Actor Darshan: ನಟ ದರ್ಶನ್‌ಗೆ ಆ. 20ರವರೆಗೆ ಜೈಲೂಟವೇ ಫಿಕ್ಸ್‌; ವಿಚಾರಣೆ ಮುಂದೂಡಿದ ಹೈಕೋರ್ಟ್ - Vistara News

ಪ್ರಮುಖ ಸುದ್ದಿ

Actor Darshan: ನಟ ದರ್ಶನ್‌ಗೆ ಆ. 20ರವರೆಗೆ ಜೈಲೂಟವೇ ಫಿಕ್ಸ್‌; ವಿಚಾರಣೆ ಮುಂದೂಡಿದ ಹೈಕೋರ್ಟ್

Actor Darshan: ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ. ಹೀಗಾಗಿ ಇನ್ನೂ 21 ದಿನ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಕರ್ನಾಟಕ ಕಾರಾಗೃಹಗಳ ಕಾಯ್ದೆ ಓದುತ್ತಾ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ ಅವರು, ಮ್ಯಾನ್ಯುವಲ್ ಪ್ರಕಾರ ವಿಚಾರಣಾಧೀನ ಕೈದಿಗೆ ಸ್ವಂತ ಖರ್ಚಿನಲ್ಲಿ ಖಾಸಗಿ ಊಟ ಪಡೆಯೋದಕ್ಕೆ ಅವಕಾಶ ಇದೆ. ಅಧೀನ ನ್ಯಾಯಾಲಯ ಇಲ್ಲಿ ಆ್ಯಕ್ಟ್‌ಗಿಂತ ಮ್ಯಾನ್ಯುಯಲ್ ಬಗ್ಗೆ ಪರಿಗಣಿಸಿದೆ. ಕರ್ನಾಟಕ ಪ್ರಿಸನ್ಸ್ ಆ್ಯಕ್ಟ್ 1963 ಅನ್ನು ಪರಿಗಣಸಿಯೇ ಇಲ್ಲ. ಸೆಕ್ಷನ್ 30ರಡಿಯಲ್ಲಿ ಮನೆ ಊಟ ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.

ಇನ್ನು ದರ್ಶನ್‌ಗೆ ಅನಾರೋಗ್ಯವಾಗಿರುವ ಬಗ್ಗೆ ವರದಿ ಇದೆ. ಜೈಲಿನ ಮುಖ್ಯ ಆರೋಗ್ಯಾಧಿಕಾರಿ ವರದಿ ನೀಡಿದ್ದಾರೆ ಎಂದು ವಕೀಲರು ಹೇಳಿದ್ದಕ್ಕೆ, ಪ್ರತಿ ವಿಚಾರಣಾಧೀನ ಕೈದಿಯೂ ಈ ಸಮಸ್ಯೆ ಎದುರಿಸುತ್ತಾರೆ. ಅವರು ಮನುಷ್ಯರೇ ಅಲ್ಲವೇ ಎಂದು ಜಡ್ಜ್ ಪ್ರಶ್ನೆ ಮಾಡಿದರು. ನ್ಯೂಟ್ರಿಷನ್ ಕೊರತೆ ಇದ್ದರೆ ಜೈಲಿನ ವೈದ್ಯಾಧಿಕಾರಿ ಪ್ರಿಸ್ಕ್ರಿಪ್ಷನ್ ನೀಡುತ್ತಾರೆ ಎಂದು ಹೇಳಿದರು. ಡಾಕ್ಟರ್ ಏನು ಹೇಳುತ್ತಾರೋ ಅದನ್ನು ಜೈಲಿನಲ್ಲಿ ನೀಡಲಾಗುತ್ತದೆ. ಸೆಕ್ಷನ್ 30ರ ಬಗ್ಗೆ ಹೇಳಲು ಅವಕಾಶ ಇದೆ. ಆದರೆ ಮನೆ ಊಟದ ಬಗ್ಗೆ ಯಾಕೆ ಎಂದು ಜಡ್ಜ್‌ ಪ್ರಶ್ನಿಸಿದರು.

ಇದನ್ನೂ ಓದಿ | Actor Darshan: ಜೈಲಿನ ಊಟ ನಂಗಂತೂ ಸಖತ್‌ ಇಷ್ಟ ಆಗಿತ್ತು , ದರ್ಶನ್‌ಗೆ ಯಾಕೆ ಕಷ್ಟ ಆಗ್ತಿದೆ ಎಂದ ಚೇತನ್‌ ಅಹಿಂಸಾ!

ಈ ವೇಳೆ ವೈದ್ಯಾಧಿಕಾರಿಗಳು, ದರ್ಶನ್‌ ಅನಾರೋಗ್ಯದ ಬಗ್ಗೆ ವರದಿಯನ್ನು ನೀಡಿದ್ದಾರೆ ಎಂದು ಪ್ರಭುಲಿಂಗ ನಾವದಗಿ ಉತ್ತರಿಸಿ, ಜೈಲಿನ ಮುಖ್ಯ ಆರೋಗ್ಯ ಅಧಿಕಾರಿಯ ವೈದ್ಯಕೀಯ ವರದಿ ಸಲ್ಲಿಸಿದರು. ಡಾಕ್ಟರ್ ಇದಕ್ಕಾಗಿಯೇ ಸ್ಪೆಸಿಫಿಕ್ ಆಗಿ ಹೇಳಿರಬೇಕು ಅಲ್ವಾ? ಆಗ ಮಾತ್ರ ಪರಿಗಣನೆಗೆ ಅವಕಾಶ ಇದೆ ಎಂದು ಜಡ್ಜ್‌ ಹೇಳಿದರು.

