MS Dhoni : ಸಿಎಸ್​​ಕೆಗೆ ನ್ಯಾಯ ಸಲ್ಲಿಸುವೆ; ಐಪಿಎಲ್ ನಿವೃತ್ತಿ ಕುರಿತು ಸ್ಪಷ್ಟನೆ ನೀಡಿದ ಎಂಎಸ್​ ಧೋನಿ - Vistara News

ಪ್ರಮುಖ ಸುದ್ದಿ

MS Dhoni : ಸಿಎಸ್​​ಕೆಗೆ ನ್ಯಾಯ ಸಲ್ಲಿಸುವೆ; ಐಪಿಎಲ್ ನಿವೃತ್ತಿ ಕುರಿತು ಸ್ಪಷ್ಟನೆ ನೀಡಿದ ಎಂಎಸ್​ ಧೋನಿ

MS Dhoni :

VISTARANEWS.COM


on

MS Dhoni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ಮಾಜಿ ನಾಯಕ ಮತ್ತು ಸಿಎಸ್ಕೆ ಸ್ಟಾರ್ ಎಂಎಸ್ ಧೋನಿ ಇತ್ತೀಚೆಗೆ ನಡೆದ ನಡೆದ ಕಾರ್ಯಕ್ರಮವೊಂದರಲ್ಲಿ ಐಪಿಎಲ್​ನಿಂದ​​ ನಿವೃತ್ತಿಯಾಗುವ ಕುರಿತು ಮಾಹಿತಿ ನೀಡಿದ್ದಾರೆ. ಅವರು ಹೇಳಿರುವ ಪ್ರಕಾರ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಸಂಭಾವ್ಯ ನಿವೃತ್ತಿಯ ಬಗ್ಗೆ ಇನ್ನೂ ಯೋಚಿಸುತ್ತಿದ್ದಾರೆ ಎಂದು ಬಹಿರಂಗಪಡಿಸಿದರು. ತಮ್ಮ ನಿವೃತ್ತಿ ನಿರ್ಧಾರವು ಅಂತಿಮವಾಗಿ ಸಿಎಸ್​ಕೆ ದೊಡ್ಡ ಪ್ರಯೋಜನಕಾರಿ ಎಂದು ಅವರು ಹೇಳಿದ್ದಾರೆ. ಸಿಎಸ್​ಕೆ ತಮ್ಮ ಪ್ರೀತಿಯ ಫ್ರಾಂಚೈಸಿ ಎಂಬುದನ್ನು ಮತ್ತೊಮ್ಮೆ ಸಾರಿ ಹೇಳಿದ್ದಾರೆ. ಆದರೆ ಐಪಿಎಲ್​ನಲ್ಲಿ ಆಟಗಾರರನ್ನು ಉಳಿಸಿಕೊಳ್ಳುವ ನಿಯಮವು ಅವರನ್ನು ಫ್ರಾಂಚೈಸಿಯಲ್ಲಿ ಉಳಿಸಿಕೊಳ್ಳುವುದಕ್ಕೆ ಸಮಸ್ಯೆಯಾಗಬಹುದು ಎಂಬ ಹಿನ್ನೆಲೆಯಲ್ಲಿ ಅವರ ನಿವೃತ್ತಿ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿವೆ. ಧೋನಿ ಫ್ರಾಂಚೈಸಿಯ ಪ್ರಮುಖ ಭಾಗವಾಗಿದ್ದು ಮತ್ತು ಐದು ಐಪಿಎಲ್ ಪ್ರಶಸ್ತಿಗಳ ದಾಖಲೆಗೆ ತಂಡವನ್ನು ಮುನ್ನಡೆಸಿದ್ದಾರೆ.

ಐಪಿಎಲ್ 2024 ಕ್ಕೆ ಮುಂಚಿತವಾಗಿ ಸಿಎಸ್​ಕೆ ನಾಯಕತ್ವದಿಂದ ಕೆಳಗಿಳಿದು ಋತುರಾಜ್ ಗಾಯಕ್ವಾಡ್​ಗೆ ಹೊಣೆಗಾರಿಕೆ ಹಸ್ತಾಂತರಿಸಿದಾಗಿನಿಂದ ಧೋನಿ ಅವರ ನಿವೃತ್ತಿಯ ವಿಷಯವು ಚರ್ಚೆಯಲ್ಲಿದೆ. 2023 ರಲ್ಲಿ ಸಿಎಸ್​ಕೆ ತನ್ನ ಐದನೇ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ನಂತರ, ಭಾರತೀಯ ಕ್ರಿಕೆಟ್ ಅಭಿಮಾನಿಗಳು 2024 ರ ಋತುವು ಎಂಎಸ್ ಧೋನಿ ಅವರ ಕೊನೆಯ ಸೀಸನ್ ಎಂದು ನಿರೀಕ್ಷಿಸಿದ್ದರು. ಆದಾಗ್ಯೂ, ಧೋನಿ ತಮ್ಮ ಸಂಭಾವ್ಯ ನಿವೃತ್ತಿ ಬಗ್ಗೆ ಯಾವುದೇ ಸ್ಪಷ್ಟ ವಿವರಗಳನ್ನು ಬಹಿರಂಗಪಡಿಸಿಲ್ಲ. 2025ರಲ್ಲಿ ಮತ್ತೊಂದು ಬಾರಿ ಅವರು ಕಣಕ್ಕೆ ಇಳಿಯುವ ಸಾಧ್ಯತೆಗಳೇ ಹೆಚ್ಚಾಗಿ ಕಾಣುತ್ತಿವೆ.

