Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಬೆಲೆಯ ಕಾರು - Vistara News

ಕ್ರೀಡೆ

Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಬೆಲೆಯ ಕಾರು

Paris Olympic: ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಭಾರತೀಯ ಕ್ರೀಡಾಪಟುಗಳಿಗೆ ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಎಂಜಿ ವಿಂಡ್ಸರ್(MG Windsor)​ ಕಾರನ್ನು ಬಹುಮಾನವಾಗಿ ನೀಡುವುದಾಗಿ ​ಸಜ್ಜನ್​ ಜಿಂದಾಲ್ ಹೇಳಿದ್ದಾರೆ.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಸಕ್ತ ಸಾಗುತ್ತಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympic)​ ಕ್ರೀಡಾಕೂಟದಲ್ಲಿ ಭಾರತ ಇದುವರೆಗೂ 3 ಪದಕಗಳನ್ನು ಗೆದ್ದು ಪದಕಪಟ್ಟಿಯಲ್ಲಿ ಸದ್ಯ 44ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಕೆಲವು ಸ್ಪರ್ಧೆಗಳಲ್ಲಿ ಭಾರತೀಯ ಕ್ರೀಡಾಳುಗಳು ತಮ್ಮ ವಿಭಾಗದ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಪದಕ ಭರವಸೆ ಮೂಡಿಸಿದ್ದಾರೆ. ಇದರ ಬೆನ್ನಲ್ಲೇ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ ಕಾರು ಬಹುಮಾನ ನೀಡಲಾಗುವುದು ಎಂದು ಜೆಎಸ್​ಡಬ್ಲ್ಯು ಎಂಜಿ ಇಂಡಿಯಾದ ಚೇರ್ಮನ್​ ಸಜ್ಜನ್​ ಜಿಂದಾಲ್(JSW Chairman Sajjan Jindal)​ ಘೋಷಣೆ ಮಾಡಿದ್ದಾರೆ.

ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಎಂಜಿ ವಿಂಡ್ಸರ್(MG Windsor)​ ಕಾರನ್ನು ಬಹುಮಾನವಾಗಿ ನೀಡುವುದಾಗಿ ​ಸಜ್ಜನ್​ ಜಿಂದಾಲ್ ಹೇಳಿದ್ದಾರೆ. ಈ ಕಾರಿನ ಮೌಲ್ಯ ಸುಮಾರು 25 ಲಕ್ಷ ರೂ. ಆಗಿದೆ.

ಇಂದು ಭಾರತದ ಸ್ಪರ್ಧೆಗಳು


ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024 ) ಗುರುವಾರ ಭಾರತಕ್ಕೆ ನಿರಾಶಾದಾಯಕ ದಿನವಾಗಿತ್ತು. ರಾತ್ರಿ ನಡೆದ ಬ್ಯಾಡ್ಮಿಂಟನ್​ ಮಹಿಳೆಯರ ಸಿಂಗಲ್ಸ್​ನಲ್ಲಿ ಪಿವಿ ಸಿಂಧೂ ಸೋಲುವ ಮೂಲಕ ದೊಡ್ಡ ಆಘಾತವಾಗಿದ್ದರೆ, ಪದಕ ಗೆಲ್ಲಬಹುದು ಎಂದು ನಿರೀಕ್ಷೆ ಮಾಡಿದ್ದ ಹಲವು ಸ್ಪರ್ಧಿಗಳು ಆರಂಭಿಕ ಹಂತದಲ್ಲೇ ಸೋಲನ್ನು ಅನುಭವಿಸಿದರು. ಶೂಟಿಂಗ್​ನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ತಂದುಕೊಟ್ಟರು. ಬಾಕ್ಸಿಂಗ್ಸ್​​ನಲ್ಲಿ ನಿಖತ್ ಝರೀನ್ ಮತ್ತು ಶೂಟಿಂಗ್​​ನಲ್ಲಿ ಸಿಫ್ಟ್ ಕೌರ್ ಸಮ್ರಾ ಬರಿಗೈಯಲ್ಲಿ ಬಂದಿರುವುದು ಬೇಸರದ ವಿಷಯವಾಗಿದೆ. ಬ್ಯಾಡ್ಮಿಂಟನ್​ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕ್ವಾರ್ಟರ್​ ಫೈನಲ್ಸ್​​ನಿಂದ ಅಚ್ಚರಿಯ ನಿರ್ಗಮನ ಕಂಡರು.  ಆಗಸ್ಟ್ 2ರಂದು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಇಲ್ಲಿದೆ.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