ಈ ವೇಳೆ ಎಸ್‌ಪಿಸಿ ಎಸ್‌ಪಿಪಿ ಬೆಳ್ಳಿಯಪ್ಪ ವಾದ ಮಂಡಿಸಿ, ದರ್ಶನ್‌ಗೆ ಫುಡ್ ಪಾಯಿಸನ್ ಆಗಿಲ್ಲ ಅನ್ನೋ ವೈದ್ಯಕೀಯ ವರದಿ ಇದೆ. ಅದರೂ ನಾವು ಎರಡು ವಾರ ನ್ಯೂಟ್ರಿಷನ್ ಫುಡ್ ನೀಡುತ್ತೇವೆ. ವೈದ್ಯಾಧಿಕಾರಿ ಸೂಚನೆ ಪಾಲಿಸಲು ಸಿದ್ಧ ಎಂದು ಹೇಳಿದರು.

ವಾದ- ಪ್ರತಿವಾದ ಆಲಿಸಿದ ಬಳಿಕ ಮಾತನಾಡಿದ ಜಡ್ಜ್‌ ನ್ಯಾ. ನಾಗ ಪ್ರಸನ್ನ ಅವರು, ಕೈದಿಗಳಲ್ಲಿ ಯಾವುದೇ ಶ್ರೀಮಂತ, ಬಡವ, ವಿಐಪಿ, ಪೊಲಿಟಿಕಲ್ ಪ್ರಿಸನ್ ಅಂತ ಬರಲ್ಲಾ, ಎಲ್ಲರೂ ಕೈದಿಗಳೇ ಅಭಿಪ್ರಾಯಪಟ್ಟು, ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದರು. ಇದೇ ವೇಳೆ ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದರು.

ಇದನ್ನೂ ಓದಿ | Dog Meat Controversy: ಅಬ್ದುಲ್‌ ರಜಾಕ್‌ ತಂದಿರೋದು ಕುರಿ ಮಾಂಸ, ‌ಖಚಿತಪಡಿಸಿದ ಲ್ಯಾಬ್‌ ವರದಿ: ಆಹಾರ ಇಲಾಖೆ ಆಯುಕ್ತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

Paris Olympics Archery: ಬುಧವಾರ ನಡೆದ ಮಹಿಳೆಯರ ವೈಯಕ್ತಿಕ ಎಲಿಮಿನೇಷನ್‌ ಸುತ್ತಿನ ಮೊದಲ ಪಂದ್ಯದಲ್ಲಿ ದೀಪಿಕಾ ಅವರು ಎಸ್ಟೋನಿಯಾದ ರೀನಾ ಪರ್ನಾಟ್‌ ವಿರುದ್ಧ 6-5(29-28, 26-27, 27-27, 24-27, 30-27) ಅಂತರದಿಂದ ಗೆದ್ದು ದ್ವಿತೀಯ ಸುತ್ತಿಗೆ ಪ್ರವೇಶ ಪಡೆದರು. ಆ ಬಳಿಕ ನಡೆದ 2ನೇ ಸುತ್ತಿನಲ್ಲಿ ನೆದರ್ಲ್ಯಾಂಡ್ಸ್​ನ ಕ್ವಿಂಟಿ ರೋಫೆನ್ ಅವರನ್ನು 6-2 ಅಂತರದಿಂದ ಮಣಿಸಿ ಪ್ರಿ ಕ್ವಾರ್ಟರ್‌ಗೆ ಲಗ್ಗೆ ಇಟ್ಟರು.

VISTARANEWS.COM


on

Paris Olympics Archery
Koo

ಪ್ಯಾರಿಸ್​: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ ಭಾರತದ ಸ್ಟಾರ್‌ ಬಿಲ್ಗಾರ್ತಿ ದೀಪಿಕಾ ಕುಮಾರಿ(Deepika Kumari) ಅವರು ಪ್ರೀ-ಕ್ವಾರ್ಟರ್​ ಫೈನಲ್(Paris Olympics Archery)​ ಪ್ರವೇಶಿಸುವ ಮೂಲಕ ತಮ್ಮ ಪದಕದ ಆಸೆಯನ್ನು ಜೀವಂತವಿರಿಸಿದ್ದಾರೆ. ಇದಕ್ಕೂ ಮುನ್ನ ಮಂಗಳವಾರ ನಡೆದಿದ್ದ ಮಹಿಳೆಯರ ರೀಕರ್ವ್ ವೈಯಕ್ತಿಕ ವಿಭಾಗದದಲ್ಲಿ ಭಜನ್ ಕೌರ್(Bhajan Kaur) ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು. ಸದ್ಯ ಮಹಿಳೆಯರ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತಕ್ಕೆ ಇಬ್ಬರು ಬಿಲ್ಗಾರ್ತಿಯರು ಪದಕ ಭರವಸೆ ಮೂಡಿಸಿದಂತಾಗಿದೆ.

