Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು - Vistara News

ವೈರಲ್ ನ್ಯೂಸ್

Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

Abu Salem: 1993ರ ಮುಂಬೈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂ ನನ್ನು ಶನಿವಾರ ದೆಹಲಿಯಿಂದ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್‌ಗೆ ರೈಲಿನಲ್ಲಿ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಬಳಿಕ ಪೊಲೀಸ್ ವ್ಯಾನ್‌ನಲ್ಲಿ ಆತನನ್ನು ನಾಸಿಕ್ ರಸ್ತೆಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಮನ್ಮಾಡ್ ರೈಲ್ವೆ ನಿಲ್ದಾಣಕ್ಕೆ ಅಬು ಸಲೇಂನನ್ನು ಕರೆದುಕೊಂಡು ಬರುವ ವಿಚಾರವನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿತ್ತು.

VISTARANEWS.COM


on

Abu Salem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: 1993ರ ಮುಂಬೈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂ (Abu Salem)ನನ್ನು ಶನಿವಾರ ದೆಹಲಿಯಿಂದ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್‌ (Manmad)ಗೆ ರೈಲಿನಲ್ಲಿ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಬಳಿಕ ಪೊಲೀಸ್ ವ್ಯಾನ್‌ನಲ್ಲಿ ಆತನನ್ನು ನಾಸಿಕ್ ರಸ್ತೆಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯದಲ್ಲಿ ವೈರಲ್‌ ಆಗಿದೆ (Viral Video).

ಮನ್ಮಾಡ್ ರೈಲ್ವೆ ನಿಲ್ದಾಣಕ್ಕೆ ಅಬು ಸಲೇಂನನ್ನು ಕರೆದುಕೊಂಡು ಬರುವ ವಿಚಾರವನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿತ್ತು. ಆದರೆ ನವದೆಹಲಿ-ಬೆಂಗಳೂರು-ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಿಂದ ಮನ್ಮಾಡ್‌ಗೆ ಸ್ಟೇಷನ್‌ನಲ್ಲಿ ಅಬು ಸಲೇಂ ಇಳಿದಾಗ ಜನ ಸಮೂಹವೇ ನೆರೆದಿತ್ತು.

ಬಾಂಬ್ ಸ್ಫೋಟದಲ್ಲಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಸಲೇಂ ಕಳೆದ ತಿಂಗಳು ‘ಸುರಕ್ಷತಾ ಕಾರಣಗಳನ್ನು’ ಉಲ್ಲೇಖಿಸಿ ತಲೋಜಾ ಕೇಂದ್ರ ಕಾರಾಗೃಹದಿಂದ ನಾಸಿಕ್ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸುವುದನ್ನು ತಡೆಯಲು ಪ್ರಯತ್ನಿಸಿದ್ದ. ಈ ಬಗ್ಗೆ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಆರಂಭಿಕ ಮೇಲ್ಮನವಿಯನ್ನು ಸೆಷನ್ಸ್ ನ್ಯಾಯಾಲಯವು ಜೂನ್ 25ರಂದು ನಿರಾಕರಿಸಿತ್ತು. ಆದರೆ ನ್ಯಾಯಾಲಯವು ಜುಲೈ 3ರವರೆಗೆ ವರ್ಗಾವಣೆಯನ್ನು ವಿಳಂಬಗೊಳಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು.

ಪೋರ್ಚುಗಲ್‌ನಲ್ಲಿ ಆಶ್ರಯ ಪಡೆದಿದ್ದ ಪಾತಕಿ

ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಗ್ಯಾಂಗ್‌ಸ್ಟರ್‌ ಅಬು ಸಲೇಂ ಪೋರ್ಚುಗಲ್‌ನಲ್ಲಿ ಆಶ್ರಯ ಪಡೆದಿದ್ದ. ಆತನನ್ನು ಅಲ್ಲಿಂದ ಗಡಿಪಾರು ಮಾಡಿ ತರಲು ಕೇಂದ್ರ ಸರ್ಕಾರ ಹರಸಾಹಸವನ್ನೇ ನಡೆಸಿತ್ತು. ಕೊನೆಗೆ ಪೋರ್ಚುಗಲ್‌ ಸರ್ಕಾರದೊಂದಿಗಿನ ಸಂಧಾನದಲ್ಲಿ ಆರೋಪಿಗೆ 25 ವರ್ಷಕ್ಕಿಂತ ಹೆಚ್ಚು ಅವಧಿಯ ಶಿಕ್ಷೆ ವಿಧಿಸುವುದಿಲ್ಲ, 25 ವರ್ಷದ ಶಿಕ್ಷೆಯ ಬಳಿಕ ಬಂಧಮುಕ್ತಗೊಳಿಸಲಾಗುವುದು ಎಂದು ವಾಗ್ದಾನ ನೀಡಲಾಗಿತ್ತು. ಜತೆಗೆ ಆತನಿಗೆ ಮರಣದಂಡನೆ ಶಿಕ್ಷೆ ನೀಡುವುದಿಲ್ಲ ಎಂದು ಭರವಸೆ ನೀಡಲಾಗಿತ್ತು. ಹೀಗಾಗಿ 2005ರ ನವೆಂಬರ್‌ 5ರಂದು ಅಬು ಸಲೇಂನನ್ನು ಭಾರತಕ್ಕೆ ಕರೆ ತರಲಾಗಿತ್ತು. ಈ ವಾಗ್ದಾನದ ಅವಧಿ 2030ರವರೆಗೆ ಜಾರಿಯಲ್ಲಿರುತ್ತದೆ.

