Phone Storage Issue: ನಿಮ್ಮ ಮೊಬೈಲ್ ಸ್ಟೋರೇಜ್ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ! - Vistara News

ಗ್ಯಾಜೆಟ್ಸ್

Phone Storage Issue: ನಿಮ್ಮ ಮೊಬೈಲ್ ಸ್ಟೋರೇಜ್ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ!

ಫೋನ್‌ನಲ್ಲಿ ಸ್ಟೋರೇಜ್ ಸಮಸ್ಯೆ ಎದುರಾಗುವುದು ಸಾಮಾನ್ಯ. ವಿಶೇಷವಾಗಿ ಅನೇಕ ಅಪ್ಲಿಕೇಶನ್‌, ಫೋಟೋ, ವಿಡಿಯೋಗಳು ಮತ್ತು ಇತರ ಫೈಲ್‌ಗಳನ್ನು ಹೆಚ್ಚಾಗುತ್ತಾ ಹೋದಂತೆ ಫೋನ್ ನಲ್ಲಿ ಜಾಗದ ಸಮಸ್ಯೆ (Phone Storage Issue) ಎದುರಾಗುತ್ತದೆ. ಹೊಸ ಫೋನ್ ಖರೀದಿಸದೆಯೇ ಫೋನ್‌ನಲ್ಲಿ ಜಾಗವನ್ನು ಮುಕ್ತಗೊಳಿಸಲು ಕೆಲವು ಸುಲಭ ಮಾರ್ಗಗಳು ಇಲ್ಲಿವೆ.

VISTARANEWS.COM


on

Phone Storage Issue
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಲ್ಲರ ಫೋನ್ ನಲ್ಲಿ (phone) ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಮಸ್ಯೆ ಎಂದರೆ ಸ್ಟೋರೇಜ್ (Phone Storage Issue). ಎಷ್ಟೇ ಒಳ್ಳೆಯ ಫೋನ್ ಆಗಿದ್ದರೂ ವರ್ಷ ಕಳೆಯುವಷ್ಟರಲ್ಲಿ ಸ್ಟೋರೇಜ್ ಫುಲ್ (storage full) ಎಂಬುದಾಗಿ ತೋರಿಸಲು ಪ್ರಾರಂಭವಾಗುತ್ತದೆ. ಈ ಸಂದರ್ಭದಲ್ಲಿ ನಾವು ಜೋಪಾನ ಮಾಡಿ ಇಡಬೇಕು ಎಂದುಕೊಂಡಿರುವ ಫೈಲ್, ಫೋಟೋ, ವಿಡಿಯೋಗಳನ್ನು ಇಷ್ಟವಿಲ್ಲದೇ ಇದ್ದರೂ ಡಿಲೀಟ್ ಮಾಡಲೇಬೇಕಾದ ಸಂದರ್ಭ ಎದುರಾಗುತ್ತದೆ.

ಫೋನ್‌ನಲ್ಲಿ ಸ್ಟೋರೇಜ್ ಸಮಸ್ಯೆ ಎದುರಾಗುವುದು ಸಾಮಾನ್ಯ. ವಿಶೇಷವಾಗಿ ಅನೇಕ ಅಪ್ಲಿಕೇಶನ್‌, ಫೋಟೋ, ವಿಡಿಯೋಗಳು ಮತ್ತು ಇತರ ಫೈಲ್‌ಗಳನ್ನು ಹೆಚ್ಚಾಗುತ್ತಾ ಹೋದಂತೆ ಫೋನ್ ನಲ್ಲಿ ಜಾಗದ ಸಮಸ್ಯೆ ಎದುರಾಗುತ್ತದೆ.
ಹೊಸ ಫೋನ್ ಖರೀದಿಸದೆಯೇ ಫೋನ್‌ನಲ್ಲಿ ಜಾಗವನ್ನು ಮುಕ್ತಗೊಳಿಸಲು ಕೆಲವು ಸುಲಭ ಮಾರ್ಗಗಳು ಇಲ್ಲಿವೆ.

Phone Storage Issue
Phone Storage Issue


ಅನಗತ್ಯ ಅಪ್ಲಿಕೇಶನ್‌ಗಳನ್ನು ಅಳಿಸಿ

ಸಾಮಾನ್ಯವಾಗಿ ನಮಗೆ ಬೇಡವಾದ ಸಾಕಷ್ಟು ಆಪ್ ಗಳು ಮೊಬೈಲ್ ನಲ್ಲಿ ತುಂಬಿಕೊಂಡಿರುತ್ತವೆ. ಎಷ್ಟೋ ಸಂದರ್ಭದಲ್ಲಿ ಕೆಲವೊಂದು ಆಪ್ ಗಳನ್ನು ನಾವು ಬಳಸುವುದೇ ಇಲ್ಲ. ಇಂತಹ ಆಪ್ ಗಳನ್ನೂ ಅಳಿಸಿ. ಇದರಿಂದ ನೋಟಿಫಿಕೇಶನ್ ಗಳನ್ನು ತಪ್ಪಿಸಬಹುದು. ಜೊತೆಗೆ ಮೊಬೈಲ್ ನಲ್ಲಿ ಹೆಚ್ಚು ಸ್ಪೇಸ್ ಸೃಷ್ಟಿಸಬಹುದು.

ಕ್ಲೌಡ್‌ ಸೇವೆಗಳನ್ನು ಬಳಸಿ

ಫೋಟೋ, ವಿಡಿಯೋಗಳನ್ನು ಸಂಗ್ರಹಿಸಲು ಗೂಗಲ್ ಫೋಟೋಗಳು, ಒನ್ ಡ್ರೈವ್ ಅಥವಾ ಯಾವುದೇ ಇತರ ಕ್ಲೌಡ್ ಸಂಗ್ರಹಣೆಯಂತಹ ಕ್ಲೌಡ್ ಸಂಗ್ರಹಣೆ ಸೇವೆಗಳನ್ನು ಬಳಸಿ. ಇದು ಫೋನ್‌ನಲ್ಲಿ ಸಾಕಷ್ಟು ಜಾಗವನ್ನು ಮುಕ್ತಗೊಳಿಸುತ್ತದೆ. ಇದು ಅನೇಕ ಸಂಗ್ರಹಣೆ ಸಮಸ್ಯೆಗಳನ್ನು ನಿವಾರಿಸುತ್ತದೆ.

Phone Storage Issue
Phone Storage Issue


ಚಾಟಿಂಗ್ ಆಪ್ ಡೇಟಾಗಳನ್ನು ಅಳಿಸಿ

ವಾಟ್ಸಾಪ್, ಟೆಲಿಗ್ರಾಮ್ ನಂತಹ ಅಪ್ಲಿಕೇಶನ್‌ಗಳಿಂದ ಹಳೆಯ ಸಂದೇಶ, ವಿಡಿಯೋ ಮತ್ತು ಫೋಟೋಗಳನ್ನು ಅಳಿಸುವುದು ಉತ್ತಮ ಆಯ್ಕೆಯಾಗಿದೆ. ವಾಟ್ಸಾಪ್ ಸೆಟ್ಟಿಂಗ್‌ಗಳಿಗೆ ಹೋಗಿ ಮತ್ತು ಅನಗತ್ಯ ಡೇಟಾವನ್ನು ತೆಗೆದುಹಾಕಲು ಸಂಗ್ರಹ ನಿರ್ವಹಣೆ ಆಯ್ಕೆಯನ್ನು ಆರಿಸಿ. ಹೆಚ್ಚುವರಿಯಾಗಿ ದೀರ್ಘ ಅಥವಾ ಅನಗತ್ಯ ಆಡಿಯೋ ಮತ್ತು ವಿಡಿಯೋ ಫೈಲ್ ಗಳನ್ನು ಅಳಿಸಿ. ಈ ಫೈಲ್‌ಗಳನ್ನು ಕಂಪ್ಯೂಟರ್ ಅಥವಾ ಬಾಹ್ಯ ಹಾರ್ಡ್ ಡ್ರೈವ್‌ಗೆ ವರ್ಗಾಯಿಸಿ ಇಟ್ಟುಕೊಳ್ಳಬಹುದು.

