IND vs SL: ಭಾರತ-ಲಂಕಾ ಏಕದಿನ ಪಂದ್ಯ ಟೈ ಆದರೂ ಸೂಪರ್​ ಓವರ್​ ಏಕೆ ಆಡಿಸಲಿಲ್ಲ?; ಇಲ್ಲಿದೆ ಉತ್ತರ - Vistara News

ಕ್ರೀಡೆ

IND vs SL: ಭಾರತ-ಲಂಕಾ ಏಕದಿನ ಪಂದ್ಯ ಟೈ ಆದರೂ ಸೂಪರ್​ ಓವರ್​ ಏಕೆ ಆಡಿಸಲಿಲ್ಲ?; ಇಲ್ಲಿದೆ ಉತ್ತರ

IND vs SL: ದ್ವಿಪಕ್ಷೀಯ ಏಕದಿನ ಪಂದ್ಯದಲ್ಲಿ ಸೂಪರ್​ ಓವರ್ ಆಡಿಸದಿದ್ದರೂ, ಐಸಿಸಿ ಟೂರ್ನಿಗಳು, ಏಷ್ಯಾ ಕಪ್, ತ್ರಿಕೋನ ಸರಣಿಯಂತಹ ಏಕದಿನ ಮಾದರಿ ಪಂದ್ಯಗಳಲ್ಲಿ ಟೈ ಆದರೆ ಸೂಪರ್​ ಓವರ್​ ನಡೆಸಲಾಗುತ್ತದೆ.

VISTARANEWS.COM


on

IND vs SL
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: ಶುಕ್ರವಾರ ನಡೆದಿದ್ದ ಭಾರತ ಮತ್ತು ಶ್ರೀಲಂಕಾ(IND vs SL) ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಟೈನಲ್ಲಿ ಅಂತ್ಯ ಕಂಡಿತ್ತು. ಪಂದ್ಯ ಟೈಗೊಂಡರೂ ಕೂಡ ಫಲಿತಾಂಶ ನಿರ್ಧರಿಸಲು ಸೂಪರ್ ಓವರ್ ಏಕೆ ಆಡಿಸಲಿಲ್ಲ ಎನ್ನುವ ಪ್ರಶ್ನೆ ಸಹಜವಾಗಿಯೇ ಅಭಿಮಾನಿಗಳಿಗೆ ಕಾಡಿದೆ. ಇದಕ್ಕೆ ಉತ್ತರ ಇಲ್ಲಿದೆ.

ಲಂಕಾ ಮತ್ತು ಭಾರತ ವಿರುದ್ಧದ ಅಂತಿಮ ಟಿ20 ಪಂದ್ಯ ಟೈ ಗೊಂಡಾಗ ಸೂಪರ್​ ಓವರ್​ ಆಡಿಸಲಾಗಿತ್ತು ಆದರೆ, ಏಕದಿನ ಪಂದ್ಯ ಟೈ ಆದಾಗ ಏಕೆ ಸೂಪರ್​ ಓಪರ್​ ಆಡಿಸಲಿಲ್ಲ ಎಂದು ಅನೇಕ ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಸೂಪರ್​ ಓವರ್ ಆಡಿಸದೇ ಇರಲು ಕೂಡ ಒಂದು ಕಾರಣವಿದೆ.

ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ನಿಯಮಗಳ ಪ್ರಕಾರ ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಏಕದಿನ ಸರಣಿಯ ಪಂದ್ಯ ಟೈ ಆದರೆ ಇದನ್ನು ಟೈ ಎಂದು ಪರಿಗಣಿಸಲಾಗುತ್ತದೆ. ಇಲ್ಲಿ ಯಾವುದೇ ಸೂಪರ್ ಓವರ್​ ಆಡಿಸಲಾಗುವುದಿಲ್ಲ. ಆದರೆ, ಈ ನಿಯಮ ಟಿ20 ಕ್ರಿಕೆಟ್​ಗೆ ಅನ್ವಯವಾಗುವುದಿಲ್ಲ. ಇಲ್ಲಿ ಸೂಪರ್​ ಓವರ್​ ಆಡಿಸಲಾಗುತ್ತದೆ. ಸೂಪರ್​ ಓವರ್​ ಕೂಡ ಟೈಗೊಂಡರೆ ಮತ್ತೊಂದು ಸೂಪರ್​ ಓವರ್​ ಆಡಿಸಲಾಗುತ್ತದೆ. ಫಲಿತಾಂಶ ಬರುವ ತನಕವೂ ಸೂಪರ್ ಓವರ್​ ಆಡಿಸಲಾಗುತ್ತದೆ.​ ನಿನ್ನೆಯ ಪಂದ್ಯ ದ್ವಿಪಕ್ಷೀಯ ಸರಣಿಯ ಭಾಗವಾಗಿತ್ತು, ಆದ್ದರಿಂದ ಯಾವುದೇ ಸೂಪರ್ ಓವರ್ ಆಡಿಸಲಿಲ್ಲ. ಇನ್ನುಳಿದ ಎರಡು ಏಕದಿನ ಪಂದ್ಯಗಳಲ್ಲಿ ಗೆದ್ದವರು ಸರಣಿಯ ವಿಜೇತರಾಗಲಿದ್ದಾರೆ. ಒಂದೊಂದು ಪಂದ್ಯ ಗೆದ್ದರೆ ಸರಣಿ ಸಮಬಲವಾಗಲಿದೆ.

