Snake Bite: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು? - Vistara News

ವೈರಲ್ ನ್ಯೂಸ್

Snake Bite: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

Snake Bite: ಸರ್ಪಗಳಲ್ಲಿ ಕಾಳಿಂಗ ಸರ್ಪವು ಅತ್ಯಂತ ಭಯಾನಕ ವಿಷವನ್ನು ಹೊಂದಿರುವಂತ ಹಾವಾಗಿದೆ. ಅದರ ವಿಷದಲ್ಲಿ ಒಂದು ಹನಿ ಮನುಷ್ಯ ದೇಹಕ್ಕೆ ತಗುಲಿದರೆ ಆತ ಸಾಯಬಹುದು. ಅಂತಹದರಲ್ಲಿ ಇಂತಹ ಭಯಾನಕ ಕಾಳಿಂಗ ಸರ್ಪ ಹಾವು ಹಿಡಿಯುವವನನ್ನು ಕಚ್ಚಿ ನಂತರ ತಾನೇ ಜೀವ ಬಿಟ್ಟ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಚಂದ್ರಕುಮಾರ್ ಅಹಿರ್ವಾರ್ ಎಂಬ ವ್ಯಕ್ತಿ 5 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದ. ಆಗ ಕೋಪಗೊಂಡ ಹಾವು ಚಂದ್ರಕುಮಾರನ ಎರಡೂ ಕೈ ಹೆಬ್ಬೆರಳುಗಳನ್ನು ಕಚ್ಚಿತ್ತು. ಚಂದ್ರಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾಳಿಂಗ ಸರ್ಪ ಮಾತ್ರ ಸತ್ತೇ ಹೋಗಿದೆ.

VISTARANEWS.COM


on

Snake Bite
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಹಾವು ವಿಶ್ವದ ಅತ್ಯಂತ ಅಪಾಯಕಾರಿ ಮತ್ತು ವಿಷಕಾರಿ ಜೀವಿಗಳಲ್ಲಿ ಒಂದಾಗಿದೆ. ಹಾಗಾಗಿ ಹಾವು ಕಚ್ಚಿದವರು ಚಿಕಿತ್ಸೆ ಪಡೆಯದಿದ್ದರೆ ಸಾವನಪ್ಪುವುದಂತೂ ಖಂಡಿತ. ಅದರಲ್ಲೂ ಈ ಸರ್ಪಗಳಲ್ಲಿ ಕಾಳಿಂಗ ಸರ್ಪವು ಅತ್ಯಂತ ಭಯಾನಕ ವಿಷವನ್ನು ಹೊಂದಿರುವಂತ ಹಾವಾಗಿದೆ. ಅದರ ವಿಷದಲ್ಲಿ ಒಂದು ಹನಿ ಮನುಷ್ಯ ದೇಹಕ್ಕೆ ತಗುಲಿದರೆ ನಿಮಿಷದೊಳಗೆ ಸಾಯಬಹುದು. ಅಂತಹದರಲ್ಲಿ ಇಂತಹ ಭಯಾನಕ ಕಾಳಿಂಗ ಸರ್ಪ ಹಾವು (Snake Bite) ಹಿಡಿಯುವವನನ್ನು ಕಚ್ಚಿ ನಂತರ ತಾನೇ ಜೀವ ಬಿಟ್ಟ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾಗರ್ ನಲ್ಲಿ ಬೆಳಕಿಗೆ ಬಂದಿದೆ.

ಹಾವು ಕಚ್ಚಿದ ನಂತರ ಹಾವು ಹಿಡಿಯುವವನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗ ಅವನು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ನರಯವಳ್ಳಿ ಪೊಲೀಸ್ ಠಾಣೆಯ ಪೊಲೀಸರು ಘಟನೆಯ ಬಗ್ಗೆ ತಿಳಿದು ಹಾವು ಹಿಡಿಯುವವರನ್ನು ಸಂಪರ್ಕಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ನಮ್ಮ ಹಿರಿಯರು ಹೇಳುವ ಪ್ರಕಾರ ಕಾಳಿಂಗ ಸರ್ಪ ಎಷ್ಟು ವಿಷಕಾರಿ ಎಂದರೆ ಅದು ಕಚ್ಚಿದರೆ ಬಲಿಪಶುವಿಗೆ ಸಾಯುವ ಮೊದಲು ನೀರು ಕೇಳುವ ಅವಕಾಶವೂ ಇರುವುದಿಲ್ಲ ಎನ್ನುತ್ತಾರೆ. ಆದರೆ ಇಲ್ಲಿ ನಡೆದ ಘಟನೆ ಮಾತ್ರ ಬಹಳ ಆಶ್ಚರ್ಯಕರವಾಗಿದೆ. ಕಾಳಿಂಗ ಸರ್ಪ ಮನುಷ್ಯನಿಗೆ ಕಚ್ಚಿದ ನಂತರ ತಾನೇ ಸಾವನಪ್ಪಿದೆ. ಈ ಘಟನೆ ಅಲ್ಲಿನ ಸಮುದಾಯದ ಸದಸ್ಯರಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

