Money Guide: PPF v/s NPS Vatsalya ನಿಮ್ಮ ಮಕ್ಕಳಿಗೆ ಯಾವುದು ಉತ್ತಮ ಯೋಜನೆ? ಇಲ್ಲಿದೆ ವಿವರ - Vistara News

ಮನಿ-ಗೈಡ್

Money Guide: PPF v/s NPS Vatsalya ನಿಮ್ಮ ಮಕ್ಕಳಿಗೆ ಯಾವುದು ಉತ್ತಮ ಯೋಜನೆ? ಇಲ್ಲಿದೆ ವಿವರ

Money Guide: ಸಾರ್ವಜನಿಕರಲ್ಲಿ ಉಳಿತಾಯದ ಮನೋಭಾವವನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಭವಿಷ್ಯ ನಿಧಿ ಮತ್ತು ರಾಷ್ಟ್ರೀಯ ಪಿಂಚಣಿ ವಾತ್ಸಲ್ಯ ಯೋಜನೆಯನ್ನು ಆರಂಭಿಸಿದೆ. ಇವೆರಡು ಯೋಜನೆಗಳ ವೈಶಿಷ್ಟ್ಯ, ಯೋಜನೆ ನಡುವಿನ ವ್ಯತ್ಯಾಸ ಇಲ್ಲಿದೆ.

VISTARANEWS.COM


on

Money Guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಕ್ಕಳ ಜೀವನ, ಭವಿಷ್ಯ ಉತ್ತಮವಾಗಿರಬೇಕು ಎನ್ನುವುದು ಪ್ರತಿಯೊಬ್ಬ ಪೋಷಕರ ಕನಸು. ಈ ಕನಸು ನನಸಾಗಬೇಕಾದರೆ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು. ಪ್ರಸ್ತುತ ಹೆಚ್ಚುತ್ತಿರುವ ಜೀವನ ವೆಚ್ಚ, ದುಬಾರಿಯಾಗುತ್ತಿರುವ ಶಿಕ್ಷಣ ಮುಂತಾದ ಕಾರಣಗಳಿಂದ ಇದಕ್ಕಾಗಿ ಈಗಲೇ ಒಂದಷ್ಟು ಯೋಜನೆ ರೂಪಿಸಬೇಕಾಗುತ್ತದೆ. ಜತೆಗೆ ಅವರ ನಿವೃತ್ತಿ ಜೀವನದ ಬಗ್ಗೆಯೂ ಚಿಂತನೆ ನಡೆಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳ ಹೆಸರಿನಲ್ಲಿ ಹೂಡಿಕೆ ಮಾಡುವುದು ಅತ್ಯುತ್ತಮ ನಿರ್ಧಾರ ಎನಿಸಿಕೊಳ್ಳಲಿದೆ ಎನ್ನುತ್ತಾರೆ ಆರ್ಥಿಕ ತಜ್ಞರು. ಇದೀಗ ಅಪ್ರಾಪ್ತ ವಯಸ್ಕರ ಹೆಸರಿನಲ್ಲಿಯೂ ಹೂಡಿಕೆ ಮಾಡಬಹುದಾದ ಆಯ್ಕೆ ಲಭ್ಯ. ಅವರ ಉನ್ನತ ಶಿಕ್ಷಣಕ್ಕೆ ಇದು ನೆರವಾಗುತ್ತದೆ. ಹಾಗಾದರೆ ಹೂಡಿಕೆಗೆ ಉತ್ತಮ ಆಯ್ಕೆ ಎನಿಸಿಕೊಂಡಿರುವ ಪಿಪಿಎಫ್‌ ಮತ್ತು ಇತ್ತೀಚೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆ ಪೈಕಿ ಯಾವುದು ಉತ್ತಮ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ಸಾರ್ವಜನಿಕರಲ್ಲಿ ಉಳಿತಾಯದ ಮನೋಭಾವವನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಭವಿಷ್ಯ ನಿಧಿ (Public Provident Fund-PPF) ಮತ್ತು ರಾಷ್ಟ್ರೀಯ ಪಿಂಚಣಿ ವಾತ್ಸಲ್ಯ ಯೋಜನೆಯನ್ನು (National Pension Scheme Vatsalya) ಆರಂಭಿಸಿದೆ. ಇವೆರಡು ಯೋಜನೆಗಳ ವೈಶಿಷ್ಟ್ಯ, ಯೋಜನೆ ನಡುವಿನ ವ್ಯತ್ಯಾಸ ನೋಡೋಣ.

ಪಿಪಿಎಫ್‌

ಸಾರ್ವಜನಿಕ ಭವಿಷ್ಯ ನಿಧಿ-ಇದು ಸರ್ಕಾರ ನಿರ್ವಹಿಸುವ ಉಳಿತಾಯ ಯೋಜನೆಯಾಗಿರುವುದರಿಂದ ಇದರಲ್ಲಿ ಅಪಾಯ ಕಡಿಮೆ. ಜತೆಗೆ ತೆರಿಗೆ ಪ್ರಯೋಜವೂ ಲಭ್ಯ. ಮಕ್ಕಳಲ್ಲಿ ಉಳಿತಾಯ ಮನೋಭಾವವನ್ನು ಉತ್ತೇಜಿಸಲು ಸರ್ಕಾರ ಪಿಪಿಎಫ್‌ ಮೈನರ್‌ (PPF minor) ಖಾತೆಯನ್ನೂ ಜಾರಿಗೆ ತಂದಿದೆ. ಪಾಲಕರು ತಮ್ಮ ಅಪ್ರಾಪ್ತ ಮಗುವಿನ ಹೆಸರಿನಲ್ಲಿ ಪಿಪಿಎಫ್ ಖಾತೆಯನ್ನು ತೆರೆಯುವ ಆಯ್ಕೆಯನ್ನು ಹೊಂದಿದ್ದಾರೆ. ಆಕರ್ಷಕ ಬಡ್ಡಿದರ ಮತ್ತು ತೆರಿಗೆ ಪ್ರಯೋಜನಗಳನ್ನು ನೀಡುವ ಪಿಪಿಎಫ್ ಖಾತೆಯು ಮಕ್ಕಳಿಗಾಗಿಯೇ ವಿನ್ಯಾಸಗೊಳಿಸಲಾದ ಹೂಡಿಕೆ ಆಯ್ಕೆಗಳಲ್ಲಿ ಒಂದು. ಅಪ್ರಾಪ್ತ ಮಗುವಿಗೆ 18 ವರ್ಷ ತುಂಬುವವರೆಗೆ ಪಿಪಿಎಫ್ ಖಾತೆಯನ್ನು ಪಾಲಕರು ನಿರ್ವಹಿಸುತ್ತಾರೆ. ಬಳಿಕ ಆತ / ಅವಳು ತನ್ನ ಖಾತೆಯನ್ನು ಸ್ವತಂತ್ರವಾಗಿ ನಿರ್ವಹಿಸಬಹುದಾಗಿದೆ.