ಈ ನಡುವೆ 1995ರಲ್ಲಿ ನಡೆದ ಮುಂಬೈ ಮೂಲದ ಬಿಲ್ಡರ್‌ ಪ್ರದೀಪ್‌ ಜೈನ್‌ ಅವರ ಕೊಲೆಗೆ ಸಂಬಂಧಿಸಿ ಟಾಡಾ ಕೋರ್ಟ್‌ 2005ರ ಫೆಬ್ರವರಿ 25ರಂದು ತೀರ್ಪು ನೀಡಿದೆ. ಇದರಲ್ಲಿ ಸಲೇಂ ಮತ್ತು ಆತನ ಚಾಲಕ ಮೆಹದಿ ಹಸನ್‌ಗೆ ಜೀವನಪೂರ್ತಿ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: ಅಬು ಸಲೇಂನನ್ನು ಜೀವನಪೂರ್ತಿ ಜೈಲಲ್ಲಿ ಇರಿಸುವಂತಿಲ್ಲ, 25 ವರ್ಷದ ಬಳಿಕ ಬಿಡುಗಡೆ ಮಾಡಲೇಬೇಕೆಂದ ಸುಪ್ರೀಂ

ಇದನ್ನು ಪ್ರಶ್ನಿಸಿ ಅಬು ಸಲೇಂ ಎರಡು ವರ್ಷಗಳ ಹಿಂದೆ ಸುಪ್ರೀಂಕೋರ್ಟ್‌ ಮೊರೆ ಹೊಕ್ಕಿದ್ದ. ಇದನ್ನು ಪರಿಗಣಿಸಿದ ಕೋರ್ಟ್‌ ಮಹತ್ವದ ತೀರ್ಪನ್ನು ನೀಡಿ, ಕೇಂದ್ರ ಸರಕಾರವು ಪೋರ್ಚುಗಲ್‌ ಸರಕಾರಕ್ಕೆ ನೀಡಿರುವ ವಾಗ್ದಾನವನ್ನು ಮುರಿಯುವಂತಿಲ್ಲ. ಶಿಕ್ಷೆಯ ಅವಧಿ ಪೂರ್ಣಗೊಳ್ಳುತ್ತಿದ್ದಂತೆಯೇ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ವಚನ ಬದ್ಧತೆ ಮತ್ತು ಸಂವಿಧಾನದ 72ನೇ ವಿಧಿಯ ಅಡಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಸರಕಾರ ರಾಷ್ಟ್ರಪತಿಗಳ ಸಲಹೆಯನ್ನು ಕೋರಬಹುದು ಎಂದು ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಎಂ.ಎಂ.ಸುಂದರೇಶ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠ ಹೇಳಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಪೋಲ್ ವಾಲ್ಟ್ ‌ಪಟುವಿಗೆ ಮರ್ಮಾಘಾತ! ಪದಕ ತಪ್ಪಿಸಿದ ಮರ್ಮಾಂಗ! ವಿಡಿಯೊ ನೋಡಿ

Paris Olympic 2024 : ಫ್ರೆಂಚ್ ಪೋಲ್ ವಾಲ್ಟರ್ ಆಂಥೋನಿ ಅಮ್ಮಿರಾಟಿ ವೈರಲ್ ಆದ ಕ್ರೀಡಾಪಟು. ಯಾಕೆಂದರೆ ಸ್ಪರ್ಧೆ ಅವರು ಬಯಸಿದ ರೀತಿಯಲ್ಲಿ ನಡೆಯಲಿಲ್ಲ. . ಸ್ಟೇಡ್ ಡಿ ಫ್ರಾನ್ಸ್​ನಲ್ಲಿ ಕಿಕ್ಕಿರಿದ ಪ್ರೇಕ್ಷಕರ ಮುಂದೆ ನಡೆದ ಸ್ಪರ್ಧೆಯಲ್ಲಿ ಆಂಥೋನಿ ಆಗಸ್ಟ್ 3 ರ ಶನಿವಾರ ಪುರುಷರ ಪೋಲ್ ವಾಲ್ಸ್​​ ಫೈನಲ್​ನಲ್ಲಿ ಸ್ಥಾನವನ್ನು ಕಳೆದುಕೊಂಡರು. ಅವರ ಸೋಲು ಕೆಲವೇ ಇಂಚುಗಲಿಂದ ಆಗಿತ್ತು. ಆದರೆ, ಅದು ಮರ್ಮಾಂಗದ ಇಂಚಿನಿಂದ ಎಂಬುದು ದೊಡ್ಡ ವಿಷಯವಾಯಿತು.

VISTARANEWS.COM


on

Paris Olympic 2024
Koo

ಬೆಂಗಳೂರು: ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ (Paris Olympics 2024) ಆತಿಥೇಯ ದೇಶದ ಪೋಲ್​ವಾಲ್ಡ್​ ಪಟುವೊಬ್ಬರು ತಮ್ಮ ಮರ್ಮಾಂಗದ ಉಬ್ಬುವಿಕೆಯ ಕಾರಣಕ್ಕೆ ಸ್ಪರ್ಧೆಯಲ್ಲಿ ಪದಕ ಗೆಲ್ಲುವ ಅವಕಾಶ ಕಳೆದುಕೊಂಡಿದ್ದಾರೆ. ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸುವ ವೇಳೆ ಅವರ ಮರ್ಮಾಂಗವು ಬಾರ್​ಗೆ ತಾಗಿದ್ದ ಕಾರಣ ಫೈನಲ್ ಸುತ್ತಿಗೆ ಅರ್ಹತೆ ಪಡೆಯಲು ವಿಫಲಗೊಂಡರು. ಅರ್ಹತೆ ಪಡೆಯದೇ ಇರುವುದು ಸಾಮಾನ್ಯ ವಿಷಯವಾಗಿದ್ದರೂ, ಮರ್ಮಾಂಗದ ಕಾರಣಕ್ಕೆ ಅವರು ಅವಕಾಶ ಕಳೆದುಕೊಂಡಿದ್ದು ವೈರಲ್ ಸುದ್ದಿಯಾಯಿತು.

ಫ್ರೆಂಚ್ ಪೋಲ್ ವಾಲ್ಟರ್ ಆಂಥೋನಿ ಅಮ್ಮಿರಾಟಿ ವೈರಲ್ ಆದ ಕ್ರೀಡಾಪಟು. ಯಾಕೆಂದರೆ ಸ್ಪರ್ಧೆ ಅವರು ಬಯಸಿದ ರೀತಿಯಲ್ಲಿ ನಡೆಯಲಿಲ್ಲ. . ಸ್ಟೇಡ್ ಡಿ ಫ್ರಾನ್ಸ್​ನಲ್ಲಿ ಕಿಕ್ಕಿರಿದ ಪ್ರೇಕ್ಷಕರ ಮುಂದೆ ನಡೆದ ಸ್ಪರ್ಧೆಯಲ್ಲಿ ಆಂಥೋನಿ ಆಗಸ್ಟ್ 3 ರ ಶನಿವಾರ ಪುರುಷರ ಪೋಲ್ ವಾಲ್ಸ್​​ ಫೈನಲ್​ನಲ್ಲಿ ಸ್ಥಾನವನ್ನು ಕಳೆದುಕೊಂಡರು. ಅವರ ಸೋಲು ಕೆಲವೇ ಇಂಚುಗಲಿಂದ ಆಗಿತ್ತು. ಆದರೆ, ಅದು ಮರ್ಮಾಂಗದ ಇಂಚಿನಿಂದ ಎಂಬುದು ದೊಡ್ಡ ವಿಷಯವಾಯಿತು.