ಇದನ್ನೂ ಓದಿ: Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

ವಾಲ್‌ಪೇಪರ್‌, ರಿಂಗ್‌ಟೋನ್‌ಗಳನ್ನು ಆಪ್ಟಿಮೈಜ್ ಮಾಡಿ

ಹೆಚ್ಚಿನ ರೆಸಲ್ಯೂಶನ್ ಇರುವ ವಾಲ್‌ಪೇಪರ್‌ ಮತ್ತು ರಿಂಗ್‌ಟೋನ್‌ಗಳನ್ನು ಬಳಸುವುದನ್ನು ತಪ್ಪಿಸಿ. ಯಾಕೆಂದರೆ ಅವುಗಳು ಸಾಕಷ್ಟು ಜಾಗವನ್ನು ತೆಗೆದುಕೊಳ್ಳುತ್ತದೆ. ಮೊಬೈಲ್ ನಲ್ಲಿ ಹೆಚ್ಚು ಸ್ಟೋರೇಜ್ ಆಗುವುದನ್ನು ತಪ್ಪಿಸಲು ಎಸ್ ಡಿ ಕಾರ್ಡ್ ಬಳಸಿ. ಕೆಲವನ್ನು ಆಪ್ಟಿಮೈಜ್ ಮಾಡುವುದರಿಂದ ಫೋನ್ ಅನ್ನು ಅಪ್‌ಡೇಟ್ ಮಾಡಿ. ಇದು ಫೋನ್ ನಲ್ಲಿರುವ ಸಂಗ್ರಹಣೆ ಸಮಸ್ಯೆಗಳನ್ನು ಪರಿಹರಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

ವಾಟ್ಸಾಪ್ ಭಾರತಕ್ಕೆ ಬಂದಾಗಿನಿಂದ ಜನರು ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳುವುದು ಸುಲಭವಾಗಿದೆ. ಪಠ್ಯ ಸಂದೇಶಗಳು, ಆಡಿಯೋ, ವಿಡಿಯೋ ಸೇರಿದಂತೆ ಹಲವು ವಿಷಯಗಳನ್ನು ಹಂಚಿಕೊಳ್ಳುವ ವೇದಿಕೆಯಾಗಿತ್ತು. ಈಗಾಗಲೇ ಹಲವಾರು ಬಾರಿ ಭಾರತದಲ್ಲಿ ವಾಟ್ಸಾಪ್ ನಿಷೇಧವಾಗುವ (Whatsapp Shutdown) ಬೆದರಿಕೆ ಹಾಕಲಾಗಿತ್ತು. ಒಂದು ವೇಳೆ ವಾಟ್ಸಾಪ್ ನಿಷೇಧಿಸಲ್ಪಟ್ಟರೆ ಭಾರತೀಯರಿಗೆ ಇರುವ ಮುಂದಿನ ಆಯ್ಕೆ ಏನು? ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Whatsapp Shutdown
Koo

ಹೊಸ ಐಟಿ ನಿಯಮಗಳು (New IT Rules) ಬಂದಾಗಿನಿಂದ ದೇಶದಲ್ಲಿ (Alternative to Whatsapp) ವಾಟ್ಸಾಪ್ ನಿಷೇಧವಾಗುವ (Whatsapp Shutdown) ಆತಂಕ ಎದುರಾಗಿದೆ. 53.58 ಕೋಟಿಗಿಂತಲೂ ಹೆಚ್ಚು ಭಾರತೀಯ ಗ್ರಾಹಕರು (Indian customers) ಬಳಸಲ್ಪಡುತ್ತಿರುವ ವಾಟ್ಸಾಪ್ (whatsapp) ಒಂದು ವೇಳೆ ನಿಷೇಧಿಸಲ್ಪಟ್ಟರೆ ಮುಂದೇನು ಎನ್ನುವ ಚಿಂತೆ ಹೆಚ್ಚಿನವರನ್ನು ಕಾಡಲಾರಂಭಿಸಿದೆ.

ವಾಟ್ಸಾಪ್ ಭಾರತಕ್ಕೆ ಬಂದಾಗಿನಿಂದ ಜನರು ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳುವುದು ಸುಲಭವಾಗಿದೆ. ಅದು ಪಠ್ಯ ಸಂದೇಶಗಳು ಅಥವಾ ಆಡಿಯೋ, ವಿಡಿಯೋ ಹೀಗೆ ಎಲ್ಲವನ್ನೂ ಸುಲಭವಾಗಿ ಹಂಚಿಕೊಳ್ಳಲು ವೇದಿಕೆಯನ್ನು ಸೃಷ್ಟಿಸಿತ್ತು. ಈಗಾಗಲೇ ಹಲವಾರು ಬಾರಿ ಭಾರತದಲ್ಲಿ ವಾಟ್ಸಾಪ್ ನಿಷೇಧವಾಗುವ ಬೆದರಿಕೆ ಹಾಕಲಾಗಿತ್ತು. ಒಂದು ವೇಳೆ ವಾಟ್ಸಾಪ್ ನಿಷೇಧಿಸಲ್ಪಟ್ಟರೆ ಭಾರತೀಯರಿಗೆ ಇರುವ ಮುಂದಿನ ಆಯ್ಕೆ ಏನು?

Whatsapp Shutdown
Whatsapp Shutdown


ವಾಟ್ಸಾಪ್ ದೇಶದಲ್ಲಿ ಸ್ಥಗಿತಗೊಂಡರೆ ಗ್ರಾಹಕರು ಉಳಿದ ಚಾಟಿಂಗ್ ಆಪ್‌ಗಳತ್ತ ಹೊರಳುವ ಸಾಧ್ಯತೆ ಇದೆ. ಭಾರತದಲ್ಲಿ ವಾಟ್ಸಾಪ್‌ಗೆ ಪರ್ಯಾಯವಾಗಿ ಹಲವು ಆಯ್ಕೆಗಳಿವೆ.

Whatsapp Shutdown
Whatsapp Shutdown


ಟೆಲಿಗ್ರಾಮ್

ಟೆಲಿಗ್ರಾಮ್ ವಾಟ್ಸಾಪ್‌ಗೆ ಪರ್ಯಾಯವಾಗಿರಬಹುದು. ಟೆಲಿಗ್ರಾಮ್ ಚಾಟಿಂಗ್, ಗ್ರೂಪ್ ಚಾಟ್, ಧ್ವನಿ, ವಿಡಿಯೋ ಕರೆಗಳು ಮತ್ತು ವಾಟ್ಸಾಪ್‌ನಂತೆಯೇ ಫೈಲ್ ಹಂಚಿಕೆಯಂತಹ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದಲ್ಲದೆ ಟೆಲಿಗ್ರಾಮ್ ಚಾನೆಲ್ ಮೂಲಕ ಹೆಚ್ಚಿನ ಜನರನ್ನು ಸಂಪರ್ಕಿಸುವುದು ಸಾಧ್ಯವಿದೆ.

Whatsapp Shutdown
Whatsapp Shutdown


ಸಿಗ್ನಲ್

ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು, ಇದು ಭಾರತದಲ್ಲಿ ನಿಧಾನವಾಗಿ ಜನಪ್ರಿಯವಾಗುತ್ತಿದೆ. ಇದು ವಾಟ್ಸಾಪ್ ನಂತೆಯೇ ಹಲವು ವೈಶಿಷ್ಟ್ಯಗಳನ್ನು ಗ್ರಾಹಕರಿಗೆ ನೀಡುತ್ತದೆ.

Whatsapp Shutdown
Whatsapp Shutdown


ಸ್ನ್ಯಾಪ್ ಚಾಟ್

ವಾಟ್ಸಾಪ್‌ಗೆ ಪರ್ಯಾಯವಾಗಿ ಸ್ನ್ಯಾಪ್ ಚಾಟ್ ಅನ್ನು ಅತ್ಯುತ್ತಮ ಆಯ್ಕೆಯಾಗಿ ಇರಿಸಬಹುದು. ಇದರ ಮೂಲಕ ಪರಸ್ಪರ ಚಿತ್ರಗಳು ಮತ್ತು ಫೈಲ್‌ಗಳನ್ನು ಹಂಚಿಕೊಳ್ಳಬಹುದು.


ಇದನ್ನೂ ಓದಿ: Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆ್ಯಪ್‌? ಕೇಂದ್ರ ಸರ್ಕಾರ ಹೇಳೋದೇನು?

ವಾಟ್ಸಾಪ್ ಸ್ಥಗಿತವಾದರೆ ಏನು ಸಮಸ್ಯೆ?

