Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 91 ಜನ ಸಾವು - Vistara News

ವಿದೇಶ

Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 91 ಜನ ಸಾವು

Bangladesh: ಕಳೆದ ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶೇಖ್‌ ಹಸೀನಾ ಅವರು ಸತತ ನಾಲ್ಕನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ಹಿಂಸಾರೂಪ ತಾಳಿದ ಕಾರಣ ಕರ್ಫ್ಯೂ ಜಾರಿಗೊಳಿಸಿ, ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ.

VISTARANEWS.COM


on

Bangladesh
ಚಿತ್ರ ಕೃಪೆ: ಅಲ್‌ಜಜೀರಾ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ (Bangladesh) ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ. ದೇಶದ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಭಾನುವಾರ (ಆಗಸ್ಟ್‌ 4) ನಡೆಸಿದ ಪ್ರತಿಭಟನೆಯು ಹಿಂಸಾರೂಪ ತಾಳಿದ್ದು, 91 ಜನ ಮೃತಪಟ್ಟಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಯ ವೇಳೆ ನೂರಾರು ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶದ ರಾಜಧಾನಿ ಢಾಕಾ ಸೇರಿ 13 ಜಿಲ್ಲೆಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಲಾಗುತ್ತಿದೆ. ಗುಂಪುಗಳನ್ನು ಚದುರಿಸಲು ಪೊಲೀಸರು ಅಶ್ರುವಾಯು, ಲಾಠಿ ಚಾರ್ಜ್‌ ಮಾಡಿದ್ದಾರೆ. ಇಷ್ಟಾದರೂ ಪ್ರತಿಭಟನೆಯು ಹಿಂಸಾರೂಪ ತಾಳಿದೆ. ಸರ್ಕಾರಿ ಕಚೇರಿಗಳ ಮೇಲೆ ದಾಳಿ, ಸರ್ಕಾರಿ ಆಸ್ತಿ-ಪಾಸ್ತಿ ಧ್ವಂಸ, ಪೊಲೀಸರು ಹಾಗೂ ಯೋಧರ ಮೇಲೆಯೇ ಕಲ್ಲುತೂರಾಟ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆದಿದೆ. ಇನ್ನು, ಪೊಲೀಸರ ಗುಂಡಿಗೆ ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ.

ಮತ್ತೆ ಪ್ರತಿಭಟನೆ ಏಕೆ?

ಬಾಂಗ್ಲಾದಲ್ಲಿ ಕೆಲ ದಿನಗಳ ಹಿಂದೆ ತೀವ್ರ ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಪ್ರತಿಪಕ್ಷಗಳ ಮುಖಂಡರು, ಸಾರ್ವಜನಿಕರು ಸೇರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಇಲ್ಲವೇ ಶೇಖ್‌ ಹಸೀನಾ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಕಳೆದ ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶೇಖ್‌ ಹಸೀನಾ ಅವರು ಸತತ ನಾಲ್ಕನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಸಹಾಯವಾಣಿ ತೆರೆದ ಭಾರತ