ಆರ್ಚರಿ

ಆರ್ಚರಿ ಮಿಶ್ರ ತಂಡ ಆರ್ 16 : ಭಾರತ ವಿರುದ್ಧ ಇಂಡೋನೇಷ್ಯಾ – ಮಧ್ಯಾಹ್ನ 1:19ಕ್ಕೆ
ಮಿಶ್ರ ತಂಡ ಕ್ವಾರ್ಟರ್ ಫೈನಲ್ : ಸಂಜೆ 5:45ಕ್ಕೆ
ಮಿಶ್ರ ತಂಡ ಸೆಮಿಫೈನಲ್ – ಸಂಜೆ 7:00ಕ್ಕೆ
ಮಿಶ್ರ ತಂಡ ಪದಕ ಪಂದ್ಯಗಳು – 7:54ಕ್ಕೆ

ಅಥ್ಲೆಟಿಕ್ಸ್

ಮಹಿಳೆಯರ 5000 ಓಟ: ಮೀಟರ್ ರೌಂಡ್ -1 – ಪಾರುಲ್ ಚೌಧರಿ, ಅಂಕಿತಾ ಧ್ಯಾನಿ – ರಾತ್ರಿ 9:40
ಪುರುಷರ ಶಾಟ್ ಪುಟ್ ಅರ್ಹತಾ ಸುತ್ತು: ತಜಿಂದರ್ ಪಾಲ್ ಸಿಂಗ್ ತೂರ್ – 11:40 PM

ಬ್ಯಾಡ್ಮಿಂಟನ್

ಪುರುಷರ ಸಿಂಗಲ್ಸ್ : ಲಕ್ಷ್ಯ ಸೇನ್​, 11 :40ಕ್ಕೆ

ಗಾಲ್ಫ್​

ಗಾಲ್ಫ್ ಪುರುಷರ ವೈಯಕ್ತಿಕ ಸುತ್ತು 2 : ಮಧ್ಯಾಹ್ನ 12:30
ಹಾಕಿ
ಭಾರತೀಯ ಪುರುಷರ ತಂಡದ ವಿರುದ್ಧ ಆಸ್ಟ್ರೇಲಿಯಾ. ಸಂಜೆ 4:45

ಜೂಡೋ

ಮಹಿಳೆಯರ 78+ ಕೆ.ಜಿ ವಿಭಾಗದ 32ನೇ ಸುತ್ತು; ತುಲಿಕಾ ಮಾನ್ ವಿರುದ್ಧ ಇಡಾಲಿಸ್ ಒರ್ಟಿಜ್

ರೋಯಿಂಗ್

ಪುರುಷರ ಸಿಂಗಲ್ಸ್ ಸ್ಕಲ್ಸ್ ಫೈನಲ್ – ಮಧ್ಯಾಹ್ನ 1:48
ಸೇಲಿಂಗ್ ಮಹಿಳಾ ಡಿಂಗಿ ರೇಸ್ (3,4) – ಮಧ್ಯಾಹ್ನ 3:45ಕ್ಕೆ
ಮಧ್ಯಾಹ್ನ ಪುರುಷರ ಡಿಂಗಿ ರೇಸ್ (3,4) – 7:05 ಸಂಜೆ ಕ್ಕೆ

ಶೂಟಿಂಗ್

ಮಹಿಳೆಯರ 25 ಮೀಟರ್ ಪಿಸ್ತೂಲ್ ಮಹಿಳಾ ಅರ್ಹತಾ ಸುತ್ತು : ಮಧ್ಯಾಹ್ನ 12:30
ಪುರುಷರ ಸ್ಕೀಟ್ ಅರ್ಹತಾ ದಿನ 1 – ಮಧ್ಯಾಹ್ನ 1:00 ಗಂಟೆಗೆ
ಮಹಿಳೆಯರ 25 ಮೀಟರ್ ಪಿಸ್ತೂಲ್, ಅರ್ಹತಾ; ಮಧ್ಯಾಹ್ನ 3:30ಕ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni: ನೆಚ್ಚಿನ ಆಟಗಾರನನ್ನು ಹೆಸರಿಸಿದ ಧೋನಿ; ಕೊಹ್ಲಿ, ರೋಹಿತ್​ ಅಲ್ಲ, ಮತ್ಯಾರು?

