Ismail Haniyeh Killing: ಹಮಾಸ್‌ನ ಹೊಸ ಮುಖ್ಯಸ್ಥನಾಗಿ ಖಲೀದ್‌ ಮೆಶಾಕ್‌? ಈತನ ಹಿನ್ನೆಲೆ ಏನು? - Vistara News

ವಿದೇಶ

Ismail Haniyeh Killing: ಹಮಾಸ್‌ನ ಹೊಸ ಮುಖ್ಯಸ್ಥನಾಗಿ ಖಲೀದ್‌ ಮೆಶಾಕ್‌? ಈತನ ಹಿನ್ನೆಲೆ ಏನು?

Ismail Haniyeh Killing: ಹಮಾಸ್‌ನ ಸಂಸ್ಥಾಪಕರಲ್ಲಿ ಒಬ್ಬನಾಗಿರುವ ಮಶಾಲ್, 1956ರಲ್ಲಿ ವೆಸ್ಟ್ ಬ್ಯಾಂಕ್‌ನ ಸಿಲ್ವಾಡ್‌ನಲ್ಲಿ ಜನಿಸಿದ. ಬಳಿಕ ಆತನ ಕುಟುಂಬ ಕುವೈತ್‌ಗೆ ಸ್ಥಳಾಂತರಗೊಂಡಿತು. ಮಶಾಲ್ ಪದವಿ ಪಡೆದ ಬಳಿಕ ಕುವೈತ್‌ನಲ್ಲಿಯೇ ಇದ್ದ. ಅಲ್ಲಿ ಆತ ಗಾಜಾ ಮತ್ತು ವೆಸ್ಟ್ ಬ್ಯಾಂಕ್‌ನಲ್ಲಿ ಸಾಮಾಜಿಕ ಸೇವೆಗಳನ್ನು ಆಯೋಜಿಸಲು ಹಣವನ್ನು ಸಂಗ್ರಹಿಸಿದ.

VISTARANEWS.COM


on

Khaled Meshaal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೆಹ್ರಾನ್‌: ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ (Ismail Haniyeh Killing) ಹತ್ಯೆ ಸುದ್ದಿ ಪ್ರಪಂಚದಾದ್ಯಂತ ಸಂಚಲನ ಉಂಟು ಮಾಡಿರುವ ಬೆನ್ನಲ್ಲೇ ಹಮಾಸ್‌ನ ಮುಂದಿನ ನಾಯಕ ಯಾರು ಎಂಬ ಪ್ರಶ್ನೆ ಭುಗಿಲೆದ್ದಿದೆ. ಹನಿಯೆನ್‌ ಸ್ಥಾನವನ್ನು ಹಮಾಸ್‌ನ ಯಾವ ನಾಯಕ ವಹಿಸಿಕೊಳ್ಳಲಿದ್ದಾನೆ ಎಂಬ ಬಗ್ಗೆ ಇಡೀ ಪ್ರಪಂಚದ ಕಣ್ಣು ನೆಟ್ಟಿದೆ. ಹೀಗಿರುವಾಗ ಹಮಾಸ್‌ನ ಹಿರಿಯ ನಾಯಕ ಖಲೀದ್‌ ಮೆಶಾಕ್‌(Khaled Meshaal) ಹಮಾಸ್‌ ಮುಖ್ಯಸ್ಥನಾಗಿ ಅಧಿಕಾರ ಸ್ವೀಕರಿಸಲಿದ್ದಾನೆ ಎಂಬುದು ಬಹುತೇಕ ಖಚಿತವಾಗಿದೆ.

ಹಮಾಸ್‌ನ ಸಂಸ್ಥಾಪಕರಲ್ಲಿ ಒಬ್ಬನಾಗಿರುವ ಮಶಾಲ್, 1956ರಲ್ಲಿ ವೆಸ್ಟ್ ಬ್ಯಾಂಕ್‌ನ ಸಿಲ್ವಾಡ್‌ನಲ್ಲಿ ಜನಿಸಿದ. ಬಳಿಕ ಆತನ ಕುಟುಂಬ ಕುವೈತ್‌ಗೆ ಸ್ಥಳಾಂತರಗೊಂಡಿತು. ಮಶಾಲ್ ಪದವಿ ಪಡೆದ ಬಳಿಕ ಕುವೈತ್‌ನಲ್ಲಿಯೇ ಇದ್ದ. ಅಲ್ಲಿ ಆತ ಗಾಜಾ ಮತ್ತು ವೆಸ್ಟ್ ಬ್ಯಾಂಕ್‌ನಲ್ಲಿ ಸಾಮಾಜಿಕ ಸೇವೆಗಳನ್ನು ಆಯೋಜಿಸಲು ಹಣವನ್ನು ಸಂಗ್ರಹಿಸಿದ.

1996ರಲ್ಲಿ ಹಮಾಸ್ ರಾಜಕೀಯ ಬ್ಯೂರೋ ಮುಖ್ಯಸ್ಥನಾಗಿ ಆಯ್ಕೆಯಾದ ಮಶಾಲ್, ಹಮಾಸ್‌ನ ಆತ್ಮಹತ್ಯಾ ಬಾಂಬ್ ದಾಳಿಗೆ ಪ್ರತೀಕಾರವಾಗಿ ಪ್ರಧಾನಿ ಬೆಂಜಮಿನ್ ನೆತನ್ಯಾಹು 1997ರಲ್ಲಿ ಮಶಾಲ್‌ನ ಹತ್ಯೆ ಮಾಡಲು ಅನುಮೋದನೆ ನೀಡಿದರು. ಮಶಾಲ್ 2017ರವರೆಗೂ ಹಮಾಸ್‌ನ ಮುಖ್ಯಸ್ಥನಾಗಿದ್ದ. ಹಮಾಸ್‌ನ ಪ್ರಮುಖ ಒತ್ತೆಯಾಳು ಸಂಧಾನಕಾರರಲ್ಲಿ ಒಬ್ಬನಾಗಿರುವ ಮಶಾಲ್ ಪ್ರಸ್ತುತ ಕತಾರ್‌ನಲ್ಲಿ ವಾಸಿಸುತ್ತಿದ್ದಾನೆ.

