Duniya Vijay: ವಿಜಯ್ ನಟಿಸಿ, ನಿರ್ದೇಶಿಸಿರುವ 'ಭೀಮ ಚಿತ್ರದ  ಟ್ರೈಲರ್‌ ಔಟ್‌; ಕ್ರೇಜ್‌ ಹೆಚ್ಚಿಸಿದ ʻಸಲಗʼ! - Vistara News

ಸ್ಯಾಂಡಲ್ ವುಡ್

Duniya Vijay: ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ ಚಿತ್ರದ  ಟ್ರೈಲರ್‌ ಔಟ್‌; ಕ್ರೇಜ್‌ ಹೆಚ್ಚಿಸಿದ ʻಸಲಗʼ!

Duniya Vijay: ಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ.

VISTARANEWS.COM


on

Duniya Vijay Bheema Official Trailer Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದುನಿಯಾ ವಿಜಯ್ ನಟಿಸಿ (Duniya Vijay), ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ‘ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ. ಟ್ರೈಲರ್‌ ನೋಡಲು ಸಲಗ ರೀತಿಯಲ್ಲಿ ಇದ್ದರೂ ಅತ್ಯಂತ ರಗಡ್‌ ಆಗಿ ಕಂಡಿದ್ದಾರೆ ದುನಿಯಾ ವಿಜಯ್‌.

‘ಭೀಮ’ ಸಿನಿಮಾದ ಟ್ರೈಲರ್​ನಲ್ಲಿಯೂ ಸಹ ಅಲ್ಲಲ್ಲಿ ‘ಸಲಗ’ದ ಛಾಯೆ ಕಾಣುತ್ತಿದೆ. ಇದೂ ಸಹ ಬೆಂಗಳೂರಿನ ಕರಾಳ ಗಲ್ಲಿಗಳ ಕತೆಯೇ ಎಂಬುದನ್ನಂತೂ ಟ್ರೈಲರ್ ಸಾರಿ ಹೇಳುತ್ತಿದೆ. (ಆಗಸ್ಟ್ 03) ನಗರದಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ದುನಿಯಾ ವಿಜಯ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಭಾಗಿಯಾಗಿದ್ದರು ಜೊತೆಗೆ ನಿರ್ದೇಶಕ ತರುಣ್ ಸುಧೀರ್ ಇನ್ನೂ ಕೆಲವರು ಭಾಗಿಯಾಗಿ ದುನಿಯಾ ವಿಜಯ್​ಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ʻಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.‘ಭೀಮ’ ಸಿನಿಮಾ ಆಗಸ್ಟ್ 9ರಂದು ತೆರೆಗೆ ಬರಲಿದೆ.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಕಾಂಬಿನೇಷನ್‌ನಲ್ಲಿ ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಈಗಾಗಲೇ ಹೆಚ್ಚಾಗಿದ್ದು, ತೆರೆಮೇಲೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ದಿಗಂತ್ ನಟನೆಯ `ಪೌಡರ್’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Kannada New Movie: ಜನಾರ್ದನ್ ಚಿಕ್ಕಣ್ಣ ಅವರ ನಿರ್ದೇಶನದ “ಪೌಡರ್” ಒಂದು ಹಾಸ್ಯಭರಿತ ಚಿತ್ರವಾಗಿದ್ದು ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರವಿಶಂಕರ್ ಗೌಡ,ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ.

VISTARANEWS.COM


on

Kannada New Movie powder cinema trailer release date announce
Koo

ಬೆಂಗಳೂರು: ಬಹು ನಿರೀಕ್ಷಿತ ಹಾಸ್ಯಭರಿತ ಚಿತ್ರ “ಪೌಡರ್” ಟ್ರೈಲರ್‌ ಚಿತ್ರತಂಡ (Kannada New Movie) ಇಂದು ಘೋಷಣೆ ಮಾಡಿದೆ. ಇದೇ ಆಗಸ್ಟ್ 7ರಂದು ಬೆಳಗ್ಗೆ 11:11 ಗಂಟೆಗೆ ಟ್ರೇಲರ್ ಬಿಡುಗಡೆ ಮಾಡಿವುದಾಗಿ ಚಿತ್ರ ತಂಡ ಘೋಷಿಸಿದೆ. ಈ ಹಿಂದೆ “ಪೌಡರ್” ತಂಡ ಬಿಡುಗಡೆ ಮಾಡಿದ ಟೀಸರ್ ಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದ್ದು, ಇನ್ನು ಮುಂಬರುವ ಟ್ರೇಲರ್ ಅನ್ನು ವೀಕ್ಷಿಸಲು ಸಿನಿ ಪ್ರೇಕ್ಷಕರು ಕುತೂಹಲದಿಂದ ಕಾಯುವಂತೆ ಮಾಡಿದೆ.

