Parliament Session: ವಕ್ಫ್ ಕಾಯ್ದೆ 1995ರ ತಿದ್ದುಪಡಿ ಮಸೂದೆ ಇಂದು ಮಂಡನೆ ಸಾಧ್ಯತೆ; ಅಧಿವೇಶನದ Live ಇಲ್ಲಿ ನೋಡಿ - Vistara News

ರಾಜಕೀಯ

Parliament Session: ವಕ್ಫ್ ಕಾಯ್ದೆ 1995ರ ತಿದ್ದುಪಡಿ ಮಸೂದೆ ಇಂದು ಮಂಡನೆ ಸಾಧ್ಯತೆ; ಅಧಿವೇಶನದ Live ಇಲ್ಲಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನ ಎರಡು ದಿನಗಳ ಬಿಡುವಿನ ಬಳಿಕ ಇಂದು ಪುನರಾರಂಭವಾಗಲಿದೆ. ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇಂದು ಸಂಸತ್‌ನಲ್ಲಿ ವಿಧೇಯಕ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಸಂಸತ್‌ನಲ್ಲಿ ಕೋಲಾಹಲ ನಡೆಯಲಿದೆ.

VISTARANEWS.COM


on

Parliament Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನ (Parliament Session) ಎರಡು ದಿನಗಳ ಬಿಡುವಿನ ಬಳಿಕ ಇಂದು ಪುನರಾರಂಭವಾಗಲಿದ್ದು, ಕಾವೇರಿದ ಚರ್ಚೆಗೆ ಉಭಯ ಸದನಗಳು ಸಾಕ್ಷಿಯಾಗಲಿವೆ. ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ (Waqf Act) ತಿದ್ದುಪಡಿ ತರಲು ಮುಂದಾಗಿದ್ದು, ಇಂದು ಸಂಸತ್‌ನಲ್ಲಿ ವಿಧೇಯಕ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಸಂಸತ್‌ನಲ್ಲಿ ಕೋಲಾಹಲ ನಡೆಯಲಿದೆ.

ಜತೆಗೆ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಧನವಿನಿಯೋಗ ಮಸೂದೆ ಮತ್ತು ಹಣಕಾಸು ಮಸೂದೆಯನ್ನು ಮಂಡಿಸಲಿದ್ದಾರೆ. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಮೀಸಲಾತಿ ನೀಡುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಪ್ರಸ್ತುತ ಗೋವಾ ವಿಧಾನಸಭೆಯಲ್ಲಿ ಎಸ್‌ಟಿ ಸಮುದಾಯಕ್ಕೆ ಯಾವುದೇ ಸ್ಥಾನಗಳನ್ನು ಕಾಯ್ದಿರಿಸಲಾಗಿಲ್ಲ.

ರಾಜ್ಯಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತೈಲ ಕ್ಷೇತ್ರಗಳು (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆಯನ್ನು ಪರಿಚಯಿಸಲಿದ್ದಾರೆ.

ಚರ್ಚೆ ಹುಟ್ಟು ಹಾಕಿದ ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಸ್ತಾವ

ಸದ್ಯ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರದ ನಿರ್ಧಾರ ವ್ಯಾಪಕ ಚರ್ಚೆ ಹುಟ್ಟು ಹಾಕಿದೆ. ʼʼಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಕಾನೂನನ್ನು ತಿದ್ದುಪಡಿ ಮಾಡಬೇಕೆಂದು ಮುಸ್ಲಿಂ ಸಮುದಾಯದಿಂದ ಬೇಡಿಕೆಗಳು ಬಂದಿವೆ. ಪ್ರಸ್ತುತ ವಕ್ಫ್ ಮಂಡಳಿಗಳು ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ ಎನ್ನುವ ನಿಯಮವಿದೆ. ಈಗ ತಿದ್ದುಪಡಿ ಮಸೂದೆಯು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕಾಯ್ದೆಗೆ ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ರಚನೆ

