Dhruva Sarja:  ಧ್ರುವ ಸರ್ಜಾ ಕಂಡು ʻಡಿ ಬಾಸ್' ಎಂದು ಕೂಗಿದ ದರ್ಶನ್ ಫ್ಯಾನ್ಸ್; ಭರದಿಂದ ಸಾಗಿದೆ 'ಮಾರ್ಟಿನ್' ಪ್ರಚಾರ! - Vistara News

ಸ್ಯಾಂಡಲ್ ವುಡ್

Dhruva Sarja:  ಧ್ರುವ ಸರ್ಜಾ ಕಂಡು ʻಡಿ ಬಾಸ್’ ಎಂದು ಕೂಗಿದ ದರ್ಶನ್ ಫ್ಯಾನ್ಸ್; ಭರದಿಂದ ಸಾಗಿದೆ ‘ಮಾರ್ಟಿನ್’ ಪ್ರಚಾರ!

Dhruva Sarja: ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 11ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಅವರ ಸ್ವಂತ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ.

VISTARANEWS.COM


on

Dhruva Sarja in hiriyuru dboss slogan in front o martin actor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್ 11ಕ್ಕೆ ರಿಲೀಸ್ ಆಗುತ್ತಿದೆ. ಟ್ರೈಲರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಮುಂಬೈನಲ್ಲಿ ಭಾರೀ ಸುದ್ದಿಗೋಷ್ಠಿಗೆ ಚಿತ್ರತಂಡ ಮುಂದಾಗಿದೆ. ಈಗಾಗಲೇ ಚಿತ್ರತಂಡ ಮುಂಬೈಗೆ ಹೊರಟಿದೆ.ಸಿದ್ಧಗಂಗಾ ಮಠದ ಬಳಿಕ ಚಿತ್ರದುರ್ಗದ ಮುರುಘಾ ಮಠಕ್ಕೂ ಧ್ರುವ ಸರ್ಜಾ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಇನ್ನು ಹಿರಿಯೂರಿನ ಬಳಿಕ ಧ್ರುವ ಸರ್ಜಾ ಕಾರ್ ಏರುವ ಮುನ್ನ ಬಾಸ್ ಬಾಸ್ ಡಿಬಾಸ್ ಎನ್ನುವ ಎಂದು ದರ್ಶನ್ ಅಭಿಮಾನಿಗಳು ಕೂಗಿದ ಘಟನೆಯೂ ನಡೆಯಿತು.

ಧ್ರುವ ಸರ್ಜಾ ಫ್ಯಾನ್ಸ್‌ ಹಾಗೂ ದರ್ಶನ್‌ ಅಭಿಮಾನಿಗಳ ನಡುವೆ ಆಗಾಗ ವಾರ್‌ ನಡೆಯುತ್ತಲೇ ಇರುತ್ತದೆ. ರಾಮನಗರ ಕರಗ ಉತ್ಸವದಲ್ಲಿ ಕೂಡ ಅಭಿಮಾನಿಗಳು ಜೈ ಡಿ ಬಾಸ್ ಎಂದು ಕೂಗಿದ್ದರು. ಇದೀಗ ಹಿರಿಯೂರಿನ ಬಳಿ ಧ್ರುವ ಸರ್ಜಾ ಎದುರು ಬಾಸ್ ಬಾಸ್ ಡಿ ಬಾಸ್, ನಮ್‌ ಬಾಸ್‌ ಯಾರು ಚಾಲೆಂಜಿಂಗ್ ಸ್ಟಾರ್ ಎಂದು ಕೂಗಿದ್ದಾರೆ. ಆ ವೀಡಿಯೋ ವೈರಲ್ ಆಗುತ್ತಿದೆ.

ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 11ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಅವರ ಸ್ವಂತ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ. ಮೂರು ವರ್ಷವಾದರೂ ಸಿನಿಮಾ ನಾನಾ ಕಾರಣಕ್ಕೆ ತಡವಾಗುತ್ತಲೇ ಬಂತು. ಆ ಕಾರಣಗಳಲ್ಲಿ ಚಿತ್ರದ ವಿಎಫ್‌ಎಕ್ಸ್‌ ಕೆಲಸ ಕೂಡ ಒಂದು.

