Kannappa Movie: ವಿಷ್ಣು ಮಂಚು `ಕಣ್ಣಪ್ಪ' ಚಿತ್ರದಿಂದ ಹೊರಬಿತ್ತು ಮಧುಬಾಲ ಫಸ್ಟ್‌ ಲುಕ್‌ ! - Vistara News

ಕಾಲಿವುಡ್

Kannappa Movie: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರದಿಂದ ಹೊರಬಿತ್ತು ಮಧುಬಾಲ ಫಸ್ಟ್‌ ಲುಕ್‌ !

Bedara Kannappa: ಬೇಡ ಕುಲದ ನಾಯಕಿಯಾಗಿ ಮಧು ಅವರ ಪಾತ್ರ ಕಣ್ಣಪ್ಪ ಚಿತ್ರದಲ್ಲಿ ಸಾಗಲಿದೆ. ತಮ್ಮ ಸಮುದಾಯದ ನಾಯಕಿ ಮಾತ್ರವಲ್ಲ, ಹೋರಾಟದಲ್ಲಿಯೂ ದಿಟ್ಟೆ, ಧೀರೆ. ಅಂದುಕೊಂಡಂತೆ ಮಧುಬಾಲ ಅವರ ಪಾತ್ರ ಮೂಡಿಬಂದಿದ್ದು, ನೋಡುಗರಿಗೆ ಇಷ್ಟವಾಗಲಿದೆ ಎಂಬುದು ಚಿತ್ರತಂಡ ಭರವಸೆಯ ಮಾತುಗಳು.

VISTARANEWS.COM


on

Madhubala Embodies Pannaga A Pillar of Strength in 'Kannappa'
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ಟಾಲಿವುಡ್‌ನ ಕಣ್ಣಪ್ಪ (Kannappa Movie) ಸಿನಿಮಾ. ಈಗಾಗಲೇ ಸರಣಿ ಸ್ಟಾರ್‌ ಕಲಾವಿದರನ್ನೇ ಒಳಗೊಂಡಿರುವ ಕಣ್ಣಪ್ಪ ಸಿನಿಮಾ ಸದ್ಯ ಶೂಟಿಂಗ್‌ ಜತೆಗೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನೂ ಮುಂದುವರಿಸಿದೆ. ಜತೆಗೆ ಈಗಾಗಲೇ ಬಿಡುಗಡೆ ಆಗಿರುವ ಟೀಸರ್‌ ಸಹ ನೋಡುಗರ ಹುಬ್ಬೇರಿಸಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ವಿಷ್ಣು ಮಂಚು ಕಣ್ಣಪ್ಪನಾಗಿ ತಮ್ಮ ಖದರ್‌ ತೋರಿಸಲಿದ್ದಾರೆ. ಇದೀಗ ಇದೇ ಸಿನಿಮಾದಲ್ಲಿ ನಟಿಸುತ್ತಿರುವ ನಟಿ ಮಧುಬಾಲ ಅವರ ಲುಕ್‌ ಅನಾವರಣ ಮಾಡಲಾಗಿದೆ.

ನಟಿ ಮಧುಬಾಲಾ ಕಣ್ಣಪ್ಪ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ಈ ಹಿಂದೆಯೇ ಗೊತ್ತಿದ್ದ ವಿಚಾರ. ಆದರೆ, ಅವರ ಪಾತ್ರ ಹೇಗಿರಲಿದೆ ಎಂಬ ಬಗ್ಗೆ ಈ ವರೆಗೂ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಮಧುಬಾಲ ಅವರ ಪಾತ್ರ ಪರಿಚಯದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ. ಕಣ್ಣಪ್ಪ ಚಿತ್ರದಲ್ಲಿ ಪನ್ನಗ ಹೆಸರಿನ ಖಡಕ್‌ ಪಾತ್ರದಲ್ಲಿ ಮಧುಬಾಲ ಮಿಂಚು ಹರಿಸಲಿದ್ದಾರೆ. ಕೈಯಲ್ಲಿ ಕತ್ತಿಹಿಡಿದು ಶತ್ರುಗಳ ಸಂಹಾರಕ್ಕೆ ನಿಂತಂತಿದೆ ಮಧು ಅವರ ಫಸ್ಟ್‌ ಲುಕ್‌.

