Terror Attack: ಒಂದು ತಿಂಗಳಲ್ಲಿ ಬ್ಯಾಕ್‌ ಟು ಬ್ಯಾಕ್‌ ಉಗ್ರರ ದಾಳಿ; 14 ಯೋಧರು ಹುತಾತ್ಮ - Vistara News

ದೇಶ

Terror Attack: ಒಂದು ತಿಂಗಳಲ್ಲಿ ಬ್ಯಾಕ್‌ ಟು ಬ್ಯಾಕ್‌ ಉಗ್ರರ ದಾಳಿ; 14 ಯೋಧರು ಹುತಾತ್ಮ

Terror Attack: ಜುಲೈನಲ್ಲಿ ಕಾಶ್ಮೀರ ಮತ್ತು ಜಮ್ಮುವಿನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆಯಿತು. ಜುಲೈ ತಿಂಗಳಲ್ಲಿ ಎಂಟು ಗುಂಡಿನ ಚಕಮಕಿಗಳು ನಡೆದಿವೆ. ಮೂರು ಗುಂಡಿನ ಚಕಮಕಿಗಳು ಕಣಿವೆಯಲ್ಲಿ ನಡೆದಿದ್ದರೆ ನಾಲ್ಕು ಜಮ್ಮು ಪ್ರದೇಶದಲ್ಲಿ ನಡೆದಿವೆ. ಅವುಗಳಲ್ಲಿ ಮೂರು ಪರ್ವತ ಪ್ರದೇಶವಾದ ದೋಡಾ ಜಿಲ್ಲೆಯಲ್ಲಿಯೇ ಈ ದಾಳಿ ನಡೆದಿದೆ.

VISTARANEWS.COM


on

Terror Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಈ ವರ್ಷ ಆರಂಭದಲ್ಲಿ ಬಹಳ ಶಾಂತಿಯುತವಾಗಿದ್ದ ಜಮ್ಮು-ಕಾಶ್ಮೀರ(Jammu-Kashmir)ದಲ್ಲಿ ಉಗ್ರರ ಉಪಟಳ(Terror Attack) ಏಕಾಏಕಿ ಶುರುವಾಗಿದೆ. ಬ್ಯಾಕ್‌ ಟು ಬ್ಯಾಕ್‌ ನಿರಂತರ ಉಗ್ರರ ದಾಳಿ ನಡೆಯುತ್ತಿದ್ದು, ಜುಲೈ ತಿಂಗಳಲ್ಲಿ ಬರೋಬ್ಬರಿ 13 ಉಗ್ರರನ್ನು ಹೊಡೆದುರುಳಿಸಲಾಗಿದ್ದು, 14 ಯೋಧರು ಹುತಾತ್ಮರಾಗಿದ್ದಾರೆ. ಜುಲೈ ತಿಂಗಳಲ್ಲಿ, ಎಂಟು ಎನ್‌ಕೌಂಟರ್‌ಗಳು, ಭದ್ರತಾ ಪಡೆಗಳ ಮೇಲೆ ಕುಖ್ಯಾತ BAT ತಂಡದ ದಾಳಿ ಸೇರಿದಂತೆ ಮೂರು ದಾಳಿಗಳು ಮತ್ತು ಮೂರು ಒಳನುಸುಳುವಿಕೆ ಪ್ರಯತ್ನಗಳು ಜಮ್ಮು ಕಾಶ್ಮೀರದಲ್ಲಿ ನಡೆದಿವೆ.

ಜುಲೈನಲ್ಲಿ ಕಾಶ್ಮೀರ ಮತ್ತು ಜಮ್ಮುವಿನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆಯಿತು. ಜುಲೈ ತಿಂಗಳಲ್ಲಿ ಎಂಟು ಗುಂಡಿನ ಚಕಮಕಿಗಳು ನಡೆದಿವೆ. ಮೂರು ಗುಂಡಿನ ಚಕಮಕಿಗಳು ಕಣಿವೆಯಲ್ಲಿ ನಡೆದಿದ್ದರೆ ನಾಲ್ಕು ಜಮ್ಮು ಪ್ರದೇಶದಲ್ಲಿ ನಡೆದಿವೆ. ಅವುಗಳಲ್ಲಿ ಮೂರು ಪರ್ವತ ಪ್ರದೇಶವಾದ ದೋಡಾ ಜಿಲ್ಲೆಯಲ್ಲಿಯೇ ಈ ದಾಳಿ ನಡೆದಿದೆ.

