Zameer Ahmed Khan: ಎಚ್‌ಡಿಕೆ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ, ಅವರ ಆಸ್ತಿಯಿಂದ 3 ಬಜೆಟ್‌ ಮಾಡಬಹುದು ಎಂದ ಜಮೀರ್‌ - Vistara News

ಕರ್ನಾಟಕ

Zameer Ahmed Khan: ಎಚ್‌ಡಿಕೆ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ, ಅವರ ಆಸ್ತಿಯಿಂದ 3 ಬಜೆಟ್‌ ಮಾಡಬಹುದು ಎಂದ ಜಮೀರ್‌

ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್‌ ಮಾತನಾಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಬಡವರಿಗೆ ಒಂದು‌ ಮನೆಯನ್ನೂ ಕೊಟ್ಟಿಲ್ಲ. ಯಾಕೆ ಬಿಜೆಪಿ-ಜೆಡಿಎಸ್‌ಗೆ ಬಡವರ ಬಗ್ಗೆ ಕಾಳಜಿ ಇಲ್ವಾ ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Zameer Ahmed Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಕುಮಾರಸ್ವಾಮಿ ಕೇವಲ 37 ಸೀಟ್ ಗೆದ್ದು ನಮ್ಮ ಜೊತೆ ಬಂದಿದ್ದರು. ಅವರದು ಮ್ಯಾಚ್ ಫಿಕ್ಸಿಂಗ್, ಅವರನ್ನು ನಂಬಬೇಡಿ ಅಂತ ಕಾಂಗ್ರೆಸ್‌ನವರಿಗೆ ಅಂದೇ ಹೇಳಿದ್ದೆ. ನಾನು ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಕುಮಾರಸ್ವಾಮಿ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ. ಬಿಜೆಪಿಗಿಂತ ಬಿಗಿಯಾದ ಖಾಕಿ ಚೆಡ್ಡಿ ಹಾಕಿದ್ದಾರೆ ಎಂದು ನಾನು ಹೇಳಿದಾಗ ಕೆಲವರು ಕೇಳಲಿಲ್ಲ ಎಂದು ಸಚಿವ ಜಮೀರ್ ಅಹ್ಮದ್‌ (Zameer Ahmed Khan) ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿ ಬಡವರಿಗೆ ಒಂದು‌ ಮನೆಯನ್ನೂ ಕೊಟ್ಟಿಲ್ಲ. ಯಾಕೆ ಬಿಜೆಪಿ-ಜೆಡಿಎಸ್‌ಗೆ ಬಡವರ ಬಗ್ಗೆ ಕಾಳಜಿ ಇಲ್ವಾ? ಕುಮಾರಸ್ವಾಮಿ ಅವರೇ ರಾಮನಗರದ ಜನ್ಮಕೊಟ್ಟ ಕ್ಷೇತ್ರ ಅಂತೀರಿ. ರಾಮನಗರದಲ್ಲಿ ಎಷ್ಟು ಮನೆ ಕೊಟ್ಟಿದ್ದೀರಿ? ನಿಮಗೆ ಓಪನ್ ಚಾಲೆಂಜ್ ಹಾಕುತ್ತೀನಿ, ಕೇವಲ 330 ಮನೆ ಕೊಟ್ಟಿದ್ದೀರಿ. ನಾವು ಎಷ್ಟು ಮನೆ ಕೊಟ್ಟಿದ್ದೀವಿ ಬನ್ನಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಚನ್ನಪಟ್ಟಣಕ್ಕೆ 5 ಸಾವಿರ ಮನೆ ಮಂಜೂರು ಮಾಡುತ್ತೇವೆ

