Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಯಾವ ಸ್ಪರ್ಧಿಗಳು ಕಣಕ್ಕೆ ಇಳಿಯಲಿದ್ದಾರೆ? ಎಲ್ಲ ಮಾಹಿತಿ ಇಲ್ಲಿದೆ - Vistara News

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಯಾವ ಸ್ಪರ್ಧಿಗಳು ಕಣಕ್ಕೆ ಇಳಿಯಲಿದ್ದಾರೆ? ಎಲ್ಲ ಮಾಹಿತಿ ಇಲ್ಲಿದೆ

Paris Olympics 2024 : ಎರಡು ಬಾರಿ ಪ್ಯಾರಿಸ್ ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ತಮ್ಮ ಮೂರನೇ ಸ್ಪರ್ಧೆಯಾದ 25 ಮೀಟರ್ ಪಿಸ್ತೂಲ್ ನ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಶೂಟಿಂಗ್​ನಲ್ಲಿ ಭಾರತಕ್ಕೆ ಎರಡು ಕಂಚಿನ ಪದಕ ಗೆದ್ದ ಅವರು ಮತ್ತೊಂದು ಪದಕಕ್ಕೆ ಗುರಿಯಿಟ್ಟಿದ್ದಾರೆ. ಆರ್ಚರಿಯಲ್ಲಿ ಅಂಕಿತಾ ಭಕತ್ ಮತ್ತು ಧೀರಜ್ ಬೊಮ್ಮದೇವರ ಅವರು ಇಂಡೋನೇಷ್ಯಾ ಮತ್ತು ಸ್ಪೇನ್ ಜೋಡಿಯನ್ನು ಸೋಲಿಸಿ ಮಿಶ್ರ ತಂಡ ಸ್ಪರ್ಧೆಯ ಸೆಮಿಫೈನಲ್ ಗೆ ಪ್ರವೇಶಿಸಿದ್ದರು. ಆದರೆ, ಚಾಂಪಿಯನ್ ಕೊರಿಯಾ ಹಾಗೂ ಕಂಚಿನ ಪದಕದ ಪಂದ್ಯದಲ್ಲಿ ಅಮೆರಿಕ ವಿರುದ್ಧ ಸೋತಿತು.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024 ) ಏಳನೇ ದಿನವಾದ ಶುಕ್ರವಾರ ಭಾರತಕ್ಕೆ ಯಾವುದೇ ಪದಕಗಳು ಲಭಿಸಿಲ್ಲ. ಆರ್ಚರಿಯ ಮಿಶ್ರ ತಂಡ ವಿಭಾಗದಲ್ಲಿ ಅಂಕಿತಾ ಹಾಗೂ ಧೀರಜ್ ಬೊಮ್ಮದೇವರ ಕಂಚಿನ ಪದಕ ಮಿಸ್​ ಮಾಡಿಕೊಳ್ಳುವ ಮೂಲಕ ಹಿನ್ನಡೆಯಾಯಿತು. ಇದೇ ವೇಳೆ ಪೂಲ್ ಹಂತದ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡವು ಆಸ್ಟ್ರೇಲಿಯಾವನ್ನು 3-2 ಅಂತರದಿಂದ ಸೋಲಿಸಿತು. 1972ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಪುರುಷರ ತಂಡ ಒಲಿಂಪಿಕ್ಸ್​ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದೆ.

ಎರಡು ಬಾರಿ ಪ್ಯಾರಿಸ್ ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ತಮ್ಮ ಮೂರನೇ ಸ್ಪರ್ಧೆಯಾದ 25 ಮೀಟರ್ ಪಿಸ್ತೂಲ್ ನ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಶೂಟಿಂಗ್​ನಲ್ಲಿ ಭಾರತಕ್ಕೆ ಎರಡು ಕಂಚಿನ ಪದಕ ಗೆದ್ದ ಅವರು ಮತ್ತೊಂದು ಪದಕಕ್ಕೆ ಗುರಿಯಿಟ್ಟಿದ್ದಾರೆ. ಆರ್ಚರಿಯಲ್ಲಿ ಅಂಕಿತಾ ಭಕತ್ ಮತ್ತು ಧೀರಜ್ ಬೊಮ್ಮದೇವರ ಅವರು ಇಂಡೋನೇಷ್ಯಾ ಮತ್ತು ಸ್ಪೇನ್ ಜೋಡಿಯನ್ನು ಸೋಲಿಸಿ ಮಿಶ್ರ ತಂಡ ಸ್ಪರ್ಧೆಯ ಸೆಮಿಫೈನಲ್ ಗೆ ಪ್ರವೇಶಿಸಿದ್ದರು. ಆದರೆ, ಚಾಂಪಿಯನ್ ಕೊರಿಯಾ ಹಾಗೂ ಕಂಚಿನ ಪದಕದ ಪಂದ್ಯದಲ್ಲಿ ಅಮೆರಿಕ ವಿರುದ್ಧ ಸೋತಿತು.