ಇದನ್ನೂ ಓದಿ IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

ಐಸಿಸಿ ಟೂರ್ನಿಯಲ್ಲಿ ಸಾಧ್ಯ

ದ್ವಿಪಕ್ಷೀಯ ಏಕದಿನ ಪಂದ್ಯದಲ್ಲಿ ಸೂಪರ್​ ಓವರ್ ಆಡಿಸದಿದ್ದರೂ, ಐಸಿಸಿ ಟೂರ್ನಿಗಳು, ಏಷ್ಯಾ ಕಪ್, ತ್ರಿಕೋನ ಸರಣಿಯಂತಹ ಏಕದಿನ ಮಾದರಿ ಪಂದ್ಯಗಳಲ್ಲಿ ಟೈ ಆದರೆ ಸೂಪರ್​ ಓವರ್​ ನಡೆಸಲಾಗುತ್ತದೆ.

ರೋಚಕ ಪಂದ್ಯ

ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಿ ಟೈ ನಲ್ಲಿ ಅಂತ್ಯಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 47.5 ಓವರ್ ಗಳಲ್ಲಿ 230 ರನ್ ಗಳಿಗೆ ಆಲೌಟಾಯಿತು. ಗೆಲುವಿಗೆ ಒಂದು ರನ್​ ಬೇಕಿದ್ದಾಗ ಶಿವಂ ದುಬೆ ಮತ್ತು ಅರ್ಶ್​ದೀಪ್​ ಸಿಂಗ್​ ಸತತವಾಗಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದು ವಿಕೆಟ್​ ಕೈಚೆಲ್ಲಿದರು. ಸೋಲುವ ಭೀತಿಯಲ್ಲಿದ್ದ ಲಂಕಾ ಅಸಾಮಾನ್ಯ ಪ್ರದರ್ಶನ ತೋರಿ ಪಂದ್ಯವನ್ನು ಟೈ ಗೊಳಿಸುವ ಮೂಲಕ ನಿಟ್ಟುಸಿರುಬಿಟ್ಟಿತು.

ಭಾರತ ಪರ ಚೇಸಿಂಗ್​ನಲ್ಲಿ ನಾಯಕ ರೋಹಿತ್​ ಶರ್ಮ 47 ಎಸೆತಗಳಿಂದ 58 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ಉಳಿದಂತೆ ಕೆ.ಎಲ್​ ರಾಹುಲ್​ 31, ಅಕ್ಷರ್​ ಪಟೇಲ್​ 33 ರನ್​ ಬಾರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Paris Olympics:ಭಾಕರ್​ ಬಳಿಕ ಒಲಿಂಪಿಕ್ಸ್​ನಲ್ಲಿ ಕುಸ್ತಿಪಟು ಸುಶೀಲ್​ ಕುಮಾರ್​(2008 ಕಂಚು, 2012 ಬೆಳ್ಳಿ) ಮತ್ತು ಪಿ.ವಿ. ಸಿಂಧು(2016 ಬೆಳ್ಳಿ, 2021 ಕಂಚು) ಅವಳಿ ಪದಕ ಗೆದ್ದ ಇಬ್ಬರು ಭಾರತೀಯ ಕ್ರೀಡಾಪಟುಗಳು.

VISTARANEWS.COM


on

Paris Olympics
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿದ್ದ ಮನು ಭಾಕರ್​ಗೆ(manu bhaker) ನಿರಾಸೆಯಾಗಿದೆ. ಇಂದು(ಶನಿವಾರ) ನಡೆದ 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಅವರು ಐತಿಹಾಸಿಕ ಪದಕ ಗೆಲ್ಲುವ ಅವಕಾಶವೊಂದನ್ನು ಕಳೆದುಕೊಂಡರು. ಪದಕ ಗೆಲ್ಲುತ್ತಿದ್ದರೆ ವೈಯಕ್ತಿಕವಾಗಿ ಒಂದೇ ಆವೃತ್ತಿಯಲ್ಲಿ ಹಾಗೂ ಒಟ್ಟಾರೆಯಾಗಿ 3 ಒಲಿಂಪಿಕ್ಸ್​ ಪದಕ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಐತಿಹಾಸಿಕ ದಾಖಲೆ ಬರೆಯಬಹುದಿತ್ತು.

