Independence Day 2024: ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೇಳಲೇಬೇಕಾದ ಟಾಪ್‌ 10 ದೇಶಭಕ್ತಿ ಗೀತೆಗಳಿವು - Vistara News

ದೇಶ

Independence Day 2024: ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೇಳಲೇಬೇಕಾದ ಟಾಪ್‌ 10 ದೇಶಭಕ್ತಿ ಗೀತೆಗಳಿವು

ದೇಶಾದ್ಯಂತ ಈ ಬಾರಿ 78ನೇ ಸ್ವಾತಂತ್ರ್ಯ ದಿನವನ್ನು (Independence Day 2024) ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕೇಳಲು ಮತ್ತು ಹಾಡಲು ಇಷ್ಟಪಡುವ 10 ಪ್ರಮುಖ ಹಿಂದಿ ದೇಶಭಕ್ತಿ ಗೀತೆಗಳ ಕುರಿತು ಮಾಹಿತಿ ಇಲ್ಲಿದೆ. ಇದನ್ನು ಅಭ್ಯಾಸ ಮಾಡಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನೀವೂ ಹಾಡಬಹುದು.

VISTARANEWS.COM


on

Independence Day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇಶ (india) ಈಗ 78ನೇ ಸ್ವಾತಂತ್ರ್ಯ ದಿನದ (Independence Day 2024) ಸಂಭ್ರಮದಲ್ಲಿದೆ. ಈಗಾಗಲೇ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಆಚರಣೆಯ ಸಿದ್ಧತೆಗಳು ದೇಶಾದ್ಯಂತ ಜೋರಾಗಿಯೇ ನಡೆಯುತ್ತಿದೆ. ಬಹುತೇಕ ಮಂದಿಯ ದಿನದ ಕಾರ್ಯಕ್ರಮದ ಪಟ್ಟಿ ಸಿದ್ಧವಾಗಿದೆ. ದೇಶಾದ್ಯಂತ ವಿವಿಧ ಸ್ಪರ್ಧೆಗಳನ್ನು (Various competitions) ಆಯೋಜಿಸಿ ಎಲ್ಲರೂ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿ ಈ ದಿನದ ಸಂಭ್ರವನ್ನು ಮತ್ತಷ್ಟು ಹೆಚ್ಚಿಸಲಾಗುತ್ತದೆ.

1947ರಲ್ಲಿ ಬ್ರಿಟಿಷರ ಆಳ್ವಿಕೆಯಿಂದ ಭಾರತದ ಸ್ವಾತಂತ್ರ್ಯವನ್ನು ಸ್ಮರಣಾರ್ಥವಾಗಿ ಭಾರತದಲ್ಲಿ ಸ್ವಾತಂತ್ರ್ಯ ದಿನವನ್ನು ಪ್ರತಿ ವರ್ಷ ಅತ್ಯಂತ ಗೌರವ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ದಿನವನ್ನು ಮೆರವಣಿಗೆ, ವಿವಿಧ ಸ್ಪರ್ಧೆಗಳು, ದೇಶಭಕ್ತಿಯ ಭಾಷಣ ನಡೆಸಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಆಚರಿಸಲಾಗುತ್ತದೆ. ದೇಶಾದ್ಯಂತ ದೇಶಭಕ್ತಿ ಗೀತೆಗಳ ಗಾಯನ ಅನುರಣಿಸುತ್ತದೆ.

ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೇಳಲು ಮತ್ತು ಹಾಡಲು ಇಷ್ಟಪಡುವ 10 ಪ್ರಮುಖ ಹಿಂದಿ ದೇಶಭಕ್ತಿ ಗೀತೆಗಳ ಪಟ್ಟಿ ಇಲ್ಲಿದೆ. ಇದನ್ನು ಅಭ್ಯಾಸ ಮಾಡಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ನೀವೂ ಹಾಡಬಹುದು.


ಏ ಮೇರೆ ವತನ್ ಕೆ ಲೋಗೊನ್

ಗಾಯಕಿ ಲತಾ ಮಂಗೇಶ್ಕರ್ ಅವರು ಹಾಡಿರುವ ಈ ದೇಶಭಕ್ತಿ ಗೀತೆಯ ಸಾಹಿತ್ಯವು ಎಲ್ಲರ ಮನದಾಳಕ್ಕೆ ಮುಟ್ಟುವಂತಿದೆ. ರಕ್ತದಲ್ಲಿ ದೇಶಭಕ್ತಿಯನ್ನು ಜಾಗೃತಿ ಮೂಡಿಸುತ್ತದೆ. ಈ ಹಾಡಿನಲ್ಲಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯ ಹುತಾತ್ಮರ ತ್ಯಾಗವನ್ನು ಸುಂದರವಾಗಿ ನಿರೂಪಿಸಲಾಗಿದೆ.


ತೇರಿ ಮಿಟ್ಟಿ ಮಿ ಮಿಲ್ ಜವಾನ್

ಕೇಸರಿ ಚಲನಚಿತ್ರದಲ್ಲಿ ಬಿ ಪ್ರಾಕ್ ಹಾಡಿರುವ ಈ ಹಾಡಿನಲ್ಲಿ ಭಾರತದ ಮೇಲಿನ ಪ್ರೀತಿ ಮತ್ತು ಗೌರವವನ್ನು ಹೇಳಲಾಗುತ್ತದೆ. ಈ ದೇಶಭಕ್ತಿ ಗೀತೆಯ ಸುಂದರವಾದ ಸಾಹಿತ್ಯವು ಖಂಡಿತವಾಗಿಯೂ ಆತ್ಮವನ್ನು ಸ್ಪರ್ಶಿಸುತ್ತದೆ.


