Kaveri River Flood: ಕಾವೇರಿ ನದಿಯಲ್ಲಿ ಪ್ರವಾಹ, 9 ಗ್ರಾಮಗಳ ಜನ ಸ್ಥಳಾಂತರ - Vistara News

ಪ್ರಮುಖ ಸುದ್ದಿ

Kaveri River Flood: ಕಾವೇರಿ ನದಿಯಲ್ಲಿ ಪ್ರವಾಹ, 9 ಗ್ರಾಮಗಳ ಜನ ಸ್ಥಳಾಂತರ

Kaveri River Flood: ದಾಸನಪುರ, ಹರಳೆ, ಅಗ್ರಹಾರ, ಹಳೆ ಹಂಪಾಪುರ, ಹೊಸ ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ, ಯಡಕುರಿಯ, ಧನಗೆರೆ, ಸರಗೂರು ಗ್ರಾಮಗಳು ಜಲಾವೃತವಾಗಿವೆ. ಈ 9 ಗ್ರಾಮಗಳಿಗೆ ತೆರಳದಂತೆ ಬ್ಯಾರಿಕೇಡ್ ಅಳವಡಿಸಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ದಾಸನಪುರ, ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಕೊಳ್ಳೇಗಾಲದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

VISTARANEWS.COM


on

Kaveri River Flood
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಕೃಷ್ಣರಾಜಸಾಗರ ಅಣೆಕಟ್ಟು (KRS Dam) ಹಾಗು ಕಬಿನಿ‌ ಜಲಾಶಯಗಳಿಂದ (Kabini Dam) ಅಧಿಕ ನೀರು ಬಿಡುಗಡೆ (Water release) ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ (Flood Situation in Kaveri River) ಉಂಟಾಗಿದ್ದು, ಚಾಮರಾಜನಗರ (Chamarajanagar) ಜಿಲ್ಲೆ ಕೊಳ್ಳೇಗಾಲ ತಾಲೂಕಿನ 9 ಗ್ರಾಮಗಳು ಜಲಾವೃತವಾಗಿವೆ.

ದಾಸನಪುರ, ಹರಳೆ, ಅಗ್ರಹಾರ, ಹಳೆ ಹಂಪಾಪುರ, ಹೊಸ ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ, ಯಡಕುರಿಯ, ಧನಗೆರೆ, ಸರಗೂರು ಗ್ರಾಮಗಳು ಜಲಾವೃತವಾಗಿವೆ. ಈ 9 ಗ್ರಾಮಗಳಿಗೆ ತೆರಳದಂತೆ ಬ್ಯಾರಿಕೇಡ್ ಅಳವಡಿಸಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ದಾಸನಪುರ, ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಕೊಳ್ಳೇಗಾಲದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಇಲ್ಲಿನ ಮನೆ, ಜಮೀನುಗಳಿಗೆ ನೀರು ನುಗ್ಗಿದೆ. 9 ಗ್ರಾಮಗಳಲ್ಲಿ ಇಂದು ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗು ಇತರ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಗ್ರಾಮಸ್ಥರು ನೀರಿನ ಬಳಿ ಹೋಗದಂತೆ ಎಚ್ಚರಿಕೆ ವಹಿಸಲು ಸಿಬ್ಬಂದಿ ನಿಯೋಜಿಸಲಾಗಿದೆ. ಸಂಭವನೀಯ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದ್ದು, ದೋಣಿಗಳು ಸೇರಿದಂತೆ ರಕ್ಷಣಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಹೆಚ್ಚಿದ ಕಬಿನಿ ಜಲಾಶಯ ಒಳಹರಿವು

ಕೇರಳದ ವೈನಾಡಿನಲ್ಲಿ ಮಳೆ ಆರ್ಭಟ ಮುಂದುವರಿದ ಪರಿಣಾಮ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಹೆಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಜಲಾಶಯದ ಒಳ ಹರಿವು ಹೆಚ್ಚಿದ್ದು, ಇದರಿಂದ ಹೊರ ಹರಿವಿನಲ್ಲೂ ಹೆಚ್ಚಳವಾಗಿದೆ. ಜಲಾಶಯದ ಗರಿಷ್ಟ ನೀರಿನ ಮಟ್ಟ 2284 ಅಡಿ ಹಾಗೂ ಇಂದಿನ ನೀರಿನ ಮಟ್ಟ 2281.59 ಅಡಿ. ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ನದಿ ಪಾತ್ರದ ಜನತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಬಿನಿ, ಕೆಆರ್‌ಎಸ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ನದಿಗೆ ಬಿಟ್ಟ ಹಿನ್ನೆಲೆಯಲ್ಲಿ ತಲಕಾಡಿನ ಹೆಮ್ಮಿಗೆ ಸೇತುವೆ ಹಾಗೂ ಸುತ್ತೂರು ಸೇತುವೆಗಳು ಮುಳುಗಡೆಯಾಗಿವೆ. ಮೈಸೂರು ಜಿಲ್ಲೆ ತಿರುಮಕೂಡಲು ನರಸೀಪುರ ತಾಲ್ಲೂಕಿನ ಹೆಮ್ಮಿಗೆ ಸೇತುವೆ ಮುಳುಗಡೆಯಿಂದ ತಿ. ನರಸೀಪುರ- ತಲಕಾಡು ಸಂಚಾರ ಬಂದ್ ಆಗಿದೆ. ಸೇತುವೆ ಮೇಲೆ ಎರಡು ಅಡಿಗಳಷ್ಟು ನೀರು ಹರಿಯುತ್ತಿದೆ. ಒಂದೇ ವಾರದ ಅಂತರದಲ್ಲಿ ಎರಡು ಬಾರಿ ಸೇತುವೆ ಮುಳುಗಡೆಯಾಗಿದೆ. ಸೇತುವೆಯ ಎರಡು ಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಮೈಸೂರು ತಾಲ್ಲೂಕಿನ ವರುಣ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಸೇತುವೆ ಮುಳುಗಡೆಯಿಂದ ಮೈಸೂರು ಸುತ್ತೂರು ಮಾರ್ಗದ ಸಂಚಾರ ಬಂದ್ ಆಗಿದೆ. ಸುತ್ತೂರು ಸೇರಿದಂತೆ ಅನೇಕ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಒಂದೇ ವಾರದಲ್ಲಿ ಎರಡು ಬಾರಿ ಸುತ್ತೂರು ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಅಕ್ಕ ಪಕ್ಕದ ತೆಂಗಿನ ತೋಟಕ್ಕೂ ನೀರು ನುಗ್ಗಿದೆ.

