Graham Thorpe : ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಗ್ರಹಾಂ ಥಾರ್ಪ್ ನಿಧನ - Vistara News

ಪ್ರಮುಖ ಸುದ್ದಿ

Graham Thorpe : ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಗ್ರಹಾಂ ಥಾರ್ಪ್ ನಿಧನ

Graham Thorpe : ಇಂಗ್ಲೆಂಡ್​​ನ ಸಾರ್ವಕಾಲಿಕ ಅತ್ಯುತ್ತಮ ಬ್ಯಾಟರ್​ಗಳಲ್ಲಿ ಒಬ್ಬರಿಗಿಂತ ಹೆಚ್ಚಾಗಿ ಅವರು ಕ್ರಿಕೆಟ್ ಕುಟುಂಬದ ಪ್ರೀತಿಯ ಸದಸ್ಯರಾಗಿದ್ದರು. ಪ್ರಪಂಚದಾದ್ಯಂತದ ಅಭಿಮಾನಿಗಳಿಂದ ಗೌರವ ಪಡೆದಿದ್ದರು. ಅವರ ಕೌಶಲ್ಯವು ಪ್ರಶ್ನಾತೀತವಾಗಿತ್ತು. 13 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಅವರ ಸಾಮರ್ಥ್ಯಗಳು ಮತ್ತು ಸಾಧನೆಗಳು ಸಹ ಆಟಗಾರರಿಗೆ ಮತ್ತು ಇಂಗ್ಲೆಂಡ್ ಮತ್ತು ಸರ್ರೆ ಸಿಸಿಸಿ ಬೆಂಬಲಿಗರಿಗೆ ಪ್ರೋತ್ಸಾಹದಾಯಕವಾಗಿತ್ತು. ಅತ್ಯುತ್ತಮವಾಗಿ ತರಬೇತುದಾರರಾಗಿ ಇಂಗ್ಲೆಂಡ್ ಪುರುಷರ ತಂಡಕ್ಕೆ ನೆರವಾಗಿದ್ದರು.

VISTARANEWS.COM


on

Graham Thorpe
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಗ್ರಹಾಂ ಥಾರ್ಪ್ (55) ನಿಧನ (Graham Thorpe) ಹೊಂದಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಸೋಮವಾರ ದೃಢಪಡಿಸಿದೆ. ಥಾರ್ಪ್ 1993ರಿಂದ 2005ರವರೆಗೆ ಇಂಗ್ಲೆಂಡ್ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಆ ಸಮಯದಲ್ಲಿ 82 ಏಕದಿನ ಪಂದ್ಯಗಳ ಭಾಗವಾಗಿದ್ದರು. ಥಾರ್ಪ್ ಇಂಗ್ಲೆಂಡ್ ಪರ ಟೆಸ್ಟ್​​ನಲ್ಲಿ 6,744 ರನ್ ಗಳಿಸಿದ್ದಾರೆ. ತಂಡದೊಂದಿಗೆ 44.66 ಸರಾಸರಿಯಲ್ಲಿ 16 ಶತಕಗಳನ್ನು ಬಾರಿಸಿದ್ದಾರೆ. ಸೋಮವಾರ ಇಸಿಬಿ ತನ್ನ ವೆಬ್​ಸೈಟ್​ನಲ್ಲಿ ಥೋರ್ಪ್ ಅವರ ನಿಧನವನ್ನು ದೃಢಪಡಿಸುವ ಹೇಳಿಕೆ ಬಿಡುಗಡೆ ಮಾಡಿದೆ.

ಎಂಬಿಇ ಗ್ರಹಾಂ ಥೋರ್ಪ್ ನಿಧನರಾದ ಸುದ್ದಿಯನ್ನು ಇಸಿಬಿ ಬಹಳ ದುಃಖದಿಂದ ಹಂಚಿಕೊಳ್ಳುತ್ತದೆ. ಗ್ರಹಾಂ ಅವರ ಸಾವಿನಿಂದ ನಾವು ಅನುಭವಿಸುವ ಆಳವಾದ ನೋವನ್ನು ವಿವರಿಸಲು ಸೂಕ್ತ ಪದಗಳಿಲ್ಲ ಎಂದು ತೋರುತ್ತದೆ.” ಎಂದು ಬರೆದುಕೊಂಡಿದ್ದಾರೆ.

ಇಂಗ್ಲೆಂಡ್​​ನ ಸಾರ್ವಕಾಲಿಕ ಅತ್ಯುತ್ತಮ ಬ್ಯಾಟರ್​ಗಳಲ್ಲಿ ಒಬ್ಬರಿಗಿಂತ ಹೆಚ್ಚಾಗಿ ಅವರು ಕ್ರಿಕೆಟ್ ಕುಟುಂಬದ ಪ್ರೀತಿಯ ಸದಸ್ಯರಾಗಿದ್ದರು. ಪ್ರಪಂಚದಾದ್ಯಂತದ ಅಭಿಮಾನಿಗಳಿಂದ ಗೌರವ ಪಡೆದಿದ್ದರು. ಅವರ ಕೌಶಲ್ಯವು ಪ್ರಶ್ನಾತೀತವಾಗಿತ್ತು. 13 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಅವರ ಸಾಮರ್ಥ್ಯಗಳು ಮತ್ತು ಸಾಧನೆಗಳು ಸಹ ಆಟಗಾರರಿಗೆ ಮತ್ತು ಇಂಗ್ಲೆಂಡ್ ಮತ್ತು ಸರ್ರೆ ಸಿಸಿಸಿ ಬೆಂಬಲಿಗರಿಗೆ ಪ್ರೋತ್ಸಾಹದಾಯಕವಾಗಿತ್ತು. ಅತ್ಯುತ್ತಮವಾಗಿ ತರಬೇತುದಾರರಾಗಿ ಇಂಗ್ಲೆಂಡ್ ಪುರುಷರ ತಂಡಕ್ಕೆ ನೆರವಾಗಿದ್ದರು.