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವ ಕಾರಣ ಬಾಂಗ್ಲಾದಲ್ಲಿರುವ ರಾಯಭಾರ ಕಚೇರಿಯು ಹೊಸ ಸಹಾಯವಾಣಿ ತೆರೆದಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ಅಲರ್ಟ್‌ ಆಗಿ ಇರಬೇಕು. ಯಾವುದೇ ಸಮಸ್ಯೆಯಾದರೆ +88-01313076402 ಸಂಖ್ಯೆಗೆ ಕರೆ ಮಾಡಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಇಸ್ರೇಲಿ ಅಪಹೃತನ ಮೃತ ದೇಹವನ್ನು ನಡುಬೀದಿಯಲ್ಲಿ ಒದ್ದ ಪ್ಯಾಲೆಸ್ತೀನ್‌ ಜನ!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ (Viral Video), ಹಮಾಸ್ ಅಪಹರಿಸಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ ವ್ಯಕ್ತಿಯ ಮೃತ ದೇಹವನ್ನು ಲಗೇಜ್‌ನಂತೆ ವಾಹನದ ಹಿಂಭಾಗದಲ್ಲಿ ಹಾಕಿ ಗಾಜಾಕ್ಕೆ ಎಳೆದುಕೊಂಡು ಹೋಗುವುದು ಕಾಣಿಸುತ್ತದೆ. ಗಾಜಾದಲ್ಲಿ ನಾಗರಿಕರ ಗುಂಪು ಕಾರನ್ನು ಹಿಂಬಾಲಿಸಿ, ಆ ದೇಹವನ್ನು ರಸ್ತೆಗೆ ಎಳೆದು ಒದೆಯುತ್ತಿರುವ ದೃಶ್ಯ ಆಘಾತ ಮೂಡಿಸುತ್ತದೆ.

VISTARANEWS.COM


on

By

Viral Video
Koo

ಹತ್ಯೆಗೀಡಾದ ಹಮಾಸ್ ಒತ್ತೆಯಾಳುವಿನ (Hamas hostage) ದೇಹವನ್ನು ನಡು ರಸ್ತೆಯಲ್ಲಿ ಗಾಜಾ ನಾಗರಿಕರು (Gaza civilians) ಒದೆಯುವ, ನಿಂದಿಸುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಹತ್ಯೆಗೀಡಾದ ಹಮಾಸ್ ಒತ್ತೆಯಾಳು ಐಟಾನ್ ಲೆವಿಯ ಕುಟುಂಬವು ಇದನ್ನು ಹಂಚಿಕೊಂಡು ತೀವ್ರ ದುಃಖ ವ್ಯಕ್ತಪಡಿಸಿದೆ.

ಈ ವಿಡಿಯೋ ತುಣುಕನ್ನು ಯೋಸೆಫ್ ಹಡ್ಡಾಡ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಅಕ್ಟೋಬರ್ 7ರಂದು ಈಟಾನ್ ಲೆವಿಯ ಅಪಹರಣದ ಆಘಾತಕಾರಿ ವಿಡಿಯೋ ಇದಾಗಿದೆ. ಅವರನ್ನು ಗಾಜಾಕ್ಕೆ ಅಪಹರಿಸಿ ಅಲ್ಲಿ ಮಸೀದಿಯ ಪ್ಲಾಜಾದಲ್ಲಿ ಕ್ರೂರವಾಗಿ ಹತ್ಯೆ ಮಾಡಲಾಗಿದೆ.

ಇವರು ಗಾಜಾದ ಮುಗ್ಧ ನಾಗರಿಕರು. 43 ವಾರಗಳು ಕಳೆದಿವೆ. ಆದರೆ ಇವರನ್ನು ನಾವು ಮರೆಯುವುದಿಲ್ಲ. ಎಲ್ಲಾ ಒತ್ತೆಯಾಳುಗಳನ್ನು ಹಿಂತಿರುಗಿಸಬೇಕು. ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನೂ ನಾಶಪಡಿಸಬೇಕು ಎಂದು ಹಡ್ಡಾಡ್ ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ವಿಡಿಯೋದಲ್ಲಿ ಲೆವಿಯ ದೇಹವನ್ನು ವಾಹನದ ಹಿಂಭಾಗದಲ್ಲಿ ಲಗೇಜ್‌ನಂತೆ ಅಮಾನುಷವಾಗಿ ಹಾಕಿ ಗಾಜಾಕ್ಕೆ ಎಳೆದುಕೊಂಡು ಹೋಗುವುದು ಕಾಣಿಸುತ್ತದೆ. ಗಾಜಾದಲ್ಲಿ ನಾಗರಿಕರ ಗುಂಪು ಕಾರನ್ನು ಹಿಂಬಾಲಿಸುವುದು ಕಂಡುಬರುತ್ತದೆ. ಲೆವಿಯ ನಿರ್ಜೀವ ದೇಹವನ್ನು ಜನ ಮುಗಿಬಿದ್ದು ತುಳಿಯುವುದನ್ನು ದೃಶ್ಯಗಳಲ್ಲಿ ಕಾಣಬಹುದು.