ಇದನ್ನೂ ಓದಿ: KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

MUDA Scam: ಸಿಎಂಗೆ ಕಳಿಸಿದ ರಾಜ್ಯಪಾಲರ ನೋಟೀಸ್‌ ತಿರಸ್ಕರಿಸಿದ ಕ್ಯಾಬಿನೆಟ್‌, ಕಾನೂನು ಹೋರಾಟಕ್ಕೆ ನಿರ್ಣಯ

MUDA Scam: ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಭಾಗವಹಿಸಲಿಲ್ಲ. ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತು.

VISTARANEWS.COM


on

muda scam cm siddaramaiah
Koo

ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧಿಸಿ ವಿವರಣೆ ಕೇಳಿ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ನೋಟೀಸ್‌ ಕಳಿಸಿದ ರಾಜ್ಯಪಾಲರ (Governor) ನಡೆಯನ್ನು ಖಂಡಿಸಿ ರಾಜ್ಯ ಸಚಿವ ಸಂಪುಟ (Cabinet) ನಿರ್ಣಯ ಪಾಸ್‌ ಮಾಡಿದೆ. ಈ ಬಗ್ಗೆ ವಿಸ್ತೃತವಾದ ಉತ್ತರವನ್ನು ಕ್ಯಾಬಿನೆಟ್‌ ತಯಾರು ಮಾಡುತ್ತಿದ್ದು, ಅದನ್ನು ರಾಜಭವನಕ್ಕೆ (Rajbhavan) ಕಳಿಸಲು ನಿರ್ಧರಿಸಿದೆ.

ರಾಜ್ಯಪಾಲರ ನಡೆಯ ವಿರುದ್ಧ ಸಂದೇಶ ರಾಜಭವನಕ್ಕೆ ಕಳುಹಿಸಲು ನಿರ್ಧರಿಸಲಾಗಿದ್ದು, ಬಳಿಕ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧತೆ ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯಪಾಲರ ನೊಟೀಸ್‌ಗೆ ಸಂಪುಟ ಸಭೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದು, ನೋಟೀಸ್‌ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯಪಾಲರ ಸ್ಥಾನ ರಾಜಕೀಯ ದುರುಪಯೋಗದ ಹಾದಿಯಲ್ಲಿರುವ ಬಗ್ಗೆ ಅನುಮಾನ ಮೂಡಿದೆ ಎಂದು ಆಕ್ಷೇಪಿಸಿದೆ. ನೋಟೀಸ್‌ ಅನ್ನು ಪದ ಮತ್ತು ಒಕ್ಕಣಿಕೆ ಸಹಿತ ವಾಪಸ್ ಪಡೆಯಬೇಕು. ಇಲ್ಲವೇ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.

ವಿವರವಾದ ಉತ್ತರ ನೀಡುವ ಹಿನ್ನೆಲೆಯಲ್ಲಿ ಮುಡಾ ದಾಖಲೆಗಳನ್ನು ಸಚಿವ ಸಂಪುಟ ಸಭೆಗೆ ತರಿಸಿಕೊಳ್ಳಲಾಯಿತು. 25 ಸ್ಪೈರಲ್ ಬೈಂಡ್ ಬುಕ್‌ಗಳನ್ನು ಸಭೆಗೆ ಕರೆಸಿಕೊಂಡ ಸಚಿವರು, ಯಾರಿಗೆಲ್ಲಾ ಸೈಟುಗಳ ಹಂಚಿಕೆಯಾಗಿದೆ ಎಂಬ ಸಂಪೂರ್ಣ ವಿವರ ತರಿಸಿಕೊಂಡು ಚರ್ಚೆ ನಡೆಸಿದರು. ಮುಡಾ ನಡವಳಿಗಳ ಸಂಪೂರ್ಣ ವಿವರ ತರಿಸಿಕೊಂಡು ಚರ್ಚೆ ಮಾಡಲಾಯಿತು. ಸುದೀರ್ಘ ವಿವರಣೆ ಸಹಿತ ನಿರ್ಣಯ ಕೈಗೊಳ್ಳಲಿದ್ದು, ಈ ಬಗ್ಗೆ ಕಾನೂನು ಇಲಾಖೆಯಿಂದ ಟಿಪ್ಪಣಿ ತರಿಸಿಕೊಳ್ಳಲಾಗಿದೆ.

ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಭಾಗವಹಿಸಲಿಲ್ಲ. ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತು. ಸಿಎಂ ವಿರುದ್ಧ ಕೇಳಿ ಬಂದಿರುವ ಆರೋಪವಾದ್ದರಿಂದ, ಅವರೇ ಸಭೆಯಲ್ಲಿ ಭಾಗಿಯಾದರೆ ಕಾನೂನಾತ್ಮಕವಾಗಿ ಪ್ರಕರಣ ನಿಲ್ಲುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾದುದರಿಂದ, ಕಾನೂನು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಿಎಂ ಕ್ಯಾಬಿನೆಟ್‌ನಿಂದ ದೂರ ಉಳಿದರು. ಕ್ಯಾಬಿನೆಟ್‌ ಸಭೆಗೂ ಮುನ್ನ ಸಿಎಂ ತಮ್ಮ ಸಂಪುಟ ಸದಸ್ಯರ ಜೊತೆಗೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿ ಮುಂದಿನ ನಡೆಯ ರೂಪುರೇಷೆ ನಿರ್ಧರಿಸಿದರು.

ಕ್ಯಾಬಿನೆಟ್‌ ನಿರ್ಣಯ ರಾಜಭವನ ಮುಟ್ಟಿದ ತಕ್ಷಣ ರಾಜ್ಯಪಾಲರು ಮುಂದಿನ ನಡೆ ಕೈಗೊಳ್ಳಬಹುದು ಎಂದು ತರ್ಕಿಸಲಾಗಿದೆ. ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಈಗಾಗಲೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರುವ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಹಾಂಗೆ ಕೇಸು ದಾಖಲಿಸಲು ಅವರು ಅನುಮತಿ ಕೊಡುವುದು ಖಚಿತ.

ಇಂದು ದಿಲ್ಲಿಯಲ್ಲಿ ರಾಜ್ಯಪಾಲರುಗಳ ಕಾನ್ಫರೆನ್ಸ್‌ನಲ್ಲಿ ಥಾವರ್ ಚಂದ್ ಗೆಲ್ಹೋಟ್ ಭಾಗವಹಿಸಿದ್ದಾರೆ. ಸೋಮವಾರ ಬೆಂಗಳೂರಿಗೆ ವಾಪಸು ಆಗಲಿರುವ ರಾಜ್ಯಪಾಲರು, ಬಂದ ಬಳಿಕ ಬಹುತೇಕ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವ ಸಾಧ್ಯತೆ ಇದೆ.

ಈ ಹಿಂದೆ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲು ಆಗಿವೆ. ಆ ದೂರುಗಳ ಬಗ್ಗೆ ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಮುಡಾ ಪ್ರಕರಣದಲ್ಲಿ ದೂರು ದಾಖಲು ಆಗಿರುವ ದಿನವೇ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ನೀಡಲಾಗಿದೆ. ಯಾಕಿಷ್ಟು ಆತುರದ ನೋಟೀಸ್? ಇದು ರಾಜಕೀಯ ಪ್ರೇರಿತ ಎಂದು ಸಚಿವ ಸಂಪುಟ ಹೇಳಿದೆ.

ನೋಟೀಸ್‌ ತಿರಸ್ಕರಿಸಿದ್ದೇವೆ: ಸಂತೋಷ್‌ ಲಾಡ್‌

ಸಚಿವ ಸಂತೋಷ್ ಲಾಡ್ ಈ ಬಗ್ಗೆ ಹೇಳಿಕೆ ನೀಡಿದ್ದು, ʼರಾಜ್ಯಪಾಲರ ಶೋಕಾಸ್ ನೋಟೀಸ್ ತಿರಸ್ಕರಿಸಿ ನಿರ್ಣಯ ಮಾಡಿದ್ದೇವೆʼ ಎಂದಿದ್ದಾರೆ. ಈ ಹಿಂದಿನ ಪ್ರಕರಣಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ರಾಜ್ಯಪಾಲರು ಯಾವಾಗ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಬಹುದು ಅನ್ನೋ ಬಗ್ಗೆ ಸಹ ಚರ್ಚೆ ಆಗಿದೆ. ಮುಡಾ ಕೇಸ್‌ನಲ್ಲಿ ಮೂರು ವಿಚಾರಗಳ ಬಗ್ಗೆ ಚರ್ಚೆ ಆಗಿದೆ. ಮುಡಾ ನಿವೇಶನ ಹಂಚಿಕೆ ಆಗಿದ್ದು ಯಾವಾಗ, ಎಷ್ಟು ನಿವೇಶನ ಪಡೆದಿದ್ದಾರೆ, ಅಧಿಕಾರ ದುರುಪಯೋಗ ಆಗಿದೆಯಾ, ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ಚರ್ಚೆ ಆಗಿದೆ. ರಾಜ್ಯಪಾಲರು ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿ ಮಾಡಿ ಬಂದಿರುವ ಮಾಹಿತಿ ನಮಗೆ ಇದೆ ಎಂದು ಲಾಡ್‌ ಹೇಳಿದ್ದಾರೆ.

