Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ - Vistara News

ದೇಶ

Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ

Kerala Floods: ಇಡುಕ್ಕಿ ಜಿಲ್ಲೆಯಲ್ಲಿ ನದಿಯೊಂದು ಉಕ್ಕಿ ಹರಿಯುತ್ತಿದೆ. ಸೇತುವೆ ಮೇಲೆಯೂ ನೀರು ರಭಸವಾಗಿ ಹರಿಯುತ್ತಿದೆ. ಆದರೆ, ಗರ್ಭಿಣಿ ಪತ್ನಿಯನ್ನು ತುರ್ತಾಗಿ ಆಸ್ಪತ್ರೆಗೆ ಸೇರಿಸಬೇಕಾದ ಕಾರಣ ವ್ಯಕ್ತಿಯು ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಇಡುಕ್ಕಿ ಆಸ್ಪತ್ರೆಯತ್ತ ಹೊರಟಿದ್ದಾರೆ. ಸೇತುವೆಯ ಮೇಲೆಯೂ ನೀರು ಹರಿಯುವುದನ್ನು ಕಂಡ ಅವರು ಆತಂಕಕ್ಕೀಡಾಗಿದ್ದಾರೆ. ಆದರೂ, ಪ್ರವಾಹವನ್ನು ಲೆಕ್ಕಿಸದೆ ಅವರು ಕಾರು ಚಲಾಯಿಸಿ, ಪತ್ನಿಯನ್ನು ಸುರಕ್ಷಿತವಾಗಿ ಆಸ್ಪತ್ರೆ ಸೇರಿಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Kerala Floods
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ದೇವರ ನಾಡು ಕೇರಳ ಈಗ ವರುಣನ (Kerala Floods) ಆರ್ಭಟಕ್ಕೆ ತತ್ತರಿಸಿ ಹೋಗಿದೆ. ವಯನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ (Wayanad Floods) ಉಂಟಾಗಿದ್ದು, ಸಾವಿನ ಸಂಖ್ಯೆ 300 ಸಮೀಪಿಸಿದೆ. 200ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಯುತ್ತಲೇ ಇದೆ. ಇನ್ನು, ವಯನಾಡು ಮಾತ್ರವಲ್ಲ, ಇಡುಕ್ಕಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಇನ್ನು, ಇಡುಕ್ಕಿಯಲ್ಲಿ ವ್ಯಕ್ತಿಯೊಬ್ಬರು ಉಕ್ಕಿ ಹರಿಯುತ್ತಿರುವ ನದಿಯ ಸೇತುವೆ ಮೇಲೆಯೇ ಪ್ರಾಣವನ್ನೂ ಲೆಕ್ಕಿಸದೆ ಕಾರಿನಲ್ಲಿ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಹೌದು, ಇಡುಕ್ಕಿ ಜಿಲ್ಲೆಯಲ್ಲಿ ನದಿಯೊಂದು ಉಕ್ಕಿ ಹರಿಯುತ್ತಿದೆ. ಸೇತುವೆ ಮೇಲೆಯೂ ನೀರು ರಭಸವಾಗಿ ಹರಿಯುತ್ತಿದೆ. ಆದರೆ, ಗರ್ಭಿಣಿ ಪತ್ನಿಯನ್ನು ತುರ್ತಾಗಿ ಆಸ್ಪತ್ರೆಗೆ ಸೇರಿಸಬೇಕಾದ ಕಾರಣ ವ್ಯಕ್ತಿಯು ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಇಡುಕ್ಕಿ ಆಸ್ಪತ್ರೆಯತ್ತ ಹೊರಟಿದ್ದಾರೆ. ಸೇತುವೆಯ ಮೇಲೆಯೂ ನೀರು ಹರಿಯುವುದನ್ನು ಕಂಡ ಅವರು ಆತಂಕಕ್ಕೀಡಾಗಿದ್ದಾರೆ.

ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲೇಬೇಕಾದ ಕಾರಣ ಅವರು ರಭಸವಾಗಿ ಹರಿಯುತ್ತಿದ್ದ ನೀರನ್ನೂ ಲೆಕ್ಕಿಸದೆ, ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇಬ್ಬರೂ ಸುರಕ್ಷಿತವಾಗಿ ಇಡುಕ್ಕಿ ಆಸ್ಪತ್ರೆ ತಲುಪಿದ್ದಾರೆ. ವ್ಯಕ್ತಿಯ ಪತ್ನಿ ಈಗ ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ನಿಗಾಗಿ ಶೌರ್ಯತನ ಮೆರೆದ ಈತನೇ ನಿಜವಾದ ಪತಿ ಎಂದೆಲ್ಲ ಹೊಗಳಿದ್ದಾರೆ.