ಮೂರನೇ ದಿನ ಮನು ಭಾಕರ್ಗೆ ಚಿನ್ನ ಸೇರಿದಂತೆ ಯಾವುದೇ ಪದಕ ಗೆಲ್ಲುವ ಅವಕಾಶವಿದೆ. ಅದು ಅವರ ಮೂರನೇ ಪದಕವಾಗಲಿದೆ. ಬಾಕ್ಸರ್ ನಿಶಾಂತ್ ದೇವ್ ಕೂಡ ಶನಿವಾರ ಪದಕವನ್ನು ಖಚಿತಪಡಿಸುವ ಅವಕಾಶವಿದೆ. ಮೆಕ್ಸಿಕೊದ ಮಾರ್ಕೊ ವರ್ಡೆ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಯ ಗಳಿಸಿದರೆ ಸೆಮಿಫೈನಲ್ ಪ್ರವೇಶಿಸಲಿದ್ದು. ಪದಕ ಖಚಿತವಾಗಲಿದೆ. ಆರ್ಚರಿಯಲ್ಲಿ ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ತಮ್ಮ ಮಹಿಳಾ ಸಿಂಗಲ್ಸ್ ಸುತ್ತುಗಳಲ್ಲಿ ಸ್ಪರ್ಧಿಸಲಿದ್ದಾರೆ.

ಆಗಸ್ಟ್ 3ರ ಭಾರತದ ವೇಳಾಪಟ್ಟಿಯ ನೋಟ ಇಲ್ಲಿದೆ

ಮಧ್ಯಾಹ್ನ 12:30: ಶೂಟಿಂಗ್ – ಮಹಿಳಾ ಸ್ಕೀಟ್ ಅರ್ಹತಾ ಸುತ್ತಿನ ದಿನ ಮೊದಲ ದಿನ, ರೈಜಾ ಧಿಲ್ಲಾನ್ ಮತ್ತು ಮಹೇಶ್ವರಿ ಚೌಹಾಣ್.

ಮಧ್ಯಾಹ್ನ 1 ಗಂಟೆ: ಶೂಟಿಂಗ್; ಮಹಿಳೆಯರ 25 ಮೀಟರ್ ಪಿಸ್ತೂಲ್ ಫೈನಲ್​​ನಲ್ಲಿ ಮನು ಭಾಕರ್ (ಪದಕದ ಸ್ಪರ್ಧೆ)

ಮಧ್ಯಾಹ್ನ 1:52: ಆರ್ಚರಿ – ಮಹಿಳೆಯರ ವೈಯಕ್ತಿಕ 16ನೇ ಸುತ್ತಿನ ಪಂದ್ಯದಲ್ಲಿ ದೀಪಿಕಾ ಕುಮಾರಿ ಮತ್ತು ಜರ್ಮನಿಯ ಮಿಚೆಲ್ ಕ್ರೊಪೆನ್ ನಡುವೆ ಹಣಾಹಣಿ

ಇದನ್ನೂ ಓದಿ: IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

ಮಧ್ಯಾಹ್ನ 2:05: ಆರ್ಚರಿ – ಮಹಿಳೆಯರ ವೈಯಕ್ತಿಕ 16ನೇ ಸುತ್ತಿನ ಪಂದ್ಯದಲ್ಲಿ ಭಜನ್ ಕೌರ್ ಮತ್ತು ಡಯಾನಂದಾ ಕೊಯಿರುನ್ನಿಸಾ.

ಮಧ್ಯಾಹ್ನ 3:45 ಸೇಯ್ಲಿಂಗ್​​- ಪುರುಷರ ಡಿಂಗ್ಲೇ ರೇಸ್ 5 ಮತ್ತು 6ರಲ್ಲಿ ವಿಷ್ಣು ಸರವಣನ್ ಸ್ಪರ್ಧಿಸಲಿದ್ದಾರೆ.