ಸಂದೇಸೆ ಆತೆ ಹೈ ಹಮೇಂ ತಡಪಾತೆ ಹೈ

ಬಾರ್ಡರ್ ಚಲನಚಿತ್ರದ ಈ ಸಾಂಪ್ರದಾಯಿಕ ದೇಶಭಕ್ತಿ ಗೀತೆ ಇಲ್ಲಿಯವರೆಗಿನ ಅತ್ಯುತ್ತಮ ಹಾಡುಗಳಲ್ಲಿ ಒಂದಾಗಿದೆ. ಈ ಹಾಡಿನ ಸಾಹಿತ್ಯ ಪ್ರತಿಯೊಬ್ಬರನ್ನು ಗುನುಗುನಿಸುವಂತೆ ಮಾಡುತ್ತದೆ. ಭಾರತದಲ್ಲಿ ಸ್ವಾತಂತ್ರ್ಯ ದಿನವಾಗಲಿ ಅಥವಾ ಗಣರಾಜ್ಯೋತ್ಸವದ ದಿನವಾಗಲಿ, ದೇಶಭಕ್ತಿಯ ಉತ್ಸಾಹವನ್ನು ಹೆಚ್ಚಿಸಲು ಈ ಹಾಡನ್ನು ಬಹುತೇಕ ಮಂದಿ ಹಾಡುತ್ತಾರೆ. ಈ ಹಾಡನ್ನು ಸೋನು ನಿಗಮ್ ಮತ್ತು ರೂಪ್ ಕುಮಾರ್ ರಾಥೋಡ್ ಸುಂದರವಾಗಿ ಹಾಡಿದ್ದಾರೆ.


ಐಸಾ ದೇಸ್ ಹೈ ಮೇರಾ

ಸುಂದರ ದೇಶ ಭಾರತವನ್ನು ಹೊಗಳಲು ಬಯಸಿದರೆ ಇದು ಅತ್ಯುತ್ತಮ ಹಾಡು. ಈ ಹಾಡು ವೀರ್ ಝರಾ ಚಲನಚಿತ್ರದ್ದು. ಲತಾ ಮಂಗೇಶ್ಕರ್, ಉದಿತ್ ನಾರಾಯಣ್, ಗುರುದಾಸ್ ಮಾನ್ ಮತ್ತು ಪೃಥಾ ಮಜುಂದಾರ್ ಅವರು ಇದನ್ನು ಹಾಡಿದ್ದಾರೆ.


ದೇಸ್ ರಂಗಿಲಾ ರಂಗಿಲಾ ದೇಸ್ ಮೇರಾ ರಂಗಿಲಾ

ʼಫನಾʼ ಚಿತ್ರದ ಈ ಅದ್ಭುತ ಹಾಡು ಪ್ರತಿಯೊಬ್ಬರೂ ನೃತ್ಯ ಮಾಡಲು ಪ್ರೇರೇಪಿಸುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಹಾಡನ್ನು ಆಯ್ಕೆ ಮಾಡಿಕೊಳ್ಳಬಹುದು. ಮಹಾಲಕ್ಷ್ಮಿ ಅಯ್ಯರ್ ಈ ಹಾಡು ಹಾಡಿದ್ದಾರೆ.

ಸುನೋ ಗೌರ್ ಸೇ ದುನಿಯಾ ವಾಲೋ

ಇದು ಸ್ವಾತಂತ್ರ್ಯ ದಿನದ ವಿಶೇಷ ಗೀತೆಯಾಗಿದ್ದು, ದೇಶದ ಬಗ್ಗೆ ಪ್ರೀತಿ ಮತ್ತು ಗೌರವವನ್ನು ತೋರಿಸಲು ಎಲ್ಲಿ ಬೇಕಾದರೂ ಹಾಡಬಹುದು, ಕೇಳಬಹುದು. ಈ ಹಾಡನ್ನು ಶಂಕರ್ ಮಹಾದೇವನ್, ಉದಿತ್ ನಾರಾಯಣ್, ಮಹಾಲಕ್ಷ್ಮಿ ಅಯ್ಯರ್ ಮತ್ತು ಡೊಮ್ನಿಕ್ ಹಾಡಿದ್ದಾರೆ.


ಏ ವತನ್ ವತನ್ ಮೇರೆ ಅಬದ್ ರಹೇ ತು

ರಾಝಿ ಚಲನಚಿತ್ರದ ಈ ದೇಶಭಕ್ತಿಯ ಹಿಂದಿ ಹಾಡು ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ. ಈ ಹಾಡಿನ ಮಾಂತ್ರಿಕ ಸಾಹಿತ್ಯವು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಗೆಲ್ಲುತ್ತದೆ. ಈ ಹಾಡನ್ನು ಸುನಿಧಿ ಚೌಹಾಣ್ ಹಾಡಿದ್ದಾರೆ.


