Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು - Vistara News

ಮಳೆ

Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Karnataka Weather Forecast : ಕರಾವಳಿ, ಮಲೆನಾಡಿನಲ್ಲಿ ಮಳೆಯಾಗುತ್ತಿದ್ದು, ಏಳು ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಸುತ್ತಮುತ್ತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಮಧ್ಯಮ ಮಳೆಯಾಗಲಿದ್ದು ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ಬೆಂಗಳೂರಿನಲ್ಲೂ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇದು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ. ರಾತ್ರಿ ಸಮಯ ಚಳಿ ಹೆಚ್ಚಾಗಲಿದೆ.

7 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ & ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Wayanad Landslide: ವಯನಾಡಿನ ಭೀಕರ ದೃಶ್ಯ ಸೆರೆ ಹಿಡಿದ ಇಸ್ರೋ; ಭೂಕುಸಿತಕ್ಕೂ ಮುನ್ನ ಮತ್ತು ನಂತರ ಫೋಟೋ ರಿಲೀಸ್‌

Wayanad Landslide: ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ರಿಲೀಸ್‌ ಮಾಡಿರುವ ಇಸ್ರೋ, ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ತೋರಿಸಿದೆ. ಉಪಗ್ರಹ ಚಿತ್ರಗಳ ಪ್ರಕಾರ ಸಮುದ್ರ ಮಟ್ಟದಿಂದ 1500 ಮೀಟರ್‌ ಎತ್ತರದಲ್ಲಿರುವ ಗುಡ್ಡದ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದೆ. ಇನ್ನು ಈ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ.

VISTARANEWS.COM


on

Wayanad Landslide
Koo

ವಯನಾಡು: ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೀಕರ ಭೂಕುಸಿತಕ್ಕೆ ಕೇರಳದ ವಯನಾಡು ಈಗ ಸೂತಕದ ಮನೆಯಂತಾಗಿದೆ. ಭೂಕುಸಿತದಲ್ಲಿ (Wayanad Landslide) ಮೃತರ ಸಂಖ್ಯೆ ಈಗ 300ದಾಟಿದೆ. ಇನ್ನು ನಾಪತ್ತೆಯಾದವರ ಸಂಖ್ಯೆ ಅದೆಷ್ಟೋ.. ಈ ನಡುವೆ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಇಂದು ವಯನಾಡಿನ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ರಿಲೀಸ್‌ ಮಾಡಿರುವ ಇಸ್ರೋ, ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ತೋರಿಸಿದೆ. ಉಪಗ್ರಹ ಚಿತ್ರಗಳ ಪ್ರಕಾರ ಸಮುದ್ರ ಮಟ್ಟದಿಂದ 1500 ಮೀಟರ್‌ ಎತ್ತರದಲ್ಲಿರುವ ಗುಡ್ಡದ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದೆ. ಇನ್ನು ಈ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ.

ಇನ್ನು ಉಪಗ್ರಹದ ಮಾಹಿತಿಯ ಪ್ರಕಾರ ಈ ಹಿಂದೆ ಭೂ ಕುಸಿತ ಸಂಭವಿಸಿದ ಅದೇ ಸ್ಥಳದಲ್ಲೇ ಭೂ ಕುಸಿತವಾಗಿದೆ ಎಂದು ಹೇಳಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ. ಭಾರೀ ದೊಡ್ಡ ಪ್ರಮಾಣದ ಕುಸಿತ ಎಂಬುದು ಚಿತ್ರಗಳ ಮೂಲಕ ಸ್ಪಷ್ಟವಾಗಿದೆ.

ಭೂಕುಸಿತ ವಿನಾಶವನ್ನು ಸೆರೆಹಿಡಿಯಲು, ಹೈದರಾಬಾದ್‌ನಲ್ಲಿರುವ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ಎನ್‌ಆರ್‌ಎಸ್‌ಸಿ) ಇಸ್ರೋದ ಸುಧಾರಿತ ಕಾರ್ಟೊಸ್ಯಾಟ್-3 ಆಪ್ಟಿಕಲ್ ಉಪಗ್ರಹ ಮತ್ತು ಮೋಡದ ಹೊದಿಕೆಯನ್ನು ಭೇದಿಸಬಲ್ಲ RISAT ಉಪಗ್ರಹದ ಸಹಾಯದಿಂದ ಇಂ ಚಿತ್ರವನ್ನು ಸೆರೆ ಹಿಡಿದಿದೆ.

