Wanindu Hasaranga : ಭಾರತ ವಿರುದ್ಧದ ಏಕ ದಿನ ಸರಣಿಗೆ ಲಂಕಾದ ಆಲ್​ರೌಂಡರ್​ ಔಟ್ - Vistara News

ಕ್ರೀಡೆ

Wanindu Hasaranga : ಭಾರತ ವಿರುದ್ಧದ ಏಕ ದಿನ ಸರಣಿಗೆ ಲಂಕಾದ ಆಲ್​ರೌಂಡರ್​ ಔಟ್

Wanindu Hasaranga : ಲಂಕಾ ಲಯನ್ಸ್ ತಂಡವು ಈಗಾಗಲೇ ದುಷ್ಮಂತ ಚಮೀರಾ, ಮಥೀಶಾ ಪತಿರಾನಾ, ದಿಲ್ಶಾನ್ ಮಧುಶಂಕಾ ಅವರ ಬೌಲಿಂಗ್ ವಿಭಾಗದಲ್ಲಿ ಇಲ್ಲದಿರುವುದರಿಂದ ಇದು ದೊಡ್ಡ ಹಿನ್ನಡೆ ಎದುರಿಸುತ್ತಿದೆ. ಗಾಯದಿಂದಾಗಿ ಈ ಮೂವರೂ 50 ಓವರ್​​ಗಳ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಇದೀಗ ಅತ್ಯಂತ ಅನುಭವಿ ಬೌಲರ್ ಪ್ರಮುಖ ಸರಣಿಯಿಂದ ಹೊರಹಾಕಲ್ಪಟ್ಟಿದ್ದಾರೆ.

VISTARANEWS.COM


on

Wanindu Hasaranga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ನಡುವೆ ಶ್ರೀಲಂಕಾ ತಂಡಕ್ಕೆ ಮತ್ತೊಂದು ಆಘಾತವಾಗಿದೆ. ಇತ್ತೀಚಿನ ಬೆಳವಣಿಗೆ ಪ್ರಕಾರ ಆ ತಂಡದ ಸ್ಟಾರ್ ಆಲ್​ರೌಂಡರ್​ ವನಿಂದು ಹಸರಂಗ (Wanindu Hasaranga) ಅವರನ್ನು ಸರಣಿಯ ಉಳಿದ ಪಂದ್ಯಗಳಿಂದ ಹೊರಗಿಡಲಾಗಿದೆ. ಆಗಸ್ಟ್ 02 ರ ಶುಕ್ರವಾರ ಕೊಲಂಬೊದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ಸ್ನಾಯುಸೆಳೆತದ ಗಾಯದಿಂದಾಗಿ ಹಸರಂಗ ಹೊರಗುಳಿದಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿಯೂ ಅವರು ಆಡಿಲ್ಲ. ಅವರು ಮೂರನೇ ಪಂದ್ಯಕ್ಖೂ ಲಭ್ಯರಿರುವುದಿಲ್ಲ.

ಲಂಕಾ ಲಯನ್ಸ್ ತಂಡವು ಈಗಾಗಲೇ ದುಷ್ಮಂತ ಚಮೀರಾ, ಮಥೀಶಾ ಪತಿರಾನಾ, ದಿಲ್ಶಾನ್ ಮಧುಶಂಕಾ ಅವರ ಬೌಲಿಂಗ್ ವಿಭಾಗದಲ್ಲಿ ಇಲ್ಲದಿರುವುದರಿಂದ ಇದು ದೊಡ್ಡ ಹಿನ್ನಡೆ ಎದುರಿಸುತ್ತಿದೆ. ಗಾಯದಿಂದಾಗಿ ಈ ಮೂವರೂ 50 ಓವರ್​​ಗಳ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಇದೀಗ ಅತ್ಯಂತ ಅನುಭವಿ ಬೌಲರ್ ಪ್ರಮುಖ ಸರಣಿಯಿಂದ ಹೊರಹಾಕಲ್ಪಟ್ಟಿದ್ದಾರೆ.

ಆತಿಥೇಯ ತಂಡಕ್ಕೆ ಹಸರಂಗ ಬದಲಿಗೆ ಜೆಫ್ರಿ ವಾಂಡರ್ಸೆ ಸೇರಿಕೊಂಡಿದ್ದಾರೆ. ಅವರು ಎರಡನೇ ಪಂದ್ಯದಲ್ಲಿ ಭಾರತದ 6 ವಿಕೆಟ್ ಉರುಳಿಸಿದ್ದಾರೆ. . ಬೌಲಿಂಗ್​ಗೆ ಸಂಬಂಧಿಸಿದಂತೆ ಹೇಳುವುದಾದರೆ ವಾಂಡರ್ಸೆ ಸ್ವತಃ ಲೆಗ್-ಸ್ಪಿನ್ನರ್ ಆಗಿರುವರ ಕಾರಣ ಹಸರಂಗ ಅವರಿಗೆ ಸೂಕ್ತ ಬದಲಿ ಆಟಗಾರರಾಗಿದ್ದಾರೆ. ಆದಾಗ್ಯೂ, ಅವರು ಬ್ಯಾಟಿಂಗ್​ನಲ್ಲಿ ವಿಶ್ವಾಸಾರ್ಹ ಸೇರ್ಪಡೆಯಾಗಿಲ್ಲ.

ಮೊದಲ ಪಂದ್ಯದಲ್ಲಿ ಹಸರಂಗ ಮೂರು ನಿರ್ಣಾಯಕ ವಿಕೆಟ್​ಗಳನ್ನು ಕಬಳಿಸುವ ಮೂಲಕ ಆತಿಥೇಯರ ಮೇಲೆ ಪ್ರಭಾವ ಬೀರಿದ್ದರು. ಆದಾಗ್ಯೂ, ಬ್ಯಾಟ್​​ಗನೊಂದಿಗೆ ಅವರ ಕೊಡುಗೆಗಳು ನಗಣ್ಯವಾಗಿದ್ದವು. ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ದ್ವೀಪ ರಾಷ್ಟ್ರವು ಸರಣಿಯ ಉಳಿದ ಭಾಗಕ್ಕೆ ಲೆಗ್-ಸ್ಪಿನ್ನರ್ ಸೇವೆಯನ್ನು ತೀವ್ರವಾಗಿ ಕಳೆದುಕೊಳ್ಳಲಿದೆ,