ಬೇಡ ಕುಲದ ನಾಯಕಿಯಾಗಿ ಮಧು ಅವರ ಪಾತ್ರ ಕಣ್ಣಪ್ಪ ಚಿತ್ರದಲ್ಲಿ ಸಾಗಲಿದೆ. ತಮ್ಮ ಸಮುದಾಯದ ನಾಯಕಿ ಮಾತ್ರವಲ್ಲ, ಹೋರಾಟದಲ್ಲಿಯೂ ದಿಟ್ಟೆ, ಧೀರೆ. ಅಂದುಕೊಂಡಂತೆ ಮಧುಬಾಲ ಅವರ ಪಾತ್ರ ಮೂಡಿಬಂದಿದ್ದು, ನೋಡುಗರಿಗೆ ಇಷ್ಟವಾಗಲಿದೆ ಎಂಬುದು ಚಿತ್ರತಂಡ ಭರವಸೆಯ ಮಾತುಗಳು. ಇನ್ನು ಈಗಾಗಲೇ ಕಣ್ಣಪ್ಪ ಚಿತ್ರದ ಟೀಸರ್‌ ಜಾಗತಿಕ ಮಟ್ಟದಲ್ಲಿಯೂ ಕ್ರೇಜ್‌ ಸೃಷ್ಟಿಸಿದೆ. ಇತ್ತೀಚಿನ ಕಾನ್‌ ಸಿನಿಮೋತ್ಸವದಲ್ಲಿ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿ, ಜಾಗತಿಕ ಪ್ರೇಕ್ಷಕರ ಗಮನ ಸೆಳೆದಿತ್ತು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆ ಎಂದು ಟೀಸರ್‌ ಬಿಡುಗಡೆ ಸಂದರ್ಭದಲ್ಲಿ ವಿಷ್ಣು ಮಂಚು ಹೇಳಿಕೊಂಡಿದ್ದರು. ಹಾಗಾಗಿಯೇ ಕುತೂಹಲ ದುಪ್ಪಟ್ಟಾಗಿದೆ.

ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಶರತ್‌ಕುಮಾರ್, ಮಧುಬಾಲ, ಕಾಜಲ್‌ ಅಗರ್‌ವಾಲ್‌ ಸೇರಿ ಬಹು ತಾರಾಗಣವೇ ಇದೆ. ಮಗನ ಚಿತ್ರವನ್ನು ಸ್ವತಃ ತಂದೆ ಮೋಹನ್ ಬಾಬು ನಿರ್ಮಿಸುತ್ತಿರುವ ಈ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಡಿಸೆಂಬರ್‌ನಲ್ಲಿ ಕಣ್ಣಪ್ಪ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡಲು ಪ್ಲಾನ್‌ ಮಾಡಿದೆ.

ಎವಿಎ ಎಂಟರ್‌ಟೈನ್‌ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್‌ಗಳಲ್ಲಿ ನೂರಾರು ಕೋಟಿ ಬಜೆಟ್‌ನಲ್ಲಿ ದೊಡ್ಡ ಕ್ಯಾನ್ವಾಸ್‌ನೊಂದಿಗೆ ಮೂಡಿಬರುತ್ತಿರುವ ಈ ಸಿನಿಮಾದ ಶೂಟಿಂಗ್‌ ಬಹುತೇಕ ಮುಗಿದಿದ್ದು, ವಿಎಫ್‌ಎಕ್ಸ್‌ ಕೆಲಸಕ್ಕೆ ಇಡೀ ತಂಡ ಹೆಚ್ಚಿನ ಶ್ರಮ ಹಾಕುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Charuhasan Srinivasan: ಕಮಲ್ ಹಾಸನ್ ಸಹೋದರ, ನಟಿ ಸುಹಾಸಿನಿ ತಂದೆ ಆಸ್ಪತ್ರೆಗೆ ದಾಖಲು

Charuhasan Srinivasan: ನಟಿ, ನಿರ್ದೇಶಕಿ, ನಿರ್ಮಾಪಕ ಮತ್ತು ಲೇಖಕಿ ಸುಹಾಸಿನಿ ಮಣಿರತ್ನಂ ಅವರು ತಮ್ಮ ತಂದೆಯೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಸುಹಾಸಿನಿ ತನ್ನ ತಂದೆಯನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಚಾರುಹಾಸನ್ ಶ್ರೀನಿವಾಸನ್ ಅವರು ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದಾರೆ.

