Actor Darshan: ದರ್ಶನ್‌ ಬಿಡುಗಡೆಗಾಗಿ ವಿಜಯಲಕ್ಷ್ಮಿ ಹಾಗೂ ಅಳಿಯ ಟೆಂಪಲ್ ರನ್‌ - Vistara News

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಬಿಡುಗಡೆಗಾಗಿ ವಿಜಯಲಕ್ಷ್ಮಿ ಹಾಗೂ ಅಳಿಯ ಟೆಂಪಲ್ ರನ್‌

Actor Darshan: ನಿನ್ನೆ ಅಮವಾಸ್ಯೆ ಪ್ರಯುಕ್ತ ಬನಶಂಕರಿ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಪತಿಯನ್ನ ಆಚೆ ತರಲು ವಿಜಯಲಕ್ಷ್ಮಿ ಶಕ್ತಿ ದೇವತೆಗಳ‌ ಮೋರೆ ಹೋಗಿದ್ದಾರೆ. ಅತ್ತ
ಮಾವನಿಗಾಗಿ ಅಳಿಯ ಕೂಡ ಆರತಿ ಉಕ್ಕಡದಲ್ಲಿ ದರ್ಶನ್ ಅಳಿಯ ಚಂದನ್ ನಿಂದ ವಿಶೇಷ ಪೂಜೆ ನೆರವೇರಿದೆ.

VISTARANEWS.COM


on

Actor Darshan wife Vijayalakshmi darshan temple run
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿ ಮಾಡಲು ಪೊಲೀಸರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಈ ಮಧ್ಯೆ ಚಾರ್ಜ್ ಶೀಟ್ ಸಲ್ಲಿಕೆಗೆ ಪ್ರಮುಖ ಸಾಕ್ಷಿದಾರ ಪೊಲೀಸರಿಗೆ ಸಿಕ್ಕಂತಾಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿದ ಬಳಿಕ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿರುವ ಪೊಲೀಸರು ಈ ವರೆಗೆ ಸುಮಾರು 200 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರಂತೆ. ಇದರ ಬೆನ್ನಲ್ಲೇ ಗಂಡನ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ದೇವಸ್ಥಾನ ಸುತ್ತುತ್ತಿದ್ದಾರೆ.

ನಿನ್ನೆ ಅಮವಾಸ್ಯೆ ಪ್ರಯುಕ್ತ ಬನಶಂಕರಿ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಪತಿಯನ್ನ ಆಚೆ ತರಲು ವಿಜಯಲಕ್ಷ್ಮಿ ಶಕ್ತಿ ದೇವತೆಗಳ‌ ಮೋರೆ ಹೋಗಿದ್ದಾರೆ. ಅತ್ತ
ಮಾವನಿಗಾಗಿ ಅಳಿಯ ಕೂಡ ಆರತಿ ಉಕ್ಕಡದಲ್ಲಿ ದರ್ಶನ್ ಅಳಿಯ ಚಂದನ್ ನಿಂದ ವಿಶೇಷ ಪೂಜೆ ನೆರವೇರಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ ಆರತಿ ಉಕ್ಕಡ ದೇಗುಲವಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಂತ್ರಜ್ಞಾನದ ಬಳಕೆಯನ್ನು ಪೊಲೀಸರು ಮಾಡುತ್ತಿದ್ದು ಸಾಕ್ಷ್ಯವನ್ನು ಇನ್ನಷ್ಟು ಪ್ರಬಲಗೊಳಿಸುತ್ತಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರುವ ಶೆಡ್, ದರ್ಶನ್ ಮನೆ, ಸ್ಟೂನಿ ಬ್ರೂಕ್ ರೆಸ್ಟೊರೆಂಟ್, ಶೆಡ್​ಗೆ ಹೋಗುವ ರಸ್ತೆ ಇನ್ನೂ ಹಲವು ಕಡೆಗಳಿಂದ ಸಿಸಿಟಿವಿ ದೃಶ್ಯಗಳನ್ನು ಕಲೆ ಹಾಕಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿ ಚಿತ್ರೀಕರಣ ಮಾಡಲಾಗಿರುವ ಮೊಬೈಲ್ ವಿಡಿಯೋಗಳನ್ನು ಸಹ ಕಲೆ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಕ್ಷಿಗಳನ್ನು ಇನ್ನಷ್ಟು ಬಲಗೊಳಿಸಲು ವಿಷ್ಯುಯಲ್ ಕಂಪಾರಿಷನ್ ತಂತ್ರಜ್ಞಾನವನ್ನು ಪೊಲೀಸರು ಬಳಸಿದ್ದಾರೆ ಎನ್ನಲಾಗಿದೆ. ವಿಷ್ಯುಲ್ ಕಂಪಾರಿಷನ್​ನಿಂದ ಬೇರೆ ಬೇರೆ ವಿಡಿಯೋಗಳಲ್ಲಿರುವ ವ್ಯಕ್ತಿಗಳು ಒಬ್ಬರೇ ಹೌದೇ ಅಲ್ಲವೆ ಎಂಬುದು ತಿಳಿಯುತ್ತದೆ. ಹಾಗೂ ವಿಡಿಯೋ ನಕಲಿಯೇ, ಅಸಲಿಯೇ, ಗ್ರಾಫಿಕ್ಸ್ ಮಾಡಲಾಗಿದೆಯೇ ಇನ್ನಿತರೆ ವಿಷಯಗಳು ಸಹ ತಿಳಿದು ಬರಲಿದೆ ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್‌ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್‌ರನ್ನು ಟ್ರೋಲ್‌ ಮಾಡಿದ ಫ್ಯಾನ್ಸ್‌!

