Rashami Desai: ಡಿವೋರ್ಸ್‌ ಬಳಿಕ ಮನೆ ಇಲ್ಲದೆ, ರೋಡ್‌ ಸೈಡ್‌ ಊಟ ತಿಂದು ಕಾರಿನಲ್ಲಿ ಮಲಗಿದ್ದರಂತೆ ʻಮುದ್ದು ಬಂಗಾರʼ ಖ್ಯಾತ ನಟಿ! - Vistara News

ಕಿರುತೆರೆ

Rashami Desai: ಡಿವೋರ್ಸ್‌ ಬಳಿಕ ಮನೆ ಇಲ್ಲದೆ, ರೋಡ್‌ ಸೈಡ್‌ ಊಟ ತಿಂದು ಕಾರಿನಲ್ಲಿ ಮಲಗಿದ್ದರಂತೆ ʻಮುದ್ದು ಬಂಗಾರʼ ಖ್ಯಾತ ನಟಿ!

Rashami Desai: ಕಿರುತೆರೆಯ ಸೂಪರ್ ಹಿಟ್ ನಟಿಯಾಗಿದ್ದರೂ ಕೂಡ ರಶ್ಮಿ ದೇಸಾಯಿ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೋವು ಕಂಡಿದ್ದಾರೆ. ಡಿವೋರ್ಸ್‌ ಮತ್ತು ಬಾಯ್‌ಫ್ರೆಂಡ್‌ ಜತೆ ಬ್ರೇಕಪ್‌, ಎರಡರ ಬಗ್ಗೆ ತಮ್ಮ ಮನಸ್ಸಿನ ನೋವನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ.ಮದ್ದು ಬಂಗಾರ ಧಾರಾವಾಹಿಯಲ್ಲಿ ವೀರ್ ಪಾತ್ರದಲ್ಲಿ ನಟಿಸಿರುವ ನಂದೀಶ್​ ಸಿಂಗ್​ ಸಂಧು ಅವರನ್ನೇ ನಿಜ ಜೀವನದಲ್ಲೂ ಮದುವೆಯಾಗಿದ್ದರು.

VISTARANEWS.COM


on

Rashami Desai Homeless Rashami Desai lived in an Audi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದಿ ಕಿರುತೆರೆ ಜನಪ್ರಿಯ ನಟಿ, ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿ ʻಮುದ್ದು ಬಂಗಾರʼ ಖ್ಯಾತಿಯ ನಟಿ ರಶ್ಮಿ ದೇಸಾಯಿ (Rashami Desai) ಬಿಗ್ ಬಾಸ್ ಹಿಂದಿ ಸೀಸನ್‌ 13ರಲ್ಲಿ ಭಾಗವಹಿಸಿದ್ದರು. ಕಿರುತೆರೆಯ ಸೂಪರ್ ಹಿಟ್ ನಟಿಯಾಗಿದ್ದರೂ ಕೂಡ ರಶ್ಮಿ ದೇಸಾಯಿ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೋವು ಕಂಡಿದ್ದಾರೆ. ಡಿವೋರ್ಸ್‌ ಮತ್ತು ಬಾಯ್‌ಫ್ರೆಂಡ್‌ ಜತೆ ಬ್ರೇಕಪ್‌, ಎರಡರ ಬಗ್ಗೆ ತಮ್ಮ ಮನಸ್ಸಿನ ನೋವನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ.

ನಟಿ ನಂದೀಶ್ ಸಂಧು ಅವರ ಜತೆ ವಿಚ್ಛೇದನದ ನಂತರ, ಭಾರಿ ಆರ್ಥಿಕ ತೊಂದರೆಗಳನ್ನು ಎದುರಿಸಿದರು. ಮದ್ದು ಬಂಗಾರ ಧಾರಾವಾಹಿಯಲ್ಲಿ ವೀರ್ ಪಾತ್ರದಲ್ಲಿ ನಟಿಸಿರುವ ನಂದೀಶ್​ ಸಿಂಗ್​ ಸಂಧು ಅವರನ್ನೇ ನಿಜ ಜೀವನದಲ್ಲೂ ಮದುವೆಯಾಗಿದ್ದರು. ಪ್ರೀತಿಸಿ ವಿವಾಹವಾಗಿದ್ದ ಈ ಜೋಡಿಯ ವೈವಾಹಿಕ ಜೀವನ ತುಂಬಾ ಸಮಯ ಉಳಿಯಲಿಲ್ಲ.
3.5 ಕೋಟಿ ರೂ. ಸಾಲ ಸೇರಿದಂತೆ, ಮನೆಯಿಲ್ಲದೇ ಅವರ ಕಾರಿನಲ್ಲಿ ಮಲಗಬೇಕಾದ ಪರಿಸ್ಥಿತಿ ನಿರ್ಮಾಣ ಆಗಿತ್ತು. ಮದುವೆ ಸಮಯದಲ್ಲಿ ಕಿರುತೆರೆ ನಟಿಯಾಗಿದ್ದರು. ಮದುವೆ ನಂತರ ಕೊಂಚ ಫೇಮ್ ಕಡಿಮೆ ಆಗಿತ್ತು. ಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿಬಿಟ್ಟರು. ಅದಾದ ಮೇಲೆ ಬಾಯ್‌ಫ್ರೆಂಡ್‌ ಉದ್ಯಮಿ ಅರ್ಹಾನ್ ಖಾನ್‌ ಜೊತೆಗಿದ್ದರು…ಅದು ಕೂಡ ವರ್ಕೌಟ್ ಆಗುತ್ತಿಲ್ಲ ಎಂದು ಬ್ರೇಕಪ್ ಮಾಡಿಕೊಂಡರು.

