Emmanuel Macron: ಕ್ರೀಡಾ ಸಚಿವೆಗೆ ಎಲ್ಲರೆದುರೇ ಚುಂಬಿಸಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌-ವಿಡಿಯೋ ಇದೆ - Vistara News

ವಿದೇಶ

Emmanuel Macron: ಕ್ರೀಡಾ ಸಚಿವೆಗೆ ಎಲ್ಲರೆದುರೇ ಚುಂಬಿಸಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌-ವಿಡಿಯೋ ಇದೆ

Emmanuel Macron: ವಿಡಿಯೋದಲ್ಲಿ ಅಮೆಲಿ, ಒಂದು ಕೈಯಲ್ಲಿ ಮ್ಯಾಕ್ರಾನ್‌ ಅವರನ್ನು ಬಳಸಿ, ಅವರ ಕತ್ತಿಗೆ ಮುತ್ತಿಕ್ಕಿದ್ದಾರೆ. ಈ ಸಂದರ್ಭದಲ್ಲಿ ಫ್ರಾನ್ಸ್‌ ಪ್ರಧಾನಿ ಗ್ಯಾಬ್ರಿಯಲ್‌ ಅಟ್ಟಲ್‌ ಕೂಡ ಉಪಸ್ಥಿತರಿದ್ದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಎಕ್ಸ್‌ನಲ್ಲಿ 4 ಮಿಲಿಯನ್ ವೀಕ್ಷಣೆಗಳನ್ನು ಪಡೆದಿವೆ. ಈ ವಿಡಿಯೋಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Emmanuel Macron
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್‌: ಫ್ರಾನ್ಸ್‌ ಅಧ್ಯಕ್ಷ(France President) ಇಮಾನ್ಯುಯೆಲ್‌ ಮ್ಯಾಕ್ರಾನ್(Emmanuel Macron) ತಮ್ಮ ಕ್ರೀಡಾ ಸಚಿವೆಗೆ ತುಂಬಿದ ಸಭೆಯಲ್ಲಿ ಚುಂಬಿಸಿರುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಶುಕ್ರವಾರ 2024ರ ಒಲಿಂಪಿಕ್‌ ಕ್ರೀಡಾಕೂಟ(2024 Olympics)ದ ಉದ್ಘಾಟನಾ ಸಮಾರಂಭದಲ್ಲಿ ಮ್ಯಾಕ್ರಾನ್‌, ಕ್ರೀಡಾ ಸಚಿವೆ ಅಮೆಲಿ ಔಡಿಯಾ-ಕ್ಯಾಸ್ಟೆರಾ(Amélie Oudéa-Castéra) ಅವರಿಗೆ ಚುಂಬಿಸಿರುವ ವಿಡಿಯೋ ಎಲ್ಲೆಡೆ ವೈರಲ್‌(Vira video) ಆಗುತ್ತಿದೆ.

ವಿಡಿಯೋದಲ್ಲಿ ಅಮೆಲಿ, ಒಂದು ಕೈಯಲ್ಲಿ ಮ್ಯಾಕ್ರಾನ್‌ ಅವರನ್ನು ಬಳಸಿ, ಅವರ ಕತ್ತಿಗೆ ಮುತ್ತಿಕ್ಕಿದ್ದಾರೆ. ಈ ಸಂದರ್ಭದಲ್ಲಿ ಫ್ರಾನ್ಸ್‌ ಪ್ರಧಾನಿ ಗ್ಯಾಬ್ರಿಯಲ್‌ ಅಟ್ಟಲ್‌ ಕೂಡ ಉಪಸ್ಥಿತರಿದ್ದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಎಕ್ಸ್‌ನಲ್ಲಿ 4 ಮಿಲಿಯನ್ ವೀಕ್ಷಣೆಗಳನ್ನು ಪಡೆದಿವೆ. ಈ ವಿಡಿಯೋಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ.

ಇದು ಕೇವಲ ಅಭಿನಂದಿಸುವ ವಿಧಾನ ಅಷ್ಟೇ ಎಂದು ಒಬ್ಬ ನೆಟ್ಟಿಗರ ಕಮೆಂಟ್‌ ಮಾಡಿದ್ದಾರೆ. ಈ ರೀತಿಯಾಗಿ ನಾನು ನನ್ನ ಪ್ರೇಯಸಿಗೆ ಕಿಸ್‌ ಮಾಡುತ್ತೇನೆ..ಇದು ಅತ್ಯಂತ ಮುಜುಗರಕ್ಕೀಡು ಮಾಡುವಂತಹ ಘಟನೆ ಎಂದು ಮತ್ತೊರ್ವ ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಮ್ಯಾಕ್ರನ್‌ ಪತ್ನಿ ಈ ಘಟನೆಗೆ ಹೇಗೆ ರಿಯಾಕ್ಟ್‌ ಮಾಡಬಹುದೆಂಬ ಮೀಮ್ಸ್‌ ಪೋಸ್ಟ್‌ ಮಾಡಿದ್ದಾರೆ.

ಕಳೆದ ಭಾರಿ ಮ್ಯಾಕ್ರಾನ್‌ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಜೊತೆಗೂಡಿ ಚಹಾ ಸೇವಿಸಿದ್ದರು. ಜೈಪುರದ ಹವಾ ಮಹಲ್ ಬಳಿಯ ಅಂಗಡಿಯಲ್ಲಿ ಮ್ಯಾಕ್ರಾನ್ ಮತ್ತು ಮೋದಿ ಕುಲ್ಹಾಡ್ ಚಹಾ ಸೇವಿಸಿದ್ದರು. ಮೋದಿ ಅದಕ್ಕೆ ತಮ್ಮ ಫೋನ್‌ನಲ್ಲಿ ಯುಪಿಐ ಬಳಸಿ ಚಹಾಕ್ಕೆ ಹಣ ಪಾವತಿಸಿದ್ದರು. ಮ್ಯಾಕ್ರಾನ್ ಇದನ್ನು ಆಶ್ಚರ್ಯಚಕಿತರಾಗಿ ವೀಕ್ಷಿಸಿದರು. ಅಂಗಡಿ ಮಾಲೀಕರು ತಮ್ಮ ಫೋನ್‌ನಲ್ಲಿ ಪಾವತಿಯ ದೃಢೀಕರಣ ಪಡೆದಿದ್ದನ್ನು ಸಹ ಮೋದಿ ತಮಗೆ ತೋರಿಸಿದರು ಎಂದು ಮ್ಯಾಕ್ರಾನ್‌ ಬಳಿಕ ಸ್ಮರಿಸಿದ್ದರು.