15 ನೇ ವಯಸ್ಸಿನಲ್ಲಿ, ಅವರು ಈಜಿಪ್ಟ್ ಮೂಲದ ಸುನ್ನಿ ಇಸ್ಲಾಮಿಸ್ಟ್ ಸಂಘಟನೆಯಾದ ಮುಸ್ಲಿಂ ಬ್ರದರ್‌ಹುಡ್‌ಗೆ ಸೇರಿದ್ದ. ಈ ಸಂಘಟನರ 1987 ರ ಹಮಾಸ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿತು. 1992 ರಲ್ಲಿ ಉಗ್ರಗಾಮಿ ಗುಂಪಿನ ಪಾಲಿಟ್‌ಬ್ಯೂರೋದ ಸ್ಥಾಪಕ ಸದಸ್ಯರನಾಗಿದ್ದ. 2017ರಲ್ಲಿ ಅಧಿಕಾರದಿಂದ ಕೆಳಗಿಳಿದರು ಮತ್ತು ಹನಿಯೆಹ್ ಅವರು ಉತ್ತರಾಧಿಕಾರಿಯಾದ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಜಗತ್ತಿನ ಯಾರ ಪ್ರೀತಿಯೂ ಇವರ ಪ್ರೀತಿಗೆ ಸಮನಲ್ಲ!

ರಾಜಮಾರ್ಗ ಅಂಕಣ: ಇವರ ಪ್ರೀತಿಗೆ ಸಾಕ್ಷಿಯಾಗಿ ಇಟಲಿಯ ಫ್ಲಾರೆನ್ಸ್ ಎಂಬ ನಗರದಲ್ಲಿ ಇರುವ ಅವರ ನಿವಾಸದ ಪಕ್ಕದಲ್ಲಿ ಅವರಿಬ್ಬರ ಸಮಾಧಿಗಳನ್ನು ನಿರ್ಮಿಸಲಾಗಿದೆ. ಅದರ ಮೇಲೆ ಬರೆದಿರುವ ಒಂದೇ ಸಾಲಿನ ಕವಿತೆ – ಲವ್ ಈಸ್ ನಾಟ್ ಬ್ಲೈಂಡ್!

VISTARANEWS.COM


on

ರಾಜಮಾರ್ಗ ಅಂಕಣ love story
Koo

ರಾಬರ್ಟ್ ಬ್ರೌನಿಂಗ್ ಮತ್ತು ಎಲಿಜೆಬೆತ್ ಬ್ಯಾರೆಟ್ ಪರಸ್ಪರ ಭೇಟಿ ಆಗದೆ ವರ್ಷಾನುಗಟ್ಟಲೆ ಪ್ರೀತಿ ಮಾಡಿದರು!

Rajendra-Bhat-Raja-Marga-Main-logo

:: ರಾಜೇಂದ್ರ ಭಟ್‌ ಕೆ.

ರಾಜಮಾರ್ಗ ಅಂಕಣ: ಪ್ರೀತಿಗೆ ಕಣ್ಣಿಲ್ಲ (Love is blind) ಅಂತಾರೆ. ಆದರೆ ಇಟಲಿಯಲ್ಲಿ (Italy) ಇರುವ ಅವರ ಸಮಾಧಿಯ ಮೇಲೆ ʼಪ್ರೀತಿ ಕುರುಡಲ್ಲ’ ಎಂದು ಬರೆದಿರುವುದು ಯಾಕೆ? ಇದೆಲ್ಲವೂ ಅರ್ಥ ಆಗಬೇಕಾದರೆ ಈ ಪ್ರೀತಿಯ ಪರಾಕಾಷ್ಠೆಯ ಕಥೆಯನ್ನು ಒಮ್ಮೆ ಫೀಲ್ ಮಾಡಿಕೊಂಡು ಓದಿ.

ಅದು ಲಂಡನ್ ನಗರ. ಆಕೆ ಎಲಿಜೆಬೆತ್ ಬ್ಯಾರೇಟ್ (Elizabeth Barrett). ಆ ಕಾಲಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯ ಕವಯಿತ್ರಿ. ವಯಸ್ಸು 39ರ ಆಸುಪಾಸು. ಅವಿವಾಹಿತೆ. ಆಕೆಯ ತಂದೆ ಅತ್ಯಂತ ಶ್ರೀಮಂತ ಜಮೀನುದಾರರು. ಅಪ್ಪ ಅಮ್ಮನ 12 ಮಕ್ಕಳಲ್ಲಿ ಆಕೆಯೂ ಒಬ್ಬರು. ಅಪ್ಪನ ಪ್ರೀತಿಯ ಮಗಳು.

