Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ - Vistara News

ಮಳೆ

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Karnataka Weather forecast : ನೈರುತ್ಯ ಮುಂಗಾರು ಸಕ್ರಿಯಗೊಂಡಿದ್ದು, ರಾಜ್ಯಾದ್ಯಂತ ಮಳೆಯು (Rain News) ವ್ಯಾಪ್ತಿಸುತ್ತಿದೆ. ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಆಗಸ್ಟ್‌ 5ರವರೆಗೆ ಮುಂದುವರಿಯಲಿದೆ.

VISTARANEWS.COM


on

karnataka Weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ (Rain News) ಅಬ್ಬರ (Karnataka Weather Forecast) ಮುಂದುವರಿದಿದ್ದು, ಫಲ್ಗುಣಿ ನದಿ ಉಕ್ಕಿ ಹರಿಯುತ್ತಿದೆ. ವಾಮಂಜೂರು ಶ್ರೀಅಮೃತೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದೆ. ದೇವಸ್ಥಾನದ ಒಳ ಪ್ರಾಂಗಣ ಸಂಪೂರ್ಣ ಜಲಾವೃತವಾಗಿದ್ದು, ದೇವಸ್ಥಾನದ ಸುತ್ತಲೂ ಫಲ್ಗುಣಿ ನದಿ ನೀರು ಆವರಿಸಿದೆ. ಕಳೆದ 30 ವರ್ಷದ ಬಳಿಕ ಇದೇ ಮೊದಲ ಬಾರಿಗೆ ದೇವಸ್ಥಾನಕ್ಕೆ ನೀರು ನುಗ್ಗಿದೆ. ಕ್ಷಣ ಕ್ಷಣಕ್ಕೂ ಫಲ್ಗುಣಿ ನದಿಯ ನೀರು ಏರಿಕೆಯಾಗುತ್ತಿದ್ದು, ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಪಲ್ಗುಣಿ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಮಂಗಳೂರು ನಗರ ಹೊರವಲಯದ ಪಡುಶೆಡ್ಡೆಯ ಸುಮಾರು 20ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ನೆರೆ ಬಾಧಿತ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರು ಏರಿಕೆ ಆಗುತ್ತಿದ್ದು, ನದಿ ತೀರದ ಹಲವು ಮನೆಗಳು, ಕೃಷಿ ಭೂಮಿಗಳು ಜಲಾವೃತಗೊಂಡಿದೆ. ಪಲ್ಗುಣಿ ನದಿಯ ಮಧ್ಯ ಭಾಗದಲ್ಲಿ ಡ್ರೆಜ್ಜಿಂಗ್ ಬೋಟ್ ಸಿಲುಕಿದೆ. ರಾತ್ರಿ ಸುರಿದ ಮಹಾಮಳೆಗೆ ಪಲ್ಗುಣಿ ನದಿ ಉಕ್ಕಿದ್ದು, ಬಂಟ್ವಾಳ ತಾಲೂಕಿನ ಅಮ್ಮುಂಜೆಯ ಏಳು ಮನೆಗಳು ಜಲಾವೃತಗೊಂಡು, ಅಮ್ಮುಂಜೆ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀರು ನುಗ್ಗಿದೆ. ಬಂಟ್ವಾಳ ಸಿದ್ಧಕಟ್ಟೆ ಸಮೀಪದ ಅಂಗಾರಕರಿಯ ಸೇತುವೆ ಮೇಲೆ ನೀರು ಹರಿದಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ

ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿದ್ದು, ನದಿಗೆ 1,67,443 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಮತ್ತೆ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಕಂಪ್ಲಿ ಸೇತುವೆ ಮುಳುಗಡೆಯಾದ ಕಾರಣಕ್ಕೆ ಬಳ್ಳಾರಿ- ಗಂಗಾವತಿ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಿಂದ ಮೂರು ಅಡಿ ನೀರು ಹರಿಯುತ್ತಿದೆ. ಹೀಗಾಗಿ ಕಂಪ್ಲಿ ಕೋಟೆಯ ಪ್ರದೇಶಕ್ಕೆ ನದಿ ನೀರು ನುಗ್ಗಿದೆ. ಕಂಪ್ಲಿ ಕೋಟೆ ಪ್ರದೇಶದ ಹೊಳೆ ಆಂಜನೇಯ, ಪ್ರಸನ್ನ ವೆಂಕಟರಮಣ ದೇವಸ್ಥಾನ ಜಲಾವೃತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಕೋಟೆ ಪ್ರದೇಶದ ಜನರನ್ನ ಸ್ಥಳಾಂತರ ಮಾಡಲಾಗಿತ್ತು.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ವಿಜಯನಗರ ಜಿಲ್ಲೆಯಲ್ಲಿ ರಸ್ತೆ, ಭತ್ತದ ಗದ್ದೆಗಳು ಜಲಾವೃತವಾಗಿದೆ. ಮಕರಬ್ಬಿ-ಬ್ಯಾಲಾಹುಣಸೆ ಗ್ರಾಮದ ರಸ್ತೆ ಸಂಪೂರ್ಣ ಬಂದ್ ಆಗಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಗ್ರಾಮಗಳ ಹತ್ತಾರು ಎಕರೆ ಭತ್ತದ ಜಮೀನಿಗೆ ನೀರು ನುಗ್ಗಿದ್ದರಿಂದ ಸಂಪೂರ್ಣ ನೀರು ಪಾಲಾಗಿದೆ. ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶಗಳಲ್ಲಿ ಸಂಕಷ್ಟ ಎದುರಾಗಿದೆ. ನದಿಪಾತ್ರದ 22 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ನಾಳೆ ವ್ಯಾಪಕ ಮಳೆ ಎಚ್ಚರಿಕೆ

ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 23 ಸೆ.ಮೀ, ಉತ್ತರ ಕನ್ನಡದ ಅಂಕೋಲಾದಲ್ಲಿ 20 ಸೆ.ಮೀ ಮಳೆಯಾಗಿದೆ.

ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಕರಾವಳಿ ತೀರದಲ್ಲಿ ಟ್ರಫ್ ಮುಂದುವರೆದಿದೆ. ಸಿಯರ್ ಝೋನ್ 20° ಉತ್ತರ ಅಂಕ್ಷಾಂಶದಲ್ಲಿ 4.5ಕಿ.ಮೀ ಯಿಂದ  5.8 ಕಿ.ಮೀ ವರೆಗೆ ಸುಳಿಗಾಳಿ ಇದೆ. ಇದರ ಪರಿಣಾಮ ಕರಾವಳಿ ಜಿಲ್ಲೆಗಳಿಗೆ ಆಗಸ್ಟ್‌ 5ರ ವರೆಗೆ ವ್ಯಾಪಕ ಮಳೆ ಆಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Hosanagara News: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Hosanagara News: ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ, ನೊಂದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ಧನ ವಿತರಿಸಿದರು.

VISTARANEWS.COM


on

MLA Belur Gopalakrishna visits and inspects flood affected areas in hosanagara taluk
Koo

ಹೊಸನಗರ: ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ, ನೊಂದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ಧನ (Hosanagara News) ವಿತರಿಸಿದರು.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಹೊಸನಗರ ತಾಲೂಕಿನಲ್ಲಿ ಅತಿವೃಷ್ಟಿಯಿಂದ 13.75 ಕೋಟಿ ರೂಪಾಯಿಗಳ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, 165 ಕಿಲೋ ಮೀಟರ್ ರಸ್ತೆ ಹಾಗೂ ಹೊಸನಗರ ತಾಲೂಕಿನಲ್ಲಿ ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ಇತರೆ ಸರ್ಕಾರಿ, ಖಾಸಗಿ ಸ್ವತ್ತುಗಳಿಗೆ ಸೇರಿ 147 ಆಸ್ತಿಗಳಿಗೆ ಹಾನಿ ಉಂಟಾಗಿದೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ, ಹಾಲೇಶ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ, ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಆಚಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಗೌಡ, ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್ ಹೆಗಡೆ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪುಟ್ಟ ನಾಯಕ್, ಕಾಂಗ್ರೆಸ್ ಘಟಕ ಅಧ್ಯಕ್ಷ ಗಣಪತಿ, ಸಣ್ಣಕ್ಕಿ ಮಂಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಮಳೆ

Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

Karnataka Rain : ಭಾರಿ ಮಳೆಗೆ ಅವಾಂತರಗಳು ಮುಂದುವರಿದಿದೆ. ಕೃಷ್ಣಾ ನದಿ ಪ್ರವಾಹದ ಅಬ್ಬರಕ್ಕೆ ಎನ್‌ಡಿಆರ್‌ಎಫ್‌ ಸಿಬ್ಬಂದಿಯ ಬೋಟ್‌ ಪಲ್ಟಿ ಹೊಡೆದಿದೆ. ಮತ್ತೊಂದು ಕಡೆ ಮಳೆಗೆ ಮನೆ ಗೋಡೆ ಬಿದ್ದು, ಪಕ್ಕದಲ್ಲಿದ್ದ ಎತ್ತುಗಳು ಮೃತಪಟ್ಟಿವೆ.