52 ವರ್ಷದ ಲೆವಿ ಅವರು ಬ್ಯಾಟ್ ಯಾಮ್‌ನ ಟ್ಯಾಕ್ಸಿ ಡ್ರೈವರ್ ಆಗಿದ್ದರು. ಕಳೆದ ವರ್ಷ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಪ್ರಯಾಣಿಕರನ್ನು ಬಿಡಲು ಕಿಬ್ಬುಟ್ಜ್ ಬೀರಿಯಲ್ಲಿದ್ದರು. ಅವರಿಗೆ ನಿಖರವಾಗಿ ಏನಾಯಿತು ಎಂಬುದು ಅಸ್ಪಷ್ಟವಾಗಿದೆ. ಆದರೆ ಹಮಾಸ್ ಭಯೋತ್ಪಾದಕರು ಅವರನ್ನು ಹೊರಹೋಗದಂತೆ ತಡೆದಿದ್ದಾರೆ. ಅವರ ಕ್ಯಾಬ್‌ ಡ್ರೋನ್ ಅಥವಾ ಕ್ಷಿಪಣಿ ದಾಳಿಗೆ ತುತ್ತಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.


ಲೆವಿ ವಿಡಿಯೋ ನೋಡಿ ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ. ಮೃತ ದೇಹವನ್ನು ಒದೆಯುವುದು ಮನುಷ್ಯ ಮಾಡಬಹುದಾದ ಅತ್ಯಂತ ಹೇಡಿತನದ ಕೆಲಸ. ಇದು ತುಂಬಾ ಕೆಟ್ಟದು ಎಂದು ಇನ್ನೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

ಮತ್ತೊಬ್ಬರು ಭಯೋತ್ಪಾದನೆಯ ವಿರುದ್ಧದ ಅತ್ಯಂತ ನ್ಯಾಯಯುತವಾದ ಯುದ್ಧದಲ್ಲಿ ಇಸ್ರೇಲ್ ನೊಂದಿಗೆ ನಿಂತುಕೊಳ್ಳಿ ಎಂದು ಕರೆ ನೀಡಿದ್ದಾರೆ. ಈ ದುಷ್ಕರ್ಮಿಗಳು ತಮ್ಮ ಅಪರಾಧಗಳನ್ನು ಮಾಡುವಾಗ ಪ್ರದರ್ಶಿಸುವ ಉಲ್ಲಾಸ ನನಗೆ ಇನ್ನೂ ಅರ್ಥವಾಗುತ್ತಿಲ್ಲ. ಇದು ಯಾವುದೇ ರೀತಿಯ ಸಾಮಾನ್ಯ ಮಾನವೀಯತೆಯಲ್ಲ. ಕ್ರೂರತೆಯಿಂದ ಕೂಡಿದೆ ಎಂದು ಮತ್ತೊಬ್ಬ ಬಳಕೆದಾರರು ತಿಳಿಸಿದ್ದಾರೆ. ಭಯಾನಕ ಮತ್ತು ಕ್ಷಮಿಸಲಾಗದು ಎಂದು ಮತ್ತೊಬ್ಬರು ಹೇಳಿದ್ದು, ಗಾಜಾದ ಈ ʼಮುಗ್ಧ ನಾಗರಿಕರುʼ ಎಷ್ಟು ಕ್ರೂರರು, ಎಂತಹ ಅನಾಗರಿಕ ಸಂಸ್ಕೃತಿ ಹೊಂದಿರುವವರು ಎಂದು ಇನ್ನೊಬ್ಬರು ವ್ಯಂಗ್ಯವಾಗಿ ಹೇಳಿದ್ದಾರೆ.