“ಐಪಿಎಲ್ ತಂಡಗಳಲ್ಲಿ ಆಟಗಾರರನ್ನು ಉಳಿಸಿಕೊಳ್ಳುವಿಕೆ ನಿಯಮಗಳು ಪ್ರಕಟವಾಗಬೇಕಾಗಿದೆ. ಎಲ್ಲವನ್ನೂ ನಿರ್ಧರಿಸಲು ಫ್ರಾಂಚೈಸಿಗಳು ಮತ್ತು ಮ್ಯಾನೇಜ್ಮೆಂಟ್​ಗೆ ಸಾಕಷ್ಟು ಸಮಯ ಉಳಿದಿದೆ. ಆದ್ದರಿಂದ ವಿವರಗಳು ಸ್ಪಷ್ಟವಾದ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇನೆ. ಸದ್ಯ ನಮ್ಮ ಅಂಗಳದಲ್ಲಿ ಚೆಂಡು ಇಲ್ಲ. ನಿಯಮಗಳನ್ನು ಆಧರಿಸಿ ಎಲ್ಲವೂ ನಡೆಯಲಿದೆ. ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಅಂತಿಮವಾಗಿ ಸಿಎಸ್​ಕೆ ಪರವಾಗಿ ಉತ್ತಮವಾದ ನಿರ್ಧಾರವನ್ನು ನಾನು ತೆಗೆದುಕೊಳ್ಳಬೇಕಾಗುತ್ತದೆ. ಅದುವೇ ಅಂತಿಮ ಗುರಿ” ಎಂದು ಧೋನಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Swapnil Kusale : ರೈಲ್ವೆ ಟಿಕೆಟ್​ ಕಲೆಕ್ಟರ್​ ಈಗ ಒಲಿಂಪಿಕ್​ ಹೀರೊ; ಧೋನಿಯಂತೆಯೇ ಸಾಧನೆ ಮಾಡಿ ಕಂಚು ಗೆದ್ದ ಶೂಟರ್​ ಸ್ವಪ್ನಿಲ್ ಕುಸಾಲೆ

ರುತುರಾಜ್ ಅವರ ನಾಯಕತ್ವದಲ್ಲಿ, ಸಿಎಸ್ಕೆ ಐಪಿಎಲ್ 2024 ರ ಪ್ಲೇ-ಆಫ್ಗೆ ಅರ್ಹತೆ ಪಡೆಯಲು ವಿಫಲವಾಯಿತು. 27 ವರ್ಷದ ರುತುರಾಜ್ ಫ್ರಾಂಚೈಸಿಯ ಮೊದಲ ನಾಯಕತ್ವದ ಬಗ್ಗೆ ಯಾವುದೇ ರೀತಿಯ ಪ್ರಶಂಸೆಗಳನ್ನು ಪಡೆಯಲಿಲ್ಲ. . ಪಂದ್ಯಗಳ ಮಧ್ಯದಲ್ಲಿ ಧೋನಿ ರುತುರಾಜ್​ಗೆ ಮಾರ್ಗದರ್ಶನ ನೀಡಿದ ಹಲವಾರು ಸಂದರ್ಭಗಳಿವೆ. ಇದು ರುತುರಾಜ್ ಫ್ರಾಂಚೈಸಿಯ ದೀರ್ಘಕಾಲೀನ ನಾಯಕ ಎಂಬ ವಿವರವನ್ನು ಸ್ಪಷ್ಟವಾಗಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Paris Olympics 2024 : ಲಕ್ಷ್ಯ ಮತ್ತು ಎಚ್.ಎಸ್.ಪ್ರಣಯ್ ಇಬ್ಬರೂ ಪರಸ್ಪರ ತಮ್ಮ ಸಾಮರ್ಥ್ಯವನ್ನು ಪಣಕ್ಕೊಡುವ ಮೂಲಕ ಪಂದ್ಯವು ಪ್ರಾರಂಭವಾಯಿತು. ಆರಂಭಿಕ ಪಂದ್ಯದ ಮೊದಲಾರ್ಧದಲ್ಲಿ ಆಟಗಾರರು ರ್ಯಾಲಿಗೆ ಹೆಚ್ಚು ಒತ್ತುಕೊಟ್ಟರು. ಅವರಿಬ್ಬರ ಆಟದ ಒಂದು ರ್ಯಾಲಿ 47 ಶಾಟ್​ಗಳ ತನಕ ಮುಂದುವರಿಯಿತು. ಇನ್ನು ಪಂದ್ಯದ ಆರಂಭದಲ್ಲಿಯೇ ಪ್ರಣಯ್ 1-5 ಹಿನ್ನಡೆ ಅನುಭವಿಸಿದ್ದರು. ಅದರಿಂದ ಪಾರಾಗಲು ಅವರಿಗೆ ಸಾಧ್ಯವೇ ಆಗಲಿಲ್ಲ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನ (Paris Olympics 2024) ಪುರುಷರ ಸಿಂಗಲ್ಸ್​ನಲ್ಲಿ ಭಾರತದವರೇ ಆದ ಎಚ್​ಎಸ್​ ಪ್ರಣಯ್ ಅವರನ್ನು ಸೋಲಿಸಿರುವ 22ರ ಹರೆಯದ ಲಕ್ಷ್ಯ ಸೇನ್ ಕ್ವಾರ್ಟರ್​​ ಫೈನಲ್ಸ್​ಗೆ ಪ್ರವೇಶ ಪಡೆದಿದ್ದಾರೆ. ಲಾ ಚಾಪೆಲ್ ಅರೆನಾ ಕೋರ್ಟ್ 3ರಲ್ಲಿ ನಡೆದ ಪಂದ್ಯದಲ್ಲಿ ಲಕ್ಷ್ಯ 21-12, 21-6 ಅಂತರದಲ್ಲಿ ಪ್ರಣಯ್ ವಿರುದ್ಧ ಭರ್ಜರಿ ಜಯ ಸಾಧಿಸಿದರು.