ವಯನಾಡಿಗೆ ರಾಹುಲ್‌ ಗಾಂಧಿ ಭೇಟಿ

ವಯನಾಡು ಜಿಲ್ಲೆಯ ಮೆಪ್ಪಾಡಿ ಹಾಗೂ ಚೂರಲ್‌ಮಲ ಪ್ರದೇಶಗಳ ಗ್ರಾಮಗಳು ಸಂಪೂರ್ಣವಾಗಿ ಮಸಣದಂತಾಗಿವೆ. ಈ ಪ್ರದೇಶಗಳಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡಿರುವ, ನೀರಿನಲ್ಲಿ ಮನೆಗಳು ಕೊಚ್ಚಿ ಹೋಗಿ ನಿರಾಶ್ರಿತರಾಗಿರುವ ಸಂತ್ರಸ್ತರನ್ನು ಭೇಟಿಯಾದ ಅವರು, ಆತ್ಮಸ್ಥೈರ್ಯ ತುಂಬಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಹಾನಿಯ ವೀಕ್ಷಣೆ ಮಾಡಿದರು.

ವಯನಾಡು ಜಿಲ್ಲೆಯ ಹಲವೆಡೆ ಸಂಚರಿಸಿದ ಬಳಿಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. “ವಯನಾಡು ಜನರ ಸ್ಥಿತಿಯನ್ನು ನೋಡಿದಾಗ ನನ್ನ ತಂದೆ ಸಾವಿನ ದಿನ, ಆ ದುಃಖವೇ ಆಯಿತು. ಜನರು ತಂದೆ, ತಾಯಿ ಜತೆಗೆ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ಇಡೀ ದೇಶದ ಗಮನವೇ ಈಗ ವಯನಾಡು ಮೇಲಿದೆ. ನಾವೆಲ್ಲರೂ ವಯನಾಡು ಪರವಾಗಿ ನಿಲ್ಲೋಣ. ಇದು ಕೇವಲ ವಯನಾಡಿನ ದುರಂತ ಅಲ್ಲ, ರಾಜ್ಯ ಹಾಗೂ ದೇಶದ ದುರಂತವಾಗಿದೆ” ಎಂದು ಭಾವುಕರಾಗಿ ಹೇಳಿದರು.

ಪ್ರಿಯಾಂಕಾ ವಾದ್ರಾ ಅವರು ಪರಿಹಾರ ಕೇಂದ್ರಗಳಿಗೂ ತೆರಳಿ, ಸಂತ್ರಸ್ತರ ಜತೆ ಮಾತನಾಡಿದರು. ಇದಾದ ಬಳಿಕ ಮಾತನಾಡಿದ ಅವರು, “ನಾವು ಜನರಿಗೆ ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ನೆರವಾಗಲು ಬಂದಿದ್ದೇವೆ. ಪರಿಸ್ಥಿತಿ ತುಂಬ ಭೀಕರವಾಗಿದೆ” ಎಂದು ಹೇಳಿದರು. ಭಾರಿ ಮಳೆಯ ಬಳಿಕ ವಯನಾಡಿನ ಸುಮಾರು 80 ಸಾವಿರ ಚದರ ಮೀಟರ್‌ ಭೂಮಿಯು ಕುಸಿದಿದ್ದು, ಸುಮಾರು 8 ಕಿಲೋಮೀಟರ್‌ವರೆಗೆ ಅವಶೇಷವು ಹರಿದುಕೊಂಡು ಹೋಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ದಿನೇದಿನೆ ಜಾಸ್ತಿಯಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Rahul Gandhi: ರಾಹುಲ್‌ ಗಾಂಧಿ ಅವರು ಜುಲೈ 26ರಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಕೋರ್ಟ್‌ಗೆ ಹಾಜರಾಗಿದ್ದರು. ಇದಾದ ಬಳಿಕ ಅವರು ಲಖನೌಗೆ ತೆರಳುವ ಮಾರ್ಗದ ಮಧ್ಯೆ ಸುಲ್ತಾನ್‌ಪುರದಲ್ಲಿರುವ ರಾಮ್‌ ಚೇಟ್‌ ಅಂಗಡಿಗೆ ತೆರಳಿದ್ದರು. ಈಗ ರಾಮ್‌ ಚೇಟ್‌ ಅವರ ಜೀವನವೇ ಬದಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅವರು ಸೆಲೆಬ್ರಿಟಿ ಆಗಿದ್ದಾರೆ.

