Actor Chiranjeevi: ಸೆಲ್ಫಿ ತೆಗೆದುಕೊಳ್ಳಲು ಬಂದ ಇಂಡಿಗೋ ವಿಮಾನ ಸಿಬ್ಬಂದಿಯನ್ನು ತಳ್ಳಿದ ನಟ ಚಿರಂಜೀವಿ; ನೆಟ್ಟಿಗರಿಂದ ತರಾಟೆ! - Vistara News

ಟಾಲಿವುಡ್

Actor Chiranjeevi: ಸೆಲ್ಫಿ ತೆಗೆದುಕೊಳ್ಳಲು ಬಂದ ಇಂಡಿಗೋ ವಿಮಾನ ಸಿಬ್ಬಂದಿಯನ್ನು ತಳ್ಳಿದ ನಟ ಚಿರಂಜೀವಿ; ನೆಟ್ಟಿಗರಿಂದ ತರಾಟೆ!

Megastar Chiranjeevi: ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ವಿಮಾನ ನಿಲ್ದಾಣದಲ್ಲಿ ಲಿಫ್ಟ್‌ನಿಂದ ಹೊರಬರುತ್ತಾರೆ. ಇಂಡಿಗೋ ಏರ್‌ಲೈನ್ಸ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಚಿರಂಜೀವಿ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕೆಂದು ಬರುತ್ತಾರೆ. ಆಗ ನಟ ಚಿರಂಜೀವಿ ಅವರು ಪೋಸ್‌ ನೀಡದೆ, ಅಭಿಮಾನಿಯನ್ನು ತಳ್ಳಿ ಮುಂದೆ ಹೋಗುತ್ತಾರೆ.

VISTARANEWS.COM


on

Actor Chiranjeevi gets flak for ‘rudely’ pushing IndiGo employee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಗಾರ್ಜುನ ಮತ್ತು ಧನುಷ್ ಬಳಿಕ ವಿಮಾನ ನಿಲ್ದಾಣದಲ್ಲಿ ನಟ ಚಿರಂಜೀವಿ (Actor Chiranjeevi) ಅವರು ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಯನ್ನು ತಳ್ಳಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ಇದೀಗ ನಟನ ಈ ನಡವಳಿಕೆ ಬಗ್ಗೆ ನೆಟ್ಟಿಗರು ಕಮೆಂಟ್‌ ಮೂಲಕ ಕ್ಲಾಸ್‌ ತೆಗೆದುಕೊಂಡಿದ್ದಾರೆ. ವಿಡಿಯೊ ಕೂಡ ಭಾರಿ ವೈರಲ್‌ ಆಗುತ್ತಿದೆ.

ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ವಿಮಾನ ನಿಲ್ದಾಣದಲ್ಲಿ ಲಿಫ್ಟ್‌ನಿಂದ ಹೊರಬರುತ್ತಾರೆ. ಇಂಡಿಗೋ ಏರ್‌ಲೈನ್ಸ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಚಿರಂಜೀವಿ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕೆಂದು ಬರುತ್ತಾರೆ. ಆಗ ನಟ ಚಿರಂಜೀವಿ ಅವರು ಪೋಸ್‌ ನೀಡದೆ, ಅಭಿಮಾನಿಯನ್ನು ತಳ್ಳಿ ಮುಂದೆ ಹೋಗುತ್ತಾರೆ.

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ” ವಿಮಾನ ನಿಲ್ದಾಣದಲ್ಲಿ ಚಿರಂಜೀವಿ ಅಸಭ್ಯ ವರ್ತನೆ” ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರನ್ನು ನಟನನ್ನು ಸಮರ್ಥಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳನ್ನು ನಿರ್ಲಕ್ಷಿಸಿರುವುದು, ತಳ್ಳಿರುವುದು ಇದೇ ಮೊದಲಲ್ಲ. ಇತ್ತೀಚೆಗೆ, ನಾಗಾರ್ಜುನ ವಿಚಾರದಲ್ಲಿಯೂ ಇದೇ ಆಯ್ತು. ತಳ್ಳಿದ ವೀಡಿಯೊ ವೈರಲ್ ಆಗಿತ್ತು. ಬಳಿಕ ನಟ ನಾಗಾರ್ಜುನ (Actor Nagarjuna) ಅವರು ತಮ್ಮ ಬಾಡಿಗಾರ್ಡ್‌ ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆಯಾಚಿಸಿದ್ದರು.

