Wayanad Landslide: ಮಂಡ್ಯದ 9 ಜನರ ಕುಟುಂಬ ಭೂಕುಸಿತದಲ್ಲಿ ಸಂಪೂರ್ಣ ಕಣ್ಮರೆ - Vistara News

ಮಂಡ್ಯ

Wayanad Landslide: ಮಂಡ್ಯದ 9 ಜನರ ಕುಟುಂಬ ಭೂಕುಸಿತದಲ್ಲಿ ಸಂಪೂರ್ಣ ಕಣ್ಮರೆ

Wayanad Landslide: ಸೋಮವಾರ ನಡೆದ ಭಾರೀ ಭೂಕುಸಿತದಲ್ಲಿ ಮಂಡ್ಯ ಮೂಲದ ಕುಟುಂಬದ 9 ಜನ ಕಾಣೆಯಾಗಿದ್ದಾರೆ. ಈ ಪೈಕಿ ಮೂವರ ಶವಗಳನ್ನು ರಕ್ಷಣಾ ತಂಡಗಳು ಹೊರ ತೆಗೆದಿವೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಈ ಕುಟುಂಬ ಇಲ್ಲಿನ ಟೀ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕರಾಗಿದ್ದರು.

VISTARANEWS.COM


on

wayanad landslide mandya family
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಭಯಾನಕ ವೈನಾಡ್‌ ಭೂಕುಸಿತ (Wayanad Landslide, Kerala Landslide) ದುರಂತದಲ್ಲಿ ಮಂಡ್ಯ ಮೂಲದ ಇಡೀ ಕುಟುಂಬವೇ (Mandya Family swept) ಕೊಚ್ಚಿಹೋಗಿದೆ. 9 ಜನರ ಕುಟುಂಬ ಸಂಪೂರ್ಣ ನಾಶವಾಗಿದ್ದು, ಮೂವರ ಶವ ಪತ್ತೆಯಾಗಿದೆ. ಇನ್ನೂ ಆರು ಮಂದಿಯ ದೇಹಗಳು ಪತ್ತೆಯಾಗಬೇಕಿವೆ.

ಸೋಮವಾರ ನಡೆದ ಭಾರೀ ಭೂಕುಸಿತದಲ್ಲಿ ಮಂಡ್ಯ ಮೂಲದ ಕುಟುಂಬದ 9 ಜನ ಕಾಣೆಯಾಗಿದ್ದಾರೆ. ಈ ಪೈಕಿ ಮೂವರ ಶವಗಳನ್ನು ರಕ್ಷಣಾ ತಂಡಗಳು ಹೊರ ತೆಗೆದಿವೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಈ ಕುಟುಂಬ ಇಲ್ಲಿನ ಟೀ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಸಾವಿತ್ರಿ, ಅವರ ಮೊಮ್ಮಗ ಅಚ್ಚು, ಸವಿತಾ ಎಂಬವರ ಪುತ್ರ ಶ್ರೀಕುಟ್ಟಿ ಸಾವಿಗೀಡಾಗಿರುವುದು ಖಚಿತವಾಗಿದೆ. ಇನ್ನುಳಿದ ಆರು ಜನರಿಗಾಗಿ ಹುಡುಕಾಟ ಮುಂದುವರಿದಿದೆ. ಇವರು ಕೇರಳಕ್ಕೆ ಬಂದು ನೆಲೆಸಿ 30 ವರ್ಷಗಳು ಆಗಿವೆ.

ಒಂದು ಮೆಸೇಜ್‌ನಿಂದ ಉಳಿಯಿತು ಜೀವ! ಪಾರಾದ ಕನ್ನಡಿಗ ಕಾರು ಚಾಲಕ

ಬೆಂಗಳೂರು: ಒಂದು ಅಲರ್ಟ್‌ ಮೆಸೇಜ್‌ ಪರಿಣಾಮ ಕನ್ನಡಿಗ ಕಾರು ಚಾಲಕನೊಬ್ಬ ವೈನಾಡಿನ ರುದ್ರಭಯಾನಕ ಭೂಕುಸಿತದ ನಡುವೆ ಜೀವ ಉಳಿಸಿಕೊಂಡಿದ್ದಾರೆ. ಸಾವಿನೂರಿಂದ ಈತ ಬಚಾವ್ ಆಗಿ ಬಂದದ್ದೇ ರೋಚಕ. ಮಿಡ್‌ನೈಟ್ ಬಂದ ಅದೊಂದು ಮೆಸೇಜ್ ಯುವಕನ ಪ್ರಾಣ ಉಳಿಸಿದ ಕತೆ ಇಲ್ಲಿದೆ.