ಭಾರತದಲ್ಲಿ ವಾಟ್ಸಾಪ್ ತನ್ನ ಸೇವೆಯನ್ನು ಸ್ಥಗಿತಗೊಳಿಸಿದರೆ ಗ್ರಾಹಕರು ಮುಖ್ಯವಾಗಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯಾಕೆಂದರೆ ಈ ಆಪ್ ಅನ್ನು ಸಾಕಷ್ಟು ಗ್ರಾಹಕರು ಹಲವಾರು ವರ್ಷಗಳಿಂದ ಬಳಸುತ್ತಿದ್ದಾರೆ. ಇದರಿಂದ ಬೇರೆ ಆಪ್ ಗೆ ಹೊಂದಿಕೊಳ್ಳಲು ಸಾಕಷ್ಟು ಕಾಲಾವಕಾಶ ಬೇಕಾಗಬಹುದು. ಆಗ ಕೆಲವೊಂದು ಸಮಸ್ಯೆಗಳು ಎದುರಾಗಬಹುದು. ಆದರೂ ಪರ್ಯಾಯ ಆಪ್‌ಗಳಿಗೆ ಜನ ಕ್ರಮೇಣ ಒಗ್ಗಿಕೊಳ್ಳಬಹುದು.

Continue Reading

ದೇಶ

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Servicenow: ಸರ್ವೀಸ್‌ನೌ ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Indians spend 15 billion hours waiting for customer service time in 2023 ServiceNow information
Koo

ಬೆಂಗಳೂರು: ಬಿಸಿನೆಸ್ ಟ್ರಾನ್ಸ್‌ಫಾರ್ಮೇಷನ್‌ಗೆ ಇರುವ ಎಐ ಪ್ಲಾಟ್‌ಫಾರ್ಮ್ ಆಗಿರುವ ಸರ್ವೀಸ್‌ನೌ (Servicenow) ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ.

18 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ 4500ಕ್ಕೂ ಹೆಚ್ಚು ಭಾರತೀಯರು ಲೋನರ್ಗನ್ ಸಹಯೋಗದಲ್ಲಿ ನಡೆಸಿದ ಈ ಅಧ್ಯಯನದಲ್ಲಿ ಪಾಲ್ಗೊಂಡಿದ್ದು, ಕಳೆದ ವರ್ಷದಲ್ಲಿ ಗ್ರಾಹಕ ಸೇವಾ ಕ್ಷೇತ್ರವನ್ನು ಅರ್ಥ ಮಾಡಿಕೊಳ್ಳಲು ನೆರವಾಗಿದ್ದಾರೆ. ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮಂದಿ ತಮ್ಮ ಕಾಯುವಿಕೆ ಸಮಯವು ಹಿಂದಿನ ವರ್ಷಗಳಿಗಿಂತ ಈಗ ಇನ್ನೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ನಿಧಾನ ಗತಿಯ ಸೇವೆ ಎಂದರೆ ಪ್ರತೀ ಗ್ರಾಹಕರ ಸಮಸ್ಯೆಯನ್ನು ಪರಿಹರಿಸಲು ಉದ್ಯೋಗಿಯೊಬ್ಬ ಸರಾಸರಿ 3.9 ದಿನಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದರ್ಥ. ವಿಶೇಷ ಎಂದರೆ ಪ್ರತಿಕ್ರಿಯಿಸಿದವರಲ್ಲಿ 66 ಪ್ರತಿಶತ ಮಂದಿ ತಮ್ಮ ಸಮಸ್ಯೆಯನ್ನು ಮೂರು ಕೆಲಸದ ದಿನಗಳಲ್ಲಿ ಪರಿಹರಿಸದಿದ್ದರೆ ಮತ್ತೊಂದು ಕಂಪನಿಗೆ ಹೋಗುವ ಮನಸ್ಸು ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಈ ಕುರಿತು ಸರ್ವೀಸ್‌ನೌ ಇಂಡಿಯಾ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್‌ನ ಹಿರಿಯ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಮೀತ್ ಮಾಥುರ್ ಮಾತನಾಡಿ, “ನಿಧಾನಗತಿಯ ಸೇವೆಯ ಕಾರಣದಿಂದಾಗಿ 2024ರಲ್ಲಿ ಭಾರತೀಯ ಉದ್ದಿಮೆಗಳು ತಮ್ಮ ಗ್ರಾಹಕರ ನೆಲೆಯಲ್ಲಿನ ಮೂರನೇ ಎರಡರಷ್ಟು ಭಾಗದ ಗ್ರಾಹಕರನ್ನು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿವೆ. ತಮ್ಮ ಸಮಸ್ಯೆ ಪರಿಹರಿಸಲು ಗರಿಷ್ಠ ಮೂರು ದಿನ ಕಾಯಬಹುದು, ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡರೆ ಬೇರೆ ಕಡೆಗೆ ಹೋಗಬೇಕಾಗುತ್ತದೆ ಎಂದು ಗ್ರಾಹಕರು ತಿಳಿಸಿದ್ದಾರೆ. ಅಷ್ಟೂ ಕೆಲಸವನ್ನು ಮಾಡಲು ಸಾಧ್ಯವಾಗದೇ ಇರುವ ಉದ್ಯಮಗಳು ಗ್ರಾಹಕರ ಬೆರಳ ತುದಿಯಲ್ಲಿ ಲಭ್ಯವಿರುವ ಎಐ ಆಧರಿತ ಸೆಲ್ಫ್- ಸರ್ವೀಸ್ ಉತ್ಪನ್ನಗಳನ್ನು ಇನ್‌ಸ್ಟಾಲ್ ಮಾಡಬೇಕು” ಎಂದು ತಿಳಿಸಿದ್ದಾರೆ.

ನಿಮಗೆ ಎಐ ಹೇಗೆ ಸಹಾಯ ಮಾಡಬಹುದು?

ಪ್ರತಿಕ್ರಿಯಿಸಿದವರಲ್ಲಿ ಸುಮಾರು ಮೂರನೇ ಎರಡರಷ್ಟು (62%) ಮಂದಿ ಕಳೆದ ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಸೆಲ್ಫ್ ಸರ್ವೀಸ್ ವ್ಯವಸ್ಥೆಯ ಮೂಲಕ ತಮ್ಮ ಸಮಸ್ಯೆ ಪರಿಹರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅರ್ಧದಷ್ಟು ಮಂದಿ ಅವರಿಗೆ ಚಾಟ್‌ಬೋಟ್‌ಗಳು (55%) ಮತ್ತು ಸೆಲ್ಫ್ ಹೆಲ್ಪ್ ಮಾರ್ಗದರ್ಶಿ (56%) ಮೇಲೆ ಇದ್ದ ನಂಬಿಕೆಗಳು ಈಗ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಈ ಅಧ್ಯಯನವು ಭಾರತೀಯರಲ್ಲಿ ಎಐ ಮೇಲೆ ನಂಬಿಕೆ ಹೆಚ್ಚಾಗಿರುವ ಗಮನಾರ್ಹ ವಿಚಾರವನ್ನು ಪ್ರಸ್ತುತ ಪಡಿಸುತ್ತದೆ. ವಿಶೇಷವಾಗಿ ಮೂರನೇ ಎರಡು ಭಾಗದಷ್ಟು ಮಂದಿ (66%) ಜೆನ್ ಎಐ ಉತ್ತಮ ಗ್ರಾಹಕ ಸೇವೆ ಒದಗಿಸುವ ವಿಶ್ವಾಸ ಹೊಂದಿದ್ದಾರೆ. ಸಾಂಪ್ರದಾಯಿಕ ವ್ಯಕ್ತಿ ಕೇಂದ್ರಿತ ಗ್ರಾಹಕ ಸೇವೆಗಿಂತ ಎಐ ಸೇವೆಯ ಮೇಲೆ 10% ನಂಬಿಕೆ ಹೆಚ್ಚಾಗಿದೆ. ಇವೆಲ್ಲವೂ ಜನರಲ್ಲಿ ಅದರಲ್ಲೂ ವಿಶೇಷವಾಗಿ ಯುವಜನತೆಯಲ್ಲಿ ಆದ್ಯತೆ ಬದಲಾಗಿರುವ ಬದಲಾವಣೆಯನ್ನು ತೋರಿಸುತ್ತದೆ.