ಹದಿಹರೆಯದಿಂದಲೂ ಆಕೆಗೆ ತೀವ್ರ ಅನಾರೋಗ್ಯ ಮತ್ತು ದೇಹವೆಲ್ಲ ನೋವು. ಉಸಿರಾಟದ ತೊಂದರೆ. ಮನೆಯಿಂದಾಚೆ ಹೋಗಲು ಸಾಧ್ಯವೇ ಆಗದ ಸ್ಥಿತಿ. ಆಕೆ ಅಂತರ್ಮುಖಿ. ತನ್ನ ಸ್ಟಡಿ ರೂಮಿನಲ್ಲಿ ಕುಳಿತು ಓದುವುದು ಮತ್ತು ಬರೆಯುವುದು ಬಿಟ್ಟರೆ ಆಕೆಗೆ ಬೇರೆ ಪ್ರಪಂಚವೇ ಇರಲಿಲ್ಲ!

ಆತನು ರಾಬರ್ಟ್ ಬ್ರೌನಿಂಗ್

ಅವನೂ ಲಂಡನ್ ನಗರದವನು. ವಯಸ್ಸು 32. ಆತ ಕೂಡ ಕವಿ ಮತ್ತು ನಾಟಕಕಾರ. ಆತ ಆಕೆಯನ್ನು ಎಂದಿಗೂ ಭೇಟಿ ಮಾಡಿರಲೇ ಇಲ್ಲ. ಆಕೆಯ ಬಗ್ಗೆ ಆತನಿಗೆ ಏನೂ ಗೊತ್ತಿಲ್ಲ. ಆದರೆ ಆಕೆಯ ಕವಿತೆಗಳ ಆರಾಧಕ. ಒಂದು ದಿನ ಧೈರ್ಯ ಮಾಡಿ ಅವಳ ವಿಳಾಸವನ್ನು ಪಡೆದುಕೊಂಡು ‘ನಾನು ನಿಮ್ಮ ಕವಿತೆಗಳನ್ನು ಪ್ರೀತಿ ಮಾಡುತ್ತೇನೆ ‘ಎಂದು ಧೈರ್ಯವಾಗಿ ಪತ್ರ ಬರೆದನು. ಆಶ್ಚರ್ಯ ಪಟ್ಟ ಎಲಿಜೆಬೆತ್ ಧನ್ಯವಾದಗಳು ಎಂದು ಎರಡು ಸಾಲಿನ ಪತ್ರ ಬರೆದಳು. ಯಾರೋ ಒಬ್ಬ ಅಭಿಮಾನಿ ಎಂದು ಆಕೆ ಭಾವಿಸಿದ್ದಳು. ಆದರೆ ರಾಬರ್ಟ್ (Robert Browning) ಬಿಡಬೇಕಲ್ಲ. ಮರುದಿನವೇ ಇನ್ನೊಂದು ಪತ್ರ ಬರೆದು ಪೋಸ್ಟ್ ಮಾಡಿದನು.

ಹೀಗೆ ಮುಂದಿನ 20 ತಿಂಗಳ ಕಾಲ ಅವರಿಬ್ಬರೂ 600 ಪತ್ರಗಳನ್ನು ವಿನಿಮಯ ಮಾಡಿಕೊಂಡರು! ಒಬ್ಬರನ್ನೊಬ್ಬರು ಅಭಿನಂದಿಸಿ ಕೊಂಡರು. ಕವಿತೆಗಳ ಬಗ್ಗೆ ವಿಸ್ತಾರವಾಗಿ ಮಾತಾಡಿದರು. ಎಲ್ಲಿಯೂ ಪ್ರೀತಿಯನ್ನು ಪ್ರಪೋಸ್ ಮಾಡಲಿಲ್ಲ! ಅಥವಾ ಫೋನ್ ಮಾಡಿ ಮಾತನಾಡಲೇ ಇಲ್ಲ!

ಆ ಪತ್ರಗಳ ಪ್ರಭಾವದಿಂದ ಎಲಿಜೆಬೆತ್ ಆರೋಗ್ಯ ಸುಧಾರಣೆ ಆಯ್ತು!

ದೀರ್ಘ ಅವಧಿಗೆ ಅದೃಶ್ಯ ಅಭಿಮಾನಿಯ ಪ್ರೀತಿಪೂರ್ವಕ ಪತ್ರಗಳನ್ನು ಓದುತ್ತಾ, ಅವುಗಳಿಗೆ ಉತ್ತರ ಬರೆಯುತ್ತ ಎಲಿಜೆಬೆತ್ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಆಯ್ತು! ಆಕೆ ಅಫೀಮ್ ಮತ್ತು ಮಾರ್ಫಿನ್ ಡ್ರಗ್ಸ್ ಸೇವನೆಯಿಂದ ನಿಧಾನವಾಗಿ ಹೊರಬಂದಳು. ಒಂದು ದಿನ ಧೈರ್ಯವಾಗಿ ಆತನಿಗೆ ಪತ್ರ ಬರೆದಳು – ನನ್ನಲ್ಲಿ ತುಂಬಾ ಆರೋಗ್ಯ ಸುಧಾರಣೆ ಆಗಿದೆ. ನಾನು ಈಗ ಆರು ವರ್ಷಗಳ ಕತ್ತಲೆಯ ಕೋಣೆಯಿಂದ ಹೊರಬರಬೇಕು ಎಂದು ಆಸೆ ಪಡುತ್ತಾ ಇದ್ದೇನೆ. ನಿನ್ನನ್ನೊಮ್ಮೆ ಭೇಟಿ ಆಗಿ ಥ್ಯಾಂಕ್ಸ್ ಹೇಳಬೇಕು ಅನ್ನಿಸ್ತಿದೆ. ಸಿಗ್ತಿಯಾ?