ಜೆಫ್ರಿ ವಾಂಡರ್ಸೆ

ಲೆಗ್ ಸ್ಪಿನ್ನರ್ ಜೆಫ್ರಿ ವಾಂಡರ್ಸೆ ಅವರು ವನಿಂದು ಹಸರಂಗ ಬದಲಿಗೆ ಶ್ರೀಲಂಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷದ ಜನವರಿಯಲ್ಲಿ ಜಿಂಬಾಬ್ವೆ ವಿರುದ್ಧದ ತವರು ಏಕದಿನ ಸರಣಿಯಲ್ಲಿ ವಾಂಡರ್ಸೆ ಕೊನೆಯ ಬಾರಿಗೆ ಶ್ರೀಲಂಕಾ ಪರ ಆಡಿದ್ದರು. 22 ಏಕದಿನ ಪಂದ್ಯಗಳನ್ನಾಡಿ 27 ವಿಕೆಟ್ ಕಬಳಿಸಿದ್ದಾರೆ. 34ರ ಹರೆಯದ ವಾಂಡರ್ಸೆ 1 ಟೆಸ್ಟ್ ಹಾಗೂ 14 ಟಿ20 ಪಂದ್ಯಗಳನ್ನು ಆಡಿದ್ದಾರೆ.

ಭಾರತಕ್ಕೆ ಸೋಲು

ಬೆಂಗಳೂರು : ಆತಿಥೇಯ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ (IND vs SL ODI ) ಎರಡನೇ ಪಂದ್ಯದಲ್ಲಿ ಭಾರತ ತಂಡ 32 ರನ್​ಗಳ ಸೋಲಿಗೆ ಒಳಗಾಗಿದೆ. ಲಂಕಾದ ಸ್ಪಿನ್ನರ್​ಗಳ ದಾಳಿಗೆ ನಲುಗಿದ ಭಾರತೀಯ ಬ್ಯಾಟರ್​ಗಳು ಸುಲಭವಾಗಿ ಶರಣಾದರು. ಪ್ರಮುಖವಾಗಿ ಕಳೆದ ಎರಡು ಪಂದ್ಯಗಳಲ್ಲಿ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿ ಬಂದವು. ಭಾರತ ಹಾಗೂ ಲಂಕಾ ನಡುವಿನ ಮೊದಲ ಪಂದ್ಯವು ಟೈ ಆಗಿತ್ತು. ಹೀಗಾಗಿ ಈ ಗೆಲುವಿನೊಂದಿಗೆ ಲಂಕಾ ತಂಡವು ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಮುಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಮಾತ್ರ ಭಾರತ ತಂಡದ ಮರ್ಯಾದೆ ಉಳಿಯಬಹುದು. ಇಲ್ಲವಾದರೆ ರೋಹಿತ್ ಶರ್ಮಾ ಬಳಗ ಮುಖಭಂಗ ಅನುಭವಿಸುವ ಎಲ್ಲ ಸಾಧ್ಯತೆಗಳಿವೆ.

ಇದನ್ನೂ ಓದಿ: Paris Olympics 2024 : ಆ.​​​ 5ರಂದು ಭಾರತದ ಅಥ್ಲೀಟ್​ಗಳು ಒಲಿಂಪಿಕ್ಸ್​ನ ಯಾವ ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದಾರೆ? ಇಲ್ಲಿದೆ ಎಲ್ಲ ಮಾಹಿತಿ

ಕೊಲೊಂಬೊದ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಬ್ಯಾಟ್ ಮಾಡಿ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್​ಗೆ 240 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ.. ಓವರ್​ಗಳಲ್ಲಿ 42.2 ಓವರ್​ಗಳಲ್ಲಿ 208 ರನ್​ಗೆ ಆಲ್​ಔಟ್ ಆಗಿ ಸೋಲೊಪ್ಪಿಕೊಂಡಿತು. ಜೆಫ್ರಿ ವಂಡರ್ಸೆ 6 ವಿಕೆಟ್​ ಹಾಗೂ ಚರಿತ್ ಅಸಲಂಕಾ 3 ವಿಕೆಟ್ ಉರುಳಿಸಿ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಲಂಕಾ ಸ್ಪಿನ್ನರ್​ಗಳ ದಾಳಿಗೆ ನಿಯಮಿತವಾಗಿ ವಿಕೆಟ್​ ಕಳೆದುಕೊಂಡು ನಿರಾಸೆಗೆ ಒಳಗಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Virat Kohli : ಲಂಕಾ ವಿರುದ್ಧದ ಪಂದ್ಯದ ನಡುವೆಯೇ ಬಿಹು ಡಾನ್ಸ್ ಮಾಡಿದ ವಿರಾಟ್ ಕೊಹ್ಲಿ, ಇಲ್ಲಿದೆ ವಿಡಿಯೊ

Virat Kohli: ಚೆಂಡನ್ನು ಹಿಡಿದ ನಂತರ, ಕೊಹ್ಲಿ ಅಸ್ಸಾಂನ ಜಾನಪದ ನೃತ್ಯವಾದ ಸಣ್ಣ ಸಂಭ್ರಮದ ಬಿಹು ಸ್ಟೆಪ್​ ಹಾಕಿದರು. ಈ ಸ್ವಯಂಪ್ರೇರಿತ ಡಾನ್ಸ್​ ಅವರ ಅಸ್ಸಾಂ ಮೂಲದ ಸಹ ಆಟಗಾರ ರಿಯಾನ್ ಪರಾಗ್ ಅವರ ಕಡೆಗಾಗಿತ್ತು. ಅವರು ಡಗೌಟ್​​ನಲ್ಲಿ ಕುಳಿತಿದ್ದರು. ಅವರಿನ್ನೂ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿಲ್ಲ. ಡ್ರೆಸ್ಸಿಂಗ್ ರೂಮ್ ಕಡೆಗೆ ಹೊಳೆಯುವ ನೋಡಿದ ನಂತರ ಕೊಹ್ಲಿ ಅಕ್ಷರ್ ಕಡೆಗೆ ಹೋದರು.

