Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು - Vistara News

ಕ್ರೈಂ

Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು

Theft Case : ಕಲಬುರಗಿಯಲ್ಲಿ ಮನೆಗಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳನನ್ನು ಹಿಡಿದು ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಐನಾತಿ ಮನೆಗಳ್ಳರನ್ನು ಹೊಸಪೇಟೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮತ್ತೊಂದು ಕಡೆ ಜತೆಯಲ್ಲಿದ್ದ ಆಪ್ತನೇ ಸೆಕೆಂಡ್ ಕಾರ್ ಶೋರೂಂನಲ್ಲಿ ಕಳ್ಳತನ ಮಾಡಿ ಪೊಲೀಸರಿಗೆ ಲಾಕ್‌ ಆಗಿದ್ದಾನೆ.

VISTARANEWS.COM


on

Theft Case
ಇಬ್ಬರು ಬಂಧಿತ ಕಳ್ಳರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಕಲಬುರಗಿಯಲ್ಲಿ ‌ಮನೆಗಳ್ಳರ (Theft Case) ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಚಿಂಚೋಳಿ ತಾಲೂಕಿನ ನಿಡಗುಂದಾ ಗ್ರಾಮದಲ್ಲಿ ರಾತ್ರಿಯಾದರೆ ಸಾಕು ಕಳ್ಳರ‌ ಹಾವಳಿ ಹೆಚ್ಚಾಗಿತ್ತು. ನಿಡಗುಂದಾ ಗ್ರಾಮದ ಹಲವು ಮನೆಗಳ ‌ಕಳ್ಳತನಕ್ಕೆ ಯತ್ನಿಸಿದ್ದಾರೆ.

ರಾತ್ರಿ ಹೊತ್ತಲ್ಲಿ ಮನೆಯ ಬಾಗಿಲು ತಟ್ಟಿ ಕಳ್ಳತನಕ್ಕೆ ಯತ್ನಿಸುತ್ತಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಕಳ್ಳರ‌ ಹಾವಳಿಗೆ ಗ್ರಾಮಸ್ಥರು ಬೇಸತ್ತಿದ್ದರು. ನಿನ್ನೆ ಶನಿವಾರ ಕೂಡ ಕಳ್ಳತನಕ್ಕೆ ಆಗಮಿಸಿದ್ದ ಕಳ್ಳನೊಬ್ಬನನ್ನು ಹಿಡಿದು ಕಟ್ಟಿ ಹಾಕಿದ್ದರು. ಈರಣ್ಣ ಎಂಬಾತನನ್ನ ಹಿಡಿದು ಕಟ್ಟಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಈರಣ್ಣನ ಜತೆಗಿದ್ದಇತರರು ಎಸ್ಕೇಪ್ ಆಗಿದ್ದಾರೆ. ಸುಲೇಪೆಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಐನಾತಿ ಮನೆಗಳ್ಳರನ್ನು ಹೆಡೆಮುರಿ ಕಟ್ಟಿದ ಹೊಸಪೇಟೆ ಪೊಲೀಸರು

ವಿಜಯನಗರ: ವಿಜಯನಗರದ ಹೊಸಪೇಟೆಯ ಎಂ.ಜೆ ನಗರದಲ್ಲಿ ಹಾಡಹಗಲೇ ಮನೆಗೆ ಕನ್ನ ಹಾಕಿದ್ದ ಐನಾತಿ ಮನೆಗಳ್ಳರನ್ನು ಹೊಸಪೇಟೆ ಬಡಾವಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಖದೀಮರು ತ್ರಿವೇಣಿ ಎಂಬುವವರ ಮನೆಯಲ್ಲಿ ಬಂಗಾರ ಕದ್ದಿದ್ದರು. ಸುಮಾರು 7.5 ಲಕ್ಷ ಮೌಲ್ಯದ 110 ಗ್ರಾಂ ಬಂಗಾರದ ಆಭರಣ ಕದ್ದು ಎಸ್ಕೇಪ್ ಆಗಿದ್ದರು. 15 ದಿನಗಳಲ್ಲಿ ಪ್ರಕರಣ ಬೇಧಿಸಿದ ಪೊಲೀಸರು ಇಬ್ಬರು ಮನೆಗಳ್ಳರನ್ನು ಬಂಧಿಸಿದ್ದಾರೆ.