ಆತ ಒಪ್ಪಿದನು. ಅವರಿಬ್ಬರೂ ಮೊದಲ ಬಾರಿಗೆ ಭೇಟಿ ಆದರು. ʼನಾನು ನಿಮ್ಮನ್ನು ಮದುವೆ ಆಗುತ್ತೇನೆ. ನಿಮ್ಮ ಒಪ್ಪಿಗೆ ಇದೆಯಾ? ‘ಎಂದು ಆಗ ರಾಬರ್ಟ್ ನೇರವಾಗಿ ಕೇಳಿದನು. ಅದನ್ನವಳು ನಿರೀಕ್ಷೆ ಮಾಡಿರಲಿಲ್ಲ. ಈಗ ಎಲಿಜೆಬೆತ್ ಬೆವರಲು ಆರಂಭಿಸಿದಳು.

ಆಕೆಯ ಅಪ್ಪ ಪ್ರೇಮವಿವಾಹಕ್ಕೆ ವಿರೋಧ ಇದ್ದರು

ಆಕೆಯು ಬೆವರಲು ಕಾರಣ ಆಕೆಯ ಅಪ್ಪ ಹಾಕಿದ ನಿರ್ಬಂಧ. ಅವನ ಎರಡು ಮಕ್ಕಳು ಪ್ರೀತಿ ಮಾಡಿ ಓಡಿಹೋಗಿ ಮದುವೆ ಆಗಿದ್ದರು. ಆ ಸಿಟ್ಟಿನಲ್ಲಿ ಆತನು ಎಲಿಜಬೆತ್ ಮಗಳಿಗೆ ಪ್ರೀತಿ ಮಾಡಲೇ ಬಾರದು ಎಂಬ ನಿರ್ಬಂಧವನ್ನು ಹಾಕಿದ್ದನು. ಆಕೆಯ ಸಂದಿಗ್ದವು ರಾಬರ್ಟನಿಗೆ ಅರ್ಥ ಆಯಿತು. ಅವನು ಎಷ್ಟು ಧೈರ್ಯ ತುಂಬಿಸಿದರೂ ಅಪ್ಪನ ಎದುರು ಹೋಗಿ ನಿಂತು ಮಾತಾಡುವ ಧೈರ್ಯ ಅವಳಿಗೆ ಕೊನೆಗೂ ಬರಲಿಲ್ಲ. ಕೊನೆಗೆ 1845ರ ಸೆಪ್ಟೆಂಬರ್ 12ರಂದು ಅವರಿಬ್ಬರೂ ರಹಸ್ಯವಾಗಿ ಮದುವೆ ಆದರು.

ಆಸ್ತಿಯಲ್ಲಿ ಪಾಲು ಕೊಡುವುದಿಲ್ಲ ಎಂದ ಅಪ್ಪ

ಹೇಗೋ ಮದುವೆಯ ರಹಸ್ಯವು ಅಪ್ಪನಿಗೆ ಗೊತ್ತಾಯಿತು. ನಿಮಗೆ ಆಸ್ತಿಯಲ್ಲಿ ಒಂದು ಡಾಲರ್ ಕೂಡ ಕೊಡುವುದಿಲ್ಲ. ಎಲ್ಲಿ ಬೇಕಾದರೂ ಹೋಗಿ ಎಂದು ಗರ್ಜಿಸಿದನು. ಮದುಮಕ್ಕಳನ್ನು ಮನೆಯ ಹೊರಗೆ ನಿಲ್ಲಿಸಿ ದಢಾರ್ ಎಂದು ಬಾಗಿಲು ಹಾಕಿದನು.

ರಾಬರ್ಟ್ ಮತ್ತು ಎಲಿಜಬೆತ್ ಇಬ್ಬರೂ ಬೇಸರ ಮಾಡಿಕೊಳ್ಳಲಿಲ್ಲ. ಬರವಣಿಗೆಯ ಮೂಲಕ ಬದುಕುವ ಶಕ್ತಿ ಇಬ್ಬರಿಗೂ ಇತ್ತು. ತಮ್ಮ ಪ್ರತಿಭೆಯ ಮೇಲೆ ನಂಬಿಕೆ ಇತ್ತು. ಅವರಿಬ್ಬರೂ ಉಟ್ಟ ಬಟ್ಟೆಯಲ್ಲಿ ಲಂಡನ್ ನಗರವನ್ನು ಬಿಟ್ಟು ಪ್ರೀತಿಯ ಊರಾದ ಇಟಲಿಗೆ ಬಂದರು. ಪೀಸಾದ ವಾಲುವ ಗೋಪುರದ ಮುಂದೆ ನಿಂತು ದಂಪತಿಗಳು ಮೊಟ್ಟಮೊದಲ ಬಾರಿಗೆ ಕಿಸ್ ಮಾಡಿದರು. ಪ್ರೀತಿಯ ಉತ್ಕಟತೆಯನ್ನು ಫೀಲ್ ಮಾಡಿದರು. ಅಲ್ಲಿಯೇ ಮನೆ ಮಾಡಿ ಸಾಹಿತ್ಯದ ಕೆಲಸದಲ್ಲಿ ಮುಳುಗಿದರು.

ಅಲ್ಲಿ ರಾಬರ್ಟ್ ತನ್ನ ಅದ್ಭುತ ಕವಿತೆ ‘ಸಾನೆಟ್ಸ್ ಫ್ರಮ್ ಪೋರ್ಚುಗೀಸ್ ‘ ಬರೆದು ಹೆಂಡತಿಗೆ ಪ್ರೆಸೆಂಟ್ ಮಾಡುತ್ತಾನೆ. ಅದು ಲೋಕಪ್ರಸಿದ್ಧಿ ಪಡೆಯಿತು.