ಕ್ರಿಕೆಟ್ ಜಗತ್ತು ಇಂದು ಶೋಕದಲ್ಲಿದೆ. ಈ ಊಹಿಸಲಾಗದ ಕಷ್ಟದ ಸಮಯದಲ್ಲಿ ಅವರ ಪತ್ನಿ ಅಮಂಡಾ ಅವರ ಮಕ್ಕಳು, ತಂದೆ ಜೆಫ್ ಮತ್ತು ಅವರ ಎಲ್ಲಾ ಕುಟುಂಬ ಮತ್ತು ಸ್ನೇಹಿತರಿಗೆ ನಮ್ಮ ಹೃದಯಗಳು ಮಿಡಿಯುತ್ತವೆ. ಕ್ರೀಡೆಗೆ ಗ್ರಹಾಂ ಅವರ ಅಸಾಧಾರಣ ಕೊಡುಗೆಗಳಿಗಾಗಿ ನಾವು ಯಾವಾಗಲೂ ಅವರನ್ನು ನೆನಪಿಸಿಕೊಳ್ಳುತ್ತೇವೆ, “ಎಂದು ಇಸಿಬಿ ಹೇಳಿಕೆಯಲ್ಲಿ ತಿಳಿಸಿದೆ.

ಗ್ರಹಾಂ ಥಾರ್ಪ್ ಸಾಧನೆಗಳು

ಗ್ರಹಾಂ ಥಾರ್ಪ್ 1988 ರ ಬೇಸಿಗೆಯಲ್ಲಿ ಸರ್ರೆ ಪರ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು ಮತ್ತು 1989 ರ ಋತುವಿನಲ್ಲಿ ನಿಯಮಿತ ಆಟಗಾರರಾದರು. 1993ರಲ್ಲಿ ತಮ್ಮ 24ನೇ ವಯಸ್ಸಿನಲ್ಲಿ ಇಂಗ್ಲೆಂಡ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಅವರು, ಟ್ರೆಂಟ್ ಬ್ರಿಜ್​​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 114 ರನ್ ಬಾರಿಸಿದ್ದರು.

ಥೋರ್ಪ್ 2002 ರಲ್ಲಿ ಕ್ರೈಸ್ಟ್​​ಚೈರ್ಚ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅಜೇಯ ದ್ವಿಶತಕದೊಂದಿಗೆ ಇಂಗ್ಲೆಂಡ್​ನ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಆಟಗಾರರಾದರು. ಈ ಇನ್ನಿಂಗ್ಸ್ ನಲ್ಲಿ 28 ಬೌಂಡರಿಗಳು ಮತ್ತು ನಾಲ್ಕು ಸಿಕ್ಸರ್​​ಗಳು ಸೇರಿವೆ.

ಅಂತಾರಾಷ್ಟ್ರೀಯ ವೃತ್ತಿಜೀವನವು ಉತ್ತಮ ಪ್ರದರ್ಶನಗಳಿಂದ ಗುರುತಿಸಲ್ಪಟ್ಟಿದ್ದರೂ ಅವರು 2005ರಲ್ಲಿ ಇಂಗ್ಲೆಂಡ್​ ತಂಡದಿಂದ ನಿವೃತ್ತಿ ಪಡೆದುಕೊಂಡರು. ಥಾರ್ಪ್ ನಂತರ ಆರಂಭದಲ್ಲಿ ಆಸ್ಟ್ರೇಲಿಯಾದಲ್ಲಿ ಕೋಚಿಂಗ್​​ ಹುದ್ದೆ ವಹಿಸಿಕೊಂಡರು. ಅಲ್ಲಿ ಅವರು ನ್ಯೂ ಸೌತ್ ವೇಲ್ಸ್​ನಲ್ಲಿ ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಅವರಂತಹ ಆಟಗಾರರಿಗೆ ಮಾರ್ಗದರ್ಶನ ನೀಡಿದ್ದರು. . ನಂತರ ಅವರು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ ಬ್ಯಾಟಿಂಗ್ ತರಬೇತುದಾರರಾಗಿ ಸೇರಿಕೊಂಡರು.

ಇದನ್ನೂ ಓದಿ: Washington Sundar : ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ವಾಷಿಂಗ್ಟನ್ ಸುಂದರ್ ನಾಮನಿರ್ದೇಶನ

ಮಾರ್ಚ್ 2022 ರಲ್ಲಿ, ಥೋರ್ಪ್ ಅವರನ್ನು ಅಫ್ಘಾನಿಸ್ತಾನದ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ನೇಮಿಸಲಾಯಿತು ಆದರೆ ಅನಾರೋಗ್ಯದಿಂದಾಗಿ ಅವರು ಈ ಪಾತ್ರವನ್ನು ವಹಿಸಲು ಸಾಧ್ಯವಾಗಲಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಕಂಚು ಕಳೆದುಕೊಂಡ ಲಕ್ಷ್ಯ ಸೇನ್​​; 2008ರ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಬ್ಯಾಡ್ಮಿಂಟನ್​ನಲ್ಲಿ ಪದಕವಿಲ್ಲ