VISTARANEWS.COM


on

By

karnataka rain
Koo

ಚಿಕ್ಕೋಡಿ/ಬೆಳಗಾವಿ: ಭಾರಿ ಮಳೆಗೆ (Karnataka Rain) ಕೃಷ್ಣಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ಬೋಟ್ ಪಲ್ಟಿಯಾಗಿದೆ. ಚಿಕ್ಕೋಡಿಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಬಳಿ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದೆ. ಒಂದು ವಾರದಿಂದ ಕುಡಚಿ ಪಟ್ಟಣಕ್ಕೆ ನೀರು ಬಾರದೇ ಸಮಸ್ಯೆಯಾಗಿತ್ತು. ಹೀಗಾಗಿ ಸಿಬ್ಬಂದಿ ಕುಡಚಿ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಪಂಪ್ ಸೆಟ್ ಸರಿಪಡಿಸಲು ಹೋಗಿದ್ದರು. ಈ ವೇಳೆ ನೀರಿನ ಹರಿವು ಹೆಚ್ಚಾಗಿದ್ದರಿಂದ ಕಂಟ್ರೋಲ್ ತಪ್ಪಿ ಬೋಟ್‌ ಪಲ್ಟಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಜಾಕ್ವೆಲ್ ನಲ್ಲೇ ಇರುವ ಸಿಬ್ಬಂದಿ ಮತ್ತೊಂದು ಬೋಟ್ ತಂದು ಹೊರ ತರಲು ಪ್ಲ್ಯಾನ್ ಮಾಡಿದ್ದಾರೆ.

ಮಳೆಗೆ ಎತ್ತುಗಳ ಮೇಲೆ ಉರುಳಿ ಬಿದ್ದ ಗೋಡೆ

ನಿರಂತರ ಮಳೆಗೆ ಮನೆ ಗೋಡೆ ಉರುಳಿ ಬಿದ್ದಿದ್ದು, ಅಲ್ಲೇ ಸಮೀಪದಲ್ಲಿದ್ದ ಎತ್ತುಗಳು ಗಾಯಗೊಂಡಿವೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ‌ ಗ್ರಾಮದಲ್ಲಿ ಘಟನೆ ನಡೆದಿದೆ. ಇಂಚಲ‌ ಗ್ರಾಮದ ಯಶವಂತ ನಲವಡೆ ಎಂಬುವವರ ಎತ್ತುಗಳು ಗಾಯಗೊಂಡಿವೆ. ಯಂಕವ್ವ ಗಾಯಕವಾಡ ಎಂಬುವವರ ಮನೆ ಗೋಡೆ ಉರುಳಿ ಬಿದ್ದು ಈ ಅವಘಡ ಸಂಭವಿಸಿದೆ. ಯಶವಂತ ಹಾಗೂ ಯಂಕವ್ವ ಮನೆಗಳು ಅಕ್ಕ ಪಕ್ಕವೇ ಇದ್ದು, ಗೋಡೆ ಬೀಳುತ್ತಿದ್ದಂತೆ ಮಣ್ಣು ತೆಗೆದು ಎತ್ತುಗಳನ್ನು ಉಳಿಸಿಕೊಂಡಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಲ್ಲೇ ಸಾಯುತ್ತೇವೆ ಹೊರತು ಕಾಳಜಿ ಕೇಂದ್ರಕ್ಕೆ ಹೋಗಲ್ಲ

ದಾವಣಗೆರೆ: ತುಂಗಾಭದ್ರ ನದಿಯ ನೀರಿನ ಮಟ್ಟ ಹೆಚ್ಚಾದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಗಂಗಾನಗರ ಸಂಪೂರ್ಣ ಜಲಾವೃತಗೊಂಡಿದೆ. 22ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜಿಲ್ಲಾಡಳಿತದಿಂದ ಕಾಳಜಿ ಕೇಂದ್ರ ತೆರೆದರೂ ಗಂಗಾನಗರ ನಿವಾಸಿಗಳು, ಇಲ್ಲೇ ನೀರಿನಲ್ಲಿ ಸಾಯುತ್ತೇವೆ ವಿನಃ, ಕಾಳಜಿ ಕೇಂದ್ರಕ್ಕೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪ್ರತಿ ಬಾರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ ಮನೆಗಳು ಮುಳುಗಡೆಯಾಗುತ್ತವೆ. ಕಾಳಜಿ ಕೇಂದ್ರಕ್ಕೆ ಸಾಮಾಗ್ರಿಗಳನ್ನು ಮಕ್ಕಳನ್ನು ಕಟ್ಟಿಕೊಂಡು ಹೋಗಬೇಕು. ಹಲವು ವರ್ಷಗಳಿಂದ ಇದೇ ಪರಿಸ್ಥಿತಿ ಅನುಭವಿಸುತ್ತಿದ್ದೇವೆ. ಬೇರೆ ಕಡೆ ನಿವೇಶನ ನೀಡಿ ಅಲ್ಲಿ ಗುಡಿಸಲು ಹಾಕಿಕೊಂಡು ಇರುತ್ತೇವೆ ಎಂದು ಕಿಡಿಕಾರಿದರು.

ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

ಬಾಗಲಕೋಟೆಯ‌ ಗೋವಿನಕೊಪ್ಪ ಸೇತುವೆ ಜಲಾವೃತ

ಬಾಗಲಕೋಟೆ ಜಿಲ್ಲೆಯಲ್ಲಿ ಮಲಪ್ರಭಾ ನದಿ ಅಬ್ಬರಕ್ಕೆ ಪ್ರವಾಹ ಭೀತಿ ಶುರುವಾಗಿದೆ. ಮಲಪ್ರಭಾ ನದಿಗೆ 12 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನದಿಗೆ ಅಡ್ಡಲಾಗಿರುವ ಗೋವಿನಕೊಪ್ಪ ಸೇತುವೆ ಜಲಾವೃತಗೊಂಡಿದೆ. ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗೋವಿನಕೊಪ್ಫ ಹಳೆ ಸೇತುವೆ ಮೇಲೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಹೊಸ ಸೇತುವೆ ಮೂಲಕ ವಾಹನಗಳು ಓಡಾಟ ನಡೆಸಿವೆ. ನದಿಯ ಇಕ್ಕೆಲದಲ್ಲಿರುವ ಹೊಲ ಗದ್ದೆಗಳಿಗೆ ನೀರು ನುಗ್ಗಿದೆ.

ಶಿರಾಡಿ ಭೂ ಕುಸಿತ ಭೀತಿ; ವಾಹನ ಸಂಚಾರ ಇಳಿಕೆ

ಶಿರಾಡಿ ಭೂಕುಸಿತದ ಬಳಿಕ ಚಿಕ್ಕಮಗಳೂರಿನಲ್ಲಿ ವಾಹನ ಸಂಚಾರ ಇಳಿಕೆಯಾಗಿದೆ. ಚಾರ್ಮಾಡಿಯಲ್ಲಿ ವಾಹನ ಸಂಚಾರಕ್ಕೆ ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದಾರೆ. ಕಡೂರು-ದಕ್ಷಿಣ ಕನ್ನಡ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಗಣನೀಯ ಪ್ರಮಾಣದಲ್ಲಿ ವಾಹನಗಳ ಸಂಖ್ಯೆ ಇಳಿಕೆ ಕಂಡಿದೆ. ಚಾರ್ಮಾಡಿಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಪದೆ ಪದೇ ಕಲ್ಲು ಬಂಡೆಗಳು, ಮರಗಳು ಬಿದ್ದು ಅವಾಂತರವೇ ಸೃಷ್ಟಿಯಾಗುತ್ತಿದೆ. ನಿತ್ಯ 1500-2000 ವಾಹನಗಳು ಸಂಚಾರಿಸುತ್ತಿದ್ದವು. ಇದೀಗ ಗುಡ್ಡ ಕುಸಿತದ ಭಯಕ್ಕೆ ದಿನವೊಂದಕ್ಕೆ 500 ವಾಹನಗಳು ಓಡಾಟ ನಡೆಸುತ್ತಿವೆ. ಚಾರ್ಮಾಡಿ ಹೆದ್ದಾರಿ ಸಂಚಾರ ಮುಕ್ತ ಗೊಳಿಸಿದರು ಸವಾರರಲ್ಲಿ ಭಯ ಆವರಿಸಿದೆ.

ಹಾವೇರಿಯಲ್ಲಿ ಮಳೆ ಅವಾಂತರಕ್ಕೆ ಬೆಳೆ ನಾಶ

ಹಾವೇರಿ ತಾಲೂಕಿನ ಕೊರಡೂರು ಗ್ರಾಮದಲ್ಲಿ ಮಳೆ ಅಬ್ಬರಕ್ಕೆ ತರಕಾರಿ ಬೆಳೆ ನಾಶವಾಗಿದೆ. ಫಕ್ಕಿರೇಶ ಕೊಡಬಾಳ ಎಂಬುವವರು ಎರಡು ಎಕರೆ ಜಮೀನಿನಲ್ಲಿ ವಿವಿಧ ತರಕಾರಿ ಬೆಳೆ ಬೆಳೆದಿದ್ದರು. ಆದರೆ ವರದಾ ನದಿಯ ಅಬ್ಬರಕ್ಕೆ ಟೊಮೆಟೋ, ಮೆಣಸಿನಕಾಯಿ, ಬೆಂಡೆ ಮತ್ತು ಚವಳಿಕಾಯಿ ಸೇರಿದಂತೆ ವಿವಿಧ ತರಕಾರಿ ಬೆಳೆ ನೀರುಪಾಲಾಗಿದೆ.

