Bangladesh Protest: ಬಾಂಗ್ಲಾದೇಶ ಹಿಂಸಾಚಾರ ಕುರಿತು ಮೋದಿ ಮಹತ್ವದ ಸಭೆ; ಚರ್ಚಿಸಿದ ವಿಷಯಗಳೇನು? - Vistara News

ದೇಶ

Bangladesh Protest: ಬಾಂಗ್ಲಾದೇಶ ಹಿಂಸಾಚಾರ ಕುರಿತು ಮೋದಿ ಮಹತ್ವದ ಸಭೆ; ಚರ್ಚಿಸಿದ ವಿಷಯಗಳೇನು?

Bangladesh Protest: ಬಾಂಗ್ಲಾದೇಶದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಸಂಸದೀಯ ಸಭೆ ನಡೆಸಿದ್ದಾರೆ. ಒಳನುಸುಳುವಿಕೆ ನಿಯಂತ್ರಣ, ಬಾಂಗ್ಲಾದೇಶದ ಜತೆಗಿನ ವ್ಯಾಪಾರ-ಒಪ್ಪಂದ, ಹಿಂಸಾಚಾರ ಇನ್ನೂ ಜಾಸ್ತಿಯಾದರೆ ಏನಾಗಬಹುದು, ಭಾರತ ತೆಗೆದುಕೊಳ್ಳಬೇಕಾದ ಕ್ರಮಗಳು ಯಾವವು ಎಂಬುದು ಸೇರಿ ಹಲವು ಸಂಗತಿಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Bangladesh Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರವು (Bangladesh Protest) ನಾಗರಿಕ ದಂಗೆಗೆ ತಿರುಗಿ, ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರೇ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಆಗುತ್ತಿರುವ ಬೆಳವಣಿಗೆಗಳು ಭಾರತದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದಕ್ಕಾಗಿಯೇ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಭದ್ರತೆ ಕುರಿತ ಸಂಸದೀಯ ಸಭೆ ನಡೆಸಿದ ಮೋದಿ, ಬಾಂಗ್ಲಾದೇಶ ಹಿಂಸಾಚಾರದ ಕುರಿತು ಮಾಹಿತಿ ಪಡೆದರು. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌, ಸಂಸದೀಯ ಕಾರ್ಯದರ್ಶಿ ರಾಜೀವ್‌ ಗೌಬಾ, ರಾ ಮುಖ್ಯಸ್ಥ ರವಿ ಸಿನ್ಹಾ, ಐಬಿ ನಿರ್ದೇಶಕ ತಪನ್‌ ದೇಕಾ ಸೇರಿ ಹಲವರೊಂದಿಗೆ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು.

ಚರ್ಚಿಸಿದ ವಿಷಯಗಳು ಏನೇನು?

ಬಾಂಗ್ಲಾದೇಶದ ಹಿಂಸಾಚರದಿಂದ ಭಾರತದ ಮೇಲಾಗುವ ಪರಿಣಾಮಗಳು ಏನು? ಗಡಿಯಲ್ಲಿ ಭದ್ರತೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳು, ಒಳನುಸುಳುವಿಕೆ ನಿಯಂತ್ರಣ, ಬಾಂಗ್ಲಾದೇಶದ ಜತೆಗಿನ ವ್ಯಾಪಾರ-ಒಪ್ಪಂದ, ಹಿಂಸಾಚಾರ ಇನ್ನೂ ಜಾಸ್ತಿಯಾದರೆ ಏನಾಗಬಹುದು, ಭಾರತ ತೆಗೆದುಕೊಳ್ಳಬೇಕಾದ ಕ್ರಮಗಳು ಯಾವವು ಎಂಬುದು ಸೇರಿ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದುಬಂದಿದೆ.

ಭಾರತದ ಮೇಲೆ ಏನೆಲ್ಲ ಪರಿಣಾಮ ಸಾಧ್ಯತೆ?