Continue Reading

ದೇಶ

Moon: ಭೂಮಿಯಿಂದ ದೂರ ಹೊರಟ ಚಂದ್ರ, ಮುಂದೆ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

Moon: ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ.

VISTARANEWS.COM


on

Moon
Koo

ನವದೆಹಲಿ: ಚಂದಿರನಿಗೂ ಮಾನವನಿಗೂ ಎಲ್ಲಿಲ್ಲದ ನಂಟು. ಚಂದಿರನನ್ನು ತೋರಿಸಿ ಅಮ್ಮ ಕೈತುತ್ತು ತಿನಿಸಿದ, ಚಂದ್ರನ ಬೆಳಕಿನಲ್ಲಿ ರಾತ್ರಿ ರೈತ ಜಮೀನಿನಲ್ಲಿ ಕೆಲಸ ಮಾಡಿದ, ಚಂದಿರನ ಬೆಳದಿಂಗಳಲ್ಲಿ ಊರೆಲ್ಲ ಸುತ್ತಾಡಿದ ನೆನಪುಗಳು ಕಾಡುತ್ತವೆ. ಇನ್ನು ದೇಶದ ಕವಿಗಳೂ ಅಷ್ಟೇ, ಚಂದಿರನ ಬಗ್ಗೆ ಬಗೆಬಗೆಯ ಕವಿತೆಗಳನ್ನು ಬರೆಯುವ ಮೂಲಕ ನಮಗೆ ಚಂದಿರ ಏಕೆ ಮುಖ್ಯ ಎಂಬುದನ್ನು ಸಾರಿದ್ದಾರೆ. ಚಂದಮಾಮ ಎಂದೂ ಕೂಡ ವರ್ಣಿಸಿದ್ದಾರೆ. ಇಂತಹ ಚಂದಮಾಮ ಈಗ ಭೂಮಿಯಿಂದ ದೂರವಾಗುತ್ತಿದ್ದಾನೆ. ಅಷ್ಟೇ ಅಲ್ಲ, ಮುಂದೆ ನಮಗೆ ದಿನದಲ್ಲಿ 24 ಗಂಟೆ ಬದಲು 25 ಗಂಟೆ ಇರಲಿವೆ ಎಂದು ಅಧ್ಯಯನವೊಂದು ಭೀಕರ ಮಾಹಿತಿಯನ್ನು ಬಿಚ್ಚಿಟ್ಟಿದೆ.

ಹೌದು, ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ. ಈ ಅಧ್ಯಯನ ವರದಿ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ.

ದಿನಕ್ಕೆ 25 ಗಂಟೆ ಹೇಗೆ?

ಪ್ರತಿ ವರ್ಷ ಚಂದ್ರನು ಭೂಮಿಯಿಂದ 3.8 ಸೆಂಟಿಮೀಟರ್‌ ದೂರವಾಗುತ್ತಿದ್ದಾನೆ. ಇದರಿಂದಾಗಿ ಭೂಮಿಯ ಒಂದು ದಿನದ ಅವಧಿಯು ಹೆಚ್ಚಾಗುತ್ತದೆ. ಅಂದರೆ, ಈಗ ದಿನಕ್ಕೆ 24 ಗಂಟೆ ಇದ್ದರೆ, ಮುಂಬರುವ ವರ್ಷಗಳಲ್ಲಿ ದಿನಕ್ಕೆ 25 ಗಂಟೆ ಇರಲಿವೆ. ಕಾಲಕಾಲಕ್ಕೆ ಭೂಮಿಯ ಮೇಲಿನ ಒಂದು ದಿನದಲ್ಲಿರುವ ಗಂಟೆಗಳ ಸಂಖ್ಯೆ ಹೆಚ್ಚಾಗುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದೆ ಎಂಬುದಾಗಿ ವಿಜ್ಞಾನಿಗಳು ತಿಳಿಸಿದ್ದಾರೆ.