ಫೈನಲ್​ ಹಂತದ ಮೊದಲ ಸುತ್ತಿನಲ್ಲಿ 6 ಅಂಕ ಗಳಿಸಿ 4ನೇ ಸ್ಥಾನಿಯಾದ ಭಾಕರ್​ ಆ ಬಳಿಕದ ಸುತ್ತಿನಲ್ಲಿ ಪ್ರಗತಿ ಸಾಧಿಸಿ 2ನೇ ಸ್ಥಾನದೊಂದಿಗೆ ಈ ಸುತ್ತು ಮುಗಿಸಿದರು. 2ನೇ ಸುತ್ತಿನಲ್ಲಿ ಒಮ್ಮೆ 6ನೇ ಸ್ಥಾನಕ್ಕೆ ಕುಸಿದರೂ ಕೂಡ ತಕ್ಷಣ ಎಚ್ಚೆತ್ತುಕೊಂಡು ಮತ್ತೆ ಯಶಸ್ಸು ಸಾಧಿಸಿದರು. ಆದರೆ ಅಂತಿಮ ಹಂತದಲ್ಲಿ 28 ಅಂಕ ಪಡೆದು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟರು. ಕೊರಿಯಾದ ಯಾಂಗ್ ಜಿನ್ ಚಿನ್ನದ ಪದಕ ಗೆದ್ದರು. ಆತಿಥೇಯ ದೇಶದ ಕ್ಯಾಮಿಲ್ಲೆ ಬೆಳ್ಳಿ, ಹಂಗೇರಿಯ ಕಂಚು ಗೆದ್ದರು.

22 ವರ್ಷದ ಮನು ಭಾಕರ್ ಇದಕ್ಕೂ ಮುನ್ನ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. ಶುಕ್ರವಾರ ನಡೆದಿದ್ದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾಕರ್​ ಒಟ್ಟು 590 ಅಂಕ ಗಳಿಸುವ ಮೂಲಕ 2ನೇ ಸ್ಥಾನಿಯಾಗಿ ಫೈನಲ್​ ಪ್ರವೇಶಿಸಿದ್ದರು. ಪ್ರಿಸಿಷನ್​ ಸುತ್ತಿನಲ್ಲಿ 294 ಅಂಕ(97,98,99) ಗಳಿಸಿದರೆ ರ್ಯಾಪಿಡ್​ ಸುತ್ತಿನಲ್ಲಿ 296 ಅಂಕ(100,98,98) ಕಲೆಹಾಕಿದ್ದರು.

ಭಾಕರ್​ ಬಳಿಕ ಒಲಿಂಪಿಕ್ಸ್​ನಲ್ಲಿ ಕುಸ್ತಿಪಟು ಸುಶೀಲ್​ ಕುಮಾರ್​(2008 ಕಂಚು, 2012 ಬೆಳ್ಳಿ) ಮತ್ತು ಪಿ.ವಿ. ಸಿಂಧು(2016 ಬೆಳ್ಳಿ, 2021 ಕಂಚು) ಅವಳಿ ಪದಕ ಗೆದ್ದ ಇಬ್ಬರು ಭಾರತೀಯ ಕ್ರೀಡಾಪಟುಗಳು.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಯಾವ ಸ್ಪರ್ಧಿಗಳು ಕಣಕ್ಕೆ ಇಳಿಯಲಿದ್ದಾರೆ? ಎಲ್ಲ ಮಾಹಿತಿ ಇಲ್ಲಿದೆ

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಅಂದಿನ ಸೋಲಿನಿಂದ ಮನನೊಂದು ಶೂಟಿಂಗ್​ಗೆ ವಿದಾಯ ಹೇಳಲು ಬಯಸಿದ್ದ ಮನು ತಂದೆಯ ಆತ್ಮವಿಶ್ವಾಸದ ಮಾತಿನಂತೆ ಶೂಟಿಂಗ್​ನಲ್ಲಿ ಮುಂದುವರಿದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ 2 ಪದಕ ಗೆದ್ದು ಭಾರತೀಯ ಒಲಿಂಪಿಕ್ಸ್​ ಕ್ರೀಡಾ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

Continue Reading

ಕ್ರೀಡೆ

Rohit Sharma: ನಿಜಕ್ಕೂ ನಿರಾಸೆಗೊಂಡಿದ್ದೇನೆ ಎಂದ ರೋಹಿತ್​; ಕಾರಣವೇನು?

Rohit Sharma: ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಿ ಟೈ ನಲ್ಲಿ ಅಂತ್ಯಗೊಂಡಿತ್ತು.