ಬಾಂಗ್ಲಾದೇಶದಲ್ಲಿ ಹಿಂಸಾಚಾರವು ಭುಗಿಲೆದ್ದಿರುವುದರ ಪರಿಣಾಮವು ಭಾರತದ ಮೇಲೂ ಬೀರುವ ಸಾಧ್ಯತೆ ಹೆಚ್ಚಿದೆ. ಬಾಂಗ್ಲಾದಲ್ಲಿ ಶಾಂತಿ ನೆಲೆಸಿದ್ದಾಗಲೇ ನುಸುಳುಕೋರರು ಭಾರತವನ್ನು ಪ್ರವೇಶಿಸುತ್ತಿದ್ದರು. ಈಗ ಸುಮಾರು 4 ಲಕ್ಷ ಜನ ದಂಗೆಯೆದ್ದಿರುವ ಕಾರಣ ಇನ್ನಷ್ಟು ಜನ ಭಾರತವನ್ನು ಅಕ್ರಮವಾಗಿ ಪ್ರವೇಶಿಸಿ, ಅವರು ದೇಶಕ್ಕೆ ತಲೆನೋವಾಗಬಹುದು. ಸೇನೆಯಲ್ಲಿ ಆಡಳಿತ ಯಂತ್ರ ಕುಸಿದುಬಿದ್ದಿದ್ದು, ಮಿಲಿಟರಿ ಆಡಳಿತ ಜಾರಿಗೆ ಬಂದಿರುವ ಕಾರಣ ಭಾರತ ಹಾಗೂ ಬಾಂಗ್ಲಾದೇಶದ ವ್ಯಾಪಾರ, ಒಪ್ಪಂದಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಮಿಲಿಟರಿ ಆಡಳಿತ ಕೊನೆಯಾಗಿ, ಹೊಸ ಸರ್ಕಾರ ರಚನೆಯಾಗಿ, ಪ್ರತಿಭಟನೆ ಶಾಂತವಾಗುವವರೆಗೂ ಭಾರತಕ್ಕೆ ಸಂಕಷ್ಟ ತಪ್ಪಿದ್ದಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. ಶೇಖ್‌ ಹಸೀನಾ ಭಾರತ ಪರ ನಿಲುವು ಹೊಂದಿದ್ದಾರೆ. ಹಾಗಾಗಿ ಪ್ರತಿಭಟನೆಕಾರರ ಕೋಪ ಭಾರತದ ಮೇಲೆ ತಿರುಗಬಹುದು. ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುವ ಅಪಾಯವೂ ಇದೆ.

ಇದನ್ನೂ ಓದಿ: Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mashrafe Mortaza : ಕ್ರಿಕೆಟರ್ ಮುಶ್ರಫೆ ಮೊರ್ತಾಜಾ ಮನೆಗೆ ಬೆಂಕಿ ಹಚ್ಚಿದ ಬಾಂಗ್ಲಾದೇಶದ ಪ್ರತಿಭಟನಾಕಾರರು

Mashrafe Mortaza :

VISTARANEWS.COM


on

Mashrafe Mortaza
Koo

ಬೆಂಗಳೂರು: ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಸೋಮವಾರ ದೇಶವನ್ನು ತೊರೆದ ನಂತರ ದೇಶದಲ್ಲಿ ಹಿಂಸಾಚಾರ ಮತ್ತು ಗೊಂದಲ ಮುಂದುವರೆದಿದೆ. ಖುಲ್ನಾ ವಿಭಾಗದ ನರೈಲ್ -2 ಸಂಸತ್​ ಕ್ಷೇತ್ರದಿಂದ ಸದಸ್ಯರಾಗಿರುವ ಮೊರ್ತಾಜಾ, ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಅಭ್ಯರ್ಥಿಯಾಗಿ ಸತತ ಎರಡನೇ ಬಾರಿಗೆ ಈ ಸ್ಥಾನವನ್ನು ಗೆದ್ದಿದ್ದರು.

ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ ನಂತರ ದುಷ್ಕರ್ಮಿಗಳು ಮೊರ್ತಾಜಾ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮೊರ್ತಾಜಾ 117 ಪಂದ್ಯಗಳಲ್ಲಿ ಬಾಂಗ್ಲಾದೇಶವನ್ನು ಮುನ್ನಡೆಸಿದ್ದಾರೆ. 36 ಟೆಸ್ಟ್, 220 ಏಕದಿನ ಮತ್ತು 54 ಟಿ 20 ಪಂದ್ಯಗಳಲ್ಲಿ 390 ಅಂತರರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿದ್ದಾರೆ ಮತ್ತು 2,955 ರನ್ ಗಳಿಸಿದ್ದಾರೆ. ಆಟವನ್ನು ತೊರೆದ ನಂತರ, ಅವರು 2018 ರಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್​ಗೆ ಸೇರುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. ನರೈಲ್ -2 ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: Women’s T20 World Cup : ಬಾಂಗ್ಲಾದಲ್ಲಿ ಕ್ಷೋಭೆ; ಮಹಿಳೆಯ ಟಿ20 ವಿಶ್ವ ಕಪ್ ಮುಂದೂಡಿಕೆ?

ಪ್ರತಿಭಟನಾಕಾರರು ಜಿಲ್ಲಾ ಅವಾಮಿ ಲೀಗ್ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಅಧ್ಯಕ್ಷ ಸುಭಾಷ್ ಚಂದ್ರ ಬೋಸ್ ಅವರ ಮನೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಬಾಂಗ್ಲಾದೇಶದ ಪ್ರಮುಖ ದಿನಪತ್ರಿಕೆ ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.

ಹಸೀನಾ ಸೋಮವಾರ ಸಂಜೆ ದೆಹಲಿ ಬಳಿಯ ಗಾಜಿಯಾಬಾದ್​​ನ ಹಿಂಡನ್ ವಾಯುನೆಲೆಗೆ ಬಂದಿಳಿದರು, ಬಾಂಗ್ಲಾದೇಶ ವಾಯುಪಡೆಯ ಮಿಲಿಟರಿ ಸಾರಿಗೆ ವಿಮಾನದಲ್ಲಿ ಆಗಮಿಸಿದರು, ಸಾವಿರಾರು ಪ್ರತಿಭಟನಾಕಾರರು ಢಾಕಾದಲ್ಲಿನ ಪ್ರಧಾನಿಯ ಅಧಿಕೃತ ನಿವಾಸವಾದ ಗಣಭಬನ್ಗೆ ನುಗ್ಗಿ ಧ್ವಂಸಗೊಳಿಸಿದರು.

Continue Reading

ದೇಶ

Sheikh Hasina: ಬಾಂಗ್ಲಾದಿಂದ ದೆಹಲಿಗೆ ಬಂದಿಳಿದ ಶೇಖ್‌ ಹಸೀನಾ; ಶೀಘ್ರದಲ್ಲೇ ಲಂಡನ್‌ಗೆ ಹಾರಾಟ?

Sheikh Hasina: ಬಾಂಗ್ಲಾದೇಶದ ಢಾಕಾದಲ್ಲಿರುವ ಶೇಖ್‌ ಹಸೀನಾ ನಿವಾಸದ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ ಬಳಿಕ ಪಲಾಯನಗೈದ ಶೇಖ್‌ ಹಸೀನಾ ಅವರು ಭಾರತಕ್ಕೆ ಆಗಮಿಸಿದ್ದಾರೆ. ಪ್ರಾಣ ಭಯದ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಬಂದಿದ್ದಾರೆ. ಶೀಘ್ರದಲ್ಲೇ ಅವರು ಲಂಡನ್‌ಗೆ ಹಾರಾಟ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Sheikh Hasina
Koo