ವಯನಾಡಿನ ಹಲವಾರು ಸ್ಥಳಗಳಲ್ಲಿ ರಕ್ಷಣಾ ತಂಡಗಳು ಗುರುವಾರ ರಕ್ಷಣಾ ಕಾರ್ಯವನ್ನು ಪುನರಾರಂಭಿಸಿವೆ. 1600 ಕ್ಕೂ ಹೆಚ್ಚು ಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಚಿವ ಕೆ ರಾಜನ್ ಹೇಳಿದ್ದಾರೆ. ನದಿಗಳಲ್ಲಿ, ಬೆಟ್ಟ ಕುಸಿತದ ಅವಶೇಷಗಳ ಅಡಿಯಲ್ಲಿ ಶವಗಳು ಸಿಗುತ್ತಿವೆ. ಇದರ ಮಧ್ಯೆಯೇ, ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ವಯನಾಡಿಗೆ ಭೇಟಿ ನೀಡಿದ್ದು, ಸಂತ್ರಸ್ತ ಕುಟುಂಬಗಳ ಜತೆ ಅವರು ಮಾತುಕತೆ ನಡೆಸಿದ್ದಾರೆ.

ವಯನಾಡು ಜಿಲ್ಲೆಯ ಮೆಪ್ಪಾಡಿ ಹಾಗೂ ಚೂರಲ್‌ಮಲ ಪ್ರದೇಶಗಳ ಗ್ರಾಮಗಳು ಸಂಪೂರ್ಣವಾಗಿ ಮಸಣದಂತಾಗಿವೆ. ಈ ಪ್ರದೇಶಗಳಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡಿರುವ, ನೀರಿನಲ್ಲಿ ಮನೆಗಳು ಕೊಚ್ಚಿ ಹೋಗಿ ನಿರಾಶ್ರಿತರಾಗಿರುವ ಸಂತ್ರಸ್ತರನ್ನು ಭೇಟಿಯಾದ ಅವರು, ಆತ್ಮಸ್ಥೈರ್ಯ ತುಂಬಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಹಾನಿಯ ವೀಕ್ಷಣೆ ಮಾಡಿದರು.

ವಯನಾಡು ಜಿಲ್ಲೆಯ ಹಲವೆಡೆ ಸಂಚರಿಸಿದ ಬಳಿಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. “ವಯನಾಡು ಜನರ ಸ್ಥಿತಿಯನ್ನು ನೋಡಿದಾಗ ನನ್ನ ತಂದೆ ಸಾವಿನ ದಿನ, ಆ ದುಃಖವೇ ಆಯಿತು. ಜನರು ತಂದೆ, ತಾಯಿ ಜತೆಗೆ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ಇಡೀ ದೇಶದ ಗಮನವೇ ಈಗ ವಯನಾಡು ಮೇಲಿದೆ. ನಾವೆಲ್ಲರೂ ವಯನಾಡು ಪರವಾಗಿ ನಿಲ್ಲೋಣ. ಇದು ಕೇವಲ ವಯನಾಡಿನ ದುರಂತ ಅಲ್ಲ, ರಾಜ್ಯ ಹಾಗೂ ದೇಶದ ದುರಂತವಾಗಿದೆ” ಎಂದು ಭಾವುಕರಾಗಿ ಹೇಳಿದರು

ಇದನ್ನೂ ಓದಿ: Wayanad Landslide: ವಯನಾಡ್‌ ಅಕ್ಷರಶಃ ಸ್ಮಶಾನ; ಭೂಕುಸಿತ ಸ್ಥಳಕ್ಕೆ ರಾಹುಲ್‌, ಪ್ರಿಯಾಂಕಾ ಭೇಟಿ ಸ್ಥಗಿತ

Continue Reading

ಮಳೆ

Karnataka Rain News: ಮಳೆ ಆರ್ಭಟ, ಇಂದು ಶಾಲೆ ಕಾಲೇಜುಗಳಿಗೆ ರಜೆ

Karnataka Rain: ಭಾರಿ ಮಳೆ ಹಿನ್ನೆಲೆ ಆಗಸ್ಟ್ 2ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Karnataka Rain news) ಅಬ್ಬರಿಸುತ್ತಿದ್ದು, ಹಲವು ಕಡೆ ಪ್ರವಾಹ ಪರಿಸ್ಥಿತಿ (Flood situation) ಉಂಟಾಗಿದೆ. ಕಾವೇರಿ (Kaveri river), ಕೃಷ್ಣಾ (Krishna River), ಘಟಪ್ರಭಾ ನದಿ ತೀರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವಾರು ಗ್ರಾಮಗಳನ್ನು ತೆರವು ಮಾಡಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ (School holiday) ಮಾಡಲಾಗಿದೆ.