VISTARANEWS.COM


on

Rohit Sharma
Koo

ಕೊಲಂಬೊ: ಶ್ರೀಲಂಕಾ ವಿರುದ್ಧ ಶುಕ್ರವಾರ ನಡೆದ ಮೊದಲ ಏಕದಿನ(Sri Lanka vs India 1st ODI) ಪಂದ್ಯದಲ್ಲಿ ಗೆಲ್ಲುವ ಅವಕಾಶವಿದ್ದರೂ ಕೂಡ ಇದನ್ನು ಸದುಪಯೋಗಪಡಿಸುವಲ್ಲಿ ಸಹ ಆಟಗಾರರು ಎಡವಿದ ಬಗ್ಗೆ ನಾಯಕ ರೋಹಿತ್​ ಶರ್ಮ(Rohit Sharma) ಬೇಸರ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಈ ಪಂದ್ಯದ ಬಳಿಕ ನಿರಾಸೆಗೊಂಡಿದ್ದೇನೆ ಎಂದು ಹೇಳಿದ್ದಾರೆ. ಪಂದ್ಯ ಟೈನಲ್ಲಿ ಅಂತ್ಯ ಕಂಡಿತ್ತು.

ಪಂದ್ಯದ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್, 230 ರನ್​ಗಳನ್ನು ಸುಲಭವಾಗಿ ಚೇಸಿಂಗ್ ಮಾಡಬಹುದಾಗಿತ್ತು. ಆದರೆ ಕೊನೆಯಲ್ಲಿ ನಮ್ಮ ಆಟ ನಿರಾಶಾದಾಯಕವಾಗಿತ್ತು. 14 ಎಸೆತಗಳಲ್ಲಿ ಗೆಲುವಿಗೆ ಕೇವಲ 1 ರನ್​ ಬೇಕಿದ್ದರೂ ಕೂಡ ಇದನ್ನು ಗಳಿಸಲು ಸಾಧ್ಯವಾಗದೇ ಇರುವುದು ನೋವಿನ ಸಂಗತಿ. ಈ ಪಂದ್ಯ ನಮ್ಮ ಪಾಲಿಗೆ ನಿರಾಸೆ ತಂದಿದೆ. ಎಂದು ಹೇಳುವ ಮೂಲಕ ರೋಹಿತ್​ ಸಹ ಆಟಗಾರರ ಕಳಪೆ ಮತ್ತು ನಿರ್ಲಕ್ಷ್ಯದ ಬ್ಯಾಟಿಂಗ್​ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಿ ಟೈ ನಲ್ಲಿ ಅಂತ್ಯಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 47.5 ಓವರ್ ಗಳಲ್ಲಿ 230 ರನ್ ಗಳಿಗೆ ಆಲೌಟಾಯಿತು. ಗೆಲುವಿಗೆ ಒಂದು ರನ್​ ಬೇಕಿದ್ದಾಗ ಶಿವಂ ದುಬೆ ಮತ್ತು ಅರ್ಶ್​ದೀಪ್​ ಸಿಂಗ್​ ಸತತವಾಗಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದು ವಿಕೆಟ್​ ಕೈಚೆಲ್ಲಿದರು. ಸೋಲುವ ಭೀತಿಯಲ್ಲಿದ್ದ ಲಂಕಾ ಅಸಾಮಾನ್ಯ ಪ್ರದರ್ಶನ ತೋರಿ ಪಂದ್ಯವನ್ನು ಟೈ ಗೊಳಿಸುವ ಮೂಲಕ ನಿಟ್ಟುಸಿರುಬಿಟ್ಟಿತು.

ಇದನ್ನೂ ಓದಿ Rohit Sharma: ಲಂಕಾ ವಿರುದ್ಧ ಅರ್ಧಶತಕ ಬಾರಿಸಿ ಹಲವು ದಾಖಲೆ ಬರೆದ ರೋಹಿತ್​ ಶರ್ಮ

ಭಾರತ ಪರ ಚೇಸಿಂಗ್​ನಲ್ಲಿ ನಾಯಕ ರೋಹಿತ್​ ಶರ್ಮ 47 ಎಸೆತಗಳಿಂದ 58 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ಉಳಿದಂತೆ ಕೆ.ಎಲ್​ ರಾಹುಲ್​ 31, ಅಕ್ಷರ್​ ಪಟೇಲ್​ 33 ರನ್​ ಬಾರಿಸಿದರು.

ಮಾರ್ಗನ್​ ದಾಖಲೆ ಮುರಿದ ರೋಹಿತ್​


47 ಎಸೆತಗಳಿಂದ 58 ರನ್​ ಬಾರಿಸಿದ ರೋಹಿತ್​ ತಮ್ಮ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್​ ಬಾರಿಸಿದರು. ಈ ಮೂರು ಸಿಕ್ಸರ್​​ ಬಾರಿಸಿದ ವೇಳೆ ರೋಹಿತ್​ ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್‌ ಮಾರ್ಗನ್​(233 ಸಿಕ್ಸರ್​) ಹೆಸರಿನಲ್ಲಿತ್ತು. ಇದೀಗ ರೋಹಿತ್(234 ಸಿಕ್ಸರ್​)​ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ. 211 ಸಿಕ್ಸರ್​ ಬಾರಿಸಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ.

ನಾಯಕನಾಗಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಆಟಗಾರರು


ರೋಹಿತ್​ ಶರ್ಮ-234 ಸಿಕ್ಸರ್​

ಇಯಾನ್​ ಮಾರ್ಗನ್​-233 ಸಿಕ್ಸರ್

ಮಹೇಂದ್ರ ಸಿಂಗ್​ ಧೋನಿ-211 ಸಿಕ್ಸರ್​

ರಿಕಿ ಪಾಂಟಿಂಗ್​-171 ಸಿಕ್ಸರ್​

ಬ್ರೆಂಡನ್​ ಮೆಕಲಮ್​-170 ಸಿಕ್ಸರ್​ 

Continue Reading

ಕ್ರೀಡೆ

PV Sindhu: ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಅವಳಿ ಒಲಿಂಪಿಕ್​ ಪದಕ ವಿಜೇತೆ ಪಿ.ವಿ. ಸಿಂಧು

PV Sindhu: ಕಳೆದ ವರ್ಷ ಮೊಣಕಾಲಿನ ಗಾಯಕ್ಕಾಗಿ ವಿಶ್ರಾಂತಿ ಪಡೆದು, ಚೇತರಿಸಿಕೊಂಡ ಬಳಿಕ ಪಿ.ವಿ.ಸಿಂಧುಗೆ ಫಾರ್ಮ್‌ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

VISTARANEWS.COM


on

PV Sindhu
Koo

ಪ್ಯಾರಿಸ್‌: ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿಯೂ(paris olympics) ಪದಕ ನಿರೀಕ್ಷೆ ಮಾಡಿದ್ದ ಬ್ಯಾಡ್ಮಿಂಟನ್​ ಆಟಗಾರ್ತಿ ಪಿ.ವಿ.ಸಿಂಧು(PV Sindhu) ಪ್ರೀ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ನಿರ್ಗಮಿಸಿದ್ದರು. ಈ ಸೋಲಿನ ಬಳಿಕ ಅನೇಕರು ಸಿಂಧು ಒಲಿಂಪಿಕ್ಸ್​ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಹೇಳಿದ್ದರು. ಆದರೆ, ಈ ಬಗ್ಗೆ ಸ್ವತಃ ಸಿಂಧು ಸ್ಪಷ್ಟನೆ ನೀಡಿದ್ದಾರೆ. ವೃತ್ತಿ ಜೀವನದ ಅತೀ ಕಠಿಣ ಸೋಲು ಎದುರಿಸಿ ಬಂದಿರುವುದರಿಂದ ಸ್ವಲ್ಪ ವಿರಾಮ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ.

ಕಳೆದೊಂದು ವರ್ಷದಿಂದ ಫಿಟ್ನೆಸ್​ ಸಮಸ್ಯೆ ಎದುರಿಸಿದ್ದರೂ ಸಿಂಧು ಮೇಲೆ ಈ ಬಾರಿಯೂ ಪದಕ ನಿರೀಕ್ಷೆ ಮಾಡಲಾಗಿತ್ತು. ಪ್ರೀ ಕ್ವಾರ್ಟರ್​ ಫೈನಲ್​ ತನಕ ಅವರು ಗೆದ್ದು ಬಂದ ಹಾದಿಯನ್ನು ನೋಡುವಾಗ ಈ ಬಾರಿಯೂ ಪದಕ ಖಚಿತ ಎಂದು ನಂಬಲಾಗಿತ್ತು. ಆದರೆ, ಗುರುವಾರ ರಾತ್ರಿ ನಡೆದಿದ್ದ ಪ್ರೀ ಕ್ವಾರ್ಟರ್‌ ಫೈನಲ್​ನಲ್ಲಿ ಸಿಂಧು ಚೀನಾದ ಹಿ ಬಿಂಗ್‌ ಜಿಯಾವೊ ವಿರುದ್ಧ ಸೋಲು ಅನುಭವಿಸಿ ಒಲಿಂಪಿಕ್ಸ್​ ಅಭಿಯಾನ ಮುಗಿಸಿದ್ದರು.

‘ನನ್ನ ಭವಿಷ್ಯದ ಕುರಿತು ನಾನು ಸ್ಪಷ್ಟವಾಗಿದ್ದೇನೆ. ನಾನು ಸ್ವಲ್ಪ ವಿರಾಮ ಪಡೆದ ಮತ್ತೆ ಬ್ಯಾಡ್ಮಿಂಟನ್​ನಲ್ಲಿ ಮುಂದುವರಿಯುತ್ತೇನೆ. ನನ್ನ ದೇಹ ಮತ್ತು ಮನಸ್ಸಿಗೆ ವಿರಾಮ ಬೇಕು. ಮುಂದಿನ ಪ್ರಯಾಣವನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಲು ನಾನು ಯೋಜನೆ ರೂಪಿಸಿದ್ದೇನೆ’ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ PV Sindhu: ನೂತನ ಕೋಚ್​ ಮೊರೆ ಹೋದ ಪಿ.ವಿ. ಸಿಂಧು