ನವದೆಹಲಿ: ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯು (Bangladesh Protest) ನಾಗರಿಕ ದಂಗೆಯಾಗಿ ಬದಲಾದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಶೇಖ್‌ ಹಸೀನಾ (Sheikh Hasina), ಭಾರತಕ್ಕೆ ಬಂದಿಳಿದಿದ್ದಾರೆ. ದೆಹಲಿಯಲ್ಲಿರುವ ಹಿಂಡನ್‌ ಏರ್‌ಫೋರ್ಸ್‌ ವಾಯುನೆಲೆಗೆ (Hindon Air Force Base) ಬಂದಿಳಿದಿದ್ದು, ವಾಯುಪಡೆ ಅಧಿಕಾರಿಗಳು ಶೇಖ್‌ ಹಸೀನಾ ಅವರನ್ನು ಸ್ವಾಗತಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಗಿ ಭದ್ರತೆಯಲ್ಲಿ ಶೇಖ್‌ ಹಸೀನಾ ಅವರು ದೆಹಲಿಗೆ ಬಂದಿಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಣಭಯದ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಿರುವ ಶೇಖ್‌ ಹಸೀನಾ, ಶೀಘ್ರದಲ್ಲಿಯೇ ಲಂಡನ್‌ಗೆ ಹಾರಲಿದ್ದಾರೆ ಎಂದು ತಿಳಿದುಬಂದಿದೆ. ತಾತ್ಕಾಲಿಕವಾಗಿ ಭಾರತದಲ್ಲಿ ಆಶ್ರಯ ಪಡೆಯುವ ಅವರು ಬಳಿಕ ಲಂಡನ್‌ಗೆ ತೆರಳಿ, ಅಲ್ಲಿಯೇ ಕೆಲ ಕಾಲ ನೆಲೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ, ಶ್ರೀಲಂಕಾದಲ್ಲೂ ನಾಗರಿಕ ದಂಗೆಗಳು ಉಂಟಾದಾಗ, ಆ ದೇಶಗಳ ನಾಯಕರು ವಿದೇಶದಲ್ಲಿ ಆಶ್ರಯ ಪಡೆದಿದ್ದರು. ಈಗಲೂ ಕೆಲ ನಾಯಕರು ವಿದೇಶಗಳಲ್ಲಿಯೇ ನೆಲೆಸಿದ್ದಾರೆ.

ಬಾಂಗ್ಲಾ ರೈಲುಗಳ ಸೇವೆ ರದ್ದು

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಬಾಂಗ್ಲಾ ಜತೆಗಿನ ಎಲ್ಲ ರೈಲು ಸೇವೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಹಾಗೆಯೇ, ಮುಂದಿನ ಸೂಚನೆವರೆಗೆ ಭಾರತೀಯರು ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಬಾರದು ಎಂದು ಕೂಡ ಸೂಚನೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಕಾರಣ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Continue Reading

ವಿದೇಶ

Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Bangladesh Protests: ಭಾರತದ ವಿರೋಧಿಯಾಗಿರುವ, ಉಗ್ರರನ್ನು ಛೂಬಿಟ್ಟು ಉಪಟಳ ಮಾಡುವ ಪಾಕಿಸ್ತಾನವು ಈಗ ಬಾಂಗ್ಲಾದೇಶದಲ್ಲಿ ಅಶಾಂತಿ ಸೃಷ್ಟಿಸಲು ಕುತಂತ್ರ ಮಾಡಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಸರ್ಕಾರ ರಚನೆಯಾಗಲಿ ಎಂಬುದು ಪಾಕಿಸ್ತಾನದ ಕುತುಂತ್ರವಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Bangladesh Protests
Koo

ಢಾಕಾ: ಭಾರತದ ಮಿತ್ರರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಹಿಂಸಾಚಾರ, ಗಲಭೆ (Bangladesh Protests) ಉಂಟಾಗಿವೆ. ಶೇಖ್‌ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಮಧ್ಯೆಯೇ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕುತಂತ್ರದಿಂದಾಗಿಯೇ ಬಾಂಗ್ಲಾದೇಶದಲ್ಲಿ ಅರಾಜಕತೆ ಉಂಟಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಪಾಕಿಸ್ತಾನದ ಕೈವಾಡ ಏನು? ಏಕೆ? ಇದಕ್ಕೂ-ಭಾರತಕ್ಕೆ ಏನು ಸಂಬಂಧ ಎಂಬುದರ ವಿವರಣೆ ಇಲ್ಲಿದೆ.

ಪಾಕಿಸ್ತಾನದ ಕೈವಾಡ ಏನು?

ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ವಿರುದ್ಧ ಪಾಕ್‌ ಆಕ್ರೋಶವೇಕೆ?

