಕೆ ಜೈಸ್ವಾಲ್ ಅವರು ಕಶ್ಯಪ್ ಅವರನ್ನು ಆರೋಪಗಳಿಂದ ಖುಲಾಸೆಗೊಳಿಸಿದರು, ಏಕೆಂದರೆ ಲಂಚದ ಬೇಡಿಕೆ ಎಂದು ಸ್ವೀಕರಿಸಲಾದ ಹಣವು ಯಾವುದೇ ರೀತಿಯಲ್ಲಿ ಸಾಬೀತಾಗದ ಕಾರಣ ದಾಖಲೆಯಲ್ಲಿರುವ ಪುರಾವೆಗಳು ಮೇಲ್ಮನವಿದಾರನನ್ನು ತಪ್ಪಿತಸ್ಥರೆಂದು ಪರಿಗಣಿಸದ ಕಾರಣ ನ್ಯಾಯಾಲಯ ಈ ಪ್ರಕರಣದಿಂದ ಕಶ್ಯಪ್ ಅವರನ್ನು ಖುಲಾಸೆಗೊಳಿಸಿದೆ. ಒಂದು ಪ್ರಕರಣ ಇತ್ಯರ್ಥವಾಗಲು 25 ವರ್ಷಗಳು ಬೇಕೆ ಎಂದು ಜನ ಚರ್ಚಿಸುವಂತಾಗಿದೆ! ನ್ಯಾಯದಾನ ಇಷ್ಟು ನಿಧಾನವಾದರೆ ಭ್ರಷ್ಟಾಚಾರ ಪ್ರಕರಣ ಕಡಿಮೆ ಆಗುವುದಾದರೂ ಹೇಗೆ ಎಂದು ಜನ ಸೋಷಿಯಲ್‌ ಮೀಡಿಯಾಗಳಲ್ಲಿ ಪ್ರಶ್ನಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

Viral Video: ಬೀದಿಯಲ್ಲಿ ಹಸುಗಳು ಮಹಿಳೆಯ ಮೇಲೆ ಕ್ರೂರವಾಗಿ ದಾಳಿ ಮಾಡುವುದನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ ಆಗಿರುವ ಈ ವಿಡಿಯೊದಲ್ಲಿ, ಬೀದಿ ದನಗಳ ಗುಂಪು ಮಹಿಳೆಯ ಮೇಲೆ ದಾಳಿ ಮಾಡಿದೆ. ಹಸುವೊಂದು ಮಹಿಳೆಯ ಎದೆ ಹಾಗೂ ಕುತ್ತಿಗೆಗೆ ತೀವ್ರವಾಗಿ ತಿವಿದಿದೆ. ಕಾಲಿನಿಂದ ತುಳಿದು ತುಳಿದು ಘಾಸಿಗೊಳಿಸಿದೆ. ಈ ವಿಡಿಯೊ ಆತಂಕ ಮೂಡಿಸುತ್ತದೆ.

VISTARANEWS.COM


on

Viral Video
Koo


ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡುವಂತಹ ಘಟನೆಗಳು ಹೆಚ್ಚು ಕಂಡುಬರುತ್ತಿದೆ. ಸಾಧು ಪ್ರಾಣಿಗಳಾದ ಹಸು, ಎಮ್ಮೆಗಳು ಕ್ರೂರ ಪ್ರಾಣಿಗಳಂತೆ ವರ್ತಿಸಲು ಶುರು ಮಾಡಿವೆ. ಎಲ್ಲೆಂದರಲ್ಲಿ ಜನರನ್ನು ಅಟ್ಟಾಡಿಸಿಕೊಂಡು ದಾಳಿ ಮಾಡುತ್ತಿವೆ. ಇದೀಗ ಅಂತಹದೊಂದು ಆಘಾತಕಾರಿ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದ್ದು, ಬೀದಿ ಹಸುವಿನ ದಾಳಿಗೆ ಮಹಿಳೆಯೊಬ್ಬರು ತುತ್ತಾಗಿ ಭೀಕರವಾಗಿ ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ (Viral Video) ಹರಿದಾಡುತ್ತಿದೆ.