VISTARANEWS.COM


on

Charuhasan Srinivasan Hospitalised, Daughter Suhasini Shares Emotional Post
Koo

ಬೆಂಗಳೂರು: ಹಿರಿಯ ನಟ ಕಮಲ್ ಹಾಸನ್ (Kamal Haasan) ಅವರ ಹಿರಿಯ ಸಹೋದರ, ಚಾರುಹಾಸನ್ ಶ್ರೀನಿವಾಸನ್ (Charuhasan Srinivasan) ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಹಿರಿಯ ಮಗಳು, ನಟಿ, ನಿರ್ದೇಶಕಿ, ನಿರ್ಮಾಪಕ ಮತ್ತು ಲೇಖಕಿ ಸುಹಾಸಿನಿ ಮಣಿರತ್ನಂ ಅವರು ತಮ್ಮ ತಂದೆಯೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಸುಹಾಸಿನಿ ತನ್ನ ತಂದೆಯನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಚಾರುಹಾಸನ್ ಶ್ರೀನಿವಾಸನ್ ಅವರು ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದಾರೆ.

ಫೋಟೋವನ್ನು ಹಂಚಿಕೊಂಡ ನಟಿ ಹೀಗೆ ಬರೆದಿದ್ದಾರೆ, “ ನೀವು ಇದನ್ನು ನನ್ನ ತಂದೆಗೆ ವೈದ್ಯಕೀಯ ವಾಸ್ತವ್ಯ ಎಂದು ಕರೆಯುತ್ತೀರಾ? ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು, ದಾದಿಯರು ಮತ್ತು ಹೆಣ್ಣುಮಕ್ಕಳಿಂದ ಪ್ರೀತಿ ಮತ್ತು ಕಾಳಜಿಯೊಂದಿಗೆʼಎಂದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ಪೋಸ್ಟ್ ನೋಡಿದ ಅಭಿಮಾನಿಗಳು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಚಾರುಹಾಸನ್ ಶ್ರೀನಿವಾಸನ್ ನಟ, ನಿರ್ದೇಶಕ ಮತ್ತು ನಿವೃತ್ತ ವಕೀಲರು. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಚಲನಚಿತ್ರ ತಬರನ ಕಥೆ (1987) ಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಮತ್ತು ಅತ್ಯುತ್ತಮ ನಟ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರು.

ಕುಬಿ ಮತ್ತು ಇಯಾಲ, ರಘುವಿಂತೆ ಸ್ವಂತ ರಜಿಯಾ, ಮೀಂದುಂ ಒರು ಕಾತಲ್ ಕಥೈ, ನೇತಿ ಸಿದ್ಧಾರ್ಥ, ಮತ್ತು ಡಿಯರ್ ಕಾಮ್ರೇಡ್ ಮುಂತಾದ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಪುದಿಯ ಸಂಗಮಮ್ (1982) ಮತ್ತು ಐಪಿಸಿ 215 (2003) ಎಂಬ ಎರಡು ಚಲನಚಿತ್ರಗಳನ್ನು ನಿರ್ದೇಶಿಸಿದರು.

ಸಿನಿಮಾ ಜತೆಗೆ, ಥಿಂಕಿಂಗ್ ಆನ್ ಮೈ ಫೀಟ್: ಚಾರುಹಾಸನ್ ಆಟೋಬಯೋಗ್ರಫಿ, ನವದೆಹಲಿಯ ಲಿಫೈ ಪಬ್ಲಿಕೇಷನ್ಸ್, ಬಯೋಗ್ ಎಂಬ ಪುಸ್ತಕಗಳು ಪ್ರಕಟವಾಗಿದೆ, ಇದು 2015 ರಲ್ಲಿ ನವದೆಹಲಿ ವಿಶ್ವ ಪುಸ್ತಕ ಮೇಳದಲ್ಲಿ ಬಿಡುಗಡೆಯಾಯಿತು.

ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ, ಚಾರುಹಾಸನ್ ಜನವರಿ 5, 1931 ರಂದು ವಕೀಲ ಮತ್ತು ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಡಿ. ಶ್ರೀನಿವಾಸನ್ ಮತ್ತು ರಾಜಲಕ್ಷ್ಮಿ ದಂಪತಿಗೆ ಜನಿಸಿದರು. ಚಾರುಹಾಸನ್ ಹಿರಿಯ ಮಗ ಮತ್ತು ಕಮಲ್ ಹಾಸನ್ ಕಿರಿಯ ಸಹೋದರ.

ಚಾರುಹಾಸನ್ ಕೋಮಲಂ ಅವರನ್ನು ವಿವಾಹವಾಗಿದ್ದಾರೆ. ನಂದಿನಿ, ಸುಹಾಸಿನಿ ಮತ್ತು ಸುಭಾಸಿನಿ ಎಂಬ ಮೂವರು ಪುತ್ರಿಯರನ್ನು ಹೊಂದಿದ್ದಾರೆ. ಸುಹಾಸಿನಿ ನಟಿ.

