Munich Massacre: 11 ಇಸ್ರೇಲಿ ಅಥ್ಲೀಟ್‌ಗಳ ಹತ್ಯೆಯ ಪ್ರತಿಕಾರ ರೋಚಕ! ʼಮೊಸಾದ್‌ʼ ಏಜೆಂಟರ ಆಪರೇಷನ್‌ ಹೀಗಿತ್ತು - Vistara News

ವಿದೇಶ

Munich Massacre: 11 ಇಸ್ರೇಲಿ ಅಥ್ಲೀಟ್‌ಗಳ ಹತ್ಯೆಯ ಪ್ರತಿಕಾರ ರೋಚಕ! ʼಮೊಸಾದ್‌ʼ ಏಜೆಂಟರ ಆಪರೇಷನ್‌ ಹೀಗಿತ್ತು

1972ರ ಸೆಪ್ಟೆಂಬರ್ 5 ಮ್ಯೂನಿಚ್‌ನ (Munich Massacre) ಒಲಿಂಪಿಕ್ ಗ್ರಾಮಕ್ಕೆ ಎಂಟು ಸದಸ್ಯರು ನುಸುಳಿದರು. ಎಕೆ-47ಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದ ಅವರು 11 ಇಸ್ರೇಲ್ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಒತ್ತೆಯಾಳಾಗಿ ತೆಗೆದುಕೊಂಡರು, ಆರಂಭಿಕ ದಾಳಿಯಲ್ಲಿ ಇಬ್ಬರನ್ನು ಕೊಂದು ಹಾಕಿದ್ದರು. ಈ ಹತ್ಯಾಕಾಂಡಕ್ಕೆ ಇಸ್ರೇಲ್ ಹೇಗೆ ರಣತಂತ್ರ ರೂಪಿಸಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

Munich Massacre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಮೇಲೆಯೂ ಪ್ಯಾಲೆಸ್ತೀನ್ ಉಗ್ರಗಾಮಿಗಳ (Palestinian militant) ಕರಿಛಾಯೆಯ ಆತಂಕ ಇತ್ತು. ಯಾಕೆಂದರೆ ಜರ್ಮನಿಯ (Germany) ಮ್ಯೂನಿಚ್‌ನಲ್ಲಿ (Munich Massacre) 1972ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ನಡೆದ ಆ ಒಂದು ಘಟನೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆಯ ಎಂಟು ಮಂದಿ 11 ಇಸ್ರೇಲಿ ಅಥ್ಲೀಟ್‌ಗಳನ್ನು (Israeli athletes) ಬರ್ಬರವಾಗಿ ಕೊಂದು ಹಾಕಿರುವ ನೋವು ಈಗಲೂ ಎಲ್ಲರನ್ನೂ ಕಾಡುತ್ತಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಪ್ರಧಾನಮಂತ್ರಿ ಗೋಲ್ಡಾ ಮೀರ್ (Prime Minister Golda Meir) ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ಗೆ ರಹಸ್ಯವಾಗಿ ಪ್ರತಿಕಾರ ತೆಗೆದುಕೊಳ್ಳುವಂತೆ ಆದೇಶಿಸಿದ್ದರು.