ಇದನ್ನೂ ಓದಿ: CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

Continue Reading

Latest

Sexual Abuse: ಟೋಸ್ಟ್‌ ನೀಡುವುದಾಗಿ ಕರೆದು ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

Sexual Abuse: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಮನೆಗೆ ಹಿಂದಿರುಗುತ್ತಿದ್ದಾಗ ಮೊಯೀದ್‌ ಖಾನ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜ ಖಾನ್‌ ಸಂತ್ರಸ್ತೆಗೆ ಟೋಸ್ಟ್ ನೀಡುವ ಮೂಲಕ ತನ್ನ ಅಂಗಡಿಗೆ ಕರೆದೊಯ್ದಿದ್ದ. ನಂತರ ಮೋಯಿದ್‌ ಖಾನ್‌ ಮತ್ತು ರಾಜ ಖಾನ್‌ ಇಬ್ಬರೂ ಅಂಗಡಿಯೊಳಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ಬಳಿಕ ಇದನ್ನು ವಿಡಿಯೊ ರೆಕಾರ್ಡ್‌ ಮಾಡಿಕೊಂಡು ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿ ಗರ್ಭಿಣಿ ಆದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

VISTARANEWS.COM


on

Sexual Abuse
Koo


ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಮಾಜವಾದಿ ಪಕ್ಷದ ಮುಖಂಡ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜು ಖಾನ್ ಕೆಲವು ತಿಂಗಳ ಹಿಂದೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Sexual Abuse) ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಅಪ್ರಾಪ್ತ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಲು ಅವರು ಆ ಘೋರ ಅಪರಾಧವನ್ನು ವಿಡಿಯೊ ಮಾಡಿ ಆ ಅಶ್ಲೀಲ ವಿಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ, ಅವರು 2 ತಿಂಗಳಿಗೂ ಹೆಚ್ಚು ಕಾಲ ಅವಳನ್ನು ಲೈಂಗಿಕವಾಗಿ ಶೋಷಿಸುತ್ತಿದ್ದರು ಎನ್ನಲಾಗಿದೆ. ಕೊನೆಗೆ ಆಕೆಯ ಆರೋಗ್ಯ ಹದಗೆಟ್ಟು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವಳು ಗರ್ಭಿಣಿಯಾದ ವಿಚಾರ ಬೆಳಕಿಗೆ ಬರುವ ಮೂಲಕ ಕುಟುಂಬಕ್ಕೆ ಆಕೆಯ ಮೇಲೆ ನಡೆಯುತ್ತಿರುವ ಅಪರಾಧದ ಬಗ್ಗೆ ತಿಳಿದು ಬಂದಿದೆ.

ಆದರೆ ಈ ಬಗ್ಗೆ ಭದರ್ಸಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೇ 2012ರಿಂದ ಈ ಪೊಲೀಸ್ ಠಾಣೆಯು ಆರೋಪಿ ಎಸ್ಪಿ ನಾಯಕ ಮೊಯೀದ್ ಖಾನ್ ಅವರ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಲಾಗಿದೆ. ವರದಿಗಳ ಪ್ರಕಾರ ಅಯೋಧ್ಯೆಯ ಪುರ ಕಲಂದರ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಜುಲೈ 30, 2024 ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಎಸ್ಪಿ ನಾಯಕ ಮೊಯೀದ್ ಖಾನ್ ಮತ್ತು ಅವರ ಸೇವಕ ರಾಜು ಅವರನ್ನು ಬಂಧಿಸಿದ್ದಾರೆ.

ವರದಿ ಪ್ರಕಾರ ಆರೋಪಿ ಎಸ್ಪಿ ನಾಯಕ ಖಾನ್ ಭದರ್ಸಾ ಹೊರ ಠಾಣೆ ಬಳಿ ಬೇಕರಿ ಅಂಗಡಿಯನ್ನು ಹೊಂದಿದ್ದಾರೆ. ಸಂತ್ರಸ್ತೆ ಕಾರ್ಮಿಕ ಕುಟುಂಬ ಮತ್ತು ಒಬಿಸಿ ಸಮುದಾಯಕ್ಕೆ ಸೇರಿದ್ದು, ಅಪ್ರಾಪ್ತ ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಾಳೆ. ಅಪ್ರಾಪ್ತ ಬಾಲಕಿಯ ಮನೆಗೆ ಹಿಂದಿರುಗುತ್ತಿದ್ದಾಗ, ಮೊಯೀದ್‍ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜ ಖಾನ್‌ ಸಂತ್ರಸ್ತೆಗೆ ಟೋಸ್ಟ್ ನೀಡುವ ಮೂಲಕ ತನ್ನ ಅಂಗಡಿಗೆ ಕರೆದೊಯ್ದನು. ಅವಳು ಈ ಹಿಂದೆಯೂ ಅಂಗಡಿಗೆ ಹೋಗುತ್ತಿದ್ದರಿಂದ, ಅವಳು ಅವನನ್ನು ನಂಬಿ ಅಲ್ಲಿಗೆ ಹೋದಳು.