ಬೀದಿಯಲ್ಲಿ ಹಸುಗಳು ಮಹಿಳೆಯ ಮೇಲೆ ಕ್ರೂರವಾಗಿ ದಾಳಿ ಮಾಡುವುದನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ ಆಗಿರುವ ಈ ವಿಡಿಯೊದಲ್ಲಿ, ಬೀದಿ ಹಸುಗಳ ಗುಂಪು ಮಹಿಳೆಯ ಮೇಲೆ ದಾಳಿ ಮಾಡಿದೆ. ಹಸುವೊಂದು ಮಹಿಳೆಯ ಎದೆ ಹಾಗೂ ಕುತ್ತಿಗೆಗೆ ತಿವಿದಿದೆ. ಕಾಲಿನಿಂದ ತುಳಿದು ತುಳಿದು ಘಾಸಿಗೊಳಿಸಿದೆ. ಹಲವಾರು ಜನರು ಮಹಿಳೆಯನ್ನು ಉಳಿಸಲು ಪ್ರಯತ್ನಿಸಿದರು. ಆದರೆ ದನಗಳು ಮಾತ್ರ ತಮ್ಮ ಕೃತ್ಯವನ್ನು ನಿಲ್ಲಿಸಲಿಲ್ಲ. ಇದರ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಸು ಮಹಿಳೆಯನ್ನು ತಿವಿದ ಭಯಾನಕ ದೃಶ್ಯದ ಬಗ್ಗೆ ಹಾಗೂ ಇದರ ಪರಿಣಾಮ ಮಹಿಳೆಯ ಎದೆ ಮತ್ತು ಗಂಟಲು ಹರಿದುಹಾಕಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ವಿವರಿಸಿದಾಗ ಎಂಥವರಿಗೂ ಮೈ ಜುಮ್ಮೆನಿಸುತ್ತದೆ.

ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಭವಿಷ್ಯದಲ್ಲಿ ಇದೇ ರೀತಿಯ ದುರಂತಗಳು ನಡೆಯದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜನಾಗ್ರಹ ಕೇಳಿ ಬಂದಿದೆ. ಆದರೆ ಕುರುಕ್ಷೇತ್ರದ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಇನ್ನೂ ಕಠಿಣ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

ಈ ಘಟನೆಗೆ ಸಂಬಂಧಿಸಿದಂತೆ ನಗರ ಪ್ರದೇಶಗಳಲ್ಲಿ ಆಕ್ರಮಣಕಾರಿ ಪ್ರಾಣಿಗಳ ಅನಿಯಂತ್ರಿತ ಉಪಸ್ಥಿತಿಯ ಬಗ್ಗೆ ಸಂಬಂಧಪಟ್ಟ ನಾಗರಿಕರು ಮತ್ತು ಸ್ಥಳೀಯ ನಿವಾಸಿಗಳು ಆಕ್ರೋಶ ಮತ್ತು ಭಯವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಕುರುಕ್ಷೇತ್ರದಲ್ಲಿ ಬೀದಿ ಪ್ರಾಣಿಗಳ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳಿಂದ ತುರ್ತು ಕ್ರಮ ಅಗತ್ಯವಿದೆ ಎಂಬುದನ್ನು ತಿಳಿಸುತ್ತದೆ.

Continue Reading

Latest

Viral Video: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

Viral Video: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೊದಲ್ಲಿ, ದಂಪತಿ ನೀರಿನಿಂದ ತುಂಬಿರುವ ಹೊಲದಲ್ಲಿ ಹಾವಿನಂತೆ ನೃತ್ಯ ಮಾಡಿದ್ದಾರೆ. ಅವರಿಬ್ಬರು ಹೊಲದಲ್ಲಿನ ಕೆಸರಿನಲ್ಲಿ ಮಲಗಿಕೊಂಡು, ನಂತರ ನಿಂತು ಹಾವಿನಂತೆ ಹೊರಳಾಡಿದ್ದಾರೆ. ಇಲ್ಲಿ ಮಹಿಳೆ ರೊಮ್ಯಾಂಟಿಕ್ ಭಂಗಿಯಲ್ಲಿ ಕುಣಿದಿದ್ದಾಳೆ. ಇನ್ನು ಹೊಲದಲ್ಲಿ ಕೆಸರೇ ತುಂಬಿರುವುದರಿಂದ ದಂಪತಿಯ ಬಟ್ಟೆ, ಮೈ ಕೇಸರಿನಿಂದ ಬಳಿದುಕೊಂಡಿದೆ. ಈ ದೃಶ್ಯವು ಅನೇಕ ವೀಕ್ಷಕರನ್ನು ರಂಜಿಸಿದೆ!

