Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​ - Vistara News

ಪ್ರಮುಖ ಸುದ್ದಿ

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Paris Olympics 2024 : ಲಕ್ಷ್ಯ ಮತ್ತು ಎಚ್.ಎಸ್.ಪ್ರಣಯ್ ಇಬ್ಬರೂ ಪರಸ್ಪರ ತಮ್ಮ ಸಾಮರ್ಥ್ಯವನ್ನು ಪಣಕ್ಕೊಡುವ ಮೂಲಕ ಪಂದ್ಯವು ಪ್ರಾರಂಭವಾಯಿತು. ಆರಂಭಿಕ ಪಂದ್ಯದ ಮೊದಲಾರ್ಧದಲ್ಲಿ ಆಟಗಾರರು ರ್ಯಾಲಿಗೆ ಹೆಚ್ಚು ಒತ್ತುಕೊಟ್ಟರು. ಅವರಿಬ್ಬರ ಆಟದ ಒಂದು ರ್ಯಾಲಿ 47 ಶಾಟ್​ಗಳ ತನಕ ಮುಂದುವರಿಯಿತು. ಇನ್ನು ಪಂದ್ಯದ ಆರಂಭದಲ್ಲಿಯೇ ಪ್ರಣಯ್ 1-5 ಹಿನ್ನಡೆ ಅನುಭವಿಸಿದ್ದರು. ಅದರಿಂದ ಪಾರಾಗಲು ಅವರಿಗೆ ಸಾಧ್ಯವೇ ಆಗಲಿಲ್ಲ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನ (Paris Olympics 2024) ಪುರುಷರ ಸಿಂಗಲ್ಸ್​ನಲ್ಲಿ ಭಾರತದವರೇ ಆದ ಎಚ್​ಎಸ್​ ಪ್ರಣಯ್ ಅವರನ್ನು ಸೋಲಿಸಿರುವ 22ರ ಹರೆಯದ ಲಕ್ಷ್ಯ ಸೇನ್ ಕ್ವಾರ್ಟರ್​​ ಫೈನಲ್ಸ್​ಗೆ ಪ್ರವೇಶ ಪಡೆದಿದ್ದಾರೆ. ಲಾ ಚಾಪೆಲ್ ಅರೆನಾ ಕೋರ್ಟ್ 3ರಲ್ಲಿ ನಡೆದ ಪಂದ್ಯದಲ್ಲಿ ಲಕ್ಷ್ಯ 21-12, 21-6 ಅಂತರದಲ್ಲಿ ಪ್ರಣಯ್ ವಿರುದ್ಧ ಭರ್ಜರಿ ಜಯ ಸಾಧಿಸಿದರು.

ವಿಯೆಟ್ನಾಂನ ಲೆ ಡುಕ್ ಫಾಟ್ ವಿರುದ್ಧದ ನಿನ್ನೆಯ ಪಂದ್ಯದ ನಂತರ ದಣಿದಿದ್ದ ಪ್ರಣಯ್ ಅವರಿಂದ ಲಕ್ಷ್ಯ ಹೆಚ್ಚು ಪ್ರತಿಕ್ರಿಯೆ ಪಡೆಯಲಿಲ್ಲ. . ಪ್ರಣಯ್ ಅವರು ಫಾಟ್​​ ವಿರುದ್ಧ 3 ಗೇಮ್​ಗಳ ರೋಚಕ ಪಂದ್ಯವನ್ನು ಗೆದ್ದಿದ್ದರು. ಕಳೆದ ತಿಂಗಳ ಆರಂಭದಲ್ಲಿ ಚಿಕೂನ್ ಗುನ್ಯಾಕ್ಕೆ ಒಳಗಾಗಿದ್ದ ಅವರು ಬುಧವಾರದ ಆಟದಿಂದಾಗಿ ದಣಿದಿದ್ದರು. ಪ್ರಣಯ್ ಪಂದ್ಯದ ಎರಡನೇ ಗೇಮ್ ನ ಅರ್ಧದಲ್ಲೇ ಸುಸ್ತಾದರು. ಲಕ್ಷ್ಯ ಆಟದಲ್ಲಿ 11-3 ರಿಂದ ಮುನ್ನಡೆ ಸಾಧಿಸಿದಾಗಲೇ ಅವರು ನಿರಾಸೆ ಗೊಂಡಿದ್ದರು. ಅಂತಿಮವಾಗಿ 6-21 ರಿಂದ ಸೋತರು/ ಅವರ ಚೊಚ್ಚಲ ಮತ್ತು ಬಹುಶಃ ಅಂತಿಮ ಒಲಿಂಪಿಕ್ ಪ್ರದರ್ಶನ ಇದಾಗಿದೆ.