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಕುತಂತ್ರ ಮಾಡುತ್ತದೆ. ಬಾಂಗ್ಲಾದೇಶ ಭಾರತದ ಗಡಿ ಪ್ರದೇಶವಾಗಿರುವ ಕಾರಣ, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪಕ್ಷವು ಆಡಳಿತಕ್ಕೆ ಬಂದರೆ, ಬಾಂಗ್ಲಾ ಮೂಲಕವೂ ಭಾರತದಲ್ಲಿ ಉಗ್ರರನ್ನು ಛೂಬಿಟ್ಟು ಅಂಶಾತಿ ಸೃಷ್ಟಿಸಬಹುದು ಎಂಬುದು ಐಎಸ್‌ಐ ಲೆಕ್ಕಾಚಾರವಾಗಿದೆ. ಪಾಕಿಸ್ತಾನದ ಐಎಸ್‌ಐ ಜತೆಗೆ ವಿದೇಶಿ ಎನ್‌ಜಿಒಗಳು ಕೂಡ ಬಾಂಗ್ಲಾದೇಶದ ಗಲಭೆಯ ಹಿಂದಿವೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

Continue Reading

ವಿದೇಶ

Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

Bangla Protest Explainer: ಬಾಂಗ್ಲಾದೇಶದಲ್ಲಿ ಕಳೆದ 3 ತಿಂಗಳಿಂದ ವಿದ್ಯಾರ್ಥಿಗಳು, ನಾಗರಿಕರು, ಪ್ರತಿಪಕ್ಷಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂರಾರು ಜನ ಹಿಂಸಾತ್ಮಕ ಪ್ರತಿಭಟನೆ ವೇಳೆ ಮೃತಪಟ್ಟಿದ್ದಾರೆ. ರಾಜೀನಾಮೆ ನೀಡಿರುವ ಶೇಖ್‌ ಹಸೀನಾ, ದೇಶದಿಂದಲೇ ಪಲಾಯನಗೈದಿದ್ದಾರೆ. ಅಷ್ಟಕ್ಕೂ, ಬಾಂಗ್ಲಾದೇಶದಲ್ಲಿ ಇಷ್ಟೊಂದು ಅರಾಜಕತೆ ಸೃಷ್ಟಿಯಾಗಲು ಕಾರಣವೇನು? ಇದರ ಹಿನ್ನೆಲೆ? ಭವಿಷ್ಯದ ಬೆಳವಣಿಗೆಗಳು ಏನು? ಸಂಕ್ಷಿಪ್ತ ವಿವರ ಹೀಗಿದೆ…

VISTARANEWS.COM


on

Bangla Protest Explainer
Koo

ನವದೆಹಲಿ/ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ನಡೆಯುತ್ತಿರುವ ಮೀಸಲಾತಿ ಹೋರಾಟವು (Bangladesh Protests) ನಾಗರಿಕ ದಂಗೆಯಾಗಿ ಬದಲಾಗಿದೆ. ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖರ್‌ ಹಸೀನಾ ಅವರು ಭಾರತದ ಅಗರ್ತಲಾಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಇಷ್ಟಾದರೂ, ಬಾಂಗ್ಲಾದಲ್ಲಿ ಹಿಂಸಾಚಾರ ಮುಂದುವರಿದಿದೆ. ಹಾಗಾದರೆ, ಬಾಂಗ್ಲಾದೇಶದಲ್ಲಿ ಹಿಂಸಾಚಾರ (Bangla Protest Explainer) ನಡೆಯುತ್ತಿರುವುದೇಕೆ? ಜನರ ಆಕ್ರೋಶಕ್ಕೆ ಕಾರಣವೇನು? ಶೇಖ್‌ ಹಸೀನಾ ಅವರು ಭಾರತಕ್ಕೆ ಆಗಮಿಸಿದ್ದೇಕೆ? ಮುಂದೇನಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

ಹಿಂಸಾತ್ಮಕ ಪ್ರತಿಭಟನೆ ಏಕೆ?