ಪಂಪಾ ಸರೋವರಕ್ಕೆ ಹೋಗುವ ರಸ್ತೆ ಸ್ಥಗಿತ

ಕೊಪ್ಪಳದಲ್ಲಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಆನೆಗೊಂದಿ ಬಳಿಯ ಪಂಪಾ ಸರೋವರಕ್ಕೆ ಹೋಗುವ ರಸ್ತೆ ಸ್ಥಗಿತಗೊಂಡಿದೆ. ಭಾರತದ ವಿವಿಧ ಪ್ರದೇಶದಿಂದ ಭಕ್ತರು ಆಗಮಿಸುವ ಪಂಪಾಸರೋವರ ಇದೀಗ ಬಂದ್‌ ಆಗಿದೆ. ತುಂಗಭದ್ರಾ ನದಿಗೆ 1.70 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ನೀರು ರಸ್ತೆಗೆ ಬಂದಿದೆ. ನದಿಯಲ್ಲಿ ಇನ್ನಷ್ಟು ನೀರು ಬಂದರೆ ಅಂಜನಾದ್ರಿ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Wayanad Landslide: ಕುರ್ಚಿಯಲ್ಲಿ ಕುಳಿತ.. ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ; ಇದು ಸ್ಮಶಾನ ಸದೃಶ್ಯ ವಯನಾಡಿನ ಭೀಕರ ದೃಶ್ಯ

Wayanad Landslide: ಮುಂಡಕ್ಕೈ ಎಂಬಲ್ಲಿನ ಮನೆಯೊಂದರಲ್ಲಿ ಕುರ್ಚಿಗಳ ಮೇಲೆ ಕುಳಿತಿದ್ದ ಸ್ಥಿತಿಯಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇನ್ನು ಚೂರಲ್ಮಲಾದಲ್ಲಿ ಕುಸಿದು ಬಿದ್ದಿದ್ದ ಮನೆಯ ಅವಶೇಷದಡಿಯಿಂದ ಪುಟ್ಟ ಕಂದಮ್ಮನ ಶವವನ್ನು ಹೊರತೆಗೆಯಲಾಗಿದೆ.

VISTARANEWS.COM


on

Wayanad Landslide
Koo

ವಯನಾಡ್‌: ದೇವರನಾಡು ಕೇರಳ(Kerala)ದ ವಯನಾಡ್‌(Wayanad Landslide) ಅಕ್ಷರಶಃ ಸ್ಮಶಾನವಾಗಿ ಬದಲಾಗಿದೆ. ಎಲ್ಲೆಂದರಲ್ಲಿ ಮಣ್ಣು, ನೀರು, ಬೃಹತ್ ಬಂಡೆಗಳು, ಬುಡಮೇಲಾದ ಮರಗಳು, ಕಟ್ಟಡಗಳ ಅವಶೇಷಗಳೇ ಕಣ್ಣು ಹಾಯಿಸಿದಷ್ಟು ದೂರಕ್ಕೆ ಕಾಣುತ್ತಿವೆ. ಈ ನಡುವೆ ಅವಶೇಷದಡಿಯಲ್ಲಿ ಸಿಲುಕಿದ ಜೀವಗಳು ಮತ್ತು ಮೃತದೇಹಗಳ ಪತ್ತೆ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ(Rescue Operation) ನಡೆಯುತ್ತಿದೆ.ರಕ್ಷಣಾ ಕಾರ್ಯಾಚರಣೆ ವೇಳೆ ಸಿಕ್ಕಿರುವ ಮೃತದೇಹಗಳು ಎಂಥವರ ಕಣ್ಣಲ್ಲೂ ಕಣ್ಣೀರು ಬರಿಸುವಂತಿದೆ.

ರಕ್ಷಣಾ ಕಾರ್ಯಕರ್ತರು ನೆಲದಡಿಯಲ್ಲಿರುವ ಮನೆಗಳನ್ನು ನೆಲಸಮಗೊಳಿಸಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರತಿ ಮನೆಯಲ್ಲೂ ಹೃದಯ ವಿದ್ರಾವಕ ದೃಶ್ಯಗಳು ಕಂಡುಬರುತ್ತಿವೆ ಎಂದು ರಕ್ಷಣಾ ಕಾರ್ಯಚರಣೆಯಲ್ಲಿ ಭಾಗಿಯಾಗಿದ ವ್ಯಕ್ತಿಯೊಬ್ಬ ಹೇಳಿದ್ದಾರೆ. ಮುಂಡಕ್ಕೈ ಎಂಬಲ್ಲಿನ ಮನೆಯೊಂದರಲ್ಲಿ ಕುರ್ಚಿಗಳ ಮೇಲೆ ಕುಳಿತಿದ್ದ ಸ್ಥಿತಿಯಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇನ್ನು ಚೂರಲ್ಮಲಾದಲ್ಲಿ ಕುಸಿದು ಬಿದ್ದಿದ್ದ ಮನೆಯ ಅವಶೇಷದಡಿಯಿಂದ ಪುಟ್ಟ ಕಂದಮ್ಮನ ಶವವನ್ನು ಹೊರತೆಗೆಯಲಾಗಿದೆ.