VISTARANEWS.COM


on

Rahul Gandhi
Koo

ಲಖನೌ: ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಜುಲೈ 26ರಂದು ಉತ್ತರ ಪ್ರದೇಶಕ್ಕೆ ತೆರಳಿದ್ದಾಗ ಚಪ್ಪಲಿ ಹೊಲಿಯುವ ರಾಮ್‌ ಚೇಟ್‌ (Ram Chet) ಎಂಬುವರ ಅಂಗಡಿಗೆ ಭೇಟಿ ನೀಡಿದ್ದರು. ಸುಲ್ತಾನ್‌ಪುರದಲ್ಲಿರುವ ಚಪ್ಪಲಿ ಅಂಗಡಿಗೆ (UP Cobbler) ರಾಹುಲ್‌ ಗಾಂಧಿ ಅವರು ಭೇಟಿ ನೀಡಿದ ಬಳಿಕ ರಾಮ್‌ ಚೇಟ್‌ ಅವರ ದಿಸೆಯೇ ಬದಲಾಗಿದೆ. ಜನ ಅವರ ಅಂಗಡಿಗೆ ಬಂದು ಚಪ್ಪಲಿ ಹೊಲಿಸಿಕೊಳ್ಳುವುದು, ಅವರ ಜತೆ ಸೆಲ್ಫಿ ತೆಗೆಸಿಕೊಳ್ಳುವುದು ಮಾಡುತ್ತಿದ್ದಾರೆ. ಇನ್ನು, ರಾಹುಲ್‌ ಗಾಂಧಿ ಅವರು ಭೇಟಿ ವೇಳೆ ಹೊಲಿದ ಚಪ್ಪಲಿಗೆ ಈಗ ಭಾರಿ ಬೇಡಿಕೆ ಉಂಟಾಗಿದೆ. ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ ಉದ್ಯಮಿಯೊಬ್ಬರು 10 ಲಕ್ಷ ರೂ. ಆಫರ್‌ ನೀಡಿದ್ದಾರೆ. ಇಷ್ಟಾದರೂ ರಾಮ್‌ ಚೇಟ್‌ ಅವರು ಮಾರಾಟ ಮಾಡಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಮಾಧ್ಯಮಗಳೊಂದಿಗೆ ರಾಮ್‌ ಚೇಟ್‌ ಮಾತನಾಡಿದ್ದು, “ರಾಹುಲ್‌ ಗಾಂಧಿ ಅವರು ನನ್ನ ಅಂಗಡಿಗೆ ಬಂದು ಹೋದ ಬಳಿಕ ನನ್ನ ಬದುಕೇ ಬದಲಾಗಿದೆ. ಕಾರು, ಬೈಕುಗಳಲ್ಲಿ ಬರುವ ಜನ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಫೋಟೊ ತೆಗೆಸಿಕೊಳ್ಳುತ್ತಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ಹೊಲಿದ ಚಪ್ಪಲಿಗೆ ಭಾರಿ ಬೇಡಿಕೆ ಉಂಟಾಗಿದೆ. 5 ಲಕ್ಷ ರೂ. ಕೊಡುತ್ತೇವೆ, 10 ಲಕ್ಷ ರೂ. ಕೊಡುತ್ತೇವೆ ಆ ಚಪ್ಪಲಿ ಕೊಡು ಎನ್ನುತ್ತಿದ್ದಾರೆ. ನಾನು ಆ ಚಪ್ಪಲಿ ಹೊಲಿಯಲು ಬಿಟ್ಟು ಹೋದ ಗ್ರಾಹಕನಿಗೂ ಕೊಡುವುದಿಲ್ಲ. ಚಪ್ಪಲಿಯ ಮೊತ್ತವನ್ನು ಗ್ರಾಹಕನಿಗೆ ನೀಡುತ್ತೇನೆ. ಇದನ್ನು ಮಾರಾಟ ಮಾಡುವುದಿಲ್ಲ” ಎಂದು ಹೇಳುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೊಲಿಗೆ ಯಂತ್ರ ಕೊಡಿಸಿದ ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಮ್‌ ಚೇಟ್‌ ಅವರನ್ನು ಭೇಟಿಯಾಗಿದ್ದು ಮಾತ್ರವಲ್ಲ, ಅವರಿಗೆ ಚಪ್ಪಲಿ, ಬೂಟುಗಳನ್ನು ಹೊಲಿಯುವ ಯಂತ್ರವನ್ನು ಕೊಡಿಸಿದ್ದಾರೆ. ರಾಹುಲ್‌ ಗಾಂಧಿ ಭೇಟಿ ನೀಡಿದ ಮರುದಿನ ಅಂದರೆ ಜುಲೈ 27ರಂದು ರಾಮ್‌ ಚೇಟ್‌ ಅವರಿಗೆ ಹೊಲಿಗೆ ಯಂತ್ರ ತಲುಪಿದೆ. ಇದರಿಂದ ಅವರು ಸುಲಭವಾಗಿ ಚಪ್ಪಲಿ ಹಾಗೂ ಶೂಗಳನ್ನು ಹೊಲಿಯಲು ಸಾಧ್ಯವಾಗುತ್ತಿದೆ. ರಾಹುಲ್‌ ಗಾಂಧಿ ಭೇಟಿ ಬಳಿಕ ಅವರ ವ್ಯಾಪಾರವೂ ಚೆನ್ನಾಗಿ ನಡೆಯುತ್ತಿದೆ.