Continue Reading

ಸಿನಿಮಾ

Raayan Movie: ಸೂಪರ್‌ ಹಿಟ್‌ ಚಿತ್ರಗಳನ್ನು ನಕಲಿಸಿ ಮಾರುವ ಕುಖ್ಯಾತ ಪೈರಸಿ ಗ್ಯಾಂಗ್‌ ರೂವಾರಿ ಬಂಧನ

ಧನುಷ್ ಅಭಿನಯದ ʼರಾಯನ್ʼ ಚಿತ್ರ (Raayan Movie) ಇತ್ತೀಚೆಗೆ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಚಿತ್ರದಲ್ಲಿ ನಟಿಸುವುದನ್ನು ಹೊರತುಪಡಿಸಿ ಇದು ಅವರ ಎರಡನೇ ನಿರ್ದೇಶನದ ಚಿತ್ರವಾಗಿದೆ. ಜನಪ್ರಿಯತೆ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಯಿಂದಾಗಿ ಈ ಚಿತ್ರವೂ ಪೈರಸಿಗೆ ತುತ್ತಾಗಿದೆ. ಪ್ರಮುಖ ಚಿತ್ರಗಳನ್ನು ಕದ್ದು ಹಂಚುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

VISTARANEWS.COM


on

By

Raayan Movie
Koo

ತಮಿಳು ನಟ ಧನುಷ್ (Tamil actor Dhanush) ಅಭಿನಯದ ‘ರಾಯನ್’ ಚಿತ್ರದ (Raayan Movie) ದೃಶ್ಯಗಳು ಆನ್‌ಲೈನ್‌ನಲ್ಲಿ ಲೀಕ್ ಆಗಿದ್ದು, ಪೈರಸಿ ಸೈಟ್ ತಮಿಳ ರಾಕರ್ಸ್ ನ (Tamil Rockers ) ಸದಸ್ಯ ಜೆಬ್ ಸ್ಟೀಫನ್ ರಾಜ್ ನನ್ನು ಬಂಧಿಸಲಾಗಿದೆ. ʼರಾಯನ್ʼ ಹೊರತಾಗಿ ʼಮಹಾರಾಜʼ (maharaj) ಮತ್ತು ʼಕಲ್ಕಿ 2898ಎಡಿʼ (kalki 2898AD) ಚಿತ್ರದ ನಕಲಿ ಪ್ರತಿಗಳನ್ನು ಈತ ತಯಾರಿಸಿದ್ದ ಎಂದು ಆರೋಪಿಸಲಾಗಿದೆ.

ಧನುಷ್ ಅಭಿನಯದ ರಾಯನ್ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಚಿತ್ರದಲ್ಲಿ ನಟಿಸುವುದನ್ನು ಹೊರತುಪಡಿಸಿ ಇದು ಅವರ ಎರಡನೇ ನಿರ್ದೇಶನದ ಚಿತ್ರವಾಗಿದೆ. ಈ ಚಿತ್ರವೂ ಪೈರಸಿಗೆ ತುತ್ತಾಗಿದೆ.

ಮಧುರೈನ ಕುಖ್ಯಾತ ತಮಿಳು ರಾಕರ್ಸ್ ಸದಸ್ಯ ಜೆಬ್ ಸ್ಟೀಫನ್ ರಾಜ್ ಅವರು ಸ್ಟ್ರೀಮಿಂಗ್ ವೆಬ್‌ಸೈಟ್‌ನಲ್ಲಿ ಅಕ್ರಮವಾಗಿ ರಾಯನ್ ಅನ್ನು ರೆಕಾರ್ಡ್ ಮಾಡಿ ಅಪ್‌ಲೋಡ್ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಅನಂತರ ಕೇರಳ ಸೈಬರ್ ಕ್ರೈಮ್ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಜೆಬ್ ಸ್ಟೀಫನ್ ರಾಜ್ ವೆಬ್‌ಸೈಟ್‌ನ ನಿರ್ವಾಹಕರೂ ಆಗಿದ್ದಾರೆ. ಹಲವು ವರ್ಷಗಳಿಂದ ಸಿನಿಮಾಗಳನ್ನು ಈ ರೀತಿ ಸೋರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಕೇರಳದ ಸೈಬರ್ ಕ್ರೈಮ್ ಪೊಲೀಸರು ಇತ್ತೀಚೆಗೆ ಪೃಥ್ವಿರಾಜ್ ಸುಕು ಕುಮಾರನ್ ಅವರ ಇತ್ತೀಚಿನ ಮಲಯಾಳಂ ಚಿತ್ರ ʼಗುರುವಾಯೂರಪ್ಪನ್ ಅಂಬಲನಾಡೈʼ ಬಿಡುಗಡೆಯಾದ ಕೇವಲ ಒಂದೇ ದಿನದ ಅನಂತರ ಪೈರೇಟೆಡ್ ವೆಬ್‌ಸೈಟ್‌ನಲ್ಲಿ ಕಾಣಿಸಿಕೊಂಡಿತ್ತು. ಬಳಿಕ ಈ ಕುರಿತು ತನಿಖೆ ನಡೆಸಲಾಗಿತ್ತು. ಈ ಎರಡು ಚಲನಚಿತ್ರಗಳ ಹೊರತಾಗಿ ಮಹಾರಾಜ ಮತ್ತು ಕಲ್ಕಿ 2898ಎಡಿ ನ ಪ್ರತಿಗಳು ಕೂಡ ಪೈರೇಟೆಡ್ ವೆಬ್ ಸೈಟ್‌ನಲ್ಲಿ ಕಾಣಿಸಿಕೊಂಡಿತ್ತು.