VISTARANEWS.COM


on

virat kohli
Koo

ಬೆಂಗಳೂರು: ವಿರಾಟ್ ಕೊಹ್ಲಿ (Virat Kohli) ಕ್ರಿಕೆಟ್ ಮೈದಾನದಲ್ಲಿ ಇದ್ದರೆ ಬ್ಯಾಟ್ ಮೂಲಕ ಅಥವಾ ತಮ್ಮ ನಡವಳಿಕೆಯ ಮೂಲಕ ಮೈದಾನದಲ್ಲಿ ಪ್ರೇಕ್ಷಕರಿಗೆ ಮನರಂಜನೆಯನ್ನು ನೀಡುತ್ತಾರೆ. ಅಂಥದ್ದೆ ಪ್ರಸಂಗ ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆಯೂ ನಡುವೆಯೂ ನಡೆಯಿತು. ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡದ ಸದೀರಾ ಸಮರವಿಕ್ರಮ ಅವರನ್ನು 14 ರನ್​ಗಳಿಗೆ ಆಲ್​ಔಟ್ ಆದರು. ಅವರು ನೀಡಿದ ಕ್ಯಾಚ್ ಅನ್ನು ವಿರಾಟ್ ಕೊಹ್ಲಿ ಪಡೆದರು. ಆದರೆ, ಕ್ಯಾಚ್ ಪಡೆದ ಖುಷಿಗೆ ಅವರ ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು.

ಚೆಂಡನ್ನು ಹಿಡಿದ ನಂತರ, ಕೊಹ್ಲಿ ಅಸ್ಸಾಂನ ಜಾನಪದ ನೃತ್ಯವಾದ ಸಣ್ಣ ಸಂಭ್ರಮದ ಬಿಹು ಸ್ಟೆಪ್​ ಹಾಕಿದರು. ಈ ಸ್ವಯಂಪ್ರೇರಿತ ಡಾನ್ಸ್​ ಅವರ ಅಸ್ಸಾಂ ಮೂಲದ ಸಹ ಆಟಗಾರ ರಿಯಾನ್ ಪರಾಗ್ ಅವರ ಕಡೆಗಾಗಿತ್ತು. ಅವರು ಡಗೌಟ್​​ನಲ್ಲಿ ಕುಳಿತಿದ್ದರು. ಅವರಿನ್ನೂ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿಲ್ಲ. ಡ್ರೆಸ್ಸಿಂಗ್ ರೂಮ್ ಕಡೆಗೆ ಹೊಳೆಯುವ ನೋಡಿದ ನಂತರ ಕೊಹ್ಲಿ ಅಕ್ಷರ್ ಕಡೆಗೆ ಹೋದರು.

ಪಂದ್ಯದಲ್ಲಿ ಭಾರತಕ್ಕೆ ಸೋಲು

ಬೆಂಗಳೂರು : ಆತಿಥೇಯ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ (IND vs SL ODI ) ಎರಡನೇ ಪಂದ್ಯದಲ್ಲಿ ಭಾರತ ತಂಡ 32 ರನ್​ಗಳ ಸೋಲಿಗೆ ಒಳಗಾಗಿದೆ. ಲಂಕಾದ ಸ್ಪಿನ್ನರ್​ಗಳ ದಾಳಿಗೆ ನಲುಗಿದ ಭಾರತೀಯ ಬ್ಯಾಟರ್​ಗಳು ಸುಲಭವಾಗಿ ಶರಣಾದರು. ಪ್ರಮುಖವಾಗಿ ಕಳೆದ ಎರಡು ಪಂದ್ಯಗಳಲ್ಲಿ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿ ಬಂದವು. ಭಾರತ ಹಾಗೂ ಲಂಕಾ ನಡುವಿನ ಮೊದಲ ಪಂದ್ಯವು ಟೈ ಆಗಿತ್ತು. ಹೀಗಾಗಿ ಈ ಗೆಲುವಿನೊಂದಿಗೆ ಲಂಕಾ ತಂಡವು ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಮುಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಮಾತ್ರ ಭಾರತ ತಂಡದ ಮರ್ಯಾದೆ ಉಳಿಯಬಹುದು. ಇಲ್ಲವಾದರೆ ರೋಹಿತ್ ಶರ್ಮಾ ಬಳಗ ಮುಖಭಂಗ ಅನುಭವಿಸುವ ಎಲ್ಲ ಸಾಧ್ಯತೆಗಳಿವೆ.

ಇದನ್ನೂ ಓದಿ: Novak Djokovic : ಅಲ್ಕರಾಜ್ ಮಣಿಸಿ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ನೊವಾಕ್ ಜೊಕೊವಿಕ್

ಕೊಲೊಂಬೊದ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಬ್ಯಾಟ್ ಮಾಡಿ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್​ಗೆ 240 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ.. ಓವರ್​ಗಳಲ್ಲಿ 42.2 ಓವರ್​ಗಳಲ್ಲಿ 208 ರನ್​ಗೆ ಆಲ್​ಔಟ್ ಆಗಿ ಸೋಲೊಪ್ಪಿಕೊಂಡಿತು. ಜೆಫ್ರಿ ವಂಡರ್ಸೆ 6 ವಿಕೆಟ್​ ಹಾಗೂ ಚರಿತ್ ಅಸಲಂಕಾ 3 ವಿಕೆಟ್ ಉರುಳಿಸಿ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಲಂಕಾ ಸ್ಪಿನ್ನರ್​ಗಳ ದಾಳಿಗೆ ನಿಯಮಿತವಾಗಿ ವಿಕೆಟ್​ ಕಳೆದುಕೊಂಡು ನಿರಾಸೆಗೆ ಒಳಗಾಯಿತು.