ನಟಿ ಮಾತನಾಡಿ ʻʻನಾನು ಮನೆ ಖರೀದಿಸಿದೆ. ಸುಮಾರು 3.25-3.5 ಕೋಟಿ ರೂ, ಸಾಲ ಇತ್ತು. ಮೊದ ಮೊದಲು ಎಲ್ಲವೂ ಚೆನ್ನಾಗಿತ್ತು. ಬಳಿಕ ನಾಲ್ಕು ದಿನ ನಾನು ರಸ್ತೆ ಬದಿಯಲ್ಲಿ ಮಲಗುವ ಪರಿಸ್ಥಿತಿ ಎದುರಾಗಿತ್ತು. ನನ್ನ ಬಳಿ ಇದ್ದ ಆಡಿ 6 ಕಾರಿನಲ್ಲಿ ಮಲಗುವ ಪರಿಸ್ಥಿತಿ ಎದುರಾಗಿತ್ತು ಅಲ್ಲದೆ ಊಟ ಹಣವಿಲ್ಲದ ಕಾರಣ ರಸ್ತೆಯಲ್ಲಿ ಸಿಗುವ 20 ರೂಪಾಯಿ ಊಟವನ್ನು ತಿನ್ನುತ್ತಿದ್ದೆ. ನನ್ನ ಕುಟುಂಬದಿಂದ ಸಂಪೂರ್ಣವಾಗಿ ದೂರವಿದ್ದೆ. ಆಟೋ ಡ್ರೈವರ್‌ಗಳು ತಿನ್ನುತ್ತಿದ್ದ ಜಾಗದಲ್ಲಿ ತಿನ್ನುತ್ತಿದ್ದೆ. ನನ್ನ ಬಟ್ಟೆಗಳಿಗೆ ಜಾಗವಿಲ್ಲದ ಕಾರಣ ನನ್ನ ಮ್ಯಾನೇಜರ್‌ ಮನೆಯಲ್ಲಿ ಇಟ್ಟಿದೆ. ನಾನು ನಿದ್ದೆ ಮಾಡುತ್ತಿರಲಿಲ್ಲ.”ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

ʻʻವಿಚ್ಛೇದನದ ಸಮಯದಲ್ಲಿ 3 ರಿಂದ 3.5 ಕೋಟಿ ರೂಪಾಯಿ ಸಾಲವಿತ್ತು ಅದನ್ನು ತೀರಿಸಲು ಸಹಾಯ ಮಾಡಿದ್ದು ದಿಲ್ ಸೇ ದಿಲ್ ತಕ್ ಎನ್ನುವ ಧಾರಾವಾಹಿ. ಅಲ್ಲಿಂದ ನನ್ನ ಜರ್ನಿ ಅದ್ಭುತವಾಗಿ ಇತ್ತು. ಬಿಗ್ ಬಾಸ್‌ವರೆಗೂ ಬಂದು ನಿಂತಿದೆʼʼ ಎಂದು ರಶ್ಮಿ ದೇಸಾಯಿ ಮಾತನಾಡಿದ್ದಾರೆ.

ರಶ್ಮಿ ದೇಸಾಯಿ ಅವರು ಅಸ್ಸಾಮಿಯಲ್ಲಿ ಅತಿಥಿ ಪಾತ್ರದ ಮೂಲಕ ನಟನೆಗೆ ಬಂದರು. ಕನ್ಯಾದಾನ (2002).ಧಾರಾವಾಹಿ ಮೂಲಕ ಖಯಾತಿ ಪಡೆದರು. ದಿಲ್ ಸೆ ದಿಲ್ ತಕ್, ಜರಾ ನಚ್ಕೆ ದಿಖಾ ಮುಂತಾದ ರಿಯಾಲಿಟಿ ಶೋಗಳಲ್ಲೂ ದೇಸಾಯಿ ಭಾಗವಹಿಸಿದ್ದರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Anchor Shalini: ಅವತ್ತಿನ ಕಾಲಕ್ಕೆ ‘ಪಾಪ ಪಾಂಡು’ ಖ್ಯಾತಿಯ ಶಾಲಿನಿ ಪಡೆಯುತ್ತಿದ್ದ ಸಂಭಾವನೆ ಏಷ್ಟು?