ವಿಯೆಟ್ನಾಂನ ಲೆ ಡುಕ್ ಫಾಟ್ ವಿರುದ್ಧದ ನಿನ್ನೆಯ ಪಂದ್ಯದ ನಂತರ ದಣಿದಿದ್ದ ಪ್ರಣಯ್ ಅವರಿಂದ ಲಕ್ಷ್ಯ ಹೆಚ್ಚು ಪ್ರತಿಕ್ರಿಯೆ ಪಡೆಯಲಿಲ್ಲ. . ಪ್ರಣಯ್ ಅವರು ಫಾಟ್​​ ವಿರುದ್ಧ 3 ಗೇಮ್​ಗಳ ರೋಚಕ ಪಂದ್ಯವನ್ನು ಗೆದ್ದಿದ್ದರು. ಕಳೆದ ತಿಂಗಳ ಆರಂಭದಲ್ಲಿ ಚಿಕೂನ್ ಗುನ್ಯಾಕ್ಕೆ ಒಳಗಾಗಿದ್ದ ಅವರು ಬುಧವಾರದ ಆಟದಿಂದಾಗಿ ದಣಿದಿದ್ದರು. ಪ್ರಣಯ್ ಪಂದ್ಯದ ಎರಡನೇ ಗೇಮ್ ನ ಅರ್ಧದಲ್ಲೇ ಸುಸ್ತಾದರು. ಲಕ್ಷ್ಯ ಆಟದಲ್ಲಿ 11-3 ರಿಂದ ಮುನ್ನಡೆ ಸಾಧಿಸಿದಾಗಲೇ ಅವರು ನಿರಾಸೆ ಗೊಂಡಿದ್ದರು. ಅಂತಿಮವಾಗಿ 6-21 ರಿಂದ ಸೋತರು/ ಅವರ ಚೊಚ್ಚಲ ಮತ್ತು ಬಹುಶಃ ಅಂತಿಮ ಒಲಿಂಪಿಕ್ ಪ್ರದರ್ಶನ ಇದಾಗಿದೆ.

ಲಕ್ಷ್ಯ ಮತ್ತು ಎಚ್.ಎಸ್.ಪ್ರಣಯ್ ಇಬ್ಬರೂ ಪರಸ್ಪರ ತಮ್ಮ ಸಾಮರ್ಥ್ಯವನ್ನು ಪಣಕ್ಕೊಡುವ ಮೂಲಕ ಪಂದ್ಯವು ಪ್ರಾರಂಭವಾಯಿತು. ಆರಂಭಿಕ ಪಂದ್ಯದ ಮೊದಲಾರ್ಧದಲ್ಲಿ ಆಟಗಾರರು ರ್ಯಾಲಿಗೆ ಹೆಚ್ಚು ಒತ್ತುಕೊಟ್ಟರು. ಅವರಿಬ್ಬರ ಆಟದ ಒಂದು ರ್ಯಾಲಿ 47 ಶಾಟ್​ಗಳ ತನಕ ಮುಂದುವರಿಯಿತು. ಇನ್ನು ಪಂದ್ಯದ ಆರಂಭದಲ್ಲಿಯೇ ಪ್ರಣಯ್ 1-5 ಹಿನ್ನಡೆ ಅನುಭವಿಸಿದ್ದರು. ಅದರಿಂದ ಪಾರಾಗಲು ಅವರಿಗೆ ಸಾಧ್ಯವೇ ಆಗಲಿಲ್ಲ.