ವರದಿಗಳ ಪ್ರಕಾರ, ನಾರಾಯಣಾವಳಿಯ ಸಾಗರ್-ಖುರೈ ರಸ್ತೆಯ ತಡೆಗೋಡೆಯ ಬಳಿ ಜನರು ಈ ಕಾಳಿಂಗ ಸರ್ಪವನ್ನು ನೋಡಿದ್ದಾರೆ, ನಂತರ ಅವರು ತಕ್ಷಣ ಚಂದ್ರಕುಮಾರ್ ಅಹಿರ್ವಾರ್ ಎಂಬ ಹಾವು ಹಿಡಿಯುವವರಿಗೆ ಮಾಹಿತಿ ನೀಡಿದ್ದಾರೆ. ಅವನು ಸ್ಥಳಕ್ಕೆ ಬಂದು 5 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾನೆ. ಆಗ ಕೋಪಗೊಂಡ ಹಾವು ಚಂದ್ರಕುಮಾರನ ಎರಡೂ ಕೈ ಹೆಬ್ಬೆರಳುಗಳನ್ನು ಕಚ್ಚಿತು. ಹಾಗಾಗಿ ಚಂದ್ರಕುಮಾರ್ ಭಾಗ್ಯೋದಯ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾಯಿತು.

ಇದನ್ನೂ ಓದಿ: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

ಅದೃಷ್ಟವಶಾತ್, ಆತ ಸಂಪೂರ್ಣವಾಗಿ ಚೇತರಿಸಿಕೊಂಡು ಮನೆಗೆ ಹೋಗಿದ್ದಾನೆ. ಆದರೆ ಅಲ್ಲಿ ಅವನನ್ನು ಕಚ್ಚಿದ ಅದೇ ಹಾವು ಸತ್ತು ಹೋಗಿತ್ತು. ಕಾರಣವೆನೆಂದರೆ ಅವನು ಹಾವನ್ನು ಸೆರೆ ಹಿಡಿದು ಪ್ಲಾಸ್ಟಿಕ್ ಪೆಟ್ಟಿಗೆಯಲ್ಲಿ ಹಾಕಿದ್ದ. ಅಲ್ಲಿ ಗಾಳಿಯಾಡಲು ಯಾವುದೇ ರಂಧ್ರಗಳಿರಲಿಲ್ಲ. ಇದರ ಪರಿಣಾಮವಾಗಿ ಹಾವು ಉಸಿರಾಡಲು ಸಾಧ್ಯವಾಗದೆ ಪ್ರಾಣ ಬಿಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ, ಮನುಷ್ಯರ ವಿಷ ಕೆಲವೊಮ್ಮೆ ಹಾವಿನ ವಿಷಕ್ಕಿಂತ ಅಪಾಯಕಾರಿ. ಹಾವಿನ ಸಾವಿಗೆ ಇದೂ ಕಾರಣ ಇರಬಹುದು ಎಂದೂ ಸ್ಥಳೀಯ ಗ್ರಾಮಸ್ಥರು ಚರ್ಚಿಸುತ್ತಿದ್ದಾರೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಅವ್ಯವಸ್ಥೆ; ಬೀದಿ ಬದಿ ಮಲಗಿ ನಿದ್ದೆ ಮಾಡಿದ ಚಿನ್ನದ ಪದಕ ವಿಜೇತ ಈಜುಪಟು

Paris Olympics 2024 : ಸೌದಿ ಅರೇಬಿಯಾದ ರೋವರ್ ಹುಸೇನ್ ಅಲಿರೆಜಾ ಹಂಚಿಕೊಂಡಿರುವ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ, ಸೆಕಾನ್ ಉದ್ಯಾನವನದಲ್ಲಿ ಮಲಗಿರುವುದು ಕಂಡುಬಂದಿದೆ. ಇಟಾಲಿಯನ್ ಈಜುಗಾರ ನೆಲದ ಮೇಲೆ ಟವೆಲ್ ಹಾಸಿ ಮಲಗಿದ್ದಾರೆ. ಪುರುಷರ 4×100 ಮೀಟರ್ ಮೆಡ್ಲೆ ರಿಲೇಯಲ್ಲಿ ಕಂಚಿನಪದಕ ಗೆಲ್ಲುವ ಮೊದಲಿನ ಚಿತ್ರವೇ ಎಂಬುದು ಖಾತರಿಯಾಗಿಲ್ಲ. ಒಂದು ವೇಳೆ ಚಿನ್ನದಿಂದ ಕಂಚಿಗೆ ಇಳಿದಿದ್ದರೆ ವ್ಯವಸ್ಥೆಯ ಬಗ್ಗೆ ಆಕ್ಷೇಪ ಉಂಟಾಗುವುದು ಖಾತರಿ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ (Paris Olympics 2024) ಚಿನ್ನದ ಪದಕ ವಿಜೇತ ಮತ್ತು ಇಟಾಲಿಯನ್ ಈಜುಗಾರ ಥಾಮಸ್ ಸೆಕಾನ್ ಸುದ್ದಿಯಲ್ಲಿದ್ದಾರೆ. ಚಿನ್ನ ಗೆದ್ದು ಸಂಭ್ರಮಿಸಿದ ಖ್ಯಾತಿ ಪಡೆದುಕೊಂಡಿರುವ ಅವರೀಗ ಅನಗತ್ಯ ಕಾರಣವೊಂದಕ್ಕೆ ಸುದ್ದಿಗೆ ಗ್ರಾಸವಾಗಿದ್ದಾರೆ. ಒಲಿಂಪಿಕ್ಸ್​ನ ಕ್ರೀಡಾಗ್ರಾಮದಲ್ಲಿನ ಅವ್ಯವಸ್ಥೆಯನ್ನು ವಿರೋಧಿಸಿ ಅವರು ಉದ್ಯಾನವನದಲ್ಲಿ ನೆಲದ ಮೇಲೆ ಮಲಗಿರುವುದು ಕಂಡುಬಂದಿದೆ. 100 ಮೀಟರ್ ಬ್ಯಾಕ್​ಸ್ಟ್ರೋಕ್​ ಸ್ಪರ್ಧೆಯಲ್ಲಿ ಚಿನ್ನ ಮತ್ತು ಪುರುಷರ 4×100 ಮೀಟರ್ ಫ್ರೀಸ್ಟೈಲ್ ರಿಲೇಯಲ್ಲಿ ಕಂಚು ಗೆಲ್ಲುವ ಮೂಲಕ ಸೆಕಾನ್ ಈ ವರ್ಷ ಕ್ರೀಡಾಕೂಟದಲ್ಲಿ 2 ಪದಕಗಳನ್ನು ಗೆದ್ದಿದ್ದರು. ಆದಾಗ್ಯೂ ಅವರಿಗೆ ಉಳಿದುಕೊಳ್ಳುವುದಕ್ಕೆ ಉತ್ತಮ ವ್ಯವಸ್ಥೆ ಸಿಗದೇ ಸಮಸ್ಯೆ ಎದುರಿಸಿದರು.