Paris Olympics 2024 : ಆರಂಭಿಕ ಗೇಮ್ ನಲ್ಲಿ ಮಾಜಿ ಆಲ್ ಇಂಗ್ಲೆಂಡ್ ಚಾಂಪಿಯನ್ ಲೀ ಅವರನ್ನು 21-13ರಿಂದ ಮಣಿಸಿದ ಲಕ್ಷ್ಯ ಸೇನ್ ಉತ್ತಮ ಆರಂಭ ಕಂಡರು. ಆದಾಗ್ಯೂ, ಎರಡನೇ ಮತ್ತು ಮೂರನೇ ಗೇಮ್ ಗಳಲ್ಲಿ ಲೀ ತನ್ನ ಅನುಭವ ಬಳಸಿಕೊಂಡರು. ಲಕ್ಷ್ಯ ಅವರ ಆಕ್ರಮಣಕಾರಿ ಆಟಕ್ಕೆ ಸರಿಯಾಗಿ ಸೆಡ್ಡು ಹೊಡೆದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಭಾರತದ ಯುವ ಷಟ್ಲರ್​ ಲಕ್ಷ್ಯ ಸೇನ್​ ಪ್ಯಾರಿಸ್​ ಒಲಿಂಪಿಕ್ಸ್ (Paris Olympics 2024) ಕಂಚಿನ ಪದಕವನ್ನೂ ಕಳೆದುಕೊಂಡಿದ್ದಾರೆ. ಪುರುಷರ ಸಿಂಗಲ್ಸ್​ನ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ 22 ವರ್ಷದ ಶಟ್ಲರ್ ಮಲೇಷ್ಯಾದ ಲೀ ಜಿ ಜಿಯಾ ವಿರುದ್ಧ 21-13, 16-21, 11-21 ಅಂತರದಲ್ಲಿ ಸೋತರು. 71 ನಿಮಿಷಗಳ ಪಂದ್ಯದ ನಡುವೆ ಗಾಯಗೊಂಡ ಅವರು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗದೇ ಸೋಲೊಪ್ಪಿಕೊಂಡರು. ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಇದು ಭಾರತಕ್ಕೆ ಮತ್ತೊಂದು ಆಘಾತ ಹಾಗೂ ಕಳೆದ 12 ವರ್ಷಗಳಲ್ಲಿ ಮೊದಲ ಬಾರಿಗೆ ಬ್ಯಾಡ್ಮಿಂಟನ್​ನಲ್ಲಿ ಭಾರತಕ್ಕೆ ಪದಕ ಸಿಕ್ಕಿಲ್ಲ.

ಆರಂಭಿಕ ಗೇಮ್ ನಲ್ಲಿ ಮಾಜಿ ಆಲ್ ಇಂಗ್ಲೆಂಡ್ ಚಾಂಪಿಯನ್ ಲೀ ಅವರನ್ನು 21-13ರಿಂದ ಮಣಿಸಿದ ಲಕ್ಷ್ಯ ಸೇನ್ ಉತ್ತಮ ಆರಂಭ ಕಂಡರು. ಆದಾಗ್ಯೂ, ಎರಡನೇ ಮತ್ತು ಮೂರನೇ ಗೇಮ್ ಗಳಲ್ಲಿ ಲೀ ತನ್ನ ಅನುಭವ ಬಳಸಿಕೊಂಡರು. ಲಕ್ಷ್ಯ ಅವರ ಆಕ್ರಮಣಕಾರಿ ಆಟಕ್ಕೆ ಸರಿಯಾಗಿ ಸೆಡ್ಡು ಹೊಡೆದರು.

ಪ್ಯಾರಿಸ್​ನಲ್ಲಿ ತನ್ನ ಕನಸಿನ ಓಟವನ್ನು ಕಹಿ ಸೋಲಿನೊಂದಿಗೆ ಮುಗಿಸಿದರು. ಲಕ್ಷ್ಯ ಸೇನ್ ಕಳೆದ ವಾರ ಉನ್ನತ ಶ್ರೇಯಾಂಕದ ಚೌ ಟಿಯೆನ್ ಚೆನ್ ಅವರನ್ನು ಸೋಲಿಸಿದ ನಂತರ ಒಲಿಂಪಿಕ್ಸ್​ನಲ್ಲಿ ಬ್ಯಾಡ್ಮಿಂಟನ್ ಸಿಂಗಲ್ಸ್ ಸೆಮಿಫೈನಲ್ ತಲುಪಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದಾಗ್ಯೂ, ಅವರು ಟೋಕಿಯೊ ಒಲಿಂಪಿಕ್ ಚಾಂಪಿಯನ್ ವಿಕ್ಟರ್ ಅಕ್ಸೆಲ್ಸೆನ್ ವಿರುದ್ಧ ನೇರ ಗೇಮ್ಸ್​ಗಳಲ್ಲಿ ಸೋತರು. ಕ್ರೀಡಾಕೂಟದಲ್ಲಿ ತಮ್ಮ ಕೊನೆಯ ಪಂದ್ಯದಲ್ಲಿ ಉನ್ನತ ಶ್ರೇಯಾಂಕದ ಲೀ ವಿರುದ್ಧ ಸೋತರು.