ಕರ್ ಚಲೇ ಹಮ್ ಫಿದಾ ಜನೋ ತನ್ ಸಾಥಿಯೋಂ

ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವಾಗ ತಮ್ಮ ಅಮೂಲ್ಯವಾದ ಪ್ರಾಣವನ್ನು ಕಳೆದುಕೊಂಡ ಎಲ್ಲಾ ವೀರ ಸೈನಿಕರಿಗೆ ಗೌರವ ಸಲ್ಲಿಸಲು ಬಯಸಿದರೆ, ಸ್ವಾತಂತ್ರ್ಯ ದಿನದಂದು ಈ ಹಾಡು ಹಾಡು ಆಯ್ಕೆಯಾಗಿದೆ. ಈ ಹಾಡನ್ನು ಭಾರತೀಯ ಇತಿಹಾಸದ ಶ್ರೇಷ್ಠ ಗಾಯಕ ಮೊಹಮ್ಮದ್ ರಫಿ ಹಾಡಿದ್ದಾರೆ.


ವಂದೇ ಮಾತರಂ

ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ದೇಶಭಕ್ತಿಯ ಉತ್ಸಾಹವನ್ನು ಹೆಚ್ಚಿಸುತ್ತದೆ. ಎಲ್ಲ ವೀರ ಚೇತನಗಳಿಗೆ ಗೌರವ ಸಲ್ಲಿಸುವ ಈ ಹಾಡನ್ನು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹಾಡಬಹುದು.

ಇದನ್ನೂ ಓದಿ: Independence Day 2024: ಸ್ವಾತಂತ್ರ್ಯಪೂರ್ವದಲ್ಲಿ ಭಾರತದ ಎದುರು ಸೋಲುವ ಭಯ; ಹಾಕಿ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಿರಲಿಲ್ಲ ಗ್ರೇಟ್‌ ಬ್ರಿಟನ್‌!


ಎ ವತನ್ ಎ ವತನ್ ಹಮ್ಕೊ ತೇರಿ ಕಸಮ್

ʼಶಹೀದ್ʼ ಚಿತ್ರದ ಈ ಸುಂದರ ಹಿಂದಿ ದೇಶಭಕ್ತಿ ಗೀತೆ ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಗೆಲ್ಲುವಂತಿದೆ. ಮೊಹಮ್ಮದ್ ರಫಿ ಹಾಡಿರುವ ಈ ಹಾಡು ಸ್ವಾತಂತ್ರ್ಯ ದಿನವನ್ನು ವಿಶೇಷ ಮತ್ತು ಸ್ಮರಣೀಯವಾಗಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Bangladesh Unrest: ಬಾಂಗ್ಲಾದೇಶಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ ದಿಲ್ಲಿಯಿಂದ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ 205 ಭಾರತೀಯರು ಢಾಕಾದಿಂದ ದಿಲ್ಲಿಗೆ ಬಂದಿಳಿದಿದ್ದಾರೆ.

VISTARANEWS.COM


on

Bangladesh Unrest
Koo

ನಬದೆಹಲಿ: ನಿರಂತರ ಪ್ರತಿಭಟನೆ, ಗಲಭೆಗಳ (Bangladesh Unrest) ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶವನ್ನು (Bangladesh) ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲಿರುವ ತಮ್ಮ ನಿವಾಸಿಗಳ ಸುರಕ್ಷತೆ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಈ ಮಧ್ಯೆ ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ (ಆಗಸ್ಟ್‌ 7) ದಿಲ್ಲಿಯಿಂದ ಬಾಂಗ್ಲಾದೇಶದ ರಾಜಧಾನಿ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲು ತೀರ್ಮಾನಿಸಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.

ಏರ್ ಇಂಡಿಯಾ ಬುಧವಾರ ದಿಲ್ಲಿಯಿಂದ ಢಾಕಾಗೆ ತನ್ನ ನಿಗದಿತ ಎರಡು ದೈನಂದಿನ ವಿಮಾನಗಳ ಹಾರಾಟ ನಡೆಸಲಿದೆ. ಜತೆಗೆ ವಿಸ್ತಾರ ಮತ್ತು ಇಂಡಿಗೋ ಬುಧವಾರದಿಂದ ಬಾಂಗ್ಲಾದೇಶದ ರಾಜಧಾನಿಗೆ ನಿಗದಿಪಡಿಸಿದ ಸೇವೆಗಳನ್ನು ನಿರ್ವಹಿಸಲಿವೆ. ವಿಸ್ತಾರ ಮತ್ತು ಇಂಡಿಗೋ ಎರಡೂ ವಿಮಾನಯಾನ ಸಂಸ್ಥೆಗಳು ಮಂಗಳವಾರ ಢಾಕಾಗೆ ತೆರಳುವ ವಿಮಾನ ಸಂಚಾರವನ್ನು ರದ್ದುಗೊಳಿಸಿದ್ದವು.

ವಿಸ್ತಾರ ವಿಮಾನ ಢಾಕಾಗೆ ಮುಂಬೈನಿಂದ ಪ್ರತಿದಿನ ಮತ್ತು ದಿಲ್ಲಿಯಿಂದ ವಾರಕ್ಕೆ ಮೂರು ಸೇವೆಗಳನ್ನು ಒದಗಿಸುತ್ತದೆ. ಇಂಡಿಗೋ ಒಂದು ವಿಮಾನ ಪ್ರತಿ ದಿನ ದಿಲ್ಲಿ, ಮುಂಬೈ ಮತ್ತು ಚೆನ್ನೈನಿಂದ ಢಾಕಾಗೆ ತೆರಳುತ್ತದೆ. ಜತೆಗೆ ಕೋಲ್ಕತ್ತಾದಿಂದ ಬಾಂಗ್ಲಾದೇಶಕ್ಕೆ ಪ್ರತಿದಿನ ಎರಡು ಸೇವೆಗಳನ್ನು ಒದಗಿಸುತ್ತದೆ.