ಹೊಸಪೇಟೆ ನಿವಾಸಿಗಳಾದ ಕಾರ್ತಿಕ್, ಸಣ್ಣಕ್ಕೆಪ್ಪ ಬಂಧಿತ ಮನೆಗಳ್ಳರಾಗಿದ್ದಾರೆ. ಬಂಧಿತರಿಂದ 7.5 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಕ್ಕೆ ಪಡೆದಿದ್ದಾರೆ. ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ತಂಡಕ್ಕೆ ಎಸ್‌ಪಿ ಶ್ರೀಹರಿಬಾಬು ಬಹುಮಾನ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: Leopard Attack : ಮೈಸೂರಲ್ಲಿ ರೈತನ ಮೇಲೆ ಚಿರತೆ ದಾಳಿ; ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಚಿರತೆ

ಜತೆಯಲ್ಲಿದ್ದ ಆಪ್ತನಿಂದಲೇ ಸೆಕೆಂಡ್ ಕಾರ್ ಶೋರೂಂನಲ್ಲಿ ಕಳ್ಳತನ

ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜತೆಯಲ್ಲಿದ್ದ ಆಪ್ತನೇ ಕಳ್ಳತನಕ್ಕೆ ಇಳಿದಿರುವ ಘಟನೆ ನಡೆದಿದೆ. ಭಾವನ ಕಾರ್ಸ್ ಎಂಬ ಸೆಕೆಂಡ್ ಶೋ ರೂಂನಲ್ಲಿ ಲಿತಿನ್ ಎಂಬಾತ ಹಣ ಕದ್ದಿದ್ದ.

ಲಿತಿನ್‌ ಹಲವು ದಿನಗಳಿಂದ ಭಾವನಾ ಕಾರ್ಸ್ ಮಾಲೀಕ ಕೆಂಪೆಗೌಡ ಜತೆಯಲ್ಲೆ ಇದ್ದ. ಕಳೆದ ತಿಂಗಳು 20ರಂದು ಮಾಲೀಕ ಕೆಂಪೆಗೌಡಗೆ ತಿಳಿಯದ ಹಾಗೆ ಕಛೇರಿಯ ಕೀ ಪಡೆದುಕೊಂಡಿದ್ದ. ನಂತರ ಮಧ್ಯರಾತ್ರಿ1.30 ಸುಮಾರಿಗೆ ಕ್ಯಾಪ್ ಮಾಸ್ಕ್ ಹಾಕಿ ಕಛೇರಿಗೆ ಎಂಟ್ರಿ ಕೊಟ್ಟಿದ್ದ. ಆಫೀಸ್ ಡ್ರಾನಲ್ಲಿದ್ದ ಒಂದು ಲಕ್ಷ ನಗದು ಹಣ ಕಳ್ಳತನ ಮಾಡಿದ್ದ. ನಂತರ ಆಫೀಸ್ ಮುಂಭಾಗದಲ್ಲಿದ್ದ ಕಾರನ್ನು ಕದ್ದು ರೌಂಡ್ಸ್ ಹಾಕಿ ಮತ್ತೆ ವಾಪಸ್ ಬಂದಿದ್ದ.