ಈ ಕುರಿತಾಗಿ ಸುಮೀತ್ ಮಾಥುರ್, “ಗ್ರಾಹಕರು ಎಐನಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದು ಈಗ ಸ್ಪಷ್ಟವಾಗಿವೆ. ಪರಿಣಾಮಕಾರಿಯಾಗಿ ಸಮಸ್ಯೆ ಪರಿಹರಿಸುವುದು, ಸುಲಭವಾಗಿ ಬಳಸಲು ಸಾಧ್ಯವಾಗುವುದು, ಶೀಘ್ರವಾಗಿ ಪ್ರತಿಕ್ರಿಯೆ ನೀಡುವುದು ಮತ್ತು ನಿಖರವಾಗಿ ಪ್ರಶ್ನೆಯನ್ನು ಗ್ರಹಿಸುವುದು ಇತ್ಯಾದಿಗಳನ್ನು ಗ್ರಾಹಕರು ಬಯಸುತ್ತಾರೆ.

ಇದನ್ನೂ ಓದಿ: Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

ಮಾನವ-ಆಧರಿತ ಕೆಲಸದಿಂದ ಹಿಡಿದು ಎಐ ಒದಗಿಸುವ ವೈವಿಧ್ಯಮಯ ಸೌಲಭ್ಯಗಳನ್ನು ಬಳಸುವಷ್ಟರ ಮಟ್ಟಿಗೆ ಉಂಟಾಗಿರುವ ಈ ಬದಲಾವಣೆಯಿಂದ ಉದ್ಯಮ 4.0 ಯುಗದ ಆರಂಭವಾದಂತೆ ಕಾಣುತ್ತದೆ. ಗ್ರಾಹಕರ ಧಾರಣ ಶಕ್ತಿಯು ಕಡಿಮೆಯಾಗುತ್ತಿರುವ ಈ ಸವಾಲಿನ ಸಂದರ್ಭದಲ್ಲಿ ಉದ್ಯಮಗಳು ಎಐ ಅನ್ನು ಹೆಚ್ಚು ದುಡಿಸಿಕೊಳ್ಳಲು ಮತ್ತು ತಮ್ಮ ಉದ್ಯಮದ ಬೆಳವಣಿಗೆಯನ್ನು ಹೆಚ್ಚಿಸಲು, ದಕ್ಷತೆಯನ್ನು ಸುಧಾರಿಸಲು ಮತ್ತು ಸ್ಪರ್ಧಾತ್ಮಕ ಬಿಸಿನೆಸ್ ಕ್ಷೇತ್ರದಲ್ಲಿ ಉತ್ತಮ ಗ್ರಾಹಕರ ಸೇವೆ ಅನುಭವಗಳನ್ನು ನೀಡಲು ಮುಂದಾಗಲು ಇದು ಸೂಕ್ತ ಸಮಯವಾಗಿದೆ” ಎಂದು ತಿಳಿಸಿದ್ದಾರೆ.

ಸರ್ವೀಸ್‌ನೌ ಇದೀಗ ಭಾರತೀಯ ಉದ್ಯಮಗಳು ಮತ್ತು ಸರ್ಕಾರಿ ಏಜೆನ್ಸಿಗಳಿಗೆ ನೌ ಅಸಿಸ್ಟ್ ಮೂಲಕ ಎಐ ಸೌಲಭ್ಯವನ್ನು ಒದಗಿಸುತ್ತಿದೆ. ಉದ್ಯೋಗಿಗಳ ಮೇಲೆ ಇರುವ ಕೆಲಸದ ಹೊರೆಯನ್ನು ಎಐ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆ ಮೂಲಕ ಉದ್ಯೋಗಿಗಳು ಹೆಚ್ಚು ಸಂಕೀರ್ಣವಾದ ಮತ್ತು ಮೌಲ್ಯವರ್ಧಿತ ಸಂವಹನಗಳ ಮೇಲೆ ಗಮನ ಕೇಂದ್ರೀಕರಿಸಲು ಅನುವು ಮಾಡಿಕೊಡುತ್ತದೆ. ಅದರ ಜತೆಗೆ ಹಳೆಯ ಗ್ರಾಹಕ ಮಾಹಿತಿಗಳನ್ನು ವಿಶ್ಲೇಷಿಸುವ ಮೂಲಕ ಎಐ, ವೈಯಕ್ತಿಕ ಆದ್ಯತೆಗಳು, ಅವಶ್ಯಕತೆಗಳು ಮತ್ತು ವರ್ತನೆಗಳನ್ನು ಮೊದಲೇ ತಿಳಿದುಕೊಳ್ಳಬಹುದಾಗಿದೆ.

ಆ ಮೂಲಕ ಗ್ರಾಹಕರ ಜತೆಗೆ ವೈಯಕ್ತೀಕರಿಸಿದ ಮಾತುಕತೆ ನಡೆಸಬಹುದಾಗಿದೆ. ಈ ಉದ್ದೇಶಿತ ವಿಧಾನದ ಮೂಲಕ ಗ್ರಾಹಕರಲ್ಲಿ ತಿಳುವಳಿಕೆ ಮತ್ತು ಮೌಲ್ಯ ಪ್ರಜ್ಞೆಯನ್ನು ಬೆಳೆಸಬಹುದಾಗಿದೆ. ಆ ಮೂಲಕ ಬ್ರಾಂಡ್ ಜತೆಗಿನ ಅವರ ಸಂಪರ್ಕವನ್ನು ಹೆಚ್ಚಿಸಿ ಅವರ ಒಟ್ಟಾರೆ ಅನುಭವವನ್ನು ಉತ್ತಮಗೊಳಿಸಬಹುದಾಗಿದೆ.

ನಿಧಾನಗತಿಯ ಸೇವೆಯೇ ಗ್ರಾಹಕ ಸೇವೆ ವಿಫಲಗೊಳ್ಳಲು ಕಾರಣ

ಈ ಅಧ್ಯಯನದ ಪ್ರಕಾರ ಹಲವು ರಚನಾತ್ಮಕ ಸಮಸ್ಯೆಗಳು ಗ್ರಾಹಕರ ಕಾಯುವ ಸಮಯ ಗಣನೀಯವಾಗಿ ಹೆಚ್ಚಲು ಕಾರಣವಾಗಿದೆ. ವಿಶೇಷವಾಗಿ 48 ಪ್ರತಿಶತ ಭಾರತೀಯರು ಅಸಮರ್ಪಕ ಆಂತರಿಕ ಸಂವಹನವೇ ಗ್ರಾಹಕ ಸೇವಾ ವಿಳಂಬಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ. 47 ಪ್ರತಿಶತ ಗ್ರಾಹಕರು ಸೇವಾ ಸಿಬ್ಬಂದಿಗೆ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ಕೊರತೆಯಿದೆ ಎಂದು ಹೇಳಿದ್ದಾರೆ. 44 ಪ್ರತಿಶತ ಭಾರತೀಯರು ವಿವಿಧ ಇಲಾಖೆಗಳ ನಡುವೆ ಸಹಯೋಗ ಮತ್ತು ಜವಾಬ್ದಾರಿಯ ಕೊರತೆ ಇದೆ ಎಂದು ತಿಳಿಸಿದ್ದಾರೆ. 44 ಪ್ರತಿಶತದಷ್ಟು ಜನರು ಹಳೆಯ ಸಮಸ್ಯೆಗಳ ದಾಖಲೆಗಳನ್ನು ಇಟ್ಟುಕೊಳ್ಳದೇ ಇರುವುದೇ ಸಮಸ್ಯಗೆ ಕಾರಣ ಎಂದು ಹೇಳುತ್ತಾರೆ. 41 ಪ್ರತಿಶತದಷ್ಟು ಜನರು ತಮ್ಮ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವಲ್ಲಿ ವಿಳಂಬವಾಗಲು ಮಾತುಕತೆ ಮೂಲಕ ಸರಿಪಡಿಸಿಕೊಳ್ಳಬಹುದಾದ ಆಂತರಿಕ ವ್ಯವಸ್ಥೆಗಳಲ್ಲಿನ ಕೆಲವು ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸುತ್ತಾರೆ.