ಜನಾರ್ದನ್ ಚಿಕ್ಕಣ್ಣ ಅವರ ನಿರ್ದೇಶನದ “ಪೌಡರ್” ಒಂದು ಹಾಸ್ಯಭರಿತ ಚಿತ್ರವಾಗಿದ್ದು ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರವಿಶಂಕರ್ ಗೌಡ,ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರವನ್ನು ಕಾರ್ತಿಕ್ ಗೌಡ,ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. “ಪೌಡರ್” ಚಿತ್ರ ಇದೇ ಆಗಸ್ಟ್ 23ರಂದು ತೆರೆ ಕಾಣಲಿದೆ‌.

ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್”‌ ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”.‌ ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್”‌ ಹಿಂದಿನ “ಪವರ್”‌ ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಜುಲೈ 12 ಚಿತ್ರಮಂದಿರಗಳಲ್ಲಿ ಸಿಗಲಿದೆ. ಈಗಾಗಲೇ ತನ್ನ ಟೀಸರ್‌ ಮೂಲಕ “ಪೌಡರ್”‌ ಎಲ್ಲೆಡೆ ನಗೆ ಚಟಾಕಿ ಹತ್ತಿಸಿದ್ದು, ಚಿತ್ರ ಬಿಡುಗಡೆಯ ನಂತರ ಈ ಹಾಸ್ಯ, ನಗು ದುಪ್ಪಟ್ಟುಗೊಳ್ಳಲಿದೆ ಎಂದರೆ ಉತ್ಪ್ರೇಕ್ಷೆಯಲ್ಲ.

ಇದನ್ನೂ ಓದಿ: Raayan Movie: ಎಂಟೇ ದಿನಕ್ಕೆ ‘100 ಕೋಟಿ ಕ್ಲಬ್‌’ ಸೇರಿದ ಧನುಷ್ ನಟನೆಯ’ರಾಯನ್‌’ ಸಿನಿಮಾ!

“ಪೌಡರ್”‌ ಚಿತ್ರವನ್ನು ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಸಹಯೋಗದಲ್ಲಿ ಮೂಡಿ ಬಂದಿರುವ ಮೊದಲ ಚಿತ್ರವಾಗಿದೆ. ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ವಿಭನ್ನ ಕಥಾವಸ್ತುವನ್ನು ಸಿನಿ ಪ್ರೇಕ್ಷಕರ ಮುಂದಿಡುವ ಗುರಿಯೊಂದಿಗೆ ಈಗಾಗಲೇ ಹಲವಾರು ಪ್ರಖ್ಯಾತ ಚಿತ್ರಗಳನ್ನು ನಿರ್ಮಿಸಿವೆ. ಇನ್ನು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ಹಲವಾರು ವೆಬ್‌ ಸೀರೀಸ್‌ ಗಳ ಮೂಲಕ ತನ್ನದೇ ಛಾಪನ್ನು ಮೂಡಿಸಿರುವ ಸಂಸ್ಥೆಯಾಗಿದ್ದು, ಇವರಿಬ್ಬರ ಸಹಯೋಗದಲ್ಲಿ ಮೂಡಿ ಬಂದಿರುವ “ಪೌಡರ್”‌ ಬಹುನಿರೀಕ್ಷಿತ ಚಿತ್ರವಾಗಿದೆ.

ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ಕುರಿತು

ಸಂಸ್ಥೆಯ ಸಂಸ್ಥಾಪಕ ಅರುನಭ್‌ ಕುಮಾರ್‌ ಸಾರಥ್ಯದಲ್ಲಿ, ಆರಂಭದ ದಿನದಿಂದಲೂ, ಉತ್ತಮ ಗುಣ ಮಟ್ಟದ ಕಥೆಗಳ ಮೂಲಕ ಟಿ.ವಿ.ಎಫ್‌ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದೆ. ತನ್ನ 1೦ ವರ್ಷಗಳ ಪಯಣದಲ್ಲಿ, ಹಲವಾರು “ಸ್ಟೀರಿಯೋ ಟೈಪ್”ಗಳನ್ನು ಭೇದಿಸಿದೆ. “ದಿ ವೈರಲ್‌ ಫೀವರ್” ಎಂಬ ಶೀರ್ಷಿಕೆಯೊಂದಿಗೆ ಸಾವಿರಾರು ಪ್ರೇಕ್ಷಕರ ಮನಮುಟ್ಟಿದೆ. ಈ ನಡುವೆ ಹಲವಾರು ನಿರ್ಮಾಣ ಸಂಸ್ಥೆಗಳು ಉಗಮವಾಗಿದ್ದರೂ, ಟಿ.ವಿ.ಎಫ್‌ ವೆಬ್‌ ಕಂಟೆಂಟ್‌ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್​ & ಗ್ಯಾಂಗ್​ಗೆ ಸಂಕಷ್ಟ; ಪೊಲೀಸರಿಂದ ಹೊಸ ತಂತ್ರಜ್ಞಾನ ಬಳಕೆ!

Actor Darshan: ದರ್ಶನ್‌ ಗ್ಯಾಂಗ್‌ (Actor Darshan) ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿದ ಬಳಿಕ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿರುವ ಪೊಲೀಸರು ಈ ವರೆಗೆ ಸುಮಾರು 200 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರಂತೆ.

VISTARANEWS.COM


on

Actor Darshan Gang Use of new technology by the police
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿ ಮಾಡಲು ಪೊಲೀಸರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಈ ಮಧ್ಯೆ ಚಾರ್ಜ್ ಶೀಟ್ ಸಲ್ಲಿಕೆಗೆ ಪ್ರಮುಖ ಸಾಕ್ಷಿದಾರ ಪೊಲೀಸರಿಗೆ ಸಿಕ್ಕಂತಾಗಿದೆ. ಆದರೆ, ಜೈಲಿನಿಂದಲೇ ಕೆಲ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಕೆಲಸವೂ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ದರ್ಶನ್‌ ಗ್ಯಾಂಗ್‌ (Actor Darshan) ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿದ ಬಳಿಕ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿರುವ ಪೊಲೀಸರು ಈ ವರೆಗೆ ಸುಮಾರು 200 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರಂತೆ.

ಇದೀಗ ಈ ಪ್ರಕರಣದಲ್ಲಿ ತಂತ್ರಜ್ಞಾನದ ಬಳಕೆಯನ್ನು ಪೊಲೀಸರು ಮಾಡುತ್ತಿದ್ದು ಸಾಕ್ಷ್ಯವನ್ನು ಇನ್ನಷ್ಟು ಪ್ರಬಲಗೊಳಿಸುತ್ತಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರುವ ಶೆಡ್, ದರ್ಶನ್ ಮನೆ, ಸ್ಟೂನಿ ಬ್ರೂಕ್ ರೆಸ್ಟೊರೆಂಟ್, ಶೆಡ್​ಗೆ ಹೋಗುವ ರಸ್ತೆ ಇನ್ನೂ ಹಲವು ಕಡೆಗಳಿಂದ ಸಿಸಿಟಿವಿ ದೃಶ್ಯಗಳನ್ನು ಕಲೆ ಹಾಕಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿ ಚಿತ್ರೀಕರಣ ಮಾಡಲಾಗಿರುವ ಮೊಬೈಲ್ ವಿಡಿಯೋಗಳನ್ನು ಸಹ ಕಲೆ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಕ್ಷಿಗಳನ್ನು ಇನ್ನಷ್ಟು ಬಲಗೊಳಿಸಲು ವಿಷ್ಯುಯಲ್ ಕಂಪಾರಿಷನ್ ತಂತ್ರಜ್ಞಾನವನ್ನು ಪೊಲೀಸರು ಬಳಸಿದ್ದಾರೆ ಎನ್ನಲಾಗಿದೆ. ವಿಷ್ಯುಲ್ ಕಂಪಾರಿಷನ್​ನಿಂದ ಬೇರೆ ಬೇರೆ ವಿಡಿಯೋಗಳಲ್ಲಿರುವ ವ್ಯಕ್ತಿಗಳು ಒಬ್ಬರೇ ಹೌದೇ ಅಲ್ಲವೆ ಎಂಬುದು ತಿಳಿಯುತ್ತದೆ. ಹಾಗೂ ವಿಡಿಯೋ ನಕಲಿಯೇ, ಅಸಲಿಯೇ, ಗ್ರಾಫಿಕ್ಸ್ ಮಾಡಲಾಗಿದೆಯೇ ಇನ್ನಿತರೆ ವಿಷಯಗಳು ಸಹ ತಿಳಿದು ಬರಲಿದೆ ಎನ್ನಲಾಗಿದೆ.

