Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ - Vistara News

ಬೆಳಗಾವಿ

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

Assault case : ಬೇರೊಬ್ಬ ಯುವತಿ ಜತೆಗೆ ಅಕ್ರಮ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್‌ಐ ಪತ್ನಿಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಹಲ್ಲೆಗೊಳಾದ ಮಹಿಳೆ ಆಸ್ಪತ್ರೆ ಪಾಲಾಗಿದ್ದು, ಪತಿಯಿಂದ ಮುಕ್ತಿಕೊಡಿಸಿ ಎಂದು ಗೋಳಾಡುತ್ತಿದ್ದಾರೆ.

VISTARANEWS.COM


on

assault case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಪಿಎಸ್ಐನಿಂದ ಹೆಂಡತಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ (Assault Case) ಆರೋಪ ಕೇಳಿ ಬಂದಿದೆ. ತೀವ್ರ ಹಲ್ಲೆಗೊಳಗಾದ ಪತ್ನಿ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲಾಗಿದೆ.

ಪಿಎಸ್ಐ ಉದ್ದಪ್ಪ ಕಟ್ಟಿಕಾರ್ ಎಂಬಾತ ಪತ್ನಿಗೆ ಮನಬಂದಂತೆ ಥಳಿಸಿದ್ದಾನೆ. ಪ್ರತಿಮಾ ಉದ್ದಪ್ಪ ಕಟ್ಟಿಕಾರ್ ಹಲ್ಲೆಗೊಳಗಾದವರು. ಪತಿ ಉದ್ದಪ್ಪ ಬೇರೊಬ್ಬ ಯುವತಿಯ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಹೀಗಾಗಿ ಪತ್ನಿ ಪ್ರತಿಮಾ ಬೇರೊಬ್ಬ ಯುವತಿಯ ಜತೆಗೆ ಅಕ್ರಮ ಸಂಬಂಧ ಇರುವುದನ್ನು ಪ್ರಶ್ನಿಸಿದ್ದಾರೆ.

ಮಕ್ಕಳ ಆಧಾರ ಕಾರ್ಡ್, ರೇಷನ್ ಕಾರ್ಡ್ ಕೇಳಿದ್ದಕ್ಕೆ ಮಕ್ಕಳೆದರೇ ಉದ್ದಪ್ಪ, ಪ್ರತಿಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದಂಪತಿ ರಾಮತೀರ್ಥ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪತ್ನಿ ಪ್ರತಿಮಾ ಕಣ್ಣು, ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಹಲ್ಲೆ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪತಿಯಿಂದ ನನಗೆ ಮುಕ್ತಿ ಕೊಡಿಸಿ ಎಂದು ಕೈ ಮುಗಿದು ಪತ್ನಿ ಪ್ರತಿಮಾ ಗೋಳಾಡುತ್ತಿದ್ದಾರೆ. ಈ ಹಿಂದೆಯೂ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಪಿಎಸ್ಐ ವಿರುದ್ಧ ಅಂಕೋಲಾದಲ್ಲಿ ಕೇಸ್ ದಾಖಲಾಗಿತ್ತು. ಈಗ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪ್ರತಿಮಾ ಬೆಳಗಾವಿಗೆ ಬಂದಿದ್ದರು. ಅಂಕೋಲಾಕ್ಕೆ ಹೋಗಲು ನನಗೆ ಅನುಮತಿ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು

ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

ಚಿಕ್ಕಮಗಳೂರು: ಟ್ರಾಫಿಕ್‌ ಪೊಲೀಸ್‌ವೊಬ್ಬರು ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು (Assault Case) ಎಳೆದಿದ್ದಾರೆ. ಪರಿಣಾಮ ಸವಾರ ಬೈಕ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ಘಟನೆ ನಡೆದಿದೆ.

ಹೆಲ್ಮೆಟ್ ಹಾಕದಿದ್ದಕ್ಕೆ ಫೈನ್ ಹಾಕುವ ಬದಲು ಟ್ರಾಫಿಕ್ ಪೊಲೀಸ್ ದೌರ್ಜನ್ಯ ಮೆರೆದಿದ್ದಾರೆ ಅಂತ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟ್ರಾಫಿಕ್ ಸಬ್ ಇನ್‌ಸ್ಪೆಕ್ಟರ್‌ ಧನಂಜಯ್ ವರ್ತನೆಗೆ ಕಿಡಿಕಾರಿದ್ದಾರೆ. ಘಟನೆಯ ದೃಶ್ಯ ರಸ್ತೆ ಬದಿಯ‌ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾಲರ್ ಪಟ್ಟಿ ಹಿಡಿದು ಎಳೆದಾಕ್ಷಣ ಬೈಕ್‌ ಸವಾರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಯುವಕನ ಕೈ-ಕಾಲುಗಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ರಾಫಿಕ್ ಪಿಎಸ್ಐ ಧನಂಜಯ್ ವರ್ತನೆಗೆ ‌ಸ್ಥಳದಲ್ಲೇ ಹಲವರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಆಟೋ ಚಾಲಕರ ಹೊಡಿಬಡಿ

ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರತಾಪ್ ಚಂದ್ರ ಎಂಬಾತ ಆಟೋ ಚಾಲಕರಿಂದಲೇ ಹಲ್ಲೆಗೊಳಗಾದವರು. ಉಡುಪಿ ನಗರದ ಸಿಟಿ ಬಸ್ ಸ್ಟಾಂಡ್ ಬಳಿ ಘಟನೆ ನಡೆದಿದೆ.

ನಗರ ವ್ಯಾಪ್ತಿಯಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿರುವಾಗ ಒಂದು ತಂಡದಿಂದ ಹಲ್ಲೆ ನಡೆದಿದೆ. ಬಾಡಿಗೆ ಮಾಡಲು ನನಗೆ ಅನುಮತಿ ಇದೆ ಎಂದಾಗ ಕೋಪಗೊಂಡ ನಗರದ ರಿಕ್ಷಾ ಚಾಲಕರು ಪ್ರತಾಪ್ ಚಂದ್ರ ಅವರಿಗೆ ಹಲ್ಲೆ ನಡೆಸಿದ್ದಾರೆ. ಉಡುಪಿ ನಗರದ ವ್ಯಾಪ್ತಿಯಲ್ಲಿರುವ ರಿಕ್ಷಾ ಸ್ಟ್ಯಾಂಡ್‌ಗಳಲ್ಲಿ ಎಲ್ಲಿಯೂ ರಿಕ್ಷಾ ನಿಲ್ಲಿಸದಂತೆ ತಾಕೀತು ಮಾಡಿದ್ದಾರೆ. ಸದ್ಯ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆಟೋ ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆಯ (Rain News) ಅಬ್ಬರ ತಗ್ಗಿದ್ದು, ಮುಂದಿನ ವಾರ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡಿನ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather Forecast
Koo

ಹಾವೇರಿ/ಬೆಂಗಳೂರು: ಹಾವೇರಿಯಲ್ಲಿ ನಿರಂತರ ಮಳೆಗೆ (Karnataka Weather Forecast) ಸರಕಾರಿ ಶಾಲೆ ಕಟ್ಟಡವೊಂದು ಸೋರುತ್ತಿದೆ. ಶತಮಾನ ಕಂಡಿರುವ ಹಾವೇರಿಯ ಕಳಸೂರಿನಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀರು ಸೋರಿಕೆಯಿಂದಾಗಿ ಮಕ್ಕಳು ಪರದಾಟ ಅನುಭವಿಸುತ್ತಿದ್ದಾರೆ. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡದ ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮುಂದಿನ ವಾರ ಭಾರಿ ಮಳೆ

ಮುಂದಿನ ಒಂದು ವಾರ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ

ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದ್ದು, ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡ ನೈರುತ್ಯ

ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಹಾಗೂ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಮಂಕಿ 11, ಶಿವಮೊಗ್ಗದ ಆನವಟ್ಟಿ, ಆಗುಂಬೆಯಲ್ಲಿ ತಲಾ 10 ಸೆಂ.ಮೀ ಮಳೆಯಾಗಿದೆ. ಕ್ಯಾಸಲ್‌ ರಾಕ್‌, ಗೇರ್ಸೊಪ್ಪ, ಕದ್ರಾ, ಜಗಲಬೆಟ್‌ನಲ್ಲಿ 10ಸೆಂ.ಮೀ ಮಳೆಯಾಗಿದೆ. ಕೋಟ, ಕಮ್ಮರಡಿ,ಶೃಂಗೇರಿ, ಸಿದ್ದಾಪುರ, ಕುಮಟಾದಲ್ಲಿ 6 ಸೆಂ.ಮೀ, ಮೂಲ್ಕಿ, ಮಾಣಿ, ಕಾರವಾರ, ಯಲ್ಲಾಪುರ, ಪುತ್ತೂರು, ಹೊನ್ನಾವರ, ಕೊಪ್ಪ, ಜಯಪುರದಲ್ಲಿ 5 ಸೆಂ.ಮೀ ಮಳೆಯಾಗಿದೆ.