ಬುಧವಾರ ನಡೆದ ಮಹಿಳೆಯರ ವೈಯಕ್ತಿಕ ಎಲಿಮಿನೇಷನ್‌ ಸುತ್ತಿನ ಮೊದಲ ಪಂದ್ಯದಲ್ಲಿ ದೀಪಿಕಾ ಅವರು ಎಸ್ಟೋನಿಯಾದ ರೀನಾ ಪರ್ನಾಟ್‌ ವಿರುದ್ಧ 6-5(29-28, 26-27, 27-27, 24-27, 30-27) ಅಂತರದಿಂದ ಗೆದ್ದು ದ್ವಿತೀಯ ಸುತ್ತಿಗೆ ಪ್ರವೇಶ ಪಡೆದರು. ಆ ಬಳಿಕ ನಡೆದ 2ನೇ ಸುತ್ತಿನಲ್ಲಿ ನೆದರ್ಲ್ಯಾಂಡ್ಸ್​ನ ಕ್ವಿಂಟಿ ರೋಫೆನ್ ಅವರನ್ನು 6-2 ಅಂತರದಿಂದ ಮಣಿಸಿ ಪ್ರಿ ಕ್ವಾರ್ಟರ್‌ಗೆ ಲಗ್ಗೆ ಇಟ್ಟರು.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ದೀಪಿಕಾ ಕುಮಾರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೊರಿಯಾದ ಆಟಗಾರ್ತಿಯ ವಿರುದ್ಧ ದೀಪಿಕಾ ಸೋಲನುಭವಿಸಿ ನಿರಾಸೆ ಎದುರಿಸಿದ್ದರು. 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಮೊದಲ ಸುತ್ತಿನಲ್ಲಿ, ರಿಯೋ ಒಲಿಂಪಿಕ್ಸ್​ನಲ್ಲಿ ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಮುಗ್ಗರಿಸಿದ್ದರು. ಆದರೆ, ಈ ಬಾರಿ ಪದಕ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದಾರೆ.

ದೀಪಿಕಾ ಅವರು ಪ್ರೀ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ವಿಶ್ವದ 13 ಶ್ರೇಯಾಂಕದ ಜರ್ಮನಿಯ ಮಿಚೆಲ್ ಕ್ರೊಪ್ಪೆನ್ ಅವರ ಸವಾಲು ಎದುರಿಸಲಿದ್ದಾರೆ. ಭಜನ್ ಕೌರ್ ಇಂಡೋನೇಷ್ಯಾದ ಡಯಾನಂದ ಚೋರುನಿಸಾ ವಿರುದ್ಧ ಸೆಣಸಾಡಲಿದ್ದಾರೆ.

ಮಂಗಳವಾರ ನಡೆದಿದ್ದ ಮಹಿಳೆಯರ ರೀಕರ್ವ್ ವೈಯಕ್ತಿಕ ವಿಭಾಗದದಲ್ಲಿ 18 ವರ್ಷದ ಭಜನ್ ಕೌರ್ ಮೊದಲ ಸುತ್ತಿನಲ್ಲಿ ಇಂಡೋನೇಷ್ಯಾದ ಕಮಲ್ ಸೈಫಾ ವಿರುದ್ದ 7-3 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿ, ಆ ಬಳಿಕ ನಡೆದ 2ನೇ ಸುತ್ತಿನಲ್ಲಿ ಪೋಲೆಂಡ್‌ನ ಮೈಜೊರ್ ರನ್ನು 6-0ರಲ್ಲಿ ಮಣಿಸಿ ಪ್ರಿ ಕ್ವಾರ್ಟರ್‌ಗೆ ಲಗ್ಗೆಯಿಟ್ಟಿದ್ದರು.

ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌


ವಿಶ್ವ ಚಾಂಪಿಯನ್‌, ಟೋಕಿಯೋ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌(Lovlina Borgohain) ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ(Paris Olympics Boxing) ಪದಕ ಗೆಲ್ಲುವ ವಿಶ್ವಾಸದಲ್ಲಿದೆ. ಇಂದು(ಬುಧವಾರ) ನಡೆದ 75 ಕೆ.ಜಿ. ವಿಭಾಗದ 16ರ ಸುತ್ತಿನ ಬಾಕ್ಸಿಂಗ್​ ಹೋರಾಟದಲ್ಲಿ ನಾರ್ವೆಯ ಸನ್ನಿವಾ ಹೊಫ್‌ಸ್ತಾಡ್‌ ಅವರನ್ನು 5-0 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ.