ಇದನ್ನೂ ಓದಿ: Actor Darshan: ದರ್ಶನ್‌ರನ್ನು ಜೈಲಿನಲ್ಲಿ ನೋಡೋಕೆ ನನಗೆ ಮನಸಿಲ್ಲ ಎಂದ ಸೋನಾಲ್!

ಕರೆಂಟ್ ಶಾಕ್ ಕೊಡಲು ಆನ್‌ಲೈನ್‌ನಲ್ಲಿ ಮೆಗ್ಗರ್‌ ಡಿವೈಸ್‌ ಖರೀದಿ

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆಯಲ್ಲಿ‌ ಪ್ರಮುಖವಾಗಿ ಬಳಸಿರೋ‌ ಸಾಧನ ಮೆಗ್ಗರ್ ಬಗ್ಗೆ ಮಹತ್ವದ ಮಾಹಿತಿ ತಿಳಿಸದುಬಂದಿದೆ. ಕರೆಂಟ್ ಶಾಕ್ ನೀಡಲೆಂದೇ ಮೆಗ್ಗರ್ ಅನ್ನು ಖರೀದಿ‌ ಮಾಡಿರೋದು ತನಿಖೆ ವೇಳೆ ಬೆಳಕಿಗೆ. ಪ್ರಕರಣದ ಆರೋಪಿ ಧನರಾಜ್‌ ಅಮೆಜಾನ್‌ನಲ್ಲಿ ಮೆಗ್ಗರ್ ಡಿವೈಸ್ ಬುಕ್ ಮಾಡಿದ್ದು, ಅದರ ಬೆಲೆ 699 ರೂಪಾಯಿಗಳಾಗಿದೆ. ಇನ್ನು ಬುಕ್ ಮಾಡಿದ ಮೆಗ್ಗರ್ ಅನ್ನು ಸ್ವೀಕರಿಸುವ ವೇಳೆ ಸ್ಕ್ಯಾನರ್ ಮೂಲಕ ಹಣ ಪೇ ಮಾಡಲು ಧನರಾಜ್ ಯತ್ನಿಸಿದ್ದ. ಆದರೆ ಅಮೆಜಾನ್ ಪೇ ಕೋಡ್‌ ಸ್ಕ್ಯಾನ್ ಮಾಡಿದ ವೇಳೆ ಹಣ ಸೆಂಡ್ ಆಗದ ಕಾರಣ ಆನ್ ಲೈನ್ ಮೂಲಕ ಹಣವನ್ನು ಕಳುಹಿಸಿದ್ದ ಧನರಾಜ್. ಆ ಹಣವನ್ನು ಡೆಲಿವರಿ ಬಾಯ್ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದು ಕಂಪನಿಗೆ ನೀಡಿದ್ದ. ಸದ್ಯ ಆ ಮಾಹಿತಿ ಕಲೆ ಹಾಕಿರೋ ಪೊಲೀಸರು ಮೆಗ್ಗರ್ ಡಿವೈಸ್ ಧನರಾಜ್‌ಗೆ ತಂದುಕೊಟ್ಟ ಡೆಲಿವರಿ ಬಾಯ್‌ನ ವಿಚಾರಣೆ ಮಾಡಿ ಆತನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಅಲ್ಲದೇ ರೇಣುಕಾಸ್ವಾಮಿ ಸೋಷಿಯಲ್ ಮೀಡಿಯಾ ಡೇಟಾ ರಿಟ್ರೀವ್ ಆಗಿದೆ. ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ, ವಾಟ್ಸ್‌ ಆ್ಯಪ್ ಡೇಟಾವನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಪಶ್ಚಿಮ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ ರಿಟ್ರೀವ್ ಆಗಿದ್ದು, ಪೆನ್ ಡ್ರೈವ್‌ನಲ್ಲಿ ಡೇಟಾ ಸಂಗ್ರಹಿಸಿ ಪಂಚನಾಮೆ ಮಾಡಲಾಗಿದೆ. ಈ ಮಧ್ಯೆ ಮೃತ ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶಗಳ ಪರಿಶೀಲನೆ ಮಾಡಲಾಗಿದ್ದು, ಇದು ಕೂಡ ಪ್ರಮುಖ ಸಾಕ್ಷ್ಯವಾಗಿದ್ದು, ರೇಣುಕಾಸ್ವಾಮಿ ಮಾಡಿದ್ದ ಚಾಟಿಂಗ್‌ನಿಂದಲೇ ಕೊಲೆಗೆ ಪ್ರಮುಖ ಕಾರಣ ಎಂಬುದು ಬೆಳಕಿಗೆ ಬಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ʻಗೋಪಿಲೋಲ’ನ ಜೊತೆ ಹೆಜ್ಜೆ ಹಾಕಿದ ಜಾಹ್ನವಿ!