ಮತ್ತೊಂದು ಮನೆಯಲ್ಲಿ ಮಕ್ಕಳು ಸೇರಿದಂತೆ ಐದಾರು ಜನ ಒಟ್ಟಿಗೆ ಅಪ್ಪಿಕೊಂಡ ಸ್ಥಿತಿಯಲ್ಲಿ ಮೃತದೇಹಗಳನ್ನು ಪತ್ತೆಯಾಗಿದ್ದು, ಆ ದೃಶ್ಯವನ್ನು ಅವರ ಇಡೀ ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಜನರು ಜೀವಂತವಾಗಿದ್ದಾರೆ ಎಂದು ನಂಬಲಾಗಿದೆ. ಅವರನ್ನು ಆದಷ್ಟು ಬೇಗ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೇನೆ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಕಟ್ಟಡದ ಅವಶೇಷಗಳ ನಡುವೆ ಶೋಧ ನಡೆಸಲಾಗುತ್ತಿದೆ. ಮೃತರ ಸಂಖ್ಯೆ ಕ್ಷಣ ಕ್ಷಣಕ್ಕೆ ಏರಿಕೆಯಾಗುತ್ತಿದೆ.

ಮಳೆ ಮತ್ತು ಪ್ರವಾಹದ ಶಕ್ತಿ ಕಡಿಮೆಯಾಗಿದ್ದು, ರಕ್ಷಣಾ ಕಾರ್ಯಕರ್ತರಿಗೆ ನೆಮ್ಮದಿ ನೀಡಿದೆ. ಆದರೆ, ಈ ಪ್ರದೇಶದಲ್ಲಿ ಕೆಸರು, ಜವುಗು ತುಂಬಿರುವುದರಿಂದ ಎಲ್ಲಿಯೂ ನಿಲ್ಲಲು ಸಾಧ್ಯವಾಗುತ್ತಿಲ್ಲ. ಇದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಗಿದೆ. ದೊಡ್ಡ ಬಂಡೆಗಳನ್ನು ಸ್ಥಳಾಂತರಿಸಲು ಹೆಚ್ಚಿನ ಯಂತ್ರೋಪಕರಣಗಳು ಸಿಗುವುದಿಲ್ಲ ಎಂಬುದು ಸಮಸ್ಯೆಯಾಗಿದೆ.

ಸುಮಾರು 400 ಮನೆಗಳನ್ನು ಹೊಂದಿದ್ದ ಮುಂಡಕ್ಕೈನಲ್ಲಿ ಈಗ ಕೇವಲ ಮೂವತ್ತು ಮನೆಗಳು ಉಳಿದಿವೆ. ಎಷ್ಟು ಮಂದಿ ಜೀವಂತವಾಗಿದ್ದಾರೆ ಅಥವಾ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇಲ್ಲ. ಕೆಲವರು ತಮ್ಮ ಕಾಣೆಯಾದ ಪ್ರೀತಿಪಾತ್ರರನ್ನು ಹುಡುಕಲು ಆಸ್ಪತ್ರೆಗಳನ್ನು, ದುರಂತದ ಪ್ರದೇಶಗಳಲ್ಲಿ ಅಲೆದಾಡುತ್ತಿದ್ದಾರೆ.

ಹಲವರು ಇಲ್ಲಿಯವರೆಗೆ ದುಡಿದಿದ್ದನ್ನೆಲ್ಲ ಕಳೆದುಕೊಂಡು ಪ್ರಸ್ತುತ ನಿರಾಶ್ರಿತ ಶಿಬಿರಗಳಲ್ಲಿದ್ದಾರೆ. ಅದರೊಂದಿಗೆ ಅವರು ತಮ್ಮ ಕುಟುಂಬ ಮತ್ತು ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಬದಲಾಯಿಸಲು ಅವರ ಬಳಿ ಬಟ್ಟೆಯೂ ಇಲ್ಲ. ಅವರ ಮುಂದಿನ ಜೀವನ ಹೇಗೆ ಎಂಬುದೇ ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿದೆ. ಇನ್ನು ರಕ್ಷಣಾ ಸ್ಥಳಗಳ ಒಂದೊಂದು ದೃಶ್ಯ ಮನ ಕಲುಕುವಂತಿದೆ.