Continue Reading

ಪ್ರಮುಖ ಸುದ್ದಿ

IND vs SL ODI : ಎರಡನೇ ಏಕ ದಿನ ಪಂದ್ಯದಲ್ಲಿ ಭಾರತ ತಂಡಕ್ಕೆ32 ರನ್ ಸೋಲು, ಸರಣಿಯಲ್ಲಿ ಲಂಕಾಗೆ ಮುನ್ನಡೆ

IND vs SL ODI : ಲಂಕಾ ತಂಡ ಮೊದಲು ಬ್ಯಾಟ್ ಮಾಡಿ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್​ಗೆ 240 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ.. ಓವರ್​ಗಳಲ್ಲಿ 42.2 ಓವರ್​ಗಳಲ್ಲಿ 208 ರನ್​ಗೆ ಆಲ್​ಔಟ್ ಆಗಿ ಸೋಲೊಪ್ಪಿಕೊಂಡಿತು. ಜೆಫ್ರಿ ವಂಡರ್ಸೆ 6 ವಿಕೆಟ್​ ಹಾಗೂ ಚರಿತ್ ಅಸಲಂಕಾ 3 ವಿಕೆಟ್ ಉರುಳಿಸಿ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

VISTARANEWS.COM


on

IND vs SL
Koo

ಬೆಂಗಳೂರು : ಆತಿಥೇಯ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ (IND vs SL ODI ) ಎರಡನೇ ಪಂದ್ಯದಲ್ಲಿ ಭಾರತ ತಂಡ 32 ರನ್​ಗಳ ಸೋಲಿಗೆ ಒಳಗಾಗಿದೆ. ಲಂಕಾದ ಸ್ಪಿನ್ನರ್​ಗಳ ದಾಳಿಗೆ ನಲುಗಿದ ಭಾರತೀಯ ಬ್ಯಾಟರ್​ಗಳು ಸುಲಭವಾಗಿ ಶರಣಾದರು. ಪ್ರಮುಖವಾಗಿ ಕಳೆದ ಎರಡು ಪಂದ್ಯಗಳಲ್ಲಿ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿ ಬಂದವು. ಭಾರತ ಹಾಗೂ ಲಂಕಾ ನಡುವಿನ ಮೊದಲ ಪಂದ್ಯವು ಟೈ ಆಗಿತ್ತು. ಹೀಗಾಗಿ ಈ ಗೆಲುವಿನೊಂದಿಗೆ ಲಂಕಾ ತಂಡವು ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಮುಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಮಾತ್ರ ಭಾರತ ತಂಡದ ಮರ್ಯಾದೆ ಉಳಿಯಬಹುದು. ಇಲ್ಲವಾದರೆ ರೋಹಿತ್ ಶರ್ಮಾ ಬಳಗ ಮುಖಭಂಗ ಅನುಭವಿಸುವ ಎಲ್ಲ ಸಾಧ್ಯತೆಗಳಿವೆ.

ಕೊಲೊಂಬೊದ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಬ್ಯಾಟ್ ಮಾಡಿ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್​ಗೆ 240 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ.. ಓವರ್​ಗಳಲ್ಲಿ 42.2 ಓವರ್​ಗಳಲ್ಲಿ 208 ರನ್​ಗೆ ಆಲ್​ಔಟ್ ಆಗಿ ಸೋಲೊಪ್ಪಿಕೊಂಡಿತು. ಜೆಫ್ರಿ ವಂಡರ್ಸೆ 6 ವಿಕೆಟ್​ ಹಾಗೂ ಚರಿತ್ ಅಸಲಂಕಾ 3 ವಿಕೆಟ್ ಉರುಳಿಸಿ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಲಂಕಾ ಸ್ಪಿನ್ನರ್​ಗಳ ದಾಳಿಗೆ ನಿಯಮಿತವಾಗಿ ವಿಕೆಟ್​ ಕಳೆದುಕೊಂಡು ನಿರಾಸೆಗೆ ಒಳಗಾಯಿತು.

ಸ್ಪಿನ್ ಪಿಚ್​ನಲ್ಲಿ ಸವಾಲಿನ ಮೊತ್ತವೇ ಅಗಿದ್ದ 241 ರನ್​ಗಳನ್ನು ಬೆನ್ನಟ್ಟಲು ಹೊರಟ ಭಾರತ ತಂಡ ಉತ್ತಮ ಆರಂಭವನ್ನೇ ಪಡೆಯಿತು. ರೋಹಿತ್ ಶರ್ಮಾ ಮತ್ತೊಂದು ಬಾರಿ ಅರ್ಧ ಶತಕ (64 ರನ್​, 44 ಎಸೆತ, 5 ಫೊರ್​, 4 ಸಿಕ್ಸರ್​) ಉತ್ತಮ ಆರಂಭ ತಂದುಕೊಟ್ಟರು. ಶುಭ್​​ ಮನ್​ ಗಿಲ್​ ಕೂಡ 35 ರನ್ ಬಾರಿಸಿ ಅವರಿಗೆ ನೆರವಾದರು. ರೋಹಿತ್ ತಮ್ಮ ವಿಕೆಟ್ ಒಪ್ಪಿಸುವ ಮೊದಲು ಭಾರತ 13.3 ಓವರ್​ಗಳಲ್ಲಿ 97 ರನ್ ಬಾರಿಸಿ ನಿಶ್ಚಿಂತೆಯಿಂದ ಇತ್ತು. ಆದರೆ, ಆ ಬಳಿಕ ಭಾರತದ ಬ್ಯಾಟರ್​ಗಳು ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ವಿರಾಟ್​ ಕೊಹ್ಲಿ 14 ರನ್​ಗೆ ಔಟಾದರೆ, ಬಡ್ತಿ ಪಡೆದುಕೊಂಡು ನಾಲ್ಕನೇ ಕ್ರಮಾಂಕದಲ್ಲಿ ಬಂದ ಶಿವಂ ದುಬೆ ಶೂನ್ಯಕ್ಕೆ ಔಟಾದರು.

ಅಕ್ಷರ್ ಪಟೇಲ್ ಆಧಾರ

ಮಧ್ಯಮ ಕ್ರಮಾಂಕದಲ್ಲಿ ಆಡಲು ಇಳಿದ ಅಕ್ಷರ್ ಪಟೇಲ್ ತಂಡಕ್ಕೆ ಸ್ವಲ್ಪ ಹೊತ್ತು ಆಧಾರವಾದರು. ಅವರು 44 ರನ್ ಬಾರಿಸುವ ಮೂಲಕ ತಂಡಕ್ಕೆ ನೆರವಾದರು. ಆದರೆ, ಉಳಿದವರು ಕ್ರೀಸ್​ನಲ್ಲಿ ನಿಲ್ಲಲು ಮನಸ್ಸು ಮಾಡಿಲ್ಲ. ಶ್ರೇಯಸ್ ಅಯ್ಯರ್​ 7 ರನ್ ಬಾರಿಸಿದರೆ, ಕೆ. ಎಲ್​ ರಾಹುಲ್ ಬ್ಯಾಟಿಂಗ್​ನಲ್ಲಿ ವೈಫಲ್ಯ ಎದುರಿಸಿ ಶೂನ್ಯಕ್ಕೆ ಔಟಾದರು. ವಾಷಿಂಗ್ಟನ್ ಸುಂದರ್​ 15 ರನ್ ಬಾರಿಸಿದರೆ ಕುಲ್ದಿಪ್​ ಯಾದವ್​ 7 ರನ್​, ಕುಲ್ದೀಪ್​ ಯಾದವ್ 7 ರನ್​, ಮೊಹಮ್ಮದ್ ಶಮಿ 4 ರನ್​, ಅರ್ಶ್​ದೀಪ್​ ಸಿಂಗ್​ 3 ರನ್ ಬಾರಿಸಿದರು.