Kannada New Movie: ಗೋಪಿಲೋಲ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

VISTARANEWS.COM


on

Kannada New Movie Kann Kann Talking Kai Kai Touching Gopilola
Koo

ಬೆಂಗಳೂರು: ಆರ್ ರವೀಂದ್ರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʻಗೋಪಿಲೋಲ ಸಿನಿಮಾʼದ (Kannada New Movie) ಸ್ಪೆಷಲ್ ನಂಬರ್ ಬಿಡುಗಡೆಯಾಗಿದೆ. ಕಣ್ ಕಣ್ ಟಾಕಿಂಗ್, ಕೈ ಕೈ ಟಚ್ಚಿಂಗ್ ಎಂಬ ಹಾಡಿಗೆ ಕೇಶವ ಚಂದ್ರ ಸಾಹಿತ್ಯ ಬರೆದಿದ್ದು, ಮಿದುನ್ ಅಸೋಕನ್ ಚೆನ್ನೈ ಸಂಗೀತ ಒದಗಿಸಿದ್ದು, ಶಶಾಂಕ್ ಶೇಷಗಿರಿ ಹಾಗೂ ಗೀತಾ ಭಟ್ ಧ್ವನಿಯಾಗಿದ್ದಾರೆ. ಧನಂಜಯ್ ನೃತ್ಯ ಸಂಯೋಜನೆಗೆ ನಾಯಕ ಮಂಜುನಾಥ್ ಅರಸು ಹಾಗೂ ಜಾಹ್ನವಿ ಹೆಜ್ಜೆ ಹಾಕಿದ್ದಾರೆ.

ಸಹಜ ಕೃಷಿ ಹಾಗೂ ಪ್ರೇಮ ಕಥಾ ಹಂದರ ಹೊಂದಿರುವ ಗೋಪಿಲೋಲ ಸಿನಿಮಾಗೆ ಎಸ್.ಆರ್.ಸನತ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸಹ ನಿರ್ಮಾಪಕರಾಗಿ ನಾಯಕ ಮಂಜುನಾಥ್ ಸಾಥ್ ಕೊಟ್ಟಿದ್ದಾರೆ‌.

ಮಂಜುನಾಥ್ ಗೆ ಜೋಡಿಯಾಗಿ ನಿಮಿಷಾ ಕೆ ಚಂದ್ರ ಅಭಿನಯಿಸ್ತಿದ್ದು, ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಸಂತಿ, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ತಾರಾಬಳಗದಲ್ಲಿದ್ದಾರೆ.

ಗೋಪಿಲೋಲ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ನಿರ್ದೇಶಕ ಆರ್ ರವೀಂದ್ರ ಈ ಹಿಂದೆ ಕನ್ನಡದಲ್ಲಿ ಛಲಗಾರ, ಸರ್ಕಾರಿ ಕೆಲಸ ದೇವರ ಕೆಲಸ, ಮನಸ್ಸಿನಾಟ, ಬಂಗಾರದ ಮಕ್ಕಳು, ಮರಾಠಿಯಲ್ಲಿ ಫೆಬ್ರವರಿ 14, ಮಿಷನ್ ಅಂಬ್ಯುಲೆನ್ಸ್ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಇದೀಗ ಗೋಪಿಲೋಲ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಪ್ರಚಾರ ಕೆಲಸದಲ್ಲಿ ಬ್ಯುಸಿಯಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ರನ್ನು ಜೈಲಿನಲ್ಲಿ ನೋಡೋಕೆ ನನಗೆ ಮನಸಿಲ್ಲ ಎಂದ ಸೋನಾಲ್!