ಇಬ್ಬರೂ ಆರೋಪಿಗಳು ಅಂಗಡಿಯೊಳಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಇಡೀ ಘಟನೆಯ ಅಶ್ಲೀಲ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ, ಅವರು 2 ತಿಂಗಳಿಗೂ ಹೆಚ್ಚು ಕಾಲ ಅಪ್ರಾಪ್ತೆಯ ಮೇಲೆ ಲೈಂಗಿಕ ಶೋಷಣೆ ಮುಂದುವರಿಸಿದರು. ನಿರಂತರ ಲೈಂಗಿಕ ಶೋಷಣೆಯ ಪರಿಣಾಮವಾಗಿ, ಸಂತ್ರಸ್ತೆ ಗರ್ಭಿಣಿಯಾದಳು. ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದಾಗ, ಅವಳ ತಾಯಿಗೆ ಅನುಮಾನ ಬಂತು. ನಂತರ ಅವಳು ಇಡೀ ಘಟನೆಯನ್ನು ತನ್ನ ತಾಯಿಗೆ ವಿವರಿಸಿದಳು, ನಂತರ ಅವಳು ಈ ವಿಷಯದಲ್ಲಿ ಪೊಲೀಸ್ ದೂರು ದಾಖಲಿಸಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಹಿಂದೂ ಸಂಘಟನೆಗಳು ಬಾಲಕಿಯ ಬೆಂಬಲಕ್ಕೆ ಬಂದರು. ಬಿಜೆಪಿ ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ನಿಷಾದ್ ಪಕ್ಷದ ಸದಸ್ಯರು ಸಹ ಪೊಲೀಸ್ ಠಾಣೆಗೆ ಬಂದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಖಾನ್ ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಅವರ ಆಪ್ತರಾಗಿದ್ದು, ಭದರ್ಸಾ ಪ್ರದೇಶದ ಪಕ್ಷದ ನಗರ ಅಧ್ಯಕ್ಷರಾಗಿದ್ದಾರೆ. ವರದಿಗಳ ಪ್ರಕಾರ, ಖಾನ್ ಅವರ ನಿಯಂತ್ರಣದಲ್ಲಿ ಭದರ್ಸಾ ಪೊಲೀಸ್ ಠಾಣೆ ಹಾಗೂ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದೆ. ಹಾಗಾಗಿ ದೂರು ದಾಖಲಿಸಿದ ನಂತರ, ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ನಿರಂತರ ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಅಲ್ಲದೇ ಅವರು ಬಡ ಕುಟುಂಬಕ್ಕೆ ಸೇರಿದ್ದರಿಂದ ಇದರ ಲಾಭ ಪಡೆದು ಆ ಜನರು ತನ್ನ ಮಗಳ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ಥೆಯ ತಾಯಿ ಗೋಳಾಡಿದ್ದಾರೆ.

ಇದನ್ನೂ ಓದಿ: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

ಇದೀಗ ಎಸ್ಪಿ ನಾಯಕ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜ ಖಾನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಏತನ್ಮಧ್ಯೆ, ಖಾನ್ ಅವರ ಬೇಕರಿ ಅಂಗಡಿಯಲ್ಲಿ ಸರಿಯಾದ ದಾಖಲೆಗಳಿವೆಯೇ ಅಥವಾ ಇಲ್ಲವೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Continue Reading

ಕ್ರೀಡೆ

Paris Olympics: ಕಂಚಿನ ಪದಕ ಗೆದ್ದ ರೈಲ್ವೆ ಟಿಕೆಟ್ ಕಲೆಕ್ಟರ್ ಸ್ವಪ್ನಿಲ್‌ ಕುಸಾಲೆ

Paris Olympics: ಬುಧವಾರ ನಡೆದಿದ್ದ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್‌ ಕುಸಾಲೆ 7ನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದ್ದರು. ಭೋಪಾಲ್‌ನಲ್ಲಿ ನಡೆದಿದ್ದ ಕೊನೆಯ ಅರ್ಹತಾ ಸುತ್ತಿನಲ್ಲಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಪಡೆದಿದ್ದರು.

VISTARANEWS.COM


on

Paris Olympics:
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಭಾರತ ಸ್ವಪ್ನಿಲ್‌ ಕುಸಾಲೆ ಪುರುಷರ 50 ಮೀ. ರೈಫ‌ಲ್‌ 3 ಪೊಸಿಶನ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕ ಸಂಖ್ಯೆ ಮೂರಕ್ಕೇರಿದೆ. ಈ ಮೂರು ಪದಕ ಕೂಡ ಒಲಿದದ್ದು ಶೂಟಿಂಗ್​ ವಿಭಾಗದಲ್ಲಿ.​

ಗುರುವಾರ ನಡೆದ 50 ಮೀ. ರೈಫ‌ಲ್‌ 3 ಪೊಸಿಶನ್‌ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಸ್ವಪ್ನಿಲ್‌ ಫೈನಲ್​ ಪಂದ್ಯದ ಪ್ರೋನ್‌ನಲ್ಲಿ 156.8, ನೀಲಿಂಗ್‌ನಲ್ಲಿ 153.3 ಮತ್ತು ಸ್ಟ್ಯಾಂಡಿಂಗ್‌ನಲ್ಲಿ 195 ಅಂಕಗಳಿಸಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ್ಕಕೆ ಕೊರಳೊಡ್ಡಿದರು. 463.6 ಅಂಕ ಗಳಿಸಿದ ಚೀನಾದ ಲಿಯು ಯುಕುನ್ ಚಿನ್ನ ಮತ್ತು ಉಕ್ರೇನ್​ನ ಕುಲಿಶ್ ಸೆರ್ಹಿ(461.3) ಬೆಳ್ಳಿ ಪದಕ ಗೆದ್ದರು.

ಬುಧವಾರ ನಡೆದಿದ್ದ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್‌ ಕುಸಾಲೆ 7ನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದ್ದರು. ಭೋಪಾಲ್‌ನಲ್ಲಿ ನಡೆದಿದ್ದ ಕೊನೆಯ ಅರ್ಹತಾ ಸುತ್ತಿನಲ್ಲಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಪಡೆದಿದ್ದರು. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ.

ರೈಲ್ವೆ ಟಿಕೆಟ್ ಕಲೆಕ್ಟರ್


ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಾಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ.