ಇದನ್ನೂ ಓದಿ: Novak Djokovic : ಅಲ್ಕರಾಜ್ ಮಣಿಸಿ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ನೊವಾಕ್ ಜೊಕೊವಿಕ್

ಲಂಕಾದ ಲಯ ಬದ್ಧ ಬ್ಯಾಟಿಂಗ್​

ಟಾಸ್ ಗೆದ್ದು ಮೊದಲು ಬ್ಯಾಟ್​ ಮಾಡಿದ ಲಂಕಾ ಶೂನ್ಯಕ್ಕೆ ಮೊದಲ ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಒಳಗಾಯಿತು. ಆದರೆ, ನಂತರ ಪ್ರತಿಯೊಬ್ಬರೂ ಲಯಬದ್ಧ ಬ್ಯಾಟಿಂಗ್ ಮಾಡಿದರು. ಅವಿಷ್ಕಾ ಫರ್ನಾಂಡೊ 40 ರನ್ ಬಾರಿಸಿದರೆ, ಕುಸಾಲ್​ ಮೆಂಡಿಸ್​ 30 ರನ್ ಗಳಿಸಿದರು. ಚರಿತ್ ಅಸಲಂಕಾ 25 ರನ್​, ದುನಿಲ್​ ವೆಲ್ಲಾಲಗೆ 39 ರನ್​, ಕಮಿಂಡು ಮೆಂಡಿಸ್​ 40 ರನ್ ಬಾರಿಸಿ ಭಾರತಕ್ಕೆ ಸ್ಪರ್ಧಾತ್ಮಕ ಗುರಿಯನ್ನು ಒಡ್ಡಲು ತಮ್ಮ ತಂಡಕ್ಕೆ ನೆರವಾದರು.

Continue Reading

ಪ್ರಮುಖ ಸುದ್ದಿ

Novak Djokovic : ಅಲ್ಕರಾಜ್ ಮಣಿಸಿ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ನೊವಾಕ್ ಜೊಕೊವಿಕ್

Novak Djokovic : ಆರಂಭಿಕ ಸೆಟ್ ನಲ್ಲಿ ಅಲ್ಕರಾಜ್ ಉತ್ತಮ ಆರಂಭವನ್ನು ಹೊಂದಿರಲಿಲ್ಲ. ಜೊಕೊವಿಕ್ ಮೂರು ಬ್ರೇಕ್ ಪಾಯಿಂಟ್ ಗಳನ್ನು ಗಳಿಸಿದ್ದರಿಂದ ಅವರು ಮತ್ತಷ್ಟು ಹಿನ್ನಡೆ ಅನುಭವಿಸಿದರು, ಆದರೆ ಸ್ಪೇನ್ ಆಟಗಾರ ಅವೆಲ್ಲವನ್ನೂ ಉಳಿಸಿ 2-2 ರಿಂದ ಸಮಬಲ ಸಾಧಿಸಿದರು. ಮತ್ತೆ ಅಲ್ಕರಾಜ್​ಗೆ ಜೊಕೊವಿಕ್ ಅವರ ಸರ್ವ್ ಮುರಿಯುವ ಅವಕಾಶವಿತ್ತು. ಆದರೆ ಸರ್ಬಿಯಾದ ಆಟಗಾರ ಯುವ ಆಟಗಾರನಿಗೆ ಅವಕಾಶವೇ ನೀಡಲಿಲ್ಲ.

VISTARANEWS.COM


on

Novak Djokovic
Koo

ಪ್ಯಾರಿಸ್​: ಸರ್ಬಿಯಾದ ನೊವಾಕ್ ಜೊಕೊವಿಕ್ (Novak Djokovic) ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಟೆನಿಸ್ ಸಿಂಗಲ್ಸ್​​ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಇದು ಅವರ ಪಾಲಿಗೆ ಚೊಚ್ಚಲ ಒಲಿಂಪಿಕ್ಸ್​ ಚಿನ್ನ. ಭಾನುವಾರ ಫಿಲಿಪ್-ಚಾಟ್ರಿಯರ್​​ನಲ್ಲಿ ನಡೆದ ಚಿನ್ನದ ಪದಕದ ಪಂದ್ಯದಲ್ಲಿ 37 ವರ್ಷದ ಆಟಗಾರ ಸ್ಪೇನ್​​ ಕಾರ್ಲೋಸ್ ಅಲ್ಕರಾಜ್ ಅವರನ್ನು 7-6 (7-3), 7-6 (7-2) ಸೆಟ್​​ಗಳಿಂದ ಸೋಲಿಸಿದರು. ಈ ಮೂಲಕ ಒಲಿಂಪಿಕ್ಸ್​​​ ಟೆನಿಸ್​​ನ ಅತ್ಯಂತ ಹಿರಿಯ ಚಾಂಪಿಯನ್ ಎನಿಸಿಕೊಂಡರು. 21 ವರ್ಷದ ಅಲ್ಕರಾಜ್ ಗೆ ಅತ್ಯಂತ ಕಿರಿಯ ಒಲಿಂಪಿಕ್ ವಿಜೇತರಾಗುವ ಅವಕಾಶವಿತ್ತು. ಅದು ಸಾಧ್ಯವಾಗಲಿಲ್ಲ.