ಪಾರದರ್ಶಕತೆ, ವೇಗ ಮತ್ತು ಸಹಾನುಭೂತಿ ಮುಖ್ಯ

60 ಪ್ರತಿಶತದಷ್ಟು ಭಾರತೀಯರು ಗ್ರಾಹಕ ಸೇವಾ ತಂಡಗಳು ಸಮಸ್ಯೆಗೆ ಪರಿಹಾರ ಒದಗಿಸುವ ವೇಗವನ್ನು ಹೆಚ್ಚುಗೊಳಿಸಲು ಬಯಸುತ್ತಾರೆ. ಅರ್ಧದಷ್ಟು ಜನರು ಗ್ರಾಹಕರನ್ನು ಹೋಲ್ಡ್‌ನಲ್ಲಿ ಇರಿಸಿಕೊಳ್ಳುವ ಸಮಯವನ್ನು ಕಡಿಮೆ ಮಾಡಲು ಬಯಸುತ್ತಾರೆ. ಸರಿಸುಮಾರು ಅರ್ಧದಷ್ಟು (48 ಪ್ರತಿಶತ) ಜನರು ಉತ್ತಮ ಗ್ರಾಹಕ ಸೇವಾ ಸೌಲಭ್ಯವನ್ನು ಬಯಸುತ್ತಾರೆ. ಸುಮಾರು 5ರಲ್ಲಿ 2 ಭಾರತೀಯರು (40 ಪ್ರತಿಶತ) ಪ್ರತಿಕ್ರಿಯೆ ನೀಡುವ ಸಮಯವನ್ನು ತೀವ್ರಗೊಳಿಸಬೇಕು ಅಥವಾ ಕಡಿಮೆಗೊಳಿಸಬೇಕು ಎಂದು ಬಯಸುತ್ತಾರೆ. ಈ ನಿಟ್ಟಿನಲ್ಲಿ 40 ಪ್ರತಿಶತ ಮಂದಿ ಸ್ವ-ಸಹಾಯ ಮಾರ್ಗದರ್ಶಿಗಳು (ಸೆಲ್ಫ್ ಹೆಲ್ಪ್ ಗೈಡ್) ಮತ್ತು ಸಂಪನ್ಮೂಲಗಳ ಬಳಕೆಯನ್ನು ಸುಧಾರಿಸಬೇಕು ಎಂದು ತಿಳಿಸಿದ್ದಾರೆ. 39 ಪ್ರತಿಶತ ಮಂದಿ ಚಾಟ್ ಬಾಟ್‌ಗಳ ಬಳಕೆಯನ್ನು ಹೆಚ್ಚುಗೊಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಈ ಬಗ್ಗೆ ಸುಮೀತ್ ಮಾಥುರ್ ಮಾತನಾಡಿ, “ಭಾರತೀಯ ಉದ್ಯಮಗಳ ಬಳಿಗೆ ಈಗ ಎರಡು ಆಯ್ಕೆಗಳಿವೆ. ಒಂದು ಹಳೆಯ ಪದ್ಧತಿಗಳನ್ನು ಬಳಸಿ ತಮ್ಮ ಗ್ರಾಹಕರ ವಿಶ್ವಾಸವನ್ನು ಕಳೆದುಕೊಳ್ಳುವುದು ಅಥವಾ ಇನ್ನೊಂದು ಗ್ರಾಹಕರು ಬಯಸುವುದನ್ನು ನೀಡುವಂತಹ ವಿಧಾನವನ್ನು ವಿನ್ಯಾಸಗೊಳಿಸಿ, ಅವರು ಬಯಸಿದ್ದು ನೀಡುವಂತೆ ಮರುಯೋಚನೆ ಮಾಡುವುದು. ಈ ಅಧ್ಯಯನದಿಂದ ಗ್ರಾಹಕರು ಎಐ ಆಧರಿತ ಚಾಟ್‌ಬಾಟ್‌ಗಳು ಅಥವಾ ಸ್ವಯಂ-ಸಹಾಯ ಮಾರ್ಗದರ್ಶಿಗಳನ್ನು ಬಳಸಲು ಸಿದ್ಧರಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಮತ್ತು ಗ್ರಾಹಕ ಸೇವಾ ಪ್ರತಿನಿಧಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಉದ್ಯಮಗಳು ಎಐ ಅನ್ನು ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

Continue Reading

ಗ್ಯಾಜೆಟ್ಸ್

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್‌ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್‌ (Apple iPhones) ಈ ಬಾರಿ ಪ್ರೊ ಮಾಡೆಲ್‌ಗಳ ಬೆಲೆಗಳನ್ನು ಕಡಿಮೆ ಮಾಡಿದೆ.

VISTARANEWS.COM


on

By

Apple iPhones
Koo

ನವದೆಹಲಿ: ಆ್ಯಪಲ್‌ ತನ್ನ ಎಲ್ಲ ಮಾದರಿಗಳ ಐಫೋನ್‌ಗಳ (Apple iPhones) ಬೆಲೆಗಳನ್ನು ಶೇ. 3- 4ರಷ್ಟು ಕಡಿತಗೊಳಿಸಿದೆ. ಇದರಿಂದ ಗ್ರಾಹಕರು ಪ್ರೊ ಅಥವಾ ಪ್ರೊ ಮ್ಯಾಕ್ಸ್ ಮಾದರಿ ಮೇಲೆ 5,100 ರಿಂದ 6,000 ರೂ. ವರೆಗೆ (Apple cut prices) ಉಳಿಸಬಹುದಾಗಿದೆ. ಐಫೋನ್ 13, 14 ಮತ್ತು 15 ಸೇರಿದಂತೆ ಇನ್ನು ಕೆಲವು ಮಾದರಿಯ ಐಫೋನ್‌ಗಳು ಮೇಲೆ 300 ರೂ. ಮತ್ತು ಐಫೋನ್ ಎಸ್‌ಇ 2,300 ರೂ. ಕಡಿತ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಆ್ಯಪಲ್‌ ತನ್ನ ಪ್ರೊ ಮಾದರಿಗಳಿಗೆ (Pro models) ಬೆಲೆಗಳನ್ನು ಕಡಿಮೆ ಮಾಡಿದೆ. ಹೊಸ ಪ್ರೊ ಮಾದರಿಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ ಅನಂತರ ಕಂಪೆನಿಯು ಹಳೆಯ ಪ್ರೊ ಮಾದರಿಗಳನ್ನು ನಿಲ್ಲಿಸುತ್ತದೆ. ಹಳೆಯ ಪ್ರೊ ಮಾಡೆಲ್‌ಗಳ ದಾಸ್ತಾನುಗಳನ್ನು ಮಾತ್ರ ವಿತರಕರು ಮತ್ತು ಮರುಮಾರಾಟಗಾರರ ಮೂಲಕ ರಿಯಾಯಿತಿ ದರದಲ್ಲಿ ತೆರವು ಮಾಡಲಾಗುತ್ತದೆ. ಹೀಗಾಗಿ ಪ್ರೊ ಮಾದರಿಗಳ ಗರಿಷ್ಠ ಚಿಲ್ಲರೆ ಮಾರಾಟದ ಬೆಲೆಯನ್ನು (MRP) ಇಲ್ಲಿ ಕಡಿಮೆ ಮಾಡಲಾಗಿಲ್ಲ.

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್‌ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್‌ ಈ ಬಾರಿ ಪ್ರೊ ಮಾಡೆಲ್‌ಗಳ ಬೆಲೆಗಳನ್ನು ಕಡಿಮೆ ಮಾಡಿದೆ. ಮೊಬೈಲ್ ಫೋನ್‌ಗಳ ಹೊರತಾಗಿ ಮೊಬೈಲ್ ಫೋನ್ ಚಾರ್ಜರ್‌ಗಳಿಗೆ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ ಜೋಡಣೆ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸಲಾಗಿದೆ.

Apple iPhones
Apple iPhones


ಪ್ರಸ್ತುತ, ಭಾರತದಲ್ಲಿ ಮಾರಾಟವಾಗುವ ಆಮದು ಮಾಡಿದ ಸ್ಮಾರ್ಟ್‌ಫೋನ್‌ಗಳು ಶೇ. 18ರಷ್ಟು ಜಿಎಸ್‌ಟಿ ಮತ್ತು ಶೇ. 22ರಷ್ಟು ಕಸ್ಟಮ್ಸ್ ಸುಂಕವನ್ನು ಪಾವತಿಸಬೇಕಾಗುತ್ತದೆ. ಇದರಲ್ಲಿ ಹೆಚ್ಚುವರಿ ಶುಲ್ಕ, ಮೂಲ ಕಸ್ಟಮ್ಸ್ ಸುಂಕ ಕಳೆದು ಶೇ. 10ರಷ್ಟುಉಳಿಯುತ್ತದೆ. ಬಜೆಟ್ ಕಡಿತದ ಅನಂತರ ಒಟ್ಟು ಕಸ್ಟಮ್ಸ್ ಸುಂಕವು ಶೇ. 16.5ರಷ್ಟಾಗಿರುತ್ತದೆ. ಇದರಲ್ಲಿ ಶೇ. 15% ಮೂಲ ಮತ್ತು ಶೇ. 1.5 ಹೆಚ್ಚುವರಿ ಶುಲ್ಕ ಸೇರಿದೆ. ಭಾರತದಲ್ಲಿ ತಯಾರಿಸಿದ ಫೋನ್‌ಗಳಿಗೆ ಕೇವಲ ಶೇ. 18ರಷ್ಟು ಜಿಎಸ್ ಟಿ ವಿಧಿಸಲಾಗುತ್ತದೆ.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಪ್ರಸ್ತುತ ಭಾರತದಲ್ಲಿ ಮಾರಾಟವಾಗುವ ಶೇ.99ರಷ್ಟು ಆ್ಯಪಲ್‌ನ ಮೊಬೈಲ್ ಫೋನ್‌ಗಳನ್ನು ಸ್ಥಳೀಯವಾಗಿ ತಯಾರಿಸಲಾಗುತ್ತದೆ. ಆದರೆ ಆಯ್ದ ಉನ್ನತ ಮಟ್ಟದ ಮಾದರಿಗಳನ್ನು ಮಾತ್ರ ಆಮದು ಮಾಡಿಕೊಳ್ಳಲಾಗುತ್ತದೆ.