ಇದನ್ನೂ ಓದಿ: Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

ಕಂಚಿನ ಪದಕದ ಪಂದ್ಯದಲ್ಲಿ ಲಕ್ಷ್ಯ ಸೇನ್ ಸೋತ ನಂತರ, ಭಾರತೀಯ ಷಟ್ಲರ್​ಗಳು ಪ್ಯಾರಿಸ್ ಒಲಿಂಪಿಕ್ಸ್​ನಿಂದ ಬರಿಗೈಯಲ್ಲಿ ಮರಳಲಿದ್ದಾರೆ. 2008ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಒಲಿಂಪಿಕ್ಸ್​ನಲ್ಲಿ ಬ್ಯಾಡ್ಮಿಂಟನ್ ಪದಕ ಗೆಲ್ಲಲು ವಿಫಲವಾಗಿದೆ. ಸೈನಾ ನೆಹ್ವಾಲ್ ಲಂಡನ್ ಕ್ರೀಡಾಕೂಟದಲ್ಲಿ ಕಂಚು ಗೆದ್ದರೆ, ಪಿ.ವಿ.ಸಿಂಧು 2016 ರ ರಿಯೋದಲ್ಲಿ ಬೆಳ್ಳಿ ಮತ್ತು 2021 ರಲ್ಲಿ ಟೋಕಿಯೊದಲ್ಲಿ ಕಂಚು ಗೆದ್ದಿದ್ದರು.

Continue Reading

ಪ್ರಮುಖ ಸುದ್ದಿ

Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

Paris Olympics 2024 :

VISTARANEWS.COM


on

Paris Olympics 2024
Koo

ಬೆಂಗಳೂರು: ಹಾಲಿ ಒಲಿಂಪಿಕ್ ಚಾಂಪಿಯನ್ ಜಾವೆಲಿನ್​ ಎಸೆತಗಾಗ ನೀರಜ್ ಚೋಪ್ರಾ ಮಂಗಳವಾರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ತಮ್ಮ ಪ್ರಶಸ್ತಿ ಉಳಿಸಿಕೊಳ್ಳುವುದಕ್ಕೆ ಸ್ಪರ್ಧೆ ಪ್ರಾರಂಭಿಸಲಿದ್ದಾರೆ. ಚೋಪ್ರಾ ಮತ್ತು ಕಿಶೋರ್ ಕುಮಾರ್ ಜೆನಾ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿಯಲಿದ್ದಾರೆ. ಇದೇ ವೇಳೆ ಹಾಕಿಯಲ್ಲಿ ದೊಡ್ಡ ಪಂದ್ಯವೂ ಇದೆ. ಭಾರತೀಯ ಪುರುಷರ ತಂಡವು ಫೈನಲ್​ಗೆ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಲು ಎದುರು ನೋಡುತ್ತಿದೆ. ಹರ್ಮನ್ ಪ್ರೀತ್ ಸಿಂಗ್ ಪಡೆ ಸೆಮಿಫೈನಲ್​ನಲ್ಲಿ ವಿಶ್ವ ಚಾಂಪಿಯನ್ ಜರ್ಮನಿಯನ್ನು ಎದುರಿಸಲಿದೆ. ಈ ಟಾಸ್ಕ್ ಸುಲಭವಲ್ಲ. ಆದರೆ ಪುರುಷರ ತಂಡವು ಆಸ್ಟ್ರೇಲಿಯಾ ಮತ್ತು ಗ್ರೇಟ್ ಬ್ರಿಟನ್ ವಿರುದ್ಧ ಎರಡು ಅದ್ಭುತ ಪ್ರದರ್ಶನಗಳನ್ನು ನೀಡಿ ಸೆಮಿಫೈನಲ್ ಗೆ ಪ್ರವೇಶಿಸಿದೆ.

ಮಂಗಳವಾರ ಕುಸ್ತಿಪಟು ವಿನೇಶ್ ಫೋಗಟ್ ಕೂಡ ಕಣಕ್ಕಿಳಿಯಲಿದ್ದು, ಸತತ ಮೂರು ಒಲಿಂಪಿಕ್ ಅಭಿಯಾನಗಳಲ್ಲಿ ಸ್ಪರ್ಧಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 16ರ ಸುತ್ತಿನಲ್ಲಿ ತಮ್ಮ ಅಭಿಯಾನ ಪ್ರಾರಂಭಿಸುತ್ತಾರೆ.

ಆಗಸ್ಟ್ 6, ಭಾರತದ ವೇಳಾಪಟ್ಟಿಯ ನೋಟ ಇಲ್ಲಿದೆ

ಮಧ್ಯಾಹ್ನ 1:30: ಟೇಬಲ್ ಟೆನಿಸ್ – ಪುರುಷರ ತಂಡ ಸುತ್ತಿನ 16 ಪಂದ್ಯದಲ್ಲಿ ಭಾರತ ಮತ್ತು ಚೀನಾ.

ಭಾರತದ ಶರತ್ ಕಮಲ್, ಹರ್ಮೀತ್ ದೇಸಾಯಿ ಮತ್ತು ಮಾನವ್ ಠಕ್ಕರ್ ಕ್ವಾರ್ಟರ್ ಫೈನಲ್​​ನಲ್ಲಿ ಅಗ್ರ ಶ್ರೇಯಾಂಕಿತ ಮತ್ತು ಚಿನ್ನದ ಪದಕ ನೆಚ್ಚಿನ ತಂಡವಾಗಿರುವ ಚೀನಾವನ್ನು ಎದುರಿಸಲಿದ್ದಾರೆ. ಚೀನಾದ ತಂಡವನ್ನು ಫ್ಯಾನ್ ಝೆಂಡಾಂಗ್, ಮಾ ಲಾಂಗ್ ಮತ್ತು ವಾನ್ಫ್ಗ್ ಚುಕಿನ್ ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: A R Rahman : ಒಲಿಂಪಿಕ್ಸ್ ನಡುವೆಯೇ ವೈರಲ್ ಆಯ್ತು ಎಆರ್​ ರೆಹಮಾನ್ ಸಂಗೀತದ’ ತಾಲ್​ ಸೆ ತಾಲ್​’ ಹಾಡು; ಪ್ರತಿಕ್ರಿಯೆ ನೀಡಿದ ಚಿತ್ರ ನಿರ್ದೇಶಕ