ಲಕ್ಷ್ಯ ಮತ್ತು ಎಚ್.ಎಸ್.ಪ್ರಣಯ್ ಇಬ್ಬರೂ ಪರಸ್ಪರ ತಮ್ಮ ಸಾಮರ್ಥ್ಯವನ್ನು ಪಣಕ್ಕೊಡುವ ಮೂಲಕ ಪಂದ್ಯವು ಪ್ರಾರಂಭವಾಯಿತು. ಆರಂಭಿಕ ಪಂದ್ಯದ ಮೊದಲಾರ್ಧದಲ್ಲಿ ಆಟಗಾರರು ರ್ಯಾಲಿಗೆ ಹೆಚ್ಚು ಒತ್ತುಕೊಟ್ಟರು. ಅವರಿಬ್ಬರ ಆಟದ ಒಂದು ರ್ಯಾಲಿ 47 ಶಾಟ್​ಗಳ ತನಕ ಮುಂದುವರಿಯಿತು. ಇನ್ನು ಪಂದ್ಯದ ಆರಂಭದಲ್ಲಿಯೇ ಪ್ರಣಯ್ 1-5 ಹಿನ್ನಡೆ ಅನುಭವಿಸಿದ್ದರು. ಅದರಿಂದ ಪಾರಾಗಲು ಅವರಿಗೆ ಸಾಧ್ಯವೇ ಆಗಲಿಲ್ಲ.

ಆರಂಭಿಕ ಗೇಮ್ ನ ವಿರಾಮದ ವೇಳೆಗೆ ಲಕ್ಷ್ಯ 11-6ರಲ್ಲಿ ಮುನ್ನಡೆ ಸಾಧಿಸಿದರು. ಪ್ರಣಯ್ 7-13 ಅಂತರದಲ್ಲಿ ಹಿನ್ನಡೆ ಅನುಭವಿಸಿದ ಹೊರತಾಗಿಯೂ ತಿರುಗೇಟು ನೀಡಲು ಯತ್ನಿಸಿದರು. ಅನುಭವಿ ಶಟ್ಲರ್ ತನ್ನ ಫೋರ್​ಹ್ಯಾಂಡ್​ ಮೂಲಕ ಕ್ರಾಸ್-ಕೋರ್ಟ್ ಸ್ಮ್ಯಾಶ್ ಹೊಡೆಯಲು ಮುಂದಾದರು. ಹೀಗಾಗಿ ಪ್ರಣಯ್ ಅವರಿಂದ ಲಕ್ಷ್ಯ ಒಂದೆರಡು ಬಾರಿ ತೊಂದರೆಗೀಡಾದರಯ, ಬಳಿಕ ಅವರು ತಮ್ಮ ದಾಳಿಯ ವೈಖರಿ ಬದಲಾಯಿಸಿದರು. ಲಕ್ಷ್ಯ ತಮ್ಮ ಡೌನ್-ದಿ-ಲೈನ್ ಸ್ಮ್ಯಾಶ್ ಆಡಲು ಆರಂಭಿಸಿದರು. ಇದು ಪ್ರಣಯ್​ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತು.

ಇದನ್ನೂ ಓದಿ: Diksha Dagar : ಗಾಲ್ಫರ್​ ದೀಕ್ಷಾ ದಾಗರ್​ ಪ್ರಯಾಣಿಸುತ್ತಿದ್ದ ಕಾರು ಪ್ಯಾರಿಸ್​​ನಲ್ಲಿ ಅಪಘಾತ