5.70 ಮೀಟರ್ ಎತ್ತರ ಹಾರುವಲ್ಲಿ ಅವರು ಮೂರು ಬಾರಿ ವಿಫಲರಾದರು. ಅದರಲ್ಲೂ ಎರಡನೇ ಪ್ರಯತ್ನದಲ್ಲಿ 21 ವರ್ಷದ ಆಟಗಾರನ ಮರ್ಮಾಂಗದ ಉಬ್ಬು ಬಾರ್ ಗೆ ತಾಗಿತು.. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ವೈರಲ್ ವೀಡಿಯೊದಲ್ಲಿ, ಆಂಥೋನಿ ಅವರ ಕಾಲುಗಳು ಆರಂಭದಲ್ಲಿ ಬಾರ್​ಗೆ ತಾಗಿದ್ದನ್ನು ತೋರಿಸುತ್ತಿತ್ತು. ಆದರೆ ನಂತರ ಶಿಶ್ನವು ಬಾರ್​ಗೆ ತಾಗಿದಾಗ ಸಂಪೂರ್ಣವಾಗಿ ಅದು ಕೆಳಕ್ಕೆ ಬಿತ್ತು.

ಆಂಥೋನಿ ಅಮ್ಮಿರಾಟಿ ಅವರು ಮ್ಯಾಚ್ ಮೇಲೆ ಬೀಳುವಾಗ ನೋವಿನಿಂದ ಬಳಲಿದ್ದು ಗೊತ್ತಾಯಿತು. ಹೀಗಾಗಿ ಮರ್ಮಾಂಗಕ್ಕೆ ಬಲವಾಗಿ ಹೊಡೆದಂತೆ ಬಿದ್ದಂತೆ ಕಂಡಿತು. ಪುರುಷತ್ವದ ಉಬ್ಬಿನ ಕಾರಣಕ್ಕೆ ಅವಕಾಶ ಕಳೆದುಕೊಂಡ ಪೋಲ್ ವಾಲ್ಟರ್ ಎಂಬ ಅಪಖ್ಯಾತಿಗೆ ಪಾತ್ರರಾದರು. 2016ರ ರಿಯೋ ಒಲಿಂಪಿಕ್ಸ್​ನಲ್ಲಿ ಜಪಾನ್​​ ಹಿರೋಕಿ ಒಗಿಟಾ ಅವರು ಮರ್ಮಾಗ ತಾಗಿದ್ದು ಸುದ್ದಿಯಾಗಿತ್ತು.

ಆಂಥೋನಿ ಅಮ್ಮಿರಾಟಿ ಮೂರು ಪ್ರಯತ್ನಗಳಲ್ಲಿ 5.70 ಮೀಟರ್ ವಾಲ್ಟ್ ಅನ್ನು ಪೂರ್ಣಗೊಳಿಸಲು ವಿಫಲರಾದರು ಮತ್ತು 15 ನೇ ಸ್ಥಾನ ಪಡೆದು 31 ಜನರ ಸ್ಪರ್ಧೆಯಿಂದ ಹೊರನಡೆದರು. 2022ರಲ್ಲಿ ವಿಶ್ವ ಅಂಡರ್-20 ಚಾಂಪಿಯನ್​​ಶಿಪ್​ ಗೆದ್ದಿದ್ದ ಆಂಥೋನಿ, ಅರ್ಹತೆ ಪಡೆಯಲು ಅಗ್ರ 12ರಲ್ಲಿ ಸ್ಥಾನ ಪಡೆಯಬೇಕಿತ್ತು.

ಇದನ್ನೂ ಓದಿ:Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

ಒಲಿಂಪಿಕ್ ಕನಸುಗಳು ಭಗ್ನಗೊಂಡಾಗ ಹೊರತಾಗಿಯೂ ಆಂಥೋನಿ ಅಮ್ಮಿರಾಟಿ ಸಾಮಾಜಿಕ ಮಾಧ್ಯಮದಲ್ಲಿ ಸೆನ್ಸೇಷನ್ ಆದರು. ದುರದೃಷ್ಟಕರ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ತೀಕ್ಷ್ಣ ಪ್ರತಿಕ್ರಿಯೆಗಳಿಗೆ ಕಾರಣವಾಯಿತು. ಜತೆಗೆ ಇದರಿಂದ ಅವರಿಗೆ ಆಗಿರುವ ಲಾಭವೇನೆಂದರೆ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಫಾಲೋಯರ್​ಗಳ ಸಂಖ್ಯೆ ಜಾಸ್ತಿಯಾಯಿತು.

ವಿಶ್ಲೇಷಕರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ವಿವರಿಸಲು ಹೆಣಗಾಡಿದರು. ಅದು ದುರದೃಷ್ಟಕರ ಎಂದರು. ಈ ದೃಶ್ಯವು ಹಾಸ್ಯಮಯ ಟೀಕೆಗಳನ್ನು ಹುಟ್ಟುಹಾಕಿದವು.

ನಿರೀಕ್ಷೆಯಂತೆ, ವಿಶ್ವ ದಾಖಲೆ ಹೊಂದಿರುವ ಸ್ವೀಡನ್​​ ಮೊಂಡೊ ಡುಪ್ಲಾಂಟಿಸ್ ತಮ್ಮ ಮೊದಲ ಪ್ರಯತ್ನದಲ್ಲಿ 5.75 ಮೀಟರ್ ದೂರವನ್ನು ಕ್ರಮಿಸುವ ಮೂಲಕ ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದರು. ನಾರ್ವೆಯ ಗುಟ್ಟೋರ್ಮ್ಸೆನ್ ಸೊಂಡ್ರೆ ಎರಡನೇ ಸ್ಥಾನ ಪಡೆದರೆ, ಗ್ರೀಸ್ ನ ಕರಲಿಸ್ ಎಮಾನೌಲಿ ಮೂರನೇ ಸ್ಥಾನ ಪಡೆದರು. ಪ್ರಾಸಂಗಿಕವಾಗಿ, ಯಾವುದೇ ಪೋಲ್ ವಾಲ್ಟರ್ಗಳು 5.80 ಮೀಟರ್ ಸ್ವಯಂ ಅರ್ಹತೆ ಪಡೆಯಲು ಹೋಗಲಿಲ್ಲ.