ಮಧ್ಯಾಹ್ನ 1:50: ಅಥ್ಲೆಟಿಕ್ಸ್ – ಪುರುಷರ ಜಾವೆಲಿನ್ ಥ್ರೋ ಅರ್ಹತೆ ಸುತ್ತಿನಲ್ಲಿ ನೀರಜ್ ಚೋಪ್ರಾ ಮತ್ತು ಕಿಶೋರ್ ಜೆನಾ. ಜೆನಾ ಎ ಗುಂಪಿನಲ್ಲಿದ್ದಾರೆ, ಅಂದರೆ ಅವರ ಅರ್ಹತೆ 1:50 ಕ್ಕೆ ಪ್ರಾರಂಭವಾಗುತ್ತದೆ. ನೀರಜ್ ‘ಬಿ’ ಗುಂಪಿನಲ್ಲಿದ್ದು, ಅರ್ಹತಾ ಸುತ್ತು ಮಧ್ಯಾಹ್ನ 3.20ಕ್ಕೆ ಆರಂಭವಾಗಲಿದೆ. 84 ಮೀಟರ್ ಅರ್ಹತಾ ಮಾನದಂಡವನ್ನು ಪೂರೈಸುವ ಕ್ರೀಡಾಪಟುಗಳು ಅಥವಾ ಅಗ್ರ 12 ಎಸೆತಗಾರರು ಫೈನಲ್​​ಗೆ ಪ್ರವೇಶಿಸುತ್ತಾರೆ.

ಮಧ್ಯಾಹ್ನ 2:50 : ಅಥ್ಲೆಟಿಕ್ಸ್ – ಕಿರಣ್ ಪಹಲ್ ಮಹಿಳೆಯರ 400 ಮೀಟರ್ ರೆಪೆಚೇಜ್ ಸುತ್ತಿನಲ್ಲಿ ಸ್ಪರ್ಧಿಸಲಿದ್ದಾರೆ. ಇಲ್ಲಿ, ಪ್ರತಿ ರಿಪೆಚೇಜ್ ಸುತ್ತಿನ ವಿಜೇತರು ಮತ್ತು ಮುಂದಿನ ಇಬ್ಬರು ವೇಗವಾಗಿ ಸೆಮಿಫೈನಲ್ ಗೆ ಅರ್ಹತೆ ಪಡೆಯುತ್ತಾರೆ.

ಮಧ್ಯಾಹ್ನ 3 ಗಂಟೆಯಿಂದ: ಕುಸ್ತಿ – ಮಹಿಳೆಯರ 50 ಕೆ.ಜಿ ಫ್ರೀಸ್ಟೈಲ್ ಪ್ರಿ ಕ್ವಾರ್ಟರ್ ಫೈನಲ್ಸ್​ನಲ್ಲಿ ವಿನೇಶ್ ಫೋಗಟ್ ಸ್ಪರ್ಧಿಸಲಿದ್ದಾರೆ. ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳು ಒಂದೇ ದಿನ ನಡೆಯಲಿದ್ದು, ವಿನೇಶ್ ಪದಕ ಸುತ್ತಿಗೆ ಅರ್ಹತೆ ಪಡೆಯಬಹುದು.

ಸಂಜೆ 6:30: ಟೇಬಲ್ ಟೆನಿಸ್: ಮಹಿಳಾ ತಂಡ ಕ್ವಾರ್ಟರ್ ಫೈನಲ್​​ ಪಂದ್ಯ; ಭಾರತ ಮತ್ತು ಯುಎಸ್ಎ ಅಥವಾ ಜರ್ಮನಿ.

ರಾತ್ರಿ 10:30: ಪುರುಷರ ಹಾಕಿ ಸೆಮಿಫೈನಲ್​ನಲ್ಲಿ ಭಾರತ ಮತ್ತು ಜರ್ಮನಿ ಸ್ಪರ್ಧಿಸಲಿದೆ.

Continue Reading

ಸಿನಿಮಾ

Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

Martin Trailer: ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಇದೀಗ ಹಲವು ಭಾಷೆಗಳಲ್ಲಿ, ಮಾರ್ಟಿನ್‌ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಇನ್ನು ಧ್ರುವ ಸರ್ಜಾ ಆ್ಯಕ್ಷನ್‌ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Martin Trailer
Koo