ಭಾರತದಿಂದ UPI ಅನ್ನು ಅಳವಡಿಸಿಕೊಳ್ಳಲು ಫ್ರಾನ್ಸ್ ಬಲವಾದ ಆಸಕ್ತಿಯನ್ನು ತೋರಿಸಿದೆ. ಜುಲೈನಲ್ಲಿ ಮೋದಿಯವರು ಫ್ರಾನ್ಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಐಫೆಲ್ ಟವರ್‌ನಿಂದ ಪ್ರಾರಂಭವಾಗುವ ಯುಪಿಐ ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಮತ್ತು ಫ್ರಾನ್ಸ್ ಒಪ್ಪಿಕೊಂಡಿವೆ. ಫ್ರಾನ್ಸ್‌ನಲ್ಲಿರುವ ಭಾರತೀಯ ಪ್ರವಾಸಿಗರು ಈಗ ರೂಪಾಯಿಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುತ್ತದೆ ಎಂದು ಮೋದಿ ಹೇಳಿದ್ದರು. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎನ್‌ಸಿಪಿಐ) ಅಂತಾರಾಷ್ಟ್ರೀಯ ಅಂಗವು ಯುಪಿಐ ಮತ್ತು ರುಪೇ ಸ್ವೀಕರಿಸಲು ಫ್ರಾನ್ಸ್‌ನ ಲೈರಾ ನೆಟ್‌ವರ್ಕ್‌ನೊಂದಿಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿತ್ತು.

ಇದನ್ನೂ ಓದಿ: Abhinav Bindra : ಭಾರತದ ಶೂಟರ್ ಅಭಿನವ್ ಬಿಂದ್ರಾಗೆ ‘ಒಲಿಂಪಿಕ್​ ಆರ್ಡರ್’ ಗೌರವ​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್‌ ಮುಗಿಸಿದ್ದೇಕೆ?

ಇರಾನ್‌ನಲ್ಲಿ ಇಸ್ರೇಲ್‌ನಿಂದ ಹತ್ಯೆಗೀಡಾಗಿರುವ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ (Ismail Haniyeh) ಹಲವು ದಾಳಿಗಳನ್ನು ನಡೆಸಿದ್ದ ಉಗ್ರ ನಾಯಕ. ಮಧ್ಯಪ್ರಾಚ್ಯ ರಾಜಕೀಯ ಬಿಕ್ಕಟ್ಟಿನಲ್ಲಿ ಪ್ರಮುಖ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಹನಿಯೆಹ್ ಪ್ಯಾಲೇಸ್ಟಿನಿಯನ್ ಪ್ರಾಧಿಕಾರದ ಸರ್ಕಾರದ ಪ್ರಧಾನ ಮಂತ್ರಿಯಾಗಿದ್ದಾಗಲೂ ಒಮ್ಮೆ ಈತನ ಮೇಲೆ ದಾಳಿ ನಡೆದಿತ್ತು. ಆಗ ಈತ ಪಾರಾಗಿದ್ದ. ಆದರೆ ಈಗ ಇಸ್ರೇಲ್‌ ಈತನ ಕತೆ ಮುಗಿಸಿದೆ. ಈತನ ಹಿನ್ನೆಲೆಯ ಚಿತ್ರಣ ಇಲ್ಲಿದೆ.

VISTARANEWS.COM


on

By

Ismail Haniyeh
Koo

ಇರಾನ್‌ನ (Iran) ಟೆಹ್ರಾನ್‌ನಲ್ಲಿ (Tehran) ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ (Ismail Haniyeh) ಮತ್ತು ಅವರ ಅಂಗರಕ್ಷಕನೊಬ್ಬನನ್ನು ಇಸ್ರೇಲ್‌ ಹತ್ಯೆ ಮಾಡಿರುವುದು ಭಾರೀ ಸಂಚಲನ ಮೂಡಿಸಿದೆ. ಪ್ಯಾಲೇಸ್ಟಿನಿಯನ್ ಉಗ್ರಗಾಮಿ (Palestinian militant group) ತಂಡ ಬುಧವಾರ ಇದನ್ನು ಖಚಿತಪಡಿಸಿದೆ. ಟೆಹ್ರಾನ್‌ನಲ್ಲಿರುವ ಇಸ್ಮಾಯಿಲ್‌ ನಿವಾಸದ ಮೇಲೆ ದಾಳಿ ನಡೆದಿದ್ದು ಈ ವೇಳೆ ಇಸ್ಮಾಯಿಲ್ ಹನಿಯೆಹ್ ಕೊಲ್ಲಲ್ಪಟ್ಟಿದ್ದಾನೆ. ಈ ನಟೋರಿಯಸ್‌ ಇಸ್ಮಾಯಿಲ್‌ ಯಾರು ಎಂಬ ಮಾಹಿತಿ ಇಲ್ಲಿದೆ.

ಇಸ್ಮಾಯಿಲ್ ಹನಿಯೆಹ್ ಯಾರು?

ಮಧ್ಯಪ್ರಾಚ್ಯ ರಾಜಕೀಯ ವಲಯದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಇಸ್ಮಾಯಿಲ್ ಹನಿಯೆಹ್ ಗಾಜಾದ ಶತಿ ನಿರಾಶ್ರಿತರ ಶಿಬಿರದಲ್ಲಿ 1963ರಲ್ಲಿ ಜನಿಸಿದ್ದ. ವಿಶ್ವಸಂಸ್ಥೆಯ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಈತ 1987ರಲ್ಲಿ ಅರೇಬಿಕ್ ಸಾಹಿತ್ಯದಲ್ಲಿ ಗಾಜಾದ ಇಸ್ಲಾಮಿಕ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದಿದ್ದ. ವಿಶ್ವವಿದ್ಯಾನಿಲಯದಲ್ಲಿದ್ದಾಗ ಹಮಾಸ್‌ ಉಗ್ರಗಾಮಿ ಸಂಘಟನೆ ಜತೆ ಸೇರಿಕೊಂಡಿದ್ದ.