VISTARANEWS.COM


on

Viral Video
Koo


ಜನರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವು ಬಗೆಯ ರೀಲ್ಸ್‌ಗಳನ್ನ ಮಾಡಿ ಹರಿಬಿಡುತ್ತಾರೆ. ಈ ರೀಲ್ಸ್ ಮೂಲಕ ಅನೇಕ ಪ್ರತಿಭೆಗಳು ಹೊರಗೆ ಬರುತ್ತವೆ. ಇದೀಗ ದಂಪತಿಯ ಅಂತಹದೊಂದು ಪ್ರತಿಭೆ ಹೊರಗೆ ಬಂದಿದೆ. ಇನ್ನೇನು ನಾಗರ ಪಂಚಮಿ ಹಬ್ಬ ಹತ್ತಿರ ಬರುತ್ತಿದೆ. ಜನರು ನಾಗದೇವರನ್ನು ನೆನೆದು ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಸಮಯದಲ್ಲಿ ಇದೀಗ ದಂಪತಿ ನಾಗಿನಿ ಡ್ಯಾನ್ಸ್ ಮೂಲಕ ಜನರಿಗೆ ನಾಗದೇವರ ದರ್ಶನ ನೀಡಿದ್ದಾರೆ. ಅವರ ಡ್ಯಾನ್ಸ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ. ಅವರ ಡ್ಯಾನ್ಸ್ ವೀಕ್ಷಕರ ಮುಖದಲ್ಲಿ ನಗುವನ್ನು ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೊದಲ್ಲಿ, ದಂಪತಿ ನೀರಿನಿಂದ ತುಂಬಿರುವ ಹೊಲದಲ್ಲಿ ಹಾವಿನಂತಹ ಚಲನೆಗಳಿಂದ ಸ್ಫೂರ್ತಿ ಪಡೆದ ನಾಗಿನ್ ಡ್ಯಾನ್ಸ್ ಅನ್ನು ಪ್ರದರ್ಶಿಸಿದ್ದಾರೆ. ಅವರಿಬ್ಬರು ಹೊಲದಲ್ಲಿನ ಕೆಸರಿನಲ್ಲಿ ಮಲಗಿಕೊಂಡು, ನಂತರ ನಿಂತು ಹಾವಿನಂತೆ ಬಳಕುತ್ತಾ ನೃತ್ಯ ಮಾಡಿದ್ದಾರೆ. ಇಲ್ಲಿ ಮಹಿಳೆ ರೊಮ್ಯಾಂಟಿಕ್ ಭಂಗಿಗಳನ್ನು ನೀಡಿದ್ದಾಳೆ. ಆ ಹೊಲದಲ್ಲಿ ಕೆಸರೇ ತುಂಬಿರುವುದರಿಂದ ದಂಪತಿಯ ಬಟ್ಟೆ, ಮೈ ಕೇಸರಿನಿಂದ ಬಳಿದುಕೊಂಡಿದೆ. ಈ ದೃಶ್ಯವು ಅನೇಕ ವೀಕ್ಷಕರನ್ನು ರಂಜಿಸಿದೆ ಮತ್ತು ಗೊಂದಲಕ್ಕೀಡು ಮಾಡಿದೆ.

ವಿನಯ್ ವಿಕೆ 9351 ಎಂಬ ಬಳಕೆದಾರರು ಯೂಟ್ಯೂಬ್‍ನಲ್ಲಿ ಹಂಚಿಕೊಂಡಿರುವ ಈ ವಿಡಿಯೊ ಶೀಘ್ರದಲ್ಲೇ ವೈರಲ್ ಆಗಿದ್ದು, ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ ಮತ್ತು ಅನೇಕರು ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಲೈಕ್‌ಗಳು ಮತ್ತು ವೀಕ್ಷಣೆಗಳ ಹಸಿವು ಜನರನ್ನು ಹುಚ್ಚರನ್ನಾಗಿ ಮಾಡುತ್ತಿದೆ” ಎಂದು ಒಬ್ಬ ವೀಕ್ಷಕರು ಕಾಮೆಂಟ್ ಮಾಡಿದರೆ, ಇನ್ನೊಬ್ಬರು “ನಾಗಿನ್ ಈ ರೀತಿ ನೃತ್ಯ ಮಾಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