ಇದನ್ನೂ ಓದಿ: Wayanad Landslide: “ಧಾರ್ಮಿಕ ಸಂಘಟನೆಗಳ ಒತ್ತಡದಿಂದ ವಯನಾಡಿನಲ್ಲಿ ಭೂಮಿ ಒತ್ತುವರಿ ತೆರವು ಸಾಧ್ಯವಾಗ್ತಿಲ್ಲ”- ತೇಜಸ್ವಿ ಸೂರ್ಯ ಕಿಡಿ

Continue Reading

ಮಳೆ

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain : ಕೊಪ್ಪಳದ ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತಗೊಂಡಿದೆ. ಯಾದಗಿರಿ-ರಾಯಚೂರು ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

By

karnataka Rain
Koo

ಕೊಪ್ಪಳ: ಭಾರಿ ಮಳೆ (Karnataka Rain) ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತಗೊಂಡಿದೆ. ಕೇಶಮುಂಡನ ಮಾಡುವ ಕೋಣೆಯು ನೀರಿನಲ್ಲಿ ಮುಳುಗಿದೆ. ತುಂಗಭದ್ರಾ ನದಿ ದಡದಲ್ಲಿರುವ ದೇವಸ್ಥಾನ ಇದಾಗಿದ್ದು, ನೀರಿನ ಪ್ರಮಾಣ ಹೆಚ್ಚಾದರೆ ಅನೇಕ ಅಂಗಡಿಗಳು ಜಲಾವೃತ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿ ಸಮೀಪ ಭಕ್ತರಿಗೆ ನಿಷೇಧಿಸಲಾಗಿದೆ.

ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಯಾದಗಿರಿಯಲ್ಲಿ ನಾರಾಯಣಪುರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕೃಷ್ಣಾ ನದಿ ಪ್ರವಾಹದಿಂದ ಈಗಾಗಲೇ ಕೊಳ್ಳುರು ಸೇತುವೆ ಹಾಗೂ ಗುರ್ಜಾಪುರ ಸೇತುವೆ ಸಂಪರ್ಕ ಕಡಿತಗೊಂಡಿದೆ. ಅದೆ ರೀತಿ ವಡಗೇರಾ ತಾಲೂಕಿನ ಗುಂಡ್ಲುರು ಹೊರಭಾಗದ ಗುರ್ಜಾಪುರ ಸೇತುವೆ ಜಲಾವೃತಗೊಂಡಿವೆ. ಸೇತುವೆ ಜಲಾವೃತದಿಂದ ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಡಿತವಾಗಿದೆ.

ಬೆಳಗಾವಿಯಲ್ಲಿ ಮತ್ತೆ ಲೊಳಸೂರ ಸೇತುವೆ ಬಂದ್‌

ಬೆಳಗಾವಿಯ ಲೊಳಸೂರ ಸೇತುವೆ ಮೇಲೆ ಮತ್ತೆ ಘಟಪ್ರಭೆ ಆವರಿಸಿದೆ. ನಿನ್ನೆಯಷ್ಟೆ ನೀರು ಕಡಿಮೆಯಾಗಿ ಓಪನ್ ಆಗಿದ್ದ ಲೊಳಸೂರ ಸೇತುವೆ, ಇದೀಗ ಮತ್ತೆ ಬಂದ್‌ ಆಗಿದೆ. ಸಂಕೇಶ್ವರ ಧಾರವಾಡ ರಾಜ್ಯ ಹೆದ್ದಾರಿಯಲ್ಲಿರುವ ಬೃಹತ್ ಸೇತುವೆ ಇದಾಗಿದೆ. ಲೊಳಸೂರು ಗೋಕಾಕ ಸಂಪರ್ಕ ಸೇತುವೆ ಬಂದ್‌ ಆಗಿದೆ.

ನೀರುಪಾಲಾದ ಹುಂಡಿ ಹಣ

ಕೋಲಾರ‌ ಜಿಲ್ಲೆಯ ಮುಳಬಾಗಿಲು ಪ್ರಸಿದ್ಧ ಕುರುಡುಮಲೆಯ ಹುಂಡಿ ಹಣ ನೀರು ಪಾಲಾಗಿದೆ. ಮುಜರಾಯಿ ಇಲಾಖೆ ಸಿಬ್ಬಂದಿ ನೋಟುಗಳನ್ನು ಬಿಸಿಲಲ್ಲಿ ಒಣಗಿಸಿದ್ದಾರೆ. ದೇವಸ್ಥಾನದ ಚಾವಣಿ ಕೆಲಸ ನಡೆಯುತ್ತಿದ್ದು, ಮಳೆ ಬಿದ್ದ ಪರಿಣಾಮ ನೀರುಪಾಲಾಗಿದೆ.