ಆಕೆಯು ಅಷ್ಟೇ ಪ್ರೀತಿಯಿಂದ ʼಪೊಯೆಮ್ಸ್ ಬಿಫೋರ್ ಕಾಂಗ್ರೆಸ್’ ಕವಿತೆಯನ್ನು ಬರೆದು ಅವನಿಗೆ ಅರ್ಪಿಸುತ್ತಾಳೆ. ಗಂಡನ ಪ್ರೀತಿಯಲ್ಲಿ ಮುಳುಗಿ ʼಆರೋರಾ’ ಎಂಬ ಪ್ರೇಮಗ್ರಂಥವನ್ನು ಬರೆದು ಪ್ರಕಟಣೆ ಮಾಡುತ್ತಾಳೆ. ಅವರ ಪ್ರೀತಿಯ ಪ್ರತೀಕವಾಗಿ ಅವರಿಗೆ ವೀಡ್ಮನ್ ಬ್ಯಾರೆಟ್ ಎಂಬ ಮಗನು ಹುಟ್ಟುತ್ತಾನೆ.

1861ರಲ್ಲಿ ರಾಬರ್ಟ್ ತನ್ನ ಮಹತ್ವಾಕಾಂಕ್ಷೆಯ ಕೃತಿ ʼಮೆನ್ ಅಂಡ್ ವಿಮೆನ್’ ಪೂರ್ತಿ ಮಾಡಿ ಪತ್ನಿಯ ಕೈಯ್ಯಲ್ಲಿ ಇಟ್ಟು ಬಿಡುಗಡೆ ಮಾಡುತ್ತಾನೆ. 15 ವರ್ಷಗಳ ಶ್ರೇಷ್ಟ ದಾಂಪತ್ಯದ ಅನುಪಮ ಪ್ರೀತಿಯನ್ನು ಆಸ್ವಾದಿಸಿದ ನಂತರ 1861ರ ಜೂನ್ 29ರಂದು ಎಲಿಜೆಬೆತ್ ತನ್ನ ಗಂಡನ ತೋಳುಗಳಲ್ಲೇ ಉಸಿರು ನಿಲ್ಲಿಸುತ್ತಾಳೆ. ಕೆಲವೇ ವರ್ಷಗಳಲ್ಲಿ ರಾಬರ್ಟ್ ಕೂಡ ನಿಧನ ಹೊಂದುತ್ತಾನೆ.

ಅವರ ಪ್ರೀತಿಗೆ ಸಾಕ್ಷಿಯಾಗಿ ಇಟಲಿಯ ಫ್ಲಾರೆನ್ಸ್ ಎಂಬ ನಗರದಲ್ಲಿ ಇರುವ ಅವರ ನಿವಾಸದ ಪಕ್ಕದಲ್ಲಿ ಅವರಿಬ್ಬರ ಸಮಾಧಿಗಳನ್ನು ನಿರ್ಮಿಸಲಾಗಿದೆ. ಅದರ ಮೇಲೆ ಬರೆದಿರುವ ಒಂದೇ ಸಾಲಿನ ಕವಿತೆ – ಲವ್ ಈಸ್ ನಾಟ್ ಬ್ಲೈಂಡ್!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಸಾಧನೆಯ ಹಾದಿಯ 25 ಮೈಲಿಗಲ್ಲುಗಳು

Continue Reading

ವಿದೇಶ

Ismail Haniyeh: ಇಸ್ರೇಲ್‌ ಮೇಲೆ ನಡೆಯುತ್ತಾ ಭಾರೀ ಏರ್‌ಸ್ಟ್ರೈಕ್‌? ಹನಿಯೆಹ್‌ ಹತ್ಯೆ ಪ್ರತೀಕಾರಕ್ಕೆ ಇರಾನ್‌ ಸಜ್ಜು

Ismail Haniyeh: ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

VISTARANEWS.COM


on

Ismail Haniyeh
Koo

ಟೆಹ್ರಾನ್‌: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು (Ismail Haniyeh) ವಾಯುದಾಳಿ ನಡೆಸಿ ಹತ್ಯೆ ನಡೆದಿರುವ ಬೆನ್ನಲ್ಲೇ ಇಸ್ರೇಲ್‌ ಮೇಲೆ ನೇರ ವೈಮಾನಿಕ ದಾಳಿ ನಡೆಸಿ ಹೊಡೆದುರುಳಿಸುವಂತೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಆದೇಶ ನೀಡಿದ್ದಾರೆ. ಹನಿಯೆಹ್‌ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ನಪಣ ತೊಟ್ಟಿರುವ ಇರಾನ್‌ ಶೀಘ್ರದಲ್ಲಿ ಇಸ್ರೇಲ್‌ ಮೇಲೆ ಪ್ರತಿದಾಳಿ ನಡೆಸಲಿದೆ ಎಂಬ ಬಗ್ಗೆ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ಬೆಳಗ್ಗೆ ಅಯತೊಲ್ಲಾ ಅಲಿ ಖಮೇನಿ ಇರಾನ್‌ನ ಸುಪ್ರೀಂ ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಖಮೇನಿ ಈ ಆದೇಶವನ್ನು ನೀಡಿದರು. ಇನ್ನು ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

Continue Reading

ವಿದೇಶ

Pakistani Labours: ಭಿಕ್ಷಾಟನೆ, ಅಪರಾಧ ಕೃತ್ಯ; ಪಾಕಿಸ್ತಾನಿಯರನ್ನು ಒದ್ದು ಓಡಿಸುತ್ತಿರುವ ಗಲ್ಫ್‌ ರಾಷ್ಟ್ರಗಳು!