Continue Reading

ವೈರಲ್ ನ್ಯೂಸ್

Viral Video: ಉ.ಪ್ರ ಪೊಲೀಸರ ʼಟ್ರೀಟ್‌‌ಮೆಂಟ್ʼ ಹೇಗಿತ್ತು ನೋಡಿ! ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ಪುಂಡರು

ಕೋಚಿಂಗ್ ಸೆಂಟರ್ ಹೊರಗೆ ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ಮೂವರು ದುಷ್ಕರ್ಮಿಗಳಿಗೆ ಉತ್ತರ ಪ್ರದೇಶದ ಪೊಲೀಸರು ಸರಿಯಾಗಿ ಬುದ್ಧಿ ಕಳಿಸಿದ ಘಟನೆ ನಡೆದಿದೆ. ಕೋಚಿಂಗ್ ಸೆಂಟರ್ ನ ಹೊರಗೆ ಮೂವರು ದುಷ್ಕರ್ಮಿಗಳು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು, ಪೋಲೀಸರ ಟ್ರೀಟ್ ಮೆಂಟ್ ಬಳಿಕ ಆರೋಪಿಗಳಿಗೆ ನಡೆದಾಡಲೂ ಆಗುತ್ತಿಲ್ಲ ಎನ್ನುವ ದೃಶ್ಯವಾಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಮುಜಾಫರ್‌ನಗರ: ಕೋಚಿಂಗ್ ಸೆಂಟರ್‌ನ (coaching institute) ಹೊರಗೆ ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ದುಷ್ಕರ್ಮಿಗಳಿಗೆ ಪೊಲೀಸರು ಸರಿಯಾಗಿ ಬುದ್ಧಿ ಕಳಿಸಿದ ಘಟನೆ ಉತ್ತರ ಪ್ರದೇಶದ (uttarpradesh) ಮುಜಾಫರ್‌ನಗರದಲ್ಲಿ (Muzaffarnagar) ನಡೆದಿದೆ. ಕೋಚಿಂಗ್ ಸೆಂಟರ್ ನ ಹೊರಗೆ ಮೂವರು ದುಷ್ಕರ್ಮಿಗಳು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಮುಜಾಫರ್‌ನಗರದ ಗಾಂಧಿ ಕಾಲೋನಿಯಲ್ಲಿ ಕೋಚಿಂಗ್ ಸೆಂಟರ್‌ಗಳ ಸಂಖ್ಯೆ ಹೆಚ್ಚಾಗಿದೆ. ಇದು ಶಿಕ್ಷಣ ಕೇಂದ್ರವಾಗಿ ಮಾರ್ಪಟ್ಟಿದೆ. ಈ ಪ್ರದೇಶದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಪೊಲೀಸರು ಸುತ್ತುಮುತ್ತ ಗಸ್ತು ತಿರುಗುತ್ತಾರೆ. ಕಳೆದ ಕೆಲ ದಿನಗಳಿಂದ ಕನ್ವರ್ ಯಾತ್ರೆಯಲ್ಲಿ ಪೊಲೀಸರು ನಿರತರಾಗಿದ್ದರು. ಈ ಪರಿಸ್ಥಿತಿಯ ಲಾಭ ಪಡೆದ ಕೆಲವು ದುಷ್ಕರ್ಮಿಗಳು ಕೋಚಿಂಗ್ ಸೆಂಟರ್ ಹೊರಗೆ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಗಾಂಧಿ ಕಾಲೋನಿಯಲ್ಲಿ ಮೂವರು ಮುಸುಕುಧಾರಿಗಳು ಬೈಕ್‌ನಲ್ಲಿ ಆಗಮಿಸಿ ಮೋಹನ್ ಭಾಟಿಯಾ ಎಂಬವರ ಕೋಚಿಂಗ್ ಸೆಂಟರ್‌ನ ಹೊರಗೆ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದ್ದರು. ದುಷ್ಕರ್ಮಿಯೊಬ್ಬನನ್ನು ವಿದ್ಯಾರ್ಥಿನಿ ಅವಮಾನಿಸಿದ್ದಾಳೆ ಎಂದು ಆರೋಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಲೇ ಇದ್ದರು. ಅವರನ್ನು ಅವಮಾನಿಸುವಂಥ ಯಾವುದೇ ಕೆಲಸ ಮಾಡಿಲ್ಲ ಎಂದು ವಿದ್ಯಾರ್ಥಿನಿ ಮತ್ತೆ ಮತ್ತೆ ಹೇಳಿದ್ದಳು.

ಕ್ಷಮೆ ಕೇಳದಿದ್ದರೆ ಗುಂಡು ಹಾರಿಸುವುದಾಗಿಯೂ ಪುಂಡರು ಬೆದರಿಕೆ ಹಾಕಿದ್ದರು. ಈ ದಾರಿಯಲ್ಲಿ ಸಾಕಷ್ಟು ಮಂದಿ ಹಾದುಹೋಗುತ್ತಿದ್ದರೂ ಯಾರೂ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ದುಷ್ಕರ್ಮಿಗಳನ್ನು ತಡೆಯಲಿಲ್ಲ. ಕೊನೆಗೆ ವಿದ್ಯಾರ್ಥಿನಿ ಕ್ಷಮೆ ಕೇಳಿದ್ದರಿಂದ ದುಷ್ಕರ್ಮಿಗಳು ಸ್ಥಳದಿಂದ ಹೋಗಿದ್ದರು. ಇಡೀ ಘಟನೆ ಕೋಚಿಂಗ್ ಸೆಂಟರ್‌ನ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿತ್ತು. ವಿದ್ಯಾರ್ಥಿನಿ ತನ್ನ ತಂದೆ ಮತ್ತು ಸಹೋದರನನ್ನು ಕರೆಸಿ ಘಟನೆಯ ಬಗ್ಗೆ ಸಂಪೂರ್ಣವಾಗಿ ತಿಳಿಸಿದ್ದಳು.


