Wayanad Landslide: ವಯನಾಡಿನ ಭೀಕರ ದೃಶ್ಯ ಸೆರೆ ಹಿಡಿದ ಇಸ್ರೋ; ಭೂಕುಸಿತಕ್ಕೂ ಮುನ್ನ ಮತ್ತು ನಂತರ ಫೋಟೋ ರಿಲೀಸ್‌ - Vistara News

ದೇಶ

Wayanad Landslide: ವಯನಾಡಿನ ಭೀಕರ ದೃಶ್ಯ ಸೆರೆ ಹಿಡಿದ ಇಸ್ರೋ; ಭೂಕುಸಿತಕ್ಕೂ ಮುನ್ನ ಮತ್ತು ನಂತರ ಫೋಟೋ ರಿಲೀಸ್‌

Wayanad Landslide: ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ರಿಲೀಸ್‌ ಮಾಡಿರುವ ಇಸ್ರೋ, ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ತೋರಿಸಿದೆ. ಉಪಗ್ರಹ ಚಿತ್ರಗಳ ಪ್ರಕಾರ ಸಮುದ್ರ ಮಟ್ಟದಿಂದ 1500 ಮೀಟರ್‌ ಎತ್ತರದಲ್ಲಿರುವ ಗುಡ್ಡದ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದೆ. ಇನ್ನು ಈ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ.

VISTARANEWS.COM


on

Wayanad Landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಯನಾಡು: ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೀಕರ ಭೂಕುಸಿತಕ್ಕೆ ಕೇರಳದ ವಯನಾಡು ಈಗ ಸೂತಕದ ಮನೆಯಂತಾಗಿದೆ. ಭೂಕುಸಿತದಲ್ಲಿ (Wayanad Landslide) ಮೃತರ ಸಂಖ್ಯೆ ಈಗ 300ದಾಟಿದೆ. ಇನ್ನು ನಾಪತ್ತೆಯಾದವರ ಸಂಖ್ಯೆ ಅದೆಷ್ಟೋ.. ಈ ನಡುವೆ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಇಂದು ವಯನಾಡಿನ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ರಿಲೀಸ್‌ ಮಾಡಿರುವ ಇಸ್ರೋ, ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ತೋರಿಸಿದೆ. ಉಪಗ್ರಹ ಚಿತ್ರಗಳ ಪ್ರಕಾರ ಸಮುದ್ರ ಮಟ್ಟದಿಂದ 1500 ಮೀಟರ್‌ ಎತ್ತರದಲ್ಲಿರುವ ಗುಡ್ಡದ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದೆ. ಇನ್ನು ಈ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ.

ಇನ್ನು ಉಪಗ್ರಹದ ಮಾಹಿತಿಯ ಪ್ರಕಾರ ಈ ಹಿಂದೆ ಭೂ ಕುಸಿತ ಸಂಭವಿಸಿದ ಅದೇ ಸ್ಥಳದಲ್ಲೇ ಭೂ ಕುಸಿತವಾಗಿದೆ ಎಂದು ಹೇಳಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ. ಭಾರೀ ದೊಡ್ಡ ಪ್ರಮಾಣದ ಕುಸಿತ ಎಂಬುದು ಚಿತ್ರಗಳ ಮೂಲಕ ಸ್ಪಷ್ಟವಾಗಿದೆ.

ಭೂಕುಸಿತ ವಿನಾಶವನ್ನು ಸೆರೆಹಿಡಿಯಲು, ಹೈದರಾಬಾದ್‌ನಲ್ಲಿರುವ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ಎನ್‌ಆರ್‌ಎಸ್‌ಸಿ) ಇಸ್ರೋದ ಸುಧಾರಿತ ಕಾರ್ಟೊಸ್ಯಾಟ್-3 ಆಪ್ಟಿಕಲ್ ಉಪಗ್ರಹ ಮತ್ತು ಮೋಡದ ಹೊದಿಕೆಯನ್ನು ಭೇದಿಸಬಲ್ಲ RISAT ಉಪಗ್ರಹದ ಸಹಾಯದಿಂದ ಇಂ ಚಿತ್ರವನ್ನು ಸೆರೆ ಹಿಡಿದಿದೆ.