MS Dhoni: ಒಂದೊಮ್ಮೆ 4ಕ್ಕಿಂತ ಅಧಿಕ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಿದರೆ ಧೋನಿ ಚೆನ್ನೈ ತಂಡದ ಪರ ಇನ್ನೊಂದು ಐಪಿಎಲ್​ ಆಡಲಿದ್ದಾರೆ ಎಂದು ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ.

VISTARANEWS.COM


on

MS Dhoni
Koo

ರಾಂಚಿ: ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ತಮ್ಮ ನೆಚ್ಚಿನ ಕ್ರಿಕೆಟಿಗನ ಹೆಸರನ್ನು(Dhoni Picks His Favourite Cricketer) ಬಹಿರಂಗಪಡಿಸಿದ್ದಾರೆ. ಇದುವರೆಗೂ ಅಭಿಮಾನಿಗಳು ಧೋನಿಯ ನೆಚ್ಚಿನ ಕ್ರಿಕೆಟಿಗ ವಿರಾಟ್​ ಕೊಹ್ಲಿ ಅಥವಾ ರೋಹಿತ್​ ಶರ್ಮ ಎಂದು ಭಾವಿಸಿದ್ದರು. ಆದರೆ, ಧೋನಿ ಅವರ ಸದ್ಯದ ಫೇವರಿಟ್​ ಕ್ರಿಕೆಟಿಗನೆಂದರೆ ಅದು ಜಸ್​ಪ್ರೀತ್​ ಬುಮ್ರಾ (Jasprit Bumrah). ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಧೋನಿ ಈ ವಿಚಾರವನ್ನು ರಿವೀಲ್​ ಮಾಡಿದ್ದಾರೆ.

ಪ್ರಸ್ತುತ ಕ್ರಿಕೆಟ್​ನಲ್ಲಿ ನಿಮ್ಮ ನೆಚ್ಚಿನ​ ಆಟಗಾರ ಯಾರು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಧೋನಿ, “ಸದ್ಯ ಫೇವರಿಟ್ ಆಟಗಾರ ವೇಗಿ ಜಸ್​ಪ್ರೀತ್​ ಬುಮ್ರಾ. ಭಾರತ ತಂಡವು ಉತ್ತಮ ಪ್ರದರ್ಶನ ನೀಡುತ್ತಿರುವಾಗ ನಾನು ಬ್ಯಾಟರ್ ನನ್ನು ಆಯ್ಕೆ ಮಾಡುವುದಿಲ್ಲ. ಅವರು ರನ್ ಗಳಿಸುತ್ತಲೇ ಇರುತ್ತಾರೆ. ನಾನು ಬೌಲರ್​ ಬುಮ್ರಾ ಅವರನ್ನು ಆಯ್ಕೆ ಮಾಡುತ್ತೇನೆ” ಎಂದು ಹೇಳುವ ಮೂಲಕ ತಮ್ಮ ನೆಚ್ಚಿನ ಆಟಗಾರ ಬುಮ್ರಾ ಎನ್ನುವುದನ್ನು ತಿಳಿಸಿದ್ದಾರೆ.

ಮುಂದಿನ ಐಪಿಎಲ್​ ಆಡಲಿದ್ದಾರಾ ಧೋನಿ?


ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇದೀಗ ಅವರು ಮುಂದಿನ ಐಪಿಎಲ್ ಆಡುತ್ತಾರಾ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ಚರ್ಚೆಯಾಗುತ್ತಿದೆ.

