Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌! - Vistara News

ಸಿನಿಮಾ

Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌!

Kannada New Movie: ಎಂಥ ಲೋಕವಯ್ಯ ಸಿನಿಮಾದ ಆಗಮನ ನಿನ್ನ ಆಗಮನ ಹಾಗೂ ಸಂಜೆ ವೇಳೆಗೆ ಎಂಬ ಎರಡು ಹಾಡುಗಳನ್ನು ಅನಾವರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿರಿಯ ನಟ ಅನಂತ್ ನಾಗ್ ಸಾಂಗ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

VISTARANEWS.COM


on

Kannada New Movie idu enta lokavayya movie Kannada ananth nag
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿತೇಶ್ ಸಿ ಗೋವಿಂದ್ ನಿರ್ದೇಶನದ ʻಇದು ಎಂಥಾ ಲೋಕವಯ್ಯʼ ಸಿನಿಮಾ (Kannada New Movie) ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ಎಂಥ ಲೋಕವಯ್ಯ ಸಿನಿಮಾದ ಆಗಮನ ನಿನ್ನ ಆಗಮನ ಹಾಗೂ ಸಂಜೆ ವೇಳೆಗೆ ಎಂಬ ಎರಡು ಹಾಡುಗಳನ್ನು ಅನಾವರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿರಿಯ ನಟ ಅನಂತ್ ನಾಗ್ ಸಾಂಗ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಹಿರಿಯ ನಟ ಅನಂತ್ ನಾಗ್ ಮಾತನಾಡಿ, ʻʻಇದು ಎಂಥ ಲೋಕವಯ್ಯ ನನ್ನ ಸಿನಿಮಾದ ಜನಪ್ರಿಯ ಹಾಡು. ಆ ಹಾಡಿನ ಟೈಟಲ್ ಸಿನಿಮಾವಾಗಿದೆ. ಬಹಳ ಸಂತೋಷದಿಂದ ಕಾರ್ಯಕ್ರಮಕ್ಕೆ ಬಂದಿದ್ದೇನೆ.‌ ನಿಮ್ಮ ಬೆಂಬಲದಿಂದ ಈ ಸಿನಿಮಾ ಯಶಸ್ಸು ಗಳಿಸಲಿ, ಜನಪ್ರಿಯವಾಗಲಿʼʼ ಎಂದರು.

ನಿರ್ದೇಶಕ ಸಿತೇಶ್ ಸಿ ಗೋವಿಂದ್ ಮಾತನಾಡಿ, ʻʻಆಗಸ್ಟ್ 9ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಇದು ನನ್ನ ಮೊದಲ ಪ್ರಯತ್ನ. ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರಕ್ಕೆ ಎಂಟ್ರಿ ಕೊಡುತ್ತಿದ್ದೇನೆ. ಕಡಿಮೆ ಸಮಯದಲ್ಲಿ 28 ಕಲಾವಿದರು ನಟಿಸಿರುವ ಚಿತ್ರ ಇದು. ಫ್ಯಾಷನೇಟೆಡ್ ಆಗಿ ಸಿನಿಮಾ ಮಾಡಿದ್ದೇನೆʼʼ ಎಂದರು.

ಆಗಮನ ನಿನ್ನ ಆಗಮನ ಹಾಡಿಗೆ ರಾಹುಲ್ ಹಜಾರೆ ಹಾಗೂ ದೀಪಾ ಸಿತೇಸ್ ಸಾಹಿತ್ಯ ಬರೆದಿದ್ದು, ರಿತ್ವಿಕ್ ಎಸ್ ಚಂದ್ , ಭದ್ರ ರಾಜಿನ್ ಧ್ವನಿಯಾಗಿದ್ದಾರೆ. ಸಂಜೆ ವೇಳೆಗೆ ಹಾಡಿಗೆ ಸಜೀವ್ ಸ್ಟಾನ್ಲಿ ಕಂಠ ಕುಣಿಸಿದ್ದು, ಕೀರ್ತನ್ ಭಂಡಾರಿ ಹಾಗೂ ಪುಷ್ಪರಾಜ್ ಗುಂಡ್ಯ ಪದ ಪೊಣಿಸಿದ್ದಾರೆ. ಈ ಎರಡು ಗೀತೆಗೆ ರಿತ್ವಿಕ್ ಚಂದ್ ಸಂಗೀತ ಒದಗಿಸಿದ್ದಾರೆ. ಅನುರಾಜ್ ಕಕ್ಯಪದವ್, ಮೈತ್ರಿ, ಮೈಮ್ ರಾಮದಾಸ್, ಗೋಪಿನಾಥ್ ಭಟ್, ಸುಕನ್ಯಾ, ವಿಶ್ವನಾಥ್ ಅಸೈಗೋಳಿ, ಚಂದ್ರಹಾಸ ಉಳ್ಳಾಲ್, ಅರ್ಜುನ್ ಕಜೆ, ಪ್ರೀತಿ ಮುತ್ತಪ್ಪ, ದೀಪಕ್ ರೈ, ಸಂತೋಷ್ ಶೆಣೈ, ಸುಧೀರ್ ರಾಜ್, ಪ್ರಶಾಂತ್ ಜೋಗಿ, ಹರೀಶ್ ಬಂಗೇರ, ಪ್ರಕಾಶ್‌ ತುಮ್ಮಿನಾಡ್‌, ಸೇರಿ ಇನ್ನೂ ಹಲವು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Kannada New Movie: ದಿಗಂತ್ ನಟನೆಯ `ಪೌಡರ್’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