ಮೊದಲ ಬಾರಿಗೆ ಇಸ್ಮಾಯಿಲ್ ಹನಿಯೆಹ್ ಇಂತಿಫಾಡಾದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ. ಇದಕ್ಕಾಗಿ ಇಸ್ರೇಲಿ ಮಿಲಿಟರಿ ನ್ಯಾಯಾಲಯದಿಂದ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಜೈಲಿನಿಂದ ಹೊರಬಂದ ಬಳಿಕ ಆಕ್ರಮಿತ ಪ್ಯಾಲೇಸ್ಟಿನಿಯನ್ ಪ್ರಾಂತ್ಯಗಳ ಇಸ್ರೇಲ್ ಮಿಲಿಟರಿ ಅಧಿಕಾರಿಗಳು ಹನಿಯೆಹ್‌ನನ್ನು ಹಿರಿಯ ಹಮಾಸ್ ನಾಯಕರಾದ ಅಬ್ದೆಲ್-ಅಜೀಜ್ ಅಲ್-ರಾಂಟಿಸ್ಸಿ, ಮಹಮೂದ್ ಜಹರ್, ಅಜೀಜ್ ದುವೈಕ್ ಮತ್ತು ಇತರ 400 ಕಾರ್ಯಕರ್ತರೊಂದಿಗೆ ಲೆಬನಾನ್‌ಗೆ ಗಡಿಪಾರು ಮಾಡಿದರು.

1997ರಲ್ಲಿ ಇಸ್ರೇಲ್ ಹಮಾಸ್ ಸಂಸ್ಥಾಪಕ ಅಹ್ಮದ್ ಯಾಸಿನ್ ಅವರನ್ನು ಬಿಡುಗಡೆ ಮಾಡಿದ ಅನಂತರ ಈತನನ್ನು ಹಮಾಸ್ ಕಚೇರಿಯ ಮುಖ್ಯಸ್ಥನನ್ನಾಗಿ ನೇಮಿಸಲಾಯಿತು. 2005ರ ಡಿಸೆಂಬರ್‌ನಲ್ಲಿ ಹನಿಯೆಹ್ ಹಮಾಸ್ ಮುಖ್ಯಸ್ಥನಾಗಿ ಆಯ್ಕೆಯಾದ. 2006ರ ಶಾಸಕಾಂಗ ಚುನಾವಣೆಯಲ್ಲಿ ಹಮಾಸ್‌ನ ಗೆಲುವಿನ ಅನಂತರ ಹನಿಯೆಹ್ ಪ್ಯಾಲೇಸ್ಟಿನಿಯನ್ ಪ್ರಾಧಿಕಾರದ ಸರ್ಕಾರದ ಪ್ರಧಾನ ಮಂತ್ರಿಯಾದ.

ಇದನ್ನೂ ಓದಿ: Ismail Haniyeh: ಇಸ್ರೇಲ್‌ನಿಂದ ಪ್ರತೀಕಾರದ ಎಚ್ಚರಿಕೆ ಬೆನ್ನಲ್ಲೇ ಹಮಾಸ್‌ ನಾಯಕ ಇಸ್ಮಾಯಿಲ್ ಹನಿಯೆಹ್ ಬರ್ಬರ ಹತ್ಯೆ

ಫತಾಹ್- ಹಮಾಸ್ ಘರ್ಷಣೆಯ ನಡುವೆಯೇ 2006ರಲ್ಲಿ ಪ್ರಧಾನಿಯಾಗಿದ್ದ ಹನಿಯೆಹ್ ವಿದೇಶದಲ್ಲಿ ತನ್ನ ಮೊದಲ ಅಧಿಕೃತ ಪ್ರವಾಸದಿಂದ ಹಿಂದಿರುಗುತ್ತಿದ್ದಾಗ ರಫಾ ಬಾರ್ಡರ್ ಕ್ರಾಸಿಂಗ್‌ನಲ್ಲಿ ಈಜಿಪ್ಟ್‌ನಿಂದ ಗಾಜಾಕ್ಕೆ ಪ್ರವೇಶವನ್ನು ನಿರಾಕರಿಸಲ್ಪಟ್ಟ. ಅನಂತರ ಈತ ಗಡಿ ದಾಟಲು ಪ್ರಯತ್ನಿಸಿದಾಗ, ಗುಂಡಿನ ಚಕಮಕಿ ನಡೆದು ಒಬ್ಬ ಅಂಗರಕ್ಷಕ ಮೃತಪಟ್ಟು, ಹನಿಯೆಹ್ ಹಿರಿಯ ಮಗ ಗಾಯಗೊಂಡಿದ್ದ.

2007ರಲ್ಲಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅಧಿಕಾರಕ್ಕೆ ಬಂದಾಗ ಹನಿಯೆಹ್‌ನನ್ನು ಹುದ್ದೆಯಿಂದ ವಜಾಗೊಳಿಸಿದರು. ಇದು ಫತಾಹ್ ಮತ್ತು ಹಮಾಸ್ ಬಣಗಳ ನಡುವಿನ ರಾಜಕೀಯ ಸಂಘರ್ಷವನ್ನು ಹೆಚ್ಚಿಸಿತ್ತು. 2016ರ ಚುನಾವಣೆಯಲ್ಲಿ ಈತ ಹಮಾಸ್‌ನ ಮುಖ್ಯ ನಾಯಕ ಖಲೀದ್ ಮಶಾಲ್‌ನ ಉತ್ತರಾಧಿಕಾರಿಯಾಗಿದ್ದ. ಈತ ಇಸ್ರೇಲ್‌ ಭಾರೀ ತಲೆ ನೋವಾಗಿದ್ದ. ಹಾಗಾಗಿ ಇಸ್ರೇಲ್‌ ತಂತ್ರಜ್ಞಾನಗಳನ್ನೆಲ್ಲ ಬಳಸಿ ಪ್ಲ್ಯಾನ್‌ ಮಾಡಿ ಈತನ ಕತೆ ಮುಗಿಸಿದೆ.