ಮುಂದಿನ ಏಳು ವರ್ಷ “ಆಪರೇಷನ್ ವ್ರಾತ್ ಆಫ್ ಗಾಡ್” ಎಂದು ಕರೆಯಲ್ಪಡುವ ರಹಸ್ಯ ಕಾರ್ಯಾಚರಣೆಯು ಯುರೋಪ್ ಮತ್ತು ಮಧ್ಯಪ್ರಾಚ್ಯದಾದ್ಯಂತ 12ಕ್ಕಿಂತಲೂ ಹೆಚ್ಚು ಶಂಕಿತರನ್ನು ಗುರಿಯಾಗಿಟ್ಟುಕೊಂಡು ಹತ್ಯೆ ಮಾಡಲಾಯಿತು. ‘ಕಿಡಾನ್’ ಎಂದು ಕರೆಯಲ್ಪಡುವ ವಿಶೇಷ ತರಬೇತಿ ಪಡೆದ ಹಿಟ್-ತಂಡವನ್ನು ಒಳಗೊಂಡಿರುವ ಈ ರಹಸ್ಯ ಕಾರ್ಯಾಚರಣೆಯು ಹಲವಾರು ಪುಸ್ತಕಗಳು, ಸಾಕ್ಷ್ಯಚಿತ್ರಗಳು ಮತ್ತು ಸ್ಟೀವನ್ ಸ್ಪೀಲ್‌ಬರ್ಗ್‌ನ ಚಲನಚಿತ್ರ “ಮ್ಯೂನಿಚ್”ನಲ್ಲಿ ಮೂಡಿ ಬಂದಿದೆ.

Munich Massacre
Israeli athletes

ಮ್ಯೂನಿಚ್ ಹತ್ಯಾಕಾಂಡ

1972ರ ಸೆಪ್ಟೆಂಬರ್ 5ರಂದು ಎಂಟು ಉಗ್ರರು ಮ್ಯೂನಿಚ್‌ನ ಒಲಿಂಪಿಕ್ ಗ್ರಾಮಕ್ಕೆ ನುಸುಳಿದರು. ಎಕೆ 47ಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದ ಅವರು 11 ಇಸ್ರೇಲಿ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಒತ್ತೆಯಾಳಾಗಿ ತೆಗೆದುಕೊಂಡರು. ಆರಂಭಿಕ ದಾಳಿಯಲ್ಲಿ ಇಬ್ಬರನ್ನು ಕೊಂದರು. ಇಸ್ರೇಲ್ ಜೈಲಿನಲ್ಲಿರುವ 234 ಕೈದಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಈ ಸಮಯದಲ್ಲಿ ಜರ್ಮನ್ ಅಧಿಕಾರಿಗಳು ಮಾತುಕತೆಗೆ ಪ್ರಯತ್ನಿಸಿದರು.

ಅನಂತರ ಭಯೋತ್ಪಾದಕರು ವಾಯುನೆಲೆಗೆ ತೆರಳಿದರು. ಅಲ್ಲಿ ಎರಡು ಬೆಲ್ ಯುಹೆಚ್ -1 ಮಿಲಿಟರಿ ಹೆಲಿಕಾಪ್ಟರ್‌ಗಳು ಅವರನ್ನು ಕೈರೋಗೆ ಕರೆದುಕೊಂಡು ಹೋಗಿತ್ತು. ಜರ್ಮನ್ ಪೋಲೀಸರ ರಕ್ಷಣಾ ಪ್ರಯತ್ನದಲ್ಲಿ ಎಲ್ಲಾ ಒತ್ತೆಯಾಳುಗಳು, ಜರ್ಮನ್ ಪೊಲೀಸ್ ಅಧಿಕಾರಿ ಮತ್ತು ಐವರು ಭಯೋತ್ಪಾದಕರ ಸಾವಿಗೆ ಕಾರಣವಾಯಿತು.

Munich Massacre
Israeli PM Golda Meir

ಇಸ್ರೇಲ್ ಪ್ರತಿಕಾರ ಹೇಗಿತ್ತು?