ಆರಂಭಿಕ ಗೇಮ್ ನ ವಿರಾಮದ ವೇಳೆಗೆ ಲಕ್ಷ್ಯ 11-6ರಲ್ಲಿ ಮುನ್ನಡೆ ಸಾಧಿಸಿದರು. ಪ್ರಣಯ್ 7-13 ಅಂತರದಲ್ಲಿ ಹಿನ್ನಡೆ ಅನುಭವಿಸಿದ ಹೊರತಾಗಿಯೂ ತಿರುಗೇಟು ನೀಡಲು ಯತ್ನಿಸಿದರು. ಅನುಭವಿ ಶಟ್ಲರ್ ತನ್ನ ಫೋರ್​ಹ್ಯಾಂಡ್​ ಮೂಲಕ ಕ್ರಾಸ್-ಕೋರ್ಟ್ ಸ್ಮ್ಯಾಶ್ ಹೊಡೆಯಲು ಮುಂದಾದರು. ಹೀಗಾಗಿ ಪ್ರಣಯ್ ಅವರಿಂದ ಲಕ್ಷ್ಯ ಒಂದೆರಡು ಬಾರಿ ತೊಂದರೆಗೀಡಾದರಯ, ಬಳಿಕ ಅವರು ತಮ್ಮ ದಾಳಿಯ ವೈಖರಿ ಬದಲಾಯಿಸಿದರು. ಲಕ್ಷ್ಯ ತಮ್ಮ ಡೌನ್-ದಿ-ಲೈನ್ ಸ್ಮ್ಯಾಶ್ ಆಡಲು ಆರಂಭಿಸಿದರು. ಇದು ಪ್ರಣಯ್​ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತು.

ಇದನ್ನೂ ಓದಿ: Diksha Dagar : ಗಾಲ್ಫರ್​ ದೀಕ್ಷಾ ದಾಗರ್​ ಪ್ರಯಾಣಿಸುತ್ತಿದ್ದ ಕಾರು ಪ್ಯಾರಿಸ್​​ನಲ್ಲಿ ಅಪಘಾತ

ಎರಡನೇ ಗೇಮ್ ನಲ್ಲಿ ಪ್ರಣಯ್ ವಿರುದ್ಧ ಲಕ್ಷ್ಯ ಭರ್ಜರಿ ಮುನ್ನಡೆ ಸಾಧಿಸಿದರು ಅನುಭವಿ ಆಟಗಾರನನ್ನು ಲಕ್ಷ್ಯ ಮೀರಿಸಿದರು, ಅವರು ತಮ್ಮ ಜೀವನದ ಅತ್ಯುತ್ತಮ ಫಾರ್ಮ್​ನಲ್ಲಿ ಇರುವುದನ್ನು ತೋರಿಸಿದರು. ಲಕ್ಷ್ಯ ಕ್ವಾರ್ಟರ್ ಫೈನಲ್​​ನಲ್ಲಿ ಚೈನೀಸ್ ತೈಪೆಯ ಚೌ ಟಿಯೆನ್ ಚೆನ್ ಅವರನ್ನು ಎದುರಿಸಲಿದ್ದಾರೆ. ಲಕ್ಷ್ಯ 34 ವರ್ಷದ ಅನುಭವಿ ಆಟಗಾರನನ್ನು ನಾಲ್ಕು ಬಾರಿ ಎದುರಿಸಿದ್ದಾರೆ. 1-3 ರ ದಾಖಲೆಯನ್ನು ಹೊಂದಿದ್ದಾರೆ. ಇವರಿಬ್ಬರು ಕೊನೆಯ ಬಾರಿಗೆ ಸಿಂಗಾಪುರ್ ಓಪನ್ 2023 ರಲ್ಲಿ ಮುಖಾಮುಖಿಯಾಗಿದ್ದರು. ಅಲ್ಲಿ ಲಕ್ಷ್ಯ 3 ಗೇಮ್ ಗಳ ಹೋರಾಟದಲ್ಲಿ ಚೌಗೆ ತಲೆಬಾಗಿದ್ದರು.

Continue Reading

ದೇಶ

Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Wayanad Landslide: ಭಾರಿ ಮಳೆಯ ಬಳಿಕ ವಯನಾಡಿನ ಸುಮಾರು 80 ಸಾವಿರ ಚದರ ಮೀಟರ್‌ ಭೂಮಿಯು ಕುಸಿದಿದ್ದು, ಸುಮಾರು 8 ಕಿಲೋಮೀಟರ್‌ವರೆಗೆ ಅವಶೇಷವು ಹರಿದುಕೊಂಡು ಹೋಗಿದೆ. ಮೃತಪಟ್ಟವರ ಸಂಖ್ಯೆ ಈಗ 291ಕ್ಕೆ ಏರಿಕೆಯಾಗಿದ್ದು, ಇನ್ನೂ ಸುಮಾರು 200 ಜನ ನಾಪತ್ತೆಯಾಗಿದ್ದಾರೆ. ಮತ್ತೊಂದೆಡೆ ಸಂತ್ರಸ್ತರಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸಾಂತ್ವನ ಹೇಳಿದರು.