ದಿಲ್ಲಿಗೆ ಬಂದಿಳಿದ 205 ಭಾರತೀಯರು

ಈ ಮಧ್ಯೆ ಬುಧವಾರ ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ 205 ಭಾರತೀಯರು ಢಾಕಾದಿಂದ ದಿಲ್ಲಿಗೆ ಬಂದಿಳಿದಿದ್ದಾರೆ. ಮಂಗಳವಾರ ತಡರಾತ್ರಿ ಢಾಕಾದಿಂದ ಈ ಎ 321 (A321) ವಿಮಾನ ಟೇಕ್‌ ಆಫ್‌ ಆಗಿತ್ತು. ಈ ವಿಮಾನದಲ್ಲಿ 6 ಮಕ್ಕಳೂ ಇದ್ದರು.

ಮೇಘಾಲಯ, ಮಣಿಪುರಗಳಲ್ಲಿ ರಾತ್ರಿ ಕರ್ಫ್ಯೂ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಮೀಪದ ಮಣಿಪುರ ಮತ್ತು ಮೇಘಾಲಯಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಬಾಂಗ್ಲಾದೇಶದಲ್ಲಿನ ಗಲಭೆ ಕಾರಣದಿಂದ ಅಲ್ಲಿನ ಜನರು ಮಣಿಪುರಕ್ಕೆ ಒಳನುಸುಳುವ ಸಾಧ್ಯತೆ ಇದೆ ಎಂದು ಎಂದು ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ತಿಳಿಸಿದ್ದಾರೆ. ಮಣಿಪುರವು ಮ್ಯಾನ್ಮಾರ್‌ನೊಂದಿಗೆ 398 ಕಿ.ಮೀ. ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿದೆ. ಅದಾಗ್ಯೂ ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿಲ್ಲ. ಆದರೆ ಮಣಿಪುರವು ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ದಕ್ಷಿಣ ಅಸ್ಸಾಂನೊಂದಿಗೆ ಅಂತಾರಾಜ್ಯ ಗಡಿಗಳನ್ನು ಹೊಂದಿದೆ. ಈ ಕಾರಣಕ್ಕೆ ಇಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ

ಇನ್ನು ಬಾಂಗ್ಲಾದೇಶದೊಂದಿಗೆ 445 ಕಿ.ಮೀ. ಗಡಿಯನ್ನು ಹಂಚಿಕೊಂಡಿರುವ ಮೇಘಾಲಯದಲ್ಲಿ ಸೋಮವಾರ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ನಿರಾಶ್ರಿತರ ಚಲನೆಯನ್ನು ತಡೆಗಟ್ಟಲು ಗಡಿಯಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ಮೇಘಾಲಯ ಉಪಮುಖ್ಯಮಂತ್ರಿ ಪ್ರೆಸ್ಟೋನ್ ಟಿನ್ಸಾಂಗ್ ಹೇಳಿದ್ದಾರೆ. ರಾಜ್ಯದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಬಿಎಸ್ಎಫ್ ಕಟ್ಟುನಿಟ್ಟಾದ ಜಾಗ್ರತೆ ವಹಿಸಲಿದೆ ಎಂದೂ ವಿವರಿಸಿದ್ದಾರೆ.

Continue Reading

ವಾಣಿಜ್ಯ

Gautam Adani: ಅಧಿಕಾರ ತೊರೆದು ನಿವೃತ್ತರಾಗಲಿದ್ದಾರಾ ಗೌತಮ್ ಅದಾನಿ? ಈ ಬಗ್ಗೆ ಅವರು ಹೇಳಿದ್ದೇನು?

Gautam Adani: ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಗೌತಮ್‌ ಅದಾನಿ ಅವರು ತಮ್ಮ ಅದಾನಿ ಗ್ರೂಪ್‌ಗೆ ಉತ್ತರಾಧಿಕಾರಿಯನ್ನು ನೇಮಕ ಮಾಡಲು ಹೊರಟಿದ್ದಾರೆ ಎನ್ನುವ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅದಾನಿ ಎಂಟರ್‌ಪ್ರೈಸಸ್‌ ಸ್ಪಷ್ಟೀಕರಣ ನೀಡಿದೆ. ಗೌತಮ್‌ ಅದಾನಿ ಹೇಳಿರುವ ವಿಚಾರಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಅವರು ತಮ್ಮ ನಿವೃತ್ತಿಯ ದಿನಾಂಕವನ್ನು ಘೋಷಿಸಿಲ್ಲ ಎಂದು ತಿಳಿಸಿದೆ. ”ಅವರು ನಿವೃತ್ತಿಯ ಬಗ್ಗೆ ಯಾವುದೇ ದಿನಾಂಕ ಅಥವಾ ಸಮಯವನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲʼʼ ಎಂದಿದೆ.

VISTARANEWS.COM


on

Gautam Adani
Koo

ನವದೆಹಲಿ: ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಗೌತಮ್‌ ಅದಾನಿ (Gautam Adani) ಅವರು ತಮ್ಮ ಅದಾನಿ ಗ್ರೂಪ್‌ಗೆ ಉತ್ತರಾಧಿಕಾರಿಯನ್ನು ನೇಮಕ ಮಾಡಲು ಹೊರಟಿದ್ದಾರೆ ಎನ್ನುವ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅದಾನಿ ಎಂಟರ್‌ಪ್ರೈಸಸ್‌ (Adani Enterprises) ಸ್ಪಷ್ಟೀಕರಣ ನೀಡಿದೆ. ಗೌತಮ್‌ ಅದಾನಿ ಹೇಳಿರುವ ವಿಚಾರಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಅವರು ತಮ್ಮ ನಿವೃತ್ತಿಯ ದಿನಾಂಕವನ್ನು ಘೋಷಿಸಿಲ್ಲ ಎಂದು ತಿಳಿಸಿದೆ.