ಚಿರಂಜೀವಿ ಶೀಘ್ರದಲ್ಲೇ ಮಲ್ಲಾಡಿ ವಸಿಷ್ಠ ಅವರ ʻವಿಶ್ವಂಭರʼದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಅಲ್ಲಿ ತ್ರಿಶಾ ಕೃಷ್ಣನ್ ಸಹನಟಿಯಾಗಲಿದ್ದಾರೆ. ಅವರು ಇತ್ತೀಚೆಗೆ ರಾಮ್ ಚರಣ್, ಉಪಾಸನಾ, ಕ್ಲಿನ್ ಕಾರಾ ಮತ್ತು ಸುರೇಖಾ ಅವರೊಂದಿಗೆ ಪ್ಯಾರಿಸ್‌ನಲ್ಲಿ 2024 ರ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ‘ವಿಶ್ವಂಭರ’ ಸಿನಿಮಾಗೆ ತ್ರಿಷಾ ನಾಯಕಿ!

ವಿಶ್ವಂಭರ’ ಸಿನಿಮಾದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಆರಂಭವಾಗಿದ್ದು, ಶೂಟಿಂಗ್‌ ಭರದಿಂದ ಸಾಗುತ್ತಿದೆ ಎನ್ನಲಾಗಿದೆ.ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಚಿತ್ರದಲ್ಲಿ ಚಿರಂಜೀವಿ ಜತೆ ತ್ರಿಶಾ ತೆರೆ ಹಂಚಿಕೊಳ್ಳಬೇಕಿತ್ತು. ಆದರೆ, ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ಅವರು ಚಿತ್ರದಿಂದ ಹೊರಗುಳಿದರು. ತ್ರಿಶಾ ಅವರು ಚಿರಂಜೀವಿ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. 18 ವರ್ಷಗಳ ನಂತರ ಮೆಗಾಸ್ಟಾರ್ ಅವರೊಂದಿಗೆ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಮಲ್ಲಿಡಿ ವಸಿಷ್ಠ ಅವರು ಬರೆದು ನಿರ್ದೇಶಿಸಿದ ‘ವಿಶ್ವಂಭರ’ ಒಂದು ಸೋಷಿಯೋ-ಫ್ಯಾಂಟಸಿ ಚಿತ್ರವಾಗಿದ್ದು, ಚಿರಂಜೀವಿ ಮುಖ್ಯ ಪಾತ್ರದಲ್ಲಿದ್ದಾರೆ. ವರದಿಗಳ ಪ್ರಕಾರ, ‘ವಿಶ್ವಂಭರ’ ಚಿತ್ರವನ್ನು ಯುವಿ ಕ್ರಿಯೇಷನ್ಸ್‌ 250 ಕೋಟಿ ರೂಪಾಯಿಗೂ ಹೆಚ್ಚು ಬಜೆಟ್‌ನಲ್ಲಿ ನಿರ್ಮಿಸಲಿದೆ ಎನ್ನಲಾಗಿದೆ. ಸಾಯಿ ಮಾಧವ್ ಬುರ್ರಾ ಸಂಭಾಷಣೆ ಬರೆದರೆ, ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಚೋಟಾ ಕೆ ನಾಯ್ಡು ಛಾಯಾಗ್ರಹಣ ಸಿನಿಮಾಕ್ಕಿದೆ.

ಸಿನಿಮಾಗಾಗಿ ಚಿರಂಜೀವಿ ಅವರು ಸಖತ್‌ ವರ್ಕೌಟ್‌ ಮಾಡುತ್ತಿದ್ದಾರೆ. 2023ರಲ್ಲಿ `ಭೋಲಾ ಶಂಕರ’ ಸಿನಿಮಾ ರಿಲೀಸ್‌ ಆಗಿತ್ತು. ಆದರೆ ಸಿನಿಮಾ ಗಳಿಕೆ ಕಂಡಿರಲಿಲ್ಲ. ಇದೀಗ ವಿಶಿಷ್ಟ ಪಾತ್ರದ ಮೂಲಕ ಮತ್ತೆ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಚಿರಂಜೀವಿ ಅವರನ್ನು ಹೊರತುಪಡಿಸಿ ಉಳಿದ ಪಾತ್ರಗಳಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎಂಬುದು ಚಿತ್ರತಂಡ ಮಾಹಿತಿ ಹಂಚಿಕೊಂಡಿಲ್ಲ. ಇದಲ್ಲದೇ ಚಿರಂಜೀವಿ ಅವರು ಬೋಯಪತಿ ಶ್ರೀನು ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲೂ ಚಿರಂಜೀವಿ ನಟಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Vanitha Vijaykumar: 43 ವರ್ಷದ ನಟಿ ವನಿತಾ ವಿಜಯಕುಮಾರ್ 4ನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು?