ಇದನ್ನೂ ಓದಿ MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

​ಕೆಲ ಮೂಲಗಳ ಪ್ರಕಾರ ಡಿಸೆಂಬರ್​ನಲ್ಲಿ ನಡೆಯುವ ಆಟಗಾರರ ಮೆಗಾ ಹರಾಜಿಗೆ ಬಿಸಿಸಿಐ(BCCI) ಈ ನಿಯಯ ಜಾರಿಗೆ ತಂದರೆ ಧೋನಿ ಅವರು 18ನೇ ಆವೃತ್ತಿ ಐಪಿಎಲ್(IPL 2025)​ ಆಡುವುದು ಅನುಮಾನ ಎನ್ನಲಾಗಿದೆ. ಬಿಸಿಸಿಐ ಐಪಿಎಲ್ ಫ್ರಾಂಚೈಸಿಗಳಿಗೆ ಗರಿಷ್ಠ 4 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ಮಾತ್ರ ನೀಡಿದ್ದಲ್ಲಿ ಧೋನಿಗೆ ಚೆನ್ನೈ(CSK) ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ. ಸಿಎಸ್‌ಕೆ ನಾಯಕ ಋತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶ್ರೀಲಂಕಾದ ವೇಗಿ ಮತಿಶಾ ಪತಿರಾಣ ಮತ್ತು ಶಿವಂ ದುಬೆ ಅವರನ್ನು ಉಳಿಸಿಕೊಳ್ಳುವ ಯೋಚನೆಯಲ್ಲಿದೆ ಎನ್ನಲಾಗಿದೆ. ಒಂದೊಮ್ಮೆ 4ಕ್ಕಿಂತ ಅಧಿಕ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಿದರೆ ಧೋನಿ ಚೆನ್ನೈ ತಂಡದ ಪರ ಇನ್ನೊಂದು ಐಪಿಎಲ್​ ಆಡಲಿದ್ದಾರೆ ಎಂದು ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ.

Continue Reading

ಕ್ರೀಡೆ

Paris Olympics: ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿ ಮನು ಭಾಕರ್; 25 ಮೀ. ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧೆ

Paris Olympics: ಮನು ಭಾಕರ್(Manu Bhaker) ಅವರ ಸಾಧನೆಯ ಹಸಿವು ಇನ್ನೂ ತಣಿದಿಲ್ಲ. ಇಂದು ನಡೆಯುವ ಮಹಿಳೆಯರ 25 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Paris Olympics
Koo

ನವದೆಹಲಿ: ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್(Paris Olympics) ಶೂಟಿಂಗ್‌ನಲ್ಲಿ ಅವಳಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ತಾರಾ ಶೂಟರ್​ ಮನು ಭಾಕರ್(Manu Bhaker) ಅವರ ಸಾಧನೆಯ ಹಸಿವು ಇನ್ನೂ ತಣಿದಿಲ್ಲ. ಇಂದು ನಡೆಯುವ ಮಹಿಳೆಯರ 25 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಹ್ಯಾಟ್ರಿಕ್​ ಪದಕದ ನಿರೀಕ್ಷೆಯಲ್ಲಿದ್ದಾರೆ.

25 ಮೀಟರ್ ಪಿಸ್ತೂಲ್ ಶೂಟಿಂಗ್,​ ಮನು ಭಾಕರ್​ ಅವರ ನೆಚ್ಚಿನ ಸ್ಪರ್ಧೆಯಾಗಿದೆ. ಈ ವಿಭಾಗದಲ್ಲಿ ಈಗಾಗಲೇ ಅವರು ವಿಶ್ವ ಚಾಂಪಿಯನ್​ಶಿಪ್​ ಕೂಟದಲ್ಲಿ 1 ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ. ಶಿಸ್ತುಬದ್ಧವಾಗಿ ಸಾಮರ್ಥ್ಯ ಪ್ರದರ್ಶಿಸುವ ಅವರು ಪದಕ ಗೆಲ್ಲುವ ನಿರೀಕ್ಷೆ ಮಾಡಲಾಗಿದೆ. ಗೆದ್ದರೆ ಭಾರತದ ಪರ ಐತಿಹಾಸಿಕ ಸಾಧನೆ ಮಾಡಲಿದ್ದಾರೆ.

ಬ್ಯಾಡ್ಮಿಂಡನ್​ ಸ್ಪರ್ಧೆಯಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿರುವ ಲಕ್ಷ್ಯ ಸೇನ್ ಇಂದು ಕಣಕ್ಕಿಳಿಯಲಿದ್ದಾರೆ. ಗೆದ್ದರೆ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಮೂಲಕ ಪದಕ ಸುತ್ತಿಗೇರಲಿದ್ದಾರೆ. ಏತನ್ಮಧ್ಯೆ, ಭಾರತದ ಹಾಕಿ ತಂಡ ಕೂಡ ಅಂತಿಮ ಲೀಗ್​ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ನಿನ್ನೆ(ಗುರುವಾರ) ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ವಿರುದ್ಧ 2-1 ಅಂತರದ ಸೋಲು ಕಂಡಿತ್ತು.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