ಆಫೀಸ್ ಮುಂದೆ ಕಾರ್ ಬಿಟ್ಟು ಹೋಗುವಾಗ ಕಾರಿನ ಕೀ ಗೇಟ್ ಬಳಿ ಎಸೆದು ಎಸ್ಕೇಪ್ ಆಗಿದ್ದ. ಮಾಲೀಕ ಕೆಂಪೇಗೌಡ ಸಿಸಿಟಿವಿ ಪರಿಶೀಲಿಸಿ ಗಿರಿನಗರ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಲಿತಿನ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

Road Accident : ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವ್ಯಕ್ತಿ ಮೃತಪಟ್ಟರೆ, ಹಿಂಬದಿ ಕುಳಿತಿದ್ದ ಮಹಿಳೆಗೆ ಕಾಲುಗಳು ತುಂಡಾಗಿದ್ದು, ಮಗುವೊಂದು ಪವಾಡ ಸದೃಶವಾಗಿ ಪಾರಾಗಿದೆ.

VISTARANEWS.COM


on

By

Road Accident
Koo

ಆನೇಕಲ್: ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಮುಂದೆ ಸಾಗುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಸವಾರನ ಪತ್ನಿಗೆ ಎರಡು‌ ಕಾಲು ಕಟ್ ಆಗಿವೆ. ಸಣ್ಣ ಪುಟ್ಟ ಗಾಯಗಳಿಂದ ಮಗು ಪ್ರಾಣಪಾಯದಿಂದ ಪಾರಾಗಿದ್ದಾರೆ.

ದಂಪತಿ ಬೈಕ್‌ನಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದಿದ್ದಾರೆ. ಕೆಳಗೆ ಬಿದ್ದ ಸವಾರನ ಮೇಲೆ ಹರಿದು, ಕರುಳು ಹೊರಗೆ ಬಂದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಮಹಿಳೆಯ ಎರಡು ಕಾಲುಗಳ ಹರಿದಿದೆ. ರಸ್ತೆಯಲ್ಲಿ ಒದ್ದಾಡುತ್ತಿದ್ದ ಗಾಯಾಳು ಮಹಿಳೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

ಸ್ಟೇರಿಂಗ್ ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ

ಹಳ್ಳದ ಸೇತುವೆ ತಡೆಗೋಡೆಗೆ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಅಪಘಾತ ನಡೆದಿದೆ.

Drowned in Water
Drowned in Water

ಕಲ್ಯಾಣ ಸಾರಿಗೆ ಬಸ್ ಸ್ಟೇರಿಂಗ್ ರಾಡ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಗಾಯಾಳುಗಳು ಮಾನ್ವಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ಉ.ಪ್ರ ಪೊಲೀಸರ ʼಟ್ರೀಟ್‌‌ಮೆಂಟ್ʼ ಹೇಗಿತ್ತು ನೋಡಿ! ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ಪುಂಡರು