Vanitha Vijaykumar: ನಟಿ ಈ ಹಿಂದೆ ಮೂರು ಬಾರಿ ಮದುವೆಯಾಗಿದ್ದು, ಮೂರು ಮಕ್ಕಳ ತಾಯಿಯಾಗಿದ್ದಾರೆ. ಈ ಸುದ್ದಿಗೆ ಸಂಬಂಧಿಸಿದಂತೆ ವನಿತಾ ಅವರು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಮದುವೆ ಬಗ್ಗೆ ಪ್ರಶ್ನೆ ಕೇಳಿರುವ ಅಭಿಮಾನಿಯೊಬ್ಬರಿಗೆ, “ಒಂದು ಅನಿರೀಕ್ಷಿತ ತಿರುವಿಗಾಗಿ ಕಾಯಿರಿ” ಎಂದು ವನಿತಾ ಉತ್ತರಿಸಿದ್ದಾರಂತೆ!

VISTARANEWS.COM


on

Vanitha Vijaykumar Set To Tie The Knot Again
Koo

ಬೆಂಗಳೂರು: ವನಿತಾ ವಿಜಯಕುಮಾರ್ (Vanitha Vijaykumar) ತಮಿಳಿನ ಜನಪ್ರಿಯ ಹಿರಿಯ ನಟ ವಿಜಯಕುಮಾರ್ ಅವರ ಪುತ್ರಿ. ಅಷ್ಟೇ ಅಲ್ಲದೇ ಇತ್ತೀಚೆಗೆ ನರೇಶ್‌-ಪವಿತ್ರಾ ಲೋಕೇಶ್‌ ಅಭಿನಯ ಮತ್ತೆ ಮದುವೆ ಸಿನಿಮಾದಲ್ಲಿ ರಮ್ಯಾ ಅವರ ಪಾತ್ರ ನಿಭಾಯಿಸಿರುವ ನಟಿ. ವನಿತಾ ವಿಜಜ್‌ಕುಮಾರ್ ಹಲವು ಸಿನಿಮಾಗಳಿಗೆ ನಾಯಕಿಯಾಗಿಯೂ ಕಾಣಿಸಿಕೊಂಡಿದ್ದರು. ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.ಆದರೆ ನಟನೆಗಿಂತ ಹೆಚ್ಚು ವಿವಾದಗಳಿಂದ ಸುದ್ದಿಯಲ್ಲಿರುತ್ತಾರೆ. ಇದೀಗ ನಟಿ ವನಿತಾ ವಿಜಯಕುಮಾರ್ ಅವರು ನಾಲ್ಕನೇ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ನಟಿ ಈ ಹಿಂದೆ ಮೂರು ಬಾರಿ ಮದುವೆಯಾಗಿದ್ದು, ಮೂರು ಮಕ್ಕಳ ತಾಯಿಯಾಗಿದ್ದಾರೆ. ಈ ಸುದ್ದಿಗೆ ಸಂಬಂಧಿಸಿದಂತೆ ವನಿತಾ ಅವರು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಮದುವೆ ಬಗ್ಗೆ ಪ್ರಶ್ನೆ ಕೇಳಿರುವ ಅಭಿಮಾನಿಯೊಬ್ಬರಿಗೆ, “ಒಂದು ಅನಿರೀಕ್ಷಿತ ತಿರುವಿಗಾಗಿ ಕಾಯಿರಿ” ಎಂದು ವನಿತಾ ಉತ್ತರಿಸಿದ್ದಾರಂತೆ!

ಎರಡೂ ಮದುವೆಗಳು ಅಂತ್ಯ!

ಒಮ್ಮೆ ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ಜತೆ ಪ್ರೀತಿಯಲ್ಲಿದ್ದರು. ಆದರೆ, ಈ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಇಬ್ಬರೂ ತಮ್ಮ ಸಂಬಂಧವನ್ನು ಜಗಳದಲ್ಲಿಯೇ ಅಂತ್ಯಗೊಳಿಸುತ್ತಾರೆ. ಬಳಿಕ ಪೀಟರ್ ಪೌಲ್‌ ಜತೆ ವಿವಾಹವಾದರೂ, ಅದು ಕೂಡ ಬೇಗನೇ ಕೊನೆ ಆಯ್ತು. ಪೀಟರ್ (vanitha vijayakumar husband peter paul) ಮದುವೆಯನ್ನು ಮೊದಲ ಪತ್ನಿ ತೀವ್ರ ವಿರೋಧಿಸಿದ್ದರು. ವನಿತಾ ಜತೆ ಮದುವೆಯಾಗಿದ್ದೇ ಗೊತ್ತಿಲ್ಲ ಎಂದು ಮೊದಲ ಪತ್ನಿ ಬೀದಿ ರಂಪ ಮಾಡಿದ್ದರು.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ವನಿತಾ ವಿಜಯಕುಮಾರ್ ತನ್ನ ಕುಟುಂಬದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿಲ್ಲ. ತಂದೆ ವಿಜಯಕುಮಾರ್ ಮತ್ತು ಆಕೆಯ ಸಹೋದರ ಅರುಣ್ ವಿಜಯ್ ಈ ನಟನಿಂದ ದೂರವೇ ಉಳಿಸಿದ್ದಾರೆ.