ಅದೇ ರೀತಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ (Public Accounts Committee) ಸೇರಿದಂತೆ ಪ್ರಮುಖ ಸಂಸದೀಯ ಸಮಿತಿಗಳು ರಚಿಸಲಾಗುತ್ತಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್, ಡಿಎಂಕೆ ನಾಯಕ ಟಿ.ಆರ್.ಬಾಲು, ಬಿಜೆಪಿ ಮುಖಂಡರಾದ ಅನುರಾಗ್ ಠಾಕೂರ್, ರವಿಶಂಕರ್ ಪ್ರಸಾದ್, ತೇಜಸ್ವಿ ಸೂರ್ಯ, ಟಿಎಂಸಿ ನಾಯಕ ಸೌಗತ ರೇ ಮತ್ತು ಎಸ್‌ಪಿ ಮುಖಂಡ ಧರ್ಮೇಂದ್ರ ಯಾದವ್ ಪಿಎಸಿಯ ಸದಸ್ಯರಾಗಿದ್ದಾರೆ.

ಪಿಎಸಿ ಹೊರತುಪಡಿಸಿ ಸಾರ್ವಜನಿಕ ಉದ್ಯಮಗಳ ಸಮಿತಿ, ಅಂದಾಜುಗಳ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ, ಲಾಭದಾಯಕ ಹುದ್ದೆಯ ಜಂಟಿ ಸಮಿತಿ ಮತ್ತು ಇತರ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯನ್ನು ಚುನಾವಣೆ ಇಲ್ಲದೆ ರಚಿಸಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರದಲ್ಲೇ ಸಮಿತಿಗಳ ಅಧ್ಯಕ್ಷರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: Waqf Act: ವಕ್ಫ್‌ ಮಂಡಳಿ ಪರಮಾಧಿಕಾರಕ್ಕೆ ಮೋದಿ ಮೂಗುದಾರ; ಏನೆಲ್ಲ ತಿದ್ದುಪಡಿ? 9.4 ಲಕ್ಷ ಎಕರೆ ಯಾರ ಪಾಲು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

PSI Parashuram Case: ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ: ಶಾಸಕ ಚನ್ನಾರೆಡ್ಡಿ ಪಾಟೀಲ

PSI Parashuram Case: ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನಾನು ಯಾವ ಪೊಲೀಸ್‌ಗೂ ದುಡ್ಡು ಕೇಳಿಲ್ಲ. ಪ್ರಕರಣವನ್ನು ನಮ್ಮ ಸರ್ಕಾರ ಸಿಐಡಿಗೆ ವಹಿಸಿದೆ. ತನಿಖಾ ವರದಿ ಬಂದ ಮೇಲೆ ನಾನು ಸೇರಿ ಸತ್ಯಾಂಶ ತಿಳಿಯುತ್ತದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

VISTARANEWS.COM


on

PSI Parashuram Case
Koo

ಬೆಂಗಳೂರು: ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ (PSI Parashuram Case) ಎಫ್‌ಐಆರ್‌ ದಾಖಲಾದ ಬಳಿಕ ಎಲ್ಲೂ ಕಾಣಿಸಿಕೊಳ್ಳದಿದ್ದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ದಾಖಲಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಶಾಸಕ, ಇದೀಗ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ ಎಂದು ತಿಳಿಸಿದ್ದಾರೆ.

ನಗರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಪ್ರತಿಕ್ರಿಸಿರುವ ಯಾದಗಿರಿ ಶಾಸಕ, ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನಾನು ಯಾವ ಪೊಲೀಸ್‌ಗೂ ದುಡ್ಡು ಕೇಳಿಲ್ಲ. ದುಡ್ಡಿನ ಬಗ್ಗೆ ಮಾತಾಡಿಲ್ಲ, ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಮಾತಾಡಿದ್ದೇನೆ. ಬೇರೆ ಯಾವ ವಿಷಯವೂ ನಾನು ಮಾತಾಡಿಲ್ಲ. ಪ್ರಕರಣವನ್ನು ನಮ್ಮ ಸರ್ಕಾರ ಸಿಐಡಿಗೆ ವಹಿಸಿದೆ. ತನಿಖಾ ವರದಿ ಬಂದ ಮೇಲೆ ನಾನು ಸೇರಿ ಸತ್ಯಾಂಶ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಎಫ್ಐಆರ್ ದಾಖಲಾಗಲು ವಿಳಂಬದ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಅದು ಪೊಲೀಸರಿಗೆ ಬಿಟ್ಟಿದ್ದು, ಅದರಲ್ಲಿ ನಾನು ಭಾಗಿಯಾಗಿಲ್ಲ, ಆ ಕುರಿತು ಯಾರ ಜೊತೆಗೆ ಮಾತನಾಡಿಲ್ಲ. ತಂದೆ ಜತೆ ಮಗ ಇದ್ದೆ ಇರುತ್ತಾನೆ, ಆದರೂ ಸುಮ್ಮನೆ ಆ ಹುಡುಗನ ಮೇಲೆ ಜನ ಆಪಾದನೆ ಮಾಡುತ್ತಾರೆ ಎಂದರೆ ನಾನು ಒಪ್ಪುವುದಿಲ್ಲ. ಇದು ಸುಳ್ಳು, ಕಟ್ಟು ಕಥೆ, ಇದೊಂದು ಷಡ್ಯಂತ್ರ. ತಂದೆ ಮಕ್ಕಳನ್ನು ಸಿಕ್ಕಿ ಹಾಕಿಸಲು ವಿಪಕ್ಷದವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿಐಡಿ ವರದಿ ಬಂದ ಮೇಲೆ ಇದು ಷಡ್ಯಂತ್ರವೋ, ಅಲ್ಲವೋ ಎಂಬುವುದು ಹೊರಗಡೆ ಬರಲಿದೆ. ಕಾನೂನಿಗೆ ನಾನು ತಲೆ ಬಾಗುತ್ತೇನೆ, ಸಿಐಡಿ ಅವರು ಕರೆ ಮಾಡಿದ ತಕ್ಷಣ ಹೋಗಿ ವಿಚಾರಣೆಗೆ ಸಹಕಾರ ಕೊಡುತ್ತೇನೆ. ಸಿಎಂ ಅವರು ನಮ್ಮ ನಾಯಕರು, ಪಕ್ಷದ ಸಭೆಗೆ ಬರಲು ಹೇಳಿದ್ದರು. ಅದಕ್ಕೆ ಹೋಗಿದ್ದೆ. ಚನ್ನಾರೆಡ್ಡಿ ಧೈರ್ಯವಾಗಿ ಇರು, ನಾವೆಲ್ಲ ಇದ್ದೇವೆ ಎಂದು ಹೇಳಿರುವುದಾಗಿ ತಿಳಿಸಿದರು.

ಸಿಎಂಗೆ ನಾನು ಯಾವ ವಿಚಾರವೂ ತಿಳಿಸಲು ಹೋಗಿಲ್ಲ. ಅವರಿಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಹೋಗಿರುತ್ತದೆ. ಗೃಹ ಸಚಿವರು ಸೇರಿ ಎಲ್ಲಾ ಸಚಿವರು ನನ್ನ ಜೊತೆ ಮಾತನಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ(ಆ.2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

ಇದನ್ನೂ ಓದಿ | Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿ ಪತಿ ಪರಶುರಾಮ ಮೃತಪಟ್ಟಿದ್ದಾರೆ ಎಂದು ಶ್ವೇತಾ ಆರೋಪಿಸಿದ್ದರು. ಹೀಗಾಗಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Valmiki Corporation scam: ವಾಲ್ಮೀಕಿ ನಿಗಮ ಹಗರಣ; ಕೋರ್ಟ್‌ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ

Valmiki Corporation scam: 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿ ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ.

ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ. ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಪ್ರಕರಣದಲ್ಲಿ ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಸೀಜ್ ಮಾಡಿ ನ್ಯಾಯಾಲಯದ ಸುಪರ್ದಿಗೆ ನೀಡಲಾಗಿದೆ. ಪ್ರಕರಣದಲ್ಲಿ ಮೊದಲಿಗೆ ಬಂಧನವಾದ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Stock Market: ಷೇರುಪೇಟೆ ಮಹಾ ಪತನ; ಸೆನ್ಸೆಕ್ಸ್‌ 2,000 ಅಂಕ ಕುಸಿತ; 17 ಲಕ್ಷ ಕೋಟಿ ರೂ. ಲಾಸ್‌!

Inspector Death: ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ, ಎರಡು ತಿಂಗಳ ಹಿಂದೆ ಟ್ರಾನ್ಸ್‌ಫರ್‌ ಆಗಿದ್ದ ಸಿಸಿಬಿ ಎಸ್‌ಐ

police inspector death thimmegowda
police inspector death thimmegowda

ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ (police inspector death) ಮಾಡಿಕೊಂಡಿದ್ದಾರೆ. ಎರಡು ತಿಂಗಳ ಹಿಂದೆ ಸಿಸಿಬಿಗೆ (CCB) ಟ್ರಾನ್ಸ್‌ಫರ್‌ (Tarnsfer) ಆಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ತಿಮ್ಮೇಗೌಡ (Thimmegowda) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಡದಿಯಲ್ಲಿ ಆತ್ಮಹತ್ಯೆಗೆ (Self harming) ಶರಣಾಗಿದ್ದಾರೆ.

ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಿಮ್ಮೇಗೌಡ ಸಾವಿಗೆ ಶರಣಾಗಿದ್ದಾರೆ. ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ತಮ್ಮ ತೋಟದ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.

ಇದನ್ನೂ ಓದಿ: Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

1998ರ ರೂರಲ್ ಬ್ಯಾಚ್ ಇನ್ಸ್‌ಪೆಕ್ಟರ್ ತಿಮ್ಮೇಗೌಡ, ಚನ್ನಪಟ್ಟಣದ ಹಳ್ಳಿಯೊಂದರ ನಿವಾಸಿ. ಗ್ರಾಮೀಣ ಕೃಪಾಂಕದಲ್ಲಿ ಆಯ್ಕೆಯಾಗಿದ್ದ ತಿಮ್ಮೇಗೌಡ ವಿಧಾನಸಭೆ ಚುನಾವಣೆ ವೇಳೆಗೆ ಬಿಡದಿಯಿಂದ ಅತ್ತಿಬೆಲೆಗೆ ವರ್ಗಾವಣೆಯಾಗಿದ್ದರು. 2023ರ ಸೆಪ್ಟೆಂಬರ್‌ನಲ್ಲಿ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಬಳಿಕ ಆ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು. ನಂತರ ಕುಂಬಳಗೋಡು ಠಾಣೆಗೆ ವರ್ಗಾವಣೆಯಾಗಿದ್ದು, ಇತ್ತೀಚೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು.

ಯಾದಗಿರಿಯಲ್ಲಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗರ ಸೃಷ್ಟಿಸುವ ಬೆನ್ನಲ್ಲೇ ಇನ್ನೊಬ್ಬ ಎಸ್‌ಐ ಆತ್ಮಹತ್ಯೆ ಪ್ರಕರಣ ನಡೆದಿದೆ. ಪಿಎಸ್‌ಐ ಪರಶುರಾಮ್ ಅವರ ಟ್ರಾನ್ಸ್‌ಫರ್‌ಗಾಗಿ ಲಂಚ ಕೇಳಿದ ಸ್ಥಳೀಯ ಶಾಸಕ ಹಾಗೂ ಆತನ ಪುತ್ರನ ಮೇಲೆ ದೂರು ದಾಖಲಾಗಿದೆ.

Continue Reading

ವೈರಲ್ ನ್ಯೂಸ್

Rahul Gandhi: ರಾಹುಲ್ ಗಾಂಧಿ ಅಲ್ಲ, ರಾಹುಲ್ ಖಾನ್! ಪಾಕಿಸ್ತಾನದ ಟಿವಿಯಲ್ಲಿ ಬಿಸಿಬಿಸಿ ಚರ್ಚೆ!