ಪಿಪಿಎಫ್‌ನ ವೈಶಿಷ್ಟ್ಯ

  • ವಾರ್ಷಿಕ ಗರಿಷ್ಠ 1,50,000 ರೂ.ಗಳಿಂದ ಕನಿಷ್ಠ 500 ರೂ.ಗಳವರೆಗೆ ಠೇವಣಿ ಇಡಬಹುದು.
  • ಮೂಲ ಅವಧಿ 15 ವರ್ಷಗಳು. ಅದರ ನಂತರ 5 ವರ್ಷಗಳ ಅವಧಿಗೆ ವಿಸ್ತರಿಸಬಹುದು. 
  • ಪ್ರತಿ ತ್ರೈಮಾಸಿಕದಲ್ಲಿ ಬಡ್ಡಿದರವನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಪ್ರಸ್ತುತ ಬಡ್ಡಿದರ ವಾರ್ಷಿಕ ಶೇ. 7.10ರಷ್ಟಿದೆ.
  • ಖಾತೆಯ ತೆರೆದ ದಿನಾಂಕ ಆಧಾರದಲ್ಲಿ ಸಾಲ ಪಡೆಯಬಹುದು.
  • ಪಿಪಿಎಫ್ ಖಾತೆಗಳಲ್ಲಿನ ಹೂಡಿಕೆಗಳು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ಅಡಿಯಲ್ಲಿ ತೆರಿಗೆ ವಿನಾಯಿತಿಗೆ ಅರ್ಹವಾಗಿವೆ.
  • ಒಂದು ಅಥವಾ ಹೆಚ್ಚು ವ್ಯಕ್ತಿಗಳ ನಾಮನಿರ್ದೇಶನ ಸೌಲಭ್ಯ ಇದೆ.
  • ಖಾತೆಯನ್ನು ಬ್ಯಾಂಕ್‌ ಅಥವಾ ಪೋಸ್ಟ್‌ ಆಫೀಸ್‌ನ ಇತರ ಶಾಖೆಗಳಿಗೆ ವರ್ಗಾಯಿಸಬಹುದು.

ಎನ್‌ಪಿಎಸ್‌ ವಾತ್ಯಲ್ಯ ಯೋಜನೆ

ಎನ್‌ಪಿಎಸ್‌ ವಾತ್ಸಲ್ಯ – 2024ರ ಕೇಂದ್ರ ಬಜೆಟ್‌ನಲ್ಲಿ ಪರಿಚಯಿಸಲಾದ ಹೊಸ ಪಿಂಚಣಿ ಯೋಜನೆಯಾಗಿದ್ದು, ಅಪ್ರಾಪ್ತ ವಯಸ್ಕ ಮಕ್ಕಳ ಹೆಸರಿನಲ್ಲಿ ಪೋಷಕ ಖಾತೆ ತೆರೆಯಬಹುದು. ಪೋಷಕರಿಗೆ ತಮ್ಮ ಅಪ್ರಾಪ್ತ ವಯಸ್ಸಿನ ಮಗುವಿನ ಎನ್‌ಪಿಎಸ್ ಖಾತೆಯನ್ನು ಪ್ರಾರಂಭಿಸಲು ಅವಕಾಶ ನೀಡುವ ಮೂಲಕ ಚಿಕ್ಕ ವಯಸ್ಸಿನಿಂದಲೇ ಜವಾಬ್ದಾರಿಯುತ ಹಣಕಾಸು ನಿರ್ವಹಣೆಗೆ ಅಡಿಪಾಯವನ್ನು ಹಾಕಿಕೊಟ್ಟಂತಾಗುತ್ತದೆ. ಪ್ರೌಢಾವಸ್ಥೆಯಲ್ಲಿ ಈ ಖಾತೆಗಳು ನಿಯಮಿತ ಎನ್‌ಪಿಎಸ್ ಯೋಜನೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದ ಮಕ್ಕಳ ಪ್ರೌಢಾವಸ್ಥೆಯಲ್ಲಿ ಉಳಿತಾಯ ಅಭ್ಯಾಸ ಸುಗಮವಾಗಿ ಮುಂದುವರಿಯುತ್ತದೆ.

ಎನ್‌ಪಿಎಸ್‌ ಅನ್ನು 18 ವರ್ಷದ ನಂತರ ಆರಂಭಿಸಬಹುದಾಗಿದ್ದರೆ ಎನ್‌ಪಿಎಸ್ ವಾತ್ಸಲ್ಯ ಯೋಜನೆಯಲ್ಲಿ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಹೂಡಿಕೆ ಮಾಡಬಹುದಾಗಿದೆ. ಎನ್‌ಪಿಎಸ್ ಯೋಜನೆಯಡಿ ಖಾತೆದಾರರು ನಿರ್ದಿಷ್ಟ ಮೊತ್ತದ ಬಡ್ಡಿಯನ್ನು ಪಡೆಯುತ್ತಾರೆ. ನಿಮ್ಮ ಮಕ್ಕಳು 60ರ ನಿವೃತ್ತಿ ವಯಸ್ಸನ್ನು ತಲುಪಿದ ಮೇಲೆ ಖಾತೆಯಲ್ಲಿರುವ ಸಂಗ್ರಹ ಮೊತ್ತದೊಂದಿಗೆ ಬಡ್ಡಿ ಸೇರಿ ಗಣನೀಯ ಮೊತ್ತವನ್ನು ಪಡೆಯುತ್ತಾರೆ.

ಯಾವುದು ಉತ್ತಮ?

ಎನ್‌ಪಿಎಸ್‌ ವಾತ್ಯಲ್ಯ ಯೋಜನೆಯನ್ನು ಸರ್ಕಾರ ಇತ್ತೀಚೆಗೆಷ್ಟೇ ಘೋಷಿಸಿದ್ದು ಹೂಡಿಕೆ ಮಾಡಬಹುದಾದ ಅಪ್ರಾಪ್ತ ವಯಸ್ಕರ ಕನಿಷ್ಠ ವಯಸ್ಸನ್ನು ಇನ್ನೂ ಬಹುರಂಗಪಡಿಸಿಲ್ಲ. ಎರಡೂ ಯೋಜನೆಗಳು ನಿಮ್ಮ ಮಕ್ಕಳ ಭವಿಷ್ಯ ದೃಷ್ಟಿಯಿಂದ ಉತ್ತಮ ಆಯ್ಕೆ ಎನಿಸಿಕೊಂಡಿದೆ. ನಿಮ್ಮ ಉದ್ದೇಶಕ್ಕೆ ಅನುಗುಣವಾದ, ಆರ್ಥಿಕ ಸ್ಥಿತಿಗೆ ಹೊಂದಿಕೆಯಾಗುವ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Mahila Samman Savings Certificate: ಮಹಿಳಾ ಸಮ್ಮಾನ್‌‌ನಲ್ಲಿ ಹೂಡಿಕೆಯಿಂದ ಏನು ಲಾಭ?

2023ರ ಬಜೆಟ್ ನಲ್ಲಿ ಘೋಷಿಸಿರುವ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ (Mahila Samman Savings Certificate) ಮಹಿಳಾ ಹೂಡಿಕೆದಾರರಿಗೆ ಭಾರತ ಸರ್ಕಾರವು ನೀಡುವ ಸಣ್ಣ ಉಳಿತಾಯ ಪ್ರಮಾಣ ಪತ್ರವಾಗಿದೆ. ಕಡಿಮೆ ಸಮಯದಲ್ಲಿ ಮಹಿಳೆಯರಿಗೆ ಉತ್ತಮ ಆದಾಯವನ್ನು ನೀಡಲು ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯನ್ನು ಸರ್ಕಾರವು 2025 ರವರೆಗೆ ಮುಂದುವರಿಸಲಿದೆ. ಈ ಯೋಜನೆಯ ಪ್ರಯೋಜನಗಳ ವಿವರ ಇಲ್ಲಿದೆ.