ಪಾಕಿಸ್ತಾನದಿಂದ (Pakistani Labours) ಇರಾಕ್ ಮತ್ತು ಸೌದಿ ಅರೇಬಿಯಾಗೆ ಜಿಯಾರತ್ ಅಥವಾ ತೀರ್ಥಯಾತ್ರೆಯ ನೆಪದಲ್ಲಿ ಸಾಕಷ್ಟು ಮಂದಿ ಹೋಗುತ್ತಾರೆ. ಉಮ್ರಾ ಪರವಾನಗಿ ಹೊಂದಿರುವ ಹೆಚ್ಚಿನ ಪ್ರವಾಸಿಗರು ಸೌದಿ ಅರೇಬಿಯಾವನ್ನು ಪ್ರವೇಶಿಸುತ್ತಾರೆ. ಅನಂತರ ಭಿಕ್ಷಾಟನೆಯಲ್ಲಿ ತೊಡಗುತ್ತಾರೆ. ಅಲ್ಲಿ ಬಂಧಿಸಲ್ಪಟ್ಟ ಭಿಕ್ಷುಕರಲ್ಲಿ ಶೇ. 90ರಷ್ಟು ಮಂದಿ ಪಾಕಿಸ್ತಾನಿಗಳು ಎಂದು ಸಾಗರೋತ್ತರ ಪಾಕಿಸ್ತಾನಿಗಳ ಕಾರ್ಯದರ್ಶಿ ಡಾ. ಅರ್ಷದ್ ಮಾಹಿತಿ ನೀಡಿದ್ದಾರೆ.

VISTARANEWS.COM


on

By

Pakistani Labours
Koo

ಆರ್ಥಿಕ ಸಂಕಷ್ಟಕ್ಕೆ (bankrupt) ಸಿಲುಕಿ ದಿವಾಳಿಯಾಗಿರುವ ಪಾಕಿಸ್ತಾನಕ್ಕೆ (pakistan) ಜಾಗತಿಕ ಮಟ್ಟದಲ್ಲಿ ಮತ್ತೊಂದು ಹೊಡೆತ ಬಿದ್ದಿದೆ. ವಿಶ್ವ ಮಟ್ಟದಲ್ಲೇ ಬಹುದೊಡ್ಡ ಅವಮಾನ ಎದುರಾಗಿದೆ. ಹಲವಾರು ಗಲ್ಫ್ ರಾಷ್ಟ್ರಗಳು (Gulf countries) ಪಾಕಿಸ್ತಾನಿ ವಲಸಿಗರು ಮತ್ತು ಪಾಕಿಸ್ತಾನಿ ಕಾರ್ಮಿಕ ಬಲದ (Pakistani Labours) ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಹೊರದೇಶಗಳಲ್ಲಿ ದುಡಿಯುವ ಅನೇಕ ಪಾಕಿಸ್ತಾನಿ ನಾಗರಿಕರು (Pakistani citizens) ಇದರಿಂದ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು.

ಸಾಗರೋತ್ತರ ಪಾಕಿಸ್ತಾನಿಗಳ ಕುರಿತ ಸೆನೆಟ್ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ. ಪಾಕಿಸ್ತಾನದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಈ ವಿಷಯ ಬಹಿರಂಗವಾಗಿದೆ ಎಂದು ಸಾಗರೋತ್ತರ ಪಾಕಿಸ್ತಾನಿಗಳ ಕಾರ್ಯದರ್ಶಿ ಡಾ. ಅರ್ಷದ್ ಹೇಳಿದರು.

ಸೌದಿ ಅರೇಬಿಯಾ, ಕತಾರ್, ಕುವೈತ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿದೇಶದಲ್ಲಿ ವಾಸಿಸುವ ಪಾಕಿಸ್ತಾನಿಗಳಿಗೆ ಸಂಬಂಧಿಸಿ ಅನೇಕ ವಿಷಯಗಳ ಬಗ್ಗೆ ಆಕ್ಷೇಪ ಎತ್ತಲಾಗಿದೆ. ಪಾಕಿಸ್ತಾನದಿಂದ ಭಿಕ್ಷುಕರು ಇರಾಕ್ ಮತ್ತು ಸೌದಿ ಅರೇಬಿಯಾಗೆ ತೀರ್ಥಯಾತ್ರೆಯ ನೆಪದಲ್ಲಿ ಹೋಗುತ್ತಾರೆ. ಬಳಿಕ ಅಲ್ಲಿ ಮಾಡಬಾರದ ಕೆಲಸ ಮಾಡಲು ತೊಡಗುತ್ತಾರೆ. ಉಮ್ರಾ ಪರವಾನಗಿ ಹೊಂದಿರುವ ಹೆಚ್ಚಿನ ಪ್ರವಾಸಿಗರು ಸೌದಿ ಅರೇಬಿಯಾವನ್ನು ಪ್ರವೇಶಿಸುತ್ತಾರೆ. ಅನಂತರ ಭಿಕ್ಷಾಟನೆಯಲ್ಲಿ ತೊಡಗುತ್ತಾರೆ. ಬಂಧಿಸಲ್ಪಟ್ಟ ಭಿಕ್ಷುಕರಲ್ಲಿ ಶೇ. 90ರಷ್ಟು ಮಂದಿ ಪಾಕಿಸ್ತಾನಿಗಳಾಗಿದ್ದಾರೆ.