ಕರ್ನಾಟಕ ಮತ್ತು ಕೇರಳ ಗಡಿಯಲ್ಲಿನ ಹಳ್ಳಿಗಳಲ್ಲಿ ನಡೆಯುವ ಕತೆಯೇ ಇದು ಎಂಥಾ ಲೋಕವಯ್ಯ ಸಿನಿಮಾ. ಈ ಕನ್ನಡ ಚಿತ್ರವನ್ನು ಖ್ಯಾತ ಮಲಯಾಳಂ ನಿರ್ದೇಶಕ ಜಿಯೋ ಬೇಬಿ ಪ್ರಸೆಂಟ್‌ ಮಾಡುತ್ತಿದ್ದಾರೆ. ಕಡ್ಲೆಕಾಯಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಂಗಲ್ಪಾಡಿ ನರೇಶ್ ನಾಮದೇವ್ ಶೆಣೈ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Chiyaan Vikram: ವೇದಿಕೆಯಲ್ಲೇ ನಿರೂಪಕಿ ಸುಮಾಗೆ ಕಿಸ್ ಕೊಟ್ಟ ಖ್ಯಾತ ನಟ!

Chiyaan Vikram: ಏಕಾಏಕಿ ನಟ ನಿರೂಪಕಿ ಕೈಗೆ ಮುತ್ತು ಕೊಟ್ಟಾಗ ಸುಮಾ ಆತನಿಗೆ ಒಂದಷ್ಟು ತೆಲುಗು ಸಾಲುಗಳನ್ನು ಹೇಳಿಕೊಟ್ಟರು, ಅದನ್ನು ಹೇಳಿ ಡೇನಿಯಲ್ ಚಪ್ಪಾಳೆ ಗಿಟ್ಟಿಸಿದರು. ಈ ವೇಳೆ ಸುಮಾ ಶೇಕ್ ಹ್ಯಾಂಡ್ ಮಾಡಿ ಆತನನ್ನು ಬೀಳ್ಕೊಡಲು ಹೊರಟರು.

VISTARANEWS.COM


on

Chiyaan Vikram danie caltagirone kissed hand on stage
Koo

ಬೆಂಗಳೂರು:  ಕಾಲಿವುಡ್‌ ನಟ ಚಿಯಾನ್ ವಿಕ್ರಮ್ (Chiyaan Vikram) ನಟನೆಯ ʻʻತಂಗಲಾನ್‌ʼʼ ಚಿತ್ರ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ನಿರ್ದೇಶಕ ಪಾ ರಂಜಿತ್, ‘ತಾಂಗಾಲನ್’ ಸಿನಿಮಾ ನಿರ್ದೇಶನ ಮಾಡಿದ್ದು ಪ್ರತಿಭಾವಂತ ನಟ ಚಿಯಾನ್ ವಿಕ್ರಂ, ‘ತಂಗಾಲನ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ನಿಜವಾದ ‘ಕೆಜಿಎಫ್’ ಕತೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರ ಆಗಸ್ಟ್‌ 15ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಡೆಯಿತು.

ಚಿತ್ರದಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ತಂಗಲಾನ್’ ವೇದಿಕೆಯಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಇದ್ದಕ್ಕಿದಂತೆ ಸುಮಾ ಕೈಗೆ ಮುತ್ತಿಟ್ಟಿದ್ದಾರೆ. ಇದರಿಂದ ಒಂದು ಕ್ಷಣ ಶಾಕ್ ಆಗಿದ್ದ ಸುಮಾ ಬಳಿಕ ತಮಾಷೆಯಾಗಿ ಅದನ್ನು ತಿಳಿಗೊಳಿಸಿದ್ದಾರೆ.

ಏಕಾಏಕಿ ನಟ ನಿರೂಪಕಿ ಕೈಗೆ ಮುತ್ತು ಕೊಟ್ಟಾಗ ಸುಮಾ ಆತನಿಗೆ ಒಂದಷ್ಟು ತೆಲುಗು ಸಾಲುಗಳನ್ನು ಹೇಳಿಕೊಟ್ಟರು, ಅದನ್ನು ಹೇಳಿ ಡೇನಿಯಲ್ ಚಪ್ಪಾಳೆ ಗಿಟ್ಟಿಸಿದರು. ಈ ವೇಳೆ ಸುಮಾ ಶೇಕ್ ಹ್ಯಾಂಡ್ ಮಾಡಿ ಆತನನ್ನು ಬೀಳ್ಕೊಡಲು ಹೊರಟರು.