2000ರಲ್ಲಿ, ವನಿತಾ ವಿಜಯ್‌ಕುಮಾರ್ ಅವರು ನಟ ಆಕಾಶ್ ಅವರೊಂದಿಗೆ ಮದುವೆಯಾದರು. ಈ ದಂಪತಿಗೆ ಮಗ ಕೂಡ ಇದ್ದ. ಆದರೆ 2005ರಲ್ಲಿ ವಿಚ್ಛೇದನ ಪಡೆದು ಆಕಾಶ್ ಅವರಿಂದ ದೂರವಾದರು. ನಂತರ 2007ರಲ್ಲಿ ಉದ್ಯಮಿ ಆನಂದ್ ಜಯ್ ರಾಮನ್ ಎಂಬುವವರ ಜೊತೆಗೆ ವನಿತಾ ಎರಡನೇ ಮದುವೆಯಾದರು. ಆದರೆ 2012ರಲ್ಲಿ ಅವರೊಂದಿಗೂ ಹೊಂದಾಣಿಕೆ ಕೊರತೆಯಿಂದ ದಾಂಪತ್ಯಕ್ಕೆ ಕೊನೆ ಹಾಡಿದರು. ಬಳಿಕ 2020ರಲ್ಲಿ ಫೋಟೋಗ್ರಾಫರ್ ಪೀಟರ್ ಪೌಲ್‌ ಮದುವೆಯಾದರು. ಆದರೆ ನಾಲ್ಕೇ ತಿಂಗಳಲ್ಲಿ ಈ ಮದುವೆ ಕೂಡ ಮುರಿದುಬಿತ್ತು.

ತ್ಯಾಗರಾಜನ್ ನಿರ್ದೇಶನದಲ್ಲಿ ತಯಾರಾದ ಅಂದಗನ್ ಎಂಬ ತಮಿಳು ಚಿತ್ರದಲ್ಲಿ ವನಿತಾ ನಟಿಸುತ್ತಿದ್ದಾರೆ. ಇದರಲ್ಲಿ ಪ್ರಶಾಂತ್ ನಾಯಕನಾಗಿ ಸಿಮ್ರಾನ್, ಪ್ರಿಯಾ ಆನಂದ್, ಕಾರ್ತಿಕ್ ಮತ್ತು ಸಮುದ್ರಕನಿ ನಟಿಸಿದ್ದಾರೆ. ಈ ಚಿತ್ರವನ್ನು ಸ್ಟಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಶಾಂತಿ ತ್ಯಾಗರಾಜನ್ ಮತ್ತು ಪ್ರೀತಿ ತ್ಯಾಗರಾಜನ್ ನಿರ್ಮಿಸಿದ್ದಾರೆ.

Continue Reading

ಟಾಲಿವುಡ್

Ram Pothineni: ಗುರುವಿಗೆ ತಿರುಮಂತ್ರ ಹಾಕಿದ ಶಿಷ್ಯ; ನಟನ ಅನ್​ಫಾಲೋ ಮಾಡಿದ ಖ್ಯಾತ ನಟಿ!

Ram Pothineni: ‘ಡಬಲ್ ಇಸ್ಮಾರ್ಟ್” ಮತ್ತು ”ಮಿಸ್ಟರ್ ಬಚ್ಚನ್” ತಂಡದ ನಡುವೆ ಶೀತಲ ಸಮರ ಆರಂಭವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ, ಬಚ್ಚನ್ ನಿರ್ದೇಶಕ ಹರೀಶ್ ಶಂಕರ್ ಅವರು ಪರಿಸ್ಥಿತಿಯನ್ನು ತಿಳಿಸಿದರು. ಅನಿವಾರ್ಯ ಕಾರಣಗಳಿಂದ ಅದೇ ದಿನಾಂಕದಂದು ಸಿನಿಮಾ ಬಿಡುಗಡೆ ಮಾಡುತ್ತಿದ್ದೇವೆಯೇ ಹೊರತು ವೈಯಕ್ತಿಕ ದ್ವೇಷದಿಂದಲ್ಲ ಎಂದು ಸ್ಪಷ್ಟಪಡಿಸಿದರು.