Anchor Shalini: ಸತತ 5 ವರ್ಷಗಳ ಕಾಲ ಈ ಧಾರಾವಾಹಿ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಹೆಂಡತಿ ಅಂದ್ರೆ ಹೆದರುವ ಪುಕ್ಕಲು ಪಾಂಡು ಹಾಗೂ ಖಡಕ್ ಪತ್ನಿ ಶ್ರೀಮತಿ ನಡುವೆ ದಿನಕ್ಕೊಂದು ಕಥೆ ಹೇಳಿ ಧಾರವಾಹಿ ವೀಕ್ಷಕರನ್ನು ರಂಜಿಸಿತ್ತು. ಬಳಿಕ ಇದೇ ತರಹದ ಪಾತ್ರಗಳಿಗೆ ಬ್ರ್ಯಾಂಡ್ ಆಗಿಬಿಟ್ಟರು ಶಾಲಿನಿ. ಆ ಬಗ್ಗೆ ತಮಗೆ ಇನ್ನು ಬೇಸರವಿದೆ ಎಂದು ಶಾಲಿನಿ ಹೇಳಿಕೊಂಡಿದ್ದಾರೆ.

VISTARANEWS.COM


on

Anchor Shalini reveals her paycheck per day for paapa pandu tv serial
Koo

ಬೆಂಗಳೂರು: ಸುವರ್ಣ ಸೂಪರ್ ಸ್ಟಾರ್ (suvarna superstar) ಕಾರ್ಯಕ್ರಮವನ್ನು ಶಾಲಿನಿ (Super Star Shalini) ನಡೆಸಿಕೊಡುತ್ತಿದ್ದಾರೆ. ಈ ಶೋ ನೋಡುವ ಬಹುತೇಕ ಮಹಿಳೆಯರಿಗೆ, ಶಾಲಿನಿ ಇವತ್ತು ಯಾವ ರೀತಿಯ ಬ್ಲೌಸ್‌ ಧರಿಸುತ್ತಾರೆ ಎಂಬುದೇ ಕುತೂಹಲ. ಆ ಕಾರ್ಯಕ್ರಮ ಮಹಿಳೆಯರದ್ದೇ ಆದರೂ ಕೂಡ ಶಾಲಿನಿ ಅವರ ಬ್ಲೌಸ್‌ (suvarna superstar shalini) ಪ್ರಮುಖ ಹೈಲೈಟ್‌. ಇದೀಗ ಶಾಲಿನಿ ಅವರು ಸಂದರ್ಶನವೊಂದರಲ್ಲಿ ತಮ್ಮ ಹಳೆಯ ದಿನಗಳ ಬಗ್ಗೆ ಮೆಲುಕು ಹಾಕಿದ್ದಾರೆ. 23 ವರ್ಷಗಳ ಹಿಂದೆ ‘ಪಾಪ ಪಾಂಡು’ (Anchor Shalini) ಧಾರಾವಾಹಿಯ ಪಾತ್ರದಿಂದ ಮೋಡಿ (papa pandu old serial) ಮಾಡಿದ್ದರು. ಸಿಹಿಕಹಿ ಚಂದ್ರು ಸಾರಥ್ಯದಲ್ಲಿ ಮೂಡಿಬಂದಿದ್ದ ಈ ಧಾರಾವಾಹಿ ಅವತ್ತಿನ ಕಾಲಕ್ಕೆ ಸೂಪರ್ ಹಿಟ್ ಆಗಿತ್ತು.

ಸತತ 5 ವರ್ಷಗಳ ಕಾಲ ಈ ಧಾರಾವಾಹಿ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಹೆಂಡತಿ ಅಂದ್ರೆ ಹೆದರುವ ಪುಕ್ಕಲು ಪಾಂಡು ಹಾಗೂ ಖಡಕ್ ಪತ್ನಿ ಶ್ರೀಮತಿ ನಡುವೆ ದಿನಕ್ಕೊಂದು ಕಥೆ ಹೇಳಿ ಧಾರವಾಹಿ ವೀಕ್ಷಕರನ್ನು ರಂಜಿಸಿತ್ತು. ಬಳಿಕ ಇದೇ ತರಹದ ಪಾತ್ರಗಳಿಗೆ ಬ್ರ್ಯಾಂಡ್ ಆಗಿಬಿಟ್ಟರು ಶಾಲಿನಿ. ಆ ಬಗ್ಗೆ ತಮಗೆ ಇನ್ನು ಬೇಸರವಿದೆ ಎಂದು ಶಾಲಿನಿ ಹೇಳಿಕೊಂಡಿದ್ದಾರೆ.