ಇದನ್ನೂ ಓದಿ: Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

ಅವರು ದುಷ್ಕರ್ಮಿಗಳನ್ನು ಹುಡುಕಲು ಪ್ರಾರಂಭಿಸಿದರು ಮತ್ತು ಗಾಂಧಿ ಕಾಲೋನಿಯಲ್ಲಿ ಪತ್ತೆ ಹಚ್ಚಿ ಅವರನ್ನು ಹಿಡಿಯಲು ಹೋದಾಗ ಅವರು ಬೈಕ್‌ ಬಿಟ್ಟು ಪರಾರಿಯಾಗಿದ್ದರು. ಬಳಿಕ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೈಕ್ ವಶಪಡಿಸಿಕೊಂಡು ಬೈಕ್ ವಿವರ ಹಾಗೂ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಶೋಭಿತ್ ಶರ್ಮಾ ಮತ್ತು ಉಜ್ವಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಪೊಲೀಸರು ಸ್ಟೇಷನ್‌ನಲ್ಲಿ ಸಖತ್‌ ʼಉಪಚಾರʼ ಮಾಡಿದ್ದಾರೆ. ಪೊಲೀಸ್‌ ಟ್ರೀಟ್‌ಮೆಂಟ್‌ಗೆ ಒಳಗಾಗಿರುವ ಆರೋಪಿಗಳು ಈಗ ನಡೆಯಲಾರದ ಸ್ಥಿತಿಯಲ್ಲಿ ಗೋಳಿಡುತ್ತಿದ್ದಾರೆ!

Continue Reading

ವೈರಲ್ ನ್ಯೂಸ್

Viral News: 20 ವರ್ಷಗಳ ಹಿಂದೆ ಅಜ್ಜ ಖರೀದಿಸಿದ್ದ ಷೇರು; ಮೊಮ್ಮಗಳು ರಾತ್ರೋರಾತ್ರಿ ಕೋಟ್ಯಧಿಪತಿ!

ಷೇರು ಮಾರುಕಟ್ಟೆಯಲ್ಲಿ ಇಪ್ಪತ್ತು ವರ್ಷಗಳ ಹಿಂದೆ ಅಜ್ಜ ಮಾಡಿದ್ದ ಸಣ್ಣ ಹೂಡಿಕೆಯು ಈಗ ಅವರ ಮೊಮ್ಮಗಳನ್ನು ಕೋಟ್ಯಧಿಪತಿಯನ್ನಾಗಿ ಮಾಡಿದೆ. ಅಜ್ಜ ಈ ಷೇರುಗಳ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಆದರೆ ಮನೆ ಕ್ಲೀನ್‌ ಮಾಡುವಾಗ ಇದು ಕಣ್ಣಿಗೆ ಬಿದ್ದಿತ್ತು. ಯಾವುದೇ ದಾಖಲೆ ಇಲ್ಲದ ಈ ಮೊತ್ತವನ್ನು ಪಡೆಯುವುದು ಅಷ್ಟು ಸುಲಭವಾಗಿರಲಿಲ್ಲ. ಮಹಿಳೆ ಸಾಕಷ್ಟು ಪರಿಶ್ರಮ ನಡೆಸಿ ಷೇರುಗಳಿಗೆ ಸಂಬಂಧಿಸಿದ ದಾಖಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸುದ್ದಿ ಈಗ ವೈರಲ್ (Viral News) ಆಗಿದೆ.

VISTARANEWS.COM


on

By

Viral News
Koo

ಇಪ್ಪತ್ತು ವರ್ಷಗಳ ಹಿಂದೆ ಷೇರು ಮಾರುಕಟ್ಟೆಯಲ್ಲಿ ಅಜ್ಜ ಖರೀದಿಸಿದ್ದ ಲಾರ್ಸೆನ್ ಮತ್ತು ಟೂಬ್ರೊ (L&T) ನ 500 ಷೇರುಗಳು (L&T share) ಬೆಂಗಳೂರಿನ ಮಹಿಳೆಯೊಬ್ಬರನ್ನು (bengaluru women) ಕೋಟ್ಯಧೀಶ್ವರರನ್ನಾಗಿ (millionaire women) ಮಾಡಿದೆ. ಈ ಸುದ್ದಿ ಈಗ ವೈರಲ್ (Viral News) ಆಗಿದೆ. ಪ್ರಿಯಾ ಶರ್ಮಾ ಅವರ ಅಜ್ಜ ಉದ್ಯಮಿಯಾಗಿದ್ದು, ಅವರು ತಮ್ಮ ಗಳಿಕೆಯ ಸ್ವಲ್ಪ ಭಾಗವನ್ನು 2004ರಲ್ಲಿ ಭಾರತದ ಆರ್ಥಿಕ ರಾಜಧಾನಿ ಮುಂಬಯಿನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರು.

ಸುರಕ್ಷಿತ ಹೂಡಿಕೆಗಾಗಿ ಅವರು ಬ್ಲೂ-ಚಿಪ್ ನಿರ್ಮಾಣದ ಪ್ರಮುಖ ಲಾರ್ಸೆನ್ ಮತ್ತು ಟೂಬ್ರೊ (L&T) ನ 500 ಷೇರುಗಳನ್ನು ಖರೀದಿ ಮಾಡಿದ್ದರು. ಬಳಿಕ ಅವರು ಅದನ್ನು ಮರೆತೇ ಬಿಟ್ಟಿದ್ದರು. ಅವರ ಮರಣದ ಬಳಿಕವೂ ಯಾರೂ ಇದನ್ನು ಗಮನಿಸಿರಲಿಲ್ಲ. ಸಾಕಷ್ಟು ಸಮಯ ಕಳೆದಿದ್ದು, ಎಲ್ ಆಂಡ್ ಟಿ ಷೇರುಗಳಲ್ಲಿನ ಹೂಡಿಕೆಯ ಮೌಲ್ಯವು ಬೆಳೆಯುತ್ತಲೇ ಇತ್ತು.