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆಯಲ್ಲಿ‌ ಪ್ರಮುಖವಾಗಿ ಬಳಸಿರೋ‌ ಸಾಧನ ಮೆಗ್ಗರ್ ಬಗ್ಗೆ ಮಹತ್ವದ ಮಾಹಿತಿ ತಿಳಿಸದುಬಂದಿದೆ. ಕರೆಂಟ್ ಶಾಕ್ ನೀಡಲೆಂದೇ ಮೆಗ್ಗರ್ ಅನ್ನು ಖರೀದಿ‌ ಮಾಡಿರೋದು ತನಿಖೆ ವೇಳೆ ಬೆಳಕಿಗೆ. ಪ್ರಕರಣದ ಆರೋಪಿ ಧನರಾಜ್‌ ಅಮೆಜಾನ್‌ನಲ್ಲಿ ಮೆಗ್ಗರ್ ಡಿವೈಸ್ ಬುಕ್ ಮಾಡಿದ್ದು, ಅದರ ಬೆಲೆ 699 ರೂಪಾಯಿಗಳಾಗಿದೆ. ಇನ್ನು ಬುಕ್ ಮಾಡಿದ ಮೆಗ್ಗರ್ ಅನ್ನು ಸ್ವೀಕರಿಸುವ ವೇಳೆ ಸ್ಕ್ಯಾನರ್ ಮೂಲಕ ಹಣ ಪೇ ಮಾಡಲು ಧನರಾಜ್ ಯತ್ನಿಸಿದ್ದ. ಆದರೆ ಅಮೆಜಾನ್ ಪೇ ಕೋಡ್‌ ಸ್ಕ್ಯಾನ್ ಮಾಡಿದ ವೇಳೆ ಹಣ ಸೆಂಡ್ ಆಗದ ಕಾರಣ ಆನ್ ಲೈನ್ ಮೂಲಕ ಹಣವನ್ನು ಕಳುಹಿಸಿದ್ದ ಧನರಾಜ್. ಆ ಹಣವನ್ನು ಡೆಲಿವರಿ ಬಾಯ್ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದು ಕಂಪನಿಗೆ ನೀಡಿದ್ದ. ಸದ್ಯ ಆ ಮಾಹಿತಿ ಕಲೆ ಹಾಕಿರೋ ಪೊಲೀಸರು ಮೆಗ್ಗರ್ ಡಿವೈಸ್ ಧನರಾಜ್‌ಗೆ ತಂದುಕೊಟ್ಟ ಡೆಲಿವರಿ ಬಾಯ್‌ನ ವಿಚಾರಣೆ ಮಾಡಿ ಆತನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Duniya Vijay- Ganesh: ಹೊಸ ರೀತಿಯ ಸಿನಿಮಾ ನಿರೀಕ್ಷೆಯಲ್ಲಿದ್ದ ಜನಕ್ಕೆ ಈ ಎರಡೂ ಸಿನಿಮಾ ಬೇರೆ ರೀತಿಯ ಕಥೆ ಹೇಳಿದ್ದವು. ಎರಡೂ ಸಿನಿಮಾಗಳು ಜನರಿಗೆ ಎರಡು ರೀತಿಯಲ್ಲಿಯೇ ಇಷ್ಟ ಆಗಿದ್ದವು. ಎರಡೂ ಸಿನಿಮಾಗಳು ಬಂದು ಹೆಚ್ಚು ಕಡಿಮೆ 17 ರಿಂದ 18 ವರ್ಷಗಳೇ ಕಳೆದಿವೆ. ಇದೀಗ ಮತ್ತೆ ಈ ಇಬ್ಬರೂ ನಾಯಕರ ಬೇರೆ ಬೇರೆ ಸಿನಿಮಾಗಳು ತೆರೆಗೆ ಬರುತ್ತಿವೆ. ಇಬ್ಬರ ಮಾತುಕತೆ ನಡೆದಿದ್ದು ಹೀಗೆ.