ಕೋಚಿಂಗ್ ಸೆಂಟರ್ ಹೊರಗೆ ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ಮೂವರು ದುಷ್ಕರ್ಮಿಗಳಿಗೆ ಉತ್ತರ ಪ್ರದೇಶದ ಪೊಲೀಸರು ಸರಿಯಾಗಿ ಬುದ್ಧಿ ಕಳಿಸಿದ ಘಟನೆ ನಡೆದಿದೆ. ಕೋಚಿಂಗ್ ಸೆಂಟರ್ ನ ಹೊರಗೆ ಮೂವರು ದುಷ್ಕರ್ಮಿಗಳು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು, ಪೋಲೀಸರ ಟ್ರೀಟ್ ಮೆಂಟ್ ಬಳಿಕ ಆರೋಪಿಗಳಿಗೆ ನಡೆದಾಡಲೂ ಆಗುತ್ತಿಲ್ಲ ಎನ್ನುವ ದೃಶ್ಯವಾಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಮುಜಾಫರ್‌ನಗರ: ಕೋಚಿಂಗ್ ಸೆಂಟರ್‌ನ (coaching institute) ಹೊರಗೆ ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ದುಷ್ಕರ್ಮಿಗಳಿಗೆ ಪೊಲೀಸರು ಸರಿಯಾಗಿ ಬುದ್ಧಿ ಕಳಿಸಿದ ಘಟನೆ ಉತ್ತರ ಪ್ರದೇಶದ (uttarpradesh) ಮುಜಾಫರ್‌ನಗರದಲ್ಲಿ (Muzaffarnagar) ನಡೆದಿದೆ. ಕೋಚಿಂಗ್ ಸೆಂಟರ್ ನ ಹೊರಗೆ ಮೂವರು ದುಷ್ಕರ್ಮಿಗಳು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಮುಜಾಫರ್‌ನಗರದ ಗಾಂಧಿ ಕಾಲೋನಿಯಲ್ಲಿ ಕೋಚಿಂಗ್ ಸೆಂಟರ್‌ಗಳ ಸಂಖ್ಯೆ ಹೆಚ್ಚಾಗಿದೆ. ಇದು ಶಿಕ್ಷಣ ಕೇಂದ್ರವಾಗಿ ಮಾರ್ಪಟ್ಟಿದೆ. ಈ ಪ್ರದೇಶದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಪೊಲೀಸರು ಸುತ್ತುಮುತ್ತ ಗಸ್ತು ತಿರುಗುತ್ತಾರೆ. ಕಳೆದ ಕೆಲ ದಿನಗಳಿಂದ ಕನ್ವರ್ ಯಾತ್ರೆಯಲ್ಲಿ ಪೊಲೀಸರು ನಿರತರಾಗಿದ್ದರು. ಈ ಪರಿಸ್ಥಿತಿಯ ಲಾಭ ಪಡೆದ ಕೆಲವು ದುಷ್ಕರ್ಮಿಗಳು ಕೋಚಿಂಗ್ ಸೆಂಟರ್ ಹೊರಗೆ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಗಾಂಧಿ ಕಾಲೋನಿಯಲ್ಲಿ ಮೂವರು ಮುಸುಕುಧಾರಿಗಳು ಬೈಕ್‌ನಲ್ಲಿ ಆಗಮಿಸಿ ಮೋಹನ್ ಭಾಟಿಯಾ ಎಂಬವರ ಕೋಚಿಂಗ್ ಸೆಂಟರ್‌ನ ಹೊರಗೆ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದ್ದರು. ದುಷ್ಕರ್ಮಿಯೊಬ್ಬನನ್ನು ವಿದ್ಯಾರ್ಥಿನಿ ಅವಮಾನಿಸಿದ್ದಾಳೆ ಎಂದು ಆರೋಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಲೇ ಇದ್ದರು. ಅವರನ್ನು ಅವಮಾನಿಸುವಂಥ ಯಾವುದೇ ಕೆಲಸ ಮಾಡಿಲ್ಲ ಎಂದು ವಿದ್ಯಾರ್ಥಿನಿ ಮತ್ತೆ ಮತ್ತೆ ಹೇಳಿದ್ದಳು.

ಕ್ಷಮೆ ಕೇಳದಿದ್ದರೆ ಗುಂಡು ಹಾರಿಸುವುದಾಗಿಯೂ ಪುಂಡರು ಬೆದರಿಕೆ ಹಾಕಿದ್ದರು. ಈ ದಾರಿಯಲ್ಲಿ ಸಾಕಷ್ಟು ಮಂದಿ ಹಾದುಹೋಗುತ್ತಿದ್ದರೂ ಯಾರೂ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ದುಷ್ಕರ್ಮಿಗಳನ್ನು ತಡೆಯಲಿಲ್ಲ. ಕೊನೆಗೆ ವಿದ್ಯಾರ್ಥಿನಿ ಕ್ಷಮೆ ಕೇಳಿದ್ದರಿಂದ ದುಷ್ಕರ್ಮಿಗಳು ಸ್ಥಳದಿಂದ ಹೋಗಿದ್ದರು. ಇಡೀ ಘಟನೆ ಕೋಚಿಂಗ್ ಸೆಂಟರ್‌ನ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿತ್ತು. ವಿದ್ಯಾರ್ಥಿನಿ ತನ್ನ ತಂದೆ ಮತ್ತು ಸಹೋದರನನ್ನು ಕರೆಸಿ ಘಟನೆಯ ಬಗ್ಗೆ ಸಂಪೂರ್ಣವಾಗಿ ತಿಳಿಸಿದ್ದಳು.