ಇದನ್ನೂ ಓದಿ; Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ದರ್ಶನ್‌ ಕೇಸ್‌ ಬಗ್ಗೆ ಧ್ರುವ ಸರ್ಜಾ ಹೇಳಿದ್ದೇನು?

ಧ್ರುವ ಸರ್ಜಾ ಮಾತನಾಡಿ ʻʻಯಾರೋ ಲೋ ಆಗಿದ್ದಾರೆ, ಕುಗ್ಗಿದ್ದಾರೆ ಎಂದು ಏನೇನೋ ಮಾತನಾಡಬಾರದು. ನೋವಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ನಮ್ಮದೂ ಒಂದು ಕಲ್ಲಿರಲಿ ಎಂದು ಬೀಸಲು ಹೋಗುವುದಿಲ್ಲ. ದರ್ಶನ್ ಸರ್ ಅವರಿಗೂ ಒಬ್ಬ ಮಗ ಇದ್ದಾನೆ, ರೇಣುಕಾ ಸ್ವಾಮಿಗೂ ಮಗು ಆಗಲಿದೆ. ಅವರ ಕುಟುಂಬಗಳನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ಏನೇ ಆಗಲಿ ಅಗಲಿರುವ ರೇಣುಕಾ ಸ್ವಾಮಿಗೆ ನ್ಯಾಯ ಸಿಗಬೇಕು. ಕಾನೂನು ಎಲ್ಲಕ್ಕಿಂತ ದೊಡ್ಡದು. ಸುಮ್ಮನೇ ನಾವು ಏನೇನೋ ಮಾತನಾಡಬಾರದು.’ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್‌ರನ್ನು ಜೈಲಿನಲ್ಲಿ ನೋಡೋಕೆ ನನಗೆ ಮನಸಿಲ್ಲ ಎಂದ ಸೋನಾಲ್!

Actor Darshan: ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ.
ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲ್ಯಾನ್‌ ಮಾಡಿ ಪ್ರೇಕ್ಷಕರನ್ನ ಖುಷಿ ಪಡಿಸುವ ನಿರ್ದೇಶಕ ತರುಣ್ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸೂಪರ್ ಆಗಿಯೇ ಪ್ಲಾನ್ ಮಾಡಿದ್ದಾರೆ.  

VISTARANEWS.COM


on

Actor Darshan Sonal says I don't want to see Darshan in jail
Koo

ಬೆಂಗಳೂರು: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ.
ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲ್ಯಾನ್‌ ಮಾಡಿ ಪ್ರೇಕ್ಷಕರನ್ನ ಖುಷಿ ಪಡಿಸುವ ನಿರ್ದೇಶಕ ತರುಣ್ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸೂಪರ್ ಆಗಿಯೇ ಪ್ಲಾನ್ ಮಾಡಿದ್ದಾರೆ.  ವಿವಾಹದ ಬಗ್ಗೆ ಮಾಹಿತಿ ನೀಡಲು ಈ ದಂಪತಿ ಸುದ್ದಿಗೋಷ್ಠಿ ಕರೆದಿದ್ದಾರೆ. ದರ್ಶನ್‌ (Actor Darshan) ಕುರಿತಾಗಿಯೂ ಜೋಡಿ ಮಾಹಿತಿ ಹಂಚಿಕೊಂಡಿತು.

ಸೋನಲ್‌ ಮಾತನಾಡಿ ʻʻದರ್ಶನ್ ಅವರನ್ನ ಜೈಲಿನಲ್ಲಿ ನೋಡೋಕೆ ನನಗೆ ಮನಸಿಲ್ಲ. ದರ್ಶನ್ ಅವರನ್ನು ಬೇರೆ ರೀತಿ ನಾನು ನೋಡಿದೀನಿ. ಜೈಲಿಗೆ ಹೋಗಿ ಮದುವೆ ಆಹ್ವಾನ ಕೊಡೋದು ನನಗೆ ಸರಿ ಅನ್ನಿಸ್ಲಿಲ್ಲ. ಹಾಗಾಗಿ ದರ್ಶನ್ ಅವರನ್ನ ನಾನಿನ್ನು ಭೇಟಿ ಮಾಡಿಲ್ಲʼʼಎಂದರು.