Continue Reading

ವಾಣಿಜ್ಯ

Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

Samsung Galaxy: ಸ್ಯಾಮ್‌ಸಂಗ್ ತನ್ನ 6ನೇ ಜನರೇಷನ್‌ನ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳಾದ ಗ್ಯಾಲಕ್ಸಿ ಝಡ್ ಫೋಲ್ಡ್6 ಮತ್ತು ಗ್ಯಾಲಕ್ಸಿ ಝಡ್ ಫ್ಲಿಪ್6 ಫೋನ್‌ಗಳ ಪ್ರೀ ಬುಕಿಂಗ್‌ನಲ್ಲಿ ದಾಖಲೆ ಮಾಡಿದೆ. ಹಳೆಯ ಜನರೇಷನ್‌ನ ಫೋಲ್ಡೆಬಲ್ ಫೋನ್‌ಗಳಿಗೆ ಹೋಲಿಸಿದರೆ ಗ್ಯಾಲಕ್ಸಿ ಝಡ್ ಫೋಲ್ಡ್6, ಝಡ್ ಫ್ಲಿಪ್6 ಫೋನ್ ಗಳ ಪ್ರೀ ಬುಕಿಂಗ್‌ನಲ್ಲಿ 40% ಹೆಚ್ಚಳ ಉಂಟಾಗಿದ್ದು, ಈ ಪೋನ್‌ಗಳು ಭಾರತದಲ್ಲಿ ಅತಿ ಹೆಚ್ಚು ಯಶಸ್ಸು ಸಾಧಿಸಿದ ಝಡ್ ಸರಣಿಯ ಫೋನ್‌ಗಳು ಎಂಬ ಹೆಗ್ಗಳಿಕೆ ಗಳಿಸಿವೆ.

VISTARANEWS.COM


on

Samsung Galaxy Z Fold6 Z Flip6 Smartphones Good Customer Response
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ (Samsung Galaxy) ತನ್ನ 6ನೇ ಜನರೇಷನ್‌ನ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳಾದ ಗ್ಯಾಲಕ್ಸಿ ಝಡ್ ಫೋಲ್ಡ್6 ಮತ್ತು ಗ್ಯಾಲಕ್ಸಿ ಝಡ್ ಫ್ಲಿಪ್6 ಫೋನ್‌ಗಳ ಪ್ರೀ ಬುಕಿಂಗ್‌ನಲ್ಲಿ ದಾಖಲೆ ಮಾಡಿದೆ ಎಂದು ಕಂಪನಿ ಹೇಳಿಕೊಂಡಿದೆ. ಹಳೆಯ ಜನರೇಷನ್‌ನ ಫೋಲ್ಡೆಬಲ್ ಫೋನ್‌ಗಳಿಗೆ ಹೋಲಿಸಿದರೆ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್ 6 ಫೋನ್‌ಗಳ ಪ್ರೀ ಬುಕಿಂಗ್‌ನಲ್ಲಿ 40% ಹೆಚ್ಚಳ ಉಂಟಾಗಿದ್ದು, ಈ ಪೋನ್‌ಗಳು ಭಾರತದಲ್ಲಿ ಅತಿ ಹೆಚ್ಚು ಯಶಸ್ಸು ಸಾಧಿಸಿದ ಝಡ್ ಸರಣಿಯ ಫೋನ್‌ಗಳು ಎಂಬ ಹೆಗ್ಗಳಿಕೆ ಗಳಿಸಿವೆ.

ಭಾರತದಲ್ಲಿ ಮತ್ತು ವಿಶ್ವಾದ್ಯಂತ ಗ್ಯಾಲಕ್ಸಿ ಝಡ್ ಫೋಲ್ಡ್6 ಮತ್ತು ಝಡ್ ಫ್ಲಿಪ್6ನ ಪ್ರೀ ಬುಕಿಂಗ್ ಅನ್ನು ಜುಲೈ 10ರಂದು ಪ್ರಾರಂಭಿಸಲಾಗಿತ್ತು. ಈ ಹೊಸ ಸ್ಮಾರ್ಟ್‌ಫೋನ್‌ಗಳು ಮತ್ತು ಇತ್ತೀಚೆಗೆ ಬಿಡುಗಡೆಯಾದ ಗ್ಯಾಲಕ್ಸಿ ವಾಚ್ ಅಲ್ಟ್ರಾ, ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ಬಡ್ಸ್3 ಪ್ರೊ ಮತ್ತು ಗ್ಯಾಲಕ್ಸಿ ಬಡ್ಸ್3 ಭಾರತದಲ್ಲಿ ಇದೇ ಜು.24ರಿಂದ ಮಾರಾಟಕ್ಕೆ ಲಭ್ಯವಾಗಲಿದೆ.

ಈ ಕುರಿತು ಸ್ಯಾಮ್‌ಸಂಗ್ ಇಂಡಿಯಾದ ಎಂಎಕ್ಸ್ ಬಿಸಿನೆಸ್‌ನ ಹಿರಿಯ ಉಪಾಧ್ಯಕ್ಷ ರಾಜು ಪುಲ್ಲನ್ ಮಾತನಾಡಿ, “ನಮ್ಮ ಹೊಸ ಫೋಲ್ಡೆಬಲ್‌ಗಳಾದ ಗ್ಯಾಲಕ್ಸಿ ಝಡ್ ಫೋಲ್ಡ್6 ಮತ್ತು ಗ್ಯಾಲಕ್ಸಿ ಝಡ್ ಫ್ಲಿಪ್6ಗೆ ಭಾರತದ ಗ್ರಾಹಕರಿಂದ ದೊರೆತಿರುವ ಅಭೂತಪೂರ್ವ ಪ್ರತಿಕ್ರಿಯೆಯಿಂದ ನಾವು ಸಂತೋಷಗೊಂಡಿದ್ದೇವೆ. ಹೊಸ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳ ಪ್ರೀ ಬುಕಿಂಗ್ ನಲ್ಲಿ 1.4x ಹೆಚ್ಚಳ ಉಂಟಾಗಿದ್ದು, ಇದು ಹೊಸ ತಂತ್ರಜ್ಞಾನವನ್ನು ವೇಗವಾಗಿ ಅಳವಡಿಸಿಕೊಳ್ಳುವವರಲ್ಲಿ ಭಾರತೀಯ ಗ್ರಾಹಕರು ಮುಂಚೂಣಿಯಲ್ಲಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದರು.