Rahul Gandhi: ಪಾಕಿಸ್ತಾನದ ಚಾನಲ್‌ ಒಂದರಲ್ಲಿ ಮಾತನಾಡುತ್ತ ಅತಿಥಿಯೊಬ್ಬರು ರಾಹುಲ್‌ ಗಾಂಧಿ ಅವರ ಜಾತಿಯನ್ನು ಪ್ರಶ್ನಿಸಿದ್ದಾರೆ. ʼʼರಾಹುಲ್ ಹೇಗೆ ಗಾಂಧಿಯಾದರು? ರಾಹುಲ್ ಅವರು ನೆಹರೂ ಕುಟುಂಬದ ಕುಡಿ. ಇದು ನೆಹರೂ ವಂಶ. ಇವರೊಂದಿಗೆ ಗಾಂಧಿಯ ಹೆಸರು ಹೇಗೆ ಥಳುಕು ಹಾಕಿಕೊಂಡಿದೆ?ʼʼ ಎಂದು ಅವರು ಕೇಳಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ

VISTARANEWS.COM


on

Rahul Gandhi
Koo

ನವದೆಹಲಿ: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ ನಡೆಯುತ್ತಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ಕಂಡು ಬರುತ್ತಿದೆ. ಜುಲೈ 29 ಸಂಸತ್‌ನಲ್ಲಿ ಜಾತಿಗಣತಿ (Caste Census) ಕುರಿತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ನಾವು ಜಾತಿಗಣತಿ ಮಂಡಿಸುತ್ತೇವೆ ಎಂದಿದ್ದರು. ಇದಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ (Anurag Thakur) ತಿರುಗೇಟು ನೀಡಿ, “ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದರು. ಸದ್ಯ ಈ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಅಚ್ಚರಿ ಎಂದರೆ ಈ ವಿಚಾರ ದೇಶದ ಗಡಿ ದಾಟಿ ಪಾಕಿಸ್ತಾನದಲ್ಲಿಯೂ ಚರ್ಚೆಯಾಗುತ್ತಿದೆ. ಪಾಕಿಸ್ತಾನದ ಚಾನಲ್‌ ಒಂದರಲ್ಲಿ ಮಾತನಾಡುತ್ತ ಅತಿಥಿಯೊಬ್ಬರು ರಾಹುಲ್‌ ಗಾಂಧಿ ಅವರ ಜಾತಿಯನ್ನು ಪ್ರಶ್ನಿಸಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ (Viral Video).

ಸುಮಾರು 2.18 ನಿಮಿಷದ ವಿಡಿಯೊ ಇದಾಗಿದ್ದು, ಸಂವಾದದಲ್ಲಿ ಪಾಲ್ಗೊಂಡ ಅತಿಥಿ ರಾಹುಲ್‌ ಅವರು ಗಾಂಧಿ ಹೇಗಾದರು ಎಂದು ಪ್ರಶ್ನಿಸಿದ್ದಾರೆ. ʼʼರಾಹುಲ್ ಹೇಗೆ ಗಾಂಧಿಯಾದರು? ರಾಹುಲ್ ಅವರು ನೆಹರೂ ಕುಟುಂಬದ ಕುಡಿ. ಇದು ನೆಹರೂ ವಂಶ. ಇವರೊಂದಿಗೆ ಗಾಂಧಿಯ ಹೆಸರು ಹೇಗೆ ಥಳುಕು ಹಾಕಿಕೊಂಡಿದೆ?ʼʼ ಎಂದು ಅವರು ಕೇಳಿದ್ದಾರೆ.