VISTARANEWS.COM


on

By

Mahila Samman Savings Certificate
Koo

ಮಹಿಳಾ ಹೂಡಿಕೆದಾರರನ್ನು ಆಕರ್ಷಿಸಲು ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಪ್ರಕಟಿಸುತ್ತಲೇ ಇರುತ್ತದೆ. ಇದರಲ್ಲಿ 2023ರ ಬಜೆಟ್ ನಲ್ಲಿ (Budget 2023) ಘೋಷಿಸಿರುವ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ (Mahila Samman Savings Certificate:) ಕೂಡ ಒಂದಾಗಿದೆ. ಇದು ಮಹಿಳಾ ಹೂಡಿಕೆದಾರರಿಗೆ ಭಾರತ ಸರ್ಕಾರವು ನೀಡುವ ಸಣ್ಣ ಉಳಿತಾಯ ಪ್ರಮಾಣ (small savings certificate) ಪತ್ರವಾಗಿದೆ.

ಇದರಲ್ಲಿ ಹೂಡಿಕೆ ಮಾಡುವ ಮೂಲಕ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಆರ್ಥಿಕವಾಗಿ ಸಬಲರಾಗಬಹುದು ಎಂದು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕಡಿಮೆ ಸಮಯದಲ್ಲಿ ಮಹಿಳೆಯರಿಗೆ ಉತ್ತಮ ಆದಾಯವನ್ನು ನೀಡಲು ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯನ್ನು ಸರ್ಕಾರವು 2025ರವರೆಗೆ ಮುಂದುವರಿಸಲಿದೆ.

2024ರಲ್ಲಿ ವಿಸ್ತರಿಸಲಾಗಿದೆಯೇ?

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರದ ಕುರಿತು 2024ರ ಬಜೆಟ್‌ನಲ್ಲಿ ಯಾವುದೇ ಪ್ರಕಟಣೆಯನ್ನು ಮಾಡಲಾಗಿಲ್ಲ. ಪ್ರಸ್ತುತ, ಬಡ್ಡಿ ದರ ಮತ್ತು ಹೂಡಿಕೆಯ ಸಮಯದ ಮಿತಿ ಮೊದಲಿನಂತೆಯೇ ಇರುತ್ತದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಏಪ್ರಿಲ್ 2023 ರಿಂದ ಮಾರ್ಚ್ 2025 ರವರೆಗೆ 2 ವರ್ಷಗಳವರೆಗೆ ಲಭ್ಯವಿರುವ ಒಂದು ಬಾರಿಯ ಯೋಜನೆಯಾಗಿದೆ. ಇದರ ಖಾತೆಯನ್ನು ಯಾವುದೇ ಪೋಸ್ಟ್ ಆಫೀಸ್‌ನಲ್ಲಿ ತೆರೆಯಬಹುದು. ಆದರೆ, ಕೆಲವು ಬ್ಯಾಂಕ್‌ಗಳು ತಮ್ಮೊಂದಿಗೆ ಈ ಖಾತೆ ತೆರೆಯುವ ಸೌಲಭ್ಯವನ್ನೂ ಒದಗಿಸುತ್ತಿವೆ.

Mahila Samman Savings Certificate
Mahila Samman Savings Certificate


ಯಾರು ತೆರೆಯಬಹುದು?

ಈ ಯೋಜನೆಯ ಅಡಿಯಲ್ಲಿ ಯಾವುದೇ ವಯಸ್ಸಿನ ಭಾರತೀಯ ಮಹಿಳೆ ಖಾತೆಯನ್ನು ತೆರೆಯಬಹುದು. ಪುರುಷ ಪೋಷಕರು ತಮ್ಮ ಅಪ್ರಾಪ್ತ ಮಗಳಿಗೆ ಈ ಖಾತೆಯನ್ನು ತೆರೆಯಬಹುದು. ಈ ಯೋಜನೆಯು ಅಪ್ರಾಪ್ತ ಬಾಲಕಿಯರಿಗೆ ಹಣಕಾಸಿನ ಉತ್ಪನ್ನಗಳಲ್ಲಿ ಹೂಡಿಕೆ ಮಾಡಲು ಅವಕಾಶವನ್ನು ಒದಗಿಸುತ್ತದೆ.

ಬಡ್ಡಿ ಎಷ್ಟಿದೆ?

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರವು ವಾರ್ಷಿಕವಾಗಿ ಶೇ. 7.5ರ ಬಡ್ಡಿಯನ್ನು ನೀಡುತ್ತದೆ. ಇದನ್ನು ಪ್ರತಿ ತ್ರೈಮಾಸಿಕದಲ್ಲಿ ಖಾತೆಗೆ ಸೇರಿಸಲಾಗುತ್ತದೆ. ಆದರೆ ಬಡ್ಡಿ ಮತ್ತು ಅಸಲು ಮುಕ್ತಾಯದ ಮೇಲೆ ಮಾತ್ರ ಲಭ್ಯವಿರುತ್ತದೆ. ಈ ಯೋಜನೆಯ ಮುಕ್ತಾಯ ಅವಧಿಯು 2 ವರ್ಷಗಳು. ನೀವು 2 ವರ್ಷಗಳವರೆಗೆ ಈ ಯೋಜನೆಯಲ್ಲಿ 2 ಲಕ್ಷವನ್ನು ಹೂಡಿಕೆ ಮಾಡಿದರೆ ಮುಕ್ತಾಯದ ವೇಳೆಗೆ 2.32 ಲಕ್ಷ ರೂ. ವನ್ನು ಪಡೆಯಬಹುದು.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಹೂಡಿಕೆ ಮಿತಿ

ಈ ಯೋಜನೆಯಲ್ಲಿ ಕನಿಷ್ಠ 1,000 ರೂ. ಗಳನ್ನು 2 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಗರಿಷ್ಠ ಹೂಡಿಕೆ ಮಿತಿ ಪ್ರತಿ ಖಾತೆಗೆ 2 ಲಕ್ಷ ರೂ. 1000 ರೂ. ಗಿಂತ ಹೆಚ್ಚಿನ ಮೊತ್ತವನ್ನು 100 ರ ಗುಣಕಗಳಲ್ಲಿ ಮಾತ್ರ ಠೇವಣಿ ಮಾಡಬಹುದು. ಖಾತೆಯನ್ನು ತೆರೆದ 1 ವರ್ಷದ ಅನಂತರ ಒಟ್ಟು ಠೇವಣಿ ಮೊತ್ತದ ಶೇ. 40ರಷ್ಟನ್ನು ಹಿಂಪಡೆಯಬಹುದು.