ಕಳೆದ ವರ್ಷ ಮೊಣಕಾಲಿನ ಗಾಯಕ್ಕಾಗಿ ವಿಶ್ರಾಂತಿ ಪಡೆದು, ಚೇತರಿಸಿಕೊಂಡ ಬಳಿಕ ಅವರಿಗೆ ಫಾರ್ಮ್‌ ಕಂಡುಕೊಳ್ಳಲು ಸಾಧ್ಯವಾಗಿಲ್ಲ. 2 ವರ್ಷಗಳಿಂದೀಚೆಗೆ ಆಡಿದ ಎಲ್ಲ ಟೂರ್ನಿಯಲ್ಲಿ ಹೀನಾಯ ಸೋಲು ಕಂಡಿದ್ದರು. 2ನೇ ಸುತ್ತು ಪ್ರವೇಶಿಸಲು ಕೂಡ ಹೆಣಗಾಡುತ್ತಿದ್ದರು.

ಆಗಸ್ಟ್ 3ರ ಭಾರತದ ವೇಳಾಪಟ್ಟಿಯ ನೋಟ ಇಲ್ಲಿದೆ

ಮಧ್ಯಾಹ್ನ 12:30: ಶೂಟಿಂಗ್ – ಮಹಿಳಾ ಸ್ಕೀಟ್ ಅರ್ಹತಾ ಸುತ್ತಿನ ದಿನ ಮೊದಲ ದಿನ, ರೈಜಾ ಧಿಲ್ಲಾನ್ ಮತ್ತು ಮಹೇಶ್ವರಿ ಚೌಹಾಣ್.

ಮಧ್ಯಾಹ್ನ 1 ಗಂಟೆ: ಶೂಟಿಂಗ್; ಮಹಿಳೆಯರ 25 ಮೀಟರ್ ಪಿಸ್ತೂಲ್ ಫೈನಲ್​​ನಲ್ಲಿ ಮನು ಭಾಕರ್ (ಪದಕದ ಸ್ಪರ್ಧೆ)

ಮಧ್ಯಾಹ್ನ 1:52: ಆರ್ಚರಿ – ಮಹಿಳೆಯರ ವೈಯಕ್ತಿಕ 16ನೇ ಸುತ್ತಿನ ಪಂದ್ಯದಲ್ಲಿ ದೀಪಿಕಾ ಕುಮಾರಿ ಮತ್ತು ಜರ್ಮನಿಯ ಮಿಚೆಲ್ ಕ್ರೊಪೆನ್ ನಡುವೆ ಹಣಾಹಣಿ

ಇದನ್ನೂ ಓದಿ: IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

ಮಧ್ಯಾಹ್ನ 2:05: ಆರ್ಚರಿ – ಮಹಿಳೆಯರ ವೈಯಕ್ತಿಕ 16ನೇ ಸುತ್ತಿನ ಪಂದ್ಯದಲ್ಲಿ ಭಜನ್ ಕೌರ್ ಮತ್ತು ಡಯಾನಂದಾ ಕೊಯಿರುನ್ನಿಸಾ.

ಮಧ್ಯಾಹ್ನ 3:45 ಸೇಯ್ಲಿಂಗ್​​- ಪುರುಷರ ಡಿಂಗ್ಲೇ ರೇಸ್ 5 ಮತ್ತು 6ರಲ್ಲಿ ವಿಷ್ಣು ಸರವಣನ್ ಸ್ಪರ್ಧಿಸಲಿದ್ದಾರೆ.

ಸಂಜೆ 5:55: ಸೇಯ್ಲಿಂಗ್; ಮಹಿಳೆಯರ ಡಿಂಗ್ಲೇ ರೇಸ್ 5 ಮತ್ತು 6 ರಲ್ಲಿ ನೇತ್ರಾ ಕುಮನನ್ ಭಾಗಿಯಾಗಲಿದ್ದಾರೆ.

ರಾತ್ರಿ 11:05: ಶಾಟ್ ಪುಟ್ ಫೈನಲ್ ; ತಜಿಂದರ್ಪಾಲ್ ಸಿಂಗ್ ತೂರ್ (ಅರ್ಹತೆ ಪಡೆದರೆ).

ರಾತ್ರಿ 12:02 : ಪುರುಷರ 71 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್​​ನಲ್ಲಿ ನಿಶಾಂತ್ ದೇವ್ ಮತ್ತು ಮೆಕ್ಸಿಕೊದ ಮಾರ್ಕೊ ವರ್ಡೆ.

Continue Reading

ಕ್ರೀಡೆ

IPL 2025: ಇನ್ನು ಮುಂದೆ ಹೀಗೆ ಮಾಡಿದರೆ ವಿದೇಶಿ ಆಟಗಾರರಿಗೆ ಐಪಿಎಲ್​ನಿಂದ 2 ವರ್ಷ ನಿಷೇಧ?