ಸಾಮಾನ್ಯವಾಗಿ ಜನರು ಕೆಸರು ಕಾಲಿಗೆ ತಗುಲಿದರೆ ಅದನ್ನು ಕಂಡು ಅಸಹ್ಯಪಟ್ಟುಕೊಂಡು ಬೇಗನೆ ಹೋಗಿ ಸ್ವಚ್ಛಗೊಳಿಸಿಕೊಳ್ಳುತ್ತಾರೆ. ಅಂತಹದರಲ್ಲಿ ಈ ದಂಪತಿ ಕೆಸರು ಗದ್ದೆಯಲ್ಲೇ ಬಿದ್ದು ಉರುಳಾಡುತ್ತಿದ್ದಾರೆ. ಇದನ್ನು ನೋಡಿದರೆ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಜನರು ಎಷ್ಟು ದೂರ ಹೋಗುತ್ತಾರೆ ಮತ್ತು ಯಾವ ಕೆಲಸಕ್ಕೂ ಮುಂದಾಗುತ್ತಾರೆ ಎಂಬುದನ್ನು ಎತ್ತಿ ತೋರಿಸುತ್ತದೆ. ಕೆಲವು ವೀಕ್ಷಕರು ವಿಡಿಯೊವನ್ನು ಮನರಂಜನೆಯಾಗಿ ಕಂಡುಕೊಂಡರೆ, ಇತರರು ಆನ್‍ಲೈನ್‍ ಖ್ಯಾತಿಯಗಾಗಿ ಜನರು ಎಷ್ಟು ದೂರ ಹೋಗಬಹುದು ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Continue Reading

ಬೆಂಗಳೂರು

Property Tax: ಬೆಂಗಳೂರು ಆಸ್ತಿ ತೆರಿಗೆ; ಒನ್‌ ಟೈಮ್‌ ಸೆಟ್ಲ್‌ಮೆಂಟ್‌ ಪ್ರಯೋಜನ ಪಡೆಯಲು ಇಂದೇ ಲಾಸ್ಟ್‌ ಡೇಟ್‌

ಒನ್-ಟೈಮ್ ಇತ್ಯರ್ಥ ಯೋಜನೆಯಡಿಯಲ್ಲಿ ಆಸ್ತಿ ತೆರಿಗೆಗೆ ಶೇ.5 ರಿಯಾಯಿತಿಯನ್ನು ಪಡೆಯಲು ಜುಲೈ 31 ಅಂತಿಮ ದಿನವಾಗಿದೆ. ಈ ನಡುವೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳ ಸುಮಾರು 548.94 ಕೋಟಿ ರೂ. ಮೊತ್ತದ ಆಸ್ತಿ ತೆರಿಗೆ (Property Tax) ಇನ್ನೂ ಬಾಕಿ ಪಾವತಿಯಾಗದೆ ಉಳಿದಿದೆ. ಈ ಬಗ್ಗೆ ಮುಂದೇನು ಕ್ರಮ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದೇನು? ಇಲ್ಲಿದೆ ವಿವರ.

VISTARANEWS.COM


on

By

Property Tax
Koo

ಬೆಂಗಳೂರಿನ (bengaluru) ಎಂಟು ವಲಯಗಳ ಸುಮಾರು 2.88 ಲಕ್ಷ ಆಸ್ತಿಗಳ 548.94 ಕೋಟಿ ರೂ. ಮೊತ್ತದ ಆಸ್ತಿ ತೆರಿಗೆ (Property Tax) ಬಾಕಿ ಪಾವತಿಯಾಗದೆ ಉಳಿದಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತಿಳಿಸಿದೆ. ಒನ್-ಟೈಮ್ ಇತ್ಯರ್ಥ ಯೋಜನೆಯಡಿಯಲ್ಲಿ (one-time settlement scheme) ಆಸ್ತಿ ತೆರಿಗೆಗೆ ಶೇ.5 ರಿಯಾಯಿತಿಯನ್ನು ಪಡೆಯಲು ಜುಲೈ 31 ಅಂತಿಮ ದಿನವಾಗಿದೆ.

ಒನ್-ಟೈಮ್ ಇತ್ಯರ್ಥ ಯೋಜನೆಯು ದಂಡಗಳ ಮೇಲೆ ಶೇ. 50 ರಿಯಾಯಿತಿ ಮತ್ತು ಆಸ್ತಿ ತೆರಿಗೆ ಡೀಫಾಲ್ಟರ್‌ಗಳಿಗೆ ಬಡ್ಡಿ ಪಾವತಿಗಳ ಮೇಲೆ ಶೇ. 100ರಷ್ಟು ರಿಯಾಯಿತಿಯನ್ನು ನೀಡುತ್ತದೆ.