ಸಂಜೆ 5:55: ಸೇಯ್ಲಿಂಗ್; ಮಹಿಳೆಯರ ಡಿಂಗ್ಲೇ ರೇಸ್ 5 ಮತ್ತು 6 ರಲ್ಲಿ ನೇತ್ರಾ ಕುಮನನ್ ಭಾಗಿಯಾಗಲಿದ್ದಾರೆ.

ರಾತ್ರಿ 11:05: ಶಾಟ್ ಪುಟ್ ಫೈನಲ್ ; ತಜಿಂದರ್ಪಾಲ್ ಸಿಂಗ್ ತೂರ್ (ಅರ್ಹತೆ ಪಡೆದರೆ).

ರಾತ್ರಿ 12:02 : ಪುರುಷರ 71 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್​​ನಲ್ಲಿ ನಿಶಾಂತ್ ದೇವ್ ಮತ್ತು ಮೆಕ್ಸಿಕೊದ ಮಾರ್ಕೊ ವರ್ಡೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

UGCET 2024: ಆ.7ರಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ; ಆಪ್ಶನ್ ಎಂಟ್ರಿಗೆ ನಾಳೆ ಲಾಸ್ಟ್ ಡೇಟ್

UGCET 2024: ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆಗೆ ಇನ್ನೂ ಎರಡು ದಿನ ಸಮಯವಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಆಸಕ್ತಿ ಅನುಸಾರ ಆಪ್ಷನ್ ದಾಖಲಿಸಬೇಕು.

VISTARANEWS.COM


on

UGCET 2024
Koo

ಬೆಂಗಳೂರು: ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (Professional Course) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಲು ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಆಗಸ್ಟ್ 4 ಕೊನೆಯ (UGCET 2024) ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.

ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆಗೆ ಇನ್ನೂ ಎರಡು ದಿನ ಸಮಯವಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಆಸಕ್ತಿ ಅನುಸಾರ ಆಪ್ಷನ್ ದಾಖಲಿಸಬೇಕು. ನಂತರ ಆಗಸ್ಟ್ 7ರಂದು ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ ಮಾಡಲಾಗುವುದು. ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಅಭ್ಯರ್ಥಿಗಳು ಎಚ್ಚರಿಕೆಯಿಂದ ಇಚ್ಛೆಗಳನ್ನು ದಾಖಲು ಮಾಡಬೇಕು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಈಗ ಅವಕಾಶ ನೀಡಲಾಗಿದೆ.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್‌ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ

-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಮತ್ತಷ್ಟು ದಿನ ವಿಸ್ತರಣೆ ಆಗಿದೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Continue Reading

ವಿದೇಶ

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಹೆಸರು ಅಂತಿಮ

Kamala Harris: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ, ಭಾರತದ ಮೂಲದ ಕಮಲಾ ಹ್ಯಾರಿಸ್ ಅವರ ಹೆಸರು ಅಂತಿಮವಾಗಿದೆ. ಈ ತಿಂಗಳ ಕೊನೆಯಲ್ಲಿ ಚಿಕಾಗೋದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ 59 ವರ್ಷದ ಕಮಲಾ ಹ್ಯಾರಿಸ್ ಅವರು, “ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಲು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

VISTARANEWS.COM


on

Kamala Harris
Koo

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ (US Presidential Election 2024) ಸ್ಥಾನಕ್ಕೆ ರಿಪಬ್ಲಿಕನ್‌ (Republican) ಪಕ್ಷದ ಡೊನಾಲ್ಡ್‌ ಟ್ರಂಪ್‌ (Donald Trump) ವಿರುದ್ಧ ಡೆಮಾಕ್ರಟಿಕ್ ಪಕ್ಷ (Democratic party)ದ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ, ಭಾರತದ ಮೂಲದ ಕಮಲಾ ಹ್ಯಾರಿಸ್ (Kamala Harris) ಅವರ ಹೆಸರು ಅಂತಿಮವಾಗಿದೆ.