ರಾಹುಲ್‌ ಗಾಂಧಿ ಅವರು ಜುಲೈ 26ರಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಕೋರ್ಟ್‌ಗೆ ಹಾಜರಾಗಿದ್ದರು. ಇದಾದ ಬಳಿಕ ಅವರು ಲಖನೌಗೆ ತೆರಳುವ ಮಾರ್ಗದ ಮಧ್ಯೆ ಸುಲ್ತಾನ್‌ಪುರದಲ್ಲಿರುವ ರಾಮ್‌ ಚೇಟ್‌ ಅಂಗಡಿಗೆ ತೆರಳಿದ್ದರು. ರಾಮ್‌ ಚೇಟ್‌ ಅವರ ಅಂಗಡಿ ವ್ಯಾಪಾರ ಸೇರಿ ಹಲವು ವಿಷಯಗಳ ಕುರಿತು ಕಾಂಗ್ರೆಸ್‌ ನಾಯಕ ಮಾತನಾಡಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಚಪ್ಪಲಿ ಹೊಲಿದಿದ್ದರು. ಈ ಫೋಟೊ ಹಾಗೂ ವಿಡಿಯೊ ವೈರಲ್‌ ಆಗಿದ್ದವು.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Continue Reading

ದೇಶ

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

Kupwara Encounter: ಹಫೀಜ್‌ ಸಯೀದ್‌ ಆಪ್ತ, ಪಾಕಿಸ್ತಾನದ ಸೇನೆಯ ಸ್ಪೆಷಲ್‌ ಸರ್ವಿಸ್‌ ಗ್ರೂಪ್‌ (SSG) ಕಮಾಂಡೋ ಕೂಡ ಆಗಿರುವ ನೊಮಾನ್‌ ಜಿಯಾವುಲ್ಲಾನನ್ನು ಭಾರತದ ಯೋಧರು ಹತ್ಯೆಗೈದಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ನೊಮಾನ್‌ ಜಿಯಾವುಲ್ಲಾ ಪ್ರಯತ್ನಿಸುತ್ತಿದ್ದ. ಆಗ ಭಾರತದ ಯೋಧರು ಗುಂಡಿನ ದಾಳಿ ಮೂಲಕ ಈತನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Kupwara Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರ ಚಟುವಟಿಕೆಗಳು ಹೆಜ್ಜಾಗಿದ್ದು, ಸೈನಿಕರು ಹಾಗೂ ವಲಸಿಗ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಜಾಸ್ತಿಯಾಗಿವೆ. ಭಾರತೀಯ ಸೇನೆಯೂ ಉಗ್ರರನ್ನು ಮಟ್ಟ ಹಾಕಲು ಸತತ ಕಾರ್ಯಾಚರಣೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಭಾರತೀಯ ಸೇನೆಯು (Indian Army) ಭಾರಿ ಮುನ್ನಡೆ ಸಾಧಿಸಿದೆ. ಮುಂಬೈ ದಾಳಿ ರೂವಾರಿ, ಜಾಗತಿಕ ಉಗ್ರ ಹಫೀಜ್‌ ಸಯೀದ್‌ ಆಪ್ತನನ್ನು ಭಾರತದ ಯೋಧರು ಕುಪ್ವಾರದಲ್ಲಿ (Kupwara Encounter) ಹೊಡೆದುರುಳಿಸಿದ್ದಾರೆ.

ಹೌದು, ಕುಪ್ವಾರದಲ್ಲಿ ಹಫೀಜ್‌ ಸಯೀದ್‌ ಆಪ್ತ, ಪಾಕಿಸ್ತಾನದ ಸೇನೆಯ ಸ್ಪೆಷಲ್‌ ಸರ್ವಿಸ್‌ ಗ್ರೂಪ್‌ (SSG) ಕಮಾಂಡೋ ಕೂಡ ಆಗಿರುವ ನೊಮಾನ್‌ ಜಿಯಾವುಲ್ಲಾನನ್ನು ಭಾರತದ ಯೋಧರು ಹತ್ಯೆಗೈದಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ನೊಮಾನ್‌ ಜಿಯಾವುಲ್ಲಾ ಪ್ರಯತ್ನಿಸುತ್ತಿದ್ದ. ಇದರ ಕುರಿತು ನಿಖರ ಮಾಹಿತಿ ಪಡೆದ ಭಾರತದ ಯೋಧರು, ನೊಮಾನ್‌ ಜಿಯಾವುಲ್ಲಾನನ್ನು ಎನ್‌ಕೌಂಟರ್‌ ಮಾಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜುಲೈ 27ರಂದೇ ನೊಮಾನ್‌ ಜಿಯಾವುಲ್ಲಾ ಭಾರತದೊಳಗೆ ಅಕ್ರಮವಾಗಿ ನುಸುಳಲು ಪ್ರಯತ್ನಿಸಿದ್ದ. ಅದೇ ದಿನ ಸೈನಿಕರು ಹತ್ಯೆ ಮಾಡಿದ್ದಾರೆ. ನೊಮಾನ್‌ ಜಿಯಾವುಲ್ಲಾನು ಪಾಕಿಸ್ತಾನದ ಎಸ್‌ಎಸ್‌ಜಿ ಕಮಾಂಡೋಗಳು ಧರಿಸುವ ಜಾಕೆಟ್‌ಗಳನ್ನು ಧರಿಸಿ ತೆಗೆಸಿಕೊಂಡ ಫೋಟೊಗಳು ಈಗ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಈತನು ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವುದಲ್ಲದೆ, ಎಸ್‌ಎಸ್‌ಜಿ ಕಮಾಂಡೋ ಕೂಡ ಆಗಿದ್ದ ಎಂದು ತಿಳಿದುಬಂದಿದೆ. ಈತನ ಹತ್ಯೆಯ ಬಳಿಕ ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಕ್‌ನ 600 ಕಮಾಂಡೋಗಳ ಪ್ರವೇಶ?

ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಕೆಲ ದಿನಗಳ ಹಿಂದಷ್ಟೇ ಹೇಳಿದ್ದರು. “ಪಾಕಿಸ್ತಾನದ ಎಸ್‌ಎಸ್‌ಜಿ ಜನರಲ್‌ ಆಫಿಸರ್‌ ಕಮಾಂಡಿಂಗ್‌ (ಜಿಒಸಿ) ಮೇಜರ್‌ ಜನರಲ್‌ ಆದಿಲ್‌ ರೆಹಮಾನಿಯು ಜಮ್ಮು ಪ್ರದೇಶದಲ್ಲಿ ದಾಳಿ ನಡೆಸುತ್ತಿದ್ದಾನೆ. ಪಾಕಿಸ್ತಾನದ 600 ಕಮಾಂಡೋಗಳು ಭಾರತಕ್ಕೆ ನುಗ್ಗಿದ್ದು, ಕುಪ್ವಾರದಲ್ಲಿ ಆಶ್ರಯ ಪಡೆದಿದ್ದಾರೆ” ಎಂಬುದಾಗಿ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಪೋಸ್ಟ್‌ ಮಾಡಿದ್ದರು. ಇದರ ಬೆನ್ನಲ್ಲೇ ಕಣಿವೆಯಲ್ಲಿ ಪಾಕ್‌ ಕಮಾಂಡೋನನ್ನು ಹೊಡೆದುರುಳಿಸಿರುವುದು ಹಲವು ಅನುಮಾನ ಮೂಡಲು ಕಾರಣವಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

Continue Reading

ಪ್ರಮುಖ ಸುದ್ದಿ

Kerala Floods : ಬಾನೆಟ್​ ಎತ್ತರಕ್ಕೆ ತುಂಬಿದ್ದ ಪ್ರವಾಹದ ನೀರಿನಲ್ಲಿ ಸಾಗಿ ಕುಟುಂಬವೊಂದನ್ನು ರಕ್ಷಿಸಿದ ಮಹೀಂದ್ರಾ ಬೊಲೆರೊ! video ಇದೆ

Kerala Floods :

VISTARANEWS.COM


on

Kerala Floods
Koo

ಬೆಂಗಳೂರು: ಕೇರಳದಲ್ಲಿ ಮಳೆಯಿಂದ ಎಲ್ಲೆಡೆ ಅನಾಹುತಗಳು ಸಂಭವಿಸುತ್ತಿವೆ. ವಯನಾಡಲ್ಲಿ ಗುಡ್ಡ ಕುಸಿತ ಸಂಭವಿಸಿ ನೂರಾರು ಜೀವಗಳು ಮಣ್ಣು ಪಾಲಾದರೆ, ಇನ್ನೂ ಹಲವು ಕಡೆಗಳಲ್ಲಿ ಜನವಸತಿ ಪ್ರದೇಶಗಳಲ್ಲಿ ನೀರು ತುಂಬಿಕೊಂಡಿವೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದಾಗಿ ಕೇರಳದ ಜನರ ಜೀವನವೇ ಅಸ್ತವ್ಯಸ್ತಗೊಂಡಿದೆ. ಏತನ್ಮಧ್ಯೆ, ಪ್ರವಾಹ ಹಾಗೂ ಇನ್ನಿತರ ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿರುವವರನ್ನು ರಕ್ಷಿಸುವ ಹಲವಾರು ಸಾಹಸಗಾಥೆಗಳು ಕೇಳಿ ಬರುತ್ತಿವೆ. ಅಂತೆಯೇ ಇಲ್ಲ ಮಲಪ್ಪುರಂನಲ್ಲಿ ಬಾನೆಟ್ ಎತ್ತರಕ್ಕೆ ತುಂಬಿದ್ದ ನೀರಿನ ನಡುವೆ ಮಹೀಂದ್ರಾ ಬೊಲೆರೊ ಕಾರೊಂದು ಸಾಗಿ ಕುಟುಂಬವನ್ನು ರಕ್ಷಿಸಿದ ಪ್ರಸಂಗ ನಡೆದಿದೆ. ಇಲ್ಲಿ ಮಹೀಂದ್ರಾ ಬೊಲೆರೊ ಕಾರಿನ ಸಾಮರ್ಥ್ಯ ಹಾಗೂ ಚಾಲಕನ ಸಾಹಕ್ಕೆ ಶಹಬ್ಬಾಸ್​ ದೊರಕಿದೆ.

ಆಟೋಜರ್ನಲ್ ಇಂಡಿಯಾ ಇನ್​​ಸ್ಟಾಗ್ರಾಮ್​ ಪೋಸ್ಟ್​​ನಲ್ಲಿ ಇದರ ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕರಿ ಬಣ್ಣದ ಬೊಲೆರೊ ಕಾರಿನ ಚಾಲಕ ರಸ್ತೆಯೇ ಕಾರಣದಿದ್ದರೂ ಸಾಗಿ ಹಲವರನ್ನು ರಕ್ಷಿಸಿಕೊಂಡು ಬಂದಿರುವುದನ್ನು ಕಾಣಬಹುದು.

ಕೇರಳದಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿದ್ದವರಿಗೆ ಆಪತ್ಬಾಂಧವ ಎನಿಕೊಂಡಿದ್ದ ಮಹೀಂದ್ರಾ ಬೊಲೆರೊ. ಲಕ್ಷಾಂತರ ಜನರನ್ನು ತಮ್ಮ ಗಮ್ಯಸ್ಥಾನಕ್ಕೆ ಸಾಗಿಸಿದ ಮಹೀಂದ್ರಾ ಬೊಲೆರೊ ಎಸ್​​ಯುವಿ ಈಗ ಕೇರಳದ ಮಲಪ್ಪುರಂನಲ್ಲಿ ಅತ್ಯಂತ ಪ್ರಭಾವಿ ಕೆಲಸ ಮಾಡುತ್ತಿದೆ. ಬೊಲೆರೊ ತನ್ನ ಜನರನ್ನು ಉಳಿಸಿದೆ ಮತ್ತು ಸುತ್ತಮುತ್ತಲಿನ ಕುಟುಂಬಗಳನ್ನು ರಕ್ಷಿಸಿದೆ, ಮಹೀಂದ್ರಾ ಬೊಲೆರೊದ ರಕ್ಷಣಾ ಕಾರ್ಯಾಚರಣೆಯನ್ನು ನೀವು ಇಷ್ಟಪಟ್ಟಿದ್ದೀರಾ ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ

ದೇವರ ನಾಡು ಕೇರಳ ಈಗ ವರುಣನ (Kerala Floods) ಆರ್ಭಟಕ್ಕೆ ತತ್ತರಿಸಿ ಹೋಗಿದೆ. ವಯನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ (Wayanad Floods) ಉಂಟಾಗಿದ್ದು, ಸಾವಿನ ಸಂಖ್ಯೆ 300 ಸಮೀಪಿಸಿದೆ. 200ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಯುತ್ತಲೇ ಇದೆ. ಇನ್ನು, ವಯನಾಡು ಮಾತ್ರವಲ್ಲ, ಇಡುಕ್ಕಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಇನ್ನು, ಇಡುಕ್ಕಿಯಲ್ಲಿ ವ್ಯಕ್ತಿಯೊಬ್ಬರು ಉಕ್ಕಿ ಹರಿಯುತ್ತಿರುವ ನದಿಯ ಸೇತುವೆ ಮೇಲೆಯೇ ಪ್ರಾಣವನ್ನೂ ಲೆಕ್ಕಿಸದೆ ಕಾರಿನಲ್ಲಿ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

ಹೌದು, ಇಡುಕ್ಕಿ ಜಿಲ್ಲೆಯಲ್ಲಿ ನದಿಯೊಂದು ಉಕ್ಕಿ ಹರಿಯುತ್ತಿದೆ. ಸೇತುವೆ ಮೇಲೆಯೂ ನೀರು ರಭಸವಾಗಿ ಹರಿಯುತ್ತಿದೆ. ಆದರೆ, ಗರ್ಭಿಣಿ ಪತ್ನಿಯನ್ನು ತುರ್ತಾಗಿ ಆಸ್ಪತ್ರೆಗೆ ಸೇರಿಸಬೇಕಾದ ಕಾರಣ ವ್ಯಕ್ತಿಯು ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಇಡುಕ್ಕಿ ಆಸ್ಪತ್ರೆಯತ್ತ ಹೊರಟಿದ್ದಾರೆ. ಸೇತುವೆಯ ಮೇಲೆಯೂ ನೀರು ಹರಿಯುವುದನ್ನು ಕಂಡ ಅವರು ಆತಂಕಕ್ಕೀಡಾಗಿದ್ದಾರೆ.

ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲೇಬೇಕಾದ ಕಾರಣ ಅವರು ರಭಸವಾಗಿ ಹರಿಯುತ್ತಿದ್ದ ನೀರನ್ನೂ ಲೆಕ್ಕಿಸದೆ, ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇಬ್ಬರೂ ಸುರಕ್ಷಿತವಾಗಿ ಇಡುಕ್ಕಿ ಆಸ್ಪತ್ರೆ ತಲುಪಿದ್ದಾರೆ. ವ್ಯಕ್ತಿಯ ಪತ್ನಿ ಈಗ ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ನಿಗಾಗಿ ಶೌರ್ಯತನ ಮೆರೆದ ಈತನೇ ನಿಜವಾದ ಪತಿ ಎಂದೆಲ್ಲ ಹೊಗಳಿದ್ದಾರೆ.