ತನಿಖಾಧಿಕಾರಿಗಳ ಪ್ರಕಾರ, ಪೈರಸಿ ಸೈಟ್ ಪಾಪ್-ಅಪ್ ಜಾಹೀರಾತುಗಳು ಮತ್ತು ಸದಸ್ಯತ್ವ ಶುಲ್ಕಗಳ ಮೂಲಕ ಹಣವನ್ನು ಗಳಿಸುತ್ತದೆ. ಅವರು ಮೊದಲು ಚಿತ್ರಮಂದಿರಗಳಲ್ಲಿ ರಹಸ್ಯವಾಗಿ ರೆಕಾರ್ಡ್ ಮಾಡಿದ ಚಲನಚಿತ್ರಗಳ ಪ್ರತಿಗಳನ್ನು ಇದರಲ್ಲಿ ಬಿಡುಗಡೆ ಮಾಡುತ್ತಾರೆ. ಅನಂತರ ಅವುಗಳನ್ನು ನವೀಕರಿಸುತ್ತಾರೆ.

Raayan Movie
Raayan Movie


ಧನುಷ್ ಬರೆದು ನಿರ್ದೇಶಿಸಿರುವ ಚಿತ್ರ ʼರಾಯನ್ʼ

ʼರಾಯನ್ʼ ತಮಿಳು ಭಾಷೆಯ ಚಿತ್ರವಾಗಿದ್ದು, ಧನುಷ್ ಬರೆದು ನಿರ್ದೇಶಿಸಿದ್ದಾರೆ. ಇದು ತನ್ನ ಕುಟುಂಬದ ಹತ್ಯೆಗೆ ಸೇಡು ತೀರಿಸಿಕೊಳ್ಳಲು ತರಬೇತಿ ಪಡೆಯುವ ಯುವಕನ ಕಥೆಯನ್ನು ಹೇಳುತ್ತದೆ. ಅವನು ನ್ಯಾಯವನ್ನು ಹುಡುಕುವ ಅನ್ವೇಷಣೆಯಲ್ಲಿ ತೊಡಗುತ್ತಾನೆ, ಅದು ಅವನನ್ನು ಭೂಗತ ಜಗತ್ತಿಗೆ ಕರೆದೊಯ್ಯುತ್ತದೆ.


ಸಾಹಸಮಯ ಚಿತ್ರದಲ್ಲಿ ದುಶಾರ ವಿಜಯನ್, ಸಂದೀಪ್ ಕಿಶನ್, ಅಪರ್ಣಾ ಬಾಲಮುರಳಿ, ಕಾಳಿದಾಸ್ ಜಯರಾಮ್, ನಿತ್ಯಾ ಮೆನೆನ್, ಅಮಲಾ ಪೌಲ್, ಎಸ್‌ಜೆ ಸೂರ್ಯ ಮತ್ತು ವರಲಕ್ಷ್ಮಿ ಶರತ್‌ಕುಮಾರ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ರಾಯನ್ 47.90 ಕೋಟಿ ರೂ. ಗಳಿಸಿದೆ. ಆರಂಭಿಕ ವಾರಾಂತ್ಯದಲ್ಲಿ ಯುಎಸ್ ಬಾಕ್ಸ್ ಆಫೀಸ್‌ನಲ್ಲಿ ರಾಯನ್ ಟಾಪ್ 10ರಲ್ಲಿ ಸ್ಥಾನವನ್ನು ಪಡೆದುಕೊಂಡಿತು. ʼರಾಯನ್ʼ ಯಶಸ್ವಿ ಪ್ರದರ್ಶನದ ಅನಂತರ ಧನುಷ್ ಮುಂದಿನ ಬಾರಿ ʼಕುಬೇರʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 6ನಿರ್ಮಾಪಕರು ಇತ್ತೀಚೆಗೆ ನಟನ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದರು. ಚಿತ್ರದಲ್ಲಿ ಧನುಷ್ ಹೊರತಾಗಿ, ರಶ್ಮಿಕಾ ಮಂದಣ್ಣ, ನಾಗಾರ್ಜುನ ಮತ್ತು ಜಿಮ್ ಸರ್ಭ್ ನಟಿಸಲಿದ್ದಾರೆ.