ವಯನಾಡಿನ ಹಲವಾರು ಸ್ಥಳಗಳಲ್ಲಿ ರಕ್ಷಣಾ ತಂಡಗಳು ಗುರುವಾರ ರಕ್ಷಣಾ ಕಾರ್ಯವನ್ನು ಪುನರಾರಂಭಿಸಿವೆ. 1600 ಕ್ಕೂ ಹೆಚ್ಚು ಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಚಿವ ಕೆ ರಾಜನ್ ಹೇಳಿದ್ದಾರೆ. ನದಿಗಳಲ್ಲಿ, ಬೆಟ್ಟ ಕುಸಿತದ ಅವಶೇಷಗಳ ಅಡಿಯಲ್ಲಿ ಶವಗಳು ಸಿಗುತ್ತಿವೆ. ಇದರ ಮಧ್ಯೆಯೇ, ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ವಯನಾಡಿಗೆ ಭೇಟಿ ನೀಡಿದ್ದು, ಸಂತ್ರಸ್ತ ಕುಟುಂಬಗಳ ಜತೆ ಅವರು ಮಾತುಕತೆ ನಡೆಸಿದ್ದಾರೆ.

ವಯನಾಡು ಜಿಲ್ಲೆಯ ಮೆಪ್ಪಾಡಿ ಹಾಗೂ ಚೂರಲ್‌ಮಲ ಪ್ರದೇಶಗಳ ಗ್ರಾಮಗಳು ಸಂಪೂರ್ಣವಾಗಿ ಮಸಣದಂತಾಗಿವೆ. ಈ ಪ್ರದೇಶಗಳಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡಿರುವ, ನೀರಿನಲ್ಲಿ ಮನೆಗಳು ಕೊಚ್ಚಿ ಹೋಗಿ ನಿರಾಶ್ರಿತರಾಗಿರುವ ಸಂತ್ರಸ್ತರನ್ನು ಭೇಟಿಯಾದ ಅವರು, ಆತ್ಮಸ್ಥೈರ್ಯ ತುಂಬಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಹಾನಿಯ ವೀಕ್ಷಣೆ ಮಾಡಿದರು.

ವಯನಾಡು ಜಿಲ್ಲೆಯ ಹಲವೆಡೆ ಸಂಚರಿಸಿದ ಬಳಿಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. “ವಯನಾಡು ಜನರ ಸ್ಥಿತಿಯನ್ನು ನೋಡಿದಾಗ ನನ್ನ ತಂದೆ ಸಾವಿನ ದಿನ, ಆ ದುಃಖವೇ ಆಯಿತು. ಜನರು ತಂದೆ, ತಾಯಿ ಜತೆಗೆ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ಇಡೀ ದೇಶದ ಗಮನವೇ ಈಗ ವಯನಾಡು ಮೇಲಿದೆ. ನಾವೆಲ್ಲರೂ ವಯನಾಡು ಪರವಾಗಿ ನಿಲ್ಲೋಣ. ಇದು ಕೇವಲ ವಯನಾಡಿನ ದುರಂತ ಅಲ್ಲ, ರಾಜ್ಯ ಹಾಗೂ ದೇಶದ ದುರಂತವಾಗಿದೆ” ಎಂದು ಭಾವುಕರಾಗಿ ಹೇಳಿದರು

ಇದನ್ನೂ ಓದಿ: Wayanad Landslide: ವಯನಾಡ್‌ ಅಕ್ಷರಶಃ ಸ್ಮಶಾನ; ಭೂಕುಸಿತ ಸ್ಥಳಕ್ಕೆ ರಾಹುಲ್‌, ಪ್ರಿಯಾಂಕಾ ಭೇಟಿ ಸ್ಥಗಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಮಗು ಜನನ! ಆಘಾತಗೊಂಡು ಅಲ್ಲೇ ಕೂತಿದ್ದ ಬಾಲಕಿ