Continue Reading

ತಂತ್ರಜ್ಞಾನ

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

ವಾಟ್ಸಾಪ್ ಭಾರತಕ್ಕೆ ಬಂದಾಗಿನಿಂದ ಜನರು ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳುವುದು ಸುಲಭವಾಗಿದೆ. ಪಠ್ಯ ಸಂದೇಶಗಳು, ಆಡಿಯೋ, ವಿಡಿಯೋ ಸೇರಿದಂತೆ ಹಲವು ವಿಷಯಗಳನ್ನು ಹಂಚಿಕೊಳ್ಳುವ ವೇದಿಕೆಯಾಗಿತ್ತು. ಈಗಾಗಲೇ ಹಲವಾರು ಬಾರಿ ಭಾರತದಲ್ಲಿ ವಾಟ್ಸಾಪ್ ನಿಷೇಧವಾಗುವ (Whatsapp Shutdown) ಬೆದರಿಕೆ ಹಾಕಲಾಗಿತ್ತು. ಒಂದು ವೇಳೆ ವಾಟ್ಸಾಪ್ ನಿಷೇಧಿಸಲ್ಪಟ್ಟರೆ ಭಾರತೀಯರಿಗೆ ಇರುವ ಮುಂದಿನ ಆಯ್ಕೆ ಏನು? ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Whatsapp Shutdown
Koo

ಹೊಸ ಐಟಿ ನಿಯಮಗಳು (New IT Rules) ಬಂದಾಗಿನಿಂದ ದೇಶದಲ್ಲಿ (Alternative to Whatsapp) ವಾಟ್ಸಾಪ್ ನಿಷೇಧವಾಗುವ (Whatsapp Shutdown) ಆತಂಕ ಎದುರಾಗಿದೆ. 53.58 ಕೋಟಿಗಿಂತಲೂ ಹೆಚ್ಚು ಭಾರತೀಯ ಗ್ರಾಹಕರು (Indian customers) ಬಳಸಲ್ಪಡುತ್ತಿರುವ ವಾಟ್ಸಾಪ್ (whatsapp) ಒಂದು ವೇಳೆ ನಿಷೇಧಿಸಲ್ಪಟ್ಟರೆ ಮುಂದೇನು ಎನ್ನುವ ಚಿಂತೆ ಹೆಚ್ಚಿನವರನ್ನು ಕಾಡಲಾರಂಭಿಸಿದೆ.

ವಾಟ್ಸಾಪ್ ಭಾರತಕ್ಕೆ ಬಂದಾಗಿನಿಂದ ಜನರು ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳುವುದು ಸುಲಭವಾಗಿದೆ. ಅದು ಪಠ್ಯ ಸಂದೇಶಗಳು ಅಥವಾ ಆಡಿಯೋ, ವಿಡಿಯೋ ಹೀಗೆ ಎಲ್ಲವನ್ನೂ ಸುಲಭವಾಗಿ ಹಂಚಿಕೊಳ್ಳಲು ವೇದಿಕೆಯನ್ನು ಸೃಷ್ಟಿಸಿತ್ತು. ಈಗಾಗಲೇ ಹಲವಾರು ಬಾರಿ ಭಾರತದಲ್ಲಿ ವಾಟ್ಸಾಪ್ ನಿಷೇಧವಾಗುವ ಬೆದರಿಕೆ ಹಾಕಲಾಗಿತ್ತು. ಒಂದು ವೇಳೆ ವಾಟ್ಸಾಪ್ ನಿಷೇಧಿಸಲ್ಪಟ್ಟರೆ ಭಾರತೀಯರಿಗೆ ಇರುವ ಮುಂದಿನ ಆಯ್ಕೆ ಏನು?

Whatsapp Shutdown
Whatsapp Shutdown


ವಾಟ್ಸಾಪ್ ದೇಶದಲ್ಲಿ ಸ್ಥಗಿತಗೊಂಡರೆ ಗ್ರಾಹಕರು ಉಳಿದ ಚಾಟಿಂಗ್ ಆಪ್‌ಗಳತ್ತ ಹೊರಳುವ ಸಾಧ್ಯತೆ ಇದೆ. ಭಾರತದಲ್ಲಿ ವಾಟ್ಸಾಪ್‌ಗೆ ಪರ್ಯಾಯವಾಗಿ ಹಲವು ಆಯ್ಕೆಗಳಿವೆ.

Whatsapp Shutdown
Whatsapp Shutdown


ಟೆಲಿಗ್ರಾಮ್

ಟೆಲಿಗ್ರಾಮ್ ವಾಟ್ಸಾಪ್‌ಗೆ ಪರ್ಯಾಯವಾಗಿರಬಹುದು. ಟೆಲಿಗ್ರಾಮ್ ಚಾಟಿಂಗ್, ಗ್ರೂಪ್ ಚಾಟ್, ಧ್ವನಿ, ವಿಡಿಯೋ ಕರೆಗಳು ಮತ್ತು ವಾಟ್ಸಾಪ್‌ನಂತೆಯೇ ಫೈಲ್ ಹಂಚಿಕೆಯಂತಹ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದಲ್ಲದೆ ಟೆಲಿಗ್ರಾಮ್ ಚಾನೆಲ್ ಮೂಲಕ ಹೆಚ್ಚಿನ ಜನರನ್ನು ಸಂಪರ್ಕಿಸುವುದು ಸಾಧ್ಯವಿದೆ.