ಬೆಂಗಳೂರಿನಲ್ಲಿ ಟ್ಯಾಕ್ಸಿ ಡ್ರೈವರ್ ಆಗಿರುವ ಹಾವೇರಿ ಮೂಲದ ಮಂಜುನಾಥ್‌, ಇಬ್ಬರು ಯುವಕರು ಹಾಗೂ ಯುವತಿಯರನ್ನು ಬಾಡಿಗೆ ಕರೆದುಕೊಂಡು ವೈನಾಡ್‌ಗೆ ಹೋಗಿದ್ದರು. ದಂಪತಿಗಳು ಉತ್ತರ ಭಾರತ ಮೂಲದವರು. ಎರಡೂ ಜೋಡಿ ವಯನಾಡ್‌ನ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು.

ಮಂಜುನಾಥ್ ರೆಸಾರ್ಟ್‌ನಿಂದ ಸ್ವಲ್ಪ ದೂರದಲ್ಲಿ ಕಾರು ನಿಲ್ಲಿಸಿ, ಅದೇ ಕಾರಿನಲ್ಲಿ ರಾತ್ರಿ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿ ಒಂದು ಗಂಟೆ 15 ನಿಮಿಷಕ್ಕೆ ಭೂ ಕುಸಿತವಾಗಿದೆ. ಇದರಿಂದ ರೆಸಾರ್ಟ್‌ನಲ್ಲಿದ್ದ ಹಲವರು ಮಣ್ಣುಪಾಲಾಗಿದ್ದಾರೆ. ಆದರೆ ಚಾಲಕ ಇದ್ಯಾವುದರ ಪರಿವೆಯೇ ಇಲ್ಲದೆ ನಿದ್ದೆಗೆ ಜಾರಿದ್ದರು. ಭೂಕುಸಿತದ ಬಳಿಕ ನದಿ ಪಾತ್ರ ವಿಶಾಲವಾಗಿದ್ದು, 15 ಅಡಿ ಅಗಲದ ನದಿ 150 ಅಡಿಗಳಷ್ಟು ಅಗಲವಾಗಿ ಮಣ್ಣು ಕಲ್ಲು ಮರಗಳನ್ನು ತುಂಬಿಕೊಂಡು ಅಬ್ಬರಿಸಿ ಹರಿದಿದೆ. ಮಂಜುನಾಥ್‌ ಕಾರಿಗೂ ಜಲದಿಗ್ಬಂಧನವಾಗಿದೆ.

ನೀರಿನ ಹೊಡೆತಕ್ಕೆ ಕಾರು ಉಲ್ಟಾ ಮುಖ ಮಾಡಿದೆ. ಈ ವೇಳೆ ಚಾಲಕ ತರಾತುರಿಯಲ್ಲಿ ಕಾರ್ ಚಲಾಯಿಸಲು ಮುಂದಾಗಿದ್ದ. ಕಾರು ಆನ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ಕಾರಿನ‌‌ ಮಾಲಕ ಸಚಿನ್‌ಗೆ ಅಲರ್ಟ್‌ ಮೆಸೇಜ್ ಹೋಗಿದೆ. ಸಚಿನ್‌ ಮೊಬೈಲ್‌ನಲ್ಲಿ ಕಾರಿನ ಆಕ್ಸೆಸ್ ಹೊಂದಿದ್ದರು. ಜಿಪಿಎಸ್ ಆನ್ ಆಗುತ್ತಿದ್ದಂತೆ ಆಟೋಮ್ಯಾಟಿಕ್ ಮೆಸೇಜ್ ಬಂದಿತ್ತು. ಹೊತ್ತಲ್ಲದ ಹೊತ್ತಿನಲ್ಲಿ ಗಾಡಿ ಆನ್ ಆದ ಮೆಸೇಜ್ ನೋಡಿ ಮಾಲೀಕ ಚಕಿತರಾಗಿ, ಕೂಡಲೇ ಈ ವಿಚಾರವಾಗಿ ಚಾಲಕನಿಗೆ ಕಾಲ್ ಮಾಡಿದ್ದಾರೆ.