Sexual Abuse: ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಮೊದಲ ವರ್ಷದ ಇಂಟರ್ ಮೀಡಿಯಟ್ ವಿದ್ಯಾರ್ಥಿನಿಯೊಬ್ಬಳು ಬಾತ್ ರೂಮ್‌ನಲ್ಲಿ ಇನ್ನೂ ಬೆಳವಣಿಗೆ ಹೊಂದದ ಮಗುವಿಗೆ ಜನ್ಮ ನೀಡಿದ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಥಪಟ್ಟಣಂನ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ವಿದ್ಯಾರ್ಥಿನಿ ಬಹಳ ಸಮಯದ ನಂತರ ತನ್ನ ತರಗತಿಗೆ ಹಾಜರಾಗದಿದ್ದಾಗ, ಅವಳ ಸಹಪಾಠಿಗಳು ಅಲ್ಲಿಯ ಸಿಬ್ಬಂದಿಗೆ ಮಾಹಿತಿ ನೀಡಿದರು. ಆಗ ಆಕೆಯನ್ನು ಹುಡುಕಿಕೊಂಡು ಬಾತ್‌ರೂಂಗೆ ಬಂದ ಶಿಕ್ಷಕರಿಗೆ ಅಲ್ಲಿ ಈ ಘೋರ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

Sexual Abuse
Koo

ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ 16 ವರ್ಷದ ಇಂಟರ್ ಮೀಡಿಯೆಟ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ ಬಾತ್‍ರೂಮ್‌(Sexual Abuse)ನಲ್ಲಿ ಇನ್ನೂ ಬೆಳವಣಿಗೆ ಹೊಂದದ ಭ್ರೂಣಕ್ಕೆ ಜನ್ಮ ನೀಡಿದ್ದಾಳೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಥಪಟ್ಟಣಂನ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.

ಈಕೆ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಮೊದಲ ವರ್ಷದ ಇಂಟರ್‌ ಮೀಡಿಯಟ್‌ ವಿದ್ಯಾರ್ಥಿನಿಯಾಗಿದ್ದು, ಕಳೆದ ಎರಡು ತಿಂಗಳಿನಿಂದ ಹಾಸ್ಟೆಲ್‍ನಲ್ಲಿ ವಾಸವಾಗಿದ್ದಳು. ಶಾಲಾ ಅಧಿಕಾರಿಗಳ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಹೊಟ್ಟೆ ನೋವಿನ ಬಗ್ಗೆ ಹೇಳಿಕೊಂಡಿದ್ದಳು. ಆಗ ಅವಳನ್ನು ಬಾತ್ ರೂಮ್‌ಗೆ ಹೋಗಿ ಬರುವಂತೆ ಹೇಳಲಾಗಿತ್ತು. ಅಲ್ಲಿ ಅವಳು ಇನ್ನೂ ಬೆಳವಣಿಗೆ ಹೊಂದದ ಮಗುವಿಗೆ ಜನ್ಮ ನೀಡಿದ್ದಾಳೆ. ವಿದ್ಯಾರ್ಥಿನಿ ಬಹಳ ಸಮಯ ಕಳೆದರೂ ಬಾತ್‌ರೂಮ್‌ನಿಂದ ಬಾರದ ಕಾರಣ, ಅವಳ ಸಹಪಾಠಿಗಳು ಅಲ್ಲಿಯ ಉಸ್ತುವಾರಿಗೆ ಮಾಹಿತಿ ನೀಡಿದರು. ಆಗ ಆಕೆಯನ್ನು ಹುಡುಕಿಕೊಂಡು ಬಾತ್‍ರೂಮ್‌ಗೆ ಬಂದ ಅವರು ಅಲ್ಲಿ ಈ ಘೋರ ದೃಶ್ಯ ಕಂಡುಬಂದಿದೆ.