VISTARANEWS.COM


on

Duniya Vijay- Ganesh To Combined together make Movie in future
Koo

ಬೆಂಗಳೂರು: ದುನಿಯಾ ವಿಜಯ್ ಹಾಗೂ ಗಣೇಶ್ (Duniya Vijay- Ganesh) ಒಂದು ಗ್ರೌಂಡ್​ನಲ್ಲಿ ಭೇಟಿ ಆಗಿದ್ದಾರೆ. ಈ ಭೇಟಿ ವೇಳೆ ಹಳೆಯ ದಿನಗಳ ಬಗ್ಗೆ ಇವರು ಮಾತನಾಡಿಕೊಂಡಿದ್ದಾರೆ. ದುನಿಯಾ ವಿಜಯ್ ನಟನೆಯ ‘ಭೀಮ’ (ಆಗಸ್ಟ್ 9) ಹಾಗೂ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ (ಆಗಸ್ಟ್ 15) ಒಂದು ವಾರ ಗ್ಯಾಪ್​ನಲ್ಲಿ ರಿಲೀಸ್ ಆಗುತ್ತಿದೆ. ʻಮುಂಗಾರು ಮಳೆʼ ಮತ್ತು ʻದುನಿಯಾʼ ಗೆದ್ದಾಗ ಇಂಡಸ್ಟ್ರಿ ಚೇತರಿಸಿಕೊಂಡಿತ್ತು. ಹೊಸ ರೀತಿಯ ಸಿನಿಮಾ ನಿರೀಕ್ಷೆಯಲ್ಲಿದ್ದ ಜನಕ್ಕೆ ಈ ಎರಡೂ ಸಿನಿಮಾ ಬೇರೆ ರೀತಿಯ ಕಥೆ ಹೇಳಿದ್ದವು. ಎರಡೂ ಸಿನಿಮಾಗಳು ಜನರಿಗೆ ಎರಡು ರೀತಿಯಲ್ಲಿಯೇ ಇಷ್ಟ ಆಗಿದ್ದವು. ಎರಡೂ ಸಿನಿಮಾಗಳು ಬಂದು ಹೆಚ್ಚು ಕಡಿಮೆ 17 ರಿಂದ 18 ವರ್ಷಗಳೇ ಕಳೆದಿವೆ. ಇದೀಗ ಮತ್ತೆ ಈ ಇಬ್ಬರೂ ನಾಯಕರ ಬೇರೆ ಬೇರೆ ಸಿನಿಮಾಗಳು ತೆರೆಗೆ ಬರುತ್ತಿವೆ. ಇಬ್ಬರ ಮಾತುಕತೆ ನಡೆದಿದ್ದು ಹೀಗೆ.

ಗಣೇಶ್‌ ಅವರು ಮಾತನಾಡಿ ʻʻಭೀಮ ಟ್ರೈಲರ್‌ ನೋಡಿ ಬಹಳ ಖುಷಿ ಆಯ್ತು. ಭೀಮನ ಪಾತ್ರ ನೋಡಿ ನನಗೆ ರಿಯಲ್‌ ದುನಿಯಾ ವಿಜಯ್‌ ಎಂದು ಅನಿಸಿತು. ನಾನು ದುನಿಯಾ ವಿಜಯ್‌ ಕೂದಲಿಗೆ ದೊಡ್ಡ ಫ್ಯಾನ್‌. ಶಾರುಖ್‌ ತರ ಕಾಣುತ್ತಿದ್ದʼʼ ಎಂದು ಗಣೇಶ್‌ ಗುಣಗಾನ ಮಾಡಿದ್ದಾರೆ. ಅದರ ಜತೆಗೆ ದುನಿಯಾ ವಿಜಯ್‌ ಕೂಡ ʻʻಗಣೇಶ್‌ ಅವರನ್ನು ಹೊಗಳಿದ್ದಾರೆ. ʻʻನೀನು ಪಟ್ಟಿರುವ ಕಷ್ಟ ಎಲ್ಲವನ್ನು ನೋಡಿದ್ದೇನೆ. ನಿನ್ನ ಸಿನಿಮಾ ಕೂಡ ಹಿಟ್‌ ಆಗಲಿ. ದೇವರು ಈಗಾಗಲೇ ಒಳ್ಳೆಯ ಹಂತದಲ್ಲಿ ಇಟ್ಟಿದ್ದಾನೆ. ನಮ್ಮಿಬ್ಬರನ್ನು ದೇವರು ಹಾಗೂ ಅಭಿಮಾನಿಗಳು ಒಳ್ಳೆಯ ರೀತಿ ನಡೆಸುಕೊಂಡು ಹೋಗುತ್ತಿದ್ದಾರೆ. ಮತ್ತೆ ನಮ್ಮನ್ನ ತೆರೆ ಮೆಲೆ ನೋಡುವ ಸಮಯ ಬಂದಿದೆ, ನಾನು ಬಂದು ನಿನ್ನ ಸಿನಿಮಾ ನೀಡುತ್ತೇನೆ. ನೀನು ಬಂದು ನನ್ನ ಸಿನಿಮಾ ನೋಡುʼʼ ಎಂದಿದ್ದಾರೆ. ಇದಕ್ಕೆ ಗಣೇಶ್‌ ಕೂಡ ʻʻಖಂಡಿತವಾಗಿ ನೋಡುವೆʼʼಎಂದಿದ್ದಾರೆ,