IPL 2025: ಗಾಯದ ಸಮಸ್ಯೆ ಅಥವಾ ಗಂಭೀರವಾದ ಕೆಲ ವೈಯಕ್ತಿಕ ಕಾರಣಗಳು ಇದ್ದ ವೇಳೆ ಈ ನಿಷೇಧ ಶಿಕ್ಷೆ ಅನ್ವಯ ಮಾಡಬಾರದು ಎಂದು ಫ್ರಾಂಚೈಸಿಗಳು ಒಪ್ಪಿಕೊಂಡಿದೆ. ಆದರೆ, ಕುಂಟು ನೆಪವೊಡ್ಡಿ ಟೂರ್ನಿಯಿಂದ ಕೊನೆ ಗಳಿಗೆಯಲ್ಲಿ ಹಿಂದೆ ಸರಿಯುವ ಆಟಗಾರರಿಗೆ ಈ ಶಿಕ್ಷೆ ವಿಧಿಸಬೇಕು ಎನ್ನುವುದು ಫ್ರಾಂಚೈಸಿಗಳ ವಾದ.

VISTARANEWS.COM


on

IPL 2025
Koo

ಮುಂಬಯಿ: ವಿಶ್ವದ ಅತ್ಯಂತ ಶ್ರೀಮಂತ ಹಾಗೂ ಜನಪ್ರಿಯ ಕ್ರಿಕೆಟ್​​ ಟೂರ್ನಿಯಾಗಿರುವ ಇಂಡಿಯನ್​ ಪ್ರೀಮಿಯರ್​ ಲೀಗ್​(ಐಪಿಎಲ್​)ನಲ್ಲಿ ಪಾಲ್ಗೊಳ್ಳುವ ವಿದೇಶಿ ಆಟಗಾರರಿಗೆ ಬಿಸಿಸಿಐ ಮತ್ತು ಐಪಿಎಲ್(IPL 2025)​ ಆಡಳಿತ ಮಂಡಳಿ ಕಠಿಣ ನಿಯವೊಂದನ್ನು ಜಾರಿಗೆ ತರಲು ಮುಂದಾಗಿದೆ.

18ನೇ ಆವೃತ್ತಿಯ ಮೆಗಾ ಹರಾಜಿನ ಕುರಿತು ನಡೆದ ಸಭೆಯಲ್ಲಿ ಕೆಲವು ಫ್ರಾಂಚೇಸಿಗಳು(IPL franchises) ಬಿಸಿಸಿಐಗೆ(BCCI) ವಿಶೇಷ ಬೇಡಿಕೆಗಳನ್ನು ಮುಂದಿರಿಸಿತ್ತು. ಇದೇ ವೇಳೆ ಹರಾಜಿನಲ್ಲಿ ಖರೀದಿಸಿದ ವಿದೇಶಿ ಆಟಗಾರ ಅನಗತ್ಯ ಕಾರಣ ನೀಡಿ ತಂಡದ ಪರ ಆಡದೇ ಅರ್ಧದಲ್ಲೇ ಕೈಕೊಟ್ಟರೆ ಇಂತಹ ವಿದೇಶೀ ಆಟಗಾರರಿಗೆ 2 ವರ್ಷ ನಿಷೇಧ ವಿಧಿಸುವಂತೆ ಬಿಸಿಸಿಐಗೆ ಒತ್ತಡ ಹೇರಿವೆ ಎಂದು ವರದಿಯಾಗಿದೆ. ಬಿಸಿಸಿಐ ಕೂಡ ಇದಕ್ಕೆ ಸಮ್ಮತಿ ಸೂಚಿಸಿದೆ ಎಂದು ತಿಳಿದುಬಂದಿದೆ. ಸದ್ಯ ಈ ನಿಯಮ ಅಧಿಕೃತವಾಗಿ ಇನ್ನೂ ಜಾರಿಗೆ ಬಂದಿಲ್ಲ.