ಶಾಲಿನಿ ಮಾತನಾಡಿ ʻʻಶಿಖರ ಎನ್ನುವ ಧಾರಾವಾಹಿಯಲ್ಲಿ ನಾನು ಮತ್ತು ಸಿಹಿ ಕಹಿ ಚಂದ್ರು ಅವರು ಅಪ್ಪ ಮಗಳ ರೋಲ್‌ ಮಾಡುತ್ತಿದ್ದೇವು. ನಾನು ಮತ್ತು ಸಿಹಿ ಕಹಿ ಚಂದ್ರು ಅವರು ತುಂಬ ಪುಸ್ತಕಗಳನ್ನು ಓದುತ್ತಿದ್ದೆವು. ಅದರ ಬಗ್ಗೆ ಮಾತನಾಡುತ್ತಿದ್ದೆವು. ಒಂದು ದಿನ ಕಾಲ್‌ ಮಾಡಿ, ಒಂದು ಸೀರಿಯಲ್‌ ಮಾಡುತ್ತ ಇದ್ದೀನಿ. ಬರ್ತೀಯಾ ಎಂದು ಕೇಳಿದರು. ಆಮೇಲೆ ಹೋದೆ. ನಾನು ಹೋದಾಗ ಇದು ಕಾಮಿಡಿ ಸೀರಿಯಲ್ ಅಂದ್ರು. ನನಗೆ ಶಾಕ್ ಆಯಿತು. ಅಲ್ಲಿಯವರೆಗೂ ನಾನು ಗಂಭೀರ ಪಾತ್ರಗಳಲ್ಲೇ ಹೆಚ್ಚು ನಟಿಸಿದ್ದೆ. ನನಗೆ ಕಾಮಿಡಿ ಬರಲ್ಲ ಎಂದೆ. ನಿನಗೆ ಬರುತ್ತೆ ಮಾಡು ಎಂದರು. ಆಡಿಷನ್ ಬಳಿಕ ನೀನು ಸೆಲೆಕ್ಟ್ ಆಗಿದ್ದೀಯಾ. ನೀನೇ ಲೀಡ್ ರೋಲ್, ಶ್ರೀಮತಿ ಅಂತ ಪಾಂಡು ಹೆಂಡಿತಿ ಪಾತ್ರ ಎಂದುಬಿಟ್ಟರುʼʼಎಂದರು.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ʻʻಪಾಪ ಪಾಂಡು ದಿನ ಬರುತ್ತೇ ಎಂದರು. ಗಂಡನ ಬಳಿ ಬಂದು ಹೇಳಿದೆ. ಪಾಪ ಪಾಂಡು ಹೆಸರು ಕೇಳಿ ಬೇಡ ಅಂದರು. 25 ದಿನ ಕೆಲಸ ಅಂದೆ. 2000 ಅಲ್ಲಿ ಆಫೀಸ್‌ ಕೆಲಸಕ್ಕೆ ಹೋಗೊ ತರ ಹೋಗ್ತಿದ್ದೆ. ಒಳ್ಳೆಯ ಸಂಬಳ ಕೂಡ ಇತ್ತು. ಸಿದ್ಲಿಂಗು ಡೈರೆಕ್ಟರ್ ವಿಜಯಪ್ರಸಾದ್ ಆಗ ಧಾರಾವಾಹಿ ನಿರ್ದೇಶಿಸುತ್ತಿದ್ದರು. ದಿನಕ್ಕೆ 1000 ರೂಪಾಯಿಯಿಂದ ಆರಂಭಿಸಿ ಮುಂದೆ ಹೋಗ್ತಾ 1700 ರೂಪಾಯಿವರೆಗೆ ಸಂಭಾವನೆ ಪಡೆಯುತ್ತಿದ್ದೆ. ಬರೋಬ್ಬರಿ 1000ಕ್ಕೂ ಅಧಿಕ ಎಪಿಸೋಡ್‌ಗಳಲ್ಲಿ ಧಾರಾವಾಹಿ ಪ್ರಸಾರವಾಯಿತು.5 ವರ್ಷಗಳ ಕಾಲ ಕಾಮಿಡಿ ಪಾತ್ರದಲ್ಲಿ ನೋಡಿದವರು ಬಳಿಕ ಗಂಭೀರ ಪಾತ್ರದಲ್ಲಿ ನೋಡಲು ಇಷ್ಟಪಡಲಿಲ್ಲ. ಆ ರೀತಿ ಸಂಪೂರ್ಣವಾಗಿ ನನ್ನನ್ನು ಹಾಸ್ಯಪಾತ್ರಕ್ಕೆ ಸೀಮಿತವಾಗಿ ಬಿಟ್ಟೆʼʼಎಂದರು.