ಇದನ್ನೂ ಓದಿ: Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌!

ಮುಂಗಾರು ಮಳೆ ಹಾಗೂ ದುನಿಯಾ ಬಂದು 18 ವರ್ಷಗಳೇ ಆದವು. ಈ ಬಗ್ಗೆ ಗಣೇಶ್‌ ಮಾತನಾಡಿ ʻʻ ಇಬ್ಬರದ್ದು ಎರಡು ಸಿನಿಮಾಗಳು ಹಿಟ್‌ ಆಗುವಾಗ ಇಬ್ಬರಿಗೂ ಅ ಟೇಸ್ಟ್‌ ಗೊತ್ತೇ ಆಗಿಲ್ಲ. ವಿಜಯ್‌ ಅವರ ಸಲಗ ಮಾಡುವಾಗ ನನಗೆ ಖುಷಿ ಆಯ್ತು. ವಿಜಯ್‌ ಬೇರೆನೆ ಲೈಫ್‌ ತೋರಿಸ್ತಾ ಇದ್ದಾರೆ ಅನ್ನಿಸುತ್ತೆ. ನಾವು ಯಾವುದೇ ರೀತಿಯ ಕ್ಲಾಶ್‌ ಮಾಡಿಕೊಂಡಿಲ್ಲ. ಬೈಕೊಂಡಿಲ್ಲ. ಹಳೆದನ್ನು ನೆನೆಸಿಕೊಂಡು ಕಾಲು ನಾವು ಎಳೆದುಕೊಳ್ಳುತ್ತಿದ್ವಿ. ನಮ್ಮ ವಿಜಯ್‌ ನಟ ನಿರ್ದೇಶಕ ಆಗಿದ್ದಾನೆ, ಅವನು ತುಂಬ ಕಷ್ಟ ಪಟ್ಟು ಬಂದಿದ್ದಾನೆ. ಬೆಳಗ್ಗೆ ಪಾರ್ಕ್‌ನಲ್ಲಿ 5 ಗಂಟೆ ಎದ್ದು ಒಬ್ಬನೇ ಓಡಾಡುವನು. ಎರಡು ದಿನಕ್ಕೆ 20 ದಿನ ತಯಾರಿ ಮಾಡುತ್ತಿದ್ದʼʼಎಂದು ಹೇಳಿದರು.