ಮ್ಯೂನಿಚ್ ಹತ್ಯಾಕಾಂಡದ ಅನಂತರ ಪ್ರಧಾನಮಂತ್ರಿ ಗೋಲ್ಡಾ ಮೀರ್ ಅವರು ಮೊಸಾದ್ ಮುಖ್ಯಸ್ಥ ಝ್ವಿ ಜಮೀರ್ ಮತ್ತು ಭಯೋತ್ಪಾದನಾ ನಿಗ್ರಹ ಸಲಹೆಗಾರ ಅಹರಾನ್ ಯಾರಿವ್ ಅವರೊಂದಿಗೆ ಭಯೋತ್ಪಾದಕ ಗುಂಪುಗಳ ನಾಯಕರನ್ನು ಮುಗಿಸಲು ಯೋಜನೆಯನ್ನು ರೂಪಿಸಿದರು. ಈ ರಹಸ್ಯ ಕಾರ್ಯಾಚರಣೆಯು ವಿದೇಶಿ ನೆಲದಲ್ಲಿ ಹತ್ಯೆಗಳನ್ನು ನಡೆಸುವುದನ್ನು ಒಳಗೊಂಡಿತ್ತು. ಇದು ಬೃಹತ್ ರಾಜಕೀಯ ಮತ್ತು ನೈತಿಕ ಪರಿಣಾಮಗಳನ್ನು ಹೊಂದಿತ್ತು. ಭವಿಷ್ಯದ ದಾಳಿಗಳನ್ನು ತಡೆಗಟ್ಟಲು ಮತ್ತು ಮ್ಯೂನಿಚ್ ಸಂತ್ರಸ್ತರಿಗೆ ನ್ಯಾಯವನ್ನು ನೀಡಲು ನಿರ್ಣಾಯಕ ಕ್ರಮ ಅಗತ್ಯ ಎಂದು ಇಸ್ರೇಲ್ ನಾಯಕರು ನಂಬಿದ್ದರು.

ಕಿಡಾನ್ ಕಾರ್ಯಾಚರಣೆ

‘ಕಿಡಾನ್’ ಎಂದು ಕರೆಯಲ್ಪಡುವ ಮೊಸಾದ್‌ನ ವಿಶೇಷ ಘಟಕವು ಹತ್ಯೆಗಳನ್ನು ನಡೆಸುವ ಕಾರ್ಯವನ್ನು ನಿರ್ವಹಿಸುತ್ತಿತ್ತು. ಈ ಘಟಕವು ವಿವಿಧ ರೀತಿಯ ಯುದ್ಧ ಮತ್ತು ರಹಸ್ಯ ಕಾರ್ಯಾಚರಣೆ, ಹತ್ಯೆಯಲ್ಲಿ ಹೆಚ್ಚು ತರಬೇತಿ ಪಡೆದವರನ್ನು ಒಳಗೊಂಡಿತ್ತು. ಮ್ಯೂನಿಚ್ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ಯಾಲೆಸ್ಟೈನ್ ಲಿಬರೇಶನ್ ಆರ್ಗನೈಸೇಶನ್ (PLO) ನ ಉನ್ನತ-ಶ್ರೇಣಿಯ ಸದಸ್ಯರನ್ನು ʼಕಿಡಾನ್ʼ ಗುರಿಯಾಗಿಸಿಕೊಂಡಿತ್ತು.

ಸರಣಿ ಹತ್ಯೆಗಳು

ಮುಂದಿನ ಹಲವಾರು ವರ್ಷಗಳಲ್ಲಿ ಮೊಸಾದ್‌ ತಂಡದವರು ಯುರೋಪ್ ಮತ್ತು ಮಧ್ಯಪ್ರಾಚ್ಯದಾದ್ಯಂತ ಉನ್ನತ ಮಟ್ಟದ ಹತ್ಯೆಗಳನ್ನು ನಡೆಸಿದ್ದರು. ಇದು ಅತ್ಯಂತ ಗಮನಾರ್ಹವಾದ ಕೆಲವು ಕಾರ್ಯಾಚರಣೆಗಳನ್ನು ಒಳಗೊಂಡಿತ್ತು.