ಧರ್ಮಸ್ಥಳ, ಸಿದ್ದಾಪುರ, ಲಿಂಗನಮಕ್ಕಿ, ದಕ್ಷಿಣ ಕನ್ನಡ, ಜೋಯಿಡಾ, ಶಿರಾಲಿ, ಕುಂದಾಪುರ ಹಾಗೂ ಮಂಗಳೂರು, ಕಾರ್ಕಳ, ಬೆಳಗಾವಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಸುಳ್ಯ, ಗೋಕರ್ಣ, ಮಂಗಳೂರು, ಪಣಂಬೂರು, ಬೆಳ್ತಂಗಡಿ, ಹಳಿಯಾಳ, ಲೋಂಡಾ, ಎನ್‌ಆರ್‌ಪುರ, ಬಾಳೆಹೊನ್ನೂರು, ಮೂರ್ನಾಡು, ಭಾಗಮಂಡಲ, ಕಳಸ, ನಿಲ್ಕುಂದ, ಕಿರವತ್ತಿ, ಬೆಳಗಾವಿ, ತ್ಯಾಗರ್ತಿ ಸೇರಿದಂತೆ ಸೋಮವಾರಪೇಟೆ, ಹುಂಚದಕಟ್ಟೆ, ಹಿರಿಯೂರು, ಹಾಸನ, ಹಾರಂಗಿ, ತೊಂಡೇಬಾವಿ, ಬಿ ದುರ್ಗ, ದೊಡ್ಡಬಳ್ಳಾಪುರ, ಕೊಟ್ಟಿಗೆಹಾರ ಸುತ್ತಮುತ್ತ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Drowned in water : ಕಟಿಂಗ್‌ ಮಾಡಿಸಲು ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರಿಬ್ಬರು ನಿಯಂತ್ರಣ ತಪ್ಪಿ ಬೈಕ್‌ ಸಮೇತ ರಸ್ತೆಯ ಪಕ್ಕದ ನಾಲೆಗೆ ಬಿದ್ದಿದ್ದರು. ಒಬ್ಬ ಸಹೋದರ ಈಜಿ ದಡ ಸೇರಿದ್ದರೆ ಮತ್ತೊಬ್ಬ ನೀರುಪಾಲಾಗಿದ್ದ. ಇದೀಗ ಶೋಧ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು ಶವವನ್ನು ಮೇಲಿತ್ತಿದ್ದಾರೆ.

VISTARANEWS.COM


on

By

Drowned in water
Koo

ಬೆಳಗಾವಿ: ಆಯತಪ್ಪಿ ಮಾರ್ಕಂಡೇಯ ನದಿಯ (Drowned in water) ನಾಲೆಗೆ ಸಹೋದರರು ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಬೆಳಗಾವಿ ತಾಲೂಕಿನ ಆಲತಗಾ ಬಳಿ ನಿನ್ನೆ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿತ್ತು.

ಓಂಕಾರ ಪಾಟೀಲ್ ಹಾಗೂ ಜ್ಯೋತಿನಾಥ ಪಾಟೀಲ್ ಎಂಬ ಸಹೋದರರು ಬೈಕ್‌ನಲ್ಲಿ ಹೋಗುತ್ತಿದ್ದರು. ಶ್ರಾವಣ ಮಾಸ ಪ್ರಾರಂಭ ಹಿನ್ನೆಲೆಯಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ತೆರಳಿದ್ದರು.

ಈ ವೇಳೆ ಆಯತಪ್ಪಿ ಇಬ್ಬರು ನಾಲೆಗೆ ಬಿದ್ದಿದ್ದರು. ನಾಲೆಗೆ ಬೀಳುತ್ತಿದ್ದಂತೆ ಜ್ಯೋತಿನಾಥ ಪಾಟೀಲ್ ಹೇಗೋ ಈಜಿ ದಡ ಸೇರಿದ್ದರು. ಆದರೆ ಇತ್ತ ಓಂಕಾರ ಪಾಟೀಲ್ ಬೈಕ್‌ ಜತೆಗೆ ಕಣ್ಮರೆಯಾಗಿದ್ದರು.