ಮುಂಬೈ: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಎಂದೇ ಖ್ಯಾತಿಯಾಗಿರುವ ಮಾರ್ಟಿನ್‌ ಸಿನಿಮಾದ ಟ್ರೈಲರ್‌ (Martin Trailer) ಮುಂಬೈನಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಸುದ್ದಿಗೋಷ್ಠಿಯಲ್ಲಿ, ದೇಶ-ವಿದೇಶಗಳ ಪತ್ರಕರ್ತರ ಸಮ್ಮುಖದಲ್ಲಿ ಮಾರ್ಟಿನ್‌ ಟ್ರೈಲರ್‌ ಔಟ್‌ ಆಗಿದೆ. ಪಾಕಿಸ್ತಾನದ ನೆಲದಲ್ಲಿ ಧ್ರುವ ಸರ್ಜಾ ಪ್ರದರ್ಶಿಸುವ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿ ಭಾರತದ ಹಲವು ರಾಜ್ಯಗಳು ಹಾಗೂ ಜಗತ್ತಿನ 22 ದೇಶಗಳ ಪತ್ರಕರ್ತರು, ಗಣ್ಯರ ಸಮ್ಮುಖದಲ್ಲಿ ಟ್ರೈಲರ್‌ಅನ್ನು ಲಾಂಚ್‌ ಮಾಡಲಾಗಿದೆ. ನಿರ್ದೇಶಕ ಎ.ಪಿ.ಅರ್ಜುನ್‌, ನಟ ಅರ್ಜುನ್‌ ಸರ್ಜಾ, ನಿರ್ಮಾಪಕ ಉದಯ್‌ ಮೆಹ್ತಾ ಸೇರಿ ಚಿತ್ರತಂಡದ ಹಲವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕನ್ನಡ, ಹಿಂದಿ, ಮಲಯಾಳಂ, ತಮಿಳು ಸೇರಿ ಒಟ್ಟು 13 ಭಾಷೆಗಳಲ್ಲಿ ಮಾರ್ಟಿನ್‌ ಟ್ರೈಲರ್‌ ರಿಲೀಸ್‌ ಆಗಿದೆ. ಟ್ರೈಲರ್‌ ವೀಕ್ಷಿಸಿದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಭರಪೂರ ಆ್ಯಕ್ಷನ್‌ ದೃಶ್ಯಗಳು, ಭರ್ಜರಿ ಡೈಲಾಗ್‌, ಅಬ್ಬರದ ಫೈಟಿಂಗ್‌ಅನ್ನು ಸಿನಿಮಾ ಹೊಂದಿದೆ ಎಂಬ ದೊಡ್ಡ ಸಂದೇಶವನ್ನು ಸಿನಿಮಾ ತಂಡವು ಟ್ರೈಲರ್‌ ಮೂಲಕ ರವಾನಿಸಿದೆ. ಅಭಿಮಾನಿಗಳ ಆಸೆಯಂತೆ ಪೋಲಿಂಗ್ ಮೂಲಕ ಟ್ರೈಲರ್ ಆಯ್ಕೆ ಮಾಡಲಾಯಿತು. ಮುಂಬೈನ ಅಂಧೇರಿಯ ಪಿವಿಆರ್ ಸಿಟಿ‌ ಮಾಲ್‌ನಲ್ಲಿ ಮಾರ್ಟಿನ್ ಇಂಟರ್ ನ್ಯಾಷನಲ್ ಪ್ರೆಸ್‌ ಮೀಟ್‌ ನಡೆಯಿತು. ಜಪಾನ್‌, ಚೀನಾ, ಅಮೆರಿಕ, ದುಬೈ, ರಷ್ಯಾ, ಬ್ರಿಟನ್‌ ಸೇರಿ ಹಲವು ದೇಶಗಳ ಪತ್ರಕರ್ತರು ಭಾಗವಹಿಸಿದ್ದರು. ಅಕ್ಟೋಬರ್‌ 11ರಂದು ಸಿನಿಮಾ ಬಿಡುಗಡೆಯಾಗಲಿದೆ.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈಗ ಹಲವು ಭಾಷೆಗಳಲ್ಲಿ, ಮಾರ್ಟಿನ್‌ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Dhruva Sarja:  ಧ್ರುವ ಸರ್ಜಾ ಕಂಡು ʻಡಿ ಬಾಸ್’ ಎಂದು ಕೂಗಿದ ದರ್ಶನ್ ಫ್ಯಾನ್ಸ್; ಭರದಿಂದ ಸಾಗಿದೆ ‘ಮಾರ್ಟಿನ್’ ಪ್ರಚಾರ!

Continue Reading

ಪ್ರಮುಖ ಸುದ್ದಿ

A R Rahman : ಒಲಿಂಪಿಕ್ಸ್ ನಡುವೆಯೇ ವೈರಲ್ ಆಯ್ತು ಎಆರ್​ ರೆಹಮಾನ್ ಸಂಗೀತದ’ ತಾಲ್​ ಸೆ ತಾಲ್​’ ಹಾಡು; ಪ್ರತಿಕ್ರಿಯೆ ನೀಡಿದ ಚಿತ್ರ ನಿರ್ದೇಶಕ

A R Rahman: ತಾಲ್​​ನಂಥ ಹಿಂದಿ ಚಲನಚಿತ್ರ ಥೀಮ್ ಮ್ಯೂಸಿಕ್ ಅಪ್ರತಿಮ ಹಾಗೂ ಇದು ಅಪರೂಪ ಎಂದು ಸುಭಾಷ್ ಸೋಮವಾರ ಟ್ವೀಟ್ ಮಾಡಿದ್ದಾರೆ. ಐಶ್ವರ್ಯಾ ರೈ, ಅಕ್ಷಯ್ ಖನ್ನಾ ಮತ್ತು ಅನಿಲ್ ಕಪೂರ್ ನಟಿಸಿದ 1999ರ ಚಿತ್ರದ ನಿರ್ದೇಶಕ ಸುಭಾಷ್ ಘಾಯ್​​, “ಇದನ್ನು ವರ್ಲ್ಡ್ ಅಕ್ವಾಟಿಕ್ಸ್ ದೋಹಾ 2024ರಲ್ಲಿ ಬಳಸಲಾಗಿದೆ. ಇದು ಯುಎಸ್ಎ ಆರ್ಟಿಸ್ಟಿಕ್ ಈಜು ತಂಡಕ್ಕೆ ಈ ಹಾಡು ಸ್ಫೂರ್ತಿ ನೀಡಿತ್ತು. ಹೀಗಾಗಿ ನಾನು ಧನ್ಯ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಒಂಡಿದ್ದಾರೆ.