ಇಂದಿನ ಸ್ಪರ್ಧೆಗಳ ವಿವರ

ಆರ್ಚರಿ

ಆರ್ಚರಿ ಮಿಶ್ರ ತಂಡ ಆರ್ 16 : ಭಾರತ ವಿರುದ್ಧ ಇಂಡೋನೇಷ್ಯಾ – ಮಧ್ಯಾಹ್ನ 1:19ಕ್ಕೆ
ಮಿಶ್ರ ತಂಡ ಕ್ವಾರ್ಟರ್ ಫೈನಲ್ : ಸಂಜೆ 5:45ಕ್ಕೆ
ಮಿಶ್ರ ತಂಡ ಸೆಮಿಫೈನಲ್ – ಸಂಜೆ 7:00ಕ್ಕೆ
ಮಿಶ್ರ ತಂಡ ಪದಕ ಪಂದ್ಯಗಳು – 7:54ಕ್ಕೆ

ಅಥ್ಲೆಟಿಕ್ಸ್

ಮಹಿಳೆಯರ 5000 ಓಟ: ಮೀಟರ್ ರೌಂಡ್ -1 – ಪಾರುಲ್ ಚೌಧರಿ, ಅಂಕಿತಾ ಧ್ಯಾನಿ – ರಾತ್ರಿ 9:40
ಪುರುಷರ ಶಾಟ್ ಪುಟ್ ಅರ್ಹತಾ ಸುತ್ತು: ತಜಿಂದರ್ ಪಾಲ್ ಸಿಂಗ್ ತೂರ್ – 11:40 PM

ಬ್ಯಾಡ್ಮಿಂಟನ್

ಪುರುಷರ ಸಿಂಗಲ್ಸ್ : ಲಕ್ಷ್ಯ ಸೇನ್​, 11 :40ಕ್ಕೆ

ಗಾಲ್ಫ್​

ಗಾಲ್ಫ್ ಪುರುಷರ ವೈಯಕ್ತಿಕ ಸುತ್ತು 2 : ಮಧ್ಯಾಹ್ನ 12:30
ಹಾಕಿ
ಭಾರತೀಯ ಪುರುಷರ ತಂಡದ ವಿರುದ್ಧ ಆಸ್ಟ್ರೇಲಿಯಾ. ಸಂಜೆ 4:45

ಜೂಡೋ

ಮಹಿಳೆಯರ 78+ ಕೆ.ಜಿ ವಿಭಾಗದ 32ನೇ ಸುತ್ತು; ತುಲಿಕಾ ಮಾನ್ ವಿರುದ್ಧ ಇಡಾಲಿಸ್ ಒರ್ಟಿಜ್

ರೋಯಿಂಗ್

ಪುರುಷರ ಸಿಂಗಲ್ಸ್ ಸ್ಕಲ್ಸ್ ಫೈನಲ್ – ಮಧ್ಯಾಹ್ನ 1:48
ಸೇಲಿಂಗ್ ಮಹಿಳಾ ಡಿಂಗಿ ರೇಸ್ (3,4) – ಮಧ್ಯಾಹ್ನ 3:45ಕ್ಕೆ
ಮಧ್ಯಾಹ್ನ ಪುರುಷರ ಡಿಂಗಿ ರೇಸ್ (3,4) – 7:05 ಸಂಜೆ ಕ್ಕೆ

ಶೂಟಿಂಗ್

ಮಹಿಳೆಯರ 25 ಮೀಟರ್ ಪಿಸ್ತೂಲ್ ಮಹಿಳಾ ಅರ್ಹತಾ ಸುತ್ತು : ಮಧ್ಯಾಹ್ನ 12:30
ಪುರುಷರ ಸ್ಕೀಟ್ ಅರ್ಹತಾ ದಿನ 1 – ಮಧ್ಯಾಹ್ನ 1:00 ಗಂಟೆಗೆ
ಮಹಿಳೆಯರ 25 ಮೀಟರ್ ಪಿಸ್ತೂಲ್, ಅರ್ಹತಾ; ಮಧ್ಯಾಹ್ನ 3:30ಕ್ಕೆ

Continue Reading

ಕ್ರೀಡೆ

Swapnil Kusale: ಕಂಚು ಗೆದ್ದ ಸ್ವಪ್ನಿಲ್ ಕುಸಾಲೆಗೆ 1 ಕೋಟಿ ಬಹುಮಾನ ಪ್ರಕಟಿಸಿದ ಶಿಂಧೆ ಸರ್ಕಾರ

Swapnil Kusale: ಗುರುವಾರ ನಡೆದ ಫೈನಲ್​ ಸ್ಪರ್ಧೆಯಲ್ಲಿ ಸ್ವಪ್ನಿಲ್​ ಕುಸಾಲೆ(Swapnil Kusale) ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು.