ಇದನ್ನೂ ಓದಿ: Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

ಅವರು ದುಷ್ಕರ್ಮಿಗಳನ್ನು ಹುಡುಕಲು ಪ್ರಾರಂಭಿಸಿದರು ಮತ್ತು ಗಾಂಧಿ ಕಾಲೋನಿಯಲ್ಲಿ ಪತ್ತೆ ಹಚ್ಚಿ ಅವರನ್ನು ಹಿಡಿಯಲು ಹೋದಾಗ ಅವರು ಬೈಕ್‌ ಬಿಟ್ಟು ಪರಾರಿಯಾಗಿದ್ದರು. ಬಳಿಕ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೈಕ್ ವಶಪಡಿಸಿಕೊಂಡು ಬೈಕ್ ವಿವರ ಹಾಗೂ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಶೋಭಿತ್ ಶರ್ಮಾ ಮತ್ತು ಉಜ್ವಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಪೊಲೀಸರು ಸ್ಟೇಷನ್‌ನಲ್ಲಿ ಸಖತ್‌ ʼಉಪಚಾರʼ ಮಾಡಿದ್ದಾರೆ. ಪೊಲೀಸ್‌ ಟ್ರೀಟ್‌ಮೆಂಟ್‌ಗೆ ಒಳಗಾಗಿರುವ ಆರೋಪಿಗಳು ಈಗ ನಡೆಯಲಾರದ ಸ್ಥಿತಿಯಲ್ಲಿ ಗೋಳಿಡುತ್ತಿದ್ದಾರೆ!

Continue Reading

ಬೆಂಗಳೂರು

Drugs Seized : ಉತ್ತರ ಭಾರತದಿಂದ ಬರ್ತಿದ್ದ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ಕರ್ನಾಟಕದ ಪೆಡ್ಲರ್‌ ಲಾಕ್‌

Drugs Seized : ಉತ್ತರ ಭಾರತದಿಂದ ಬರುತ್ತಿದ್ದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಡಿಶಾ ಹಾಗೂ ಕರ್ನಾಟಕದ ಡ್ರಗ್‌ ಪೆಡ್ಲರ್‌ನಗ ಗ್ಯಾಂಗ್‌ ಲಾಕ್‌ ಆಗಿದೆ.

VISTARANEWS.COM


on

By

Drugs Seized
Koo

ಬೆಂಗಳೂರು: ತೆಲಂಗಾಣದ ಸೈಬರಾಬಾದ್ ಮತ್ತು ಶಮ್ಶಾಬಾದ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಉತ್ತರ ಭಾರತದಿಂದ ಬರುತ್ತಿದ್ದ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ (Drugs Seized) ಮಾಡಲಾಗಿದೆ. ಈ ಮೂಲಕ ಐವರು ಅಂತರಾಜ್ಯ ಡ್ರಗ್ ಪೆಡ್ಲರ್‌ಗಳನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಮಾದಕ ವಸ್ತು, ಸಾಗಾಟ ಮಾಡುತ್ತಿದ್ದ ವಾಹನ ಸೇರಿ 2 ಕೋಟಿ‌ 94 ಲಕ್ಷದ 75ಸಾವಿರ ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಒಡಿಶಾದಿಂದ ಮಹಾರಾಷ್ಟ್ರ- ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದರು. ಓಡಿಶಾ ಮತ್ತು ಕರ್ನಾಟಕ ಮೂಲದ ಡ್ರಗ್ ಪೆಡ್ಲರ್‌ಗಳು ಲಾಕ್‌ ಆಗಿದ್ದಾರೆ. ರಾಮು, ಸೋಮನಾಥ ಖರ, ಸುರೇಶ್ ಮಾರುತಿ ಪಾಟೀಲ್ ಹಾಗೂ ಹರಡೇ ಸಂಜೀವ್ ವಿಠ್ಠಲ್ ರೆಡ್ಡಿ, ಸಂಜೀವ್ ಕುಮಾರ್ ಹೊಲ್ಲಪ್ಪ, ಸುನೀಲ್ ಕೊಲಸ, ಜಗ ಸುನಾ ಗ್ಯಾಂಗ್ ಬಂಧನವಾಗಿದೆ.