ಡೇನಿಯಲ್ ಆಕೆಯ ಕೈಗೆ ಮುತ್ತು ಕೊಟ್ಟಿದ್ದಾರೆ. ರಾಜಾ ನಮ್ಮ ಸಹೋದರ ಇವರು. ರಾಖಿ ಹಬ್ಬ ಬರುತ್ತಿದೆ. ‘ಅಣ್ಣಯ್ಯ’ ಎಂದು ಹಾಡು ಹಾಡಿ ತಮಾಷೆಯಾಗಿ ಹೇಳಿದರು. ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಚಿಯಾನ್‌ ವಿಕ್ರಮ್‌. ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ, ಡೇನಿಯಲ್ ಕಾಲ್ಟಗಿರೋನ್ ಮತ್ತು ಇನ್ನೂ ಅನೇಕರು ಇದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತವನ್ನು ರಚಿಸಿದ್ದಾರೆ.

ಅಣ್ಣಿಯಾನ್ ನಟ ಚಿತ್ರನಿರ್ಮಾಪಕ ಎಸ್‌ಯು ಅರುಣ್ ಕುಮಾರ್ ಅವರೊಂದಿಗೆ ತಾತ್ಕಾಲಿಕವಾಗಿ ʻಚಿಯಾನ್ 62ʼ ಎಂಬ ಯೋಜನೆಯಲ್ಲಿ ಕೆಲಸ ಮಾಡಲಿದ್ದಾರೆ. ಚಿತ್ರದಲ್ಲಿ ಎಸ್ ಜೆ ಸೂರ್ಯ ಮತ್ತು ಸೂರಜ್ ವೆಂಜರಮೂಡು ಪ್ರಮುಖ ಭಾಗಗಳಲ್ಲಿದ್ದಾರೆ.

ಈ ಚಿತ್ರವನ್ನು HR ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಡಿಯಲ್ಲಿ ಶಿಬು ಥಮೀನ್ಸ್ ಮತ್ತು ರಿಯಾ ಶಿಬು ನಿರ್ಮಿಸಿಲಿದ್ದಾರೆ.

Continue Reading

ಮಾಲಿವುಡ್

Manjummel Boys: ʻಮಂಜುಮ್ಮೇಲ್ ಬಾಯ್ಸ್ʼ ವಿರುದ್ಧ ಗೆದ್ದ ಇಳಯರಾಜ..!

Manjummel Boys: ಮಂಜುಮ್ಮೇಲ್ ಬಾಯ್ಸ್’ ಕಥೆ ಸಾಗೋದು ಗುಣ ಗುಹೆಯಲ್ಲಿ. ಹೀಗಾಗಿ, ‘ಗುಣ’ ಚಿತ್ರದಲ್ಲಿ ಬಳಕೆ ಆದ ‘ಕಣ್ಮಣಿ..’ ಸಾಂಗ್​ನ ತಂಡದವರು ಬಳಕೆ ಮಾಡಿಕೊಂಡಿದ್ದರು. ಇದಕ್ಕೆ ಮ್ಯೂಸಿಕ್ ಕಂಪನಿಯಿಂದ ಒಪ್ಪಿಗೆ ಕೂಡ ಪಡೆದಿದ್ದರು. ಆದರೆ, ಇವರು ಇಳಯರಾಜ ಅವರ ಒಪ್ಪಿಗೆ ಪಡೆದಿರಲಿಲ್ಲ.

VISTARANEWS.COM


on

Manjummel Boysproducers pay Rs 60 lakh as compensation to Ilaiyaraaja
Koo

ಬೆಂಗಳೂರು: ʼಮಂಜುಮ್ಮೇಲ್ ಬಾಯ್ಸ್’ (Manjummel Boys) ಮಲಯಾಳಂ ಸಿನಿಮಾ ಹಿಟ್‌ ಕಂಡಿದೆ. ಸಾರ್ವಕಾಲಿಕ ಅತಿ ಹೆಚ್ಚು ಹಣ ಗಳಿಸಿದ ಮಲಯಾಳಂ ಚಿತ್ರವಾಗಿ ಹೊರಹೊಮ್ಮಿದೆ. . ಈ ಚಿತ್ರದ ನಿರ್ಮಾಪಕರಿಗೆ ತೊಂದರೆ ಎದುರಾಗಿತ್ತು. ಈ ಸಿನಿಮಾ ತಂಡದ ವಿರುದ್ಧ ಇಳಯರಾಜ ಅವರು ಕೇಸ್ ಹಾಕಿದ್ದರು. ಈ ಕೇಸ್​ನಲ್ಲಿ ಅವರಿಗೆ ಜಯ ಆಗಿದೆ.

ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಾದ ಸೌಬಿನ್ ಶಾಹಿರ್, ಬಾಬು ಶಾಹಿರ್ ಮತ್ತು ಶಾನ್ ಆಂಟೋನಿ ಅವರು ಚಿತ್ರದಲ್ಲಿನ ‘ಗುಣ’ ಚಿತ್ರದ ‘ಕಣ್ಮಣಿ ಅನ್ಬೋಡು’ ಹಾಡನ್ನು ಅನಧಿಕೃತವಾಗಿ ಬಳಸಿದ್ದಕ್ಕಾಗಿ ಸಂಯೋಜಕ ಇಳಯರಾಜ ಅವರಿಗೆ 60 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.

‘ಮಂಜುಮ್ಮೇಲ್ ಬಾಯ್ಸ್’ ಕಥೆ ಸಾಗೋದು ಗುಣ ಗುಹೆಯಲ್ಲಿ. ಹೀಗಾಗಿ, ‘ಗುಣ’ ಚಿತ್ರದಲ್ಲಿ ಬಳಕೆ ಆದ ‘ಕಣ್ಮಣಿ..’ ಸಾಂಗ್​ನ ತಂಡದವರು ಬಳಕೆ ಮಾಡಿಕೊಂಡಿದ್ದರು. ಇದಕ್ಕೆ ಮ್ಯೂಸಿಕ್ ಕಂಪನಿಯಿಂದ ಒಪ್ಪಿಗೆ ಕೂಡ ಪಡೆದಿದ್ದರು. ಆದರೆ, ಇವರು ಇಳಯರಾಜ ಅವರ ಒಪ್ಪಿಗೆ ಪಡೆದಿರಲಿಲ್ಲ. ಈ ಕಾರಣದಿಂದಲೇ ಇಳಯರಾಜ ಅವರು ಕೋರ್ಟ್​ನಲ್ಲಿ ಕೇಸ್ ಹಾಕಿ, ತಂಡದವರು ಎರಡು ಕೋಟಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು.

ʻಮ್ಯೂಸಿಕ್ ಕಂಪನಿಯಿಂದ ಈ ಹಾಡಿನ ಬಳಕೆಗೆ ಹಕ್ಕನ್ನು ಪಡೆದಿದ್ದೇವೆ’ ಎಂದು ಸಿನಿಮಾ ತಂಡದ ಪರ ವಕೀಲರು ಹೇಳಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಇಳಯರಾಜ ಪರ ವಕೀಲರು, ‘ಇಳಯರಾಜ ಅವರು ಮಾಡಿದ ಕೆಲಸಗಳಿಗೆ ಅವರು ಕೂಡ ಹಕ್ಕನ್ನು ಹೊಂದಿದ್ದಾರೆ’ ಎಂದರು. ಹೀಗಾಗಿ, ಇಳಯರಾಜ ಅವರು ಈ ಹಾಡನ್ನು ಬಳಸಲು ‘ಮಂಜುಮ್ಮೇಲ್ ಬಾಯ್ಸ್’ ತಂಡಕ್ಕೆ ಯಾವುದೇ ಒಪ್ಪಿಗೆ ನೀಡಿರಲಿಲ್ಲ.

ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

ಸೌಬಿನ್ ಶಬೀರ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪ್ ಒಂದು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನ ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಸಕ್ಸೆಸ್‌ ಆಗ್ತಾರಾ? ಇಲ್ಲವಾ ಎಂಬುದೇ ಕಥೆ. ಮಲಯಾಳಂ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿದೆ.ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Continue Reading

ಬಾಲಿವುಡ್

Nia Sharma: ಬ್ರಾ ಧರಿಸಿ ಪೋಸ್‌ ಕೊಟ್ಟ ಕಿರುತೆರೆ ನಟಿ ನಿಯಾ ಶರ್ಮಾರನ್ನು ಕಾಲೆಳೆದ ನೆಟ್ಟಿಗರು!