ದೋಡಾ ಅರಣ್ಯ ಪ್ರದೇಶದಲ್ಲಿ ಸರಣಿ ಗುಂಡಿನ ಚಕಮಕಿಗಳ ನಂತರ, ಭದ್ರತಾ ಪಡೆಗಳು 2-3 ಗುಂಪುಗಳಾಗಿ ವಿಭಜಿಸಲ್ಪಟ್ಟು 10-12 ಉಗ್ರರ ಗುಂಪನ್ನು ಪತ್ತೆಹಚ್ಚಲು ದಟ್ಟ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಕೂಂಬಿಂಗ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಜುಲೈ ತಿಂಗಳಲ್ಲಿ, ಮೂರು ಪ್ರಮುಖ ದಾಳಿಗಳು ನಡೆದವು. ಒಂದು ಕಥುವಾ ಜಿಲ್ಲೆಯ ಮಾದೇಶಿ ಅರಣ್ಯ ಪ್ರದೇಶದಲ್ಲಿ ಐದು ಸೈನಿಕರು ಹುತಾತ್ಮರಾದರು. ದೂರದ ರಜೌರಿ ಗ್ರಾಮದಲ್ಲಿರುವ ಶೌರ್ಯ ಚಕ್ರ ಪುರಸ್ಕೃತ ಪುರಷೋತ್ತಮ್ ಕುಮಾರ್ ಅವರ ಮನೆಯ ಮೇಲೆ ಮತ್ತೊಂದು ಉಗ್ರಗಾಮಿ ದಾಳಿ ನಡೆದಿತ್ತು. ಉಗ್ರರ ದಾಳಿಯಲ್ಲಿ ಯೋಧ ಮತ್ತು ಗ್ರಾ.ಪಂ ಸದಸ್ಯನ ಸಂಬಂಧಿ ಗಾಯಗೊಂಡಿದ್ದಾರೆ. ಈ ವೇಳೆ ಸೇನೆ ಪ್ರತಿದಾಳಿ ನಡೆಸಿತ್ತಾದರೂ ಉಗ್ರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಕುಖ್ಯಾತ BAT ತಂಡವು ಉತ್ತರ ಕಾಶ್ಮೀರದ ಮಚಿಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭಾರತೀಯ ಸೇನಾ ಪೋಸ್ಟ್ ಮೇಲೆ ಮೂರನೇ ದಾಳಿ ನಡೆಸಿತು. BAT ತಂಡವು ಪಾಕಿಸ್ತಾನಿ ಕಮಾಂಡೋಗಳು ಮತ್ತು ಹೆಚ್ಚು ತರಬೇತಿ ಪಡೆದ ಉಗ್ರರನ್ನು ಒಳಗೊಂಡಿದೆ. ಬಿಎಟಿ ದಾಳಿಯಲ್ಲಿ ಓರ್ವ ಯೋಧ ಪಾಕಿಸ್ತಾನದ ಒಳನುಗ್ಗಿ ಹುತಾತ್ಮರಾಗಿದ್ದರು.

ತಿಂಗಳಲ್ಲಿ ಮೂರು ಉಗ್ರರು ಒಳನುಸುಳುವಿಕೆ ಯತ್ನಗಳು ನಡೆದಿವೆ. ಅದರಲ್ಲಿ ಎರಡು ಪ್ರಯತ್ನಗಳು ಉತ್ತರ ಕಾಶ್ಮೀರದ ಕೆರಾನ್ ಸೆಕ್ಟರ್‌ನಲ್ಲಿ ನಡೆದಿದ್ದರೆ ಮತ್ತೊಂದು ಒಳನುಸುಳುವಿಕೆ ಪ್ರಯತ್ನ ಜಮ್ಮುವಿನ ಪೂಂಚ್ ಸೆಕ್ಟರ್‌ನಲ್ಲಿ ನಡೆದಿದೆ. ಎಲ್ಲಾ ಮೂರು ಒಳನುಸುಳುವಿಕೆ ಬಿಡ್‌ಗಳನ್ನು ಪಡೆಗಳು ವಿಫಲಗೊಳಿಸಿದವು.

ಮಾಹಿತಿಯ ಪ್ರಕಾರ, ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸುವಾಗ ಎನ್‌ಕೌಂಟರ್, ದಾಳಿ ಮತ್ತು ಗುಂಡಿನ ಚಕಮಕಿಗಳಲ್ಲಿ 14 ಸೈನಿಕರು ಹುತಾತ್ಮರಾಗಿದ್ದಾರೆ. ಹುತಾತ್ಮ ಸೈನಿಕರಲ್ಲಿ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸೇರಿದ್ದಾರೆ ಎಂದು ಸೇನೆ ಹೇಳಿದೆ.

ಇದನ್ನೂ ಓದಿ: 9/11 Attack: ನ್ಯೂಯಾರ್ಕ್‌ ಅವಳಿ ಗೋಪುರಗಳ ಮೇಲೆ ಉಗ್ರ ದಾಳಿಯ ಹೊಸ ವಿಡಿಯೋ ವೈರಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mathura Krishna Janmabhoomi: ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ; ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Mathura Krishna Janmabhoomi: ಪ್ರತಿವಾದಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಇಚ್ಛಿಸಿದ್ದಲ್ಲಿ ಅದನ್ನು ಎದುರಿಸಲೂ ನಾವು ಸಿದ್ಧ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್‌ ಜೈನ್‌ ಹೇಳಿದ್ದಾರೆ.