Continue Reading

ವಿದೇಶ

Ismail Haniyeh: ಇಸ್ರೇಲ್‌ನಿಂದ ಪ್ರತೀಕಾರದ ಎಚ್ಚರಿಕೆ ಬೆನ್ನಲ್ಲೇ ಹಮಾಸ್‌ ನಾಯಕ ಇಸ್ಮಾಯಿಲ್ ಹನಿಯೆಹ್ ಬರ್ಬರ ಹತ್ಯೆ

Ismail Haniyeh: ಈ ಬಗ್ಗೆ ಹಮಾಸ್‌ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ಯಾಲೆಸ್ಟೈನ್ ಹೋರಾಟಗಾರ ಗುಂಪು ಹಮಾಸ್’ನಹಮಾಸ್ ರಾಜಕೀಯ ಬ್ಯೂರೋ ಮುಖ್ಯಸ್ಥರಾದ ಇಸ್ಮಾಯಿಲ್ ಹನಿಯೆಹ್ ಅವರನ್ನು ಟೆಹ್ರಾನ್‌’ನಲ್ಲಿ ಹತ್ಯೆ ಮಾಡಲಾಗಿದೆ ಘಟನೆಯಲ್ಲಿ ಅವರ ಅಂಗ ರಕ್ಷಕ ಕೂಡ ಹತರಾಗಿದ್ದಾರೆ ಇರಾನ್ ಅಧ್ಯಕ್ಷರಾಗಿ ಚುನಾಯಿತರಾದ ಮಸೂದ್ ಪೆಜೆಶ್ಕಿಯಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ಟೆಹ್ರಾನ್‌ನಲ್ಲಿದ್ದರು.

VISTARANEWS.COM


on

Ismail Haniyeh
Koo

ಟೆಹ್ರಾನ್‌: ಸುಮಾರು ಒಂದು ವರ್ಷದಿಂದ ಹಮಾಸ್‌ ಉಗ್ರರು ಮತ್ತು ಇಸ್ರೇಲ್‌ ನಡುವೆ ನಿರಂತರ ಯುದ್ಧ ನಡೆಯುತ್ತಿದೆ (Israel Hamas War). ಇದೀಗ ಇಸ್ರೇಲ್‌ ಸೇನೆ ನಡೆಸಿದ ದಾಳಿಯಲ್ಲಿ ಹಮಾಸ್‌ನ ಹಿರಿಯ ನಾಯಕ ಇಸ್ಮಾಯಿಲ್ ಹನಿಯೆಹ್(Ismail Haniyeh) ಮತ್ತು ಅವರ ಅಂಗರಕ್ಷಕರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಹಮಾಸ್‌ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ಯಾಲೆಸ್ಟೈನ್ ಹೋರಾಟಗಾರ ಗುಂಪು ಹಮಾಸ್’ನಹಮಾಸ್ ರಾಜಕೀಯ ಬ್ಯೂರೋ ಮುಖ್ಯಸ್ಥರಾದ ಇಸ್ಮಾಯಿಲ್ ಹನಿಯೆಹ್ ಅವರನ್ನು ಟೆಹ್ರಾನ್‌’ನಲ್ಲಿ ಹತ್ಯೆ ಮಾಡಲಾಗಿದೆ ಘಟನೆಯಲ್ಲಿ ಅವರ ಅಂಗ ರಕ್ಷಕ ಕೂಡ ಹತರಾಗಿದ್ದಾರೆ ಇರಾನ್ ಅಧ್ಯಕ್ಷರಾಗಿ ಚುನಾಯಿತರಾದ ಮಸೂದ್ ಪೆಜೆಶ್ಕಿಯಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ಟೆಹ್ರಾನ್‌ನಲ್ಲಿದ್ದರು. ಸಮಾರಂಭದ ಬಳಿಕ ಮತೊರ್ವ ಹಮಾಸ್‌ ನಾಯಕ ಆಯತೊಲ್ಲಾ ಖಹಮೆನ್‌ ಅವರನ್ನು ಭೇಟಿಯಾಗಿದ್ದರು.

ಇದಾದ ಬಳಿಕ ಅವ ಇಸ್ಮಾಯಿಲ್ ಹನಿಯೆಹ್ ಅವರ ನಿವಾಸವನ್ನು ಟೆಹ್ರಾನ್‌ನಲ್ಲಿ ಹೊಡೆದುರುಳಿಸಲಾಯಿತು ಮತ್ತು ಈ ಘಟನೆಯ ಪರಿಣಾಮವಾಗಿ, ಅವರು ಮತ್ತು ಅವರ ಅಂಗರಕ್ಷಕರಲ್ಲಿ ಒಬ್ಬರು ಹುತಾತ್ಮರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನು ಮೇಲ್ನೋಟಕ್ಕೆ ಈ ದಾಳಿ ಇಸ್ರೇಲ್‌ ಸೇನೆ ನಡೆಸಿರುವಂತೆ ಕಾಣುತ್ತಿದೆಯಾದರೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. IRGC ಹೇಳಿಕೆಯು ಹಮಾಸ್ ನಾಯಕನ ಸಾವಿಗೆ ಪ್ಯಾಲೆಸ್ಟೈನ್ ಜನರಿಗೆ, ಮುಸ್ಲಿಂ ಜಗತ್ತು ಮತ್ತು ರೆಸಿಸ್ಟೆನ್ಸ್ ಫ್ರಂಟ್‌ನ ಹೋರಾಟಗಾರರು ಸಂತಾಪ ಸೂಚಿಸಿದೆ.

ಶನಿವಾರ ಇಸ್ರೇಲ್‌ ನಿಯಂತ್ರಣದಲ್ಲಿರುವ ಗೋಲಾನ್‌ ಹೈಟ್ಸ್‌ ಪ್ರದೇಶದ ಮೇಲೆ ಹಿಜ್ಬುಲ್ಲಾ (Hezbollah) ಭಯೋತ್ಪಾದಕ ಸಂಘಟನೆ ನಡೆಸಿದ ರಾಕೆಟ್‌ ದಾಳಿಯಲ್ಲಿ ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಪ್ರತಿಕಾರ ತೀರಿಸುವುದಾಗಿ ಇಸ್ರೇಲ್‌ ಶಪಥ ಕೈಗೊಂಡಿತ್ತು.