ವೇಲ್ ಜ್ವೈಟರ್

ಮೊದಲ ಗುರಿ ರೋಮ್‌ನಲ್ಲಿ ವಾಸಿಸುತ್ತಿದ್ದ ಪ್ಯಾಲೆಸ್ಟೀನಿಯನ್ ಕವಿ ಮತ್ತು ಅನುವಾದಕ ವೇಲ್ ಜ್ವೈಟರ್ ಆಗಿದ್ದ. ಈತ ಸೆಪ್ಟೆಂಬರ್ ದಾಳಿಯ ಪ್ರಮುಖ ಮುಖ್ಯಸ್ಥನಾಗಿದ್ದ ಎನ್ನಲಾಗಿದೆ. 1972ರ ಅಕ್ಟೋಬರ್ 16ರಂದು ಇಬ್ಬರು ಮೊಸ್ಸಾದ್ ಹಿಟ್‌ಮ್ಯಾನ್‌ಗಳು ಜ್ವೈಟರ್‌ನ ಅಪಾರ್ಟ್ಮೆಂಟ್ ಕಟ್ಟಡದ ಲಾಬಿಯಲ್ಲಿ ಹೊಂಚು ಹಾಕಿ 11 ಬಾರಿ ಗುಂಡು ಹಾರಿಸಿದರು. ಆದರೆ ಜ್ವೈಟರ್ ಮೇಲಿನ ದಾಳಿಯನ್ನು ಮೊಸಾದ್‌ ಗುಪ್ತಚರವು ದೃಢೀಕರಿಸಿಲ್ಲ.

ಮಹಮೂದ್ ಹಂಶರಿ

ಫ್ರಾನ್ಸ್‌ನಲ್ಲಿ ಪಿಎಲ್‌ಒ ಪ್ರತಿನಿಧಿಯಾಗಿದ್ದ ಮಹಮೂದ್ ಹಂಶರಿ ಮುಂದಿನ ಗುರಿಯಾಗಿದ್ದ. ಮೊಸಾದ್ ಕಾರ್ಯಕರ್ತರು ಆತನನ್ನು ಪ್ಯಾರಿಸ್ ಅಪಾರ್ಟ್ಮೆಂಟ್ ನಲ್ಲಿ ಪತ್ತೆ ಹಚ್ಚಿದರು. ಪತ್ರಕರ್ತರಂತೆ ನಟಿಸಿ ಆತನ ದೂರವಾಣಿಯಲ್ಲಿ ಬಾಂಬ್ ಇಡುವಲ್ಲಿ ಯಶಸ್ವಿಯಾದರು. 1972ರ ಡಿಸೆಂಬರ್ 8ರಂದು ಬಾಂಬ್ ಸ್ಫೋಟಿಸಿ, ಹಂಶರಿಯನ್ನು ಕೊಂದರು.

ಹುಸೇನ್ ಅಲ್ ಬಶೀರ್

ಸೈಪ್ರಸ್ ಮೂಲದ ಪಿಎಲ್‌ಒ ಆಪರೇಟಿವ್ ಹುಸೇನ್ ಅಲ್ ಬಶೀರ್ ಮೇಲೆ ದಾಳಿಯ ಯೋಜನೆ ರೂಪಿಸಿದ ಮೊಸ್ಸಾದ್ ಏಜೆಂಟ್‌ಗಳು 1973ರ ಜನವರಿ 24ರಂದು ನಿಕೋಸಿಯಾ ಹೊಟೇಲ್‌ನಲ್ಲಿ ಅವನ ಹಾಸಿಗೆಯ ಕೆಳಗೆ ಬಾಂಬ್ ಇಟ್ಟರು. ಇದರ ಸ್ಫೋಟದಿಂದ ಬಶೀರ್ ತಕ್ಷಣ ಸಾವನ್ನಪ್ಪಿದ್ದ.