ಬಾಂಗ್ಲಾದೇಶದಲ್ಲಿ ಮೀಸಲಾತಿ ಕಾರಣಕ್ಕಾಗಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. 1971ರಲ್ಲಿ ನಡೆದ ಬಾಂಗ್ಲಾದೇಶ ಹೋರಾಟದಲ್ಲಿ ಭಾಗಿಯಾದವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.30ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಮೀಸಲಾತಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆಯೂ ನಡೆದ ಹಿಂಸಾತ್ಮಕ ಹೋರಾಟದಲ್ಲಿ ನೂರಾರು ಜನ ಮೃತಪಟ್ಟಿದ್ದರು.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೇಳುತ್ತಲೇ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌, ಶೇ.30ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆದರೆ, ಸಂಪೂರ್ಣವಾಗಿ ಮೀಸಲಾತಿಯನ್ನು ರದ್ದುಗೊಳಿಸುವ ಬದಲು ಶೇ.5ರಷ್ಟು ಮೀಸಲಾತಿ ಮುಂದುವರಿಸಿದೆ. ಸಂಪೂರ್ಣವಾಗಿ ಮೀಸಲಾತಿ ರದ್ದುಗೊಳಿಸಬೇಕು ಎಂದು ಜನರ ಆಗ್ರಹವಾಗಿದ್ದು, ಇದಕ್ಕಾಗಿ ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆಗೆ ಪ್ರತಿಪಕ್ಷಗಳೂ ಬೆಂಬಲ ನೀಡಿದ್ದು, ಶೇಖ್‌ ಹಸೀನಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಅದರಂತೆ, ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ.

ಭಾರತದ ಅಗರ್ತಲಾಕ್ಕೆ ಬಂದಿದ್ದೇಕೆ?

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಸೇನೆಯ ಹೆಲಿಕಾಪ್ಟರ್‌ನಲ್ಲಿ ಶೇಖ್‌ ಹಸೀನಾ ಭಾರತದ ಅಗರ್ತಲಾಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಸೇನೆಯ ಹೆಲಿಕಾಪ್ಟರ್‌ನಲ್ಲಿ ಶೇಖ್‌ ಹಸೀನಾ ಪಲಾಯನ ಮಾಡಿದ ವಿಡಿಯೊ ಈಗ ವೈರಲ್‌ ಆಗಿದೆ. ಭಾರತವು ಬಾಂಗ್ಲಾದೇಶಕ್ಕೆ ಮಿತ್ರರಾಷ್ಟ್ರವಾಗಿದ್ದು, ನರೇಂದ್ರ ಮೋದಿ ಅವರಿಗೆ ಶೇಖ್‌ ಹಸೀನಾ ಆಪ್ತರಾಗಿದ್ದಾರೆ. ಪ್ರಾಣಭಯದ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಬಂದು ಆಶ್ರಯ ಪಡೆದಿರಬಹುದು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕಾಗಿ ಭಾರತದ ಗಡಿಯಲ್ಲಿ ಬಿಎಸ್‌ಎಫ್‌ ಯೋಧರ ಸಂಖ್ಯೆಯನ್ನು ಜಾಸ್ತಿಗೊಳಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ಭಾರತದ ಮೇಲೆ ಉಂಟಾಗುವ ಪರಿಣಾಮವೇನು?

ಬಾಂಗ್ಲಾದೇಶದಲ್ಲಿ ಹಿಂಸಾಚಾರವು ಭುಗಿಲೆದ್ದಿರುವುದರ ಪರಿಣಾಮವು ಭಾರತದ ಮೇಲೂ ಬೀರುವ ಸಾಧ್ಯತೆ ಹೆಚ್ಚಿದೆ. ಬಾಂಗ್ಲಾದಲ್ಲಿ ಶಾಂತಿ ನೆಲೆಸಿದ್ದಾಗಲೇ ನುಸುಳುಕೋರರು ಭಾರತವನ್ನು ಪ್ರವೇಶಿಸುತ್ತಿದ್ದರು. ಈಗ ಸುಮಾರು 4 ಲಕ್ಷ ಜನ ದಂಗೆಯೆದ್ದಿರುವ ಕಾರಣ ಇನ್ನಷ್ಟು ಜನ ಭಾರತವನ್ನು ಅಕ್ರಮವಾಗಿ ಪ್ರವೇಶಿಸಿ, ಅವರು ದೇಶಕ್ಕೆ ತಲೆನೋವಾಗಬಹುದು. ಸೇನೆಯಲ್ಲಿ ಆಡಳಿತ ಯಂತ್ರ ಕುಸಿದುಬಿದ್ದಿದ್ದು, ಮಿಲಿಟರಿ ಆಡಳಿತ ಜಾರಿಗೆ ಬಂದಿರುವ ಕಾರಣ ಭಾರತ ಹಾಗೂ ಬಾಂಗ್ಲಾದೇಶದ ವ್ಯಾಪಾರ, ಒಪ್ಪಂದಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಮಿಲಿಟರಿ ಆಡಳಿತ ಕೊನೆಯಾಗಿ, ಹೊಸ ಸರ್ಕಾರ ರಚನೆಯಾಗಿ, ಪ್ರತಿಭಟನೆ ಶಾಂತವಾಗುವವರೆಗೂ ಭಾರತಕ್ಕೆ ಸಂಕಷ್ಟ ತಪ್ಪಿದ್ದಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. ಶೇಖ್‌ ಹಸೀನಾ ಭಾರತ ಪರ ನಿಲುವು ಹೊಂದಿದ್ದಾರೆ. ಹಾಗಾಗಿ ಪ್ರತಿಭಟನೆಕಾರರ ಕೋಪ ಭಾರತದ ಮೇಲೆ ತಿರುಗಬಹುದು. ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುವ ಅಪಾಯವೂ ಇದೆ.