ಗಲ್ಫ್ ರಾಷ್ಟ್ರಗಳ ಇತ್ತೀಚಿನ ಹೇಳಿಕೆಯು ಪಾಕಿಸ್ತಾನಿಯರಿಗೆ ಹೆಚ್ಚು ಸಮಸ್ಯೆಯನ್ನು ತಂದೊಡ್ಡಬಲ್ಲದು. ಯಾಕೆಂದರೆ ಇದು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ವಾಸಿಸುವ ಪಾಕಿಸ್ತಾನಿಯರ ಸಾಕಷ್ಟು “ಅನುಚಿತ” ನಡವಳಿಕೆಯನ್ನು ಬಹಿರಂಗಪಡಿಸಿದೆ. ದುಬೈನಲ್ಲಿ ವಾರ್ಷಿಕ ಒಟ್ಟು 6 ರಿಂದ 8 ಲಕ್ಷ ಜನರಲ್ಲಿ 2- 3 ಲಕ್ಷ ಪಾಕಿಸ್ತಾನಿಗಳು ತಮ್ಮ ವಿದೇಶ ಪ್ರವಾಸವನ್ನು ಮುಗಿಸಿ ಹಿಂದಿರುಗುತ್ತಾರೆ. ಉಳಿದವರು ಅಲ್ಲಿ ಇಲ್ಲಿ ಅಡಗಿಕೊಂಡು ಅಕ್ರಮದಲ್ಲಿ ತೊಡಗುತ್ತಾರೆ.

Pakistani Labours
Pakistani Labours


ಪಾಕಿಸ್ತಾನಿಯರಿಂದ ಶೇ. 50ರಷ್ಟು ಅಪರಾಧ

ಪಾಕಿಸ್ತಾನಿಗಳು ಮಲೇಷ್ಯಾದಲ್ಲಿ ಒಂದು ವರ್ಷ ಕಳೆಯುತ್ತಾರೆ. ಅನಂತರ ತಮ್ಮ ವಾಸ್ತವ್ಯವನ್ನು ವಿಸ್ತರಿಸಿದ್ದಕ್ಕಾಗಿ ಬಂಧಿಸಲ್ಪಡುತ್ತಾರೆ. ಇರಾಕ್‌ನಲ್ಲಿಯೂ ಇವರ ನಿಖರವಾದ ಸಂಖ್ಯೆ ಎಷ್ಟಿದೆ ಎಂಬುದು ತಿಳಿದಿಲ್ಲ.

ಸೆನೆಟರ್ ನಾಸಿರ್ ಅಬ್ಬಾಸ್ ಮಾತನಾಡಿ, ಪಾಕಿಸ್ತಾನಿಗಳಿಗಿಂತ ಬಾಂಗ್ಲಾದೇಶೀಯರು ಹೆಚ್ಚಿನ ಉದ್ಯೋಗ ಪಡೆಯುತ್ತಿದ್ದಾರೆ. ಇರಾಕ್‌ನಲ್ಲಿ ಪಾಕಿಸ್ತಾನಿಗಳನ್ನು “ಅಸಹಾಯಕರು” ಎಂದು ಕರೆದ ಅವರು, ಅಗ್ಗದ ಕಾರ್ಮಿಕರಾಗಿ ಅವರನ್ನು ಬಳಸಲಾಗುತ್ತಿದೆ. ಇರಾಕ್‌ನಲ್ಲಿ ಅವರನ್ನು “ಕೈದಿಗಳು” ಎಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು. ಇರಾಕ್‌ನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ಕಾರ್ಮಿಕರ ಅಗತ್ಯವಿದೆ. ಇರಾಕ್‌ನಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿಯರಿಗೆ ಹಲವಾರು ಸಮಸ್ಯೆಗಳಿವೆ ಎಂದು ಹೇಳಿದರು.

ಸೌದಿ ಅರೇಬಿಯಾದಲ್ಲಿ 2 ಲಕ್ಷ ಜನರು ವಾಸಿಸುತ್ತಿದ್ದು, ವಾರ್ಷಿಕವಾಗಿ 4 ಲಕ್ಷ ಪಾಕಿಸ್ತಾನಿಗಳು ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಭಿಕ್ಷುಕರು ಮತ್ತು ರೋಗಿಗಳನ್ನು ಕಳುಹಿಸದಂತೆ ಪಾಕಿಸ್ತಾನಕ್ಕೆ ಸೂಚನೆ ನೀಡಲಾಗಿದೆ. ಯುಎಇಯಲ್ಲಿ ನಡೆಯುವ ಎಲ್ಲಾ ಅಪರಾಧಗಳಲ್ಲಿ ಶೇ. 50ರಷ್ಟನ್ನು ಪಾಕಿಸ್ತಾನಿಗಳು ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Pakistani Labours
Pakistani Labours


ಪಾಕಿಸ್ತಾನಿ ಉದ್ಯೋಗಿಗಳ ಭವಿಷ್ಯ ಏನು?