ಇದನ್ನೂ ಓದಿ Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

ಏಕಮುಖವಾಗಿ ಸಾಗಿದ ಈ ಹೋರಾಟದಲ್ಲಿ ಭಾರತೀಯ ಬಾಕ್ಸರ್​ ಮುಂದೆ ನಾರ್ವೆಯ ಪ್ರತಿಸ್ಪರ್ಧಿ ಸಂಪೂರ್ಣ ಶರಣಾದರು. ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಲವ್ಲೀನಾ ಅವರು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಚೀನಾದ ಲಿ ಕಿಯಾನ್ ಅವರನ್ನು ಎದುರಿಸಲಿದ್ದಾರೆ. ಕಳೆದ ಏಷ್ಯನ್ ಗೇಮ್ಸ್ ಮಹಿಳೆಯರ 75 ಕೆಜಿ ವಿಭಾಗದ ಫೈನಲ್‌ನಲ್ಲಿ ಲಿ ವಿರುದ್ಧ ಲವ್ಲೀನಾ ಸೋಲು ಕಂಡಿದ್ದರು. ಕ್ವಾರ್ಟರ್​ ಫೈನಲ್​ ಪಂದ್ಯ ಆಗಸ್ಟ್ 4 ರಂದು ನಡೆಯಲಿದೆ. ಇಲ್ಲಿ ಗೆದ್ದರೆ ಪದಕವೊಂದು ಖಾತ್ರಿಯಾಗಲಿದೆ. ಟೋಕಿಯೋ ಒಲಿಂಪಿಕ್ಸ್​ನಲ್ಲಿ ಲವ್ಲಿನಾ 69 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು.

Continue Reading

ವಾಣಿಜ್ಯ

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

ITR Filing: ಐಟಿಆರ್‌ಗೆ ಬುಧವಾರವೇ ಕೊನೇ ದಿನವಾದ ಕಾರಣ ಹೆಚ್ಚಿನ ಜನರು ಐಟಿಆರ್‌ ಸಲ್ಲಿಕೆಗೆ ಮುಂದಾಗಿದ್ದು, ವೆಬ್‌ ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಜನರು, ಲೆಕ್ಕಪರಿಶೋಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಟಿಆರ್‌ ಸಲ್ಲಿಕೆಯ ಕೊನೆಯ ದಿನದಂದು ಪೋರ್ಟಲ್‌ನಲ್ಲಿ ಲೋಡಿಂಗ್‌ ಸಮಸ್ಯೆಯಾಗುತ್ತಿದೆ ಎಂದೆಲ್ಲ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

ITR Filing
Koo

ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್‌ (ITR Filing) ಸಲ್ಲಿಸದವರು ಕುತೂಹಲದಿಂದ ಕಾಯುತ್ತಿದ್ದ ದಿನವು ಮುಕ್ತಾಯಗೊಂಡಿದ್ದು, ಐಟಿಆರ್‌ ಸಲ್ಲಿಕೆಯ ಗಡುವನ್ನು ವಿಸ್ತರಣೆ ಮಾಡದ ಹಿನ್ನೆಲೆಯಲ್ಲಿ ಅವರಿಗೆ ನಿರಾಸೆಯಾಗಿದೆ. ಬುಧವಾರ (ಜುಲೈ 31) ಸಂಜೆಯಾದರೂ ಕೇಂದ್ರ ಹಣಕಾಸು ಸಚಿವಾಲಯವು ಐಟಿಆರ್‌ ಸಲ್ಲಿಕೆಯ ಗಡುವು (ITR Filing Deadline) ವಿಸ್ತರಣೆ ಮಾಡದ ಕಾರಣ ಜನರಿಗೆ ನಿರಾಸೆಯಾಯಿತು. ಇನ್ನು, ಐಟಿಆರ್‌ಗೆ ಬುಧವಾರವೇ ಕೊನೇ ದಿನವಾದ ಕಾರಣ ಹೆಚ್ಚಿನ ಜನರು ಐಟಿಆರ್‌ ಸಲ್ಲಿಕೆಗೆ (Income Tax Returns) ಮುಂದಾಗಿದ್ದು, ವೆಬ್‌ ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಜನರು, ಲೆಕ್ಕಪರಿಶೋಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋರ್ಟಲ್‌ನಲ್ಲಿ ಏನು ದೋಷ?

ಸಿಎ ನಿಖಿತಾ ಕೋಲ್ತೆ-ಗೋರೆ ಎಂಬುವರು ಐಟಿಆರ್‌ ಸಲ್ಲಿಕೆಯ ವೆಬ್‌ ಪೋರ್ಟಲ್‌ನಲ್ಲಿ ಸಮಸ್ಯೆಯಾಗಿದ್ದನ್ನು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. “ಐಟಿಆರ್‌ ಸಲ್ಲಿಕೆಯ ಕೊನೆಯ ದಿನದಂದು ಪೋರ್ಟಲ್‌ನಲ್ಲಿ ಲೋಡಿಂಗ್‌ ಸಮಸ್ಯೆಯಾಗುತ್ತಿದೆ. ವೆಬ್‌ ಪೋರ್ಟಲ್‌ನಲ್ಲಿರುವ ಸಮಸ್ಯೆಯನ್ನು ಬಗೆಹರಿಸಬೇಕು. ಮುಂದಿನ ವರ್ಷವಾದರೂ ತೆರಿಗೆ ಪಾವತಿದಾರರು ಸುಲಭವಾಗಿ ಐಟಿಆರ್‌ ಸಲ್ಲಿಸುವ ವ್ಯವಸ್ಥೆ ಜಾರಿಗೆ ತರಬೇಕು” ಎಂದಿದ್ದಾರೆ. ಇವರು ವೆಬ್‌ ಪೋರ್ಟಲ್‌ ಅಭಿವೃದ್ಧಿ ಪಡಿಸಿರುವ ಇನ್ಫೋಸಿಸ್‌ಅನ್ನೂ ಟ್ಯಾಗ್‌ ಮಾಡಿದ್ದಾರೆ.