ಆರಂಭಿಕ ಸೆಟ್ ನಲ್ಲಿ ಅಲ್ಕರಾಜ್ ಉತ್ತಮ ಆರಂಭವನ್ನು ಹೊಂದಿರಲಿಲ್ಲ. ಜೊಕೊವಿಕ್ ಮೂರು ಬ್ರೇಕ್ ಪಾಯಿಂಟ್ ಗಳನ್ನು ಗಳಿಸಿದ್ದರಿಂದ ಅವರು ಮತ್ತಷ್ಟು ಹಿನ್ನಡೆ ಅನುಭವಿಸಿದರು, ಆದರೆ ಸ್ಪೇನ್ ಆಟಗಾರ ಅವೆಲ್ಲವನ್ನೂ ಉಳಿಸಿ 2-2 ರಿಂದ ಸಮಬಲ ಸಾಧಿಸಿದರು. ಮತ್ತೆ ಅಲ್ಕರಾಜ್​ಗೆ ಜೊಕೊವಿಕ್ ಅವರ ಸರ್ವ್ ಮುರಿಯುವ ಅವಕಾಶವಿತ್ತು. ಆದರೆ ಸರ್ಬಿಯಾದ ಆಟಗಾರ ಯುವ ಆಟಗಾರನಿಗೆ ಅವಕಾಶವೇ ನೀಡಲಿಲ್ಲ.

ಒಂಬತ್ತನೇ ಗೇಮ್ ಸಂಪೂರ್ಣ ಥ್ರಿಲ್ಲರ್ ಆಗಿ ಪರಿಣಮಿಸಿತು. ಜೊಕೊವಿಕ್ ಐದು ಬ್ರೇಕ್ ಪಾಯಿಂಟ್ ಗಳನ್ನು ಉಳಿಸಿ ಅಂತಿಮವಾಗಿ ತಮ್ಮ ಸರ್ವ್ ಹಿಡಿತದಲ್ಲಿಟ್ಟುಕೊಂಡು 5-4 ಕ್ಕೆ ಮುನ್ನಡೆದರು. ಹಲವಾರು ಬಾರಿ ನೋವಿನ ಸಮಸ್ಯೆ ಎದುರಿಸಿ ಅದರಿಂದ ಹೊರಕ್ಕೆ ಬಂದರು. ಟೈ-ಬ್ರೇಕರ್ನಲ್ಲಿಯೂ 3-3 ರಲ್ಲಿ ಸಮಬಲದ ಸಾಧನೆ ಬಂತು. ಆದರೆ ಜೊಕೊವಿಕ್ ಸತತ ನಾಲ್ಕು ಅಂಕಗಳನ್ನು ಪಡೆದರು. ಫೋರ್​ಹ್ಯಾಂಡ್​ ಬಲದೊಂದಿಗೆ ಒಂದು ಗಂಟೆ 34 ನಿಮಿಷಗಳಲ್ಲಿ ಆರಂಭಿಕ ಸೆಟ್ ಗೆದ್ದರು. ಅಲ್ಕರಾಜ್ ತನ್ನ ಎಂಟು ಬ್ರೇಕ್ ಪಾಯಿಂಟ್ ಅವಕಾಶಗಳಲ್ಲಿ ಒಂದನ್ನು ಸಹ ಪರಿವರ್ತಿಸಲು ವಿಫಲಗೊಂಡು ನಿರಾಸೆಗೆ ಒಳಗಾದರು.

ಎರಡನೇ ಸೆಟ್ ಇದೇ ರೀತಿ ಪ್ರಾರಂಭವಾಯಿತು. ಅಲ್ಲಿ ಅಲ್ಕರಾಜ್ ಮತ್ತು ಜೊಕೊವಿಕ್ ಇಬ್ಬರೂ ಪರಸ್ಪರ ಜಿದ್ದಿಗೆ ಬಿದ್ದರು. ಅಲ್ಕರಾಜ್ ಮೂರನೇ ಗೇಮ್ ನಲ್ಲಿ ಬ್ರೇಕ್ ಪಾಯಿಂಟ್ ಉಳಿಸಿ ಪಂದ್ಯವನ್ನು ಜೀವಂತವಾಗಿ ಉಳಿಸಿದರು. 3-3 ರಲ್ಲಿ ಮುಂದುವರಿಯಿತು.

ಇದನ್ನೂ ಓದಿ: Mohammed Siraj : ಲಂಕಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಮೊಹಮ್ಮದ್​ ಸಿರಾಜ್​

ಅಲ್ಕರಾಜ್ 5-4 ರ ಮುನ್ನಡೆಯೊಂದಿಗೆ ಸೆಟ್ ಗೆಲ್ಲುವ ಅವಕಾಶ ಹೊಂದಿದ್ದರು. ಆದರೆ ಜೊಕೊವಿಕ್​ ಅವಕಾಶ ಕೊಡದೇ ಆ ಗೇಮ್ ಗೆದ್ದರು. ಹೀಗಾಗಿ ಮೊದಲ ಸೆಟ್​ನಂತೆಯೇ ಎರಡನೇಯದೂ ಟೈ-ಬ್ರೇಕರ್​ಗೆ ಹೋಯಿತು. ಅಲ್ಕರಾಜ್ ಜೊಕೊವಿಕ್ ಅವರ ಸರ್ವ್ ಅನ್ನು ಮುರಿಯಲು ವಿಫಲಗೊಂಡು ಸೋಲೊಪ್ಪಿಕೊಂಡರು.

Continue Reading

ಕ್ರೀಡೆ

Mohammed Siraj : ಲಂಕಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಮೊಹಮ್ಮದ್​ ಸಿರಾಜ್​

Mohammed Siraj : ಮೊಹಮ್ಮದ್ ಸಿರಾಜ್ ಪಂದ್ಯದ ಮೊದಲ ಎಸೆತದಲ್ಲಿ ಪಥುಮ್ ನಿಸ್ಸಾಂಕಾ ಅವರನ್ನು ಔಟ್ ಮಾಡುವ ಮೂಲಕ ತಮ್ಮ ತಂಡಕ್ಕೆ ಆರಂಭಿಕ ಪ್ರಗತಿ ಒದಗಿಸಿದರು. ಸಿರಾಜ್ ಎಸೆದ ಆಫ್ -ಸ್ಟಂಪ್ ಎಸೆತವನ್ನು ಎಸೆದು ನಿಸ್ಸಾಂಕಾ ಅವರ ರಕ್ಷಣಾತ್ಮಕವಾಗಿ ಆಡಿದರು. ರಾಹುಲ್ ಕ್ಯಾಚ್ ಹಿಡಿದರು. ನಿಸ್ಸಾಂಕಾ ಗೋಲ್ಡನ್ ಡಕ್ ಗೆ ಔಟ್ ಆದರು.