“ಇತ್ತೀಚಿನ ಸಂದರ್ಶನವೊಂದರಲ್ಲಿ ಗೌತಮ್ ಅದಾನಿ ಅವರು ವ್ಯವಹಾರದ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಉತ್ತರಾಧಿಕಾರಿ ನೇಮಕದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ. ಉತ್ತರಾಧಿಕಾರವು ಕೇವಲ ಒಂದು ಘಟನೆಯಲ್ಲ ಮತ್ತು ಒಂದು ದಿನದಲ್ಲಿ ನಡೆಯುವ ಬೆಳವಣಿಗೆಯಲ್ಲ. ಅದು ಒಂದು ನಿರಂತರ ಪ್ರಯಾಣ ಎಂದಷ್ಟೇ ಹೇಳಿದ್ದಾರೆ. ಅವರು ನಿವೃತ್ತಿಯ ಬಗ್ಗೆ ಯಾವುದೇ ದಿನಾಂಕ ಅಥವಾ ಸಮಯವನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲʼʼ ಎಂದು ಅದಾನಿ ಎಂಟರ್‌ಪ್ರೈಸಸ್‌ ತಿಳಿಸಿದೆ.

“ಇದಲ್ಲದೆ ಕುಟುಂಬ ಟ್ರಸ್ಟ್‌ ಬಗ್ಗೆಯೂ ಗೌತಮ್‌ ಅದಾನಿ ಹೇಳಿರುವುದನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ತಮ್ಮ ವಿವಿಧ ಉದ್ಯಮಗಳನ್ನು ಇಬ್ಬರು ಪುತ್ರರು ಮತ್ತು ಸೋದರ ಸಂಬಂಧಿಕರು ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಷೇರು ಬೆಲೆಗಳು ಮಾರುಕಟ್ಟೆ ಆಧಾರದಲ್ಲಿ ನಿರ್ಧಾರವಾಗುತ್ತವೆ. ಕಂಪನಿಯ ಆಡಳಿತ ಮಂಡಳಿಗೆ ಇದರಲ್ಲಿ ಯಾವುದೇ ನಿಯಂತ್ರಣವಿಲ್ಲ. ಇತ್ತೀಚೆಗೆ ಕಂಡುಬಂದ ಷೇರುಗಳ ಬೆಲೆಯಲ್ಲಿನ ವ್ಯತ್ಯಾಸಕ್ಕೆ ಯಾವುದೇ ನಿರ್ದಿಷ್ಟ ಕಾರಣದ ಬಗ್ಗೆ ಮಾಹಿತಿ ಇಲ್ಲʼʼ ಎಂದು ಅದಾನಿ ಎಂಟರ್‌ಪ್ರೈಸಸ್‌ ಹೇಳಿದೆ.

62 ವರ್ಷದ ಗೌತಮ್ ಅದಾನಿ ಅವರು ತಮ್ಮ 70ನೇ ವಯಸ್ಸಿನಲ್ಲಿ ನಿವೃತ್ತರಾಗಲು ಚಿಂತನೆ ನಡೆಸಿದ್ದಾರೆ ಮತ್ತು 2030ರ ಆರಂಭದಲ್ಲಿ ವ್ಯವಹಾರವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸಲು ಮುಂದಾಗಿದ್ದಾರೆ ಎಂದು ಬ್ಲೂಮ್‌ಬರ್ಗ್‌ ವರದಿ ಮಾಡಿದ ಹಿನ್ನಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ʼʼಅದಾನಿ 70ನೇ ವಯಸ್ಸಿನಲ್ಲಿ ನಿವೃತ್ತರಾಗಲಿದ್ದಾರೆ. ತಮ್ಮ ಪುತ್ರರಾದ 37 ವರ್ಷದ ಕರಣ್‌ ಅದಾನಿ, 26ರ ಹರೆಯದ ಜೀತ್‌ ಅದಾನಿ ಹಾಗೂ ಅವರ ಸೋದರ ಸಂಬಂಧಿಗಳಾದ 45 ವರ್ಷದ ಪ್ರಣವ್‌ ಹಾಗೂ 30 ವರ್ಷದ ಸಾಗರ್‌ ಅವರು ಉತ್ತರಾಧಿಕಾರಿಗಳಾಗಿದ್ದು, ಕುಟುಂಬದ ಟ್ರಸ್ಟ್‌ನಲ್ಲಿ ಇದನ್ನು ಉಲ್ಲೇಖಿಸಲಾಗಿದೆʼʼ ಎಂದು ಬ್ಲೂಮ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಂದರ್ಶನವೊಂದರಲ್ಲಿ ಗೌತಮ್‌ ಅದಾನಿ, “ಅವರೆಲ್ಲರೂ (ಕರಣ್‌ ಅದಾನಿ, ಜೀತ್‌ ಅದಾನಿ, ಪ್ರಣವ್‌ ಹಾಗೂ ಸಾಗರ್‌) ಕಂಪನಿಯ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಅವರು ಕಂಪನಿಯ ಬೆಳವಣಿಗೆಗಾಗಿ ಹಸಿದಿದ್ದಾರೆ ಎನ್ನುವ ವಿಚಾರವೇ ನನಗೆ ಸಂಸತವನ್ನು ತಂದಿದೆ. ಎರಡನೇ ಪೀಳಿಗೆಯಲ್ಲಿ ಇಂತಹ ತುಡಿತ ಕಂಡು ಬರುವುದು ಬಹಳ ಅಪರೂಪ. ಅವರು ಮುಂದೆ ಒಟ್ಟಾಗಿ ಕೆಲಸ ಮಾಡಬೇಕುʼʼ ಎಂದು ಹೇಳಿದ್ದರು.