ಈ ವೇಳೆ ಪ್ರವಾಹದ ಬಗ್ಗೆ ಚಾಲಕ ಮಂಜುನಾಥ್‌ ವಿವರಿಸಿದ್ದರು. ಮಂಜುನಾಥ್‌ಗೆ ಧೈರ್ಯ ತುಂಬಿದ್ದ ಮಾಲೀಕ ಸಚಿನ್, ಅದೇ ಜಾಗದಲ್ಲಿದ್ದ ತನ್ನ ಪರಿಚಯಸ್ಥರಿಗೆ ಮಾಹಿತಿ ನೀಡಿದ್ದರು. ಇದರಿಂದ ಚಾಲಕನ ಸಹಾಯಕ್ಕೆ ಜನ ಬಂದಿದ್ದಾರೆ. ನಂತರ ಜಿಪಿಎಸ್ ಟ್ರ್ಯಾಕ್ ಮಾಡಿ ಚಾಲಕನನ್ನು ಕೆಸರು ನೀರಿನ ಮಧ್ಯದಿಂದ ರಕ್ಷಣೆ ಮಾಡಲಾಗಿದೆ. ಬದುಕುಳಿದು ಬಂದಿರುವ ಮಂಜುನಾಥ್‌, ತಮ್ಮನ್ನು ಕಾಪಾಡಿದವರಿಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಯಂಕರ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಭಾಗಕ್ಕೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ಭರ್ಜರಿ (Rain News) ಮಳೆಯಾಗಲಿದ್ದು, 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ (Karnataka Weather Forecast) ವ್ಯಾಪಕ ಮಳೆಯಾಗುತ್ತಿದ್ದು, ಜನರ ನಿದ್ದೆಗೆಡಿಸಿದೆ. ಈ ದಿನ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಮೈಸೂರು, ಚಿಕ್ಕಬಳ್ಳಾಪುರ ಭಾರಿ ಮಳೆ

ದಕ್ಷಿಣಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

ಬೆಳಗಾವಿಯಲ್ಲಿ ಮಧ್ಯಮ ಮಳೆ

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲೂ ಹಗುರ ಮಳೆ

ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ವಿಪರೀತ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ಇರಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜು ರಜೆ

Karnataka Weather Forecast : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮಲೆನಾಡಿನ ಚಿಕ್ಕಮಗಳೂರು, ಕೊಡುಗು ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಗಿನಿಂದಲೂ ಮೋಡ ಕವಿದ ವಾತಾವರಣ ಇತ್ತು. ಸಂಜೆ ಆಗುತ್ತಿದ್ದಂತೆ ಹಲವೆಡೆ (Rain News) ಮಳೆಯಾಗಿದೆ. ಆನಂದ್‌ ರಾವ್‌ ಸರ್ಕಲ್‌, ಶಿವಾಜಿನಗರ, ವಿಧಾನಸೌಧ, ಮೆಜೆಸ್ಟಿಕ್‌ ಸುತ್ತಮುತ್ತ ಮಳೆಯಾಗಿದೆ. ಇನ್ನೂ ಮಲೆನಾಡಿನ ಚಿಕ್ಕಮಗಳೂರಿನಲ್ಲಿ ಧಾರಾಕಾರ (Karnataka Weather Forecast) ಮ‌ಳೆ‌ಯಾಗುತ್ತಿದೆ. ಜು.31ರಂದು ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ‌‌ ಘೋಷಣೆ ಮಾಡಲಾಗಿದೆ.

ಮುಖ್ಯವಾಗಿ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ‌ರಜೆ‌ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇನ್ನೂ ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ.

ಇತ್ತ ಕೊಡಗಿನಲ್ಲೂ ಭಾರಿ ಗಾಳಿ-ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ಒಂದು ದಿನ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿ, ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.

ಧಾರಾಕಾರ ಮಳೆಗೆ ಐತಿಹಾಸಿಕ ರಾಮ ಮಂಟಪ ಮುಳುಗಡೆ

ಶಿವಮೊಗ್ಗದಲ್ಲೂ ಎಡಬಿಡದೆ ವ್ಯಾಪಕ ಮಳೆಯಾಗುತ್ತಿದ್ದು, ಐತಿಹಾಸಿಕ ರಾಮ ಮಂಟಪ ಮುಳುಗಡೆಯಾಗಿದೆ. ತೀರ್ಥಹಳ್ಳಿಯ ತುಂಗಾ ನದಿಯಲ್ಲಿರುವ ರಾಮ ಮಂಟಪ ಮುಳುಗಡೆಯಾಗಿದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇನ್ನೂ ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕ್ಷಣಗಣನೆ ಶುರುವಾಗಿದೆ. ನದಿ ಪಾತ್ರದ ಜನರಿಗೆ ಜಲಾಶಯದ ಅಧಿಕಾರಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸುತ್ತಿದ್ದಾರೆ. ಲಿಂಗನಮಕ್ಕಿ ಮಲೆನಾಡಿನ ಅತಿದೊಡ್ಡ ಜಲಾಶಯವಾಗಿದೆ. ನದಿಪಾತ್ರದ ಜನರಿಗೆ ಕಟ್ಟೇಚ್ಚರ ಘೋಷಣೆ ಮಾಡಲಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನದಿಪಾತ್ರದ ಹಳ್ಳಿಗಳಿಗೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