ವಾದ ಹೀಗಿದೆ

ʼʼನೆಹರೂ ಅವರ ಮಗಳು ಇಂದಿರಾ ಫಿರೋಜ್ ಖಾನ್ ಅವರನ್ನು ವಿವಾಹವಾದರು. ಫಿರೋಜ್ ಖಾನ್ ನವಾಬ್ ಖಾನ್ ಅವರ ಮಗ. ಫಿರೋಜ್ ಖಾನ್ ಅವರ ಮಗ ರಾಜೀವ್ ಕ್ರಿಶ್ಚಿಯನ್ ಮಹಿಳೆ ಸೋನಿಯಾ ಅವರನ್ನು ವಿವಾಹವಾಗಿದ್ದಾರೆ. ನಂತರ ಸೋನಿಯಾ ಮತ್ತು ರಾಜೀವ್ ಅವರ ಮಗಳು ಪ್ರಿಯಾಂಕಾ ಕ್ರಿಶ್ಚಿಯನ್ ರಾಬರ್ಟ್ ವಾದ್ರಾ ಅವರನ್ನು ವಿವಾಹವಾದರು. ಅವರ ಮನೆಯಲ್ಲಿ ಮುಸ್ಲಿಂ-ಕ್ರಿಶ್ಚಿಯನ್-ಪಾರ್ಸಿ ಇದ್ದಾರೆʼʼ ಎಂದಿದ್ದಾರೆ. ಸದ್ಯ ಈ ವಿಡಿಯೊ ಅನೇಕರ ಗಮನ ಸೆಳೆದಿದ್ದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.

ಈಗಾಗಲೇ ಈ ವಿಡಿಯೊವನ್ನು 2 ಲಕ್ಷಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ʼʼರಾಹುಲ್‌ ಗಾಂಧಿ ಅಲ್ಲ, ರಾಹುಲ್‌ ಖಾನ್‌ ಎನ್ನುವುದು ನಿಮ್ಮ ವಾದ ತಾನೇ?ʼʼ ಎಂದು ಒಬ್ಬರು ಪ್ರಶ್ನಿಸಿದ್ದಾರೆ. ʼʼನೀವು ಗಾಂಧಿ ಕುಟುಂಬದ ಕಣ್ಣನ್ನು ತೆರೆಸಿದ್ದೀರಿʼʼ ಎಂದು ಇನ್ನೊಬ್ಬರು ತಮಾಷೆ ಮಾಡಿದ್ದಾರೆ. ʼʼಗಾಂಧಿ ಕುಟುಂಬದ ಸತ್ಯ ಹೊರ ಬಿತ್ತುʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼಪ್ರತಿಯೊಬ್ಬರಿಗೂ ರಾಹುಲ್‌ ಗಾಂಧಿ ಅವರ ಕುಟುಂಬದ ಬಗ್ಗೆ ಗೊತ್ತು. ಇದೀಗ ಪಾಕಿಸ್ತಾನದ ಮಾಧ್ಯಮಗಳೂ ಈ ಬಗ್ಗೆ ಚರ್ಚೆ ನಡೆಸುತ್ತಿವೆʼʼ ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʼʼಜಾತಿ ಗಣತಿ ಯಾವಾಗ ಆರಂಭಿಸುತ್ತೀರಿ?ʼʼ ಎಂದು ನೇರವಾಗಿ ರಾಹುಲ್‌ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Viral Video: ಸೆಲ್ಫಿ ತೆಗೆಯಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ!

ಅನುರಾಗ್‌ ಠಾಕೂರ್‌ ಹೇಳಿದ್ದೇನು?

ಸಂಸತ್‌ನಲ್ಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂದು ಟೀಕಿಸಿದ್ದರು. ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿ, “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದು ಸವಾಲು ಹಾಕಿದ್ದರು.

Continue Reading

ಪ್ರಮುಖ ಸುದ್ದಿ

CM Siddaramaiah: ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌? ಇಂದು ರಾಜ್ಯಪಾಲರಿಂದ ನಿರ್ಧಾರ

CM Siddaramaiah: ತನಿಖೆಗೆ ಅನುಮತಿ ಕೊಟ್ಟರೆ ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಕಂಟಕ ಶುರುವಾಗಲಿದೆ. ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅಬ್ರಾಹಂ ಖಾಸಗಿ ದೂರು ದಾಖಲಿಸಲಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಬಹುದು.