Continue Reading

ಮನಿ-ಗೈಡ್

Money Guide: ಷೇರು V/S ಚಿನ್ನ: ಹೂಡಿಕೆಗೆ ಯಾವುದು ಬೆಸ್ಟ್‌? ಇಲ್ಲಿದೆ ತಜ್ಞರ ಸಲಹೆ

Money Guide: ವೃತ್ತಿ ಜೀವನದ ಆರಂಭಿಕ ದಿನಗಳಲ್ಲೇ ಹೂಡಿಕೆ ಮಾಡಲು ತೊಡಗಬೇಕು. ಭಾರತದಲ್ಲಿ ಹೂಡಿಕೆಯ ವೈವಿಧ್ಯ ಆಯ್ಕೆ ಲಭ್ಯವಿದ್ದು, ಸರಿಯಾಗಿ ಯೋಚಿಸಿ ನಿಮ್ಮ ಆರ್ಥಿಕ ಸ್ಥಿತಿಗೆ ಹೊಂದಿಕೆಯಾಗುವುದನ್ನು ಸೆಲೆಕ್ಟ್‌ ಮಾಡುವುದು ಮುಖ್ಯ. ಈ ಪೈಕಿ ಬಹು ಜನಪ್ರಿಯ ವಿಧವಾದ ಚಿನ್ನದ ಮೇಲೆ ಹೂಡಿಕೆ ಮಾಡೋದು ಉತ್ತಮವಾ ಅಥವಾ ಷೇರುಗಳ ಮೇಲಿನ ಹೂಡಿಕೆ ಉತ್ತಮವಾ ಎನ್ನುವ ಗೊಂದಲ ಬಹುತೇಕರನ್ನು ಕಾಡುತ್ತದೆ.

VISTARANEWS.COM


on

Money Guide
Koo

ಬೆಂಗಳೂರು: ನಮ್ಮ ಭವಿಷ್ಯ ಉತ್ತಮವಾಗಿರಬೇಕೆಂದರೆ, ಆರ್ಥಿಕ ಸಮಸ್ಯೆ ಎದುರಾಗಬಾರದು ಎಂದಿದ್ದರೆ ಬ್ಯಾಂಕ್‌ ಬ್ಯಾಲನ್ಸ್‌ ಚೆನ್ನಾಗಿರಬೇಕು. ಇದಕ್ಕಾಗಿ ಹೂಡಿಕೆಯತ್ತಲೂ ಗಮನ ಹರಿಸಬೇಕು ಎನ್ನುತ್ತಾರೆ ಆರ್ಥಿಕ ತಜ್ಞರು. ವೃತ್ತಿ ಜೀವನದ ಆರಂಭಿಕ ದಿನಗಳಲ್ಲೇ ಹೂಡಿಕೆ ಮಾಡಲು ತೊಡಗಬೇಕು. ಭಾರತದಲ್ಲಿ ಹೂಡಿಕೆಯ ವೈವಿಧ್ಯ ಆಯ್ಕೆ ಲಭ್ಯವಿದ್ದು, ಸರಿಯಾಗಿ ಯೋಚಿಸಿ ನಿಮ್ಮ ಆರ್ಥಿಕ ಸ್ಥಿತಿಗೆ ಹೊಂದಿಕೆಯಾಗುವುದನ್ನು ಸೆಲೆಕ್ಟ್‌ ಮಾಡುವುದು ಮುಖ್ಯ. ಈ ಪೈಕಿ ಬಹು ಜನಪ್ರಿಯ ವಿಧವಾದ ಚಿನ್ನದ ಮೇಲೆ ಹೂಡಿಕೆ ಮಾಡೋದು ಉತ್ತಮವಾ ಅಥವಾ ಷೇರುಗಳ ಮೇಲಿನ ಹೂಡಿಕೆ ಉತ್ತಮವಾ ಎನ್ನುವ ಗೊಂದಲ ಬಹುತೇಕರನ್ನು ಕಾಡುತ್ತದೆ. ಅದಕ್ಕೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಹೂಡಿಕೆ ಯಾಕೆ ಮುಖ್ಯ?

ಹೂಡಿಕೆ ಯಾಕೆ ಮುಖ್ಯ? ಹೂಡಿಕೆಯಲ್ಲಿ ತೊಡಗುವ ಮುನ್ನ ಗಮನಿಸಬೇಕಾದ ಅಂಶಗಳು ಯಾವುವು ಎನ್ನುವುದನ್ನು ಮೊದಲು ನೋಡೋಣ. ದಿನ ಕಳೆದಂತೆ ವಸ್ತುಗಳು ದುಬಾರಿಯಾಗುತ್ತಿವೆ. ಜೀವನ ವೆಚ್ಚವೂ ಹೆಚ್ಚುತ್ತಾ ಸಾಗುತ್ತಿದೆ. ಇದರಿಂದ ಸಂಬಳವೊಂದನ್ನೇ ನಂಬಿಕೊಂಡರೆ ಸಾಕಾಗುವುದಿಲ್ಲ. ಹೀಗಾಗಿ ಹೂಡಿಕೆ ಮಾಡುವ ಮೂಲಕ ಆದಾಯ ಗಳಿಸುವತ್ತ ಚಿಂತನೆ ನಡೆಸಬೇಕು ಎನ್ನುತ್ತಾರೆ ತಜ್ಞರು. ಹಾಗಂತ ಕಷ್ಟಪಟ್ಟು ದುಡಿದಿರುವ ಹಣವನ್ನು ಸಿಕ್ಕ ಸಿಕ್ಕಲ್ಲಿ ಹೂಡಿಕೆ ಮಾಡುವುದು ಕೂಡ ಜಾಣ ನಡೆಯಲ್ಲ. ಹೀಗಾಗಿ ಯಾವುದೇ ಹೂಡಿಕೆಗೂ ಮುನ್ನ ಆ ಕುರಿತಾಗಿ ಕೂಲಂಕುಷ ಅಧ್ಯಯನ ಮಾಡುವುದನ್ನು ಮರೆಯಬೇಡಿ.

ಈ ಅಂಶಗಳನ್ನು ಗಮನಿಸಿ

ದೇಶದ ಮಧ್ಯಮ ವರ್ಗದವರು ತಮ್ಮ ಸಂಪತ್ತನ್ನು ಹೆಚ್ಚಿಸಲು ಹೂಡಿಕೆ ಅತ್ಯುತ್ತಮ ಮಾರ್ಗವೆಂದು ಪರಿಗಣಿಸುತ್ತಾರೆ. ಗಮನಿಸಿ ಮೊದಲೇ ಹೇಳಿದಂತೆ ದೊಡ್ಡದಾಗಿರಲಿ ಅಥವಾ ಚಿಕ್ಕದಾಗಿರಲಿ ಯಾವಾಗಲೂ ಪರಿಶೀಲಿಸಿದ ನಂತರ ಹೂಡಿಕೆ ಮಾಡಬೇಕು. ಇದರಲ್ಲಿ ಅಲ್ಪಾವಧಿ ಹೂಡಿಕೆ ಮತ್ತು ದೀರ್ಘಾವಧಿಯ ಹೂಡಿಕೆ ಎನ್ನುವ ಎರಡು ವಿಧವಿದೆ. ನಿಮ್ಮ ಹಣಕಾಸಿನ ಗುರಿಗೆ ಅನುಗುಣವಾಗಿ ಇದನ್ನು ಆಯ್ಕೆ ಮಾಡಿ. ಜತೆಗೆ ನಿಮ್ಮ ಹೂಡಿಕೆ ಮೇಲೆ ವಿಧಿಸಲಾಗುವ ತೆರಿಗೆ ಪ್ರಮಾಣವನ್ನೂ ತಿಳಿದುಕೊಳ್ಳಿ.