ತರುಣ್ ಸುಧೀರ್ ಮಾತನಾಡಿ ʻʻಮದುವೆ ಡೇಟ್ ಮುಂದಕ್ಕೆ ಹಾಕ್ಬೇಡ ಅಂತ ದರ್ಶನ್ ಅವರೇ ಹೇಳಿದ್ದು. ಇದೆ ಡೇಟ್ ಅಲ್ಲಿ ಮದುವೆ ಆಗಿ ಅಂತ ದರ್ಶನ್ ಸಲಹೆ ನೀಡಿದ್ರು. ಅವರ ಒಪ್ಪಿಗೆಯಿಂದ ಮದುವೆ ಡೇಟ್ ಅನೌನ್ಸ್ ಮಾಡಿದ್ದುʼʼಎಂಂದರು.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ತರುಣ್‌ ಬಗ್ಗೆ ಸೋನಲ್‌ ಮಾತನಾಡಿ ʻʻತರುಣ್ ಜೆಂಟಲ್ ಮ್ಯಾನ್, ಅಹಂಕಾರ ಇಲ್ಲ. ನಾನು ಯೋಚಿಸೋದು ಕಡಿಮೆ. ಗೈಡ್ ಮಾಡೋರು ಬೇಕಿತ್ತು ತರುಣ್ ಸಿಕ್ಕಿದ್ದಾರೆ. ಹೀಗೆ ಮದುವೆ ಆಗ್ಬೇಕು ಅಂತ ಯಾವತ್ತೂ ಡ್ರೀಮ್ ಮಾಡಿಲ್ಲʼʼಎಂದರು. ಅದೇ ರೀತಿ ತರುಣ್‌ ಕೂಡ ಮಾತನಾಡಿ ʻ ಸೋನಲ್ ಮೈಂಡ್ ಸೆಟ್ ನನಗಿಷ್ಟ. ಕಲ್ಮಶ ಇಲ್ಲದೆ ಇರೋ ಹುಡುಗಿ. ತುಂಬಾ ಚೆನ್ನಾಗಿ ಅಡುಗೆ ಮಾಡ್ತಾರೆ. ಫೋನ್ ಮಾಡಿದಾಗೆಲ್ಲಾ ಅಡುಗೆ ಮನೇಲಿ ಇದೀನಿ ಅಂತಿರ್ತಾರೆ. ಈ ಸಮಯದಲ್ಲಿ ದರ್ಶನ್ ಅವರನ್ನ ತುಂಬಾ ಮಿಸ್ ಮಾಡ್ಕೋತೀವಿ ಅವರ ಮೇಲೆ ಗೌರವ, ಪ್ರೀತಿ ಹಾಗೆ ಇದೆ. ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರಿಗೂ ಆಹ್ವಾನ ಕೊಟ್ಟಿದಿವಿ. ಬೇರೆ ಇಂಡಸ್ಟ್ರಿಯಲ್ಲಿ ಜಗಪತಿ ಬಾಬು, ಸೇರಿದಂತೆ ಹಲವು ಕಲಾವಿದರಿಗೆ ಆಹ್ವಾನ ಕೊಟ್ಟಿದ್ದೇವೆʼʼಎಂದರು.

ಇನ್ನು ಸೋನಲ್‌ ಮಾತನಾಡಿ ʻʻಎಲ್ಲರೂ ಇಬ್ಬರ ಪೇರ್ ಚೆನ್ನಾಗಿದೆ ಎಂದು ಹೇಳಿದ್ದಕ್ಕೆ ಮದುವೆಗೆ ಒಪ್ಪಿಕೊಂಡ್ವಿ. ಮದುವೆ ನಂತರ ಚಿಕ್ಕ ಬ್ರೇಕ್ ತಗೋತೀನಿ. ಈಗ ಸೈನ್ ಮಾಡಿರೋ ಸಿನಿಮಾಗಳನ್ನ ಮುಗಿಸುತಿದ್ದೀನಿʼʼಎಂದರು.