Drugs Seized
Drugs Seized

ಬಂಧಿತರಿಂದ ಸುಮಾರು 803kg ಗಾಂಜಾ, ಎರ್ಟಿಗಾ ಕಾರು, ಏಳು ಮೊಬೈಲ್ ಸೇರಿ 2,94,75,000 ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ. ಈ ಗ್ಯಾಂಗ್‌ ಹಲವು ವರ್ಷಗಳಿಂದ ಗಾಂಜಾ ಮಾರಾಟ ದಂಧೆಯಲ್ಲಿ ಭಾಗಿಯಾಗಿದ್ದರು. ಸದ್ಯ ಗ್ಯಾಂಗ್‌ ಅನ್ನು ಬಂಧಿಸಿ ಸೈಬರಾಬಾದ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಓಲಾ, ಊಬರ್ ಡ್ರೈವಿಂಗ್ ಜತೆಗೆ ಡ್ರಗ್ಸ್‌ ಮಾರಾಟ; 6 ಕೋಟಿ ರೂ.ಮೌಲ್ಯದ ಡ್ರಗ್ಸ್‌ ಸೀಜ್‌

ಬೆಂಗಳೂರು: ಸೆರಲ್ಯಾಕ್ ಪ್ಯಾಕ್‌ನಲ್ಲಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ (Drugs Seized) ಸಪ್ಲೈ ಮಾಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಟ್ಟೆ ವ್ಯಾಪಾರ ಮಾಡಲು ಬ್ಯುಸಿನೆಸ್ ವೀಸಾದಲ್ಲಿ ಬಂದಿದ್ದ ವಿದೇಶಿ ಪ್ರಜೆಯೊಬ್ಬ ಸಿಸಿಬಿ ಬಲೆಗೆ ಬಿದ್ದಿದ್ದ.

ಮುಂಬೈನ ಫ್ಯಾಕ್ಟರಿಯಲ್ಲಿ ತಯಾರಾಗುತ್ತಿದ್ದ ಎಂಡಿಎಂ ಪೌಡರ್‌ ಅನ್ನು ಮಕ್ಕಳು ಸೇವಿಸುವ ಸೆರಲ್ಯಾಕ್, ಕಾರ್ನ್ ಪ್ಯಾಕೆಟ್‌ಗಳಲ್ಲಿ ಪ್ಯಾಕ್‌ ಮಾಡಿ, ರಾಜ್ಯಕ್ಕೆ ಸರಬರಾಜು ಮಾಡುತ್ತಿದ್ದರು. ಬಳಿಕ ಸಣ್ಣ ಸಣ್ಣ ಪ್ಯಾಕ್ ಮಾಡಿ ಡೀಲರ್‌ಗಳಿಗೆ ಮಾರಾಟ ಮಾಡಲಾಗುತ್ತಿತ್ತು.

ನೈಜಿರೀಯ ಮೂಲದ ಆರೋಪಿಯೊಬ್ಬ ಸಿಸಿಬಿ ಮಾದಕ‌ದ್ರವ್ಯ ನಿಗ್ರಹದಳ‌ ಅಧಿಕಾರಿಗಳ ಬಲೆಗೆ ಬಿದ್ದಿದ್ದ. ನಾಲ್ಕು ಕೆಜಿ ಡ್ರಗ್‌ನನ್ನು ಮನೆಯಲ್ಲಿ ಸಂಗ್ರಹಿಸಿದ್ದ. ಎಲೆಕ್ಟ್ರಾನಿನ್ ಸಿಟಿ ಪೊಲೀಸ್ ಠಾಣ ವ್ಯಾಪ್ತಿಯ ಬೆಟ್ಟದಾಸನಪುರದಲ್ಲಿ ಸೀಜ್ ಮಾಡಲಾಗಿದ್ದು, ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಡ್ರಗ್ ಪೆಡ್ಲರ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಡ್ರೈವಿಂಗ್ ಜತೆಗೆ ಡ್ರಗ್ ಸೇಲ್