VISTARANEWS.COM


on

A R Rahman
Koo

ಬೆಂಗಳೂರು: ಎ. ಆರ್​ ರೆಹಮಾನ್ (A R Rahman) ಸಂಗೀತದ ‘ತಾಲ್​ ಸೆ ತಾಲ್​’ ಹಾಡಿಗೆ ಅಮೆರಿಕದ ಈಜುಪಟುಗಳು ಆರ್ಟಿಸ್ಟಿಕ್ ಸ್ವಿಮ್ಮಿಂಗ್​ ಸ್ಪರ್ಧೆಯಲ್ಲಿ ಬಳಸಿರುವ ವಿಡಿಯೊ ಈಗ ವೈರಲ್​ ಆಗಿದೆ. ಆದರೆ ಅದು ಹಳೆಯ ವಿಡಿಯೊ ಎಂಬುದು ಈಗ ಗೊತ್ತಾಗಿದೆ. ಈ ಬಗ್ಗೆ ಸಿನಿಮಾದ ನಿರ್ದೇಶಕ ಸುಭಾಷ್ ಘಾಯ್ ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. 2024ರ ವರ್ಲ್ಡ್ ಅಕ್ವಾಟಿಕ್ಸ್ ದೋಹಾ 2024ರಲ್ಲಿ ಸಿನಿಮಾದ ತಾಲ್ ಸೆ ತಾಲ್​ ಹಾಡನ್ನು ಬಳಸಲಾಗಿದೆ. ಮೂಲ ತಾಲ್ ಹಾಡಿನಲ್ಲಿ ಐಶ್ವರ್ಯಾ ರೈ ನೃತ್ಯ ಮಾಡಿದ್ದರೆ ಅಲ್ಕಾ ಯಾಗ್ನಿಕ್ ಮತ್ತು ಉದಿತ್ ನಾರಾಯಣ್ ಹಾಡಿದ್ದರು.

ತಾಲ್​​ನಂಥ ಹಿಂದಿ ಚಲನಚಿತ್ರ ಥೀಮ್ ಮ್ಯೂಸಿಕ್ ಅಪ್ರತಿಮ ಹಾಗೂ ಇದು ಅಪರೂಪ ಎಂದು ಸುಭಾಷ್ ಸೋಮವಾರ ಟ್ವೀಟ್ ಮಾಡಿದ್ದಾರೆ. ಐಶ್ವರ್ಯಾ ರೈ, ಅಕ್ಷಯ್ ಖನ್ನಾ ಮತ್ತು ಅನಿಲ್ ಕಪೂರ್ ನಟಿಸಿದ 1999ರ ಚಿತ್ರದ ನಿರ್ದೇಶಕ ಸುಭಾಷ್ ಘಾಯ್​​, “ಇದನ್ನು ವರ್ಲ್ಡ್ ಅಕ್ವಾಟಿಕ್ಸ್ ದೋಹಾ 2024ರಲ್ಲಿ ಬಳಸಲಾಗಿದೆ. ಇದು ಯುಎಸ್ಎ ಆರ್ಟಿಸ್ಟಿಕ್ ಈಜು ತಂಡಕ್ಕೆ ಈ ಹಾಡು ಸ್ಫೂರ್ತಿ ನೀಡಿತ್ತು. ಹೀಗಾಗಿ ನಾನು ಧನ್ಯ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಒಂಡಿದ್ದಾರೆ.

ವಿಶ್ವ ಅಕ್ವಾಟಿಕ್ಸ್ ಚಾಂಪಿಯನ್ಶಿಪ್ 2024 ಫೆಬ್ರವರಿ 2-18 ರ ನಡುವೆ ದೋಹಾದಲ್ಲಿ ನಡೆಯಿತು, ಹಲವಾರು ಕ್ರೀಡಾಪಟುಗಳು ಪ್ಯಾರಿಸ್ 2024 ಒಲಿಂಪಿಕ್ ಕೋಟಾ ಸ್ಥಾನಗಳನ್ನು ಇಲ್ಲಿ ಪಡೆದುಕೊಂಡಿದ್ದಾರೆ.

ಈಜು ತಂಡ ಪ್ರದರ್ಶನ ವೀಕ್ಷಿಸಿ

ಭಾನುವಾರ ಫ್ಯಾನ್ ಪೇಜ್ ಹಂಚಿಕೊಂಡ ವೀಡಿಯೊದಲ್ಲಿ, ಯುಎಸ್ ಮಹಿಳಾ ಈಜುಗಾರ್ತಿಯರ ಗುಂಪು ತಾಲ್ ಸೆ ತಾಲ್​​​ನ ವಾದ್ಯ ಆವೃತ್ತಿಯನ್ನು ನುಡಿಸುತ್ತಿದ್ದಂತೆ ನೀರೊಳಗಿನ ಅದ್ಭುತ ಸಿಂಕ್ರೊನೈಸೇಶನ್ ಅನ್ನು ಪ್ರದರ್ಶಿಸಿತು. “ತಾಲ್ ಸೆ ತಾಲ್ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೂಕ್ತ. ಎ.ಆರ್.ರೆಹಮಾನ್ ನಿಜವಾಗಿಯೂ ಭಾರತೀಯ ಸಂಗೀತದ ಮುಖ” ಎಂದು ಎಕ್ಸ್ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಅವ್ಯವಸ್ಥೆ; ಬೀದಿ ಬದಿ ಮಲಗಿ ನಿದ್ದೆ ಮಾಡಿದ ಚಿನ್ನದ ಪದಕ ವಿಜೇತ ಈಜುಪಟು