ಮಧ್ಯಂತರ ಮಿಲಿಟರಿ ಆಡಳಿತ; ಮುಂದೇನಾಗುತ್ತದೆ?

ಶೇಖ್‌ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನಗೈದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಮಧ್ಯಂತರ ಮಿಲಿಟರಿ ಆಡಳಿತ ಜಾರಿಗೆ ಬಂದಿದೆ. ದೇಶದ ಆಡಳಿತ ಈಗ ಸೇನೆಯ ವ್ಯಾಪ್ತಿಗೆ ಬಂದಿದೆ. ಸೇನೆಯೇ ಆಡಳಿತ ನಡೆಸುವುದರಿಂದ ಬಾಂಗ್ಲಾದೇಶದಲ್ಲಿ ಕಠಿಣ ನಿಯಮಗಳು ಜಾರಿಯಾಗಿ, ಜನ ಇನ್ನಷ್ಟು ದಂಗೆಯೇಳಬಹುದು. ಮೀಸಲಾತಿ ರದ್ದಾಗುವವರೆಗೂ ಬಾಂಗ್ಲಾದೇಶದಲ್ಲಿ ಅರಾಜಕತೆ ಮುಂದುವರಿಯಬಹುದು. ಇಲ್ಲವೇ, ಪ್ರತಿಪಕ್ಷಗಳು ಒಗ್ಗೂಡಿ ಸರ್ಕಾರ ರಚನೆಗೆ ಮುಂದಾಗಬಹುದು.

ಬಾಂಗ್ಲಾದೇಶದಲ್ಲಿ ಹಿಂಸಾಚಾರ

ಶೇಖ್‌ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿಯಾದ ಬಳಿಕ ಪ್ರತಿಪಕ್ಷಗಳ ʼರಾಜಕೀಯ ತಂತ್ರʼದಿಂದಾಗಿ ಪದೇಪದೆ ಹಿಂಸಾಚಾರ ನಡೆಯುತ್ತಿವೆ. ಬಾಂಗ್ಲಾದೇಶದಲ್ಲಿ 2010ರಲ್ಲಿ ಇದ್ದ ಶೇ.11.8 ಬಡತನ ಪ್ರಮಾಣವು 2022ರ ವೇಳೆಗೆ ಶೇ.5ಕ್ಕೆ ಇಳಿಕೆಯಾಗಿದೆ. ಹಾಗಾಗಿ, ಆಡಳಿತಾತ್ಮಕ ವಿಚಾರದಲ್ಲಿ ಶೇಖ್‌ ಹಸೀನಾ ಒಳ್ಳೆಯ ಹೆಸರು ಗಳಿಸಿದ್ದಾರೆ. ಚುನಾವಣೆಗಳಲ್ಲಿ ಸತತವಾಗಿ ನಾಲ್ಕು ಬಾರಿ ಗೆದ್ದಿದ್ದಾರೆ. ಕಳೆದ ಜನವರಿಯಲ್ಲೇ ಅವರು ಗೆಲುವು ಸಾಧಿಸಿ, ಪ್ರಧಾನಿ ಹುದ್ದೆಗೆ ಏರಿದ್ದಾರೆ.