VISTARANEWS.COM


on

Ram Pothineni Double iSmart Bachchan Director Breaks Silence On Clash
Koo

ಬೆಂಗಳೂರು: ನಿರ್ದೇಶಕ ಪೂರಿ ಜಗನ್ನಾಥ್ ಮತ್ತು ನಟ ರವಿತೇಜ `ಇಟ್ಲು ಶ್ರಾವಣಿ ಸುಬ್ರಮಣ್ಯಂ’ ಮತ್ತು `ಈಡಿಯಟ್’ ನಂತಹ ಹಿಟ್ ಸಿನಿಮಾಗಳನ್ನು (Mr Bachchan Director) ಒಟ್ಟಿಗೆ ನೀಡಿದವರು. ರವಿತೇಜಾ ಅವರ ʻಮಿಸ್ಟರ್ ಬಚ್ಚನ್ʼ ಮತ್ತು ಪುರಿ ಅವರ ನಿರ್ದೇಶನದ ʻಡಬಲ್ ಇಸ್ಮಾರ್ಟ್ʼ (Ram Pothineni) ಆಗಸ್ಟ್ 15 ರಂದು ತೆಲುಗು ಬಾಕ್ಸ್ ಆಫೀಸ್ನಲ್ಲಿ ಘರ್ಷಣೆಗೆ ಸಿದ್ಧವಾಗಿದೆ (Puri Jagannadh’s directorial ). ‘ಡಬಲ್ ಇಸ್ಮಾರ್ಟ್” ಮತ್ತು ”ಮಿಸ್ಟರ್ ಬಚ್ಚನ್” ತಂಡದ ನಡುವೆ ಶೀತಲ ಸಮರ ಆರಂಭವಾಗಿದೆ.

ʻಮಿಸ್ಟರ್ ಬಚ್ಚನ್ʼ ನಿರ್ದೇಶಕ ಹ್ಯಾರಿಸ್ ಶಂಕರ್ ಬೇರೆ ಯಾರು ಅಲ್ಲ, ಬದಲಿಗೆ ಪುರಿ ಜಗನ್ನಾಥ್ ಶಿಷ್ಯ. ಒಂದು ಕಾಲದಲ್ಲಿ ಪುರಿ ಬಳಿ ಕೆಲಸ ಕಲಿತ ಹ್ಯಾರಿಸ್ ಶಂಕರ್ ಈಗ ಗುರುವಿಗೆ ತಿರುಮಂತ್ರ ಹಾಕುತ್ತಿದ್ದಾರೆ. ಕೇವಲ ಹ್ಯಾರಿಸ್ ಶಂಕರ್ ಮಾತ್ರ ಅಲ್ಲ, ʻಮಿಸ್ಟರ್ ಬಚ್ಚನ್ʼ ಚಿತ್ರದ ಮೂಲಕ ರವಿತೇಜಾ ಕೂಡ ಪುರಿ ಜಗನ್ನಾಥ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ರವಿತೇಜಾ ಅವರಿಂದ ಪುರಿ ಜಗನ್ನಾಥ್ ಇದನ್ನು ನಿರೀಕ್ಷೆ ಮಾಡಿರಲಿಲ್ಲ.

ʻಡಬಲ್ ಇಸ್ಮಾರ್ಟ್” ಚಿತ್ರಕ್ಕೆ ಚಾರ್ಮಿ ಕೌರ್ ಕೂಡ ಬಂಡವಾಳ ಹೂಡಿದ್ದಾರೆ. ಹೀಗಾಗಿಯೇ ಪುರಿ ಜಗನ್ನಾಥ್ ಜೊತೆ ರವಿತೇಜಾ ಮೇಲೆ ಕೋಪ ಮಾಡಿಕೊಂಡಿರುವ ಚಾರ್ಮಿ,ಸದ್ಯಕ್ಕೆ ”ಮಿಸ್ಟರ್ ಬಚ್ಚನ್” ನಿರ್ದೇಶಕ ಹರೀಶ್ ಶಂಕರ್ ಮತ್ತು ನಾಯಕ ರವಿತೇಜಾ ಇಬ್ಬರನ್ನೂ ಸಾಮಾಜಿಕ ಜಾಲತಾಣದಲ್ಲಿ ಅನ್​ಫಾಲೋ ಮಾಡಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚಿನ ಸಂದರ್ಶನವೊಂದರಲ್ಲಿ, ಬಚ್ಚನ್ ನಿರ್ದೇಶಕ ಹರೀಶ್ ಶಂಕರ್ ಅವರು ಪರಿಸ್ಥಿತಿಯನ್ನು ತಿಳಿಸಿದರು. ಅನಿವಾರ್ಯ ಕಾರಣಗಳಿಂದ ಅದೇ ದಿನಾಂಕದಂದು ಸಿನಿಮಾ ಬಿಡುಗಡೆ ಮಾಡುತ್ತಿದ್ದೇವೆಯೇ ಹೊರತು ವೈಯಕ್ತಿಕ ದ್ವೇಷದಿಂದಲ್ಲ ಎಂದು ಸ್ಪಷ್ಟಪಡಿಸಿದರು.