ಬೆಂಗಳೂರು ನಗರ ಅಭಿವೃದ್ಧಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಚ್‌ನಲ್ಲಿ ತೆರಿಗೆ ಸಂಗ್ರಹವನ್ನು ಸುಗಮಗೊಳಿಸಲು ಮತ್ತು ಆದಾಯವನ್ನು ಹೆಚ್ಚಿಸಲು ಹೊಸ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸಿದ್ದರು. ಎಂದಿಗೂ ತೆರಿಗೆ ಪಾವತಿಸದ ಆಸ್ತಿ ಮಾಲೀಕರಿಗೆ ಒಂದು ಬಾರಿ ಪರಿಹಾರದ ಆಯ್ಕೆಯನ್ನು ಅವರು ಈ ಯೋಜನೆಯ ಅಡಿಯಲ್ಲಿ ಘೋಷಿಸಿದ್ದರು.

ಆಸ್ತಿ ಮಾಲೀಕರಿಗೆ ಪರಿಹಾರ ನೀಡಲು ಬೆಂಗಳೂರಿನಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆ ಪಾವತಿ ವಿಂಡೋವನ್ನು ಈ ವರ್ಷ ಏಪ್ರಿಲ್ 30ರಿಂದ ಜುಲೈ 31ರವರೆಗೆ ವಿಸ್ತರಿಸಲಾಗಿತ್ತು. ಜುಲೈ 31ರ ಗಡುವು ಮೀರಿದ ಬಳಿಕ ಅವಧಿ ವಿಸ್ತರಣೆಗೆ ಸರ್ಕಾರ ಮುಂದಾಗಿಲ್ಲ.

Property Tax
Property Tax


ಜುಲೈ 31 ರೊಳಗೆ ಬಾಕಿ ಪಾವತಿಸಲು ವಿಫಲರಾದವರನ್ನು ಆಗಸ್ಟ್ 1ರಿಂದ ಸುಸ್ತಿದಾರರೆಂದು ಪರಿಗಣಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಹೆಚ್ಚು ಬಾಕಿ ಯಾವ ವಲಯದ್ದು?

ಮಹದೇವಪುರ ವಲಯವು 60,000ಕ್ಕೂ ಹೆಚ್ಚು ಆಸ್ತಿಗಳೊಂದಿಗೆ ಮುಂಚೂಣಿಯಲ್ಲಿದ್ದು, ಒಟ್ಟು 124.23 ಕೋಟಿ ರೂ. ಬಾಕಿಯನ್ನು ಹೊಂದಿದೆ. ಬೊಮ್ಮನಹಳ್ಳಿ 45,381 ಆಸ್ತಿಗಳಿಂದ 71.10 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಕಿಅಂಶಗಳ ಪ್ರಕಾರ ಏಪ್ರಿಲ್ 1 ರಿಂದ ಜುಲೈ 29 ರ ನಡುವೆ 184.77 ಕೋಟಿ ರೂ. ಮೊತ್ತದ 1,07,344 ಆಸ್ತಿಗಳ ಆಸ್ತಿ ತೆರಿಗೆ ಪಾವತಿಸಲಾಗಿದೆ.

ಇದನ್ನೂ ಓದಿ: BJP Protest: ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಪುನೀತ್‌ ಕೆರೆಹಳ್ಳಿ ಮತ್ತೆ ವಶಕ್ಕೆ, ಪ್ರತಾಪ್‌ ಸಿಂಹ ವಿರುದ್ಧ ದೂರು

ಒಟ್ಟು 282.59 ಕೋಟಿ ರೂ. ಮೊತ್ತದ 16,904 ಆಸ್ತಿಗಳನ್ನು ಒಳಗೊಂಡ ಪರಿಷ್ಕರಣೆ ಪ್ರಕರಣಗಳು 2024ರ ಜುಲೈ 29ರವರೆಗೆ ಬಾಕಿ ಉಳಿದಿವೆ ಎಂದು ಅಂಕಿ ಅಂಶಗಳಿಂದ ಬಹಿರಂಗವಾಗಿದೆ.