ಈ ತಿಂಗಳ ಕೊನೆಯಲ್ಲಿ ಚಿಕಾಗೋದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ 59 ವರ್ಷದ ಕಮಲಾ ಹ್ಯಾರಿಸ್ ಅವರು, “ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಲು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಲವು ದಿನಗಳ ಹಿಂದೆ ಅಮೆರಿಕ ಅಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌ (Joe Biden) ಅವರು ಚುನಾವಣೆ ರೇಸ್‌ನಿಂದಲೇ ಹಿಂದೆ ಸರಿದಿದ್ದರು. ಇದು ಅಮೆರಿಕ ಮಾತ್ರವಲ್ಲ, ಜಗತ್ತಿನಾದ್ಯಂತ ಸಂಚಲನ ಮೂಡಿಸಿತ್ತು. ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಕುರಿತು ಜೋ ಬೈಡೆನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರದ ಮೂಲಕ ಘೋಷಿಸಿದ್ದರು.

“ನಾನು ಕಳೆದ ಮೂರುವರೆ ವರ್ಷಗಳಿಂದ ಅಮೆರಿಕ ಅಧ್ಯಕ್ಷನಾಗಿ, ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ” ಎಂದು ಅವರು ಹೇಳಿದ್ದರು.

ಅಂದಿನಿಂದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರ ಹೆಸರು ಹೆಚ್ಚು ಚಾಲ್ತಿಗೆ ಬಂದಿತ್ತು. ಅವರೇ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಮಾತು ಕೇಳಿ ಬರತೊಡಗಿತ್ತು. ಕಮಲಾ ಹ್ಯಾರಿಸ್‌ ಆಯ್ಕೆಗೆ ಪಕ್ಷದ ಒಳಗೆ ಯಾವುದೇ ಆಕ್ಷೇಪ ವ್ಯಕ್ತವಾಗದಿದ್ದು ಕೂಡ ಪ್ಲಸ್‌ ಪಾಯಿಂಟ್ ಆಗಿತ್ತು. ಈಗಾಗಲೇ ಅವರು ಸಮಾವೇಶ ನಡೆಸಿ ಮತದಾರರ ಗಮನವನ್ನೂ ಸೆಳೆದಿದ್ದಾರೆ.

ಇದನ್ನೂ ಓದಿ: Kamala Harris: ಅಮೆರಿಕ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಹಿನ್ನೆಲೆ ಏನು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಕಮಲಾ ಹ್ಯಾರಿಸ್‌ ಪರ ನಿಂತ ಬರಾಕ್‌ ಒಬಾಮಾ

ಈಗಾಗಲೇ ಕಮಲಾ ಹ್ಯಾರಿಸ್‌ ಅವರಿಗೆ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ (Barack Obama) ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಬೆಂಬಲ ಸೂಚಿಸಿದ್ದಾರೆ. ಇತ್ತೀಚೆಗೆ ಬರಾಕ್‌ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿ, ಬೆಂಬಲ ಘೋಷಿಸಿದ್ದರು. “ಕೆಲ ದಿನಗಳ ಹಿಂದೆ ನಾನು ಹಾಗೂ ಮಿಚೆಲ್‌ ಅವರು ಗೆಳತಿ ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿದ್ದೆವು. ನೀವು ಅಮೆರಿಕ ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ನಿಮಗೆ ನಮ್ಮ ಬೆಂಬಲವಿದೆ ಎಂಬುದನ್ನು ತಿಳಿಸಿದೆವು. ದೇಶವು ಮಹತ್ವದ ಘಟ್ಟದಲ್ಲಿರುವ ಇಂತಹ ಹೊತ್ತಿನಲ್ಲಿ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಲು ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ನೀವು ಕೂಡ ನಮ್ಮ ಜತೆಗೂಡಿ” ಎಂದು ಬರಾಕ್‌ ಒಬಾಮಾ ಪೋಸ್ಟ್‌ ಮಾಡಿದ್ದರು.

Continue Reading

ಪ್ರಮುಖ ಸುದ್ದಿ

BJP-JDS Padayatra: ಪಾದಯಾತ್ರೆಗೆ ಹೈಕೋರ್ಟ್‌ನಿಂದಲೇ ಅನುಮತಿ ಪಡೆದ ಬಿಜೆಪಿ

BJP-JDS Padayatra: ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ ಇಲ್ಲ ಎಂದು ಮೊನ್ನೆ ಗೃಹ ಸಚಿವ ಪರಮೇಶ್ವರ (G Parameshwara) ಹೇಳಿದ ಬೆನ್ನಲ್ಲೇ ಸರ್ಕಾರದಿಂದ ಸಮಸ್ಯೆ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿ ಉಚ್ಚ ನ್ಯಾಯಾಲಯಕ್ಕೆ ತೆರಳಿತ್ತು. ಶಾಸಕ ಪಿ. ರಾಜೀವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮಯ, ಅನುಮತಿ ನೀಡಿದೆ.