2024ರ ಜುಲೈ ತಿಂಗಳು ಪೂರ್ತಿ ಭರ್ಜರಿ ಮಳೆಯಾದ ಕಾರಣಕ್ಕೆ ಇದೀಗ ಕರ್ನಾಟಕದ ಬಹುತೇಕ ಡ್ಯಾಂಗಳು ತುಂಬಿ ತುಳುಕುತ್ತಿವೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಬರುವ ಮುನ್ಸೂಚನೆ ನೀಡಲಾಗಿದ್ದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು- ಮಂಗಳೂರು ನಡುವಿನ ಹಲವು ಸಂಪರ್ಕ ರಸ್ತೆಗಳು ಭೂಕುಸಿತ ಸಮಸ್ಯೆಯಿಂದ ಬಳಲುತ್ತಿದ್ದು, ಈ ಘಾಟಿ ಮಾರ್ಗಗಳಲ್ಲಿ ವಾಹನಗಳ ಸಂಚಾರ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭೀಕರ ಮಳೆ ಮುಂದುವರಿದಿದೆ. ಮುಂಗಾರು ಮಳೆ ಅಬ್ಬರಕ್ಕೆ ಪಶ್ಚಿಮ ಘಟ್ಟಗಳು ನಲುಗಿ ಹೋಗಿವೆ. ಭಾರಿ ಮಳೆ ಕಾರಣ ಹಲವೆಡೆ ಭೂಕುಸಿತ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೆಟ್ಟ ಗುಡ್ಡ, ಭೂಮಿ ಕುಸಿದು ಬೀಳುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳಿಗೆ ಆಗಸ್ಟ್ 2ರಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆ ಹಿನ್ನೆಲೆ ಆಗಸ್ಟ್ 2ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಕೂಡ ಮಳೆ ಜೋರಾಗಿ ಸುರಿಯುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜನರು ನೆರೆ ಮತ್ತು ಪ್ರವಾಹದ ಭೀತಿಯಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ತೀರದ ಹತ್ತಾರು ಗ್ರಾಮಗಳು ಮುಳುಗಡೆಯಾಗಿವೆ.

ಇದನ್ನೂ ಓದಿ: Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Continue Reading

ಮಳೆ

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Karnataka Weather forecast : ನೈರುತ್ಯ ಮುಂಗಾರು ಸಕ್ರಿಯಗೊಂಡಿದ್ದು, ರಾಜ್ಯಾದ್ಯಂತ ಮಳೆಯು (Rain News) ವ್ಯಾಪ್ತಿಸುತ್ತಿದೆ. ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಆಗಸ್ಟ್‌ 5ರವರೆಗೆ ಮುಂದುವರಿಯಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ (Rain News) ಅಬ್ಬರ (Karnataka Weather Forecast) ಮುಂದುವರಿದಿದ್ದು, ಫಲ್ಗುಣಿ ನದಿ ಉಕ್ಕಿ ಹರಿಯುತ್ತಿದೆ. ವಾಮಂಜೂರು ಶ್ರೀಅಮೃತೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದೆ. ದೇವಸ್ಥಾನದ ಒಳ ಪ್ರಾಂಗಣ ಸಂಪೂರ್ಣ ಜಲಾವೃತವಾಗಿದ್ದು, ದೇವಸ್ಥಾನದ ಸುತ್ತಲೂ ಫಲ್ಗುಣಿ ನದಿ ನೀರು ಆವರಿಸಿದೆ. ಕಳೆದ 30 ವರ್ಷದ ಬಳಿಕ ಇದೇ ಮೊದಲ ಬಾರಿಗೆ ದೇವಸ್ಥಾನಕ್ಕೆ ನೀರು ನುಗ್ಗಿದೆ. ಕ್ಷಣ ಕ್ಷಣಕ್ಕೂ ಫಲ್ಗುಣಿ ನದಿಯ ನೀರು ಏರಿಕೆಯಾಗುತ್ತಿದ್ದು, ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಪಲ್ಗುಣಿ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಮಂಗಳೂರು ನಗರ ಹೊರವಲಯದ ಪಡುಶೆಡ್ಡೆಯ ಸುಮಾರು 20ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ನೆರೆ ಬಾಧಿತ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರು ಏರಿಕೆ ಆಗುತ್ತಿದ್ದು, ನದಿ ತೀರದ ಹಲವು ಮನೆಗಳು, ಕೃಷಿ ಭೂಮಿಗಳು ಜಲಾವೃತಗೊಂಡಿದೆ. ಪಲ್ಗುಣಿ ನದಿಯ ಮಧ್ಯ ಭಾಗದಲ್ಲಿ ಡ್ರೆಜ್ಜಿಂಗ್ ಬೋಟ್ ಸಿಲುಕಿದೆ. ರಾತ್ರಿ ಸುರಿದ ಮಹಾಮಳೆಗೆ ಪಲ್ಗುಣಿ ನದಿ ಉಕ್ಕಿದ್ದು, ಬಂಟ್ವಾಳ ತಾಲೂಕಿನ ಅಮ್ಮುಂಜೆಯ ಏಳು ಮನೆಗಳು ಜಲಾವೃತಗೊಂಡು, ಅಮ್ಮುಂಜೆ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀರು ನುಗ್ಗಿದೆ. ಬಂಟ್ವಾಳ ಸಿದ್ಧಕಟ್ಟೆ ಸಮೀಪದ ಅಂಗಾರಕರಿಯ ಸೇತುವೆ ಮೇಲೆ ನೀರು ಹರಿದಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ

ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿದ್ದು, ನದಿಗೆ 1,67,443 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಮತ್ತೆ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಕಂಪ್ಲಿ ಸೇತುವೆ ಮುಳುಗಡೆಯಾದ ಕಾರಣಕ್ಕೆ ಬಳ್ಳಾರಿ- ಗಂಗಾವತಿ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಿಂದ ಮೂರು ಅಡಿ ನೀರು ಹರಿಯುತ್ತಿದೆ. ಹೀಗಾಗಿ ಕಂಪ್ಲಿ ಕೋಟೆಯ ಪ್ರದೇಶಕ್ಕೆ ನದಿ ನೀರು ನುಗ್ಗಿದೆ. ಕಂಪ್ಲಿ ಕೋಟೆ ಪ್ರದೇಶದ ಹೊಳೆ ಆಂಜನೇಯ, ಪ್ರಸನ್ನ ವೆಂಕಟರಮಣ ದೇವಸ್ಥಾನ ಜಲಾವೃತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಕೋಟೆ ಪ್ರದೇಶದ ಜನರನ್ನ ಸ್ಥಳಾಂತರ ಮಾಡಲಾಗಿತ್ತು.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ವಿಜಯನಗರ ಜಿಲ್ಲೆಯಲ್ಲಿ ರಸ್ತೆ, ಭತ್ತದ ಗದ್ದೆಗಳು ಜಲಾವೃತವಾಗಿದೆ. ಮಕರಬ್ಬಿ-ಬ್ಯಾಲಾಹುಣಸೆ ಗ್ರಾಮದ ರಸ್ತೆ ಸಂಪೂರ್ಣ ಬಂದ್ ಆಗಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಗ್ರಾಮಗಳ ಹತ್ತಾರು ಎಕರೆ ಭತ್ತದ ಜಮೀನಿಗೆ ನೀರು ನುಗ್ಗಿದ್ದರಿಂದ ಸಂಪೂರ್ಣ ನೀರು ಪಾಲಾಗಿದೆ. ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶಗಳಲ್ಲಿ ಸಂಕಷ್ಟ ಎದುರಾಗಿದೆ. ನದಿಪಾತ್ರದ 22 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ನಾಳೆ ವ್ಯಾಪಕ ಮಳೆ ಎಚ್ಚರಿಕೆ

ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 23 ಸೆ.ಮೀ, ಉತ್ತರ ಕನ್ನಡದ ಅಂಕೋಲಾದಲ್ಲಿ 20 ಸೆ.ಮೀ ಮಳೆಯಾಗಿದೆ.

ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಕರಾವಳಿ ತೀರದಲ್ಲಿ ಟ್ರಫ್ ಮುಂದುವರೆದಿದೆ. ಸಿಯರ್ ಝೋನ್ 20° ಉತ್ತರ ಅಂಕ್ಷಾಂಶದಲ್ಲಿ 4.5ಕಿ.ಮೀ ಯಿಂದ  5.8 ಕಿ.ಮೀ ವರೆಗೆ ಸುಳಿಗಾಳಿ ಇದೆ. ಇದರ ಪರಿಣಾಮ ಕರಾವಳಿ ಜಿಲ್ಲೆಗಳಿಗೆ ಆಗಸ್ಟ್‌ 5ರ ವರೆಗೆ ವ್ಯಾಪಕ ಮಳೆ ಆಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Hosanagara News: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Hosanagara News: ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ, ನೊಂದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ಧನ ವಿತರಿಸಿದರು.