ಇನ್ಫೋಸಿಸ್‌ ವಿರುದ್ಧ ಆಕ್ರೋಶ

“ಕಳೆದ ಮೂರು ದಿನಗಳಿಂದ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆಗೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಪ್ರತಿಬಾರಿ ಪ್ರಯತ್ನಿಸಿದಾಗಲೂ ‘Something Went Wrong’ ಎಂಬ ಪ್ರತಿಕ್ರಿಯೆ ಬರುತ್ತಿದೆ. ಐಟಿಆರ್‌ ಸಲ್ಲಿಕೆಯ ಪೋರ್ಟಲ್‌ಗಾಗಿ ಇನ್ಫೋಸಿಸ್‌ಗೆ 4,200 ಕೋಟಿ ರೂ. ನೀಡುತ್ತಿರುವುದು ನಿಜವಾಗಿಯೂ ವೇಸ್ಟ್”‌ ಎಂದು ಸಿಎ ಅನಂತ್‌ ಸೆಖ್ಸಾರಿಯಾ ತಿಳಿಸಿದ್ದಾರೆ.

6.5 ಕೋಟಿ ಐಟಿಆರ್‌ ಸಲ್ಲಿಕೆ

ಜುಲೈ 31ರವರೆಗೆ 6.5 ಕೋಟಿ ಐಟಿಆರ್‌ ಸಲ್ಲಿಕೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ. 2023-24ನೇ ಸಾಲಿನಲ್ಲಿ ಜುಲೈ 30ರವರೆಗೆ ಸಲ್ಲಿಕೆಯಾದ ಐಟಿಆರ್‌ಗಳಿಗಿಂತ ಶೇ.7.5ರಷ್ಟು ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಎಷ್ಟು ದಂಡ?

ಜುಲೈ 31ರ ಗಡುವಿನ ನಂತರ ಐಟಿಆರ್ ಸಲ್ಲಿಸುವವರು ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

Continue Reading

Latest

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Gunfire On School: ಶಾಲೆಗ ಹೋಗುವ ಮಕ್ಕಳ ಬ್ಯಾಗ್‌ನಲ್ಲಿ ಈಗ ಪುಸ್ತಕದ ಬದಲು ಗನ್ ಕುಳಿತು ಬಿಟ್ಟಿದೆ.ನರ್ಸರಿ ವಿದ್ಯಾರ್ಥಿಯಾಗಿರುವ ಆರೋಪಿ ಬಾಲಕ ತನ್ನ ಸ್ಕೂಲ್ ಬ್ಯಾಗ್‌ನಲ್ಲಿ ಬಂದೂಕನ್ನು ಅಡಗಿಸಿಕೊಂಡು ಶಾಲೆಗೆ ಹೋಗಿದ್ದ. ಶಾಲೆಗೆ ಬಂದ ಕೂಡಲೇ ಆತ ತನ್ನ ಬ್ಯಾಗ್‌ನಿದ ಬಂದೂಕು ತೆಗೆದು ಗುಂಡು ಹಾರಿಸಿದ್ದಾನೆ. ಗುಂಡು 3ನೇ ತರಗತಿಯ ವಿದ್ಯಾರ್ಥಿಗೆ ತಗುಲಿದೆ. ಇದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Gunfire On School
Koo