ಗಲ್ಫ್ ಸರ್ಕಾರಗಳು ಈಗ ಆಫ್ರಿಕನ್ ಕಾರ್ಮಿಕರ ಕಡೆಗೆ ತಿರುಗುತ್ತಿವೆ. ಯುಎಇಯಲ್ಲಿ ಉದ್ಯೋಗವನ್ನು ಹುಡುಕುವ ನಿರೀಕ್ಷೆಯಲ್ಲಿರುವ ಪಾಕಿಸ್ತಾನಿ ಕಾರ್ಮಿಕರ ಭವಿಷ್ಯದ ಬಗ್ಗೆ ಸಚಿವಾಲಯವು ಆತಂಕ ವ್ಯಕ್ತಪಡಿಸಿದೆ. ಯಾಕೆಂದರೆ ಅವರಿಗೆ ಕೆಲಸ ಕೊಡಲು ಗಲ್ಫ್‌ ರಾಷ್ಟ್ರಗಳು ಹಿಂದೆಮುಂದೆ ನೋಡುತ್ತಿವೆ. ಮತ್ತೊಂದೆಡೆ, ಕೆಎಸ್‌ಎ ಆಯಾ ಪ್ರಾಧಿಕಾರವಾದ ರಾಷ್ಟ್ರೀಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ (ತಕಾಮುಲ್) ನಿರ್ವಹಿಸುವ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ವ್ಯಕ್ತಿಗಳನ್ನು ಮಾತ್ರ ನೇಮಿಸಿಕೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

Continue Reading

ಪ್ರಮುಖ ಸುದ್ದಿ

Ismail Haniyeh: ಇಸ್ರೇಲ್‌ ದಾಳಿಗೆ ಹತನಾಗುವ ಮುನ್ನ ಹಮಾಸ್‌ ಉಗ್ರ ಇಸ್ಮಾಯಿಲ್‌ ಏನು ಮಾಡುತ್ತಿದ್ದ? ಇಲ್ಲಿದೆ ವರದಿ

Ismail Haniyeh: ಇರಾನ್‌ನಲ್ಲಿ ಇಸ್ರೇಲ್‌ನಿಂದ ಹತ್ಯೆಗೀಡಾಗಿರುವ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಲವು ದಾಳಿಗಳನ್ನು ನಡೆಸಿದ್ದ ಉಗ್ರ ನಾಯಕ. ಮಧ್ಯಪ್ರಾಚ್ಯ ರಾಜಕೀಯ ಬಿಕ್ಕಟ್ಟಿನಲ್ಲಿ ಪ್ರಮುಖ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಹನಿಯೆಹ್, ಪ್ಯಾಲೆಸ್ತೀನ್ ಪ್ರಾಧಿಕಾರದ ಸರ್ಕಾರದ ಪ್ರಧಾನ ಮಂತ್ರಿಯಾಗಿದ್ದಾಗಲೂ ಒಮ್ಮೆ ಈತನ ಮೇಲೆ ದಾಳಿ ನಡೆದಿತ್ತು. ಆಗ ಈತ ಪಾರಾಗಿದ್ದ. ಆದರೆ ಈಗ ಇಸ್ರೇಲ್‌ ಈತನ ಕತೆ ಮುಗಿಸಿದೆ.

VISTARANEWS.COM


on

Ismail Haniyeh
Koo

ಟೆಹ್ರಾನ್: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು (Ismail Haniyeh) ವಾಯುದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಕಳೆದ ವರ್ಷದ ಅಕ್ಟೋಬರ್‌ 7ರಂದು ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಬೀಡುಬಿಟ್ಟಿರುವ ಹಮಾಸ್‌ ಉಗ್ರರು (Israel Hamas War) ದಾಳಿ ನಡೆಸಿದಕ್ಕೆ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ಈಗ ಇಸ್ಮಾಯಿಲ್‌ ಹನಿಯೆಹ್‌ನನ್ನು ಹತ್ಯೆ ಮಾಡಿಸಿದೆ ಎಂದೇ ಹೇಳಲಾಗುತ್ತಿದೆ. ಇನ್ನು ಟೆಹ್ರಾನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಸ್ಮಾಯಿಲ್‌ ಹನಿಯೆಹ್‌ ಸಾವಿಗೀಡಾಗುವ ಮೊದಲು ಕೆಲವೇ ಗಂಟೆಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಎಂದು ಇರಾನ್‌ ಮಾಧ್ಯಮಗಳು ವರದಿ ಮಾಡಿವೆ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ. ಈ ವಿಡಿಯೊವನ್ನು ಈಗ ಇರಾನ್‌ ಮಾಧ್ಯಮಗಳು ಹಂಚಿಕೊಂಡಿವೆ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್‌ ಮುಗಿಸಿದ್ದೇಕೆ?

Continue Reading
Advertisement
ಕ್ರೀಡೆ12 mins ago

Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

police firing gadag
ಕ್ರೈಂ22 mins ago

Police Firing: ದರೋಡೆ ಎಸಗಿದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು, ಬಂಧನ

Pushpa 2 Allu Arjun climax leaked Fans urge producers to take action
ಟಾಲಿವುಡ್25 mins ago

Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

Supreme Court Sc St Quota
ದೇಶ42 mins ago

Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Gold Rate Today
ಚಿನ್ನದ ದರ1 hour ago

Gold Rate Today: ಮತ್ತೆ ಶಾಕ್‌ ಕೊಟ್ಟ ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Road Accident
ಚಿಕ್ಕಬಳ್ಳಾಪುರ1 hour ago

Road Accident : ಲಾರಿ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಬೈಕ್‌ ಸವಾರರು

IND vs SL 1st ODI
ಕ್ರೀಡೆ1 hour ago

IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

Heavy Rain
ದೇಶ2 hours ago

Heavy Rain: ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋಯ್ತು ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ

India Couture Week 2024 Vicky Kaushal Rashmika Mandanna turn showstoppers
ಬಾಲಿವುಡ್2 hours ago

India Couture Week 2024: ಕೌಚರ್ ವೀಕ್ ಗ್ರ್ಯಾಂಡ್ ಫಿನಾಲೆಯಲ್ಲಿ ಮಿಂಚಿದ ರಶ್ಮಿಕಾ- ವಿಕ್ಕಿ ಕೌಶಲ್!

Self Harming
ಬೆಂಗಳೂರು2 hours ago

Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