ಡಿ.ಕೆ.ಸುರೇಶ್ ಸೋತಿದ್ದು ನನಗೆ ಹೊಟ್ಟೆ ಉರೀತಿದೆ. ಕ್ಷೇತ್ರದಲ್ಲಿ ಕ್ಲರ್ಕ್ ರೀತಿ ಕೆಲಸ ಮಾಡಿದ್ದಾರೆ. ಅವರು ಕ್ಷೇತ್ರಕ್ಕಾಗಿ ಹಲವು ರಾತ್ರಿ ಕೆಲಸ ಮಾಡಿದ್ದಾರೆ. ಅಂತವರು ಸೋತಿದ್ದರಿಂದ ಹೊಟ್ಟೆ ಉರೀತಿದೆ. ಡಿ.ಕೆ. ಸುರೇಶ್ ಅವರ 1 ಪರ್ಸೆಂಟ್ ಕೆಲಸ ಕುಮಾರಸ್ವಾಮಿ ಮಾಡಿಲ್ಲ. ಕೇವಲ ಡಂಗುರ ಹೊಡೆದುಕೊಂಡು ಬರುತ್ತಾರೆ. ಚನ್ನಪಟ್ಟಣಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಬೇಕು ಅಂತ ಡಿ.ಕೆ.ಸುರೇಶ್ ಕೇಳಿದ್ದರು. ಹೀಗಾಗಿ ಚನ್ನಪಟ್ಟಣಕ್ಕೆ ಐದು ಸಾವಿರ ಮನೆ ಮಂಜೂರು ಮಾಡುತ್ತೇವೆ, ಇನ್ನು 15 ದಿನಗಳಲ್ಲಿ 5 ಸಾವಿರ ಮನೆ ಮಂಜೂರು ಮಾಡುತ್ತೇವೆ. ಮೈನಾರಿಟಿ ಅಭಿವೃದ್ಧಿಗೆ 10ಕೋಟಿ ಹಣ ಕೊಡುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್‌ ಘೋಷಣೆ ಮಾಡಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಿಂದ ಏನೂ ಆಗಲ್ಲ. ನಾವೆಲ್ಲಾ ಇರೋವರೆಗೂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಏನೂ‌ ಮಾಡೋಕಾಗಲ್ಲ. ಯಾರೋ ಅವರನ್ನು ಮುಟ್ಟೋಕೆ ಸಾಧ್ಯವಿಲ್ಲ. ನಾವೆಲ್ಲಾ ನಮ್ಮ ನಾಯಕರ ಜೊತೆ ಇದ್ದೀವಿ. ಡಿಕೆಶಿ ಆಸ್ತಿ ಬಗ್ಗೆ ಬಿಚ್ಚಿಡ್ತೀನಿ ಅಂತ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಕುಮಾರಸ್ವಾಮಿ ನಿಮ್ಮ ಕುಟುಂಬದ ಆಸ್ತಿ ತೆಗೆದರೆ ಕರ್ನಾಟಕದ 3 ಬಜೆಟ್ ಮಾಡಬಹುದು. ನಿಮ್ಮ ಅಣ್ಣ, ಅಕ್ಕ, ಬಾವ, ಅನುಸೂಯಕ್ಕ ಎಲ್ಲರ ಆಸ್ತಿ ತೆಗಿಯಿರಿ. ದಯಮಾಡಿ ಎರಡು ಬಜೆಟ್ ಗಾಗುವಷ್ಟಾದರೂ ಜನರಿಗೆ ಕೊಡಿ ಎಂದು ಕುಮಾರಸ್ವಾಮಿಗೆ ಒತ್ತಾಯ ಮಾಡಿದರು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಯಾವ ಉದ್ದೇಶಕ್ಕೆ ಪಾದಯಾತ್ರೆ ಮಾಡುತ್ತಿದ್ದೀರಿ: ಪರಮೇಶ್ವರ್

ಗೃಹಸಚಿವ ಜಿ.ಪರಮೇಶ್ವರ್ ಮಾತನಾಡಿ, ಪಾದಯಾತ್ರೆ ಬೇಡ ಅಂದವರು ಪೋಟೊದಲ್ಲಿ ಮುಂದೆ ನಿಂತಿದ್ದಾರೆ. ಪಾದಯಾತ್ರೆ ಮಾಡಲೇಬೇಕು ಅಂತಿರುವ ಬಿಜೆಪಿ ಅಧ್ಯಕ್ಷರು ಹಿಂದೆ ನಿಂತಿದ್ದಾರೆ. ಇದರ ಅರ್ಥ ಏನು ಅಂತ ಹೇಳಬೇಕು. ನಿನ್ನೆ ಬಿಜೆಪಿ ನಾಯಕ ಯತ್ನಾಳ್ ಒಂದು ಮಾತು ಹೇಳಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಭ್ರಷ್ಟಾಚಾರಿಗಳು ಪಾದಯಾತ್ರೆ ಮಾಡ್ತಿದ್ದಾರೆ ಎಂದಿದ್ದಾರೆ. ನಿಮಗೆ ನಾಚಿಕೆ ಆಗಬೇಕು, ಯಾವ ಉದ್ದೇಶಕ್ಕೆ ಪಾದಯಾತ್ರೆ ಮಾಡುತ್ತಿದ್ದೀರಿ. ಅಸತ್ಯ ಹೇಳಲು ಪಾದಯಾತ್ರೆ ಮಾಡುತ್ತಿದ್ದೀರಿ, ಜನ ನಿಮಗೆ ಬುದ್ಧಿ ಕಲಿಸಿ ಅಧಿಕಾರ ಕಿತ್ತುಕೊಂಡಿದ್ದಾರೆ ಎಂದು ಕಿಡಿಕಾರಿದರು.‌