ಎರಡನೇ ಗೇಮ್ ನಲ್ಲಿ ಪ್ರಣಯ್ ವಿರುದ್ಧ ಲಕ್ಷ್ಯ ಭರ್ಜರಿ ಮುನ್ನಡೆ ಸಾಧಿಸಿದರು ಅನುಭವಿ ಆಟಗಾರನನ್ನು ಲಕ್ಷ್ಯ ಮೀರಿಸಿದರು, ಅವರು ತಮ್ಮ ಜೀವನದ ಅತ್ಯುತ್ತಮ ಫಾರ್ಮ್​ನಲ್ಲಿ ಇರುವುದನ್ನು ತೋರಿಸಿದರು. ಲಕ್ಷ್ಯ ಕ್ವಾರ್ಟರ್ ಫೈನಲ್​​ನಲ್ಲಿ ಚೈನೀಸ್ ತೈಪೆಯ ಚೌ ಟಿಯೆನ್ ಚೆನ್ ಅವರನ್ನು ಎದುರಿಸಲಿದ್ದಾರೆ. ಲಕ್ಷ್ಯ 34 ವರ್ಷದ ಅನುಭವಿ ಆಟಗಾರನನ್ನು ನಾಲ್ಕು ಬಾರಿ ಎದುರಿಸಿದ್ದಾರೆ. 1-3 ರ ದಾಖಲೆಯನ್ನು ಹೊಂದಿದ್ದಾರೆ. ಇವರಿಬ್ಬರು ಕೊನೆಯ ಬಾರಿಗೆ ಸಿಂಗಾಪುರ್ ಓಪನ್ 2023 ರಲ್ಲಿ ಮುಖಾಮುಖಿಯಾಗಿದ್ದರು. ಅಲ್ಲಿ ಲಕ್ಷ್ಯ 3 ಗೇಮ್ ಗಳ ಹೋರಾಟದಲ್ಲಿ ಚೌಗೆ ತಲೆಬಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Rahul Gandhi: ರಾಹುಲ್‌ ಗಾಂಧಿ ಅವರು ಜುಲೈ 26ರಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಕೋರ್ಟ್‌ಗೆ ಹಾಜರಾಗಿದ್ದರು. ಇದಾದ ಬಳಿಕ ಅವರು ಲಖನೌಗೆ ತೆರಳುವ ಮಾರ್ಗದ ಮಧ್ಯೆ ಸುಲ್ತಾನ್‌ಪುರದಲ್ಲಿರುವ ರಾಮ್‌ ಚೇಟ್‌ ಅಂಗಡಿಗೆ ತೆರಳಿದ್ದರು. ಈಗ ರಾಮ್‌ ಚೇಟ್‌ ಅವರ ಜೀವನವೇ ಬದಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅವರು ಸೆಲೆಬ್ರಿಟಿ ಆಗಿದ್ದಾರೆ.

VISTARANEWS.COM


on

Rahul Gandhi
Koo

ಲಖನೌ: ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಜುಲೈ 26ರಂದು ಉತ್ತರ ಪ್ರದೇಶಕ್ಕೆ ತೆರಳಿದ್ದಾಗ ಚಪ್ಪಲಿ ಹೊಲಿಯುವ ರಾಮ್‌ ಚೇಟ್‌ (Ram Chet) ಎಂಬುವರ ಅಂಗಡಿಗೆ ಭೇಟಿ ನೀಡಿದ್ದರು. ಸುಲ್ತಾನ್‌ಪುರದಲ್ಲಿರುವ ಚಪ್ಪಲಿ ಅಂಗಡಿಗೆ (UP Cobbler) ರಾಹುಲ್‌ ಗಾಂಧಿ ಅವರು ಭೇಟಿ ನೀಡಿದ ಬಳಿಕ ರಾಮ್‌ ಚೇಟ್‌ ಅವರ ದಿಸೆಯೇ ಬದಲಾಗಿದೆ. ಜನ ಅವರ ಅಂಗಡಿಗೆ ಬಂದು ಚಪ್ಪಲಿ ಹೊಲಿಸಿಕೊಳ್ಳುವುದು, ಅವರ ಜತೆ ಸೆಲ್ಫಿ ತೆಗೆಸಿಕೊಳ್ಳುವುದು ಮಾಡುತ್ತಿದ್ದಾರೆ. ಇನ್ನು, ರಾಹುಲ್‌ ಗಾಂಧಿ ಅವರು ಭೇಟಿ ವೇಳೆ ಹೊಲಿದ ಚಪ್ಪಲಿಗೆ ಈಗ ಭಾರಿ ಬೇಡಿಕೆ ಉಂಟಾಗಿದೆ. ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ ಉದ್ಯಮಿಯೊಬ್ಬರು 10 ಲಕ್ಷ ರೂ. ಆಫರ್‌ ನೀಡಿದ್ದಾರೆ. ಇಷ್ಟಾದರೂ ರಾಮ್‌ ಚೇಟ್‌ ಅವರು ಮಾರಾಟ ಮಾಡಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಮಾಧ್ಯಮಗಳೊಂದಿಗೆ ರಾಮ್‌ ಚೇಟ್‌ ಮಾತನಾಡಿದ್ದು, “ರಾಹುಲ್‌ ಗಾಂಧಿ ಅವರು ನನ್ನ ಅಂಗಡಿಗೆ ಬಂದು ಹೋದ ಬಳಿಕ ನನ್ನ ಬದುಕೇ ಬದಲಾಗಿದೆ. ಕಾರು, ಬೈಕುಗಳಲ್ಲಿ ಬರುವ ಜನ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಫೋಟೊ ತೆಗೆಸಿಕೊಳ್ಳುತ್ತಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ಹೊಲಿದ ಚಪ್ಪಲಿಗೆ ಭಾರಿ ಬೇಡಿಕೆ ಉಂಟಾಗಿದೆ. 5 ಲಕ್ಷ ರೂ. ಕೊಡುತ್ತೇವೆ, 10 ಲಕ್ಷ ರೂ. ಕೊಡುತ್ತೇವೆ ಆ ಚಪ್ಪಲಿ ಕೊಡು ಎನ್ನುತ್ತಿದ್ದಾರೆ. ನಾನು ಆ ಚಪ್ಪಲಿ ಹೊಲಿಯಲು ಬಿಟ್ಟು ಹೋದ ಗ್ರಾಹಕನಿಗೂ ಕೊಡುವುದಿಲ್ಲ. ಚಪ್ಪಲಿಯ ಮೊತ್ತವನ್ನು ಗ್ರಾಹಕನಿಗೆ ನೀಡುತ್ತೇನೆ. ಇದನ್ನು ಮಾರಾಟ ಮಾಡುವುದಿಲ್ಲ” ಎಂದು ಹೇಳುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೊಲಿಗೆ ಯಂತ್ರ ಕೊಡಿಸಿದ ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಮ್‌ ಚೇಟ್‌ ಅವರನ್ನು ಭೇಟಿಯಾಗಿದ್ದು ಮಾತ್ರವಲ್ಲ, ಅವರಿಗೆ ಚಪ್ಪಲಿ, ಬೂಟುಗಳನ್ನು ಹೊಲಿಯುವ ಯಂತ್ರವನ್ನು ಕೊಡಿಸಿದ್ದಾರೆ. ರಾಹುಲ್‌ ಗಾಂಧಿ ಭೇಟಿ ನೀಡಿದ ಮರುದಿನ ಅಂದರೆ ಜುಲೈ 27ರಂದು ರಾಮ್‌ ಚೇಟ್‌ ಅವರಿಗೆ ಹೊಲಿಗೆ ಯಂತ್ರ ತಲುಪಿದೆ. ಇದರಿಂದ ಅವರು ಸುಲಭವಾಗಿ ಚಪ್ಪಲಿ ಹಾಗೂ ಶೂಗಳನ್ನು ಹೊಲಿಯಲು ಸಾಧ್ಯವಾಗುತ್ತಿದೆ. ರಾಹುಲ್‌ ಗಾಂಧಿ ಭೇಟಿ ಬಳಿಕ ಅವರ ವ್ಯಾಪಾರವೂ ಚೆನ್ನಾಗಿ ನಡೆಯುತ್ತಿದೆ.