ಸೌದಿ ಅರೇಬಿಯಾದ ರೋವರ್ ಹುಸೇನ್ ಅಲಿರೆಜಾ ಹಂಚಿಕೊಂಡಿರುವ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ, ಸೆಕಾನ್ ಉದ್ಯಾನವನದಲ್ಲಿ ಮಲಗಿರುವುದು ಕಂಡುಬಂದಿದೆ. ಇಟಾಲಿಯನ್ ಈಜುಗಾರ ನೆಲದ ಮೇಲೆ ಟವೆಲ್ ಹಾಸಿ ಮಲಗಿದ್ದಾರೆ. ಪುರುಷರ 4×100 ಮೀಟರ್ ಮೆಡ್ಲೆ ರಿಲೇಯಲ್ಲಿ ಕಂಚಿನಪದಕ ಗೆಲ್ಲುವ ಮೊದಲಿನ ಚಿತ್ರವೇ ಎಂಬುದು ಖಾತರಿಯಾಗಿಲ್ಲ. ಒಂದು ವೇಳೆ ಚಿನ್ನದಿಂದ ಕಂಚಿಗೆ ಇಳಿದಿದ್ದರೆ ವ್ಯವಸ್ಥೆಯ ಬಗ್ಗೆ ಆಕ್ಷೇಪ ಉಂಟಾಗುವುದು ಖಾತರಿ.

ಕ್ರೀಡಾ ಗ್ರಾಮದೊಳಗಿನ ಜೀವನ ಪರಿಸ್ಥಿತಿಗಳ ಬಗ್ಗೆ ಸೆಕಾನ್ ದೂರು ನೀಡಿದ್ದರು. ಅಲ್ಲಿ ಹವಾನಿಯಂತ್ರಣವಿಲ್ಲ ಮತ್ತು ಆಹಾರವು ಕೆಟ್ಟದಾಗಿದೆ ಎಂದು ಹೇಳಿದ್ದರು. ಈ ಕಾರಣಕ್ಕಾಗಿ ಅನೇಕ ಕ್ರೀಡಾಪಟುಗಳು ಒಲಿಂಪಿಕ್ಸ್ ಗ್ರಾಮದಿಂದ ಹೊರಹೋಗಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಶಾಖ ಮತ್ತು ಶಬ್ದದಿಂದಾಗಿ ಮಧ್ಯಾಹ್ನ ಕಿರು ನಿದ್ದೆ ಮಾಡಲು ಹೆಣಗಾಡುತ್ತಿದ್ದೇನೆ ಎಂದು ಸೆಕಾನ್ ಹೇಳಿದರು.

“ಗ್ರಾಮದಲ್ಲಿ ಹವಾನಿಯಂತ್ರಣ ವ್ಯವಸ್ಥೆಯಿಲ್ಲ , ಆ ಪ್ರದೇಶವಿಡೀ ಬಿಸಿಯಾಗಿದೆ, ಆಹಾರವು ಕೆಟ್ಟದಾಗಿದೆ.” ಎಂದು ಸೆಕಾನ್ ದೂರಿದ್ದರು. ಅನೇಕ ಕ್ರೀಡಾಪಟುಗಳು ಈ ಕಾರಣಕ್ಕಾಗಿ ಹೊರಗೆ ಹೋಗಿದ್ದಾರೆ. ಇದು ಒಂದು ನೆಪವಲ್ಲ, ಇದು ಬಹುಶಃ ಎಲ್ಲರಿಗೂ ತಿಳಿದಿಲ್ಲದ ವಾಸ್ತವವಾಗಿದೆ.” ಎಂದು ಸೆಕಾನ್ ಹೇಳಿದ್ದಾರೆ.