ಮುಂದಿನ 200 ದಶಲಕ್ಷ ವರ್ಷಗಳ ಬಳಿಕ ದಿನದಲ್ಲಿ 25 ಗಂಟೆ ಇರಲಿವೆ ಎಂದು ವಿಜ್ಞಾನಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಸುಮಾರು 1.4 ಶತಕೋಟಿ ವರ್ಷಗಳ ಹಿಂದೆ, ಭೂಮಿಯ ಅವಧಿಯು ದಿನಕ್ಕೆ ಕೇವಲ 18 ಗಂಟೆಯಾಗಿತ್ತು. ಕಾಲಕಾಲಕ್ಕೆ ಅದು ಹೆಚ್ಚಾಗುತ್ತ 24 ಗಂಟೆಗೆ ಏರಿಕೆಯಾಗಿದೆ. “ಭೂಮಿಯಿಂದ ಸೂರ್ಯನು ದೂರವಾಗುತ್ತ ಹೋದರೆ, ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ” ಎಂದು ವಿವಿ ಪ್ರೊಫೆಸರ್‌ ಸ್ಟೀಫನ್‌ ಮೇಯರ್ಸ್‌ ಹೇಳಿದ್ದಾರೆ.

ಇದನ್ನೂ ಓದಿ: DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

Continue Reading

ವಿದೇಶ

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

Ismail Haniyh Killing: ಇಂಗ್ಲೆಂಡ್‌ ಮೂಲದ ಪತ್ರಿಕೆ ಟೆಲಿಗ್ರಾಫ್‌ ವರದಿ ಮಾಡಿದ್ದು, ಆರಂಭದಲ್ಲಿ ಇಸ್ರೇಲ್‌, ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ಮೇನಲ್ಲೇ ಪ್ಲ್ಯಾನ್‌ ರೂಪಿಸಿತ್ತು. ಮಾಜಿ ಇರಾನಿಯನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅಂತ್ಯಕ್ರಿಯೆಗೆ ಆಗಮಿಸಿದ್ದ ಸಂದರ್ಭದಲ್ಲಿ ಹನಿಯೆಹ್‌ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಆದರೆ ಅತಿ ದೊಡ್ಡ ಪ್ರಮಾಣದ ಜನ ಕಾರ್ಯಕ್ರಮದಲ್ಲಿ ಜಮಾಯಿಸಿದ್ದ ಕಾರಣ ಆ ಯೋಜನೆಯನ್ನು ಕೈಬಿಡಲಾಗಿತ್ತು.

VISTARANEWS.COM


on

Ismail Haniyeh
Koo

ಟೆಹ್ರಾನ್‌: ಇರಾನ್‌(Iran) ರಾಜಧಾನಿ ಟೆಹ್ರಾನ್‌ನಲ್ಲಿ ಎರಡು ದಿನಗಳ ಹಿಂದೆಯಷ್ಟೇ ಹಮಾಸ್‌(Hamas) ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನ (Ismail Haniyh Killing) ಹತ್ಯೆಗೆ ಒಂದು ತಿಂಗಳ ಹಿಂದೆಯೇ ಆತ ತಂಗುವ ಅತಿಥಿಗೃಹದಲ್ಲಿ ಬಾಂಬ್‌ ಅಳವಡಿಸಲಾಗಿತ್ತು ಎಂಬ ವಿಚಾರ ಬಯಲಾಗಿದೆ. ಇದರ ಬೆನ್ನಲ್ಲೇ ಈ ಕೃತ್ಯಕ್ಕೆ ಇಸ್ರೇಲ್‌ನ ಗುಪ್ತಚರ ಇಲಾಖೆ ಮೊಸಾದ್‌ ಇರಾನ್‌ನಲ್ಲಿ ಗೂಢಾಚಾರನನ್ನು ನೇಮಿಸಿತ್ತು ಎಂಬ ವಿಚಾರ ಇದೀಗ ಬಹಳ ಚರ್ಚೆಯಾಗುತ್ತಿದೆ.