ಆದರೆ, ಪ್ರತಿಪಕ್ಷಗಳು ಬಾಂಗ್ಲಾದೇಶದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿವೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಗಲಭೆಗಳು ಜಾಸ್ತಿಯಾಗುತ್ತಿವೆ. ವರದಿಗಳ ಪ್ರಕಾರ, 2009ರಿಂದ 2022ರ ಅವಧಿಯಲ್ಲಿ ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 2,500 ಜನ ಬಲಿಯಾಗಿದ್ದಾರೆ. ಪ್ರತಿಪಕ್ಷಗಳು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರು ಸೇರಿ ಸಾವಿರಾರು ಜನ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ.

ಇದನ್ನೂ ಓದಿ: Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

Continue Reading
Advertisement
Mashrafe Mortaza
ಪ್ರಮುಖ ಸುದ್ದಿ2 hours ago

Mashrafe Mortaza : ಕ್ರಿಕೆಟರ್ ಮುಶ್ರಫೆ ಮೊರ್ತಾಜಾ ಮನೆಗೆ ಬೆಂಕಿ ಹಚ್ಚಿದ ಬಾಂಗ್ಲಾದೇಶದ ಪ್ರತಿಭಟನಾಕಾರರು

Bangladesh Protest
ವಿದೇಶ2 hours ago

Bangladesh Protest: ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ರಾಜಕೀಯ ಶತ್ರು ಖಲೇದಾ ಜಿಯಾ ರಿಲೀಸ್‌ಗೆ ಆದೇಶ!

Women's T20 World Cup
ಪ್ರಮುಖ ಸುದ್ದಿ2 hours ago

Women’s T20 World Cup : ಬಾಂಗ್ಲಾದಲ್ಲಿ ಕ್ಷೋಭೆ; ಮಹಿಳೆಯ ಟಿ20 ವಿಶ್ವ ಕಪ್ ಮುಂದೂಡಿಕೆ?

Bangladesh Protest
ವಿದೇಶ3 hours ago

Bangladesh Protest: ಶೇಖ್‌ ಹಸೀನಾ ಭಾರತಕ್ಕೆ ಬಂದ ಬೆನ್ನಲ್ಲೇ ಬಾಂಗ್ಲಾದಲ್ಲಿ 4 ಹಿಂದು ದೇಗುಲಗಳ ಧ್ವಂಸ; ಹಿಂದು ಕೌನ್ಸಿಲರ್‌ ಹತ್ಯೆ!

ಪ್ರಮುಖ ಸುದ್ದಿ4 hours ago

Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ

ಪ್ರಮುಖ ಸುದ್ದಿ4 hours ago

Gowri Movie: ‘ಗೌರಿ’ ಚಿತ್ರದ ಟ್ರೈಲರ್ ಅನಾವರಣ ಮಾಡಿದ ಕಿಚ್ಚ ಸುದೀಪ್

Bangladesh Protest
ದೇಶ4 hours ago

Bangladesh Protest: ಬಾಂಗ್ಲಾದೇಶ ಹಿಂಸಾಚಾರ ಕುರಿತು ಮೋದಿ ಮಹತ್ವದ ಸಭೆ; ಚರ್ಚಿಸಿದ ವಿಷಯಗಳೇನು?

Independence Day 2024
ಸಿನಿಮಾ4 hours ago

Independence Day 2024: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಕಥೆ ಹೇಳುವ ಟಾಪ್‌ 10 ಹಿಂದಿ ಸಿನೆಮಾಗಳಿವು

CM Siddaramaiah instructs to provide immediate relief to those affected by heavy rains
ಕರ್ನಾಟಕ4 hours ago

CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

ಪ್ರಮುಖ ಸುದ್ದಿ5 hours ago

Vinod Kambli : ಹದಗೆಟ್ಟಿದೆ ಮಾಜಿ ಕ್ರಿಕೆಟರ್​ ವಿನೋದ್ ಕಾಂಬ್ಳಿ ಆರೋಗ್ಯ ; ಸಚಿನ್ ಜತೆಗಾರನಿಗೆ ಈಗ ಕೈ ಹಿಡಿದುಕೊಂಡು ನಡೆಯುವ ಪರಿಸ್ಥಿತಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