ಬಿನ್ನಿಪೇಟೆ, ಬಸವನಗುಡಿ, ಹನುಮಂತನಗರ ಮತ್ತು ಜಯನಗರದಂತಹ ಪ್ರದೇಶಗಳನ್ನು ಒಳಗೊಂಡಿರುವ ಪಶ್ಚಿಮ ವಲಯವು ಅತಿ ಹೆಚ್ಚು ಬಾಕಿ ಉಳಿಸಿಕೊಂಡಿದೆ. ಇವು ಒಟ್ಟು ಸೇರಿ 3,474 ಆಸ್ತಿ ಪ್ರಕರಣಗಳನ್ನು ಒಳಗೊಂಡಿವೆ.

Continue Reading

Latest

Triple Talaq: ವರದಕ್ಷಿಣೆ ತರಲು ನಿರಾಕರಿಸಿದ ಪತ್ನಿಗೆ ವಾಟ್ಸಾಪ್‍ನಲ್ಲೇ ತ್ರಿವಳಿ ತಲಾಖ್!

Triple Talaq: ಮೆಡಿಕಲ್ ಸ್ಟೋರ್ ಮಾಲೀಕನೊಬ್ಬ ತನ್ನ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಆಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನ್ನ ಪತಿ 15 ಲಕ್ಷ ರೂ. ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದ. ಅಷ್ಟು ಹಣ ಕೊಡಲು ಸಾಧ್ಯವಿಲ್ಲ ಎಂದು ಹೇಳಿದಾಗ ವಾಟ್ಸ್‌ಆಪ್‌ನಲ್ಲೇ ತ್ರಿವಳಿ ತಲಾಖ್‌ ನೀಡಿದ್ದಾನೆ. ತಲಾಕ್‌ ವಿರುದ್ಧ ಕಠಿಣ ಕಾಯಿದೆ ಜಾರಿಯಲ್ಲಿದ್ದರೂ ತಲಾಕ್‌ ಪ್ರಕರಣಗಳು ಇನ್ನೂ ಮುಂದುವರಿದಿರುವುದು ಅಚ್ಚರಿ ಮೂಡಿಸಿದೆ.

VISTARANEWS.COM


on

Triple Talaq
Koo


ತ್ರಿವಳಿ ತಲಾಖ್ (Triple Talaq) ಅನ್ನು ನ್ಯಾಯಾಲಯ ನಿಷೇಧಿಸಿದ್ದರೂ ಕೂಡ ಇದನ್ನು ಇಂದಿಗೂ ಅಲ್ಲಲ್ಲಿ ಬಳಸುತ್ತ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ನ್ಯಾಯಾಲಯದ ತೀರ್ಪನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಉತ್ತರ ಪ್ರದೇಶದ ಸಾದತ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂಥ ಘಟನೆಯೊಂದು ನಡೆದಿದೆ.

ಸಾದತ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮೆಡಿಕಲ್ ಸ್ಟೋರ್ ಮಾಲೀಕನೊಬ್ಬ ತನ್ನ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಆಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನ್ನ ಪತಿ 15 ಲಕ್ಷ ರೂ. ವರ ದಕ್ಷಿಣೆಗೆ ಬೇಡಿಕೆ ಇಟ್ಟಿದ್ದಾನೆ. ಅದನ್ನು ವಿರೋಧಿಸಿದಾಗ ಅವನು ತನ್ನ ಮೇಲೆ ಆಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮಹಿಳೆ 2010ರಲ್ಲಿ ಮಲಿಹಾಬಾದ್ ಕಾಸ್ಮಂಡಿ ಕಲಾದ ಸದಾಫ್ ಮುನೀರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆಯಾದ ಕೆಲವೇ ದಿನಗಳಲ್ಲಿ ಆತ ಮೆಡಿಕಲ್ ಸ್ಟೋರ್ ತೆರೆಯಲು 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಅವನ ಬೇಡಿಕೆ ಈಡೇರದಿದ್ದಾಗ, ಗರ್ಭಿಣಿಯಾಗಿದ್ದ ಆಕೆಗೆ ಗರ್ಭಪಾತ ಮಾಡಿಸಲು ಪ್ರಯತ್ನಿಸಿದ್ದಾನೆ. ಅದು ಸಾಧ್ಯವಾಗದಿದ್ದಾಗ ಆಕೆಯನ್ನು ಮನೆಯಿಂದ ಹೊರಹಾಕಿದ್ದಾನೆ. ಆಗ ಆಕೆಯ ಕುಟುಂಬವು ಹೇಗೋ 10 ಲಕ್ಷ ರೂ.ಗಳನ್ನು ವ್ಯವಸ್ಥೆ ಮಾಡಿ ಆತನಿಗೆ ನೀಡಿ ಮತ್ತೆ ಆಕೆಯನ್ನು ಗಂಡನ ಮನೆಗೆ ಕಳುಹಿಸಿತ್ತು.