ಪೂರಿ ಜಗನ್ ಅವರಿಗೂ ನನಗೂ ಭಿನ್ನಾಭಿಪ್ರಾಯವಿಲ್ಲ ಎಂದ ಹರೀಶ್ ಶಂಕರ್

“ಪುರಿ ಜಗನ್ ಅವರು ಲೆಜೆಂಡ್‌ ಮತ್ತು ಅವರೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಕೆಲವು ಆರ್ಥಿಕ ಕಾರಣ, OTT ಸಮಸ್ಯೆಗಳು ಮತ್ತು ಇತರ ಕಾರಣಗಳಿಂದಾಗಿ, ನಾವು ಡಬಲ್ ಇಸ್ಮಾರ್ಟ್‌ನೊಂದಿಗೆ ರಿಲೀಸ್‌ ಮಾಡುತ್ತಿದ್ದೇವೆ. ಪೂರಿ ಜಗನ್‌ಗೂ ನನಗೂ ಭಿನ್ನಾಭಿಪ್ರಾಯವಿಲ್ಲ. ಆದರೂ ಅವರು ನನ್ನನ್ನು ಟ್ವಿಟರ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ. ಅದನ್ನು ವೈಯಕ್ತಿಕವಾಗಿ ನಾನು ತೆಗೆದುಕೊಂಡಿಲ್ಲ. ಪ್ರತಿಯೊಬ್ಬರೂ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇವೆʼʼಎಂದರು. ಆಗಸ್ಟ್ 15 ರಂದು ಸಿನಿಮಾವನ್ನು ಬಿಡುಗಡೆ ಮಾಡುವಂತೆ ಮೈತ್ರಿ ಮೂವಿ ವಿತರಕರ ಮುಖ್ಯಸ್ಥ ಶಶಿ ಕೇಳಿದರು ಅದರಂತೆ ರಿಲೀಸ್‌ ಆಗುತ್ತಿದೆʼʼಎಂದರು.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

”ಡಬಲ್ ಇಸ್ಮಾರ್ಟ್” ಚಿತ್ರಕ್ಕೆ ಒಂದು ಕಾಲದಲ್ಲಿ ಪಡ್ಡೆಗಳ ಹೃದಯಕ್ಕೆ ಕನ್ನ ಹಾಕಿದ್ದ ಚಾರ್ಮಿ ಕೌರ್ ಕೂಡ ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ರವಿತೇಜ ಹೊರತಾಗಿ, ಭಾಗ್ಯಶ್ರೀ ಬೋರ್ಸೆ ಮತ್ತು ಜಗಪತಿ ಬಾಬು ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿಯಾಗಿರುವ ರವಿ ತೇಜ ಅವರು ಫಸ್ಟ್ ಲುಕ್‌ನಲ್ಲಿ ಅಮಿತಾಭ್‌ ಅವರಂತೆ ಪೋಸ್‌ ಕೊಟ್ಟಿದ್ದರು. ಈ ಚಿತ್ರ ಅಜಯ್ ದೇವಗನ್ ಅಭಿನಯದ 2018ರ ಹಿಂದಿ ʻಸ್ಲೀಪರ್ ಹಿಟ್ ರೈಡ್ʼ ನ ರಿಮೇಕ್ ಆಗಿದೆ.

ಡಬಲ್ ಇಸ್ಮಾರ್ಟ್

ಸೌತ್ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ವಿಲನ್ ಆಗಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಡಬಲ್ ಇಸ್ಮಾರ್ಟ್ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ. ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿದ್ದಾರೆ. ಆಗಸ್ಟ್-15 ರಂದು ಚಿತ್ರ ಎಲ್ಲೆಡೆ ರಿಲೀಸ್ ಮಾಡಲಾಗುತ್ತಿದೆ. ವಿಶ್ವದಾದ್ಯಂತ ಬರ್ತಿರೋ ಈ ಚಿತ್ರದ ಪ್ರಚಾರ ಕೂಡ ಈಗಾಗಲೇ ಶುರು ಆಗಿದೆ.

2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.

Continue Reading

ಟಾಲಿವುಡ್

Nabha Natesh: ರೆಡ್ ಗೌನ್‌ನಲ್ಲಿ ‘ಪಟಾಕ’ ಮಿಂಚಿಂಗ್; ಟಾಲಿವುಡ್‌ನಲ್ಲಿ ನಭಾ ನಟೇಶ್ ಧಮಾಕ!

Nabha Natesh: ನಭಾ ಸ್ವಯಂಭು ಎಂಬ ಪ್ಯಾನ್ ಇಂಡಿಯಾ ಚಿತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದು, ಚಿತ್ರದ ಕೆಲಸ ಕೂಡ ನಡೆಯುತ್ತಿದೆ. ನಿಖಿಲ್ ಸಿದ್ಧಾರ್ಥ್‌ಗೆ ನಾಯಕಿಯಾಗಿ ನಭಾ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಪಟಾಕ ರಾಣಿಯಂತ ರೂಲ್‌ನಲ್ಲಿಯೇ ಕಾಣಿಸಿಕೊಳ್ಳುತ್ತಿದ್ದು, ಅವರ ಲುಕ್ ವೈರಲ್ ಆಗಿದೆ.