ಲೆಬನಾನ್‌ನಿಂದ ಹಾರಿಸಲಾದ ರಾಕೆಟ್ ಗೋಲನ್ ಹೈಟ್ಸ್‌ನ ಉತ್ತರದ ಡ್ರೂಜ್ ಪಟ್ಟಣವಾದ ಮಜ್ಡಾಲ್ ಶಾಮ್ಸ್‌ನಲ್ಲಿರುವ ಫುಟ್‌ಬಾಲ್ ಮೈದಾನಕ್ಕೆ ಅಪ್ಪಳಿಸಿ ಅಲ್ಲಿ ಆಟವಾಡುತ್ತಿದ್ದ ಮಕ್ಕಳು ಸೇರಿದಂತೆ ಹಲವರನ್ನು ಬಲಿ ಪಡೆದುಕೊಂಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu), ಇದಕ್ಕೆ ಹೆಜ್ಬುಲ್ಲಾ ಸಂಘಟನೆ ಭಾರಿ ಬೆಲೆ ತೆರೆಬೇಕಾಗುತ್ತದೆ ಎಂದು ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಆದರೆ ಹಿಜ್ಬುಲ್ಲಾ ಈ ರಾಕೆಟ್ ದಾಳಿಯನ್ನು ನಿರಾಕರಿಸಿದೆ.

ದಾಳಿಯ ಹಿನ್ನೆಲೆಯಲ್ಲಿ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಇಸ್ರೇಲ್‌ಗೆ ಧಾವಿಸಿದ್ದರು.

ಇದನ್ನೂ ಓದಿ:Narayana Murthy: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ: ನಾರಾಯಣಮೂರ್ತಿ ಹೊಸ ವಾದ!

Continue Reading

Latest

Street Girlfriends: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

Street Girlfriends: ಕೆಲವೊಮ್ಮೆ ಹೆಗಲ ಮೇಲೆ ಬಿದ್ದ ಜವಾಬ್ದಾರಿಗಳ ಹೊರೆ ಯಾವುದೇ ಕೆಲಸವಾದರೂ ಸೈ ಅನ್ನುವ ಹಾಗೇ ಮಾಡುತ್ತದೆ. ಇದಕ್ಕೆ ನಿದರ್ಶನವೆಂಬಂತೆ ಚೀನಾದಲ್ಲಿ ಈಗ ಸ್ಟ್ರೀಟ್ ಗರ್ಲ್‌ಫ್ರೆಂಡ್‌ ಟ್ರೆಂಡ್ ಹುಟ್ಟಿಕೊಂಡಿದೆ. ಚೀನಾದ ಯುವತಿಯರು ಹಣಕ್ಕಾಗಿ ಮುತ್ತು ಕೊಡುವುದು, ಅಪ್ಪಿಕೊಳ್ಳುವುದು, ಒಟ್ಟಿಗೆ ಸಿನಿಮಾ ನೋಡುವುದು, ಮನೆಗೆಲಸಕ್ಕೆ ಸಹಾಯ ಮಾಡುವುದು, ಒಟ್ಟಿಗೆ ಮದ್ಯಪಾನ ಮಾಡುವುದು ಮುಂತಾದವುಗಳ ಮೂಲಕ ಯುವಕರನ್ನು ಆಕರ್ಷಿಸುತ್ತಿದ್ದಾರೆ. ಆದರೆ ಇದರಲ್ಲಿ ಮಹಿಳೆಯರು ಯಾವುದೇ ರೀತಿಯ ದೈಹಿಕ ಸಂಬಂಧ ಹೊಂದುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

VISTARANEWS.COM


on

Viral News
Koo


ಕೆಲವು ಜನರ ಪರಿಸ್ಥಿತಿ ಹೇಗಿರುತ್ತದೆ ಅಂದರೆ ಜೀವನ ನಡೆಸಲು ಒಂದು ದಿನದ ಊಟಕ್ಕೂ ಪರದಾಡಬೇಕಾಗುತ್ತದೆ. ತಮ್ಮ ಜೊತೆಗೆ ತಮ್ಮ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಂಡರ ಕತೆ ಇನ್ನೂ ಶೋಚನೀಯವಾಗಿದೆ. ಹಾಗಾಗಿ ಚೀನಾದಲ್ಲಿ ಕೆಲಸದ ಜೊತೆಗೆ ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸುವ ಒತ್ತಡ ಚೀನಾದ ಯುವತಿಯರಿಗೆ ಹೆಚ್ಚಾಗಿದ್ದ ಪರಿಣಾಮ ಅವರು ಬೀದಿಯಲ್ಲಿ ಹೋಗುವ ದಾರಿಹೋಕರ ಜೊತೆ ಭಾವನಾತ್ಮಕ ಸಂಪರ್ಕಗಳನ್ನು ಬೆಳೆಸುವ ವ್ಯಾಪಾರ ಮಾಡುತ್ತಿದ್ದಾರೆ. ಹುಡುಗಿಯರು ಹಣಕ್ಕಾಗಿ ಇಂತಹ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Street Girlfriends) ಆಗಿದೆ.

Viral News
Viral News

ಚೀನಾದ ಯುವತಿಯರು ಹಣಕ್ಕಾಗಿ ಮುತ್ತು ಕೊಡುವುದು, ಅಪ್ಪಿಕೊಳ್ಳುವುದು, ಒಟ್ಟಿಗೆ ಸಿನಿಮಾ ನೋಡುವುದು, ಮನೆಗೆಲಸಕ್ಕೆ ಸಹಾಯ ಮಾಡುವುದು, ಒಟ್ಟಿಗೆ ಮದ್ಯಪಾನ ಮಾಡುವುದು ಮುಂತಾದವುಗಳ ಮೂಲಕ ಯುವಕರನ್ನು ಆಕರ್ಷಿಸುತ್ತಿದ್ದಾರೆ. ಆದರೆ ಇದರಲ್ಲಿ ಮಹಿಳೆಯರು ಯಾವುದೇ ರೀತಿಯ ದೈಹಿಕ ಸಂಬಂಧ ಹೊಂದುವುದಿಲ್ಲ ಎಂಬುದಾಗಿ ಖಡಕ್‌ ಹಾಕಿ ತಿಳಿಸುತ್ತಿದ್ದಾರೆ. ಬೀದಿಗಳಲ್ಲಿ ಕುಳಿತ ಯುವತಿಯರು ಒಂದು ಬೋರ್ಡ್‌ನಲ್ಲಿ ದರಗಳನ್ನು ಪಟ್ಟಿ ಮಾಡಿದ್ದಾರೆ ಮತ್ತು ಅದರ ಜೊತೆಗೆ ‘ನೋ ಸೆಕ್ಸ್’ ಎಂದು ಸ್ಪಷ್ಟವಾಗಿ ಬರೆದಿದ್ದಾರೆ. ಇವರದೇನಿದ್ದರೂ ʼಸ್ಪರ್ಶ ಸುಖʼದ ವ್ಯವಹಾರ ಮಾತ್ರ!