ವಿಜಯ್‌ ಕೂಡ ಮಾತನಾಡಿ ʻ ಗಣೇಶ್‌ ಎಲ್ಲೂ ಬದಲಾಗಲೇ ಇಲ್ಲ. ನನ್ನ ಮಗಳಿಗೆ ಹೇಳಿದ್ದೆ ನಿನ್ನ ಬಗ್ಗೆ. ನಾನು ಯಾವಗಲೂ ಹೇಳೋದು ನೀವು ನೋಡದೇ ಇರುವ ಗಣೇಶ್‌ ನಾನು ನೋಡಿದ್ದೆ, ನಾವು ಇರೊವಷ್ಟು ಖುಷಿ ಪಡುತ್ತಿದ್ದೆವು. ಏನು ಆಗುತ್ತೋ ಎಂದು ಹೇಳಿಯೇ ಇಲ್ಲಿ ತನಕ ಬಂದೆವು. ಇಗ ದ್ವಾಪರ ಸಾಂಗ್‌ ನೋಡಿ ಖುಷಿ ಆಯ್ತು. ನಂಗು ಅದೇ ತರ ಮಾಡಬೇಕು ಎಂದು ಅರ್ಜುನ್‌ಗೆ ಹೇಳಿದೆ. ನಾನು ಗಣೇಶ್‌ ಡ್ಯಾನ್ಸ್‌ ನೋಡಿ ಖುಷಿ ಆಯ್ತು. ನನಗೆ ಡ್ಯಾನ್ಸ್‌ ಬರಲ್ಲ. ನಾವಿಬ್ಬರೂ ಯಾಕೆ ಚೆನ್ನಾಗಿದ್ದೇವೆ ಎಂದರೆ ನಾವು ತುಂಬ ಪಾತಾಳ ನೋಡಿದ್ದೇವೆ. ನನ್ನ ಡೈರಕ್ಷನ್ನಲ್ಲಿ ನಾವಿಬ್ಬರೂ ಕಾಂಬಿನೇಶನ್‌ ಸಿನಿಮಾ ಮಾಡಬೇಕುʼʼ ಎಂದರು. ಅದಕ್ಕೆ ಗಣೇಶ್‌ ಕೂಡ ಮಾಡುತ್ತೇನೆ ಎಂದು ಭಾಷೆ ಕೂಡ ಕೊಟ್ಟರು. ʻʻನೀನು ಯಾವಾಗ ಕರೆಯುತ್ತೇವೋ ಆಗ ಬರ್ತೀನಿʼʼ ಎಂದು ಗಣೇಶ್‌ ಹೇಳಿದರು.

ಆ ಬಳಿಕ ಇಬ್ಬರೂ ಒಬ್ಬರ ಸಿನಿಮಾಗೆ ಒಬ್ಬರು ವಿಶ್ ಮಾಡಿದ್ದಾರೆ. ‘ಭೀಮ’ ಚಿತ್ರವನ್ನು ಥಿಯೇಟರ್​ನಲ್ಲಿ ಗಣೇಶ್ ನೋಡಿ ಹಾರೈಸಲಿದ್ದಾರಂತೆ. ಅದೇ ರೀತಿ ‘ಕೃಷ್ಣ ಪ್ರಣಯ ಸಖಿ’ ಚಿತ್ರವನ್ನು ದುನಿಯಾ ವಿಜಯ್ ವೀಕ್ಷಿಸಲಿದ್ದಾರೆ.

Continue Reading

ಸಿನಿಮಾ

Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌!

Kannada New Movie: ಎಂಥ ಲೋಕವಯ್ಯ ಸಿನಿಮಾದ ಆಗಮನ ನಿನ್ನ ಆಗಮನ ಹಾಗೂ ಸಂಜೆ ವೇಳೆಗೆ ಎಂಬ ಎರಡು ಹಾಡುಗಳನ್ನು ಅನಾವರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿರಿಯ ನಟ ಅನಂತ್ ನಾಗ್ ಸಾಂಗ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

VISTARANEWS.COM


on

Kannada New Movie idu enta lokavayya movie Kannada ananth nag
Koo

ಬೆಂಗಳೂರು: ಸಿತೇಶ್ ಸಿ ಗೋವಿಂದ್ ನಿರ್ದೇಶನದ ʻಇದು ಎಂಥಾ ಲೋಕವಯ್ಯʼ ಸಿನಿಮಾ (Kannada New Movie) ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ಎಂಥ ಲೋಕವಯ್ಯ ಸಿನಿಮಾದ ಆಗಮನ ನಿನ್ನ ಆಗಮನ ಹಾಗೂ ಸಂಜೆ ವೇಳೆಗೆ ಎಂಬ ಎರಡು ಹಾಡುಗಳನ್ನು ಅನಾವರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿರಿಯ ನಟ ಅನಂತ್ ನಾಗ್ ಸಾಂಗ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಹಿರಿಯ ನಟ ಅನಂತ್ ನಾಗ್ ಮಾತನಾಡಿ, ʻʻಇದು ಎಂಥ ಲೋಕವಯ್ಯ ನನ್ನ ಸಿನಿಮಾದ ಜನಪ್ರಿಯ ಹಾಡು. ಆ ಹಾಡಿನ ಟೈಟಲ್ ಸಿನಿಮಾವಾಗಿದೆ. ಬಹಳ ಸಂತೋಷದಿಂದ ಕಾರ್ಯಕ್ರಮಕ್ಕೆ ಬಂದಿದ್ದೇನೆ.‌ ನಿಮ್ಮ ಬೆಂಬಲದಿಂದ ಈ ಸಿನಿಮಾ ಯಶಸ್ಸು ಗಳಿಸಲಿ, ಜನಪ್ರಿಯವಾಗಲಿʼʼ ಎಂದರು.