VISTARANEWS.COM


on

Swapnil Kusale
Koo

ಮುಂಬಯಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics 2024) ಗುರುವಾರ ನಡೆದಿದ್ದ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಶೂಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್​ ಕುಸಾಲೆ(Swapnil Kusale) ಅವರ ಈ ಸಾಧನೆಯನ್ನು ಪರಿಗಣಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ(Eknath Shinde) 1 ಕೋಟಿ ಬಹುಮಾನ ಪ್ರಕಟಿಸಿದ್ದಾರೆ. ಕೊಲ್ಹಾಪುರ ಜಿಲ್ಲೆಯ ಕಂಬಲ ವಾಡಿಯವರಾದ ಸ್ವಪ್ನಿಲ್​, 2009ರಲ್ಲಿ ಮಹಾರಾಷ್ಟ್ರದ ಕ್ರೀಡಾ ಪ್ರಭೋದಿನಿ ಯೋಜನೆಯಡಿ ಕ್ರೀಡಾ ತರಬೇತಿಗೆ ಆಯ್ಕೆಯಾಗಿದ್ದರು.

ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಹಾಗೂ 3ನೇ ರೈಫಲ್​ ಶೂಟರ್​ ಎಂಬ ಇತಿಹಾಸ ಬರೆದಿದ್ದಾರೆ. ಗುರುವಾರ ನಡೆದ ಫೈನಲ್​ ಸ್ಪರ್ಧೆಯಲ್ಲಿ ಅವರು ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಸ್ವಪ್ನಿಲ್​ ಕುಸಾಲೆಗೆ ಮಹರಾಷ್ಟ್ರ ಸರ್ಕಾರದ ಬಹುಮಾನ ಮೊತ್ತದ ಹೊರತಾಗಿಯೂ ಕೇಂದ್ರ ಸರ್ಕಾರದಿಂದ 30 ಲಕ್ಷ ರೂ. ಮತ್ತು ಭಾರತೀಯ ಒಲಿಂಪಿಕ್ಸ್​ ಸಂಸ್ಥೆಯಿಂದ 50 ಲಕ್ಷ ರೂ. ಬಹುಮಾನ ಸಿಗಲಿದೆ.

ನೀತಾ ಅಂಬಾನಿ ಮೆಚ್ಚುಗೆ


ಒಲಿಂಪಿಕ್ಸ್​ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮತ್ತು ರಾಜ್ಯಕ್ಕೆ ಕೀರ್ತಿ ತಂದ ಸ್ವಪ್ನಿಲ್​ ಕುಸಾಲೆಗೆ ರಿಲಯನ್ಸ್ ಫೌಂಡೇಶನ್ (Reliance Foundation) ಸಂಸ್ಥಾಪಕಿ ಹಾಗೂ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ(IOC) ಸದಸ್ಯೆಯಾಗಿರುವ ನೀತಾ ಅಂಬಾನಿ(Nita Ambani) ಅಭಿನಂದನೆ ಸಲ್ಲಿಸಿದ್ದಾರೆ. “ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಸ್ವಪ್ನಿಲ್ ಕುಸಾಲೆಗೆ ನನ್ನ ಅಭಿನಂದನೆಗಳು. ನಿಮ್ಮ ಈ ಸಾಧನೆಯಿಂದ ದೇಶವೇ ಹೆಮ್ಮೆಪಡುವಂತಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಪ್ರತೀಕ ಈ ಗೆಲುವು. ಮುಂದೆಯೂ ಕೂಡ ದೇಶಕ್ಕಾಗಿ ಹಲವು ಪದಕ ಗೆಲ್ಲುವಂತಾಲಿ” ಎಂದು ನೀತಾ ಅಂಬಾನಿ ಹಾರೈಸಿದ್ದಾರೆ.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಾಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 

Continue Reading

ಕ್ರೀಡೆ

India vs Sri Lanka: ಲಂಕಾ ಸರಣಿಯಲ್ಲಿ ವಿಶೇಷ ದಾಖಲೆ ಮೇಲೆ ಕಣ್ಣಿಟ್ಟ ಕೊಹ್ಲಿ, ರೋಹಿತ್​

India vs Sri Lanka: ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ.