VISTARANEWS.COM


on

MLA Belur Gopalakrishna visits and inspects flood affected areas in hosanagara taluk
Koo

ಹೊಸನಗರ: ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ, ನೊಂದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ಧನ (Hosanagara News) ವಿತರಿಸಿದರು.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಹೊಸನಗರ ತಾಲೂಕಿನಲ್ಲಿ ಅತಿವೃಷ್ಟಿಯಿಂದ 13.75 ಕೋಟಿ ರೂಪಾಯಿಗಳ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, 165 ಕಿಲೋ ಮೀಟರ್ ರಸ್ತೆ ಹಾಗೂ ಹೊಸನಗರ ತಾಲೂಕಿನಲ್ಲಿ ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ಇತರೆ ಸರ್ಕಾರಿ, ಖಾಸಗಿ ಸ್ವತ್ತುಗಳಿಗೆ ಸೇರಿ 147 ಆಸ್ತಿಗಳಿಗೆ ಹಾನಿ ಉಂಟಾಗಿದೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ, ಹಾಲೇಶ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ, ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಆಚಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಗೌಡ, ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್ ಹೆಗಡೆ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪುಟ್ಟ ನಾಯಕ್, ಕಾಂಗ್ರೆಸ್ ಘಟಕ ಅಧ್ಯಕ್ಷ ಗಣಪತಿ, ಸಣ್ಣಕ್ಕಿ ಮಂಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Paris Olympics
ಕ್ರೀಡೆ46 seconds ago

Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಮೊತ್ತದ ಕಾರು

Wayanad Landslide
ದೇಶ2 mins ago

Wayanad Landslide: ವಯನಾಡಿನ ಭೀಕರ ದೃಶ್ಯ ಸೆರೆ ಹಿಡಿದ ಇಸ್ರೋ; ಭೂಕುಸಿತಕ್ಕೂ ಮುನ್ನ ಮತ್ತು ನಂತರ ಫೋಟೋ ರಿಲೀಸ್‌

14 hours work it jobs
ಪ್ರಮುಖ ಸುದ್ದಿ8 mins ago

14 Hours Work: ಒಂದೆಡೆ ಐಟಿ ಉದ್ಯೋಗಿಗಳಿಂದ ಬೃಹತ್ ಪ್ರತಿಭಟನೆ, ಇನ್ನೊಂದೆಡೆ ಐಟಿ ಕಂಪನಿಗಳ ಮುಂದೆ ಕೆಲಸಕ್ಕಾಗಿ ಮೈಲುಗಟ್ಟಲೆ ಕ್ಯೂ!

India vs Sri Lanka
ಕ್ರೀಡೆ30 mins ago

India vs Sri Lanka: ಲಂಕಾ ಸರಣಿಯಲ್ಲಿ ವಿಶೇಷ ದಾಖಲೆ ಮೇಲೆ ಕಣ್ಣಿಟ್ಟ ಕೊಹ್ಲಿ, ರೋಹಿತ್​

police firing hubli robber
ಕ್ರೈಂ50 mins ago

Police Firing: ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

Phone Storage Issue
ಗ್ಯಾಜೆಟ್ಸ್58 mins ago

Phone Storage Issue: ನಿಮ್ಮ ಮೊಬೈಲ್ ಸ್ಟೋರೇಜ್ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ!

IND vs SL: When and where to watch ODI, squads, predicted XI, venues
ಕ್ರೀಡೆ1 hour ago

IND vs SL: ಇಂದು ಭಾರತ-ಲಂಕಾ ಮೊದಲ ಏಕದಿನ ಹಣಾಹಣಿ; ಎಷ್ಟು ಗಂಟೆಗೆ ಪಂದ್ಯ ಆರಂಭ?

NEET-UG 2024
ದೇಶ1 hour ago

NEET UG 2024: ನೀಟ್ ಅಕ್ರಮ; ಇಂದು ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು-CBI ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

KEA exams time table
ಪ್ರಮುಖ ಸುದ್ದಿ1 hour ago

KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

instagram love story
ಕ್ರೈಂ2 hours ago

Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ21 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ21 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