VISTARANEWS.COM


on

thawar chand gehlot cm siddaramaiah Governor versus state
Koo

ಬೆಂಗಳೂರು: ಒಂದು ಕಡೆ ಪ್ರತಿಪಕ್ಷಗಳಿಂದ ʼಮೈಸೂರು ಚಲೋʼ (Mysore Chalo) ಪಾದಯಾತ್ರೆ (BJP-JDS Padayatra) ಮೂರನೇ ದಿನ ಪ್ರವೇಶಿಸುತ್ತಿದೆ. ಇನ್ನೊಂದೆಡೆ, ಒಂದು ವಾರದಿಂದ ದೆಹಲಿಯಲ್ಲಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Givernor Thavar Chand Gehlot) ಇಂದು ಬೆಂಗಳೂರಿಗೆ ಮರಳಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Procecution) ನೀಡಲಾದ ಮನವಿಯ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈಗಾಗಲೇ ಅನುಮತಿ ಕೇಳಿದ್ದಾರೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಒಂದು ವಾರದಿಂದ ದೆಹಲಿಯಲ್ಲಿದ್ದು, ರಾಜ್ಯಪಾಲರುಗಳ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು. ಹೀಗಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿರಲಿಲ್ಲ.

ಇಂದು ರಾಜ್ಯಪಾಲರು ರಾಜ್ಯಕ್ಕೆ ವಾಪಸು ಆಗಿದ್ದಾರೆ. ರಾಜ್ಯ ಸರ್ಕಾರ ಕಳುಹಿಸಿರುವ ಕ್ಯಾಬಿನೆಟ್ ನಿರ್ಧಾರವನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿದ್ದಾರೆ. ಸಿಎಂಗೆ ಕಳಿಸಿರುವ ನೋಟೀಸ್‌ ಅನ್ನು ವಾಪಸ್‌ ಪಡೆಯುವಂತೆ ರಾಜ್ಯಪಾಲರಿಗೆ ಕ್ಯಾಬಿನೆಟ್‌ ಮನವಿ ಮಾಡಿದೆ. ಇದು ಪ್ರಾಸಿಕ್ಯೂಷನ್‌ಗೆ ಅರ್ಹ ಪ್ರಕರಣವೇ ಅಲ್ಲವೇ ಎಂದು ತೀರ್ಮಾನ ತೆಗೆದುಕೊಳ್ಳುವ ಹಾಗೂ ಕಾನೂನು ಸಲಹೆ ಬೇಕಿದ್ದರೆ ಮತ್ತೊಮ್ಮೆ ವಕೀಲರ ಜತೆ ರಾಜ್ಯಪಾಲರು ಚರ್ಚೆ ನಡೆಸುವ ಸಂಭವ ಇದೆ.

ತನಿಖೆಗೆ ಅನುಮತಿ ಕೊಟ್ಟರೆ ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಕಂಟಕ ಶುರುವಾಗಲಿದೆ. ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅಬ್ರಾಹಂ ಖಾಸಗಿ ದೂರು ದಾಖಲಿಸಲಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಬಹುದು. ಬಳಿಕ ಪ್ರಕರಣ ಸ್ವೀಕರಿಸುವ ಇಲ್ಲವೇ ತಿರಸ್ಕರಿಸುವ ಬಗ್ಗೆ ನ್ಯಾಯಾಲಯದಲ್ಲಿ ವಾದ ಹಾಗೂ ಪ್ರತಿವಾದ ನಡೆಯಲಿದೆ.

ಕೋರ್ಟ್ ಖಾಸಗಿ ದೂರನ್ನು ಸ್ವೀಕರಿಸಿದರೆ ಸಿಎಂಗೆ ಬಂಧನದ ಭೀತಿಯೂ ಶುರುವಾಗಬಹುದು. ತನಿಖೆಗೆ ಆದೇಶ ನೀಡಿದರೆ ರಾಜೀನಾಮೆಗೆ ಒತ್ತಡ ಇನ್ನಷ್ಟು ಹೆಚ್ಚಲಿದೆ. ಪ್ರತಿಪಕ್ಷಗಳ ಜೊತೆಗೆ, ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಸ್ವಪಕ್ಷೀಯರು ಕೂಡ ಒಳ ಏಟು ಶುರು ಮಾಡಬಹುದು. ಸ್ವಪಕ್ಷದಲ್ಲೂ ಸಿಎಂ ರಾಜೀನಾಮೆಗೆ ಬೇಡಿಕೆ ಕೇಳಿಬರಬಹುದು. ಹೀಗಾಗಿ ರಾಜ್ಯ ರಾಜಕೀಯ ಇನ್ನಷ್ಟು ತಲ್ಲಣ ಸೃಷ್ಟಿಸಲಿದೆ.