ಬೆಂಗಳೂರಿನಲ್ಲಿ ನೆಲೆಸಿದ್ದ ಹೂಡಿಕೆದಾರರ ಮೊಮ್ಮಗಳು ಪ್ರಿಯಾ ಅವರು 2020ರಲ್ಲಿ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಅಜ್ಜನ ಕೆಲವು ದಾಖಲೆಗಳನ್ನು ನೋಡುತ್ತಿದ್ದಾಗ ಅಜ್ಜ ಷೇರು ಖರೀದಿ ಮಾಡಿರುವುದು ಗೊತ್ತಾಗಿದೆ. ಆದರೆ ಪ್ರಿಯಾ ಅವರು 500 ಎಲ್ ಆಂಡ್ ಟಿ ಷೇರುಗಳ ವಾರಸುದಾರಿಕೆಯಲ್ಲಿ ಸುಲಭವಾಗಿ ಪಡೆಯಲು ಆಗಿರಲಿಲ್ಲ. ಸ್ಟಾಕ್ ವಿಭಜನೆ ಮತ್ತು ಬೋನಸ್ ಷೇರುಗಳ ಕಾರಣದಿಂದಾಗಿ ಅವರೀಗ 4,500 ಷೇರುಗಳನ್ನು ಈಗ ಸ್ವೀಕರಿಸಿದ್ದಾರೆ. ಇವುಗಳ ಮೌಲ್ಯ 1.72 ಕೋಟಿ ರೂ. ಆಗಿದೆ.


ತನ್ನಲ್ಲಿರುವ ಸಂಪತ್ತನ್ನು ಹೆಚ್ಚಿಸಲು ಕಂಪನಿಯು ತನ್ನ ಬಾಕಿ ಉಳಿದಿರುವ ಷೇರುಗಳ ಸಂಖ್ಯೆಯನ್ನು ಹೆಚ್ಚಿಸಿದಾಗ ಸ್ಟಾಕ್ ವಿಭಜನೆಯಾಗುತ್ತದೆ. 1:2 ವಿಭಜನೆಯಲ್ಲಿ ಪ್ರತಿ ಷೇರನ್ನು ಎರಡಾಗಿ ವಿಂಗಡಿಸಲಾಗಿದೆ. ಹೂಡಿಕೆಯ ಮೌಲ್ಯವನ್ನು ಬದಲಾಯಿಸದೆ ಷೇರುದಾರರ ಸಂಖ್ಯೆಯನ್ನು ಪರಿಣಾಮಕಾರಿಯಾಗಿ ದ್ವಿಗುಣಗೊಳಿಸುತ್ತದೆ.

ಬೋನಸ್ ಷೇರುಗಳು, ಮತ್ತೊಂದೆಡೆ, ಅಸ್ತಿತ್ವದಲ್ಲಿರುವ ಷೇರುದಾರರಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಹೆಚ್ಚುವರಿ ಷೇರುಗಳನ್ನು ನೀಡುತ್ತದೆ. ಇದು ಈಗಾಗಲೇ ಮಾಲೀಕತ್ವದ ಷೇರುಗಳ ಸಂಖ್ಯೆಯನ್ನು ಆಧರಿಸಿವೆ.
ಎಲ್ ಆಂಡ್ ಟಿ ಷೇರುಗಳ ಸಂಖ್ಯೆಯಲ್ಲಿ 500 ರಿಂದ 4,500 ಕ್ಕೆ ಒಂಬತ್ತು ಪಟ್ಟು ಹೆಚ್ಚಳವಾಗಿರುವುದು ಮಾತ್ರವಲ್ಲ ಅವುಗಳ ಮೌಲ್ಯವೂ ಬೆಳೆದಿದೆ. ಷೇರುಗಳ ಮೌಲ್ಯ ಸುಮಾರು 1.72 ಕೋಟಿ ರೂ. ಆಗಿದ್ದು, ರಾತ್ರೋರಾತ್ರಿ ಪ್ರಿಯಾ ಶರ್ಮಾ ಕೋಟ್ಯಧಿಪತಿಯಾಗಿದ್ದಾರೆ. ಆದರೆ ಇದನ್ನು ಪಡೆಯುವುದು ಅಷ್ಟೊಂದು ಸುಲಭವಾಗಿರಲಿಲ್ಲ.

ಬೆಂಗಳೂರಿನಲ್ಲಿ ನೆಲೆಸಿರುವ ಪ್ರಿಯಾ ತಮ್ಮ ಅಜ್ಜನ ದಾಖಲೆಗಳನ್ನು ಪಡೆಯಲು ಸಾಕಷ್ಟು ಸವಾಲುಗಳನ್ನು ಎದುರಿಸಿದರು. ಪ್ರಿಯಾ ಅವರ ಅಜ್ಜನ ಉಯಿಲು ಸೇರಿದಂತೆ ಅನೇಕ ದಾಖಲೆಗಳ ಪರಿಶೀಲನೆ ಬಳಿಕವೂ ಸಾಕಷ್ಟು ತೊಡಕುಗಳು ಎದುರಾಗಿತ್ತು.

ಇದನ್ನು ಓದಿ: Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

ಕಾನೂನಿನ ನೆರವು ಪಡೆದುಕೊಂಡ ಪ್ರಿಯಾ ಅವರು ಷೇರು ಪ್ರಮಾಣಪತ್ರದಲ್ಲಿನ ಹೆಸರು ಮತ್ತು ಪ್ರಿಯಾ ಅವರ ಅಜ್ಜನ ಅಧಿಕೃತ ದಾಖಲೆಗಳ ನಡುವಿನ ವ್ಯತ್ಯಾಸವನ್ನು ಸರಿಪಡಿಸಲು ಸಾಕಷ್ಟು ಹೋರಾಟ ಮಾಡಬೇಕಾಯಿತು. ಕೊನೆಗೆ ಸುಮಾರು ಒಂದು ವರ್ಷದ ಸತತ ಪ್ರಯತ್ನದ ಅನಂತರ ಪ್ರಿಯಾ ಅವರು ಎಲ್ ಆಂಡ್ ಟಿ ನಿಂದ ಅಜ್ಜನ ಪ್ರಮಾಣ ಪತ್ರದ ದಾಖಲೆಯನ್ನು ಪಡೆದಳು. ಇದರಿಂದ ಆಕೆ ಈಗ ಕೋಟ್ಯಧಿಪತಿಯಾಗಿದ್ದಾಳೆ.