ಇದನ್ನೂ ಓದಿ: Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ

“ನಾನು ಫೈನಲ್ ತಲುಪಲಿಲ್ಲ ಎಂದು ನನಗೆ ನಿರಾಶೆಯಾಗಿದೆ. ನಾನು ತುಂಬಾ ದಣಿದಿದ್ದೆ. ರಾತ್ರಿ ಮತ್ತು ಮಧ್ಯಾಹ್ನ ಮಲಗುವುದು ಕಷ್ಟ.” “ಸಾಮಾನ್ಯವಾಗಿ ನಾನು ಮನೆಯಲ್ಲಿದ್ದಾಗ, ನಾನು ಯಾವಾಗಲೂ ಮಧ್ಯಾಹ್ನ ಮಲಗುತ್ತೇನೆ. ಇಲ್ಲಿ ನಾನು ಶಾಖ ಮತ್ತು ಶಬ್ದ ಮಾಲಿನ್ಯದ ನಡುವೆ ನಿಜವಾಗಿಯೂ ಹೆಣಗಾಡುತ್ತೇನೆ” ಎಂದು ಸೆಕೂನ್ ಹೇಳಿದ್ದಾರೆ.

ಸೆಕಾನ್ ಹೊರತುಪಡಿಸಿ, ಕೊಕೊ ಗೌಫ್ ಕೂಡ ಒಲಿಂಪಿಕ್ ಗ್ರಾಮದೊಳಗಿನ ಪರಿಸ್ಥಿತಿಗಳ ಬಗ್ಗೆ ದೂರು ನೀಡಿದ್ದರು. ಗೌಫ್ ಹೊರತುಪಡಿಸಿ ಇಡೀ ಯುಎಸ್ ಟೆನಿಸ್ ತಂಡವು ಬೇರೆಡೆ ಪರ್ಯಾಯ ವಸತಿಗಾಗಿ ಗ್ರಾಮವನ್ನು ತೊರೆದಿತ್ತು. ಪ್ಯಾರಿಸ್ ಒಲಿಂಪಿಕ್ ಗೇಮ್ಸ್ ವಿಲೇಜ್ನಲ್ಲಿ ಸ್ಪರ್ಧಿಸುತ್ತಿರುವ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಸಚಿವಾಲಯವು 40 ಪೋರ್ಟಬಲ್ ಹವಾನಿಯಂತ್ರಣಗಳನ್ನು ಕಳುಹಿಸಿದೆ.

Continue Reading

ವಿದೇಶ

‘ಭೂತಯ್ಯ’ನ ಮನೆಯಂತಾದ ಶೇಖ್‌ ಹಸೀನಾ ನಿವಾಸ; ಬಿರಿಯಾನಿ ತಿಂದು, ವಸ್ತುಗಳನ್ನು ಕದ್ದ ಪ್ರತಿಭಟನಾಕಾರರು, Videoಗಳು ಇವೆ

Bangladesh Protest: ಪ್ರಧಾನಿ ರಾಜೀನಾಮೆ ಬಳಿಕ ಅವರ ಭವ್ಯವಾದ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಶೇಖ್‌ ಹಸೀನಾ ಮನೆಯಲ್ಲಿರುವ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಸಾಮೂಹಿಕವಾಗಿ ಈಜಾಡುವುದು, ಬೆಡ್‌ರೂಮ್‌ನಲ್ಲಿ ಮಲಗುವುದು, ಎಲ್ಲ ಐಷಾರಾಮಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು ಸೇರಿ ಹಲವು ಹುಚ್ಚಾಟ ಮಾಡಿದ್ದಾರೆ. ಈ ವಿಡಿಯೊಗಳು ಈಗ ಭಾರಿ ವೈರಲ್‌ ಆಗಿವೆ.

VISTARANEWS.COM


on

Bangladesh Protest
Koo

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರ ನಿವಾಸ ಈಗ ಕನ್ನಡದ ‘ಭೂತಯ್ಯನ ಮಗ ಅಯ್ಯು’ ಸಿನಿಮಾದ ಭೂತಯ್ಯನ ಮನೆಯಂತಾಗಿದೆ. ಹೌದು, ಶೇಖ್‌ ಹಸೀನಾ ರಾಜೀನಾಮೆ ನೀಡಿ, ಪಲಾಯನಗೈದ ಬಳಿಕ ಪ್ರತಿಭಟನಾಕಾರರು (Bangladesh Protest) ಅವರ ನಿವಾಸಕ್ಕೆ ನುಗ್ಗಿದ್ದಾರೆ. ಶೇಖ್‌ ಹಸೀನಾ ನಿವಾಸದಲ್ಲಿ ಪ್ರತಿಭಟನಾಕಾರರು ಬಿರಿಯಾನಿ ಸೇರಿ ಎಲ್ಲ ಆಹಾರವನ್ನು ಸೇವಿಸಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಕದ್ದಿದ್ದಾರೆ. ಶೇಖ್‌ ಹಸೀನಾ ಮನೆಯಲ್ಲಿ ಪ್ರತಿಭಟನಾಕಾರರ ಹುಚ್ಚಾಟದ ವಿಡಿಯೊಗಳು ಈಗ ವೈರಲ್‌ ಆಗಿವೆ.

ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಆರಂಭಿಸಿದ ಪ್ರತಿಭಟನಾಕಾರರು, ಪ್ರಧಾನಿ ರಾಜೀನಾಮೆ ಬಳಿಕ ಅವರ ಭವ್ಯವಾದ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಶೇಖ್‌ ಹಸೀನಾ ಮನೆಯಲ್ಲಿರುವ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಸಾಮೂಹಿಕವಾಗಿ ಈಜಾಡುವುದು, ಬೆಡ್‌ರೂಮ್‌ನಲ್ಲಿ ಮಲಗುವುದು, ಎಲ್ಲ ಐಷಾರಾಮಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು, ಭಕ್ಷ್ಯ ಭೋಜನ ಸವಿದು, ಕುಣಿದು ಕುಪ್ಪಳಿಸಿ ಮಜಾ ಉಡಾಯಿಸಿದ್ದಾರೆ. ಆ ಮೂಲಕ ಪ್ರಧಾನಿ ಮೇಲಿನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೊಗಳು ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ.

ಬೆಡ್‌ರೂಮ್‌ನಲ್ಲಿ ಮಜಾ

ಬಾಂಗ್ಲಾದೇಶದಲ್ಲಿ ಶೇಖ್‌ ಹಸೀನಾ ಫೋಟೊಗಳಿಗೆ ಮಸಿ ಬಳಿಯಲಾಗಿದೆ. ಶೇಖ್‌ ಹಸೀನಾ ಅವರ ತಂದೆಯ ಮೂರ್ತಿಗಳನ್ನು ಉದ್ರಿಕ್ತರು ಒಡೆದು ಹಾಕಿದ್ದಾರೆ. ಕೆಲ ಸರ್ಕಾರಿ ಕಚೇರಿಗಳನ್ನೂ ಧ್ವಂಸಗೊಳಿಸಿದ್ದಾರೆ. ಸುಮಾರು 4 ಲಕ್ಷ ಜನ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಭರ್ಜರಿ ಭೋಜನ ಸವಿದ ಪ್ರತಿಭಟನಾಕಾರರು

ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಕಾರಣ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Continue Reading

Latest

Viral Video: ಮಳೆಯಲಿ ಜೊತೆಯಲಿ… ಆನೆ-ಮಾವುತ ನಡುವಿನ ಮಾಂತ್ರಿಕ ಕ್ಷಣ! ಹೃದಯ ತಟ್ಟುವ ವಿಡಿಯೊ

Viral Video: ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ಆನೆ ಮತ್ತು ಅದರ ಮಾವುತನ ನಡುವಿನ “ಮಾಂತ್ರಿಕ ಕ್ಷಣಗಳನ್ನು” ಸೆರೆಹಿಡಿದಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ತಮಿಳುನಾಡಿನ ಅಣ್ಣಾಮಲೈ ಹುಲಿ ಮೀಸಲು ಪ್ರದೇಶವಾದ ಕೋಝಿಕಮುತಿ ಆನೆ ಶಿಬಿರದಲ್ಲಿ ಆನೆ ತನ್ನ ಮಾವುತನ ಜೊತೆ ನಡೆಯುತ್ತಾ ಆ ಸುಂದರ ಕ್ಷಣವನ್ನು ಆನಂದಿಸುವುದನ್ನು ವನ್ಯಜೀವಿ ಛಾಯಾಗ್ರಾಹಕ ಧನು ಪರನ್ ಅವರು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

VISTARANEWS.COM


on

Viral Video
Koo


ಬೆಂಗಳೂರು: ದೇಶದ ಹಲವೆಡೆ ಮಳೆ ಧಾರಕಾರವಾಗಿ ಸುರಿಯುತ್ತಿದೆ. ಬಿಸಿಲಿನ ಬೇಗೆಯಿಂದ ದಣಿದು ಬಾಡಿದ ಭೂಮಿ, ಪ್ರಕೃತಿ, ಮನುಷ್ಯರು, ಪ್ರಾಣಿಪಕ್ಷಿಗಳಿಗೂ ಇದು ಆನಂದ ನೀಡಿದೆ. ಭೂಮಿ ತಂಪಾಗಿ, ಪ್ರಕೃತಿ ಹಚ್ಚ ಹಸಿರಾಗಿ ಕಂಗೊಳಿಸುತ್ತಿದೆ. ಈ ಪ್ರಕೃತಿಯ ಸೌಂದರ್ಯವನ್ನು ಕಂಡು ಪ್ರಾಣಿಪಕ್ಷಿಗಳು ಆನಂದಿಸುತ್ತಿವೆ. ಇದೀಗ ಈ ಹಚ್ಚ ಹಸಿರಾದ ಪ್ರಕೃತಿಯ ಸೌಂದರ್ಯವನ್ನು ವೀಕ್ಷಿಸುತ್ತಾ ಆನೆಯೊಂದು ತನ್ನ ಮಾವುತನ ಜೊತೆಗೆ ಸಾಗುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ. ಈ ವಿಡಿಯೊಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ಆನೆ ಮತ್ತು ಅದರ ಮಾವುತನ ನಡುವಿನ “ಮಾಂತ್ರಿಕ ಕ್ಷಣಗಳನ್ನು” ಸೆರೆಹಿಡಿದಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ತಮಿಳುನಾಡಿನ ಅಣ್ಣಾಮಲೈ ಹುಲಿ ಮೀಸಲು ಪ್ರದೇಶವಾದ ಕೋಝಿಕಮುತಿ ಆನೆ ಶಿಬಿರದಲ್ಲಿ ಆನೆ ತನ್ನ ಮಾವುತನ ಜೊತೆ ನಡೆಯುತ್ತಾ ಆ ಸುಂದರ ಕ್ಷಣವನ್ನು ಆನಂದಿಸುವುದನ್ನು ವನ್ಯಜೀವಿ ಛಾಯಾಗ್ರಾಹಕ ಧನು ಪರನ್ ಅವರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. 27 ಸೆಕೆಂಡುಗಳ ಈ ವಿಡಿಯೊ ಅನೇಕ ಜನರ ಮನಗೆದ್ದಿದೆ.