ಚೀಮಕುರ್ತಿ ಮಂಡಲದ ನಿವಾಸಿಯಾದ ಈ ವಿದ್ಯಾರ್ಥಿನಿ ಜೂನ್ 19ರಂದು ಈ ಶಿಕ್ಷಣ ಸಂಸ್ಥೆಗೆ ಸೇರಿದ್ದಳು. ಪ್ರತಿದಿನ ತರಗತಿಗಳಿಗೆ ಹಾಜರಾಗುತ್ತಿದ್ದಳು. ಅವಳು ಒಂದು ವಾರ ಮನೆಗೆ ಹೋಗಿ ಹಾಸ್ಟೆಲ್‍ಗೆ ಹಿಂದಿರುಗಿದ್ದಳು. ಹಾಸ್ಟೆಲ್‍ನಲ್ಲಿ ಅವಳ ಜೊತೆ ಇತರ ವಿದ್ಯಾರ್ಥಿಗಳು ವಾಸವಾಗಿದ್ದಾರೆ. ವಿದ್ಯಾರ್ಥಿನಿಯ ಗರ್ಭಧಾರಣೆಯ ಬಗ್ಗೆ ತಮಗೆ ತಿಳಿದಿರಲಿಲ್ಲ ಎಂಬುದಾಗಿ ಶಾಲಾ ಅಧಿಕಾರಿಗಳು ಹೇಳಿದ್ದಾರೆ. ವಿದ್ಯಾರ್ಥಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಒಂಗೋಲ್‍ನ ರಿಮ್ಸ್(ಆರ್ ಐಎಂಎಸ್) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಪೊಲೀಸರ ಮಾಹಿತಿ ಪ್ರಕಾರ, ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದ ಹಾಸ್ಟೆಲ್‌ ಶೌಚಾಲಯದಲ್ಲಿ ಹದಿನಾರು ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಅವಳು ಬಹಳ ಸಮಯದಿಂದ ಶೌಚಾಲಯದಿಂದ ಹೊರಗೆ ಬರದಿರುವುದನ್ನು ಕಾಲೇಜು ಸಿಬ್ಬಂದಿ ಗಮನಿಸಿದ್ದಾರೆ. ಉಪನ್ಯಾಸಕಿಯೊಬ್ಬರು ಒಳಗೆ ಹೋಗಿ ನೋಡಿದಾಗ ವಿದ್ಯಾರ್ಥಿನಿಯ ಪಕ್ಕದಲ್ಲಿ ಗಂಡು ಮಗು ಸತ್ತು ಬಿದ್ದಿರುವುದನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ವಿದ್ಯಾರ್ಥಿನಿ ಆಘಾತಗೊಂಡು ಅಲ್ಲೇ ಕುಳಿತಿದ್ದಳು.

ಇದನ್ನೂ ಓದಿ: ಟೋಸ್ಟ್‌ ನೀಡುವುದಾಗಿ ಕರೆದು ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

ಸ್ಥಳಕ್ಕೆ ಬಂದ ಪೊಲೀಸರು ಬಾಲಕಿಯನ್ನು ಒಂಗೋಲ್‍ನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಚಿಮಕುರ್ತಿಯ ವ್ಯಕ್ತಿಯೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.

Continue Reading

ದೇಶ

Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1.0 ಲಕ್ಷ ಕೋಟಿ ರೂ. ರೈತರ ಬಾಕಿ ತೀರಿಸಲಾಗಿದೆ. ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ ನೀತಿಯ ಅನುಸಾರ ರೈತರಿಗೆ ಆಗಬೇಕಾದ ಪಾವತಿಗಳ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ನಡೆಯುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

1 lakh crore Rs dues paid to farmers in current sugar season says Pralhad Joshi
Koo

ನವದೆಹಲಿ: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ತೀರಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದರು.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ ನೀತಿಯ ಅನುಸಾರ ರೈತರಿಗೆ ಆಗಬೇಕಾದ ಪಾವತಿಗಳ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

ಪ್ರಸಕ್ತ ಸಕ್ಕರೆ ಋತುವಿನಲ್ಲಿ 1.05 ಲಕ್ಷ ಕೋಟಿ ರೂ. ಪಾವತಿಯೊಂದಿಗೆ ಶೇ.94.8 ಕ್ಕಿಂತ ಹೆಚ್ಚಿನ ಮೊತ್ತದ ಕಬ್ಬಿನ ಬಾಕಿ ತೀರಿಸಲಾಗಿದೆ ಎಂದರು.

ಇದನ್ನೂ ಓದಿ: KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಕಬ್ಬು ಬೆಳೆಗಾರರ ಬಾಕಿಯನ್ನು ಅತಿ ಕಡಿಮೆ ಮಟ್ಟಕ್ಕೆ ತೆಗೆದುಕೊಂಡು ಹೋಗಲಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದ ಸರ್ಕಾರ ರೈತಪರ ಕಾರ್ಯಕ್ರಮಗಳನ್ನು ಕೈಗೊಂಡ ಪರಿಣಾಮ 2021-22ರ ಸಕ್ಕರೆ ಋತುವಿನ ಶೇ. 99.99 ರಷ್ಟು ಕಬ್ಬಿನ ಬಾಕಿಯನ್ನು ತೀರಿಸಲಾಗಿದೆ ಎಂದು ಹೇಳಿದರು.