Continue Reading

ಸ್ಯಾಂಡಲ್ ವುಡ್

Tharun Sudhir: ಸುಧೀರ್-ಸೋನಲ್ ವಿವಾಹ; ಲವ್‌ ಸ್ಟೋರಿ ರಿವೀಲ್‌ ಮಾಡಿದ   ಸ್ಯಾಂಡಲ್​ವುಡ್ ಜೋಡಿ!

Tharun Sudhir : ಆಗಸ್ಟ್ 10ರಂದು ಆರತಕ್ಷತೆ ಕಾರ್ಯಕ್ರಮ ನಡೆದರೆ ಆಗಸ್ಟ್ 11ರಂದು ವಿವಾಹ ಕಾರ್ಯಕ್ರಮ ನೆರವೇರುತ್ತಿದೆ. ವಿವಾಹದ ಬಗ್ಗೆ ಮಾಹಿತಿ ನೀಡಲು ಈ ದಂಪತಿ ಸುದ್ದಿಗೋಷ್ಠಿ ಕರೆದಿದ್ದಾರೆ. ಇದರಲ್ಲಿ ಮದುವೆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Tharun Sudhir And Sonal Montero Gave Update On their Wedding
Koo

ಬೆಂಗಳೂರು: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ. ಆಗಸ್ಟ್ 10ರಂದು ಆರತಕ್ಷತೆ ಕಾರ್ಯಕ್ರಮ ನಡೆದರೆ ಆಗಸ್ಟ್ 11ರಂದು ವಿವಾಹ ಕಾರ್ಯಕ್ರಮ ನೆರವೇರುತ್ತಿದೆ. ವಿವಾಹದ ಬಗ್ಗೆ ಮಾಹಿತಿ ನೀಡಲು ಈ ದಂಪತಿ ಸುದ್ದಿಗೋಷ್ಠಿ ಕರೆದಿದ್ದಾರೆ. ಇದರಲ್ಲಿ ಮದುವೆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ತರುಣ್‌ ಸುಧೀರ್‌ ಮಾತನಾಡಿ ʻʻನನ್ನ ಸೋನಲ್ ಪರಿಚಯ ಆಗಿದ್ದು ರಾಬರ್ಟ್ ಸಿನಿಮಾ ಮೂಲಕ. ಆಡಿಷನ್‌ನಲ್ಲಿ ಪರಿಚಯವಾದರು. ರಾಬರ್ಟ್ ಸೆಟ್ ಅಲ್ಲಿ ಲವ್ ಆಗಿಲ್ಲ. ಪ್ರೊಫೆಷನಲ್ ರಿಲೇಶನ್ ಶಿಪ್ ಅಲ್ಲಿ ಇದ್ವಿ. ಆದರೆ ಲವ್ ಆಗಿರಲಿಲ್ಲ. ಆಗಾಗ ಬರ್ತ್‌ಡೇ ವಿಶ್ ಮಾತ್ರ ಮೆಸೇಜ್ ಮಾಡ್ತಿದ್ವಿ. 2023 ಯಿಂದ ಇಬ್ಬರ ನಡುವೆ ಬಾಂಡಿಂಗ್ ಬೆಳೆದಿದ್ದು. ದರ್ಶನ್ ಅವರು ಕಾಲೆಳೆಯುತ್ತಿದ್ರು. ಸೋನಲ್ ಗೆ ಮಾತ್ರ ಯಾಕೆ ಚೆನ್ನಾಗ್ ಫ್ರೇಮ್ ಇಡ್ತಿಯಾ? ಅಂತ ತಮಾಷೆ ಮಾಡೋಕೆ ಶುರು ಮಾಡಿದ್ರು. ಏನು ಸೋನಲ್‌ನ ಲವ್ ಮಾಡ್ತಿದೀಯ ಎಂದು ರೇಗಿಸುತಿದ್ದರು. ನಂತರ ಮದುವೆ ಆಗ್ತೀಯಾ? ಅಂದ್ರು. ಅದ್ಕೆ ನಾನು ನೀವು ಯಾರನ್ನ ತೋರಿಸ್ತಿರೋ ಆಗ್ತೀನಿ ಅಂದೇ. ಕಾಟೇರ ಸೆಟ್ ನಲ್ಲೂ ದರ್ಶನ್ ಹಾಗು ಕೆಲವರು ಸೋನಲ್ ಹೆಸರಲ್ಲಿ ರೇಗಿಸುತಿದ್ರು. ಕೊನೆಗೆ ಒಂದು ಸಿನ ಸೋನಲ್ ನನಗೆ ಕಾಲ್ ಮಾಡಿ ಇಬ್ಬರು ಡೇಟ್ ಮಾಡುತ್ತಿದ್ದೇವೆ ಎನ್ನುವ ಸುದ್ದಿ ಹಬ್ಬುತಿದೆ. ತಪ್ಪು ತಿಳ್ಕೊಬೇಡಿ ಎಂದಿದ್ದರು. ನನಗೂ ಯಾಕೋ ಯೂನಿವರ್ಸ ನಮ್ಮಿಬ್ಬರನ್ನು ಕನೆಕ್ಟ್ ಮಾಡ್ತಿದೆ ಅನ್ಸಿತ್ತು. ನಾನು ಕಾಂಪ್ಲಿಕೇಟ್ ಇದೀನಿ ನೀವು ಸಿಂಪಲ್, ವರ್ಕ್ ಆಗುತ್ತ ಎಂದು ಸೋನಲ್ ಅವರನ್ನ ಕೇಳಿದ್ದೆ. ಕಾಟೇರ ವರೆಗೂ ಮದುವೆ ಬಗ್ಗೆ ಯೋಚಿಸಿಲ್ಲ. ಈ ಬಗ್ಗೆ ಸೋನಲ್‌ಗೂ ಹೇಳಿದ್ದೆ ಕಾಟೇರ ಸಕ್ಸಸ್ ಆಯಿತು. ಇದು ರೈಟ್ ಟೈಮ್ ಅಂತ ಸೋನಲ್ ಮನೆಯಲ್ಲಿ ಮದುವೆ ವಿಚಾರ ಪ್ರಸ್ತಾಪ ಆಯಿತು.ಇಬ್ಬರ ಕುಟುಂಬದ ಸಮ್ಮತಿಯಿಂದ ಮದುವೆ ಆಗುತ್ತಿದ್ದೇವೆʼʼ ಎಂದರು,