VISTARANEWS.COM


on

Mohammed Siraj
Koo

ಬೆಂಗಳೂರು : ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕ ದಿನ ಸರಣಿಯ ಎರಡನೇ ಪಂದ್ಯದಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಭಾರತೀಯ ಬೌಲರ್​ಗಳು ಇರು ಎಲೈಟ್ ಪಟ್ಟಿಗೆ ಸೇರಿದ್ದಾರೆ. ಮೊಹಮ್ಮದ್ ಸಿರಾಜ್ (Mohammed Siraj) 50 ಓವರ್​ಗಳ ಅಂತರರಾಷ್ಟ್ರೀಯ ಸ್ವರೂಪದಲ್ಲಿ ಹೊಸ ಚೆಂಡಿನೊಂದಿಗೆ ಈ ಮೈಲಿಗಲ್ಲನ್ನು ಸಾಧಿಸಿದ ನಾಲ್ಕನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಚರಿತ್ ಅಸಲಂಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಕಮಿಂಡು ಮೆಂಡಿಸ್ ಮತ್ತು ಜೆಫ್ರಿ ವಾಂಡರ್ಸೆ ತಂಡಕ್ಕೆ ಮರಳಿದ್ದರಿಂದ ಆತಿಥೇಯರು ತಮ್ಮ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿತ್ತು .

ಮೊಹಮ್ಮದ್ ಸಿರಾಜ್ ಸಾಧನೆ

ಮೊಹಮ್ಮದ್ ಸಿರಾಜ್ ಪಂದ್ಯದ ಮೊದಲ ಎಸೆತದಲ್ಲಿ ಪಥುಮ್ ನಿಸ್ಸಾಂಕಾ ಅವರನ್ನು ಔಟ್ ಮಾಡುವ ಮೂಲಕ ತಮ್ಮ ತಂಡಕ್ಕೆ ಆರಂಭಿಕ ಪ್ರಗತಿ ಒದಗಿಸಿದರು. ಸಿರಾಜ್ ಎಸೆದ ಆಫ್ -ಸ್ಟಂಪ್ ಎಸೆತವನ್ನು ಎಸೆದು ನಿಸ್ಸಾಂಕಾ ಅವರ ರಕ್ಷಣಾತ್ಮಕವಾಗಿ ಆಡಿದರು. ರಾಹುಲ್ ಕ್ಯಾಚ್ ಹಿಡಿದರು. ನಿಸ್ಸಾಂಕಾ ಗೋಲ್ಡನ್ ಡಕ್ ಗೆ ಔಟ್ ಆದರು.

ಪಥುಮ್ ನಿಸ್ಸಾಂಕಾ ಅವರನ್ನು ಔಟ್ ಮಾಡಿದ ನಂತರ, 30 ವರ್ಷದ ವೇಗಿ ಡಿ ಮೊಹಾಂತಿ, ಜಹೀರ್ ಖಾನ್ ಮತ್ತು ಪ್ರವೀಣ್ ಕುಮಾರ್ ಅವರ ಎಲೈಟ್ ಪಟ್ಟಿಗೆ ಸೇರಿದರು. ಏಕದಿನ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಭಾರತದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಸಿರಾಜ್ ಪಾತ್ರರಾದರು. ವಿಶೇಷವೆಂದರೆ, ಜಹೀರ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಎಸೆತದಲ್ಲಿ ಎದುರಾಳಿ ಬ್ಯಾಟ್ಸ್ಮನ್ ಅನ್ನು ನಾಲ್ಕು ಬಾರಿ ಔಟ್ ಮಾಡಿದ್ದಾರೆ.

  • ಡಿ ಮೊಹಾಂತಿ ವೆಸ್ಟ್ ಇಂಡೀಸ್ 1999 ರಿಡ್ಲೆ ಜೇಕಬ್ಸ್
  • ಜಹೀರ್ ಖಾನ್ ನ್ಯೂಜಿಲೆಂಡ್ 2001 ಮ್ಯಾಥ್ಯೂ ಸಿಂಕ್ಲೇರ್
  • ಜಹೀರ್ ಖಾನ್ ಶ್ರೀಲಂಕಾ 2002 ಸನತ್ ಜಯಸೂರ್ಯ
  • ಜಹೀರ್ ಖಾನ್ ಆಸ್ಟ್ರೇಲಿಯಾ 2007 ಮೈಕಲ್ ಕ್ಲಾರ್ಕ್
  • ಜಹೀರ್ ಖಾನ್ ಶ್ರೀಲಂಕಾ 2009 ಉಪುಲ್ ತರಂಗ
  • ಪ್ರವೀಣ್ ಕುಮಾರ್ ಶ್ರೀಲಂಕಾ 2010 ಉಪುಲ್ ತರಂಗ
  • ಮೊಹಮ್ಮದ್ ಸಿರಾಜ್ ಶ್ರೀಲಂಕಾ 2024 ಪಥುಮ್ ನಿಸ್ಸಾಂಕಾ

ಮೊಹಮ್ಮದ್ ಸಿರಾಜ್ ತಮ್ಮ ಮೊದಲ ಸ್ಪೆಲ್​​ನಲ್ಲಿ ಹೆಚ್ಚಿನ ವಿಕೆಟ್​ ಪಡೆಯಲು ವಿಫಲರಾದರು. ಬಲಗೈ ವೇಗಿ ಪವರ್ ಪ್ಲೇ ಸಮಯದಲ್ಲಿ ತಮ್ಮ ಐದು ಓವರ್ ಗಳಲ್ಲಿ 16 ರನ್ ಗಳನ್ನು ನೀಡಿದರು. ಶ್ರೀಲಂಕಾದ ಅಗ್ರ ಕ್ರಮಾಂಕದ ಬ್ಯಾಟರ್​​ಳಾದ ಕುಸಾಲ್ ಮೆಂಡಿಸ್ ಮತ್ತು ಅವಿಷ್ಕಾ ಫರ್ನಾಂಡೊ ಪಂದ್ಯದ ಮೊದಲ 10 ಓವರ್​ಗಳಲ್ಲಿ ತಂಡ ಇನ್ನಷ್ಟು ವಿಕೆಟ್​​ ಕಳೆದುಕೊಳ್ಳದಂತೆ ನೋಡಿಕೊಂಡರು.