Viral News
Viral News

ಇತ್ತೀಚೆಗೆ, ಖ್ಯಾತ ಇಂಟರ್ನೆಟ್ ಬಳಕೆದಾರರು ಶೆನ್ಜೆನ್‍ನ ಗದ್ದಲದ ಬೀದಿಗಳಲ್ಲಿ ಯುವತಿಯರ ಈ ರೀತಿಯ ವ್ಯಾಪಾರವನ್ನು ನೋಡಿದ್ದಾರೆ. ಯುವತಿಯರು ಹಣಕ್ಕಾಗಿ ಬೀದಿಯಲ್ಲಿ ಅಪ್ಪುಗೆ, ಚುಂಬನ ಮುಂತಾದವುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡಿದ್ದು, ಚರ್ಚೆಗೆ ಕಾರಣವಾಗಿದೆ. ಶೆನ್ಜೆನ್‍ನ ಸುರಂಗಮಾರ್ಗ ನಿಲ್ದಾಣದ ಪಕ್ಕದಲ್ಲಿ, ಯುವತಿಯೊಬ್ಬಳು “ಅಪ್ಪುಗೆಗೆ ಒಂದು ಯುವಾನ್ (14 ಯುಎಸ್ ಸೆಂಟ್ಸ್), ಚುಂಬನಕ್ಕಾಗಿ 10 ಯುವಾನ್, ಒಟ್ಟಿಗೆ ಚಲನಚಿತ್ರವನ್ನು ವೀಕ್ಷಿಸಲು 15 ಯುವಾನ್, ಮನೆಕೆಲಸಗಳಲ್ಲಿ ಸಹಾಯ ಮಾಡಲು 20 ಯುವಾನ್ (ಯುಎಸ್ $ 2.8), ನಿಮ್ಮೊಂದಿಗೆ ಕುಡಿಯಲು ಗಂಟೆಗೆ 40 ಯುವಾನ್” ಎಂಬ ಫಲಕದೊಂದಿಗೆ ಸ್ಟಾಲ್ ಅನ್ನು ಹಾಕಿದ್ದಾಳೆ. ಆಕೆಯ ಜೊತೆಗೆ ಇತರ ಇಬ್ಬರು ಮಹಿಳೆಯರು ಈ ಫಲಕದೊಂದಿಗೆ ಪಾದಚಾರಿಗಳು ನಡೆದಾಡುವ ಬೀದಿ ಚೌಕದಲ್ಲಿ ಮಳಿಗೆಗಳನ್ನು ಸ್ಥಾಪಿಸಿದ್ದಾರೆ ಎನ್ನಲಾಗಿದೆ. ಇದರಿಂದ ಅವರು ದಿನಕ್ಕೆ 100 ಯುವಾನ್ ಗಳಿಸಬಹುದು ಎಂದು ವರದಿಯಾಗಿದೆ. 1 ಯುವಾನ್‌ ಅಂದರೆ 11.55 ರೂಪಾಯಿ.

Viral News
Viral News

ಸ್ಟ್ರೀಟ್ ಗರ್ಲ್‌ಫ್ರೆಂಡ್‌ ಸೋಶಿಯಲ್ ಮೀಡಿಯಾದಲ್ಲಿ ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. “ಇದರಿಂದ ಈ ಹುಡುಗಿಯರು ವಾರಾಂತ್ಯದಲ್ಲಿ ಸಮಯವನ್ನು ಕಳೆಯಬಹುದು ಮತ್ತು ಅನೇಕ ಆಸಕ್ತಿದಾಯಕ ಜನರನ್ನು ಭೇಟಿಯಾಗಬಹುದು. ನಾನು ಅವರೊಂದಿಗೆ ಚಾಟ್ ಮಾಡಲು ಪ್ರಯತ್ನಿಸಲು ಇಷ್ಟಪಡುತ್ತೇನೆ” ಎಂದು ಒಬ್ಬರು ಬರೆದಿದ್ದಾರೆ.

“ಸ್ಟ್ರೀಟ್ ಗರ್ಲ್‌ಫ್ರೆಂಡ್ ಚಟುವಟಿಕೆಯು ಗ್ರಾಹಕರು ಮತ್ತು ಹುಡುಗಿಯರಿಬ್ಬರಿಗೂ ಸ್ವಯಂಪ್ರೇರಿತವಾಗಿದೆ. ಅಲ್ಲದೆ, ಒತ್ತಡವನ್ನು ನಿವಾರಿಸಲು ಮತ್ತು ಸಾಮಾಜಿಕವಾಗಿ ಬೆರೆಯಲು ಇದನ್ನು ಒಂದು ಮಾರ್ಗವೆಂದು ಪರಿಗಣಿಸಬಹುದು” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ. ಆದರೆ ಇನ್ನೊಬ್ಬರು “ಮಹಿಳೆಯರ ಒಡನಾಟಕ್ಕೆ ಬೆಲೆ ತೆರುವುದು ಅಗೌರವ ಮತ್ತು ಅವರ ಘನತೆಯನ್ನು ದುರ್ಬಲಗೊಳಿಸುತ್ತದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