Continue Reading

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿ ‘ಭಾಗ್ಯಲಕ್ಷ್ಮೀ’; ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Kannada Serials TRP: ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

VISTARANEWS.COM


on

Kannada Serials TRP TOP 5 bhagyalakshmi puttakkana makkalu number 1
Koo

ಬೆಂಗಳೂರು: 30ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಎನ್ನುವುದು ವಿಶೇಷ.ಈ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

‘ಲಕ್ಷ್ಮೀ ನಿವಾಸ’

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಜನ ಮೆಚ್ಚುಗೆ ಪಡೆದಿದೆ. ವಿಶೇಷ ಎಂದರೆ ನಗರ ಭಾಗದ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿಯನ್ನು ಹಿಂದಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆಯುತ್ತಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

‘ಸೀತಾ ರಾಮ’ ಧಾರಾವಾಹಿ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈಗಾಗಲೇ ಸೀತಾ ಹಾಗೂ ರಾಮ್ ಮದುವೆ ನೆರವೇರಿದೆ. ಈ ಕಾರಣಕ್ಕೆ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಮುನ್ನುಗ್ಗುತ್ತಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ʻಭಾಗ್ಯಲಕ್ಷ್ಮೀ’

ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದ ಧಾರಾವಾಹಿಗಳ ಪೈಕಿ ಸ್ಥಾನ ಪಡೆದ ಏಕೈಕ ಧಾರಾವಾಹಿ ಇದಾಗಿದೆ.

Continue Reading

ಸಿನಿಮಾ

Actor Jaggesh: ಕನ್ನಡ ಚಿತ್ರರಂಗದ ಈಗಿನ ಸ್ಥಿತಿಗತಿ ಕಂಡು ಕಣ್ಣೀರಿಟ್ಟ ನವರಸ ನಾಯಕ ಜಗ್ಗೇಶ್‌!

Actor Jaggesh: ಇದೀಗ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದ ಪ್ರಸ್ತುತ ದಿನಗಳ ಬಗ್ಗೆ ಕಣ್ಣೀರು ಹಾಕಿದ್ದಾರೆ. ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ಜಡ್ಜ್ ಆಗಿರುವ ಜಗ್ಗೇಶ್, ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಈಗಿನ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಲೇ ಕಣ್ಣೀರಿಟ್ಟರು.

VISTARANEWS.COM


on

Actor Jaggesh tears after seeing the current state of Kannada film industry
Koo

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ (Actor Jaggesh) `ರಂಗನಾಯಕ’ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಬಹಳ ನಿರೀಕ್ಷೆಗಳಿದ್ದವು ಆದರೆ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿಲ್ಲ. ಬಳಿಕ ನಟ ಜಗ್ಗೇಶ್, ಸಿನಿಮಾ ಬಗ್ಗೆ ಕ್ಷಮೆ ಸಹ ಕೇಳಿದ್ದರು. ಇದೀಗ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದ ಪ್ರಸ್ತುತ ದಿನಗಳ ಬಗ್ಗೆ ಕಣ್ಣೀರು ಹಾಕಿದ್ದಾರೆ. ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ಜಡ್ಜ್ ಆಗಿರುವ ಜಗ್ಗೇಶ್, ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಈಗಿನ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಲೇ ಕಣ್ಣೀರಿಟ್ಟರು.

ʻʻಎಲ್ಲರೂ ಒಳ್ಳೆಯ ಸಿನಿಮಾಗಳನ್ನೇ ಮಾಡುತ್ತಿದ್ದಾರೆ. ಯಾರೂ ಕೆಟ್ಟ ಸಿನಿಮಾ ಮಾಡಬೇಕು ಎಂದುಕೊಂಡು ಬರುವುದಿಲ್ಲ. ಪೇಪರ್‌ಗೆ ಒಂದು ಜಾಹೀರಾತು ನೀಡುತ್ತಾರೆ. ಎಲ್ಲ ಮಾಡುತ್ತಾರೆ. ಆದರೆ ಚಿತ್ರಮಂದಿರಗಳಲ್ಲಿ ಜನರೇ ಇಲ್ಲ ಅಂದಾಗ ಕನ್ನಡ ಚಿತ್ರರಂಗವೇ ಹೀಗಾ? ಎಂದರೆ ಖಂಡಿತ ಇಲ್ಲ. ಏನಾಗುತ್ತಿದೆ ಚಿತ್ರರಂಗಕ್ಕೆ ಅರ್ಥವಾಗುತ್ತಿಲ್ಲ. ಹೀಗೆ ಆದರೆ ಹೇಗೆ ಸಿನಿಮಾ ಮಾಡಬೇಕು ಅರ್ಥವಾಗುತ್ತಿಲ್ಲ’ ಎಂದಿದ್ದಾರೆ.