ಸಿಎಂ ಮುಂದೆ ಇರೋ ಆಯ್ಕೆಗಳೇನು?

ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕರೆ ಸಿಎಂ ಕಾನೂನು ಹೋರಾಟ ಮಾಡುವುದು ಅನಿವಾರ್ಯ. ತನಿಖೆಗೆ ಅನುಮತಿ ಕೊಟ್ಟಿರುವುದನ್ನು ಹೈಕೋರ್ಟ್‌ನಲ್ಲಿ ರಿಟ್ ಮೂಲಕ ಪ್ರಶ್ನಿಸಬಹುದು. ಜತೆಗೆ ಅಬ್ರಹಾಂ ಸಲ್ಲಿಸಿರುವ ದೂರು ರದ್ದು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ರಾಜ್ಯಪಾಲರ ನಡೆ ಪ್ರಶ್ನೆ ಮಾಡಿ ಸಂವಿಧಾನ ಪೀಠಕ್ಕೂ ಹೋಗಬಹುದು. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಇರುವುದರಿಂದ ಸುಪ್ರೀಂ ಕೋರ್ಟ್‌ಗೆ ನೇರವಾಗಿ ಹೋಗುವುದು ಅನುಮಾನ.

ಕಾಂಗ್ರೆಸ್‌ ಒಗ್ಗಟ್ಟಿನಿಂದ ಹೋರಾಡಲಿದೆ: ಕೆಸಿ ವೇಣುಗೋಪಾಲ್

ಬೆಂಗಳೂರು: ಬಿಜೆಪಿ–ಜೆಡಿಎಸ್‌ ಪಕ್ಷಗಳ (BJP-JDS Padayatra) ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ ಎಂದು ತಿಳಿಸಿದರು.

2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.
ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.‌

ಇದನ್ನೂ ಓದಿ | MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

Continue Reading
Advertisement
Shira News
ತುಮಕೂರು13 mins ago

Shira News: ಶಿರಾ ನಗರಸಭೆಯಿಂದ ದೊಡ್ಡಕೆರೆಯ ಸುತ್ತಲಿನ ಪ್ರದೇಶದ ಸ್ವಚ್ಛತೆ

Shravana 2024
ಧಾರ್ಮಿಕ17 mins ago

Shravana 2024: ಶ್ರಾವಣ ಉಪವಾಸದ ವೇಳೆ ಈ 5 ಪಾನೀಯ ಆರೋಗ್ಯಕರ

bs yediyurappa
ಪ್ರಮುಖ ಸುದ್ದಿ18 mins ago

BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ

PSI Parashuram Case
ಕರ್ನಾಟಕ31 mins ago

PSI Parashuram Case: ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ: ಶಾಸಕ ಚನ್ನಾರೆಡ್ಡಿ ಪಾಟೀಲ

Snake Bite
ವೈರಲ್ ನ್ಯೂಸ್48 mins ago

Snake Bite: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

Road Accident
ಬೆಂಗಳೂರು50 mins ago

Road Accident : ಅಡ್ಡ ಬಂದ ನಾಯಿ ಮರಿ ಮೇಲೆ ಬೈಕ್ ಹತ್ತಿಸಿದ ಸವಾರ

Viral Video
Latest1 hour ago

Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

Physical Abuse
ವಿಜಯಪುರ1 hour ago

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Sex Racket
Latest1 hour ago

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Duniya Vijay- Ganesh To Combined together make Movie in future
ಸ್ಯಾಂಡಲ್ ವುಡ್1 hour ago

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