Nia Sharma: ನಿಯಾ ಅವರ ಅಸಾಂಪ್ರದಾಯಿಕ ಮತ್ತು ಸ್ಟೈಲಿಶ್ ಲುಕ್‌ಗಾಗಿ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸುತ್ತಿದ್ದರೆ, ಸಾಮಾಜಿಕ ಮಾಧ್ಯಮ ಬಳಕೆದಾರರ ಒಂದು ವಿಭಾಗವು ನಟಿಯನ್ನು ಟ್ರೋಲ್ ಮಾಡಿದ್ದಾರೆ. ಮತ್ತು ಅವರ ಫ್ಯಾಶನ್ ಸೆನ್ಸ್ ಅನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

Nia Sharma Trolled For Wearing Plunging Neckline Bralette
Koo

ಬೆಂಗಳೂರು: ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜನಪ್ರಿಯ ಕಿರುತೆರೆ ನಟಿ ನಿಯಾ ಶರ್ಮಾ (Nia Sharma) ಕಾಣಿಸಿಕೊಂಡರು. ಆದರೆ ನಟಿ ಬಟ್ಟೆಯ ವಿಚಾರಕ್ಕೆ ಸಖತ್‌ ಟ್ರೋಲ್‌ ಆಗಿದ್ದಾರೆ. ನಿಯಾ ಧರಿಸಿದ್ದ ಬಿಳಿ ಬಣ್ಣದ ಬ್ರಾಲೆಟ್‌ ಮತ್ತು ಟ್ರ್ಯಾಕ್ ಪ್ಯಾಂಟ್ ನೋಡಿ ನೆಟ್ಟಿಗರು ಗರಂ ಆಗಿದ್ದಾರೆ. ಬ್ರಾಗೆ ಬಿಳಿ ಹೂವುಗಳ ಡಿಸೈನ್ ಇದ್ದರೂ ಫ್ಯಾಷನ್ ಎನ್ನುವ ಪಟ್ಟ ಕೊಟ್ಟರೂ, ವಿಶೇಷ ಅತಿಥಿಗಳು ಧರಿಸುವ ಉಡುಪು ಅಲ್ಲ ಎನ್ನೋದು ನೆಟ್ಟಿಗರ ವಾದ.

ನಿಯಾ ಅವರ ಅಸಾಂಪ್ರದಾಯಿಕ ಮತ್ತು ಸ್ಟೈಲಿಶ್ ಲುಕ್‌ಗಾಗಿ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸುತ್ತಿದ್ದರೆ, ಸಾಮಾಜಿಕ ಮಾಧ್ಯಮ ಬಳಕೆದಾರರ ಒಂದು ವಿಭಾಗವು ನಟಿಯನ್ನು ಟ್ರೋಲ್ ಮಾಡಿದ್ದಾರೆ. ಮತ್ತು ಅವರ ಫ್ಯಾಶನ್ ಸೆನ್ಸ್ ಅನ್ನು ಪ್ರಶ್ನಿಸಿದ್ದಾರೆ.

“ಅವಳ ಡ್ರೆಸ್ಸಿಂ’ಏನ್ ಮೇಡಂ ಮನೆಯಲ್ಲಿ ಒಂದು ಚೆನ್ನಾಗಿರುವ ಡ್ರೆಸ್ ಇಲ್ವಾ? ಇಷ್ಟೋಂದು ಕೆಟ್ಟದಾಗಿ ಬಂದಿದ್ದೀರಾ…ಅಸಹ್ಯ’ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. ನಟಿ ಹಾಗೂ ಮಾಡೆಲ್ ಆಗಿ ಗುರುತಿಸಿಕೊಂಡಿರುವ ನಿಯಾ ಶರ್ಮಾ ಏಕ್ ಹಜಾರೋನ್‌ ಮೇ ಮೇರಿ ಬೆಹನಾ ಹೈ ಚಿತ್ರದಲ್ಲಿ ಮಾನ್ವಿ ಔಧರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಜೀ ವಾಹಿನಿಯಲ್ಲಿ ರಾಜಾ, ಕಲರ್ಸ್‌ ವಾಹಿನಿಯಲ್ಲಿ ಇಷ್ಕ್‌ ಮೇ ಮಾರ್ಜಾವಾನ್, ನಾಗಿಣಿ 4 ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಮಿಂಚಿದ್ದಾರೆ.

ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

ಖತ್ರೋನ್‌ ಕೆ ಖಿಲಾಡಿ 8ರಲ್ಲಿ ಭಾಗವಹಿಸಿ ಫೈನಲಿಸ್ಟ್‌ ಆಗಿದ್ದರು. ಮೇಡ್ ಇನ್ ಇಂಡಿಯಾದಲ್ಲಿ ಭಾಗವಹಿಸಿ ವಿಜೇತರಾಗಿ ಹೊರ ಹೊಮ್ಮಿದ್ದರು. ನಿಯಾ ಪ್ರಸ್ತುತರಿಯಾಲಿಟಿ ಶೋ ಲಾಫ್ಟರ್ ಚೆಫ್ಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Duniya Vijay- Ganesh: ಹೊಸ ರೀತಿಯ ಸಿನಿಮಾ ನಿರೀಕ್ಷೆಯಲ್ಲಿದ್ದ ಜನಕ್ಕೆ ಈ ಎರಡೂ ಸಿನಿಮಾ ಬೇರೆ ರೀತಿಯ ಕಥೆ ಹೇಳಿದ್ದವು. ಎರಡೂ ಸಿನಿಮಾಗಳು ಜನರಿಗೆ ಎರಡು ರೀತಿಯಲ್ಲಿಯೇ ಇಷ್ಟ ಆಗಿದ್ದವು. ಎರಡೂ ಸಿನಿಮಾಗಳು ಬಂದು ಹೆಚ್ಚು ಕಡಿಮೆ 17 ರಿಂದ 18 ವರ್ಷಗಳೇ ಕಳೆದಿವೆ. ಇದೀಗ ಮತ್ತೆ ಈ ಇಬ್ಬರೂ ನಾಯಕರ ಬೇರೆ ಬೇರೆ ಸಿನಿಮಾಗಳು ತೆರೆಗೆ ಬರುತ್ತಿವೆ. ಇಬ್ಬರ ಮಾತುಕತೆ ನಡೆದಿದ್ದು ಹೀಗೆ.