ʻʻಅಕ್ಷಯ್‌ ಕುಮಾರ್‌ ಕೋಟ್ಯಂತರ ಹಣವನ್ನು ಹಾಕುತ್ತಿದ್ದಾರೆ. ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಅವರಂತೂ ಡಿಸಾಸ್ಟರ್ ಆಗಿಬಿಟ್ಟಿದ್ದಾರೆ. ಇಡೀ ಭಾರತದಲ್ಲಿ ಸಿನಿಮಾ ಎಂಬುದು ಸತ್ತು ಹೋಗುತ್ತಿದೆ. ಈಗೆಲ್ಲ ಹೇಗೆ ಆಗಿಬಿಟ್ಟಿದೆಯೆಂದರೆ ಯಾರು 200 ಕೋಟಿ ರೂಪಾಯಿ ಹಾಕಿ ಸಿನಿಮಾ ಮಾಡುತ್ತಾರೋ ಅದಷ್ಟೆ ಸಿನಿಮಾ ಎಂಬಂತೆ ಆಗಿಬಿಟ್ಟಿದೆ. ಯಾರು ಒಂದೊಳ್ಳೆ ಕತೆ ಮಾಡಿ, ಸಣ್ಣ ಸಿನಿಮಾ ಮಾಡುತ್ತಾರೋ ಅದು ಸಿನಿಮಾ ಅಲ್ಲ ಎಂಬಂತೆ ಆಗಿಬಿಟ್ಟಿದೆ ಪರಿಸ್ಥಿತಿ. ಹೀಗಾದರೆ ಉಳಿದವರು ಬದುಕುವುದು ಹೇಗೆ’ ಎಂದು ಜಗ್ಗೇಶ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ʻʻನನ್ನ ಅಣ್ಣತಮ್ಮಂದಿರು, ಒಡಹುಟ್ಟಿದ್ದವರು ಸಿನಿಮಾ ರಿಲೀಸ್‌ ಆಗುವಾಗ ಇದು ದರಿದ್ರು ಸಿನಿಮಾ, ವೇಸ್ಟ್‌ ಎಂದು ಶ್ರಮ ಹಾಕಿ ಇನ್ನೊಬ್ಬರ ಶ್ರಮವನ್ನು ಹಾಳು ಮಾಡುತ್ತಾರೆ. ಅದನ್ನ ನೋಡಿ ಜನರು ಬರುವರಿದ್ದಾರೆ. ಎಲ್ಲರೂ ಚೆನ್ನಾಗಿರಲಿ. ಯಾರಿಗೂ ಕೆಟ್ಟದ್ದನ್ನು ಬಯಸೋದು ಬೇಡ. ಬೇಜಾರಾಗಿ ಸಮಯವೇ ಹೋಗುತ್ತಿಲ್ಲ ಎಂದು ಯುಟ್ಯೂಬ್‌ನಲ್ಲಿ ಒಂದು ಸೀನ್‌ ನೋಡಿದರೂ ಅದುವೇ ಸಿನಿಮಾ. ನಾನು ಭಾವುಕನಾದೆ ಯಾಕೆ ಅಂದರೆ ನನ್ನ ಅಣು, ನನ್ನ ಬದುಕು, ನನ್ನ ಕನಸು, ನನ್ನ ಬಟ್ಟೆ, ಊಟ ಸಿನಿಮಾ ಕೊಟ್ಟಿದೆ. ಹಾಗಾಗಿ ನಾನು ಸಿನಿಮಾವನ್ನು ತಾಯಿ ತರ ಪ್ರೀತಿಸುತ್ತೇನೆʼʼಎಂದು ಕಣ್ಣೀರಿಟ್ಟರು.

Continue Reading

ಕಿರುತೆರೆ

Sathya serial kannada: ಶೀಘ್ರದಲ್ಲೇ ಅಂತ್ಯ ಹಾಡಲಿದೆಯಂತೆ ʻಸತ್ಯʼ ಧಾರಾವಾಹಿ; ಬರ್ತಿದೆ ಹೊಸ ಸೀರಿಯಲ್‌!