Actor Darshan: ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ.
ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲ್ಯಾನ್‌ ಮಾಡಿ ಪ್ರೇಕ್ಷಕರನ್ನ ಖುಷಿ ಪಡಿಸುವ ನಿರ್ದೇಶಕ ತರುಣ್ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸೂಪರ್ ಆಗಿಯೇ ಪ್ಲಾನ್ ಮಾಡಿದ್ದಾರೆ.  

VISTARANEWS.COM


on

Actor Darshan Sonal says I don't want to see Darshan in jail
Koo

ಬೆಂಗಳೂರು: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ.
ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲ್ಯಾನ್‌ ಮಾಡಿ ಪ್ರೇಕ್ಷಕರನ್ನ ಖುಷಿ ಪಡಿಸುವ ನಿರ್ದೇಶಕ ತರುಣ್ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸೂಪರ್ ಆಗಿಯೇ ಪ್ಲಾನ್ ಮಾಡಿದ್ದಾರೆ.  ವಿವಾಹದ ಬಗ್ಗೆ ಮಾಹಿತಿ ನೀಡಲು ಈ ದಂಪತಿ ಸುದ್ದಿಗೋಷ್ಠಿ ಕರೆದಿದ್ದಾರೆ. ದರ್ಶನ್‌ (Actor Darshan) ಕುರಿತಾಗಿಯೂ ಜೋಡಿ ಮಾಹಿತಿ ಹಂಚಿಕೊಂಡಿತು.

ಸೋನಲ್‌ ಮಾತನಾಡಿ ʻʻದರ್ಶನ್ ಅವರನ್ನ ಜೈಲಿನಲ್ಲಿ ನೋಡೋಕೆ ನನಗೆ ಮನಸಿಲ್ಲ. ದರ್ಶನ್ ಅವರನ್ನು ಬೇರೆ ರೀತಿ ನಾನು ನೋಡಿದೀನಿ. ಜೈಲಿಗೆ ಹೋಗಿ ಮದುವೆ ಆಹ್ವಾನ ಕೊಡೋದು ನನಗೆ ಸರಿ ಅನ್ನಿಸ್ಲಿಲ್ಲ. ಹಾಗಾಗಿ ದರ್ಶನ್ ಅವರನ್ನ ನಾನಿನ್ನು ಭೇಟಿ ಮಾಡಿಲ್ಲʼʼಎಂದರು.

ತರುಣ್ ಸುಧೀರ್ ಮಾತನಾಡಿ ʻʻಮದುವೆ ಡೇಟ್ ಮುಂದಕ್ಕೆ ಹಾಕ್ಬೇಡ ಅಂತ ದರ್ಶನ್ ಅವರೇ ಹೇಳಿದ್ದು. ಇದೆ ಡೇಟ್ ಅಲ್ಲಿ ಮದುವೆ ಆಗಿ ಅಂತ ದರ್ಶನ್ ಸಲಹೆ ನೀಡಿದ್ರು. ಅವರ ಒಪ್ಪಿಗೆಯಿಂದ ಮದುವೆ ಡೇಟ್ ಅನೌನ್ಸ್ ಮಾಡಿದ್ದುʼʼಎಂಂದರು.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ತರುಣ್‌ ಬಗ್ಗೆ ಸೋನಲ್‌ ಮಾತನಾಡಿ ʻʻತರುಣ್ ಜೆಂಟಲ್ ಮ್ಯಾನ್, ಅಹಂಕಾರ ಇಲ್ಲ. ನಾನು ಯೋಚಿಸೋದು ಕಡಿಮೆ. ಗೈಡ್ ಮಾಡೋರು ಬೇಕಿತ್ತು ತರುಣ್ ಸಿಕ್ಕಿದ್ದಾರೆ. ಹೀಗೆ ಮದುವೆ ಆಗ್ಬೇಕು ಅಂತ ಯಾವತ್ತೂ ಡ್ರೀಮ್ ಮಾಡಿಲ್ಲʼʼಎಂದರು. ಅದೇ ರೀತಿ ತರುಣ್‌ ಕೂಡ ಮಾತನಾಡಿ ʻ ಸೋನಲ್ ಮೈಂಡ್ ಸೆಟ್ ನನಗಿಷ್ಟ. ಕಲ್ಮಶ ಇಲ್ಲದೆ ಇರೋ ಹುಡುಗಿ. ತುಂಬಾ ಚೆನ್ನಾಗಿ ಅಡುಗೆ ಮಾಡ್ತಾರೆ. ಫೋನ್ ಮಾಡಿದಾಗೆಲ್ಲಾ ಅಡುಗೆ ಮನೇಲಿ ಇದೀನಿ ಅಂತಿರ್ತಾರೆ. ಈ ಸಮಯದಲ್ಲಿ ದರ್ಶನ್ ಅವರನ್ನ ತುಂಬಾ ಮಿಸ್ ಮಾಡ್ಕೋತೀವಿ ಅವರ ಮೇಲೆ ಗೌರವ, ಪ್ರೀತಿ ಹಾಗೆ ಇದೆ. ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರಿಗೂ ಆಹ್ವಾನ ಕೊಟ್ಟಿದಿವಿ. ಬೇರೆ ಇಂಡಸ್ಟ್ರಿಯಲ್ಲಿ ಜಗಪತಿ ಬಾಬು, ಸೇರಿದಂತೆ ಹಲವು ಕಲಾವಿದರಿಗೆ ಆಹ್ವಾನ ಕೊಟ್ಟಿದ್ದೇವೆʼʼಎಂದರು.