VISTARANEWS.COM


on

Duniya Vijay- Ganesh To Combined together make Movie in future
Koo

ಬೆಂಗಳೂರು: ದುನಿಯಾ ವಿಜಯ್ ಹಾಗೂ ಗಣೇಶ್ (Duniya Vijay- Ganesh) ಒಂದು ಗ್ರೌಂಡ್​ನಲ್ಲಿ ಭೇಟಿ ಆಗಿದ್ದಾರೆ. ಈ ಭೇಟಿ ವೇಳೆ ಹಳೆಯ ದಿನಗಳ ಬಗ್ಗೆ ಇವರು ಮಾತನಾಡಿಕೊಂಡಿದ್ದಾರೆ. ದುನಿಯಾ ವಿಜಯ್ ನಟನೆಯ ‘ಭೀಮ’ (ಆಗಸ್ಟ್ 9) ಹಾಗೂ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ (ಆಗಸ್ಟ್ 15) ಒಂದು ವಾರ ಗ್ಯಾಪ್​ನಲ್ಲಿ ರಿಲೀಸ್ ಆಗುತ್ತಿದೆ. ʻಮುಂಗಾರು ಮಳೆʼ ಮತ್ತು ʻದುನಿಯಾʼ ಗೆದ್ದಾಗ ಇಂಡಸ್ಟ್ರಿ ಚೇತರಿಸಿಕೊಂಡಿತ್ತು. ಹೊಸ ರೀತಿಯ ಸಿನಿಮಾ ನಿರೀಕ್ಷೆಯಲ್ಲಿದ್ದ ಜನಕ್ಕೆ ಈ ಎರಡೂ ಸಿನಿಮಾ ಬೇರೆ ರೀತಿಯ ಕಥೆ ಹೇಳಿದ್ದವು. ಎರಡೂ ಸಿನಿಮಾಗಳು ಜನರಿಗೆ ಎರಡು ರೀತಿಯಲ್ಲಿಯೇ ಇಷ್ಟ ಆಗಿದ್ದವು. ಎರಡೂ ಸಿನಿಮಾಗಳು ಬಂದು ಹೆಚ್ಚು ಕಡಿಮೆ 17 ರಿಂದ 18 ವರ್ಷಗಳೇ ಕಳೆದಿವೆ. ಇದೀಗ ಮತ್ತೆ ಈ ಇಬ್ಬರೂ ನಾಯಕರ ಬೇರೆ ಬೇರೆ ಸಿನಿಮಾಗಳು ತೆರೆಗೆ ಬರುತ್ತಿವೆ. ಇಬ್ಬರ ಮಾತುಕತೆ ನಡೆದಿದ್ದು ಹೀಗೆ.