ಇದನ್ನೂ ಓದಿ | HD Deve Gowda: ದೆಹಲಿ ಮೆಟ್ರೋದಲ್ಲಿ ಸಂಚರಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ನಿಮ್ಮದು 40% ಭ್ರಷ್ಟಾಚಾರ ಇಡೀ ದೇಶಕ್ಕೆ ಗೊತ್ತು. ನೀವು ನಮ್ಮ ಸರ್ಕಾರದ ಮೇಲೆ ಆಪಾದನೆ ಮಾಡ್ತಿದ್ದೀರಿ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡ್ತೀರಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿ ಹಗರಣ ಆಗಿದೆ. ಅದರ ಎಂಡಿಯನ್ನು ಬಂಧನ ಮಾಡಲಾಗಿದೆ. 30 ಅಕೌಂಟ್‌ಗೆ ಚೆಕ್ ಮೂಲಕ ಹಣ ಹೋಗಿದೆ. ಭೋವಿ ನಿಗಮದಲ್ಲಿ ಹಗರಣ ಮಾಡಿದ್ದೀರಿ, ಇದರ ಲೆಕ್ಕ ಕೊಡಿ. ಮಾಜಿ ಪ್ರಧಾನಿ ಎಡಿಡಿ ಭೂಕಬಳಿಕೆಯ ಬಗ್ಗೆ ಪತ್ರಿಕೆಯಲ್ಲಿ ನೋಡಿದ್ದೇವೆ. ಇದನ್ನ ಪ್ರಕಟಣೆ ಮಾಡಿದ್ದು ಇದೇ ಬಿಜೆಪಿ ನಾಯಕರು. ದೇವೇಗೌಡರ ಕುಟುಂಬ ಮುಡಾದಲ್ಲಿ 36 ಸೈಟ್ ಪಡೆದಿದೆ. ಇದಕ್ಕೆ ಉತ್ತರ ಕೊಡಿ ಅಂತ ಬಿಜೆಪಿಯವರು ಕೇಳಿದ್ದರು. ಕುಮಾರಸ್ವಾಮಿ ಇದಕ್ಕೆ ನೀವು ಉತ್ತರ ಕೊಡಿ, ನಿಮಗೆ ಪಾದಯಾತ್ರೆ ಮಾಡಲು ಮಾನ-ಮರ್ಯಾದೆ ಇದ್ಯಾ. ಎಂದು ಪ್ರಶ್ನಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾ ತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. “ಮೈ ಮ್ಯಾರೇಜ್ ಈಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ”ದ್ವಾಪರ ದಾಟುತ” ಹಾಡುಗಳು ಹಿಟ್‌ ಆಗಿವೆ. ಆಗಸ್ಟ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Krishnam Pranaya Sakhi
Koo

ಬೆಂಗಳೂರು: ಗೋಲ್ಡನ್‌ ಸ್ಟಾರ್‌ ಗಣೇಶ್‌ (Golden Star Ganesh) ಹಾಗೂ ಮಾಳವಿಕಾ ನಾಯರ್‌ ನಟಿಸಿರುವ ಕೃಷ್ಣಂ ಪ್ರಣಯ ಸಖಿ (Krishnam Pranaya Sakhi) ಸಿನಿಮಾದ ದ್ವಾಪರ ದಾಟುತ ಸೇರಿ ಮೂರು ಹಾಡುಗಳು ಹಿಟ್‌ ಆಗಿವೆ. ಇದರ ಬೆನ್ನಲ್ಲೇ, ಚಿತ್ರತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. ಸೋನು ನಿಗಮ್‌ ಹಾಡಿರುವ ಹೇ ಗಗನ ಎಂಬ ರೊಮ್ಯಾಂಟಿಕ್‌ ಹಾಡನ್ನು ಭಾನುವಾರ (ಆಗಸ್ಟ್‌ 4) ಬಿಡುಗಡೆ ಮಾಡಲಾಗಿದೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ.