Continue Reading

ಕಾಲಿವುಡ್

Arjun Sarja: ಸ್ಟೈಲಿಶ್ ಅವತಾರದಲ್ಲಿ ಅರ್ಜುನ್ ಸರ್ಜಾ: ‘ವಿಡಮುಯಾರ್ಚಿ’ಲುಕ್‌ ಔಟ್‌!

Arjun Sarja: ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಅಜಿತ್ ಕುಮಾರ್, ತ್ರಿಶಾ ಮತ್ತು ಆಕ್ಷನ್ ಕಿಂಗ್ ಅರ್ಜುನ್ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಈಗ ಮತ್ತೊಮ್ಮೆ ಈ ಮೂರೂ ಪ್ರೇಕ್ಷಕರ ಮನಸೂರೆಗೊಳ್ಳಲಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Arjun Sarja Vidaamuyarchi Heats Up Character Poster
Koo

ಬೆಂಗಳೂರು: ಅಜಿತ್ ಕುಮಾರ್ ನಟಿಸುತ್ತಿರುವ ‘ವಿಡಮುಯಾರ್ಚಿ’ ಕಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ನಡಿ ಬಹಳ ಅದ್ಧೂರಿಯಾಗಿ ಈ ಚಿತ್ರ ಮೂಡಿ ಬರುತ್ತಿದೆ. ಅದರಲ್ಲಿಯೂ ಅಜಿತ್ ಡೇಂಜರಸ್ ಸ್ಟಂಟ್ ವಿಡಿಯೋ ವೈರಲ್ ಆದ್ಮೇಲಂತೂ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದೆ. ಇದೀಗ ಮಿಡಮುಯಾರ್ಚಿ ಸಿನಿಮಾದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.

ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಅರ್ಜುನ್, ‘ವಿಡಮುಯಾರ್ಚಿ’ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಆಕ್ಷನ್ ಕಿಂಗ್ ರಸ್ತೆಯ ಮೇಲೆ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿನ್ನಲೆಯಲ್ಲಿ ಅಜಿತ್ ಅವರ ಸಿಲೂಯೆಟ್ ನಿಗೂಢತೆ ಮತ್ತು ನಿರೀಕ್ಷೆಯ ಭಾವವನ್ನು ಹುಟ್ಟುಹಾಕುತ್ತದೆ. ‘ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ’ ಎಂಬ ಕುತೂಹಲ ಕೆರಳಿಸುವ ಅಡಿಬರಹವು ಚಿತ್ರದ ಸುತ್ತಲಿನ ಕುತೂಹಲವನ್ನು ಹೆಚ್ಚಿಸಿದೆ.

ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಅಜಿತ್ ಕುಮಾರ್, ತ್ರಿಶಾ ಮತ್ತು ಆಕ್ಷನ್ ಕಿಂಗ್ ಅರ್ಜುನ್ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಈಗ ಮತ್ತೊಮ್ಮೆ ಈ ಮೂರೂ ಪ್ರೇಕ್ಷಕರ ಮನಸೂರೆಗೊಳ್ಳಲಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಮಾಗಿಲ್ ತಿರುಮೇನಿ ನಿರ್ದೇಶನದ ಈ ಚಿತ್ರಕ್ಕೆಡ ಕಾಲಿವುಡ್ ಮ್ಯೂಸಿಕಲ್ ರಾಕ್ ಸ್ಟಾರ್ ಅನಿರುದ್ಧ್ ಈಗಾಗಲೇ ಚಾರ್ಟ್ ಬಸ್ಟರ್ ಆಲ್ಬಂ ಅನ್ನು ಸಿದ್ಧಪಡಿಸುತ್ತಿದ್ದಾರೆ. ಓಂ ಪ್ರಕಾಶ್ ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಎನ್.ಬಿ.ಶ್ರೀಕಾಂತ್ ಸಂಕಲನಕಾರರಾಗಿ ಮತ್ತು ಮಿಲನ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಂದಹಾಗೆ, ಈ ಚಿತ್ರಕ್ಕೆ ಸುಂದರ್ ಸಾಹಸ ಸಂಯೋಜನೆ ಮಾಡುತ್ತಿದ್ದರೆ, ಅನು ವರ್ಧನ್ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸುಬ್ರಮಣಿಯನ್ ನಾರಾಯಣನ್ ಕಾರ್ಯಕಾರಿ ನಿರ್ಮಾಪಕರಾಗಿ, ಜೆ.ಗಿರಿನಾಥನ್ ಮತ್ತು ಕೆ.ಜಯಶೀಲನ್ ನಿರ್ಮಾಣ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಅಜಿತ್ ಕುಮಾರ್ ಅಭಿನಯದ ‘ವಿಡಮುಯಾರ್ಚಿ’ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಸನ್ ಟಿವಿ ಪಡೆದುಕೊಂಡಿದ್ದರೆ, OTT ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಈ ಚಿತ್ರವನ್ನು ಅಕ್ಟೋಬರ್ 31 ರಂದು ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.