ನಿರ್ದೇಶಕ ಸಿತೇಶ್ ಸಿ ಗೋವಿಂದ್ ಮಾತನಾಡಿ, ʻʻಆಗಸ್ಟ್ 9ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಇದು ನನ್ನ ಮೊದಲ ಪ್ರಯತ್ನ. ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರಕ್ಕೆ ಎಂಟ್ರಿ ಕೊಡುತ್ತಿದ್ದೇನೆ. ಕಡಿಮೆ ಸಮಯದಲ್ಲಿ 28 ಕಲಾವಿದರು ನಟಿಸಿರುವ ಚಿತ್ರ ಇದು. ಫ್ಯಾಷನೇಟೆಡ್ ಆಗಿ ಸಿನಿಮಾ ಮಾಡಿದ್ದೇನೆʼʼ ಎಂದರು.

ಆಗಮನ ನಿನ್ನ ಆಗಮನ ಹಾಡಿಗೆ ರಾಹುಲ್ ಹಜಾರೆ ಹಾಗೂ ದೀಪಾ ಸಿತೇಸ್ ಸಾಹಿತ್ಯ ಬರೆದಿದ್ದು, ರಿತ್ವಿಕ್ ಎಸ್ ಚಂದ್ , ಭದ್ರ ರಾಜಿನ್ ಧ್ವನಿಯಾಗಿದ್ದಾರೆ. ಸಂಜೆ ವೇಳೆಗೆ ಹಾಡಿಗೆ ಸಜೀವ್ ಸ್ಟಾನ್ಲಿ ಕಂಠ ಕುಣಿಸಿದ್ದು, ಕೀರ್ತನ್ ಭಂಡಾರಿ ಹಾಗೂ ಪುಷ್ಪರಾಜ್ ಗುಂಡ್ಯ ಪದ ಪೊಣಿಸಿದ್ದಾರೆ. ಈ ಎರಡು ಗೀತೆಗೆ ರಿತ್ವಿಕ್ ಚಂದ್ ಸಂಗೀತ ಒದಗಿಸಿದ್ದಾರೆ. ಅನುರಾಜ್ ಕಕ್ಯಪದವ್, ಮೈತ್ರಿ, ಮೈಮ್ ರಾಮದಾಸ್, ಗೋಪಿನಾಥ್ ಭಟ್, ಸುಕನ್ಯಾ, ವಿಶ್ವನಾಥ್ ಅಸೈಗೋಳಿ, ಚಂದ್ರಹಾಸ ಉಳ್ಳಾಲ್, ಅರ್ಜುನ್ ಕಜೆ, ಪ್ರೀತಿ ಮುತ್ತಪ್ಪ, ದೀಪಕ್ ರೈ, ಸಂತೋಷ್ ಶೆಣೈ, ಸುಧೀರ್ ರಾಜ್, ಪ್ರಶಾಂತ್ ಜೋಗಿ, ಹರೀಶ್ ಬಂಗೇರ, ಪ್ರಕಾಶ್‌ ತುಮ್ಮಿನಾಡ್‌, ಸೇರಿ ಇನ್ನೂ ಹಲವು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Kannada New Movie: ದಿಗಂತ್ ನಟನೆಯ `ಪೌಡರ್’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

ಕರ್ನಾಟಕ ಮತ್ತು ಕೇರಳ ಗಡಿಯಲ್ಲಿನ ಹಳ್ಳಿಗಳಲ್ಲಿ ನಡೆಯುವ ಕತೆಯೇ ಇದು ಎಂಥಾ ಲೋಕವಯ್ಯ ಸಿನಿಮಾ. ಈ ಕನ್ನಡ ಚಿತ್ರವನ್ನು ಖ್ಯಾತ ಮಲಯಾಳಂ ನಿರ್ದೇಶಕ ಜಿಯೋ ಬೇಬಿ ಪ್ರಸೆಂಟ್‌ ಮಾಡುತ್ತಿದ್ದಾರೆ. ಕಡ್ಲೆಕಾಯಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಂಗಲ್ಪಾಡಿ ನರೇಶ್ ನಾಮದೇವ್ ಶೆಣೈ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್‌ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್‌ರನ್ನು ಟ್ರೋಲ್‌ ಮಾಡಿದ ಫ್ಯಾನ್ಸ್‌!

Actor Darshan: ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ 17 ಜನ ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದ್ದಾರೆ.