Munich Massacre


ಬೈರುತ್ ಕಾರ್ಯಾಚರಣೆ

1973ರ ಎಪ್ರಿಲ್ 10ರಂದು ಬೈರುತ್‌ನಲ್ಲಿ ಅತ್ಯಂತ ರೋಚಕ ಕಾರ್ಯಾಚರಣೆ ನಡೆಸಲಾಯಿತು. ಮೊಸ್ಸಾದ್ ಸಿಬ್ಬಂದಿ ಇಸ್ರೇಲ್ ಕಮಾಂಡೋಗಳೊಂದಿಗೆ ಸೇರಿ ಗಣ್ಯ ಸಯೆರೆಟ್ ಮಟ್ಕಲ್ ಘಟಕದ ಮಹಿಳೆಯರಂತೆ ವೇಷ ಧರಿಸಿ ಬೈರುತ್‌ಗೆ ನುಸುಳಿದರು. ಕಾರ್ಯಾಚರಣೆಯು ಮೂರು ಪ್ರಮುಖ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿತ್ತು. ಮೊಹಮ್ಮದ್ ಯೂಸೆಫ್ ಅಲ್-ನಜ್ಜರ್, ಕಮಲ್ ಅಡ್ವಾನ್ ಮತ್ತು ಕಮಲ್ ನಾಸರ್. ಈ ಕಾರ್ಯಾಚರಣೆ ಯಶಸ್ವಿಯಾಗಿತ್ತು.

ಇದನ್ನೂ ಓದಿ: Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 91 ಜನ ಸಾವು

ಅಲಿ ಹಸನ್ ಸಲಾಮೆಹ್

“ರೆಡ್ ಪ್ರಿನ್ಸ್” ಎಂದು ಕರೆಯಲ್ಪಡುವ ಅಲಿ ಹಸನ್ ಸಲಾಮೆ ಮೊಸ್ಸಾದ್ ನ ಪ್ರಮುಖ ಗುರಿಯಾಗಿತ್ತು. ಸಲಾಮೆ ಮ್ಯೂನಿಚ್ ದಾಳಿಯ ಮುಖ್ಯಸ್ಥನಾಗಿದ್ದ. ಪಿಎಲ್‌ಒ ಮಾಜಿ ಮುಖ್ಯಸ್ಥ ಯಾಸರ್ ಅರಾಫತ್ ಅವರ ನಿಕಟ ಸಹವರ್ತಿಯಾಗಿದ್ದ.

ನಾರ್ವೆಯಲ್ಲಿ ವಿಫಲ ಪ್ರಯತ್ನದಲ್ಲಿ ಮೊಸ್ಸಾದ್ ತಂಡವು ಅಹ್ಮದ್ ಬೌಚಿಖಿ ಎಂಬ ಅಮಾಯಕ ಮೊರೊಕನ್ ಅಡುಗೆಯವನನ್ನು ತಪ್ಪಾಗಿ ಕೊಂದಿತು. ಬಳಿಕ ಸಲಾಮೆಯನ್ನು ಪತ್ತೆಹಚ್ಚಲು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿತು. 1979ರಲ್ಲಿ ಸಲಾಮೆ ಮತ್ತು ಅವನ ಹೆಂಡತಿಯೊಂದಿಗೆ ಸ್ನೇಹ ಬೆಳೆಸಿದ ರಹಸ್ಯ ಕಾರ್ಯಾಚರಣೆಯ ತಂಡಕ್ಕೆ ಪ್ರಗತಿ ದೊರೆಯಿತು. 1979ರ ಜನವರಿ 22ರಂದು ಸಲಾಮೆ ಬೈರುತ್‌ನಲ್ಲಿ ಕಾರ್ ಬಾಂಬ್‌ನಿಂದ ಕೊಲ್ಲಲ್ಪಟ್ಟನು. ಹೀಗೆ ಇಸ್ರೇಲ್‌ ತನ್ನ ವೈರಿಗಳ ಮೇಲೆ ಸೇಡು ತೀರಿಸಿಕೊಂಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading

Latest

ಜಕಾರ್ತಾದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 81 ಜನರಿಗೆ ಗಾಯ! ಅಪಘಾತಕ್ಕೆ ಕಾರಣವಾಯಿತೇ ಟ್ಯಾಕ್ಸಿ?