ಮೊದಲ ಏಕದಿನ ಪಂದ್ಯ ಟೈನಲ್ಲಿ ಕೊನೆಗೊಂಡಿತು

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಶುಕ್ರವಾರ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಟೈನಲ್ಲಿ ಕೊನೆಗೊಂಡಿತ್ತು. ಟಾಸ್ ಗೆದ್ದ ಮೊದಲು ಬ್ಯಾಟ್ ಮಾಡಿದ ಲಂಕಾ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. 65 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 67 ರನ್ ಗಳಿಸಿದ ದುನಿತ್ ವೆಲ್ಲಾಲಗೆ ಶ್ರೀಲಂಕಾ ಪರ ಗರಿಷ್ಠ ಸ್ಕೋರ್ ಗಳಿಸಿದರು. ಪಥುಮ್ ನಿಸ್ಸಾಂಕಾ 75 ಎಸೆತಗಳಲ್ಲಿ 9 ಬೌಂಡರಿ ಸೇರಿದಂತೆ 56 ರನ್ ಸೇರಿಸಿದರು. ಭಾರತದ ಪರ ಅರ್ಷ್ದೀಪ್ ಸಿಂಗ್ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ: Paris Olympics 2024 : ಆ.​​​ 5ರಂದು ಭಾರತದ ಅಥ್ಲೀಟ್​ಗಳು ಒಲಿಂಪಿಕ್ಸ್​ನ ಯಾವ ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದಾರೆ? ಇಲ್ಲಿದೆ ಎಲ್ಲ ಮಾಹಿತಿ

ಇದಕ್ಕೆ ಪ್ರತ್ಯುತ್ತರವಾಗಿ ಭಾರತ ತಂಡವು ಉತ್ತಮ ಆರಂಭವನ್ನು ಪಡೆಯಿತು. ನಾಯಕ ರೋಹಿತ್ ಶರ್ಮಾ 47 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 58 ರನ್ ಗಳಿಸಿದರು. ಭಾರತ ತಂಡವು ನಿಯಮಿತ ವಿರಾಮಗಳಲ್ಲಿ ವಿಕೆಟ್ ಗಳನ್ನು ಕಳೆದುಕೊಂಡಿತು. ಅವರು ಅಂತಿಮ ರನ್ ಗಳಿಸಲು ವಿಫಲರಾದರು ಮತ್ತು ಎರಡು ವಿಕೆಟ್ ಗಳನ್ನು ಕಳೆದುಕೊಂಡರು, ಇದರ ಪರಿಣಾಮವಾಗಿ ಸಮಬಲ ಸಾಧಿಸಿತು.

Continue Reading
Advertisement
Bengaluru
ಕ್ರೈಂ4 hours ago

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Wanindu Hasaranga
ಕ್ರೀಡೆ4 hours ago

Wanindu Hasaranga : ಭಾರತ ವಿರುದ್ಧದ ಏಕ ದಿನ ಸರಣಿಗೆ ಲಂಕಾದ ಆಲ್​ರೌಂಡರ್​ ಔಟ್

NEET 2024
ಕರ್ನಾಟಕ4 hours ago

NEET 2024: ಆಗಸ್ಟ್‌ 5ರಿಂದ ನೀಟ್‌ ರೋಲ್‌ ನಂಬರ್‌ ದಾಖಲಿಸಲು ಅವಕಾಶ, ಲಿಂಕ್‌ ಪಡೆಯಲು ಹೀಗೆ ಮಾಡಿ

virat kohli
ಕ್ರಿಕೆಟ್5 hours ago

Virat Kohli : ಲಂಕಾ ವಿರುದ್ಧದ ಪಂದ್ಯದ ನಡುವೆಯೇ ಬಿಹು ಡಾನ್ಸ್ ಮಾಡಿದ ವಿರಾಟ್ ಕೊಹ್ಲಿ, ಇಲ್ಲಿದೆ ವಿಡಿಯೊ

IND vs SL
ಪ್ರಮುಖ ಸುದ್ದಿ6 hours ago

IND vs SL ODI : ಎರಡನೇ ಏಕ ದಿನ ಪಂದ್ಯದಲ್ಲಿ ಭಾರತ ತಂಡಕ್ಕೆ32 ರನ್ ಸೋಲು, ಸರಣಿಯಲ್ಲಿ ಲಂಕಾಗೆ ಮುನ್ನಡೆ

Bengal Minister
ದೇಶ6 hours ago

Bengal Minister: ಮಹಿಳಾ ಅಧಿಕಾರಿಗೆ ಬಂಗಾಳ ಸಚಿವ ಜೀವ ಬೆದರಿಕೆ; ದೀದಿ ಆದೇಶದ ಬಳಿಕ ರಾಜೀನಾಮೆ!

BJP-JDS Padayatra
ಕರ್ನಾಟಕ7 hours ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗಲ್ಲ, ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ: ಕೆ.ಸಿ. ವೇಣುಗೋಪಾಲ್

Novak Djokovic
ಪ್ರಮುಖ ಸುದ್ದಿ7 hours ago

Novak Djokovic : ಅಲ್ಕರಾಜ್ ಮಣಿಸಿ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ನೊವಾಕ್ ಜೊಕೊವಿಕ್

PSI Parashuram Case
ಕ್ರೈಂ7 hours ago

PSI Parashuram Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದ ಕಡತ ನಾಳೆ ಸಿಐಡಿಗೆ ಹಸ್ತಾಂತರ: ಎಸ್‌ಪಿ ಜಿ.ಸಂಗೀತಾ

Health Tips
ಆರೋಗ್ಯ7 hours ago

Health Tips: ಪಾದಗಳ ಊತ, ನೋವನ್ನು ಕಡಿಮೆ ಮಾಡಲು ಇಲ್ಲಿದೆ ಸರಳ ಉಪಾಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ14 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