ರಾಹುಲ್‌ ಗಾಂಧಿ ಅವರು ಜುಲೈ 26ರಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಕೋರ್ಟ್‌ಗೆ ಹಾಜರಾಗಿದ್ದರು. ಇದಾದ ಬಳಿಕ ಅವರು ಲಖನೌಗೆ ತೆರಳುವ ಮಾರ್ಗದ ಮಧ್ಯೆ ಸುಲ್ತಾನ್‌ಪುರದಲ್ಲಿರುವ ರಾಮ್‌ ಚೇಟ್‌ ಅಂಗಡಿಗೆ ತೆರಳಿದ್ದರು. ರಾಮ್‌ ಚೇಟ್‌ ಅವರ ಅಂಗಡಿ ವ್ಯಾಪಾರ ಸೇರಿ ಹಲವು ವಿಷಯಗಳ ಕುರಿತು ಕಾಂಗ್ರೆಸ್‌ ನಾಯಕ ಮಾತನಾಡಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಚಪ್ಪಲಿ ಹೊಲಿದಿದ್ದರು. ಈ ಫೋಟೊ ಹಾಗೂ ವಿಡಿಯೊ ವೈರಲ್‌ ಆಗಿದ್ದವು.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Continue Reading

ದೇಶ

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

Kupwara Encounter: ಹಫೀಜ್‌ ಸಯೀದ್‌ ಆಪ್ತ, ಪಾಕಿಸ್ತಾನದ ಸೇನೆಯ ಸ್ಪೆಷಲ್‌ ಸರ್ವಿಸ್‌ ಗ್ರೂಪ್‌ (SSG) ಕಮಾಂಡೋ ಕೂಡ ಆಗಿರುವ ನೊಮಾನ್‌ ಜಿಯಾವುಲ್ಲಾನನ್ನು ಭಾರತದ ಯೋಧರು ಹತ್ಯೆಗೈದಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ನೊಮಾನ್‌ ಜಿಯಾವುಲ್ಲಾ ಪ್ರಯತ್ನಿಸುತ್ತಿದ್ದ. ಆಗ ಭಾರತದ ಯೋಧರು ಗುಂಡಿನ ದಾಳಿ ಮೂಲಕ ಈತನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Kupwara Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರ ಚಟುವಟಿಕೆಗಳು ಹೆಜ್ಜಾಗಿದ್ದು, ಸೈನಿಕರು ಹಾಗೂ ವಲಸಿಗ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಜಾಸ್ತಿಯಾಗಿವೆ. ಭಾರತೀಯ ಸೇನೆಯೂ ಉಗ್ರರನ್ನು ಮಟ್ಟ ಹಾಕಲು ಸತತ ಕಾರ್ಯಾಚರಣೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಭಾರತೀಯ ಸೇನೆಯು (Indian Army) ಭಾರಿ ಮುನ್ನಡೆ ಸಾಧಿಸಿದೆ. ಮುಂಬೈ ದಾಳಿ ರೂವಾರಿ, ಜಾಗತಿಕ ಉಗ್ರ ಹಫೀಜ್‌ ಸಯೀದ್‌ ಆಪ್ತನನ್ನು ಭಾರತದ ಯೋಧರು ಕುಪ್ವಾರದಲ್ಲಿ (Kupwara Encounter) ಹೊಡೆದುರುಳಿಸಿದ್ದಾರೆ.

ಹೌದು, ಕುಪ್ವಾರದಲ್ಲಿ ಹಫೀಜ್‌ ಸಯೀದ್‌ ಆಪ್ತ, ಪಾಕಿಸ್ತಾನದ ಸೇನೆಯ ಸ್ಪೆಷಲ್‌ ಸರ್ವಿಸ್‌ ಗ್ರೂಪ್‌ (SSG) ಕಮಾಂಡೋ ಕೂಡ ಆಗಿರುವ ನೊಮಾನ್‌ ಜಿಯಾವುಲ್ಲಾನನ್ನು ಭಾರತದ ಯೋಧರು ಹತ್ಯೆಗೈದಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ನೊಮಾನ್‌ ಜಿಯಾವುಲ್ಲಾ ಪ್ರಯತ್ನಿಸುತ್ತಿದ್ದ. ಇದರ ಕುರಿತು ನಿಖರ ಮಾಹಿತಿ ಪಡೆದ ಭಾರತದ ಯೋಧರು, ನೊಮಾನ್‌ ಜಿಯಾವುಲ್ಲಾನನ್ನು ಎನ್‌ಕೌಂಟರ್‌ ಮಾಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜುಲೈ 27ರಂದೇ ನೊಮಾನ್‌ ಜಿಯಾವುಲ್ಲಾ ಭಾರತದೊಳಗೆ ಅಕ್ರಮವಾಗಿ ನುಸುಳಲು ಪ್ರಯತ್ನಿಸಿದ್ದ. ಅದೇ ದಿನ ಸೈನಿಕರು ಹತ್ಯೆ ಮಾಡಿದ್ದಾರೆ. ನೊಮಾನ್‌ ಜಿಯಾವುಲ್ಲಾನು ಪಾಕಿಸ್ತಾನದ ಎಸ್‌ಎಸ್‌ಜಿ ಕಮಾಂಡೋಗಳು ಧರಿಸುವ ಜಾಕೆಟ್‌ಗಳನ್ನು ಧರಿಸಿ ತೆಗೆಸಿಕೊಂಡ ಫೋಟೊಗಳು ಈಗ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಈತನು ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವುದಲ್ಲದೆ, ಎಸ್‌ಎಸ್‌ಜಿ ಕಮಾಂಡೋ ಕೂಡ ಆಗಿದ್ದ ಎಂದು ತಿಳಿದುಬಂದಿದೆ. ಈತನ ಹತ್ಯೆಯ ಬಳಿಕ ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಕ್‌ನ 600 ಕಮಾಂಡೋಗಳ ಪ್ರವೇಶ?

ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಕೆಲ ದಿನಗಳ ಹಿಂದಷ್ಟೇ ಹೇಳಿದ್ದರು. “ಪಾಕಿಸ್ತಾನದ ಎಸ್‌ಎಸ್‌ಜಿ ಜನರಲ್‌ ಆಫಿಸರ್‌ ಕಮಾಂಡಿಂಗ್‌ (ಜಿಒಸಿ) ಮೇಜರ್‌ ಜನರಲ್‌ ಆದಿಲ್‌ ರೆಹಮಾನಿಯು ಜಮ್ಮು ಪ್ರದೇಶದಲ್ಲಿ ದಾಳಿ ನಡೆಸುತ್ತಿದ್ದಾನೆ. ಪಾಕಿಸ್ತಾನದ 600 ಕಮಾಂಡೋಗಳು ಭಾರತಕ್ಕೆ ನುಗ್ಗಿದ್ದು, ಕುಪ್ವಾರದಲ್ಲಿ ಆಶ್ರಯ ಪಡೆದಿದ್ದಾರೆ” ಎಂಬುದಾಗಿ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಪೋಸ್ಟ್‌ ಮಾಡಿದ್ದರು. ಇದರ ಬೆನ್ನಲ್ಲೇ ಕಣಿವೆಯಲ್ಲಿ ಪಾಕ್‌ ಕಮಾಂಡೋನನ್ನು ಹೊಡೆದುರುಳಿಸಿರುವುದು ಹಲವು ಅನುಮಾನ ಮೂಡಲು ಕಾರಣವಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