ಇಂಗ್ಲೆಂಡ್‌ ಮೂಲದ ಪತ್ರಿಕೆ ಟೆಲಿಗ್ರಾಫ್‌ ವರದಿ ಮಾಡಿದ್ದು, ಆರಂಭದಲ್ಲಿ ಇಸ್ರೇಲ್‌, ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ಮೇನಲ್ಲೇ ಪ್ಲ್ಯಾನ್‌ ರೂಪಿಸಿತ್ತು. ಮಾಜಿ ಇರಾನಿಯನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅಂತ್ಯಕ್ರಿಯೆಗೆ ಆಗಮಿಸಿದ್ದ ಸಂದರ್ಭದಲ್ಲಿ ಹನಿಯೆಹ್‌ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಆದರೆ ಅತಿ ದೊಡ್ಡ ಪ್ರಮಾಣದ ಜನ ಕಾರ್ಯಕ್ರಮದಲ್ಲಿ ಜಮಾಯಿಸಿದ್ದ ಕಾರಣ ಆ ಯೋಜನೆಯನ್ನು ಕೈಬಿಡಲಾಗಿತ್ತು. ಇದರ ನಂತರ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗೆಸ್ಟ್‌ಹೌಸ್‌ನ ಮೂರು ಕೊಠಡಿಗಳಲ್ಲಿ ಇಬ್ಬರು ಏಜೆಂಟ್‌ಗಳು ಸ್ಫೋಟಕಗಳನ್ನು ಅಳವಡಿಸಿದ್ದರು. ಮೊಸ್ಸಾದ್ ಈ ಇಬ್ಬರು ಏಜೆಂಟ್‌ಗಳನ್ನು ನೇಮಿಸಿಕೊಂಡಿದ್ದರು.

ಏಜೆಂಟ್‌ಗಳು ಹನಿಯೆಹ್‌ ಇದ್ದ ಗೆಸ್ಟ್‌ ಹೌಸ್‌ ಒಳಗೆ ಅವಸರವಾಗಿ ಪ್ರವೇಶಿಸುವುದು ಮತ್ತು ಹೊರಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ. ಈ ಇಬ್ಬರು ಏಜೆಂಟ್‌ಗಳು ಇರಾನ್‌ನಿಂದ ಹೊರಬಂದ ನಂತರ, ಅವರು ಸ್ಫೋಟಕಗಳನ್ನು ದೂರದಿಂದಲೇ ಸ್ಫೋಟಿಸಿ, ಹನಿಯೆಹ್‌ನನ್ನು ಹತ್ಯೆಗೈದಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಹನಿಯೆಹ್‌ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ನಪಣ ತೊಟ್ಟಿರುವ ಇರಾನ್‌ ಶೀಘ್ರದಲ್ಲಿ ಇಸ್ರೇಲ್‌ ಮೇಲೆ ಪ್ರತಿದಾಳಿ ನಡೆಸಲಿದೆ ಎಂಬ ಬಗ್ಗೆ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಬುಧವಾರ ಬೆಳಗ್ಗೆ ಅಯತೊಲ್ಲಾ ಅಲಿ ಖಮೇನಿ ಇರಾನ್‌ನ ಸುಪ್ರೀಂ ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಖಮೇನಿ ಈ ಆದೇಶವನ್ನು ನೀಡಿದರು. ಇನ್ನು ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

ಇದನ್ನೂ ಓದಿ: Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

Continue Reading

ವಿದೇಶ

US Military: ಇರಾನ್, ಹಮಾಸ್, ಹೆಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದ ಅಮೆರಿಕ