VISTARANEWS.COM


on

Actor Darshan Fans troll ACP Chandan kumar
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದೆ. ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿಬರುತ್ತಿದ್ದಕ್ಕೆ ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್‌. ಗಿರೀಶ್ ಹಾಗೂ ವಿಜಯನಗರದ ಎಸಿಪಿ ಚಂದನ್‌ ಕುಮಾರ್‌ ಕಾರ್ಯಪ್ರವೃತ್ತರಾಗಿದ್ದರು. ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಎಸಿಪಿ ಚಂದನ್ ಕಾರ್ಯದಕ್ಷತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ನಟ ದರ್ಶನ್ ಅಭಿಮಾನಿಗಳು ಮಾತ್ರ ಅವರನ್ನು ಟಾರ್ಗೆಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಜೂನ್ 11ರಂದು ಬೆಳಗ್ಗೆ ಮೈಸೂರಿನಲ್ಲಿ ಎಸಿಪಿ ಚಂದನ್, ನಟ ದರ್ಶನ್‌ನನ್ನು ವಶಕ್ಕೆ ಪಡೆದರು.ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ 17 ಜನ ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದ್ದಾರೆ.

ಈ ವರ್ಷ ನಟ ದರ್ಶನ್ ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಎಸಿಪಿ ಚಂದನ್ ಸಹ ಅಲ್ಲಿಗೆ ಹೋಗಿದ್ದರು. ನಟ ದರ್ಶನ್ ಕೈ ಕುಲುಕಿ ಶುಭ ಕೋರಿದ್ದರು. ಈ ವೀಡಿಯೋವನ್ನು ಕೆಲವರು ವೈರಲ್ ಮಾಡಿ `ಹುಲಿ ಅಂತೆ ಹುಲಿ, ಈ ಹುಲಿಗೆ ಹೆಬ್ಬುಲಿ ಡಿ ಬಾಸ್’ ಎಂದು ಹಾಕಿದ್ದಾರೆ.ದರ್ಶನ್ ಸರ್ ಬರ್ತ್‌ಡೇಗೂ ಅವನೇ ಸೆಕ್ಯೂರಿಟಿ ಆಗಿದ್ದ, ಇವಾಗ ಡಿಬಾಸ್ ಜೈಲಿಂದ ರಿಲೀಸ್ ಆಗಬೇಕಾದ್ರೆ ಇವನೇ ಸೆಕ್ಯೂರಿಟಿ ಆಗಿರ್ತಾನೆ ಅಂತೆಲ್ಲಾ ಬರೆದು ವೈರಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.

Continue Reading

ಸಿನಿಮಾ

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾ ತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. “ಮೈ ಮ್ಯಾರೇಜ್ ಈಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ”ದ್ವಾಪರ ದಾಟುತ” ಹಾಡುಗಳು ಹಿಟ್‌ ಆಗಿವೆ. ಆಗಸ್ಟ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Krishnam Pranaya Sakhi
Koo

ಬೆಂಗಳೂರು: ಗೋಲ್ಡನ್‌ ಸ್ಟಾರ್‌ ಗಣೇಶ್‌ (Golden Star Ganesh) ಹಾಗೂ ಮಾಳವಿಕಾ ನಾಯರ್‌ ನಟಿಸಿರುವ ಕೃಷ್ಣಂ ಪ್ರಣಯ ಸಖಿ (Krishnam Pranaya Sakhi) ಸಿನಿಮಾದ ದ್ವಾಪರ ದಾಟುತ ಸೇರಿ ಮೂರು ಹಾಡುಗಳು ಹಿಟ್‌ ಆಗಿವೆ. ಇದರ ಬೆನ್ನಲ್ಲೇ, ಚಿತ್ರತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. ಸೋನು ನಿಗಮ್‌ ಹಾಡಿರುವ ಹೇ ಗಗನ ಎಂಬ ರೊಮ್ಯಾಂಟಿಕ್‌ ಹಾಡನ್ನು ಭಾನುವಾರ (ಆಗಸ್ಟ್‌ 4) ಬಿಡುಗಡೆ ಮಾಡಲಾಗಿದೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ.

“ಮೈ ಮ್ಯಾರೇಜ್ ಈಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಹಿಟ್‌ ಆದ ಬಳಿಕ ಬಿಡುಗಡೆಯಾದ, ಪಂಜಾಬಿ ಗಾಯಕ ಜಸ್‌ಕರಣ್‌ ಸಿಂಗ್‌ ಹಾಡಿರುವ ದ್ವಾಪರ ದಾಟುತ ಹಾಡಂತೂ ಯುಟ್ಯೂಬ್‌ ಸೇರಿ ಎಲ್ಲ ಜಾಲತಾಣಗಳಲ್ಲಿ ದಾಖಲೆ ಬರೆದಿದೆ. ಇದರ ಬೆನ್ನಲ್ಲೇ ಸಿನಿಮಾ ತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. ಆಗಸ್ಟ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