ಐದು ವರ್ಷದ ಬಾಲಕನೊಬ್ಬ ಹ್ಯಾಂಡ್‍ಗನ್‌ನೊಂದಿಗೆ ಶಾಲೆಗೆ ಬಂದು 3ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಬಾಲಕನ ಮೇಲೆ ಗುಂಡು (Gunfire On School) ಹಾರಿಸಿದ ಆಘಾತಕಾರಿ ಘಟನೆ ಉತ್ತರ ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್‍ನ ಲಾಲ್ಪಟ್ಟಿಯಲ್ಲಿರುವ ಸೇಂಟ್ ಜಾನ್ಸ್ ಬೋರ್ಡಿಂಗ್ ಸ್ಕೂಲ್‍ನಲ್ಲಿ ಬುಧವಾರ ನಡೆದಿದೆ. ಇದರಿಂದ ಸಂತ್ರಸ್ತ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನರ್ಸರಿ ವಿದ್ಯಾರ್ಥಿಯಾಗಿರುವ ಆರೋಪಿ ಬಾಲಕ ತನ್ನ ಸ್ಕೂಲ್ ಬ್ಯಾಗ್‍ನಲ್ಲಿ ಬಂದೂಕನ್ನು ಅಡಗಿಸಿಕೊಂಡು ಶಾಲೆಗೆ ಹೋಗಿದ್ದ. ಶಾಲೆಗೆ ಬಂದ ಕೂಡಲೇ ಆತ ತನ್ನ ಬ್ಯಾಗ್‍ನಿಂದ ಬಂದೂಕು ತೆಗೆದು ಗುಂಡು ಹಾರಿಸಿದ್ದಾನೆ. ಗುಂಡು 3 ನೇ ತರಗತಿಯ ವಿದ್ಯಾರ್ಥಿ ಆಸಿಫ್ ಎಂಬ ಬಾಲಕನಿಗೆ ತಗುಲಿದೆ. ಇದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಬಳಿಕ ಇಬ್ಬರು ವಿದ್ಯಾರ್ಥಿಗಳ ಪೋಷಕರನ್ನು ಶಾಲೆಗೆ ಕರೆದು ವಿಚಾರಣೆ ನಡೆಸಲಾಗುತ್ತಿದೆ. ಆದರೆ ಗುಂಡು ಹಾರಿಸಿದ ಬಾಲಕ ಹಾಗೂ ಆತನ ಪೋಷಕರು ಶಾಲೆಯಿಂದ ಓಡಿ ಹೋಗಿದ್ದಾರೆ. ಇದರಿಂದ ಕೋಪಗೊಂಡ ಸಂತ್ರಸ್ತ ಬಾಲಕನ ಕುಟುಂಬದವರು ಶಾಲೆಯನ್ನು ಧ್ವಂಸಗೊಳಿಸಿದ್ದಾರೆ.

ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಾಗೂ ತಲೆಮರೆಸಿಕೊಂಡಿರುವ ಆರೋಪಿ ಬಾಲಕ ಹಾಗೂ ಆತನ ಕುಟುಂಬದವರನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಅಧಿಕಾರಿ “ಅದೇ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿರುವ 10 ವರ್ಷದ ಹುಡುಗನ ಮೇಲೆ ವಿದ್ಯಾರ್ಥಿ ಗುಂಡು ಹಾರಿಸಿದ್ದಾನೆ. ಗುಂಡು ಅವನ ತೋಳಿಗೆ ತಗುಲಿತು. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

ಬಾಲಕ ಬ್ಯಾಗ್‍ನಲ್ಲಿ ಬಂದೂಕನ್ನು ಇರಿಸಿಕೊಂಡು ಅದನ್ನು ಲಾಲ್ಪಟ್ಟಿ ಪ್ರದೇಶದಲ್ಲಿರುವ ಖಾಸಗಿ ಶಾಲೆಗೆ ಹೇಗೆ ಸಾಗಿಸುವಲ್ಲಿ ಯಶಸ್ವಿಯಾದನು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಹೇಳಿದ್ದಾರೆ. ಅಲ್ಲದೇ “ವಿದ್ಯಾರ್ಥಿಗಳ ಚೀಲಗಳನ್ನು ನಿಯಮಿತವಾಗಿ ಕೂಲಂಕಷವಾಗಿ ಪರಿಶೀಲಿಸಬೇಕೆಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ಕೇಳುತ್ತಿದ್ದೇವೆ. ಈ ಘಟನೆಯು ಶಿಕ್ಷಕರು ಮತ್ತು ಪೋಷಕರಲ್ಲಿ ಹೆಚ್ಚಿನ ಆತಂಕವನ್ನುಂಟು ಮಾಡಿದೆ” ಎಂಬುದಾಗಿ ತಿಳಿಸಿದ್ದಾರೆ

Continue Reading

ವಿದೇಶ

Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

Ismail Haniyeh: ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ನನ್ನು ಕೊಲೆ ಮಾಡಿದ್ದಾರೆ. ಇಡೀ ಕಾರ್ಯಾಚರಣೆಯ ಮಾಹಿತಿ ಇಲ್ಲಿದೆ.