ಗಣೇಶ್‌ ಅವರು ಮಾತನಾಡಿ ʻʻಭೀಮ ಟ್ರೈಲರ್‌ ನೋಡಿ ಬಹಳ ಖುಷಿ ಆಯ್ತು. ಭೀಮನ ಪಾತ್ರ ನೋಡಿ ನನಗೆ ರಿಯಲ್‌ ದುನಿಯಾ ವಿಜಯ್‌ ಎಂದು ಅನಿಸಿತು. ನಾನು ದುನಿಯಾ ವಿಜಯ್‌ ಕೂದಲಿಗೆ ದೊಡ್ಡ ಫ್ಯಾನ್‌. ಶಾರುಖ್‌ ತರ ಕಾಣುತ್ತಿದ್ದʼʼ ಎಂದು ಗಣೇಶ್‌ ಗುಣಗಾನ ಮಾಡಿದ್ದಾರೆ. ಅದರ ಜತೆಗೆ ದುನಿಯಾ ವಿಜಯ್‌ ಕೂಡ ʻʻಗಣೇಶ್‌ ಅವರನ್ನು ಹೊಗಳಿದ್ದಾರೆ. ʻʻನೀನು ಪಟ್ಟಿರುವ ಕಷ್ಟ ಎಲ್ಲವನ್ನು ನೋಡಿದ್ದೇನೆ. ನಿನ್ನ ಸಿನಿಮಾ ಕೂಡ ಹಿಟ್‌ ಆಗಲಿ. ದೇವರು ಈಗಾಗಲೇ ಒಳ್ಳೆಯ ಹಂತದಲ್ಲಿ ಇಟ್ಟಿದ್ದಾನೆ. ನಮ್ಮಿಬ್ಬರನ್ನು ದೇವರು ಹಾಗೂ ಅಭಿಮಾನಿಗಳು ಒಳ್ಳೆಯ ರೀತಿ ನಡೆಸುಕೊಂಡು ಹೋಗುತ್ತಿದ್ದಾರೆ. ಮತ್ತೆ ನಮ್ಮನ್ನ ತೆರೆ ಮೆಲೆ ನೋಡುವ ಸಮಯ ಬಂದಿದೆ, ನಾನು ಬಂದು ನಿನ್ನ ಸಿನಿಮಾ ನೀಡುತ್ತೇನೆ. ನೀನು ಬಂದು ನನ್ನ ಸಿನಿಮಾ ನೋಡುʼʼ ಎಂದಿದ್ದಾರೆ. ಇದಕ್ಕೆ ಗಣೇಶ್‌ ಕೂಡ ʻʻಖಂಡಿತವಾಗಿ ನೋಡುವೆʼʼಎಂದಿದ್ದಾರೆ,

ಇದನ್ನೂ ಓದಿ: Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌!

ಮುಂಗಾರು ಮಳೆ ಹಾಗೂ ದುನಿಯಾ ಬಂದು 18 ವರ್ಷಗಳೇ ಆದವು. ಈ ಬಗ್ಗೆ ಗಣೇಶ್‌ ಮಾತನಾಡಿ ʻʻ ಇಬ್ಬರದ್ದು ಎರಡು ಸಿನಿಮಾಗಳು ಹಿಟ್‌ ಆಗುವಾಗ ಇಬ್ಬರಿಗೂ ಅ ಟೇಸ್ಟ್‌ ಗೊತ್ತೇ ಆಗಿಲ್ಲ. ವಿಜಯ್‌ ಅವರ ಸಲಗ ಮಾಡುವಾಗ ನನಗೆ ಖುಷಿ ಆಯ್ತು. ವಿಜಯ್‌ ಬೇರೆನೆ ಲೈಫ್‌ ತೋರಿಸ್ತಾ ಇದ್ದಾರೆ ಅನ್ನಿಸುತ್ತೆ. ನಾವು ಯಾವುದೇ ರೀತಿಯ ಕ್ಲಾಶ್‌ ಮಾಡಿಕೊಂಡಿಲ್ಲ. ಬೈಕೊಂಡಿಲ್ಲ. ಹಳೆದನ್ನು ನೆನೆಸಿಕೊಂಡು ಕಾಲು ನಾವು ಎಳೆದುಕೊಳ್ಳುತ್ತಿದ್ವಿ. ನಮ್ಮ ವಿಜಯ್‌ ನಟ ನಿರ್ದೇಶಕ ಆಗಿದ್ದಾನೆ, ಅವನು ತುಂಬ ಕಷ್ಟ ಪಟ್ಟು ಬಂದಿದ್ದಾನೆ. ಬೆಳಗ್ಗೆ ಪಾರ್ಕ್‌ನಲ್ಲಿ 5 ಗಂಟೆ ಎದ್ದು ಒಬ್ಬನೇ ಓಡಾಡುವನು. ಎರಡು ದಿನಕ್ಕೆ 20 ದಿನ ತಯಾರಿ ಮಾಡುತ್ತಿದ್ದʼʼಎಂದು ಹೇಳಿದರು.