“ಮೈ ಮ್ಯಾರೇಜ್ ಈಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಹಿಟ್‌ ಆದ ಬಳಿಕ ಬಿಡುಗಡೆಯಾದ, ಪಂಜಾಬಿ ಗಾಯಕ ಜಸ್‌ಕರಣ್‌ ಸಿಂಗ್‌ ಹಾಡಿರುವ ದ್ವಾಪರ ದಾಟುತ ಹಾಡಂತೂ ಯುಟ್ಯೂಬ್‌ ಸೇರಿ ಎಲ್ಲ ಜಾಲತಾಣಗಳಲ್ಲಿ ದಾಖಲೆ ಬರೆದಿದೆ. ಇದರ ಬೆನ್ನಲ್ಲೇ ಸಿನಿಮಾ ತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. ಆಗಸ್ಟ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

ಇಲ್ಲಿದೆ ರೊಮ್ಯಾಂಟಿಕ್‌ ಸಾಂಗ್‌

ನಾಲ್ಕನೇ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಜಸ್‌ಕರಣ್‌ ಸಿಂಗ್‌ ಅವರು ಕನ್ನಡತಿಯನ್ನೇ ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. “ನಾನು ಗಣೇಶ್‌ ಅವರ ಅಭಿಮಾನಿಯಾಗಿದ್ದೇನೆ. ಅನಿಸುತಿದೆ ಯಾಕೋ ಇಂದು ಹಾಡು ನನಗೆ ಫೇವರಿಟ್ ಆಗಿದೆ. ಈಗ ಕನ್ನಡ ಸಿನಿಮಾದ ಹಾಡು ಹಾಡಿರುವುದು ಖುಷಿ ತಂದಿದೆ. ಕನ್ನಡಿಗರು ನೀಡಿದ ಪ್ರೀತಿಯನ್ನು ನಾನು ಮರೆಯಲು ಸಾಧ್ಯವಿಲ್ಲ. ಮುಂದೊಂದು ದಿನ ಸಾಧ್ಯವಾದರೆ ನಾನು ಕನ್ನಡತಿಯನ್ನೇ ಮದುವೆಯಾಗುವೆ” ಎಂದಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ನಟಿ ಮಾಳವಿಕಾ ನಾಯರ್‌ ಅವರು ಹೆಜ್ಜೆ ಹಾಕಿರುವ ದ್ವಾಪರ ದಾಟುತ ಹಾಡು ಯುಟ್ಯೂಬ್‌ನಲ್ಲಿ 1.3 ಕೋಟಿ (13 ದಶಲಕ್ಷ) ವ್ಯೂಸ್‌ ಪಡೆದುಕೊಂಡಿದೆ. ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿಯೂ ಹಾಡು ದಾಖಲೆ ಬರೆದಿದೆ. ‌

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Continue Reading

ಕರ್ನಾಟಕ

Murder Case: 300 ರೂಪಾಯಿಗಾಗಿ ಹೆತ್ತಮ್ಮನನ್ನೇ ಕೊಂದ ಪಾಪಿ ಮಗ!

Murder Case: 300 ರೂ. ಕೇಳಿದ್ದಕ್ಕೆ ಕೊಡಲ್ಲ ಎಂದು ತಾಯಿ ಹೇಳಿದ್ದಕ್ಕೆ ಮಗ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ತಾಯಿ ಮೃತಪಟ್ಟಿದ್ದಾರೆ.

VISTARANEWS.COM


on

Murder Case
Koo

ಬೆಳಗಾವಿ: 300 ರೂಪಾಯಿಗಾಗಿ ಪಾಪಿ ಮಗನೊಬ್ಬ ಹೆತ್ತಮ್ಮನನ್ನೇ ಕೊಂದಿರುವ ಘಟನೆ ಜಿಲ್ಲೆಯ ಬೈಲಹೊಂಗಲ‌ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆಸದಿದೆ. ಮಹಾದೇವಿ ಗುರೇಪ್ಪ ತೊಲಗಿ (70) ಕೊಲೆಯಾದ ದುರ್ದೈವಿ. ಈರಪ್ಪ ಗುರೇಪ್ಪ ತೊಲಗಿ(34) ತಾಯಿಯನ್ನೇ ಕೊಲೆ ಮಾಡಿದ ಮಗ.