ಓಲಾ, ಉಬರ್‌ ಡ್ರೈವಿಂಗ್‌ ಜತೆ ಜತೆಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಂಧಿತನಿಂದ ಒಂದು ಕೋಟಿ 50 ಲಕ್ಷ ಮೌಲ್ಯದ 19.9 ಎಂಡಿಎಂಎ ಕ್ರಿಸ್ಟಲ್, 746 ಕೊಕೇನ್ ವಶಕ್ಕೆ ಪಡೆಯಲಾಗಿತ್ತು. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ವಾಸವಾಗಿದ್ದ .

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Drowned in water : ಕಟಿಂಗ್‌ ಮಾಡಿಸಲು ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರಿಬ್ಬರು ನಿಯಂತ್ರಣ ತಪ್ಪಿ ಬೈಕ್‌ ಸಮೇತ ರಸ್ತೆಯ ಪಕ್ಕದ ನಾಲೆಗೆ ಬಿದ್ದಿದ್ದರು. ಒಬ್ಬ ಸಹೋದರ ಈಜಿ ದಡ ಸೇರಿದ್ದರೆ ಮತ್ತೊಬ್ಬ ನೀರುಪಾಲಾಗಿದ್ದ. ಇದೀಗ ಶೋಧ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು ಶವವನ್ನು ಮೇಲಿತ್ತಿದ್ದಾರೆ.

VISTARANEWS.COM


on

By

Drowned in water
Koo

ಬೆಳಗಾವಿ: ಆಯತಪ್ಪಿ ಮಾರ್ಕಂಡೇಯ ನದಿಯ (Drowned in water) ನಾಲೆಗೆ ಸಹೋದರರು ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಬೆಳಗಾವಿ ತಾಲೂಕಿನ ಆಲತಗಾ ಬಳಿ ನಿನ್ನೆ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿತ್ತು.

ಓಂಕಾರ ಪಾಟೀಲ್ ಹಾಗೂ ಜ್ಯೋತಿನಾಥ ಪಾಟೀಲ್ ಎಂಬ ಸಹೋದರರು ಬೈಕ್‌ನಲ್ಲಿ ಹೋಗುತ್ತಿದ್ದರು. ಶ್ರಾವಣ ಮಾಸ ಪ್ರಾರಂಭ ಹಿನ್ನೆಲೆಯಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ತೆರಳಿದ್ದರು.

ಈ ವೇಳೆ ಆಯತಪ್ಪಿ ಇಬ್ಬರು ನಾಲೆಗೆ ಬಿದ್ದಿದ್ದರು. ನಾಲೆಗೆ ಬೀಳುತ್ತಿದ್ದಂತೆ ಜ್ಯೋತಿನಾಥ ಪಾಟೀಲ್ ಹೇಗೋ ಈಜಿ ದಡ ಸೇರಿದ್ದರು. ಆದರೆ ಇತ್ತ ಓಂಕಾರ ಪಾಟೀಲ್ ಬೈಕ್‌ ಜತೆಗೆ ಕಣ್ಮರೆಯಾಗಿದ್ದರು.

ಬಳಿಕ ನಾಪತ್ತೆಯಾಗಿದ್ದ ಓಂಕಾರ ಪಾಟೀಲ್‌ಗಾಗಿ ಶೋಧ ನಡೆಸಲಾಗಿತ್ತು. ಇದೀಗ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿದ ಎಸ್‌ಡಿಆರ್‌ಎಫ್ ತಂಡ ಶವ ಹೊರತೆಗೆದಿದ್ದಾರೆ.