VISTARANEWS.COM


on

ಇಂಡೋನೇಷ್ಯಾದ ರಾಜಧಾನಿ ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಭೀಕರ ರೈಲು ಅಪಘಾತ ಸಂಭವಿಸಿದೆ. ದೂರದ ಊರುಗಳಿಗೆ ಸಂಚರಿಸುವ ಪ್ರಯಾಣಿಕ ರೈಲು ಮತ್ತು ಸ್ಥಳೀಯ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೊಳಗಾದ ರೈಲು ಬೋಗಿಗಳ ಒಳಗೆ ಅನೇಕರು ಸಿಲುಕಿಕೊಂಡಿದ್ದು, ರಕ್ಷಣಾ ಸಿಬ್ಬಂದಿ ಲೋಹವನ್ನು ಕತ್ತರಿಸುವ ಯಂತ್ರಗಳನ್ನು ಬಳಸಿ ಜನರನ್ನು ಹೊರತೆಗೆಯುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಭೀಕರ ಅಪಘಾತಕ್ಕೆ ರೈಲು ಹಳಿ ಮೇಲೆ ಬಂದ ಟ್ಯಾಕ್ಸಿಯೇ ಕಾರಣ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಹಳಿಗಳ ಮೇಲೆ ಚಲಿಸುತ್ತಿದ್ದ ಟ್ಯಾಕ್ಸಿಯೊಂದಕ್ಕೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ರೈಲು, ಪಕ್ಕದ ಹಳಿಯಲ್ಲಿ ಮಹಿಳೆಯರು ಮಾತ್ರ ಪ್ರಯಾಣಿಸುತ್ತಿದ್ದ ಮತ್ತೊಂದು ರೈಲಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಈ ಟ್ಯಾಕ್ಸಿಯು ವಿಯೆಟ್ನಾಂ ಮೂಲದ ‘ಗ್ರೀನ್ ಎಸ್‌ಎಂ’ ಎಂಬ ಸಂಸ್ಥೆಗೆ ಸೇರಿದ್ದಾಗಿದ್ದು, ಕಂಪನಿಯು ಈಗಾಗಲೇ ಅಪಘಾತದ ತನಿಖೆಗೆ ಸಹಕರಿಸುವುದಾಗಿ ಘೋಷಿಸಿದೆ.

ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ (KNKT) ಘಟನೆಯ ಬಗ್ಗೆ ಸಮಗ್ರ ತನಿಖೆ ಆರಂಭಿಸಿದೆ. ರೈಲು ಬೋಗಿಗಳ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವುದು ಈಗ ದೊಡ್ಡ ಸವಾಲಾಗಿದ್ದು, ತಜ್ಞರ ತಂಡವು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಇಂಡೋನೇಷ್ಯಾದಲ್ಲಿ ಸಾರಿಗೆ ಸುರಕ್ಷತೆಯ ಕೊರತೆಯಿಂದಾಗಿ ರೈಲು ಅಪಘಾತಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ, ಆದರೆ ಎರಡು ರೈಲುಗಳ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯು ಇತ್ತೀಚಿನ ವರ್ಷಗಳಲ್ಲೇ ನಡೆದ ಅತ್ಯಂತ ದೊಡ್ಡ ದುರಂತ ಎಂದು ಹೇಳಲಾಗುತ್ತಿದೆ.