ಇಲ್ಲಿದೆ ರೊಮ್ಯಾಂಟಿಕ್‌ ಸಾಂಗ್‌

ನಾಲ್ಕನೇ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಜಸ್‌ಕರಣ್‌ ಸಿಂಗ್‌ ಅವರು ಕನ್ನಡತಿಯನ್ನೇ ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. “ನಾನು ಗಣೇಶ್‌ ಅವರ ಅಭಿಮಾನಿಯಾಗಿದ್ದೇನೆ. ಅನಿಸುತಿದೆ ಯಾಕೋ ಇಂದು ಹಾಡು ನನಗೆ ಫೇವರಿಟ್ ಆಗಿದೆ. ಈಗ ಕನ್ನಡ ಸಿನಿಮಾದ ಹಾಡು ಹಾಡಿರುವುದು ಖುಷಿ ತಂದಿದೆ. ಕನ್ನಡಿಗರು ನೀಡಿದ ಪ್ರೀತಿಯನ್ನು ನಾನು ಮರೆಯಲು ಸಾಧ್ಯವಿಲ್ಲ. ಮುಂದೊಂದು ದಿನ ಸಾಧ್ಯವಾದರೆ ನಾನು ಕನ್ನಡತಿಯನ್ನೇ ಮದುವೆಯಾಗುವೆ” ಎಂದಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ನಟಿ ಮಾಳವಿಕಾ ನಾಯರ್‌ ಅವರು ಹೆಜ್ಜೆ ಹಾಕಿರುವ ದ್ವಾಪರ ದಾಟುತ ಹಾಡು ಯುಟ್ಯೂಬ್‌ನಲ್ಲಿ 1.3 ಕೋಟಿ (13 ದಶಲಕ್ಷ) ವ್ಯೂಸ್‌ ಪಡೆದುಕೊಂಡಿದೆ. ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿಯೂ ಹಾಡು ದಾಖಲೆ ಬರೆದಿದೆ. ‌

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Continue Reading
Advertisement
Sheikh Hasina
ಪ್ರಮುಖ ಸುದ್ದಿ38 seconds ago

Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

Nia Sharma Trolled For Wearing Plunging Neckline Bralette
ಬಾಲಿವುಡ್5 mins ago

Nia Sharma: ಬ್ರಾ ಧರಿಸಿ ಪೋಸ್‌ ಕೊಟ್ಟ ಕಿರುತೆರೆ ನಟಿ ನಿಯಾ ಶರ್ಮಾರನ್ನು ಕಾಲೆಳೆದ ನೆಟ್ಟಿಗರು!

Emergency Landing
ವೈರಲ್ ನ್ಯೂಸ್27 mins ago

Emergency Landing: ವಿಮಾನದ ಎಮರ್ಜೆನ್ಸಿ ಲ್ಯಾಂಡಿಂಗ್‌ಗೆ ಕಾರಣವಾಯ್ತು ಹೇನು! ಏನಿದು ವಿಚಿತ್ರ ಪ್ರಕರಣ? ಇಲ್ಲಿದೆ ವಿವರ

BJP-JDS Padayatra
ಪ್ರಮುಖ ಸುದ್ದಿ33 mins ago

BJP-JDS Padayatra: ಪಾದಯಾತ್ರೆ ವೇಳೆ ಹೃದಯಾಘಾತದಿಂದ ಜೆಡಿಎಸ್ ಕಾರ್ಯಕರ್ತೆ ಸಾವು

Bangladesh Protests
ಪ್ರಮುಖ ಸುದ್ದಿ37 mins ago

Bangladesh Protests: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ, ದೇಶದಿಂದ ಪಲಾಯನ; ಪ್ರಧಾನಿ ಅರಮನೆಗೇ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

Shira News
ತುಮಕೂರು1 hour ago

Shira News: ಶಿರಾ ನಗರಸಭೆಯಿಂದ ದೊಡ್ಡಕೆರೆಯ ಸುತ್ತಲಿನ ಪ್ರದೇಶದ ಸ್ವಚ್ಛತೆ

Shravana 2024
ಧಾರ್ಮಿಕ1 hour ago

Shravana 2024: ಶ್ರಾವಣ ಉಪವಾಸದ ವೇಳೆ ಈ 5 ಪಾನೀಯ ಆರೋಗ್ಯಕರ

bs yediyurappa
ಪ್ರಮುಖ ಸುದ್ದಿ1 hour ago

BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ

PSI Parashuram Case
ಕರ್ನಾಟಕ1 hour ago

PSI Parashuram Case: ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ: ಶಾಸಕ ಚನ್ನಾರೆಡ್ಡಿ ಪಾಟೀಲ

Snake Bite
ವೈರಲ್ ನ್ಯೂಸ್2 hours ago

Snake Bite: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