VISTARANEWS.COM


on

BJP-JDS Padayatra 1
Koo

ಬೆಂಗಳೂರು: “ಭ್ರಷ್ಟ ಕಾಂಗ್ರೆಸ್ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ನೇರವಾಗಿ ಹೈಕೋರ್ಟ್‌ನಿಂದ (High court) ಅನುಮತಿ ಪಡೆಯಲಾಗಿದೆ. ಸರ್ಕಾರದಿಂದ ಅನುಮತಿ ದೊರೆಯುವುದು ವಿಳಂಬವಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹೋಗಿದ್ದ ಬಿಜೆಪಿ (BJP) ಮುಖಂಡರು, ಪಾದಯಾತ್ರೆಗೆ ಅನುಮತಿ ಪಡೆದುಕೊಂಡಿದ್ದಾರೆ.

ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ ಇಲ್ಲ ಎಂದು ಮೊನ್ನೆ ಗೃಹ ಸಚಿವ ಪರಮೇಶ್ವರ (G Parameshwara) ಹೇಳಿದ ಬೆನ್ನಲ್ಲೇ ಸರ್ಕಾರದಿಂದ ಸಮಸ್ಯೆ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿ ಉಚ್ಚ ನ್ಯಾಯಾಲಯಕ್ಕೆ ತೆರಳಿತ್ತು. ಶಾಸಕ ಪಿ. ರಾಜೀವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದನ್ ಗೌಡರ್, ಅನುಮತಿ ನೀಡಿದ್ದು, ಪಾದಯಾತ್ರೆ ಸಾಗುವ ಜಾಗದಲ್ಲಿ ಭದ್ರತೆ ನೀಡುವಂತೆ ಡಿಸಿ, ಎಸ್ಪಿಗೆ ಸೂಚನೆ ನೀಡಿದ್ದಾರೆ.

ಚಾಮುಂಡೇಶ್ವರಿ ದರ್ಶನ

ಮೈಸೂರು: ಮುಡಾ ಹಗರಣ ವಿರುದ್ದ ಇಂದಿನಿಂದ ನಡೆಯಲಿರುವ ಮೈಸೂರು ಚಲೋ ಪಾದಯಾತ್ರೆ ಪ್ರಾರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ದೇವಿ ಚಾಮುಂಡೇಶ್ವರಿ ಮೊರೆಹೋದರು. ಮೈಸೂರಿನ‌ ಚಾಮುಂಡಿ ಬೆಟ್ಟಕ್ಕೆ ಬಿ.ವೈ ವಿಜಯೇಂದ್ರ ಭೇಟಿ ನೀಡಿ ನಾಡದೇವತೆ ಚಾಮುಂಡಿ ತಾಯಿ ದರ್ಶನ ಪಡೆದರು. ಪಾದಯಾತ್ರೆ ಯಶಸ್ಸಿಗೆ ಚಾಮುಂಡೇಶ್ವರಿ ಬಳಿ ಪ್ರಾರ್ಥನೆ ಮಾಡಿ, ದಂಪತಿ ಸಮೇತ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರಗೆ ಮಾಜಿ ಶಾಸಕ ನಾಗೇಂದ್ರ ಸೇರಿ ಮುಖಂಡರು ಸಾಥ್ ನೀಡಿದರು.

ಇಂದು 9.30ಕ್ಕೆ ಚಾಲನೆ

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. “ಭ್ರಷ್ಟ ಕಾಂಗ್ರೆಸ್ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಗುತ್ತದೆ. ಏಳು ದಿನಗಳ ಪಾದಯಾತ್ರೆ ಸಾಗುವ ಮಾರ್ಗದ ವಿವರವನ್ನು ಇಲ್ಲಿ ನೀಡಲಾಗಿದೆ.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಲಿದ್ದಾರೆ. ಒಟ್ಟು 124 ಕಿ.ಮೀ ಪಾದಯಾತ್ರೆ ಸಾಗಲಿದ್ದು, ಸಮಾರೋಪ ಸಮಾರಂಭ ಸೇರಿ ಒಟ್ಟು ಎಂಟು ದಿನಗಳ ಕಾರ್ಯಕ್ರಮದ ಮಾಹಿತಿ ಇಲ್ಲಿದೆ.