ಇದನ್ನೂ ಓದಿ Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

ಫೈನಲ್​ ಪ್ರವೇಶಿಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದ ಸ್ವಪ್ನಿಲ್, ನನ್ನ ಮತ್ತು ಧೋನಿಯವರ ಜೀವನದಲ್ಲಿ ಹಲವು ಸಾಮ್ಯತೆಗಳು ಇವೆ. ನಾನು ಅವರ ಅಪ್ಪಟ ಅಭಿಮಾನಿ. ಅವರ ಬಯೋಪಿಕ್ ನೋಡಿಯೇ ನಾನು ಶೂಟಿಂಗ್​ನಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ನಿರ್ಧರಿಸಿದ್ದು. ಅವರಂತೆಯೇ ನನ್ನದೂ ಕೂಡ ಶಾಂತಚಿತ್ತದ ಸ್ವಾಭಾವ. ನಾನು ಕೂಡ ರೈಲ್ವೆ ಟಿಕೆಟ್ ಕಲೆಕ್ಟರ್ ಆಗಿದ್ದೇನೆ’ ಎಂದು ಹೇಳಿದ್ದರು.

Continue Reading

Latest

Condom Cause Cancer: ಕಾಂಡೋಮ್, ಲೂಬ್ರಿಕೆಂಟ್‍ ಬಳಸಿದರೂ ಕ್ಯಾನ್ಸರ್‌! ಅಧ್ಯಯನ ವರದಿಯಲ್ಲಿ ಆಘಾತಕಾರಿ ಸಂಗತಿ

Condom Cause Cancer: ಕಾಂಡೋಮ್ ಹಾಗೂ ಲೂಬ್ರಿಕೆಂಟ್‌ಗಳಲ್ಲಿ ಬಂಜೆತನ, ಕ್ಯಾನ್ಸರ್ ಸೇರಿದಂತೆ ಇತರ ಸಮಸ್ಯೆಗಳಿಗೆ ಕಾರಣವಾಗುವ ವಿಷಕಾರಿ ರಾಸಾಯನಿಕಗಳನ್ನು ಹೊಂದಿರುತ್ತವೆ ಎಂದು ಹೊಸ ಅಧ್ಯಯನವು ಬಹಿರಂಗಪಡಿಸಿದೆ. ಪಿಎಫ್ಎಎಸ್ ಅನ್ನು ಹೆಚ್ಚು ಬಳಸುವುದರಿಂದ ಕ್ಯಾನ್ಸರ್, ಯಕೃತ್ತಿನ ಹಾನಿ, ಥೈರಾಯ್ಡ್ ಸಮಸ್ಯೆಗಳು, ಜನನ ದೋಷಗಳು ಮತ್ತು ಕಡಿಮೆ ರೋಗನಿರೋಧಕ ಶಕ್ತಿ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆಯಂತೆ.

VISTARANEWS.COM


on

Condom Cause Cancer
Koo


ಸಾಮಾನ್ಯವಾಗಿ ದಂಪತಿ ಬೇಡದ ಗರ್ಭವನ್ನು ತಡೆಯಲು ಕಾಂಡೋಮ್‌ಗಳನ್ನು ಬಳಸುತ್ತಾರೆ. ಹಾಗೇ ಸಂಭೋಗದ ವೇಳೆ ಯೋನಿಯಲ್ಲಿ ಲೋಳೆ ಸ್ರಾವ ಕಡಿಮೆಯಾದಾಗ ಯೋನಿ ನಾಳದ ನೋವು, ಬಿಗಿತವನ್ನು ಕಡಿಮೆ ಮಾಡಲು ಕೆಲವರು ಲೂಬ್ರಿಕೆಂಟ್ ಅನ್ನು ಬಳಸುತ್ತಾರೆ. ಆದರೆ ನೀವು ಬಳಸುವಂತಹ ಈ ಕಾಂಡೋಮ್ (Condom Cause Cancer) ಹಾಗೂ ಲೂಬ್ರಿಕೆಂಟ್‍ಗಳಲ್ಲಿ ಬಂಜೆತನ, ಕ್ಯಾನ್ಸರ್ ಸೇರಿದಂತೆ ಇತರ ಸಮಸ್ಯೆಗಳಿಗೆ ಕಾರಣವಾಗುವ ವಿಷಕಾರಿ ರಾಸಾಯನಿಕಗಳನ್ನು ಹೊಂದಿರುತ್ತವೆ ಎಂದು ಹೊಸ ಅಧ್ಯಯನವು ಬಹಿರಂಗಪಡಿಸಿದೆ!