ಷೇರು V/S ಚಿನ್ನ

ಈ ಬಾರಿ ಬಜೆಟ್‌ ಮಂಡಿಸುವ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚಿನ್ನದ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ. 6ಕ್ಕೆ ಇಳಿಸಿದ್ದು, ಹಳದಿ ಲೋಹದತ್ತ ಎಲ್ಲರ ಕಣ್ಣು ನೆಟ್ಟಿದೆ. ಇದರಿಂದ ಈಗಾಗಲೇ ಚಿನ್ನದ ಬೆಲೆ ಕಡಿಮೆಯಾಗಿದೆ. ಇನ್ನೂ ಇಳಿಕೆಯಾಗುವ ಸೂಚನೆ ಇದೆ. ಕಳೆದ ಐದು ವರ್ಷಗಳಲ್ಲಿ ಚಿನ್ನದ ಆದಾಯವು ಷೇರು ಆದಾಯವನ್ನು ಮೀರಿಸಿದೆ. ನಿಫ್ಟಿ 50 ಶೇಕಡಾ 13.95ರಷ್ಟು ಆದಾಯ ತಂದುಕೊಟ್ಟರೆ ಚಿನ್ನ ಶೇ. 16.21ರಷ್ಟು ನೀಡುತ್ತಿದೆ. ಆದಾಗ್ಯೂ ಷೇರುಗಳು 20 ವರ್ಷಗಳವರೆಗಿನ ದೀರ್ಘಾವಧಿಗೆ ಉತ್ತಮ ಆದಾಯವನ್ನು ಒದಗಿಸುತ್ತದೆ ಎನ್ನುವುದರಲ್ಲಿ ಸಂದೇಹವಿಲ್ಲ.

ಹೂಡಿಕೆ ತಜ್ಞರು 2024ರ ಉತ್ತರಾರ್ಧದಲ್ಲಿ ಎರಡೂ ವಿಧದಲ್ಲಿ ಸ್ಥಿರ ಬೆಳವಣಿಗೆಯನ್ನು ನಿರೀಕ್ಷಿಸುತ್ತಾರೆ. ವರ್ಷಾಂತ್ಯದ ವೇಳೆಗೆ ನಿಫ್ಟಿ 50 25,600ರಿಂದ 26,000 ಅಂಕ ತಲುಪಬಹುದು ಮತ್ತು ಚಿನ್ನದ ಬೆಲೆ 10 ಗ್ರಾಂಗೆ 81,500 ರೂ.ಗೆ ಏರಬಹುದು ಎಂದು ರೆಲಿಗೇರ್ ಬ್ರೋಕಿಂಗ್ ಲಿಮಿಟೆಡ್‌ನ ಅಜಿತ್ ಮಿಶ್ರಾ ಹೇಳಿದ್ದಾರೆ. ಹೀಗಾಗಿ ಸಮತೋಲಿತ ವಿಧಾನವನ್ನು ಕಾಪಾಡಿಕೊಳ್ಳಲು ಹಣವನ್ನು ಹಂಚಿಕೆ ಮಾಡಲು ಅವರು ಸಲಹೆ ನೀಡುತ್ತಾರೆ.

ಮೆಹ್ತಾ ಇಕ್ವಿಟೀಸ್ ಲಿಮಿಟೆಡ್‌ನ ರಾಹುಲ್ ಕಲಾಂತ್ರಿ ಅವರು, ಚಿನ್ನದ ಮಾನ್ಯತೆಯನ್ನು ಹೆಚ್ಚಿಸಲು ಪೋರ್ಟ್‌ಫೋಲಿಯೊ ಸರಿಹೊಂದಿಸಲು ಸಲಹೆ ನೀಡುತ್ತಾರೆ. ಚಿನ್ನದ ಮೇಲಿನ ಹಂಚಿಕೆಯನ್ನು ಶೇ. 10-15ರಿಂದ ಶೇ. 30-35ಕ್ಕೆ ಹೆಚ್ಚಿಸಬೇಕು ಎಂದಿದ್ದಾರೆ.

ಪ್ರಸ್ತುತ, ಷೇರುಗಳು ಮತ್ತು ಚಿನ್ನ ಎರಡೂ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ. ಇವೆರಡೂ ವಿಭಿನ್ನ ಹೂಡಿಕೆ ಉದ್ದೇಶಗಳನ್ನು ಪೂರೈಸುತ್ತಿವೆ. ದೀರ್ಘಾವಧಿಯಲ್ಲಿನ ಆದಾಯಕ್ಕೆ ಷೇರುಗಳು ಹೆಸರುವಾಸಿಯಾದರೆ ಇದಕ್ಕೆ ವಿರುದ್ಧವಾಗಿ ಆರ್ಥಿಕ ಅನಿಶ್ಚಿತತೆಯ ಅವಧಿಯಲ್ಲಿ ಚಿನ್ನವನ್ನು ಅಮೂಲ್ಯ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಎರಡರಲ್ಲೂ ಹೂಡಿಕೆ ಮಾಡುವುದು ಉತ್ತಮ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: NPS Vatsalya Scheme: ಏನಿದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆ? ನಮ್ಮ ಮಕ್ಕಳಿಗೆ ಇದರಿಂದೇನು ಪ್ರಯೋಜನ?

Continue Reading

ಮನಿ-ಗೈಡ್

ITR Filing: ಐಟಿಆರ್ ಸಲ್ಲಿಕೆ; ಜುಲೈ 31ರ ಗಡುವು ತಪ್ಪಿಸಿಕೊಂಡರೆ ಎಷ್ಟು ದಂಡ?

ಆದಾಯ ತೆರಿಗೆ ಇಲಾಖೆಯು ತೆರಿಗೆದಾರರಿಗೆ ಇಮೇಲ್‌ ಮತ್ತು ಎಸ್‌ಎಂಎಸ್‌ಗಳ ಮೂಲಕ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ನೆನಪಿಸುತ್ತಿದೆ. ಹೀಗಾಗಿ ಹೆಚ್ಚಿನವರು ಕೂಡಲೇ ಐಟಿಆರ್ ಸಲ್ಲಿಸುವ ಮೂಲಕ ದಂಡದಿಂದ ತಪ್ಪಿಸಿಕೊಳ್ಳಬಹುದು. 2024- 25ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು (ITR Filing) ಗಡುವು ಮುಗಿದರೂ ದಂಡ ಸಹಿತ ರಿಟರ್ನ್ ಸಲ್ಲಿಕೆಗೆ ಅವಕಾಶವಿದೆ.

VISTARANEWS.COM


on

By

ITR Filing
Koo

ಆದಾಯ ತೆರಿಗೆ ರಿಟರ್ನ್ (Income Tax Returns) ಸಲ್ಲಿಸಲು (ITR Filing) ಇನ್ನು ಕೇವಲ ಎರಡು ದಿನಗಳು ಬಾಕಿ ಉಳಿದಿವೆ. ಆದರೆ ಗಡಿಬಿಡಿಯಲ್ಲಿ ಐಟಿಆರ್ ಸಲ್ಲಿಸಿ ತೊಂದರೆ ಪಡುವವರೂ ಇದ್ದಾರೆ. 2024- 25ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸಲು ಗಡುವು ಮುಗಿದರೂ ದಂಡ ಸಹಿತ ರಿಟರ್ನ್ (ITR Filing With penalty) ಸಲ್ಲಿಕೆಗೆ ಅವಕಾಶವಿದೆ.

ಆದಾಯ ತೆರಿಗೆ ಇಲಾಖೆಯು ತೆರಿಗೆದಾರರಿಗೆ ಇಮೇಲ್‌ ಮತ್ತು ಎಸ್‌ಎಂಎಸ್‌ಗಳ ಮೂಲಕ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ನೆನಪಿಸುತ್ತಿದೆ. ಹೀಗಾಗಿ ಹೆಚ್ಚಿನವರು ಕೂಡಲೇ ಐಟಿಆರ್ ಸಲ್ಲಿಸುವ ಮೂಲಕ ದಂಡದಿಂದ ತಪ್ಪಿಸಿಕೊಳ್ಳುತ್ತಾರೆ.