VISTARANEWS.COM


on

Wayanad Landslide
Koo

ತಿರುವನಂತಪುರಂ: ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೀಕರ ಭೂಕುಸಿತಕ್ಕೆ ಕೇರಳದ ವಯನಾಡು ಈಗ ಸೂತಕದ ಮನೆಯಂತಾಗಿದೆ. ಭೂಕುಸಿತದಲ್ಲಿ (Wayanad Landslide) ಮೃತಪಟ್ಟವರ ಸಂಖ್ಯೆ ಈಗ 291ಕ್ಕೆ ಏರಿಕೆಯಾಗಿದ್ದು, ಇನ್ನೂ ಸುಮಾರು 200 ಜನ ನಾಪತ್ತೆಯಾಗಿದ್ದು, ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನದಿಗಳಲ್ಲಿ, ಬೆಟ್ಟ ಕುಸಿತದ ಅವಶೇಷಗಳ ಅಡಿಯಲ್ಲಿ ಶವಗಳು ಸಿಗುತ್ತಿವೆ. ಇದರ ಮಧ್ಯೆಯೇ, ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ವಯನಾಡಿಗೆ ಭೇಟಿ ನೀಡಿದ್ದು, ಸಂತ್ರಸ್ತ ಕುಟುಂಬಗಳ ಜತೆ ಅವರು ಮಾತುಕತೆ ನಡೆಸಿದ್ದಾರೆ.

ವಯನಾಡು ಜಿಲ್ಲೆಯ ಮೆಪ್ಪಾಡಿ ಹಾಗೂ ಚೂರಲ್‌ಮಲ ಪ್ರದೇಶಗಳ ಗ್ರಾಮಗಳು ಸಂಪೂರ್ಣವಾಗಿ ಮಸಣದಂತಾಗಿವೆ. ಈ ಪ್ರದೇಶಗಳಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡಿರುವ, ನೀರಿನಲ್ಲಿ ಮನೆಗಳು ಕೊಚ್ಚಿ ಹೋಗಿ ನಿರಾಶ್ರಿತರಾಗಿರುವ ಸಂತ್ರಸ್ತರನ್ನು ಭೇಟಿಯಾದ ಅವರು, ಆತ್ಮಸ್ಥೈರ್ಯ ತುಂಬಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಹಾನಿಯ ವೀಕ್ಷಣೆ ಮಾಡಿದರು.

ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ

ವಯನಾಡು ಜಿಲ್ಲೆಯ ಹಲವೆಡೆ ಸಂಚರಿಸಿದ ಬಳಿಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. “ವಯನಾಡು ಜನರ ಸ್ಥಿತಿಯನ್ನು ನೋಡಿದಾಗ ನನ್ನ ತಂದೆ ಸಾವಿನ ದಿನ, ಆ ದುಃಖವೇ ಆಯಿತು. ಜನರು ತಂದೆ, ತಾಯಿ ಜತೆಗೆ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ಇಡೀ ದೇಶದ ಗಮನವೇ ಈಗ ವಯನಾಡು ಮೇಲಿದೆ. ನಾವೆಲ್ಲರೂ ವಯನಾಡು ಪರವಾಗಿ ನಿಲ್ಲೋಣ. ಇದು ಕೇವಲ ವಯನಾಡಿನ ದುರಂತ ಅಲ್ಲ, ರಾಜ್ಯ ಹಾಗೂ ದೇಶದ ದುರಂತವಾಗಿದೆ” ಎಂದು ಭಾವುಕರಾಗಿ ಹೇಳಿದರು.

“ನಾವು ಇಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಲು, ಜನರ ಪರವಾಗಿ ನಿಲ್ಲಲು ಬಂದಿದ್ದೇವೆ. ಕುಟುಂಬಸ್ಥರು ಹಾಗೂ ಮನೆಗಳನ್ನು ಕಳೆದುಕೊಂಡವರ ದುಃಖವನ್ನು ನೋಡಲು ಬೇಸರವಾಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನರಿಗೆ ಏನು ಹೇಳಬೇಕು, ಯಾವ ರೀತಿ ಸಾಂತ್ವನ ಹೇಳಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಸರ್ಕಾರಗಳು ಈಗ ಜನರ ಪರವಾಗಿ ನಿಲ್ಲಬೇಕು. ಅವರ ರಕ್ಷಣೆ, ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು. ಜನರು ಅನುಭವಿಸುತ್ತಿರುವ ಕಷ್ಟವನ್ನು ಕಲ್ಪನೆ ಕೂಡ ಮಾಡಿಕೊಳ್ಳಲು ಆಗುತ್ತಿಲ್ಲ” ಎಂದರು.

ಪ್ರಿಯಾಂಕಾ ವಾದ್ರಾ ಅವರು ಪರಿಹಾರ ಕೇಂದ್ರಗಳಿಗೂ ತೆರಳಿ, ಸಂತ್ರಸ್ತರ ಜತೆ ಮಾತನಾಡಿದರು. ಇದಾದ ಬಳಿಕ ಮಾತನಾಡಿದ ಅವರು, “ನಾವು ಜನರಿಗೆ ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ನೆರವಾಗಲು ಬಂದಿದ್ದೇವೆ. ಪರಿಸ್ಥಿತಿ ತುಂಬ ಭೀಕರವಾಗಿದೆ” ಎಂದು ಹೇಳಿದರು. ಭಾರಿ ಮಳೆಯ ಬಳಿಕ ವಯನಾಡಿನ ಸುಮಾರು 80 ಸಾವಿರ ಚದರ ಮೀಟರ್‌ ಭೂಮಿಯು ಕುಸಿದಿದ್ದು, ಸುಮಾರು 8 ಕಿಲೋಮೀಟರ್‌ವರೆಗೆ ಅವಶೇಷವು ಹರಿದುಕೊಂಡು ಹೋಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ದಿನೇದಿನೆ ಜಾಸ್ತಿಯಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Continue Reading