Continue Reading

ದೇಶ

NEET UG 2024: ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಎರಡು ನಗರಗಳಿಗೆ ಸೀಮಿತ; ಮರು ಪರೀಕ್ಷೆ ಅಗತ್ಯವಿಲ್ಲ-ಸುಪ್ರೀಂಕೋರ್ಟ್‌

NEET UG 2024: ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಇದ್ದ ನ್ಯಾಯಪೀಠ, ನೀಟ್‌ ಮರುಪರೀಕ್ಷೆ ಬಗ್ಗೆ ಸವಿಸ್ತಾರವಾದ ತೀರ್ಪನ್ನು ಪ್ರಕಟಿಸಿದ್ದಾರೆ. ಹಜಾರಿಬಾಗ್‌ ಮತ್ತು ಪಾಟ್ನಾಕ್ಕಿಂತ ಹೊರತಾಗಿ ಬೇರೆಲ್ಲೂ ಅಕ್ರಮ ನಡೆದಿಲ್ಲ. ಹೀಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮರು ಪರೀಕ್ಷೆಯ ಅವಶ್ಯಕತೆ ಇಲ್ಲ. ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕೆಂದು ಸುಪ್ರೀಂಕೋರ್ಟ್‌ ಖಡಕ್‌ ಸೂಚನೆ ನೀಡಿದೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್‌(Supreme Court) ತಿರಸ್ಕರಿಸಿತ್ತು. ಈ ಬಗ್ಗೆ ಸೂಕ್ತ ಕಾರಣ ನೀಡಿ ಸವಿಸ್ತಾರವಾದ ತೀರ್ಪನ್ನು ಸುಪ್ರೀಂಕೋರ್ಟ್‌ ಇಂದು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಇದ್ದ ನ್ಯಾಯಪೀಠ, ನೀಟ್‌ ಮರುಪರೀಕ್ಷೆ ಬಗ್ಗೆ ಸವಿಸ್ತಾರವಾದ ತೀರ್ಪನ್ನು ಪ್ರಕಟಿಸಿದ್ದಾರೆ. ಹಜಾರಿಬಾಗ್‌ ಮತ್ತು ಪಾಟ್ನಾಕ್ಕಿಂತ ಹೊರತಾಗಿ ಬೇರೆಲ್ಲೂ ಅಕ್ರಮ ನಡೆದಿಲ್ಲ. ಹೀಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮರು ಪರೀಕ್ಷೆಯ ಅವಶ್ಯಕತೆ ಇಲ್ಲ. ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕೆಂದು ಸುಪ್ರೀಂಕೋರ್ಟ್‌ ಖಡಕ್‌ ಸೂಚನೆ ನೀಡಿದೆ.

ಸ್ಟ್ರಾಂಗ್ ರೂಮ್‌ನಲ್ಲಿ ಹಿಂಬದಿ ಬಾಗಿಲು ತೆರೆದಿರುವುದು, ನಂತರ ಗ್ರೇಸ್‌ ಮಾರ್ಕ್‌ ನೀಡುವುದು ಹೀಗೆ NTA ಮಾಡಿರುವ ತಪ್ಪುಗಳನ್ನು ಗುರುತಿಸಲಾಗಿದೆ. ಉದ್ಭವಿಸಿರುವ ಈ ಸಮಸ್ಯೆಗಳು ಪುನರಾವರ್ತನೆಯಾಗದಂತೆ ಈ ವರ್ಷವೇ ಕೇಂದ್ರ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು.

ಸರ್ಕಾರ ರಚಿಸಿರುವ ಸಮಿತಿಯು ಯಾವುದೇ ದುಷ್ಕೃತ್ಯವನ್ನು “ತಡೆಯಲು ಮತ್ತು ಪತ್ತೆಹಚ್ಚಲು” ಕ್ರಮಗಳನ್ನು ಸೂಚಿಸಬೇಕು ಎಂದು ಸಿಜೆಐ ಹೇಳಿದರು. ಎನ್‌ಟಿಎ ಜೊತೆಗೆ ಸಮಿತಿಯು ಪ್ರಶ್ನೆಪತ್ರಿಕೆಗಳನ್ನು ತಯಾರಿಸುವುದರಿಂದ ಅದನ್ನು ಪರಿಶೀಲಿಸುವವರೆಗೆ ಕಠಿಣ ತಪಾಸಣೆಗಳನ್ನು ಮೌಲ್ಯಮಾಪನ ಮಾಡಬೇಕು, ಪ್ರಶ್ನೆ ಪತ್ರಿಕೆಗಳ ನಿರ್ವಹಣೆ ಮತ್ತು ಸಂಗ್ರಹಣೆ ಇತ್ಯಾದಿಗಳನ್ನು ಪರಿಶೀಲಿಸಲು ಎಸ್‌ಒಪಿಯನ್ನು ಸುಗಮಗೊಳಿಸಬೇಕು ಎಂದು ಸಿಜೆಐ ಹೇಳಿದರು.