ನಾಳೆಗೂ ಮಳೆ ಅಬ್ಬರ

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳ ಪ್ರತ್ಯೇಕ ಕಡೆ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬೆಳಗಾವಿ ಮತ್ತು ಮೈಸೂರಿನಲ್ಲೂ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka rain : ಚಿಕ್ಕಮಗಳೂರಿನ ಭದ್ರಾ ನದಿಯ ಅಬ್ಬರಕ್ಕೆ ಮತ್ತೊಂದು ಹಸು ಕೊಚ್ಚಿ ಹೋದರೆ, ಬೈಂದೂರಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪ್ರತ್ಯಕ್ಷಗೊಂಡಿದೆ. ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ಇದ್ದರೆ, ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಗೆ (Karnataka rain) ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಮತ್ತೊಂದು ಹಸು ಬಲಿಯಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಘಟನೆ ನಡೆದಿದೆ. ಹೆಬ್ಬಾಳ ಸೇತುವೆ ಮೇಲೆ 5-6 ಅಡಿ ನೀರು ಹರಿಯುತ್ತಿದ್ದು, ಸೇತುವೆ ತುದಿಯಲ್ಲಿದ್ದ ಹಸು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಳೆದ ವಾರವೂ ಹಸುವೊಂದು ಇದೇ ಸೇತುವೆ ಮೇಲೆ ಕೊಚ್ಚಿ ಹೋಗಿತ್ತು. ಇದೀಗ ಮತ್ತೊಂದು ಹಸು ನೋಡನೋಡುತ್ತಿದ್ದಂತೆ ಕೊಚ್ಚಿ ಹೋಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಣ್ಣೂರ ಬಳಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆ ಇದಾಗಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಮೇಲೆ ಮಾತ್ರ ವಾಹನಗಳು ಸಂಚಾರಿಸುತ್ತಿವೆ. ಮಲಪ್ರಭಾ ನದಿಗೆ 5,000 ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಕೊಣ್ಣೂರು, ವಾಸನ, ಲಖಮಾಪುರ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತ

ಕ್ಷಣ ಕ್ಷಣಕ್ಕೂ ನೇತ್ರಾವತಿ ನದಿ ನೀರಿನ ಹರಿವು ಏರಿಕೆ ಆಗುತ್ತಿದ್ದು, ಬಂಟ್ವಾಳದ ಮಣಿಹಳ್ಳದ ಕಡವಿನಬಾಗಿಲು ಬಳಿ ಏಳು ಮನೆಗಳು ಜಲಾವೃತಗೊಂಡಿದೆ. ನದಿ ನೆರೆ ನೀರಿನಿಂದ ಮನೆಗಳು ಮುಳುಗಿದೆ. ಅಪಾಯದ ಮಟ್ಟವನ್ನು ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು, ಮನೆಗಳು ಕುಸಿಯುವ ಭೀತಿ ಇದೆ. ಮನೆಯಂಗಳದಲ್ಲಿ ಎದೆ ಮಟ್ಟದಲ್ಲಿ ಹರಿಯುತ್ತಿದೆ. ಬಂಟ್ವಾಳದ ಹಲವು ಭಾಗಗಳಲ್ಲಿ ಭಾರೀ ನೆರೆ ಸೃಷ್ಟಿಯಾಗಿದೆ. ಶಂಭೂರು ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿದೆ. ಸ್ಥಳೀಯ ನಿವಾಸಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಬೈಂದೂರಿನಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ

ಉಡುಪಿಯ ಬೈಂದೂರು ತಾಲೂಕಿನ ನಾಗೂರು ಉಡುಪರ ಹಿತ್ತಲಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪತ್ತೆಯಾಗಿದೆ. ತೋಟದಲ್ಲಿ ಸಿಹಿ ನೀರಿನ ಬಾವಿಯಲ್ಲಿ ಮೊಸಳೆ ತೇಲಾಡುತ್ತಿತ್ತು. ಮೊಸಳೆ ನೋಡಿ ಹೌಹಾರಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳು ಕಾಣ ಸಿಗುವುದೇ ಅಪರೂಪ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಾಗೂರಿನ ರತ್ನಾಕರ ಉಡುಪ ಎನ್ನುವವರ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯುವ ಯತ್ನದಲ್ಲಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮೊಸಳೆ ತೇಲಿ ಬಂದಿರುವ ಶಂಕೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