VISTARANEWS.COM


on

Krishna Janmabhoomi
Koo

ಅಲಹಾಬಾದ್‌: ಮಥುರಾ ಕೃಷ್ಣ ಜನ್ಮಭೂಮಿ(Mathura Krishna Janmabhoomi) ಮತ್ತು ಶಾಹಿ ಈದ್ಗಾ ಮಸೀದಿ(Shahi Eidgah mosque) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಬಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ಆದೇಶ ಹೊರ ಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತೀರ್ಪು ಕಾಯ್ದಿರಿಸಿದ್ದ ನ್ಯಾ. ಮಯಾಂಕ್‌ ಕುಮಾರ್‌ ಜೈನ್‌ ಇಂದು ಮುಸ್ಲಿಂ ಪರ ಅರ್ಜಿಯನ್ನು ವಜಾಗೊಳಿಸಿದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಹಿಂದೂ ಪರ ವಕೀಲ ವಿಷ್ಣು ಶಂಕರ್‌ ಜೈನ್‌, ಪ್ರತಿವಾದಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಇಚ್ಛಿಸಿದ್ದಲ್ಲಿ ಅದನ್ನು ಎದುರಿಸಲೂ ನಾವು ಸಿದ್ಧ ಎಂದಿದ್ದಾರೆ.

ಇಂದು ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಮಸೀದಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ ಮತ್ತು ಮಸೀದಿ ತೆರವು ಕೋರಿ ಹಿಂದೂ ಪರ ದಾವೆಗಳ ವಿಚಾರಣೆಗೆ ಕೋರ್ಟ್ ಒಪ್ಪಿಗೆ ನೀಡಿದೆ. ವಿಚಾರಣೆಯನ್ನು ದಿನಾಂಕ ಆಗಸ್ಟ್ 12ಕ್ಕೆ ಮುಂದೂಡಲಾಗಿದೆ. ನಾವು ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸುತ್ತೇವೆ ಮತ್ತು ಶಾಹಿ ಈದ್ಗಾ ಮಸೀದಿ ಸುಪ್ರೀಂಕೋರ್ಟ್‌ ಅನ್ನು ಸಂಪರ್ಕಿಸಿದರೆ, ನಾವು ಅಲ್ಲಿ ಹಾಜರಾಗುತ್ತೇವೆ ಎಂದಿದ್ದಾರೆ.

ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ಅಡ್ವೊಕೇಟ್ ಕಮಿಷನರ್ ನೇಮಕ ಮಾಡಿರುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಜನವರಿಯಲ್ಲಿ ತಡೆಯಾಜ್ಞೆ ನೀಡಿತ್ತು. ಸ್ಥಳೀಯ ಆಯುಕ್ತರ ನೇಮಕವನ್ನು ಕೋರಿ ಸಲ್ಲಿಸಲಾದ ಅರ್ಜಿಯು ಅಸ್ಪಷ್ಟವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿತ್ತು. ಆದರೂ, ಮೊಕದ್ದಮೆಗಳ ವಿಚಾರಣೆಯನ್ನು ಮುಂದುವರಿಸಬಹುದು ಎಂದು ನ್ಯಾಯಾಲಯ ಹೇಳಿತ್ತು.

“ಸಮೀಕ್ಷೆಗೆ ಕಮಿಷನರ್‌ ನೇಮಿಸಲು ಕೋರಿದ ಅರ್ಜಿಯು ತುಂಬಾ ಅಸ್ಪಷ್ಟವಾಗಿದೆ. ಇದು ನಿರ್ದಿಷ್ಟವಾಗಿರಬೇಕು. ನಿಮಗೆ ಕಮಿಷನರ್ ಯಾವುದಕ್ಕಾಗಿ ಬೇಕು ಎಂದು ನೀವು ಸ್ಪಷ್ಟವಾಗಿ ಹೇಳಬೇಕು. ಆದರೆ ನೀವು ಅದನ್ನು ನ್ಯಾಯಾಲಯಕ್ಕೆ ಬಿಡುತ್ತೀರಿ. ಇದು ಗೊಂದಲಕರ ಅರ್ಜಿಯಾಗಿದೆ” ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಹೇಳಿತ್ತು.

ಮಸೀದಿಯ ಸಮೀಕ್ಷೆಯ ಮೇಲ್ವಿಚಾರಣೆಗೆ ವಕೀಲ- ಕಮಿಷನರ್ ನೇಮಕಕ್ಕೆ ಡಿಸೆಂಬರ್ 14ರಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು. ಇದಕ್ಕೆ ತಡೆ ನೀಡಿದ ಸುಪ್ರೀಂ ಪೀಠ, ಹಿಂದೂ ವಾದಿಗಳ ಮನವಿಯ ಹಿಂದಿನ ತಾರ್ಕಿಕತೆಯನ್ನು ನಿರ್ದಿಷ್ಟಪಡಿಸಿಲ್ಲ ಎಂದು ಒತ್ತಿ ಹೇಳಿತ್ತು. “ಕಮಿಷನರ್ ಅನ್ನು ನೇಮಿಸಿ ಎಂದು ನೀವು ಕೇಳುವ ಮುನ್ನ ನೀವು ನಿಖರವಾಗಿ ಏನನ್ನು ಕೇಳುತ್ತಿದ್ದೀರಿ ಎಂಬುದು ಸ್ಪಷ್ಟವಾಗಬೇಕು. ಈ ರೀತಿ ಅರ್ಜಿ ಸಲ್ಲಿಸಲಾಗದು. ಅರ್ಜಿಯನ್ನು ನಾವು ಕಾಯ್ದಿರಿಸಿದ್ದೇವೆ. ಇದು ತುಂಬಾ ಅಸ್ಪಷ್ಟವಾಗಿದೆ” ಎಂದು ಪೀಠವು ಪ್ರಕರಣದಲ್ಲಿ ಹಿಂದೂ ಫಿರ್ಯಾದಿಗಳ ಪರ ಹಾಜರಿದ್ದ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರಿಗೆ ತಿಳಿಸಿತ್ತು.