VISTARANEWS.COM


on

India vs Sri Lanka
Koo

ಕೊಲಂಬೊ: ಕಳೆದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದ ಬಳಿಕ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರರಾದ ನಾಯಕ ರೋಹಿತ್​ ಶರ್ಮ(rohit sharma) ಮತ್ತು ವಿರಾಟ್​ ಕೊಹ್ಲಿ(virat kohli) ಶ್ರೀಲಂಕಾ(India vs Sri Lanka) ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ.

ರೋಹಿತ್​​ಗೆ ಬೇಕು 2 ಶತಕ

ರೋಹಿತ್​ ಈ ಸರಣಿಯಲ್ಲಿ 2 ಶತಕ ಬಾರಿಸಿದರೆ, ವಿರಾಟ್​ ಕೊಹ್ಲಿ(Virat Kohli) ಮತ್ತು ಸಚಿನ್ ತೆಂಡೂಲ್ಕರ್(Sachin Tendulkar)​ ಜತೆ ಎಲೈಟ್​ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ. ರೋಹಿತ್​ 2 ಶತಕ ಬಾರಿಸುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಶತಕ ಪೂರ್ತಿಗೊಳಿಸಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್‌ ಕೊಹ್ಲಿ ಮೊದಲಿಗರು. ರೋಹಿತ್​ ಸದ್ಯ 48 ಶತಕ ಬಾರಿಸಿದ್ದಾರೆ. ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

14 ಸಾವಿರ ರನ್​ ದಾಖಲೆ ಮೇಲೆ ಕೊಹ್ಲಿ ಕಣ್ಣು


ವಿರಾಟ್​ ಕೊಹ್ಲಿ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇದನ್ನೂ ಓದಿ IND vs SL: ಇಂದು ಭಾರತ-ಲಂಕಾ ಮೊದಲ ಏಕದಿನ ಹಣಾಹಣಿ; ಎಷ್ಟು ಗಂಟೆಗೆ ಪಂದ್ಯ ಆರಂಭ?

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

ಭಾರತ ತಂಡ


ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ

Continue Reading
Advertisement
intel layoffs
ವಿದೇಶ9 seconds ago

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Sexual Abuse
Latest5 mins ago

Sexual Abuse: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಮಗು ಜನನ! ಆಘಾತಗೊಂಡು ಅಲ್ಲೇ ಕೂತಿದ್ದ ಬಾಲಕಿ

BJP-JDS Padayatra
ಕರ್ನಾಟಕ9 mins ago

BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

1 lakh crore Rs dues paid to farmers in current sugar season says Pralhad Joshi
ದೇಶ21 mins ago

Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

Viral Video
Latest24 mins ago

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

ಸಿನಿಮಾ28 mins ago

OTT Releases: ಒಟಿಟಿಯಲ್ಲಿ ಈ ತಿಂಗಳು ಕಲ್ಕಿ, ಇಂಡಿಯನ್‌, ಟರ್ಬೊ ಜತೆಗೆ ಇನ್ಯಾವ ಹೊಸ ಚಿತ್ರ, ವೆಬ್‌ ಸಿರೀಸ್‌?

kidnap case
ಬೆಂಗಳೂರು37 mins ago

Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ!

NEET UG 2024
ದೇಶ55 mins ago

NEET UG 2024: ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಎರಡು ನಗರಗಳಿಗೆ ಸೀಮಿತ; ಮರು ಪರೀಕ್ಷೆ ಅಗತ್ಯವಿಲ್ಲ-ಸುಪ್ರೀಂಕೋರ್ಟ್‌

ಸಿನಿಮಾ1 hour ago

Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

MS Dhoni
ಕ್ರೀಡೆ1 hour ago

MS Dhoni: ನೆಚ್ಚಿನ ಆಟಗಾರನನ್ನು ಹೆಸರಿಸಿದ ಧೋನಿ; ಕೊಹ್ಲಿ, ರೋಹಿತ್​ ಅಲ್ಲ, ಮತ್ಯಾರು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