ಇದನ್ನೂ ಓದಿ: Tharun Sudhir: ತರುಣ್-ಸೋನಲ್‌ ನಡುವಿನ ವಯಸ್ಸಿನ ಅಂತರ ಎಷ್ಟು?

ಇನ್ನು ಸೋನಲ್‌ ಮಾತನಾಡಿ ʻʻಎಲ್ಲರೂ ಇಬ್ಬರ ಪೇರ್ ಚೆನ್ನಾಗಿದೆ ಎಂದು ಹೇಳಿದ್ದಕ್ಕೆ ಮದುವೆಗೆ ಒಪ್ಪಿಕೊಂಡ್ವಿ. ಮದುವೆ ನಂತರ ಚಿಕ್ಕ ಬ್ರೇಕ್ ತಗೋತೀನಿ. ಈಗ ಸೈನ್ ಮಾಡಿರೋ ಸಿನಿಮಾಗಳನ್ನ ಮುಗಿಸುತಿದ್ದೀನಿʼʼಎಂದರು.

ಸಾಮಾನ್ಯವಾಗಿ ಸೆಲಬ್ರೆಟಿಗಳು ಇನ್ವಿಟೇಷನ್ ಜೊತೆ ಒಂದು ಗಿಡಕೊಟ್ಟು ತಮ್ಮ ವಿವಾಹಕ್ಕೆ ಕರೆಯುವುದು ಕಾಮನ್ .ಆದರೆ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಕಂಪ್ಲೀಟ್ ಆಗಿ ಪರಿಸರ ಸ್ನೇಹಿಯಾಗಿ ಮಾಡಿದ್ದಾರೆ.