Continue Reading

Latest

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

VISTARANEWS.COM


on

ಜಾಗತಿಕ ಆರ್ಥಿಕ ಬದಲಾವಣೆಗಳ ನಡುವೆ ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಸವಾಲು ಎದುರಾಗಿದೆ. ತಾನು ನೀಡಿದ್ದ 3.5 ಬಿಲಿಯನ್ ಡಾಲರ್ ಮೊತ್ತದ ಸಾಲವನ್ನು ಮರಳಿ ನೀಡುವಂತೆ ಸಂಯುಕ್ತ ಅರಬ್ ಸಂಸ್ಥಾನ (UAE) ಪಾಕಿಸ್ತಾನಕ್ಕೆ ತಿಳಿಸಿದೆ. ಈ ಹಿಂದೆ ಆರ್ಥಿಕ ಸ್ಥಿರತೆಗಾಗಿ ಯುಎಇ ಈ ಮೊತ್ತವನ್ನು ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್‌ನಲ್ಲಿ ಇರಿಸಿತ್ತು. ಆದರೆ ಈಗಿನ ಭೌಗೋಳಿಕ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಮೊತ್ತವನ್ನು ವಾಪಸ್ ಪಡೆದಿರುವುದು ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು ನಿಧಿಯ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ.

ಪಾಕಿಸ್ತಾನವು ನೆರೆಯ ರಾಷ್ಟ್ರಗಳಾದ ಇರಾನ್ ಮತ್ತು ಅಮೆರಿಕದ ಮೇಲೆ ಆರ್ಥಿಕ ನೆರವಿಗಾಗಿ ನಿರೀಕ್ಷೆ ಇಟ್ಟುಕೊಂಡಿತ್ತು. ಇರಾನ್ ಜೊತೆಗಿನ ಗಡಿ ಸಮಸ್ಯೆಗಳು ಮತ್ತು ಆಂತರಿಕ ಸಂಘರ್ಷಗಳ ಕಾರಣದಿಂದ ಅಲ್ಲಿಂದ ಬೆಂಬಲ ಸಿಗುವುದು ಕಷ್ಟಕರವಾಗಿದೆ. ಇತ್ತ ಅಮೆರಿಕ ಕೂಡ ಸಾಲದ ಮರುಪಾವತಿಯ ಶರತ್ತುಗಳನ್ನು ಕಠಿಣಗೊಳಿಸಿರುವುದರಿಂದ, ಪಾಕಿಸ್ತಾನಕ್ಕೆ ಹೊಸ ಸಾಲ ಪಡೆಯುವ ಹಾದಿಗಳು ಮುಚ್ಚಿದಂತಾಗಿವೆ. ಇದು ದೇಶದ ಆರ್ಥಿಕತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

ಸದ್ಯಕ್ಕೆ ಪಾಕಿಸ್ತಾನ ಸರ್ಕಾರವು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ (IMF) ಜೊತೆ ಮಾತುಕತೆ ನಡೆಸಿ ಈ ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಿಸುತ್ತಿದೆ. ಯುಎಇ ನಂತಹ ಮಿತ್ರ ರಾಷ್ಟ್ರಗಳು ಕೂಡ ಸಾಲದ ಅವಧಿಯನ್ನು ವಿಸ್ತರಿಸುವ ಬದಲು ವಾಪಸ್ ಕೇಳುತ್ತಿರುವುದು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಆರ್ಥಿಕ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನವು ತನ್ನ ಆರ್ಥಿಕ ನೀತಿಗಳಲ್ಲಿ ಭಾರಿ ಬದಲಾವಣೆ ತರಬೇಕಾದ ಅನಿವಾರ್ಯತೆ ಎದುರಾಗಿದೆ.