ಬಳಿಕ ನಾಪತ್ತೆಯಾಗಿದ್ದ ಓಂಕಾರ ಪಾಟೀಲ್‌ಗಾಗಿ ಶೋಧ ನಡೆಸಲಾಗಿತ್ತು. ಇದೀಗ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿದ ಎಸ್‌ಡಿಆರ್‌ಎಫ್ ತಂಡ ಶವ ಹೊರತೆಗೆದಿದ್ದಾರೆ.

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಸ್ಟೇರಿಂಗ್ ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ

ಹಳ್ಳದ ಸೇತುವೆ ತಡೆಗೋಡೆಗೆ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಅಪಘಾತ ನಡೆದಿದೆ.

Drowned in Water
Drowned in Water

ಕಲ್ಯಾಣ ಸಾರಿಗೆ ಬಸ್ ಸ್ಟೇರಿಂಗ್ ರಾಡ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಗಾಯಾಳುಗಳು ಮಾನ್ವಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಯಾದಗಿರಿ

Yadagiri News: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ; ಯಾದಗಿರಿ ಡಿಎಚ್ಒ ಅಮಾನತು

Yadagiri News: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ. ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಡಿಎಚ್ಒಯಿಂದ ನೇರವಾಗಿ ಕಲಬುರ್ಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

VISTARANEWS.COM


on

Yadagiri News
Koo

ಯಾದಗಿರಿ: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ. ಡಿಎಚ್ಒಯಿಂದ ನೇರವಾಗಿ ಕಲಬುರ್ಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ (Yadagiri News).

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕ ದೂರು ಹಿನ್ನಲೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ಲೋಕಾಯುಕ್ತ ದಾಳಿ ನಡೆದಿತ್ತು. ಡಾ. ಪ್ರಭುಲಿಂಗ್ ಮಾನಕರ್ ಅವರ ಯಾದಗಿರಿಯ ಕಚೇರಿ, ಮನೆ ಹಾಗೂ ಕಲಬುರ್ಗಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿತ್ತು.

ಕಾಲುವೆಗೆ ಬಿದ್ದ ಬೈಕ್; ಓರ್ವ ನಾಪತ್ತೆ

ಬೆಳಗಾವಿ: ರಸ್ತೆ ಗುಂಡಿಗೆ ಬಿದ್ದ ಬೈಕ್‌ ಬಳಿಕ ಆಯ ತಪ್ಪಿ ಕಾಲುವೆಗೆ ಬಿದ್ದಿರುವ ಘಟನೆ ಬೆಳಗಾವಿ ತಾಲೂಕಿನ ಅಲತಗಾ ಗ್ರಾಮದಲ್ಲಿ ‌ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಹಿಂಬದಿ ಸವಾರ ಓಂಕಾರ್ ಅರುಣ್ ಪಾಟೀಲ್ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದು ನಾಪತ್ತೆಯಾಗಿದ್ದು, ಬೈಕ್‌ ಓಡಿಸುತ್ತಿದ್ದ ಜ್ಯೋತಿನಾಥ್‌ ಪಾಟೀಲ್ ಈಜಿ ದಡ ಸೇರಿದ್ದಾರೆ. ಓಂಕಾರ್ ಅರುಣ್ ಪಾಟೀಲ್ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭವಾಗಿದ್ದು, ಡಿಸಿಪಿ ಸ್ನೇಹಾ, ತಹಶಿಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎನ್‌ಡಿಆರ್‌ಎಫ್‌ ತಂಡವೂ ಸ್ಥಳದಲ್ಲಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

ಯಾದಗಿರಿ ಕೈ ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಪ್ರಕರಣಕ್ಕೆ (PSI Parshuram Death Case) ಸಂಬಂಧಿಸಿದಂತೆ ಅವರ ಪತ್ನಿ ಶ್ವೇತಾ ಕೊಟ್ಟ ದೂರಿನನ್ವಯ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪಣ್ಣಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಿಎನ್ಎಸ್ ಸೆಕ್ಷನ್ 108 ಅಡಿ ಪ್ರಕರಣ ದಾಖಲಾಗಿದ್ದು, ಕೇಸ್‌ನಲ್ಲಿ ಎ1 ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಎ2 ಪುತ್ರ ಪಂಪನಗೌಡ ಹೆಸರು ಉಲ್ಲೇಖಿಸಲಾಗಿದೆ. ಸತತ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ, ಕೊನೆಗೂ ಎಫ್ಐಆರ್ ದಾಖಲಿಸಿಕೊಂಡಿದೆ.