ಇದು ಎಲ್ಲಾ ಭಾರತೀಯರಿಗೆ ಮತ್ತು ಖಂಡಿತವಾಗಿಯೂ ಭಾರತೀಯ ಸಂಗೀತಕ್ಕೆ ಹೆಮ್ಮೆಯ ಕ್ಷಣ ಎಂದು ಇನ್ನೊಬ್ಬರು ಹೇಳಿದರು. “ಇದು ಹಳೆಯ ವೀಡಿಯೊ, ಆದರೆ ಸುಂದರವಾಗಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದರು. ಕೆಲವರು ವೀಡಿಯೊದ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದು ನಕಲಿ ವೀಡಿಯೊ, ಇದಕ್ಕೆ ಭಾರತೀಯ ಸಂಗೀತವನ್ನು ಸೇರಿಸಲಾಗಿದೆ. ಅದನ್ನು ಸಂಪಾದಿಸಲಾಗಿದೆಯೇ ಹೊರತು ಮೂಲವಲ್ಲ.”

ನಾಟಕ ತಾಲ್ ನಲ್ಲಿ ಐಶ್ವರ್ಯಾ, ಅನಿಲ್, ಅಕ್ಷಯ್ ಮುಖ್ಯ ಪಾತ್ರಗಳಲ್ಲಿ ಮತ್ತು ಅಮರೀಶ್ ಪುರಿ ಮತ್ತು ಅಲೋಕ್ ನಾಥ್ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ನಂತರ ತಮಿಳಿಗೆ ಡಬ್ ಮಾಡಲಾಯಿತು ಮತ್ತು ಅದಕ್ಕೆ ಥಾಲಂ ಎಂದು ಹೆಸರಿಸಲಾಯಿತು. ತಾಲ್ ಚಿತ್ರಕ್ಕಾಗಿ ಅನಿಲ್, ಎ.ಆರ್.ರೆಹಮಾನ್, ಅಲ್ಕಾ ಯಾಗ್ನಿಕ್ ಮತ್ತು ಆನಂದ್ ಬಕ್ಷಿ ತಲಾ 2000 ರಲ್ಲಿ ಫಿಲ್ಮ್​ಫೇರ್​ ಪ್ರಶಸ್ತಿಯನ್ನು ಪಡೆದರು.

Continue Reading
Advertisement
Paris Olympics 2024
ಪ್ರಮುಖ ಸುದ್ದಿ10 mins ago

Paris Olympics 2024 : ಕಂಚು ಕಳೆದುಕೊಂಡ ಲಕ್ಷ್ಯ ಸೇನ್​​; 2008ರ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಬ್ಯಾಡ್ಮಿಂಟನ್​ನಲ್ಲಿ ಪದಕವಿಲ್ಲ

shravan 2024
Latest41 mins ago

Shravan 2024: ಶ್ರಾವಣ ಮಾಸದಲ್ಲೇಕೆ ಮಾಂಸಾಹಾರ ಮಾಡಬಾರದು? ಇದಕ್ಕಿದೆ ವೈಜ್ಞಾನಿಕ ಕಾರಣ!

Paris Olympics 2024
ಪ್ರಮುಖ ಸುದ್ದಿ44 mins ago

Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

Viral Video
Latest47 mins ago

Viral Video: ಮಗನನ್ನೇ ಹೊಡೆದು ಕೊಂದು, ಸುಟ್ಟು ಹಾಕಿ ಕೊಳಕ್ಕೆ ಎಸೆದ ತಂದೆ-ತಾಯಿ; ಹೃದಯ ತಲ್ಲಣಿಸುವ ವಿಡಿಯೊ

Viral Video
Latest58 mins ago

Viral Video: ಎಸ್ಕಲೇಟರ್ ಮೇಲೆ ಮಗುವನ್ನು ನಿಲ್ಲಿಸಲು ತಾಯಿಯ ಕಸತ್ತು; ಮುಂದೇನಾಯ್ತು ನೋಡಿ

Martin Trailer
ಸಿನಿಮಾ1 hour ago

Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

A R Rahman
ಪ್ರಮುಖ ಸುದ್ದಿ1 hour ago

A R Rahman : ಒಲಿಂಪಿಕ್ಸ್ ನಡುವೆಯೇ ವೈರಲ್ ಆಯ್ತು ಎಆರ್​ ರೆಹಮಾನ್ ಸಂಗೀತದ’ ತಾಲ್​ ಸೆ ತಾಲ್​’ ಹಾಡು; ಪ್ರತಿಕ್ರಿಯೆ ನೀಡಿದ ಚಿತ್ರ ನಿರ್ದೇಶಕ

Rescue the injured national bird Peacock at gangavathi
ಕೊಪ್ಪಳ1 hour ago

Koppala News: ವಿದ್ಯುತ್‌ ತಂತಿಗೆ ತಗುಲಿ ಗಾಯಗೊಂಡಿದ್ದ ನವಿಲಿನ ರಕ್ಷಣೆ

Free eye checkup and surgery camp at Hagaribommanahalli
ವಿಜಯನಗರ1 hour ago

Vijayanagara News: ಹಗರಿಬೊಮ್ಮನಹಳ್ಳಿಯಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

KAS prelims exam
ಕರ್ನಾಟಕ1 hour ago

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