ಹರಾಜಿನಲ್ಲಿ ಖರೀದಿಸಿದ ನಂತರ ವಿದೇಶಿ ಆಟಗಾರರು ವೈಯಕ್ತಿಕ ಕಾರಣವೊಡ್ಡಿ ಕೊನೆಯ ಗಳಿಗೆಯಲ್ಲಿ ಟೂರ್ನಿಯಿಂದ ಹಿಂದೆ ಸರಿದ ಹಲವು ನಿದರ್ಶನಗಳಿಗೆ. ದೊಡ್ಡ ಮೊತ್ತ ಪಡೆದ ಆಟಗಾರರೇ ಹೆಚ್ಚಾಗಿ ಈ ರೀತಿ ಕೈಕೊಡುವುದರಿಂದ ಖರೀದಿ ಮಾಡಿದ ತಂಡಕ್ಕೆ ಇದು ಭಾರೀ ಹಿನ್ನಡೆ ಉಂಟು ಮಾಡುತ್ತದೆ. ಈ ಆಟಗಾರಿಗೆ ವ್ಯಯಿಸಿದ ಹಣದಲ್ಲಿ ಕನಿಷ್ಠ 3 ಆಟಗಾರರನ್ನು ಖರೀದಿಸುವ ಅವಕಾಶ ತಂಡಕ್ಕೆ ಲಭಿಸುತ್ತದೆ. ವಿದೇಶಿ ಆಟಗಾರರ ನಿಷೇಧ ಕುರಿತ ವಾದಕ್ಕೆ ಎಲ್ಲಾ 10 ತಂಡಗಳು ಸಹಮತ ವ್ಯಕ್ತಪಡಿಸಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ IPL 2025: ಇಂದು ಐಪಿಎಲ್ ಮೆಗಾ ಹರಾಜು ಕುರಿತು ಸಭೆ; ಫ್ರಾಂಚೈಸಿಗಳಿಂದ ಹಲವು ಬೇಡಿಕೆ!

ಗಾಯದ ಸಮಸ್ಯೆ ಅಥವಾ ಗಂಭೀರವಾದ ಕೆಲ ವೈಯಕ್ತಿಕ ಕಾರಣಗಳು ಇದ್ದ ವೇಳೆ ಈ ನಿಷೇಧ ಶಿಕ್ಷೆ ಅನ್ವಯ ಮಾಡಬಾರದು ಎಂದು ಫ್ರಾಂಚೈಸಿಗಳು ಒಪ್ಪಿಕೊಂಡಿದೆ. ಆದರೆ, ಕುಂಟು ನೆಪವೊಡ್ಡಿ ಟೂರ್ನಿಯಿಂದ ಕೊನೆ ಗಳಿಗೆಯಲ್ಲಿ ಹಿಂದೆ ಸರಿಯುವ ಆಟಗಾರರಿಗೆ ಈ ಶಿಕ್ಷೆ ವಿಧಿಸಬೇಕು ಎನ್ನುವುದು ಫ್ರಾಂಚೈಸಿಗಳ ವಾದ.

ಸಭೆಯಲ್ಲಿ ಸನ್​ರೈಸರ್ಸ್​ ಹೈದರಾಬಾದ್​, ಚೆನ್ನೈ ಸೂಪರ್​ ಕಿಂಗ್ಸ್​, ಹಾಲಿ ಚಾಂಪಿಯನ್​ ಕೆಕೆಆರ್ ಫ್ರಾಂಚೈಸಿ ಮಾಲಿಕರು​ ಕನಿಷ್ಠ 7 ಆಟಗಾರರನ್ನಾದರೂ ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಬೇಕೆಂದು ಬೇಡಿಕೆ ಇರಿಸಿವೆ ಎಂದು ವರದಿಯಾಗಿದೆ. ಇದು ಮಾತ್ರವಲ್ಲದೆ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ RTM(ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ) ಕಾರ್ಡ್ ಬಳಸುವ ಬಗ್ಗೆಯೂ ಫ್ರಾಂಚೈಸಿ ಡಿಮ್ಯಾಂಡ್ ಮಾಡಲಿದೆ. 2018ರ ಮೆಗಾ ಹರಾಜಿನಲ್ಲಿ RTMಗೆ ಅವಕಾಶವಿತ್ತು. ಆದರೆ 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಇದನ್ನು ಕೈಬಿಡಲಾಗಿತ್ತು, ಇದೀಗ ಮತ್ತೆ ಈ ನಿಯವನ್ನು ಜಾರಿಗೆ ತರಲು ಫ್ರಾಂಚೈಸಿಗಳು ಒಳವು ತೋರಿದೆ ಎನ್ನಲಾಗಿದೆ.

5 ವರ್ಷಗಳಿಗೊಮ್ಮೆ ಮೆಗಾ ಹರಾಜು?

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ

Continue Reading
Advertisement
ಮಾಲಿವುಡ್9 mins ago

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

M R Mamata
ಶ್ರದ್ಧಾಂಜಲಿ10 mins ago

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ ನಿಧನ

wayanad landslide cm siddaramaiah pinarayi vijayan
ಕರ್ನಾಟಕ26 mins ago

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Paris Olympics
ಪ್ರಮುಖ ಸುದ್ದಿ26 mins ago

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Self Harming
ಚಿಕ್ಕೋಡಿ43 mins ago

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

BJP-JDS Padayatra
ಕರ್ನಾಟಕ44 mins ago

BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

Narco-Terrorism
ದೇಶ46 mins ago

Narco-Terrorism: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರು ಸರ್ಕಾರಿ ಅಧಿಕಾರಿಗಳ ಅಮಾನತು

Ismail Haniyeh
ವಿದೇಶ1 hour ago

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

hd kumaraswamy muda
ಪ್ರಮುಖ ಸುದ್ದಿ1 hour ago

HD Kumaraswamy: ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