“ಇದು ಕಾನೂನುಬಾಹಿರವಾಗಿರಬಹುದು. ಹುಡುಗಿಯರು ತಮ್ಮ ಸುರಕ್ಷತೆಯ ಬಗ್ಗೆ ಎಚ್ಚರಿಕೆ ವಹಿಸಬೇಕು” ಎಂದು ಇನ್ನೊಬ್ಬ ವ್ಯಕ್ತಿ ಹೇಳಿದ್ದಾರೆ. ಈ ಬಗ್ಗೆ ವಕೀಲರೊಬ್ಬರು ಪೋಸ್ಟ್ ಮಾಡಿ, “ಸ್ಟ್ರೀಟ್ ಗರ್ಲ್‍ಫ್ರೆಂಡ್’ ಸೇವೆಯು ಪ್ರಸ್ತುತ ಅಸ್ತಿತ್ವದಲ್ಲಿರುವ ಕಾನೂನುಗಳ ಚೌಕಟ್ಟಿನ ಹೊರಗೆ ಕಾರ್ಯನಿರ್ವಹಿಸುತ್ತದೆ ಮತ್ತು ಇದು ವೇಶ್ಯಾವಾಟಿಕೆ ಅಥವಾ ಲೈಂಗಿಕ ಸೇವಾ ವಹಿವಾಟುಗಳಾಗಿ ರೂಪಾಂತರಗೊಳ್ಳುವ ಅಪಾಯವನ್ನು ಹೊಂದಿದೆ ಎಂಬುದಾಗಿ ತಿಳಿಸಿದ್ದಾರೆ.

Continue Reading

ವಿದೇಶ

Pavel Durov: ಮದುವೆಯಾಗದೆ 100 ಮಕ್ಕಳಿಗೆ ತಂದೆಯಾದ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್! ಈತ ರಿಯಲ್‌ ಲೈಫ್‌ ‘ವಿಕ್ಕಿ ಡೋನರ್’

Pavel Durov: 15 ವರ್ಷದ ಹಿಂದೆ ನನ್ನ ಗೆಳೆಯನೊಬ್ಬ ವಿಚಿತ್ರ ಮನವಿಯೊಂದಿಗೆ ನನ್ನ ಬಳಿ ಬಂದ. ಫಲವತ್ತತೆ (Fertility) ಸಮಸ್ಯೆಯಿಂದ ಬಳಲುತ್ತಿದ್ದು, ನಾನು ನನ್ನ ಹೆಂಡತಿ ಮಕ್ಕಳನ್ನು ಹೊಂದಲು ನೀನು ವೀರ್ಯ ದಾನ ಮಾಡಬೇಕು ಎಂದ. ಇದೆಲ್ಲ ತಮಾಷೆ ಎಂಬುದಾಗಿ ನಾನು ನಕ್ಕೆ. ಆದರೆ, ಆತ ಸೀರಿಯಸ್‌ ಆಗಿದ್ದ ಎಂಬುದಾಗಿ ಪಾವೆಲ್‌ ದುರೋವ್‌ ಅವರು ವೀರ್ಯದಾನದ ಕುರಿತ ಕುತೂಹಲಕರ ಸಂಗತಿಯೊಂದನ್ನು ಬಹಿರಂಗಪಡಿಸಿದ್ದಾರೆ.

VISTARANEWS.COM


on

Pavel Durov
Koo

ಮಾಸ್ಕೋ: ವಾಟ್ಸ್‌ಆ್ಯಪ್‌ ರೀತಿಯ ಮೆಸೆಂಜರ್‌ ಆ್ಯಪ್‌ ಆಗಿರುವ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್‌ (Pavel Durov) ಅವರು ಸ್ಫೋಟಕ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. “ನಾನು ಮದುವೆಯನ್ನೇ ಆಗದೆ 100 ಮಕ್ಕಳ ತಂದೆಯಾಗಿದ್ದೇನೆ” ಎಂದು ಟೆಲಿಗ್ರಾಂ ಆ್ಯಪ್‌ನಲ್ಲಿಯೇ (Telegram App) ಹಂಚಿಕೊಂಡಿದ್ದಾರೆ. ಹೌದು, ವೀರ್ಯ ದಾನದ ಮೂಲಕ ಪಾವೆಲ್‌ ದುರೋವ್‌ ಅವರು 100 ಮಕ್ಕಳ ಜನನಕ್ಕೆ ಕಾರಣರಾಗಿದ್ದಾರೆ. ಆ ಮೂಲಕ ಬಾಲಿವುಡ್‌ ನಟ ಆಯುಷ್ಮಾನ್‌ ಖುರಾನ ನಟನೆಯ ವಿಕ್ಕಿ ಡೋನರ್‌ ಸಿನಿಮಾದಂತೆ 39 ವರ್ಷದ ಪಾವೆಲ್‌ ದುರೋವ್‌ ಕೂಡ ನಿಜ ಜೀವನದ ವಿಕ್ಕಿ ಡೋನರ್‌ ಎನಿಸಿದ್ದಾರೆ.

“ನಾನು 100 ಮಕ್ಕಳ ತಂದೆ ಎಂಬುದಾಗಿ ತಿಳಿಸಿದ್ದಾರೆ. ಒಮ್ಮೆಯೂ ಮದುವೆಯಾಗದ, ಏಕಾಂಗಿಯಾಗಿಯೇ ಬದುಕಲು ಇಚ್ಛಿಸಿರುವ ನನಗೆ ಇದು ಹೇಗೆ ಸಾಧ್ಯ” ಎಂದು ಅವರು ಪ್ರಶ್ನೆ ಹಾಕಿದ್ದಾರೆ. ಬಳಿಕ ಇದು ಹೇಗೆ ಸಾಧ್ಯ ಎಂಬುದನ್ನು ವಿವರಿಸಿದ್ದಾರೆ. “15 ವರ್ಷದ ಹಿಂದೆ ನನ್ನ ಗೆಳೆಯನೊಬ್ಬ ವಿಚಿತ್ರ ಮನವಿಯೊಂದಿಗೆ ನನ್ನ ಬಳಿ ಬಂದ. ಫಲವತ್ತತೆ (Fertility) ಸಮಸ್ಯೆಯಿಂದ ಬಳಲುತ್ತಿದ್ದು, ನಾನು ನನ್ನ ಹೆಂಡತಿ ಮಕ್ಕಳನ್ನು ಹೊಂದಲು ನೀನು ವೀರ್ಯ ದಾನ ಮಾಡಬೇಕು” ಎಂದ. “ಇದೆಲ್ಲ ತಮಾಷೆ ಎಂಬುದಾಗಿ ನಾನು ನಕ್ಕೆ. ಆದರೆ, ಆತ ಸೀರಿಯಸ್‌ ಆಗಿದ್ದ” ಎಂಬುದಾಗಿ ಪಾವೆಲ್‌ ದುರೋವ್‌ ತಿಳಿಸಿದ್ದಾರೆ.