ಕಾಂಡೋಮ್‍ಗಳು ಮತ್ತು ಲೂಬ್ರಿಕೆಂಟ್‍ಗಳ ಹಲವಾರು ಪ್ರಸಿದ್ಧ ಬ್ರಾಂಡ್‍ಗಳಲ್ಲಿ ಈ ವಿಷಕಾರಿ ಪಿಎಫ್ಎಎಸ್ ರಾಸಾಯನಿಕಗಳ ಅಪಾಯಕಾರಿ ಮಟ್ಟಲ್ಲಿದೆ ಎಂಬುದನ್ನು ಇತ್ತೀಚಿನ ಅಧ್ಯಯನವು ಬಹಿರಂಗಪಡಿಸಿದೆ. ಗ್ರಾಹಕ ನ್ಯಾಯವಾದಿ ಸಂಸ್ಥೆಯಾದ ಮಾಮಾವೇಶನ್ ನಡೆಸಿದ ಸಂಶೋಧನೆಯು ಈ ಉತ್ಪನ್ನಗಳಿಗೆ ಸಂಬಂಧಿಸಿದ ಗಮನಾರ್ಹ ಆರೋಗ್ಯ ಅಪಾಯಗಳನ್ನು ಬಹಿರಂಗಪಡಿಸಿದೆ. ಎನ್ವಿರಾನ್ಮೆಂಟಲ್ ಪ್ರೊಟೆಕ್ಷನ್ ಏಜೆನ್ಸಿಯ ಪ್ರಯೋಗಾಲಯವು ನಡೆಸಿದ ಅಧ್ಯಯನವು ಟ್ರೋಜನ್ ಅಲ್ಟ್ರಾ ಥಿನ್ ಕಾಂಡೋಮ್‍ಗಳು ಮತ್ತು ಕೆ-ವೈ ಜೆಲ್ಲಿ ಕ್ಲಾಸಿಕ್ ವಾಟರ್ ಬೇಸಡ್ ಫರ್ಸನಲ್ ಲೂಬ್ರಿಕೆಂಟ್ ಸೇರಿದಂತೆ ವಿವಿಧ ಸಂತಾನೋತ್ಪತ್ತಿಗೆ ಸಂಬಂಧಿಸಿದ ಆರೋಗ್ಯ ಉತ್ಪನ್ನಗಳಲ್ಲಿ ಪಿಎಫ್ಎಎಸ್ ಅನ್ನು ಪತ್ತೆ ಮಾಡಿದೆ.

ಟ್ರೋಜನ್ ಅಲ್ಟ್ರಾ ಥಿನ್ ಕಾಂಡೋಮ್‍ಗಳು ಮತ್ತು ಯೂನಿಯನ್ ಸ್ಟ್ಯಾಂಡರ್ಡ್ ಅಲ್ಟ್ರಾ ಥಿನ್ ಲೂಬ್ರಿಕೇಟೆಡ್ ಮೇಲ್ ಲ್ಯಾಟೆಕ್ಸ್ ಕಾಂಡೋಮ್‍ಗಳಲ್ಲಿ ಪಿಎಫ್ಎಎಸ್ ಮಟ್ಟವು ವಿಶೇಷವಾಗಿ ಹೆಚ್ಚಾಗಿದೆ ಎಂದು ಸಂಶೋಧನೆಗಳು ತಿಳಿಸುತ್ತವೆ. ಇತರ ಲೂಬ್ರಿಕೆಂಟ್‍ಗಳಾದ ಲೋಲಾ ಟಿಂಗ್ ಲಿಂಗ್ ಮಿಂಟ್ ಪ್ಲೆಷರ್ ಜೆಲ್ ಸಹ ಈ ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿವೆ ಎನ್ನಲಾಗಿದೆ.

ಪಿಎಫ್ಎಎಸ್ ಎಂಬುದು ನೀರು, ಕಲೆಗಳು ಮತ್ತು ಶಾಖ ನಿರೋಧಕ ಉತ್ಪನ್ನಗಳನ್ನು ತಯಾರಿಸಲು ಬಳಸುವ ಸುಮಾರು 15,000 ಸಂಶ್ಲೇಷಿತ ರಾಸಾಯನಿಕಗಳ ಗುಂಪು. ಅವುಗಳನ್ನು “ಫಾರೇವರ್ ಕೆಮಿಕಲ್ಸ್” ಎಂದು ಕರೆಯಲಾಗುತ್ತದೆ. ಏಕೆಂದರೆ ಅವು ಪರಿಸರದಲ್ಲಿ ನೈಸರ್ಗಿಕವಾಗಿ ಕರಗುವುದಿಲ್ಲ ಮತ್ತು ಮಾನವ ದೇಹದಲ್ಲಿ ಸಂಗ್ರಹವಾಗುವಂತಹ ರಾಸಾಯನಿಕವಾಗಿದೆ. ಹಾಗಾಗಿ ಪಿಎಫ್ಎಎಸ್ ಅನ್ನು ಹೆಚ್ಚು ಬಳಸುವುದರಿಂದ ಕ್ಯಾನ್ಸರ್, ಯಕೃತ್ತಿನ ಹಾನಿ, ಥೈರಾಯ್ಡ್ ಸಮಸ್ಯೆಗಳು, ಜನನ ದೋಷಗಳು ಮತ್ತು ಕಡಿಮೆ ರೋಗನಿರೋಧಕ ಶಕ್ತಿ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಬಹುದು. ಅಲ್ಲದೇ ಇಂತಹ ಕಾಂಡೋಮ್‍ಗಳು ಮತ್ತು ಲೂಬ್ರಿಕೆಂಟ್‍ಗಳನ್ನು ಶಿಶ್ನ ಮತ್ತು ಯೋನಿಯಂತಹ ತುಂಬಾ ಸೂಕ್ಷ್ಮ ಪ್ರದೇಶಗಳಿಗೆ ಬಳಸುವುದರಿಂದ ಹೆಚ್ಚು ಆತಂಕಕಾರಿಯಾಗಿದೆ. ಯಾಕೆಂದರೆ ದೇಹದ ಇತರ ಭಾಗಗಳಿಗೆ ಹೋಲಿಸಿದರೆ ಅವು ರಾಸಾಯನಿಕಗಳನ್ನು ಸುಲಭವಾಗಿ ಹೀರಿಕೊಳ್ಳಬಲ್ಲವು. ಅಲ್ಲದೇ ಈ ರಾಸಾಯನಿಕಗಳ ಕಾಂಡೋಮ್ ಬಳಕೆ ಮಾಡುವುದರಿಂದ ಸ್ತ್ರೀ ಸಂತಾನೋತ್ಪತ್ತಿಯ ನಾಳವು ಹಾನಿಗೊಳಗಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ತಂದೆಯ ಜೀವ ಉಳಿಸಲು ಮೊಸಳೆ ಬಾಯಿಗೆ ಕೈ ಹಾಕಿದ ಬಾಲಕ!