Continue Reading

ದೇಶ

HD Deve Gowda: ದೆಹಲಿ ಮೆಟ್ರೋದಲ್ಲಿ ಸಂಚರಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

HD Deve Gowda: ಮಾಜಿ ಪ್ರಧಾನಿ, ಜೆಡಿಎಸ್‌ ನಾಯಕ ಎಚ್‌.ಡಿ.ದೇವೇಗೌಡ ಅವರು ಭಾನುವಾರ ದೆಹಲಿ ಮೆಟ್ರೋ ದಲ್ಲಿ ಸಂಚರಿಸಿದರು. ಈ ವೇಳೆ ಮೆಟ್ರೋದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಮಾಹಿತಿ ನೀಡಿದರು. ಸಂಸತ್‌ ಅಧಿವೇಶನದ ಹಿನ್ನಲೆಯಲ್ಲಿ ದೆಹಲಿಯಲ್ಲಿರುವ ದೇವೇಗೌಡ ಅವರು ಶನಿವಾರ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಕ್ಕೆ ಭೇಟಿ ನೀಡಿ ಮೆಚ್ಚುಗೆ ಸೂಚಿಸಿದ್ದರು. ಪಿಎಂ ಸಂಗ್ರಹಾಲಯವನ್ನು ಇಷ್ಟು ಸುಸಜ್ಜಿತವಾಗಿ ಮಾಡಿದ್ದಕ್ಕಾಗಿ ಅವರು ನರೇಂದ್ರ ಮೋದಿ ಅವರಿಗೆ ಅಭಿನಂದನೆ ತಿಳಿಸಿದ್ದರು.

VISTARANEWS.COM


on

HD Deve Gowda
Koo

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್‌ ನಾಯಕ ಎಚ್‌.ಡಿ.ದೇವೇಗೌಡ (HD Deve Gowda) ಅವರು ಭಾನುವಾರ (ಆಗಸ್ಟ್‌ 4) ದೆಹಲಿ ಮೆಟ್ರೋ (Delhi Metro)ದಲ್ಲಿ ಸಂಚರಿಸಿದರು. ಈ ವೇಳೆ ಮೆಟ್ರೋದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಮಾಹಿತಿ ನೀಡಿದರು. ದೆಹಲಿಯ ಲೋಕ ಕಲ್ಯಾಣ ಮಾರ್ಗದಿಂದ ಎಚ್.ಡಿ.ದೇವೇಗೌಡ ಅವರು ತಮ್ಮ ಪ್ರಯಾಣ ಆರಂಭಿಸಿದರು. ಈ ವೇಳೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ದೆಹಲಿ ಮೆಟ್ರೋ ಸೇವೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಸಂಸತ್‌ ಅಧಿವೇಶನದ ಹಿನ್ನಲೆಯಲ್ಲಿ ದೆಹಲಿಯಲ್ಲಿರುವ ದೇವೇಗೌಡ ಅವರು ಶನಿವಾರ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಕ್ಕೆ ಭೇಟಿ ನೀಡಿ ಮೆಚ್ಚುಗೆ ಸೂಚಿಸಿದ್ದರು. ಪಿಎಂ ಸಂಗ್ರಹಾಲಯವನ್ನು ಇಷ್ಟು ಸುಸಜ್ಜಿತವಾಗಿ ಮಾಡಿದ್ದಕ್ಕಾಗಿ ಅವರು ನರೇಂದ್ರ ಮೋದಿ ಅವರಿಗೆ ಅಭಿನಂದನೆ ತಿಳಿಸಿದ್ದರು.

ʼʼನಾನು ದೆಹಲಿಯಲ್ಲಿರುವ ಪ್ರಧಾನಿಮಂತ್ರಿಗಳ ಮ್ಯೂಸಿಯಂ ʼಪಿಎಂ ಸಂಗ್ರಹಾಲಯʼಕ್ಕೆ ಭೇಟಿ ನೀಡಿದೆ. ಇದೊಂದು ಅದ್ಭುತ ಅನುಭವ ನೀಡಿತು. ಇಂತಹದ್ದೊಂದು ಐತಿಹಾಸಿಕ ವಸ್ತು ಸಂಗ್ರಹಾಲಯ ನಿರ್ಮಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅಭಿನಂದನಾರ್ಹರು. ಇದುವರೆಗಿನ ಎಲ್ಲ ಪ್ರಧಾನಿಗಳ ವಿವರ, ಅವರು ಸಲ್ಲಿಸಿರು ಸೇವೆ, ದೇಶಕ್ಕಾಗಿ ಅವರ ಕೊಡುಗೆ ಮುಂತಾದ ವಿವರಗಳು ಇಲ್ಲಿ ಸಿಗುತ್ತದೆʼʼ ಎಂದು ದೇವೇಗೌಡ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಜತೆಗೆ ತಮ್ಮನ್ನು ಮ್ಯೂಸಿಯಂಗೆ ಸ್ವಾಗತಿಸಿದ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಅವರಿಗೂ ಮಾಜಿ ಪ್ರಧಾನಿ ದೇವೇಗೌಡ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ʼʼಮ್ಯೂಸಿಯಂಗೆ ನನ್ನನ್ನು ಸ್ವಾಗತಿಸಿದ ನೃಪೇಂದ್ರ ಮಿಶ್ರಾ ಅವರಿಗೆ ಧನ್ಯವಾದಗಳು. PMOIndia ಯೋಜನೆಯ ಸಾಕಾರಕ್ಕೆ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅದೇ ರೀತಿ ಮ್ಯೂಸಿಮಂನಲ್ಲಿ ಪ್ರತಿಯೊಂದೂ ವಿವರಗಳನ್ನು, ಮಾಹಿತಿಗಳನ್ನು ನೀಡಿದ ಡಾ. ಎ.ಸೂರ್ಯ ಪ್ರಕಾಶ್‌ ಅವರಿಗೂ ನಾನು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