ಈ ವಿಡಿಯೊದಲ್ಲಿ ಮಳೆಗಾಲದ ಮಧ್ಯಾಹ್ನದ ವೇಳೆ ಮಾವುತನು ತನ್ನ ಒಂದು ಕೈಯಲ್ಲಿ ಛತ್ರಿಯನ್ನು ಹಿಡಿದು ಇನ್ನೊಂದು ಕೈಯಿಂದ ಆನೆಯ ಕಿವಿ, ದೇಹವನ್ನು ಮೃದುವಾಗಿ ಸವರುತ್ತಾ ನಡೆದು ಬರುತ್ತಿದ್ದಾನೆ. ಈ ವಿಡಿಯೊದಲ್ಲಿ ಆನೆ ಮತ್ತು ಮಾವುತನ ನಡುವಿನ ಬಾಂಧ್ಯವ್ಯ ಸ್ಪಷ್ಟವಾಗಿ ಕಾಣಿಸುತ್ತದೆ. ಮತ್ತು ಅವರ ನಡುವಿನ ಪ್ರೀತಿ ಮತ್ತು ಪರಸ್ಪರ ಗೌರವ ಎದ್ದು ಕಾಣುತ್ತದೆ.

“ತಮಿಳುನಾಡಿನ ಅಣ್ಣಾಮಲೈ ಹುಲಿ ಮೀಸಲು ಪ್ರದೇಶದ ಕೋಝಿಕಮುತಿ ಆನೆ ಶಿಬಿರದಲ್ಲಿ ಮಾನ್ಸೂನ್ ಮಳೆಯಲ್ಲಿ ಮಾವುತ ಮತ್ತು ಅವನ ಆನೆಯ ನಡುವಿನ ಮಾಂತ್ರಿಕ ಕ್ಷಣಗಳು” ಎಂದು ಸಾಹು ತನ್ನ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಇದಕ್ಕೆ ಹಲವರು ಕಾಮೆಂಟ್‍ಗಳ ಮೂಲಕ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇಂತಹ ಪ್ರಶಾಂತವಾದ ಈ ದೈವಿಕ ಕ್ಷಣವನ್ನು ಹಂಚಿಕೊಂಡಿದ್ದಕ್ಕಾಗಿ ಅನೇಕರು ಸುಪ್ರಿಯಾ ಸಾಹು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ:ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

ಬಳಕೆದಾರರು, “ಮಾವುತ ಮತ್ತು ಆನೆಯ ನಡುವಿನ ಬಂಧವು ನಂಬಲಾಗದ ಸಂಗತಿಯಾಗಿದೆ. ಇದನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು.” ಎಂದು ತಿಳಿಸಿದ್ದಾರೆ. “ಇದು ತುಂಬಾ ಸುಂದರವಾಗಿದೆ.” ಎಂದು ಇನ್ನೊಬ್ಬರು ಬರೆದಿದ್ದಾರೆ. ಮತ್ತೊಬ್ಬರು “ಈ ವಿಡಿಯೊ ನೋಡಿ ನನ್ನ ಈ ದಿನ ಬಹಳ ಸುಂದರವೆನಿಸಿತು” ಎಂದು ಹೇಳಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಕಾಲೇಜು ಕ್ಯಾಂಪಸ್‌ನಲ್ಲೇ ಲಿಪ್‌ ಕಿಸ್‌; ಯುವ ಜೋಡಿಯ ಖುಲ್ಲಂ ಖುಲ್ಲಾ ರೊಮ್ಯಾನ್ಸ್‌ಗೆ ನೆಟ್ಟಿಗರು ಗರಂ

Viral Video: ಯುವಕ ಮತ್ತು ಯುವತಿ ಕಾಲೇಜು ಕ್ಯಾಂಪಸ್‌ನಲ್ಲಿ ಮೈ ಮರೆತು ಲಿಪ್‌ ಕಿಸ್‌ ಮಾಡುವುದರಲ್ಲಿ ಮಗ್ನವಾಗಿರುವ ವಿಡಿಯೊ ವೈರಲ್‌ ಆಗಿದೆ. ಜತೆಗೆ ಯುವಕ ಆಕೆಯ ಬಟ್ಟೆಯನ್ನು ಮೇಲೆ ಸರಿಸಿ ಎಲ್ಲೆಲ್ಲೋ ಸ್ಪರ್ಶಿಸುತ್ತಿರುವುದು ಕಂಡು ಬಂದಿದೆ. ಒಂದು ಹಂತದಲ್ಲಿ ಯುವತಿಯೇ ಮುಂದೆ ಹೋಗಿ ಯುವಕನ ತುಟಿಯನ್ನು ಚುಂಚಿಸುತ್ತಾ ಮೈಮರೆಯುತ್ತಾಳೆ. ಈ ದೃಶ್ಯವನ್ನು ಮರೆಯಲ್ಲಿ ನಿಂತು ನೋಡುತ್ತಿದ್ದ ಕೆಲವು ವಿದ್ಯಾರ್ಥಿಗಳು ಸೆರೆ ಹಿಡಿದ್ದಾರೆ. ಸದ್ಯ ವಿಡಿಯೊ ನೋಡಿದ ನೆಟ್ಟಿಗರು ವಿದ್ಯಾರ್ಥಿಗಳ ಉದ್ಧಟತನಕ್ಕೆ ಕಿಡಿ ಕಾರಿದ್ದಾರೆ.