Sathya serial kannada: ಸತ್ಯ ಧಾರಾವಾಹಿಯಲ್ಲಿ  ಸತ್ಯ ಪೊಲೀಸ್ ಅಧಿಕಾರಿಯಾಗಿ ಒಂದಲ್ಲ ಒಂದು ಕೇಸ್‌ಗಳನ್ನು ಪರಿಹಾರ ಮಾಡುತ್ತಾಳೆ. , ಕಾರ್ತಿಕ್‌ನನ್ನು ಮದುವೆಯಾಗಬೇಕಿದ್ದ ಸತ್ಯಾಳ ಅಕ್ಕ ದಿವ್ಯಾ ಮದುವೆ ದಿನ ಬೇರೊಬ್ಬನ ಜತೆ ಓಡಿ ಹೋದ ಕಾರಣ, ತಾನೇ ಮದುವೆಯಾಗುವಂತಹ ಸ್ಥಿತಿ ನಿರ್ಮಾಣ ಆಗಿ, ಕೊನೆಗೆ ಮದುವೆಯಾಗಿ, ಗಂಡ, ಅತ್ತೆ ಹಾಗೂ ಮನೆಯವರೆಲ್ಲರ ತಾತ್ಸಾರಕ್ಕೆ ಗುರಿಯಾಗಿ ಎಲ್ಲವನ್ನೂ ಎದುರಿಸಿ, ಒಳ್ಳೆಯ ಗೃಹಿಣಿಯಾಗಿ ಬಾಳುತ್ತಾಳೆ. ಇದೀಗ ಸತ್ಯ ಗರ್ಭಿಣಿ.

VISTARANEWS.COM


on

Sathya serial kannada end soon A new serial has arrived
Koo

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಸತ್ಯ ಧಾರಾವಾಹಿ ಇನ್ನೇನು ಕೊನೆಯಾಗಲಿದೆ ಎನ್ನುವ ಸುದ್ದಿ ಬಂದಿದೆ.

ಈಗಾಗಲೇ ‘ಅಣ್ಣಯ್ಯ’ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಲಿದ್ದು, ಆದಷ್ಟು ಬೇಗ ಹೊಸ ಧಾರಾವಾಹಿ ಪ್ರಸಾರ ಆಗಲಿದೆ. ‘ಸತ್ಯ’ ಧಾರಾವಾಹಿಯು ಅಂತ್ಯ ಆಗಲಿದೆ ಎನ್ನಲಾಗಿದೆ.

2020 ಡಿಸೆಂಬರ್‌ನಿಂದ ಈ ಧಾರಾವಾಹಿ ಪ್ರಸಾರ ಆಗುತ್ತಿದ್ದು, ಆರಂಭದ ವಾರಗಳಲ್ಲಿ ಈ ಧಾರಾವಾಹಿ ಟಾಪ್ 5 ಸ್ಥಾನದಲ್ಲಿತ್ತು. ಇತ್ತೀಚೆಗೆ ಈ ಧಾರಾವಾಹಿಯ ಟಿಆರ್‌ಪಿ ಕಡಿಮೆ ಆಗಿತ್ತು.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

 ಗೌತಮಿ ಜಾದವ್ ಅಥವಾ ಸಾಗರ್ ಬಿಳಿ ಗೌಡ ಬಿಗ್‌ಬಾಸ್‌ಗೆ ತೆರಳಲಿದ್ದಾರೆ ಹಾಗಾಗಿ ಸೀರಿಯಲ್ ಕಥೆ ಮುಗಿಸಲಿದ್ದಾರೆ ಎಂದು ಸಹ ಹೇಳಿದ್ದಾರೆ. ಆದರೆ ಯಾವುದೂ ಅಧಿಕೃತವಾಗಿ ಹೇಳಿಕೆ ಬಂದಿಲ್ಲ. 

ಸತ್ಯ ಧಾರಾವಾಹಿಯಲ್ಲಿ  ಸತ್ಯ ಪೊಲೀಸ್ ಅಧಿಕಾರಿಯಾಗಿ ಒಂದಲ್ಲ ಒಂದು ಕೇಸ್‌ಗಳನ್ನು ಪರಿಹಾರ ಮಾಡುತ್ತಾಳೆ. , ಕಾರ್ತಿಕ್‌ನನ್ನು ಮದುವೆಯಾಗಬೇಕಿದ್ದ ಸತ್ಯಾಳ ಅಕ್ಕ ದಿವ್ಯಾ ಮದುವೆ ದಿನ ಬೇರೊಬ್ಬನ ಜತೆ ಓಡಿ ಹೋದ ಕಾರಣ, ತಾನೇ ಮದುವೆಯಾಗುವಂತಹ ಸ್ಥಿತಿ ನಿರ್ಮಾಣ ಆಗಿ, ಕೊನೆಗೆ ಮದುವೆಯಾಗಿ, ಗಂಡ, ಅತ್ತೆ ಹಾಗೂ ಮನೆಯವರೆಲ್ಲರ ತಾತ್ಸಾರಕ್ಕೆ ಗುರಿಯಾಗಿ ಎಲ್ಲವನ್ನೂ ಎದುರಿಸಿ, ಒಳ್ಳೆಯ ಗೃಹಿಣಿಯಾಗಿ ಬಾಳುತ್ತಾಳೆ. ಇದೀಗ ಸತ್ಯ ಗರ್ಭಿಣಿ.