Continue Reading

Latest

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

VISTARANEWS.COM


on

ಅಮೆರಿಕವು ಇತ್ತೀಚೆಗಷ್ಟೇ ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಇರಾನ್ ಜಾಗತಿಕ ಸಂಘರ್ಷ ಶಮನಕ್ಕೆ ಹೊಸ ತಂತ್ರ ಹೂಡಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ವಾಷಿಂಗ್ಟನ್‌ಗೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಟೆಹ್ರಾನ್, ವಿಶ್ವದ ಅತ್ಯಂತ ಪ್ರಮುಖ ವ್ಯಾಪಾರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತಾವು ಸಿದ್ಧ ಎಂಬ ಆಶಯ ವ್ಯಕ್ತಪಡಿಸಿದೆ. ಪ್ರಸ್ತುತ ನಡೆಯುತ್ತಿರುವ ಉದ್ವಿಗ್ನತೆಯನ್ನು ತಣ್ಣಗಾಗಿಸಲು ಅತ್ಯಂತ ವಿವಾದಾತ್ಮಕವಾಗಿರುವ ಪರಮಾಣು ಕಾರ್ಯಕ್ರಮದ ಚರ್ಚೆಯನ್ನು ಸದ್ಯಕ್ಕೆ ಬದಿಗಿಟ್ಟು, ಮೊದಲು ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳ ಬಗ್ಗೆ ಮಾತುಕತೆ ನಡೆಸೋಣ ಎಂಬ ಪ್ರಸ್ತಾಪವನ್ನು ಇರಾನ್ ಮುಂದಿಟ್ಟಿದೆ.

ಇರಾನ್ ವಿಧಿಸಿರುವ ಈ ಹೊಸ ಷರತ್ತುಗಳ ಪ್ರಕಾರ, ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಬೇಕಾದರೆ ಅಮೆರಿಕವು ಮೊದಲು ಇರಾನ್ ಬಂದರುಗಳ ಮೇಲೆ ಹೇರಿರುವ ನೌಕಾ ದಿಗ್ಬಂಧನವನ್ನು (Naval Blockade) ಹಿಂಪಡೆಯಬೇಕು. ಅಲ್ಲದೆ, ತನ್ನ ಮೇಲೆ ಹೇರಲಾಗಿರುವ ಕಠಿಣ ಆರ್ಥಿಕ ನಿರ್ಬಂಧಗಳನ್ನು ತೆಗೆದುಹಾಕಿ, ಜಪ್ತಿ ಮಾಡಲಾಗಿರುವ ಇರಾನ್ ಆಸ್ತಿಗಳನ್ನು ಬಿಡುಗಡೆ ಮಾಡಬೇಕೆಂದು ಟೆಹ್ರಾನ್ ಒತ್ತಾಯಿಸಿದೆ. ಸದ್ಯಕ್ಕೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ಮತ್ತು ರಷ್ಯಾದಂತಹ ಸ್ನೇಹಿ ರಾಷ್ಟ್ರಗಳ ಹಡಗುಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದ್ದು, ಇತರ ರಾಷ್ಟ್ರಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಇರಾನ್‌ನ ಈ ಷರತ್ತುಬದ್ಧ ಆಫರ್ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಉನ್ನತ ಮಟ್ಟದ ಭದ್ರತಾ ಸಭೆಯನ್ನು ಕರೆದಿದ್ದಾರೆ. ಇರಾನ್‌ನ ಪರಮಾಣು ಚಟುವಟಿಕೆಗಳ ಮೇಲೆ ಸಂಪೂರ್ಣ ನಿಯಂತ್ರಣ ಹೇರದೆ ಅಮೆರಿಕ ಯಾವುದೇ ಶಾಶ್ವತ ಒಪ್ಪಂದಕ್ಕೆ ಸಹಿ ಹಾಕುವುದು ಅನುಮಾನ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೂ, ಜಾಗತಿಕ ತೈಲ ಮಾರುಕಟ್ಟೆ ಮತ್ತು ಇಂಧನ ಬೆಲೆಗಳ ದೃಷ್ಟಿಯಿಂದ ಈ ಸಂಧಾನ ಪ್ರಕ್ರಿಯೆಯು ಅತ್ಯಂತ ಮಹತ್ವ ಪಡೆದಿದ್ದು, ಟ್ರಂಪ್ ಸರ್ಕಾರದ ಮುಂದಿನ ನಡೆ ಇಡೀ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.

Continue Reading
Advertisement
Latest5 minutes ago

ಮನಸೆಳೆದ ಎಸ್‌ಜೆಬಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 hours ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ5 hours ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ5 hours ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest1 day ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest1 day ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest1 day ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest2 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest3 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ3 days ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