ಇದನ್ನೂ ಓದಿ: Holi 2024: ಮಥುರಾದಲ್ಲಿ ಪುರುಷರಿಗೆ ಬಿತ್ತು ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ; ಹೋಳಿಯ ಸ್ವೀಟ್‌ ಜತೆಗೆ ʼಖಾರʼ !

Continue Reading

ದೇಶ

Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

Pralhad Joshi: ಕೇಂದ್ರ ಸರ್ಕಾರವು ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲಿಟ್ಟಿದೆ ಎಂದು ತಿಳಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಹಸಿರು ಜಲಜನಕವನ್ನು ಬಳಸುವ ಮುನ್ನವೇ ಭಾರತದಲ್ಲಿ ಈಗ ಹಸಿರು ಜಲಜನಕದ ಬಳಕೆಗೆ ನಾಂದಿ ಹಾಡಲಾಗುತ್ತಿದೆ. ಇದರ ಶ್ರೇಯಸ್ಸು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.

VISTARANEWS.COM


on

19744 Crore rupees Reserve for Green Hydrogen Mission says Minister Pralhad Joshi Information
Koo

ನವದೆಹಲಿ: ಕೇಂದ್ರ ಸರ್ಕಾರವು ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲಿಟ್ಟಿದೆ ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಪ್ರಸ್ತಾಪಿಸಿದ ಸಚಿವರು, SIGHT ಯೋಜನೆಯಡಿಯಲ್ಲಿ ಹಸಿರು ಜಲಜನಕ ಮಿಷನ್‌ಗೆ ಉತ್ತೇಜನ ನೀಡಲಾಗಿದೆ ಎಂದ ಅವರು, ಭಾರತದಲ್ಲಿ ನಾವು ಹಸಿರು ಉದ್ಯೋಗ ವಲಯಕ್ಕಾಗಿ ಬೃಹತ್ ಮಾರ್ಗಸೂಚಿ ಸಿದ್ಧಪಡಿಸಿದ್ದೇವೆ. ಹಸಿರು ಜಲಜನಕ, ಎಲೆಕ್ಟ್ರಿಕ್ ವಾಹನಗಳಂತಹ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Paris Olympics: ಕಂಚಿನ ಪದಕ ಗೆದ್ದ ರೈಲ್ವೆ ಟಿಕೆಟ್ ಕಲೆಕ್ಟರ್ ಸ್ವಪ್ನಿಲ್‌ ಕುಸಾಲೆ

ದೇಶದಲ್ಲಿ ಹಸಿರು ಜಲಜನಕದ ಉತ್ಪಾದನೆಗೆ ಪ್ರೋತ್ಸಾಹಿಸುವ ಜತೆಗೆ ರಫ್ತಿಗೂ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ನಿರ್ಮಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದ ಭಾರತದಲ್ಲಿ ತಂತ್ರಜ್ಞಾನದ ಅನುಷ್ಠಾನ ಪ್ರಪಂಚಕ್ಕೆ ಹೋಲಿಸಿದರೆ ಯಾವಾಗಲೂ ಬಹಳ ವಿಳಂಬವಾಗಿಯೇ ಇದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಹಸಿರು ಜಲಜನಕವನ್ನು ಬಳಸುವ ಮುನ್ನವೇ ಭಾರತದಲ್ಲಿ ಈಗ ಹಸಿರು ಜಲಜನಕದ ಬಳಕೆಗೆ ನಾಂದಿ ಹಾಡಲಾಗುತ್ತಿದೆ. ಇದರ ಶ್ರೇಯಸ್ಸು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

Continue Reading

ದೇಶ

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಶೀಘ್ರದಲ್ಲೇ ತುಟ್ಟಿ ಭತ್ಯೆಯಲ್ಲಿ ಶೇ.3ರಷ್ಟು ಏರಿಕೆ

7th Pay Commission: ಪ್ರಸ್ತುತ, ತುಟ್ಟಿ ಭತ್ಯೆಯು ಮೂಲ ವೇತನದ ಶೇಕಡಾ 50 ರಷ್ಟಿದ್ದು, 7ನೇ ವೇತನ ಆಯೋಗದ ಪ್ರಕಾರ ಮೂಲವೇತನದೊಂದಿಗೆ ಡಿಎ ವಿಲೀನಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಕೆಲವು ಅಧಿಕೃತ ಮೂಲಗಳು ಪ್ರತಿಕ್ರಿಯಿಸಿದ್ದು, ಶೇ. 50 ಕ್ಕಿಂತ ಹೆಚ್ಚಿನ ತುಟ್ಟಿಭತ್ಯೆಯ ಸಂದರ್ಭದಲ್ಲಿ ಡಿಎಯನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸಲಾಗುವುದಿಲ್ಲ.