 ‘ಸಿಂಧುರಾ’ ಧಾರಾವಾಹಿಯ ಅಧಿಕೃತ ರಿಮೇಕ್ ಇದಾಗಿದೆ. ಇನ್ನು ಈ ಧಾರಾವಾಹಿಯು ಆ ನಂತರದಲ್ಲಿ 6 ಭಾಷೆಗಳಲ್ಲಿ ರಿಮೇಕ್ ಆಗಿದೆ. 

ಗೌತಮಿ ಜಾಧವ್, ಸಾಗರ್ ಬಿಳಿಗೌಡ, ರಶ್ಮಿ, ಶಾಲಿನಿ, ಮಾಲತಿ ಸರ್‌ದೇಶಪಾಂಡೆ, ಪ್ರಿಯಾಂಕಾ ಶಿವಣ್ಣ, ಗಿರಿಜಾ ಲೋಕೇಶ್, ಶ್ರೀನಿವಾಸ್ ಪ್ರಭು ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಸ್ವಪ್ನಾ ಕೃಷ್ಣ ಅವರು ಈ ಧಾರಾವಾಹಿಯ ನಿರ್ದೇಶನ, ನಿರ್ಮಾಣ ಮಾಡಿದ್ದಾರೆ.  ಸತ್ಯಾಗೆ ಮಗುವಾಗುವ ಮೂಲಕ ಸೀರಿಯಲ್‌ಗೆ ಹ್ಯಾಪಿ ಎಂಡಿಂಗ್ ಕೊಡುತ್ತಾರೆ ಎಂದು ವರದಿಯಾಗಿದೆ.

Continue Reading
Advertisement
Filmfare South 2024 mollywood tollywood 69th Filmfare Awards
South Cinema19 mins ago

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; ತೆಲುಗು, ತಮಿಳು ಹಾಗೂ ಮಲಯಾಳಂ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

Amith Shah
ದೇಶ25 mins ago

Amit Shah: 2029ರ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು, ಕಾಂಗ್ರೆಸ್‌ ಪ್ರತಿಪಕ್ಷದಲ್ಲೇ; ಅಮಿತ್‌ ಶಾ ಭವಿಷ್ಯ

HD Deve Gowda
ದೇಶ26 mins ago

HD Deve Gowda: ದೆಹಲಿ ಮೆಟ್ರೋದಲ್ಲಿ ಸಂಚರಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಕ್ರೀಡೆ30 mins ago

Paris Olympics: ಶೂಟೌಟ್​ನಲ್ಲಿ ಗೆದ್ದು ಸೆಮಿಗೆ ಲಗ್ಗೆಯಿಟ್ಟ ಭಾರತ; ಒಲಿಂಪಿಕ್ಸ್​ನಿಂದ ಗ್ರೇಟ್​ ಬ್ರಿಟನ್ ಕಿಕ್​ ಔಟ್​

ಕರ್ನಾಟಕ56 mins ago

Officer Dismissed: ಸುಳ್ಳು ದಾಖಲೆ ನೀಡಿ ನೇಮಕ; ಸಹಾಯಕ ತೋಟಗಾರಿಕೆ ಅಧಿಕಾರಿ ವಜಾ

Dhruva Sarja martin trailer Out
ಸ್ಯಾಂಡಲ್ ವುಡ್58 mins ago

Dhruva Sarja : ʻಮಾರ್ಟಿನ್’ ಟ್ರೈಲರ್ ಬಿಡುಗಡೆ: ಧ್ರುವ ಸರ್ಜಾ ಅಭಿಮಾನಿಗಳ ಅಬ್ಬರ ಬಲು ಜೋರು!

Drowned in water
ಬೆಳಗಾವಿ1 hour ago

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

PSI Parashuram Case
ಕರ್ನಾಟಕ2 hours ago

PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

Wayanad Landslide
ದೇಶ2 hours ago

Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

Vastu Tips
ಧಾರ್ಮಿಕ2 hours ago

Vastu Tips: ಮನೆ ಸಂತೋಷದ ತಾಣವಾಗಬೇಕೆಂದರೆ ಮಲಗುವ ಕೋಣೆ ಹೀಗಿರಲಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