VISTARANEWS.COM


on

Koo

ಲಕ್ನೋ: ಕೋಟ್ಯಂತರ ವಿದ್ಯಾರ್ಥಿಗಳ ಜೀವನವನ್ನು ಬೆಳಗುವ, ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆಗಳನ್ನು ದೇಗುಲಕ್ಕೆ ಹೋಲಿಸಲಾಗುತ್ತದೆ. ಇದೇ ಕಾರಣಕ್ಕೆ ಶಾಲೆ, ಕಾಲೇಜುಗಳನ್ನು ಈಗಲೂ ಅನೇಕರು ಗೌರವಿಸುತ್ತಾರೆ. ಆದರೆ ಕೆಲವರು ತಾವು ಶಿಕ್ಷಣ ಪಡೆಯಲು ಬಂದಿದ್ದೇವೆ ಎನ್ನುವುದನ್ನೂ ಮರೆತು ಕಾಲೇಜಿನಲ್ಲೇ ರೊಮ್ಯಾನ್ಸ್‌ ಮಾಡಲು ಮುಂದಾಗುತ್ತಾರೆ. ಸದ್ಯ ಅಂತಹದ್ದೊಂದು ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ. ಯುವ ಜೋಡಿಯ ವರ್ತನೆಗೆ ನೆಟ್ಟಿಗರು ಕಿಡಿ ಕಾರಿದ್ದಾರೆ (Viral Video).

ಯುವಕ ಮತ್ತು ಯುವತಿ ಕಾಲೇಜು ಕ್ಯಾಂಪಸ್‌ನಲ್ಲಿ ಮೈ ಮರೆತು ಲಿಪ್‌ ಕಿಸ್‌ ಮಾಡುವುದರಲ್ಲಿ ಮಗ್ನವಾಗಿದೆ. ಜತೆಗೆ ಯುವಕ ಆಕೆಯ ಬಟ್ಟೆಯನ್ನು ಮೇಲೆ ಸರಿಸಿ ಎಲ್ಲೆಲ್ಲೋ ಸ್ಪರ್ಶಿಸುತ್ತಿರುವುದು ಕಂಡು ಬಂದಿದೆ. ಒಂದು ಹಂತದಲ್ಲಿ ಯುವತಿಯೇ ಮುಂದೆ ಹೋಗಿ ಯುವಕನ ತುಟಿಯನ್ನು ಚುಂಚಿಸುತ್ತಾ ಮೈಮರೆಯುತ್ತಾಳೆ. ಈ ದೃಶ್ಯವನ್ನು ಮರೆಯಲ್ಲಿ ನಿಂತು ನೋಡುತ್ತಿದ್ದ ಕೆಲವು ವಿದ್ಯಾರ್ಥಿಗಳು ಸೆರೆ ಹಿಡಿದ್ದಾರೆ.

ಹಾಡಹಗಲೇ ಈ ಜೋಡಿ ರೊಮ್ಯಾನ್ಸ್‌ ಮಾಡುತ್ತ ಮೈಮರೆತಿರುವ ಘಟನೆ ನಡೆದಿದ್ದು ಉತ್ತರ ಪ್ರದೇಶದ ನೋಯ್ಡಾದ ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿ. ಕಳೆದ ವರ್ಷ ನಡೆದಿದೆ ಎನ್ನಲಾದ ಈ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಜನಬ್‌ ಖಾನ್‌ ಎನ್ನುವವರು ಈ ವಿಡಿಯೊವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು ಈಗಾಗಲೇ 1.5 ಲಕ್ಕಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ʼʼವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ವರ್ತನೆ ಗಮನಿಸಿ. ವಿದ್ಯಾರ್ಥಿಗಳು ಕಲಿಕೆಯ ಬದಲು ಅಶ್ಲೀಲತೆಯಲ್ಲಿ ತೊಡಗಿಸಿಕೊಂಡಿರುವುದನ್ನು ನೋಡಿ. ಇದು ನೋಯ್ಡಾದ ಪ್ರತಿಷ್ಠಿತ ವಿಶ್ವವಿದ್ಯಾನಿಯಲವೊಂದರಲ್ಲಿ ಕಂಡು ಬಂದ ದೃಶ್ಯʼʼ ಎಂದು ಅವರು ಬರೆದುಕೊಂಡಿದ್ದಾರೆ.