ಇದನ್ನೂ ಓದಿ: Pralhad joshi: ನವೀಕರಿಸಬಹುದಾದ ಇಂಧನ ಉತ್ಪಾದನೆ; ವಿಶ್ವದಲ್ಲೇ 4ನೇ ಸ್ಥಾನದಲ್ಲಿ ಭಾರತ

ಆರನೇ ಜನರೇಷನ್‌ನ ನಮ್ಮ ಹೊಸ ಫೋಲ್ಡೇಬಲ್ ಸ್ಮಾರ್ಟ್‌ಫೋನ್‌ಗಳು ಗ್ಯಾಲಕ್ಸಿ ಎಐನ ಹೊಸ ಅಧ್ಯಾಯವನ್ನು ಆರಂಭಿಸಿವೆ. ಈ ಗ್ಯಾಲಕ್ಸಿ ಎಐ ಸೌಲಭ್ಯವು ಬಳಕೆದಾರರ ಅನುಭವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ಸಂವಹನ, ಉತ್ಪಾದಕತೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸಿ, ಅನನ್ಯ ಮೊಬೈಲ್ ಅನುಭವಕ್ಕೆ ಪಾತ್ರರಾಗುವ ಸೌಕರ್ಯ ಒದಗಿಸುತ್ತದೆ. ಗ್ಯಾಲಕ್ಸಿ ಝಡ್ ಫೋಲ್ಡ್6 ಮತ್ತು ಗ್ಯಾಲಕ್ಸಿ ಝಡ್ ಫ್ಲಿಪ್6ನ ಯಶಸ್ಸು ಭಾರತದಲ್ಲಿನ ಪ್ರೀಮಿಯಂ ವಿಭಾಗದ ನಾಯಕತ್ವವನ್ನು ಮುಂದುವರಿಸಲು ನಮಗೆ ಸಹಾಯ ಮಾಡುತ್ತದೆ” ಎಂದು ತಿಳಿಸಿದರು.

ಭಾರತೀಯ ಗ್ರಾಹಕರಿಗೆ ತಲುಪಿಸಲು ಸ್ಯಾಮ್‌ಸಂಗ್‌ನ ನೋಯ್ಡಾ ಕಾರ್ಖಾನೆಯಲ್ಲಿ ಗ್ಯಾಲಕ್ಸಿ ಝಡ್ ಫೋಲ್ಡ್6 ಮತ್ತು ಝಡ್ ಫ್ಲಿಪ್6 ಅನ್ನು ತಯಾರಿಸಲಾಗುತ್ತಿದೆ. ಹೊಸ ಫೋಲ್ಡೆಬಲ್‌ಗಳು ಇದುವರೆಗಿನ ಫೋಲ್ಡೆಬಲ್‌ಗಳಿಗಿಂತ ಹೆಚ್ಚು ತೆಳ್ಳಗಿರುವ ಮತ್ತು ಹಗುರವಾಗಿರುವ ಗ್ಯಾಲಕ್ಸಿ ಝಡ್ ಸರಣಿಯ ಸಾಧನಗಳಾಗಿವೆ. ಸಿಮ್ಮೆಟ್ರಿಕಲ್ ವಿನ್ಯಾಸ ಅಂದ್ರೆ ಎರಡೂ ಬದಿಯಲ್ಲಿ ಒಂದೇ ಥರ ಕಾಣುವ ವಿನ್ಯಾಸ ಮತ್ತು ನೇರವಾದ ಎಡ್ಜ್ ಅನ್ನು ಹೊಂದಿವೆ.

ಗ್ಯಾಲಕ್ಸಿ ಝಡ್ ಸರಣಿಯು ಅತ್ಯುತ್ತಮ ಆರ್ಮರ್ ಅಲ್ಯೂಮಿನಿಯಂ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಅನ್ನು ಹೊಂದಿದ್ದು, ಇದು ಇನ್ನೂ ಹೆಚ್ಚು ಬಾಳಿಕೆ ಬರುವ ಗ್ಯಾಲಕ್ಸಿ ಝಡ್ ಸರಣಿಯ ಫೋನ್‌ಗಳಾಗಿವೆ. ಗ್ಯಾಲಕ್ಸಿ ಝಡ್ ಫೋಲ್ಡ್6 ಮತ್ತು ಫ್ಲಿಪ್6 ಗಳು ಗ್ಯಾಲಕ್ಸಿಯ ಸ್ನ್ಯಾಪ್ ಡ್ರಾಗನ್® 8 ಜೆನ್ 3 ಮೊಬೈಲ್ ಪ್ಲಾಟ್‌ಫಾರ್ಮ್‌ ಹೊಂದಿದ್ದು, ಇದು ಅತ್ಯಾಧುನಿಕ ಸ್ನಾಪ್‌ಡ್ರಾಗನ್ ಮೊಬೈಲ್ ಪ್ರೊಸೆಸರ್ ಆಗಿದೆ. ಅತ್ಯುತ್ತಮ ದರ್ಜೆಯ ಸಿಪಿಯು, ಜಿಪಿಯು ಮತ್ತು ಎನ್‌ಪಿಯು ಹೊಂದಿದ್ದು, ಅತ್ಯಪೂರ್ವ ಕಾರ್ಯಕ್ಷಮತೆಯನ್ನು ಒದಗಿಸುತ್ತದೆ. ವಿಶೇಷವಾಗಿ ಪ್ರೊಸೆಸರ್ ಅನ್ನು ಎಐಗೆ ಸೂಕ್ತವಾಗಿ ಹೊಂದುವಂತೆ ವಿನ್ಯಾಸ ಮಾಡಲಾಗಿದೆ ಮತ್ತು ಒಟ್ಟಾರೆಯಾಗಿ ಸುಧಾರಿತ ಕಾರ್ಯಕ್ಷಮತೆ ಜತೆಗೆ ಉತ್ತಮ ಗ್ರಾಫಿಕ್ಸ್ ಸೌಕರ್ಯವನ್ನೂ ನೀಡುತ್ತದೆ.

ಇದನ್ನೂ ಓದಿ: Kannada New Movie: ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್‌ ರಾಜ್‌ಕುಮಾರ್; ‘ಕುಬುಸ’ ಚಿತ್ರದ ಟ್ರೈಲರ್ ಬಿಡುಗಡೆ

ಗ್ಯಾಲಕ್ಸಿ ಝಡ್ ಫೋಲ್ಡ್6 ಎಐ- ಆಧರಿತ ಫೀಚರ್‌ಗಳು ಮತ್ತು ಟೂಲ್ ಗಳನ್ನು ಒದಗಿಸುತ್ತವೆ. ಆ ಫೀಚರ್‌ಗಳಲ್ಲಿ ನೋಟ್ ಅಸಿಸ್ಟ್, ಸ್ಕೆಚ್ ಟು ಇಮೇಜ್, ಇಂಟರ್‌ಪ್ರಿಟರ್, ಫೋಟೋ ಅಸಿಸ್ಟ್ ಮತ್ತು ಇನ್‌ಸ್ಟಾಂಟ್ ಸ್ಲೋ-ಮೋ ಒಳಗೊಂಡಿವೆ.

ಗ್ಯಾಲಕ್ಸಿ ಝಡ್ ಫೋಲ್ಡ್6 ಈಗ ದೀರ್ಘಾವಧಿಯ ಗೇಮಿಂಗ್ ಸೆಷನ್‌ನಲ್ಲಿ ತೊಡಗಿಕೊಳ್ಳಲು ಅನುಕೂಲತೆ ಒದಗಿಸುವ 1.6x ಲಾರ್ಜರ್ ವೇಪರ್ ಚೇಂಬರ್ ಅನ್ನು ಹೊಂದಿದೆ ಮತ್ತು ರೇ ಟ್ರೇಸಿಂಗ್ ವ್ಯವಸ್ಥೆಯು 7.6-ಇಂಚಿನ ಪರದೆಯ ಮೇಲೆ ಅತ್ಯುತ್ತಮ ಗುಣಮಟ್ಟದ ಗ್ರಾಫಿಕ್ಸ್ ಸೌಕರ್ಯ ಒದಗಿಸುತ್ತದೆ. ಇವೆಲ್ಲಾ ಸೌಕರ್ಯಗಳು ಹಾಗೂ 2,600 ಎನ್ಐಟಿ ವರೆಗಿನ ಬ್ರೈಟ್ ಆದ ಡಿಸ್ ಪ್ಲೇ ಸೇರಿಕೊಂಡು ಗೇಮಿಂಗ್ ಅನುಭವವನ್ನು ತೀವ್ರಗೊಳಿಸುತ್ತದೆ.