Continue Reading

ಪ್ರಮುಖ ಸುದ್ದಿ

PV Sindhu : ಪಿವಿ ಸಿಂಧು ಹ್ಯಾಟ್ರಿಕ್​ ಒಲಿಂಪಿಕ್ಸ್​ ಪದಕದ ಕನಸು ಭಗ್ನ, 16ನೇ ಸುತ್ತಿನಲ್ಲಿ ಸೋಲು

PV Sindhu :

VISTARANEWS.COM


on

PV Sindhu
Koo

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಗುರುವಾರ (ಆಗಸ್ಟ್​​1ರಂದು) ಭಾರತದ ಬ್ಯಾಡ್ಮಿಂಟನ್ ಗೆ ಕಠಿಣ ದಿನವಾಗಿತ್ತು. ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಮತ್ತು ಭಾರತದ ಅತ್ಯಂತ ಯಶಸ್ವಿ ಶಟ್ಲರ್ ಎಚ್.ಎಸ್.ಪ್ರಣಯ್ ನಿರ್ಗಮಿಸಿದ ಬಳಿಕ ಪಿ.ವಿ.ಸಿಂಧು (PV Sindhu) ಕೂಡ ಸೋತಿದ್ದಾರೆ. ಲಾ ಚಾಪೆಲ್ ಅರೆನಾದ ಕೋರ್ಟ್ 3ರಲ್ಲಿ ನಡೆದ ಪಂದ್ಯದಲ್ಲಿ ಚೀನಾದ 6ನೇ ಶ್ರೇಯಾಂಕದ ಹಿ ಬಿಂಗ್ ಜಿಯಾವೊ ವಿರುದ್ಧ ಶರಣಾದರು. ಪೇಲವವಾಗಿ ಆಡಿದ ಸಿಂಧು ನೇರ ಗೇಮ್ ಗಳಲ್ಲಿ ಸೋಲನುಭವಿಸಿದರು. ಸಿಂಧು ತಮ್ಮ ವೃತ್ತಿಜೀವನದಲ್ಲಿ ಈ ಹಿಂದೆ ಸ್ಪರ್ಧಿಸಿದ್ದ ಎರಡು ಒಲಿಂಪಿಕ್ಸ್​ಗಳಲ್ಲಿ ಪದಕ ಗೆದ್ದಿದ್ದರು. ಈ ಬಾರಿ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಹ್ಯಾಟ್ರಿಕ್ ಕನಸು ನುಚ್ಚು ನೂರಾಯಿತು.

ಇದೇ ಮೈದಾನದಲ್ಲಿ ಸಾತ್ವಿಕ್-ಚಿರಾಗ್ ಜೋಡಿ 19-21, 14-21 ಅಂತರದಲ್ಲಿ ಸೋತಿತ್ತು. ಪ್ಯಾರಿಸ್​ನಲ್ಲಿ ಐತಿಹಾಸಿಕ ಮೂರನೇ ಪದಕದ ನಿರೀಕ್ಷೆಯಲ್ಲಿದ್ದ ಸಿಂಧು ಗುರುವಾರ 6ನೇ ಶ್ರೇಯಾಂಕದ ಆಟಗಾರ್ತಿಗೆ ಬಗ್ಗಿದರು.

ಇದು ಟೋಕಿಯೊ ಒಲಿಂಪಿಕ್ ಪ್ರತಿಸ್ಪರ್ಧಿಗಳ ನಡುವೆ ಬಿಗಿಯಾದ ಹೋರಾಟದ ಆರಂಭಿಕ ಪಂದ್ಯವಾಗಿತ್ತು. ಇಬ್ಬರೂ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಿದರು, ಸಿಂಧು ಜಿಯಾವೊ ಮೇಲೆ ಒತ್ತಡ ಹೇರಲು ತನ್ನ ಶಕತಿ ಬಳಸಿದರು. ಆದರೆ ಅವರ ಚೀನಾದ ಎದುರಾಳಿ ತನ್ನ ಚಾಕಚಕ್ಯತೆ ಪ್ರದರ್ಶನಗಳು ಮತ್ತು ಶಕ್ತಿಯುತ ಸ್ಮ್ಯಾಶ್ ಗಳ ಮೂಲಕ ಮುನ್ನಡೆಕಂಡರು. ಸಿಂಧು ಆಟದ ಆರಂಭದಲ್ಲಿ ಹಿನ್ನಡೆ ಅನುಭವಿಸಿದರು. ಆದರೆ, ತಕ್ಷಣವೇ ಸುಧಾರಿಸಿಕೊಂಡರು. ಆದರೆ ಸಿಂಧು ತಪ್ಪುಗಳನ್ನು ಮಾಡುವ ಮೂಲಕ ಅಂಕಗಳನ್ನು ಕಳೆದುಕೊಂಡರು.