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಸ್ಟೇರಿಂಗ್ ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ

ಹಳ್ಳದ ಸೇತುವೆ ತಡೆಗೋಡೆಗೆ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಅಪಘಾತ ನಡೆದಿದೆ.

Drowned in Water
Drowned in Water

ಕಲ್ಯಾಣ ಸಾರಿಗೆ ಬಸ್ ಸ್ಟೇರಿಂಗ್ ರಾಡ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಗಾಯಾಳುಗಳು ಮಾನ್ವಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Parul Chaudhary
ಕ್ರೀಡೆ4 mins ago

Parul Chaudhary : ಸ್ಟೀಪಲ್​ ಚೇಸ್​​ ಫೈನಲ್​ಗೆ ಅರ್ಹತೆ ಪಡೆಯಲು ಪಾರುಲ್ ಚೌಧರಿ ವಿಫಲ

Karnataka Weather Forecast
ಮಳೆ15 mins ago

Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

Priyanka Goswami
ಪ್ರಮುಖ ಸುದ್ದಿ25 mins ago

Priyanka Goswami : ರೀಲ್ಸ್​ ಮಾಡೋದಲ್ಲ, ಸ್ಪರ್ಧೆಯಲ್ಲಿ ಓಡಿ ಪದಕ ಗೆಲ್ಲು; ಪ್ರಿಯಾಂಕ ಗೋಸ್ವಾಮಿಗೆ ನೆಟ್ಟಿಗರ ತಪರಾಕಿ

Health tips for Over 40 supplimnt
ಆರೋಗ್ಯ41 mins ago

Health tips for Over 40: ನಿಮಗೆ 40 ದಾಟಿತೇ? ಹಾಗಾದರೆ ಈ ಸಪ್ಲಿಮೆಂಟ್‌ಗಳು ನಿಮಗೆ ಬೇಕಾಗಬಹುದು!

Marriage
ವೈರಲ್ ನ್ಯೂಸ್41 mins ago

ಮದುವೆಯಾದ ಮೇಲೂ ಪತ್ನಿಗೆ ಹಳೇ ಲವ್ವರ್‌ ಮೇಲೆ ಮೋಹ; ಆತನೊಂದಿಗೇ ಮದುವೆ ಮಾಡಿಸಿದ ಪತಿ!

Government Job
ಕರ್ನಾಟಕ48 mins ago

Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

Paris Olympics
ಕ್ರೀಡೆ48 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್‌ ಪದಕ ಗೆಲುವಿಗೆ ಹಿನ್ನಡೆಯಾದ ಮೊಣಕಾಲಿನ ಗಾಯ; ಕಣ್ಣೀರು ಸುರಿಸುತ್ತಾ ಸೆಮಿಯಿಂದ ಹಿಂದೆ ಸರಿದ ಮರಿನ್‌

Money Guide
ಮನಿ-ಗೈಡ್59 mins ago

Money Guide: ನೆರೆ, ಭೂಕುಸಿತದಿಂದ ನಿಮ್ಮ ಮನೆಯನ್ನು ರಕ್ಷಿಸಲು ಜಸ್ಟ್‌ ಹೀಗೆ ಮಾಡಿ ಸಾಕು

Kiran Raj Ronny releasing on August 30th
ಸ್ಯಾಂಡಲ್ ವುಡ್1 hour ago

Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

Paris Olympics 2024
ಪ್ರಮುಖ ಸುದ್ದಿ1 hour ago

Bikini vs : Hijab : ಸ್ಪೇನ್​, ಈಜಿಪ್ಟ್​ ನಡುವಿನ ಬೀಚ್ ವಾಲಿಬಾಲ್ ಪಂದ್ಯದ ವೇಳೆ ಕಿಡಿ ಹಚ್ಚಿದ ಬಿಕಿನಿ ವರ್ಸಸ್ ಹಿಜಾಬ್​ ಚರ್ಚೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ4 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