Whatsapp Shutdown
Whatsapp Shutdown


ಸಿಗ್ನಲ್

ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು, ಇದು ಭಾರತದಲ್ಲಿ ನಿಧಾನವಾಗಿ ಜನಪ್ರಿಯವಾಗುತ್ತಿದೆ. ಇದು ವಾಟ್ಸಾಪ್ ನಂತೆಯೇ ಹಲವು ವೈಶಿಷ್ಟ್ಯಗಳನ್ನು ಗ್ರಾಹಕರಿಗೆ ನೀಡುತ್ತದೆ.

Whatsapp Shutdown
Whatsapp Shutdown


ಸ್ನ್ಯಾಪ್ ಚಾಟ್

ವಾಟ್ಸಾಪ್‌ಗೆ ಪರ್ಯಾಯವಾಗಿ ಸ್ನ್ಯಾಪ್ ಚಾಟ್ ಅನ್ನು ಅತ್ಯುತ್ತಮ ಆಯ್ಕೆಯಾಗಿ ಇರಿಸಬಹುದು. ಇದರ ಮೂಲಕ ಪರಸ್ಪರ ಚಿತ್ರಗಳು ಮತ್ತು ಫೈಲ್‌ಗಳನ್ನು ಹಂಚಿಕೊಳ್ಳಬಹುದು.


ಇದನ್ನೂ ಓದಿ: Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆ್ಯಪ್‌? ಕೇಂದ್ರ ಸರ್ಕಾರ ಹೇಳೋದೇನು?

ವಾಟ್ಸಾಪ್ ಸ್ಥಗಿತವಾದರೆ ಏನು ಸಮಸ್ಯೆ?

ಭಾರತದಲ್ಲಿ ವಾಟ್ಸಾಪ್ ತನ್ನ ಸೇವೆಯನ್ನು ಸ್ಥಗಿತಗೊಳಿಸಿದರೆ ಗ್ರಾಹಕರು ಮುಖ್ಯವಾಗಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯಾಕೆಂದರೆ ಈ ಆಪ್ ಅನ್ನು ಸಾಕಷ್ಟು ಗ್ರಾಹಕರು ಹಲವಾರು ವರ್ಷಗಳಿಂದ ಬಳಸುತ್ತಿದ್ದಾರೆ. ಇದರಿಂದ ಬೇರೆ ಆಪ್ ಗೆ ಹೊಂದಿಕೊಳ್ಳಲು ಸಾಕಷ್ಟು ಕಾಲಾವಕಾಶ ಬೇಕಾಗಬಹುದು. ಆಗ ಕೆಲವೊಂದು ಸಮಸ್ಯೆಗಳು ಎದುರಾಗಬಹುದು. ಆದರೂ ಪರ್ಯಾಯ ಆಪ್‌ಗಳಿಗೆ ಜನ ಕ್ರಮೇಣ ಒಗ್ಗಿಕೊಳ್ಳಬಹುದು.

Continue Reading
Advertisement
Rahul Gandhi
ದೇಶ2 hours ago

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Kupwara Encounter
ದೇಶ2 hours ago

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

PV Sindhu
ಪ್ರಮುಖ ಸುದ್ದಿ2 hours ago

PV Sindhu : ಪಿವಿ ಸಿಂಧು ಹ್ಯಾಟ್ರಿಕ್​ ಒಲಿಂಪಿಕ್ಸ್​ ಪದಕದ ಕನಸು ಭಗ್ನ, 16ನೇ ಸುತ್ತಿನಲ್ಲಿ ಸೋಲು

Prajwal Revanna
ಕರ್ನಾಟಕ2 hours ago

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

MS Dhoni
ಪ್ರಮುಖ ಸುದ್ದಿ3 hours ago

MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

Kabini dam not cracked no need to worry says DCM DK Shivakumar
ಕರ್ನಾಟಕ3 hours ago

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Blood Cancer
ಆರೋಗ್ಯ3 hours ago

Blood Cancer: ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ರನ್ನು ಬಲಿ ಪಡೆದ ರಕ್ತದ ಕ್ಯಾನ್ಸರ್‌ಗೆ ಏನು ಕಾರಣ? ಇದರ ಲಕ್ಷಣಗಳೇನು?

Kerala Floods
ಪ್ರಮುಖ ಸುದ್ದಿ4 hours ago

Kerala Floods : ಬಾನೆಟ್​ ಎತ್ತರಕ್ಕೆ ತುಂಬಿದ್ದ ಪ್ರವಾಹದ ನೀರಿನಲ್ಲಿ ಸಾಗಿ ಕುಟುಂಬವೊಂದನ್ನು ರಕ್ಷಿಸಿದ ಮಹೀಂದ್ರಾ ಬೊಲೆರೊ! video ಇದೆ

DK Shivakumar
ಕರ್ನಾಟಕ4 hours ago

DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

Paris Olympics 202
ಪ್ರಮುಖ ಸುದ್ದಿ4 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 2ರಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಯ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ12 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ13 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ13 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