VISTARANEWS.COM


on

Ismail Haniyeh
Koo

ಜೆರುಸಲೇಂ: ಅಲ್‌ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥ, ವಿಶ್ವ ವ್ಯಾಪಾರ ಕೇಂದ್ರದ ಮೇಲೆ ನಡೆದ ದಾಳಿಯ ರೂವಾರಿ ಒಸಾಮಾ ಬಿನ್‌ಲಾಡೆನ್‌ನನ್ನು 2011ರಲ್ಲಿ ಅಮೆರಿಕ ಹತ್ಯೆ ಮಾಡಿದಂತೆಯೇ ಹಮಾಸ್‌ ಉಗ್ರ ಸಂಘಟನೆಯ (Hamas Leader) ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ಇಸ್ರೇಲ್‌ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಅಮೆರಿಕದ ಸೈನಿಕರು ನುಗ್ಗಿ ಒಸಾಮಾ ಬಿನ್‌ಲಾಡೆನ್‌ನನ್ನು ಹತ್ಯೆಗೈದರೆ, ವಾಯು ದಾಳಿ ಮೂಲಕ ಇಸ್ಮಾಯಿಲ್‌ ಹನಿಯೆಹ್‌ನನ್ನು (Ismail Haniyeh) ಇಸ್ರೇಲ್‌ (Israel Air Strike) ಸೇನೆಯು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಹೌದು, ದೇಶಕ್ಕೆ ಅಪಾಯಕಾರಿಯಾಗುವ ವೈರಿಗಳನ್ನು ಯಾವುದೇ ದೇಶದಲ್ಲಿದ್ದರೂ ಹುಡುಕಿ ಹುಡುಕಿ ಕೊಲ್ಲುವ ಇಸ್ರೇಲ್‌ ಸೇನೆಯೇ ಇಸ್ಮಾಯಿಲ್‌ ಹನಿಯೆಹ್‌ನನ್ನು ಕೊಂದಿದೆ. ಇರಾನ್‌ನ ಟೆಹ್ರಾನ್‌ನಲ್ಲಿರುವ ಇಸ್ಮಾಯಿಲ್‌ ಹನಿಯೆಹ್‌ ನಿವಾಸದ ಮೇಲೆಯೇ ವಾಯುದಾಳಿ ನಡೆಸಿದ ಇಸ್ರೇಲ್‌ ಸೈನಿಕರು, ಕ್ಷಿಪಣಿ ದಾಳಿ ಮೂಲಕ ಹಮಾಸ್‌ ಉಗ್ರ ಸಂಘಟನೆಯ ಮುಖಂಡನನ್ನು ಹತ್ಯೆ ಮಾಡಿದೆ. 2011ರಲ್ಲಿ ಅಮೆರಿಕವೂ ಒಸಾಮಾ ಬಿನ್‌ ಲಾಡೆನ್‌ ಪಾಕಿಸ್ತಾನದಲ್ಲಿ ಅಡಗಿರುವ ಕುರಿತು ಮಾಹಿತಿ ಸಂಗ್ರಹಿಸಿ, ಆತನಿದ್ದ ಜಾಗದ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು?

ಮಧ್ಯಪ್ರಾಚ್ಯ ರಾಜಕೀಯ ವಲಯದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಇಸ್ಮಾಯಿಲ್ ಹನಿಯೆಹ್ ಗಾಜಾದ ಶತಿ ನಿರಾಶ್ರಿತರ ಶಿಬಿರದಲ್ಲಿ 1963ರಲ್ಲಿ ಜನಿಸಿದ್ದ. ವಿಶ್ವಸಂಸ್ಥೆಯ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಈತ 1987ರಲ್ಲಿ ಅರೇಬಿಕ್ ಸಾಹಿತ್ಯದಲ್ಲಿ ಗಾಜಾದ ಇಸ್ಲಾಮಿಕ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದಿದ್ದ. ವಿಶ್ವವಿದ್ಯಾನಿಲಯದಲ್ಲಿದ್ದಾಗ ಹಮಾಸ್‌ ಉಗ್ರಗಾಮಿ ಸಂಘಟನೆ ಜತೆ ಸೇರಿಕೊಂಡಿದ್ದ.

ಮೊದಲ ಬಾರಿಗೆ ಇಸ್ಮಾಯಿಲ್ ಹನಿಯೆಹ್ ಇಂತಿಫಾಡಾದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ. ಇದಕ್ಕಾಗಿ ಇಸ್ರೇಲಿ ಮಿಲಿಟರಿ ನ್ಯಾಯಾಲಯದಿಂದ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಜೈಲಿನಿಂದ ಹೊರಬಂದ ಬಳಿಕ ಆಕ್ರಮಿತ ಪ್ಯಾಲೇಸ್ಟಿನಿಯನ್ ಪ್ರಾಂತ್ಯಗಳ ಇಸ್ರೇಲ್ ಮಿಲಿಟರಿ ಅಧಿಕಾರಿಗಳು ಹನಿಯೆಹ್‌ನನ್ನು ಹಿರಿಯ ಹಮಾಸ್ ನಾಯಕರಾದ ಅಬ್ದೆಲ್-ಅಜೀಜ್ ಅಲ್-ರಾಂಟಿಸ್ಸಿ, ಮಹಮೂದ್ ಜಹರ್, ಅಜೀಜ್ ದುವೈಕ್ ಮತ್ತು ಇತರ 400 ಕಾರ್ಯಕರ್ತರೊಂದಿಗೆ ಲೆಬನಾನ್‌ಗೆ ಗಡಿಪಾರು ಮಾಡಿದರು.

1997ರಲ್ಲಿ ಇಸ್ರೇಲ್ ಹಮಾಸ್ ಸಂಸ್ಥಾಪಕ ಅಹ್ಮದ್ ಯಾಸಿನ್ ಅವರನ್ನು ಬಿಡುಗಡೆ ಮಾಡಿದ ಅನಂತರ ಈತನನ್ನು ಹಮಾಸ್ ಕಚೇರಿಯ ಮುಖ್ಯಸ್ಥನನ್ನಾಗಿ ನೇಮಿಸಲಾಯಿತು. 2005ರ ಡಿಸೆಂಬರ್‌ನಲ್ಲಿ ಹನಿಯೆಹ್ ಹಮಾಸ್ ಮುಖ್ಯಸ್ಥನಾಗಿ ಆಯ್ಕೆಯಾದ. 2006ರ ಶಾಸಕಾಂಗ ಚುನಾವಣೆಯಲ್ಲಿ ಹಮಾಸ್‌ನ ಗೆಲುವಿನ ಅನಂತರ ಹನಿಯೆಹ್ ಪ್ಯಾಲೇಸ್ಟಿನಿಯನ್ ಪ್ರಾಧಿಕಾರದ ಸರ್ಕಾರದ ಪ್ರಧಾನ ಮಂತ್ರಿಯಾದ.