ಸಿಂಧು ಅವರ ಉತ್ಸಾಹಭರಿತ ಹೋರಾಟದ ಹೊರತಾಗಿಯೂ ಮೊದಲ ಗೇಮ್ ಅನ್ನು 19-21 ರಿಂದ ಕಳೆದುಕೊಂಡರು. ಪಂದ್ಯದ ಎರಡನೇ ಗೇಮ್ ನಲ್ಲಿ ಅವರು 2-8 ರಿಂದ ಹಿನ್ನಡೆ ಅನುಭವಿಸಿದರು. ಎರಡನೇ ಗೇಮ್ ನ ಮೊದಲಾರ್ಧದಲ್ಲಿ ಡಿಫೆನ್ಸ್ ವಿಫಲವಾಯಿತು. ಅಲ್ಲಿ ಹಿ ಬಿಂಗ್ ಜಿಯಾವೊ ಸಿಂಧು ಅವರ ಎಲ್ಲಾ ಹೊಡೆತಗಳನ್ನು ಸ್ವೀಕರಿಸಿದರು. ಕೋರ್ಟ್​​ನಲ್ಲಿ ತಮ್ಮ ವೇಗವನ್ನು ನಿರ್ಣಯಿಸಲು ವಿಫಲರಾದರು.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 2ರಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಯ ವಿವರ ಇಲ್ಲಿದೆ

ಸಿಂಧು ಅವರ ಸೋಲು ಭಾರತೀಯ ನಿಯೋಗಕ್ಕೆ ನಿರಾಸೆ ತಂದಿತು. ಸ್ವಪ್ನಿ ಕುಸಾಲೆ ಕಂಚಿನ ಪದಕ ಗೆದ್ದ ನಂತರ, ಭಾರತವು ಹಾಕಿಯಲ್ಲಿ ಸೋತಿತು. 50 ಮೀಟರ್ ರೈಫಲ್ 3 ಪಿ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ ನಿರ್ಗಮಿಸಿದರು.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕಕ್ಕಾಗಿ ಹೋರಾಡಲು ಭಾರತವು ಈಗ ಬ್ಯಾಡ್ಮಿಂಟನ್ ತಂಡದಲ್ಲಿ ಲಕ್ಷ್ಯ ಸೇನ್ ಮಾತ್ರ ಉಳಿದುಕೊಂಡಿದ್ದಾರೆ. ಆಗಸ್ಟ್ 2ರಂದು ನಡೆಯಲಿರುವ ಕ್ವಾರ್ಟರ್ ಫೈನಲ್​​ನಲ್ಲಿ ಲಕ್ಷ್ಯ ಅವರು ಚೈನೀಸ್ ತೈಪೆಯ ಚೌ ಟಿಯೆನ್ ಚೆನ್ ಅವರನ್ನು ಎದುರಿಸಲಿದ್ದಾರೆ

Continue Reading

ಕರ್ನಾಟಕ

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

Prajwal Revanna: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿಯಿಂದ ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ ಎಂಬುದಾಗಿ ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು ಎಸ್‌ಐಟಿ ತನಿಖೆಗೆ ಬಲ ಬಂದಂತಾಗಿದೆ.

VISTARANEWS.COM


on

Prajwal Revanna
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ, ಪ್ರಜ್ವಲ್‌ ರೇವಣ್ಣ ಅವರದ್ದೇ ಎನ್ನಲಾದ ಅಶ್ಲೀಲ ವಿಡಿಯೊಗಳು ಅಸಲಿಯಾಗಿವೆ. ವಿಡಿಯೊಗಳನ್ನು ತಿರುಚಿಲ್ಲ ಎಂಬುದಾಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯು (FSL Report) ತಿಳಿಸಿದೆ. ಇದರಿಂದಾಗಿ ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲು ಎಸ್‌ಐಟಿಗೆ ಆನೆ ಬಲ ಬಂದಂತಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿಯಿಂದ ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ. ಎಲ್ಲ ವಿಡಿಯೊಗಳು ಅಸಲಿಯಾಗಿವೆ ಎಂಬುದಾಗಿ ಎಸ್‌ಎಫ್‌ಎಲ್‌ ವರದಿ ಸಲ್ಲಿಸಿದ್ದು, ವರದಿ ಈಗ ಎಸ್‌ಐಟಿ ತಂಡದ ಕೈಸೇರಿದೆ. ಇದರಿಂದಾಗಿ ಎಸ್‌ಐಟಿ ಇನ್ನು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಿದೆ ಎಂದು ತಿಳಿದುಬಂದಿದೆ.