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

Kannada New Movie: ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶ್ರೀಧರ್ ಶಾಸ್ತ್ರೀ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ ಟೆನೆಂಟ್ ಸಿನಿಮಾ ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Kannada New Movie Tenant sonu gowda First look out
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು (Kannada New Movie) ನಡೆಯುತ್ತಲೇ ಇರುತ್ತವೆ. ಅದರ ಭಾಗವಾಗಿ ಮೂಡಿ ಬರುತ್ತಿರುವ ಸಿನಿಮಾ ಟೆನೆಂಟ್. ʻಟೆನೆಂಟ್ʼ ಎಂದರೆ ಬಾಡಿಗೆದಾರ. ಯುವ ಪ್ರತಿಭೆ ಶ್ರೀಧರ್ ಶಾಸ್ತ್ರೀ ನಿರ್ದೇಶನ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ವಿಎಫ್ ಎಕ್ಸ್ ನಲ್ಲಿ 4 ವರ್ಷದ ಅನುಭವವಿರುವ ಶ್ರೀಧರ್ ಮೊದಲ ಪ್ರಯತ್ನ ಟೆನೆಂಟ್. ಒಂದಷ್ಟು ಕಿರುಚಿತ್ರ ನಿರ್ದೇಶಿಸಿರುವ ಅವರೀಗ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುತ್ತಿದ್ದಾರೆ.

ಶ್ರೀಧರ್ ಹೊಸ ಪ್ರಯತ್ನಕ್ಕೆ ಪ್ರತಿಭಾನ್ವಿತ ತಾರಾಬಳಗ ಸಾಥ್ ಕೊಟ್ಟಿದೆ. ಧರ್ಮ ಕೀರ್ತಿರಾಜ್, ತಿಲಕ್ ರಾಜ್, ಸೋನು ಗೌಡ, ರಾಕೇಶ್ ಮಯ್ಯ ಹಾಗೂ ಉಗ್ರಂ ಮಂಜು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶ್ರೀಧರ್ ಶಾಸ್ತ್ರೀ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ ಟೆನೆಂಟ್ ಸಿನಿಮಾ ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

ಗಿರೀಶ್ ಹೋತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ, ಮನೋಹರ್ ಜೋಷಿ ಛಾಯಾಗ್ರಹಣ ಚಿತ್ರಕ್ಕಿದೆ. ಶ್ರೀಧರ್ ಶಾಸ್ತ್ರಿ, ಪ್ರವೀಣ್ ಪ್ರಕಾಶ್, ಪ್ರದೀಪ್ ಚಂದ್ರ, ಪ್ರಸನ್ನ ಭಟ್, ಪುರಷೋತ್ತಮ್ ಎ, ರಾಘವೇಂದ್ರ ಸಿ.ಪಿ, ಕಾರ್ತಿಕ್ ಎಸ್.ಎಸ್ ಸಂಭಾಷಣೆ ಬರೆದಿದ್ದು, ಐಶ್ವರ್ಯ ರಂಗರಾಜನ್, ಅನಿರುದ್ಧ ಶಾಸ್ತ್ರಿ, ಗಿರೀಶ್ ಹೋತೂರ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸದ್ಯ ಫಸ್ಟ್ ಲುಕ್ ರಿಲೀಸ್ ಮಾಡಿರುವ ಚಿತ್ರತಂಡ ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

Continue Reading

ಬೆಂಗಳೂರು

Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

Workshop: ʼಜಿ ಅಕಾಡೆಮಿʼ ವತಿಯಿಂದ ಕನ್ನಡ ಚಲನಚಿತ್ರ ಉದ್ಯಮದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲು, ಹೊಸದಾಗಿ ಕಲಾವಿದರು, ನಿರ್ದೇಶಕರು ಮತ್ತು ನಿರ್ಮಾಪಕರಾಗ ಬಯಸುವವರಿಗೆ ಆ.10 ರಂದು ಬೆಂಗಳೂರು ನಗರದ ನಾಗರಭಾವಿಯ ಡಿ-ಗ್ರೂಪ್ ಲೇಔಟ್‌ನಲ್ಲಿರುವ ಜಿ ಅಕಾಡೆಮಿಯಲ್ಲಿ ಬೆಳಿಗ್ಗೆ 9.40 ಕ್ಕೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