VISTARANEWS.COM


on

7th Pay Commission
Koo

ನವದೆಹಲಿ: ಕೇಂದ್ರ ಸರ್ಕಾರ(Central Government) ತನ್ನ ನೌಕರರಿಗೆ ಗುಡ್‌ನ್ಯೂಸ್‌ ನೀಡಲಿದ್ದು, ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರ(Government Employees)ರ ತುಟ್ಟಿಭತ್ಯೆಯಲ್ಲಿ ಶೇ. 3ರಷ್ಟು ಏರಿಕೆ ಮಾಡಲಿದೆ(7th Pay Commission). ಜುಲೈ 1, 2024 ರಿಂದ ಜಾರಿಗೆ ಬರುವಂತೆ ಸರ್ಕಾರ ಈ ಆದೇಶ ಹೊರಡಿಸಲಿದ್ದು, ಸೆಪ್ಟೆಂಬರ್‌ನಲ್ಲಿ ಇದರ ಲಾಭ ಪಡೆಯಲಿದ್ದಾರೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಶೇಕಡಾ 3-4 ರಷ್ಟು ಡಿಎ ಹೆಚ್ಚಳವನ್ನು ಘೋಷಿಸುವ ಸಾಧ್ಯತೆಯಿದೆ. 3 ರಷ್ಟು ಹೆಚ್ಚಳವು ಈಗಾಗಲೇ ದೃಢೀಕರಿಸಲ್ಪಟ್ಟಿದೆ ಎನ್ನಲಾಗಿದೆ.

ಪ್ರಸ್ತುತ, ತುಟ್ಟಿ ಭತ್ಯೆಯು ಮೂಲ ವೇತನದ ಶೇಕಡಾ 50 ರಷ್ಟಿದ್ದು, 7ನೇ ವೇತನ ಆಯೋಗದ ಪ್ರಕಾರ ಮೂಲವೇತನದೊಂದಿಗೆ ಡಿಎ ವಿಲೀನಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಕೆಲವು ಅಧಿಕೃತ ಮೂಲಗಳು ಪ್ರತಿಕ್ರಿಯಿಸಿದ್ದು, ಶೇ. 50 ಕ್ಕಿಂತ ಹೆಚ್ಚಿನ ತುಟ್ಟಿಭತ್ಯೆಯ ಸಂದರ್ಭದಲ್ಲಿ ಡಿಎಯನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸಲಾಗುವುದಿಲ್ಲ. 8ನೇ ವೇತನ ಆಯೋಗ ರಚನೆಯಾಗುವವರೆಗೂ ಅದು ಹಾಗೆಯೇ ಮುಂದುವರಿಯಲಿದೆ. ವಿಲೀನದ ಬದಲಿಗೆ, DA 50% ದಾಟಿದರೆ, HRA ಸೇರಿದಂತೆ ಭತ್ಯೆಗಳನ್ನು ಹೆಚ್ಚಿಸುವ ನಿಬಂಧನೆಗಳಿವೆ, ಅದು ಈಗಾಗಲೇ ಆಗಿದೆ ಎನ್ನಲಾಗಿದೆ.

ಮಾರ್ಚ್ 2024 ರಲ್ಲಿ ಹಿಂದಿನ ಹೆಚ್ಚಳದಲ್ಲಿ, ಕೇಂದ್ರ ಸರ್ಕಾರವು ತುಟ್ಟಿಭತ್ಯೆಯನ್ನು ಮೂಲ ವೇತನದ ಶೇಕಡಾ 4 ರಿಂದ 50 ರಷ್ಟು ಹೆಚ್ಚಿಸಿತ್ತು. ಸರ್ಕಾರವು ಪಿಂಚಣಿದಾರರ ತುಟ್ಟಿಭತ್ಯೆ (ಡಿಆರ್) ಅನ್ನು ಶೇ 4 ರಷ್ಟು ಹೆಚ್ಚಿಸಿದೆ. ಸರ್ಕಾರಿ ನೌಕರರಿಗೆ ಡಿಎ ನೀಡಿದರೆ, ಪಿಂಚಣಿದಾರರಿಗೆ ಡಿಆರ್ ನೀಡಲಾಗುತ್ತದೆ. ಜನವರಿ ಮತ್ತು ಜುಲೈನಿಂದ ಜಾರಿಗೆ ಬರುವಂತೆ ವರ್ಷಕ್ಕೆ ಎರಡು ಬಾರಿ ಡಿಎ ಮತ್ತು ಡಿಆರ್ ಅನ್ನು ಹೆಚ್ಚಿಸಲಾಗುತ್ತದೆ.

DA ಹೆಚ್ಚಳವನ್ನು ಸರ್ಕಾರ ಹೇಗೆ ಲೆಕ್ಕಾಚಾರ ಮಾಡುತ್ತದೆ?