ʼʼಮ್ಯೂಸಿಯಂಗೆ ಭೇಟಿ ನೀಡಿದ್ದು ನನಗೆ ನಿಜಕ್ಕೂ ತುಂಬ ಖುಷಿಯ ಅನುಭವ ನೀಡಿತು. ಕರ್ನಾಟಕದ ಕುಗ್ರಾಮವೊಂದರ ಬಡ ಕುಟುಂಬದಲ್ಲಿ ಜನಿಸಿದ ನಾನು ಇಂತಹ ಅದ್ಭುತ ದೇಶವೊಂದಕ್ಕೆ ಪ್ರಧಾನಿಯಾಗಿದ್ದು ಬಹಳ ಹೆಮ್ಮೆಯ ವಿಷಯ. ಇಂತಹ ಅದ್ಭುತ ಮ್ಯೂಸಿಯಂನ ಭಾಗವಾಗುತ್ತೇನೆ ಎಂದು ಕನಸಿನಲ್ಲಿಯೂ ಯೋಚಿಸಿರಲಿಲ್ಲ. ಪ್ರಜಾಪ್ರಭುತ್ವದ ಶಕ್ತಿಯೇ ಅಂತಹದ್ದು. ಜನರ ಆಶೀರ್ವಾದದಿಂದ ಈ ಕನಸು ನನಸಾಗಿದೆ. ನಾನು ಪ್ರಧಾನಿಯಾಗಿದ್ದಾಗ ದೇಶಕ್ಕಾಗಿ ಶಕ್ತಿಮೀರಿ ಕೆಲಸ ಮಾಡಿದ್ದೇನೆ ಎನ್ನುವ ಬಗ್ಗೆ ತೃಪ್ತಿ ಇದೆ. ಎಲ್ಲರಿಗೂ ಧನ್ಯವಾದಗಳು ಮತ್ತು ಅಭಿನಂದನೆಗಳುʼʼ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ. ಪಿಎಂ ಸಂಗ್ರಹಾಲಯಕ್ಕೆ ಆಗಮಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ʼʼಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮ್ಯೂಸಿಯಂಗೆ ಭೇಟಿ ನೀಡಿದ್ದಾರೆ ಎನ್ನುವ ವಿಚಾರ ತಿಳಿದು ಬಹಳಷ್ಟು ಸಂತಸವಾಯ್ತುʼʼ ಎಂದು ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

ಕೆಲವು ದಿನಗಳ ಹಿಂದೆ ವ್ಹೀಲ್‌ ಚೇರ್‌ನಲ್ಲಿಯೇ ತೆರಳಿದ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ದೇವೇಗೌಡರು ತೆರಳಿ ಮೋದಿ ಜತೆ ಮಾತುಕತೆ ನಡೆಸಿದ್ದರು. ದೇವೇಗೌಡ ಅವರನ್ನು ಭೇಟಿಯಾಗಿರುವ ಫೋಟೊಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

Continue Reading
Advertisement
Kiran Raj Ronny releasing on August 30th
ಸ್ಯಾಂಡಲ್ ವುಡ್35 seconds ago

Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

Paris Olympics 2024
ಪ್ರಮುಖ ಸುದ್ದಿ1 min ago

Bikini vs : Hijab : ಸ್ಪೇನ್​, ಈಜಿಪ್ಟ್​ ನಡುವಿನ ಬೀಚ್ ವಾಲಿಬಾಲ್ ಪಂದ್ಯದ ವೇಳೆ ಕಿಡಿ ಹಚ್ಚಿದ ಬಿಕಿನಿ ವರ್ಸಸ್ ಹಿಜಾಬ್​ ಚರ್ಚೆ

Cable Operators
ಸಿನಿಮಾ2 mins ago

Cable vs Ott: ಒಟಿಟಿ ಪೈಪೋಟಿ; ಕೇಬಲ್‌ ಟಿವಿ ವೀಕ್ಷಕರ ಸಂಖ್ಯೆ 12 ಕೋಟಿಯಿಂದ 9 ಕೋಟಿಗೆ ಇಳಿಕೆ!

Paris Olympics: Lakshya Sen lost in the semi-final
ಕ್ರೀಡೆ24 mins ago

Paris Olympics: ಸೆಮಿ ಫೈನಲ್​ನಲ್ಲಿ ಸೋಲು ಕಂಡ ಲಕ್ಷ್ಯ ಸೇನ್‌; ಕಂಚಿಗೆ ಸ್ಪರ್ಧೆ

Road Accident
ಬೆಂಗಳೂರು34 mins ago

Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

Ranveer Singh mimics Orry funny interactions
ಬಾಲಿವುಡ್35 mins ago

Ranveer Singh: ಓರಿಯಂತೆ ನಟನೆ ಮಾಡಿದ ರಣವೀರ್‌ ಸಿಂಗ್‌; ವಿಡಿಯೊ ವೈರಲ್‌!

Paris Olympic 2024
ಪ್ರಮುಖ ಸುದ್ದಿ42 mins ago

Paris Olympics 2024 : ಪೋಲ್ ವಾಲ್ಟ್ ‌ಪಟುವಿಗೆ ಮರ್ಮಾಘಾತ! ಪದಕ ತಪ್ಪಿಸಿದ ಮರ್ಮಾಂಗ! ವಿಡಿಯೊ ನೋಡಿ

Zameer Ahmed Khan
ಕರ್ನಾಟಕ43 mins ago

Zameer Ahmed Khan: ಎಚ್‌ಡಿಕೆ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ, ಅವರ ಆಸ್ತಿಯಿಂದ 3 ಬಜೆಟ್‌ ಮಾಡಬಹುದು ಎಂದ ಜಮೀರ್‌

Rahul Gandhi
ದೇಶ47 mins ago

Rahul Gandhi: ರಾಹುಲ್‌ ಗಾಂಧಿಯನ್ನು ಬಂಧಿಸಿದರೆ ಬಿಜೆಪಿ ಶವಪೆಟ್ಟಿಗೆ ಸೇರೋದು ಖಚಿತ; ಸಿಂಘ್ವಿ ಎಚ್ಚರಿಕೆ

Viral Video
ವೈರಲ್ ನ್ಯೂಸ್58 mins ago

Viral Video: ಉ.ಪ್ರ ಪೊಲೀಸರ ʼಟ್ರೀಟ್‌‌ಮೆಂಟ್ʼ ಹೇಗಿತ್ತು ನೋಡಿ! ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ಪುಂಡರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ3 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