ಪ್ರಶ್ನೆ ಪತ್ರಿಕೆಗಳ ಗೌಪ್ಯತೆಗೆ ಸಾಕಷ್ಟು ಕ್ರಮಗಳನ್ನು ಜಾರಿಗೊಳಿಸಬೇಕು. ಪ್ರಶ್ನೆಪತ್ರಿಕೆಗಳನ್ನು ಸಾಗಿಸಲು ತೆರೆದ ಇ-ರಿಕ್ಷಾಗಳಿಗಿಂತ ನೈಜ ಸಮಯದ ಲಾಕ್‌ಗಳೊಂದಿಗೆ ಮುಚ್ಚಿದ ವಾಹನಗಳನ್ನು ಬಳಸುವ ಕಾರ್ಯಸಾಧ್ಯತೆ ಬಗ್ಗೆ ಅವರು ಎನ್‌ಟಿಎಯನ್ನು ಪ್ರಶ್ನಿಸಿದರು.

ಸಿಬಿಐ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

ಏತನ್ಮಧ್ಯೆ, NEET-UG 2024 ಪರೀಕ್ಷೆಯಲ್ಲಿನ ಆಪಾದಿತ ಅಕ್ರಮಗಳಲ್ಲಿ 120-B, 201, 409, 380, 411, 420 ಮತ್ತು 109 IPC ಅಡಿಯಲ್ಲಿ ಕೇಂದ್ರೀಯ ತನಿಖಾ ದಳ (CBI) ಗುರುವಾರ ತನ್ನ ಮೊದಲ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದೆ. ತನಿಖಾ ಸಂಸ್ಥೆಯು 13 ಆರೋಪಿಗಳಾದ ನಿತೀಶ್ ಕುಮಾರ್, ಅಮಿತ್ ಆನಂದ್, ಸಿಕಂದರ್ ಯಡ್ವೆಂದು, ಅಶುತೋಷ್ ಕುಮಾರ್-1, ರೋಷನ್ ಕುಮಾರ್, ಮನೀಶ್ ಪ್ರಕಾಶ್, ಅಶುತೋಷ್ ಕುಮಾರ್-2, ಅಖಿಲೇಶ್ ಕುಮಾರ್, ಅವದೇಶ್ ಕುಮಾರ್, ಅನುರಾಗ್ ಯಾದವ್, ಅಭಿಷೇಕ್ ಕುಮಾರ್, ಶಿವಾನಂದ್ ಕುಮಾರ್ ಮತ್ತು ಆಯುಷ್ ರಾಜ್ ಅವರ ವಿರುದ್ಧ ಅಪರಾಧಗಳನ್ನು ದಾಖಲಿಸಿದೆ. .

ಈ ಪ್ರಕರಣವನ್ನು ಆರಂಭದಲ್ಲಿ ಪಾಟ್ನಾದ ಶಾಸ್ತ್ರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಯಿತು ಮತ್ತು ನಂತರ ಜೂನ್ 23 ರಂದು ಸಿಬಿಐಗೆ ವರ್ಗಾಯಿಸಲಾಯಿತು. ತನಿಖಾ ಸಂಸ್ಥೆಯು ಈ ಪ್ರಕರಣದಲ್ಲಿ ಇದುವರೆಗೆ 40 ಆರೋಪಿಗಳನ್ನು ಬಂಧಿಸಿದೆ, ಬಿಹಾರ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ ಮತ್ತು 58 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.