VISTARANEWS.COM


on

One day workshop on 10th August by G Academy in Bengaluru
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ʼಜಿ ಅಕಾಡೆಮಿʼ ವತಿಯಿಂದ ಕನ್ನಡ ಚಲನಚಿತ್ರ ಉದ್ಯಮದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲು, ಹೊಸದಾಗಿ ಕಲಾವಿದರು, ನಿರ್ದೇಶಕರು ಮತ್ತು ನಿರ್ಮಾಪಕರಾಗ ಬಯಸುವವರಿಗೆ ಆ.10 ರಂದು ಬೆಂಗಳೂರು ನಗರದ ನಾಗರಭಾವಿಯ ಡಿ-ಗ್ರೂಪ್ ಲೇಔಟ್‌ನಲ್ಲಿರುವ ಜಿ ಅಕಾಡೆಮಿಯಲ್ಲಿ ಬೆಳಗ್ಗೆ 9.40ಕ್ಕೆ ಒಂದು ದಿನದ ಕಾರ್ಯಾಗಾರವನ್ನು (Workshop) ಏರ್ಪಡಿಸಲಾಗಿದೆ.

ಇದನ್ನೂ ಓದಿ: Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

ಕಾರ್ಯಾಗಾರದಲ್ಲಿ ಚಲನಚಿತ್ರ ಉದ್ಯಮದ ನಿರ್ಮಾಪಕ-ನಿರ್ದೇಶಕ ಗುರು ದೇಶಪಾಂಡೆ, ನಿರ್ದೇಶಕರಾದ ಬಿ.ಎಂ. ಗಿರಿರಾಜ್ ಮತ್ತು ಆಕಾಶ್ ಶ್ರೀವತ್ಸ, ಪತ್ರಕರ್ತ ಎಸ್. ಶ್ಯಾಮ್ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ. ಅತಿಥಿ ಭಾಷಣಕಾರರಾಗಿ ಎಂ.ಎಲ್.ಎಂ. ಶರತ್ ಪಾಲ್ಗೊಳ್ಳಲಿದ್ದು, ಚಿತ್ರರಂಗದ ಕಾರ್ಯವಿಧಾನಗಳ ಕುರಿತು ಅವರು ಆಳವಾದ ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಕಾರ್ಯಾಗಾರವು ಅಂದು ಬೆಳಗ್ಗೆ 9:40 ರಿಂದ ಮಧ್ಯಾಹ್ನ 3:00 ರವರೆಗೆ ನಡೆಯಲಿದ್ದು, ನೋಂದಾಯಿಸಿಕೊಳ್ಳಲು ಮೊ.ಸಂ: 99007 77222 / 99001 95195 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading
Advertisement
PSI Parshuram death Case
ಕರ್ನಾಟಕ4 mins ago

PSI Parshuram Death Case: ಪಿಎಸ್ಐ ಪರಶುರಾಮ ಸಾವು ಪ್ರಕರಣ; ಯಾದಗಿರಿ ಕೈ ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

assault case
ಚಿಕ್ಕಮಗಳೂರು47 mins ago

Assault Case : ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

ಮಾಲಿವುಡ್59 mins ago

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

M R Mamata
ಶ್ರದ್ಧಾಂಜಲಿ60 mins ago

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ ನಿಧನ

wayanad landslide cm siddaramaiah pinarayi vijayan
ಕರ್ನಾಟಕ1 hour ago

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Paris Olympics
ಪ್ರಮುಖ ಸುದ್ದಿ1 hour ago

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Self Harming
ಚಿಕ್ಕೋಡಿ2 hours ago

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

BJP-JDS Padayatra
ಕರ್ನಾಟಕ2 hours ago

BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

Narco-Terrorism
ದೇಶ2 hours ago

Narco-Terrorism: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರು ಸರ್ಕಾರಿ ಅಧಿಕಾರಿಗಳ ವಜಾ

Ismail Haniyeh
ವಿದೇಶ2 hours ago

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ2 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