US Military:ನೌಕಾಪಡೆಯ ಕ್ರೂಸರ್‌ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ವಿಧ್ವಂಸಕಗಳನ್ನು ಈ ಪ್ರದೇಶಕ್ಕೆ ಕಳುಹಿಸುವ ನಿರ್ಧಾರವನ್ನು US ರಕ್ಷಣಾ ಕಾರ್ಯದರ್ಶಿ ಲ್ಯೋಡ್ ಆಸ್ಟಿನ್ ಅನುಮೋದಿಸಿದರು. ವಾಷಿಂಗ್ಟನ್ ಹೆಚ್ಚುವರಿ ಸ್ಕ್ವಾಡ್ರನ್ ಫೈಟರ್ ಜೆಟ್‌ಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ.ಆ ಮೂಲಕ ಅಮೆರಿಕ ಇರಾನ್, ಹಮಾಸ್, ಹಿಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದೆ.

VISTARANEWS.COM


on

US Military
Koo

ವಾಷಿಂಗ್ಟನ್‌: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ವಾಯುದಾಳಿ ನಡೆಸಿ ಹತ್ಯೆ ನಡೆದಿರುವ ಬೆನ್ನಲ್ಲೇ ಭಾರೀ ಬೆದರಿಕೆ ಎದುರಿಸುತ್ತಿರುವ ಇಸ್ರೇಲ್(Israel)ಗೆ ಇದೀಗ ಬೆಂಗಾವಲಾಗಿ ನಿಲ್ಲಲು ಅಮೆರಿಕ ಮುಂದಾಗಿದೆ. ಇರಾನ್(Iran), ಹಮಾಸ್(Hamas) ಮತ್ತು ಹಿಜ್ಬುಲ್‌ ಉಗ್ರ ಸಂಘಟನೆಗಳಿಂದ ಬೆದರಿಕೆಯನ್ನು ಎದುರಿಸುತ್ತಿರುವ ಕಾರಣ, ಮಧ್ಯಪ್ರಾಚ್ಯದಲ್ಲಿ ಯುಎಸ್ ಮಿಲಿಟರಿ ಹೆಚ್ಚುವರಿ ಯುದ್ಧ ವಿಮಾನಗಳು ಮತ್ತು ನೌಕಾಪಡೆಯ ಯುದ್ಧನೌಕೆಗಳನ್ನು(US Military) ನಿಯೋಜಿಸಲಿದೆ ಎಂದು ಪೆಂಟಗನ್ ಶುಕ್ರವಾರ (ಆಗಸ್ಟ್ 2) ದೃಢಪಡಿಸಿದೆ.

ನೌಕಾಪಡೆಯ ಕ್ರೂಸರ್‌ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ವಿಧ್ವಂಸಕಗಳನ್ನು ಈ ಪ್ರದೇಶಕ್ಕೆ ಕಳುಹಿಸುವ ನಿರ್ಧಾರವನ್ನು US ರಕ್ಷಣಾ ಕಾರ್ಯದರ್ಶಿ ಲ್ಯೋಡ್ ಆಸ್ಟಿನ್ ಅನುಮೋದಿಸಿದರು. ವಾಷಿಂಗ್ಟನ್ ಹೆಚ್ಚುವರಿ ಸ್ಕ್ವಾಡ್ರನ್ ಫೈಟರ್ ಜೆಟ್‌ಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ.ಆ ಮೂಲಕ ಅಮೆರಿಕ ಇರಾನ್, ಹಮಾಸ್, ಹಿಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದೆ.

ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ವಾಯುದಾಳಿ ನಡೆಸಿ ಹತ್ಯೆ ನಡೆದಿರುವ ಬೆನ್ನಲ್ಲೇ ಇಸ್ರೇಲ್‌ ಮೇಲೆ ನೇರ ವೈಮಾನಿಕ ದಾಳಿ ನಡೆಸಿ ಹೊಡೆದುರುಳಿಸುವಂತೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಆದೇಶ ನೀಡಿದ್ದಾನೆ. ಹನಿಯೆಹ್‌ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ಪಣ ತೊಟ್ಟಿರುವ ಇರಾನ್‌ ಶೀಘ್ರದಲ್ಲಿ ಇಸ್ರೇಲ್‌ ಮೇಲೆ ಪ್ರತಿದಾಳಿ ನಡೆಸಲಿದೆ ಎಂಬ ಬಗ್ಗೆ ಅಲ್ಲಿನ ಮಾಧ್ಯಮಗಳು ಈಗಾಗಲೇ ವರದಿ ಮಾಡಿವೆ.