ಇದನ್ನೂ ಓದಿ: NEET UG 2024: ಕೊನೆಗೂ ನೀಟ್‌ ಫೈನಲ್ ಫಲಿತಾಂಶ ಪ್ರಕಟ; ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆ, ಇಲ್ಲಿದೆ ಪಟ್ಟಿ

Continue Reading

ದೇಶ

Wayanad Landslide: ವಯನಾಡು ಹಿಂದೆ ಹೇಗಿತ್ತು? ಈಗ ಹೇಗಿದೆ? ದುರಂತ ಸ್ಥಳದ ದೃಶ್ಯ ಸೆರೆ ಹಿಡಿದ ಇಸ್ರೋ

Wayanad Landslide: ಕಾರ್ಟೊಸ್ಯಾಟ್ 3 ಉಪಗ್ರಹವು ಮೇ 22 ರಂದು ಒಂದು ಚಿತ್ರವನ್ನು ತೆಗೆದುಕೊಂಡಿತು ಮತ್ತು ಜುಲೈ 31 ರಂದು ಭೂಕುಸಿತದ ಒಂದು ದಿನದ ನಂತರ RISAT ಉಪಗ್ರಹವು ಮತ್ತೊಂದು ಚಿತ್ರವನ್ನು ತೆಗೆದಿದೆ. ಬರೋಬ್ಬರಿ 86,000 ಚದರ ಮೀಟರ್‌ಗಳಷ್ಟು ಭೂಮಿ ಹಾನಿಗೊಳಗಾಗಿರುವುದನ್ನು ಸ್ಯಾಟಲೈಟ್‌ ಚಿತ್ರದಲ್ಲಿ ಕಾಣಬಹುದಾಗಿದೆ. ಸುಮಾರು ಎಂಟು ಕಿ.ಮೀಗಳಷ್ಟು ಭೂಮಿ ಸಂಪೂರ್ಣವಾಗಿ ನಾಶವಾಗಿದೆ.

VISTARANEWS.COM


on

Wayanad landslides
Koo

ಹೈದರಾಬಾದ್‌: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ(Wayanad Landslide)ದ ಭೀಕರ ದೃಶ್ಯವನ್ನು ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಸೆರೆ ಹಿಡಿದಿದೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌(NRSC) ಹೈ ರೆಸೊಲ್ಯೂಶನ್‌ ಉಪಗ್ರಹದ ಚಿತ್ರವನ್ನು ಬಿಡುಗಡೆ ಮಾಡಿದೆ. ಭೀಕರ ದುರಂತ ಸಂಭವಿಸಿದ ವಯನಾಡ್‌ ಜಿಲ್ಲೆಯ ಚೂರಲ್‌ಮಾಲದ ದುರಂತಕ್ಕೂ ಮುನ್ನ ಮತ್ತು ನಂತರದ ಚಿತ್ರವನ್ನು NRSC ಇಸ್ರೋ ರಿಲೀಸ್‌ ಮಾಡಿದೆ.

ಕಾರ್ಟೊಸ್ಯಾಟ್ 3 ಉಪಗ್ರಹವು ಮೇ 22 ರಂದು ಒಂದು ಚಿತ್ರವನ್ನು ತೆಗೆದುಕೊಂಡಿತು ಮತ್ತು ಜುಲೈ 31 ರಂದು ಭೂಕುಸಿತದ ಒಂದು ದಿನದ ನಂತರ RISAT ಉಪಗ್ರಹವು ಮತ್ತೊಂದು ಚಿತ್ರವನ್ನು ತೆಗೆದಿದೆ. ಬರೋಬ್ಬರಿ 86,000 ಚದರ ಮೀಟರ್‌ಗಳಷ್ಟು ಭೂಮಿ ಹಾನಿಗೊಳಗಾಗಿರುವುದನ್ನು ಸ್ಯಾಟಲೈಟ್‌ ಚಿತ್ರದಲ್ಲಿ ಕಾಣಬಹುದಾಗಿದೆ. ಸುಮಾರು ಎಂಟು ಕಿ.ಮೀಗಳಷ್ಟು ಭೂಮಿ ಸಂಪೂರ್ಣವಾಗಿ ನಾಶವಾಗಿದೆ.

ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೀಕರ ಭೂಕುಸಿತಕ್ಕೆ ಕೇರಳದ ವಯನಾಡು ಈಗ ಸೂತಕದ ಮನೆಯಂತಾಗಿದೆ. ಭೂಕುಸಿತದಲ್ಲಿ ಮೃತರ ಸಂಖ್ಯೆ ಈಗ 300ದಾಟಿದೆ. ಇನ್ನು ನಾಪತ್ತೆಯಾದವರ ಸಂಖ್ಯೆ ಅದೆಷ್ಟೋ… ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ರಿಲೀಸ್‌ ಮಾಡಿರುವ ಇಸ್ರೋ, ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ತೋರಿಸಿದೆ.

ಉಪಗ್ರಹ ಚಿತ್ರಗಳ ಪ್ರಕಾರ ಸಮುದ್ರ ಮಟ್ಟದಿಂದ 1500 ಮೀಟರ್‌ ಎತ್ತರದಲ್ಲಿರುವ ಗುಡ್ಡದ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದೆ. ಇನ್ನು ಈ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಇನ್ನು ಉಪಗ್ರಹದ ಮಾಹಿತಿಯ ಪ್ರಕಾರ ಈ ಹಿಂದೆ ಭೂ ಕುಸಿತ ಸಂಭವಿಸಿದ ಅದೇ ಸ್ಥಳದಲ್ಲೇ ಭೂ ಕುಸಿತವಾಗಿದೆ ಎಂದು ಹೇಳಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ.

ಭಾರೀ ದೊಡ್ಡ ಪ್ರಮಾಣದ ಕುಸಿತ ಎಂಬುದು ಚಿತ್ರಗಳ ಮೂಲಕ ಸ್ಪಷ್ಟವಾಗಿದೆ.
ಭೂಕುಸಿತ ವಿನಾಶವನ್ನು ಸೆರೆಹಿಡಿಯಲು, ಹೈದರಾಬಾದ್‌ನಲ್ಲಿರುವ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ಎನ್‌ಆರ್‌ಎಸ್‌ಸಿ) ಇಸ್ರೋದ ಸುಧಾರಿತ ಕಾರ್ಟೊಸ್ಯಾಟ್-3 ಆಪ್ಟಿಕಲ್ ಉಪಗ್ರಹ ಮತ್ತು ಮೋಡದ ಹೊದಿಕೆಯನ್ನು ಭೇದಿಸಬಲ್ಲ RISAT ಉಪಗ್ರಹದ ಸಹಾಯದಿಂದ ಇಂ ಚಿತ್ರವನ್ನು ಸೆರೆ ಹಿಡಿದಿದೆ.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Continue Reading
Advertisement
intel layoffs
ವಿದೇಶ3 seconds ago

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Sexual Abuse
Latest5 mins ago

Sexual Abuse: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಮಗು ಜನನ! ಆಘಾತಗೊಂಡು ಅಲ್ಲೇ ಕೂತಿದ್ದ ಬಾಲಕಿ

BJP-JDS Padayatra
ಕರ್ನಾಟಕ8 mins ago

BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

1 lakh crore Rs dues paid to farmers in current sugar season says Pralhad Joshi
ದೇಶ21 mins ago

Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

Viral Video
Latest23 mins ago

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

ಸಿನಿಮಾ28 mins ago

OTT Releases: ಒಟಿಟಿಯಲ್ಲಿ ಈ ತಿಂಗಳು ಕಲ್ಕಿ, ಇಂಡಿಯನ್‌, ಟರ್ಬೊ ಜತೆಗೆ ಇನ್ಯಾವ ಹೊಸ ಚಿತ್ರ, ವೆಬ್‌ ಸಿರೀಸ್‌?

kidnap case
ಬೆಂಗಳೂರು37 mins ago

Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ!

NEET UG 2024
ದೇಶ55 mins ago

NEET UG 2024: ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಎರಡು ನಗರಗಳಿಗೆ ಸೀಮಿತ; ಮರು ಪರೀಕ್ಷೆ ಅಗತ್ಯವಿಲ್ಲ-ಸುಪ್ರೀಂಕೋರ್ಟ್‌

ಸಿನಿಮಾ1 hour ago

Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

MS Dhoni
ಕ್ರೀಡೆ1 hour ago

MS Dhoni: ನೆಚ್ಚಿನ ಆಟಗಾರನನ್ನು ಹೆಸರಿಸಿದ ಧೋನಿ; ಕೊಹ್ಲಿ, ರೋಹಿತ್​ ಅಲ್ಲ, ಮತ್ಯಾರು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