ಅಖಿಲ ಭಾರತ CPI-IW ನ 12 ಮಾಸಿಕ ಸರಾಸರಿಯಲ್ಲಿನ ಶೇಕಡಾವಾರು ಹೆಚ್ಚಳದ ಆಧಾರದ ಮೇಲೆ DA ಮತ್ತು DR ಹೆಚ್ಚಳವನ್ನು ನಿರ್ಧರಿಸಲಾಗುತ್ತದೆ. ಕೇಂದ್ರ ಸರ್ಕಾರವು ಪ್ರತಿ ವರ್ಷ ಜನವರಿ 1 ಮತ್ತು ಜುಲೈ 1 ರಂದು ಭತ್ಯೆಗಳನ್ನು ಪರಿಷ್ಕರಿಸಿದರೂ, ನಿರ್ಧಾರವನ್ನು ಸಾಮಾನ್ಯವಾಗಿ ಮಾರ್ಚ್ ಮತ್ತು ಸೆಪ್ಟೆಂಬರ್/ಅಕ್ಟೋಬರ್‌ನಲ್ಲಿ ಪ್ರಕಟಿಸಲಾಗುತ್ತದೆ.

2006 ರಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಡಿಎ ಮತ್ತು ಡಿಆರ್ ಅನ್ನು ಲೆಕ್ಕಾಚಾರ ಮಾಡಲು ಸೂತ್ರವನ್ನು ಪರಿಷ್ಕರಿಸಿತು. ತುಟ್ಟಿಭತ್ಯೆ ಶೇಕಡಾವಾರು = ((ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕದ ಸರಾಸರಿ (ಮೂಲ ವರ್ಷ 2001=100) ಕಳೆದ 12 ತಿಂಗಳುಗಳಲ್ಲಿ -115.76)/115.76)x100.

ಕೇಂದ್ರ ಸಾರ್ವಜನಿಕ ವಲಯದ ಉದ್ಯೋಗಿಗಳಿಗೆ: ತುಟ್ಟಿಭತ್ಯೆ ಶೇಕಡಾವಾರು = ((ಅಖಿಲ-ಭಾರತೀಯ ಗ್ರಾಹಕ ಬೆಲೆ ಸೂಚ್ಯಂಕದ ಸರಾಸರಿ (ಮೂಲ ವರ್ಷ 2001=100) ಕಳೆದ 3 ತಿಂಗಳು -126.33)/126.33)x100.

ಇತ್ತೀಚೆಗಷ್ಟೇ 8ನೇ ವೇತನ ಆಯೋಗ(8th Pay Commission) ಜಾರಿಗೊಳಿಸಲು ಎರಡು ಪ್ರಸ್ತಾವನೆಗಳು ಬಂದಿದ್ದು, ಅವುಗಳನ್ನು ಪರಿಗಣಿಸಿಲ್ಲ ಎಂದು ಕೇಂದ್ರ ಸರ್ಕಾರವು ಸಂಸತ್‌(Parliament Session)ನಲ್ಲಿ ಹೇಳಿದೆ.

ಇದನ್ನೂ ಓದಿ: 8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

Continue Reading

ದೇಶ

Wayanad Landslide: ವಯನಾಡಿನ ದುರಂತ ಕಥೆ: ಬದುಕಿಗಾಗಿ ಸೌದಿಗೆ ತೆರಳಿದವ ಉಳಿದ; ಕುಟುಂಬವಿಡೀ ಮಣ್ಣು ಪಾಲಾಯ್ತು

Wayanad Landslide: ವಯನಾಡಿನಲ್ಲಿ ಮಣ್ಣು ಜರಿದು ಇಡೀ ಊರುಗಳನ್ನೇ ನಾಮಾವಶೇಷ ಮಾಡಿದ್ದು, ಮೃತಪಟ್ಟವರ ಸಂಖ್ಯೆ 270 ದಾಟಿದೆ. ಒಬ್ಬೊಬ್ಬರದ್ದು ಒಂದೊಂದು ನೋವಿನ ಕಥೆ. ಅದರಲ್ಲಿಯೂ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡ ಜಿಷ್ಣು ಎನ್ನುವ 26 ವರ್ಷದ ಯುವಕನ ಸ್ಥಿತಿ ಕಣ್ಣಂಚಿನಲ್ಲಿ ನೀರು ತರಿಸುತ್ತದೆ. ಮನೆಯ ಜತೆಗೆ ಪಾಲಕರು, ಒಟಹುಟ್ಟಿದವರು, ಅಜ್ಜಿಯನ್ನು ಪ್ರವಾಹ ಕೊಚ್ಚಿಕೊಂಡು ಹೋಗಿದ್ದು, ಸದ್ಯ ಸಹೋದರ ಮಾತ್ರ ಉಳಿದಿದ್ದಾನೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ರಾಜ್ಯದಲ್ಲಿ ಸಂಭವಿಸಿದ ಅತೀ ಭೀಕರ ಭೂಕುಸಿತಕ್ಕೆ ಕೇರಳ ತತ್ತರಿಸಿದ ಹೋಗಿದೆ. ವಯನಾಡಿನಲ್ಲಿ ಮಣ್ಣು ಜರಿದು ಇಡೀ ಊರುಗಳನ್ನೇ ನಾಮಾವಶೇಷ ಮಾಡಿದ್ದು, ಮೃತಪಟ್ಟವರ ಸಂಖ್ಯೆ 270 ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಅವಶೇಷಗಳಡಿ ಹುಡುಕಾಟ ಮುಂದುವರಿದಿದೆ. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ. ಒಬ್ಬೊಬ್ಬರದ್ದು ಒಂದೊಂದು ನೋವಿನ ಕಥೆ. ಅದರಲ್ಲಿಯೂ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡ ಜಿಷ್ಣು ಎನ್ನುವ 26 ವರ್ಷದ ಯುವಕನ ಸ್ಥಿತಿ ಕಣ್ಣಂಚಿನಲ್ಲಿ ನೀರು ತರಿಸುತ್ತದೆ. ಮನೆಯ ಜತೆಗೆ ಪಾಲಕರು, ಒಟಹುಟ್ಟಿದವರು, ಅಜ್ಜಿಯನ್ನು ಪ್ರವಾಹ ಕೊಚ್ಚಿಕೊಂಡು ಹೋಗಿದ್ದು, ಸದ್ಯ ಸಹೋದರ ಮಾತ್ರ ಉಳಿದಿದ್ದಾನೆ.

ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಜಿಷ್ಣು ಸದ್ಯ ಊರಿಗೆ ಮರಳಿದ್ದಾರೆ. ಅವರ ಮನೆ ಇದ್ದ ಜಾಗದಲ್ಲಿ ಈಗ ಉಳಿದಿರುವುದು ಸ್ಮಶಾನ ಮೌನ ಮತ್ತು ಕೆಸರು ಮಾತ್ರ. ಹೌದು, ಮನೆಯ ಜತೆಗೇ ಮನೆಯವರನ್ನೂ ಭೀಕರ ಪ್ರವಾಹ ಹೊತ್ತುಕೊಂಡು ಹೋಗಿದೆ. ಜಿಷ್ಣು ಅವರ ಮನೆಯವರು ಆಶ್ರಯ ಪಡೆದಿದ್ದ ಸಂಬಂಧಿಕರ ಮನೆಯೂ ಕೊಚ್ಚಿಕೊಂಡು ಹೋಗಿದೆ. ಈ ಸತ್ಯವನ್ನು ಜಿಷ್ಣುಗೆ ಇನ್ನೂ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಸದ್ಯ ಅವರ ಪಾಲಿಗೆ ಕಿರಿಯ ಸಹೋದರ ಮಾತ್ರ ಉಳಿದಿದ್ದಾನೆ.

ಕಣ್ಣೀರ ಕಥೆ

ಅತೀ ಹೆಚ್ಚು ದುರಂತ ಬಾಧಿತ ಮುಂಡಕೈ ನಿವಾಸಿ ಜಿಷ್ಣು ರಂಜನ್‌ ಸೌದಿ ಅರೇಬಿಯಾದ ಖಾಸಗಿ ಕಂಪೆನಿಯೊಂದರ ಉದ್ಯೋಗಿ. ಮುಂಡಕೈಯ ಪುಂಜಿರಿವಟ್ಟಂನಲ್ಲಿರುವ ಅವರ ಮನೆಯಲ್ಲಿ ತಂದೆ ರಾಜನ್‌, ತಾಯಿ ಮರುತೈ, ಒಡಹುಟ್ಟಿದವರಾದ ಜಿನು (27), ಜಿಬಿನ್‌ (18), ಆ್ಯಂಡ್ರಿಯಾ (16), ಜಿನು ಅವರ ಪತ್ನಿ ಪ್ರಿಯಾಂಕಾ (25) ಮತ್ತು ಅಜ್ಜಿ ನಾಗಮ್ಮ ವಾಸವಾಗಿದ್ದರು. ಇದೀಗ ಅವರೆಲ್ಲ ಮೃತಪಟ್ಟಿದ್ದಾರೆ. ಶಿಜು (25) ಒಬ್ಬನೇ ದುರಂತದಿಂದ ಪಾರಾಗಿದ್ದಾನೆ. ಮುಂಡಕೈ ಭಾಗದಲ್ಲಿ ಜುಲೈ 28ರಂದು ಸಣ್ಣ ಮಟ್ಟಿನ ಭೂಕುಸಿತ ಉಂಟಾಗಿತ್ತು. ಇದನ್ನು ಅರಿತ ಸೌದಿ ಅರೇಬಿಯಾದಲ್ಲಿದ್ದ ಜಿಷ್ಣು ಗಾಬರಿಯಿಂದ ಮನೆಯವರಿಗೆ ಕರೆ ಮಾಡಿದ್ದರು. ಆದರೆ ಸಂಪರ್ಕ ಸಿಕ್ಕಿರಲಿಲ್ಲ.

ಇನ್ನಷ್ಟು ಗಾಬರಿಗೊಂಡ ಅವರು ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಲೇ ಇದ್ದರು. ಜುಲೈ 30ರ ಸಂಜೆ ತನಕವೂ ಮನೆಯವರ ಸಂಪರ್ಕ ಸಾಧ್ಯವಾಗಿರಲಿಲ್ಲ. ಆಗಲೇ ಅವರಿಗೆ ಮನೆ ಕುಸಿದು ಬಿದ್ದಿರುವ ಬಗ್ಗೆ ತಿಳಿದು ಬಂದಿತ್ತು. ಜತೆಗೆ ಮನೆಯವರು ಸಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದರು ಎನ್ನುವ ವಿಚಾರ ತಿಳಿದು ಸ್ವಲ್ಪ ಸಮಾಧಾನಪಟ್ಟುಕೊಂಡಿದ್ದರು. ಆದರೆ ಭೂಕುಸಿತದಿಂದ ಎರಡೂ ಮನೆಯವರು ಕೊಚ್ಚಿಕೊಂಡು ಹೋಗಿದ್ದರು.