“ಮಕ್ಕಳ ಜನನಕ್ಕೆ ಕಾರಣವಾಗುವ ಸಾಮರ್ಥ್ಯ ಇರುವ ವ್ಯಕ್ತಿಯಿಂದ ವೀರ್ಯ ಪಡೆಯಬೇಕು ಎಂಬುದಾಗಿ ವೈದ್ಯರು ಹೇಳಿದ್ದಾರೆ” ಎಂದು ಗೆಳೆಯ ಮನವರಿಕೆ ಮಾಡಿದ. “ವೈದ್ಯರು ಕೂಡ ವೀರ್ಯ ದಾನ ಮಾಡುವುದು ನಾಗರಿಕ ಕರ್ತವ್ಯವಾಗಿದೆ” ಎಂಬುದಾಗಿ ನನ್ನನ್ನು ಒಪ್ಪಿಸಿದರು. “ವೈದ್ಯರು ಮನವರಿಕೆ ಮಾಡಿದ ಬಳಿಕ ನಾನು ವೀರ್ಯ ದಾನ ಮಾಡುತ್ತಲೇ ಬಂದೆ. ಈಗ ನಾನು 100 ಮಕ್ಕಳ ಜನನಕ್ಕೆ ಕಾರಣನಾಗಿದ್ದೇನೆ” ಎಂಬುದಾಗಿ ಟೆಲಿಗ್ರಾಂನಲ್ಲಿ ಪಾವೆಲ್‌ ದುರೋವ್‌ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

“ನಿಯಮಿತವಾಗಿ ನಾನು ವೀರ್ಯವನ್ನು ದಾನ ಮಾಡುತ್ತಲೇ ಬಂದೆ. ಸುಮಾರು 12 ದೇಶಗಳಲ್ಲಿ 100ಕ್ಕೂ ಅಧಿಕ ಮಕ್ಕಳು ನನ್ನಿಂದಾಗಿ ಜನಿಸಿದ್ದಾರೆ ಎಂಬ ಸಂಗತಿ ಗೊತ್ತಾಯಿತು. ಕೆಲ ವರ್ಷಗಳ ಹಿಂದೆ ನಾನು ವೀರ್ಯವನ್ನು ದಾನ ಮಾಡುವುದನ್ನು ನಿಲ್ಲಿಸಿದೆ. ಆದರೆ, ಐವಿಎಫ್‌ ಕ್ಲಿನಿಕ್‌ಗಳಲ್ಲಿ ಈಗಲೂ ನನ್ನ ವೀರ್ಯವನ್ನು ಸಂಗ್ರಹಿಸಿ ಇಟ್ಟಿದ್ದಾರೆ. ನನ್ನ ವೀರ್ಯದಿಂದ ಮಕ್ಕಳು ಜನಿಸುವ ಚಟುವಟಿಕೆಯು ನಡೆಯುತ್ತಲೇ ಇದೆ. ನಾನು ಮಾಡಿದ ಕೆಲಸಕ್ಕೆ ನನಗೆ ಹೆಮ್ಮೆ ಇದೆ. ಬೇರೆಯವರು ಕೂಡ ಇದನ್ನು ಮಾಡಬೇಕು ಎಂಬುದಾಗಿ ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Rajendra Nagar Tragedy: ನೆಲಮಾಳಿಗೆ ಗೇಟ್‌ಗೆ SUV ಕಾರು ಡಿಕ್ಕಿ ಹೊಡೆದಿದ್ದ ಚಾಲಕ ಅರೆಸ್ಟ್‌- ವಿಡಿಯೋ ವೈರಲ್‌

Continue Reading
Advertisement
Mahesh Bhatt said his mother was worried after he gave daughters Muslim names
ಬಾಲಿವುಡ್2 mins ago

Alia Bhatt: ಪುತ್ರಿಯರಿಗೆ ಮುಸ್ಲಿಂ ಹೆಸರುಗಳನ್ನು ಇಟ್ಟಾಗ ನನ್ನ ತಾಯಿಗೆ ಚಿಂತೆಯಾಗಿತ್ತು ಎಂದ ಆಲಿಯಾ ಭಟ್‌ ತಂದೆ!

Jagdeep Dhankhar
ದೇಶ8 mins ago

Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

Paris Olympics Boxing
ಕ್ರೀಡೆ8 mins ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌

Muda Scam
ಕರ್ನಾಟಕ23 mins ago

Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Paris Olympics
ಕ್ರೀಡೆ42 mins ago

Paris Olympic: ಹುಟ್ಟು ಹಬ್ಬದ ದಿನವೇ ಗೆಲುವು ಸಾಧಿಸಿ ಪ್ರೀ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಶ್ರೀಜಾ ಅಕುಲಾ

Indian Navy Recruitment
ಉದ್ಯೋಗ1 hour ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಆ. 2 ಕೊನೆಯ ದಿನ

Pooja Khedkar
ದೇಶ1 hour ago

Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

krishna byre gowda
ಪ್ರಮುಖ ಸುದ್ದಿ1 hour ago

Krishna Byre Gowda: ರಾಜ್ಯಪಾಲರ ಅಧಿಕಾರ ದುರುಪಯೋಗಪಡಿಸಿಕೊಂಡರೆ ಕೋರ್ಟ್‌ಗೆ ಹೋಗುತ್ತೇವೆ: ಕೃಷ್ಣಭೈರೇಗೌಡ

Money Guide
ಮನಿ-ಗೈಡ್1 hour ago

Money Guide: PPF v/s NPS Vatsalya ನಿಮ್ಮ ಮಕ್ಕಳಿಗೆ ಯಾವುದು ಉತ್ತಮ ಯೋಜನೆ? ಇಲ್ಲಿದೆ ವಿವರ

Vinay Guruji met by master anand brother
ಸ್ಯಾಂಡಲ್ ವುಡ್1 hour ago

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ23 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