VISTARANEWS.COM


on

Nabha Natesh in red gown Darling movie review
Koo

ಬೆಂಗಳೂರು: ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟನೆಯ ʻವಜ್ರಕಾಯʼ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯವಾದವರು ನಭಾ ನಟೇಶ್ (Nabha Natesh). ʻಪಟಾಕʼ ಪಾತ್ರದ ಮೂಲಕ ಗಮನಸೆಳೆದ ಈ ಶೃಂಗೇರಿ ಸುಂದರಿ ಈಗ ಟಾಲಿವುಡ್ ಅಂಗಳದಲ್ಲಿ ಬ್ಯುಸಿಯಾಗಿದ್ದಾರೆ. ʻಡಾರ್ಲಿಂಗ್ʼ ಸಿನಿಮಾ ಮೂಲಕ ಇತ್ತೀಚೆಗಷ್ಟೇ ಪ್ರೇಕ್ಷಕರ ಎದುರು ಬಂದಿದ್ದ ನಭಾ ನಟೇಶ್ ಹೊಸ ಫೋಟೋಶೂಟ್ ನಲ್ಲಿ ಮಿಂಚಿದ್ದಾರೆ.

ಕೆಂಪು ಬಣ್ಣದ ಗೌನ್ ನಲ್ಲಿ ಗುಲಾಬಿಯಂತೆ ಕಂಗೊಳಿಸಿರುವ ಪಟಾಕ ನಯಾ ಸ್ಟೈಲ್ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದೆ. ರೆಡ್ ಗೌನ್ ನಲ್ಲಿ ಬೋಲ್ಡ್ ಅಂಡ್ ಬ್ಯೂಟಿಫುಲ್ ಅವತಾರದಲ್ಲಿ ತರೇವಾರಿ ಫೋಸ್ ಕೊಟ್ಟು ಕ್ಯಾಮೆರಾಗೆ ವಜ್ರಕಾಯ ಬೆಡಗಿ ಕಣ್ಣು ಹೊಡೆದಿದ್ದಾಳೆ. ಶೃಂಗೇರಿ ಸುಂದರಿಯ ಸ್ಟೈಲೀಶ್ ಅವತಾರ ಕಂಡು ಅಭಿಮಾನಿಗಳು ಸ್ಟ್ರಾಂಗ್ ಇತ್ತು ನನ್ನ ಬಾಡಿ ವೀಕ್ ಆಯ್ತು ನಿನ್ನ ನೋಡಿ ಅಂತಾ ಕಮೆಂಟ್ ಮಾಡುತ್ತಿದ್ದಾರೆ.

ಅಪಘಾತದಿಂದ ಚೇತರಿಸಿಕೊಂಡ ಬಳಿಕ ನಭಾ ನಟೇಶ್ ಬೆಳ್ಳಿಪರದೆಯಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ. ನಟ ಪ್ರಿಯಾದರ್ಶಿಗೆ ನಾಯಕಿಯಾಗಿ ನಟಿಸಿರುವ ತೆಲುಗಿನ ಡಾರ್ಲಿಂಗ್ ಸಿನಿಮಾದಲ್ಲಿ ನಭಾ ನಟೇಶ್ ಮೋಡಿ ಮಾಡಿದ್ದಾರೆ. 7 ಪಾತ್ರದಲ್ಲಿ ಪಟಾಕ ಧಮಾಕ ಸೃಷ್ಟಿಸಿದ್ದಾರೆ.

ನಭಾ ಸ್ವಯಂಭು ಎಂಬ ಪ್ಯಾನ್ ಇಂಡಿಯಾ ಚಿತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದು, ಚಿತ್ರದ ಕೆಲಸ ಕೂಡ ನಡೆಯುತ್ತಿದೆ. ನಿಖಿಲ್ ಸಿದ್ಧಾರ್ಥ್‌ಗೆ ನಾಯಕಿಯಾಗಿ ನಭಾ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಪಟಾಕ ರಾಣಿಯಂತ ರೂಲ್‌ನಲ್ಲಿಯೇ ಕಾಣಿಸಿಕೊಳ್ಳುತ್ತಿದ್ದು, ಅವರ ಲುಕ್ ವೈರಲ್ ಆಗಿದೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ಕನ್ನಡ ಸಿನಿಮಾವಲ್ಲದೇ ನಭಾ ನಟೇಶ್ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆ ಎಲ್ಲ ಚಿತ್ರಗಳಲ್ಲಿ ಇಸ್ಮಾರ್ಟ್ ಸಿನಿಮಾ ಹೆಚ್ಚು ಗಮನ ಸೆಳೆದಿತ್ತು. ನಂತರ ಡಿಸ್ಕೋ ರಾಜಾ ಸಿನಿಮಾದಲ್ಲೂ ನಭಾ ನಟೇಶ್ ಅಭಿನಯ ಜನರಿಗೆ ಇಷ್ಟವಾಗಿತ್ತು.