Prajwal Revanna Case
Prajwal Revanna Case

ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊಗಳಲ್ಲಿ ಪುರುಷನ ಮುಖವನ್ನು ತೋರಿಸಿಲ್ಲ. ಹಾಗಾಗಿ, ಅಶ್ಲೀಲ ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಇದುವರೆಗೆ ದೃಢವಾಗಿಲ್ಲ. ಈಗ ವಿಡಿಯೊಗಳು ಅಸಲಿಯಾಗಿವೆ ಎಂಬುದು ಮಾತ್ರ ವರದಿಯಿಂದ ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಕೂಡ ಬಯಲಾಗಿದೆ. ಎಫ್‌ಎಸ್‌ಎಲ್‌ ವರದಿ ಬಳಿಕ ಎಸ್‌ಐಟಿ ಅಧಿಕಾರಿಗಳ ತನಿಖೆಯು ಚುರುಕುಗೊಂಡಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುತ್ತಾರೆ. ಅದರಲ್ಲಿ, ಎಫ್‌ಎಸ್‌ಎಲ್‌ ವರದಿಯ ಕುರಿತು ಕೂಡ ಉಲ್ಲೇಖಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ, ವಿಡಿಯೊ ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದರು. ಇದಾದ ಕೆಲ ದಿನಗಳ ಬಳಿಕ ಅವರು ಭಾರತಕ್ಕೆ ವಾಪಸ್‌ ಬಂದಿದ್ದರು. ಭಾರತಕ್ಕೆ ವಾಪಸಾಗುತ್ತಲೇ ಅವರನ್ನು ಬಂಧಿಸಲಾಗಿದ್ದು, ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲು ಸೇರಿದ್ದರು. ಅವರು ಈಗ ಜಾಮೀನು ಪಡೆದು ಹೊರಬಂದಿದ್ದಾರೆ. ಇದೇ ಪ್ರಕರಣವು ಎಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಮುಳುವಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಎಫ್‌ಐಆರ್‌; ಪ್ರೀತಂ ಗೌಡ ಮೇಲೂ ದೂರು

Continue Reading
Advertisement
Rahul Gandhi
ದೇಶ39 mins ago

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Kupwara Encounter
ದೇಶ50 mins ago

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

PV Sindhu
ಪ್ರಮುಖ ಸುದ್ದಿ1 hour ago

PV Sindhu : ಪಿವಿ ಸಿಂಧು ಹ್ಯಾಟ್ರಿಕ್​ ಒಲಿಂಪಿಕ್ಸ್​ ಪದಕದ ಕನಸು ಭಗ್ನ, 16ನೇ ಸುತ್ತಿನಲ್ಲಿ ಸೋಲು

Prajwal Revanna
ಕರ್ನಾಟಕ1 hour ago

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

MS Dhoni
ಪ್ರಮುಖ ಸುದ್ದಿ1 hour ago

MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

Kabini dam not cracked no need to worry says DCM DK Shivakumar
ಕರ್ನಾಟಕ2 hours ago

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Blood Cancer
ಆರೋಗ್ಯ2 hours ago

Blood Cancer: ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ರನ್ನು ಬಲಿ ಪಡೆದ ರಕ್ತದ ಕ್ಯಾನ್ಸರ್‌ಗೆ ಏನು ಕಾರಣ? ಇದರ ಲಕ್ಷಣಗಳೇನು?

Kerala Floods
ಪ್ರಮುಖ ಸುದ್ದಿ2 hours ago

Kerala Floods : ಬಾನೆಟ್​ ಎತ್ತರಕ್ಕೆ ತುಂಬಿದ್ದ ಪ್ರವಾಹದ ನೀರಿನಲ್ಲಿ ಸಾಗಿ ಕುಟುಂಬವೊಂದನ್ನು ರಕ್ಷಿಸಿದ ಮಹೀಂದ್ರಾ ಬೊಲೆರೊ! video ಇದೆ

DK Shivakumar
ಕರ್ನಾಟಕ2 hours ago

DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

Paris Olympics 202
ಪ್ರಮುಖ ಸುದ್ದಿ3 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 2ರಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಯ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ11 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ11 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ12 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