ಇದ್ಯಾವುದರ ಅರಿವು ಇರದ ಜಿಷ್ಣು ನಿರಂತರವಾಗಿ ಮನೆಗೆ ಕರೆ ಮಾಡಲು ಯತ್ನಿಸುತ್ತಲೇ ಇದ್ದರು. ಕೊನೆಗೆ ಪರಿಚಯಸ್ಥರಿಗೆ ಕರೆ ಮಾಡಿದರು. ಆದರೆ ಅವರಿಂದಲೂ ನಿಖರ ಮಾಹಿತಿ ದೊರೆಯಲಿಲ್ಲ. ಜುಲೈ 30ರಂದು ಸಂಜೆ ವೇಳೆಗೆ ತಂದೆ ರಾಜನ್‌ ಅವರ ಮೃತದೇಹ ದೊರೆತಿರುವ ಸುದ್ದಿ ಜಿಷ್ಣುಗೆ ಬರಸಿಡಿಲಂತೆ ಅಪ್ಪಳಿಸಿತು. ಜತೆಗೆ ಜಿನು ಮತ್ತು ತಾಯಿಯ ಅವರ ಮೃತದೇಹವೂ ಪತ್ತೆಯಾಗಿದ್ದರ ಬಗ್ಗೆ ಮಾಹಿತಿ ಲಭಿಸಿತು. ಕೊನೆಗೆ ಶಿಜು ಮಾತ್ರ ಬದುಕುಳಿದಿರುವ ವಿಚಾರ ತಿಳಿದ್ದಿದ್ದು ಕೂಡಲೇ ಊರಿಗೆ ಮರಳಿದ್ದಾರೆ. ಎರಡು ವರ್ಷಗಳ ಹಿಂದೆ ಭೂಕುಸಿತದಿಂದ ಈ ಕುಟುಂಬ ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿತ್ತು.

ಇದನ್ನೂ ಓದಿ: Wayanad Landslide: ಕುರ್ಚಿಯಲ್ಲಿ ಕುಳಿತ.. ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ; ಇದು ಸ್ಮಶಾನ ಸದೃಶ್ಯ ವಯನಾಡಿನ ಭೀಕರ ದೃಶ್ಯ

Continue Reading
Advertisement
Krishna Janmabhoomi
ದೇಶ8 seconds ago

Mathura Krishna Janmabhoomi: ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ; ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Darshan Judicial Custody extended till 14th August
ಸ್ಯಾಂಡಲ್ ವುಡ್3 mins ago

Actor Darshan: ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

Kannada Serials TRP TOP 5 bhagyalakshmi puttakkana makkalu number 1
ಕಿರುತೆರೆ24 mins ago

Kannada Serials TRP: ಟಾಪ್‌ 5ನಲ್ಲಿ ‘ಭಾಗ್ಯಲಕ್ಷ್ಮೀ’; ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Mohammed Deif
ವಿದೇಶ28 mins ago

Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

Rohit Sharma
ಕ್ರೀಡೆ31 mins ago

Rohit Sharma: ಸಚಿನ್​, ಕೊಹ್ಲಿ ಜತೆ ಎಲೈಟ್​ ಪಟ್ಟಿ ಸೇರುವ ನಿರೀಕ್ಷೆಯಲ್ಲಿ ರೋಹಿತ್​

Road Accident
ಬೆಂಗಳೂರು33 mins ago

Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

Dead Body in Ganga River
Latest44 mins ago

Viral Video: ಹಾವು ಕಚ್ಚಿದ ಮಹಿಳೆಯನ್ನು ಗಂಗಾ ನದಿಯಲ್ಲಿ ತೇಲಿ ಬಿಟ್ಟರು! ಆಕೆ ಬದುಕಿ ಬರುತ್ತಾಳೆ ಎಂದರು!

Madhubala Embodies Pannaga A Pillar of Strength in 'Kannappa'
ಕಾಲಿವುಡ್50 mins ago

Kannappa Movie: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರದಿಂದ ಹೊರಬಿತ್ತು ಮಧುಬಾಲ ಫಸ್ಟ್‌ ಲುಕ್‌ !

19744 Crore rupees Reserve for Green Hydrogen Mission says Minister Pralhad Joshi Information
ದೇಶ52 mins ago

Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

Viral Video
ವೈರಲ್ ನ್ಯೂಸ್54 mins ago

Viral Video: ಬಟ್ಟೆ ಹರಿದುಕೊಂಡು ಪುರುಷನ ಮೇಲೆ ಮುಗಿಬಿದ್ದ ಮಹಿಳೆ! ಅಬ್ಬಾ, ಎಂಥ ಜಗಳಗಂಟಿ ಎಂದ ನೆಟ್ಟಿಗರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