ಕ್ರೀಡೆ

Diksha Dagar : ಗಾಲ್ಫರ್​ ದೀಕ್ಷಾ ದಾಗರ್​ ಪ್ರಯಾಣಿಸುತ್ತಿದ್ದ ಕಾರು ಪ್ಯಾರಿಸ್​​ನಲ್ಲಿ ಅಪಘಾತ

Diksha Dagar : ಮಂಗಳವಾರ ಸಂಜೆ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಆಕೆಯ ಪೋಷಕರು ಮತ್ತು ಸಹೋದರ ಕಾರಿನಲ್ಲಿದ್ದರು. ದೀಕ್ಷಾ ಮತ್ತು ಆಕೆಯ ತಂದೆ ಸ್ವಲ್ಪವೂ ಗಾಯಗಳು ಇಲ್ಲದೇ ಪಾರಾಗಿದ್ದಾರೆ. ಆದರೆ ತಾಯಿ ಬೆನ್ನುನೋವಿಗೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಸಮಯದಲ್ಲಿ ದೀಕ್ಷಾ ಅವರ ಸಹೋದರನಿಗೆ ತರಚು ಗಾಯಗಳಾಗಿವೆ.

VISTARANEWS.COM


on

Diksha Daga
Koo

ಬೆಂಗಳೂರು: ಒಲಿಂಪಿಕ್ಸ್​ಗಾಗಿ (Paris Olympics 2024) ಫ್ರಾನ್ಸ್​ಗೆ ತೆರಳಿದ್ದ ಭಾರತೀಯ ಗಾಲ್ಫ್ ಆಟಗಾರ್ತಿ ದೀಕ್ಷಾ ದಾಗರ್ (Diksha Dagar) ಜುಲೈ 30 ರಂದು ರಾParis Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲುಜಧಾನಿ ಪ್ಯಾರಿಸ್​​ನಲ್ಲಿ ಕಾರು ಅಪಘಡಕ್ಕೆ ಒಳಗಾಗಿದ್ದಾರೆ. ಅದೃಷ್ಟವಶಾತ್​ 23 ವರ್ಷದ ಗಾಲ್ಫ್ ಆಟಗಾರ್ತಿ ಗಾಯಗಳಿಂದ ಪಾರಾಗಿದ್ದಾರೆ. ಅಲ್ಲದೆ, ಪ್ಯಾರಿಸ್ ಒಲಿಂಪಿಕ್ಸ್​​ನ ಮಹಿಳಾ ವೈಯಕ್ತಿಕ ಗಾಲ್ಫ್ ಸ್ಪರ್ಧೆಗೆ ಇಳಿಯುವುದಾಗಿ ಹೇಳಿದ್ದಾರೆ. ದೀಕ್ಷಾ ಅವರ ಸ್ಪರ್ಧೆಯು ಆಗಸ್ಟ್ 7ರಂದು ಪ್ರಾರಂಭವಾಗಲಿದೆ.

ಮಂಗಳವಾರ ಸಂಜೆ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಆಕೆಯ ಪೋಷಕರು ಮತ್ತು ಸಹೋದರ ಕಾರಿನಲ್ಲಿದ್ದರು. ದೀಕ್ಷಾ ಮತ್ತು ಆಕೆಯ ತಂದೆ ಸ್ವಲ್ಪವೂ ಗಾಯಗಳು ಇಲ್ಲದೇ ಪಾರಾಗಿದ್ದಾರೆ. ಆದರೆ ತಾಯಿ ಬೆನ್ನುನೋವಿಗೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಸಮಯದಲ್ಲಿ ದೀಕ್ಷಾ ಅವರ ಸಹೋದರನಿಗೆ ತರಚು ಗಾಯಗಳಾಗಿವೆ.

ಅದೃಷ್ಟದ ಅವಕಾಶ

ಕುತೂಹಲಕಾರಿ ಸಂಗತಿಯೆಂದರೆ, ದಕ್ಷಿಣ ಆಫ್ರಿಕಾದ ಗಾಲ್ಫ್ ಆಟಗಾರ್ತಿ ಪೌಲಾ ರೆಟೊ ಹಿಂದೆ ಸರಿದ ಕಾರಣ ಅವರಿಗೆ ಟೋಕಿಯೊ 2020ರಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿತ್ತು. ಅಲ್ಲಿ ದೀಕ್ಷಾ ಟಿ -50 ಅನ್ನು ಪೂರ್ಣಗೊಳಿಸಿದ್ದರು. ಇದೀಗ ಪ್ಯಾರಿಸ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿಯನ್ನು ಹೊಂದಿದ್ದಾರೆ. ಕಿವುಡರ ಒಲಿಂಪಿಕ್ಸ್ ಎರಡರ ಭಾಗವಾಗಿದ್ದ ಏಕೈಕ ಗಾಲ್ಫ್ ಆಟಗಾರ್ತಿ ದೀಕ್ಷಾ. ಅವರು 2017 ರಲ್ಲಿ ಬೆಳ್ಳಿ ಮತ್ತು 2022 ರಲ್ಲಿ ಕಿವುಡರ ವಿಭಾಗದಲ್ಲಿ ಚಿನ್ನ ಗೆದ್ದಿದ್ದರು.