ಫತಾಹ್- ಹಮಾಸ್ ಘರ್ಷಣೆಯ ನಡುವೆಯೇ 2006ರಲ್ಲಿ ಪ್ರಧಾನಿಯಾಗಿದ್ದ ಹನಿಯೆಹ್ ವಿದೇಶದಲ್ಲಿ ತನ್ನ ಮೊದಲ ಅಧಿಕೃತ ಪ್ರವಾಸದಿಂದ ಹಿಂದಿರುಗುತ್ತಿದ್ದಾಗ ರಫಾ ಬಾರ್ಡರ್ ಕ್ರಾಸಿಂಗ್‌ನಲ್ಲಿ ಈಜಿಪ್ಟ್‌ನಿಂದ ಗಾಜಾಕ್ಕೆ ಪ್ರವೇಶವನ್ನು ನಿರಾಕರಿಸಲ್ಪಟ್ಟ. ಅನಂತರ ಈತ ಗಡಿ ದಾಟಲು ಪ್ರಯತ್ನಿಸಿದಾಗ, ಗುಂಡಿನ ಚಕಮಕಿ ನಡೆದು ಒಬ್ಬ ಅಂಗರಕ್ಷಕ ಮೃತಪಟ್ಟು, ಹನಿಯೆಹ್ ಹಿರಿಯ ಮಗ ಗಾಯಗೊಂಡಿದ್ದ.

2007ರಲ್ಲಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅಧಿಕಾರಕ್ಕೆ ಬಂದಾಗ ಹನಿಯೆಹ್‌ನನ್ನು ಹುದ್ದೆಯಿಂದ ವಜಾಗೊಳಿಸಿದರು. ಇದು ಫತಾಹ್ ಮತ್ತು ಹಮಾಸ್ ಬಣಗಳ ನಡುವಿನ ರಾಜಕೀಯ ಸಂಘರ್ಷವನ್ನು ಹೆಚ್ಚಿಸಿತ್ತು. 2016ರ ಚುನಾವಣೆಯಲ್ಲಿ ಈತ ಹಮಾಸ್‌ನ ಮುಖ್ಯ ನಾಯಕ ಖಲೀದ್ ಮಶಾಲ್‌ನ ಉತ್ತರಾಧಿಕಾರಿಯಾಗಿದ್ದ. ಈತ ಇಸ್ರೇಲ್‌ ಭಾರೀ ತಲೆ ನೋವಾಗಿದ್ದ. ಹಾಗಾಗಿ ಇಸ್ರೇಲ್‌ ತಂತ್ರಜ್ಞಾನಗಳನ್ನೆಲ್ಲ ಬಳಸಿ ಪ್ಲ್ಯಾನ್‌ ಮಾಡಿ ಈತನ ಕತೆ ಮುಗಿಸಿದೆ.

ಇದನ್ನೂ ಓದಿ: Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್‌ ಮುಗಿಸಿದ್ದೇಕೆ?

Continue Reading
Advertisement
Koti Koti Rokka Galisi kannada song released
ಕರ್ನಾಟಕ4 mins ago

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Paris Olympics Archery
ಕ್ರೀಡೆ21 mins ago

Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

ITR Filing
ವಾಣಿಜ್ಯ23 mins ago

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Gunfire On School
Latest45 mins ago

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Ibbani Thabbida Ileyali movie Helu Gelati song released
ಕರ್ನಾಟಕ1 hour ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Ashwini Ponnappa
ಕ್ರೀಡೆ1 hour ago

Ashwini Ponnappa: ‘ಇದು ನನ್ನ ಕೊನೆಯ ಒಲಿಂಪಿಕ್ಸ್​’; ನಿವೃತ್ತಿ ಘೋಷಿಸಿದ ಶಟ್ಲರ್​ ಅಶ್ವಿನಿ ಪೊನ್ನಪ್ಪ

Ismail Haniyeh
ವಿದೇಶ2 hours ago

Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

Mahesh Bhatt said his mother was worried after he gave daughters Muslim names
ಬಾಲಿವುಡ್2 hours ago

Alia Bhatt: ಪುತ್ರಿಯರಿಗೆ ಮುಸ್ಲಿಂ ಹೆಸರುಗಳನ್ನು ಇಟ್ಟಾಗ ನನ್ನ ತಾಯಿಗೆ ಚಿಂತೆಯಾಗಿತ್ತು ಎಂದ ಆಲಿಯಾ ಭಟ್‌ ತಂದೆ!

Jagdeep Dhankhar
ದೇಶ2 hours ago

Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

Paris Olympics Boxing
ಕ್ರೀಡೆ2 hours ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