Continue Reading

ಕಾಲಿವುಡ್

Actor Dhanush: ಮನೆ ಬಗ್ಗೆ ಮಾತಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬೆನ್ನಲ್ಲೇ ಹೊಸ ಪೋಸ್ಟ್‌ ಹಂಚಿಕೊಂಡ ನಟ ಧನುಷ್‌!

Actor Dhanush: ಜುಲೈ 26 ರಂದು ರಾಯನ್ ಬಿಡುಗಡೆಯಾಯಿತು. ವಾರಾಂತ್ಯದಲ್ಲಿ 75 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಚಿತ್ರವನ್ನು ನಿರ್ಮಿಸಿರುವ ಸನ್ ಪಿಕ್ಚರ್ಸ್ ಈ ಚಿತ್ರವನ್ನು ‘ಬ್ಲಾಕ್ ಬಸ್ಟರ್’ ಎಂದು ಘೋಷಿಸಿದೆ. ರಾಯನ್ ಚಿತ್ರವನ್ನು ಧನುಷ್ ನಿರ್ದೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಧನುಷ್ ಅವರ 50 ನೇ ಚಿತ್ರವಾಗಿದೆ.

VISTARANEWS.COM


on

Actor Dhanush Shares FIRST Post After Speech
Koo

ಬೆಂಗಳೂರು: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸುವ ಕುರಿತು ಮಾಡಿದ ಭಾಷಣಕ್ಕಾಗಿ (Actor Dhanush) ಟೀಕೆಗೊಳಗಾದ ನಂತರ ಧನುಷ್ ತಮ್ಮ ಮೊದಲ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಿರ್ಮಾಪಕನ ಮಗನಾಗಿದ್ದರೂ ತನ್ನನ್ನು ತಾನು ಹೊರಗಿನವನೆಂದು ಬಿಂಬಿಸಿಕೊಂಡಿದ್ದಕ್ಕಾಗಿ ನಟ ಟೀಕೆಗೆ ಗುರಿಯಾದರು. ಇದೀಗ ನಟ ಈ ಬಗ್ಗೆ ಏನೂ ವ್ಯಕ್ತಪಡಿಸಿದೇ ಇದ್ದರೂ ತಮ್ಮ ಜನ್ಮದಿನ ಹಾಗೂ ʻರಾಯನ್‌ʼ ಸಿನಿಮಾಗೆ ನೀಡಿದ ಪ್ರೀತಿಗಾಗಿ ಧನ್ಯವಾದಗಳನ್ನು ಸೂಚಿಸಿದರು. ನಟನ ಹುಟ್ಟುಹಬ್ಬದ ಸಮಯದಲ್ಲೇ ಚಿತ್ರ ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಆಗಿ ಹೊರಹೊಮ್ಮಿದೆ.

ನಟ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ “ಪ್ರೇಕ್ಷಕರು, ಚಲನಚಿತ್ರ ಬಂಧುಗಳು, ಸ್ನೇಹಿತರು, ಮಾಧ್ಯಮಗಳು ಮತ್ತು ನನ್ನ ಆಧಾರ ಸ್ತಂಭಗಳಿಗೆ ಧನ್ಯವಾದಗಳು . ನನ್ನ ಅಭಿಮಾನಿಗಳು ಆಶೀರ್ವಾದಳನ್ನು ಧಾರೆಯೆರೆದರು. ನನ್ನ ಹುಟ್ಟುಹಬ್ಬದ ಉಡುಗೊರೆಯಾಗಿದೆ, ”ಎಂದು ಅವರು ಬರೆದಿದ್ದಾರೆ.