300 ರೂ. ಕೇಳಿದ್ದಕ್ಕೆ ಕೊಡಲ್ಲ ಎಂದು ತಾಯಿ ಹೇಳಿದ್ದಾರೆ. ಇದೇ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ಶುರುವಾಗಿದ್ದು, ನಂತರ ಜಗಳ ವಿಕೋಪಕ್ಕೆ ತಿರುಗಿ ಕಟ್ಟಿಗೆಯಿಂದ ಮಹಾದೇವಿ ತಲೆಗೆ ಮಗ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ತಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆರೋಪಿ ಈರಪ್ಪನನ್ನು ದೊಡವಾಡ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆ ಸಿಂದಗಿ ತಾಲೂಕಿನ ಯರಗಲ್ ಕೆ.ಡಿ. ಗ್ರಾಮದ ಬಳಿ ನಡೆದಿದೆ. ಹನುಮಂತ ಹಿರೇಕುರುಬರ (43) ಮೃತ ಸವಾರ. ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ನಿವಾಸಿಯಾದ ಹನುಮಂತ, ಅಮಾವಾಸ್ಯೆ ಹಿನ್ನಲೆ ಯಾತನೂರು ಗ್ರಾಮದ ದೇವಸ್ಥಾನಕ್ಕೆ ತೆರಳುತ್ತಿದ್ದ. ಈ ವೇಳೆ ದುರಂತ ನಡೆದಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿ ಮೇಯಿಸಲು ಹೋದ ಮಹಿಳೆ‌ ಮೇಲೆ ಕಾಡಾನೆ ದಾಳಿ

ಕೋಲಾರ: ಜಿಲ್ಲೆಯ ಗಡಿ ಗ್ರಾಮದಲ್ಲಿ ಕುರಿ ಮೇಯಿಸಲು ಹೋಗಿದ್ದ ಮಹಿಳೆ‌ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆಯ ಕೈ, ತಲೆಗೆ ಗಂಭೀರ ಗಾಯಗಳಾಗಿವೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಚಿತ್ತಗುಟ್ಟಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಗ್ರಾಮದ ರಾಧಮ್ಮ (70) ಗಾಯಾಳು. ಇವರನ್ನು ಚಿಕಿತ್ಸೆಗಾಗಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Road Accident
Road Accident

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ (Road Accident) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕೆ ಡಿ ಗ್ರಾಮದ ಎನ್ 50 ರಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಹನುಮಂತ ಹಿರೇಕುರುಬರ (43) ಸ್ಥಳದಲ್ಲೇ ಮೃತಪಟ್ಟವರು.

ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ವಾಸಿ ಹನುಮಂತ ಅವರು ಭಾನುವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಜೀವರ್ಗಿ ತಾಲೂಕಿನ ಯಾತನೂರು ಗ್ರಾಮದ ದೇವಸ್ಥಾನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ ಕಾರಿಗೆ ಗುದ್ದಿದೆ. ಗುದ್ದ ರಭಸಕ್ಕೆ ಕೆಳಗೆ ಬಿದ್ದ ಹನುಮಂತ ಅವರಿಗೆ ಗಂಭೀರ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ಕರ್ನಾಟಕ

Western Ghats: ನಾಳೆಯಿಂದ ಪಶ್ಚಿಮ ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

Western Ghats: ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಮ್‌ಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

VISTARANEWS.COM


on

Western Ghats
Koo

ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ರೆಸಾರ್ಟ್‌ ಹೋಮ್‌ ಸ್ಟೇ ಸೇರಿ ಎಲ್ಲ ರೀತಿಯ ಒತ್ತುವರಿಯನ್ನು ತೆರವು ಮಾಡಲು ʼಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆʼ ರಚಿಸಲಾಗಿದೆ. ಈ ಕಾರ್ಯಪಡೆ ನಾಳೆಯಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ (Western Ghats) ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಿದ್ದಾರೆ.

ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಮ್‌ಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು, ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64 ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ. ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್‌ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ | ‌MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ 90 ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್‌ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ. ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಪಶ್ಚಿಮಘಟ್ಟದಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

Continue Reading

ಕರ್ನಾಟಕ

‌MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

‌MB Patil: ‘ಕುಮಾರಸ್ವಾಮಿ ಮೊದಲು ಪಾದಯಾತ್ರೆಗೆ ತಮ್ಮ‌ ನೈತಿಕ ಬೆಂಬಲವೂ ಇಲ್ಲ ಎಂದಿದ್ದರು. ಆಮೇಲೆ ಯಾರದೋ ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪಾದಯಾತ್ರೆಗೆ ಹೋಗಿದ್ದಾರಷ್ಟೆ ಎಂದು ಸಚಿವ ಎಂ.ಬಿ.ಪಾಟೀಲ್‌ ಟೀಕಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಹಿಂದೆ ಬಿಜೆಪಿ ಜತೆ, ಆಮೇಲೆ ಕಾಂಗ್ರೆಸ್ ಜತೆ ಸೇರಿಕೊಂಡು ಸರ್ಕಾರ ರಚಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು. ಈಗ ಪುನಃ ಬಿಜೆಪಿ ಜತೆ ಹೋಗಿದ್ದಾರೆ. ಅವರದು ಅವಕಾಶವಾದಿ ಮೈತ್ರಿ. ಅವರು ತಮ್ಮ ಸರ್ಕಾರವನ್ನೇ ಉಳಿಸಿಕೊಳ್ಳಲಿಲ್ಲ. ಈಗ ನಮ್ಮ ಸರ್ಕಾರವನ್ನು ಉರುಳಿಸುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ್ (‌MB Patil) ಟೀಕಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಮೊದಲು ಪಾದಯಾತ್ರೆಗೆ ತಮ್ಮ‌ ನೈತಿಕ ಬೆಂಬಲವೂ ಇಲ್ಲ ಎಂದರು. ಆಮೇಲೆ ಯಾರದೋ ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪಾದಯಾತ್ರೆಗೆ ಹೋಗಿದ್ದಾರಷ್ಟೆ ಎಂದು ಕುಟುಕಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಯಾವ ತಪ್ಪೂ ಇಲ್ಲ. ಸ್ವತಃ ಮುಡಾ ತಪ್ಪು ಮಾಡಿ, ಅದನ್ನು ಒಪ್ಪಿಕೊಂಡಿದೆ. ನಿಯಮಗಳಂತೆಯೇ ಸಿಎಂ ಪತ್ನಿಗೆ ಬದಲಿ ನಿವೇಶನಗಳನ್ನು ಅದು ಕೊಟ್ಟಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಸಚಿವರ ಸಭೆ ಕರೆದಿರುವುದರಲ್ಲಿ ತಪ್ಪೇನೂ ಇಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರು ನಮಗೆ ಸಲಹೆ ಕೊಡಬಹುದಷ್ಟೆ. ಇದಕ್ಕಿಂತ ಹೆಚ್ಚು ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.

ಪೊಲೀಸ್ ಎಸ್ಐ ಒಬ್ಬರು ಸತ್ತಿರುವುದರ ಹಿಂದೆ ಅಲ್ಲಿನ ಕಾಂಗ್ರೆಸ್ ಶಾಸಕರ ಕೈವಾಡವೇನೂ‌ ಇಲ್ಲ. ಈಗ ಪ್ರತಿಯೊಂದಕ್ಕೂ ಶಾಸಕರು ಮತ್ತು ಮಂತ್ರಿಗಳನ್ನು ದೂರುವುದು ಒಂದು ಕಾಯಿಲೆಯಾಗಿದೆ ಎಂದು ಬೇಸರ ಹೊರಹಾಕಿದರು.