ಪ್ರತಿ ಜುಲೈನಲ್ಲಿ ತೆರಿಗೆ ಇಲಾಖೆಯು ಗಡುವು ಮುಗಿಯುವವರೆಗೆ ತೆರಿಗೆದಾರರಿಗೆ ನಿಗದಿತ ದಿನಾಂಕವನ್ನು ನಿರಂತರವಾಗಿ ನೆನಪಿಸುತ್ತಿರುತ್ತದೆ. ಐಟಿಆರ್ ಸಲ್ಲಿಕೆಗೆ ಈ ವರ್ಷದ ಗಡುವನ್ನು ವಿಸ್ತರಿಸುವ ಸಾಧ್ಯತೆಯ ಬಗ್ಗೆ ಆದಾಯ ತೆರಿಗೆ ಇಲಾಖೆ ಇನ್ನೂ ಪ್ರತಿಕ್ರಿಯಿಸಿಲ್ಲ.

ಅಂತಿಮ ಗಡುವು ಯಾವಾಗ?

ತೆರಿಗೆ ಲೆಕ್ಕಪರಿಶೋಧನೆಯ ಅಗತ್ಯವಿರುವ ತೆರಿಗೆದಾರರಿಗೆ ಐಟಿಆರ್ ಫೈಲ್ ಮಾಡಲು 2024ರ ಅಕ್ಟೋಬರ್ 31ರವರೆಗೆ ಅವಕಾಶವಿದೆ. ಆರ್ಥಿಕ ವರ್ಷ 2024-25ಗಾಗಿ ಪರಿಷ್ಕೃತ ಮತ್ತು ತಡವಾದ ರಿಟರ್ನ್‌ಗಳನ್ನು ಸಲ್ಲಿಸಲು ಅಂತಿಮ ಗಡುವು 2024ರ ಡಿಸೆಂಬರ್ 31 ಆಗಿದೆ.

ITR Filing
ITR Filing

ತೆರಿಗೆ ಸಲ್ಲಿಸುವಿಕೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆದಾಯ ತೆರಿಗೆ ಇಲಾಖೆಯು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ವಿವಿಧ ಐಟಿಆರ್ ಫಾರ್ಮ್‌ಗಳು ಮತ್ತು ಎಕ್ಸೆಲ್ ಮಾಹಿತಿಗಳನ್ನು ನಿರ್ಧಿಷ್ಟ ವೆಬ್‌‌ಸೈಟ್ ಮೂಲಕ ಪ್ರಕಟಿಸುತ್ತದೆ. ಆದರೂ ಹೆಚ್ಚಿನ ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಫಾರ್ಮ್ 16 ಅನ್ನು ಉದ್ಯೋಗದಾತರಿಂದ ಸ್ವೀಕರಿಸಲು ಕಾಯುತ್ತಾರೆ. ಸಾಮಾನ್ಯವಾಗಿ ಇದನ್ನು ಜೂನ್ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ವಿತರಿಸಲಾಗುತ್ತದೆ.

ಐಟಿಆರ್ ಫೈಲಿಂಗ್‌ಗೆ ಜುಲೈ 31 ಅಂತಿಮ ದಿನಾಂಕದೊಂದಿಗೆ ತೆರಿಗೆದಾರರು ಹಿಂದಿನ ಹಣಕಾಸು ವರ್ಷದ ಎಲ್ಲಾ ಆದಾಯ ಮತ್ತು ಹೂಡಿಕೆ ವಿವರಗಳನ್ನು ಕ್ರೋಡೀಕರಿಸಲು ಮತ್ತು ತಮ್ಮ ತೆರಿಗೆ ರಿಟರ್ನ್‌ಗಳನ್ನು ಸಲ್ಲಿಸಲು ಏಪ್ರಿಲ್ 1ರಿಂದ ಜುಲೈ 31 ರವರೆಗೆ ನಾಲ್ಕು ತಿಂಗಳ ಅವಧಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

ಎಷ್ಟು ದಂಡ?

ಜುಲೈ 31ರ ಗಡುವಿನ ನಂತರ ಐಟಿಆರ್ ಸಲ್ಲಿಸುವುದರಿಂದ ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ.

5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

Continue Reading

ಮನಿ-ಗೈಡ್

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Money Guide: ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಲು ಕೆಲವೇ ದಿನ ಬಾಕಿ ಉಳಿದಿದೆ. ಜುಲೈ 31 ದಂಡ ರಹಿತವಾಗಿ ಐಟಿಆರ್ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈಗಲೇ ಫೈಲ್‌ ಮಾಡಿ. ಐಟಿಆರ್ ಫೈಲ್ ಮಾಡುವಾಗ ಗಮನಿಸಬೇಕಾದ ಕೆಲವು ಅಂಶಗಳ ಬಗ್ಗೆ ಮಾಹಿತಿ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಎಲ್ಲ ತೆರಿಗೆದಾರರೇ ಗಮನಿಸಿ. ಆದಾಯ ತೆರಿಗೆ ರಿಟರ್ನ್ (Income Tax Returns) ಫೈಲ್ ಮಾಡಲು ಕೆಲವೇ ದಿನ ಬಾಕಿ ಉಳಿದಿದೆ. ಜುಲೈ 31 ದಂಡ ರಹಿತವಾಗಿ ಐಟಿಆರ್ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಈಗಾಗಲೇ 5 ಕೋಟಿಗೂ ಹೆಚ್ಚು ಐಟಿಆರ್ ಸಲ್ಲಿಸಲಾಗಿದೆ. ತೆರಿಗೆ ಪಾವತಿದಾರರು ಯಾವುದೇ ಗಡುವು ವಿಸ್ತರಣೆಗಾಗಿ ಕಾಯಬೇಡಿ ಮತ್ತು ಈಗಲೇ ಐಟಿಆರ್ ಸಲ್ಲಿಸಿ ಎನ್ನುವುದು ತಜ್ಞರ ಸಲಹೆ. ಐಟಿಆರ್ ಫೈಲ್ ಮಾಡುವಾಗ ಗಮನಿಸಬೇಕಾದ ಕೆಲವು ಅಂಶಗಳ ಬಗ್ಗೆ ಮಾಹಿತಿ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

“ಈ ಹಣಕಾಸು ವರ್ಷದ ಐಟಿಆರ್ ಸಲ್ಲಿಸದೆ ಇರುವವರು ಕೊನೆಯ ಕ್ಷಣದ ಗೊಂದಲವನ್ನು ತಪ್ಪಿಸಲು ಆದಷ್ಟು ಬೇಗ ಫೈಲ್‌ ಮಾಡಿʼʼ ಎಂದು ಆದಾಯ ತೆರಿಗೆ ಇಲಾಖೆ ತನ್ನ ಎಕ್ಸ್‌ ಖಾತೆಯಲ್ಲಿ ತಿಳಿಸಿದೆ. ಕಳೆದ ವರ್ಷದ ಜುಲೈ 27ಕ್ಕೆ ಹೋಲಿಸಿದರೆ ಈ ವರ್ಷ ಅತಿ ಹೆಚ್ಚು ಫೈಲಿಂಗ್‌ ಆಗಿದೆ. ಜುಲೈ 26ರವರೆಗೆ 5 ಕೋಟಿಗೂ ಹೆಚ್ಚು ಐಟಿಆರ್‌ಗಳನ್ನು ಸಲ್ಲಿಸಲಾಗಿದೆ ಎಂದೂ ಹೇಳಿದೆ.

ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸಂಗ್ರಹಿಸಿ

ಗಡುವು ಮುಗಿಯುವ ದಿನ ಸಮೀಪಿಸುತ್ತಿರುವುದರಿಂದ ತೆರಿಗೆದಾರರು ಐಟಿಆರ್ ಸಲ್ಲಿಸಲು ಪ್ರಾರಂಭಿಸುವ ಮೊದಲು ತಮ್ಮ ದಾಖಲೆಗಳನ್ನು ಸಿದ್ಧವಾಗಿರಿಸಿಕೊಳ್ಳಬೇಕು. ಅಗತ್ಯವಿರುವ ದಾಖಲೆಗಳೆಂದರೆ: ನಿಮ್ಮ ಕಂಪನಿಯಿಂದ ದೊರೆಯುವ ಫಾರ್ಮ್ 16, ಬ್ಯಾಂಕುಗಳು ಮತ್ತು ಅಂಚೆ ಕಚೇರಿಗಳ ಬಡ್ಡಿ ಪ್ರಮಾಣ ಪತ್ರಗಳು, ಟಿಡಿಎಸ್ ಪ್ರಮಾಣ ಪತ್ರಗಳು, ತೆರಿಗೆ ಕ್ರೆಡಿಟ್ ವಿವರಗಳಿಗಾಗಿ ಫಾರ್ಮ್ 26 ಎಎಸ್, ಟ್ಯಾಕ್ಸ್‌ ಡಿಡಕ್ಷನ್‌ಗಾಗಿ ತೆರಿಗೆ ಸೆಕ್ಷನ್‌ 80 ಸಿ, 80 ಡಿ ಇತ್ಯಾದಿಯಲ್ಲಿನ ಹೂಡಿಕೆಯ ಪುರಾವೆ.

ಫಾರ್ಮ್ 26 ಎಎಸ್‌ (Form 26AS) ಪರಿಶೀಲಿಸಿ

ಫಾರ್ಮ್ 26 ಎಎಸ್‌ನಲ್ಲಿನ ವಿವರಗಳು ನಿಮ್ಮ ಐಟಿಆರ್ ಫಾರ್ಮ್‌ನಲ್ಲಿರುವ ವಿವರಗಳೊಂದಿಗೆ ಹೊಂದಿಕೆಯಾಗುತ್ತವೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಫಾರ್ಮ್ 26 ಎಎಸ್‌ ಕಡಿತಗೊಳಿಸಿದ ತೆರಿಗೆ, ಸಂಗ್ರಹಿಸಿದ ತೆರಿಗೆ ಮತ್ತು ಹಣಕಾಸು ವರ್ಷದಲ್ಲಿ ಪಾವತಿಸಿದ ಯಾವುದೇ ಮುಂಗಡ ತೆರಿಗೆಯ ವಿವರಗಳನ್ನು ಒದಗಿಸುತ್ತದೆ.

ಸೂಕ್ತ ಐಟಿಆರ್ ಫಾರ್ಮ್‌ ಆಯ್ಕೆ ಮಾಡಿ

ಸರಿಯಾದ ಐಟಿಆರ್ ಫಾರ್ಮ್ ಅನ್ನು ಆಯ್ಕೆ ಮಾಡುವುದು ಕೂಡ ಮುಖ್ಯ. ಉದಾಹರಣೆಗೆ ವಾರ್ಷಿಕ ಆದಾಯ 50 ಲಕ್ಷ ರೂ. ವರೆಗಿನ ಸಂಬಳ ಪಡೆಯುವ ವ್ಯಕ್ತಿಗಳು ರಿಟರ್ನ್ಸ್ ಸಲ್ಲಿಸಲು ಐಟಿಆರ್ ಫಾರ್ಮ್ 1 ಅನ್ನು ಬಳಸುತ್ತಾರೆ. 50 ಲಕ್ಷ ರೂ. ವರೆಗಿನ ಆದಾಯವು ಸಂಬಳ, ಪಿಂಚಣಿ, ಒಂದು ಮನೆಯ ಆಸ್ತಿಯಿಂದ ಆದಾಯ ಮತ್ತು ಇತರ ಮೂಲಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ 5,000 ರೂ. ವರೆಗಿನ ಕೃಷಿ ಆದಾಯವೂ ಸೇರಿದೆ. ಗಮನಿಸಿ ತಪ್ಪು ಫಾರ್ಮ್ ಅನ್ನು ಬಳಸುವುದು ನಿಮ್ಮ ಐಟಿಆರ್ ತಿರಸ್ಕಾರಕ್ಕೆ ಕಾರಣವಾಗಬಹುದು.

ನಿಮ್ಮೆಲ್ಲ ಆದಾಯ ಮೂಲಗಳನ್ನು ಬಹಿರಂಗಪಡಿಸಿ

ಸಂಬಳ, ಬಡ್ಡಿ, ಬಾಡಿಗೆ ಆದಾಯ, ಬಂಡವಾಳ ಲಾಭಗಳು ಮತ್ತು ಇತರ ಯಾವುದೇ ಮೂಲಗಳು ಸೇರಿದಂತೆ ನಿಮ್ಮ ಎಲ್ಲ ಆದಾಯದ ಮೂಲಗಳನ್ನು ಬಹಿರಂಗಪಡಿಸಿ. ಬಹಿರಂಗಪಡಿಸದಿದ್ದರೆ ದಂಡ ಬೀಳುವ ಸಾಧ್ಯತೆ ಇದೆ.

ವಿನಾಯಿತಿಗಳು

ಆದಾಯ ತೆರಿಗೆ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಬರುವ ಎಲ್ಲ ಅರ್ಹ ಕಡಿತಗಳನ್ನು ಕ್ಲೈಮ್ ಮಾಡುವುದನ್ನು ಮರೆಯಬೇಡಿ. ಇದರಿಂದ ಗರಿಷ್ಠ ತೆರಿಗೆ ಉಳಿತಾಯ ಮಾಡಬಹುದು. ಲಭ್ಯವಿರುವ ಕಡಿತಗಳೆಂದರೆ:

ಸೆಕ್ಷನ್ 80 ಸಿ: ಪಿಪಿಎಫ್, ಎನ್ಎಸ್‌ಸಿ, ಇಎಲ್ಎಸ್ಎಸ್ ಇತ್ಯಾದಿಗಳಲ್ಲಿನ ಹೂಡಿಕೆ.
ಸೆಕ್ಷನ್ 80 ಡಿ: ಆರೋಗ್ಯ ವಿಮಾ ಪ್ರೀಮಿಯಂ.
ಸೆಕ್ಷನ್ 24 (ಬಿ): ಗೃಹ ಸಾಲದ ಮೇಲಿನ ಬಡ್ಡಿ- ಇವಕ್ಕೆ ಸಂಬಂಧಿಸಿ ದಾಖಲೆಗಳನ್ನು ಹೊಂದಿಸಿ.