ಇದನ್ನೂ ಓದಿ: Rohit Sharma : ಟಿ20 ನಿವೃತ್ತಿಯಲ್ಲ, ಅದು ವಿಶ್ರಾಂತಿ; ಕೌತುಕ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

ಇದೇ ವೇಳೆ ಶುಭಂಕರ್ ಶರ್ಮಾ ಮತ್ತು ಗಗನ್ಜೀತ್ ಭುಲ್ಲರ್ ಪುರುಷರ ವೈಯಕ್ತಿಕ ಸ್ಪರ್ಧೆಗೆ ಇಳಿಯಲಿದ್ದಾರೆ. ಭಾರತವು ಆಗಸ್ಟ್ 7 ರ ಗುರುವಾರ ಗಾಲ್ಫನ್​ನಲ್ಲಿ ತನ್ನ ಅಭಿಯಾನ ಪ್ರಾರಂಭಿಸಲಿದೆ. ಈ ಸವಾಲಿನ ಸಮಯದಲ್ಲಿ ದೀಕ್ಷಾ ಮತ್ತು ಅವರ ಕುಟುಂಬಕ್ಕೆ ಬೆಂಬಲವಾಗಿ ಭಾರತೀಯ ಕ್ರೀಡಾ ಸಮುದಾಯವು ಒಗ್ಗಟ್ಟಿನಿಂದ ನಿಂತಿದೆ.

Continue Reading

ದೇಶ

Puja Khedkar: ಮಾಜಿ ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮತ್ತೊಂದು ಸಂಕಷ್ಟ; ಜಾಮೀನು ಅರ್ಜಿ ವಜಾ

Puja Khedkar: ನಕಲಿ ದಾಖಲೆ ಸೃಷ್ಟಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೇಡರ್‌ನ ಟ್ರೈನಿ ಐಎಎಸ್‌ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ. ಹಾಗೆಯೇ, ಭವಿಷ್ಯದಲ್ಲಿ ಯಾವುದೇ ಪರೀಕ್ಷೆಯನ್ನು ಬರೆಯುವುದರಿಂದ ಅವರನ್ನು ನಿಷೇಧಿಸಿ ಕೇಂದ್ರ ಲೋಕಸೇವಾ ಆಯೋಗವು ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ಕೋರ್ಟ್‌ ವಜಾಗೊಳಿಸಿದೆ.

VISTARANEWS.COM


on

Puja Khedkar
Koo

ನವದೆಹಲಿ: ನಕಲಿ ಅಂಗವಿಕಲ ಪ್ರಮಾಣಪತ್ರ, ನಕಲಿ ಗುರುತಿನ ದಾಖಲೆ, ತಂದೆ-ತಾಯಿ ಹೆಸರು ಬದಲಾಯಿಸಿ ನಕಲಿ ಸರ್ಟಿಫಿಕೇಟ್‌ ಸೃಷ್ಟಿ, ಒಬಿಸಿ ಎಂದು ಕೂಡ ಸುಳ್ಳು ದಾಖಲೆ (Fake Documents) ಸಲ್ಲಿಸಿ, ಐಎಎಸ್‌ ಪಾಸಾಗಿ, ಟ್ರೈನಿ ಅಧಿಕಾರಿಯಾಗಿದ್ದಾಗಲೇ ದರ್ಪ ತೋರಿಸಿದ ಮಹರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್‌ (Puja Khedkar) ಅವರ ನೇಮಕವನ್ನು ಯುಪಿಎಸ್‌ಸಿಯು ಅನೂರ್ಜಿತಗೊಳಿಸಿದೆ. ಇದರ ಬೆನ್ನಲ್ಲೇ, ದೆಹಲಿ ನ್ಯಾಯಾಲಯ ಪೂಜಾ ಖೇಡ್ಕರ್‌ ಸಲ್ಲಿಸಿದ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯನ್ನು ನಿರಾಕರಿಸಿದೆ. ಇದು ಮಾಜಿ ಟ್ರೈನಿ ಅಧಿಕಾರಿಗೆ ಮತ್ತೊಂದು ಸಂಕಷ್ಟ ತಂದಿದೆ.

ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ದೇವೇಂದರ್‌ ಕುಮಾರ್‌ ಜಂಗಾಲ ಅವರು ನಿರೀಕ್ಷಣಾ ಅರ್ಜಿಯನ್ನು ವಜಾಗೊಳಿಸಿದರು. ಹಾಗೆಯೇ, “ಬೇರೆ ಅಭ್ಯರ್ಥಿಗಳು ಕೂಡ ಇದೇ ರೀತಿ ಮೀಸಲಾತಿಯ ಕುರಿತು ನಕಲಿ ದಾಖಲೆ ಸೃಷ್ಟಿಸಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಬೇಕು. ವಯಸ್ಸು, ಜಾತಿ, ವಿಶೇಷ ಚೇತನ ಎಂಬುದಾಗಿ ನಕಲಿ ದಾಖಲೆ ಸೃಷ್ಟಿ ಸೇರಿ ಹಲವು ರೀತಿಯ ತಪಾಸಣೆ ಮಾಡಬೇಕು” ಎಂಬುದಾಗಿ ಪೊಲೀಸರಿಗೆ ಸೂಚನೆ ನೀಡಿದರು.

ನಕಲಿ ದಾಖಲೆ ಸೃಷ್ಟಿ ಸೇರಿ ಪೂಜಾ ಖೇಡ್ಕರ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆಗಾಗಿ ಯುಪಿಎಸ್‌ಸಿಯು ಆಯೋಗ ಒಂದನ್ನು ರಚಿಸಿತ್ತು. ಆಯೋಗದ ವರದಿಯಲ್ಲಿ ಪೂಜಾ ಖೇಡ್ಕರ್‌ ತಪ್ಪೆಸಗಿದ್ದು, ನಕಲಿ ದಾಖಲೆ ಸೃಷ್ಟಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಯುಪಿಎಸ್‌ಸಿ ಕಠಿಣ ಕ್ರಮ ತೆಗೆದುಕೊಂಡಿದೆ. ಇವರನ್ನು ಸೇವೆಯಿಂದ ವಜಾಗೊಳಿಸುವ ಜತೆಗೆ ಯುಪಿಎಸ್‌ಸಿ ಕೈಗೊಳ್ಳುವ ಯಾವುದೇ ಪರೀಕ್ಷೆಯಲ್ಲಿ ಪಾಲ್ಗೊಳ್ಳದಂತೆ ನಿಷೇಧ ಹೇರಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸಿದ್ದರು. ಈಗ ಅವರ ವಿರುದ್ಧದ ಆರೋಪಗಲು ಸಾಬೀತಾದ ಹಿನ್ನೆಲೆಯಲ್ಲಿ ಯುಪಿಎಸ್‌ಸಿಯು ಮಹತ್ವದ ಕ್ರಮ ತೆಗೆದುಕೊಂಡಿದೆ.

Pooja Khedkar
Pooja Khedkar

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿದ್ದ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದರು. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿತ್ತು. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿತ್ತು.

ಇದನ್ನೂ ಓದಿ: Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

Continue Reading
Advertisement
utthana vaarshika katha spardhe the last date for submission of the story is october 10
ಬೆಂಗಳೂರು11 mins ago

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

World Breastfeeding Week
ಆರೋಗ್ಯ25 mins ago

World Breastfeeding Week: ವಿಶ್ವ ಸ್ತನ್ಯಪಾನ ಸಪ್ತಾಹ; ಹಾಲುಣಿಸಿದರೆ ಮಗುವಿಗೆ ಮಾತ್ರವಲ್ಲ, ತಾಯಿಗೂ ಲಾಭ!

Saree Fashion
ಫ್ಯಾಷನ್31 mins ago

Saree Fashion: ಕಂಟೆಂಪರರಿ ಪ್ರಿಂಟೆಡ್‌ ವಿನ್ಯಾಸದಲ್ಲೂ ಬಂತು ಆರ್ಗನ್ಜಾ ಸೀರೆ!

kotak bank smart watch
ವಾಣಿಜ್ಯ34 mins ago

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

Paris Olympics 2024
ಪ್ರಮುಖ ಸುದ್ದಿ39 mins ago

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Wayanad Landslide
ದೇಶ43 mins ago

Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Central government to distribute free food grains to 80 crore beneficiaries of the country says Pralhad Joshi
ದೇಶ46 mins ago

Pralhad Joshi: ಕೇಂದ್ರ ಸರ್ಕಾರದಿಂದ 80 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ; ಪ್ರಲ್ಹಾದ್‌ ಜೋಶಿ

ICW 2024
ಫ್ಯಾಷನ್2 hours ago

ICW 2024: ಟ್ರೆಂಡ್‌ ಲಿಸ್ಟ್‌ಗೆ ಸೇರಿದ ಇಂಡಿಯಾ ಕೌಚರ್‌ ವೀಕ್‌ನ ಡಿಸೈನರ್‌ ವೇರ್‌ಗಳಿವು!

Diksha Daga
ಕ್ರೀಡೆ2 hours ago

Diksha Dagar : ಗಾಲ್ಫರ್​ ದೀಕ್ಷಾ ದಾಗರ್​ ಪ್ರಯಾಣಿಸುತ್ತಿದ್ದ ಕಾರು ಪ್ಯಾರಿಸ್​​ನಲ್ಲಿ ಅಪಘಾತ

Puja Khedkar
ದೇಶ2 hours ago

Puja Khedkar: ಮಾಜಿ ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮತ್ತೊಂದು ಸಂಕಷ್ಟ; ಜಾಮೀನು ಅರ್ಜಿ ವಜಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ8 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ8 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