ಪಾದಯಾತ್ರೆ ಸಾಗುವ ಮಾರ್ಗದ ವಿವರ
ಆ.3- ಕೆಂಗೇರಿಯಿಂದ ಹೊರಟು ಬಿಡದಿಯಲ್ಲಿ ವಾಸ್ತವ್ಯ
ಆ.4- ಬಿಡದಿಯಿಂದ ಹೊರಟು ಕೆಂಗಲ್‌ನಲ್ಲಿ ಹಾಲ್ಟ್
ಆ.5- ಕೆಂಗಲ್ ನಿಂದ ಹೊರಟು ನಿಡಘಟ್ಟದಲ್ಲಿ ವಾಸ್ತವ್ಯ
ಆ.6- ನಿಡಘಟ್ಟದಿಂದ ಹೊರಟು ಮಂಡ್ಯ
ಆ.7- ಮಂಡ್ಯದಿಂದ ಹೊರಟು ತೂಬಿನಕೆರೆಯಲ್ಲಿ ವಾಸ್ತವ್ಯ
ಆ.8- ತೂಬಿನ ಕೆರೆಯಿಂದ ಹೊರಟು ಶ್ರೀರಂಗಪಟ್ಟಣದಲ್ಲಿ ಹಾಲ್ಟ್
ಆ.9- ಶ್ರೀರಂಗಪಟ್ಟಣದಿಂದ ಹೊರಟು ಮೈಸೂರು ಹೊರವಲಯದಲ್ಲಿ ವಾಸ್ತವ್ಯ
ಆ.10- ಮೈಸೂರು ಹೊರವಲಯದಿಂದ ಕೇಂದ್ರ ನಾಯಕರ ಜತೆ ಪಾದಯಾತ್ರೆ ಹೊರಟು ಸಮಾರೋಪ ಸಮಾರಂಭದ ವೇದಿಕೆ ತಲುಪುವುದು.

ನಗರದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದ ಕಮಿಷನರ್

ನಾಳೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಹಿನ್ನೆಲೆ‌ ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ, ಎಲ್ಲಿಂದ ಯಾವ ರೀತಿ ಪಾದಯಾತ್ರೆ ಮಾಡುತ್ತಾರೋ ಅಂತ ಇನ್ನೂ ಗೊತ್ತಿಲ್ಲ. ನಗರದಲ್ಲಿ ಪ್ರತಿಭಟನೆ, ರ‍್ಯಾಲಿ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರು ಬಂದು ಇದುವರೆಗೂ ಅನುಮತಿ ಕೇಳಿಲ್ಲ. ಪ್ರತಿಭಟನೆಗೆ ಬೆಂಗಳೂರಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಪಾದಯಾತ್ರೆ ಹಿನ್ನಲೆಯಲ್ಲಿ ಕೆಂಗೇರಿಯಲ್ಲಿ ಎರಡು ಕೆಎಸ್ಆರ್‌ಪಿ ತುಕಡಿ, 100 ಜನ ಪೊಲೀಸರ ನಿಯೋಜನೆ ಮಾಡಲಾಗಿದೆ. 2 ಎಸಿಪಿ, 7 ಜನ ಇನ್ಸ್ಪೆಕ್ಟರ್ 15 ಜನ ಸಬ್ ಇನ್ಸ್ಪೆಕ್ಟರ್ ಸೇರಿ ನೂರು ಜನರಿಂದ ಬಂದೋಬಸ್ತ್ ಮಾಡಲಾಗಿದೆ. ರಾಮನಗರದವರೆಗೂ ಬೆಂಗಳೂರು ನಗರ ಪೊಲೀಸರು ಬಂದೋಬಸ್ತ್ ಒದಗಿಸಲಿದ್ದಾರೆ.