ಇದನ್ನೂ ಓದಿ: Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!

ಸದ್ಯ ಅದಾನಿ ಸಮೂಹ 111 ಬಿಲಿಯನ್‌ ಡಾಲರ್‌ ಮಾರುಕಟ್ಟೆ ಮೌಲ್ಯ ಹೊಂದಿದ್ದು, ಗೌತಮ್‌ ಅದಾನಿ ವಿಶ್ವದ 11ನೇ ಅತೀ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. 109 ಬಿಲಿಯನ್‌ ಡಾಲರ್‌ ಆಸ್ತಿಯೊಂದಿಗೆ ಮುಕೇಶ್‌ ಅಂಬಾನಿ ಈ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದ್ದಾರೆ.

Continue Reading

ರಾಜಕೀಯ

Parliament Session: ಇಂದು ಸಂಸತ್‌ನಲ್ಲಿ ಮಂಡನೆಯಾಗುತ್ತಾ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ?; ಅಧಿವೇಶನದ Live ಇಲ್ಲಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಇಂದು ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ತಿದ್ದುಪಡಿ ಮಾಡುವ ವಕ್ಫ್ (ತಿದ್ದುಪಡಿ) ಮಸೂದೆ ಪರಿಚಯಿಸುವ ಸಾಧ್ಯತೆಯಿದೆ. 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭವಾಗಲಿದ್ದು, ಈ ವೇಳೆ ಗಂಭೀರ ಚರ್ಚೆ ನಡೆಯಲಿದೆ. ಅಧಿವೇಶದ ಲೈವ್‌ ಅನ್ನು ಇಲ್ಲಿ ನೋಡಿ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಅಧಿವೇಶನ (Parliament Session)ದಲ್ಲಿ ಇಂದು ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ತಿದ್ದುಪಡಿ ಮಾಡುವ ವಕ್ಫ್ (ತಿದ್ದುಪಡಿ) ಮಸೂದೆ ಪರಿಚಯಿಸುವ ಸಾಧ್ಯತೆಯಿದೆ. ಈ ಮಸೂದೆಯು 1995ರ ವಕ್ಫ್ ಕಾಯ್ದೆಯನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ 1995 ಎಂದು ಮರುನಾಮಕರಣ ಮಾಡುವ ಗುರಿಯನ್ನು ಹೊಂದಿದೆ. 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭವಾಗಲಿದ್ದು, ಈ ವೇಳೆ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ.

ಚರ್ಚೆ ಹುಟ್ಟು ಹಾಕಿದ ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಸ್ತಾವ

ಸದ್ಯ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರದ ನಿರ್ಧಾರ ವ್ಯಾಪಕ ಚರ್ಚೆ ಹುಟ್ಟು ಹಾಕಿದೆ. ʼʼಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಕಾನೂನನ್ನು ತಿದ್ದುಪಡಿ ಮಾಡಬೇಕೆಂದು ಮುಸ್ಲಿಂ ಸಮುದಾಯದಿಂದ ಬೇಡಿಕೆಗಳು ಬಂದಿವೆ. ಪ್ರಸ್ತುತ ವಕ್ಫ್ ಮಂಡಳಿಗಳು ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ ಎನ್ನುವ ನಿಯಮವಿದೆ. ಈಗ ತಿದ್ದುಪಡಿ ಮಸೂದೆಯು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಾಂಗ್ಲಾದೇಶ ಗಲಭೆ ಬಗ್ಗೆ ಕಳವಳ

ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ಗಲಭೆ ಹೆಚ್ಚಾಗಿದ್ದು, ಈ ಬಗ್ಗೆ ಮಂಗಳವಾರ ಅಧಿವೇಶನದಲ್ಲಿ ಚರ್ಚೆ ನಡೆಸಲಾಯಿತು. ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದ ಒಂದು ದಿನದ ನಂತರ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು.

ನೆರೆಯ ದೇಶದಲ್ಲಿನ ಹಿಂಸಾಚಾರ ಮತ್ತು ರಾಜಕೀಯ ಬೆಳವಣಿಗೆಗಳ ಮಧ್ಯೆ ಭಾರತವು ಅಲ್ಲಿನ ಅಧಿಕಾರಿಗಳು ಮತ್ತು ಅಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದು ತಿಳಿಸಿದರು. “ಜುಲೈ ಉದ್ದಕ್ಕೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದರಿಂದ ನಾವು ಪದೇ ಪದೆ ಸಂಯಮ ಪಾಲಿಸುವಂತೆ ಪ್ರತಿಭನಾಕಾರರಿಗೆ ಸೂಚಿಸಿದ್ದೇವೆ ಮತ್ತು ಮಾತುಕತೆಯ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸುವಂತೆ ಸಲಹೆ ನೀಡಿದ್ದೇವೆʼʼ ಎಂದು ಹೇಳಿದರು.