ಗ್ಯಾಲಕ್ಸಿ ಝಡ್ ಫ್ಲಿಪ್6 ಈಗ ಹೊಸತಾಗಿ ಕಸ್ಟಮೈಸೇಶನ್ ಸೌಲಭ್ಯ ನೀಡುತ್ತದೆ ಮತ್ತು ಸೃಜನಶೀಲ ಫೀಚರ್‌ಗಳ ಶ್ರೇಣಿಯನ್ನು ಒದಗಿಸುತ್ತದೆ. ಆದ್ದರಿಂದ ನೀವು ಪ್ರತಿ ಕ್ಷಣದಲ್ಲಿಯೂ ಇದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬಹುದಾಗಿದೆ. 3.4-ಇಂಚಿನ ಸೂಪರ್ ಅಮೋಲ್ಡ್ ಫ್ಲೆಕ್ಸ್‌ ವಿಂಡೋ ಮೂಲಕ ನೀವು ಫೋನ್ ಅನ್ನು ತೆರೆಯದೆಯೇ ಎಐ ಆಧರಿತ ಕಾರ್ಯ ನಿರ್ವಹಣೆಗಳನ್ನು ಮಾಡಬಹುದಾಗಿದೆ. ಯಾವುದಾದರೂ ಟೆಕ್ಸ್ಟ್ ಮೆಸೇಜ್‌ಗೆ ಸಾಧನೆ ಸೂಚಿಸಿದ ಮೆಸೇಜ್ ರಿಪ್ಲೈ ಮಾಡಬಹುದಾಗಿದೆ. ನಿಮ್ಮ ಇತ್ತೀಚಿನ ಮೆಸೇಜ್‌ಗಳನ್ನು ವಿಶ್ಲೇಷಿಸುವ ಮೂಲಕ ಈಗಾಗಲೇ ಸಿದ್ಧವಿರುವ ಸೂಕ್ತವಾದ ಮೆಸೇಜ್‌ಗಳನ್ನು ಕಳುಹಿಸಲು ಎಐ ಸೂಚಿಸುತ್ತದೆ.

ಫ್ಲೆಕ್ಸ್‌ ಕ್ಯಾಮ್ ಈಗ ಹೊಸ ಅಟೋ ಜೂಮ್‌ ಜತೆಗೆ ಬರುತ್ತದೆ. ಈ ಅಟೋ ಜೂಮ್ ನೀವು ತೆಗೆಯಲು ಉದ್ದೇಶಿಸಿರುವ ಶಾಟ್‌ಗೆ, ನೀವು ಯಾವುದೇ ಅಗತ್ಯ ಹೊಂದಾಣಿಕೆಗಳನ್ನು ಮಾಡುವ ಮೊದಲೇ ಫೋಟೋ ವಸ್ತುವನ್ನು ವಿಶ್ಲೇಷಿಸಿ ಝೂಮ್ ಇನ್ ಔಟ್ ಮಾಡುವ ಮೂಲಕ ಅತ್ಯುತ್ತಮವಾದ ಫ್ರೇಮ್ ಅನ್ನು ಸೆಟ್ ಮಾಡುತ್ತದೆ. ಹೊಸ 50 ಎಂಪಿ ವೈಡ್ ಮತ್ತು 12 ಎಂಪಿ ಅಲ್ಟ್ರಾ-ವೈಡ್ ಸೆನ್ಸರ್‌ಗಳು ಫೋಟೋಗಳಲ್ಲಿ ಸ್ಪಷ್ಟತೆ ಮತ್ತು ಸೂಕ್ಷ್ಮ ವಿವರಗಳು ಇರುವಂತೆ ನೋಡಿಕೊಳ್ಳುತ್ತದೆ. ಆ ಮೂಲಕ ವಿಶಿಷ್ಟ ಕ್ಯಾಮರಾ ಅನುಭವವನ್ನು ಒದಗಿಸುತ್ತವೆ. ಹೊಸ 50 ಎಂಪಿ ಸೆನ್ಸರ್ ಶಬ್ದ- ಮುಕ್ತ ಫೋಟೋ ತೆಗೆಯಲು 2x ಆಪ್ಟಿಕಲ್ ಜೂಮ್ ಅನ್ನು ಹೊಂದಿದೆ. 10x ಜೂಮ್‌ ಜತೆಗೆ ಸುಧಾರಿತ ಶೂಟಿಂಗ್ ಅನುಭವಕ್ಕಾಗಿ ಎಐ ಜೂಮ್ ಕೂಡ ಲಭ್ಯವಿದೆ. ಗ್ಯಾಲಕ್ಸಿ ಝಡ್ ಫ್ಲಿಪ್6 ಈಗ ಹೆಚ್ಚು ಬ್ಯಾಟರಿ ಬಾಳಿಕೆಯೊಂದಿಗೆ ಬರುತ್ತದೆ ಮತ್ತು ಮೊದಲ ಬಾರಿಗೆ ವೇಪರ್ ಚೇಂಬರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಗ್ಯಾಲಕ್ಸಿ ಝಡ್ ಫೋಲ್ಡ್6 ಬೆಲೆ ರೂ. 164999 (12ಜಿಬಿ+256 ಜಿಬಿ)ರಿಂದ ಪ್ರಾರಂಭವಾಗುತ್ತದೆ. ಗ್ಯಾಲಕ್ಸಿ ಝಡ್ ಫ್ಲಿಪ್6 ಬೆಲೆ ರೂ. 109999 (12 ಜಿಬಿ+256 ಜಿಬಿ)ಗೆ ಲಭ್ಯವಿದೆ.

ಗ್ಯಾಲಕ್ಸಿ ಝಡ್ ಫೋಲ್ಡ್6 ಮತ್ತು ಗ್ಯಾಲಕ್ಸಿ ಝಡ್ ಫ್ಲಿಪ್6 ಜತೆಗೆ ಸ್ಯಾಮ್‌ಸಂಗ್, ಎಐ-ಆಧರಿತ ಉತ್ಪನ್ನಗಳಾದ ಗ್ಯಾಲಕ್ಸಿ ವಾಚ್ ಅಲ್ಟ್ರಾ, ಗ್ಯಾಲಕ್ಸಿ ವಾಚ್7 ಮತ್ತು ಗ್ಯಾಲಕ್ಸಿ ಬಡ್ಸ್3 ಸರಣಿಗಳನ್ನು ಪರಿಚಯಿಸಿದ್ದು, ಇವುಗಳಿಗೂ ಜುಲೈ 10 ರಂದು ಭಾರತದಲ್ಲಿ ಪ್ರೀ ಬುಕಿಂಗ್ ಆರಂಭ ಆಗಿದೆ.

ಇದನ್ನೂ ಓದಿ: Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!

ಗ್ಯಾಲಕ್ಸಿ ವಾಚ್7 ಬೆಲೆ ರೂ. 29999ರಿಂದ ಪ್ರಾರಂಭವಾಗುತ್ತದೆ ಮತ್ತು ಗ್ಯಾಲಕ್ಸಿ ವಾಚ್ ಅಲ್ಟ್ರಾ ಬೆಲೆ ರೂ. 59999 ಆಗಿದೆ. ಸ್ಯಾಮ್‌ಸಂಗ್ ನ ಹೊಸ ಗ್ಯಾಲಕ್ಸಿ ಬಡ್ಸ್3 ಬೆಲೆ ರೂ. 14999 ಆಗಿದೆ. ಗ್ಯಾಲಕ್ಸಿ ಬಡ್ಸ್3 ಪ್ರೊ ಬೆಲೆ ರೂ. 19999 ಆಗಿದೆ ಎಂದು ತಿಳಿಸಿದೆ.

Continue Reading
Advertisement
Paris Olympics
ಕ್ರೀಡೆ2 mins ago

Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

intel layoffs
ವಿದೇಶ9 mins ago

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Sexual Abuse
Latest15 mins ago

Sexual Abuse: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಮಗು ಜನನ! ಆಘಾತಗೊಂಡು ಅಲ್ಲೇ ಕೂತಿದ್ದ ಬಾಲಕಿ

BJP-JDS Padayatra
ಕರ್ನಾಟಕ18 mins ago

BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

1 lakh crore Rs dues paid to farmers in current sugar season says Pralhad Joshi
ದೇಶ30 mins ago

Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

Viral Video
Latest33 mins ago

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

ಸಿನಿಮಾ37 mins ago

OTT Releases: ಒಟಿಟಿಯಲ್ಲಿ ಈ ತಿಂಗಳು ಕಲ್ಕಿ, ಇಂಡಿಯನ್‌, ಟರ್ಬೊ ಜತೆಗೆ ಇನ್ಯಾವ ಹೊಸ ಚಿತ್ರ, ವೆಬ್‌ ಸಿರೀಸ್‌?

kidnap case
ಬೆಂಗಳೂರು46 mins ago

Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ!

NEET UG 2024
ದೇಶ1 hour ago

NEET UG 2024: ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಎರಡು ನಗರಗಳಿಗೆ ಸೀಮಿತ; ಮರು ಪರೀಕ್ಷೆ ಅಗತ್ಯವಿಲ್ಲ-ಸುಪ್ರೀಂಕೋರ್ಟ್‌

ಸಿನಿಮಾ1 hour ago

Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