ಇದನ್ನೂ ಓದಿ: BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

Continue Reading

ದೇಶ

Wayanad Landslide: ಇಲ್ಲಿಗೇಕೆ ಬಂದ್ರಿ? ಕಾರ್ಯಾಚರಣೆಗೆ ಅಡ್ಡಿ ಮಾಡೋಕಾ?- ರಾಹುಲ್‌ ಗಾಂಧಿ ಮೇಲೆ ಕೂಗಾಡಿದ ವ್ಯಕ್ತಿ-ವಿಡಿಯೋ ಇದೆ

Wayanad Landslide: ದುರಂತ ಸ್ಥಳ ವಯನಾಡಿಗೆ ರಾಹುಲ್‌ ಗಾಂಧಿ ಭೇಟಿ ನೀಡಿದ್ದರು. ಈ ವೇಳೆ ಅವರು ವಾಹನದಲ್ಲಿ ಕುಳಿತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ರಾಹುಲ್‌ ಭೇಟಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾನೆ.

VISTARANEWS.COM


on

wayanad Landslide
Koo

ವಯನಾಡ್‌: ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೀಕರ ಭೂಕುಸಿತಕ್ಕೆ ಕೇರಳದ ವಯನಾಡು ಈಗ ಸೂತಕದ ಮನೆಯಂತಾಗಿದೆ. ಭೂಕುಸಿತದಲ್ಲಿ (Wayanad Landslide) ಮೃತಪಟ್ಟವರ ಸಂಖ್ಯೆ ಈಗ 300 ದಾಟಿದೆ. ಇನ್ನು ಈ ಮಧ್ಯೆಯೇ, ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ವಯನಾಡಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳೀಯರಿಂದ ರಾಹುಲ್‌ ಗಾಂಧಿಯವರಿಗೆ ಭಾರೀ ವಿರೋಧ ವ್ಯಕ್ತವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವಿಡಿಯೋದಲ್ಲೇನಿದೆ?

ದುರಂತ ಸ್ಥಳ ವಯನಾಡಿಗೆ ರಾಹುಲ್‌ ಗಾಂಧಿ ಭೇಟಿ ನೀಡಿದ್ದರು. ಈ ವೇಳೆ ಅವರು ವಾಹನದಲ್ಲಿ ಕುಳಿತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ರಾಹುಲ್‌ ಭೇಟಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾನೆ. ವಾಹನದಲ್ಲಿ ಬಂದು ಪರಿಸ್ಥಿತಿ ಅವಲೋಕಿಸುವ ಅವಶ್ಯಕತೆ ಏನಿದೆ? ಇದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತದೆ. ಅವರಿಗೆ ನಿಜವಾಗಿಗೆ ಕಾಳಜಿ ಇದ್ದರೆ ವಾಹನದಿಂದ ಕೆಳಗಿಳಿಯಲಿ. ಕಾಲಿಗೆ ಮಣ್ಣಾಗುತ್ತದೆ ಎಂಬಚಿಂತೆಯೇ ಹಾಗಿದ್ದರೆ ಇಲ್ಲಿಗೆ ಬಂದಿದ್ದೇಕೆ? ಏನನ್ನು ನೋಡಲು ಆತ ಬಂದಿದ್ದಾರೆ ಎಂದು ವ್ಯಕ್ತಿಯೊಬ್ಬ ಕೋಪದಲ್ಲಿ ಕಿರುಚುತ್ತಾ ರಾಹುಲ್‌ ಇದ್ದ ವಾಹನವನ್ನು ತಡೆಯುವ ಪ್ರಯತ್ನ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಅದಾಗಿಯೂ ಆತನನ್ನು ರಾಹುಲ್‌ ಗಾಂಧಿ ಲೆಕ್ಕಿಸಲೇಇಲ್ಲ. ವಾಹನ ಹಾಗೇ ಮುಂದಕ್ಕೆ ಚಲಿಸಿದೆ. ಆಗ ಆವ್ಯಕ್ತಿ ಮತ್ತಷ್ಟು ಕೋಪದಿಂದ ಕೂಗಾಡಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿದ್ದು, ಎಲ್ಲರೂ ರಾಹುಲ್‌ ಗಾಂಧಿಯನ್ನು ಪ್ರವಾಸಿಗ ಎಂದು ವ್ಯಂಗ್ಯವಾಡಿದ್ದಾರೆ.