ಈ ರಾಸಾಯನಿಕಗಳನ್ನು ತಮ್ಮ ಉತ್ಪನ್ನಗಳಿಂದ ತೆಗೆದುಹಾಕಲು ಕೈಗಾರಿಕೆಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಸಂಭವಿಸಬಹುದಾದ ಆರೋಗ್ಯ ಅಪಾಯಗಳನ್ನು ತಡೆಗಟ್ಟಲು ಕಾಂಡೋಮ್ ಮತ್ತು ಲೂಬ್ರಿಕೆಂಟ್‍ಗಳಿಂದ ಪಿಎಫ್ಎಎಸ್ ಅನ್ನು ತೆಗೆದುಹಾಕಲು ತಕ್ಷಣದ ಕ್ರಮಕ್ಕೆ ಮಾಮಾವತಿ ಕರೆ ನೀಡುತ್ತಿದೆ. ತಯಾರಕರು ತಮ್ಮ ಉತ್ಪನ್ನಗಳಿಂದ ಈ ಹಾನಿಕಾರಕ ರಾಸಾಯನಿಕಗಳನ್ನು ತೆಗೆದುಹಾಕುವ ಮೂಲಕ ಗ್ರಾಹಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸಂಸ್ಥೆ ಒತ್ತಾಯಿಸುತ್ತಿದೆ.

Continue Reading
Advertisement
7th Pay Commission
ದೇಶ2 mins ago

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಶೀಘ್ರದಲ್ಲೇ ತುಟ್ಟಿ ಭತ್ಯೆಯಲ್ಲಿ ಶೇ.3ರಷ್ಟು ಏರಿಕೆ

Israel Attack
ವಿದೇಶ3 mins ago

Israel Attack: ಟೂತ್‌ಪೇಸ್ಟ್‌ನಲ್ಲಿ ವಿಷ ಬೆರೆಸಿದ ಇಸ್ರೇಲ್‌ ಗುಪ್ತದಳ! ಪ್ಯಾಲೆಸ್ತೀನ್‌ ಕಮಾಂಡರ್‌ ನರಳಿ ನರಳಿ ಸತ್ತ! ಸೇಡಿನ interesting story

muda scam cm siddaramaiah
ಪ್ರಮುಖ ಸುದ್ದಿ9 mins ago

MUDA Scam: ಸಿಎಂಗೆ ಕಳಿಸಿದ ರಾಜ್ಯಪಾಲರ ನೋಟೀಸ್‌ ತಿರಸ್ಕರಿಸಿದ ಕ್ಯಾಬಿನೆಟ್‌, ಕಾನೂನು ಹೋರಾಟಕ್ಕೆ ನಿರ್ಣಯ

Wayanad Landslide
ದೇಶ31 mins ago

Wayanad Landslide: ವಯನಾಡಿನ ದುರಂತ ಕಥೆ: ಬದುಕಿಗಾಗಿ ಸೌದಿಗೆ ತೆರಳಿದವ ಉಳಿದ; ಕುಟುಂಬವಿಡೀ ಮಣ್ಣು ಪಾಲಾಯ್ತು

Viral Video
Latest36 mins ago

Viral Video: ಮೆಟ್ರೊದೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು! ವಿಡಿಯೊ ನೋಡಿ

Sexual Abuse
Latest49 mins ago

Sexual Abuse: ಟೋಸ್ಟ್‌ ನೀಡುವುದಾಗಿ ಕರೆದು ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

Wayanad Landslide
ದೇಶ51 mins ago

Wayanad Landslide: ಕುರ್ಚಿಯಲ್ಲಿ ಕುಳಿತ.. ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ; ಇದು ಸ್ಮಶಾನ ಸದೃಶ್ಯ ವಯನಾಡಿನ ಭೀಕರ ದೃಶ್ಯ

Paris Olympics:
ಕ್ರೀಡೆ57 mins ago

Paris Olympics: ಕಂಚಿನ ಪದಕ ಗೆದ್ದ ರೈಲ್ವೆ ಟಿಕೆಟ್ ಕಲೆಕ್ಟರ್ ಸ್ವಪ್ನಿಲ್‌ ಕುಸಾಲೆ

Condom Cause Cancer
Latest58 mins ago

Condom Cause Cancer: ಕಾಂಡೋಮ್, ಲೂಬ್ರಿಕೆಂಟ್‍ ಬಳಸಿದರೂ ಕ್ಯಾನ್ಸರ್‌! ಅಧ್ಯಯನ ವರದಿಯಲ್ಲಿ ಆಘಾತಕಾರಿ ಸಂಗತಿ

Supreme Court SC ST Quota
ಪ್ರಮುಖ ಸುದ್ದಿ1 hour ago

Supreme Court Sc St Quota: ಎಸ್‌ಸಿ ಎಸ್‌ಟಿ ಒಳಮೀಸಲು; ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಕೇಂದ್ರದಿಂದ ರಾಜ್ಯ ಸರ್ಕಾರದ ಅಂಗಳಕ್ಕೆ ಬಂದ ಚೆಂಡು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