ಬುಧವಾರ ಬೆಳಗ್ಗೆ ಅಯತೊಲ್ಲಾ ಅಲಿ ಖಮೇನಿ ಇರಾನ್‌ನ ಸುಪ್ರೀಂ ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಖಮೇನಿ ಈ ಆದೇಶವನ್ನು ನೀಡಿದರು. ಇನ್ನು ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಇದನ್ನೂ ಓದಿ: Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

Continue Reading
Advertisement
virat kohli
ಕ್ರಿಕೆಟ್4 mins ago

Virat Kohli : ಲಂಕಾ ವಿರುದ್ಧದ ಪಂದ್ಯದ ನಡುವೆಯೇ ಬಿಹು ಡಾನ್ಸ್ ಮಾಡಿದ ವಿರಾಟ್ ಕೊಹ್ಲಿ, ಇಲ್ಲಿದೆ ವಿಡಿಯೊ

IND vs SL
ಪ್ರಮುಖ ಸುದ್ದಿ41 mins ago

IND vs SL ODI : ಎರಡನೇ ಏಕ ದಿನ ಪಂದ್ಯದಲ್ಲಿ ಭಾರತ ತಂಡಕ್ಕೆ32 ರನ್ ಸೋಲು, ಸರಣಿಯಲ್ಲಿ ಲಂಕಾಗೆ ಮುನ್ನಡೆ

Bengal Minister
ದೇಶ2 hours ago

Bengal Minister: ಮಹಿಳಾ ಅಧಿಕಾರಿಗೆ ಬಂಗಾಳ ಸಚಿವ ಜೀವ ಬೆದರಿಕೆ; ದೀದಿ ಆದೇಶದ ಬಳಿಕ ರಾಜೀನಾಮೆ!

BJP-JDS Padayatra
ಕರ್ನಾಟಕ2 hours ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗಲ್ಲ, ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ: ಕೆ.ಸಿ. ವೇಣುಗೋಪಾಲ್

Novak Djokovic
ಪ್ರಮುಖ ಸುದ್ದಿ2 hours ago

Novak Djokovic : ಅಲ್ಕರಾಜ್ ಮಣಿಸಿ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ನೊವಾಕ್ ಜೊಕೊವಿಕ್

PSI Parashuram Case
ಕ್ರೈಂ2 hours ago

PSI Parashuram Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದ ಕಡತ ನಾಳೆ ಸಿಐಡಿಗೆ ಹಸ್ತಾಂತರ: ಎಸ್‌ಪಿ ಜಿ.ಸಂಗೀತಾ

Health Tips
ಆರೋಗ್ಯ2 hours ago

Health Tips: ಪಾದಗಳ ಊತ, ನೋವನ್ನು ಕಡಿಮೆ ಮಾಡಲು ಇಲ್ಲಿದೆ ಸರಳ ಉಪಾಯ

Viral Video
ವೈರಲ್ ನ್ಯೂಸ್2 hours ago

Viral Video: ಇಸ್ರೇಲಿ ಅಪಹೃತನ ಮೃತ ದೇಹವನ್ನು ನಡುಬೀದಿಯಲ್ಲಿ ಒದ್ದ ಪ್ಯಾಲೆಸ್ತೀನ್‌ ಜನ!

Krishnam Pranaya Sakhi
ಸಿನಿಮಾ3 hours ago

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

Mohammed Siraj
ಕ್ರೀಡೆ3 hours ago

Mohammed Siraj : ಲಂಕಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಮೊಹಮ್ಮದ್​ ಸಿರಾಜ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ9 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