ವಯನಾಡು ಜಿಲ್ಲೆಯ ಮೆಪ್ಪಾಡಿ ಹಾಗೂ ಚೂರಲ್‌ಮಲ ಪ್ರದೇಶಗಳ ಗ್ರಾಮಗಳು ಸಂಪೂರ್ಣವಾಗಿ ಮಸಣದಂತಾಗಿವೆ. ಈ ಪ್ರದೇಶಗಳಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡಿರುವ, ನೀರಿನಲ್ಲಿ ಮನೆಗಳು ಕೊಚ್ಚಿ ಹೋಗಿ ನಿರಾಶ್ರಿತರಾಗಿರುವ ಸಂತ್ರಸ್ತರನ್ನು ಭೇಟಿಯಾದ ಅವರು, ಆತ್ಮಸ್ಥೈರ್ಯ ತುಂಬಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಹಾನಿಯ ವೀಕ್ಷಣೆ ಮಾಡಿದರು.

ಇದನ್ನೂ ಓದಿ: Wayanad Landslide: ವಯನಾಡ್‌ ಅಕ್ಷರಶಃ ಸ್ಮಶಾನ; ಭೂಕುಸಿತ ಸ್ಥಳಕ್ಕೆ ರಾಹುಲ್‌, ಪ್ರಿಯಾಂಕಾ ಭೇಟಿ ಸ್ಥಗಿತ

Continue Reading
Advertisement
Neeraj Chopra
ಕ್ರೀಡೆ1 min ago

Neeraj Chopra: ನೀರಜ್​ ಚಿನ್ನ ಗೆದ್ದರೆ ನೀವು ಕೂಡ ಉಚಿತ ವಿದೇಶ ಪ್ರವಾಸ ಕೈಗೊಳ್ಳಬಹುದು; ಇದು ಹೇಗೆ ಸಾಧ್ಯ?

World Bank
ವಾಣಿಜ್ಯ8 mins ago

World Bank: ಅಮೆರಿಕದ ತಲಾ ಆದಾಯದ ಕಾಲು ಭಾಗ ತಲುಪಲು ಭಾರತಕ್ಕೆ 75 ವರ್ಷ ಬೇಕು: ವಿಶ್ವ ಬ್ಯಾಂಕ್‌

Rakshit Shetty Richard Anthony Produce By Hombale
ಅವಿಭಾಗೀಕೃತ12 mins ago

US Military: ಇರಾನ್, ಹಮಾಸ್, ಹಿಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದ ಅಮೆರಿಕ

Jr NTR -Janhvi Kapoor Devara Song take centre stage
ಟಾಲಿವುಡ್31 mins ago

Jr NTR -Janhvi Kapoor: ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಜ್ಯೂನಿಯರ್‌ ಎನ್‌ಟಿಆರ್- ಜಾಹ್ನವಿ; ಆ.5ಕ್ಕೆ ಚಿತ್ರತಂಡದಿಂದ ಗಿಫ್ಟ್‌!​

IND vs SL
ಕ್ರೀಡೆ31 mins ago

IND vs SL: ಭಾರತ-ಲಂಕಾ ಏಕದಿನ ಪಂದ್ಯ ಟೈ ಆದರೂ ಸೂಪರ್​ ಓವರ್​ ಏಕೆ ಆಡಿಸಲಿಲ್ಲ?; ಇಲ್ಲಿದೆ ಉತ್ತರ

UGCET 2024
ಪ್ರಮುಖ ಸುದ್ದಿ51 mins ago

UGCET 2024: ಆ.7ರಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ; ಆಪ್ಶನ್ ಎಂಟ್ರಿಗೆ ನಾಳೆ ಲಾಸ್ಟ್ ಡೇಟ್

Lion & Lioness Name
ದೇಶ1 hour ago

Lion & Lioness Name: ಅಕ್ಬರ್‌-ಸೀತಾ ಸಿಂಹಗಳಿಗೆ ಹೊಸ ಹೆಸರು; ವಿವಾದಕ್ಕೆ ತೆರೆ ಎಳೆದ ದೀದಿ ಸರ್ಕಾರ

Kamala Harris
ವಿದೇಶ1 hour ago

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಹೆಸರು ಅಂತಿಮ

Kannada New Movie Tenant sonu gowda First look out
ಸ್ಯಾಂಡಲ್ ವುಡ್1 hour ago

Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

Rohit Sharma
ಕ್ರೀಡೆ1 hour ago

Rohit Sharma: ಲಂಕಾ ವಿರುದ್ಧ ಅರ್ಧಶತಕ ಬಾರಿಸಿ ಹಲವು ದಾಖಲೆ ಬರೆದ ರೋಹಿತ್​ ಶರ್ಮ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ6 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