ಜುಲೈ 26 ರಂದು ರಾಯನ್ ಬಿಡುಗಡೆಯಾಯಿತು. ವಾರಾಂತ್ಯದಲ್ಲಿ 75 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ. ಚಿತ್ರವನ್ನು ನಿರ್ಮಿಸಿರುವ ಸನ್ ಪಿಕ್ಚರ್ಸ್ ಈ ಚಿತ್ರವನ್ನು ‘ಬ್ಲಾಕ್ ಬಸ್ಟರ್’ ಎಂದು ಘೋಷಿಸಿದೆ. ರಾಯನ್ ಚಿತ್ರವನ್ನು ಧನುಷ್ ನಿರ್ದೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಧನುಷ್ ಅವರ 50 ನೇ ಚಿತ್ರವಾಗಿದೆ.

ಎಸ್.ಜೆ.ಸೂರ್ಯ, ಪ್ರಕಾಶ್ ರಾಜ್, ಸೆಲ್ವರಾಘವನ್, ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ದುಶಾರ ವಿಜಯನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಸರವಣನ್ ಕೂಡ ಇದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಇದು ವರ್ಷದ ಬಹು ನಿರೀಕ್ಷಿತ ತಮಿಳು ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ A ಸರ್ಟಿಫಿಕೇಟ್‌ ಪಡೆದುಕೊಂಡಿದೆ.

ಧನುಷ್ (Actor Dhanush) ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್‌ ಆಗಿ ಭಾರತದಲ್ಲಿ 50 ಕೋಟಿ ರೂ, ಕಲೆಕ್ಷನ್‌ ಮಾಡಿದೆ.ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ ಸಿನಿಮಾ ಭರ್ಜರಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಸಿನಿಮಾ ರಿಲೀಸ್‌ ಆದ ಬಳಿಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading
Advertisement
ICW 2024
ಫ್ಯಾಷನ್31 mins ago

ICW 2024: ಟ್ರೆಂಡ್‌ ಲಿಸ್ಟ್‌ಗೆ ಸೇರಿದ ಇಂಡಿಯಾ ಕೌಚರ್‌ ವೀಕ್‌ನ ಡಿಸೈನರ್‌ ವೇರ್‌ಗಳಿವು!

Diksha Daga
ಕ್ರೀಡೆ36 mins ago

Diksha Dagar : ಗಾಲ್ಫರ್​ ದೀಕ್ಷಾ ದಾಗರ್​ ಪ್ರಯಾಣಿಸುತ್ತಿದ್ದ ಕಾರು ಪ್ಯಾರಿಸ್​​ನಲ್ಲಿ ಅಪಘಾತ

Puja Khedkar
ದೇಶ45 mins ago

Puja Khedkar: ಮಾಜಿ ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮತ್ತೊಂದು ಸಂಕಷ್ಟ; ಜಾಮೀನು ಅರ್ಜಿ ವಜಾ

Road Accident
ಕರ್ನಾಟಕ52 mins ago

Road Accident : ತಿರುಪತಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್‌ ಫೇಲ್‌; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Amazoan Fraud
Latest1 hour ago

Online Shopping Fraud: ಅಮೆಜಾನ್‌ನಲ್ಲಿ 55,000 ರೂ. ಮೊಬೈಲ್ ಫೋನ್ ಆರ್ಡರ್ ಮಾಡಿದವನಿಗೆ ಸಿಕ್ಕಿದ್ದು ಟೀ ಕಪ್!

Movies on Israel
ಸಿನಿಮಾ2 hours ago

Movies on Israel: ಪ್ಯಾಲೇಸ್ತಿನ್‌ ಉಗ್ರರ ವಿರುದ್ಧ ಇಸ್ರೇಲ್ ಸೇಡು! ಮೈನವಿರೇಳಿಸುವ ಈ ಸಿನೆಮಾಗಳನ್ನು ನೋಡಲೇಬೇಕು!

Rohit Sharma
ಪ್ರಮುಖ ಸುದ್ದಿ2 hours ago

Rohit Sharma : ಟಿ20 ನಿವೃತ್ತಿಯಲ್ಲ, ಅದು ವಿಶ್ರಾಂತಿ; ಕೌತುಕ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

BJP Padayatra
ಕರ್ನಾಟಕ2 hours ago

BJP Padayatra: ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಸಾಥ್;‌ ಪ್ರೀತಂ ಗೌಡ ಭಾಗಿ ಆಗ್ತಾರಾ? ವಿಜಯೇಂದ್ರ ಹೇಳಿದ್ದಿಷ್ಟು

karnataka Weather Forecast
ಮಳೆ2 hours ago

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Paris Olympics
ಕ್ರೀಡೆ2 hours ago

Paris Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