ವಿಜಯ್‌ ಕೂಡ ಮಾತನಾಡಿ ʻ ಗಣೇಶ್‌ ಎಲ್ಲೂ ಬದಲಾಗಲೇ ಇಲ್ಲ. ನನ್ನ ಮಗಳಿಗೆ ಹೇಳಿದ್ದೆ ನಿನ್ನ ಬಗ್ಗೆ. ನಾನು ಯಾವಗಲೂ ಹೇಳೋದು ನೀವು ನೋಡದೇ ಇರುವ ಗಣೇಶ್‌ ನಾನು ನೋಡಿದ್ದೆ, ನಾವು ಇರೊವಷ್ಟು ಖುಷಿ ಪಡುತ್ತಿದ್ದೆವು. ಏನು ಆಗುತ್ತೋ ಎಂದು ಹೇಳಿಯೇ ಇಲ್ಲಿ ತನಕ ಬಂದೆವು. ಇಗ ದ್ವಾಪರ ಸಾಂಗ್‌ ನೋಡಿ ಖುಷಿ ಆಯ್ತು. ನಂಗು ಅದೇ ತರ ಮಾಡಬೇಕು ಎಂದು ಅರ್ಜುನ್‌ಗೆ ಹೇಳಿದೆ. ನಾನು ಗಣೇಶ್‌ ಡ್ಯಾನ್ಸ್‌ ನೋಡಿ ಖುಷಿ ಆಯ್ತು. ನನಗೆ ಡ್ಯಾನ್ಸ್‌ ಬರಲ್ಲ. ನಾವಿಬ್ಬರೂ ಯಾಕೆ ಚೆನ್ನಾಗಿದ್ದೇವೆ ಎಂದರೆ ನಾವು ತುಂಬ ಪಾತಾಳ ನೋಡಿದ್ದೇವೆ. ನನ್ನ ಡೈರಕ್ಷನ್ನಲ್ಲಿ ನಾವಿಬ್ಬರೂ ಕಾಂಬಿನೇಶನ್‌ ಸಿನಿಮಾ ಮಾಡಬೇಕುʼʼ ಎಂದರು. ಅದಕ್ಕೆ ಗಣೇಶ್‌ ಕೂಡ ಮಾಡುತ್ತೇನೆ ಎಂದು ಭಾಷೆ ಕೂಡ ಕೊಟ್ಟರು. ʻʻನೀನು ಯಾವಾಗ ಕರೆಯುತ್ತೇವೋ ಆಗ ಬರ್ತೀನಿʼʼ ಎಂದು ಗಣೇಶ್‌ ಹೇಳಿದರು.

ಆ ಬಳಿಕ ಇಬ್ಬರೂ ಒಬ್ಬರ ಸಿನಿಮಾಗೆ ಒಬ್ಬರು ವಿಶ್ ಮಾಡಿದ್ದಾರೆ. ‘ಭೀಮ’ ಚಿತ್ರವನ್ನು ಥಿಯೇಟರ್​ನಲ್ಲಿ ಗಣೇಶ್ ನೋಡಿ ಹಾರೈಸಲಿದ್ದಾರಂತೆ. ಅದೇ ರೀತಿ ‘ಕೃಷ್ಣ ಪ್ರಣಯ ಸಖಿ’ ಚಿತ್ರವನ್ನು ದುನಿಯಾ ವಿಜಯ್ ವೀಕ್ಷಿಸಲಿದ್ದಾರೆ.

Continue Reading
Advertisement
Paris Olympics 2024
ಪ್ರಮುಖ ಸುದ್ದಿ17 mins ago

Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ

Congress Protest
ಕರ್ನಾಟಕ35 mins ago

Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ

Paris Olympics 2024
ಕ್ರಿಕೆಟ್37 mins ago

Manu Bhaker : ಪ್ಯಾರಿಸ್​ ಒಲಿಂಪಿಕ್ಸ್​​ ಸಮಾರೋಪದಲ್ಲಿ ಮನು ಭಾಕರ್​​ ತ್ರಿವರ್ಣ ಧ್ವಜಧಾರಿ

Bangladesh Protests
ವಿದೇಶ45 mins ago

Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Bangla Protest Explainer
ವಿದೇಶ51 mins ago

Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

Paris Olympics 2024
ಕ್ರೀಡೆ59 mins ago

Paris Olympics 2024 : ಒಲಿಂಪಿಕ್ಸ್​ನ ಕ್ವಾರ್ಟರ್​ ಫೈನಲ್​ಗೇರಿದ ಭಾರತ ಮಹಿಳೆಯರ ಟೇಬಲ್ ಟೆನಿಸ್​ ತಂಡ

Road Accident
ವಿಜಯನಗರ1 hour ago

Road Accident : ಶಾಲಾ ಶಿಕ್ಷಕನ ಬಲಿ ಪಡೆದ ಸ್ಕೂಲ್‌ ವ್ಯಾನ್‌; ಒಂಟಿ ಸಲಗ ದಾಳಿಗೆ ವೃದ್ಧೆ ಸಾವು

Chiyaan Vikram danie caltagirone kissed hand on stage
ಕಾಲಿವುಡ್1 hour ago

Chiyaan Vikram: ವೇದಿಕೆಯಲ್ಲೇ ನಿರೂಪಕಿ ಸುಮಾಗೆ ಕಿಸ್ ಕೊಟ್ಟ ಖ್ಯಾತ ನಟ!

Viral Video
Latest1 hour ago

Viral Video: ಮಳೆಯಲಿ ಜೊತೆಯಲಿ… ಆನೆ-ಮಾವುತ ನಡುವಿನ ಮಾಂತ್ರಿಕ ಕ್ಷಣ! ಹೃದಯ ತಟ್ಟುವ ವಿಡಿಯೊ

Rohit Sharma
ಪ್ರಮುಖ ಸುದ್ದಿ1 hour ago

Rohit Sharma : ಸಿಕ್ಸರ್​ಗಳನ್ನು ಬಾರಿಸುವಲ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