Yakshagana Artist: ಯುವ ಯಕ್ಷಗಾನ ಕಲಾವಿದ ನೇಣು ಬಿಗಿದುಕೊಂಡು ಆತ್ಮಹತ್ಯೆಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

VISTARANEWS.COM


on

By

yakshagana artist
Koo

ಉಡುಪಿ: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ (Yakshagana Artist) ನೇಣಿಗೆ (Self Harming) ಶರಣಾಗಿದ್ದಾರೆ. ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ಆತ್ಮಹತ್ಯೆ ಮಾಡಿಕೊಂಡವರು. ಕಲಾವಿದ ಗುರುಪ್ರಸಾದ್ ಉಡುಪಿಯ ಬ್ರಹ್ಮಾವರ ತಾಲೂಕು ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು.

ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಹೀಗೆ ಹಲವು ಮೇಳಗಳಲ್ಲಿ ಸೇವೆ ನೀಡಿದ್ದರು. ಬಹುತೇಕ ಸ್ತ್ರೀ ಪಾತ್ರಗಳ ಮೂಲಕವೇ ಗುರುಪ್ರಸಾದ್ ಪ್ರಚಾರದಲ್ಲಿದ್ದರು. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

yakshagana artist
yakshagana artist

ಇದನ್ನೂ ಓದಿ: Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

ಮಂಡ್ಯದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು

ಮಂಡ್ಯದ ಹನಕೆರೆ ಗ್ರಾಮದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಮೃತಪಟ್ಟಿದ್ದಾರೆ. ಹನಕೆರೆ ಗ್ರಾಮದಿಂದ ಮಂಡ್ಯ ಕಡೆ ತೆರಳುವ ಮಾರ್ಗದಲ್ಲಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಾರಸುದಾರರು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮೈಸೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pooja Khedkar
ದೇಶ2 mins ago

Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಹುದ್ದೆ ರದ್ದು, ಪರೀಕ್ಷೆಯಿಂದ ಯುಪಿಎಸ್‌ಸಿ ಬ್ಯಾನ್!

krishna byre gowda
ಪ್ರಮುಖ ಸುದ್ದಿ14 mins ago

Krishna Byre Gowda: ರಾಜ್ಯಪಾಲರ ಅಧಿಕಾರ ದುರುಪಯೋಗಪಡಿಸಿಕೊಂಡರೆ ಕೋರ್ಟ್‌ಗೆ ಹೋಗುತ್ತೇವೆ: ಕೃಷ್ಣಭೈರೇಗೌಡ

Money Guide
ಮನಿ-ಗೈಡ್19 mins ago

Money Guide: PPF v/s NPS Vatsalya ನಿಮ್ಮ ಮಕ್ಕಳಿಗೆ ಯಾವುದು ಉತ್ತಮ ಯೋಜನೆ? ಇಲ್ಲಿದೆ ವಿವರ

Vinay Guruji met by master anand brother
ಸ್ಯಾಂಡಲ್ ವುಡ್21 mins ago

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Anurag Thakur
ದೇಶ26 mins ago

Anurag Thakur: ಅನುರಾಗ್‌ ಠಾಕೂರ್‌ ‘ಜಾತಿ’ ಅಸ್ತ್ರಕ್ಕೆ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಪ್ರತ್ಯಸ್ತ್ರ!

Viral Video
Latest27 mins ago

Viral Video: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

Paris Olympic
ಕ್ರೀಡೆ28 mins ago

Paris Olympic: ಪ್ರೀ ಕ್ವಾರ್ಟರ್​ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್; ಜೊನಾಥನ್​ ಕ್ರಿಸ್ಟಿಗೆ ಆಘಾತಕಾರಿ ಸೋಲು

Wayanad Landslide
ದೇಶ31 mins ago

Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

DK Shivakumar
ಕರ್ನಾಟಕ36 mins ago

DK Shivakumar: ಪ್ರಧಾನಿ ಮೋದಿ ಭೇಟಿಯಾದ ಡಿಕೆಶಿ; ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಬೇಡಿಕೆ

Viral Video
Latest37 mins ago

Viral Video: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ22 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