Continue Reading

ದೇಶ

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

The RajaSaab Movie: ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. . ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ. ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Rebel star Prabhas starrer The Rajasaab short glimpse released
Koo

ಬೆಂಗಳೂರು: ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌, ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” (The RajaSaab Movie) ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ.

ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್‌ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್‌ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್‌ ಅವರನ್ನು ಇನ್ನಷ್ಟು ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿಯನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ಭರ್ಜರಿ ಆಕ್ಷನ್‌ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದು, ದೊಡ್ಡ ಪರದೆಯ ಮೇಲೆ ದೃಶ್ಯ ಚಮತ್ಕಾರ ನೀಡಲಿದೆ.

ಮಾರುತಿ ನಿರ್ದೇಶನದ ರಾಜಾ ಸಾಬ್‌ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ಸಾಬ್ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಪ್ರತಿ ರೋಜು ಪಂಡಗʼ, ತೆಲುಗಿನ ಹಾರರ್ ಕಾಮಿಡಿ ‘ಪ್ರೇಮ ಕಥಾ ಚಿತ್ರಂʼ ಮತ್ತು ರೊಮ್ಯಾಂಟಿಕ್ ಕಾಮಿಡಿ ‘ಮಹಾನುಭಾವುಡು’ ಸೇರಿ ಹಲವು ಸೂಪರ್‌ಹಿಟ್‌ಗಳಿಗೆ ಸಿನಿಮಾ ನಿರ್ದೇಶನ ಮಾಡಿದ ಮಾರುತಿ, ಇದೀಗ ರಾಜಾಸಾಬ್‌ ಮೂಲಕ ರೊಮ್ಯಾಂಟಿಕ್ ಹಾರರ್ ಎಂಟರ್ಟೈನರ್ ಜತೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

‘ಕಾರ್ತಿಕೇಯ 2’ ಮತ್ತು ‘ಧಮಾಕಾ’ ಸೇರಿ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ ತೆಲುಗು ಚಿತ್ರೋದ್ಯಮದಲ್ಲಿ ಪ್ರಮುಖ ಹೆಸರು. ಇದೀಗ ಬಹುಕೋಟಿ ವೆಚ್ಚದಲ್ಲಿ ರಾಜಾ ಸಾಬ್ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಅದ್ಧೂರಿಯಾಗಿ, ಎಲ್ಲಿಯೂ ರಾಜಿ ಮಾಡಿಕೊಳ್ಳದೆ ಅದ್ಧೂರಿಯಾಗಿ ನಿರ್ಮಿಸುತ್ತಿದೆ. ಕೋಟಗಿರಿ ವೆಂಕಟೇಶ್ವರ ರಾವ್ ಈ ಚಿತ್ರಕ್ಕೆ ಸಂಕಲನ ಮಾಡಿದರೆ, ಕಾರ್ತಿಕ್ ಪಳನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಂಗೀತವನ್ನು ಎಸ್‌ಎಸ್‌ ಥಮನ್ ಮಾಡಿದರೆ, ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸ ಈ ಚಿತ್ರಕ್ಕಿರಲಿದೆ.

Continue Reading
Advertisement
Israel v/s Hamas
ವಿದೇಶ2 mins ago

Israel v/s Hamas: ಇಸ್ರೇಲ್‌‌ ಮುಂದಿನ ಟಾರ್ಗೆಟ್ ಯಾರು? ಇಲ್ಲಿದೆ ಹಮಾಸ್ ‘ಉಗ್ರ’ ನಾಯಕರ ಹಿಟ್‌ ಲಿಸ್ಟ್!

Wayanad Landslide
ದೇಶ33 mins ago

Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Sexual Abuse
Latest1 hour ago

Sexual Abuse: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

Karnataka Rain
ಕರ್ನಾಟಕ1 hour ago

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

FASTag new rule
ತಂತ್ರಜ್ಞಾನ1 hour ago

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

Koti Koti Rokka Galisi kannada song released
ಕರ್ನಾಟಕ1 hour ago

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Paris Olympics Archery
ಕ್ರೀಡೆ2 hours ago

Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

ITR Filing
ವಾಣಿಜ್ಯ2 hours ago

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Gunfire On School
Latest2 hours ago

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Ibbani Thabbida Ileyali movie Helu Gelati song released
ಕರ್ನಾಟಕ2 hours ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