ಇನ್ನು ಸೋನಲ್‌ ಮಾತನಾಡಿ ʻʻಎಲ್ಲರೂ ಇಬ್ಬರ ಪೇರ್ ಚೆನ್ನಾಗಿದೆ ಎಂದು ಹೇಳಿದ್ದಕ್ಕೆ ಮದುವೆಗೆ ಒಪ್ಪಿಕೊಂಡ್ವಿ. ಮದುವೆ ನಂತರ ಚಿಕ್ಕ ಬ್ರೇಕ್ ತಗೋತೀನಿ. ಈಗ ಸೈನ್ ಮಾಡಿರೋ ಸಿನಿಮಾಗಳನ್ನ ಮುಗಿಸುತಿದ್ದೀನಿʼʼಎಂದರು.

Continue Reading
Advertisement
Kannada New Movie powder cinema trailer release date announce
ಸ್ಯಾಂಡಲ್ ವುಡ್7 mins ago

Kannada New Movie: ದಿಗಂತ್ ನಟನೆಯ `ಪೌಡರ್’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Ishan Kishan
ಕ್ರೀಡೆ15 mins ago

Ishan Kishan: ಮತ್ತೆ ದೇಶೀಯ ಕ್ರಿಕೆಟ್​ ಆಡಲು ಮುಂದಾದ ಇಶಾನ್​ ಕಿಶನ್​

Abu Salem
ವೈರಲ್ ನ್ಯೂಸ್15 mins ago

Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

Leopard attack
ಚಾಮರಾಜನಗರ17 mins ago

Leopard Attack : ಮೈಸೂರಲ್ಲಿ ರೈತನ ಮೇಲೆ ಚಿರತೆ ದಾಳಿ; ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಚಿರತೆ

Actor Darshan Gang Use of new technology by the police
ಸ್ಯಾಂಡಲ್ ವುಡ್20 mins ago

Actor Darshan: ದರ್ಶನ್​ & ಗ್ಯಾಂಗ್​ಗೆ ಸಂಕಷ್ಟ; ಪೊಲೀಸರಿಂದ ಹೊಸ ತಂತ್ರಜ್ಞಾನ ಬಳಕೆ!

ದೇಶ29 mins ago

Wall collapsed: ದೇಗುಲದ ಗೋಡೆ ನೆಲಸಮ; ಎಂಟು ಮಕ್ಕಳು ದಾರುಣ ಸಾವು

IND vs SL
ಕ್ರೀಡೆ1 hour ago

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

BJP-JDS Padayatra
ರಾಜಕೀಯ1 hour ago

BJP-JDS Padayatra: ರಾಜ್ಯದ ಹಣ ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

Road Accident
ಬೆಂಗಳೂರು1 hour ago

Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

KEA
ಬೆಂಗಳೂರು2 hours ago

KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