“ನಮ್ಮ ರಾಜತಾಂತ್ರಿಕ ಕಾರ್ಯಾಚರಣೆಗಳ ಮೂಲಕ ನಾವು ಬಾಂಗ್ಲಾದೇಶದಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿಕಟ ಮತ್ತು ನಿರಂತರ ಸಂಪರ್ಕದಲ್ಲಿದ್ದೇವೆ. ಬಾಂಗ್ಲಾದೇಶದಲ್ಲಿ ಸುಮಾರು 20 ಸಾವಿರ ಭಾರತೀಯರಿದ್ದು, ಈ ಪೈಕಿ ಸುಮಾರು 8 ಸಾವಿರ ಮಂದಿ ಮರಳಿದ್ದಾರೆʼʼ ಎಂದೂ ಅವರು ತಿಳಿಸಿದರು.

ಇದನ್ನೂ ಓದಿ: Waqf Act: ವಕ್ಫ್‌ ಮಂಡಳಿ ಪರಮಾಧಿಕಾರಕ್ಕೆ ಮೋದಿ ಮೂಗುದಾರ; ಏನೆಲ್ಲ ತಿದ್ದುಪಡಿ? 9.4 ಲಕ್ಷ ಎಕರೆ ಯಾರ ಪಾಲು?

Continue Reading

ವಿದೇಶ

Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ

Bangladesh Unrest: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿಯೂ ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಸುವ ಜನರಿದ್ದುಮ ಅವರ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬರೆದುಕೊಂಡಿರುವ ದಾನಿಶ್ ಕನೇರಿಯಾ, “ಭಾರತ ಜಾಗರೂಕವಾಗಿರಬೇಕು: ನಿಮ್ಮ ರಾಷ್ಟ್ರದೊಳಗಿನ ಕೆಲವರು ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಯಾಗಲು ಬಯಸುತ್ತಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಜಾಗರೂಕರಾಗಿರಿ” ಎಂದು ಹೇಳಿದ್ದಾರೆ.

VISTARANEWS.COM


on

Bangladesh Unrest
Koo

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ (Bangladesh Unrest)ದ ಮಧ್ಯೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ (Danish Kaneria) ಅವರು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿಯೂ ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಸುವ ಜನರಿದ್ದುಮ ಅವರ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರದ ಹಿಂದೆ ಚೀನಾ ಮತ್ತು ಪಾಕಿಸ್ತಾನದ ಐಎಸ್ಐ ಇದೆ ಎನ್ನಲಾಗುತ್ತಿದೆ. ಪ್ರಧಾನಿ ಶೇಖ್ ಹಸೀನಾ ಅವರ ಮಗ ಕೂಡ ಐಎಸ್ಐ ಪಾತ್ರದ ಬಗ್ಗೆ ಸಂದೇಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಾನಿಶ್ ಕನೇರಿಯಾ ಭಾರತಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬರೆದುಕೊಂಡಿರುವ ದಾನಿಶ್ ಕನೇರಿಯಾ, “ಭಾರತ ಜಾಗರೂಕವಾಗಿರಬೇಕು: ನಿಮ್ಮ ರಾಷ್ಟ್ರದೊಳಗಿನ ಕೆಲವರು ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಯಾಗಲು ಬಯಸುತ್ತಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಜಾಗರೂಕರಾಗಿರಿ” ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಸದ್ಯ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ದೇವಾಲಯಗಳ ಮೇಲೆ ಆಕ್ರಮಣ ಮಾಡುತ್ತಿರುವ ಆತಂಕಕಾರಿ ವಿಡಿಯೊ ಹೊರ ಬರುತ್ತಿರುವ ಮಧ್ಯೆ ದಾನಿಶ್ ಕನೇರಿಯಾ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೆ ಸಹಾಯ ಮಾಡಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

“ಬಾಂಗ್ಲಾದೇಶದ ಹಿಂದೂಗಳನ್ನು ರಕ್ಷಿಸಲು ತಕ್ಷಣ ಮಧ್ಯ ಪ್ರವೇಶಿಸುವಂತೆ ನಾನು ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ. ನಾವು ನಮ್ಮ ಸಹೋದರ ಸಹೋದರಿಯರನ್ನು ಉಗ್ರಗಾಮಿಗಳಿಗೆ ಬಿಟ್ಟು ಕೊಡಬಾರದು. #SaveBangladeshiHindus” ಎಂದು ಅವರು ಮನವಿ ಮಾಡಿದ್ದಾರೆ.