ಕೇಸ್ ದಾಖಲಾಗುತ್ತಿದ್ದಂತೆ ಶಾಸಕನ ಮೊಬೈಲ್ ಸ್ವಿಚ್ ಆಫ್

ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಕೇಸ್ ದಾಖಲಾಗುತ್ತಿದ್ದಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಕೇಸ್ ದಾಖಲಾಗಿದ್ದರಿಂದ ಅಪ್ಪ-ಮಗ ತಲೆ ಮರೆಸಿಕೊಂಡಿದ್ದು, ಬೆಂಗಳೂರಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ (ಆ. 2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

Continue Reading

ಮಳೆ

Karnataka Weather : ಮುಂದುವರಿಯಲಿದೆ ವಿಪರೀತ ಮಳೆ; ಕರಾವಳಿಗೆ ಆರೆಂಜ್‌, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Rain News : ಭಾನುವಾರದಂದು ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್‌ ಹಾಗೂ ಯೆಲ್ಲೋ ಎಚ್ಚರಿಕೆಯನ್ನು (Karnataka Weather Forecast) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಮತ್ತೆ ಸಕ್ರಿಯವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Parul Chaudhary
ಕ್ರೀಡೆ3 mins ago

Parul Chaudhary : ಸ್ಟೀಪಲ್​ ಚೇಸ್​​ ಫೈನಲ್​ಗೆ ಅರ್ಹತೆ ಪಡೆಯಲು ಪಾರುಲ್ ಚೌಧರಿ ವಿಫಲ

Karnataka Weather Forecast
ಮಳೆ15 mins ago

Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

Priyanka Goswami
ಪ್ರಮುಖ ಸುದ್ದಿ24 mins ago

Priyanka Goswami : ರೀಲ್ಸ್​ ಮಾಡೋದಲ್ಲ, ಸ್ಪರ್ಧೆಯಲ್ಲಿ ಓಡಿ ಪದಕ ಗೆಲ್ಲು; ಪ್ರಿಯಾಂಕ ಗೋಸ್ವಾಮಿಗೆ ನೆಟ್ಟಿಗರ ತಪರಾಕಿ

Health tips for Over 40 supplimnt
ಆರೋಗ್ಯ40 mins ago

Health tips for Over 40: ನಿಮಗೆ 40 ದಾಟಿತೇ? ಹಾಗಾದರೆ ಈ ಸಪ್ಲಿಮೆಂಟ್‌ಗಳು ನಿಮಗೆ ಬೇಕಾಗಬಹುದು!

Marriage
ವೈರಲ್ ನ್ಯೂಸ್40 mins ago

ಮದುವೆಯಾದ ಮೇಲೂ ಪತ್ನಿಗೆ ಹಳೇ ಲವ್ವರ್‌ ಮೇಲೆ ಮೋಹ; ಆತನೊಂದಿಗೇ ಮದುವೆ ಮಾಡಿಸಿದ ಪತಿ!

Government Job
ಕರ್ನಾಟಕ47 mins ago

Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

Paris Olympics
ಕ್ರೀಡೆ48 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್‌ ಪದಕ ಗೆಲುವಿಗೆ ಹಿನ್ನಡೆಯಾದ ಮೊಣಕಾಲಿನ ಗಾಯ; ಕಣ್ಣೀರು ಸುರಿಸುತ್ತಾ ಸೆಮಿಯಿಂದ ಹಿಂದೆ ಸರಿದ ಮರಿನ್‌

Money Guide
ಮನಿ-ಗೈಡ್58 mins ago

Money Guide: ನೆರೆ, ಭೂಕುಸಿತದಿಂದ ನಿಮ್ಮ ಮನೆಯನ್ನು ರಕ್ಷಿಸಲು ಜಸ್ಟ್‌ ಹೀಗೆ ಮಾಡಿ ಸಾಕು

Kiran Raj Ronny releasing on August 30th
ಸ್ಯಾಂಡಲ್ ವುಡ್1 hour ago

Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

Paris Olympics 2024
ಪ್ರಮುಖ ಸುದ್ದಿ1 hour ago

Bikini vs : Hijab : ಸ್ಪೇನ್​, ಈಜಿಪ್ಟ್​ ನಡುವಿನ ಬೀಚ್ ವಾಲಿಬಾಲ್ ಪಂದ್ಯದ ವೇಳೆ ಕಿಡಿ ಹಚ್ಚಿದ ಬಿಕಿನಿ ವರ್ಸಸ್ ಹಿಜಾಬ್​ ಚರ್ಚೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ4 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