1.33 ನಿಮಿಷಗಳ ಈ ವಿಡಿಯೊ ನೋಡಿ ಹಲವರು ಈ ವಿದ್ಯಾರ್ಥಿಗಳ ವರ್ತನೆಗೆ ಅಸಹ್ಯ ಪಟ್ಟುಕೊಂಡಿದ್ದಾರೆ. ಕೆಲವರಂತೂ ಛೀಮಾರಿ ಹಾಕಿದ್ದಾರೆ. ಬಹುತೇಕರು ಕಿಡಿ ಕಾರಿದ್ದಾರೆ. ತಮ್ಮಂತೆ ಮಕ್ಕಳು ಕಷ್ಟಪಡಬಾರದು ಎನ್ನುವ ಉದ್ದೇಶದಿಂದ ಬಹುತೇಕ ಪಾಲಕರು ತಮ್ಮ ಹೊಟ್ಟೆ ಬಟ್ಟೆ ಕಟ್ಟಿ ಅವರಿಗೆ ಉನ್ನತ ಶಿಕ್ಷಣ ನೀಡಲು ಮುಂದಾಗುತ್ತಾರೆ. ಕಾಲೇಜಿಗೆ ಕಳುಹಿಸುತ್ತಾರೆ. ಆದರೆ ಮಕ್ಕಳು ಕಾಲೇಜಿಗೆ ಬಂದು ಹೀಗೆ ವರ್ತಿಸುತ್ತಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ವಿದ್ಯಾರ್ಥಿಗಳಿಗೆ ಕಠಿಣ ಸಜೆ ನೀಡಬೇಕು ಎಂದು ಇನ್ನು ಕೆಲವರು ಆಗ್ರಹಿಸಿದ್ದಾರೆ. ಅಷ್ಟು ತೀಟೆ ಇದ್ದರೆ ಲಾಡ್ಜ್‌ಗೆ ಹೋಗಲಿ ಎಂದು ಒಂದಷ್ಟು ಮಂದಿ ಬೈದಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ಇಂಟರ್‌ನೆಟ್‌ನಲ್ಲಿ ಮತ್ತೊಮ್ಮೆ ಕಿಚ್ಚು ಹಚ್ಚಿದೆ.

ಇದನ್ನೂ ಓದಿ: Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

Continue Reading
Advertisement
Woman Harassed
ಕರ್ನಾಟಕ20 mins ago

Woman Harassed: ರಸ್ತೆಯಲ್ಲಿ ಮಹಿಳೆಯನ್ನು ಹಗ್ ಮಾಡಿ ಕಿಸ್ ಕೊಟ್ಟಿದ್ದ ಕಾಮುಕ ಅರೆಸ್ಟ್

Sexual Abuse
Latest20 mins ago

Sexual Abuse: ತನ್ನ ಸ್ನೇಹಿತನ ಜತೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಒತ್ತಡ; ಇವನೆಂಥ ಗಂಡ!

Choosing the Right Pillow
ಲೈಫ್‌ಸ್ಟೈಲ್20 mins ago

Choosing The Right Pillow: ಸರಿಯಾದ ದಿಂಬನ್ನು ಆಯ್ಕೆ ಮಾಡುವುದು ಹೇಗೆ?

Karnataka weather Forecast
ಕರ್ನಾಟಕ25 mins ago

Karnataka Weather : ಬೆಂಗಳೂರಲ್ಲಿ ಸಂಜೆಗೆ ದಿಢೀರ್‌ ಗುಡುಗು ಸಹಿತ ಮಳೆ; ನೇತ್ರಾವತಿ, ಪಲ್ಗುಣಿ ನದಿ ತೀರ ಪ್ರದೇಶದಲ್ಲಿ ನೆರೆ

Shravana shopping 2024
ಫ್ಯಾಷನ್35 mins ago

Shravana Shopping 2024: ಮಾರುಕಟ್ಟೆಯಲ್ಲೀಗ ಶ್ರಾವಣದ ಟ್ರೆಂಡ್‌; ಶುರುವಾಗಿದೆ ಶಾಪಿಂಗ್‌ ಭರಾಟೆ

Sheikh Hasina
ದೇಶ43 mins ago

Sheikh Hasina: ಬಾಂಗ್ಲಾದಿಂದ ದೆಹಲಿಗೆ ಬಂದಿಳಿದ ಶೇಖ್‌ ಹಸೀನಾ; ಶೀಘ್ರದಲ್ಲೇ ಲಂಡನ್‌ಗೆ ಹಾರಾಟ?

Paris Olympics 2024
ಕ್ರೀಡೆ51 mins ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಅವ್ಯವಸ್ಥೆ; ಬೀದಿ ಬದಿ ಮಲಗಿ ನಿದ್ದೆ ಮಾಡಿದ ಚಿನ್ನದ ಪದಕ ವಿಜೇತ ಈಜುಪಟು

Bangladesh Protest
ವಿದೇಶ54 mins ago

‘ಭೂತಯ್ಯ’ನ ಮನೆಯಂತಾದ ಶೇಖ್‌ ಹಸೀನಾ ನಿವಾಸ; ಬಿರಿಯಾನಿ ತಿಂದು, ವಸ್ತುಗಳನ್ನು ಕದ್ದ ಪ್ರತಿಭಟನಾಕಾರರು, Videoಗಳು ಇವೆ

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ

Congress Protest
ಕರ್ನಾಟಕ2 hours ago

Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