ಬಾಂಗ್ಲಾದೇಶದ ಡೈಲಿ ಸ್ಟಾರ್ ವರದಿಯ ಪ್ರಕಾರ, ಕನಿಷ್ಠ 27 ಜಿಲ್ಲೆಗಳಲ್ಲಿನ ಹಿಂದೂಗಳ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಾಕಾರರ ಗುಂಪುಗಳು ದಾಳಿ ನಡೆಸಿವೆ ಮತ್ತು ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿದೆ. ಬಾಂಗ್ಲಾದೇಶದ ಖುಲ್ನಾ ವಿಭಾಗದಲ್ಲಿರುವ ಮೆಹರ್ಪುರದ ಇಸ್ಕಾನ್ ದೇವಾಲಯ ಮತ್ತು ಕಾಳಿ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಲಾಗಿದೆ. “ಮೆಹರ್ಪುರದಲ್ಲಿರುವ ನಮ್ಮ ಇಸ್ಕಾನ್ ಕೇಂದ್ರವನ್ನು ಉದ್ರಿಕ್ತರ ಗುಂಪು ಸುಟ್ಟು ಹಾಕಿದೆ. ಇದರಲ್ಲಿ ಭಗವಾನ್ ಜಗನ್ನಾಥ, ಬಲದೇವ್ ಮತ್ತು ಸುಭದ್ರಾ ದೇವಿಯ ವಿಗ್ರಹಗಳೂ ಇದ್ದವು. ಈ ವೇಳೆ ಇಲ್ಲಿದ್ದ ಮೂವರು ಭಕ್ತರು ಹೇಗೋ ತಪ್ಪಿಸಿಕೊಂಡಿದ್ದಾರೆ” ಎಂದು ಇಸ್ಕಾನ್ ವಕ್ತಾರ ಯುಧಿಷ್ಠಿರ ಗೋವಿಂದ ದಾಸ್ ತಿಳಿಸಿದ್ದಾರೆ.

ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌ ಅಭಿಯಾನ

ಬಾಂಗ್ಲಾದೇಶದಲ್ಲಿ ಹಿಂದೂಗಳು ಸಂಕಷ್ಟಕ್ಕೆ ಒಳಗಾಗಿರುವ ನಡುವೆ ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌ (All eyes on Bangladesh Hindus) ಎಂಬ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ ಆಗುತ್ತಿದೆ. ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ.  ಕೆಲವು ತಿಂಗಳುಗಳ ಹಿಂದೆ ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿ ಅನೇಕರು ಇನ್‌ಸ್ಟಾಗ್ರಾಮ್‌ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದರು. ಈ ಪೈಕಿ ಬಾಲಿವುಡ್‌ ತಾರೆಯರೂ ಇದ್ದರು.

ಇದನ್ನೂ ಓದಿ: Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

ಇದೀಗ ಬಾಂಗ್ಲಾದಲ್ಲಿ ಹಿಂದೂಗಳ ಮನೆ ಮನೆಗೆ ನುಗ್ಗಿ ಕಿಡಿಗೇಡಿಗಳು ದಾಂಧಲೆ ಎಬ್ಬಿಸುತ್ತಿದ್ದರೂ, ಯಾರೊಬ್ಬರೂ ತುಟಿಕ್‌ ಪಿಟಿಕ್‌ ಅನ್ನದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಯಾಗುತ್ತಿದೆ. ಸಿನಿತಾರೆಯರ ಏಕಪಕ್ಷೀಯ ನಡೆಗೆ ಹಲವು ಟೀಕೆ ವ್ಯಕ್ತಪಡಿಸಿದ್ದಾರೆ.

Continue Reading
Advertisement
Vinesh Phogat
ಪ್ರಮುಖ ಸುದ್ದಿ25 mins ago

Vinesh Phogat: ಒಲಿಂಪಿಕ್ಸ್​ ಫೈನಲ್​ನಿಂದ ವಿನೇಶ್​ ಫೋಗಟ್​ ಅನರ್ಹ; ಚಿನ್ನದ ಆಸೆ ನುಚ್ಚುನೂರು!

Niharika Konidela Nagendra Babu says Industry Is Not Our Father's Property
ಟಾಲಿವುಡ್35 mins ago

Niharika Konidela: ತೆಲುಗು ಚಿತ್ರರಂಗ ನನ್ನ ಅಪ್ಪನ ಆಸ್ತಿ ಅಲ್ಲ ಎಂದ ನಟ ಚಿರಂಜೀವಿ ಸಹೋದರ ನಾಗಬಾಬು!

Bangladesh Unrest
ದೇಶ50 mins ago

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Israel Palestine war
ವಿದೇಶ54 mins ago

Israel Palestine War: ಜೈಲಿನೊಳಗೇ ಪ್ಯಾಲೆಸ್ತೀನ್‌ ಕೈದಿಗಳ ಮೇಲೆ ಇಸ್ರೇಲಿ ಯೋಧರಿಂದ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

nelamangala road accident
ಬೆಂಗಳೂರು55 mins ago

Road Accident: ಗರ್ಭಿಣಿಯ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದ ಮಗು ಸಹಿತ ಅಪ್ಪಚ್ಚಿ

Rishabh Pant
ಕ್ರೀಡೆ1 hour ago

Rishabh Pant: ನೀರಜ್​ ಬಂಗಾರ ಗೆದ್ದರೆ ಅದೃಷ್ಟಶಾಲಿಗೆ ಪಂತ್​ ಕಡೆಯಿಂದ ಸಿಗಲಿದೆ ನಗದು ಬಹುಮಾನ

Akshay Kumar Riteish Fardeen recreate Heyy Babyy
ಬಾಲಿವುಡ್1 hour ago

Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

Viral Video
Latest1 hour ago

Viral Video: ಮೃಗಾಲಯದಲ್ಲಿ ಮಂಗನ ಎದುರು ಯುವತಿಯ ‘ಕಪಿ ಚೇಷ್ಟೆ’! ಪರಿಣಾಮ ಏನಾಯ್ತು ನೋಡಿ!

chemicals in food
ಬೆಂಗಳೂರು2 hours ago

Chemicals in Food: ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಇಂದೂ ಇಳಿಕೆಯಾದ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು19 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ20 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