ಇದನ್ನೂ ಓದಿ: Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಕುಮಟಾ-ಶಿರಸಿ ರಸ್ತೆಯಲ್ಲಿ ಮತ್ತೆ ಗುಡ್ಡಕುಸಿತ

ಭಾರೀ ಮಳೆಗೆ ಕುಮಟಾ-ಶಿರಸಿ ರಸ್ತೆಯ ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡಕುಸಿತ ಉಂಟಾಗಿದೆ. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766EEಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಕಳೆದೆರಡು ವಾರಗಳ ಹಿಂದೆ ಗುಡ್ಡ ಕುಸಿದು 5 ದಿನ ಸಂಚಾರ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಕುಸಿತದಿಂದ ವಾಹನ ಸವಾರರು ಆತಂಕದಲ್ಲಿದ್ದಾರೆ. ಹಿಟಾಚಿ ಮೂಲಕ ಗುಡ್ಡ ತೆರವು ಕಾರ್ಯ ಆರಂಭಿಸಲಾಗುತ್ತಿದೆ.

ಮಲಪ್ರಭಾ ನದಿ ತಟದಲ್ಲಿ ಪ್ರವಾಹದ ಪರಿಸ್ಥಿತಿ

ಮಲಪ್ರಭಾ ನದಿಯಿಂದಲೂ ಪ್ರವಾಹ ಭೀತಿ ಶುರುವಾಗಿದೆ. ಬೆಳಗಾವಿಯ ರಾಮದುರ್ಗ ತಾಲೂಕಿನ ಸುರೇಬಾನ್ ಬೆನ್ನೂರ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಸೇತುವೆ ಮುಳುಗಡೆಯಿಂದ ಚಿಕ್ಕತಡಸಿ, ಹಿರೇ ತಡಸಿ, ಬೆನ್ನೂರ ಗ್ರಾಮಗಳ ಸಂಪರ್ಕ ಕಟ್ ಆಗಿದೆ. 14 ಸಾವಿರ ಕ್ಯೂಸೆಕ್ ನಷ್ಟು ನವಿಲು ತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಮಲಪ್ರಭಾ ನದಿ ತಟದಲ್ಲಿ ಪ್ರವಾಹದ ಪರಿಸ್ಥಿತಿ ಇದೆ. ಈಗಾಗಲೇ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಜಲಾವೃತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Former minister B Sriramulu alleged that the Congress government is not interested in the construction of the Kampli bridge
ಬಳ್ಳಾರಿ1 min ago

Ballari News: ಕಂಪ್ಲಿ ಸೇತುವೆ ನಿರ್ಮಿಸಲು ಆಸಕ್ತಿ ವಹಿಸದ ಕಾಂಗ್ರೆಸ್ ಸರ್ಕಾರ; ಶ್ರೀರಾಮುಲು ಆರೋಪ

Whatsapp Shutdown
ತಂತ್ರಜ್ಞಾನ6 mins ago

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

Kerala Floods
ದೇಶ53 mins ago

Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ

Paris Olympics 2024
ಪ್ರಮುಖ ಸುದ್ದಿ56 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ವಿವಾದ; ಮಹಿಳೆ ವಿರುದ್ಧ ಸ್ಪರ್ಧಿಸಲು ಬಾಕ್ಸಿಂಗ್​ ಕಣಕ್ಕೆ ಇಳಿದ ಪುರುಷ!

vyasana mukta dinacharane programme in hosapete
ವಿಜಯನಗರ1 hour ago

Vijayanagara News: ಹೊಸಪೇಟೆಯಲ್ಲಿ ವ್ಯಸನ ಮುಕ್ತ ದಿನಾಚರಣೆ; ಜನ ಜಾಗೃತಿ

utthana vaarshika katha spardhe the last date for submission of the story is october 10
ಬೆಂಗಳೂರು1 hour ago

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

World Breastfeeding Week
ಆರೋಗ್ಯ2 hours ago

World Breastfeeding Week: ವಿಶ್ವ ಸ್ತನ್ಯಪಾನ ಸಪ್ತಾಹ; ಹಾಲುಣಿಸಿದರೆ ಮಗುವಿಗೆ ಮಾತ್ರವಲ್ಲ, ತಾಯಿಗೂ ಲಾಭ!

Saree Fashion
ಫ್ಯಾಷನ್2 hours ago

Saree Fashion: ಕಂಟೆಂಪರರಿ ಪ್ರಿಂಟೆಡ್‌ ವಿನ್ಯಾಸದಲ್ಲೂ ಬಂತು ಆರ್ಗನ್ಜಾ ಸೀರೆ!

kotak bank smart watch
ವಾಣಿಜ್ಯ2 hours ago

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ9 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ9 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