ಎಚ್‌ಡಿಕೆ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ ಎಂದ ಜಮೀರ್‌

Zameer Ahmed Khan
Zameer Ahmed Khan

ರಾಮನಗರ: ಕುಮಾರಸ್ವಾಮಿ ಕೇವಲ 37 ಸೀಟ್ ಗೆದ್ದು ನಮ್ಮ ಜೊತೆ ಬಂದಿದ್ದರು. ಅವರದು ಮ್ಯಾಚ್ ಫಿಕ್ಸಿಂಗ್, ಅವರನ್ನು ನಂಬಬೇಡಿ ಅಂತ ಕಾಂಗ್ರೆಸ್‌ನವರಿಗೆ ಅಂದೇ ಹೇಳಿದ್ದೆ. ನಾನು ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಕುಮಾರಸ್ವಾಮಿ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ. ಬಿಜೆಪಿಗಿಂತ ಬಿಗಿಯಾದ ಖಾಕಿ ಚೆಡ್ಡಿ ಹಾಕಿದ್ದಾರೆ ಎಂದು ನಾನು ಹೇಳಿದಾಗ ಕೆಲವರು ಕೇಳಲಿಲ್ಲ ಎಂದು ಸಚಿವ ಜಮೀರ್ ಅಹ್ಮದ್‌ (Zameer Ahmed Khan) ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿ ಬಡವರಿಗೆ ಒಂದು‌ ಮನೆಯನ್ನೂ ಕೊಟ್ಟಿಲ್ಲ. ಯಾಕೆ ಬಿಜೆಪಿ-ಜೆಡಿಎಸ್‌ಗೆ ಬಡವರ ಬಗ್ಗೆ ಕಾಳಜಿ ಇಲ್ವಾ? ಕುಮಾರಸ್ವಾಮಿ ಅವರೇ ರಾಮನಗರದ ಜನ್ಮಕೊಟ್ಟ ಕ್ಷೇತ್ರ ಅಂತೀರಿ. ರಾಮನಗರದಲ್ಲಿ ಎಷ್ಟು ಮನೆ ಕೊಟ್ಟಿದ್ದೀರಿ? ನಿಮಗೆ ಓಪನ್ ಚಾಲೆಂಜ್ ಹಾಕುತ್ತೀನಿ, ಕೇವಲ 330 ಮನೆ ಕೊಟ್ಟಿದ್ದೀರಿ. ನಾವು ಎಷ್ಟು ಮನೆ ಕೊಟ್ಟಿದ್ದೀವಿ ಬನ್ನಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಚನ್ನಪಟ್ಟಣಕ್ಕೆ 5 ಸಾವಿರ ಮನೆ ಮಂಜೂರು ಮಾಡುತ್ತೇವೆ

ಡಿ.ಕೆ.ಸುರೇಶ್ ಸೋತಿದ್ದು ನನಗೆ ಹೊಟ್ಟೆ ಉರೀತಿದೆ. ಕ್ಷೇತ್ರದಲ್ಲಿ ಕ್ಲರ್ಕ್ ರೀತಿ ಕೆಲಸ ಮಾಡಿದ್ದಾರೆ. ಅವರು ಕ್ಷೇತ್ರಕ್ಕಾಗಿ ಹಲವು ರಾತ್ರಿ ಕೆಲಸ ಮಾಡಿದ್ದಾರೆ. ಅಂತವರು ಸೋತಿದ್ದರಿಂದ ಹೊಟ್ಟೆ ಉರೀತಿದೆ. ಡಿ.ಕೆ. ಸುರೇಶ್ ಅವರ 1 ಪರ್ಸೆಂಟ್ ಕೆಲಸ ಕುಮಾರಸ್ವಾಮಿ ಮಾಡಿಲ್ಲ. ಕೇವಲ ಡಂಗುರ ಹೊಡೆದುಕೊಂಡು ಬರುತ್ತಾರೆ. ಚನ್ನಪಟ್ಟಣಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಬೇಕು ಅಂತ ಡಿ.ಕೆ.ಸುರೇಶ್ ಕೇಳಿದ್ದರು. ಹೀಗಾಗಿ ಚನ್ನಪಟ್ಟಣಕ್ಕೆ ಐದು ಸಾವಿರ ಮನೆ ಮಂಜೂರು ಮಾಡುತ್ತೇವೆ, ಇನ್ನು 15 ದಿನಗಳಲ್ಲಿ 5 ಸಾವಿರ ಮನೆ ಮಂಜೂರು ಮಾಡುತ್ತೇವೆ. ಮೈನಾರಿಟಿ ಅಭಿವೃದ್ಧಿಗೆ 10ಕೋಟಿ ಹಣ ಕೊಡುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್‌ ಘೋಷಣೆ ಮಾಡಿದರು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಿಂದ ಏನೂ ಆಗಲ್ಲ. ನಾವೆಲ್ಲಾ ಇರೋವರೆಗೂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಏನೂ‌ ಮಾಡೋಕಾಗಲ್ಲ. ಯಾರೋ ಅವರನ್ನು ಮುಟ್ಟೋಕೆ ಸಾಧ್ಯವಿಲ್ಲ. ನಾವೆಲ್ಲಾ ನಮ್ಮ ನಾಯಕರ ಜೊತೆ ಇದ್ದೀವಿ. ಡಿಕೆಶಿ ಆಸ್ತಿ ಬಗ್ಗೆ ಬಿಚ್ಚಿಡ್ತೀನಿ ಅಂತ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಕುಮಾರಸ್ವಾಮಿ ನಿಮ್ಮ ಕುಟುಂಬದ ಆಸ್ತಿ ತೆಗೆದರೆ ಕರ್ನಾಟಕದ 3 ಬಜೆಟ್ ಮಾಡಬಹುದು. ನಿಮ್ಮ ಅಣ್ಣ, ಅಕ್ಕ, ಬಾವ, ಅನುಸೂಯಕ್ಕ ಎಲ್ಲರ ಆಸ್ತಿ ತೆಗಿಯಿರಿ. ದಯಮಾಡಿ ಎರಡು ಬಜೆಟ್ ಗಾಗುವಷ್ಟಾದರೂ ಜನರಿಗೆ ಕೊಡಿ ಎಂದು ಕುಮಾರಸ್ವಾಮಿಗೆ ಒತ್ತಾಯ ಮಾಡಿದರು.