ಇದನ್ನೂ ಓದಿ: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

ಇಷ್ಟಾದರೂ ಆತ, ಆಗಸ್ಟ್ 2022ರಲ್ಲಿ ಮತ್ತೆ ತನ್ನ ವ್ಯವಹಾರವನ್ನು ವಿಸ್ತರಿಸಲು ಇನ್ನೂ 15 ಲಕ್ಷ ರೂ.ಗಳನ್ನು ತರುವಂತೆ ಒತ್ತಡ ಹೇರಲು ಪ್ರಾರಂಭಿಸಿದ್ದಾನೆ. ಇದನ್ನು ಆಕೆ ನಿರಾಕರಿಸಿದ್ದಕ್ಕೆ ಆಕೆಯನ್ನು ಥಳಿಸಿ ಇಬ್ಬರು ಮಕ್ಕಳ ಜೊತೆ ಆಕೆಯನ್ನು ಮನೆಯಿಂದ ಹೊರಗೆ ಹಾಕಿದ್ದಾನೆ. ನಂತರ ಆಗಸ್ಟ್ 10, 2022ರಂದು ಆತ ವಾಟ್ಸಾಪ್‌ನಲ್ಲೇ ತ್ರಿವಳಿ ತಲಾಖ್ ಸಂದೇಶವನ್ನು ಕಳುಹಿಸಿದ್ದಾನೆ. ಈ ಬಗ್ಗೆ ವಿವರಿಸಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ಅಲ್ಲದೇ ಆಕೆ ಮಕ್ಕಳ ಜೊತೆ ಮತ್ತೆ ಗಂಡನ ಮನೆಗೆ ಬಂದಾಗ ಅವರನ್ನು ಒಳಗೆ ಬಿಡಲಿಲ್ಲ ಮತ್ತು ಆಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಮಹಿಳೆ ತಿಳಿಸಿದ್ದಾಳೆ.

Continue Reading
Advertisement
Ibbani Thabbida Ileyali movie Helu Gelati song released
ಕರ್ನಾಟಕ12 mins ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Ashwini Ponnappa
ಕ್ರೀಡೆ23 mins ago

Ashwini Ponnappa: ‘ಇದು ನನ್ನ ಕೊನೆಯ ಒಲಿಂಪಿಕ್ಸ್​’; ನಿವೃತ್ತಿ ಘೋಷಿಸಿದ ಶಟ್ಲರ್​ ಅಶ್ವಿನಿ ಪೊನ್ನಪ್ಪ

Ismail Haniyeh
ವಿದೇಶ44 mins ago

Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

Mahesh Bhatt said his mother was worried after he gave daughters Muslim names
ಬಾಲಿವುಡ್59 mins ago

Alia Bhatt: ಪುತ್ರಿಯರಿಗೆ ಮುಸ್ಲಿಂ ಹೆಸರುಗಳನ್ನು ಇಟ್ಟಾಗ ನನ್ನ ತಾಯಿಗೆ ಚಿಂತೆಯಾಗಿತ್ತು ಎಂದ ಆಲಿಯಾ ಭಟ್‌ ತಂದೆ!

Jagdeep Dhankhar
ದೇಶ1 hour ago

Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

Paris Olympics Boxing
ಕ್ರೀಡೆ1 hour ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌

Muda Scam
ಕರ್ನಾಟಕ1 hour ago

Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Paris Olympics
ಕ್ರೀಡೆ2 hours ago

Paris Olympic: ಹುಟ್ಟು ಹಬ್ಬದ ದಿನವೇ ಗೆಲುವು ಸಾಧಿಸಿ ಪ್ರೀ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಶ್ರೀಜಾ ಅಕುಲಾ

Indian Navy Recruitment
ಉದ್ಯೋಗ2 hours ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಆ. 2 ಕೊನೆಯ ದಿನ

Pooja Khedkar
ದೇಶ2 hours ago

Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