ವಿನಾಯಿತಿ ಆದಾಯವನ್ನು ವರದಿ ಮಾಡಿ

    ಕೃಷಿ ಆದಾಯದಂತಹ ವಿನಾಯಿತಿ ಆದಾಯವನ್ನು ಐಟಿಆರ್‌ನಲ್ಲಿ ವರದಿ ಮಾಡಿ. ತೆರಿಗೆಗೆ ಒಳಪಡದಿದ್ದರೂ ಅದನ್ನು ನಮೂದಿಸಿಬೇಕು. ಇದು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ ಮತ್ತು ಭವಿಷ್ಯದಲ್ಲಿ ಕಂಡುಬರಬಹುದಾದ ತೊಡಕುಗಳನ್ನು ತಪ್ಪಿಸುತ್ತದೆ.

    ನಿಮ್ಮ ಬ್ಯಾಂಕ್ ಖಾತೆ ಸಮರ್ಪಕವಾಗಿರಲಿ

    ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳು ಮತ್ತು ಪಾಸ್‌ಬುಕ್‌ಗಳು ಎಲ್ಲ ವಹಿವಾಟು (Transactions)ಗಳನ್ನು ನಿಖರವಾಗಿ ಪ್ರತಿಬಿಂಬಿಸುತ್ತವೆ ಎಂದು ಖಚಿತಪಡಿಸಿಕೊಳ್ಳಿ. ಎಲ್ಲ ತೆರಿಗೆ ಕಡಿತಗಳು ಮತ್ತು ಪಾವತಿಗಳನ್ನು ಲೆಕ್ಕ ಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅವುಗಳನ್ನು ಫಾರ್ಮ್ 26 ಎಎಸ್‌ನೊಂದಿಗೆ ಕ್ರಾಸ್ ಚೆಕ್ ಮಾಡಿ.

    ಈ ಸಾಮಾನ್ಯ ತಪ್ಪುಗಳನ್ನು ಮಾಡಬೇಡಿ

    ತಪ್ಪಾದ ವೈಯಕ್ತಿಕ ಮಾಹಿತಿಯನ್ನು ನಮೂದಿಸುವುದು, ಬ್ಯಾಂಕ್ ಖಾತೆ ವಿವರಗಳಲ್ಲಿ ದೋಷಗಳು, ಆದಾಯವನ್ನು ತಪ್ಪಾಗಿ ವರದಿ ಮಾಡುವುದು ಅಥವಾ ಕೈಬಿಡುವುದು, ಒಟ್ಟು ಆದಾಯ ಮತ್ತು ತೆರಿಗೆ ಹೊಣೆಗಾರಿಕೆಯ ತಪ್ಪು ಲೆಕ್ಕಾಚಾರದಂತಹ ಸಾಮಾನ್ಯ ದೋಷಗಳ ಬಗ್ಗೆ ಜಾಗರೂಕರಾಗಿರಬೇಕು. ಭರ್ತಿ ಮಾಡಿದ ಬಳಿಕ ಮರುಪರಿಶೀಲಿಸಿ. ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆಧಾರ್ ಒಟಿಪಿ, ನೆಟ್ ಬ್ಯಾಂಕಿಂಗ್ ಅಥವಾ ಲಭ್ಯವಿರುವ ಇತರ ವಿಧಾನಗಳ ಮೂಲಕ ಇ-ಪರಿಶೀಲನೆ ಆಯ್ಕೆಯನ್ನು ಬಳಸಿ.

    ಇದನ್ನೂ ಓದಿ: Income Tax Returns: ಆದಾಯ ತೆರಿಗೆ ರಿಟರ್ನ್ಸ್; ಯಾವ ಆದಾಯದವರಿಗೆ ಯಾವ ಫಾರ್ಮ್?

    ತಜ್ಞರ ನೆರವು ಪಡೆದುಕೊಳ್ಳಿ

    ಐಟಿಆರ್ ಫೈಲಿಂಗ್ ಪ್ರಕ್ರಿಯೆಯ ವೇಳೆ ಯಾವುದೇ ಅನುಮಾನ, ಗೊಂದಲ ಮೂಡಿದರೆ ತಜ್ಞರ ನೆರವು ಪಡೆದುಕೊಳ್ಳಿ.

    ಕೊನೆಯ ಕ್ಷಣದವರೆಗೂ ಕಾಯಬೇಡಿ

    ಗಡುವು ವಿಸ್ತರಿಸುವ ನಿರೀಕ್ಷೆಗಳಿದ್ದರೂ ಅದಕ್ಕಾಗಿ ಕಾಯುವುದು ಸೂಕ್ತವಲ್ಲ. ಆದಾಯ ತೆರಿಗೆ ಇಲಾಖೆ ಅನೇಕ ಮಾಧ್ಯಮಗಳ ಮೂಲಕ ತೆರಿಗೆದಾರರಿಗೆ ಸಾಧ್ಯವಾದಷ್ಟು ಬೇಗ ರಿಟರ್ನ್ ಸಲ್ಲಿಸುವಂತೆ ನೆನಪಿಸುತ್ತದೆ. ಇದರಿಂದ ಕೊನೆಯ ಕ್ಷಣದ ಗೊಂದಲ ನಿವಾರಿಸಬಹುದು ಎನ್ನುವುದೇ ಇದಕ್ಕೆ ಮುಖ್ಯ ಕಾರಣ.

    Continue Reading
    Advertisement
    Ismail Haniyeh
    ಪ್ರಮುಖ ಸುದ್ದಿ3 mins ago

    Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

    BJP Protest
    ಕರ್ನಾಟಕ5 mins ago

    BJP Protest: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ; ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌!

    Israel v/s Hamas
    ವಿದೇಶ6 mins ago

    Israel v/s Hamas: ಇಸ್ರೇಲ್‌‌ ಮುಂದಿನ ಟಾರ್ಗೆಟ್ ಯಾರು? ಇಲ್ಲಿದೆ ಹಮಾಸ್ ‘ಉಗ್ರ’ ನಾಯಕರ ಹಿಟ್‌ ಲಿಸ್ಟ್!

    Wayanad Landslide
    ದೇಶ38 mins ago

    Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

    Sexual Abuse
    Latest1 hour ago

    Sexual Abuse: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

    Karnataka Rain
    ಕರ್ನಾಟಕ1 hour ago

    Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

    FASTag new rule
    ತಂತ್ರಜ್ಞಾನ1 hour ago

    FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

    Koti Koti Rokka Galisi kannada song released
    ಕರ್ನಾಟಕ1 hour ago

    Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

    Paris Olympics Archery
    ಕ್ರೀಡೆ2 hours ago

    Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

    ITR Filing
    ವಾಣಿಜ್ಯ2 hours ago

    ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka Rain
    ಮಳೆ1 day ago

    Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

    Karnataka Rain
    ಮಳೆ1 day ago

    Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

    Bharachukki falls
    ಚಾಮರಾಜನಗರ1 day ago

    Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

    karnataka Rain
    ಮಳೆ2 days ago

    Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

    Elephant combing Makna elephant captured near Bannerghatta
    ಬೆಂಗಳೂರು ಗ್ರಾಮಾಂತರ2 days ago

    Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

    karnataka rain
    ಮಳೆ2 days ago

    Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

    Tungabhadra Dam
    ಕೊಪ್ಪಳ3 days ago

    Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

    Elephant attack
    ಮಳೆ3 days ago

    Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

    karnataka Rain
    ಮಳೆ3 days ago

    Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

    karnataka Rain
    ಮಳೆ3 days ago

    Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

    ಟ್ರೆಂಡಿಂಗ್‌