Continue Reading
Advertisement
Viral Video
ವೈರಲ್ ನ್ಯೂಸ್4 mins ago

Viral Video: ಇಸ್ರೇಲಿ ಅಪಹೃತನ ಮೃತ ದೇಹವನ್ನು ನಡುಬೀದಿಯಲ್ಲಿ ಒದ್ದ ಪ್ಯಾಲೆಸ್ತೀನ್‌ ಜನ!

Krishnam Pranaya Sakhi
ಸಿನಿಮಾ34 mins ago

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

Mohammed Siraj
ಕ್ರೀಡೆ34 mins ago

Mohammed Siraj : ಲಂಕಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಮೊಹಮ್ಮದ್​ ಸಿರಾಜ್​

Murder Case
ಕರ್ನಾಟಕ34 mins ago

Murder Case: 300 ರೂಪಾಯಿಗಾಗಿ ಹೆತ್ತಮ್ಮನನ್ನೇ ಕೊಂದ ಪಾಪಿ ಮಗ!

Amitabh Bachchan
ಸಿನಿಮಾ35 mins ago

Amitabh Bachchan: ʼಕೌನ್‌ ಬನೇಗಾ ಕರೋಡ್‌ಪತಿʼ ಸ್ಪರ್ಧಿಗಳ ಎದುರು ನಾನು ಅಸಹಾಯಕ; ಅಮಿತಾಭ್‌ ಹೀಗೆ ಹೇಳಿದ್ದೇಕೆ?

Paris Olympics 2024
ಕ್ರೀಡೆ46 mins ago

Paris Olympics 2024 : ಆ.​​​ 5ರಂದು ಭಾರತದ ಅಥ್ಲೀಟ್​ಗಳು ಒಲಿಂಪಿಕ್ಸ್​ನ ಯಾವ ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದಾರೆ? ಇಲ್ಲಿದೆ ಎಲ್ಲ ಮಾಹಿತಿ

Jaskaran Singh
ಸ್ಯಾಂಡಲ್ ವುಡ್56 mins ago

Jaskaran Singh: ಕನ್ನಡತಿಯನ್ನೇ ಮದುವೆ ಆಗುವೆ ಎಂದ ‘ದ್ವಾಪರ’ ಹಾಡಿನ ಗಾಯಕ ಜಸ್‌ಕರಣ್‌ ಸಿಂಗ್!

Viral Video
ವೈರಲ್ ನ್ಯೂಸ್1 hour ago

Viral Video: ಸೆಲ್ಫಿ ತೆಗೆಯಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ!

Western Ghats
ಕರ್ನಾಟಕ1 hour ago

Western Ghats: ನಾಳೆಯಿಂದ ಪಶ್ಚಿಮ ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

Viral Video
ವೈರಲ್ ನ್ಯೂಸ್1 hour ago

Viral Video: ವಧುವಿಗೆ ಮಾಲೆ ಹಾಕಬೇಕು ಎನ್ನುವಷ್ಟರಲ್ಲಿ ಮೂರ್ಛೆ ಹೋದ ವರ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ7 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